Shorts

ಕೋಲ್ಕತ್ತಾ (ಪಶ್ಚಿಮ ಬಂಗಾಳ): ಆಮ್ ಆದ್ಮಿ ಪಕ್ಷದ (ಎಎಪಿ) ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರು ಸೋಮವಾರ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಗೆ ತಮ್ಮ ಬೆಂಬಲವನ್ನು ನೀಡಿದರು, ವಿಶೇಷ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ರಾಜ್ಯದಲ್ಲಿ 90 ಲಕ್ಷ ಮತಗಳನ್ನು ಕಡಿತಗೊಳಿಸಿದ ಭಾರತೀಯ ಜನತಾ ಪಕ್ಷಕ್ಕೆ ಬಂಗಾಳದ ಜನರು ಸೇಡು ತೀರಿಸಿಕೊಳ್ಳುತ್ತಾರೆ ಎಂದು ಅಭಿಪ್ರಾಯ ಹೊರಹಾಕಿದರು. ರಾಜ್ಯದಲ್ಲಿ ದೊಡ್ಡ ಪ್ರಮಾಣದ ಮತದಾರರ ಪಟ್ಟಿ ದುರ್ಬಳಕೆಯಾಗಿದೆ. ಕೋಲ್ಕತ್ತಾದಲ್ಲಿ ಸಾರ್ವಜನಿಕ ಸಂವಾದವನ್ನು ಉದ್ದೇಶಿಸಿ ಮಾತನಾಡಿದ ಕೇಜ್ರಿವಾಲ್, "ಈ ಚುನಾವಣೆಗಳಿಗಾಗಿ ನಾನು ಮಮತಾ ಬ್ಯಾನರ್ಜಿಯವರಿಗೆ ನನ್ನ ಶುಭಾಶಯಗಳನ್ನು ಹೇಳಲು ಬಯಸುತ್ತೇನೆ. ಪಶ್ಚಿಮ ಬಂಗಾಳದ ಜನರು ಈ ಸರ್ವಾಧಿಕಾರದ ವಿರುದ್ಧ ಹೋರಾಡುತ್ತಿರುವ ರೀತಿಗೆ ನಾನು ಅಭಿನಂದಿಸುತ್ತೇನೆ

ಇಂದು ಸೋಮವಾರವಾಗಿದ್ದು ಶಿವನಿಗೆ ವಿಶೇಷವಾದ ದಿನವಾಗಿದೆ. ಇಂದು ಶಿವನ ಅನುಗ್ರಹಕ್ಕಾಗಿ ಶಿವ ತಾಂಡವ ಸ್ತೋತ್ರವನ್ನು ತಪ್ಪದೇ ಭಜಿಸಿ. ಕನ್ನಡದಲ್ಲಿ ಇಲ್ಲಿದೆ.ಜಟಾಟವೀಗಲಜ್ಜಲಪ್ರವಾಹಪಾವಿತಸ್ಥಲೇಗಲೇವಲಂಬ್ಯ ಲಂಬಿತಾಂ ಭುಜಂಗತುಂಗಮಾಲಿಕಾಮ್ ।ಡಮಡ್ಡಮಡ್ಡಮಡ್ಡಮನ್ನಿನಾದವಡ್ಡಮರ್ವಯಂಚಕಾರ ಚಂಡತಾಂಡವಂ ತನೋತು ನಃ ಶಿವಃ ಶಿವಮ್ ॥ 1 ॥ ಜಟಾಕಟಾಹಸಂಭ್ರಮಭ್ರಮನ್ನಿಲಿಂಪನಿರ್ಝರೀ--ವಿಲೋಲವೀಚಿವಲ್ಲರೀವಿರಾಜಮಾನಮೂರ್ಧನಿ ।ಧಗದ್ಧಗದ್ಧಗಜ್ಜ್ವಲಲ್ಲಲಾಟಪಟ್ಟಪಾವಕೇಕಿಶೋರಚಂದ್ರಶೇಖರೇ ರತಿಃ ಪ್ರತಿಕ್ಷಣಂ ಮಮ ॥ 2 ॥ ಧರಾಧರೇಂದ್ರನಂದಿನೀವಿಲಾಸಬಂಧುಬಂಧುರಸ್ಫುರದ್ದಿಗಂತಸಂತತಿಪ್ರಮೋದಮಾನಮಾನಸೇ ।ಕೃಪಾಕಟಾಕ್ಷಧೋರಣೀನಿರುದ್ಧದುರ್ಧರಾಪದಿಕ್ವಚಿದ್ದಿಗಂಬರೇ ಮನೋ ವಿನೋದಮೇತು ವಸ್ತುನಿ ॥ 3 ॥ ಜಟಾಭುಜಂಗಪಿಂಗಳಸ್ಫುರತ್ಫಣಾಮಣಿಪ್ರಭಾಕದಂಬಕುಂಕುಮದ್ರವಪ್ರಲಿಪ್ತದಿಗ್ವಧೂಮುಖೇ ।ಮದಾಂಧಸಿಂಧುರಸ್ಫುರತ್ತ್ವಗುತ್ತರೀಯಮೇದುರೇಮನೋ ವಿನೋದಮದ್ಭುತಂ ಬಿಭರ್ತು ಭೂತಭರ್ತರಿ ॥ 4 ॥

ನವದೆಹಲಿ: ಹಾಲಿ ಚಾಂಪಿಯನ್‌ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಗಾಯದ ಆಘಾತ ಎದುರಾಗಿದೆ. ಸ್ಫೋಟಕ ಆರಂಭಿಕ ಆಟಗಾರ ಫಿಲ್ ಸಾಲ್ಟ್ ಅವರು ಮುಂದಿನ ಪಂದ್ಯಕ್ಕೂ ಅಲಭ್ಯರಾಗಿದ್ದಾರೆ.ಇಂಗ್ಲೆಂಡ್‌ನ ಈ ಬ್ಯಾಟರ್‌ ಗಾಯದಿಂದ ಇನ್ನೂ ಚೇತರಿಸಿಕೊಂಡಿಲ್ಲ. ಹೀಗಾಗಿ ಅವರು ಸೋಮವಾರ ದೆಹಲಿಯಲ್ಲಿ ನಡೆಯಲಿರುವ ಡೆಲ್ಲಿ ಕ್ಯಾಪಿಟಲ್ಸ್‌ ವಿರುದ್ಧದ ಪಂದ್ಯದಲ್ಲಿ ಆಡುತ್ತಿಲ್ಲ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಡೆಲ್ಲಿ ತಂಡವು ಆರ್‌ಸಿಬಿಯನ್ನು ಸೋಲಿಸಿತ್ತು. ಇದೀಗ ಆರ್‌ಸಿಬಿ ಮುಯ್ಯಿ ತೀರಿಸಿಕೊಳ್ಳುವ ತವಕದಲ್ಲಿದೆ.ಮುಂದಿನ ಪಂದ್ಯಕ್ಕೆ ಅವರು ಆಯ್ಕೆಗೆ ಲಭ್ಯವಿಲ್ಲ ಎಂದು ತಂಡದ ಬ್ಯಾಟಿಂಗ್ ಕೋಚ್ ದಿನೇಶ್ ಕಾರ್ತಿಕ್ ಅವರು ದೃಢಪಡಿಸಿದ್ದಾರೆ. ಹೀಗಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಮುಂದಿನ ಐಪಿಎಲ್ ಪಂದ್ಯಕ್ಕೆ ಫಿಲ್ ಸಾಲ್ಟ್ ಇಲ್ಲದೆ ಆಡಲಿದೆ.

ಚೆನ್ನೈ: ಗೆಲುವಿನ ಹಳಿಗೆ ಮರಳಿದ್ದ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡ ತವರಿನಲ್ಲಿ ಮತ್ತೊಂದು ಸೋಲು ಅನುಭವಿಸಿದೆ. ಬ್ಯಾಟಿಂಗ್‌ ಹಾಗೂ ಬೌಲಿಂಗ್‌ನಲ್ಲಿ ನೀರಸ ಪ್ರದರ್ಶನ ತೋರಿದ ಐದು ಬಾರಿಯ ಚಾಂಪಿಯನ್‌ ಚೆನ್ನೈ ಸೂಪರ್‌ ಕಿಂಗ್ಸ್‌ (ಸಿಎಸ್‌ಕೆ) ತಂಡವುವು ಗುಜರಾತ್ ಟೈಟನ್ಸ್‌ಗೆ ಸುಲಭ ತುತ್ತಾಯಿತು.ಚೆನ್ನೈನ ಎಂ.ಎ. ಚಿದಂಬರಂ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಕಿಂಗ್ಸ್‌ ನೀಡಿದ್ದ 159 ರನ್‌ಗಳ ಗುರಿ ಎದುರು ಆಡಿದ ಟೈಟನ್ಸ್‌ ಬ್ಯಾಟರ್‌ಗಳು, ಇನ್ನೂ 20 ಎಸೆತಗಳು ಬಾಕಿ ಇರುವಂತೆಯೇ 162 ರನ್‌ ಗಳಿಸಿದರು. ಇದರೊಂದಿಗೆ, ಟೂರ್ನಿಯಲ್ಲಿ ಆಡಿರುವ 8 ಪಂದ್ಯಗಳಲ್ಲಿ 4ನೇ ಜಯ ಸಾಧಿಸಿದ ಗಿಲ್‌ ಪಡೆ, ಪಾಯಿಂಟ್‌ ಪಟ್ಟಿಯಲ್ಲಿ 5ನೇ ಸ್ಥಾನಕ್ಕೇರಿತು. ಚೆನ್ನೈ ಕೂಡ ಇಷ್ಟೇ ಪಂದ್ಯಗಳನ್ನಾಡಿದ್ದು, ಮೂರರಲ್ಲಷ್ಟೇ ಗೆದ್ದಿದೆ.