Shorts

ನವದೆಹಲಿ: ಪಶ್ಚಿಮ ಏಷ್ಯಾ ಸಂಘರ್ಷದ ನಡುವೆ ಗಲ್ಫ್ ಪ್ರದೇಶದಾದ್ಯಂತ ನಡೆದ ಪ್ರತ್ಯೇಕ ಘಟನೆಗಳಲ್ಲಿ ಆರು ಭಾರತೀಯ ಪ್ರಜೆಗಳು ಪ್ರಾಣ ಕಳೆದುಕೊಂಡಿದ್ದಾರೆ ಮತ್ತು ಒಬ್ಬರು ನಾಪತ್ತೆಯಾಗಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಶುಕ್ರವಾರ ಹೇಳಿದ್ದಾರೆ. ಸಹಾಯ ಮತ್ತು ವಾಪಸಾತಿಗಾಗಿ ಭಾರತೀಯ ಮಿಷನ್‌ಗಳು ಸ್ಥಳೀಯ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸುತ್ತಿವೆ. ಅಂತರ ಸಚಿವಾಲಯದ ಬ್ರೀಫಿಂಗ್ ಅನ್ನು ಉದ್ದೇಶಿಸಿ ಮಾತನಾಡಿದ ಎಂಇಎ ಹೆಚ್ಚುವರಿ ಕಾರ್ಯದರ್ಶಿ (ಗಲ್ಫ್) ಅಸೀಮ್ ಆರ್ ಮಹಾಜನ್, ನಾಪತ್ತೆಯಾದ ವ್ಯಕ್ತಿಯನ್ನು ಪತ್ತೆಹಚ್ಚಲು ಮತ್ತು ಮೃತರನ್ನು ಭಾರತಕ್ಕೆ ಹಿಂದಿರುಗಿಸಲು ಹಲವಾರು ದೇಶಗಳಲ್ಲಿನ ಭಾರತೀಯ ಮಿಷನ್‌ಗಳು ಅಧಿಕಾರಿಗಳೊಂದಿಗೆ ನಿಕಟವಾಗಿ ಕೆಲಸ ಮಾಡುತ್ತಿವೆ ಎಂದು ಹೇಳಿದರು.

ಇಂದು ಶುಕ್ರವಾರವಾಗಿದ್ದು ಇಂದು ಲಕ್ಷ್ಮೀ ದೇವಿಯ ಆರಾಧನೆಗೆ ಸೂಕ್ತವಾದ ದಿನವಾಗಿದೆ. ಇಂದು ಲಕ್ಷ್ಮೀ ದೇವಿಯ ಕುರಿತಾದ ಲಕ್ಷ್ಮೀ ಅಷ್ಟೋತ್ತರ ಶತನಾಮ ಸ್ತೋತ್ರವನ್ನು ತಪ್ಪದೇ ಓದಿ.ದೇವ್ಯುವಾಚದೇವದೇವ! ಮಹಾದೇವ! ತ್ರಿಕಾಲಜ್ಞ! ಮಹೇಶ್ವರ!ಕರುಣಾಕರ ದೇವೇಶ! ಭಕ್ತಾನುಗ್ರಹಕಾರಕ! ॥ಅಷ್ಟೋತ್ತರ ಶತಂ ಲಕ್ಷ್ಮ್ಯಾಃ ಶ್ರೋತುಮಿಚ್ಛಾಮಿ ತತ್ತ್ವತಃ ॥ ಈಶ್ವರ ಉವಾಚದೇವಿ! ಸಾಧು ಮಹಾಭಾಗೇ ಮಹಾಭಾಗ್ಯ ಪ್ರದಾಯಕಮ್ ।ಸರ್ವೈಶ್ವರ್ಯಕರಂ ಪುಣ್ಯಂ ಸರ್ವಪಾಪ ಪ್ರಣಾಶನಮ್ ॥ಸರ್ವದಾರಿದ್ರ್ಯ ಶಮನಂ ಶ್ರವಣಾದ್ಭುಕ್ತಿ ಮುಕ್ತಿದಮ್ ।ರಾಜವಶ್ಯಕರಂ ದಿವ್ಯಂ ಗುಹ್ಯಾದ್-ಗುಹ್ಯತರಂ ಪರಮ್ ॥ದುರ್ಲಭಂ ಸರ್ವದೇವಾನಾಂ ಚತುಷ್ಷಷ್ಟಿ ಕಳಾಸ್ಪದಮ್ ।ಪದ್ಮಾದೀನಾಂ ವರಾಂತಾನಾಂ ನಿಧೀನಾಂ ನಿತ್ಯದಾಯಕಮ್ ॥ಸಮಸ್ತ ದೇವ ಸಂಸೇವ್ಯಂ ಅಣಿಮಾದ್ಯಷ್ಟ ಸಿದ್ಧಿದಮ್ ।ಕಿಮತ್ರ ಬಹುನೋಕ್ತೇನ ದೇವೀ ಪ್ರತ್ಯಕ್ಷದಾಯಕಮ್ ॥