ಉದಯಪುರ: ದೇಶದ ಶ್ರೀಮಂತ ನಾಗರಿಕ ಪರಂಪರೆಯನ್ನು ಶ್ಲಾಘಿಸಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು, ಆಧುನಿಕ ಭಾರತವು ತನ್ನ ಪ್ರಾಚೀನ ಮತ್ತು ಸಾಂಸ್ಕೃತಿಕ ಸಂಪ್ರದಾಯಗಳನ್ನು ಗುರುತಿಸುವುದರಿಂದ ಶಕ್ತಿ ಮತ್ತು ಹೆಮ್ಮೆಯನ್ನು ಪಡೆಯುತ್ತದೆ ಎಂದು ಶುಕ್ರವಾರ ಹೇಳಿದ್ದಾರೆ. 1923 ರಲ್ಲಿ, ಬಿಜೆಪಿಯ ಹಿರಿಯ ನಾಯಕರು ವಿಜ್ಞಾನ, ವೈದ್ಯಕೀಯ, ಗಣಿತ, ವ್ಯಾಕರಣ, ತತ್ವಶಾಸ್ತ್ರ ಮತ್ತು ನೀತಿಶಾಸ್ತ್ರದಂತಹ ಜ್ಞಾನ ವ್ಯವಸ್ಥೆಗಳಿಗೆ ಭಾರತದ ನಿರಂತರ ಕೊಡುಗೆಗಳನ್ನು ಎತ್ತಿ ತೋರಿಸಿದರು. ಇಂದಿನ ಭಾರತವು ತನ್ನ ಗತಕಾಲದ ಬಗ್ಗೆ ಹೆಮ್ಮೆ ಪಡುತ್ತದೆ. ಇಂದಿನ ಭಾರತವು ತನ್ನ ಸಂಪ್ರದಾಯಗಳನ್ನು ಗೌರವಿಸುತ್ತದೆ ಮತ್ತು ಅದರ ಶ್ರೀಮಂತ ಸಂಸ್ಕೃತಿಯ ಪರಂಪರೆಯನ್ನು ಗೌರವಿಸುತ್ತದೆ.
ಬಳ್ಳಾರಿ: ಬ್ಯಾನರ್ ವಿಚಾರವಾಗಿ ಕಾಂಗ್ರೆಸ್ ಶಾಸಕ ನಾರಾ ಭರತ್ ರೆಡ್ಡಿ ಹಾಗೂ ಬಿಜೆಪಿ ಶಾಸಕ ಜನಾರ್ದನ ರೆಡ್ಡಿ ನಡುವಿನ ಗಲಭೆ ಸಂಬಂಧ ರಾಜ್ಯ ಮಟ್ಟದಲ್ಲಿ ಸುದ್ದಿಯಾಗುತ್ತಿರುವ ಬೆನ್ನಲ್ಲೇ ಇದೀಗ ಜನಾರ್ದನ ಮನೆಯಲ್ಲಿ ಮತ್ತೊಂದು ಬುಲೆಟ್ ಪತ್ತೆಯಾಗಿದೆ.ಕಾಂಗ್ರೆಸ್ ಕಾರ್ಯಕರ್ತ ಗುಂಡೇಟಿಗೆ ಬಲಿಯಾದ ಘಟನೆಗೆ ಸಂಬಂಧಿಸಿದಂತೆ ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಅವರ ಆಪ್ತ ಸಹಾಯಕ ಚಾನೆಲ್ ಶೇಖರ್ ನೀಡಿದ ದೂರಿನ ಆಧಾರದ ಮೇಲೆ ಇಂದು ಎಫ್ಐಆರ್ ದಾಖಲಿಸಲಾಗಿದೆ.ಎಫ್ಐಆರ್ನಲ್ಲಿ ಜನಾರ್ದನ ರೆಡ್ಡಿ ಅವರನ್ನು ಮೊದಲ ಆರೋಪಿಯನ್ನಾಗಿ ಹೆಸರಿಸಲಾಗಿದೆ.
ಬಳ್ಳಾರಿ: ಇಲ್ಲಿ ನಡೆದ ಬ್ಯಾನರ್ ಗಲಾಟೆ ವಿಚಾರವಾಗಿ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ರೆಡ್ಡಿ ಎಂಬುವವರು ಗುಂಡೇಟಿಗೆ ಬಲಿಯಾಗಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳ ಸೂಚನೆಯಂತೆ ವಾಲ್ಮೀಕಿ ಪುತ್ಥಳಿ ಅನಾವರಣ ತಾತ್ಕಾಲಿಕ ಮುಂದೂಡಲಾಗಿದೆ ಎಂದು ಗ್ರಾಮೀಣ ಶಾಸಕ ಬಿ.ನಾಗೇಂದ್ರ ಹೇಳಿದ್ದಾರೆ.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಂದಿನ ದಿನಗಳಲ್ಲಿ ಇದಕ್ಕಿಂತ ವಿಜೃಂಭಣೆಯಿಂದ ಪುತ್ಥಳಿ ಅನಾವರಣ ಮಾಡಲಾಗುವುದು. ಆ ಸಮಾರಂಭಕ್ಕೆ ಎಲ್ಲರೂ ಆಗಮಿಸಲಿದ್ದಾರೆ ಎಂದರು.ಕಾಂಗ್ರೆಸ್ ಪಕ್ಷ ವಾಲ್ಮೀಕಿ ಪರವಾಗಿದೆ. 15 ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ರಲ್ಲಿ ವಿಜಯಿಯಾಗಿದೆ. ಭರತ್ ರೆಡ್ಡಿ ಮಾಡಿರುವ
ಅಹಮದಾಬಾದ್: ಲಂಚಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣಅಹಮದಾಬಾದ್: ಲಂಚಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುರೇಂದ್ರನಗರದ ಮಾಜಿ ಜಿಲ್ಲಾಧಿಕಾರಿ ರಾಜೇಂದ್ರಕುಮಾರ್ ಪಟೇಲ್ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿದೆ.2015 ರ ಬ್ಯಾಚ್ನ ಭಾರತೀಯ ಆಡಳಿತ ಸೇವೆ (ಐಎಎಸ್) ಅಧಿಕಾರಿ ಪಟೇಲ್, ಈ ಪ್ರಕರಣದಲ್ಲಿ ಇಡಿಯಿಂದ ಬಂಧಿಸಲ್ಪಟ್ಟ ಎರಡನೇ ನಾಗರಿಕ ಸೇವಕ.ಇಡಿ ಮತ್ತು ರಾಜ್ಯದ ಎಸಿಬಿ ಪಟೇಲ್, ಅವರ ಆಪ್ತ ಸಹಾಯಕ ಜಯರಾಜ್ಸಿಂಹ ಝಾಲಾ, ಕ್ಲರ್ಕ್ ಮಯೂರ್ಸಿನ್ಹ್ ಗೋಹಿಲ್
ಶಿವಮೊಗ್ಗ: ಬಳ್ಳಾರಿಯಲ್ಲಿ ನಡೆದ ಗಲಭೆ ಸಂಬಂಧ ಯಾರು ಕಾನೂನನ್ನು ಕೈಗೆತ್ತಿಕೊಂಡಿದ್ದಾರೋ ಅವರಬಳ್ಳಾರಿಯಲ್ಲಿ ನಡೆದ ಗಲಾಟೆ ವಿಚಾರದಲ್ಲಿ ಯಾರು ಕಾನೂನು ಕೈಗೆ ತೆಗೆದುಕೊಂಡಿದ್ದಾರೋ ಅವರು ವಿರುದ್ಧ ಕ್ರಮವಾಗಲಿದೆ ಎಂದು ಸಚಿವ ಮಧುಬಂಗಾರಪ್ಪ ಹೇಳಿದರು.ಅವರು ಶಿವಮೊಗ್ಗದಲ್ಲಿ ಬಳ್ಳಾರಿಯಲ್ಲಿ ನಡೆದ ಗಲಾಟೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಈ ಪ್ರಕರಣ ಸಂಬಂಧ ನನಗೆ ಹೆಚ್ಚೆನೂ ಸರಿಯಾದ ಮಾಹಿತಿಯಿಲ್ಲ. ಮಾಧ್ಯಮದ ಮೂಲಕ ಮಾಹಿತಿ ಪಡೆದೆ. ಯಾರೇ ಆದರೂ ಈ ಹಂತಕ್ಕೆ ಹೋಗಬಾರದು. ನಾನು ಯಾರನ್ನು ದೂರಲು ಹೋಗುವುದಿಲ್ಲ. ಈ ವಿಚಾರದಲ್ಲಿ ಯಾರು ಕಾನೂನು ಕೈ ತೆಗೆದುಕೊಂಡಿದ್ದಾರೋ ಅವರಿಗೆ ಶಿಕ್ಷೆಯಾಗಬೇಕೆಂದರು.
ಮುಂಬೈ: ಭಾರತದ ಮೊದಲ ಬುಲೆಟ್ ರೈಲು ಕಾರಿಡಾರ್ ಶುಕ್ರವಾರ, (ಜನವರಿ 2, 2026) ಮಹಾರಾಷ್ಟ್ರದ ಪಾಲ್ಘರ್ನಲ್ಲಿ ಹೈಸ್ಪೀಡ್ ಸುರಂಗದ ಪ್ರಗತಿಯೊಂದಿಗೆ ಪ್ರಮುಖ ಮೈಲಿಗಲ್ಲನ್ನು ಸಾಧಿಸಿದೆ. ಮುಂಬೈ-ಅಹಮದಾಬಾದ್ ಬುಲೆಟ್ ರೈಲು ಕಾರಿಡಾರ್ನಲ್ಲಿ ಇದು ಮೊದಲ ಪರ್ವತ ಸುರಂಗ (MT-5) ಪ್ರಗತಿಯಾಗಿದೆ. ಈ 1.5-ಕಿಮೀ ಉದ್ದದ ಪರ್ವತ ಸುರಂಗವು ವಿರಾರ್ ಮತ್ತು ಬೋಯಿಸರ್ ಬುಲೆಟ್ ರೈಲು ನಿಲ್ದಾಣಗಳ ನಡುವೆ ಇರುವ ಪಾಲ್ಘರ್ ಜಿಲ್ಲೆಯ ಅತಿ ಉದ್ದದ ಸುರಂಗವಾಗಿದೆ.ಕಳೆದ ವರ್ಷ, ರೈಲ್ವೆ ಸಚಿವಾಲಯವು ಥಾಣೆ ಮತ್ತು ಬಿಕೆಸಿ ನಡುವೆ 5-ಕಿಮೀ ಉದ್ದದ ಭೂಗತ ಸುರಂಗವನ್ನು ಪೂರ್ಣಗೊಳಿಸಿತು.
ಬಳ್ಳಾರಿ: ಇಲ್ಲಿನ ಅವ್ವಂಬಾವಿಯಲ್ಲಿರುವ ಶಾಸಕ ಜನಾರ್ದನ ರೆಡ್ಡಿ ಅವರ ನಿವಾಸದ ಬಳಿ ನಡೆದ ಘರ್ಷಣೆ ಹಾಗೂ ಕೈ ಕಾರ್ಯಕರ್ತನ ಸಾವಿನ ಸಂಬಂಧ ಈಗಾಗಲೇ ಒಟ್ಟು ನಾಲ್ಕು ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರು ಹಿತೇಂದ್ರ ಆರ್ ಹೇಳಿದ್ದಾರೆ.ಸುದ್ದಿಗಾರರೊಂದಿಗೆ ಶುಕ್ರವಾರ ಮಾತನಾಡಿದ ಅವರು, ಸಂಬಂಧ ಪ್ರತ್ಯೇಕ ದೂರು ಆಧರಿಸಿ ಮೂರು ಪ್ರಕರಣ, ಒಂದು ಸ್ವಯಂ ಪ್ರೇರಿತ ಪ್ರಕರಣ ದಾಖಲಾಗಿದೆ. ಯುವಕನ ಸಾವು, ಮಹರ್ಷಿ ವಾಲ್ಮೀಕಿಗೆ ಅಪಮಾನ, ಹಲ್ಲೆಗೆ ಸಂಬಂಧಿಸಿದಂತೆ ದೂರು ದಾಖಲಾಗಿದೆ ಎಂದು ಮಾಹಿತಿ ನೀಡಿದರು.
ಬಾಲಿವುಡ್ ನಟಿ ವಿದ್ಯಾ ಬಾಲನ್ ತಮ್ಮ ನಟನೆ, ದಿಟ್ಟ ಚಿತ್ರ ಆಯ್ಕೆಗಳು ಮತ್ತು ತಮ್ಮ ಕಲೆಗೆ ಬದ್ಧತೆಯಿಂದ ಬಾಲಿವುಡ್ನಲ್ಲಿ ಬಹುಬೇಡಿಕೆಯ ನಟಿಯರಲ್ಲಿ ಒಬ್ಬರಾಗಿದ್ದಾರೆ. ನಟಿ ಇಂದು 47ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ವಿದ್ಯಾ ಬಾಲನ್ ನಿರಂತರವಾಗಿ ರೂಢಿಗಳನ್ನು ಸವಾಲು ಮಾಡಿದ್ದಾರೆ ಮತ್ತು ಪ್ರೇಕ್ಷಕರ ಮೇಲೆ ಶಾಶ್ವತವಾದ ಪ್ರಭಾವ ಬೀರುವ ಪ್ರದರ್ಶನಗಳನ್ನು ನೀಡಿದ್ದಾರೆ.ವಿದ್ಯಾ ಅವರ ಬಾಲಿವುಡ್ ಚೊಚ್ಚಲ ಸಂಗೀತ ಚಿತ್ರದಲ್ಲಿ ಅವರ ಅಪಾರ ಪ್ರತಿಭೆ ಮತ್ತು ಪರದೆಯ ಉಪಸ್ಥಿತಿಯನ್ನು ಪ್ರದರ್ಶಿಸಿದರು. ಪ್ರೀತಿ ಮತ್ತು ಸಾಮಾಜಿಕ ಒತ್ತಡದ ಸುಳಿಯಲ್ಲಿ ಸಿಲುಕಿದ ಮಹಿಳೆ ಲೋಲಿತಾ ಪಾತ್ರದಲ್ಲಿ ವಿದ್ಯಾ ಅವರು ವಿಮರ್ಶಕರು ಮತ್ತು ಪ್ರೇಕ್ಷಕರ ಮೆಚ್ಚುಗೆಯನ್ನು ಗಳಿಸಿದರು. ಸೈಫ್ ಅಲಿ ಖಾನ್ ಅವರೊಂದಿಗಿನ ಅವರ ರಸಾಯನಶಾಸ್ತ್ರವು
ಬೆಂಗಳೂರು: ಬೆಂಗಳೂರು ನಗರ ಜಿಲ್ಲೆಯ ಕಗ್ಗಲೀಪುರ ವ್ಯಾಪ್ತಿಯ ಬಸವನತಾರಾ ಅರಣ್ಯ ಪ್ರದೇಶದಲ್ಲಿ ಗರ್ಭಿಣಿ ಚಿರತೆ ಸಾವನ್ನಪ್ಪಿರುವ ಬಗ್ಗೆ ಸಮಗ್ರ ತನಿಖೆಗೆ ಕರ್ನಾಟಕ ಅರಣ್ಯ, ಪರಿಸರ ಮತ್ತು ಪರಿಸರ ಸಚಿವ ಈಶ್ವರ್ ಬಿ ಖಂಡ್ರೆ ಆದೇಶಿಸಿದ್ದಾರೆ. ಡಿಸೆಂಬರ್ 26 ರಂದು ಅರಣ್ಯ ಪ್ರದೇಶದಲ್ಲಿ ನಾಲ್ಕು ವರ್ಷ ಪ್ರಾಯದ ಇದು ಪತ್ತೆಯಾಗಿತ್ತು. ಮರಣೋತ್ತರ ಪರೀಕ್ಷೆಯಲ್ಲಿ ಚಿರತೆ ಹೊಟ್ಟೆಯಲ್ಲಿ ಮೂರು ಮರಿಗಳಿರುವುದು ಬೆಳಕಿಗೆ ಬಂದಿದೆ. ಯಶವಂತಪುರ ಶಾಸಕ ಎಸ್.ಟಿ ಅವರು ಗಂಭೀರ ಆರೋಪದ ಹಿನ್ನೆಲೆಯಲ್ಲಿ ತನಿಖೆಗೆ ಆದೇಶಿಸಲಾಗಿದೆ. ಸೋಮಶೇಖರ್, ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಕಲ್ಲು ಗಣಿಗಾರಿಕೆ ಮತ್ತು ಗಣಿಗಾರಿಕೆ ನಡೆಸಲಾಗುತ್ತಿದೆ ಎಂದು ಆರೋಪಿಸಿದರು. ಈ
ಬಳ್ಳಾರಿ: ಇಲ್ಲಿ ನಡೆದ ಗಲಭೆ ವಿಚಾರವಾಗಿ ಯಾರನ್ನೂ ಸುಮ್ಮನೇ ಬಿಡಲ್ಲ. ಪರಿಸ್ಥಿತಿ ಕಂಟ್ರೋಲ್ಗೆ ಬಂದಿದ್ದು, ಈ ಸಂಬಂಧ ಸಿಎಂ ಸಿದ್ದರಾಮಯ್ಯ ಅವರಿಗೆ ಎಲ್ಲ ಮಾಹಿತಿಯನ್ನು ನೀಡಿದ್ದೇನೆ. ಪ್ರಕರಣದಲ್ಲಿ ಭಾಗಿಯಾಗಿರುವ ಯಾರೊಬ್ಬರನ್ನೂ ಬಿಡೋದಿಲ್ಲ ಎಂದು ಸಚಿವ ಜಮೀರ್ ಅಹ್ಮದ್ ಹೇಳಿದರು. ಬಳ್ಳಾರಿ ಶೂಟೌಟ್ ಪ್ರಕರಣ ಸಂಬಂಧ, ಬ್ಯಾನರ್ ಕಟ್ಟುವ ವಿಚಾರದಲ್ಲಿ ಘರ್ಷಣೆ ಆಗಿದೆ, ಇದು ಆಗಬಾರದಿತ್ತು. ನಾನು ಈಗಾಗಲೇ ಬಳ್ಳಾರಿ ಡಿಸಿ, ಎಸ್ಪಿ ಜತೆ ಮಾತುಕತೆ ನಡೆಸಿದ್ದೇನೆ ಎಂದರು. ಬಳ್ಳಾರಿ ಫೈರಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಮ್ಮ ಕಾರ್ಯಕರ್ತ ಈ
ಸಂಜೆಯ ವೇಳೆ ದೀಪ ಹಚ್ಚುವಾಗ ಸ್ತೋತ್ರಗಳನ್ನು ಪಠಿಸುವುದು ಹಾಗೂ ಕೇಳುವುದರಿಂದ ಮನಸ್ಸಿಗೆ ಶಾಂತಿ ಹಾಗೂ ಮನೆಯಲ್ಲಿ ಸಕಾರಾತ್ಮ ಶಕ್ತಿ ನೀಡುತ್ತದೆ. ಇನ್ನೂ ಯಾವಾ ಸ್ತೋತ್ರವನ್ನು ಪಠಿಸುವುದು ಉತ್ತಮ ಎಂದು ಈ ಸುದ್ದಿಯಲ್ಲಿದೆ.ಸಂಜೆ ದೀಪ ಹಚ್ಚಿದ ತಕ್ಷಣ ಮೊದಲು ಈ ಶ್ಲೋಕವನ್ನು ಹೇಳುವುದು ಸಂಪ್ರದಾಯ:ಶುಭಂ ಕರೋತಿ ಕಲ್ಯಾಣಂ ಆರೋಗ್ಯಂ ಧನಸಂಪದಃ | ಶತ್ರುಬುದ್ಧಿ ವಿನಾಶಾಯ ದೀಪಜ್ಯೋತಿ ನಮೋಽಸ್ತುತೇ ||ಅರ್ಥ: ಮಂಗಳವನ್ನುಂಟು ಮಾಡುವ, ಆರೋಗ್ಯ ಮತ್ತು ಸಂಪತ್ತನ್ನು ನೀಡುವ, ಶತ್ರು ಬುದ್ಧಿಯನ್ನು ನಾಶಪಡಿಸುವ ದೀಪದ ಜ್ಯೋತಿಗೆ ನಮಸ್ಕಾರಗಳು.
ನವದೆಹಲಿ: ಇಂದೋರ್ನಲ್ಲಿ ನಡೆದ ನೀರು ಕಲುಷಿತ ಘಟನೆಗೆ ಸಂಬಂಧಿಸಿದಂತೆ ಶುಕ್ರವಾರ ಬಿಜೆಪಿ ನೇತೃತ್ವದ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ. ಆಡಳಿತ ಸರ್ಕಾರವು "ಕುಂಭಕರ್ಣನಂತೆ ಮಲಗಿರುವಾಗ ವಿಷ ಹಂಚಲಾಗುತ್ತಿದೆ" ಎಂದು ಟೀಕಿಸಿದರು. ಕುಂಭಕರ್ಣನ ಹಾಗೆ ಮಲಗಿರುವ ಆಡಳಿತದಲ್ಲಿ ಬಡವರು ಅಸಹಾಯಕರಾಗಿದ್ದಾರೆ. ಬಿಜೆಪಿ ನಾಯಕರ ಅಹಂಕಾರದ ಹೇಳಿಕೆಗಳು ಸರ್ಕಾರಕ್ಕೆ ಸಾಂತ್ವನ ನೀಡುತ್ತಿವೆ ಎಂದು ರಾಹುಲ್ ಗಾಂಧಿ ಪದೇ ಪದೇ ದೂರಿದರು.ಕುಡಿಯುವ ನೀರಿಗೆ ಚರಂಡಿ ನೀರು ಸೇರಿದ್ದು ಹೇಗೆ ಎಂದು ಪ್ರಶ್ನೆ ಮಾಡಿದರು. ಇಂಧೋರ್ನಲ್ಲಿ ನಡೆದ ಜಲ ಮಾಲಿನ್ಯದ
ಬೆಂಗಳೂರು: ಕಾಲೇಜು ವಿದ್ಯಾರ್ಥಿನಿಯರು ಹಾಗೂ ವಿವಿ ವಿದ್ಯಾರ್ಥಿನಿಯರಿಗೆ ಋತುಚಕ್ರ ರಜೆ ನೀಡುವ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ಸೂಚನೆ ನೀಡಿದ ಬೆನ್ನಲ್ಲೇ ರಜೆ ಘೋಷಣೆ ಮಾಡಲಾಗುವುದೆಂದು ಉನ್ನತ ಶಿಕ್ಷಣ ಸಚಿವ ಸುಧಾಕರ್ ಹೇಳಿದರು. ಬೆಂಗಳೂರಿನಲ್ಲಿ ಈ ವಿಚಾರವಾಗಿ ಪ್ರತಿಕ್ರಿಯಿಸಿದ ಸುಧಾಕರ್ ಅವರು, ಕಾಲೇಜುಗಳಲ್ಲಿ ಹೆಣ್ಣುಮಕ್ಕಳಿಗೆ ಋತುಚಕ್ರ ರಜೆ ನೀಡಲು ಸಿಎಂ ಸೂಚನೆ ನೀಡಿದ್ರೆ ರಜೆ ನೀಡುತ್ತೇವೆ. ರಾಜ್ಯದಲ್ಲಿ ಕೆಲಸ ನಿರ್ವಹಿಸೋ ಹೆಣ್ಣುಮಕ್ಕಳಿಗೆ ಋತುಚಕ್ರ ರಜೆ ನೀಡುವ ವಿಚಾರಕ್ಕೆ ಸಿಎಂ ಅವರು ಈ ಬಗ್ಗೆ ಹೇಳಿದ್ರೆ ಅದೇ
ಬೆಂಗಳೂರು: ಬಳ್ಳಾರಿಯಲ್ಲಿ ಗುಂಡು ಹಾರಿಸಿ ಒಬ್ಬರು ಮೃತಪಟ್ಟ ಘಟನೆ ಸಂಬಂಧ ಕೊಲೆ ಪ್ರಕರಣ ದಾಖಲಿಸಿ ಆ ಶಾಸಕರನ್ನು ಕೂಡಲೇ ಬಂಧಿಸಿ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಆಗ್ರಹಿಸಿದ್ದಾರೆ.ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್, ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಇಂದು ಮಧ್ಯಾಹ್ನ ನೃಪತುಂಗ ರಸ್ತೆಯಲ್ಲಿರುವ ಪೊಲೀಸ್ ಮಹಾನಿರ್ದೇಶಕರ ಕಚೇರಿಗೆ ಭೇಟಿ ನೀಡಿದ್ದರು. ಬಳಿಕ ಆರ್. ಅಶೋಕ್ ಅವರು ಮಾಧ್ಯಮಗಳ ಜೊತೆ ಮಾತನಾಡಿದರು. ಗೊತ್ತಿಲ್ಲದೇ ಗುಂಡು ಹಾರಿದೆ; ಗೊತ್ತಿಲ್ಲದೇ ಸತ್ತಿದ್ದಾರೆ ಎಂದು ನಾಳೆ ಹೇಳಬಹುದು ಎಂದು ತಿಳಿಸಿದರು.
ಬೆಂಗಳೂರು: ಬಳ್ಳಾರಿಯ ಬಿಜೆಪಿ ಶಾಸಕ ಜಿ ಜನಾರ್ದನ ರೆಡ್ಡಿ ಅವರ ನಿವಾಸದ ಹೊರಗೆ ನಡೆದ ಘರ್ಷಣೆಯಲ್ಲಿ ಒಬ್ಬ ವ್ಯಕ್ತಿ ಸಾವನ್ನಪ್ಪಿದ ಬಗ್ಗೆ ತನಿಖೆ ನಡೆಸುವಂತೆ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ''ಪ್ರಕರಣದ ಬಗ್ಗೆ ತನಿಖೆ ನಡೆಸುವಂತೆ ನಾನು ಕೇಳಿದ್ದೇನೆ ಮತ್ತು ಯಾವ ಗನ್ನ ಗುಂಡು ಹಾರಿತು ಮತ್ತು ಅದು ಹೇಗೆ ಪ್ರಾರಂಭವಾಯಿತು, ಬಂದೂಕುಧಾರಿಗಳಿದ್ದರು ಎಂಬ ತನಿಖೆಗೆ ಸೂಚಿಸಿದ್ದೇನೆ ಎಂದರು. ಬಳ್ಳಾರಿಯ ಕಾಂಗ್ರೆಸ್ ಶಾಸಕ ನಾರಾ ಭರತ್ ರೆಡ್ಡಿ ಅವರ ಗುಂಪಿನ ಬೆಂಬಲಿಗರು ಹಾಗೂ ಭಾರತೀಯ ಜನತಾ ಪಕ್ಷದ ಶಾಸಕ
ಪ್ರತಿ ನಿತ್ಯ ಮೊಟ್ಟೆಯನ್ನು ನಮ್ಮ ಆಹಾರದಲ್ಲಿ ಸೇವಿಸಿದರೆ ಸಾಕಷ್ಟು ಪ್ರಯೋಜಗಳು ಪಡೆದು, ಆರೋಗ್ಯದಲ್ಲಿ ಉತ್ತಮ ಬದಲಾವಣೆಯನ್ನು ಕಾಣಬಹುದು. ಮೊಟ್ಟೆಯು ಪ್ರಕೃತಿಯ ಒಂದು 'ಸೂಪರ್ಫುಡ್' ಇದ್ದಂತೆ. ಇದರಲ್ಲಿ ದೇಹಕ್ಕೆ ಅಗತ್ಯವಿರುವ ಬಹುತೇಕ ಎಲ್ಲಾ ಪೋಷಕಾಂಶಗಳು ಅಡಗಿವೆ.* ಮೊಟ್ಟೆಯಲ್ಲಿ ಅತ್ಯುತ್ತಮ ದರ್ಜೆಯ ಪ್ರೊಟೀನ್ ಇರುತ್ತದೆ. ಇದು ಸ್ನಾಯುಗಳ ಬೆಳವಣಿಗೆಗೆ ಮತ್ತು ದೇಹದ ಅಂಗಾಂಶಗಳ ದುರಸ್ತಿಗೆ ತುಂಬಾ ಸಹಕಾರಿ. ಒಂದು ಮೊಟ್ಟೆಯಲ್ಲಿ ಸುಮಾರು 6 ಗ್ರಾಂ ಪ್ರೊಟೀನ್ ಇರುತ್ತದೆ.2. ಮೆದುಳಿನ ಆರೋಗ್ಯಕ್ಕೆ
ಬೆಂಗಳೂರು: ಅಕ್ರಮ ಮನೆಗಳ ತೆರವುಗೊಳಿಸಿದ್ದ ಕೋಗಿಲು ಲೇಔಟ್ ನಿವಾಸಿಗಳಿಗೆ ಸುಮ್ಮನೇ ಮನೆ ಕೊಡಕ್ಕಾಗಲ್ಲ ಎಂದು ಸಚಿವ ಸತೀಶ್ ಜಾರಕಿಹೊಳಿ ಮಹತ್ವದ ಹೇಳಿಕೆ ನೀಡಿದ್ದಾರೆ. ಅಕ್ರಮವಾಗಿ ಮನೆ ನಿರ್ಮಿಸಿಕೊಂಡಿದ್ದಾರೆ ಎಂಬ ಕಾರಣಕ್ಕೆ ಕೋಗಿಲು ಲೇಔಟ್ ನಲ್ಲಿದ್ದ ವಸತಿಗಳನ್ನು ತೆರವುಗೊಳಿಸಲಾಗಿತ್ತು. ಇದಕ್ಕೆ ಕೇರಳ ಸಿಎಂ ಸೋಷಿಯಲ್ ಮೀಡಿಯಾ ಮೂಲಕ ಅಸಮಾಧಾನ ವ್ಯಕ್ತಪಡಿಸಿದ್ದರು. ಇದರ ಬೆನ್ನಲ್ಲೇ ಕಾಂಗ್ರೆಸ್ ಹೈಕಮಾಂಡ್ ಕೂಡಾ ಮಧ್ಯಪ್ರವೇಶಿಸಿತ್ತು. ಇದರ ಬೆನ್ನಲ್ಲೇ ಇಲ್ಲಿನ ಮುಸ್ಲಿಂ ನಿವಾಸಿಗಳಿಗೆ ಮನೆ ನೀಡಲು ಸರ್ಕಾರ ನಿರ್ಧರಿಸಿತ್ತು.
ಬೆಂಗಳೂರು: ಬಳ್ಳಾರಿಯಲ್ಲಿ ಜನಾರ್ಧನ ರೆಡ್ಡಿ ಮನೆ ಮುಂದೆ ನಡೆದ ಗಲಾಟೆಯಲ್ಲಿ ಓರ್ವ ಕಾಂಗ್ರೆಸ್ ಕಾರ್ಯಕರ್ತ ಸಾವಿಗೀಡಾದ ಘಟನೆ ಬಗ್ಗೆ ಸಿಎಂ ಸಿದ್ದರಾಮಯ್ಯ ಶಾಸಕ ಭರತ್ ರೆಡ್ಡಿ ಮೇಲೆ ಗರಂ ಆಗಿದ್ದಾರೆ. ಶಾಸಕ ಭರತ್ ರೆಡ್ಡಿ ಬೆಂಬಲಿಗರು ಜನಾರ್ಧನ ರೆಡ್ಡಿ ಮನೆ ಮುಂದೆ ಬ್ಯಾನರ್ ಕಟ್ಟಲು ಹೋದಾಗ ಗಲಾಟೆ ಆರಂಭವಾಗಿತ್ತು. ಈ ಗಲಾಟೆಯಲ್ಲಿ ಭರತ್ ರೆಡ್ಡಿ ಆಪ್ತ ಸತೀಶ್ ರೆಡ್ಡಿ ಗನ್ ಮ್ಯಾನ್ ಗಳು ಫೈರಿಂಗ್ ಮಾಡಿದ್ದರು ಎಂಬುದು ಬಿಜೆಪಿ ಆರೋಪವಾಗಿದೆ. ಘಟನೆಯಲ್ಲಿ ಓರ್ವ ಕಾಂಗ್ರೆಸ್ ಕಾರ್ಯಕರ್ತ ಸಾವನ್ನಪ್ಪಿದ್ದಾನೆ. ಆದರೆ ಈ ವಿಚಾರವಾಗಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದ ಶಾಸಕ ನಾರಾ ಭರತ್ ರೆಡ್ಡಿ, ಇದಕ್ಕೆಲ್ಲಾ ಜನಾರ್ಧನ ರೆಡ್ಡಿ ಕಾರಣ ಎಂದು ದೂರಿದ್ದಾರೆ.
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ಅವರಿಗೆ ಅಶ್ಲೀಲ ಕಾಮೆಂಟ್ ಮಾಡಿದ ಇಬ್ಬರು ಆರೋಪಿಗಳನ್ನು ಪೊಲೀಸರು ಕೊನೆಗೂ ಬಂಧಿಸಿದ್ದಾರೆ. ವಿಜಯಲಕ್ಷ್ಮಿ ಅವರಿಗೆ ನಿಂದಿಸಿದ್ದ ಪ್ರಕರಣ ಸಂಬಂಧ ಬೆಂಗಳೂರು ಮೂಲದ ಇಬ್ಬರು ಆರೋಪಿಗಳನ್ನು ಸೈಬರ್ ಪೊಲೀಸರು ಬಂಧಿಸಿದ್ದಾರೆ. ತಾನು ನೀಡಿದ ದೂರಿನ ಬಗ್ಗೆ ಯಾವುದೇ ಕ್ರಮವನ್ನು ಪೊಲೀಸರು ಕ್ರಮಕೈಗೊಂಡಿಲ್ಲ ಎಂದು ವಿಜಯಲಕ್ಷ್ಮ ಅಸಮಾಧಾನ ವ್ಯಕ್ತಪಡಿಸಿದ ಬೆನ್ನಲ್ಲೇ ಇಬ್ಬರನ್ನು ಬಂಧಿಸಲಾಗಿದೆ.ವಿಜಯಲಕ್ಷ್ಮಿ ಅವರು 2025ರ ಡಿಸೆಂಬರ್ನಲ್ಲಿ ದಾವಣಗೆರೆಯಲ್ಲಿ ಹೇಳಿಕೆಯೊಂದನ್ನು ನೀಡಿದ್ದರು. ಈ ಹೇಳಿಕೆ ನೀಡಿದ ಬಳಿಕ ವಿಜಯಲಕ್ಷ್ಮಿ ಅವರ ಕುರಿತು ಕೆಲವು ಅಶ್ಲೀಲ ಕಾಮೆಂಟ್ಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದವು.
ಬೆಂಗಳೂರು: ಕರ್ನಾಟಕದಲ್ಲಿ ಬಹುಪಾಲು ಜನ ಇವಿಎಂ ಯಂತ್ರಗಳ ಮತಪ್ರಕ್ರಿಯೆ ಬಗ್ಗೆ ವಿಶ್ವಾಸ ಹೊಂದಿದ್ದಾರೆ ಎಂದು ಸಮೀಕ್ಷೆಯೊಂದು ವರದಿ ಬಹಿರಂಗಗೊಳಿಸಿದೆ. ಇದು ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ವೋಟ್ ಚೋರಿ ಆರೋಪಕ್ಕೆ ಹಿನ್ನೆಡೆಯಾದಂತಾಗಿದೆ. ರಾಹುಲ್ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ನಾಯಕರು ಕರ್ನಾಟಕವೂ ಸೇರಿದಂತೆ ದೇಶದ ನಾನಾ ಭಾಗಗಳಲ್ಲಿ ವೋಟ್ ಚೋರಿಯಾಗುತ್ತಿದೆ ಎಂದು ಆರೋಪಿಸಿ ಹಲವು ಪ್ರತಿಭಟನೆಗಳನ್ನು ನಡೆಸಿದೆ. ಕರ್ನಾಟಕದ ಅಳಂದ ಕ್ಷೇತ್ರದಲ್ಲೂ ಮತಚೋರಿಯಾಗಿದೆ ಎಂದು ರಾಹುಲ್ ಆರೋಪಿಸಿದ್ದರು. ಬಿಜೆಪಿ ಮತ್ತು ಚುನಾವಣಾ ಆಯೋಗ ಸೇರಿಕೊಂಡು ಇವಿಎಂ ಮೆಷಿನ್ ನ್ನು ದುರುಪಯೋಗಪಡಿಸಿಕೊಂಡು ವೋಟ್ ಚೋರಿ ಮಾಡುತ್ತಿದೆ.
ಬಳ್ಳಾರಿಯಲ್ಲಿ ಶಾಸಕ ಜನಾರ್ಧನ ರೆಡ್ಡಿ ಅವರ ಮನೆಯ ಮುಂದೆ ನಡೆದ ಅಹಿತಕರ ಘಟನೆಯು ಕೇವಲ ಆಕಸ್ಮಿಕವಲ್ಲ, ಅದು ಕಾಂಗ್ರೆಸ್ ಸರ್ಕಾರದ ಕುಮ್ಮಕ್ಕಿನಿಂದ ನಡೆದ ಪೂರ್ವಾಪರ ಯೋಜಿತ ದುಷ್ಕೃತ್ಯವಾಗಿದೆ ಎಂದು ಬಿಜೆಪಿ ನಾಯಕ ಛಲವಾದಿ ನಾರಾಯಣಸ್ವಾಮಿ ಆರೋಪಿಸಿದ್ದಾರೆ. ಬಳ್ಳಾರಿಯಲ್ಲಿ ಶಾಸಕ ಜನಾರ್ಧನ ರೆಡ್ಡಿ ಮನೆ ಮುಂದೆ ನಡೆದ ಗಲಾಟೆ ಕುರಿತಂತೆ ಇಂದು ಮಾಧ್ಯಮಗಳ ಮುಂದೆ ಮಾತನಾಡಿದ ಅವರು ಇದೆಲ್ಲಾ ಕಾಂಗ್ರೆಸ್ ಪ್ರೇರಿತ ದಾಳಿ ಎಂದಿದ್ದಾರೆ. ‘ಮಹರ್ಷಿ ವಾಲ್ಮೀಕಿ ಪ್ರತಿಮೆ ಉದ್ಘಾಟನೆಯ ಬ್ಯಾನರ್ ವಿಚಾರವನ್ನು ನೆಪವಾಗಿಸಿಕೊಂಡು, ಶ್ರೀ ಜನಾರ್ಧನ ರೆಡ್ಡಿ ಅವರ ಕುಟುಂಬವನ್ನೇ ಗುರಿಯಾಗಿಸಿಕೊಂಡು ಈ ದಾಳಿ ನಡೆಸಿರುವುದು ಅತ್ಯಂತ ಖಂಡನೀಯ.
ಬಳ್ಳಾರಿ: ಗಾಲಿ ಜನಾರ್ಧನ ರೆಡ್ಡಿ ಮನೆ ಮುಂದೆ ನಡೆದ ಎರಡು ನಾಯಕರ ನಡುವಿನ ಪ್ರತಿಷ್ಠೆಯ ಕದನ ಕೊನೆಗೆ ಯಾರೋ ಅಮಾಯಕ ಕಾರ್ಯಕರ್ತನೊಬ್ಬನ ಪ್ರಾಣ ಕಳೆಯುವಂತಾಯ್ತು. ಬಳ್ಳಾರಿಯಲ್ಲಿ ಜನಾರ್ಧನ ರೆಡ್ಡಿ ಮತ್ತು ಭರತ್ ರೆಡ್ಡಿ ಬೆಂಬಲಿಗರ ನಡುವಿನ ಜಗಳದಲ್ಲಿ ಓರ್ವ ಕಾಂಗ್ರೆಸ್ ಕಾರ್ಯಕರ್ತ ಗುಂಡಿಗೆ ಜೀವ ಕಳೆದುಕೊಂಡಿದ್ದಾನೆ. ಜನಾರ್ಧನ ರೆಡ್ಡಿ ಮನೆ ಮುಂದೆ ಬ್ಯಾನರ್ ಕಟ್ಟಲು ಹೋಗಿದ್ದಕ್ಕೇ ಜಗಳ ಶುರುವಾಗಿತ್ತು. ಯಾರೋ ಇಬ್ಬರು ನಾಯಕರ ನಡುವಿನ ಜಗಳ ಈಗ ಅಮಾಯಕನ ಜೀವದಲ್ಲಿ ಕೊನೆಯಾಗಿದೆ.
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರಕಾರವು ಶಾಸಕ ಜನಾರ್ದನ ರೆಡ್ಡಿಯವರಿಗೆ ಸಮರ್ಪಕ ಭದ್ರತಾ ವ್ಯವಸ್ಥೆ ಕಲ್ಪಿಸಬೇಕು ಎಂದು ಬಿಜೆಪಿ ರಾಜ್ಯ ಸಹ ಉಸ್ತುವಾರಿ ಸುಧಾಕರ ರೆಡ್ಡಿ ಅವರು ಆಗ್ರಹಿಸಿದ್ದಾರೆ. ಕರ್ನಾಟಕದಲ್ಲಿ ಕಾನೂನು- ಸುವ್ಯವಸ್ಥೆ ಕಾಪಾಡುವಲ್ಲಿ ಈ ಸರಕಾರ ಸಂಪೂರ್ಣ ವಿಫಲವಾಗಿದೆ ಎಂದು ಅವರು ಆಕ್ಷೇಪಿಸಿದ್ದಾರೆ.ಜನಾರ್ದನ ರೆಡ್ಡಿಯವರ ಮೇಲೆ ನಡೆದ ಹಲ್ಲೆಯನ್ನು ಅವರು ತೀವ್ರವಾಗಿ ಖಂಡಿಸಿದ್ದಾರೆ. ಕರ್ನಾಟಕದಲ್ಲಿ ಮಾದಕವಸ್ತು (ಡ್ರಗ್) ಮಾಫಿಯ ಹೆಚ್ಚಾಗಿದೆ. ಕಾನೂನು- ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದಿದೆ. ಕರ್ನಾಟಕದಲ್ಲಿ ಗೂಂಡಾರಾಜ್ಯ ತಾಂಡವವಾಡುತ್ತಿದೆ. ಕಾಂಗ್ರೆಸ್ ಪ್ರೇರಿತ ಗೂಂಡಾ ವ್ಯವಸ್ಥೆಯಿಂದ ಸಮಸ್ಯೆ ಉಂಟಾಗುತ್ತಿದೆ ಎಂದು ಅವರು ಕಳವಳ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು: ಅಡಿಕೆ ಬೆಲೆ ಒಂದು ವಾರದಿಂದ ಯಥಾಸ್ಥಿತಿಯಲ್ಲಿತ್ತು. ಇಂದು ಕೊಂಚ ದರ ಏರಿಕೆಯಾಗಿರುವುದು ಸಮಾಧಾನ ತಂದಿದೆ. ಇಂದು ಅಡಿಕೆ ಮತ್ತು ಕಾಳು ಮೆಣಸು, ಕೊಬ್ಬರಿ ದರ ಹೇಗಿದೆ ಇಲ್ಲಿದೆ ವಿವರ. ಅಡಿಕೆ ಬೆಲೆ ಏರಿಕೆಯೂ ಅಲ್ಲ ಇಳಿಕೆಯೂ ಇಲ್ಲ ಎನ್ನುವ ಸ್ಥಿತಿಯಲ್ಲಿತ್ತು. ಒಂದೆಡೆ ಬೆಳೆ ಕಡಿಮೆ, ಇನ್ನೊಂದೆಡೆ ಬೆಲೆ ಏರಿಕೆಯಾಗದೇ ಇರುವುದು ರೈತರ ಚಿಂತೆಗೆ ಕಾರಣವಾಗಿದೆ. ಅಡಿಕೆ ಬೆಲೆ ಇಳಿಕೆಯಾಗುತ್ತಿದೆಯೇ ಹೊರತು ಏರಿಕೆಯಾಗುತ್ತಿಲ್ಲ ಎಂಬ ಚಿಂತೆ ಬೆಳೆಗಾರರದ್ದು. ಆದರೆ ಮೊನ್ನೆ ಹೊಸ ಅಡಿಕೆ ಬೆಲೆ 10 ರೂ.ಗಳಷ್ಟು ಏರಿಕೆಯಾಗಿತ್ತು. ಆದರೆ ಇಂದು ಯಥಾಸ್ಥಿತಿಯಲ್ಲಿದ್ದು 425 ರೂ.ಗಳಷ್ಟಿದೆ. ಹಳೆ ಅಡಿಕೆ ಬೆಲೆ ಯಥಾಸ್ಥಿತಿಯಲ್ಲಿದ್ದು 525 ರೂ. ಗಳಷ್ಟಿದೆ.
ಬೆಂಗಳೂರು: ಹೊಸ ವರ್ಷದ ಮೊದಲ ದಿನವೇ ಚಿನ್ನದ ಬೆಲೆ ಇಳಿಕೆಯಾಗಿತ್ತು. ಆದರೆ ಇಂದು ಪರಿಶುದ್ಧ ಚಿನ್ನದ ದರ ಮತ್ತು ಇತರೆ ಚಿನ್ನದ ದರ ಏರಿಕೆ ಕಂಡಿದೆ. ಇಂದು ಪರಿಶುದ್ಧ ಚಿನ್ನದ ದರ ಮತ್ತು ಇತರೆ ಚಿನ್ನದ ದರ ವಿವರ ಇಲ್ಲಿದೆ ನೋಡಿ. ಚಿನ್ನದ ದರ ಏರಿಕೆಕಳೆದ ವಾರ ಪರಿಶುದ್ಧ ಚಿನ್ನದ ದರ ಸತತ ಇಳಿಕೆ ಕಂಡಿತ್ತು. ಆದರೆ ವಾರಂತ್ಯಕ್ಕೆ ಚಿನ್ನದ ದರ ಏರಿಕೆ-ಇಳಿಕೆಯಾಗುತ್ತಲೇ ಇತ್ತು. ಈ ವಾರ ಆರಂಭದಿಂದಲೇ ಇಳಿಕೆಯತ್ತ ಸಾಗಿದೆ. ಇಂದು ಪರಿಶುದ್ಧ ಚಿನ್ನದ ದರ ಕೊಂಚ ಏರಿಕೆಯಾಗಿದೆ. ಪರಿಶುದ್ಧ ಚಿನ್ನದ ದರ ಮೊನ್ನೆ 1,37,095.00 ರೂ.ಗಳಿತ್ತು.
ಸಾಮಾನ್ಯವಾಗಿ ಮೊಟ್ಟೆ ಒಟ್ಟಿಗೇ ತಂದು ಫ್ರಿಡ್ಜ್ ನಲ್ಲಿಟ್ಟು ತಿನ್ನುವ ಅಭ್ಯಾಸ ನಮಗಿರುತ್ತದೆ. ಆದರೆ ತುಂಬಾ ದಿನ ಮೊಟ್ಟೆ ಫ್ರಿಡ್ಜ್ ನಲ್ಲಿಡುವುದೂ ಆರೋಗ್ಯಕರವಲ್ಲ. ಎಷ್ಟು ದಿನ ಮೊಟ್ಟೆಯನ್ನು ಫ್ರಿಡ್ಜ್ ನಲ್ಲಿಟ್ಟುಕೊಳ್ಳಬಹುದು? ಇಲ್ಲಿದೆ ವಿವರ. ಮೊಟ್ಟೆಯನ್ನು ಮುಖ್ಯವಾಗಿ ಫ್ರಿಡ್ಜ್ ನ ಡೋರ್ ನಲ್ಲಿಟ್ಟುಕೊಳ್ಳಿ. ಆದಷ್ಟು ಫ್ರೆಶ್ ಮೊಟ್ಟೆಗಳನ್ನು ಖರೀದಿಸಿ ಅದರ ಕವರ್ ನಲ್ಲೇ ಹಾಕಿಡಿ. ಬೇರೆ ಪಾತ್ರೆಗಳಲ್ಲಿ ಹಾಕಿ ಸ್ಟೋರ್ ಮಾಡುವುದರಿಂದ ಕೊಳೆತು ಹೋಗುವ ಅಥವಾ ವಾಸನೆ ಬರುವ ಸಂಭವ ಹೆಚ್ಚು. ಹಾಗಿದ್ದರೆ ಫ್ರಿಡ್ಜ್ ನಲ್ಲಿ ಎಷ್ಟು ದಿನ ಇಟ್ಟುಕೊಳ್ಳಬಹುದು ನೋಡಿ.
ಬೆಂಗಳೂರು: ಕೋಗಿಲು ಲೇಔಟ್ ಅಕ್ರಮ ಮನೆಗಳನ್ನು ಕೆಡವಿದ ನಂತರ ರಾಜ್ಯ ಸರ್ಕಾರ ಅಲ್ಲಿನ ನಿವಾಸಿಗಳಿಗೆ ರಾಜೀವ್ ಗಾಂಧಿ ವಸತಿ ಯೋಜನೆಯಡಿಯಲ್ಲಿ ಮನೆ ನೀಡುವುದಾಗಿ ಘೋಷಿಸಿದೆ. ಈ ಯೋಜನೆಯಡಿಯಲ್ಲಿ ಸಾಮಾನ್ಯರು ಮನೆ ಪಡೆಯಲು ಅರ್ಜಿ ಸಲ್ಲಿಸುವುದು ಹೇಗೆ, ಏನೆಲ್ಲಾ ದಾಖಲೆ ಬೇಕಾಗುತ್ತದೆ ಇಲ್ಲಿದೆ ವಿವರ. ಕೇಂದ್ರ ಮತ್ತು ರಾಜ್ಯದ ಸಹಯೋಗದೊಂದಿಗೆ ಸಾಮಾಜಿಕವಾಗಿ ಮತ್ತು ಆರ್ಥಿಕವಾಗಿ ದುರ್ಬಲರಾಗಿರುವ ಜನರಿಗೆ ಸ್ವಂತ ಸೂರು ಕಲ್ಪಿಸಲು ಅನುಷ್ಠಾನಗೊಂಡಿರುವ ಯೋಜನೆ ಇದಾಗಿದೆ. ನಿಮ್ಮ ಹತ್ತಿರದ ಕರ್ನಾಟಕ ಒನ್ ಅಥವಾ ಗ್ರಾಮ ಒನ್ ಕೇಂದ್ರಗಳಿಗೆ ಹೋಗಿ ಆಫ್ ಲೈನ್ ಮುಖಾಂತರ ಅರ್ಜಿ ಸಲ್ಲಿಸಬಹುದು.
ಮುಂಬೈ: 2027 ರ ಏಕದಿನ ವಿಶ್ವಕಪ್ ಗೆ ಟೀಂ ಇಂಡಿಯಾ ಬ್ಲೂ ಪ್ರಿಂಟ್ ರೆಡಿಯಾಗಿದೆ. ಕೋಚ್ ಗೌತಮ್ ಗಂಭೀರ್ ಪ್ಲ್ಯಾನ್ ನಲ್ಲಿ ಯಾರೆಲ್ಲಾ ಇದ್ದಾರೆ ಇಲ್ಲಿದೆ ವಿವರ. ನ್ಯೂಜಿಲೆಂಡ್ ವಿರದ್ಧ ನಡೆಯಲಿರುವ ಮುಂಬರುವ ಏಕದಿನ ಸರಣಿಯನ್ನೇ ಭಾರತ ಏಕದಿನ ವಿಶ್ವಕಪ್ ಗೆ ಸಿದ್ಧತಾ ಸರಣಿಯನ್ನಾಗಿ ಪರಿಗಣಿಸಿದೆ. ಈ ಸರಣಿಗೆ ಆಟಗಾರರನ್ನು ಆಯ್ಕೆ ಮಾಡುವಾಗ ಮುಂಬರುವ ಏಕದಿನ ವಿಶ್ವಕಪ್ ಗಮನದಲ್ಲಿಟ್ಟುಕೊಂಡು ಆಯ್ಕೆ ಮಾಡಲಾಗುತ್ತದೆ. ತಂಡದ ನಾಯಕನಾಗಿ ಶುಭಮನ್ ಗಿಲ್ ಮುಂದುವರಿಯುವುದು ಪಕ್ಕಾ ಆಗಿದೆ. ಉಳಿದಂತೆ ಕೊಹ್ಲಿ, ರೋಹಿತ್ ಗೂ ಸ್ಥಾನ ಸಿಗಲಿದೆ.
ಬೆಂಗಳೂರು: ರಾಜ್ಯದಲ್ಲಿ ಹೊಸ ವರ್ಷದ ಆರಂಭದಲ್ಲೇ ಮತ್ತೆ ಸಿಎಂ ಬದಲಾವಣೆ ವಿಚಾರ ಸದ್ದು ಮಾಡುತ್ತಿದೆ. ಅಧಿಕಾರ ಹಂಚಿಕೆ ವಿಚಾರಕ್ಕೆ ಈಗ ಮಹತ್ವದ ಟ್ವಿಸ್ಟ್ ಸಿಕ್ಕಿದೆ. ಸಿಎಂ, ಡಿಸಿಎಂಗೆ ಹೈಕಮಾಂಡ್ ಮಹತ್ವದ ಸಂದೇಶ ರವಾನಿಸಿದೆ ಎನ್ನಲಾಗುತ್ತಿದೆ. ಸಿಎಂ ಬದಲಾವಣೆ ವಿಚಾರವಾಗಿ ಹೊಸ ವರ್ಷದಂದೇ ಮಾತನಾಡುವುದಾಗಿ ಮೂರು ದಿನಗಳ ಹಿಂದೆ ಡಿಸಿಎಂ ಡಿಕೆ ಶಿವಕುಮಾರ್ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದರು. ಇದೀಗ ಹೊಸ ವರ್ಷ ಆರಂಭದಲ್ಲೇ ಮತ್ತೆ ಸಿಎಂ ಬದಲಾವಣೆ ವಿಚಾರವಾಗಿ ಚಟುವಟಿಕೆಗಳು ಜೋರಾಗಿವೆ. ಸದ್ಯಕ್ಕೆ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಇಬ್ಬರೂ ವಿದೇಶ ಪ್ರವಾಸದಲ್ಲಿದ್ದಾರೆ.
ಮುಂಬೈ: ಪಾಲಾಶ್ ಮುಚ್ಚಲ್ ಜೊತೆ ಮದುವೆ ಬ್ರೇಕಪ್ ಆದ ಬಳಿಕ ಭಾರತ ಮಹಿಳಾ ಕ್ರಿಕೆಟ್ ತಂಡದ ಸ್ಟಾರ್ ಆಟಗಾರ್ತಿ ಸ್ಮೃತಿ ಮಂಧಾನ ವರ್ತನೆಯೇ ಬದಲಾಗಿದೆ. ಮದುವೆ ಬ್ರೇಕಪ್, ತಂದೆಯ ಅನಾರೋಗ್ಯದಿಂದ ಕೆಲವು ದಿನ ಕುಗ್ಗಿ ಹೋಗಿದ್ದ ಸ್ಮೃತಿ ಮಂಧಾನ ಈಗಷ್ಟೇ ಸಹಜ ಜೀವನಕ್ಕೆ ಮರಳುತ್ತಿದ್ದಾರೆ. ಮದುವೆ ಮುರಿದುಕೊಂಡ ಬಳಿಕ ಅವರು ಹೆಚ್ಚ ದೈವ ಭಕ್ತರಾಗಿದ್ದಾರೇನೋ ಅನಿಸುತ್ತಿದೆ. ಹೊಸ ವರ್ಷದ ಸಂದರ್ಭದಲ್ಲಿ ಕಳೆದ ವರ್ಷದ ಕ್ಷಣಗಳನ್ನು ರಿಕ್ಯಾಪ್ ವಿಡಿಯೋ ಹಂಚಿಕೊಂಡಿದ್ದ ಸ್ಮೃತಿ ಮಂಧಾನ ಕೊನೆಯಲ್ಲಿ ಭಗವದ್ಗೀತೆಯ ಸಾಲೊಂದನ್ನು ಹಾಕಿದ್ದರು.
ಬೆಂಗಳೂರು: ಹೊಸ ವರ್ಷದಲ್ಲಾದರೂ ತಮ್ಮ ಸಿಎಂ ಕುರ್ಚಿ ಕನಸು ನನಸಾಗಬಹುದು ಎಂಬ ನಿರೀಕ್ಷೆಯಲ್ಲಿರುವ ಡಿಕೆ ಶಿವಕುಮಾರ್ ಗೆ ಹೊಸ ಪ್ರತಿಸ್ಪರ್ಧಿ ಹುಟ್ಟಿಕೊಂಡಿದ್ದಾರೆ. ರಾಜ್ಯದಲ್ಲಿ ಅಧಿಕಾರ ಹಂಚಿಕೆ ಆಗುತ್ತದೆಂದು ಕಾದು ಕುಳಿತಿದ್ದ ಡಿಕೆ ಶಿವಕುಮಾರ್ ಬಣಕ್ಕೆ ಹೈಕಮಾಂಡ್ ನಿರಾಸೆ ಮಾಡಿತ್ತು. ಕಳೆದ ವರ್ಷ ಯಾವುದೇ ತೀರ್ಮಾನ ತೆಗೆದುಕೊಳ್ಳದೇ ಹೈಕಮಾಂಡ್ ಕಾದು ನೋಡುವ ತಂತ್ರಕ್ಕೆ ಮೊರೆ ಹೋಗಿತ್ತು. ಯಾಕೆಂದರೆ ಸಿದ್ದರಾಮಯ್ಯನವರಿಂದಲೂ ಅಧಿಕಾರ ಕಿತ್ತುಕೊಳ್ಳುವುದು ಅಷ್ಟು ಸುಲಭವಲ್ಲ. ಇದು ಸರ್ಕಾರದ ಮೇಲೆ ಪರಿಣಾಮ ಬೀರಬಹುದು ಎಂದು ಹೈಕಮಾಂಡ್ ನಾಯಕರಿಗೂ ಗೊತ್ತಿದೆ.
ಬಳ್ಳಾರಿ: ಗಾಲಿ ಜನಾರ್ಧನ ರೆಡ್ಡಿ ಮನೆ ಮುಂದೆ ಬ್ಯಾನರ್ ಕಟ್ಟುವ ವಿಚಾರಕ್ಕೆ ನಡೆದ ಗಲಾಟೆ ಕೊನೆಗೆ ಓರ್ವ ಕಾಂಗ್ರೆಸ್ ಕಾರ್ಯಕರ್ತನ ಸಾವಿಗೆ ಕಾರಣವಾಗಿದೆ. ಈ ಘಟನೆಗೆ ಜನಾರ್ಧನ ರೆಡ್ಡಿ ಟ್ವಿಸ್ಟ್ ಕೊಟ್ಟಿದ್ದಾರೆ. ಜನಾರ್ಧನ ರೆಡ್ಡಿ ಮನೆ ಮುಂದೆ ಬ್ಯಾನರ್ ಕಟ್ಟುವ ವಿಚಾರಕ್ಕೆ ಬಳ್ಳಾರಿ ನಗರ ಶಾಸಕ ಭರತ್ ರೆಡ್ಡಿ ಬೆಂಬಲಿಗರ ಜೊತೆ ವಾಗ್ವಾದವಾಗಿತ್ತು. ಆರಂಭದಲ್ಲಿ ಚಿಕ್ಕದಾಗಿ ಶುರುವಾಗಿದ್ದ ವಾಗ್ವಾದ ಬಳಿಕ ದೊಣ್ಣೆ, ಆಯುಧಗಳನ್ನು ಹಿಡಿದುಕೊಂಡು ಸಾವಿರಾರು ಮಂದಿ ಸೇರುವಂತಾಗಿತ್ತು. ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಜನಾರ್ಧನ ರೆಡ್ಡಿ ನನ್ನನ್ನು ಕೊಲ್ಲಲೆಂದು ಭರತ್ ರೆಡ್ಡಿ ಬೆಂಬಲಿಗರು ಈ ದಾಳಿ ನಡೆಸಿದ್ದಾರೆ ಎಂದು ಮಾಧ್ಯಮಗಳ ಮುಂದೆ ಗುಂಡು ಪ್ರದರ್ಶಿಸಿದ್ದಾರೆ.
ಬೆಂಗಳೂರು: ಕಳೆದ ಎರಡು ದಿನಗಳಿಂದ ಚಳಿ ಕೊಂಚ ತಗ್ಗಿತ್ತು. ಆದರೆ ಇಂದಿನಿಂದ ಮತ್ತೆ ಚಳಿ ಹೆಚ್ಚಾಗಲಿದ್ದು, ಹವಾಮಾನ ಬದಲಾವಣೆ ತಪ್ಪದೇ ಗಮನಿಸಿ. ವಾಯುಭಾರ ಕುಸಿತದಿಂದ ಕಳೆದ ಎರಡು ದಿನ ಮಳೆಯ ಸೂಚನೆಯಿತ್ತು. ತಾಪಮಾನವೂ ಕೊಂಚ ಏರಿಕೆಯಾಗಿತ್ತು. ಆದರೆ ಇಂದಿನಿಂದ ಮತ್ತೆ ತಾಪಮಾನದಲ್ಲಿ ಇಳಿಕೆ ಕಂಡುಬರಲಿದೆ. ಹವಾಮಾನ ವರದಿಗಳ ಪ್ರಕಾರ ಇಂದು ರಾಜ್ಯದ ಸರಾಸರಿ ಕನಿಷ್ಠ ತಾಪಮಾನ 20 ಡಿಗ್ರಿಯಷ್ಟಿರಲಿದೆ. ಗರಿಷ್ಠ ತಾಪಮಾನ 27 ಡಿಗ್ರಿಯಷ್ಟಿರಲಿದೆ. ವಿಶೇಷವಾಗಿ ಚಿಕ್ಕಮಗಳೂರು, ಕೊಡಗು, ಬೆಂಗಳೂರು, ಹಾಸನ, ಹುಬ್ಬಳ್ಳಿ ಮೊದಲಾದ ಜಿಲ್ಲೆಗಳಲ್ಲಿ ಮತ್ತೆ ತಾಪಮಾನದಲ್ಲಿ ಇಳಿಕೆ ಕಂಡುಬರುವುದು.
ಜೀವನದಲ್ಲಿ ಕೆಟ್ಟ ದೃಷ್ಟಿ ನಿವಾರಿಸಿ, ಆರ್ಥಿಕವಾಗಿ ಅಭಿವೃದ್ಧಿಗೆ ಮತ್ತು ಮಾನಸಿಕವಾಗಿ ನೆಮ್ಮದಿ, ಸಂತೋಷ ಗಳಿಸಲು ಲಕ್ಷ್ಮೀ ದೇವಿಯ ಕುರಿತಾದ ವ್ಯೂಹ ಲಕ್ಷ್ಮೀ ಮಂತ್ರವನ್ನು ತಪ್ಪದೇ ಪಠಿಸಿ. ಕನ್ನಡದಲ್ಲಿ ಇಲ್ಲಿದೆ.ವ್ಯೂಹಲಕ್ಷ್ಮೀ ತಂತ್ರಃದಯಾಲೋಲ ತರಂಗಾಕ್ಷೀ ಪೂರ್ಣಚಂದ್ರ ನಿಭಾನನಾ ।ಜನನೀ ಸರ್ವಲೋಕಾನಾಂ ಮಹಾಲಕ್ಷ್ಮೀಃ ಹರಿಪ್ರಿಯಾ ॥ 1 ॥ ಸರ್ವಪಾಪ ಹರಾಸೈವ ಪ್ರಾರಬ್ಧಸ್ಯಾಪಿ ಕರ್ಮಣಃ ।ಸಂಹೃತೌ ತು ಕ್ಷಮಾಸೈವ ಸರ್ವ ಸಂಪತ್ಪ್ರದಾಯಿನೀ ॥ 2 ॥ ತಸ್ಯಾ ವ್ಯೂಹ ಪ್ರಭೇದಾಸ್ತು ಲಕ್ಷೀಃ ಸರ್ವಪಾಪ ಪ್ರಣಾಶಿನೀ ।ತತ್ರಯಾ ವ್ಯೂಹಲಕ್ಷ್ಮೀ ಸಾ ಮುಗ್ಧಾಃ ಕಾರುಣ್ಯ ವಿಗ್ರಹ ॥ 3 ॥
ಬೆಂಗಳೂರು: ನಗರದಾದ್ಯಂತ ಅದ್ಧೂರಿಯಾಗಿ ಹೊಸ ವರ್ಷವನ್ನು ಸ್ವಾಗತ ಮಾಡಿದ್ದು ಇದೀಗ ಈ ದಿನದಂದು ರಾಜ್ಯ ಸರ್ಕಾರಕ್ಕೆ ಮದ್ಯ ಮಾರಾಟದಿಂದ ಭರ್ಜರಿ ಆದಾಯ ಸಂಗ್ರಹವಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷದ ಡಿಸೆಂಬರ್ನಲ್ಲಿ ₹454.58 ಕೋಟಿ ಹೆಚ್ಚು ಅಬಕಾರಿ ಆದಾಯ ಸಂಗ್ರಹವಾಗಿದೆ.ಇನ್ನೂ 2024ರ ಹೊಸ ವರ್ಷದಂದು ₹154.04 ಕೋಟಿ, ಡಿ.31 ರಂದು 266. 73 ಕೋಟಿ ಆದಾಯ ಸಂಗ್ರಹವಾಗಿದೆ. ಆದರೆ ಈ ಬಾರಿ ಡಿ. 30 ರಂದು ₹261.09 ಕೋಟಿ, ಡಿ.31 ರಂದು ₹204.10 ಕೋಟಿ ಆದಾಯ ಸಂಗ್ರಹವಾಗಿದೆ.
ಬೆಂಗಳೂರು: ಕೋಗಿಲು ಅಕ್ರಮ ಗುಡಿಸಲು- ಮನೆ ತೆರವು ಪ್ರಕರಣದ ಹೊರದೇಶದವರಿಗೆ ಮನೆ ನೀಡಿದರೆ ಅದನ್ನು ನ್ಯಾಯಾಲಯದಲ್ಲಿ ಪ್ರಶ್ನಿಸುತ್ತೇವೆ. ಇದರ ವಿರುದ್ಧ ಮಾನ್ಯ ರಾಜ್ಯಪಾಲರಿಗೆ ಮನವಿ ನೀಡುತ್ತೇವೆ ಎಂದು ಶಾಸಕ ಎಸ್.ಆರ್.ವಿಶ್ವನಾಥ್ ಅವರು ತಿಳಿಸಿದರು.ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಬಿಬಿಎಂಪಿಗೆ ಸೇರಿದ ಜಾಗದಲ್ಲಿ ಅಕ್ರಮವಾಗಿ ಗುಡಿಸಲು ಕಟ್ಟಿಕೊಂಡಿದ್ದಾರೆ. ಇವತ್ತು ನಿಜವಾದ ಫಲಾನುಭವಿ 10.5 ಲಕ್ಷ ರೂಪಾಯ ದುಡ್ಡು ಕಟ್ಟಬೇಕಾಗುತ್ತದೆ. ಬ್ಯಾಂಕ್ ಸಾಲ; ಇಲ್ಲವೇ ಸ್ವಂತ ಪ್ರಯತ್ನದಿಂದ ಇದನ್ನು ಕಟ್ಟಬೇಕು. ಈಗ ಏನು ಒಂದು ಲಕ್ಷ ಮನೆಗಳನ್ನ ಕಟ್ಟುತ್ತಿದ್ದಾರೆ. ಬೆಂಗಳೂರು ಸುತ್ತು ಮುತ್ತಲು 45 ಸಾವಿರ ಮನೆಗಳು ಆಗುತ್ತಿವೆ. ಅವರು ಯಾರು ಕೂಡ ದುಡ್ಡು ಕಟ್ಟಲ್ಲ.
ನವದೆಹಲಿ: ಕಾನ್ಸುಲರ್ ಪ್ರವೇಶ 2008 ರ ದ್ವಿಪಕ್ಷೀಯ ಒಪ್ಪಂದದ ನಿಬಂಧನೆಗಳ ಅಡಿಯಲ್ಲಿ, ಭಾರತ ಮತ್ತು ಪಾಕಿಸ್ತಾನಗಳು ಗುರುವಾರ ರಾಜತಾಂತ್ರಿಕ ಮಾರ್ಗಗಳ ಮೂಲಕ ಏಕಕಾಲದಲ್ಲಿ ನವದೆಹಲಿ ಮತ್ತು ಇಸ್ಲಾಮಾಬಾದ್ನಲ್ಲಿ ಪರಸ್ಪರ ವಶದಲ್ಲಿರುವ ಸಿವಿಲ್ ಕೈದಿಗಳು ಮತ್ತು ಮೀನುಗಾರರ ಪಟ್ಟಿಯನ್ನು ವಿನಿಮಯ ಮಾಡಿಕೊಂಡಿವೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಹೇಳಿದೆ. ಹೇಳಿಕೆಯಲ್ಲಿ 3 ನಾಗರಿಕರು ಮತ್ತು ಮೀನುಗಾರರ 3 ವಿವರಗಳನ್ನು ಹಂಚಿಕೊಂಡಿದೆ.ಅಂತೆಯೇ, ಪಾಕಿಸ್ತಾನವು ತನ್ನ ವಶದಲ್ಲಿರುವ 58 ನಾಗರಿಕ ಕೈದಿಗಳು ಮತ್ತು 199 ಮೀನುಗಾರರ ವಿವರಗಳೊಂದಿಗೆ ಪಟ್ಟಿಗಳನ್ನು ಹಂಚಿಕೊಂಡಿದೆ, ಅವರು ಭಾರತೀಯರು ಅಥವಾ ಭಾರತೀಯರು ಎಂದು ನಂಬಲಾಗಿದೆ" ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.
ವಿಟ್ಜರ್ಲೆಂಡ್ನ ಕ್ರಾನ್ಸ್ ಮೊಂಟಾನಾದಲ್ಲಿರುವ ಬಾರ್ನಲ್ಲಿ ಸಂಭವಿಸಿದ ಭಾರಿ ಬೆಂಕಿಯಲ್ಲಿ 100 ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಡಜನ್ಗಟ್ಟಲೆ ಜನರು ಸತ್ತಿದ್ದಾರೆಂದು ಭಾವಿಸಲಾಗಿದೆ. ಹೊಸ ವರ್ಷದ ಆಚರಣೆಯ ಸಂದರ್ಭದಲ್ಲಿ ಐಷಾರಾಮಿ ಆಲ್ಪೈನ್ ಸ್ಕೀ ರೆಸಾರ್ಟ್ ಪಟ್ಟಣವಾದ ಕ್ರಾನ್ಸ್ ಮೊಂಟಾನಾದ ಲೆ ಕಾನ್ಸ್ಟೆಲೇಷನ್ ಎಂಬ ಬಾರ್ನಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಸ್ವಿಸ್ ಪೊಲೀಸರು ಗುರುವಾರ ಮುಂಜಾನೆ ತಿಳಿಸಿದ್ದಾರೆ.ಇದು ಭಯೋತ್ಪಾದಕರ ದಾಳಿಯಲ್ಲ, ಬೆಂಕಿ ಅವಘಡ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ. ಪ್ರದೇಶದ ಭದ್ರತಾ ಮುಖ್ಯಸ್ಥರು
ಮುಂಬೈ: ನಗರವು 2026 ವರ್ಷದ ಮೊದಲ ದಿನವನ್ನು ವರುಣನ ಆಗಮನದೊಂದಿಗೆ ಸ್ವಾಗತಿಸಲಾಯಿತು. ಮುಂಬೈನ ಹಲವಾರು ಭಾಗಗಳಲ್ಲಿ ಗುರುವಾರ ಬೆಳಿಗ್ಗೆ ಭಾರೀ ಮಳೆಗೆ ಸಾಕ್ಷಿಯಾದವು.ಸೂರ್ಯನ ಮೊದಲ ಕಿರಣಗಳೊಂದಿಗೆ ವರ್ಷವನ್ನು ಸ್ವಾಗತಿಸುವ ಬದಲು, ಮುಂಬೈನ ಕೆಲವು ಭಾಗಗಳು, ವಿಶೇಷವಾಗಿ ದ್ವೀಪ ನಗರವು ಮಳೆಯಿಂದ ಸ್ವಾಗತಿಸಿತು.ಬೆಳಗ್ಗೆ 6 ಗಂಟೆಯ ಮೊದಲು ಮಳೆ ಆರಂಭವಾಯಿತು. ಹಲವಾರು ಪ್ರದೇಶಗಳಲ್ಲಿ ಇದು ಹೆಚ್ಚು ತೀವ್ರವಾಗಿದ್ದರೆ, ಇತರ ಹಲವು
ಬೆಂಗಳೂರು : ಎಲ್ಲರಂತೆ ನನಗೂ ಆಕಾಂಕ್ಷೆ ಇದೆ. ಹೈಕಮಾಂಡ್ ತೀರ್ಮಾನ ಮಾಡಿದರೆ ರಾಜಕೀಯದಲ್ಲಿ ಪದೋನ್ನತಿ ಆಗುತ್ತದೆಯೆಂದು ಗೃಹ ಸಚಿವ ಜಿ ಪರಮೇಶ್ವರ್ ಹೇಳಿದರು. ಗುರುವಾರ ಸದಾಶಿವನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದರು. ರಾಜಕೀಯ ಪದೋನ್ನತಿ ಬಗ್ಗೆ ಮಾಧ್ಯಮದವರು ಪ್ರತಿಕ್ರಿಯಿಸಿದ ಅವರು ನಾನು ಇಲ್ಲಿಯವರೆಗೆ ಆಶಾವಾದಿಯಾಗಿಯೇ ಬದುಕಿದ್ದೇನೆ.
ಸಂಜೆಯ ಸಮಯ ದೇವರ ಕೈಮುಗಿಯುವಾಗ ದೀಪ ಹಚ್ಚುವ ಸಮಯ ತುಂಬಾನೇ ಮುಖ್ಯವಾಗುತ್ತದೆ. ಶಾಸ್ತ್ರಗಳ ಪ್ರಕಾರ, ಇದನ್ನು 'ಪ್ರದೋಷ ಕಾಲ' ಅಥವಾ 'ಸಂಧ್ಯಾ ಕಾಲ' ಎಂದು ಕರೆಯಲಾಗುತ್ತದೆ.ಈ ಸುದ್ದಿಯಲ್ಲಿ ದೀಪ ಹಚ್ಚಲು ಸರಿಯಾದ ಸಮಯ ಮತ್ತು ಅದರ ಮಹತ್ವದ ವಿವರ ಇಲ್ಲಿದೆ: ಸೂರ್ಯಾಸ್ತದ ಸಮಯ: ಸೂರ್ಯ ಮುಳುಗುವ 24 ನಿಮಿಷಗಳ ಮೊದಲು ಮತ್ತು ಸೂರ್ಯ ಮುಳುಗಿದ 24 ನಿಮಿಷಗಳ
ಎಳನೀರನ್ನು ಚಳಿಗಾಲದಲ್ಲಿ ಕುಡಿಯುವುದು ಆರೋಗ್ಯಕ್ಕೆ ಒಳ್ಳೆಯದೇ ಅಥವಾ ಕೆಟ್ಟದ್ದೇ ಎಂಬ ಗೊಂದಲ ಹೆಚ್ಚಿನವರಲ್ಲಿ ಇದೆ. ಎಳನೀರು ದೇಹಕ್ಕೆ ತಂಪಾಗಿದ್ದು, ಚಳಿಗಾಲದಲ್ಲಿ ಇದನ್ನು ಮಿತವಾಗಿ ಕುಡಿಯುವುದಿರಂದ ಆರೋಗ್ಯಕ್ಕೆ ಕೆಲವು ಅದ್ಭುತ ಪ್ರಯೋಜಗಳನ್ನು ಪಡೆಯಬಹುದು. ಎಳನೀರನ್ನು ಮಿತವಾಗಿ ಕುಡಿಯುವುದರಿಂದ ಆರೋಗ್ಯದ ಮೇಲಾಗುವ ಪ್ರಯೋಜನಗಳು ಇಲ್ಲಿದೆ. ಚರ್ಮದ ಆರೋಗ್ಯ: ಚಳಿಗಾಲದಲ್ಲಿ ಚರ್ಮ ಒಣಗುವುದು ಸಾಮಾನ್ಯ. ಎಳನೀರು ದೇಹವನ್ನು ಒಳಗಿನಿಂದ ಹೈಡ್ರೇಟ್ ಮಾಡಿ, ಚರ್ಮದ ತೇವಾಂಶವನ್ನು ಕಾಪಾಡುತ್ತದೆ ಮತ್ತು ನೈಸರ್ಗಿಕ ಹೊಳಪನ್ನು ನೀಡುತ್ತದೆ.
ಚಿಕ್ಕಮಗಳೂರು: ತಾನು ಮದುವೆಯಾಗುವ ಯುವತಿಗೆ ಹುಟ್ಟುಹಬ್ಬದ ಶುಭಾಶಯಕೋರಿದ ಯುವಕನನ್ನು ವ್ಯಕ್ತಿಯೊಬ್ಬ ಹತ್ಯೆ ಮಾಡಿದ ಘಟನೆ ತರೀಕೆರೆ ತಾಲ್ಲೂಕಿನ ಅತ್ತಿಗನಾಳು ಗ್ರಾಮದಲ್ಲಿ ವರದಿಯಾಗಿದೆ. ಯುವತಿಯ ಹುಟ್ಟುಹಬ್ಬದ ದಿನ ಯುವತಿಗೆ ಸಾಮಾಜಿಕ ಜಾಲತಾಣದ ಮೆಸೇಜ್ ಮಾಡಿದ್ದೆ ಕೊಲೆಗೆ ಕಾರಣ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. ಉಡೇವಾ ಮೂಲದ ಮಂಜುನಾಥ್ (28) ಕೊಲೆಯಾದ ಯುವಕ. ಯುವತಿಯೊಂದಿಗೆ ವಿವಾಹ ನಿಶ್ಚಿತಾರ್ಥವಾಗಿದ್ದ ಯುವಕ ವೇಣು ಮತ್ತು ಕೊಲೆ ಆರೋಪಿಗಳು ಎಂದು ಹೇಳಲಾಗಿದೆ.
ನವದೆಹಲಿ: ದಟ್ಟವಾದ ಮಂಜಿನಿಂದಾಗಿ ದೆಹಲಿ ಸೇರಿದಂತೆ ಉತ್ತರ ಮತ್ತು ಪೂರ್ವ ಭಾರತದಾದ್ಯಂತ ವಿಮಾನ ಕಾರ್ಯಾಚರಣೆಗೆ ಅಡ್ಡಿಯುಂಟಾಗಿದ್ದು, ವಿಮಾನಯಾನ ಸಂಸ್ಥೆಗಳು ಪ್ರಯಾಣಿಕರಿಗೆ ಸಲಹೆ ಸೂಚನೆಗಳನ್ನು ನೀಡಿದೆ.ಗೋಚರತೆಯ ಸಮಸ್ಯೆಗಳು ಬಹು ವಿಮಾನ ನಿಲ್ದಾಣಗಳ ಮೇಲೆ ಪರಿಣಾಮ ಬೀರಿತು, ಏರ್ ಇಂಡಿಯಾ ಮತ್ತು ಇಂಡಿಗೋದಂತಹ ವಿಮಾನಯಾನ ಸಂಸ್ಥೆಗಳು ವಿಮಾನ ನವೀಕರಣಗಳನ್ನು ಮೇಲ್ವಿಚಾರಣೆ ಮಾಡಲು ಪ್ರಯಾಣಿಕರಿಗೆ ಎಚ್ಚರಿಕೆ ನೀಡುವಂತೆ ಪ್ರೇರೇಪಿಸಿತು. ಏರ್ ಇಂಡಿಯಾದ 'ಫಾಗ್ಕೇರ್' ಉಪಕ್ರಮವು ಫ್ಲೈಟ್ ಮರುಹೊಂದಿಕೆ ಅಥವಾ ಮರುಪಾವತಿಯನ್ನು ಒದಗಿಸುತ್ತದೆ, ಆದರೆ
ಬೆಂಗಳೂರು: ಹೊಸ ವರ್ಷದ ಸಂಭ್ರಮದಲ್ಲಿ ನಮ್ಮ ಮೆಟ್ರೋದಲ್ಲಿ ಭಾರೀ ಮಂದಿ ಪ್ರಯಾಣ ಬೆಳೆಸಿದ್ದು, ಇದೀಗ ಒಂದೇ ದಿನದಲ್ಲಿ 8.93 ಲಕ್ಷ ಜನರು ಪ್ರಯಾಣಿಸುವ ಮೂಲಕ ₹3.08 ಕೋಟಿ ಆದಾಯ ಸಂಗ್ರಹವಾಗಿದೆ.ಪ್ರಯಾಣಿಕರಿಗೆ ಸುಲಭ ಸಂಚಾರ ದೃಷ್ಟಿಕೋಣದಿಂದ ಹೊಸ ವರ್ಷಾಚರಣೆ ಹಿನ್ನೆಲೆ ಬಿಎಂಆರ್ಸಿಎಲ್ ಮೂರು ಮಾರ್ಗಗಳಾದ ನೇರಳೆ, ಹಸಿರು ಹಾಗೂ ಹಳದಿ ಮೆಟ್ರೋ ರೈಲುಗಳ ಸೇವಾ ಸಮಯ ವಿಸ್ತರಿಸಿತ್ತು. 2025ರ ಡಿ.31ರಂದು ಬೆಳಿಗ್ಗೆ 5 ಗಂಟೆಯಿಂದ ಮಧ್ಯರಾತ್ರಿ 3:10ರವರೆಗೆ ಮೆಟ್ರೋ ರೈಲುಗಳು ಸಂಚರಿಸಿದ್ದು, ಈ ಅವಧಿಯಲ್ಲಿ ಬರೋಬ್ಬರಿ 8,93,903 ಜನರು ಮೆಟ್ರೋದಲ್ಲಿ ಪ್ರಯಾಣಿಸಿದ್ದಾರೆ.
ಬೆಂಗಳೂರು: ಹೊಸ ವರ್ಷದ ದಿನದಂದು ರಾಯರ ದರ್ಶನಕ್ಕೆ ಮಂತ್ರಾಲಯಕ್ಕೆ ಭಕ್ತಸಾಗರವೇ ಹರಿದುಬಂದಿದೆ. ಇನ್ನೂ ಹೊಸ ವರ್ಷ 2026ಕ್ಕೆ ಜಗತ್ತು ಕಾಲಿಟ್ಟಾಗಿದೆ. ರಾಯರಲ್ಲಿ ಈ ವರ್ಷ ಒಳಿತು ಮಾಡು ಎಂದು ಬೇಡಲು ಮಂತ್ರಾಲಯಕ್ಕೆ ಭಕ್ತಸಾಗರವೇ ಹರಿದು ಬಂದಿದೆ.2025ರ ವರ್ಷಾಂತ್ಯ, 2026 ರ ಆರಂಭ ಹಾಗೂ ಗುರುವಾರವೇ ಹೊಸ ವರ್ಷದ ಮೊದಲ ದಿನವಾದ ಹಿನ್ನಲೆ ರಾಯಚೂರಿನ ಮಂತ್ರಾಲಯದ ರಾಯರ ಮಠಕ್ಕೆ ಸಾಗರೋಪಾದಿಯಲ್ಲಿ ಬಂದ ಜನರು ತುಂಗಾಭದ್ರಾ ನದಿಯಲ್ಲಿ ಪುಣ್ಯಸ್ನಾನ ಮಾಡಿ
ಸ್ವಿಸ್ ಸ್ಕೀ ರೆಸಾರ್ಟ್ ಪಟ್ಟಣವಾದ ಕ್ರಾನ್ಸ್-ಮೊಂಟಾನಾದ ಬಾರ್ನಲ್ಲಿ ಸ್ಫೋಟ ಸಂಭವಿಸಿದ ನಂತರ ಹಲವಾರು ಜನರು ಸಾವನ್ನಪ್ಪಿದ್ದಾರೆ ಮತ್ತು ಇತರರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಸ್ವಿಸ್ ಸ್ಕೀ ರೆಸಾರ್ಟ್ ಪಟ್ಟಣವಾದ ಕ್ರಾನ್ಸ್-ಮೊಂಟಾನಾದ ಬಾರ್ನಲ್ಲಿ ಸ್ಫೋಟ ಸಂಭವಿಸಿದ ನಂತರ ಹಲವಾರು ಜನರು ಸಾವನ್ನಪ್ಪಿದ್ದಾರೆ ಮತ್ತು ಇತರರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಾನ್ಸ್ಟೆಲೇಷನ್ ಎಂಬ ಬಾರ್ನಲ್ಲಿ ಬೆಳಿಗ್ಗೆ 1:30 ಕ್ಕೆ ಸ್ಫೋಟ ಸಂಭವಿಸಿದೆ ಎಂದು ಪೊಲೀಸರು ಬಿಬಿಸಿಗೆ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ನ್ಯೂಯಾರ್ಕ್: ಭಾರತೀಯ ಮೂಲದ 34 ವರ್ಷದ ಝೊಹ್ರಾನ್ ಮಮ್ದಾನಿ ಅವರು ಅಮೆರಿಕದ ಅತಿದೊಡ್ಡ ನಗರ ನ್ಯೂಯಾರ್ಕ್ ನ 112ನೇ ಮೇಯರ್ ಆಗಿ ಪ್ರಮಾಣವಚನ ಸ್ವೀಕರಿಸಿದರು.ಡೆಮಾಕ್ರಟಿಕ್ ಪಕ್ಷದ ನಾಯಕ, ಸಮಾಜವಾದಿ ಝೊಹ್ರಾನ್ ಮಮ್ದಾನಿ ಗುರುವಾರ ಮುಂಜಾನೆ ಪ್ರಮಾಣವಚನ ಸ್ವೀಕರಿಸಿದರು. ನ್ಯೂಯಾರ್ಕ್ ನಗರದ ಮೊದಲ ಮುಸ್ಲಿಂ ಮೇಯರ್ ಅವರಾಗಿದ್ದಾರೆ. ದಕ್ಷಿಣ ಏಷ್ಯಾ ಮೂಲದ ಮೊದಲ ಮೇಯರ್ ಹಾಗೂ ಒಂದು ಶತಮಾನಕ್ಕೂ ಹೆಚ್ಚು ಅವಧಿಯಲ್ಲಿ ಈ ಹುದ್ದೆ ಅಲಂಕರಿಸಿದ ಅತಿಕಿರಿಯ ವ್ಯಕ್ತಿ ಎಂಬ ದಾಖಲೆಗೆ ಪಾತ್ರರಾಗಿದ್ದಾರೆ.ಐತಿಹಾಸಿಕ ನಿಷ್ಕ್ರಿಯ ಸುರಂಗಮಾರ್ಗ ನಿಲ್ದಾಣದಲ್ಲಿ ನಡೆದ ಸಮಾರಂಭದಲ್ಲಿ ಮಮ್ದಾನಿ ಕುರಾನ್ ಮೇಲೆ ಕೈ ಇಟ್ಟು ಪ್ರಮಾಣವಚನ ಸ್ವೀಕರಿಸಿದರು. ಇದು ನನ್ನ ಜೀವನದ ಮಹತ್ತರ ಗೌರವ ಎಂದು ಅವರು ಹೇಳಿದರು.
ನವದೆಹಲಿ: ಹೊಸ ವರ್ಷದಲ್ಲಿ ಹೊಸ ನಿಯಮಗಳು ಇಂದಿನಿಂದಲೇ ಜಾರಿಗೆ ಬರಲಿದೆ. ದೇಶದಲ್ಲಿ ನಿಯಮಗಳಲ್ಲಿ ಮಹತ್ವದ ಬದಲಾವಣೆಗಳಾಗಲಿವೆ. ಹಲವು ವಸ್ತುಗಳ ಬೆಲೆಯಲ್ಲಿ ಏರಿಳಿತವಾಗಲಿದೆ.ಇಂದಿನಿಂದಲೇ ಪಿಎಂ ಕಿಸಾನ್, ಯುಪಿಐ, ಮತ್ತು ಸಿಮ್ ದೃಢೀಕರಣದಂತಹ ಹಲವಾರು ನಿಯಮಗಳಲ್ಲಿ ಮಹತ್ವದ ಬದಲಾವಣೆಗಳಾಗಲಿವೆ. ಮಾತ್ರವಲ್ಲ, ಫ್ರಿಡ್ಜ್, ಎಸಿ ಮತ್ತು ಕಾರುಗಳ ಬೆಲೆಗಳು ಏರಿಕೆಯಾಗಲಿದೆ.ಹೊಸ ವರ್ಷಕ್ಕೆ ಪಿಎಂ ಕಿಸಾನ್ ಯೋಜನೆಯಡಿ ಸೌಲಭ್ಯಗಳನ್ನು ಪಡೆಯಲು ರೈತರು ವಿಶೇಷ ಕಿಸಾನ್ ಐಡಿ ಹೊಂದುವುದು ಕಡ್ಡಾಯವಾಗಲಿದೆ. ರೈತರ ಭೂ ದಾಖಲೆಗಳು, ಬೆಳೆ ಮಾಹಿತಿ, ಆಧಾರ್ ಮತ್ತು ಬ್ಯಾಂಕ್ ವಿವರಗಳು ಈ ಐಡಿಗೆ ಲಿಂಕ್ ಆಗಿರಲಿವೆ. ಯೋಜನೆಯ ದುರುಪಯೋಗ ತಡೆದು, ಅರ್ಹರಷ್ಟೇ ಅದರ ಲಾಭ ಪಡೆಯುವಂತೆ ಮಾಡಲು ಈ ನಿಯಮ ಜಾರಿಗೆ ತರಲಾಗಿದೆ.
ಮಂಗಳೂರು: ಮಾಜಿ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಅವರ ಸಹೋದರ, ನಿಟ್ಟೆ ಶಿಕ್ಷಣ ಸಂಸ್ಥೆಗಳ ಸ್ಥಾಪಕ, ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ಕುಲಪತಿ ಡಾ. ಎನ್.ವಿನಯ ಹೆಗ್ಡೆ ಗುರುವಾರ ಬೆಳಗಿನ ಜಾವ ನಿಧನರಾದರು. ಅವರಿಗೆ 86 ವರ್ಷ ವಯಸ್ಸಾಗಿತ್ತು.ಲೋಕಸಭಾ ಸ್ಪೀಕರ್ ಆಗಿದ್ದ ದಿವಂಗತ ಜಸ್ಟಿಸ್ ಕೆ.ಎಸ್. ಹೆಗ್ಡೆ ಅವರ ಪುತ್ರನಾದ ಡಾ. ವಿನಯ ಹೆಗ್ಡೆ ಅವರು ರಾಜ್ಯದ ಪ್ರಮುಖ ಶಿಕ್ಷಣ ತಜ್ಞರು, ಉದ್ಯಮಿ ಮತ್ತು ಸಮಾಜ ಸೇವಕರಾಗಿ ಅವರು ಗುರುತಿಸಿಕೊಂಡಿದ್ದರು.ವಿನಯ ಹೆಗ್ಡೆ ಅವರಿಗೆ ಶಿಕ್ಷಣ ಮತ್ತು ಸಮಾಜ ಸೇವೆಗಾಗಿ ಅವರಿಗೆ ಕರ್ನಾಟಕ ಸರ್ಕಾರದಿಂದ ರಾಜ್ಯೋತ್ಸವ ಪ್ರಶಸ್ತಿ. ಮಂಗಳೂರು ವಿಶ್ವವಿದ್ಯಾಲಯದ ಗೌರವ ಡಾಕ್ಟರೇಟ್ ಲಭಿಸಿದೆ. ಕರಾವಳಿ ಕರ್ನಾಟಕದ ಶೈಕ್ಷಣಿಕ ಮತ್ತು ಕೈಗಾರಿಕಾ ಕ್ರಾಂತಿಯಲ್ಲಿ ಪ್ರಮುಖ ಪಾತ್ರ ವಹಿಸಿದ್ದ ದೂರದೃಷ್ಟಿಯ ನಾಯಕರಾಗಿದ್ದರು.