Shorts

ಮುಂಬೈ: ಮಹಾರಾಷ್ಟ್ರದ ಮುಲುಂಡ್‌ನ ಎಲ್‌ಬಿಎಸ್ ರಸ್ತೆಯಲ್ಲಿ ನಿರ್ಮಾಣ ಹಂತದಲ್ಲಿರುವ ಮುಂಬೈ ಮೆಟ್ರೋ ಪಿಲ್ಲರ್‌ನ ಒಂದು ಭಾಗವು ಶನಿವಾರ ಕುಸಿದು ಬಿದ್ದ ಪರಿಣಾಮ ಓರ್ವ ವ್ಯಕ್ತಿ ಸಾವನ್ನಪ್ಪಿದ್ದು, ಮೂವರಿಗೆ ಗಂಭೀರ ಗಾಯಗಳಾಗಿವೆ. ಮೃತರು ಮತ್ತು ಗಾಯಾಳುಗಳು ಜಾನ್ಸನ್ ಮತ್ತು ಜಾನ್ಸನ್ ಕಂಪನಿ ಬಳಿ ಆಟೋ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದಾಗ ಪಿಲ್ಲರ್‌ನ ಭಾಗವು ಅವರ ಮೇಲೆ ಕುಸಿದಿದೆ.ಮುಂಬೈ ಪೊಲೀಸರು, ಮೆಟ್ರೋ ಸಿಬ್ಬಂದಿ, ಎಂಎಫ್‌ಬಿ, ವಾರ್ಡ್ ಸಿಬ್ಬಂದಿ ಮತ್ತು ಆಂಬ್ಯುಲೆನ್ಸ್ ಸೇವೆಗಳು ಸೇರಿದಂತೆ ತುರ್ತು ಪ್ರತಿಕ್ರಿಯೆ ತಂಡಗಳು ಪರಿಸ್ಥಿತಿಯನ್ನು ನಿಭಾಯಿಸಲು ಮತ್ತು ಅವಶೇಷಗಳನ್ನು ತೆರವುಗೊಳಿಸಲು ಸ್ಥಳಕ್ಕೆ ಧಾವಿಸಿದವು.ಬೃಹನ್‌ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (ಬಿಎಂಸಿ) ಮೃತರನ್ನು ರಾಮಧನ್ ಯಾದವ್ ಎಂದು ಗುರುತಿಸಿದ್ದು, ಮೂವರು

ಬೆಂಗಳೂರು: ಭಾನುವಾರ ನಾಡಿನಾದ್ಯಂತ ಮಹಾಶಿವರಾತ್ರಿಯ ಆಚರಣೆಯನ್ನು ಸಂಭ್ರಮದೊಂದಿಗೆ ಆಚರಿಸಲಾಗುತ್ತದೆ. ಈ ಹಿನ್ನೆಲೆಯಲ್ಲಿ ‌ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಯಲ್ಲಿ ಭಾನುವಾರದಂದು ಸಂಪೂರ್ಣವಾಗಿ ಮಾಂಸ ಮಾರಾಟವನ್ನು ನಿಷೇಧ ಮಾಡಲಾಗಿದೆ.ಈ ಕುರಿತು ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಪಶುಪಾಲನೆ ವಿಭಾಗದ ಉಪ ನಿರ್ದೇಶಕರು ಆದೇಶ ಹೊರಡಿಸಿದ್ದಾರೆ. ಈ ಕುರಿತು ಎಕ್ಸ್‌ನಲ್ಲಿ ಆದೇಶದ ಪ್ರತಿಯನ್ನು ಹಂಚಿಕೊಳ್ಳಲಾಗಿದೆ. ಮಹಾ ಶಿವರಾತ್ರಿ ಆಚರಿಸಲ್ಪಡುವುದರಿಂದ ಆ ದಿನವಿಡಿ ಜಿಬಿಎ ವ್ಯಾಪ್ತಿಯ ಎಲ್ಲಿಯೂ ಪ್ರಾಣಿ ವಧೆ, ಮಾಂಸ ಮಾರಾಟ ಮಾಡಲು ಯಾವುದೇ ಅವಕಾಶ ಇರುವುದಿಲ್ಲ. ಅಲ್ಲದೇ ಸೂಪರ್‌ ಮಾರ್ಕೆಟ್, ಇನ್ನಿತರ ಮಳಿಗೆಗಳಲ್ಲಿಯೂ ಮಾಂಸ ಮಾರಾಟಕ್ಕೆ ಅವಕಾಶ ಇಲ್ಲ ಎಂದು ಆದೇಶದಲ್ಲಿ ತಿಳಿಸಿದ್ದಾರೆ.

ಶನಿ ದೋಷವಿದ್ದರೆ ಆಂಜನೇಯನ ಪ್ರಾರ್ಥನೆ ಮಾಡುವುದರಿಂದ ಪರಿಹಾರ ಸಿಗುತ್ತದೆ. ಶನಿ ದೋಷವಿರುವವರು ಇಂದು ತಪ್ಪದೇ ಆಂಜನೇಯನ ಕುರಿತಾದ ಶ್ರೀ ಹನುಮದಷ್ಟಕಂ ಸ್ತೋತ್ರ ಓದಿ.ಶ್ರೀರಘುರಾಜಪದಾಬ್ಜನಿಕೇತನ ಪಂಕಜಲೋಚನ ಮಂಗಳರಾಶೇಚಂಡಮಹಾಭುಜದಂಡ ಸುರಾರಿವಿಖಂಡನಪಂಡಿತ ಪಾಹಿ ದಯಾಳೋ ।ಪಾತಕಿನಂ ಚ ಸಮುದ್ಧರ ಮಾಂ ಮಹತಾಂ ಹಿ ಸತಾಮಪಿ ಮಾನಮುದಾರಂತ್ವಾಂ ಭಜತೋ ಮಮ ದೇಹಿ ದಯಾಘನ ಹೇ ಹನುಮನ್ ಸ್ವಪದಾಂಬುಜದಾಸ್ಯಮ್ ॥ 1 ॥ ಸಂಸೃತಿತಾಪಮಹಾನಲದಗ್ಧತನೂರುಹಮರ್ಮತನೋರತಿವೇಲಂಪುತ್ರಧನಸ್ವಜನಾತ್ಮಗೃಹಾದಿಷು ಸಕ್ತಮತೇರತಿಕಿಲ್ಬಿಷಮೂರ್ತೇಃ ।ಕೇನಚಿದಪ್ಯಮಲೇನ ಪುರಾಕೃತಪುಣ್ಯಸುಪುಂಜಲವೇನ ವಿಭೋ ವೈತ್ವಾಂ ಭಜತೋ ಮಮ ದೇಹಿ ದಯಾಘನ ಹೇ ಹನುಮನ್ ಸ್ವಪದಾಂಬುಜದಾಸ್ಯಮ್ ॥ 2 ॥ ಸಂಸೃತಿಕೂಪಮನಲ್ಪಮಘೋರನಿದಾಘನಿದಾನಮಜಸ್ರಮಶೇಷಂಪ್ರಾಪ್ಯ

ಬೆಂಗಳೂರು: ಕನ್ನಡದ ಸಾಹಸ ಸಿಂಹ ಸೇರಿದಂತೆ ಹಲವು ಸಿನಿಮಾಗಳಿಗೆ ಆಕ್ಷನ್‌ ಕಟ್‌ ಹೇಳಿದ್ದ ಹಿರಿಯ ನಟ, ನಿರ್ದೇಶಕ ಜೋ ಸೈಮನ್ ಅವರು ಶುಕ್ರವಾರ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಜೋ ಸೈಮನ್​ ಅವರಿಗೆ 80 ವರ್ಷ ವಯಸ್ಸಾಗಿತ್ತು. ಸಾಹಸ ಸಿಂಹ, ಹಾಂಕಾಂಗ್​ನಲ್ಲಿ ಏಜೆಂಟ್ ಅಮರ್​, ಸಿಂಹ ಜೋಡಿ, ಸ್ನೇಹದ ಕಡಲಲ್ಲಿ, ರವಿವರ್ಮ, ಊರಿಗೆ ಉಪಕಾರಿ ಸೇರಿದಂತೆ ಹಿಟ್​ ಸಿನಿಮಾ ಕೊಟ್ಟಿದ್ದಾರೆ. ವಿಷ್ಣುವರ್ಧನ್​, ಅಂಬರೀಶ್​​ಗೆ ನೆಚ್ಚಿನ ನಿರ್ದೇಶಕ ಆಗಿದ್ದರು.ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಬಂದಿದ್ದ ಅವರು, ಅಲ್ಲಿಯೇ ಕುಸಿದುಬಿದ್ದ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರ ನಿಧನಕ್ಕೆ ಕನ್ನಡ ಚಿತ್ರರಂಗದ ಗಣ್ಯರು ಕಂಬನಿ ಮಿಡಿದಿದ್ದಾರೆ. ನಾಲ್ಕೈದು ದಶಕಗಳಿಂದ ಕನ್ನಡ ಚಿತ್ರರಂಗದಲ್ಲಿ ನಟ, ನಿರ್ದೇಶಕರಾಗಿ ಜೋ ಸೈಮನ್‌ ಅವರು ಜನಪ್ರಿಯರಾಗಿದ್ದರು.

‌ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಶಾಸಕ ಸುನಿಲ್ ಕುಮಾರ್ ಸಿವಿರುದ್ಧ ಬಿಜೆಪಿ ಶಾಸಕ ಸುನಿಲ್ ಕುಮಾರ್ ಹೊಸ ಬಾಂಬ್‌ ಅನ್ನು ಸಿಡಿಸಿದ್ದಾರೆ. ಸಿದ್ದರಾಮಯ್ಯ ವಿರುದ್ಧದ ಬಗೆಗಿನ ಗಂಭೀರ ಆರೋಪದ ಬಗ್ಗೆ ಸುನಿಲ್ ಅವರು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡು ಶೇರ್ ಮಾಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಸಿಎಂ ಶಿಫಾರಸು ಪತ್ರ ಸಹಿತ ಸುನಿಲ್ ಕುಮಾರ್ ಆರೋಪ ಮಾಡಿದ್ದು, ಸಿಎಂ ಸಿದ್ದರಾಮಯ್ಯ ಅವರ ಹಳಿ ತಪ್ಪಿದ ಆಡಳಿತದ ಕ್ಲಾಸಿಕ್ ಉದಾಹರಣೆಯಾಗಿದೆ. ಮಂಡ್ಯ ಜಿಲ್ಲೆಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಯನ್ನು ಮೈಸೂರು ಗ್ರಾಮಾಂತರ ಜಿಲ್ಲೆ ಅಬಕಾರಿ ಡಿಸಿಯಾಗಿ ನಿಯೋಜಿಸುವಂತೆ ಖುದ್ದು ಮುಖ್ಯಮಂತ್ರಿಗಳು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿಗಳಿಗೆ ಪತ್ರ ಬರೆದು ನಿರ್ದೇಶನ ನೀಡಿದ್ದಾರೆ ಅಂತಾ ಗಂಭೀರ

ಬೆಳಗಾವಿ: ಸುಮಾರು 60 ವರ್ಷ ದೇಶವನ್ನಾಳಿದ ಕಾಂಗ್ರೆಸ್ ಪಕ್ಷವು ಈ ದೇಶದಲ್ಲಿ ಬಡತನ ನಿರ್ಮೂಲನೆ ಮಾಡುವುದಾಗಿ ಹೇಳಿತ್ತು. ಇಂಥ ಲಜ್ಜೆಗೆಟ್ಟ ಕಾಂಗ್ರೆಸ್ ಪಕ್ಷವು ಈ ದೇಶದಲ್ಲಿ ಬಡವರನ್ನು ನಿರ್ಮೂಲನೆ ಮಾಡಿದರೇ ಹೊರತು ಬಡವರ ಬಡತನ ನಿರ್ಮೂಲನೆ ಮಾಡಲು ಇವರಿಂದ ಆಗಿಲ್ಲ ಎಂದು ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಆಕ್ಷೇಪಿಸಿದ್ದಾರೆ.ಇಂದು ವಿಬಿ ಜಿ ರಾಮ್ ಜಿ ಕುರಿತು ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದ ಪುಡಾರಿಗಳು ಶ್ರೀಮಂತರಾದರು ಎಂದು ಟೀಕಿಸಿದರು. ಕಳೆದ ಎರಡೂವರೆ ವರ್ಷದಲ್ಲಿ ಒಂದಾದರೂ ಹೊಸ ಅಭಿವೃದ್ಧಿ ಯೋಜನೆ ನೀಡಲು ಇವರಿಂದ ಸಾಧ್ಯವಾಗಿದೆಯೇ ಎಂದು ಪ್ರಶ್ನಿಸಿದರು. ಗೃಹಲಕ್ಷ್ಮಿಯಡಿ 2 ಸಾವಿರ ಕೊಡುವುದಾಗಿ ಬೆನ್ನು ತಟ್ಟಿಕೊಳ್ಳುತ್ತಾರೆ.

ಕೊಲಂಬೊ: ಭಾರತ ಮತ್ತು ಶ್ರೀಲಂಕಾ ಆತಿಥ್ಯದಲ್ಲಿ ನಡೆಯುತ್ತಿರುವ ಟಿ20 ವಿಶ್ವಕಪ್‌ನಲ್ಲಿ ಇಂದು ಅಚ್ಚರಿಯ ಫಲಿತಾಂಶ ಹೊರಬಿದ್ದಿದೆ. ಮಾಜಿ ಚಾಂಪಿಯನ್‌, ಬಲಿಷ್ಠ ಆಸ್ಟ್ರೇಲಿಯಾ ತಂಡಕ್ಕೆ ಕ್ರಿಕೆಟ್‌ ಶಿಶು ಜಿಂಬಾಬ್ವೆ ಆಘಾತ ನೀಡಿದೆ. ಜಿಂಬಾಬ್ವೆ ತಂಡವು 23 ರನ್‌ಗಳ ಚಾರಿತ್ರಿಕ ಗೆಲುವು ಸಾಧಿಸಿದೆ. ಟಾಸ್‌ ಗೆದ್ದ ಆಸ್ಟ್ರೇಲಿಯಾ ಫೀಲ್ಡಿಂಗ್‌ ಆಯ್ದುಕೊಂಡಿತು. ಆರಂಭಿಕ ಆಟಗಾರ ಬ್ರಿಯಾನ್ ಬೆನೆಟ್ (64) ಅವರ ಅರ್ಧಶತಕದ ಬಲದಿಂದ ಜಿಂಬಾಬ್ವೆ ತಂಡವು 20 ಓವರ್‌ಗಳಲ್ಲಿ 2 ವಿಕೆಟ್‌ಗೆ 169 ರನ್‌ ಗಳಿಸಿತ್ತು.ಸವಾಲಿನ ಗುರಿಯನ್ನು ಬೆನ್ನಟ್ಟಿದ ಆಸ್ಟ್ರೇಲಿಯಾ ತಂಡ ಆರಂಭದಲ್ಲೇ ಆಘಾತ ಅನುಭವಿಸಿತು. ಮುಜರಬಾನಿ ಬ್ಲೆಸಿಂಗ್‌ ಮತ್ತು ಬ್ರಾಡ್ ಇವಾನ್ಸ್ ಅವರ ದಾಳಿಗೆ ಆಸ್ಟ್ರೇಲಿಯಾ ಬ್ಯಾಟರ್‌ಗಳು ಪೆವಿಲಿಯನ್‌ ಪರೇಡ್‌ ನಡೆಸಿತು. 19.3 ಓವರ್‌ಗಳಲ್ಲಿ 146 ರನ್‌ಗಳಿಗೆ ಹೋರಾಟ ಮುಗಿಸಿತು.