ವಡೋದರ: ಇಲ್ಲಿ ನಡೆಯುತ್ತಿರುವ ಮಹಿಳಾ ಪ್ರೀಮಿಯರ್ ಲೀಗ್ನ 12ನೇ ಪಂದ್ಯದಲ್ಲಿ ಆರ್ಸಿಬಿ ಮತ್ತು ಗುಜರಾತ್ ಮುಖಾಮುಖಿಯಾಗುತ್ತಿದೆ. ಟಾಸ್ ಗೆದ್ದಿರುವ ಗುಜರಾತ್ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದೆ. ಇದುವರೆಗೆ ಆಡಿರುವ ನಾಲ್ಕು ಪಂದ್ಯಗಳಲ್ಲೂ ಗೆಲುವು ಸಾಧಿಸಿರುವ ಆರ್ಸಿಬಿ ಇದೀಗ ಮತ್ತೇ ಗೆಲುವಿನ ಆತ್ಮವಿಶ್ವಾಸದೊಂದಿಗೆ ಫೀಲ್ಡ್ಗೆ ಇಳಿದಿದೆ. ಮತ್ತೊಂದು ಕಡೆ ಎರಡು ಸೋಲು ಹಾಗೂ ಎರಡು ಗೆಲವು ಸಾಧಿಸಿರುವ ಗುಜರಾತ್ ಇಂದು ಆರ್ಸಿಬಿ ವಿರುದ್ಧ ಗೆದ್ದು ಅಂಕಪಟ್ಟಿಯಲ್ಲಿ ಮೇಲೆ ಬರುವ ಪ್ರಯತ್ನದಲ್ಲಿದೆ.ಗುಜರಾತ್ ಜೈಂಟ್ಸ್ ಮಹಿಳಾ ತಂಡ: ಬೆತ್ ಮೂನಿ(ವಿಕೆಟ್ ಕೀಪರ್), ಸೋಫಿ ಡಿವೈನ್, ಅನುಷ್ಕಾ ಶರ್ಮಾ, ಕನಿಕಾ ಅಹುಜಾ,
ಬಿಪಿ ಅಥವಾ ರಕ್ತದೊತ್ತಡವನ್ನು ಸಮತೋಲದಲ್ಲಿದಡಲು ನಮ್ಮ ಆಹಾರ ಕ್ರಮದಲ್ಲಿ ಬದಲಾವಣೆ ಮಾಡಿಕೊಳ್ಳಬಹುದು. ಇನ್ನು ಸಾಮಾನ್ಯವಾಗಿ ನಮ್ಮ ಬಿಪಿಯಲ್ಲಿ ಹತೋಟಿಗೆ ತರಲು ಇಲ್ಲಿದೆ ಕೆಲ ಸಲಹೆಗಳು.ಆಹಾರ ಕ್ರಮದಲ್ಲಿ ಉಪ್ಪಿನ ಬಳಕೆಯನ್ನು ಆದಷ್ಟು ಕಡಿಮೆ ಮಾಡಿ. ದಿನಕ್ಕೆ ಒಂದು ಟೀಚಮಚಕ್ಕಿಂತ ಹೆಚ್ಚು ಉಪ್ಪು ಬಳಸಬೇಡಿ. ಉಪ್ಪಿನಕಾಯಿ, ಹಪ್ಪಳ ಮತ್ತು ಸಂಸ್ಕರಿಸಿದ ಆಹಾರಗಳನ್ನು ದೂರವಿಡಿ.ಪೊಟ್ಯಾಸಿಯಮ್ ಹೆಚ್ಚಿರುವ ಆಹಾರಗಳಾದ ಬಾಳೆಹಣ್ಣು, ಎಳನೀರು, ಪಾಲಕ್ ಸೊಪ್ಪು ಮತ್ತು ಗೆಡ್ಡೆಗೆಣಸುಗಳನ್ನು ಸೇವಿಸಿ. ಇವು ರಕ್ತದೊತ್ತಡವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತವೆ.
ಬೆಂಗಳೂರು: ಅಬಕಾರಿ ಡಿಸಿಯೊಬ್ಬರು ₹25 ಲಕ್ಷ ಲಂಡ ಪಡೆದ ಪ್ರಕರಣದಡಿಯಲ್ಲಿ ಅಬಕಾರಿ ಸಚಿವರೂ ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಸಚಿವ ಆರ್ ಬಿ ತಿಮ್ಮಾಪುರ ಅವರ ವಿರುದ್ಧ ಕರ್ನಾಟಕ ಲೋಕಾಯುಕ್ತಕ್ಕೆ ದೂರನ್ನು ನೀಡಲಾಗಿದೆ.ಇತ್ತೀಚೆಗೆ ಅಬಕಾರಿ ಉಪ ಆಯುಕ್ತ ಜಗದೀಶ್ ನಾಯಕ್ ಅವರು ಬಾರ್ ಲೈಸೆನ್ಸ್ ನೀಡಲು ₹25 ಲಕ್ಷ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಅಧಿಕಾರಿಗಳಿಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದರು. ಇನ್ನೂ ಜಗದೀಶ್ ಸೇರಿದಂತೆ ಐವರು ಅಬಕಾರಿ ಅಧಿಕಾರಿಗಳನ್ನು ಲೋಕಾಯುಕ್ತ ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ನಂದಗಡ: ಮರಾಠಿಯಲ್ಲಿ ಭಾಷಣ ಮಾಡಿದ ಖಾನಾಪುರ ಶಾಸಕ ವಿಠ್ಠಲ ಹಲಗೇಕರಗೆ ಸಿಎಂ ಸಿದ್ದರಾಮಯ್ಯ ಅದೇ ವೇದಿಕೆಯಲ್ಲಿ ಕನ್ನಡ ಪಾಠ ಮಾಡಿದರು. ಕರ್ನಾಟಕದಲ್ಲಿರುವ ಎಲ್ಲರೂ ಕನ್ನಡ ಕಲಿಯಲೇಬೇಕು ಎಂದು ಕನ್ನಡ ವಿರೋಧಿ ಎಂಇಎಸ್ ನಾಯಕರಿಗೆ ಎಚ್ಚರಿಕೆ ನೀಡಿದರು.ಖಾನಾಪುರ ತಾಲ್ಲೂಕಿನ ನಂದಗಡ ಗ್ರಾಮದಲ್ಲಿ ಸೋಮವಾರ ರಾಯಣ್ಣನ 'ವೀರಭೂಮಿ' ವಸ್ತು ಸಂಗ್ರಹಾಲಯ ಉದ್ಘಾಟಿಸಿ ಅವರು ಮಾತನಾಡಿದರು.ಕರ್ನಾಟಕದಲ್ಲಿರುವ ಎಲ್ಲರೂ ಕನ್ನಡ ಕಲಿಯುವಂಥ ವಾತಾವರಣ ನಿರ್ಮಾಣವಾಗಬೇಕು. ಯಾರು ಎಲ್ಲಿಂದಲೂ ಬರಲಿ, ಎಲ್ಲೇ
ಬೆಳಗಾವಿ: ಇಲ್ಲಿನ ಮಚ್ಚೆ ಗ್ರಾಮದಲ್ಲಿ ಅಖಂಡ ಹಿಂದೂ ಸಮ್ಮೇಳನದ ಅಂಗವಾಗಿ ಬೆಆಯೋಜಿಸಿದ್ದ ಶೋಭಾ ಯಾತ್ರೆ ವೇಳೆ ಅನ್ಯಕೋಮಿನ ಧಾರ್ಮಿಕ ಭಾವನೆಗೆ ಧಕ್ಕೆ ತಂದ ಆರೋಪದಡಿ ಮಹಾರಾಷ್ಟ್ರದ ಹಿಂದೂ ನಾಯಕಿ ಹರ್ಷಿತಾ ಠಾಕೂರ ಸೇರಿ ಏಳು ಜನರ ಮೇಲೆ ಪ್ರಕರಣ ದಾಖಲಾಗಿದೆ.ಭಾನುವಾರ ನಡೆದ ಹಿಂದೂ ಸಮ್ಮೇಳನಕ್ಕೂ ಮುನ್ನ ಶೋಭಾ ಯಾತ್ರೆ ಮಾಡಲಾಯಿತು. ವಾಹನದ ಮೇಲೆ ನಿಂತ ಹರ್ಷಿತಾ ಅವರು ಅನ್ಸಾರಿ ದರ್ಗಾದ ಬಳಿ ಬಂದಾಗ ವಾಹನ ನಿಲ್ಲಿಸಿ ದರ್ಗಾದ ಕಡೆಗೆ ಬಾಣ ಬಿಟ್ಟಂತೆ ಕೈ ಮಾಡಿ ತೋರಿಸಿದ್ದಾರೆ. ಇದರಿಂದ ಧಾರ್ಮಿಕ ಭಾವನೆಗೆ ಧಕ್ಕೆಯನ್ನು ತಂದಿದ್ದಾರೆ, ಅದಲ್ಲದೆ ಸಮಾವೇಶದಲ್ಲಿಯೂ ಧಾರ್ಮಿಕ ಭಾವನೆ ಕೆರಳಿಸುವ ಭಾಷಣ ಮಾಡಿದ್ದಾರೆ ಎಂದು ಅಬ್ದುಲ್ ಖಾದರ್ ಮುಜಾವರ ಎನ್ನುವವರು ದೂರಿನಲ್ಲಿ ಉಲ್ಲೇಖ ಮಾಡಿದ್ದಾರೆ.
ಝಾನ್ಸಿ: ಈ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಝಾನ್ಸಿಯಲ್ಲಿ ನಿವೃತ್ತ ರೈಲ್ವೆ ಉದ್ಯೋಗಿಯೊಬ್ಬರು ತಮ್ಮ 35 ವರ್ಷದ ಲಿವ್-ಇನ್ ಸಂಗಾತಿಯನ್ನು ಕೊಂದು, ಆಕೆಯ ದೇಹವನ್ನು ಲೋಹದ ಟ್ರಂಕ್ನಲ್ಲಿ ತುಂಬಿಸಿ ಬೆಂಕಿ ಹಚ್ಚಿದ್ದಾರೆ ಎಂದು ಆರೋಪಿಸಲಾಗಿದೆ.ಆರೋಪಿ ರಾಮ್ ಸಿಂಗ್ ಪರಿಹಾರ್ ಎಂಬಾತ ಇಬ್ಬರು ಪತ್ನಿಯರೊಂದಿಗೆ ವಾಸಿಸುತ್ತಿದ್ದಾನೆ. ಮೊದಲ ಪತ್ನಿ ಸಿಪ್ರಿ ಬಜಾರ್ ಪ್ರದೇಶದಲ್ಲಿದ್ದರೆ, ಎರಡನೇ ಪತ್ನಿ ಅದೇ ನಗರದ ಸಿಟಿ ಕೊಟ್ವಾಲಿ ಪ್ರದೇಶದಲ್ಲಿ ವಾಸಿಸುತ್ತಿದ್ದರು. ಇದರ ಹೊರತಾಗಿಯೂ ಆರೋಪಿ ರಾಮ್ ಸಿಂಗ್ ಇನ್ನೊಂದು ಮಹಿಳೆ ಜೊತೆ ಸಹಜೀವನ ಸಂಗಾತಿ ಹೊಂದಿದ್ದನು.
ಬಳ್ಳಾರಿ: ಪೋಕ್ಸೊ ಸಂತ್ರಸ್ತೆ ಹೆಸರು ಮತ್ತು ವಿಳಾಸ ಬಹಿರಂಗಪಡಿಸಿದ ಆರೋಪದಡಿಯಲ್ಲಿ ಮಾಜಿ ಸಚಿವ ಬಿ. ಶ್ರೀರಾಮಲು ವಿರುದ್ಧ ದೂರು ದಾಖಲಾಗಿದೆ. ಬಳ್ಳಾರಿ ನಗರದ ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಮತ್ತು ಬಾಲ ನ್ಯಾಯ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಭಾಷಣದ ವೇಳೆ ಸಂವೇದನಾ ಶೀಲ ವಿವರ ಉಲ್ಲೇಖಿಸಿ, ಪೋಕ್ಸೋ ಕಾಯ್ದೆಯನ್ನು ಸ್ಪಷ್ಟವಾಗಿ ಉಲ್ಲಂಘಿಸಿರುವುದಾಗಿ ದೂರಿನಲ್ಲಿ ಆರೋಪ ಮಾಡಲಾಗಿದೆ. ದೂರಿನ ಅನ್ವಯ ಮಾಜಿ ಸಚಿವ ಶ್ರೀರಾಮುಲು ವಿರುದ್ಧ ಪೋಕ್ಸೋ ಅಡಿಯಲ್ಲಿ ಕೇಸ್ ದಾಖಲಾಗಿದೆ.
ಬೆಂಗಳೂರು: ಕಚೇರಿಯಲ್ಲಿ ಸಮವಸ್ತ್ರದಲ್ಲಿರುವಾಗಲೇ ಯುವತಿ ಜೊತೆ ಸರಸವಾಡಿರುವ ಡಿಜಿಪಿ ರಾಮಚಂದ್ರ ರಾವ್ ವಿಡಿಯೋ ವೈರಲ್ ಆಗುತ್ತಿದ್ದಂತೇ ಜೆಡಿಎಸ್ ರಾಜ್ಯ ಘಟಕ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಡಿಜಿಪಿ ರಾಮಚಂದ್ರ ರಾವ್ ತಮ್ಮ ಕಚೇರಿಯಲ್ಲಿ ಕರ್ತವ್ಯದಲ್ಲಿರುವಾಗಲೇ ಯುವತಿ ಜೊತೆ ಸರಸವಾಡುತ್ತಿರುವ ವಿಡಿಯೋಗಳು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡಿವೆ. ಈ ಬಗ್ಗೆ ತನಿಖೆ ನಡೆಸುವಂತೆ ಗೃಹ ಇಲಾಖೆಗೆ ಸಿಎಂ ಸಿದ್ದರಾಮಯ್ಯ ಆದೇಶಿಸಿದ್ದಾರೆ. ಆದರೆ ಇದು ನನ್ನನ್ನು ಸಿಲುಕಿಸಲು ಯಾರೋ ಮಾಡಿರುವ ಎಐ ವಿಡಿಯೋ ಎಂದು ಡಿಜಿಪಿ ರಾಮಚಂದ್ರ ರಾವ್ ಸ್ಪಷ್ಟನೆ ನೀಡಿದ್ದಾರೆ.
ಕೆಲವರು ಚಳಿಗಾಲದಲ್ಲಿ ಮೊಸರನ್ನು ಸೇವಿಸಲು ಹಿಂದೇಟು ಹಾಕುತ್ತಾರೆ. ಶೀತ ಆಗುವ ಭಯದಿಂದ ಮಕ್ಕಳಿಗೂ ಮೊಸರನ್ನು ನೀಡಲು ತಾಯಂದಿರು ಭಯ ಪಡುತ್ತಾರೆ. ಆದರೆ ಮೊಸರನ್ನು ಸೇವನೆ ಮಾಡುವುದರಿಂದ ಆರೋಗ್ಯಕ್ಕಾಗುವ ಪ್ರಯೋಜಗಳು ಏನೆಂಬುದನ್ನು ಇಲ್ಲಿ ವಿವರಿಸಲಾಗಿದೆ. ರೋಗನಿರೋಧಕ ಶಕ್ತಿ: ಮೊಸರಿನಲ್ಲಿರುವ 'ಪ್ರೊಬಯಾಟಿಕ್ಸ್' (ಒಳ್ಳೆಯ ಬ್ಯಾಕ್ಟೀರಿಯಾ) ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಿ, ಚಳಿಗಾಲದ ಸೋಂಕುಗಳ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ. ಜೀರ್ಣಕ್ರಿಯೆ: ಇದು ಜೀರ್ಣಾಂಗವ್ಯೂಹದ ಆರೋಗ್ಯವನ್ನು ಸುಧಾರಿಸುತ್ತದೆ.
ಬೆಂಗಳೂರು: ಚಿನ್ನ ಕಳ್ಳಸಾಗಣಿಕೆಯಲ್ಲಿ ಬಂಧಿತರಾಗಿರುವ ನಟಿ ರನ್ಯಾ ರಾವ್ ತಂದೆ, ಡಿಜಿಪಿ ರಾಮಚಂದ್ರ ರಾವ್ ಕಚೇರಿಯಲ್ಲಿ ಸಮವಸ್ತ್ರದಲ್ಲಿರುವಾಗಲೇ ಸರಸ ಸಲ್ಲಾಪದಲ್ಲಿ ತೊಡಗಿಕೊಂಡಿದ್ದ ವಿಡಿಯೋಗಳು ವೈರಲ್ ಆಗುತ್ತಿದ್ದಂತೇ ಸಿಎಂ ಸಿದ್ದರಾಮಯ್ಯ ಕೆಂಡಾಮಂಡಲರಾಗಿದ್ದಾರೆ. ಮಗಳು ನೋಡಿದ್ರೆ ದುಬೈನಿಂದ ಅಕ್ರಮ ಚಿನ್ನಸಾಗಣಿಕೆ ಮಾಡಿದ ಆರೋಪದಲ್ಲಿ ಜೈಲು ಸೇರಿದ್ದಾಳೆ. ಇತ್ತ ತಂದೆಯದ್ದು ರಾಸಲೀಲೆಯ ವಿಡಿಯೋಗಳು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡಿವೆ. ಈ ವಿಡಿಯೋಗಳು ರಾಜ್ಯ ಪೊಲೀಸ್ ಇಲಾಖೆಯೇ ತಲೆತಗ್ಗಿಸುವಂತೆ ಮಾಡಿದೆ. ಉನ್ನತ ಹುದ್ದೆಯಲ್ಲಿರುವ ಪೊಲೀಸ್ ಅಧಿಕಾರಿಯೊಬ್ಬರ ರಾಸಲೀಲೆಯ ವಿಡಿಯೋ ವೈರಲ್ ಆಗುತ್ತಿದ್ದಂತೇ ಸಿಎಂ ಸಿದ್ದರಾಮಯ್ಯ ತನಿಖೆಗೆ ಆದೇಶಿಸಿದ್ದಾರೆ.
ಬೆಂಗಳೂರು: ಡಿಜಿಪಿ ರಾಮಚಂದ್ರ ರಾವ್ ಅವರ ಪ್ರಕರಣ ಇವತ್ತು ಬೆಳಗ್ಗೆ ಗೊತ್ತಾಗಿದೆ. ಕಾನೂನಿಗಿಂತ ಯಾರೂ ದೊಡ್ಡವರಲ್ಲ, ವಿಚಾರಣೆ ನಡೆಸಿ ಶಿಸ್ತು ಕ್ರಮ ಕೈಗೊಳ್ಳುತ್ತೇವೆಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಈ ವಿಚಾರವಾಗಿ ಮಾಧ್ಯುಮಕ್ಕೆ ಪ್ರತಿಕ್ರಿಯಿಸಿದ ಅವರು, ಎಷ್ಟೇ ದೊಡ್ಡ ವ್ಯಕ್ತಿಯಾಗಿದ್ರೂ ಕಾನೂನು ಕ್ರಮ ಕೈಗೊಳ್ಳುತ್ತೇವೆ. ಯಾರನ್ನೂ ಸುಮ್ಮನೇ ಬಿಡಲ್ಲ ಎಂದರು. ಪೊಲೀಸ್ ಸಮವಸ್ತ್ರದಲ್ಲೇ ತಮ್ಮ ಕಚೇರಿಯಲ್ಲಿ ಹಲವು ಯುವತಿಯರ ಜತೆ ಸರಸವಾಡಿದ ವಿಡಿಯೋ ಸಾಮಾಜಿಕ
ಬೆಂಗಳೂರು: ಮಾಧ್ಯಮಗಳಲ್ಲಿ ಯುವತಿಯರ ಜತೆಗಿನ ಸರಸದಾಟದ ವಿಡಿಯೋ ಪ್ರಸಾರವಾಗುತ್ತಿದ್ದ ಹಾಗೇ ಗೃಹ ಸಚಿವರನ್ನು ಭೇಟಿಯಾಗಲು ಬಂದ ಡಿಜಿಪಿ ರಾಮಚಂದ್ರ ರಾವ್ ಅವರ ಭೇಟಿಗೆ ಪರಂ ನಿರಾಕರಿಸಿದ್ದಾರೆ. ಇನ್ನೂ ಈ ವಿಡಿಯೋ ವೈರಲ್ ಬಗ್ಗೆ ಮೊದಲ ಪ್ರತಿಕ್ರಿಯೆ ನೀಡಿರುವ ಡಿಜಿಪಿ ರಾಮಚಂದ್ರ ರಾವ್ ಅವರು, ಇದು 8 ವರ್ಷದ ಹಳೆಯ ವಿಡಿಯೋ, ಈ ವಿಡಿಯೋ ಸುಳ್ಳು. ಈ ಬಗ್ಗೆ ಚರ್ಚಿಸಲಾಗುತ್ತದೆ ಎಂದು ಹೇಳಿದರು. ಮಾಧ್ಯಮಗಳಲ್ಲಿ ರಾಸಲೀಲೆ ವಿಡಿಯೋ ವೈರಲ್ ಬೆನ್ನಲ್ಲೇ ಗೃಹ ಸಚಿವ ಜಿ ಪರಮೇಶ್ವರ್ ಅವರನ್ನು ಭೇಟಿಗಾಗಿ ಬಂದಿರುವ
ನವದೆಹಲಿ: ಸೆಪ್ಟೆಂಬರ್ 2025 ರಲ್ಲಿ 41 ಜೀವಗಳನ್ನು ಬಲಿ ಪಡೆದ ಕರೂರ್ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡನೇ ಸುತ್ತಿನ ವಿಚಾರಣೆಗೆ ಬಂದಿರುವ ತಮಿಳಗ ವೆಟ್ರಿ ಕಳಗಂ ಮುಖ್ಯಸ್ಥ ವಿಜಯ್ ಅವರಿಗೆ ಬೆಂಬಲ ವ್ಯಕ್ತಪಡಿಸಲು ಕೇಂದ್ರ ತನಿಖಾ ದಳದ (CBI) ಕಚೇರಿಯ ಹೊರಗೆ ಅಭಿಮಾನಿಗಳು ಜಮಾಯಿಸಿದರು. ನಟ-ರಾಜಕಾರಣಿ ಕಾಲ್ತುಳಿತಕ್ಕೆ ಸಂಬಂಧಿಸಿದಂತೆ ತಮ್ಮ ಅನುಕೂಲಕರ ನಿಲುವಿನ ಸಂಕೇತವಾಗಿ ಅಭಿಮಾನಿಗಳು ಟಿವಿಕೆ ಧ್ವಜಗಳನ್ನು ಕೈಯಲ್ಲಿ ಹಿಡಿದಿದ್ದರು. ANI ಜೊತೆ ಮಾತನಾಡಿದ ಅಭಿಮಾನಿಯೊಬ್ಬರು, ಕಾಲ್ತುಳಿತದಲ್ಲಿ ವಿಜಯ್ ಅವರ ಪಾತ್ರವನ್ನು ತಳ್ಳಿಹಾಕಿದರು ಮತ್ತು ಪಕ್ಷದ
ಬೆಂಗಳೂರು: ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಬಂಧಿಯಾಗಿರುವ ನಟಿ ರನ್ಯಾ ರಾವ್ ಅವರ ಮಲತಂದೆ ಐಜಿಪಿ ರಾಮಚಂದ್ರ ರಾವ್ ಅವರ ಯುವತಿಯರ ಜತೆಗಿನ ಸರಸದಲ್ಲಿ ತೊಡಗಿರುವ ಹಸಿಬಿಸಿ ದೃಶ್ಯ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ತಮ್ಮ ಕಚೇರಿಯಲ್ಲೇ ಸಮವಸ್ತ್ರ ಧರಿಸಿ ಮಹಿಳೆಯರೊಂದಿಗೆ ಸರಸವಾಡಿರುವ ವಿಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಇದಕ್ಕೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.ರಾಮಚಂದ್ರ ರಾವ್ ಅವರಿಗೆ ಮಗಳ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲೂ ಸಂಕಷ್ಟ ಎದುರಾಗಿತ್ತು. ಇದೀಗ ಮಹಿಳೆಯರ ಜತೆ ಅಸಭ್ಯವಾಗಿ ವರ್ತನೆ ತೋರಿದ ಸಂಬಂಧ ಭಾರೀ ಟೀಕೆಗೆ ಗುರಿಯಾಗಿದ್ದಾರೆ.
ಇಂದೋರ್ನ ಏಕದಿನ ಶತಕದ ನಂತರ ಔಟ್ ಆದ ಡ್ಯಾರಿಲ್ ಮಿಚೆಲ್ ಅವರನ್ನು ವಿರಾಟ್ ಕೊಹ್ಲಿ ಮೈದಾನದಿಂದ ಹೊರಗೆ ತಳ್ಳುವ ಮೂಲಕ ತಮಾಷೆಯ ಕ್ಷಣವನ್ನು ಹಂಚಿಕೊಂಡರು. ಜನವರಿ 18 ರ ಭಾನುವಾರ ಇಂದೋರ್ನ ಹೋಲ್ಕರ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಭಾರತ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ನ್ಯೂಜಿಲೆಂಡ್ ಮಧ್ಯಮ ಕ್ರಮಾಂಕದ ಬ್ಯಾಟ್ಸ್ಮನ್ ಡ್ಯಾರಿಲ್ ಮಿಚೆಲ್ ಅದ್ಭುತ ಬ್ಯಾಟಿಂಗ್ ಪ್ರದರ್ಶನ ನೀಡಿದರು. ಬಲಗೈ ಬೌಲರ್ 131 ಎಸೆತಗಳಲ್ಲಿ 137 ರನ್ ಗಳಿಸಿ ಕಿವೀಸ್ ತಂಡವನ್ನು ಅದ್ಭುತ ಮೊತ್ತಕ್ಕೆ ಕೊಂಡೊಯ್ದರು. ಮಿಚೆಲ್
ಇತ್ತೀಚೆಗಿನ ದಿನಗಳಲ್ಲಿ ವೈರಲ್ ಆಗುವ ಹುಚ್ಚು. ಇದೇ ರೀತಿ ತನಗೆ ಬಸ್ ನಲ್ಲಿ ಯುವಕನೊಬ್ಬ ಲೈಂಗಿಕ ಕಿರುಕುಳ ನೀಡಿದ್ದಾನೆಂದು ವಿಡಿಯೋ ಮಾಡಿಕೊಂಡಿದ್ದಕ್ಕೆ ಆತ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ದೀಪಕ್ ಎಂಬ ಕೋಝಿಕ್ಕೋಡ್ ನಿವಾಸಿ ಆತ್ಮಹತ್ಯೆ ಮಾಡಿಕೊಂಡಾತ. ಕೆಲವು ದಿನಗಳ ಹಿಂದೆ ಯುವತಿಯೊಬ್ಬಳು ರಶ್ ಇದ್ದ ಬಸ್ ನಲ್ಲಿ ದೀಪಕ್ ತನ್ನನ್ನು ಅನುಚಿತವಾಗಿ ಮುಟ್ಟಿದ್ದಾನೆಂದು ಹೇಳಿಕೊಂಡು ವಿಡಿಯೋ ಹಂಚಿಕೊಂಡಿದ್ದಳು. ಈ ವಿಡಿಯೋ ಲಕ್ಷಗಟ್ಟಲೆ ವ್ಯೂ ಪಡೆದುಕೊಂಡಿದೆ. ಇದರಿಂದ ದೀಪಕ್ ಅವಮಾನಿತನಾಗಿದ್ದ. ಇದರಿಂದ ಮನನೊಂದು ತನ್ನ ಮನೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾನೆ.
ಇಂದೋರ್: ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಏಕದಿನ ಸರಣಿಗಾಗಿ ಭಾರತಕ್ಕೆ ಬಂದಿದ್ದ ವಿರಾಟ್ ಕೊಹ್ಲಿ ಸರಣಿ ಮುಗಿದ ಕ್ಷಣವೇ ಲಂಡನ್ ವಿಮಾನವೇರಿದ್ದಾರೆ. ಇತ್ತೀಚೆಗಿನ ದಿನಗಳಲ್ಲಿ ವಿರಾಟ್ ಕೊಹ್ಲಿ, ಪತ್ನಿ ಅನುಷ್ಕಾ ಮತ್ತು ಮಕ್ಕಳ ಜೊತೆ ಲಂಡನ್ ವಾಸಿಯಾಗಿದ್ದಾರೆ. ಕೇವಲ ಪಂದ್ಯಗಳಿರುವಾಗ ಮಾತ್ರ ಭಾರತಕ್ಕೆ ಬರುತ್ತಾರೆ. ಈಗ ಏಕದಿನ ಸರಣಿ ನೆಪದಲ್ಲಿ ಕೆಲವು ದಿನ ವಿರಾಟ್ ಮತ್ತು ಅನುಷ್ಕಾ ಭಾರತದಲ್ಲಿದ್ದರು. ನಿನ್ನೆ ಇಂಧೋರ್ ನಲ್ಲಿ ಕೊಹ್ಲಿ ಶತಕ ಸಿಡಿಸಿದ್ದರೂ ಭಾರತ ಪಂದ್ಯ ಗೆಲ್ಲಲಿಲ್ಲ. ಆದರೆ ಕೊನೆಯವರೆಗೂ ಹೋರಾಡಿದ ಕೊಹ್ಲಿಗೆ ಅಭಿಮಾನಿಗಳ ಮೆಚ್ಚುಗೆ ಸಿಕ್ಕಿತ್ತು.
ಚೆನ್ನೈ: ಕನ್ನಡದ ಬಿಗ್ಬಾಸ್ನಲ್ಲಿ ಗಿಲ್ಲಿ ನಟ ಟ್ರೋಫಿ ಗೆದ್ದರೆ, ಭಾನುವಾರವೇ ನಡೆದ ತಮಿಳು ಬಿಗ್ಬಾಸ್ನಲ್ಲಿ ವೈಲ್ಡ್ ಕಾರ್ಡ್ ಸ್ಪರ್ಧಿಯಾಗಿದ್ದ ನಟಿ ದಿವ್ಯಾ ಗಣೇಶ್ ವಿನ್ನರ್ ಆಗಿದ್ದಾರೆ.ಸೂಪರ್ಸ್ಟಾರ್ ವಿಜಯ್ ಸೇತುಪತಿ ಬಿಗ್ ಬಾಸ್ ತಮಿಳು ಸೀಸನ್ 9 ರ ಗ್ರ್ಯಾಂಡ್ ಫಿನಾಲೆ ಅದ್ಧೂರಿಯಾಗಿ ನಡೆಯಿತು. ಸೀಸನ್ನ ವಿಜೇತರನ್ನು ಅಂತಿಮವಾಗಿ ಅನೌನ್ಸ್ ಮಾಡಲಾಗಿದೆ. 2025ರ ಅಕ್ಟೋಬರ್ 5ರಂದು ತಮಿಳು ಬಿಗ್ಬಾಸ್ ಸೀಸನ್-9 ಆರಂಭವಾಗಿತ್ತು.ಆರಂಭದಲ್ಲಿ 20 ಸ್ಪರ್ಧಿಗಳು ಮನೆ ಒಳಗೆ ಪ್ರವೇಶಿಸಿದ್ದರು. ದಿವ್ಯಾ ಅವರು ವೈಲ್ಡ್ಕಾರ್ಡ್ ಸ್ಪರ್ಧಿಯಾಗಿ ಮನೆಯೊಳಗೆ ಹೋಗಿದ್ದರೂ ಉಳಿದ ಸ್ಪರ್ಧಿಗಳನ್ನು ಹಿಂದಿಕ್ಕಿ, ಅನೇಕ ಸವಾಲುಗಳನ್ನು ಸ್ವೀಕರಿಸಿ ವಿನ್ನರ್ ಟ್ರೋಫಿಯನ್ನು ತಮ್ಮದಾಗಿಸಿಕೊಂಡಿದ್ದಾರೆ.
ಪ್ರಾಣಿಗಳೆಂದರೆ ಕೆಲವರಿಗೆ ಅಚ್ಚುಮೆಚ್ಚು. ಅದೇ ರೀತಿ ಮಹಿಳೆಯೊಬ್ಬರು ಝೂನಲ್ಲಿ ಗೊರಿಲ್ಲಾಗೆ ಲಿಪ್ ಕಿಸ್ ಕೊಟ್ಟುಬಿಟ್ಟಿದ್ದಾರೆ ಆದರೆ ಮುಂದೇನಾಯ್ತು ಎಂದು ನೋಡಿದರೆ ನೀವೇ ನಗುತ್ತೀರಿ. ಪ್ರಾಣಿಗಳು ಮನುಷ್ಯರಿಂದ ಬಯಸುವುದು ಪ್ರೀತಿಯನ್ನು ಮಾತ್ರ. ಆದರೆ ತನ್ನವರ ತಂಟೆಗೆ ಬಂದರೆ ಪ್ರಾಣಿಗಳೂ ಯಾರನ್ನೂ ಸುಮ್ಮನೆ ಬಿಡೋ ಮಾತೇ ಇಲ್ಲ. ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿರುವ ಈ ವಿಡಿಯೋ ಅದಕ್ಕೆ ಸಾಕ್ಷಿ. ಮಹಿಳೆಯೊಬ್ಬರು ಝೂಗೆ ಹೋಗಿದ್ದಾಗ ಗೊರಿಲ್ಲಾ ಜೊತೆ ತಮಾಷೆ ಮಾಡುತ್ತಾರೆ. ಗೊರಿಲ್ಲಾ ತೋರಿದ ಪ್ರೀತಿಗೆ ತಾನೂ ಪ್ರತಿಯಾಗಿ ಲಿಪ್ ಕಿಸ್ ಮಾಡುತ್ತಾರೆ. ಇದನ್ನು ಹಿಂದಿನಿಂದ ಮತ್ತೊಂದು ಗೊರಿಲ್ಲಾ ಗಮನಿಸುತ್ತಿತ್ತು.
ಬೆಂಗಳೂರು: ಅಡಿಕೆ ಬೆಲೆ ಕಳೆದ ವಾರ ಏರಿಕೆ-ಇಳಿಕೆಯಾಗಿತ್ತು. ಆದರೆ ಇಂದು ಮತ್ತೆ ಬೆಲೆ ಯಥಾಸ್ಥಿತಿಯಲ್ಲಿದೆ. ಇಂದು ಅಡಿಕೆ ಮತ್ತು ಕಾಳು ಮೆಣಸು, ಕೊಬ್ಬರಿ ದರ ಹೇಗಿದೆ ಇಲ್ಲಿದೆ ವಿವರ. ಕಳೆದ ವಾರ ಅಡಿಕೆ ಬೆಲೆಯಲ್ಲಿ ಏರಿಕೆ ಆರಂಭವಾಗಿತ್ತು. ಸತತವಾಗಿ ನಾಲ್ಕು ದಿನಗಳ ಕಾಲ ಏರಿಕೆಯಾಗಿದ್ದು ರೈತರ ಸಂತಸಕ್ಕೆ ಕಾರಣವಾಗಿತ್ತು. ಆದರೆ ಇಂದು ಯಾವುದೇ ವ್ಯತ್ಯಾಸ ಕಂಡುಬರುತ್ತಿಲ್ಲ. ಇಂದು ಹೊಸ ಅಡಿಕೆ ಬೆಲೆ 460 ರೂ.ಗಳಷ್ಟಿದೆ. ಹಳೆ ಅಡಿಕೆ ಬೆಲೆ ಯಥಾಸ್ಥಿತಿಯಲ್ಲಿದ್ದು 535 ರೂ. ಗಳಾಗಿತ್ತು. ಇಂದೂ ಅಷ್ಟೇ ಇದೆ. ಡಬಲ್ ಚೋಲ್ ಬೆಲೆಯೂ 535 ರೂ.ಗಳಷ್ಟಾಗಿದೆ.
ಬೆಂಗಳೂರು: ಸಿದ್ದರಾಮಯ್ಯನವರು ಪ್ರಾಮಾಣಿಕರೆಂದು ಬಿಂಬಿಸಲು, ಈ ರಾಜ್ಯದ ಸಿಎಂ ಆಗಿ ಕಾನೂನು ರಕ್ಷಿಸಲು ನಾನು ನಿಜವಾಗಿಯೂ ಕಂಕಣಬದ್ಧವಾಗಿ ಇದ್ದೇನೆ ಎಂದು ತೋರಿಸಲು 7 ಪ್ರಕರಣಗಳನ್ನು ಸಿಬಿಐಗೆ ಕೊಟ್ಟವರು. ಅಂಥ ಮಹಾನುಭಾವ, ಬಳ್ಳಾರಿಯ ಪ್ರಕರಣವನ್ನು ಸಿಬಿಐಗೆ ಕೊಡಲು ಯಾಕೆ ಹಿಂದೇಟು ಹಾಕುತ್ತಾರೆ ಎಂದು ಶಾಸಕ ಜಿ. ಜನಾರ್ಧನ ರೆಡ್ಡಿ ಅವರು ಸವಾಲು ಹಾಕಿದ್ದಾರೆ.ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಈ ರಾಜ್ಯದ ಮುಖ್ಯಮಂತ್ರಿಯಾಗಿ ನಾನು ಇರುವ ಸಂದರ್ಭದಲ್ಲಿ ಸುಮಾರು 7 ಪ್ರಕರಣಗಳನ್ನು ಸಿಬಿಐಗೆ ಕೊಟ್ಟಿದ್ದೇನೆ. ಬಿಜೆಪಿಯವರು ಒಂದು ಕೇಸನ್ನಾದರೂ ಸಿಬಿಐಗೆ ಕೊಟ್ಟಿದ್ದಾರಾ ಎಂದು ಮುಖ್ಯಮಂತ್ರಿಗಳು ಕೇಳಿದ್ದಾರೆ.
ಸಾಮಾನ್ಯವಾಗಿ ದಪ್ಪ ಇದ್ದರೆ ಯಾವ ಆಹಾರ ಸೇವನೆ ಮಾಡಬೇಕು ಮಾಡಬಾರದು ಎಂಬ ಬಗ್ಗೆ ಅಭಿಪ್ರಾಯಗಳನ್ನು ಕೇಳುತ್ತೇವೆ. ಆದರೆ ತೆಳ್ಳಗಿರುವವರು ಯಾವ ರೀತಿಯ ಆಹಾರ ಸೇವಿಸಬೇಕು? ಇಲ್ಲಿದೆ ನೋಡಿ ಟಿಪ್ಸ್. ಪ್ರೊಟೀನ್ ಫುಡ್ಪ್ರಾಣಿ ಜನ್ಯ,ಸಸ್ಯ ಜನ್ಯ ಪ್ರೊಟೀನ್ ಯುಕ್ತ ಆಹಾರಗಳು, ಮೊಸರು, ಬೆಣ್ಣೆ, ತುಪ್ಪದಂತಹ ಡೈರಿ ಉತ್ಪನ್ನಗಳನ್ನು ಹೆಚ್ಚು ಸೇವಿಸಬೇಕು. ಕಾರ್ಬೋಹೈಡ್ರೇಟ್ ಫುಡ್ದೇಹಕ್ಕೆ ಶಕ್ತಿ ಒದಗಿಸಲು ಕಾರ್ಬೋಹೈಡ್ರೇಟ್ ಆಹಾರಗಳನ್ನು ಸೇವಿಸಬೇಕು. ಧಾನ್ಯಗಳು, ಗಡ್ಡೆ ಗೆಣಸು, ಬೀನ್ಸ್ ನಂತಹ ಫೈಬರ್ ಯುಕ್ತ ಆಹಾರಗಳನ್ನು ಸೇವಿಸಿ.
ಬೆಂಗಳೂರು: ಚಿನ್ನದ ಬೆಲೆ ಮತ್ತೆ ಏರಿಕೆ ಮತ್ತು ಇಳಿಕೆಯಾಗುತ್ತಲೇ ಇದೆ. ಆದರೆ ಇಂದು ವಾರದ ಆರಂಭದಲ್ಲೇ ಪರಿಶುದ್ಧ ಚಿನ್ನದ ದರ ಇಳಿಕೆಯಾದರೆ ಮತ್ತು ಇತರೆ ಚಿನ್ನದ ದರ ಏರಿಕೆ ಕಂಡಿದೆ. ಇಂದು ಪರಿಶುದ್ಧ ಚಿನ್ನದ ದರ ಮತ್ತು ಇತರೆ ಚಿನ್ನದ ದರ ವಿವರ ಇಲ್ಲಿದೆ ನೋಡಿ. ಚಿನ್ನದ ದರ ಏರಿಕೆಕಳೆದ ವಾರ ಪರಿಶುದ್ಧ ಚಿನ್ನದ ದರ ಸತತ ಏರಿಕೆ ಮತ್ತು ಇಳಿಕೆ ಕಂಡಿತ್ತು. ಆದರೆ ಈ ವಾರದ ಆರಂಭದಲ್ಲೇ ಚಿನ್ನದ ದರ ಏರಿಕೆಯಾಗಿತ್ತು. ಇಂದು ಪರಿಶುದ್ಧ ಚಿನ್ನದ ದರ ಕೊಂಚ ಇಳಿಕೆಯಾಗಿದೆ. ಪರಿಶುದ್ಧ ಚಿನ್ನದ ದರ ಮೊನ್ನೆ 1,46,510.00 ರೂ.ಗಳಿತ್ತು. ಇಂದು 1,46,375.00 ರೂ.ಗಳಷ್ಟಾಗಿದೆ.
ಮುಂಬೈ: ಟೀಂ ಇಂಡಿಯಾ ಕ್ರಿಕೆಟ್ ದಿಗ್ಗಜರಾದ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಜೊತೆಗೇ ಆಡುವುದನ್ನು ನೋಡಲು ಅಭಿಮಾನಿಗಳು ಇನ್ನು ಐದು ತಿಂಗಳು ಕಾಯಬೇಕು! ಈಗಷ್ಟೇ ನ್ಯೂಜಿಲೆಂಡ್ ವಿರುದ್ಧ ಏಕದಿನ ಸರಣಿ ಮುಗಿದಿದೆ. ಕೊಹ್ಲಿ, ರೋಹಿತ್ ಈಗ ಟೆಸ್ಟ್, ಟಿ20 ಮಾದರಿಗೆ ನಿವೃತ್ತಿ ಹೇಳಿದ್ದು ಏಕದಿನ ಸರಣಿ ಮಾತ್ರ ಆಡುತ್ತಿದ್ದಾರೆ. ಹೀಗಾಗಿ ಅಭಿಮಾನಿಗಳೂ ಈಗ ಏಕದಿನ ಸರಣಿ ಯಾವಾಗ ಬರುತ್ತೋ ಎಂದು ಕಾಯುವಂತಾಗಿದೆ. ಆದರೆ ಇನ್ನು ಐದು ತಿಂಗಳು ರೋಹಿತ್, ಕೊಹ್ಲಿ ಟೀಂ ಇಂಡಿಯಾ ಜೆರ್ಸಿಯಲ್ಲಿ ಕಣಕ್ಕಿಳಿಯಲ್ಲ. ಯಾಕೆಂದರೆ ಇನ್ನು, ನ್ಯೂಜಿಲೆಂಡ್ ವಿರುದ್ಧ ಟಿ20 ಸರಣಿ ನಡೆಯಲಿದೆ.
ಮುಂಬೈ: ಟೀಂ ಇಂಡಿಯಾ ಕೋಚ್ ಆಗಿ ಗೌತಮ್ ಗಂಭೀರ್ ಆಯ್ಕೆಯಾದ ಬಳಿಕ ತಂಡ ಗೆಲ್ಲುವುದನ್ನೇ ಮರೆತಿದೆ. ಇದಕ್ಕೆ ಫ್ಯಾನ್ಸ್ ಅಸಮಾಧಾನಗೊಂಡಿದ್ದು ಅವರನ್ನು ಕೋಚ್ ಸ್ಥಾನದಿಂದ ಕಿತ್ತು ಹಾಕಲು ವಿನೂತನ ಐಡಿಯಾ ನೀಡಿದ್ದಾರೆ. ಗೌತಮ್ ಗಂಭೀರ್ ಟೀಂ ಇಂಡಿಯಾ ಕೋಚ್ ಆದ ಬಳಿಕ ತಂಡ ಶ್ರೀಲಂಕಾ ವಿರುದ್ಧವೂ ತವರಿನಲ್ಲೇ ಸರಣಿ ಸೋಲುತ್ತಿದೆ. ಗಂಭೀರ್-ಅಗರ್ಕರ್ ಜೋಡಿ ಈ ಹಿಂದೆ ರಾಹುಲ್ ದ್ರಾವಿಡ್-ರೋಹಿತ್ ಶರ್ಮಾ ಕಟ್ಟಿದ್ದ ಸದೃಢ ತಂಡ ಇದೇನಾ ಎಂದು ಅಚ್ಚರಿಪಡುವಂತಹ ‘ಸಾಧನೆ’ ಮಾಡಿದೆ. ಇದರಿಂದ ಫ್ಯಾನ್ಸ್ ಆಕ್ರೋಶಗೊಂಡಿದ್ದು ಗಂಭೀರ್ ರನ್ನು ಕೋಚ್ ಹುದ್ದೆಯಿಂದ ತೆಗೆದು ಹಾಕಲು ನಮ್ಮ ಬಳಿ ಒಂದು ಒಳ್ಳೆ ಐಡಿಯಾ ಇದೆ.
ವಡೋದರ: ಡಬ್ಲ್ಯುಪಿಎಲ್ 2026 ರಲ್ಲಿ ಆರ್ ಸಿಬಿ ಇದುವರೆಗೂ ಅದ್ಭುತ ಪ್ರದರ್ಶನ ನೀಡುತ್ತಲೇ ಬಂದಿದೆ. ಇದೀಗ ಆರ್ ಸಿಬಿ ವನಿತೆಯರಿಗೆ ನೇರವಾಗಿ ಫೈನಲ್ ಗೇರುವ ಅವಕಾಶವಿದೆ. ಅದಕ್ಕೆ ಈ ಒಂದು ಕೆಲಸ ಮಾಡಬೇಕು. ಸ್ಮೃತಿ ಮಂಧಾನ ಪಡೆದ ಇದುವರೆಗೆ ಆಡಿದ ನಾಲ್ಕೂ ಪಂದ್ಯಗಳಲ್ಲಿ ಗೆದ್ದು ಅಂಕಪಟ್ಟಿಯಲ್ಲಿ 8 ಅಂಕಗಳೊಂದಿಗೆ ಅಗ್ರ ಸ್ಥಾನದಲ್ಲಿದೆ. ಇದುವರೆಗೆ ನಡೆದ ಡಬ್ಲ್ಯುಪಿಎಲ್ ಟೂರ್ನಿಗೆ ಹೋಲಿಸಿದರೆ ಈ ಟೂರ್ನಿಯಲ್ಲಿ ಆರ್ ಸಿಬಿ ಅಮೋಘ ಪ್ರದರ್ಶನ ನೀಡುತ್ತಿದೆ. ಕಳೆದ ಪಂದ್ಯದಲ್ಲಿ ಡೆಲ್ಲಿ ತಂಡವನ್ನು 8 ವಿಕೆಟ್ ಗಳಿಂದ ಸೋಲಿಸಿದ್ದ ಆರ್ ಸಿಬಿ ಇಂದು ಗುಜರಾತ್ ಜೈಂಟ್ಸ್ ವಿರುದ್ಧ ಮತ್ತೊಂದು ಪಂದ್ಯವಾಡಲಿದೆ.
ನವದೆಹಲಿ: ಹೈಕಮಾಂಡ್ ಭೇಟಿಗಾಗಿ ದಾವೋಸ್ ನಲ್ಲಿ ವರ್ಲ್ಡ್ ಎಕಾನಾಮಿಕ್ ಸಮ್ಮೇಳನಕ್ಕೆ ಗೈರಾದ ಡಿಕೆ ಶಿವಕುಮಾರ್ ವಿರುದ್ಧ ಬಿಜೆಪಿ ಕಡು ಟೀಕೆ ಮಾಡಿದೆ. ರಾಜ್ಯದಲ್ಲಿ ನಾಯಕತ್ವ ವಿಚಾರವಾಗಿ ಗೊಂದಲವಿದೆ ಎನ್ನಲಾಗಿದೆ. ಇದರ ನಡುವೆ ಡಿಕೆ ಶಿವಕುಮಾರ್ ಮೊನ್ನೆ ದೆಹಲಿಗೆ ತೆರಳಿದ್ದರು. ಅಸ್ಸಾಂ ಚುನಾವಣೆ ನಿಮಿತ್ತ ಕಾಂಗ್ರೆಸ್ ಸಭೆಯಲ್ಲಿ ಪಾಲ್ಗೊಳ್ಳಲು ಅವರು ದೆಹಲಿಗೆ ತೆರಳಿದ್ದರು. ಇದೇ ವೇಳೆ ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ಭೇಟಿ ಮಾಡಿ ರಾಜ್ಯದ ನಾಯಕತ್ವ ಗೊಂದಲದ ಬಗ್ಗೆ ಮಾತುಕತೆ ನಡೆಸಲು ಪ್ರಯತ್ನಿಸಿದ್ದರು ಎನ್ನಲಾಗಿದೆ. ಆದರೆ ಇದೇ ವೇಳೆ ದಾವೋಸ್ ನಲ್ಲಿ ಆರ್ಥಿಕ ಸಮ್ಮೇಳನವಿತ್ತು. ಡಿಕೆ ಶಿವಕುಮಾರ್ ಕರ್ನಾಟಕದ ಪ್ರತಿನಿಧಿಯಾಗಿ ಸಮ್ಮೇಳನದಲ್ಲಿ ಭಾಗಿಯಾಗಬೇಕಿತ್ತು.
ಬೆಂಗಳೂರು: ರಾಜ್ಯ ನಾಯಕತ್ವ ವಿಚಾರವಾಗಿ ಚರ್ಚೆ ನಡೆಸಲು ದೆಹಲಿಯಲ್ಲಿ ಎರಡು ದಿನ ಬೀಡುಬಿಟ್ಟಿದ್ದರೂ ಡಿಕೆ ಶಿವಕುಮಾರ್ ಗೆ ಹೀಗೇಕಾಯ್ತು ಎಂದು ಬೇಸರ ವ್ಯಕ್ತಪಡಿಸುತ್ತಿದ್ದಾರೆ ಅವರ ಬೆಂಬಲಿಗರು. ಡಿಕೆ ಶಿವಕುಮಾರ್ ಮೊನ್ನೆಯೇ ದೆಹಲಿಗೆ ತೆರಳಿದ್ದರು. ಅಲ್ಲಿಯೇ ಎರಡು ದಿನ ರಾಹುಲ್ ಗಾಂಧಿ ಭೇಟಿಗಾಗಿ ಠಿಕಾಣಿ ಹೂಡಿದ್ದರು. ರಾಹುಲ್ ಗಾಂಧಿ ಭೇಟಿಯಾಗಿದ್ದರೂ ಇದು ಅಸ್ಸಾಂ ಚುನಾವಣೆ ವಿಚಾರವಾಗಿ ನಡೆದ ಸಭೆಯಾಗಿತ್ತು. ಇದರ ಹೊರತಾಗಿ ಡಿಕೆಶಿಗೆ ರಾಹುಲ್ ಗಾಂಧಿ ಅಪಾಯಿಂಟ್ ಮೆಂಟ್ ಸಿಗಲೇ ಇಲ್ಲ ಎನ್ನಲಾಗುತ್ತಿದೆ.
ಬೆಂಗಳೂರು: ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್ ಕನ್ನಡ ಸೀಸನ್ 12 ರಲ್ಲಿ ಮಂಡ್ಯ ಹೈದ ಗಿಲ್ಲಿ ನಟ ವಿನ್ನರ್ ಆಗಿ ಹೊರಹೊಮ್ಮುತ್ತಿದ್ದಂತೇ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಏನಂದ್ರು ಗೊತ್ತಾ? ಬಿಗ್ ಬಾಸ್ ಸೀಸನ್ 12 ರ ಗ್ರ್ಯಾಂಡ್ ಫಿನಾಲೆ ನಿನ್ನೆ ನಡೆದಿದೆ. ಮಂಡ್ಯದ ಹಳ್ಳಿ ಹುಡುಗ, ಸಾಮಾನ್ಯ ಕುಟುಂಬದಿಂದ ಬಂದ ಗಿಲ್ಲಿ ನಟ ಭಾರೀ ಸಂಖ್ಯೆಗಳ ವೋಟ್ ಪಡೆದು ವಿನ್ನರ್ ಆಗಿ ಹೊರಹೊಮ್ಮಿದ್ದಾರೆ. ಗಿಲ್ಲಿ ನಟ ವಿನ್ನರ್ ಆಗುತ್ತಿದ್ದಂತೇ ಅಭಿಮಾನಿಗಳು ಖುಷಿ ಮೇರೆ ಮೀರಿತ್ತು. ಕೈಯಲ್ಲಿ ಕೆಲಸವಿಲ್ಲವೆಂದು ಬಿಗ್ ಬಾಸ್ ರಿಯಾಲಿಟಿ ಶೋ ಒಪ್ಪಿಕೊಂಡಿದ್ದ ಗಿಲ್ಲಿ ಈಗ ಕೋಟ್ಯಾಂತರ ಮಂದಿ ಅಭಿಮಾನಿಗಳನ್ನು ಸಂಪಾದಿಸಿದ್ದಾರೆ.
ಬೆಂಗಳೂರು: ಬಿಗ್ ಬಾಸ್ ಕನ್ನಡ ಸೀಸನ್ 12 ಗ್ರ್ಯಾಂಡ್ ಫಿನಾಲೆ ಮುಕ್ತಾಯವಾಗಿದ್ದು ಗಿಲ್ಲಿ ನಟ ವಿನ್ನರ್ ಆಗಿದ್ದಾರೆ. ಕರಾವಳಿ ಹುಡುಗಿ ರಕ್ಷಿತಾ ಶೆಟ್ಟಿ ರನ್ನರ್ ಅಪ್ ಆಗಿದ್ದಾರೆ. ಮೊದಲ ರನ್ನರ್ ಅಪ್ ಆದ ಬಳಿಕ ರಕ್ಷಿತಾ ಶಾಕಿಂಗ್ ಹೇಳಿಕೆ ನೀಡಿದ್ದಾರೆ. ರಕ್ಷಿತಾ ಶೆಟ್ಟಿ ಫೈನಲ್ ಗೆಲ್ಲದೇ ಇದ್ದರೂ ಸಾಕಷ್ಟು ಜನರ ಪ್ರೀತಿ ಸಂಪಾದಿಸಿದ್ದಾರೆ. ರನ್ನರ್ ಅಪ್ ಆದ ಅವರು ಒಟ್ಟು 25 ಲಕ್ಷ ರೂ. ಬಹುಮಾನ ಮೊತ್ತ ಜೇಬಿಗಿಳಿಸಿಕೊಂಡಿದ್ದಾರೆ. ರನ್ನರ್ ಅಪ್ ಆದ ಬಳಿಕ ಮಾಧ್ಯಮಗಳಿಗೆ ಅವರು ಪ್ರತಿಕ್ರಿಯೆ ನೀಡಿದ್ದಾರೆ.
ಇಂಧೋರ್: ಭಾರತ ಮತ್ತು ನ್ಯೂಜಿಲೆಂಡ್ ಏಕದಿನ ಸರಣಿಯ ಮೂರೂ ಪಂದ್ಯಗಳಲ್ಲಿ ಟೀಂ ಇಂಡಿಯಾ ಹಿರಿಯ ಆಲ್ ರೌಂಡರ್ ರವೀಂದ್ರ ಜಡೇಜಾ ಆಡಿದ್ದಾರೆ. ಆದರೆ ವಿಕೆಟ್ ಪಡೆಯಲ್ಲ, ರನ್ ಮಾಡಲ್ಲ ಅವರು ಇನ್ನೂ ಯಾಕೆ ತಂಡದಲ್ಲಿದ್ದಾರೆ ಎಂದು ಫ್ಯಾನ್ಸ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರವೀಂದ್ರ ಜಡೇಜಾಗೆ ಈಗ 37 ವರ್ಷ. ರೋಹಿತ್, ಕೊಹ್ಲಿ ವಯಸ್ಸಿನವರೇ. ಇತ್ತೀಚೆಗಿನ ದಿನಗಳಲ್ಲಿ ಜಡೇಜಾ ಮೊದಲಿನಷ್ಟು ಪ್ರಭಾವ ಬೀರುತ್ತಿಲ್ಲ. 2022 ರಿಂದ ಜಡೇಜಾ 28 ಇನಿಂಗ್ಸ್ ಗಳಿಂದ ಗಳಿಸಿದ್ದು ಕೇವಲ 482 ರನ್. 38 ಇನಿಂಗ್ಸ್ ಗಳಿಂದ ಗಳಿಸಿದ್ದು 44 ವಿಕೆಟ್ ಗಳು.
ಬೆಂಗಳೂರು: ರಾಜ್ಯದಲ್ಲಿ ಕಳೆದ ವಾರ ಕೊಂಚ ಮಟ್ಟಿಗೆ ಚಳಿ ಕಡಿಮೆಯಾಗಿತ್ತು. ಆದರೆ ಈ ವಾರದಿಂದ ಚಳಿ ಮತ್ತೆ ಹೆಚ್ಚಾಗಲಿದೆ ಎನ್ನುತ್ತಿದೆ ಹವಾಮಾನ ವರದಿಗಳು. ಈ ವಾರದ ಹವಾಮಾನ ವರದಿ ಇಲ್ಲಿದೆ. ಕಳೆದ ವಾರ ವಾಯು ಭಾರ ಕುಸಿತದಿಂದಾಗಿ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿದ್ದರೆ ಬೆಂಗಳೂರು ಸುತ್ತಮುತ್ತಲ ಜಿಲ್ಲೆಗಳಲ್ಲಿ ತುಂತುರು ಮಳೆಯಾಗಿತ್ತು. ವಾರಂತ್ಯಕ್ಕೆ ಚಳಿ ಕಡಿಮೆಯಾಗಿ ಬಿಸಿಲು ಕಂಡುಬಂದಿತ್ತು. ಆದರೆ ಈ ವಾರ ಮತ್ತೆ ಚಳಿ ಹೆಚ್ಚಾಗಲಿದೆ. ಹಗಲು ಬಿಸಿಲಿನ ವಾತಾವರಣವಿರಲಿದ್ದು ರಾತ್ರಿ ಚಳಿ ತೀವ್ರವಾಗಲಿದೆ ಎನ್ನುತ್ತಿದೆ ಹವಾಮಾನ ವರದಿಗಳು. ಮುಂದಿನ ಒಂದು ವಾರ ಕಾಲ ಚಳಿ ತೀವ್ರತೆ ಹೆಚ್ಚಾಗಲಿದ್ದು ಅದಾದ ಬಳಿಕ ಕೊಂಚ ಚಳಿ ಕಡಿಮೆಯಾಗುವ ನಿರೀಕ್ಷೆಯಿದೆ.
ಸೋಮವಾರ ಶಿವನಿಗೆ ವಿಶೇಷವಾದ ದಿನವಾಗಿದ್ದು ಈ ದಿನ ತಪ್ಪದೇ ಶಿವನ ಕುರಿತಾದ ಈ ಸ್ತೋತ್ರವನ್ನು ಓದಿ. ಇದರಿಂದ ರೋಗ ಭಯ, ಅಕಾಲ ಮೃತ್ಯು ಭಯ ದೂರವಾಗುತ್ತದೆ.ತ್ರಿದಳಂ ತ್ರಿಗುಣಾಕಾರಂ ತ್ರಿನೇತ್ರಂ ಚ ತ್ರಿಯಾಯುಧಮ್ ।ತ್ರಿಜನ್ಮ ಪಾಪಸಂಹಾರಂ ಏಕಬಿಲ್ವಂ ಶಿವಾರ್ಪಿತಮ್ ॥ 1 ॥ ತ್ರಿಶಾಖೈಃ ಬಿಲ್ವಪತ್ರೈಶ್ಚ ಅಚ್ಛಿದ್ರೈಃ ಕೋಮಲೈಃ ಶುಭೈಃ ।ತವಪೂಜಾಂ ಕರಿಷ್ಯಾಮಿ ಏಕಬಿಲ್ವಂ ಶಿವಾರ್ಪಿತಮ್ ॥ 2 ॥ ದರ್ಶನಂ ಬಿಲ್ವವೃಕ್ಷಸ್ಯ ಸ್ಪರ್ಶನಂ ಪಾಪನಾಶನಮ್ ।ಅಘೋರಪಾಪಸಂಹಾರಂ ಏಕಬಿಲ್ವಂ ಶಿವಾರ್ಪಿತಮ್ ॥ 3 ॥
ಬೆಂಗಳೂರು: ಕುತೂಹಲ ಕೆರಳಿಸಿದ್ದ ಕನ್ನಡದ ದೊಡ್ಮನೆಯ ಬಿಗ್ಬಾಸ್ ಆಟಕ್ಕೆ ಭಾನುವಾರ ತೆರೆಬಿತ್ತು. ಗಿಲ್ಲಿ ನಟರಾಜ್ ಈ ಬಾರಿಯಬಿಗ್ ಬಾಸ್ ಕನ್ನಡ 12ರ ವಿಜೇತನಾಗಿ ಟ್ರೋಫಿಯನ್ನು ಮುಡಿಗೇರಿಸಿಕೊಂಡರು. ಕರಾವಳಿಯ ಕುವರಿ ರಕ್ಷಿತಾ ಶೆಟ್ಟಿ ರನ್ನರ್ ಅಪ್ ಆಗಿದ್ದಾರೆ. ಅಶ್ವಿನಿ ಗೌಡ ಅವರು ಎರಡನೇ ರನ್ನರ್ ಅಪ್ ಆಗಿ ಹೊರಹೊಮ್ಮಿದ್ದಾರೆ. ಬಿಗ್ಬಾಸ್ ವಿನ್ನರ್ ವಿನ್ನರ್ ಆಗಿರುವ ಗಿಲ್ಲಿಗೆ ₹50 ಲಕ್ಷದ ಜತೆಗೆ ಕಿಚ್ಚ ಸುದೀಪ್ ಅವರು ತಮ್ಮ ಕಡೆಯಿಂದ ₹10ಲಕ್ಷ ಹಣವನ್ನು ಉಡುಗೊರೆಯಾಗಿ ನೀಡಿದರು. ಅದಲ್ಲದೆ ಮಾರುತಿ ಸುಜುಕಿ ಅವರಿಂದ ವಿಕ್ಟೋರಿಸ್ ಕಾರನ್ನು ಗಿಪ್ಟ್ ಆಗಿ ನೀಡಲಾಯಿತು.
ಇಂಧೋರ್: ಭಾರತ ಮತ್ತು ನ್ಯೂಜಿಲೆಂಡ್ ನಡುವೆ ನಡೆದ ಅಂತಿಮ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಈ ಪಂದ್ಯದಲ್ಲಿ ಶತಕ ಸಿಡಿಸಿದ ಕೊಹ್ಲಿ ಸಂಭ್ರಮಿಸಲಿಲ್ಲ.. ಗೆಲುವಿಗಾಗಿ ಕೊನೆಯ ಕ್ಷಣದವರೆಗೆ ಹೋರಾಡಿದರು. ವಿರಾಟ್ ಕೊಹ್ಲಿ ಇದುವರೆಗೆ 85 ಶತಕ ಸಿಡಿಸಿದ್ದಾರೆ. ಎಷ್ಟೋ ಸ್ಮರಣೀಯ ಇನಿಂಗ್ಸ್ ಗಳನ್ನು ಆಡಿದ್ದಾರೆ. ಆದರೆ ಅವರ ಇಂದಿನ ಇನಿಂಗ್ಸ್ ಗೆ ವಿಶೇಷವಾದ ಸ್ಥಾನವಿದೆ. ಸಾಮಾನ್ಯವಾಗಿ ವಿರಾಟ್ ಕೊಹ್ಲಿ ಶತಕ ಸಿಡಿಸಿದರೆ ಸಂಭ್ರಮಿಸುವ ಪರಿಯೇ ಬೇರೆ. ಜಿಗಿದು, ಹಾರಿ ಅಬ್ಬರದಿಂದ ಸಂಭ್ರಮಿಸುತ್ತಾರೆ.
ಬೆಂಗಳೂರು: ಬಿಜೆಪಿಯವರು ತಾವು ಅಧಿಕಾರದಲ್ಲಿದ್ದಾಗ ಎಷ್ಟು ಪ್ರಕರಣವನ್ನು ಸಿಬಿಐಗೆ ವಹಿಸಿದ್ದಾರೆ. ನಾವು ನಮ್ಮ ಅಧಿಕಾರದಲ್ಲಿ ಸುಮಾರು ಏಳೆಂಟು ಪ್ರಕರಣಗಳನ್ನು ಸಿಬಿಐಗೆ ವಹಿಸಿದ್ದೆವು ಎಂದು ಸಿಎಂ ಸಿದ್ದರಾಮಯ್ಯ ಅವರು ಹೇಳಿದರು.ಕಾಂಗ್ರೆಸ್ ನಾಯಕರ ಬಗ್ಗೆ ಶ್ರೀರಾಮುಲು, ಜನಾರ್ಧನ ರೆಡ್ಡಿಯವರು ತುಚ್ಛವಾಗಿ ಮಾತನಾಡುತ್ತಾರೆ. ಬಿಜೆಪಿಯವರಿಗೆ ಸಂಸ್ಕೃತಿ ಇಲ್ಲ ಎನ್ನುವುದು ಇದರಿಂದ ಗೊತ್ತಾಗುತ್ತದೆ. ಇನ್ನೂ ಜನಾರ್ಧನ ರೆಡ್ಡಿ ಅವರನ್ನು ಬಳ್ಳಾರಿಗೆ ಬರಬಾರದಂತೆ ಯಾಕೆ ಹೇಳಲಾಗಿತ್ತು, ರಿಪಬ್ಲಿಕ್ ಆಫ್ ಬಳ್ಳಾರಿ ಎಂದು ವರ್ತಿಸಿದವರು ಯಾರು? ಲೋಕಾಯುಕ್ತರಾಗಿದ್ದ ನ್ಯಾಯಮೂರ್ತಿ ಸಂತೋಷ್ ಹೆಗಡೆ ಅವರು ಈ ಬಗ್ಗೆ ವರದಿ ಕೊಟ್ಟಿದ್ದರು.
ಸಾಮಾಜಿಕ ಆಚರಣೆಯಿಂದ ಜಾತಿ ತಾರತಮ್ಯವನ್ನು ತೊಡೆದುಹಾಕಬೇಕಾದರೆ, ಮೊದಲು ಮನಸ್ಸಿನಿಂದ ಜಾತಿಯನ್ನು ಅಳಿಸಿಹಾಕಬೇಕು ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್ಎಸ್ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದರು.ಹಿಂದೆ, ಜಾತಿಯು ವೃತ್ತಿ ಮತ್ತು ಕೆಲಸಕ್ಕೆ ಸಂಬಂಧಿಸಿತ್ತು, ಆದರೆ ನಂತರ, ಅದು ಸಮಾಜದಲ್ಲಿ ಬೇರೂರಿತು ಮತ್ತು ತಾರತಮ್ಯಕ್ಕೆ ಕಾರಣವಾಯಿತು ಎಂದು ಭಾಗವತ್ ಶನಿವಾರ ಆರ್ಎಸ್ಎಸ್ನ ಶತಮಾನೋತ್ಸವ ವರ್ಷದ ಭಾಗವಾಗಿ ಆಯೋಜಿಸಲಾದ ಜನಸಂಘೋಷ್ಠಿಯಲ್ಲಿ ಸಾರ್ವಜನಿಕರೊಂದಿಗೆ ಸಂವಾದ ನಡೆಸಿದರು.ಪ್ರಾಂತ್ ಸಂಘಚಾಲಕ್ ಅನಿಲ್ ಭಲೇರಾವ್ ಕೂಡ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ದಾವಣಗೆರೆ: ಜನರ ತಮ್ಮ ಅಭಿಮಾನ ಪ್ರದರ್ಶಿಸಲು ಮುಂದಿನ ಸಿಎಂ ಅಂತಾ ಘೋಷಣೆ ಕೂಗ್ತಾರೆ, ಆದರೆ ಅದು ಈ ಅವಧಿಗೆ ಅಲ್ಲ, ಮುಂದಿನ 2028ಕ್ಕೆ ನಾನು ಸಿಎಂ ಸ್ಥಾನದ ಆಕಾಂಕ್ಷಿ ಎಂದು ಸಚಿವ ಸತೀಶ್ ಜಾರಕಿಹೊಳಿ ವರು ಸ್ಪಷ್ಟನೆ ನೀಡಿದ್ದಾರೆ. ಜಿಲ್ಲೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅಭಿಮಾನಿಗಳು ಮುಂದಿನ ಸಿಎಂ ಸತೀಶ್ ಜಾರಕಿಹೊಳಿ ಅಂತಾ ಘೋಷಣೆ ಕೂಗ್ತಾರೆ. ಅದು ಈ ಅವಧಿಗೆ ಅಲ್ಲ, ಮುಂದಿನ 2028ಕ್ಕೆ ಅಂತಾ ಹೇಳಿದ್ದೇವೆ. ಜನ ನಮ್ಮ ಮೇಲಿನ ಅಭಿಮಾನಕ್ಕೆ ಈ ರೀತಿ ಘೋಷಣೆ ಕೂಗ್ತಾರೆ. ಈಗೀನ ಅವಧಿಗೆ ಣಾನು ಸಿಎಂ ಅಂತ ಹೇಳಿಲ್ಲ, ಈಗ ಯಾರಾಗುತ್ತಾರೆ ಆಗಲಿ, ನಾನು ಮುಂದಿನ ಚುನಾವಣೆಗೆ ಸಿಎಂ ಸ್ಥಾನದ ಆಕಾಂಕ್ಷಿ ಎಂದು ಹೇಳಿದರು.ದಾವಣಗೆರೆಯ ಚನ್ನಗಿರಿ ತಾಲೂಕಿನ ಪಾಂಡೋಮಟ್ಟಿಯ ಕಾರ್ಯಕ್ರಮಕ್ಕೆ ಆಗಮಿಸಿದ್ದರು. ಈ ವೇಳೆ ಮತ್ತೆ ಮುಂದಿನ ಸಿಎಂ
ಬಿಗ್ಬಾಸ್ ಸೀಸನ್ 12ರಲ್ಲಿ ಟಾಸ್ಕ್ ಮಾಸ್ಟರ್ ಎಂದೇ ಹೆಚ್ಚು ಗುರುತಿಸಿಕೊಂಡಿದ್ದ ಧನುಷ್ ಗೌಡ ಇದೀಗ ದೊಡ್ಮನೆಯಿಂದ ಎಲಿಮಿನೇಟ್ ಆಗಿ ಹೊರಬಂದಿದ್ದಾರೆಂಬ ಸುದ್ದಿ ಹರಿದಾಡುತ್ತಿದೆ. ಈ ಸೀಸನ್ನಲ್ಲಿ ಸ್ಟ್ರಾಂಗ್ ಸ್ಪರ್ಧಿಗಳಲ್ಲಿ ಒಬ್ಬರಾಗಿದ್ದ ಧನುಷ್ ಅವರು ಇಬ್ಬರು ಫೈನಲ್ ಸ್ಪರ್ಧಿಗಳಲ್ಲಿ ಒಬ್ಬರಾಗಿರುತ್ತಾರೆಂಬ ಭರವಸೆಯಿತ್ತು. ಟಿಕೆಟ್ ಟು ಫಿನಾಲೆ ಟಾಸ್ಕ್ನಲ್ಲಿ ವಿನ್ನರ್ ಆಗಿ ಗ್ರ್ಯಾಂಡ್ ಫಿನಾಲೆ ವೇದಿಕೆಗೆ ಡೈರೆಕ್ಟ್ ಆಗಿ ಪ್ರವೇಶಿಸಿದ್ದ ಧನುಷ್ ಇದೀಗ ದೊಡ್ಮನೆಯಿಂದ ಹೊರಬಂದಿದ್ದಾರೆಂಬ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಧನುಷ್ ಅವರು ಬಿಗ್ಬಾಸ್ಗೆ ಬಂದಮೇಲಿಂದಲೂ ಸ್ಟ್ರಾಂಗ್ ಅಭ್ಯರ್ಥಿಯಾಗಿ ಗುರುತಿಸಿಕೊಂಡಿದ್ದು, ಟಾಸ್ಕ್ ಮಾಸ್ಟರ್ ಎಂದೇ
ಬೆಂಗಳೂರು: ಕನ್ನಡತಿ, ಆಫ್ ಸ್ಪಿನ್ನರ್ ಶ್ರೇಯಾಂಕ ಪಾಟೀಲ ಅವರು ಮಹಿಳಾ ಪ್ರೀಮಿಯರ್ ಲೀಗ್ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪರ ಮಿಂಚುತ್ತಿದ್ದಾರೆ. ಗಾಯದಿಂದ ಚೇತರಿಸಿಕೊಂಡಿರುವ ಅವರು ಮತ್ತೆ ಸ್ಪರ್ಧಾ ಕಣಕ್ಕೆ ಮರಳಿದ್ದಾರೆ. ಆರ್ಸಿಬಿಗೆ ಆಡುತ್ತಿರುವ ಶ್ರೇಯಾಂಕ ಕಳೆದ ನಾಲ್ಕು ಪಂದ್ಯಗಳಲ್ಲಿ ಎಂಟು ವಿಕೆಟ್ ಕಬಳಿಸಿದ್ದಾರೆ. ಅದರಲ್ಲೂ ಗುಜರಾತ್ ಜೈಂಟ್ಸ್ ವಿರುದ್ಧ ಐದು ವಿಕೆಟ್ ಗೊಂಚಲು ಪಡೆದು, ವೈಯಕ್ತಿಕ ಶ್ರೇಷ್ಠ ಸಾಧನೆ ಮೆರೆದಿದ್ದಾರೆ. ಅದರ ಬೆನ್ನಲ್ಲೇ ಅವರಿಗೆ ಭಾರತ ಟಿ20 ತಂಡಕ್ಕೆ ಪ್ರವೇಶ ಪಡೆದಿದ್ದಾರೆ. 23 ವರ್ಷದ ಶ್ರೇಯಾಂಕ ಅವರು 2024ರಲ್ಲಿ ಡಬ್ಲ್ಯುಪಿಎಲ್ನಲ್ಲಿ ಗರಿಷ್ಠ ವಿಕೆಟ್ ಪಡೆದ ಬೌಲರ್ ಎನಿಸಿದ್ದರು. ನಂತರದಲ್ಲಿ ಅವರು ಭಾರತ ತಂಡದಲ್ಲಿ ಸ್ಥಾನ ಪಡೆದಿದ್ದರು. ಕಳೆದ ಒಂದು ವರ್ಷದಿಂದ ಗಾಯದಿಂದ ಬಳಲುತ್ತಿದ್ದ ಅವರು ಚೇತರಿಸಿಕೊಂಡು, ಭಾರತ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.
ಚಳಿಗಾಲದಲ್ಲಿ ಸಮಯದಲ್ಲಿ ಸಿಗುವ ಹೆಚ್ಚಾಗಿ ಸಿಗುವ ಸಿಹಿ ಗೆಣಸನ್ನು ನಮ್ಮ ಆಹಾರದಲ್ಲಿ ಸೇರಿಸುವುದರಿಂದ ಸಾಕಷ್ಟು ಆರೋಗ್ಯ ಪ್ರಯೋಜನಗಳನ್ನು ಕಾಣಬಹುದು. ಸಿಹಿ ಗೆಣಸು ಕೇವಲ ರುಚಿಕರ ಮಾತ್ರವಲ್ಲ, ಆರೋಗ್ಯಕ್ಕೆ ಅತ್ಯಗತ್ಯವಾದ ಅನೇಕ ಪೋಷಕಾಂಶಗಳ ಗಣಿಯಾಗಿದೆ. ಇದರ ಕೆಲ ಪ್ರಯೋಜನಗಳು ಇಲ್ಲಿದೆ. 1. ಹೆಚ್ಚಿಮ ಉತ್ತಮ ಪೋಷಕಾಂಶ: ಸಿಹಿ ಗೆಣಸಿನಲ್ಲಿ ವಿಟಮಿನ್ A (ಬೀಟಾ-ಕ್ಯಾರೋಟಿನ್ ರೂಪದಲ್ಲಿ), ವಿಟಮಿನ್ C, ಮ್ಯಾಂಗನೀಸ್, ವಿಟಮಿನ್ B6 ಮತ್ತು ಪೊಟ್ಯಾಸಿಯಮ್ ಹೇರಳವಾಗಿದೆ. ಇದು ದೇಹಕ್ಕೆ ಶಕ್ತಿಯನ್ನು ನೀಡುವ ಉತ್ತಮ ಕಾರ್ಬೋಹೈಡ್ರೇಟ್ ಹೊಂದಿದೆ.2. ಕಣ್ಣಿನ ಆರೋಗ್ಯಕ್ಕೆ ಸಹಕಾರಿ
ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೂರು ಪಂದ್ಯಗಳ ODI ಸರಣಿಯು ನಿರ್ಣಾಯಕ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ಶುಭ್ಮನ್ ಗಿಲ್ ಟಾಸ್ ಗೆದ್ದು ಮೊದಲು ಫೀಲ್ಡಿಂಗ್ ಆಯ್ದುಕೊಂಡಿದ್ದಾರೆ. ಭಾನುವಾರ ಇಂದೋರ್ನಲ್ಲಿ ಮೂರನೇ ಮತ್ತು ಅಂತಿಮ ODI ಪಂದ್ಯದಲ್ಲಿ ಎರಡೂ ತಂಡಗಳು ಮುಖಾಮುಖಿಯಾಗಲಿದ್ದು, ರೋಚಕ ಅಂತ್ಯ ಕಾಣಲಿದೆ. ಸರಣಿ 1-1 ರಲ್ಲಿ ಸಮಬಲಗೊಂಡಿರುವುದರಿಂದ, ಪಂದ್ಯವು 'ಮಾಡು ಇಲ್ಲವೇ ಮಡಿ' ಸ್ಪರ್ಧೆಯಾಗಿ ಮಾರ್ಪಟ್ಟಿದ್ದು, ವಿಜೇತರು ಸರಣಿಯನ್ನು ವಶಪಡಿಸಿಕೊಳ್ಳುತ್ತಾರೆ. ಮೊದಲ ODI ಪಂದ್ಯವನ್ನು ಗೆದ್ದು ಎರಡನೇ ಪಂದ್ಯದಲ್ಲಿ ಮುನ್ನಡೆಯನ್ನು ಕಳೆದುಕೊಂಡ ನಂತರ ಭಾರತವು ತಮ್ಮ ತವರು ಪ್ರೇಕ್ಷಕರ ಮುಂದೆ ಸರಣಿ ಗೆಲುವಿನೊಂದಿಗೆ ವರ್ಷವನ್ನು ಪ್ರಾರಂಭಿಸಲು ಉತ್ಸುಕವಾಗಿದೆ.
ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಮುಂದುವರೆದಿದ್ದು, ಹಿಂದೂಗಳ ಸುರಕ್ಷತೆ ಮತ್ತು ಹಿತಾಸಕ್ತಿಗಾಗಿ ಭಾರತ ಸರ್ಕಾರಕ್ಕೆ ಕನ್ನಡ ನಟ ಅನಿರುದ್ಧ್ ಅವರು ವಿಶೇಷ ಮನವಿ ಮಾಡಿದ್ದಾರೆ. ಈ ಸಂಬಂಧ ಅವರು ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಬರೆದುಕೊಂಡಿದ್ದಾರೆ. ಬಾಂಗ್ಲಾದೇಶದಲ್ಲಿ ಹಿಂದೂಗಳು ಹತ್ಯೆಗೊಳಗಾಗುತ್ತಿರುವ ಸುದ್ದಿಯನ್ನು ಕೇಳುವುದು ಅತ್ಯಂತ ನೋವುತುಂಬಿದ ಹಾಗೂ ಹೃದಯವಿದ್ರಾವಕ ಸಂಗತಿ. ಯಾವುದೇ ನಿರಪರಾಧ ಜೀವದ ನಷ್ಟವೂ ಮಾನವೀಯತೆಯ ಸೋಲು.
ಮುಂಬೈ: ನಟ-ಗಾಯಕ ಮತ್ತು ಭಾರತೀಯ ಜನತಾ ಪಕ್ಷದ (ಬಿಜೆಪಿ) ಸಂಸದ ಮನೋಜ್ ತಿವಾರಿ ಅವರ ಮುಂಬೈ ನಿವಾಸದಲ್ಲಿ ಕಳ್ಳತನ ನಡೆದಿದ್ದು, ₹5.40 ಲಕ್ಷ ಮೌಲ್ಯದ ನಗದು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಉದ್ಯೋಗಿಯನ್ನು ಬಂಧಿಸಲಾಗಿದೆ. ಅಂಧೇರಿ ಪಶ್ಚಿಮದ ಶಾಸ್ತ್ರಿ ನಗರ ಪ್ರದೇಶದಲ್ಲಿರುವ ಸುಂದರ್ಬನ್ ಅಪಾರ್ಟ್ಮೆಂಟ್ನಲ್ಲಿರುವ ತಿವಾರಿ ಅವರ ಫ್ಲಾಟ್ನಲ್ಲಿ ಈ ಘಟನೆ ನಡೆದಿದ್ದು, ಸುಮಾರು ₹5.40 ಲಕ್ಷ ನಗದು ಕಳವು ಮಾಡಲಾಗಿದೆ.ಮನೋಜ್ ತಿವಾರಿ ಅವರ ಮ್ಯಾನೇಜರ್ ಪ್ರಮೋದ್ ಜೋಗೇಂದ್ರ ಪಾಂಡೆ ಅವರು ಅಂಬೋಲಿ ಪೊಲೀಸ್ ಠಾಣೆಯಲ್ಲಿ ನೀಡಿದ
ಬೆಂಗಳೂರು: ಬಿಗ್ಬಾಸ್ ಸೀಸನ್ 12ರ ಸೀಸನ್ನ ಕಿಚ್ಚನ ಚಪ್ಪಾಳೆಯನ್ನು ಧ್ರುವಂತ್ ನೀಡಿದ ವಿಚಾರವಾಗಿ ಕಿಚ್ಚ ಸುದೀಪ್ ಅವರನ್ನು ಭಾರೀ ಟೀಕೆ ಮಾಡಿ, ಟ್ರೋಲ್ ಮಾಡಲಾಯಿತು. ಧ್ರುವಂತ್ ಬದಲು ಗಿಲ್ಲಿಗೆ ಸೀಸನ್ ಚಪ್ಪಾಳೆ ಕೊಡಬಹುದಿತ್ತು ಎಂಬುದು ಅನೇಕರ ಅಭಿಪ್ರಾಯ ಆಗಿತ್ತು. ಸುದೀಪ್ ಅವರನ್ನೇ ಅನೇಕರು ಟೀಕಿಸಿದರು. ಇದೀಗ ಈ ವಿಚಾರ ಸಂಬಂಧ ಸುದೀಪ್, ಬಿಗ್ಬಾಸ್ ಪ್ರೀ ಫಿನಾಲೆ ವೇದಿಕೆಯಲ್ಲಿ ಉತ್ತರಿಸಿದ್ದಾರೆ. ಈ ಬಿಗ್ಬಾಸ್ ನಡೆಯುವುದು ಒಬ್ಬರಿಂದ ಅಲ್ಲ, ಅಥವಾ ಕಿಚ್ಚ ಸುದೀಪ್ನಿಂದಲೂ ಅಲ್ಲ. ಕಿಚ್ಚನ ಚಪ್ಪಾಳೆ ನನ್ನ ಅನಿಸಿಕೆ. ಯಾರು ಅರ್ಹರೋ ಅವರನ್ನು ಹುರಿದುಂಬಿಸಬೇಕು ಎಂದು ಶಾಲೆಯಲ್ಲಿ ಟೀಚರ್ ಹೇಳಿಕೊಟ್ಟಿದ್ದರು. ಬಿಗ್ ಬಾಸ್ ಎಲ್ಲರ ಕೊಡುಗೆ.
ಕಾರವಾರ: ಕದ್ರಾ ನಿವಾಸಿ ರಿಶೇಲ್ ಡಿಸೋಜಾ ಆತ್ಮಹತ್ಯೆ ಪ್ರಕರಣದ ತನಿಖೆಯಲ್ಲಿ ನಿರ್ಲಕ್ಷ್ಯ ವಹಿಸಿದ ಆರೋಪದಡಿಯಲ್ಲಿ ಕದ್ರಾ ಠಾಣೆ ಪಿಎಸ್ಐ ಅವರನ್ನು ಅಮಾನತು ಮಾಡಿದ್ದಾರೆ. ರೀನಾ ಹಾಗೂ ಕ್ರಿಸ್ತೋದ್ ಡಿಸೋಜಾ ಪುತ್ರಿ ರಿಶೇಲ್ ಡಿಸೋಜಾ ಇತ್ತೀಚೆಗೆ ಆತ್ಮಹತ್ಯೆಗೆ ಶರಣಾಗಿದ್ದರು. ಪ್ರಕರಣದ ಪ್ರಾಥಮಿಕ ಹಂತದಲ್ಲೇ ನಿಷ್ಕಾಳಜಿ, ಆರೋಪಿಯನ್ನು ಬಂಧಿಸುವಲ್ಲಿ ವಿಫಲವಾದ ವಿಚಾರದಲ್ಲಿ ಇದೀಗ ಕದ್ರಾ ಪೊಲೀಸ್ ಠಾಣೆಯ ಪಿಎಸ್ಐ ಸುನೀಲ್ ಬಂಡಿವಡ್ಡರ್ ಅಮಾನತು ಮಾಡಲಾಗಿದೆ.
ಬೆಂಗಳೂರು: ಕಳೆದ ಎರಡು ಮೂರು ದಿನಗಳಿಂದ ಚಳಿ ಸಮತೋಲನದಲ್ಲಿದ್ದು, ಯಾವುದೇ ಜಿಲ್ಲೆಯಲ್ಲಿ ಮಳೆಯ ವರದಿ ದಾಖಲಾಗಿಲ್ಲ. ಇನ್ನೂ ಬೆಂಗಳೂರು, ಚಿಕ್ಕಬಳ್ಳಾಪುರ, ಕೋಲಾರ, ಚಿಕ್ಕಮಗಳೂರು, ತುಮಕೂರು, ಮೈಸೂರು, ಹಾಸನ, ಮಂಡ್ಯ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನ 8.8°C ರಿಂದ 11.7°C ದಾಖಲಾಗಿದೆ.ಇನ್ನೂ ರಾಜ್ಯದಲ್ಲಿ ಹವಾಮಾನ ಮುನ್ಸೂಚನೆ ಪ್ರಕಾರ ಮಳೆಯ ಮುನ್ಸೂಚನೆಯಿಲ್ಲ. ಬೆಂಗಳೂರಲ್ಲಿ ಚಳಿ ಮುಂದುವರೆಯಲಿದೆ. ಬೆಳಗಿನ ಸಮಯದಲ್ಲಿ ಕೆಲವು ಪ್ರದೇಶಗಳಲ್ಲಿ ಮಂಜು ಅಥವಾ ಮಂಜು ಬೀಳುವ ಸಾಧ್ಯತೆ ಇದೆ. ಮಳೆಯ ಮುನ್ಸೂಚನೆಯನ್ನು ನೀಡಲಾಗಿಲ್ಲ.ಕಳೆದ 12 ಗಂಟೆಗಳ ಹವಾಮಾನ ಇಲಾಖೆ ಮಾಹಿತಿಯ ಪ್ರಕಾರ, ಬೆಂಗಳೂರು ನಗರದಲ್ಲಿ ಗರಿಷ್ಠ ತಾಪಮಾನ 29.8 ಡಿಗ್ರಿ
ನವದೆಹಲಿ: ಕಳೆದ ತಿಂಗಳು ವಿಮಾನಯಾನ ಸೇವೆಯಲ್ಲಿ ಆಗಿರುವ ಭಾರಿ ವ್ಯತ್ಯಯಕ್ಕೆ ಸಂಬಂಧಿಸಿದಂತೆ ನಾಗರಿಕ ವಿಮಾನಯಾನಗಳ ಮಹಾನಿರ್ದೇಶನಾಲಯವು ಇಂಡಿಗೋ ವಿಮಾನಯಾನ ಸಂಸ್ಥೆಯ ವಿರುದ್ಧ ಕಠಿಣ ಕ್ರಮ ಕೈಗೊಂಡಿದೆ. ಬರೋಬ್ಬರಿ ₹ 22.2 ಕೋಟಿ ದಂಡ ವಿಧಿಸಿದೆ.ಡಿಸೆಂಬರ್ 3 ರಿಂದ 5 ರ ವರೆಗೆ ಇಂಡಿಗೋ ವಿಮಾನಗಳ ಕಾರ್ಯಾಚರಣೆಯಲ್ಲಿ ಭಾರೀ ವ್ಯತ್ಯಯ ಉಂಟಾಗಿತ್ತು. 2,507 ವಿಮಾನಗಳ ಹಾರಾಟ ರದ್ದುಗೊಳಿಸಲಾಗಿತ್ತು, ಜೊತೆಗೆ 1,852 ವಿಮಾನಗಳ ಹಾರಾಟದಲ್ಲಿ ವಿಳಂಬವಾಗಿತ್ತು. ಇದರಿಂದ 3 ಲಕ್ಷಕ್ಕೂ ಅಧಿಕ ಪ್ರಯಾಣಿಕರು ವಿವಿಧ ವಿಮಾನ ನಿಲ್ದಾಣಗಳಲ್ಲಿ ಸಿಲುಕಿದ್ದರು. ಕಳೆದ ತಿಂಗಳು ಇಂಡಿಗೋ ವಿಮಾನಗಳ ವೇಳಾಪಟ್ಟಿಯಲ್ಲಿ ಭಾರಿ ವ್ಯತ್ಯಯವಾದ ಹಿನ್ನೆಲೆಯಲ್ಲಿ ರಚಿಸಲಾಗಿದ್ದ ನಾಲ್ವರು ಸದಸ್ಯರ ಸಮಿತಿ ನೀಡಿದ ವರದಿಯನ್ನು ಶನಿವಾರ ರಾತ್ರಿ ನಿಯಂತ್ರಕ ಸಂಸ್ಥೆ ಬಿಡುಗಡೆ ಮಾಡಿದೆ.
ಬೆಂಗಳೂರು: ಕನ್ನಡದ ಜನಪ್ರಿಯ ರಿಯಾಲಿಟಿ ಶೋ ಬಿಗ್ಬಾಸ್ ಕೊನೆಯ ಘಟ್ಟಕ್ಕೆ ತಲುಪಿದೆ. ಇನ್ನು ಕೆಲವೇ ಗಂಟೆಯಲ್ಲಿ ಬಿಗ್ಬಾಸ್ ಕಿರೀಟ ಯಾರ ಮಡಿಲಿಗೆ ಸೇರಲಿದೆ ಎಂಬುದು ಗೊತ್ತಾಗಲಿದೆ. ಬಿಗ್ಬಾಸ್ಗೂ 37 ಕೋಟಿಗೂ ಅಧಿಕ ವೋಟ್ಗಳು ಬಂದಿವೆ ಎನ್ನಲಾಗಿದೆ.12ರ ಆವೃತ್ತಿಯ ಬಿಗ್ ಬಾಸ್ ಗ್ರ್ಯಾಂಡ್ ಫಿನಾಲೆಗೆ ಕೌಂಟ್ಡೌನ್ ಶುರುವಾಗಿದೆ. ಈ ಬಾರಿಯ ಬಿಗ್ ಬಾಸ್ ವಿನ್ನರ್ ಯಾರಾಗ್ತಾರೆ ಅನ್ನೋ ಕುತೂಹಲ ಹೆಚ್ಚಾಗ್ತಿದೆ. ಎಲ್ಲೆಡೆ ಅಭಿಮಾನಿಗಳು ತಮ್ಮ ನೆಚ್ಚಿನ ಸ್ಪರ್ಧಿಗಳ ಗೆಲುವಿಗೆ ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ. ಗಿಲ್ಲಿ ನಟ, ರಕ್ಷಿತಾ ಶೆಟ್ಟಿ ಮತ್ತು ಅಶ್ವಿನಿ ಗೌಡ ನಡುವೆ ತೀವ್ರ ಪೈಪೋಟಿಯಿದೆ. ಆದರೆ, ಗಿಲ್ಲಿ ನಟನ ಮೇಲೆ ಹೆಚ್ಚಿನ ನಿರೀಕ್ಷೆಯಿದೆ.
ಮುಂಬೈ: ಮಹಿಳಾ ಪ್ರೀಮಿಯರ್ ಲೀಗ್ನ ಹಾಲಿ ಆವೃತ್ತಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಗೆಲುವಿನ ಓಟ ಮುಂದುವರಿದಿದೆ.ಸ್ಮೃತಿ ಮಂದಾನ ನಾಯಕತ್ವದ ಆರ್ಸಿಬಿ ತಂಡವು ಶನಿವಾರ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಎಂಟು ವಿಕೆಟ್ಗಳಿಂದ ಮಣಿಸಿತು. ಇದರೊಂದಿಗೆ ಸತತ ನಾಲ್ಕನೇ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಭದ್ರಪಡಿಸಿಕೊಂಡಿದೆ.ನಾಯಕಿ ಸ್ಮೃತಿ ಮಂದಾನ (96;61ಎ) , ಜಾರ್ಜಿಯಾ ವೋಲ್ (54;42ಎ) ಅರ್ಧಶತಕಗಳ ಬ್ಯಾಟಿಂಗ್ ನೆರವಿನಿಂದ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಎಂಟು ವಿಕೆಟ್ಗಳ ಭರ್ಜರಿ ಗೆಲುವು ಸಾಧಿಸಿದೆ.ಮುಂಬೈನ ಡಿವೈ ಪಾಟೀಲ ಕ್ರೀಡಾಂಗಣದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಶಫಾಲಿ ವರ್ಮಾ ಅವರ ಅರ್ಧಶತಕದ ನೆರವಿನಿಂದ 20 ಓವರ್ಗಳಲ್ಲಿ 166 ರನ್ಗಳಿಗೆ ಆಲೌಟ್ ಆಯಿತು. ಗುರಿ ಬೆನ್ನಟ್ಟಿದ ಆರ್ಸಿಬಿ 18.2 ಓವರ್ಗಳಲ್ಲೇ 2 ವಿಕೆಟ್ ನಷ್ಟಕ್ಕೆ 169 ರನ್ ಬಾರಿಸಿ ಗೆಲುವು ಸಾಧಿಸಿತು.