ಇಂಫಾಲ: ರಾಷ್ಟ್ರಪತಿ ದ್ರೌಪದಿ ಮುರ್ಮು ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆಯನ್ನು ರದ್ದುಗೊಳಿಸಿದ್ದಾರೆ, ಇದರಿಂದಾಗಿ ಯುಮ್ನಾಮ್ ಖೇಮ್ಚಂದ್ ಸಿಂಗ್ ನೇತೃತ್ವದ ಬಿಜೆಪಿ-ಎನ್ಡಿಎ ಸರ್ಕಾರ ರಾಜ್ಯದಲ್ಲಿ ಅಧಿಕಾರ ವಹಿಸಿಕೊಳ್ಳಲು ದಾರಿ ಸುಗಮವಾಗಿದೆ ಎಂದು ಅಧಿಕಾರಿಗಳು ಬುಧವಾರ ದೃಢಪಡಿಸಿದ್ದಾರೆ. ದೀರ್ಘಕಾಲದ ಜನಾಂಗೀಯ ಅಶಾಂತಿಯ ನಡುವೆ ಆಗಿನ ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್ ರಾಜೀನಾಮೆ ನೀಡಿದ ನಂತರ ನೇರ ಕೇಂದ್ರ ಆಡಳಿತ ಹೇರಿದ ಸುಮಾರು ಒಂದು ವರ್ಷದ ನಂತರ ಈ ಕ್ರಮ ಕೈಗೊಳ್ಳಲಾಗಿದೆ.ಫೆಬ್ರವರಿ 13, 2025 ರಂದು ಹೊರಡಿಸಲಾದ 356 ನೇ ವಿಧಿಯ ಅಡಿಯಲ್ಲಿ ಘೋಷಣೆಯನ್ನು ಫೆಬ್ರವರಿ
ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರ್ಕಾರವು ವಿಬಿ, ಜಿ ರಾಮ್ ಜಿ ಹೆಸರನ್ನು ಬಳಸಿಕೊಂಡು ತನ್ನ ರಾಜಕೀಯ ಲಾಭಕ್ಕಾಗಿ ವಿಶೇಷ ಅಧಿವೇಶನವನ್ನು ಕರೆದು, ಅಲ್ಲಿ ಯಾವುದೇ ಗಂಭೀರ ಚರ್ಚೆ ನಡೆಸದೆ ಕೇವಲ ದಿನಗಳನ್ನು ದೂಡಿ ಕಾಲಹರಣ ಮಾಡಿದೆ ಎಂದು ಬಿಜೆಪಿ ಆರೋಪಿಸಿದೆ.ಈ ಸಂಬಂಧ ಬಿಜೆಪಿ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಹಂಚಿ ಆಕ್ರೋಶ ಹೊರಹಾಕಿದೆ. ಪೋಸ್ಟ್ನಲ್ಲಿ ಹೀಗಿದೆ: ರಾಜ್ಯದ ಕಾಂಗ್ರೆಸ್ ಸರ್ಕಾರವು ವಿಬಿ–ಜಿ ರಾಮ್ ಜಿ ಹೆಸರನ್ನು ಬಳಸಿಕೊಂಡು ತನ್ನ ರಾಜಕೀಯ ಲಾಭಕ್ಕಾಗಿ ವಿಶೇಷ ಅಧಿವೇಶನವನ್ನು ಕರೆದು, ಅಲ್ಲಿ ಯಾವುದೇ ಗಂಭೀರ ಚರ್ಚೆ
ತಿರುಪತಿ: ಕಲೆಕ್ಟರೇಟ್ನಲ್ಲಿ ಪ್ರತಿಭಟನೆ ನಡೆಸಲು ತೆರಳುತ್ತಿದ್ದಾಗ ಭಾರತೀಯ ವಿದ್ಯಾರ್ಥಿ ಒಕ್ಕೂಟದ (ಎಸ್ಎಫ್ಐ) ವಿದ್ಯಾರ್ಥಿ ನಾಯಕರ ಮೇಲೆ ಚಲನಚಿತ್ರ ನಟ ಮೋಹನ್ ಬಾಬು ಅವರ ಅನುಯಾಯಿಗಳು ಹಲ್ಲೆ ನಡೆಸಿ ಅಪಹರಿಸಿದ್ದಾರೆ ಎಂದು ಮಂಗಳವಾರ ಭಾರತೀಯ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್ವಾದಿ) ಮುಖಂಡರು ತಿಳಿಸಿದ್ದಾರೆ.ಮೋಹನ್ ಬಾಬು ನೇತೃತ್ವದ ವಿಶ್ವವಿದ್ಯಾಲಯದಲ್ಲಿ ನಡೆದ ಅಕ್ರಮಗಳ ವಿರುದ್ಧ ಪ್ರತಿಭಟನೆ ನಡೆಯುತ್ತಿದೆ. ಮೋಹನ್ ಬಾಬು ನಡೆಸುತ್ತಿರುವ ವಿಶ್ವವಿದ್ಯಾಲಯದಲ್ಲಿ ನಡೆದ ಅಕ್ರಮಗಳನ್ನು ಪ್ರತಿಭಟಿಸಲು
ಉಡುಪಿ: ಈಚೆಗೆ ದಕ್ಷಿಣ ಕನ್ನಡ (ದ.ಕ.) ಮತ್ತು ಉಡುಪಿ ಜಿಲ್ಲೆಗಳ ಮೂಲಕ ಹಾದುಹೋಗುವ ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿಗಳಲ್ಲಿ ಅಪಘಾತ ಪ್ರಕರಣಗಳು ಹೆಚ್ಚುತ್ತಿದ್ದು, ಆತಂಕಕ್ಕೆ ಕಾರಣವಾಗಿದೆ. ಇನ್ನೂ ಕಳೆದ ತಿಂಗಳುಗಳಲ್ಲಿ, ಹೆದ್ದಾರಿಗಳು ಮತ್ತು ಇತರ ರಸ್ತೆಗಳಲ್ಲಿ ಸಂಭವಿಸುವ ಅಪಘಾತಗಳಲ್ಲಿ ಅಮೂಲ್ಯ ಜೀವಗಳು ಕಳೆದುಕೊಂಡಿದೆ. ಇನ್ನೂ ಕಳೆದ ಡಿಸೆಂಬರ್ನಲ್ಲಿ ಕೊನೆಗೊಂಡ ಒಂದು ವರ್ಷದ ಅವಧಿಯಲ್ಲಿ, ಎರಡೂ ಜಿಲ್ಲೆಗಳಲ್ಲಿ ಒಟ್ಟು 4,026 ಅಪಘಾತಗಳು ವರದಿಯಾಗಿವೆ, 1,010 ಜನರು ಸಾವನ್ನಪ್ಪಿದ್ದಾರೆ. ಇನ್ನೂ ಸಿಕ್ಕಿರುವ ಮಾಹಿತಿ ಪ್ರಕಾರ 2021 ರಲ್ಲಿ 2,199 ಅಪಘಾತಗಳು 560 ಸಾವುಗಳಿಗೆ ಕಾರಣವಾಗಿವೆ,
ಬೆಂಗಳೂರು: ಸೋಮವಾರ ರಾತ್ರಿ ಕಾಂಗ್ರೆಸ್ ಪಕ್ಷದ ಲಿಂಗಾಯತ ಶಾಸಕರ ಸಭೆ ನಡೆದಿರುವ ಬಗ್ಗೆ ಬೃಹತ್ ಕೈಗಾರಿಕಾ ಸಚಿವ ಎಂಬಿ ಪಾಟೀಲ್ ಅವರನ್ನು ಸ್ಪಷ್ಟನೆಯನ್ನು ನೀಡಿದ್ದಾರೆ. ಈ ಸಂಬಂದ ವಿಧಾನಸೌಧದ ಆವರಣದಲ್ಲಿ ಮಾತನಾಡಿದ ಅವರು, ಸಮುದಾಯದ ಹಿತಾಸಕ್ತಿ ರಕ್ಷಣೆಗಾಗಿ ಸೋಮವಾರ ರಾತ್ರಿ ಕಾಂಗ್ರೆಸ್ ಪಕ್ಷದ ಲಿಂಗಾಯತ ಶಾಸಕರ ಸಭೆ ನಡೆದಿರುವುದು ನಿಜ. ಇದರಲ್ಲಿ ನಾಯಕತ್ವದ ವಿಚಾರವಾಗಲಿ, ವೈಯಕ್ತಿಕ ಅಜೆಂಡಾಗಳಾಗಲಿ ಇರಲಿಲ್ಲ. ಎಲ್ಲಾ ಸಮುದಾಯಗಳ ಶಾಸಕರೂ ಹೀಗೆ ಆಗಿಂದಾಗ್ಗೆ ಸಭೆ ಸೇರುವುದು ಸರ್ವೇ ಸಾಮಾನ್ಯ ಎಂದು ವಿವರಣೆ ನೀಡಿದರು. ಕರ್ನಾಟಕ ರಾಜ್ಯದಲ್ಲಿ ಲಿಂಗಾಯತ ಸಮುದಾಯವು ಅತ್ಯಂತ ದೊಡ್ಡ ಸಮುದಾಯವಾಗಿದೆ. ಹೋದ
ಬೆಂಗಳೂರು: ವಿಪಕ್ಷ ನಾಯಕರ ವಿರುದ್ಧ ವಿಧಾನಸಭೆಯಲ್ಲಿಂದು ಆಡಳಿತ ಪಕ್ಷದ ಶಾಸಕ ಕೆ.ಎಂ.ಶಿವಲಿಂಗೇಗೌಡ ಅವರು ಏಕವಚನದಲ್ಲೇ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಆಕ್ರೋಶ ಹೊರಹಾಕಿದ ವಿಚಾರ ಸಂಬಂಧ ಭಾರೀ ಟೀಕೆ ವ್ಯಕ್ತವಾಗುತ್ತಿದೆ. ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯನ್ನು ಮರು ಸ್ಥಾಪಿಸಬೇಕು. ವಿಬಿ ಜಿ ರಾಮ್ ಜಿ ಯೋಜನೆಯನ್ನು ರದ್ದು ಮಾಡಬೇಕು ಎಂದು ಕೇಂದ್ರ ಸರ್ಕಾರವನ್ನು ಆಗ್ರಹಿಸುವ ಸರ್ಕಾರದ ಅಧಿಕೃತ ನಿರ್ಣಯದ ಮೇಲಿನ ಚರ್ಚೆಯಲ್ಲಿ ಕೆ.ಎಂ.ಶಿವಲಿಂಗೇಗೌಡ ಭಾಗವಹಿಸಿದ್ದರು.ಈ ಸಂದರ್ಭದಲ್ಲಿ ಕೇಂದ್ರದಿಂದ ರಾಜ್ಯಕ್ಕಾಗಿರುವ ಅನ್ಯಾಯಗಳ ಬಗ್ಗೆ ಶಿವಲಿಂಗೇಗೌಡ
ನವದೆಹಲಿ: ಕೇಂದ್ರ ಬಜೆಟ್ನಲ್ಲಿ ದೇಶದಲ್ಲಿ 7 ಹೈಸ್ಪೀಡ್ ರೈಲು ಕಾರಿಡಾರ್ ಅನ್ನು ಘೋಷಿಸಿದ ಬೆನ್ನಲ್ಲೇ ಇದೀಗ ಬೆಂಗಳೂರು ಮತ್ತು ಪುಣೆ ನಡುವೆ ಮತ್ತೊಂದು ಹೈಸ್ಪೀಡ್ ರೈಲು ಕಾರಿಡಾರ್ ನಿರ್ಮಾಣ ಮಾಡುವಂತೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮನವಿ ಮಾಡಿದ್ದಾರೆ.ಸಂಸತ್ ಭವನದಲ್ಲಿ ಇಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಭೇಟಿ ಮಾಡಿದ ಜೋಶಿ ಅವರು, ಬೆಂಗಳೂರು-ಪುಣೆ ಮಧ್ಯೆ ಹೈಸ್ಪೀಡ್ ರೈಲು ಕಾರಿಡಾರ್ ನಿರ್ಮಾಣ ಮಾಡಿದ್ದಲ್ಲಿ ಕರ್ನಾಟಕ ರಾಜ್ಯದ ಬಹುತೇಕ ಪ್ರದೇಶದ ಒಟ್ಟಾರೆ ಅಭಿವೃದ್ಧಿಯಾಗುತ್ತದೆ ಎಂದು ಪ್ರಹ್ಲಾದ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಕಠ್ಮಂಡುವಿನಿಂದ ಇಸ್ತಾನ್ಬುಲ್ಗೆ ಹಾರುತ್ತಿದ್ದ ಟರ್ಕಿಶ್ ಏರ್ಲೈನ್ಸ್ ಏರ್ಬಸ್ A330 ವಿಮಾನವು ಟೇಕ್ ಆಫ್ ಆದ ಸ್ವಲ್ಪ ಸಮಯದ ನಂತರ ಅದರ ಬಲ ಎಂಜಿನ್ನಲ್ಲಿ ಬೆಂಕಿ ಕಾಣಿಸಿಕೊಂಡು ಕೋಲ್ಕತ್ತಾದಲ್ಲಿ ತುರ್ತು ಭೂಸ್ಪರ್ಶವಾಯಿತು.ನಾಗರಿಕ ವಿಮಾನಯಾನ ಸಚಿವಾಲಯದ ಪ್ರಕಾರ, ಸಿಬ್ಬಂದಿ ಮಧ್ಯಾಹ್ನ 1:31 ಕ್ಕೆ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರುವಲ್ಲಿ ಯಶಸ್ವಿಯಾದರು, ಆದರೆ ವಿಮಾನವು ಒಂದು ಎಂಜಿನ್ ಅನ್ನು ಸ್ಥಗಿತಗೊಳಿಸಿ ಮುಂದುವರಿಯಿತು."ಬಲ ಎಂಜಿನ್ ಬೆಂಕಿಗೆ ಆಹುತಿಯಾದ ಕಾರಣ ವಿಮಾನವು ಪ್ಯಾನ್ ಪ್ಯಾನ್, ಅಂತರರಾಷ್ಟ್ರೀಯ
ಬೆಳಗಾವಿ: ವಂಟಮೂರಿಯಲ್ಲಿ ಮಹಿಳೆ ವಿವಸ್ತ್ರಗೊಳಿಸಿ ಕಂಬಕ್ಕೆ ಕಟ್ಟಿ ಹಲ್ಲೆಗೈದ ಪ್ರಕರಣ ಸಂಬಂಧ 12 ಜನ ಅಪರಾಧಿಗಳಿಗೆ ಐದು ವರ್ಷ ಕಠಿಣ ಶಿಕ್ಷೆ ಪ್ರಕಟಗೊಂಡಿದೆ.ಬೆಳಗಾವಿ ಹೆಚ್ಚುವರಿ 10ನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನ್ಯಾ.ಎಚ್.ಎಸ್.ಮಂಜುನಾಥ ಅವರು ಅಪರಾಧಿಗಳಿಗೆ ಆಯಾ ಸೆಕ್ಷನ್ ಅಡಿ ಶಿಕ್ಷೆ ಮತ್ತು ದಂಡ ವಿಧಿಸಿದರು.ಬಸಪ್ಪ, ರಾಜು, ಕೆಂಪಣ್ಣ, ಪಾರ್ವತಿ, ಯಲ್ಲವ್ವ, ಲಕ್ಕಪ್ಪ, ಗಂಗವ್ವ, ಸಂಗೀತಾ, ಸಂತೋಷ, ಶೋಭಾ, ಲಕ್ಕವ್ವ, ಶಿವಪ್ಪ ವನ್ನೂರಿಗೆ ಶಿಕ್ಷೆ ವಿಧಿಸಲಾಗಿದೆ. ಇನ್ನೂ ಅಪರಾಧಿಗಳಿಗೆ ಕೋರ್ಟ್ ಶಿಕ್ಷ ಪ್ರಕಟಿಸುತ್ತಿದ್ದಂತ್ತೆ ಅಪರಾಧಿಗಳು ಮತ್ತು ಅವರ ಕುಟುಂಬಸ್ಥರು ಕಣ್ಣೀರಿಟ್ಟರು.
ನವದೆಹಲಿ: ನಾನು ಮೋದಿ ಬಗ್ಗೆ ಮಾಜಿ ಸೇನಾಧಿಕಾರಿ ನರಾವಣೆ ಬರೆದ ಪುಸ್ತಕ ತಂದಿದ್ದೇನೆ ಎಂದು ಕ್ಯಾಮರಾಗಳಿಗೆ ರಾಹುಲ್ ಗಾಂಧಿ ಪುಸ್ತಕ ಎತ್ತಿ ತೋರಿಸಿದರೆ ಇದೀಗ ಬಿಜೆಪಿ ಸಂಸದ ನಿಶಿಕಾಂತ್ ದುಬೆ ನಾನು ನೆಹರೂ ಕುಟುಂಬದವರ ಬರೆದ ಕೆಲವು ಪುಸ್ತಕ ತಂದಿದ್ದೇನೆ ಎಂದು ತಿರುಗೇಟು ನೀಡಿದ್ದಾರೆ. ಲೋಕಸಭೆಯಲ್ಲಿ ಈಗ ಪುಸ್ತಕದ ಏಟು-ಎದಿರೇಟು ನಡೆಯುತ್ತಿದೆ. ಚೀನಾ ಜೊತೆಗಿನ ಸಂಘರ್ಷದ ಬಗ್ಗೆ ಮೋದಿ ಮತ್ತು ರಾಜನಾಥ್ ಸಿಂಗ್ ಬರೆದಿದ್ದಾರೆ ಎನ್ನಲಾದ ಮಾಜಿ ಸೇನಾಧಿಕಾರಿ ನರಾವಣೆ ಅವರ ಪುಸ್ತಕ ಹಿಡಿದು ರಾಹುಲ್ ಗಾಂಧಿ ಕಳೆದ ಮೂರು ದಿನಗಳಿಂದ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾರೆ.
ಬೆಂಗಳೂರು: ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ಅವರ ವಿರುದ್ಧ ಭಾರತೀಯ ಜನತಾ ಪಕ್ಷ (ಬಿಜೆಪಿ) ಮಾಡಿರುವ ಭ್ರಷ್ಟಾಚಾರ ಆರೋಪಗಳನ್ನು ಬುಧವಾರ ಕರ್ನಾಟಕದ ಸಚಿವ ಜಿ. ಪರಮೇಶ್ವರ ನಿರಾಕರಿಸಿದ್ದಾರೆ. ಸಾಬೀತುಪಡಿಸದೆ ಅದನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದು ಹೇಳಿದರು. ವಿಬಿ-ಜಿ-ರಾಮ್-ಜಿ ಕಾಯ್ದೆಯ ವಿರುದ್ಧ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸಲು ನಾವು ಪ್ರಯತ್ನಿಸುತ್ತಿದ್ದೇವೆ ಎಂದು ಕರ್ನಾಟಕ ಸಚಿವರು ಹೇಳಿದ್ದಾರೆ.
ಪಾಕ್ನಲ್ಲಿ ಪ್ರದರ್ಶನಗೊಳ್ಳದ ನಟ ರಣವೀರ್ ಸಿಂಗ್ ಅಭಿನಯದ ಸೂಪರ್ ಹಿಟ್ ಸಿನಿಮಾ ಧುರಂದರ್ ಸಿನಿಮಾ ನೆಟ್ಫ್ಲಿಕ್ಸ್ನಲ್ಲಿ ಅಗ್ರಸ್ಥಾನ ಪಡೆದುಕೊಂಡಿದೆ.ರಣವೀರ್ ಸಿಂಗ್, ಅಕ್ಷಯ್ ಖನ್ನಾ, ಸಂಜಯ್ ದತ್, ಸಾರಾ ಅರ್ಜುನ್ ನಟನೆಯ ಈ ಸಿನಿಮಾ 2025ರ ಡಿಸೆಂಬರ್ 25ರಂದು ಭಾರತ ಸೇರಿ ಜಗತ್ತಿನಾದ್ಯಂತ ಬಿಡುಗಡೆಯಾಗಿತ್ತು. ಆದರೆ ಈ ಸಿನಿಮಾಗೆ ಪಾಕಿಸ್ತಾನ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿ ಬಿಡುಗಡೆಗೊಂಡಿರಲಿಲ್ಲ. ಇದೀಗ ಒಟಿಟಿಗೆ ಬಿಡುಗಡೆಯಾದ ಸಿನಿಮಾಗೆ ಭಾರೀ ವೀಕ್ಷಣೆ ಕಂಡಿದೆ. ಜನವರಿ 30ರಂದು ನೆಟ್ಫ್ಲಿಕ್ಸ್ನಲ್ಲಿ ತೆರೆಕಂಡ ಧುರಂಧರ್ ನೋಡಿ ಪಾಕ್ ಸಿನಿ ಪ್ರಿಯರು ಮೆಚ್ಚಿಕೊಂಡಿದ್ದಾರೆ.ಈ ಚಿತ್ರವನ್ನು ವೀಕ್ಷಿಸಿದ ಪಾಕ್ ಪ್ರೇಕ್ಷಕರು ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ. ರೆಡ್ಡಿಟ್
ಬೆಂಗಳೂರು: ಸಿದ್ಧಾಪುರದಲ್ಲಿ ನಡೆದ ಕೊಲೆ ಪ್ರಕರಣ ಸಂಬಂಧ ಬಂಧಿಯಾಗಿರುವ ಜ್ಯೋತಿಷಿ ಕಮಲಾಕರ್ ಭಟ್ನನ್ನು ಬಿಜೆಪಿ ಶಾಸಕ ಸುರೇಶ್ ಕುಮಾರ್ ಪ್ರೋತ್ಸಾಹಿಸಿ ಬೆಳೆಸಿದ್ದು, ಇದರಲ್ಲಿ ಅವರ ಪಾತ್ರವು ಮುಖ್ಯವಾಗುತ್ತದೆಂಬ ಕೈ ನಾಯಕ ಬಿಕೆ ಹರಿಪ್ರಸಾದ್ ಆರೋಪಕ್ಕೆ ಬಿಜೆಪಿ ಮುಖಂಡ ಎಸ್. ಸುರೇಶ್ ಕುಮಾರ್ ಅವರು, ಫೇಸ್ಬುಕ್ ಪೋಸ್ಟ್ ಮೂಲಕ ತೀಕ್ಷ್ಣ ಪ್ರತಿಕ್ರಿಯಿಸಿದ್ದಾರೆ. ಬಿ.ಕೆ. ಹರಿಪ್ರಸಾದ್ ಅವರೇ, ನಿಮ್ಮ ಫೇಸ್ಬುಕ್ ಬರಹವನ್ನು ಗಮನಿಸಿದೆ. ಕಾರವಾರದ ಸಿದ್ದಾಪುರದಲ್ಲಿ ನಡೆದ ಹೇಯ ಕೃತ್ಯವೊಂದನ್ನು ಮುಂದಿಟ್ಟುಕೊಂಡು, ಅದಕ್ಕೆ ರಾಜಕೀಯ ಬಣ್ಣ ಬಳಿದು, ನನ್ನ ಹೆಸರನ್ನು ತಳುಕು ಹಾಕಲು ನೀವು ನಡೆಸಿರುವ ಪ್ರಯತ್ನ ನಿಮ್ಮ "ಬೌದ್ಧಿಕ ದಿವಾಳಿತನ"ವನ್ನು ಎತ್ತಿ ತೋರಿಸುವಂತಿದೆ ಎಂದು ಕಿಡಿಕಾರಿದ್ದಾರೆ.
ಜಮ್ಮುವಿನ ಉಧಂಪುರದಲ್ಲಿ ಬುಧವಾರ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ ಇಬ್ಬರು ಭಯೋತ್ಪಾದಕರು ಸಾವನ್ನಪ್ಪಿದ್ದಾರೆ. ಮಂಗಳವಾರ ಸಂಜೆ 4 ಗಂಟೆ ಸುಮಾರಿಗೆ ಈ ಎನ್ಕೌಂಟರ್ ಪ್ರಾರಂಭವಾಯಿತು.ನಿನ್ನೆ (ಮಂಗಳವಾರ) ಭಯೋತ್ಪಾದಕರೊಂದಿಗಿನ ಸಂಪರ್ಕವನ್ನು ಸ್ಥಾಪಿಸಲಾಯಿತು ಮತ್ತು ಅಂದಿನಿಂದ, ಭಯೋತ್ಪಾದಕರು ಸಂಪರ್ಕ ಕಡಿತಗೊಳ್ಳದಂತೆ ತಡೆಯಲಾಯಿತು. ಮಾಪನಾಂಕ ನಿರ್ಣಯಿಸಿದ ಮತ್ತು ಸಂಘಟಿತ ಪ್ರತಿಕ್ರಿಯೆಯ ನಂತರ, ಇಬ್ಬರು ಭಯೋತ್ಪಾದಕರನ್ನು ಯಶಸ್ವಿಯಾಗಿ ತಟಸ್ಥಗೊಳಿಸಲಾಗಿದೆ ಎಂದು ಸೇನಾ ವಕ್ತಾರರು ತಿಳಿಸಿದ್ದಾರೆ.ಕಾರ್ಯಾಚರಣೆಯು ತಡೆರಹಿತ ಅಂತರ-ಸಂಸ್ಥೆ ಸಮನ್ವಯ, ಯುದ್ಧತಂತ್ರದ ನಿಖರತೆ ಮತ್ತು
ಬೆಂಗಳೂರು: ದಲಿತ ಸಚಿವನಿಗೆ ತೊಂದರೆ ನೀಡುವ ಸಲುವಾಗಿ ಬಿಜೆಪಿ ನಾಯಕರು ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ಅವರ ರಾಜೀನಾಮೆಗೆ ಆಗ್ರಹಿಸುತ್ತಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಆಕ್ರೋಶ ಹೊರಹಾಕಿದರು. ಈ ವಿಚಾರವಾಗಿ ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಬಿಜೆಪಿ ಕಾಲದಲ್ಲಿ ಪಿಎಸ್ಐ ನೇಮಕಾತಿಯಲ್ಲಿ ಅಕ್ರಮ ನಡೆದಿತ್ತು. ಆ ಸಂದರ್ಭದಲ್ಲಿ ಬಿಜೆಪಿಯವರು ಯಾರು ರಾಜೀನಾಮೆ ನೀಡಿದ್ದರು ಎಂದು ಪ್ರಶ್ನೆ ಮಾಡಿದರು. ಬಿಜೆಪಿ ಸರ್ಕಾರದ ಅವಧಿಯಲ್ಲಿ ಏನೆಲ್ಲಾ ಭ್ರಷ್ಟಾಚಾರ ಆಗಿದೆ ಎಂದು ಸಚಿವ ತಿಮ್ಮಾಪುರ ಅವರು
ನವದೆಹಲಿ: ರಾಜ್ಯದಲ್ಲಿ ನಡೆಯುತ್ತಿರುವ ಮಾನವ, ವನ್ಯಜೀವಿ ಸಂಘರ್ಘ ಸಂಬಂಧ ಕೇಂದ್ರ ಸಚಿವ ಎಚ್ಡಿ ಕುಮಾರಸ್ವಾಮಿ ಅವರು ಕೇಂದ್ರದ ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವ ಭೂಪೇಂದರ್ ಯಾದವ್ ಅವರನ್ನು ಭೇಟಿಯಾಗಿ ಕೆಲಹೊತ್ತು ಚರ್ಚೆಯನ್ನು ನಡೆಸಿದರು. ಸಂಸತ್ ಭವನದಲ್ಲಿರುವ ಅರಣ್ಯ ಸಚಿವರ ಕಚೇರಿಯಲ್ಲಿ ನಡೆದ ಈ ಭೇಟಿಯ ವೇಳೆ ಕುಮಾರಸ್ವಾಮಿ ಅವರು ಮುಖ್ಯವಾಗಿ ಕೊಡಗು, ಚಿಕ್ಕಮಗಳೂರು, ಹಾಸನ, ಮೈಸೂರು, ಚಾಮರಾಜನಗರ, ಶಿವಮೊಗ್ಗ, ರಾಮನಗರ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ನಡೆಯುತ್ತಿರುವ ಆನೆಗಳ ದಾಳಿ ಸಂಬಂಧ ಚರ್ಚೆಯನ್ನು ನಡೆಸಿದರು. ಇನ್ನೂ ಈ ಪ್ರದೇಶಗಳಲ್ಲಿ ವನ್ಯಜೀವಿ ಉಪಟಳ ನಿರಂತರವಾಗಿ ನಡೆಯುತ್ತಿದ್ದು ಇದರಿಂದ ಅರಣ್ಯದ
ನವದೆಹಲಿ: ಸಂಸತ್ ನ ಒಳಗೆ ಮಾತ್ರವಲ್ಲ, ಕಾಂಗ್ರೆಸ್ ಮತ್ತು ಬಿಜೆಪಿ ಸಂಸದರ ನಡುವೆ ಸಂಸತ್ ಹೊರಗೂ ವಾಗ್ಯುದ್ಧವಾಗುತ್ತಿದೆ. ಇಂದು ಸಂಸತ್ ನ ಹೊರಾವರಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ರಾಜ್ಯಸಭಾ ಸದಸ್ಯ ರವನೀತ್ ಸಿಂಗ್ ಬಿಟ್ಟು ವಾಕ್ಪ್ರಹಾರ ನಡೆಸಿದ್ದಾರೆ. ಈ ವಿಡಿಯೋಗಳು ಈಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ. ಸಂಸತ್ ನಿಂದ 8 ವಿಪಕ್ಷ ಸದಸ್ಯರನ್ನು ಅಮಾನತು ಮಾಡಿರುವುದನ್ನು ಖಂಡಿಸಿ ಸಂಸತ್ ನ ಮಕರ ದ್ವಾರ ಬಳಿ ರಾಹುಲ್ ಗಾಂಧಿ ನೇತೃತ್ವದಲ್ಲಿ ಇಂಡಿಯಾ ಒಕ್ಕೂಟದ ನಾಯಕರು ಪ್ರತಿಭಟನೆ ನಡೆಸುತ್ತಿದ್ದರು.
ದೇಶದಲ್ಲಿ ಭಾರೀ ಸುದ್ದಿಯಾಗಿದ್ದ ಕೇರಳದ ಶಬರಿಮಲೆಯಲ್ಲಿ ಚಿನ್ನ ಕಳ್ಳತನ ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿಗೆ ಕೊಲ್ಲಂ ವಿಜಿಲೆನ್ಸ್ ನ್ಯಾಯಾಲಯ ಬುಧವಾರ ಶಾಸನಬದ್ಧ ಜಾಮೀನು ನೀಡಿದೆ.ಬಂಧನದ ನಂತರ ಕಡ್ಡಾಯ 90 ದಿನಗಳ ಅವಧಿಯಲ್ಲಿ ವಿಶೇಷ ತನಿಖಾ ತಂಡ (ಎಸ್ಐಟಿ) ಆರೋಪಪಟ್ಟಿ ಸಲ್ಲಿಸಲು ವಿಫಲವಾದ ನಂತರ ನ್ಯಾಯಾಲಯದ ತೀರ್ಪು ಹೊರಬಿದ್ದಿದೆ.ಬೆಂಗಳೂರು ಮೂಲದ ಉದ್ಯಮಿ ಮತ್ತು ದೇವಾಲಯದ ಮಾಜಿ ಸಹಾಯಕರಾದ ಪೊಟ್ಟಿ, ಶಬರಿಮಲೆ
ಬಹುತೇಕ ಹೆಚ್ಚಿನ ರೋಗಗಳನ್ನು ವೈದ್ಯರು ಮೂತ್ರ ಪರೀಕ್ಷೆ ಮೂಲಕ ತಿಳಿದುಕೊಳ್ಳುತ್ತಾರೆ. ನಿಮ್ಮ ಮೂತ್ರದ ಬಣ್ಣದಿಂದಲೂ ನಿಮ್ಮ ಆರೋಗ್ಯ ಹೇಗಿದೆ ಎಂದು ತಿಳಿದುಕೊಳ್ಳಬಹುದು ಗೊತ್ತಾ? ಮೂತ್ರದ ಬಣ್ಣದಲ್ಲಿ ಆಗುವ ಬದಲಾವಣೆಗಳು ನಿಮ್ಮ ಆರೋಗ್ಯ ಸರಿಯಾಗಿದೆಯಾ, ಏನಾದರೂ ಸಮಸ್ಯೆಯಾಗಿದೆಯಾ ಎಂದು ಸೂಚಿಸುತ್ತದೆ. ಯಾವ ಬಣ್ಣದಲ್ಲಿ ಮೂತ್ರವಿದ್ದರೆ ಏನು ಅರ್ಥ ಇಲ್ಲಿದೆ ನೋಡಿ ವಿವರ. ಬಣ್ಣದಲ್ಲಿ ವ್ಯತ್ಯಾಸ, ಉರಿ ಇನ್ನಿತರ ಲಕ್ಷಣ ಕಂಡುಬಂದರೆ ತಕ್ಷಣವೇ ತಜ್ಞ ವೈದ್ಯರನ್ನು ಸಂಪರ್ಕಿಸಿ ಚಿಕಿತ್ಸೆ ಪಡೆದುಕೊಳ್ಳುವುದು ಉತ್ತಮ. ತೆಳು ಹಳದಿ ಬಣ್ಣ: ನಿಮ್ಮ ದೇಹದಲ್ಲಿ ಸಾಕಷ್ಟು ನೀರಿನಂಶವಿದ್ದು ಆರೋಗ್ಯವಾಗಿದ್ದೀರಿ ಎಂದರ್ಥ.ತೆಳು ಕಿತ್ತಳೆ ಬಣ್ಣ: ನಿಮ್ಮ ದೇಹ ಸ್ವಲ್ಪ ಮಟ್ಟಿಗೆ ನಿರ್ಜಲೀಕರಣಕ್ಕೊಳಗಾಗಿದೆ, ಮತ್ತಷ್ಟು ನೀರು ಕುಡಿಯಬೇಕು ಎಂದರ್ಥ.
ನವದೆಹಲಿ: ಭಾರತ ಮತ್ತು ಅಮೆರಿಕಾ ನಡುವಿನ ವಾಣಿಜ್ಯ ಒಪ್ಪಂದದಿಂದಾಗಿ ಭಾರತದ ರೈತರು, ಮಾರುಕಟ್ಟೆಗೆ ಕುತ್ತು ಎಂದು ಕಾಂಗ್ರೆಸ್ ಆರೋಪಕ್ಕೆ ಇಂದು ಸಂಸತ್ ನಲ್ಲಿ ಕೇಂದ್ರ ಸಚಿವ ಪಿಯೂಷ್ ಗೋಯಲ್ ಸ್ಪಷ್ಟನೆ ನೀಡಿದ್ದಾರೆ. ಭಾರತ ಮತ್ತು ಅಮೆರಿಕಾ ನಡುವೆ ಮಹತ್ವದ ವಾಣಿಜ್ಯ ಒಪ್ಪಂದವಾಗಿದೆ. ಇದರಿಂದಾಗಿ ಅಮೆರಿಕಾದ ಕೃಷಿ ಉತ್ಪನ್ನಗಳು ಭಾರತದ ಮಾರುಕಟ್ಟೆಯನ್ನು ಪ್ರವೇಶಿಸಲಿವೆ. ಹೀಗಾದಲ್ಲಿ ಭಾರತದ ರೈತರ ಉತ್ಪನ್ನಗಳು ಬೇಡಿಕೆ ಕಳೆದುಕೊಳ್ಳಲಿವೆ. ಅಮೆರಿಕಾ ಜೊತೆ ಒಪ್ಪಂದ ಮಾಡಿಕೊಂಡು ಮೋದಿ ದೇಶವನ್ನೇ ಮಾರಿದ್ದಾರೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.
ಬೆಂಗಳೂರು: ಅಡಿಕೆ ಬೆಲೆ ಕಳೆದ ವಾರ ಏರಿಕೆ-ಇಳಿಕೆಯಾಗಿತ್ತು. ಇಂದು ಪಟೋರ ದರ ಮಾತ್ರ ಏರಿಕೆಯಾಗಿದೆ. ಉಳಿದವು ಯಥಾಸ್ಥಿತಿಯಲ್ಲಿದೆ. ಇಂದು ಅಡಿಕೆ ಮತ್ತು ಕಾಳು ಮೆಣಸು, ಕೊಬ್ಬರಿ ದರ ಹೇಗಿದೆ ಇಲ್ಲಿದೆ ವಿವರ. ಕಳೆದ ವಾರ ಅಡಿಕೆ ಬೆಲೆಯಲ್ಲಿ ಏರಿಕೆ ಆರಂಭವಾಗಿತ್ತು. ಸತತವಾಗಿ ನಾಲ್ಕು ದಿನಗಳ ಕಾಲ ಏರಿಕೆಯಾಗಿದ್ದು ರೈತರ ಸಂತಸಕ್ಕೆ ಕಾರಣವಾಗಿತ್ತು. ಆದರೆ ಇಂದು ಯಾವುದೇ ವ್ಯತ್ಯಾಸ ಕಂಡುಬರುತ್ತಿಲ್ಲ. ಇಂದು ಹೊಸ ಅಡಿಕೆ ಬೆಲೆ 460 ರೂ.ಗಳಷ್ಟಿದೆ. ಹಳೆ ಅಡಿಕೆ ಬೆಲೆ ಯಥಾಸ್ಥಿತಿಯಲ್ಲಿದ್ದು 535 ರೂ. ಗಳಾಗಿತ್ತು. ಇಂದೂ ಅಷ್ಟೇ ಇದೆ. ಡಬಲ್ ಚೋಲ್ ಬೆಲೆಯೂ 535 ರೂ.ಗಳಷ್ಟಾಗಿದೆ.
ಬೆಂಗಳೂರು: ಭ್ರಷ್ಟಾಚಾರದಲ್ಲಿ ಮುಳುಗಿ ಹೋಗಿರುವ ಕಾಂಗ್ರೆಸ್ ಸರಕಾರದ ಮುಖ್ಯಮಂತ್ರಿಗಳು ಅಬಕಾರಿ ವಿಚಾರದಲ್ಲಿ ಗಟ್ಟಿಯಾದ ನಿರ್ಧಾರವನ್ನು ತೆಗೆದುಕೊಳ್ಳಬೇಕೆಂಬುದು ಬಿಜೆಪಿ ಮತ್ತು ಜೆಡಿಎಸ್ ನಿಲುವು. ಅಬಕಾರಿ ಸಚಿವರ ರಾಜೀನಾಮೆ ಪಡೆದು ಆಮೇಲೆ ಭ್ರಷ್ಟಾಚಾರದ ಬಗ್ಗೆ ತನಿಖೆ ನಡೆಸಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಒತ್ತಾಯಿಸಿದ್ದಾರೆ.ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸರಕಾರದ ಬ್ರಹ್ಮಾಂಡ ಭ್ರಷ್ಟಾಚಾರವು ಇವತ್ತು ಅಬಕಾರಿ ಇಲಾಖೆಗೂ ಬಂದು ತಲುಪಿದೆ. ರಾಜ್ಯ ಸರಕಾರವು ಒಂದು ಕಡೆ ತನ್ನ ಗ್ಯಾರಂಟಿಗಳಿಗೆ ಹಣ ಕ್ರೋಡೀಕರಿಸಲು ಸಾಧ್ಯವಾಗದೇ ಅಬಕಾರಿ ಇಲಾಖೆಯಲ್ಲಿ ಟಾರ್ಗೆಟ್ ಹೆಚ್ಚಿಸಿ ಕರ್ನಾಟಕವನ್ನು ಕುಡುಕರ ರಾಜ್ಯವಾಗಿ ಮಾಡುತ್ತಿದೆ. ಮನಸೋಇಚ್ಛೆ ಲಿಕ್ಕರ್ ಲೈಸನ್ಸ್ಗಳನ್ನು ನೀಡಲಾಗುತ್ತಿದೆ ಎಂದು ಆಕ್ಷೇಪಿಸಿದರು.
ಬೆಂಗಳೂರು: ನಟಿ ರಚಿತಾ ರಾಮ್ ಬುಲ್ ಬುಲ್ ಸಿನಿಮಾ ಮಾಡುವಾಗ ಮೀನು, ಚಿಕನ್ ತಿನ್ನಲು ಬಿಟ್ಟಿರಲಿಲ್ವಂತೆ ನಿರ್ಮಾಪಕರಲ್ಲಿ ಒಬ್ಬರಾಗಿದ್ದ ಕವಿರಾಜ್. ಖ್ಯಾತ ಆರ್ ಜೆ ಸೌಜನ್ಯ ಜೊತೆಗಿನ ಯೂ ಟ್ಯೂಬ್ ಸಂದರ್ಶನದಲ್ಲಿ ಕವಿರಾಜ್ ಒಮ್ಮೆ ಈ ವಿಚಾರ ಹಂಚಿಕೊಂಡಿದ್ದರು. ಬುಲ್ ಬುಲ್ ಸಿನಿಮಾ ರಚಿತಾ ರಾಮ್ ನಾಯಕಿಯಾಗಿ ಮೊದಲ ಸಿನಿಮಾವಾಗಿತ್ತು. ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನು ಚಿತ್ರರಂಗಕ್ಕೆ ಪರಿಚಯಿಸಿದ್ದರು. ಈ ಸಿನಿಮಾ ಚಿತ್ರೀಕರಣ ವಿದೇಶದಲ್ಲಿ ನಡೆಯುತ್ತಿತ್ತು. ಆಗ ರಚಿತಾ ರಾಮ್ ಮುಖದಲ್ಲಿ ಮೊಡವೆ ನೋಡಿ ಯಾಕೆ ನಿಮ್ಮ ಮುಖದಲ್ಲಿ ಅಷ್ಟೊಂದು ಮೊಡವೆ ಬೀಳುತ್ತಿದೆ ಎಂದು ಕವಿರಾಜ್ ಕೇಳಿದ್ದರಂತೆ.
ನವದೆಹಲಿ: ಲೋಕಸಭೆ ಕಲಾಪದಲ್ಲಿ ಭಾಷಣ ಮಾಡಲು ಎದ್ದು ನಿಂತ ರಾಹುಲ್ ಗಾಂಧಿಗೆ ಸಭಾಧ್ಯಕ್ಷರ ಪೀಠದಲ್ಲಿರುವ ವ್ಯಕ್ತಿಯನ್ನು ಸ್ಪೀಕರ್ ಎನ್ನಬೇಕಾ, ಚೇರ್ ಮ್ಯಾನ್ ಎನ್ನಬೇಕಾ ಎಂದು ಗೊಂದಲಕ್ಕೀಡಾದ ವಿಡಿಯೋ ಈಗ ಸೋಷಿಯಲ್ ಮೀಡಿಯಾದಲ್ಲಿ ಟ್ರೋಲ್ ಗೊಳಗಾಗಿದೆ. ಲೋಕಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣಕ್ಕೆ ವಂದನಾ ನಿರ್ಣಯ ಅರ್ಪಿಸುವಾಗ ವಿಪಕ್ಷ ನಾಯಕ ರಾಹುಲ್ ಗಾಂಧಿ ಮಾತನಾಡಲು ಎದ್ದು ನಿಂತರು. ಈ ವೇಳೆ ಸಭಾಪತಿಗಳ ಸ್ಥಾನದಲ್ಲಿ ಕೃಷ್ಣ ಪ್ರಸಾದ್ ತೆನ್ನೇತಿ ಇದ್ದರು. ‘ಸ್ಪೀಕರ್ ಸರ್..’ ಎಂದು ಮೊದಲು ಹೇಳುವ ರಾಹುಲ್ ಗಾಂಧಿಗೆ ಅನುಮಾನವಾಗುತ್ತದೆ.
ಮುಂಬೈ: ಟಿ20 ವಿಶ್ವಕಪ್ ಆಡಲು ಭಾರತಕ್ಕೆ ಬಂದಿರುವ ಅಮೆರಿಕಾ ಕ್ರಿಕೆಟಿಗರು ಮುಂಬೈ ಬೀದಿಯಲ್ಲಿ ಗೋಲ್ ಗಪ್ಪಾ ಸವಿದ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಅಮೆರಿಕಾ ಕ್ರಿಕೆಟಿಗರು ಮೊನ್ನೆಯೇ ಭಾರತಕ್ಕೆ ಬಂದಿಳಿದಿದ್ದರು. ಮುಂಬೈನಲ್ಲಿ ನಿನ್ನೆ ಅಭ್ಯಾಸ ಪಂದ್ಯದ ಬಳಿಕ ಕ್ರಿಕೆಟಿಗರು ಬೀದಿ ಬದಿ ಆಹಾರ ಸವಿಯಲು ರಸ್ತೆಗಿಳಿದಿದ್ದಾರೆ. ಮುಂಬೈ ಗೋಲ್ ಗಪ್ಪಾಕ್ಕೆ ಫೇಮಸ್. ಹೀಗಾಗಿ ಕ್ರಿಕೆಟಿಗರು ಗೋಲ್ ಗಪ್ಪಾ ಸವಿದಿದ್ದಾರೆ. ಬೀದಿ ಬದಿಯ ಅಂಗಡಿಯೊಂದರಲ್ಲಿ ನಿಂತುಕೊಂಡು ಕ್ರಿಕೆಟಿಗರು ಚಪ್ಪರಿಸಿಕೊಂಡು ಗೋಲ್ ಗಪ್ಪಾ ಸವಿಯುತ್ತಿರುವ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಬೆಂಗಳೂರು: ಕೇಂದ್ರ ಬಜೆಟ್ ಗೆ ಮುನ್ನ ಚಿನ್ನದ ದರ ಭರ್ಜರಿ ಇಳಿಕೆ ಕಂಡಿದೆ. ಇಂದು ಪರಿಶುದ್ಧ ಚಿನ್ನದ ದರ ಮತ್ತು ಇತರೆ ಚಿನ್ನದ ದರ ಮತ್ತೆ ಏರಿಕೆಯಾಗಿದೆ. ಇಂದು ಪರಿಶುದ್ಧ ಚಿನ್ನದ ದರ ಮತ್ತು ಇತರೆ ಚಿನ್ನದ ದರ ವಿವರ ಇಲ್ಲಿದೆ ನೋಡಿ. ಚಿನ್ನದ ದರ ಏರಿಕೆಕಳೆದ ವಾರ ಪರಿಶುದ್ಧ ಚಿನ್ನದ ದರ ಸತತವಾಗಿ ದಾಖಲೆಯ ಏರಿಕೆ ಕಂಡಿತ್ತು. ಆದರೆ ಈ ವಾರದ ಆರಂಭದಲ್ಲೇ ಚಿನ್ನದ ದರ ಇಳಿಕೆಯಾಗಿತ್ತು. ಇಂದು ಪರಿಶುದ್ಧ ಚಿನ್ನದ ದರ ಇಂದು ಮತ್ತೆ ಏರಿಕೆಯಾಗಿದೆ. ಪರಿಶುದ್ಧ ಚಿನ್ನದ ದರ ನಿನ್ನೆ 1,52,060.00 ರೂ.ಗಳಿತ್ತು. ಇಂದೂ 1,56,850.00 ರೂ.ಗಳಷ್ಟಿದೆ.
ನವದೆಹಲಿ: ಭಾರತ ಮತ್ತು ಅಮೆರಿಕಾ ನಡುವೆ ವಾಣಿಜ್ಯ ಒಪ್ಪಂದವಾಗುತ್ತಿದ್ದಂತೇ ರಾಹುಲ್ ಗಾಂಧಿ ಸೇರಿದಂತೆ ಕಾಂಗ್ರೆಸ್ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆದರೆ ಕೇಂದ್ರದ ಸಮರ್ಥನೆಯೇನು ಇಲ್ಲಿದೆ ವಿವರ. ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಭಾರತದ ಪ್ರಧಾನಿ ಮೋದಿ ದೂರವಾಣಿ ಮೂಲಕ ಮಾತುಕತೆ ನಡೆಸಿ ಭಾರತ ಮತ್ತು ಅಮೆರಿಕಾ ನಡುವೆ ವಾಣಿಜ್ಯ ಒಪ್ಪಂದ ಮಾಡಿಕೊಳ್ಳಲು ನಿರ್ಧರಿಸಿದ್ದಾರೆ. ಆದರೆ ಇದರ ಬಗ್ಗೆ ರಾಹುಲ್ ಗಾಂಧಿ ಆಕ್ರೋಶ ವ್ಯಕ್ತಪಡಿಸಿದ್ದು ಭಾರತವನ್ನು ಮೋದಿ ಅಮೆರಿಕಾಕ್ಕೆ ಮಾರಿದ್ದಾರೆ ಎಂದು ಆರೋಪಿಸಿದ್ದಾರೆ.
ನವದೆಹಲಿ: ಅಮೆರಿಕಾ ಜೊತೆ ಭಾರತ ವ್ಯಾಪಾರ ಒಪ್ಪಂದ ಮಾಡಿಕೊಳ್ಳುತ್ತಿದ್ದಂತೇ ಭಾರತದಲ್ಲಿ ಗೃಹಿಣಿಯರು ಖುಷಿಯಾಗಿದ್ದಾರೆ. ಕಾರಣವೇನು ಗೊತ್ತಾ? ಇಷ್ಟು ದಿನ ಹಳಸಿದ್ದ ಭಾರತ-ಅಮೆರಿಕಾ ವ್ಯಾಪಾರ ಸಂಬಂಧ ಈಗ ಚೇತರಿಕೆಯ ಹಾದಿಯಲ್ಲಿದೆ. ಭಾರತ ಯಾವಾಗ ಯುರೋಪಿಯನ್ ಒಕ್ಕೂಟದ ಜೊತೆ ವ್ಯಾಪಾರ ಒಪ್ಪಂದಕ್ಕೆ ಮುಂದಾಯಿತೋ ಆಗ ಥಂಡಾ ಹೊಡೆದ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಾವೇ ಪ್ರಧಾನಿ ಮೋದಿ ಜೊತೆ ಮಾತನಾಡಿ ವ್ಯಾಪಾರ ಒಪ್ಪಂದಕ್ಕೆ ಮುಂದಾದರು. ಭಾರತದ ಮೇಲೆ ಅಮೆರಿಕಾ ವಿಧಿಸಿದ್ದ ಸುಂಕವನ್ನೂ ಶೇ.18 ಕ್ಕೆ ಇಳಿಕೆ ಮಾಡಲಾಗಿದೆ. ಇದರ ಬೆನ್ನಲ್ಲೇ ದೇಶದಲ್ಲಿ ಚಿನ್ನದ ಬೆಲೆ ಈಗ ದಿಡೀರ್ ಇಳಿಕೆಯತ್ತ ಸಾಗಿದೆ.
ಮುಂಬೈ: ಟಿ20 ವಿಶ್ವಕಪ್ ಕ್ರಿಕೆಟ್ ಟೂರ್ನಿಯ ಪೂರ್ವಭಾವಿಯಾಗಿ ಇಂದು ಟೀಂ ಇಂಡಿಯಾಗೆ ದಕ್ಷಿಣ ಆಫ್ರಿಕಾ ತಂಡದ ಜೊತೆ ಅಭ್ಯಾಸ ಪಂದ್ಯ ಆಯೋಜಿಸಲಾಗಿದೆ. ಕಳೆದ ಬಾರಿಯ ಟಿ20 ವಿಶ್ವಕಪ್ ಫೈನಲ್ ನಲ್ಲಿ ಇದೇ ದಕ್ಷಿಣ ಆಫ್ರಿಕಾವನ್ನು ಎದುರಿಸಿದ್ದ ಟೀಂ ಇಂಡಿಯಾ ಕಪ್ ಗೆದ್ದುಕೊಂಡಿತ್ತು. ಇದೀಗ ಮತ್ತೆ ಹರಿಣಗಳ ವಿರುದ್ಧವೇ ಅಭ್ಯಾಸ ಪಂದ್ಯವಾಡುವ ಮೂಲಕ ಈ ವಿಶ್ವಕಪ್ ಗೆ ಆರಂಭ ಪಡೆಯಲಿದೆ. ಇಂದು ನವಿ ಮುಂಬೈನಲ್ಲಿ ಈ ಪಂದ್ಯ ನಡೆಯಲಿದೆ. ಟಿ20 ವಿಶ್ವಕಪ್ ದೃಷ್ಟಿಯಿಂದ ತಂಡದ ಆಟಗಾರರನ್ನು ಪ್ರಯೋಗಕ್ಕೊಳಪಡಿಸಲು ಟೀಂ ಇಂಡಿಯಾಗೆ ಉತ್ತಮ ವೇದಿಕೆಯಾಗಿದೆ.
ಬೆಂಗಳೂರು: ಸಿಎಂ ಕುರ್ಚಿ ಉಳಿಸಲು ಸಿದ್ದರಾಮಯ್ಯನವರು ತಮ್ಮ ಆಪ್ತ ಸಚಿವರ ಮೂಲಕ ಅಬಕಾರಿ ಇಲಾಖೆಯಿಂದ ಕಾಂಗ್ರೆಸ್ ಹೈಕಮಾಂಡ್ ಗೆ ಸಾವಿರ ಕೋಟಿ ಕಪ್ಪ ಕೊಡುತ್ತಿದ್ದಾರೆ ಎಂದು ವಿಪಕ್ಷ ನಾಯಕ ಆರ್ ಅಶೋಕ್ ಆರೋಪಿಸಿದ್ದಾರೆ. ಅಬಕಾರಿ ಇಲಾಖೆಯಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ ಖಂಡಿಸಿ, ಸಚಿವ ಆರ್ ಬಿ ತಿಮ್ಮಾಪುರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಮತ್ತು ಜೆಡಿಎಸ್ ಸದಸ್ಯರು ನಿನ್ನೆ ರಾತ್ರಿ ವಿಧಾನಸೌಧದಲ್ಲೇ ತಂಗಿ ಅಹೋರಾತ್ರಿ ಧರಣಿ ನಡೆಸಿದ್ದಾರೆ. ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿರುವ ಅಶೋಕ್, ಅಬಕಾರಿ ಇಲಾಖೆ ಹಣ ಕಾಂಗ್ರೆಸ್ ಹೈಕಮಾಂಡ್ ಗೆ ಹೋಗುತ್ತಿದೆ ಎಂದು ಆರೋಪಿಸಿದ್ದಾರೆ.
ಬೆಂಗಳೂರು: ಅಬಕಾರಿ ಸಚಿವ ಆರ್ ಬಿ ತಿಮ್ಮಾಪುರ ರಾಜೀನಾಮೆಗೆ ಒತ್ತಾಯಿಸಿ ವಿಧಾನಸೌಧದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಸದಸ್ಯರು ಅಹೋರಾತ್ರಿ ಧರಣಿ ನಡೆಸಿದ್ದಾರೆ. ಈ ವೇಳೆ ಧರಣಿ ಹೇಗಿತ್ತು ಇಲ್ಲಿದೆ ವಿಡಿಯೋ. ಬಿಜೆಪಿ ಮತ್ತು ಜೆಡಿಎಸ್ ಶಾಸಕರು ನಿನ್ನೆ ಸದನದಲ್ಲಿ ಆರ್ ಬಿ ತಿಮ್ಮಾಪುರ ರಾಜೀನಾಮೆಗೆ ಪಟ್ಟು ಹಿಡಿದಿದ್ದರು. ಆದರೆ ನಾನ್ಯಾಕೆ ರಾಜೀನಾಮೆ ಕೊಡಲಿ ಎಂದು ಸಚಿವರು ಗರಂ ಆಗಿದ್ದಾರೆ. ಸರ್ಕಾರ ಕೂಡಾ ಅವರ ಬೆನ್ನಿಗೆ ನಿಂತಿದೆ. ಇದರ ವಿರುದ್ಧ ತಿರುಗಿಬಿದ್ದಿರುವ ಬಿಜೆಪಿ ಮತ್ತು ಜೆಡಿಎಸ್ ಶಾಸಕರು ನಿನ್ನೆ ರಾತ್ರಿ ವಿಧಾನಸೌಧದಲ್ಲೇ ಧರಣಿ ನಡೆಸಿದ್ದಾರೆ.
ಬೆಂಗಳೂರು: ರಾಜ್ಯದಲ್ಲಿ ಕಳೆದ ಎರಡು ದಿನಗಳಿಂದ ಮತ್ತೆ ಚಳಿ ತೀವ್ರವಾಗಿದೆ. ಇಂದು ಹವಾಮಾನ ಹೇಗಿರಲಿದೆ ಇಲ್ಲಿದೆ ಇಂದಿನ ಹವಾಮಾನ ವರದಿ. ಈ ವಾರವಿಡೀ ಹಗಲಿಡೀ ಬಿಸಿಲು, ರಾತ್ರಿ ಚಳಿ ಎನ್ನುವ ಪರಿಸ್ಥಿತಿಯಿದೆ. ಹಗಲು ಬೆಳಿಗ್ಗಿನ ಹೊತ್ತು ಮಂಜು ಮುಸುಕಿದ ವಾತಾವರಣ ಕಂಡುಬರುತ್ತಿದೆ. ನಿನ್ನೆ ಕನಿಷ್ಠ ತಾಪಮಾನ 16 ಡಿಗ್ರಿಯಷ್ಟು ಇಳಿಕೆಯಾಗಿತ್ತು. ಕಳೆದ ಎರಡು ದಿನಗಳಿಂದ ಮತ್ತೆ ಚಳಿ ತೀವ್ರವಾಗಿದೆ. ಇಂದೂ ರಾಜ್ಯದ ಕನಿಷ್ಠ ತಾಪಮಾನ 16 ಡಿಗ್ರಿಯಷ್ಟಿರಲಿದೆ. ಗರಿಷ್ಠ ತಾಪಮಾನ 28 ಡಿಗ್ರಿಯಷ್ಟಿರುವ ಸಾಧ್ಯತೆಯಿದೆ. ವಾರಂತ್ಯದ ವೇಳೆ ತಾಪಮಾನದಲ್ಲಿ ಇನ್ನಷ್ಟು ಏರಿಕೆಯಾಗುವ ಸಾಧ್ಯತೆಯಿದೆ.
ಇಂದು ಬುಧವಾರವಾಗಿದ್ದು ವಿಘ್ನ ನಿವಾರಕ ಗಣೇಶನಿಗೆ ವಿಶೇಷವಾದ ದಿನವಾಗಿದೆ. ಇಂದು ಗಣೇಶನ ಅನುಗ್ರಹಕ್ಕಾಗಿ ಚಿಂತಾಮಣಿ ಷಟ್ಪದೀ ಸ್ತೋತ್ರವನ್ನು ತಪ್ಪದೇ ಓದಿ. ಕನ್ನಡದಲ್ಲಿ ಇಲ್ಲಿದೆ.ದ್ವಿರದವದನ ವಿಷಮರದ ವರದ ಜಯೇಶಾನ ಶಾಂತವರಸದನ ।ಸದನವಸಾದನ ದಯಯಾ ಕುರು ಸಾದನಮಂತರಾಯಸ್ಯ ॥ 1 ॥ ಇಂದುಕಲಾ ಕಲಿತಾಲಿಕ ಸಾಲಿಕಶುಂಭತ್ಕಪೋಲಪಾಲಿಯುಗ ।ವಿಕಟಸ್ಫುಟಕಟಧಾರಾಧಾರೋಽಸ್ಯಸ್ಯ ಪ್ರಪಂಚಸ್ಯ ॥ 2 ॥ ವರಪರಶುಪಾಶಪಾಣೇ ಪಣಿತಪಣಾಯಾಪಣಾಯಿತೋಽಸಿ ಯತಃ ।ಆರೂಹ್ಯ ವಜ್ರದಂತಂ ಆಖುಂ ವಿದಧಾಸಿ ವಿಪದಂತಮ್ ॥ 3 ॥ಲಂಬೋದರ ದೂರ್ವಾಸನ ಶಯಧೃತಸಾಮೋದಮೋದಕಾಶನಕ ।ಶನಕೈರವಲೋಕಯ ಮಾಂ ಯಮಾಂತರಾಯಾಪಹಾರಿಚಾರುದೃಶಾ ॥ 4 ॥
ವಡೋದರಾ: ಡಬ್ಲ್ಯುಪಿಎಲ್ 2026 ರಲ್ಲಿ ಗುಜರಾತ್ ಜೈಂಟ್ಸ್ ತಂಡವನ್ನು 7 ವಿಕೆಟ್ ಗಳಿಂದ ಮಣಿಸಿದ ಡೆಲ್ಲಿ ಕ್ಯಾಪಿಟಲ್ಸ್ ಎರಡನೇ ಬಾರಿಗೆ ಡಬ್ಲ್ಯುಪಿಎಲ್ ಫೈನಲ್ ಗೇರಿದೆ. ಇದರೊಂದಿಗೆ ಎರಡನೇ ಬಾರಿ ಆರ್ ಸಿಬಿ-ಡೆಲ್ಲಿ ಫೈನಲ್ ನಲ್ಲಿ ಮುಖಾಮುಖಿಯಾಗುತ್ತಿದೆ. ಇಂದು ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ಮೊದಲು ಫೀಲ್ಡಿಂಗ್ ಆಯ್ದುಕೊಂಡಿತು. ಗುಜರಾತ್ ಪರ ಬೆತ್ ಮೂನಿ ಹೋರಾಟದ 62, ಜಾರ್ಜಿಯಾ ವಾರೆಹಾಮ್ 35 ರನ್ ಗಳಿಸಿದರು. ಹಾಗಿದ್ದರೂ ಗುಜರಾತ್ 20 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 168 ರನ್ ಗಳಿಸಲಷ್ಟೇ ಶಕ್ತವಾಯಿತು.
ಬೆಂಗಳೂರು: ರಾಜ್ಯ ವಿಧಾನಸಭೆ ವಿಶೇಷ ಅಧಿವೇಶನ ನಡೆಯುತ್ತಿದ್ದು ಇಂದು ರಾತ್ರಿ ಬಿಜೆಪಿ ಶಾಸಕರು ವಿಧಾನಸೌಧದಲ್ಲೇ ಮೊಕ್ಕಾಂ ಹೂಡಲಿದ್ದಾರೆ. ಅಬಕಾರಿ ಇಲಾಖೆಯಲ್ಲಿ ನಡೆದಿದೆ ಎನ್ನಲಾದ ಸಾವಿರಾರು ಕೋಟಿ ರೂ. ಹಗರಣಕ್ಕೆ ಸಂಬಂಧಿಸಿದಂತೆ ಅಬಕಾರಿ ಸಚಿವ ಆರ್ ಬಿ ತಿಮ್ಮಾಪುರ ರಾಜೀನಾಮೆಗೆ ಬಿಜೆಪಿ ಪಟ್ಟು ಹಿಡಿದಿದೆ. ಈ ಸಂಬಂಧ ಇಂದು ಬಿಜೆಪಿ ಶಾಸಕರು ಸದನದಲ್ಲೇ ಇದ್ದು ಅಹೋರಾತ್ರಿ ಧರಣಿ ನಡೆಸಲಿದ್ದಾರೆ. ಬಿಜೆಪಿ ಶಾಸಕರಿಗೆ ಜೆಡಿಎಸ್ ಶಾಸಕರೂ ಸಾಥ್ ನೀಡಿದ್ದಾರೆ. ಈ ಸಂಬಂಧ ಮಾಧ್ಯಮಗಳೊಂದಿಗೆ ಮಾತನಾಡಿದ ಬಿವೈ ವಿಜಯೇಂದ್ರ, ‘ಅಬಕಾರಿ ಸಚಿವರ ಮೇಲೆ ನೇರ ಆರೋಪ ಬಂದಿದೆ.
ಬೆಂಗಳೂರು: ಪ್ರಧಾನಿ ಮೋದಿ ದೇಶದ್ರೋಹಿ ಎಂದು ಕಾಂಗ್ರೆಸ್ ಎಂಎಲ್ ಸಿ ನಸೀರ್ ಅಹ್ಮದ್ ಗೆ ರಾಜ್ಯ ಬಿಜೆಪಿ ಘಟಕ ತಿರುಗೇಟು ನೀಡಿದ್ದು ಹಾಗಿದ್ದರೆ ರಾಹುಲ್ ಗಾಂಧಿಯನ್ನು ಏನು ಹೇಳಬೇಕು ಎಂದು ಪ್ರಶ್ನೆ ಮಾಡಿದೆ. ಸದನದಲ್ಲಿ ನಸೀರ್ ಅಹ್ಮದ್ ನಾಲಿಗೆ ಹರಿಯಬಿಟ್ಟಿದ್ದರು. ಇದು ಬಿಜೆಪಿ ಮತ್ತು ಕಾಂಗ್ರೆಸ್ ಶಾಸಕರ ನಡುವೆ ಭಾರೀ ಗದ್ದಲಕ್ಕೆ ಕಾರಣವಾಗಿತ್ತು. ಈ ಬಗ್ಗೆ ಈಗ ಸೋಷಿಯಲ್ ಮೀಡಿಯಾದಲ್ಲಿ ವಾಗ್ದಾಳಿ ನಡೆಸಿರುವ ಬಿಜೆಪಿ ‘ದೇಶದ ಪ್ರಧಾನಿ ಅವರನ್ನು ಅನಾವಶ್ಯಕವಾಗಿ ಸದನಕ್ಕೆ ಎಳೆದು ತಂದು ʼದ್ರೋಹಿʼ ಎಂದಿರುವ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್ ಅವರ ನಡೆ ಖಂಡನೀಯ.
ನವದೆಹಲಿ: ಅಮೆರಿಕಾ ಒತ್ತಡಕ್ಕೆ ಮಣಿದು ಪ್ರಧಾನಿ ಮೋದಿ ದೇಶವನ್ನೇ ಮಾರಿದ್ದಾರೆ ಎಂದು ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಆರೋಪ ಮಾಡಿದ್ದಾರೆ. ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಪ್ರಧಾನಿ ಮೋದಿ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದರು. ಇದರ ಬೆನ್ನಲ್ಲೇ ಭಾರತದ ಮೇಲಿನ ಸುಂಕವನ್ನು ಟ್ರಂಪ್ 18% ಕ್ಕೆ ಇಳಿಕೆ ಮಾಡಿದ್ದರು. ಅಲ್ಲದೆ, ಅಮೆರಿಕಾ ಜೊತೆ ದೊಡ್ಡ ವ್ಯಾಪಾರ ಒಪ್ಪಂದಕ್ಕೂ ಮುಂದಾಗಿದ್ದಾರೆ. ಈ ವಿಚಾರವಾಗಿ ರಾಹುಲ್ ಗಾಂಧಿ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ‘ಯುರೋಪ್ ಒಪ್ಪಂದದ ಬೆನ್ನಲ್ಲೇ ಮೋದಿ ಇದ್ದಕ್ಕಿದ್ದಂತೆ ಅಮೆರಿಕಾ ಜೊತೆ ವ್ಯಾಪಾರ ಒಪ್ಪಂದಕ್ಕೆ ಒಪ್ಪಿಕೊಂಡಿದ್ದಾರೆ. ಮೋದಿಜೀ ಅಮೆರಿಕಾದ ಒತ್ತಡಕ್ಕೆ ಮಣಿದಿದ್ದಾರೆ.
ಮಣಿಪುರ: ಮಂಗಳವಾರ ಬಿಜೆಪಿ ಮಣಿಪುರದಲ್ಲಿ ಶಾಸಕಾಂಗ ಪಕ್ಷದ ನಾಯಕರಾಗಿ ಯುಮ್ನಮ್ ಖೇಮ್ಚಂದ್ ಸಿಂಗ್ ಅವರನ್ನು ಆಯ್ಕೆ ಮಾಡಿದೆ. ಖೇಮ್ಚಂದ್ ಮಣಿಪುರದ ಮುಂದಿನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.ಈಶಾನ್ಯ ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಕೊನೆಗೊಳ್ಳುವ ಕೆಲವು ದಿನಗಳ ಮೊದಲು ದೆಹಲಿಯಲ್ಲಿ ನಡೆದ ಮಣಿಪುರದ ಬಿಜೆಪಿ ಶಾಸಕರ ಸಭೆಯ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಬಿಜೆಪಿ ಶಾಸಕರ ಸಭೆಯ ನಂತರ, ಮಣಿಪುರದಲ್ಲಿ ಎನ್ಡಿಎ ಪಾಲುದಾರರು ಮಂಗಳವಾರ ಸಭೆ ಸೇರಿದರು.
ಬೆಂಗಳೂರು: ಹಾಲು ಸೇವನೆ ಮಾಡಿದರೆ ಕೆಲವರಿಗೆ ಅಲರ್ಜಿಯಾಗುತ್ತದೆ. ಯಾರಿಗೆಲ್ಲಾ ಹಾಲಿನ ಸೇವನೆಯಿಂದ ಅಲರ್ಜಿಯಾಗುತ್ತದೆ ಮತ್ತು ಇದಕ್ಕೆ ಕಾರಣವೇನು ಇಲ್ಲಿದೆ ವಿವರ. ಹಾಲು ಸೇವನೆ ಮಾಡುವುದು ಆರೋಗ್ಯಕ್ಕೆ ಉತ್ತಮ. ಹಾಲು ಒಂದು ಪರಿಪೂರ್ಣ ಆಹಾರವಾಗಿದ್ದು ಶಕ್ತಿ ವರ್ಧಕ. ಆದರೆ ಕೆಲವರಿಗೆ ಹಾಲು ಸೇವನೆ ಮಾಡುವುದರಿಂದ ಚರ್ಮದ ಅಲರ್ಜಿ, ಹೊಟ್ಟೆಯ ಕಿರಿ ಕಿರಿ, ಉಸಿರಾಟಕ್ಕೆ ಸಂಬಂಧಿಸಿದ ಸಮಸ್ಯೆಯಾಗುತ್ತದೆ. ವಿಶೇಷವಾಗಿ ನವಜಾತ ಮಕ್ಕಳಿಗೆ ಹಾಲು ಅಲರ್ಜಿಯಾಗಬಹುದು. ಇಲ್ಲವೇ ಕುಟುಂಬದಲ್ಲಿ ಈ ರೀತಿ ಹಿನ್ನಲೆಯಿದ್ದವರಿಗೆ ಅಥವಾ ಉಸಿರಾಟದ ಸಮಸ್ಯೆ ಇರುವವರಿಗೆ ಹಾಲು ಅಲರ್ಜಿಕಾರಕವಾಗಬಹುದು. ಇದಕ್ಕೆ ಕಾರಣವೂ ಇದೆ.
ಗುಜರಾತ್ ಜೈಂಟ್ಸ್ ವಿರುದ್ಧದ WPL 2026 ಎಲಿಮಿನೇಟರ್ ಪಂದ್ಯದಲ್ಲಿ, ಡೆಲ್ಲಿ ಕ್ಯಾಪಿಟಲ್ಸ್ ನಾಯಕಿ ಜೆಮಿಮಾ ರೋಡ್ರಿಗಸ್ ಅವರು ಕೋಟಂಬಿಯ ವಡೋದರಾ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡರು.ಟೂರ್ನಮೆಂಟ್ನ ಎರಡನೇ ಫೈನಲಿಸ್ಟ್ ಅನ್ನು ನಿರ್ಧರಿಸುವ ಪಂದ್ಯವನ್ನು ವಡೋದರಾದ ಬಿಸಿಎ ಕ್ರೀಡಾಂಗಣ ಆಯೋಜಿಸಲಿದೆ. ಈ ಹೈ-ಸ್ಟೇಕ್ಸ್ ಪಂದ್ಯದ ವಿಜೇತರು ಫೆಬ್ರವರಿ 5, ಗುರುವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಎದುರಿಸಲಿದ್ದಾರೆ.ಗುಜರಾತ್ ಜೈಂಟ್ಸ್: ಬೆತ್ ಮೂನಿ (WK), ಸೋಫಿ ಡಿವೈನ್, ಅನುಷ್ಕಾ ಶರ್ಮಾ, ಆಶ್ಲೀ ಗಾರ್ಡ್ನರ್ (C),
ಬಾಗಲಕೋಟೆ: ಕುಡಿದ ಮತ್ತಿನಲ್ಲಿ ವ್ಯಕ್ತಿಯೊಬ್ಬ ತನ್ನ ಪತ್ನಿಯ ತಲೆ ಬೋಳಿಸಿರುವ ಘಟನೆ ವರದಿಯಾಗಿದೆ. ಈ ಘಟನೆ ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲ್ಲೂಕಿನ ತೊದಲಬಾಗಿ ಗ್ರಾಮದಲ್ಲಿ ವರದಿಯಾಗಿದೆ. ಸಪತ್ನಿಯ ತಲೆ ಬೋಳಿಸಿದ ಪತಿಯನ್ನು ಉಮೇಶ್ ಕೊಟ್ಟಲಗಿ ಎಂದು ಗುರುತಿಸಲಾಗಿದೆ. ಆರೋಪಿಯನ್ನು ಸಾವಳಗಿ ಪೊಲೀಸರು ಬಂಧಿಸಿದ್ದಾರೆ.
ಚಿತ್ರದುರ್ಗ: ಶಾಲಾ ಶಿಕ್ಷಕನೊಬ್ಬ ವಿದ್ಯಾರ್ಥಿನಿಯರಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಬಗ್ಗೆ ಗಂಭೀರ ಆರೋಪ ಕೇಳಬಂದ ಘಟನೆ ತಾಲೂಕಿನ ಭರಮಸಾಗರ ಗ್ರಾಮದಲ್ಲಿ ಕೇಳಿಬಂದಿದೆ. ಇಲ್ಲಿನ ಪ್ರತಿಷ್ಠಿತ ಮಠವೊಂದಕ್ಕೆ ಸೇರಿದ ಶಾಲೆಯಲ್ಲಿ ಶಿಕ್ಷಕ ನೀಚ ಕೃತ್ಯ ಬಯಲಾಗಿದೆ. ಶಿಕ್ಷಕ ವಿದ್ಯಾರ್ಥಿಗಳನ್ನು ಪ್ರತ್ಯೇಕ ಕೋಣೆಗೆ ಕರೆದು ಲೈಂಗಿಕ ಕಿರುಕುಳ ನೀಡಿದ್ದಾನೆಂದು ಆರೋಪ ಬಂದಿದೆ. ವಿಷಯ ತಿಳಿದು ಆಘಾತಕ್ಕೊಳಗಾದ ಶಾಲಾ ಆಡಳಿತ ಮಂಡಳಿಯು ಘಟನೆಯನ್ನು ಗಂಭೀರವಾಗಿ ಪರಿಗಣಿಸಿ, ಕೂಡಲೇ ಕಾನೂನು ಕ್ರಮಕ್ಕೆ ಮುಂದಾಗಿದೆ.
ನವದೆಹಲಿ: ಇರಾನ್ನಲ್ಲಿನ ಬೆಳವಣಿಗೆಗಳ ನಂತರ ಇಂಡಿಗೋ ಮಂಗಳವಾರ ಪ್ರಯಾಣ ಸಲಹೆಯನ್ನು ನೀಡಿದೆ ಮತ್ತು ಗ್ರಾಹಕರು ಮತ್ತು ಸಿಬ್ಬಂದಿಗೆ "ಸುರಕ್ಷಿತ ಮತ್ತು ತಡೆರಹಿತ" ಅನುಭವವನ್ನು ಖಚಿತಪಡಿಸಿಕೊಳ್ಳಲು ತನ್ನ ವಿಮಾನ ವೇಳಾಪಟ್ಟಿಯನ್ನು ಸರಿಹೊಂದಿಸಿದೆ.ಎಕ್ಸ್ನಲ್ಲಿನ ಪೋಸ್ಟ್ನಲ್ಲಿ, ಇಂಡಿಗೋ ಟಿಬಿಲಿಸಿ, ಅಲ್ಮಾಟಿ, ಬಾಕು ಮತ್ತು ತಾಷ್ಕೆಂಟ್ಗೆ ಮತ್ತು ಅಲ್ಲಿಂದ ಹೊರಡುವ ತನ್ನ ವಿಮಾನಗಳನ್ನು ಫೆಬ್ರವರಿ 28 ರವರೆಗೆ ರದ್ದುಗೊಳಿಸಲಾಗಿದೆ ಎಂದು ಗಮನಿಸಿದೆ. ಪ್ರಯಾಣ ಸಲಹೆ- ಇರಾನ್ನ ಸುತ್ತಮುತ್ತಲಿನ ಅಭಿವೃದ್ಧಿಶೀಲ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ನಮ್ಮ ಗ್ರಾಹಕರು ಮತ್ತು ಸಿಬ್ಬಂದಿಗೆ ಸುರಕ್ಷಿತ ಮತ್ತು ತಡೆರಹಿತ
ಬೆಂಗಳೂರು: ಮಂಗಳೂರಿನ ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ನಡೆಯುತ್ತಿರುವ ದುರಾಡಳಿತದ ಬಗ್ಗೆ ಕರ್ನಾಟಕ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಅಧಿಕಾರಿಗಳು ಪ್ರಾಣಿಗಳನ್ನು ಸರಿಯಾಗಿ ನೋಡಿಕೊಳ್ಳಲು ಸಾಧ್ಯವಾಗದಿದ್ದರೆ ಜೈವಿಕ ಉದ್ಯಾನವನವನ್ನು ತಕ್ಷಣವೇ ಮುಚ್ಚಬೇಕೆಂದು ರಾಜ್ಯ ಸರ್ಕಾರಕ್ಕೆ ಕಠಿಣ ಎಚ್ಚರಿಕೆ ನೀಡಿದೆ.ವನ್ಯಜೀವಿ ಸಂರಕ್ಷಣಾ ತಜ್ಞ ಭುವನ್ ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ ವಿಚಾರಣೆಯ ಸಂದರ್ಭದಲ್ಲಿ ಈ ಅಭಿಪ್ರಾಯ ವ್ಯಕ್ತಪಡಿಸಲಾಗಿದೆ.ಪ್ರಾಣಿಗಳ ಸ್ಥಿತಿಯನ್ನು ಗಂಭೀರವಾಗಿ ಗಮನಿಸಿದ ನ್ಯಾಯಾಲಯವು, ರಕ್ಷಣೆ ಮತ್ತು ಸರಿಯಾದ
ಚೆನ್ನೈನ ಬೀದಿಯಲ್ಲಿ ಸಿಕ್ಕಿದ ₹45 ಲಕ್ಷದ ಚಿನ್ನವಿದ್ದ ಚೀಲವನ್ನು ಪೊಲೀಸರಿಗೆ ನೀಡಿ ಪ್ರಾಮಾಣಿಕತೆ ಮೆರೆದ ಪೌರ ಕಾರ್ಮಿಕ ಮಹಿಳೆ ಪದ್ಮಾಗೆ ಸೂಪರ್ ಸ್ಟಾರ್ ರಜನಿಕಾಂತ್ ಚಿನ್ನದ ಸರ ಉಡುಗೊರೆ ಗೌರವಿಸಿದ್ದಾರೆ. ಇದಕ್ಕೂ ಮೊದಲು, ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಅವರು ಪದ್ಮಾ ಅವರನ್ನು ಸನ್ಮಾನಿಸಿದ್ದರು.ರಜನಿಕಾಂತ್ ಮಂಗಳವಾರ ಚೆನ್ನೈನ ಅವರ ನಿವಾಸದಲ್ಲಿ ನೈರ್ಮಲ್ಯ ಕಾರ್ಯಕರ್ತೆ ಪದ್ಮಾ ಅವರನ್ನು ಭೇಟಿಯಾಗಿ ಅವರ ಪ್ರಾಮಾಣಿಕತೆಯನ್ನು ಶ್ಲಾಘಿಸಿದರು. ಟಿ ನಗರದಲ್ಲಿ ಕೆಲಸ ಮಾಡುವ ಪದ್ಮಾ ಅವರು ತಮ್ಮ ಪಾಳಿಯಲ್ಲಿ ಚಿನ್ನದ ಆಭರಣಗಳನ್ನು ಹೊಂದಿದ್ದ ಒಂದು ಹಕ್ಕುದಾರರಿಲ್ಲದ ಚೀಲವನ್ನು ಕಂಡುಕೊಂಡಿದ್ದರು. ಅವರು ತಕ್ಷಣ ತಮ್ಮ ಮೇಲ್ವಿಚಾರಕರಿಗೆ ಮಾಹಿತಿ ನೀಡಿ ಚೀಲವನ್ನು ಪಾಂಡಿ ಬಜಾರ್ ಪೊಲೀಸ್ ಠಾಣೆಗೆ ಹಸ್ತಾಂತರಿಸಿದರು. ನಂತರ, ಆಭರಣಗಳನ್ನು ಅದರ ನಿಜವಾದ
ಕಾರವಾರ: ಖ್ಯಾತ ಜ್ಯೋತಿಷಿ ಕಮಲಾಕರ ಭಟ್ ಗುರೂಜಿ ಜತೆಗೆ ಅಕ್ರಮ ಸಂಬಂಧ ಹೊಂದಿದ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ಆಕೆಯ ಪತಿಯ ಸಹೋದರನ ಕೊಲೆಯಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರದಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿ ಶಿವಮೊಗ್ಗ ಮೂಲದ ಜ್ಯೋತಿಷಿ ಕಮಲಾಕರ ಭಟ್ ಗುರೂಜಿ ಸೇರಿದಂತೆ 7ಮಂದಿ ಆರೋಪಿಗಳನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಸಿದ್ದಾಪುರ ತಾಲೂಕಿನ ಅವರಗುಪ್ಪ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು ವಸಂತ್ ನಾಯ್ಕ (41) ಎಂದು ಗುರುತಿಸಲಾಗಿದೆ. ಮಹೇಶ್ ಹಾಗೂ ಕುಮಾರ್ ಎಂಬುವವರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಪುತ್ತೂರು: ಪುತ್ತೂರಿನ ಮಹಾಲಿಂಗೇಶ್ವರ ದೇವಸ್ಥಾನದ ಎದುರಿನ ನೆಲ್ಲಿಕಟ್ಟೆಯ ಖಾಸಗಿ ಬಸ್ ನಿಲ್ದಾಣದ ಬಳಿ 1 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ರಾಜ್ಯದ ಮೂರನೇ ಅತಿ ಎತ್ತರದ ರಾಷ್ಟ್ರೀಯ ಧ್ವಜಸ್ತಂಭದಲ್ಲಿ ಫೆಬ್ರವರಿ 1 ರ ಭಾನುವಾರ ಸಂಜೆ ತ್ರಿವರ್ಣ ಧ್ವಜವನ್ನು ಸ್ವಲ್ಪ ಸಮಯದವರೆಗೆ ಪ್ರಾಯೋಗಿಕವಾಗಿ ಹಾರಿಸಲಾಯಿತು.80 ಮೀಟರ್ ಎತ್ತರದ ಬೃಹತ್ ರಾಷ್ಟ್ರೀಯ ಧ್ವಜಸ್ತಂಭದ ಸ್ಥಾಪನೆಯು ಭಾನುವಾರ ಬೆಳಿಗ್ಗೆ ಪ್ರಾರಂಭವಾಯಿತು. ದೊಡ್ಡ ಕ್ರೇನ್ ಬಳಸಿ ಧ್ವಜಸ್ತಂಭವನ್ನು ಸ್ಥಾಪಿಸಲಾಯಿತು, ಮತ್ತು ಸಂಜೆಯ ಹೊತ್ತಿಗೆ, ರಾಷ್ಟ್ರೀಯ ತ್ರಿವರ್ಣ ಧ್ವಜವನ್ನು ಪ್ರಾಯೋಗಿಕವಾಗಿ ಸಂಕ್ಷಿಪ್ತವಾಗಿ ಹಾರಿಸಲಾಯಿತು ಮತ್ತು ನಂತರ ಕೆಳಗಿಳಿಸಲಾಯಿತು. ಶಾಸಕ ಅಶೋಕ್ ಕುಮಾರ್ ರೈ ಮತ್ತು ಇತರರು ಸ್ಥಾಪನೆಯ ಸಮಯದಲ್ಲಿ ಹಾಜರಿದ್ದರು. ನೂರಾರು ಜನರು ಸ್ಥಳದಲ್ಲಿ ಜಮಾಯಿಸಿ ತೀವ್ರ ಆಸಕ್ತಿಯಿಂದ ವೀಕ್ಷಿಸಿದರು.
ನವದೆಹಲಿ: ಕಾಗದಗಳನ್ನು ಹರಿದು ಕುರ್ಚಿಯ ಮೇಲೆ ಎಸೆದ ಆರೋಪ ಸೇರಿದಂತೆ 'ಅಶಿಸ್ತಿನ ವರ್ತನೆ'ಗಾಗಿ ಎಂಟು ಪ್ರತಿಪಕ್ಷ ಸದಸ್ಯರನ್ನು ಲೋಕಸಭೆಯಿಂದ ಮಂಗಳವಾರ ಅಮಾನತುಗೊಳಿಸಲಾಗಿದೆ.ಸದನವು ಹಲವು ಬಾರಿ ಮುಂದೂಡಿಕೆಯಾದ ನಂತರ ಮಧ್ಯಾಹ್ನ 3 ಗಂಟೆಗೆ ಸಭೆ ಸೇರಿದ ತಕ್ಷಣ, ಅಧ್ಯಕ್ಷರಾಗಿದ್ದ ದಿಲೀಪ್ ಸೈಕಾ ಅವರು ಎಂಟು ಕಾಂಗ್ರೆಸ್ ಸದಸ್ಯರನ್ನು ಹೆಸರಿಸಿದರು.ತರುವಾಯ, ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು ಏಪ್ರಿಲ್ 2 ರಂದು
ಬೆಂಗಳೂರು: ಈಚೆಗೆ ನಟ ದುನಿಯಾ ವಿಜಯ್, ರಚಿತಾ ರಾಮ್ ಅವರು ಅಭಿನಯಿಸಿದ ಲ್ಯಾಂಡ್ಲಾರ್ಡ್ ಸಿನಿಮಾಗೆ ರಾಜ್ಯ ಸರ್ಕಾರದಿಂದ ತೆರಿಗೆ ವಿನಾಯಿತಿ ಪಡೆದಿದೆ.ಚಿತ್ರತಂಡದ ಮನವಿಯನ್ನು ಪುರಸ್ಕರಿಸಿ, ಅಧಿಕಾರಿಗಳಿಗೆ ಈ ಸಂಬಂಧ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಸಾಮಾಜಿಕ ನ್ಯಾಯ ಮತ್ತು ಶೋಷಣೆಯ ವಿರುದ್ಧದ ಹೋರಾಟದ ಕಥೆಯನ್ನು ಹೊಂದಿರುವ ಲ್ಯಾಂಡ್ಲಾರ್ಡ್ ಸಿನಿಮಾ ರಾಜ್ಯ ಸರ್ಕಾರದಿಂದ ತೆರಿಗೆ ವಿನಾಯಿತಿ ಪಡೆದಿದೆ.
ಆಂಧ್ರದ ವ್ಯಕ್ತಿಯೊಬ್ಬರು ಬರೋಬ್ಬರಿ ₹2.08 ಕೋಟಿ ರೂಪಾಯಿಗೆ ನಂಬರ್ ಪ್ಲೇಟ್ ಅನ್ನು ಖರೀದಿಸಿರುವ ಘಟನೆ ವರದಿಯಾಗಿದೆ. ಈ ಕಾರಿನ ನಂಬರ್ "DDC 001" ಅನ್ನು 2.08 ಕೋಟಿಗೆ ಮಾರಾಟ ಮಾಡುವ ಮೂಲಕ ಹೊಸ ಮೈಲಿಗಲ್ಲನ್ನು ಮುಟ್ಟಿದೆ, ಇದು ದೇಶದಲ್ಲಿ ಇದುವರೆಗೆ ಮಾರಾಟವಾದ ಅತ್ಯಂತ ದುಬಾರಿ ನಂಬರ್ ಪ್ಲೇಟ್ ಆಗಿದೆ. ಬಿಗ್ ಬಾಯ್ ಟಾಯ್ಜ್ನಿಂದ ಹರಾಜು ಹೌಸ್ನ ಪ್ರಾರಂಭದ ಸಮಯದಲ್ಲಿ ದಾಖಲೆ-ಮುರಿಯುವ ವಹಿವಾಟು ನಡೆಯಿತು, ಆದರೂ ಸ್ಪಾಟ್ಲೈಟ್ ತ್ವರಿತವಾಗಿ ವೇದಿಕೆಯಿಂದ ವಿಂಟೇಜ್ ಸಂಖ್ಯೆಯಿಂದ