Shorts

‌ಅಹಮದಾಬಾದ್: ಭಾರತ ಹಾಗೂ ನೆದರ್‌ಲ್ಯಾಂಡ್ ತಂಡಗಳ ನಡುವೆ ಸಿ ಗುಂಪಿನ ಕೊನೆಯ ಲೀಗ್ ಪಂದ್ಯ ನಡೆಯುತ್ತಿದೆ. ಈ ಪಂದ್ಯದಲ್ಲಿ ಭಾರತ ತಂಡದ ಸ್ಫೋಟಕ ಆರಂಭಿಕ ಬ್ಯಾಟರ್ ಅಭಿಷೇಕ್ ಶರ್ಮಾ ಅನಗತ್ಯ ದಾಖಲೆಯೊಂದನ್ನು ತಮ್ಮ ಹೆಸರಿಗೆ ಸೇರಿಸಿಕೊಂಡಿದ್ದಾರೆ. ವಿಶ್ವನ ನಂಬರ್‌ ಒನ್‌ ಬ್ಯಾಟರ್‌ ಅಭಿಷೇಕ್ ಶರ್ಮಾ ಅವರು, ಟೂರ್ನಿಯಲ್ಲಿ ಲೀಗ್ ಹಂತದ 4 ಪಂದ್ಯಗಳ ಪೈಕಿ ಮೂರು ಪಂದ್ಯಗಳಲ್ಲಿ ಬ್ಯಾಟಿಂಗ್ ಮಾಡಿದ್ದಾರೆ. ಸ್ಫೋಟಕ ಆಟಕ್ಕೆ ಹೆಸರುವಾಸಿಯಾಗಿರುವ ಅವರು, ಆಡಿರುವ ಮೂರು ಪಂದ್ಯಗಳಿಂದ ರನ್ ಖಾತೆಯನ್ನೇ ತೆರೆದಿಲ್ಲ. ಅಮೆರಿಕ ವಿರುದ್ಧ (0), ಪಾಕಿಸ್ತಾನ ವಿರುದ್ಧ (0) ಹಾಗೂ ಇಂದಿನ ಪಂದ್ಯದಲ್ಲಿ ನೆದರ್‌ಲ್ಯಾಂಡ್ ವಿರುದ್ಧವೂ ಖಾತೆ ತೆರೆಯದೆ ಪೆವಿಲಿಯನ್ ಸೇರಿಕೊಂಡಿದ್ದಾರೆ. ಇಂದಿನ ಪಂದ್ಯದಲ್ಲಿ ಶೂನ್ಯಕ್ಕೆ ಔಟ್ ಆಗುವ ಮೂಲಕ ಅಭಿಷೇಕ್ ಶರ್ಮಾ ಅವರು, ಟಿ20 ವಿಶ್ವಕಪ್‌ನಲ್ಲಿ ಸತತವಾಗಿ ಅತೀ ಹೆಚ್ಚು ಬಾರಿ ಶೂನ್ಯ ಸುತ್ತಿದ ಆರಂಭಿಕ ಬ್ಯಾಟರ್ ಎಂಬ ಅನಗತ್ಯ ದಾಖಲೆಗೆ ಒಳಗಾದರು ಹಾಗೂ ಈ ಅನಗತ್ಯ ದಾಖಲೆ ಮಾಡಿದ ವಿಶ್ವದ 4ನೇ ಆಟಗಾರ ಎನಿಸಿಕೊಂಡರು.

ಢಾಕಾ: ಬಾಂಗ್ಲಾದೇಶ ರಾಷ್ಟ್ರೀಯವಾದಿ ಪಕ್ಷವು(ಬಿಎನ್‌ಪಿ) ಅಧಿಕಾರಕ್ಕೆ ಬಂದು ಪಕ್ಷದ ಅಧ್ಯಕ್ಷ ತಾರಿಖ್ ರೆಹಮಾನ್ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದರು. ಹಸೀನಾ ಅವರು ದೇಶಬಿಟ್ಟ ಬಳಿಕ ನಡೆದ ಮೊದಲ ಚುನಾವಣೆಯಲ್ಲಿ ಸಂಸತ್ತಿನ 299 ಕ್ಷೇತ್ರಗಳ ಪೈಕಿ ಬಿಎನ್‌ಪಿ 212 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ.ಫೆಬ್ರುವರಿ 12ರಂದು ಬಾಂಗ್ಲಾದೇಶದಲ್ಲಿ ನಡೆದ ಸಾರ್ವತ್ರಿಕ ಚುನಾವಣೆಯೂ ದೇಶದ ರಾಜಕೀಯ ಚಿತ್ರಣವನ್ನೇ ಬದಲಿಸಿತು. ಈ ನಡುವೆ ಸಂಪುಟದಲ್ಲಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಂಸದರ ಪೈಕಿ ಏಕೈಕ ಹಿಂದೂ ನಿತಾಯಿ ರಾಯ್ ಚೌಧುರಿ. ಬಿಎನ್‌ಪಿಯ ಉಪಾಧ್ಯಕ್ಷರಾಗಿರುವ ಚೌಧರಿ, ಮಗುರಾ–2 ಕ್ಷೇತ್ರದಿಂದ ಆಯ್ಕೆಯಾಗಿದ್ದಾರೆ.1949ರ ಜನವರಿ 7ರಂದು ಬಾಂಗ್ಲಾದ ಮಗುರಾ ಜಿಲ್ಲೆಯ ಹಟಬಾರಿಯಾ ಎಂಬ ಗ್ರಾಮದಲ್ಲಿ ಜನಿಸಿದ ಚೌಧುರಿ, ಅಲೋಕ್‌ಡಿಯಾ ಪುಖುರಿಯಾ ಪ್ರೌಢಶಾಲೆಯಲ್ಲಿ ಶಾಲಾ ಶಿಕ್ಷಣ ಮುಗಿಸಿದ್ದರು. ಬಳಿಕ, ಮಗುರಾದ ಸರ್ಕಾರಿ ಕಾಲೇಜಿನಲ್ಲಿ ಪದವಿ ಪಡೆದಿದ್ದರು.

ಕೊಲಂಬೊ: ಪಾಕಿಸ್ತಾನ ತಂಡವು ಟಿ20 ವಿಶ್ವಕಪ್‌ ಟೂರ್ನಿಯಲ್ಲಿ ಎಂಟನೇ ತಂಡವಾಗಿ ಸೂಪರ್‌ ಎಂಟರ ಘಟ್ಟಕ್ಕೆ ಲಗ್ಗೆ ಹಾಕಿದೆ. ಬುಧವಾರ ನಡೆದ ಗುಂಪು ಹಂತದ ಕೊನೆಯ ಪಂದ್ಯದಲ್ಲಿ ನಮೀಬಿಯಾ ತಂಡವನ್ನು ಮಣಿಸಿ ಮುಂದಿನ ಸುತ್ತು ಪ್ರವೇಶಿಸಿದೆ.ಸಾಹಿಬ್‌ಝಾದ ಫರ್ಹಾನ್‌ ಅವರ ಶತಕ ಹಾಗೂ ಉಸ್ಮಾನ್‌ ತಾರಿಖ್‌ ಮತ್ತು ಶದಾಬ್‌ ಖಾನ್‌ ಅವರ ಸ್ಪಿನ್‌ ಮೋಡಿಯ ಸಹಾಯದಿಂದ ಪಾಕಿಸ್ತಾನ ತಂಡ, ನಮೀಬಿಯಾ ತಂಡವನ್ನು ತನ್ನ ಕೊನೆಯ ಲೀಗ್‌ ಪಂದ್ಯದಲ್ಲಿ 102 ರನ್‌ಗಳಿಂದ ಮಣಿಸಿತು. ಸಲ್ಮಾನ್‌ ಅಲಿ ಆಘಾ ನಾಯಕತ್ವದ ಪಾಕ್‌ ತಂಡದ ಸೋಲನ್ನು ಬಯಸುತ್ತಿದ್ದ ಯುಎಸ್‌ಎ ತಂಡ ಅಧಿಕೃತವಾಗಿ ಚುಟುಕು ವಿಶ್ವಕಪ್‌ ಟೂರ್ನಿಯಿಂದ ಹೊರ ನಡೆಯಿತು. ನಮೀಬಿಯಾ ತಂಡ ಒಂದೂ ಗೆಲುವು ಕಾಣದೆ ಈ ಟೂರ್ನಿಯಲ್ಲಿನ ತನ್ನ ಅಭಿಯಾನವನ್ನು ಮುಗಿಸಿತು.

ಮುಂಬೈ: ಬಾಲಿವುಡ್‌ನ ಸೂಪರ್ ಸ್ಟಾರ್‌ ಸಲ್ಮಾನ್ ಖಾನ್ ಅವರ ತಂದೆ, ಹಿಂದಿ ಸಿನಿಮಾ ದಂತಕಥೆ ಸಲೀಮ್ ಖಾನ್ ಅವರ ಆರೋಗ್ಯದಲ್ಲಿ ಏರುಪೇರಾಗಿದೆ. ಅವರನ್ನು ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.90 ವರ್ಷದ ಸಲೀಮ್ ಖಾನ್ ಅವರಿಗೆ ಮಂಗಳವಾರ ಸಣ್ಣ ಪ್ರಮಾಣದ ಮಿದುಳಿನ ರಕ್ತಸ್ರಾವದಿಂದ ಬಳಲುತ್ತಿದ್ದು, ಮುಂಬೈನ ಲೀಲಾವತಿ ಆಸ್ಪತ್ರೆಯಲ್ಲಿ ವೈದ್ಯಕೀಯ ಚಿಕಿತ್ಸೆಗೆ ಒಳಗಾಗಿದ್ದಾರೆ.ಪ್ರಸ್ತುತ ಸಲೀಂ ಖಾನ್ ಅವರಿಗೆ ಪ್ರಸ್ತುತ ವೆಂಟಿಲೇಟರ್‌ನಲ್ಲಿ ಚಿಕಿತ್ಸೆಗೊಳಪಡಿಸಲಾಗಿದೆ. ಅವರು ಮಿದುಳಿನ ರಕ್ತಸ್ರಾವದಿಂದ ಬಳಲುತ್ತಿದ್ದು ತೀವ್ರ ನಿಗಾ ಘಟಕದಲ್ಲಿ ನಿಕಟ ವೀಕ್ಷಣೆಯಲ್ಲಿದ್ದಾರೆ.ಸಲೀಂ ಖಾನ್ ಅವರಿಗೆ ಸಣ್ಣ ಪ್ರಮಾಣದ ಮಿದುಳಿನ ರಕ್ತಸ್ರಾವವಿತ್ತು. ಬೆಳಿಗ್ಗೆ ಡಿಎಸ್‌ಎ ಎಂಬ ಶಸ್ತ್ರಚಿಕಿತ್ಸೆ ಮಾಡಲಾಯಿತು. ಅವರು ಇನ್ನೂ ವೆಂಟಿಲೇಟರ್‌ನಲ್ಲಿದ್ದಾರೆ.

ಅಹಮದಾಬಾದ್‌: ಹ್ಯಾಟ್ರಿಕ್‌ ಗೆಲುವು ಸಾಧಿಸಿರುವ ಭಾರತ ಕ್ರಿಕೆಟ್‌ ತಂಡವು ಟಿ20 ವಿಶ್ವಕಪ್‌ ಟೂರ್ನಿಯಲ್ಲಿ ಈಗಾಗಲೇ ಸೂಪರ್ ಎಂಟರ ಘಟ್ಟ ಪ್ರವೇಶಿಸಿದೆ. ಆದರೆ, ಗುಂಪು ಹಂತದ ಕೊನೆಯ ಪಂದ್ಯದಲ್ಲಿ ಇದು ನೆದರ್ಲೆಂಡ್ಸ್‌ ತಂಡವನ್ನು ಎದುರಿಸಲಿದೆ.ಇಂದಿನ ಪಂದ್ಯಕ್ಕೆ ಹೆಚ್ಚಿನ ಮಹತ್ವವಿಲ್ಲ. ನೆದರ್ಲೆಂಡ್ಸ್‌ ತಂಡ ಈಗಾಗಲೇ ಟೂರ್ನಿಯಿಂದ ಹೊರಬಿದ್ದಿದೆ. ಭಾರತ ತಂಡವು ಈ ಪಂದ್ಯವನ್ನು ಗೆದ್ದು ಅಜೇಯವಾಗಿ ಸೂಪರ್‌ ಎಂಟರ ಘಟ್ಟ ಪ್ರವೇಶಿಸುವತ್ತ ಗಮನ ಹರಿಸಿದೆ.ಇಂದು ಟಾಸ್ ಗೆದ್ದ ನಾಯಕ ಸೂರ್ಯಕುಮಾರ್‌ ಯಾದವ್‌ ಮೊದಲು ಬ್ಯಾಟಿಂಗ್‌ ಆಯ್ಕೆ ಮಾಡಿಕೊಂಡಿದ್ದಾರೆ. ಹೀಗಾಗಿ, ರನ್‌ ಮಳೆಯಾಗುವ ನಿರೀಕ್ಷೆಯಿದೆ. ಭಾರತದ ಆರಂಭಿಕ ಆಟಗಾರರಾದ ಇಶಾನ್‌ ಕಿಶನ್‌, ಅಭಿಷೇಕ್‌ ಶರ್ಮಾ ಮೇಲೆ ಹೆಚ್ಚಿನ ನಿರೀಕ್ಷೆಯಿದೆ.

ಬೆಂಗಳೂರು: ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ ಹೇರಿರುವ ಸರ್ಕಾರದ ಆದೇಶದ ವಿರುದ್ಧ ವಿಪಕ್ಷ ನಾಯಕ ಆರ್ ಅಶೋಕ್ ಆಕ್ರೋಶ ವ್ಯಕ್ತಪಡಿಸಿದ್ದು ಇದು ಭ್ರಷ್ಟಾಚಾರ ಮುಚ್ಚಿಟ್ಟುಕೊಳ್ಳಲು ಹೊಸ ನಾಟಕ ಎಂದಿದ್ದಾರೆ. ವಿಧಾನಸೌಧದೊಳಗೆ ಮಾಧ್ಯಮಗಳು ಇನ್ನು ಮುಂದೆ ಎಲ್ಲಿ ಬೇಕಾದರೂ ಪ್ರವೇಶಿಸುವಂತಿಲ್ಲ. ನಿಗದಿತ ಸ್ಥಳದಲ್ಲಿ ಮಾತ್ರ ಶಾಸಕರು, ಸಚಿವರ ಸಂದರ್ಶನ, ಪ್ರತಿಕ್ರಿಯೆಗಳನ್ನು ಪಡೆಯಬಹುದಾಗಿದೆ ಎಂದು ಸರ್ಕಾರ ವಿವಾದಿತ ಆದೇಶ ಹೊರಡಿಸಿದೆ. ಇದರ ವಿರುದ್ಧ ಎಲ್ಲಾ ಮಾಧ್ಯಮಗಳೂ ಸಿಡಿದೆದ್ದಿವೆ.ಈ ಬಗ್ಗೆ ಪ್ರತಿಕ್ರಿಯಿಸಿರುವ ಆರ್ ಅಶೋಕ್ ‘ತನ್ನ ವೈಫಲ್ಯಗಳನ್ನ, ಯಡವಟ್ಟುಗಳನ್ನ, ಭ್ರಷ್ಟಾಚಾರವನ್ನ ಮುಚ್ಚಿಟ್ಟುಕೊಳ್ಳುವ ಸಲುವಾಗಿ ಮಾಧ್ಯಮಗಳ ಮೇಲೆ ನಿಯಂತ್ರಣ ಹೇರಲು ಹೊರಟಿರುವ ಕಾಂಗ್ರೆಸ್ ಸರ್ಕಾರ ತನ್ನ ಪ್ರಜಾಪ್ರಭುತ್ವ ವಿರೋಧಿ, ಸರ್ವಾಧಿಕಾರಿ ಧೋರಣೆಯನ್ನು ಮತ್ತೊಮ್ಮೆ ಪ್ರದರ್ಶನ ಮಾಡಿದೆ.

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಅವರು ಯಾವಾಗ ಜೈಲಿನಿಂದ ಬಿಡುಗಡೆಯಾಗುತ್ತಾರೆಂಬ ಕಾಯುವಿಕೆಯಲ್ಲಿ ಅಭಿಮಾನಿಗಳಿದ್ದಾರೆ. ಈ ನಡುವೆ ಕನ್ನಡ ಸಿನಿಮಾ ರಂಗದ ಹಿರಿಯ ನಟ ರವಿಚಂದ್ರನ್ ಅವರು ದರ್ಶನ್ ಬಿಡುಗಡೆ ಬಗ್ಗೆ ಭವಿಷ್ಯ ನುಡಿದಿದ್ದಾರೆ. ಫೆ.16ರಂದು 49ನೇ ಹುಟ್ಟುಹಬ್ಬವನ್ನು ದರ್ಶನ್ ಜೈಲಿನಲ್ಲೇ ಆಚರಿಸಿಕೊಂಡರು. ಅದೇ ದಿನ ರವಿಚಂದ್ರನ್ ಅವರು ವೇದಿಕೆಯಲ್ಲಿ ಕಾನಿಸಿಕೊಂಡರು. ಈ ವೇಳೆ ದರ್ಶನ್ ಅಭಿಮಾನಿಗಳು ಡಿಬಾಸ್ ಡಿಬಾಸ್ ಎಂದು ಕೂಗಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ರವಿಚಂದ್ರನ್ ನೋಡ್ತಿರಿ ದರ್ಶನ್ ಇನ್ನೆರಡು ತಿಂಗಳಲ್ಲಿ ಆಚೆ ಬರ್ತಾರೆ. ನನ್ನ ನಾಲಿಗೆಯಿಂದ ಹೇಳಿದೆ ಅಂದ್ಮೇಲೆ ಆಚೆ ಬಂದೇ ಬರುತ್ತಾರೆ. ನಿಮಗೆಲ್ಲ ಅವನು ಡಿ ಬಾಸ್, ನನಗೆ ಮಗ, ನೆನಪಿಟ್ಟುಕೊಳ್ಳಿ. ಇದೆಲ್ಲ ಕೆಟ್ಟ ಘಳಿಗೆ ಅಷ್ಟೇ. ಕೆಟ್ಟ

ಬೆಂಗಳೂರು: ಕಾಂಗ್ರೆಸ್ ಸರಕಾರವು ಬಡವರಿಗೆ ಮನೆ ಕೊಡಬೇಕು; ಭೂರಹಿತರಿಗೆ ಭೂಮಿ ಕೊಡಬೇಕಿತ್ತು. ಆದರೆ, ಈ ಕೆಲಸವನ್ನು ಮಾಡುತ್ತಿಲ್ಲ. ತಾನೇ ಭೂಮಿ ಕಬಳಿಸುವ ಕೆಲಸ ಮಾಡುತ್ತಿದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಆರೋಪಿಸಿದ್ದಾರೆ.ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಅವರು ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು. ಭೂಕಬಳಿಕೆಯಲ್ಲಿ ಸರಕಾರವೇ ನಿರತವಾಗಿದೆ. ಸರಕಾರವು ತಾಲ್ಲೂಕು, ಜಿಲ್ಲೆ, ಮಂಡಲ, ಪಂಚಾಯಿತಿ- ಹೀಗೆ ಎಲ್ಲ ಕಡೆ ನಿವೇಶನ ಪಡೆಯಲು ಅದಕ್ಕೆ ಅಧಿಕಾರ ಇಲ್ಲ. ಕಾನೂನು ಉಲ್ಲಂಘಿಸಿ ಅದು ಕಾಂಗ್ರೆಸ್ ಪಕ್ಷದ ಕಚೇರಿ ನಿರ್ಮಾಣಕ್ಕೆ ಲೀಸ್‍ಗೆ ಮುಧೋಳದಲ್ಲಿ ನಿವೇಶನ ಪಡೆಯಲು ಮುಂದಾಗಿತ್ತು. ಆದರೆ, ಇಲಾಖೆಯು ಅದನ್ನು ತಿರಸ್ಕರಿಸಿತ್ತು ಎಂದು ಗಮನ ಸೆಳೆದರು.