ನವದೆಹಲಿ: ಭಾರತದ ಪ್ರಧಾನಿ ಮೋದಿ ಒಂದು ಫೋನ್ ಕರೆ ಮಾಡಿ ಇರಾನ್ ಮತ್ತು ಇಸ್ರೇಲ್ ನಾಯಕರಲ್ಲಿ ಮಾತನಾಡಿದರೆ ಸಾಕು, ಸಮಸ್ತೆ ಬಗೆಹರಿಯುತ್ತದೆ ಎಂದು ಭಾರತದಲ್ಲಿನ ಯುಎಇ ರಾಯಭಾರಿ ಹುಸೇನ್ ಹಸನ್ ಮಿರ್ಜಾ ಹೇಳಿದ್ದಾರೆ. ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಈ ಎರಡೇ ದೇಶಗಳ ನಡುವಿನ ಯುದ್ಧವಾಗಿ ಉಳಿದಿಲ್ಲ. ಇಸ್ರೇಲ್ ಮತ್ತು ಅಮೆರಿಕಾಗೆ ಬೆಂಬಲಿಸುತ್ತಿದೆ ಎಂಬ ಕಾರಣಕ್ಕೆ ಯುಎಇ ಸೇರಿದಂತೆ ಗಲ್ಫ್ ರಾಷ್ಟ್ರಗಳ ಮೇಲೂ ಇರಾನ್ ದಾಳಿ ಮಾಡುತ್ತಿದೆ. ಈ ಬಗ್ಗೆ ಮಾತನಾಡಿರುವ ಹುಸೇನ್ ಮಿರ್ಜಾ ‘ನಾವು ಯಾಕೆ ಈ ಯುದ್ಧದಲ್ಲಿ ಒಳಗೊಂಡಿದ್ದೇವೆ ಎಂಬುದೇ ನನಗೆ ಅರ್ಥವಾಗುತ್ತಿಲ್ಲ.
ಅಹ್ಮದಾಬಾದ್: ಟಿ20 ವಿಶ್ವಕಪ್ ಫೈನಲ್ ಗೆದ್ದು ಟೀಂ ಇಂಡಿಯಾ ಚಾಂಪಿಯನ್ ಆದ ಸಂದರ್ಭದಲ್ಲಿ ಕ್ರಿಕೆಟಿಗ ಹಾರ್ದಿಕ್ ಪಾಂಡ್ಯ ಮತ್ತು ಅವರ ಗೆಳತಿ ಮಹಿಕಾ ವರ್ತನೆ ಟೀಕೆಗೆ ಗುರಿಯಾಗಿದೆ. ನ್ಯೂಜಿಲೆಂಡ್ ವಿರುದ್ಧ ಟಿ20 ವಿಶ್ವಕಪ್ ಫೈನಲ್ ಗೆದ್ದ ಬಳಿಕ ಎಲ್ಲಾ ಆಟಗಾರರ ಸಂಭ್ರಮ ಮುಗಿಲು ಮುಟ್ಟಿತ್ತು. ಎಲ್ಲಾ ಕ್ರಿಕೆಟಿಗರ ಕುಟುಂಬದವರೂ ಮೈದಾನಕ್ಕೆ ಬಂದಿದ್ದರು. ಆದರೆ ಹಾರ್ದಿಕ್ ಮತ್ತು ಅವರ ಗೆಳತಿ ಮಹಿಕಾ ವರ್ತನೆ ಕೆಲವರ ಟೀಕೆಗೆ ಗುರಿಯಾಗಿದೆ. ಮೈದಾನದಲ್ಲಿ ಡ್ಯಾನ್ಸ್ ಮಾಡಿದ್ದಲ್ಲದೆ, ಹಾರ್ದಿಕ್ ಗೆಳತಿಯ ಹೆಗಲಿಗೆ ಕೈ ಹಾಕಿಕೊಂಡು ವಿಚಿತ್ರವಾಗಿ ಕುಣಿಯುತ್ತಿದ್ದರು. ಅಷ್ಟೂ ಸಾಲದೆಂಬಂತೆ ಪೋಡಿಯಂನಲ್ಲಿ ಇಬ್ಬರೂ ಅಕ್ಕಪಕ್ಕ ಮಲಗಿಕೊಂಡು ಬೆಡ್ ರೂಂನಲ್ಲಿರುವಂತೆ ವರ್ತಿಸಿದ್ದರು.
ಬೆಂಗಳೂರು: ಚಾಮರಾಜನಗರದ ಹನೂರು ತಾಲೂಕಿನ ಕೆಂಪಯ್ಯನಹಟ್ಟಿ ಗ್ರಾಮದ ನೀರಿನ ಸಮಸ್ಯೆ ಬಗ್ಗೆ ಮಕ್ಕಳು ಪತ್ರ ಬರೆದು ಮನವಿ ಮಾಡಿದ್ದಕ್ಕೆ ಸ್ಪಂದಿಸಿರುವ ಸಿಎಂ ಸಿದ್ದರಾಮಯ್ಯ 490 ಕೋಟಿ ರೂ. ಅನುದಾನ ಮೀಸಲಿಟ್ಟಿರುವುದಾಗಿ ಘೋಷಿಸಿದ್ದಾರೆ. ನೀರಿನ ಸಮಸ್ಯೆಗೆ ಪರಿಹಾರ ಕೊಡಿಸುವಂತೆ ಕೆಲವು ಮಕ್ಕಳು ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದಿದ್ದರು. ಮಕ್ಕಳ ಕೋರಿಕೆಯ ಮೇರೆಗೆ ಅಧಿಕಾರಿಗಳ ಜೊತೆ ಸಮಾಲೋಚನೆ ನಡೆಸಿದಾಗ ಆ ಹಳ್ಳಿಗೆ ಸಮರ್ಪಕ ನೀರಾವರಿ ಯೋಜನೆಯೊಂದರ ಅಗತ್ಯತೆ ಕಂಡುಬಂದ ಹಿನ್ನೆಲೆಯಲ್ಲಿ ಈ ಸಾಲಿನ ಬಜೆಟ್ ನಲ್ಲಿ "ಉಡುತೊರೆಹಳ್ಳ ನೀರಾವರಿ ಯೋಜನೆ"ಯನ್ನು ಘೋಷಿಸಿ, ರೂ.490 ಕೋಟಿ ಅನುದಾನವನ್ನು ಸಹ ಮೀಸಲಿಟ್ಟಿದ್ದೇನೆ.
ಹೈದರಾಬಾದ್: ಬೆಂಗಳೂರಿನ ಟ್ರಾಫಿಕ್ ಬಗ್ಗೆ ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಆಡಿಕೊಂಡು ತಮಾಷೆ ಮಾಡಿದ್ದಾರೆ. ಇದೀಗ ತೆಲಂಗಾಣ-ಕರ್ನಾಟಕದ ನಾಯಕರ ನಡುವೆ ವಾಗ್ಯುದ್ಧಕ್ಕೆ ಕಾರಣವಾಗಲಿದೆ. ಬೆಂಗಳೂರಿನ ಟ್ರಾಫಿಕ್ ಸಮಸ್ಯೆ ಎಲ್ಲರಿಗೂ ಗೊತ್ತಿರುವಂತಹದ್ದೇ. ಸಾಕಷ್ಟು ನಾಯಕರು, ಸೆಲೆಬ್ರಿಟಿಗಳು, ಜನ ಸಾಮಾನ್ಯರು ಇದರ ಬಗ್ಗೆ ಟ್ರೋಲ್ ಮಾಡಿದ್ದೂ ಇದೆ. ಇದೀಗ ತೆಲಂಗಾಣ ಸಿಎಂ ರೇವಂತ್ ರೆಡ್ಡಿ ನಮ್ಮ ಪರಿಸ್ಥಿತಿ ಬೆಂಗಳೂರಿನಷ್ಟು ಕೆಟ್ಟದಾಗಿಲ್ಲ ಎಂದು ಲೇವಡಿ ಮಾಡಿದ್ದಾರೆ. ಹೈದರಾಬಾದ್ ಟ್ರಾಫಿಕ್ ಗೆ ಬೆಂಗಳೂರಿನ ಟ್ರಾಫಿಕ್ ಹೋಲಿಸುವ ಹಾಗಿಲ್ಲ. ನಾವು ಸಿಂಗಾಪುರ್ ಗೆ ಸ್ಪರ್ಧೆ ನೀಡುವಂತಿದ್ದೇವೆ. ಬೆಂಗಳೂರು ಟ್ರಾಫಿಕ್ ಪರಿಸ್ಥಿತಿ ಕೆಟ್ಟದಾಗಿದೆ.
ಅಹ್ಮದಾಬಾದ್: ಟಿ20 ವಿಶ್ವಕಪ್ ಫೈನಲ್ ನಲ್ಲಿ ಗೆಲುವು ಕಾಣುತ್ತಿದ್ದಂತೇ ರೋಹಿತ್ ಶರ್ಮಾರನ್ನು ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಕಾಪಿ ಮಾಡಿದ್ದಾರೆ. ಕಳೆದ ಬಾರಿ 2024 ರಲ್ಲಿ ಟೀಂ ಇಂಡಿಯಾ ಟಿ20 ವಿಶ್ವಕಪ್ ಚಾಂಪಿಯನ್ ಆಗಿತ್ತು. ಅಮೆರಿಕಾ ಆತಿಥ್ಯದಲ್ಲಿ ನಡೆದಿದ್ದ ಕೂಟದಲ್ಲಿ ಟೀಂ ಇಂಡಿಯಾವನ್ನು ರೋಹಿತ್ ಶರ್ಮಾ ಮುನ್ನಡೆಸಿದ್ದರು. ಬಹಳ ವರ್ಷಗಳ ನಂತರ ಭಾರತ ಐಸಿಸಿ ಟ್ರೋಫಿ ಬರ ನೀಗಿಸಿಕೊಂಡ ಕ್ಷಣವಾಗಿತ್ತು. ಇದೇ ಖುಷಿಯಲ್ಲಿ ಅಂದು ನಾಯಕರಾಗಿದ್ದ ರೋಹಿತ್ ಶರ್ಮಾ ಪಿಚ್ ಬಳಿ ಹೋಗಿ ಅಲ್ಲಿನ ಮಣ್ಣಿನ ಚೂರು ತೆಗೆದು ಬಾಯಿಗೆ ಹಾಕಿಕೊಂಡಿದ್ದರು.
ಬೆಂಗಳೂರು: ಕೋಗಿಲು ಲೇಔಟ್ ನಿವಾಸಿಗಳ ಒತ್ತುವರಿ ವಿವಾದ ವಿಚಾರದಲ್ಲಿ ಕೇರಳ ಸಿಎಂ ಅಣತಿ ಮೇರೆಗೆ ನಡೆದುಕೊಂಡು ಕರ್ನಾಟಕ ಸರ್ಕಾರ ಟೀಕೆಗೆ ಗುರಿಯಾಗಿತ್ತು. ಇದೀಗ ಮತ್ತೆ ಕರ್ನಾಟಕ ಸರ್ಕಾರದ ಕೇರಳ ಪ್ರೀತಿ ಬಯಲಾಗಿದೆ. ಇತರೆ ರಾಜ್ಯಗಳಲ್ಲಿ ಕಡಿಮೆ ಬೆಲೆಗೆ ಟ್ರಾನ್ಸ್ ಫಾರ್ಮರ್ ಇದ್ದರೂ ಕೇರಳದಿಂದ ರಾಜ್ಯಕ್ಕೆ ಬೇಕಾದ ಟ್ರಾನ್ಸ್ ಫಾರ್ಮರ್ ಖರೀದಿ ಮಾಡಲಾಗಿದೆ. ಈ ಬಗ್ಗೆ ಬಿಜೆಪಿ ವಿಧಾನಪರಿಷತ್ ಸದಸ್ಯ ಎನ್ ರವಿಕುಮಾರ್ ಸದನದಲ್ಲಿ ಇಂದು ರಾಜ್ಯ ಸರ್ಕಾರವನ್ನು ಪ್ರಶ್ನೆ ಮಾಡಿದ್ದಾರೆ. ‘ದೆಹಲಿ, ಉತ್ತರಪ್ರದೇಶ, ಮಧ್ಯಪ್ರದೇಶ ಸೇರಿದಂತೆ ಇತರ ರಾಜ್ಯಗಳಲ್ಲಿ ಕಡಿಮೆ ದರಕ್ಕೆ ವಿದ್ಯುತ್ ಲಭ್ಯವಿದ್ದರೂ ರಾಜ್ಯ ಸರ್ಕಾರ ಕೇರಳದಿಂದ ವಿದ್ಯುತ್ ಖರೀದಿಸಿದ್ದು ಯಾಕೆ?
ತಿರುವನಂತಪುರಂ: ಕೇರಳ ವಿಧಾನಸಭೆ ಚುನಾವಣೆಗೆ ಮೊದಲು ಕಾಂಗ್ರೆಸ್ ಪರವಾಗಿ ರಾಹುಲ್ ಗಾಂಧಿ ಪಂಚ ಗ್ಯಾರಂಟಿ ಯೋಜನೆಗಳ ಭರವಸೆ ನೀಡಿದ್ದಾರೆ. ಕೇರಳಕ್ಕೆ ರಾಹುಲ್ ಘೋಷಿಸಿದ ಪಂಚ ಗ್ಯಾರಂಟಿಗಳು ಯಾವುವೆಲ್ಲಾ ನೋಡಿ. ಕರ್ನಾಟಕದಲ್ಲಿ ಗ್ಯಾರಂಟಿ ಯೋಜನೆ ಘೋಷಿಸಿ ಅಧಿಕಾರಕ್ಕೆ ಬಂದ ಬಳಿಕ ಕಾಂಗ್ರೆಸ್ ಎಲ್ಲಾ ರಾಜ್ಯಗಳಲ್ಲಿ ಚುನಾವಣೆಗೆ ಗ್ಯಾರಂಟಿ ಯೋಜನೆಗಳ ಭರವಸೆ ನೀಡಿತ್ತು. ಆದರೆ ಎಲ್ಲಾ ರಾಜ್ಯಗಳಲ್ಲಿ ಇದು ಯಶಸ್ವಿಯಾಗಿಲ್ಲ. ಇದೀಗ ಕೇರಳದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು, ರಾಹುಲ್ ಗಾಂಧಿ ಐದು ಗ್ಯಾರಂಟಿ ಯೋಜನೆಗಳನ್ನು ಘೋಷಿಸಿದ್ದಾರೆ.
ಬೆಂಗಳೂರು: ಕಳೆದ ಕೆಲವು ದಿನಗಳಿಂದ ಚಿನ್ನದ ದರ ಏರಿಕೆ, ಇಳಿಕೆಯಾಗುತ್ತಲೇ ಇದೆ. ಇಂದು ಪರಿಶುದ್ಧ ಚಿನ್ನದ ದರ ಏರಿಕೆಯಾಗಿದ್ದರೆ ಮತ್ತುಇತರೆ ಚಿನ್ನದ ದರ ಇಳಿಕೆಯಾಗಿದೆ. ಇಂದು ಪರಿಶುದ್ಧ ಚಿನ್ನದ ದರ ಮತ್ತು ಇತರೆ ಚಿನ್ನದ ದರ ವಿವರ ಇಲ್ಲಿದೆ ನೋಡಿ. ಚಿನ್ನದ ದರ ಏರಿಕೆಕಳೆದ ವಾರ ಪರಿಶುದ್ಧ ಚಿನ್ನದ ದರ ಸತತವಾಗಿ ಬೆಲೆ ಏರಿಳಿಕೆಯಾಗುತ್ತಲೇ ಇತ್ತು. ಆದರೆ ಈ ವಾರದ ಆರಂಭದಲ್ಲೇ ಪರಿಶುದ್ಧ ಚಿನ್ನದ ದರ ಭಾರೀ ಏರಿಕೆಯಾಗಿತ್ತು. ಪರಿಶುದ್ಧ ಚಿನ್ನದ ದರ ಮೊನ್ನೆ 1,63,955.00 ರೂ.ಗಳಿತ್ತು. ಆದರೆ ಇಂದು ಏರಿಕೆಯಾಗಿದ್ದು 1,66,240.00 ರೂ.ಗಳಷ್ಟಿದೆ.
ಅಹ್ಮದಾಬಾದ್: ನ್ಯೂಜಿಲೆಂಡ್ ವಿರುದ್ಧ ನಿನ್ನೆ ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಟೀಂ ಇಂಡಿಯಾ ಕೊನೆಯ ವಿಕೆಟ್ ಕಿತ್ತಾಗ ಕಾಮೆಂಟೇಟರ್ ರವಿಶಾಸ್ತ್ರಿ ಮಾಡಿದ ಈ ಎಡವಟ್ಟು ಅವರನ್ನು ಜೀವನದಲ್ಲಿ ಯಾವತ್ತೂ ಕಾಡದೇ ಬಿಡಲ್ಲ. ಅಂತಹದ್ದೇನಾಯ್ತು ಈ ವಿಡಿಯೋ ನೋಡಿ. ನಿನ್ನೆ 255 ರನ್ ಗಳ ಬೃಹತ್ ಮೊತ್ತ ಬೆನ್ನತ್ತಿದ್ದ ನ್ಯೂಜಿಲೆಂಡ್ 19 ಓವರ್ ಗಳಲ್ಲಿ 159 ರನ್ ಗಳಿಗೆ ಆಲೌಟ್ ಆಗಿತ್ತು. ಅಭಿಷೇಕ್ ಶರ್ಮಾ ಆ ಓವರ್ ಬೌಲಿಂಗ್ ಮಾಡಿದ್ದರು. ಕೊನೆಯ ಎಸೆತದಲ್ಲಿ ಅವರು ನ್ಯೂಜಿಲೆಂಡ್ ಬ್ಯಾಟಿಗ ಜೇಕಬ್ ಅವರನ್ನು ಔಟ್ ಮಾಡಿದ್ದರು.
ಅಹ್ಮದಾಬಾದ್: ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಟೀಂ ಇಂಡಿಯಾ ಬೌಲರ್ ಅರ್ಷ್ ದೀಪ್ ಸಿಂಗ್ ಮೈಗೇ ಚೆಂಡು ಬಿಸಾಕಿದ್ದಕ್ಕೆ ನ್ಯೂಜಿಲೆಂಡ್ ಬ್ಯಾಟಿಗ ಡೆರಿಲ್ ಮಿಚೆಲ್ ಸಿಟ್ಟಿಗೆದ್ದ ಪ್ರಸಂಗ ನಡೆದಿತ್ತು. ಈ ವಿಡಿಯೋ ಇಲ್ಲಿದೆ ನೋಡಿ. ನಿನ್ನೆಯ ಪಂದ್ಯದಲ್ಲಿ ಟೀಂ ಇಂಡಿಯಾ ಮೊದಲು ಬ್ಯಾಟಿಂಗ್ ಮಾಡಿ 255 ರನ್ ಗಳಿಸಿತ್ತು. ಈ ಬೃಹತ್ ಮೊತ್ತ ಬೆನ್ನತ್ತುವುದು ಅಷ್ಟು ಸುಲಭವಾಗಿರಲಿಲ್ಲ. ಚೇಸ್ ಮಾಡುವ ತಂಡದ ಮೇಲೆ ಸಹಜವಾಗಿಯೇ ಒತ್ತಡವಿರುತ್ತದೆ. ಆದರೆ ನ್ಯೂಜಿಲೆಂಡ್ ಗೆ ನಿನ್ನೆ ಬ್ಯಾಟಿಗರು ಕೈಕೊಟ್ಟಿದ್ದರು. ಆದರೆ ಡೆರಿಲ್ ಮಿಚೆಲ್-ಮಿಚೆಲ್ ಸ್ಯಾಂಟ್ನೆರ್ ಜೋಡಿ ಸಣ್ಣ ಜೊತೆಯಾಟವಾಡಿದ್ದರು.
ಅಹ್ಮದಾಬಾದ್: ಟೀಂ ಇಂಡಿಯಾ ಟಿ20 ವಿಶ್ವಕಪ್ ಗೆದ್ದ ಬಳಿಕ ಪ್ರತಿಕ್ರಿಯಿಸಿರುವ ಮಾಜಿ ನಾಯಕ ಎಂಎಸ್ ಧೋನಿ ಕೋಚ್ ಸಾಬ್ ನಗು ಚೆನ್ನಾಗಿದೆ ಎಂದು ಗಂಭೀರ್ ರನ್ನು ಪ್ರಶಂಸಿಸಿದ್ದಲ್ಲದೆ, ಬುಮ್ರಾ ಬಗ್ಗೆ ಏನೂ ಮಾತಾಡೋ ಹಾಗೇ ಇಲ್ಲ ಎಂದಿದ್ದಾರೆ. ನಿನ್ನೆ ಅಹ್ಮದಾಬಾದ್ ನಲ್ಲಿ ನಡೆದಿದ್ದ ಫೈನಲ್ ಪಂದ್ಯ ವೀಕ್ಷಿಸಲು ಧೋನಿ ಮೈದಾನಕ್ಕೆ ಬಂದಿದ್ದರು. ಭಾರತಕ್ಕೆ ವಿಶ್ವಕಪ್ ಗೆದ್ದುಕೊಟ್ಟ ನಾಯಕರಾದ ಧೋನಿ, ರೋಹಿತ್ ಶರ್ಮಾ, ಕಪಿಲ್ ದೇವ್ ಒಟ್ಟಿಗೇ ಪಂದ್ಯ ವೀಕ್ಷಿಸಿದ್ದು ವಿಶೇಷವಾಗಿತ್ತು.
ಅಹ್ಮದಾಬಾದ್: ಕ್ರಿಕೆಟ್ ನಲ್ಲಿ ರೋಹಿತ್ ಶರ್ಮಾ ಬಾಸ್ ಇರಬಹುದು. ಆದರೆ ಹೆಂಡತಿ ಎಂದು ಬಂದಾಗ ಅವರದ್ದೂ ಕತೆ ಇಷ್ಟೇನೇ.. ಹೀಗೊಂದು ಫನ್ನಿ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಅಹ್ಮದಾಬಾದ್ ನಲ್ಲಿ ನಡೆದಿದ್ದ ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೆ ಐಸಿಸಿ ಟಿ20 ವಿಶ್ವಕಪ್ ರಾಯಭಾರಿಯೂ ಆಗಿರುವ ರೋಹಿತ್ ಶರ್ಮಾ ಪತ್ನಿ ಸಮೇತ ಬಂದಿದ್ದರು. ಪಂದ್ಯ ಮುಗಿದ ಬಳಿಕ ರೋಹಿತ್ ಪತ್ನಿ ಜೊತೆಗೆ ಮೈದಾನದಲ್ಲಿದ್ದರು. ಈ ವೇಳೆ ರೋಹಿತ್ ಶರ್ಮಾಗೆ ಮೈದಾನದಿಂದ ಹೊರಗೆ ಹೋಗಲು ಇಷ್ಟವಿರಲಿಲ್ಲ. ಆದರೆ ಪತ್ನಿಗೆ ಅಲ್ಲಿಯೇ ಇರಲು ಇಷ್ಟವಿರಲಿಲ್ಲವೇನೋ. ಹೀಗಾಗಿ ಹೋಗೋಣ ಎಂದು ಪತಿಯ ಬಳಿ ಹೇಳುತ್ತಿದ್ದರು.
ಟೆಹ್ರಾನ್: ಆಯತೊಲ್ಲಾ ಖಮೇನಿ ಸಾವಿನ ಬಳಿಕ ಅಧಿಕೃತವಾಗಿ ತನ್ನ ಪರಮೋಚ್ಛ ನಾಯಕ ಯಾರು ಎಂದು ಇರಾನ್ ಘೋಷಿಸಿದೆ. ಇಸ್ರೇಲ್-ಅಮೆರಿಕಾ ನಡೆಸಿದ ದಾಳಿಯಲ್ಲಿ ಖಮೇನಿ ಸಾವನ್ನಪ್ಪಿದ್ದರು. ಅಯತೊಲ್ಲಾ ಖಮೇನಿ ಸ್ಥಾನಕ್ಕೆ ಇರಾನ್ ಪರಮೋಚ್ಛ ನಾಯಕನಾಗಿ ಅವರ ಎರಡನೇ ಪುತ್ರ ಮೊಜ್ತಬಾ ಖಮೇನಿಯನ್ನು ಆಯ್ಕೆ ಮಾಡಲಾಗಿದೆ ಎಂದು ಇರಾನ್ ಅಧಿಕೃತವಾಗಿ ಘೋಷಣೆ ಮಾಡಿದೆ. ಕಳೆದ ಮೂರು ನಾಲ್ಕು ದಿನಗಳಿಂದ ಮೊಜ್ತಬಾ ಹೆಸರು ಬಹುತೇಕ ಫೈನಲ್ ಆಗಿತ್ತು. ಮೊಜ್ತಬಾ ಹೆಸರು ಚಾಲ್ತಿಗೆ ಬರುತ್ತಿದ್ದಂತೇ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯಾರೇ ಪರಮೋಚ್ಛ ನಾಯಕನಾದರೂ ಅವರನ್ನು ಕೊಲ್ಲುವುದು ನಮ್ಮ ಟಾರ್ಗೆಟ್ ಎಂದಿದ್ದರು.
ಅಹ್ಮದಾಬಾದ್: ಟಿ20 ವಿಶ್ವಕಪ್ ಫೈನಲ್ ಅಹ್ಮದಾಬಾದ್ ನಲ್ಲಿ ನಡೆಯಲಿದೆ ಎಂದಾಗ ಎಷ್ಟೋ ಅಭಿಮಾನಿಗಳು ವಿರೋಧ ವ್ಯಕ್ತಪಡಿಸಿದ್ದರು. ಇದಕ್ಕೆ ಕಾರಣ 2023 ರ ಏಕದಿನ ವಿಶ್ವಕಪ್ ಫೈನಲ್ ಸೋಲು. ಆದರೆ ಈಗ ಅಂದಿನ ಶಾಪ ಕಳೆಯಲು ಇದೇ ಕಾರಣವಾ ಎಂಬ ಚರ್ಚೆ ಶುರುವಾಗಿದೆ. 2023 ರಲ್ಲಿ ರೋಹಿತ್ ಶರ್ಮಾ ನೇತೃತ್ವದಲ್ಲಿ ಟೀಂ ಇಂಡಿಯಾ ಒಂದೇ ಒಂದು ಪಂದ್ಯ ಸೋಲದೇ ಫೈನಲ್ ಗೇರಿತ್ತು. ಆದರೆ ಫೈನಲ್ ನಲ್ಲಿ ಎಲ್ಲರ ನಿರೀಕ್ಷೆ ತಲೆಕೆಳಗಾಗಿ ಆಸ್ಟ್ರೇಲಿಯಾ ವಿರುದ್ಧ ಸೋತು ಟೀಂ ಇಂಡಿಯಾ ಕಪ್ ಸೋತಿತ್ತು. ಇದು ಆಟಗಾರರಿಗೆ ಮಾತ್ರವಲ್ಲ ಭಾರತೀಯ ಫ್ಯಾನ್ಸ್ ಗೂ ಆಘಾತವುಂಟು ಮಾಡಿತ್ತು.
ಅಹ್ಮದಾಬಾದ್: ಟೀಂ ಇಂಡಿಯಾ ಸತತ ಎರಡನೇ ಬಾರಿಗೆ ಟಿ20 ವಿಶ್ವಕಪ್ ಗೆದ್ದ ಬಳಿಕ ಕೋಚ್ ಗೌತಮ್ ಗಂಭೀರ್ ಗೆಲುವಿನ ಕ್ರೆಡಿಟ್ ನ್ನು ಕನ್ನಡಿಗ ಸೇರಿ ಇಬ್ಬರಿಗೆ ಅರ್ಪಿಸಿದ್ದಾರೆ. ನ್ಯೂಜಿಲೆಂಡ್ ನ್ನು ಫೈನಲ್ ಪಂದ್ಯದಲ್ಲಿ ಸೋಲಿಸಿದ ಟೀಂ ಇಂಡಿಯಾ ಸತತ ಎರಡನೇ ಬಾರಿಗೆ ವಿಶ್ವಕಪ್ ಗೆದ್ದು ದಾಖಲೆ ಮಾಡಿತು. ಇದುವರೆಗೆ ಯಾವ ತಂಡವೂ ಸತತವಾಗಿ ಎರಡು ಬಾರಿ ಟಿ20 ವಿಶ್ವಕಪ್ ಗೆದ್ದಿಲ್ಲ. ಯಾವ ತಂಡವೂ ತವರಿನಲ್ಲಿ ವಿಶ್ವಕಪ್ ಗೆದ್ದಿರಲಿಲ್ಲ. ಅಲ್ಲದೆ ಟೀಂ ಇಂಡಿಯಾ ಅತೀ ಹೆಚ್ಚು ಬಾರಿ ಟಿ20 ವಿಶ್ವಕಪ್ ಗೆದ್ದ ದಾಖಲೆ ಮಾಡಿತು.
ಗೆಳೆಯನಿಗಾಗಿ ತನ್ನ ಧೈರ್ಯವೆಲ್ಲಾ ಒಗ್ಗೂಡಿಸಿ ಪುಟಾಣಿ ಬಾಲಕನೊಬ್ಬ ಹೀರೋ ಆದ ವಿಡಿಯೋವೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಅಷ್ಟಕ್ಕೂ ಆಗಿದ್ದೇನು ಈ ವಿಡಿಯೋ ನೋಡಿ. ಮಕ್ಕಳು ಅದರಲ್ಲೂ ವಿಶೇಷವಾಗಿ ಹುಡುಗರು ಸಾಹಸದ ಆಟಗಳನ್ನೇ ಆಡೋದು. ಚಿಕ್ಕವರಿದ್ದಾಗ ನೀವೂ ಈ ರೀತಿ ಗೇಟ್ ಗೆ ನೇತಾಡಿಕೊಂಡು ಆಡುವ ಆಟ ಆಡಿರುತ್ತೀರಿ. ಅದೇ ರೀತಿ ಈ ಇಬ್ಬರು ಬಾಲಕರೂ ಮಾಡುತ್ತಿದ್ದರು. ಆದರೆ ದುರದೃಷ್ಟಕ್ಕೆ ಒಬ್ಬಾತ ಆಡುತ್ತಿದ್ದ ಗೇಟ್ ಮುರಿದು ಬಿತ್ತು. ಈ ವೇಳೆ ಬಾಲಕ ಆ ಗೇಟ್ ಕೆಳಗೆ ಸಿಕ್ಕಿ ಹಾಕಿಕೊಳ್ಳುತ್ತಾನೆ.
ಬಹುಮಹಡಿ ಕಟ್ಟಡದಿಂದ ಜಾರಿದ್ದ ಪುಟಾಣಿ ಮಗುವನ್ನು ವ್ಯಕ್ತಿಯೊಬ್ಬ ಜೀವದ ಹಂಗು ತೊರೆದು ರಕ್ಷಿಸಿದ ಮೈ ಜುಮ್ ಎನಿಸುವ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಕಝಕಿಸ್ತಾನದಲ್ಲಿ ಈ ಘಟನೆ ನಡೆದಿದೆ. ಕೆಲವೊಮ್ಮೆ ಮಕ್ಕಳು ಆಟವಾಡುವಾಗ ಅನಾಹುತ ಮಾಡಿಕೊಳ್ಳುತ್ತಾರೆ. ಅದರಲ್ಲೂ ಬಹುಮಹಡಿ ಕಟ್ಟಡದಲ್ಲಿ ಆಡುವಾಗ ಮಕ್ಕಳ ಬಗ್ಗೆ ಮೈ ಎಲ್ಲಾ ಕಣ್ಣಾಗಿ ಕಾವಲಿರಬೇಕು. ಇದೇ ರೀತಿ ಮೂರು ವರ್ಷದ ಪುಟಾಣಿ ಮಗುವೊಂದು ಆಟವಾಡುವಾಗ ಕಾಲು ಜಾರಿದೆ. ಪರಿಣಾಮ ಬಹುಮಹಡಿ ಕಟ್ಟಡದಲ್ಲಿ ಗ್ರಿಲ್ ಹಿಡಿದು ನೇತಾಡುತ್ತಿತ್ತು. ಕೆಳಗೆ ಬಿದ್ದರೆ ಪ್ರಪಾತ. ಮಗುವಿನ ಪ್ರಾಣ ಉಳಿಯುವುದು ಸಾಧ್ಯವೇ ಇಲ್ಲ ಎನ್ನುವ ಸ್ಥಿತಿ.
ಅಹ್ಮದಾಬಾದ್: ಈ ಟಿ20 ವಿಶ್ವಕಪ್ ನಲ್ಲಿ ತಮ್ಮ ಭರ್ಜರಿ ಪ್ರದರ್ಶನಕ್ಕೆ ಕಾರಣ ಯಾರು ಎಂದು ಟೀಂ ಇಂಡಿಯಾ ಆರಂಭಿಕ ಸಂಜು ಸ್ಯಾಮ್ಸನ್ ಬಹಿರಂಗಪಡಿಸಿದ್ದಾರೆ. ಟಿ20 ವಿಶ್ವಕಪ್ ಗೆ ಮೊದಲು ನಡೆದಿದ್ದ ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ ಟೀಂ ಇಂಡಿಯಾ ಪರ ಆರಂಭಿಕರಾಗಿ ಮೂರು ಪಂದ್ಯಗಳಲ್ಲಿ ಅವಕಾಶ ಪಡೆದಿದ್ದರೂ ಕಳಪೆ ಪ್ರದರ್ಶನ ನೀಡಿ ಸಂಜು ತೀರಾ ಟೀಕೆಗೆ ಗುರಿಯಾಗಿದ್ದರು. ಈ ಆಟಗಾರನನ್ನು ಟಿ20 ವಿಶ್ವಕಪ್ ತಂಡದಲ್ಲಿ ಯಾಕೆ ಹಾಕಿದ್ರು ಎಂದು ಅಭಿಮಾನಿಗಳೇ ಹಿಡಿಶಾಪ ಹಾಕಿದ್ದರು.
ಬೆಂಗಳೂರು: ಕಳೆದ ವಾರದಿಂದ ತಾಪಮಾನದಲ್ಲಿ ದಿನೇ ದಿನೇ ಏರಿಕೆಯಾಗುತ್ತಿದೆ. ಈ ವಾರವಂತೂ ಕೆಲವು ಜಿಲ್ಲೆಗಳಲ್ಲಿ ತಾಪಮಾನ ವಿಪರೀತ ಎನಿಸುವಷ್ಟು ಏರಿಕೆಯಾಗಲಿದೆ. ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಎಲ್ಲಾ ಜಿಲ್ಲೆಗಳಲ್ಲಿ ಈಗ ಬಿಸಿಲಿನ ತಾಪ ಸುಡುತ್ತಿದೆ. ಕಳೆದ ವಾರದಿಂದ ತಾಪಮಾನದಲ್ಲಿ ಕೊಂಚವೇ ಏರಿಕೆಯಾಗುತ್ತಲೇ ಇದೆ. ಈ ವಾರದ ಅಂತ್ಯಕ್ಕೆ ತಾಪಮಾನದಲ್ಲಿ ಮತ್ತಷ್ಟು ಏರಿಕೆ ನಿರೀಕ್ಷಿಸಬಹುದಾಗಿದೆ ಎಂದು ಹವಾಮಾನ ವರದಿಗಳು ಹೇಳುತ್ತಿವೆ. ಈ ವಾರ ರಾಜ್ಯದ ಸರಾಸರಿ ಗರಿಷ್ಠ ತಾಪಮಾನ ಆರಂಭದಲ್ಲಿ 31-32 ಡಿಗ್ರಿಯಷ್ಟು ಕಂಡುಬಂದರೆ ಕನಿಷ್ಠ ತಾಪಮಾನ 17 ಡಿಗ್ರಿಯಷ್ಟಿರಲಿದೆ.
ಸೋಮವಾರ ಶಿವನಿಗೆ ವಿಶೇಷವಾದ ದಿನವಾಗಿದ್ದು, ಇಂದು ಕಾಶೀ ವಿಶ್ವನಾಥ ಸ್ವಾಮಿಯ ಕುರಿತಾದ ವಿಶ್ವನಾಥಾಷ್ಟಕಂ ಸ್ತೋತ್ರವನ್ನು ಓದಿ. ಇದರಿಂದ ಆರೋಗ್ಯ, ಆಯುಷ್ಯ ವೃದ್ಧಿಯಾಗುತ್ತದೆ.ಗಂಗಾ ತರಂಗ ರಮಣೀಯ ಜಟಾ ಕಲಾಪಂಗೌರೀ ನಿರಂತರ ವಿಭೂಷಿತ ವಾಮ ಭಾಗಂನಾರಾಯಣ ಪ್ರಿಯಮನಂಗ ಮದಾಪಹಾರಂವಾರಾಣಶೀ ಪುರಪತಿಂ ಭಜ ವಿಶ್ವನಾಥಮ್ ॥ 1 ॥ ವಾಚಾಮಗೋಚರಮನೇಕ ಗುಣ ಸ್ವರೂಪಂವಾಗೀಶ ವಿಷ್ಣು ಸುರ ಸೇವಿತ ಪಾದ ಪದ್ಮಂವಾಮೇಣ ವಿಗ್ರಹ ವರೇನ ಕಲತ್ರವಂತಂವಾರಾಣಶೀ ಪುರಪತಿಂ ಭಜ ವಿಶ್ವನಾಥಮ್ ॥ 2 ॥ ಭೂತಾದಿಪಂ ಭುಜಗ ಭೂಷಣ ಭೂಷಿತಾಂಗಂವ್ಯಾಘ್ರಾಂಜಿನಾಂ ಬರಧರಂ, ಜಟಿಲಂ, ತ್ರಿನೇತ್ರಂಪಾಶಾಂಕುಶಾಭಯ ವರಪ್ರದ ಶೂಲಪಾಣಿಂವಾರಾಣಶೀ ಪುರಪತಿಂ ಭಜ ವಿಶ್ವನಾಥಮ್ ॥ 3 ॥
ಅಹ್ಮದಾಬಾದ್: ನ್ಯೂಜಿಲೆಂಡ್ ತಂಡವನ್ನು ಸೋಲಿಸಿ ಟೀಂ ಇಂಡಿಯಾ ಸತತ 2 ನೇ ಬಾರಿಗೆ ವಿಶ್ವಚಾಂಪಿಯನ್ ಆಗಿ ಹೊರಹೊಮ್ಮಿದೆ. ಫೈನಲ್ ಪಂದ್ಯವನ್ನು ಟೀಂ ಇಂಡಿಯಾ 96 ರನ್ ಗಳಿಂದ ಗೆದ್ದುಕೊಂಡಿದೆ. ಇಂದು ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ 255 ರನ್ ಗಳ ದಾಖಲೆಯ ಮೊತ್ತ ಪೇರಿಸಿತು. ಟಿ20 ವಿಶ್ವಕಪ್ ಫೈನಲ್ ನಲ್ಲಿ ಇದು ಗರಿಷ್ಠ ಸ್ಕೋರ್ ಆಗಿತ್ತು. ಸಂಜು ಸ್ಯಾಮ್ಸಮ್, ಅಭಿಷೇಕ್ ಶರ್ಮಾ, ಇಶಾನ್ ಕಿಶನ್ ಅರ್ಧಶತಕ ಮತ್ತು ಶಿವಂ ದುಬೆ ಬಿರುಸಿನ 26 ರನ್ ಗಳಿಂದ ಟೀಂ ಇಂಡಿಯಾ ಬೃಹತ್ ಮೊತ್ತ ಕಲೆ ಹಾಕಿತು.
ಅಹ್ಮದಾಬಾದ್: ಟಿ20 ವಿಶ್ವಕಪ್ ಫೈನಲ್ ಪಂದ್ಯ ಗೆಲ್ಲಲು ನ್ಯೂಜಿಲೆಂಡ್ ಗೆ ಟೀಂ ಇಂಡಿಯಾ 256 ರನ್ ಗಳ ಗೆಲುವಿನ ಗುರಿ ನೀಡಿದೆ. ಮತ್ತೆ ಮಿಂಚಿದ ಸಂಜು ಸ್ಯಾಮ್ಸನ್ ಟೀಂ ಇಂಡಿಯಾ ಬೃಹತ್ ಮೊತ್ತ ಪೇರಿಸಲು ನೆರವಾದರು. ಇಂದು ಟಾಸ್ ಗೆದ್ದು ನ್ಯೂಜಿಲೆಂಡ್ ಮೊದಲು ಫೀಲ್ಡಿಂಗ್ ಆಯ್ದುಕೊಂಡಿತು. ಆರಂಭಿಕ ಎರಡು ಓವರ್ ಗಳಲ್ಲಿ ಎಚ್ಚರಿಕೆಯ ಆಟವಾಡಿದ ಟೀಂ ಇಂಡಿಯಾ ಆರಂಭಿಕರು ಬಳಿಕ ಹೊಡೆತಕ್ಕೆ ಕೈಹಾಕಿದರು. ವಿಶೇಷವೆಂದರೆ ಇಷ್ಟು ದಿನ ಔಟ್ ಆಫ್ ಫಾರ್ಮ್ ನಲ್ಲಿದ್ದ ಅಭಿಷೇಕ್ ಶರ್ಮಾ ಇಂದು ಫಾರ್ಮ್ ಗೆ ಮರಳಿದರು. ಇಂದು 21 ಎಸೆತ ಎದುರಿಸಿದ ಅವರು 52 ರನ್ ಗಳಿಸಿ ಔಟಾದರು.
ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಟಿ20 ವಿಶ್ವಕಪ್ ಫೈನಲ್ನಲ್ಲಿ ನ್ಯೂಜಿಲೆಂಡ್ ನಾಯಕ ಮಿಚೆಲ್ ಸ್ಯಾಂಟ್ನರ್ ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡರು.ವಾಂಖೆಡೆ ಸ್ಟೇಡಿಯಂನಲ್ಲಿ ಮೆನ್ ಇನ್ ಬ್ಲೂ 253 ರನ್ಗಳನ್ನು ಸಿಡಿಸಿದ ನಂತರ ಇಂಗ್ಲೆಂಡ್ ವಿರುದ್ಧದ ಸೆಮಿಫೈನಲ್ ಕೇವಲ ಏಳು ರನ್ಗಳಿಂದ ಗೆದ್ದು ಪ್ರವೇಶಿಸಿತು.ಮತ್ತೊಂದೆಡೆ, ಆ ಹಂತದಲ್ಲಿ ಈವೆಂಟ್ನಲ್ಲಿ ಅಜೇಯ ತಂಡವಾಗಿದ್ದ ದಕ್ಷಿಣ ಆಫ್ರಿಕಾದ ಮೇಲೆ ಸೆಮಿಸ್ನಲ್ಲಿ ನಾಕೌಟ್ ಪಂಚ್
ಚಿತ್ತಾಪುರ: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸರ್ವಾಧಿಕಾರಿಯಾಗಿದ್ದು, ಎಫ್ಸ್ಟೀನ್ ಫೈಲ್ನಲ್ಲಿ ಪ್ರಧಾನಿ ನರೇಂದ್ರ ಮೋದಿ ಹೆಸರು ಬಂದಿರುವುದರಿಂದ ಟ್ರಂಪ್ ತಾಳಕ್ಕೆ ತಕ್ಕಂತೆ ಕುಣಿಯುವ ಗುಲಾಮರಾಗಿದ್ದಾರೆಂದು ಎಐಸಿಸಿ ಅಧ್ಯಕ್ಷ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಆಕ್ರೋಶ ಹೊರಹಾಕಿದರು. ಚಿತ್ತಾಪುರ ಪಟ್ಟಣದಲ್ಲಿ ಭಾನುವಾರ ಆಯೋಜನೆ ಮಾಡಿದ್ದ ₹ 1069 ಕೋಟಿ ಮೊತ್ತದ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡುವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಟ್ರಂಪ್ ಜೊತೆ ಸ್ನೇಹ ಮಾಡಿಕೊಂಡು ನಮ್ಮ ದೇಶವನ್ನು ಗಿರವಿ ಇಟ್ಟಿದ್ದಾರೆ’ ಎಂದು ಎಐಸಿಸಿ ಅಧ್ಯಕ್ಷ, ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಆಕ್ರೋಶ ವ್ಯಕ್ತಪಡಿಸಿದರು.
ಅಹಮದಾಬಾದ್: ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿರುವ ಈ ಹೈ-ವೋಲ್ಟೇಜ್ ಪಂದ್ಯಕ್ಕಾಗಿ ಎಲ್ಲರೂ ಕಾತರದಿಂದ ಕಾಯುತ್ತಿದ್ದಾರೆ. ಹಾಲಿ ಚಾಂಪಿಯನ್ ಭಾರತ ತಂಡವು ಟಿ20 ವಿಶ್ವಕಪ್ ಅನ್ನು ಉಳಿಸಿಕೊಳ್ಳಲು ಹೋರಾಟ ನಡೆಸಲಿದೆ. ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಸೆಮಿಫೈನಲ್ನಲ್ಲಿ ಇಂಗ್ಲೆಂಡ್ ವಿರುದ್ಧ 253 ಗಳಿಸಿದ್ದ ಭಾರತ ಸದೃಢ ತಂಡವಾಗಿ ಫೈನಲ್ಗೆ ಪ್ರವೇಶಿಸಲಿದೆ. ನ್ಯೂಜಿಲೆಂಡ್ ತಂಡವು ಹಾಲಿ ರನ್ನರ್ ಅಪ್ ದಕ್ಷಿಣ ಆಫ್ರಿಕಾ ತಂಡವನ್ನು ಮಣಿಸಿ ಪ್ರಶಸ್ತಿ ಸುತ್ತು ಪ್ರವೇಶಿಸಿದೆ.ಅಹಮದಾಬಾದ್ ಕ್ರೀಡಾಂಗಣದಲ್ಲಿ ಭಾರತೀಯ ಅಭಿಮಾನಿಗಳನ್ನು ಸ್ತಬ್ಧಗೊಳಿಸುತ್ತೇವೆ ಎಂದ ನ್ಯೂಜಿಲೆಂಡ್ ನಾಯಕ ಮಿಚೆಲ್ ಸ್ಯಾಂಟ್ನರ್ ಹೇಳಿಕೆಗೆ ಭಾರತೀಯ ನಾಯಕ ಸೂರ್ಯಕುಮಾರ್ ಯಾದವ್ ಕೌಂಟರ್ ಕೊಟ್ಟಿದ್ದಾರೆ.
ಪಟ್ನಾ: ಬಿಹಾರ ರಾಜಕಾರಣದಲ್ಲಿ ಮಿಂಚಿನ ಸಂಚಲನ ನಡೆಯುತ್ತಿದೆ. ಕಳೆದ 20 ವರ್ಷಗಳಿಂದ ಮುಖ್ಯಮಂತ್ರಿಯಾಗಿದ್ದ ನಿತೀಶ್ ಕುಮಾರ್ ಅವರು ರಾಜ್ಯಸಭೆಗೆ ಪ್ರವೇಶಿಸಲು ಸಜ್ಜಾಗಿದ್ದಾರೆ. ಈ ಮಧ್ಯೆ ಅವರ ಪುತ್ರ ಜೆಡಿಯು ಪಕ್ಷ ಸೇರುವ ಮೂಲಕ ಹೊಸ ಅಲೆಯನ್ನು ಸೃಷ್ಟಿಸಿದ್ದಾರೆ. ನಿತೀಶ್ ಕುಮಾರ್ ಅವರ ಪುತ್ರ ನಿಶಾಂತ್ ಕುಮಾರ್ ಇಂದು ಜನತಾದಳ ಯುನೈಟೆಡ್ ಸೇರುವ ಮೂಲಕ ತಮ್ಮ ರಾಜಕೀಯ ಜೀವನವನ್ನು ಆರಂಭಿಸಿದ್ದಾರೆ. ಪಾಟ್ನಾದ ಜೆಡಿಯು ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ನಿಶಾಂತ್ ಸದಸ್ಯತ್ವವನ್ನು ಸ್ವೀಕರಿಸಿದರು. ಪಕ್ಷದ ರಾಷ್ಟ್ರೀಯ ಕಾರ್ಯಕಾರಿ ಅಧ್ಯಕ್ಷ ಸಂಜಯ್ ಕುಮಾರ್ ಝಾ ಮತ್ತು ಕೇಂದ್ರ ಸಚಿವ ಲಲ್ಲನ್ ಸಿಂಗ್ ಸದಸ್ಯತ್ವವನ್ನು ನೀಡಿದರು. ಈ ಮೂಲಕ ನಿತೀಶ್ ಕುಮಾರ್ ಪುತ್ರನಿಗೆ ಪಟ್ಟಾಭಿಷೇಕ ಮಾಡಲು ವೇದಿಕೆ ಸಜ್ಜು ಮಾಡಿದ್ದಾರೆ.
ಅಹಮದಾಬಾದ್: ಟಿ20 ವಿಶ್ವಕಪ್ ಫೈನಲ್ ಹಣಾಹಣಿಗೆ ಕ್ಷಣಗಣನೆ ಆರಂಭವಾಗಲಿದೆ. ಇಂದು ಸಂಜೆ 7 ಗಂಟೆಗೆ ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಹೈವೋಲ್ಟೇಜ್ ಪಂದ್ಯ ನಡೆಯಲಿದೆ. ಈ ಮಧ್ಯೆ ಭಾರತೀಯರ ನೋಟ ಅಭಿಷೇಕ್ ಶರ್ಮಾ ಮೇಲಿದೆ. ವಿಶ್ವದ ನಂಬರ್ ಒನ್ ಬ್ಯಾಟರ್ ಆಗಿದ್ದ ಅಭಿಷೇಕ್ ಶರ್ಮಾ ಅವರು ಈ ಪಂದ್ಯದಲ್ಲಿ ಆಡುತ್ತಾರೋ? ಇಲ್ವೋ ಎನ್ನುವುದು ಈಗ ದೊಡ್ಡ ಮಟ್ಟದಲ್ಲಿ ಚರ್ಚೆಯಾಗುತ್ತಿದೆ. ಇದಕ್ಕೆ ಕಾರಣ ಆರಂಭಿಕ ಆಟಗಾರನಾಗಿ ಅಭಿಷೇಕ್ ಶರ್ಮಾ ಕಳಪೆ ಪ್ರದರ್ಶನ ನೀಡುತ್ತಿರುವುದು. ಫೈನಲ್ ಪಂದ್ಯಕ್ಕೆ ಟೀಂ ಇಂಡಿಯಾ ಅಭಿಷೇಕ್ ಶರ್ಮಾ ಜಾಗಕ್ಕೆ ರಿಂಕು ಸಿಂಗ್ ಅವರನ್ನು ಆಡಿಸುತ್ತಾ ಎಂಬ ಪ್ರಶ್ನೆ ಎದ್ದಿದೆ.ಟಿ20 ವಿಶ್ವಕಪ್ ಟೂರ್ನಿಯಲ್ಲಿ 7 ಪಂದ್ಯಗಳಲ್ಲಿ ಕೇವಲ 89 ರನ್ ಹೊಡೆದಿದ್ದಾರೆ. ಈ ಪೈಕಿ ಅಮೆರಿಕ, ಪಾಕಿಸ್ತಾನ, ನೆದರ್ಲ್ಯಾಂಡ್ಸ್ ವಿರುದ್ಧ ಸೊನ್ನೆಗೆ ಔಟಾದರೆ ದಕ್ಷಿಣ ಆಫ್ರಿಕಾ ವಿರುದ್ಧ 15 ರನ್, ವೆಸ್ಟ್ ಇಂಡೀಸ್ ವಿರುದ್ಧ 10 ರನ್, ಸೆಮಿಫೈನಲ್ನಲ್ಲಿ ಇಂಗ್ಲೆಂಡ್ ವಿರುದ್ಧ 9 ರನ್ ಗಳಿಸಿ ಔಟಾಗಿದ್ದಾರೆ
ವಾಷಿಂಗ್ಟನ್: ಅಮೆರಿಕಾ ಮತ್ತು ಇರಾನ್ ನಡುವೆ ಸಂಘರ್ಷ ತಣ್ಣಾಗಾಗುವ ಲಕ್ಷಣಗಳು ಗೋಚರಿಸುತ್ತಿಲ್ಲ. ಇದೀಗ ಇರಾನ್ ವಿರುದ್ಧ ಸಿಡಿದೆದ್ದಿರುವ ಅಮೆರಿಕಾ ಗಂಭೀರ ಸಂದೇಶವನ್ನು ರವಾನಿಸಿದೆ.ಅಮೆರಿಕದ ರಕ್ಷಣಾ ಇಲಾಖೆಯ ಕಾರ್ಯದರ್ಶಿ ಪೀಟ್ ಹೆಗ್ಸೆತ್ ಸಾಮಾಜಿಕ ಮಾಧ್ಯಮ ಪೋಸ್ಟ್ ಮೂಲಕ ಹೊಸ ಬೆದರಿಕೆ ಹಾಕಿದ್ದಾರೆ. ಅಮೆರಿಕ ನಾಗರಿಕರನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುವ ಯಾವುದೇ ದೇಶ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ ವಾರ್ನಿಂಗ್ ನೀಡಿದ್ದಾರೆ. ತಮ್ಮ ನಾಗರಿಕರ ಭದ್ರತೆಯಲ್ಲಿ ಯಾವುದೇ ರಾಜಿ ಇಲ್ಲ ಎಂದಿದ್ದಾರೆ. ಭೂಮಿಯ ಮೇಲೆ ಎಲ್ಲಿಯಾದರೂ ಅಮೆರಿಕನ್ನರನ್ನು ಕೊಂದರೆ, ಬೆದರಿಕೆ ಹಾಕಿದರೆ, ನಾವು ಕ್ಷಮೆಗೆ ಅವಕಾಶ ನೀಡದೆ ಬೇಟೆಯಾಡುತ್ತೇವೆ. ನಿಮ್ಮನ್ನು ಕೊಲ್ಲುತ್ತೇವೆಎಂದು ಹೇಳಿದ್ದಾರೆ.
ಚೆನ್ನೈ: ಕಾಲಿವುಡ್ ಸೂಪರ್ ಸ್ಟಾರ್ ದಳಪತಿ ವಿಜಯ್ ಅವರು ವಿಚ್ಛೇದನ ಕುರಿತು ಮೌನ ಮುರಿದಿದ್ದಾರೆ. ಈ ಮಧ್ಯೆ ಅಭಿಮಾನಿಗಳ ಮುಂದೆ ವಿಜಯ್ ಮನಬಿಚ್ಚಿದ್ದಾರೆ. ತಮಿಳಿಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಸಂಸ್ಥಾಪಕ ವಿಜಯ್ ಅವರ ಪತ್ನಿ ಸಂಗೀತಾ ಅವರು ವಿಚ್ಛೇದನ ಕೋರಿ ಇತ್ತೀಚೆಗೆ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಇದರ ಬೆನ್ನಲ್ಲೇ ವಿಜಯ್ ಅವರು ಪ್ರತಿಕ್ರಿಯಿಸಿದ್ದಾರೆ. ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ವಿಚ್ಛೇದನ ಕುರಿತು ಮೌನ ಮುರಿದಿದ್ದಾರೆ. ನೀವು ಇದರ ಬಗ್ಗೆ ತಲೆ ಕೆಡಿಸಿಕೊಳ್ಳಬೇಡಿ, ಈ ಸಮಸ್ಯೆಯನ್ನು ನಾನು ನೋಡಿಕೊಳ್ಳುತ್ತೇನೆ ಎಂದು ಕಾರ್ಯಕರ್ತರು ಹಾಗೂ ಅಭಿಮಾನಿಗಳಿಗೆ ಹೇಳಿದ್ದಾರೆ.
ಬೆಂಗಳೂರು: ಟಾಲಿವುಡ್ನ ಸೂಪರ್ ಸ್ಟಾರ್ ಜೂನಿಯರ್ ಎನ್ಟಿಆರ್ ಅವರು ಖಾಸಗಿ ಕಾರ್ಯಕ್ರಮಕ್ಕೆ ಸಿಲಿಕಾನ್ ಸಿಟಿಗೆ ಬಂದಿದ್ದು, ಈ ವೇಳೆ ಭಾರೀ ನೂಕುನುಗ್ಗಲು ಉಂಟಾಗಿದೆ.ಬೆಂಗಳೂರು ನಗರಕ್ಕೆ ಬಂದಿದ್ದ ನಟ ಜ್ಯೂ.ಎನ್ಟಿಆರ್ ನೋಡಲು ಫ್ಯಾನ್ಸ್ ಮುಗಿಬಿದ್ದಿದ್ದಾರೆ. ಈ ವೇಳೆ ಪೊಲೀಸರು ಜನರನ್ನು ನಿಯಂತ್ರಿಸಲು ಲಘು ಲಾಠಿಚಾರ್ಜ್ ಮಾಡಿದ್ದಾರೆ.ಮಹದೇವಪುರದ ನೂತನ ಕಿಮ್ಸ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಉದ್ಘಾಟನೆಗೆ ಜ್ಯೂ.ಎನ್ಟಿಆರ್ ಆಗಮಿಸಿದ್ದರು. ಈ ವೇಳೆ ತಮ್ಮ ನೆಚ್ಚಿನ ನಟನನ್ನು ನೋಡಲು ಫ್ಯಾನ್ಸ್ ಆಸ್ಪತ್ರೆ ಒಳಗಡೆ ನುಗ್ಗಿದ್ದಾರೆ. ಈ ವೇಳೆ ನೂಕುನುಗ್ಗಲು ಉಂಟಾಗಿದೆ. ಇದರಿಂದ ಎಸ್ಕಲೇಟರ್ ಮುರಿದು ಹೋಗಿದೆ.
ಅಹಮದಾಬಾದ್: ಹಾಲಿ ಚಾಂಪಿಯನ್ ಭಾರತ ತಂಡವು ಟಿ20 ವಿಶ್ವಕಪ್ ಫೈನಲ್ನಲ್ಲಿ ಇಂದು ನ್ಯೂಜಿಲೆಂಡ್ ತಂಡವನ್ನು ಎದುರಿಸಲಿದೆ. ಉಭಯ ತಂಡಗಳು ಈತನಕ ಒಟ್ಟು 30 ಬಾರಿ ಟಿ20 ಪಂದ್ಯಗಳಲ್ಲಿ ಮುಖಾಮುಖಿಯಾಗಿದ್ದು, ಅದರ ಫಲಿತಾಂಶ ಇಲ್ಲಿದೆ. ಟಿ20 ವಿಶ್ವಕಪ್ನ ಫೈನಲ್ ಮ್ಯಾಚ್ಗೆ ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ವೇದಿಕೆ ಸಿದ್ಧವಾಗಿದೆ. ಅಹಮದಾಬಾದ್ನಲ್ಲಿ ಬ್ಯಾಟಿಂಗ್ಗೆ ಪೂರಕವಾಗಿರುವ ಪಿಚ್ ನಿರ್ಮಿಸಿರುವುದು ಬಹಿರಂಗವಾಗಿದೆ. ಹೀಗಾಗಿ ಈ ಮ್ಯಾಚ್ನಲ್ಲಿ ಭರ್ಜರಿ ಬ್ಯಾಟಿಂಗ್ ನಿರೀಕ್ಷಿಸಬಹುದು.ಟಿ20 ಕ್ರಿಕೆಟ್ನಲ್ಲಿ ಭಾರತ ಮತ್ತು ನ್ಯೂಜಿಲೆಂಡ್ ತಂಡವು ಒಟ್ಟು 30 ಬಾರಿ ಮುಖಾಮುಖಿಯಾಗಿವೆ. ಅದರಲ್ಲಿ ಭಾರತ 18 ಬಾರಿ ಜಯ ಸಾಧಿಸಿದೆ. ನ್ಯೂಜಿಲೆಂಡ್ ತಂಡವು 11 ಬಾರಿ ಗೆಲುವು ಸಾಧಿಸಿದೆ. ಒಂದು ಬಾರಿ ಪಂದ್ಯ ಟೈ ಆಗಿದೆ.
ಅಹಮದಾಬಾದ್: ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಬ್ಲಾಕ್ಬಸ್ಟರ್ ಹಣಾಹಣಿಗೆ ಇಲ್ಲಿನ ನರೇಂದ್ರ ಮೋದಿ ಕ್ರೀಡಾಂಗಣ ಸಜ್ಜಾಗಿದೆ. ಈ ಮಧ್ಯೆ ಐಸಿಸಿ ಪುರುಷರ ಟಿ20 ವಿಶ್ವಕಪ್ 2026 ಫೈನಲ್ ಪಂದ್ಯದ ಟಿಕೆಟ್ಗಳನ್ನು ಕಾಳಸಂತೆಯಲ್ಲಿ ಮಾರಾಟ ಮಾಡಿದ್ದಕ್ಕಾಗಿ ಇಬ್ಬರನ್ನು ಬಂಧಿಸಲಾಗಿದೆ.ಸೂರ್ಯಕುಮಾರ್ ಯಾದವ್ ನೇತೃತ್ವದ ತಂಡವು ತವರು ನೆಲದಲ್ಲಿ ಟಿ20 ವಿಶ್ವಕಪ್ ಗೆದ್ದ ಮೊದಲ ತಂಡವಾಗುವ ಮತ್ತು ಸತತ ಎರಡು ಬಾರಿ ಪ್ರಶಸ್ತಿಯನ್ನು ಯಶಸ್ವಿಯಾಗಿ ಉಳಿಸಿಕೊಳ್ಳುವ ಮೊದಲ ತಂಡವಾಗುವ ಅವಕಾಶವನ್ನು ಹೊಂದಿದೆ.ಅಹಮದಾಬಾದ್ ನಗರ ಅಪರಾಧ ಶಾಖೆ ಅಧಿಕಾರಿಗಳು ಉಸ್ಮಾನಪುರ ಗುಜರಾತ್ ವಿದ್ಯಾಪೀಠ ಎಸ್.ಟಿ. ಬಸ್ ನಿಲ್ದಾಣದ ಬಳಿ ಬಲೆ ಬೀಸಿತು. ಅಲ್ಲಿ ಇಬ್ಬರು ವ್ಯಕ್ತಿಗಳನ್ನು ತಡೆದು ತಪಾಸಣೆ ನಡೆಸಲಾಯಿತು. ಅವರಿಂದ ಪಂದ್ಯದ ಎಂಟು ಟಿಕೆಟ್ಗಳನ್ನು ವಶಪಡಿಸಿಕೊಳ್ಳಲಾಗಿದೆ.
ಪ್ರಸ್ತುತ ರಾಜ್ಯದಲ್ಲಿರುವ ಬಿಸಿಲ ತಾಪಕ್ಕೆ ಶಾಲೆಗೆ ಹೋಗುವ ಮಕ್ಕಳಿಂದ ಹಿಡಿದು ಹಿರಿಯರವರೆಗೂ ನಿರ್ಜಲೀಕರಣವಾಗಿ ನಾನಾ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಇನ್ನೂ ಇದನ್ನು ನಿರ್ಲಕ್ಷಿಸುವುದು ಕೂಡಾ ಆರೋಗ್ಯಕ್ಕೆ ತುಂಬಾನೇ ದೊಡ್ಡ ಹೊಡೆತವನ್ನು ನೀಡುವ ಸಾಧ್ಯತೆಯಿದೆ
ಟೆಹ್ರಾನ್: ಇರಾನ್ ಮಧ್ಯಪ್ರಾಚ್ಯದಲ್ಲಿರುವ ತನ್ನ ನೆರೆಹೊರೆಯವರಿಗೆ ಕ್ಷಮೆಯಾಚಿಸಿದೆ. ಅದರ ಬೆನ್ನಲ್ಲೇ ಇರಾನ್ಗೆ ಅಮೆರಿಕಾ ಮತ್ತು ಇಸ್ರೇಲ್ ಬಿಗ್ ಶಾಕ್ ಕೊಟ್ಟಿವೆ. ಇರಾನ್ನ ಇಂಧನ ಸಂಗ್ರಹಣಾ ಸೌಲಭ್ಯಗಳ ಮೇಲೆಯೇ ದಾಳಿ ನಡೆಸಿವೆ.ಅಮೆರಿಕಾ ಮತ್ತು ಇಸ್ರೇಲ್ ಸೇನೆಗಳು ದಕ್ಷಿಣ ಟೆಹ್ರಾನ್ನಲ್ಲಿರುವ ತೈಲ ಸಂಗ್ರಹಣಾ ವ್ಯವಸ್ಥೆ ಗುರಿಯಾಗಿಸಿಕೊಂಡು ದಾಳಿ ನಡೆಸಲಾಗಿದೆ. ಆದರೆ, ಹತ್ತಿರದ ಸಂಸ್ಕರಣಾಗಾರಕ್ಕೆ ಯಾವುದೇ ಹಾನಿಯಾಗಿಲ್ಲ. ದಾಳಯ ವೇಳೆ ನಗರದಾದ್ಯಂತ ಬೆಂಕಿ ಮತ್ತು ಹೊಗೆಯನ್ನು ಹರಡಿದೆ. ಅಲ್ಬೋರ್ಜ್ ಪ್ರಾಂತ್ಯದ ಕರಾಜ್ ನಗರದಲ್ಲಿಯೂ ಸ್ಫೋಟಗಳ ಶಬ್ದ ಕೇಳಿಬಂದಿದೆ. ದಾಳಿಯನ್ನು ಇಸ್ರೇಲ್ ಸೇನೆ ಖಚಿತಪಡಿಸಿದೆ.
ಮನೆಯ ದೇವರ ಕೋಣೆಗಳಲ್ಲಿ ಎರಡು ದೀಪಗಳನ್ನು ಹಚ್ಚುವುದು ಶ್ರೇಷ್ಠ ಎಂದು ಹೇಳಲಾಗುತ್ತದೆ. ಕೆಲವೊಂದು ಮನೆಯಲ್ಲಿ ಒಂದೇ ದೀಪವನ್ನು ಹಚ್ಚಲಾಗುತ್ತದೆ. ಹಾಗಂತ ಅದು ಕೇಡು ಅಂತಾ ಅರ್ಥವಲ್ಲ, ಆದರೆ ಜೋಡಿ ದೀಪ ಹಚ್ಚಿದರೆ ಮನೆಗೆ ತುಂಬಾನೇ ಶ್ರೇಷ್ಠ ಎಂಬ ನಂಬಿಕೆಯಿದೆ. ಈ ಲೇಖನದಲ್ಲಿ ಎರಡು ದೀಪಗಳನ್ನು ಹಚ್ಚಿದರೆ ಏನೂ ಪ್ರಯೋಜನ ಎಂಬ ಅಂಶಗಳನ್ನು ಉಲ್ಲೇಖಿಸಲಾಗಿದೆ.
ಬೆಂಗಳೂರು: ಕಳೆದ ಕೆಲ ದಿನಗಳಿಂದ ರಾಜ್ಯದಲ್ಲಿ ಬಿಸಿಲ ತಾಪಮಾನ ಏರುತ್ತಲೇ ಇದ್ದು, ಉರಿಬಿಸಿಲ ಶಾಖಕ್ಕೆ ಜನರು ಸುಸ್ತಾಗಿದ್ದಾರೆ. ಇಂದು ರಾಜ್ಯದಲ್ಲಿ ಹವಾಮಾನ ಮುನ್ಸೂಚನೆ ಪ್ರಕಾರ ಕಳೆದ 24 ಗಂಟೆಗಳಲ್ಲಿ ಹವಾಮಾನ ವೈಪರೀತ್ಯ ಕಂಡುಬರಲಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಸಂಪೂರ್ಣ ಒಣಹವೆ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇನ್ನೂ ಈಗ ಇರುವಂತೆಯೇ ಇಂದು ಕೂಡಾ ಕರಾವಳಿ ಭಾಗಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಿಂದ ಹಿಡಿದು ದಕ್ಷಿಣ ಒಳನಾಡಿನ ದಾವಣಗೆರೆ, ಚಿತ್ರದುರ್ಗ, ಮೈಸೂರು ಹಾಗೂ ಉತ್ತರ ಒಳನಾಡಿನ ಬೆಳಗಾವಿ, ಧಾರವಾಡದವರೆಗೂ ಬಿಸಿಲಿನ ತಾಪ ಹಾಗೆಯೇ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ನವದೆಹಲಿ: ಕೆಲವೇ ತಿಂಗಳಿನಲ್ಲಿ ಪಶ್ಚಿಮ ಬಂಗಾಳ ವಿಧಾನಸಭೆಗೆ ಚುನಾವಣೆ ಘೋಷಣೆಯಾಗಲಿದೆ. ಎಲ್ಲಾ ಪಕ್ಷಗಳು ಭರ್ಜರಿ ತಾಲೀಮು ನಡೆಸುತ್ತಿದೆ. ಈ ಹೊತ್ತಿನಲ್ಲಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ನರೇಂದ್ರ ಮೋದಿ ಕೆಂಡ ಕಾರಿದ್ದಾರೆ.ರಾಷ್ಟ್ರಪತಿ ದ್ರೌಪದಿ ಮುರ್ಮು ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಿದ್ದರು. ಅವರು ಭಾಗವಹಿಸಿದ್ದ ಕಾರ್ಯಕ್ರಮಕ್ಕೆ ಕೊನೆಯ ಕ್ಷಣದಲ್ಲಿ ಸ್ಥಳ ಬದಲಾವಣೆ ಮಾಡಿದ ವಿವಾದಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಶನಿವಾರ ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು, ರಾಜ್ಯ ಆಡಳಿತವು ಎಲ್ಲಾ ಮಿತಿಗಳನ್ನು ಮೀರಿದೆ ಎಂದು ಆರೋಪಿಸಿದರು. ರಾಷ್ಟ್ರಪತಿಗಳಿಗೆ ಮಾಡಿದ ಅವಮಾನಕ್ಕೆ ರಾಜ್ಯ ಸರ್ಕಾರವೇ ಕಾರಣ ಎಂದು ಕಿಡಿಕಾರಿದರು.
ಅಹಮದಾಬಾದ್: ಭಾನುವಾರ ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭಾರತ ಮತ್ತು ನ್ಯೂಜಿಲೆಂಡ್ 2026 ರ T20 ವಿಶ್ವಕಪ್ ಫೈನಲ್ ಟ್ರೋಫಿಗಾಗಿ ಮುಖಾಮುಖಿಯಾಗಲಿದೆ. ಹೈವೋಲ್ಟೇಜ್ ಪಂದ್ಯದ ಹಿನ್ನೆಲೆ ಕ್ರಿಕೆಟ್ ಅಭಿಮಾನಿಗಳಿಗೆ ಇಂದಿನ ಪಂದ್ಯಾಟದ ಪ್ರತಿಯೊಂದು ಕ್ಷಣವೂ ಮುಖ್ಯ. ಕ್ರಿಕೆಟ್ ಅಭಿಮಾನಿಗಳಿಗೆ ಇಂದಿನ ಪಂದ್ಯಾಟಕ್ಕೆ ಮಳೆಯ ಅಡಚಣೆಯಾಗುತ್ತದೆಯಾ ಎಂಬ ಅನುಮಾನವಿದೆ. ಆದರೆ ಅಹಮದಾಬಾದ್ ಹವಾಮಾನ ವರದಿ ಪ್ರಕಾರ ಇಂದು ಮಳೆಯ ನಿರೀಕ್ಷೆಯಿಲ್ಲ ಎಂದು ಹೇಳಿದೆ. ಅದರಂತೆ ಕ್ರಿಕೆಟ್ ಅಭಿಮಾನಿಗಳು ಸ್ಪಷ್ಟವಾದ ಆಕಾಶದಲ್ಲಿ ಅಡೆತಡೆಯಿಲ್ಲದ ಕ್ರಿಕೆಟ್ ಅನ್ನು ನಿರೀಕ್ಷಿಸಬಹುದು. ಇತ್ತೀಚಿನ ಮುನ್ಸೂಚನೆಯ ಪ್ರಕಾರ, ರಾತ್ರಿಯ ಪಂದ್ಯದ ಪರಿಸ್ಥಿತಿಗಳು ಸ್ಪಷ್ಟ ಮತ್ತು ಬೆಚ್ಚಗಿರುತ್ತದೆ, ತಾಪಮಾನವು ಸುಮಾರು 23cಗೆ ಇಳಿಯುತ್ತದೆ, ಇದು ನಿಜವಾದ ತಾಪಮಾನಕ್ಕೆ ಹತ್ತಿರದಲ್ಲಿದೆ.
ಅಹಮದಾಬಾದ್: ಹಾಲಿ ಚಾಂಪಿಯನ್ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳು ಟಿ20 ವಿಶ್ವಕಪ್ ಫೈನಲ್ನಲ್ಲಿ ಭಾನುವಾರ ಮುಖಾಮುಖಿಯಾಗುತ್ತಿದೆ. ಭಾರತವು ಪ್ರಶಸ್ತಿ ಉಳಿಸಿಕೊಳ್ಳುವ ಛಲದಲ್ಲಿದ್ದರೆ. ನ್ಯೂಜಿಲೆಂಡ್ ತಂಡವು ಮೊದಲ ಬಾರಿ ಪ್ರಶಸ್ತಿ ಗೆಲ್ಲುವ ಪ್ರಯತ್ನದಲ್ಲಿದೆ.ಭಾರತ ತಂಡ ಸತತ ಎರಡನೇ ಬಾರಿಗೆ ಟಿ20 ವಿಶ್ವಕಪ್ನ ಫೈನಲ್ ತಲುಪಿದ್ದು, ಇದೇ ಭಾನುವಾರ ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಅಂತಿಮ ಕಾಳಗ ನಡೆಯಲಿದೆ. ನಾಳಿನ ಪಂದ್ಯಕ್ಕೂ ಮುನ್ನ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿದ ನ್ಯೂಜಿಲೆಂಡ್ ನಾಯಕ ಮಿಚೆಲ್ ಸ್ಯಾಟ್ನರ್ ಭಾರತಕ್ಕೆ ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ.
ನಟ-ರಾಜಕಾರಣಿ ದಳಪತಿ ವಿಜಯ್ ಅವರ ಪತ್ನಿ ಸಂಗೀತಾ ಸೊರ್ನಲಿಂಗಂ ಅವರ ವಿಚ್ಛೇದನ ಪ್ರಕ್ರಿಯೆಗಳು ನಡೆಯುತ್ತಿರುವ ನಡುವೆಯೇ, ಅವರು ಹೊಸ ಅರ್ಜಿಯನ್ನು ಸಲ್ಲಿಸಿದ್ದಾರೆ. ಅರ್ಜಿಯಲ್ಲಿ, 51 ವರ್ಷದ ಸಂಗೀತಾ ವಸತಿ ರಕ್ಷಣೆ ಮತ್ತು ಆರ್ಥಿಕ ಪರಿಹಾರವನ್ನು ಕೋರಿದ್ದಾರೆ.ಭಾರತದಲ್ಲಿ ತನಗೆ ಸ್ವಂತ ನಿವಾಸವಿಲ್ಲ ಎಂದು ಹೇಳುವ ಯುನೈಟೆಡ್ ಕಿಂಗ್ಡಮ್ ಪ್ರಜೆಯಾಗಿರುವ ಸಂಗೀತಾ ತಮ್ಮ ವೈವಾಹಿಕ ಮನೆಯಲ್ಲಿ ವಾಸಿಸುವ ಅಥವಾ ಪರ್ಯಾಯ ವಸತಿಯನ್ನು ಪಡೆಯುವ ಹಕ್ಕನ್ನು ಕೋರಿದ್ದಾರೆ. ಅರ್ಜಿಯಲ್ಲಿ "ನ್ಯಾಯಯುತ ಮತ್ತು ಸಮಂಜಸವಾದ ಶಾಶ್ವತ ಜೀವನಾಂಶ ಪಾವತಿ" ಯನ್ನೂ ಕೇಳಲಾಗಿದೆ.51 ವರ್ಷದ ವಿಜಯ್ ನ್ಯಾಯಾಲಯವನ್ನು ಸಂಪರ್ಕಿಸುವ ಬಗ್ಗೆ ಎಚ್ಚರಿಸಿದ್ದರು ಎಂದು ಅರ್ಜಿಯಲ್ಲಿ ಆರೋಪಿಸಲಾಗಿದೆ.
ಅಹಮದಾಬಾದ್: ಟಿ20 ವಿಶ್ವಕಪ್ನ ಫೈನಲ್ ಕದನ ಅಹಮದಾಬಾದ್ನಲ್ಲಿ ಭಾನುವಾರ ನಡೆಯಲಿದೆ. ಹಾಲಿ ಚಾಂಪಿಯನ್ ಭಾರತ ತಂಡವು ಪ್ರಶಸ್ತಿ ಉಳಿಸಿಕೊಳ್ಳುವ ನಿಟ್ಟಿನಲ್ಲಿ ಹೋರಾಟ ನಡೆಸಲಿದೆ.ನಿರೀಕ್ಷೆಯಂತೆ ಆತಿಥೇಯ ಭಾರತ ಈ ಬಾರಿಯೂ ಫೈನಲ್ ಪ್ರವೇಶಿಸಿದೆ. ಒಟ್ಟಾರೆ ದಾಖಲೆಯ ನಾಲ್ಕನೇ ಬಾರಿ ಪ್ರಶಸ್ತಿ ಸುತ್ತು ಪ್ರವೇಶಿಸಿದೆ. ಫೈನಲ್ ಪಂದ್ಯದಲ್ಲಿ ಭಾರತ, ನ್ಯೂಜಿಲೆಂಡ್ ಸವಾಲು ಎದುರಿಸಲಿದೆ. ಟಿ20 ವಿಶ್ವಕಪ್ ಫೈನಲ್ ಅಹಮದಾಬಾದ್ನಲ್ಲಿ ನಡೆಯಲಿದ್ದು, ಎಲ್ಲರ ಗಮನ ಸೆಳೆದಿದೆ.ಫೈನಲ್ ವಿಜೇತರು ಮತ್ತು ರನ್ನರ್-ಅಪ್ ಮತ್ತು ಸೆಮಿಫೈನಲಿಸ್ಟ್ಗಳಿಗೆ ನೀಡಲಾಗುವ ಹಣದ ಮೊತ್ತದ ಬಗ್ಗೆ ಮಾಹಿತಿ ಇಲ್ಲಿದೆ.
ಬೆಂಗಳೂರು: ಎಲ್ಪಿಜಿ ದರ ಏರಿಸಿದ್ದರಿಂದ ನೆಲಕ್ಕೆ ಬಿದ್ದವನಿಗೆ ಒದ್ದ ಹಾಗೇ ಆಗಿದೆ. ಈ ಮೂಲಕ ವಿಶ್ವಮಟ್ಟದಲ್ಲಿ ದೇಶದ ಮಾನ ಕಳೆಯುತ್ತಿರುವ ಪ್ರಧಾನಿ ಮೋದಿ ರಾಜೀನಾಮೆ ನೀಡಲಿ ಎಂದು ಸಿಎಂ ಸಿದ್ದರಾಮಯ್ಯ ಆಕ್ರೋಶ ಹೊರಹಾಕಿದರು. ಈ ವಿಚಾರದ ಸಲುವಾಗಿ ಸಿದ್ದರಾಮಯ್ಯನವರು ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ. ಎಲ್ಪಿಜಿ ದರ ಏರಿಕೆ ಮಧ್ಯಮ ವರ್ಗದ ಕುಟುಂಬಗಳಿಗೆ ವೆಚ್ಚ ದುಬಾರಿಯಾಗಲಿದೆ. ಈ ಏರಿಕೆ ಅನಿವಾರ್ಯ ಕ್ರಮವೇನಲ್ಲ. ಭಾರತದ ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳು ಹಣದುಬ್ಬರ ಮತ್ತು ಬೆಲೆ ಏರಿಕೆಯಿಂದ ತತ್ತರಿಸಿಹೋಗಿವೆ. ಈ ಸಮಯದಲ್ಲಿಯೇ ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರ ಎಲ್ಪಿಜಿ ಸಿಲಿಂಡರ್ ದರ ಹೆಚ್ಚಿಸಿರುವುದು ನೆಲಕ್ಕೆ ಬಿದ್ದವನಿಗೆ ಒದ್ದಂತಾಗಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: ನಮಗೆ ಯಾರ ಅಪ್ಪಣೆಯೂ ಬೇಕಿಲ್ಲ: ರಷ್ಯಾ ತೈಲ ಖರೀದಿಗೆ ಅಮೆರಿಕ ವಿನಾಯಿತಿ ಬಗ್ಗೆ ಭಾರತ ಖಡಕ್ ಮಾತು
ಮಂಗಳೂರು: ಇರಾನ್ ಮತ್ತು ಇಸ್ರೇಲ್ ನಡುವಿನ ಹೆಚ್ಚುತ್ತಿರುವ ಸಂಘರ್ಷಕ್ಕೆ ಸಂಬಂಧಿಸಿದಂತೆ ಪಶ್ಚಿಮ ಏಷ್ಯಾದ ವಾಯುಪ್ರದೇಶದಲ್ಲಿ ನಡೆಯುತ್ತಿರುವ ಅಡೆತಡೆಗಳನ್ನು ಉಲ್ಲೇಖಿಸಿ, ಮಾರ್ಚ್ 7 ರಂದು ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ತನ್ನ ಎಲ್ಲಾ ನಿಗದಿತ ಅಂತರರಾಷ್ಟ್ರೀಯ ವಿಮಾನಗಳನ್ನು ರದ್ದುಗೊಳಿಸುವುದಾಗಿ ಏರ್ ಇಂಡಿಯಾ ಎಕ್ಸ್ಪ್ರೆಸ್ ಘೋಷಿಸಿದೆ.ಇರಾನ್-ಇಸ್ರೇಲ್ ಬಿಕ್ಕಟ್ಟಿನಿಂದ ಉಂಟಾದ ವ್ಯಾಪಕ ವಿಮಾನ ಅಡಚಣೆಗಳೊಂದಿಗೆ ವಿಶ್ವದಾದ್ಯಂತ ವಿಮಾನಯಾನ ಸಂಸ್ಥೆಗಳು ಹೋರಾಡುತ್ತಿರುವಾಗ ಈ ರದ್ದತಿಗಳು ಬಂದಿವೆ, ಇದು ಮಧ್ಯಪ್ರಾಚ್ಯದ ಪ್ರಮುಖ ಕಾರಿಡಾರ್ಗಳಲ್ಲಿ ವಾಯುಪ್ರದೇಶ ಮುಚ್ಚುವಿಕೆ ಮತ್ತು ನಿರ್ಬಂಧಗಳಿಗೆ ಕಾರಣವಾಗಿದೆ.
ನವದೆಹಲಿ: ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವೆ ವೇಗವಾಗಿ ಹೆಚ್ಚುತ್ತಿರುವ ಸಂಘರ್ಷದ ನಡುವೆ ಹಿಂದೂ ಮಹಾಸಾಗರದಲ್ಲಿ ಮತ್ತೊಂದು ಇರಾನಿನ ನೌಕಾ IRIS ದೇನಾ ಒಳಗೊಂಡ ಘಟನೆಯ ನಂತರ ತಾಂತ್ರಿಕ ಮತ್ತು ಲಾಜಿಸ್ಟಿಕ್ ವ್ಯವಸ್ಥೆಗಳನ್ನು ಕೈಗೊಳ್ಳಲು ಕೊಚ್ಚಿ ಬಂದರಿನಲ್ಲಿ ಬಂದರಿನಲ್ಲಿರುವ ತನ್ನ ನೌಕಾ ನೌಕೆ IRIS ಲವನ್ಗೆ ಸುರಕ್ಷಿತ ಬಂದರನ್ನು ಒದಗಿಸಿದ್ದಕ್ಕಾಗಿ ಇರಾನ್ ಭಾರತಕ್ಕೆ ಔಪಚಾರಿಕವಾಗಿ ಕೃತಜ್ಞತೆಗಳನ್ನು ವ್ಯಕ್ತಪಡಿಸಿದೆ. ANI ಗೆ ನೀಡಿದ ವಿಶೇಷ ಸಂದರ್ಶನದಲ್ಲಿ, ಭಾರತದಲ್ಲಿನ ಇರಾನ್ ರಾಯಭಾರಿ ಮೊಹಮ್ಮದ್ ಫಥಾಲಿ, IRIS ದೇನಾ ಒಳಗೊಂಡ ದುರಂತ ಘಟನೆಯ ನಂತರ ಇಸ್ಲಾಮಿಕ್ ಗಣರಾಜ್ಯ ಇರಾನ್ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ ಮತ್ತು ಸಂದರ್ಭಗಳನ್ನು
ನವದೆಹಲಿ: ಮಾರ್ಚ್ 8 ರಂದು ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿರುವ ಟಿ20 ವಿಶ್ವಕಪ್ 2026 ರ ಫೈನಲ್ನಲ್ಲಿ ಭಾರತವು ನ್ಯೂಜಿಲೆಂಡ್ ತಂಡವನ್ನು ಎದುರಿಸಲಿದೆ. ಈ ಪಂದ್ಯಾಟವನ್ನೂ ವೀಕಿಸಲು ಬಯಸುವ ಕ್ರಿಕೆಟ್ ಅಭಿಮಾನಿಗಳಿಗೆ ರೈಲ್ವೆ ಇಲಾಖೆ ವಿಶೇ ರೈಲನ್ನು ಘೋಷಿಸಿದೆ. ಉತ್ತರ ರೈಲ್ವೆ ದೆಹಲಿಯಿಂದ ಸಬರಮತಿಗೆ ವಿಶೇಷ ರೈಲನ್ನು ಘೋಷಿಸಿದೆ. ಟಿಕೆಟ್ಗಳು ತಡವಾಗಿ ಬಿಡುಗಡೆಯಾಗಿದ್ದರಿಂದ, ಅನೇಕ ಅಭಿಮಾನಿಗಳು ಪ್ರಯಾಣ ವ್ಯವಸ್ಥೆಗಳನ್ನು ಬುಕ್ ಮಾಡಲು ವಿಫಲರಾದರು. ವಿಮಾನ ಬೆಲೆ ಏರಿಕೆಯಾಗಿದ್ದು, ಅವರನ್ನು ದಿಗ್ಭ್ರಮೆಗೊಳಿಸಿತು ಮತ್ತು ಆಗ ಉತ್ತರ ರೈಲ್ವೆ ಈ ವ್ಯವಸ್ಥೆಯನ್ನು ಕ್ರಿಕೆಟ್ ಅಭಿಮಾನಿಗಳಿಗೆ ಘೋಷಣೆ ಮಾಡಿದೆ.
ಸೂರತ್: ಸೂರತ್ನ ಸ್ವಾಮಿನಾರಾಯಣ ದೇವಸ್ಥಾನ ಸಂಕೀರ್ಣದ ಸ್ನಾನಗೃಹದೊಳಗೆ ಇಬ್ಬರು ಕಾಲೇಜು ವಿದ್ಯಾರ್ಥಿಗಳ ಶವಗಳು ಪತ್ತೆಯಾಗಿದ್ದು, ಪ್ರಾಥಮಿಕ ತನಿಖೆಯಲ್ಲಿ ವಿಷಕಾರಿ ಔಷಧಗಳನ್ನು ಇಂಜೆಕ್ಟ್ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ.ಇಬ್ಬರು ಹುಡುಗಿಯರು ಶುಕ್ರವಾರ ಬೆಳಿಗ್ಗೆ ಕಾಲೇಜಿಗೆ ಮನೆಯಿಂದ ಹೊರಟಿದ್ದರು, ಆದರೆ ಮಧ್ಯಾಹ್ನದ ವೇಳೆಗೆ ಹಿಂತಿರುಗಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರಿಗೆ ಮಾಹಿತಿ ನೀಡಿದ ನಂತರ ಹುಡುಕಾಟ ಆರಂಭಿಸಲಾಯಿತು. ಪೊಲೀಸರು ಅವರ ಮೊಬೈಲ್ ಫೋನ್ಗಳು ದೇವಾಲಯ ಸಂಕೀರ್ಣದಲ್ಲಿ ಇರುವುದನ್ನು ಪತ್ತೆಹಚ್ಚಿದ್ದಾರೆ. ಶನಿವಾರವೂ ಹುಡುಕಾಟ ಮುಂದುವರಿದಂತೆ ಅವರ ಸ್ಕೂಟರ್ಗಳು ಆವರಣದೊಳಗೆ ನಿಂತಿರುವುದು ಕಂಡುಬಂದಿದೆ.
ಅಹಮದಾಬಾದ್:ಕ್ವಾರ್ಟರ್ ಫೈನಲ್ ಮತ್ತು ಸೆಮಿಫೈನಲ್ ಪಂದ್ಯಗಳ ಗೆಲುವಿನ ರುವಾರಿ ಸಂಜು ಸ್ಯಾಮ್ಸನ್ನತ್ತ ಎಲ್ಲರ ಚಿತ್ತ ನೆಟ್ಟಿದೆ. ಉತ್ತಮ ಲಯದಲ್ಲಿರುವ ಅವರು 25ಕ್ಕೂ ಅಧಿಕ ರನ್ ಗಳಿಸಿದರೆ ಭಾರತ ಈ ಬಾರಿ ಟಿ20 ವಿಶ್ವಕಪ್ ಗೆಲ್ಲುವುದು ಪಕ್ಕಾ ಎಂಬುದು ಅಭಿಮಾನಿಗಳ ಲೆಕ್ಕಾಚಾರ. ಭಾರತ ಮತ್ತು ಶ್ರೀಲಂಕಾದ ಅತಿಥ್ಯದಲ್ಲಿ ನಡೆಯುತ್ತಿರುವ ಟಿ20 ವಿಶ್ವಕಪ್ನ ಫೈನಲ್ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿದೆ. ಭಾರತ ಮತ್ತು ನ್ಯೂಜಿಲೆಂಡ್ ತಂಡಗಳು, ಅಹಮದಾಬಾದ್ನ ನರೇಂದ್ರ ಮೋದಿ ಮೈದಾನದಲ್ಲಿ ಎದುರಾಗಲಿದೆ.ವೆಸ್ಟ್ ಇಂಡೀಸ್ ವಿರುದ್ಧದ ಸೂಪರ್ 8ರ ಕೊನೆಯ ಪಂದ್ಯದಲ್ಲಿ ಅಜೇಯ 97 ರನ್ ಗಳಿಸಿ ಭಾರತದ ಗೆಲುವಿಗೆ ಕಾರಣವಾಗಿದ್ದ
ಬೆಂಗಳೂರು: ಸಿಎಂ ಕುರ್ಚಿ ಗುದ್ದಾಟದ ನಡುವೆ ಸಿಎಂ ಸಿದ್ದರಾಮಯ್ಯ ಅವರು ದಾಖಲೆಯ ಬಜೆಟ್ ಮಂಡನೆ ಮಾಡಿದ ಬೆನ್ನಲ್ಲೇ ಡಿಸಿಎಂ ಡಿಕೆ ಶಿವಕುಮಾರ್ ಅವರು ನವದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆಂಬ ಸುದ್ದಿ ಇದೀಗ ಹರಿದಾಡುತ್ತಿದೆ. ಡಿಸಿಎಂ ಹೈಕಮಾಂಡ್ ಭೇಟಿ ರಾಜ್ಯ ರಾಜಕಾರಣದಲ್ಲಿ ಭಾರೀ ಕುತೂಹಲವನ್ನು ಮೂಡಿಸಿದೆ. ಡಿಕೆ ಶಿವಕುಮಾರ್ ಅವರು ನಾಳೆ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆಂಬ ಮಾಹಿತಿ ಇದೀಗ ಹೊರಬಿದ್ದಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಜೊತೆ ಕಲಬುರಗಿಯಿಂದ ದೆಹಲಿಗೆ ಜೊತೆಯಾಗಿ ಪ್ರಯಾಣಿಸಲಿದ್ದಾರೆ. ಡಿಸಿಎಂ ಈ ಭೇಟಿ ನೀರಾವಳಿ ಇಲಾಖೆ ಸಂಬಂಧ ಪಟ್ಟದ್ದು ಎನ್ನಲಾಗಿದೆ. ಆದರೆ ಸಿದ್ದರಾಮಯ್ಯ ಅವರ ಬಜೆಟ್ ಬೆನ್ನಲ್ಲೇ ಡಿಕೆಶಿ ನವದೆಹಲಿಗೆ
ಬೆಂಗಳೂರು: ನಿನ್ನೆ ಮಂಡಿಸಿದ ರಾಜ್ಯ ಬಜೆಟ್ ನ ಮೂಲಕ ಇಡೀ ರಾಜ್ಯದ ಜನರಿಗೆ ಮೂಗಿಗೆ ತುಪ್ಪ ಸವರುವುದು ಉಚಿತ, ಎಲ್ಲರ ತಲೆ ಮೇಲೆ ಸಾಲ ಖಚಿತ, ರಾಜ್ಯದ ಜನರಿಗೆ ಸಂಕಷ್ಟ ನಿಶ್ಚಿತ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಟೀಕಿಸಿದ್ದಾರೆ.ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಅವರು ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು. ರಾಜ್ಯ ಸರಕಾರದ 2026-27ರ ಆಯವ್ಯಯ ಪತ್ರವನ್ನು ನಿನ್ನೆ ಮುಖ್ಯಮಂತ್ರಿಗಳು ಮತ್ತು ಹಣಕಾಸು ಸಚಿವ ಸಿದ್ದರಾಮಯ್ಯನವರು ಮಂಡಿಸಿದ್ದಾರೆ ಎಂದ ಅವರು, ರಾಜ್ಯ ಸರಕಾರವು ಉಚಿತ, ಖಚಿತ, ನಿಶ್ಚಿತ ಎಂಬ ಘೋಷವಾಕ್ಯದಡಿ ಅಧಿಕಾರಕ್ಕೆ ಬಂದಿತ್ತು ಎಂದು ಗಮನ ಸೆಳೆದರು.
ಬೆಂಗಳೂರು: ಈಚೆಗೆ ಬಿಗ್ಬಾಸ್ ಮಾಜಿ ಸ್ಪರ್ಧಿ ಡಾಗ್ ಸತೀಶ್ ವಿರುದ್ಧ ಠಾಣೆ ಮೆಟ್ಟಿಲೇರಿದ್ದ ಬಿಗ್ಬಾಸ್ ಮಾಜಿ ಸ್ಪರ್ಧಿ ರಜತ್ ವಿರುದ್ಧ ಕೇಸ್ ಒಂದು ದಾಖಲಾಗಿದೆ. ಚಾಮರಾಜಪೇಟೆ ಪೊಲೀಸ್ ಠಾಣೆಯಲ್ಲಿ ಸತೀಶ್ ಅವರು ರಜತ್ ವಿರುದ್ಧ ಕೊಲೆ ಬೆದರಿಕೆ ಹಾಕಿರುವ ಕೇಸ್ ಅನ್ನು ದಾಖಲಿಸಿದ್ದಾರೆ.ಪೊಲೀಸರು ಬಿಎನ್ಎಸ್ ಸೆಕ್ಷನ್ 351 , 352 ರ ಆಡಿ ರಜತ್ ಮತ್ತು ಧನರಾಜ್ ಮೇಲೆ ಕೇಸ್ ದಾಖಲು ಮಾಡಿದ್ದಾರೆ.