Shorts

ದಾವಣಗೆರೆ: ಇಲ್ಲಿನ ದಕ್ಷಿಣ ಉಪಚಚುನಾವಣೆ ಮುಗಿಯುತ್ತಿದ್ದ ಹಾಗೇ ಕಾಂಗ್ರೆಸ್‌ನನೊಳಗಿನ ಬಂಡಾಯದ ವಿಚಾರ ಮತ್ತೇ ಭುಗಿಲೆದ್ದಿದೆ. ಕ್ಷೇತ್ರದಲ್ಲಿ ಮುಸ್ಲಿಮರಿಗೆ ಟಿಕೆಟ್ ಕೊಡದ ಹಿನ್ನೆಲೆಯಲ್ಲಿ ಆರಂಭವಾಗಿದ್ದ ಮುನಿಸು ಇದೀಗ ಅಲ್ಪಸಂಖ್ಯಾರ ಘಟಕದ ಅಧ್ಯಕ್ಷ ಸ್ಥಾನಕ್ಕೆ ಎಂಎಲ್‌ಸಿಯೂ ಆಗಿರುವ ಅಬ್ದುಲ್‌ ಜಬ್ಬಾರ್‌ ರಾಜೀನಾಮೆ ಸಲ್ಲಿಸಿದ್ದಾರೆ.ಪಕ್ಷದ ಅಭ್ಯರ್ಥಿ ಪರ ಪ್ರಚಾರ ಮಾಡದ ಸಚಿವ ಜಮೀರ್ ಅಹ್ಮದ್ ವಿರುದ್ಧ ಮತ್ತೊಂದು ಮುಸ್ಲಿಂ ಬಣ ತಿರುಗಿ ಬಿದ್ದಿತ್ತು. ಜಮೀರ್ ಅಹ್ಮದ್ ಪಕ್ಷದ ಅಭ್ಯರ್ಥಿ ಪರ ಪ್ರಚಾರ ಮಾಡಿಲ್ಲ, ಪ್ರಚಾರಕ್ಕೆ ಅಂತ ಬಂದಿದ್ರೂ ಅವರ ನಡೆ ಯಾರಿಗೂ ಸಮಾಧಾನ ತಂದಿಲ್ಲ. ಇನ್ನೂ ಮುಸ್ಲಿಂ ನಾಯಕರನ್ನು ಮನವೊಲಿಕೆ ಮಾಡದೇ ಜಮೀರ್ ನಿರ್ಲಕ್ಷ್ಯ ವಹಿಸಿದ್ದರು ಎಂದು ಗಂಭೀರ ಆರೋಪ

ಬೆಂಗಳೂರು: ಸಿಲಿಕಾನ್‌ ಸಿಟಿ ಮಂದಿಗೆ ರೈಲ್ವೆ ಇಲಾಖೆ ಗುಡ್‌ನ್ಯೂಸ್‌ ನೀಡಿದೆ. ಬೆಂಗಳೂರು-ಮುಂಬೈ ವಂದೇ ಭಾರತ್‌ ಸ್ಲೀಪರ್‌ ರೈಲಿಗೆ ಗ್ರೀನ್‌ ಸಿಗ್ನಲ್‌ ಸಿಕ್ಕಿದೆ. ಭಾರತೀಯ ರೈಲ್ವೆ ಕೆಎಸ್‌ಆರ್ ಬೆಂಗಳೂರು ಮತ್ತು ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಸ್ ಮುಂಬೈ ನಡುವೆ ಸಂಪರ್ಕ ಕಲ್ಪಿಸುವ ಹೊಸ ವಂದೇ ಭಾರತ್ ಸ್ಲೀಪರ್ ರೈಲು ಇದಾಗಿದ್ದು, ಸಂಪರ್ಕವನ್ನು ಸುಧಾರಿಸುವುದರ ಜೊತೆಗೆ ಪ್ರಯಾಣ ಸಮಯವನ್ನು ಸುಮಾರು 13ರಿಂದ 18 ಗಂಟೆಗಳವರೆಗೆ ಕಡಿಮೆ ಮಾಡುವ ಉದ್ದೇಶ ಹೊಂದಿದೆ. ಇದಕ್ಕೆ ಜೊತೆಗೆ, ದೆಹಲಿ ಸೂರತ್ ಸೇರಿದಂತೆ ಇತರ ವಂದೇ ಭಾರತ್ ಸ್ಲೀಪರ್ ಮಾರ್ಗಗಳನ್ನೂ ಪರಿಗಣಿಸಲಾಗುತ್ತಿದೆ.ಮುಂಬೈಗೆ ವಂದೇ ಭಾರತ್ ಸ್ಲೀಪರ್ ರೈಲಿಗೆ ಬೆಂಗಳೂರು ಕೇಂದ್ರ ಕ್ಷೇತ್ರದ ಸಂಸದ ಪಿ.ಸಿ.ಮೋಹನ್ ಬೇಡಿಕೆ ಇಟ್ಟಿದ್ದರು.

ಇಸ್ಲಾಮಾಬಾದ್: ಒಂದೆಡೆ ತನ್ನ ಮಧ್ಯಸ್ಥಿಕೆಯಲ್ಲಿ ಇರಾನ್, ಅಮೆರಿಕಾ ನಡುವೆ ಮಾತುಕತೆ ನಡೆಸಲು ವೇದಿಕೆ ಸಿದ್ಧ ಮಾಡುತ್ತಿದ್ದರೆ ಇತ್ತ ಪಾಕಿಸ್ತಾನ ಸಚಿವ ಆಸಿಫ್ ಖ್ವಾಜಾ ಇಸ್ರೇಲ್ ಗೆ ಶಾಪ ಹಾಕಿದ್ದಾರೆ. ಮಾತುಕತೆಗೆ ಸಿದ್ಧತೆ ನಡೆಯುತ್ತಿರುವಾಗಲೇ ಇಸ್ರೇಲ್ ಮತ್ತು ಪಾಕಿಸ್ತಾನ ನಡುವೆ ವಾಗ್ವಾದ ತಾರಕಕ್ಕೇರಿದೆ. ಅಮೆರಿಕಾ ಮತ್ತು ಇರಾನ್ ನಡುವೆ ಸಂಧಾನ ನಡೆಸಿ ರಾಜಿ ಮಾಡಿಸಿದ್ದು ತಾನೇ ಎಂದು ಬೀಗುತ್ತಿರುವ ಪಾಕಿಸ್ತಾನಕ್ಕೆ ಇಸ್ರೇಲ್ ಮಗ್ಗುಲ ಮುಳ್ಳಾಗಿದೆ. ಪಾಕಿಸ್ತಾನದ ಮಧ್ಯಸ್ಥಿಕೆಯನ್ನು ಇಸ್ರೇಲ್ ತಳ್ಳಿ ಹಾಕಿದೆ. ಇದರ ನಡುವೆಯೇ ಪಾಕಿಸ್ತಾನದ ಸಚಿವ ಆಸಿಫ್ ಖ್ವಾಜಾ ಯುರೋಪಿನ ಯಹೂದಿಗಳಿಂದ ಮುಕ್ತಿ ಪಡೆಯಲು ಪ್ಯಾಲೆಸ್ತೀನ್ ಭೂಮಿಯಲ್ಲಿ ಈ ಕ್ಯಾನ್ಸರ್ ಕಾರಕ ದೇಶವನ್ನು ಸೃಷ್ಟಿಸಿದವರು