ಬೆಂಗಳೂರು: ಡಿಸಿಎಂ ಡಿಕೆ ಶಿವಕುಮಾರ್, ಕೆಎನ್ ರಾಜಣ್ಣ, ಸತೀಶ್ ಜಾರಕಿಹೊಳಿ ಮುಂತಾದ ನಾಯಕರ ಬಳಿಕ ಈಗ ಪರಮೇಶ್ವರ್ ಸರದಿ. ಹೈಕಮಾಂಡ್ ಮುಂದೆ ರಾಜ್ಯ ನಾಯಕರು ಇತ್ತೀಚೆಗೆ ಕ್ಯೂ ನಿಲ್ಲುತ್ತಿದ್ದಾರೆ. ರಾಜ್ಯದಲ್ಲಿ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ, ಸಿಎಂ ಬದಲಾವಣೆ ಕುರಿತು ಚರ್ಚೆಗಳಾಗುತ್ತಿರುವ ಬೆನ್ನಲ್ಲೇ ರಾಜ್ಯ ನಾಯಕರು ಒಬ್ಬೊಬ್ಬರಾಗಿ ಹೈಕಮಾಂಡ್ ಭೇಟಿ ಮಾಡಿ ಬರುತ್ತಿರುವುದು ಕುತೂಹಲಕ್ಕೆ ಕಾರಣವಾಗಿದೆ. ಈಗಾಗಲೇ ರಾಜ್ಯದಲ್ಲಿ ದಲಿತರಿಗೆ ನಾಯಕ ಪಟ್ಟ ನೀಡಬೇಕು ಎಂಬ ಕೂಗು ಕೇಳಿಬಂದಿದೆ. ಕೆಎನ್ ರಾಜಣ್ಣ, ಸತೀಶ್ ಜಾರಕಿಹೊಳಿ ಮುಂತಾದವರು ಈ ಬಗ್ಗೆ ಹೈಕಮಾಂಡ್ ಮುಂದೆ ತಮ್ಮ ಬೇಡಿಕೆಯಿಟ್ಟಿದ್ದಾರೆ.
ಕಾರ್ಕಳ: ಮೊಬೈಲ್ ಚಾರ್ಜ್ ಗಿಟ್ಟು ರಾತ್ರಿ ಮಲಗುವ ಅಭ್ಯಾಸವಿದ್ದರೆ ಈ ಸುದ್ದಿಯನ್ನು ತಪ್ಪದೇ ಓದಿ. ಈ ರೀತಿ ಮಾಡಿ ಇಡೀ ಮನೆಯೇ ಸುಟ್ಟು ಹೋದ ಘಟನೆ ಕಾರ್ಕಳ ತಾಲೂಕಿನ ತೆಳ್ಳಾರು ರಸ್ತೆಯಲ್ಲಿ ನಡೆದಿದೆ. ಕಿಶೋರ್ ಕುಮಾರ್ ಶೆಟ್ಟಿ ಎಂಬವರ ಮನೆಯಲ್ಲಿ ಘಟನೆ ನಡೆದಿದೆ. ರಾತ್ರಿ ಮಲಗುವ ಮುನ್ನ ಸೋಫಾ ಮೇಲೆ ಮೊಬೈಲ್ ಇಟ್ಟು ಚಾರ್ಜ್ ಮಾಡಲಿಟ್ಟಿದ್ದರು. ಇದ್ದಕ್ಕಿದ್ದಂತೆ ಮೊಬೈಲ್ ಸ್ಪೋಟಗೊಂಡಿದೆ. ಕಿಶೋರ್ ಕುಮಾರ್ ಅವರದ್ದು ಎರಡು ಅಂತಸ್ತುಗಳ ಆರು ಕೊಠಡಿಗಳ ಮನೆಯಾಗಿದೆ.
ನವದೆಹಲಿ: ಪ್ರತಿಷ್ಠಿತ ಬಿಬಿಸಿ ಸ್ಪೋರ್ಟ್ಸ್ ಅವಾರ್ಡ್ 2024 ಪ್ರಶಸ್ತಿ ಪ್ರಧಾನ ಮಾಡಲಾಗಿದ್ದು, ಭಾರತದ ಮಹಿಳಾ ಕ್ರೀಡಾ ತಾರೆಯರಾದ ಶೂಟರ್ ಮನು ಭಾಕರ್, ಕ್ರಿಕೆಟ್ ಆಟಗಾರ್ತಿ ಮಿಥಾಲಿ ರಾಜ್ ಗೆ ಅತ್ಯುನ್ನತ ಗೌರವ ಲಭಿಸಿದೆ. ಒಂದೇ ಒಲಿಂಪಿಕ್ಸ್ ನಲ್ಲಿ ಎರಡು ಪದಕ ಗೆದ್ದು ದೇಶದ ಕೀರ್ತಿ ಪತಾಕೆ ಹಾರಿಸಿದ್ದ ಶೂಟರ್ ಮನು ಭಾಕರ್ ಗೆ ಬಿಬಿಸಿ ಇಂಡಿಯನ್ ಸ್ಪೋರ್ಟ್ಸ್ ವುಮನ್ ಆಫ್ ದಿ ಇಯರ್ 2024 ಪ್ರಶಸ್ತಿ ಲಭಿಸಿದೆ. ಕಳೆದ ಒಲಿಂಪಿಕ್ಸ್ ನಲ್ಲಿ 10 ಮೀ. ಏರ್ ರೈಫಲ್ ವಿಭಾಗದಲ್ಲಿ ಮನುಭಾಕರ್ ಸಿಂಗಲ್ಸ್ ಮತ್ತು ಡಬಲ್ಸ್ ವಿಭಾಗದಲ್ಲಿ ಕಂಚಿನ ಪದಕ ಗೆದ್ದುಕೊಂಡಿದ್ದರು.
ಬೆಂಗಳೂರು: ನಮ್ಮ ಮೆಟ್ರೊ ದರ ಏರಿಕೆ ಬಗ್ಗೆ ನಿನ್ನೆ ಸಿಎಂ ಸಿದ್ದರಾಮಯ್ಯ ಮಾಡಿದ ಟ್ವೀಟ್ ಗೆ ಪ್ರತಿಕ್ರಿಯಿಸಿರುವ ನೆಟ್ಟಿಗರೊಬ್ಬರು ಟಿಕೆಟ್ ದರ ಇಳಿಕೆಗೂ ಪ್ರಸ್ತಾವನೆ ಸಲ್ಲಿಸಲು ಏನು ಪ್ರಾಬ್ಲಂ ಎಂದು ಪ್ರಶ್ನಿಸಿದ್ದಾರೆ. ಮೆಟ್ರೊ ದರ ಏರಿಕೆಗೆ ಯಾರು ಕಾರಣ ಎಂಬ ಬಗ್ಗೆ ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರದ ನಡುವೆ ಆರೋಪ-ಪ್ರತ್ಯಾರೋಪ ನಡೆಯುತ್ತಲೇ ಇದೆ. ಬಿಜೆಪಿ ಸಂಸದರು ರಾಜ್ಯ ಸರ್ಕಾರದತ್ತ ಬೊಟ್ಟು ಮಾಡುತ್ತಿದ್ದರೆ, ರಾಜ್ಯ ಸರ್ಕಾರ ಕೇಂದ್ರ ಸರ್ಕಾರವೇ ಬೆಲೆ ಏರಿಕೆಗೆ ಕಾರಣ ಎನ್ನುತ್ತಿದೆ. ಈ ನಡುವೆ ಸಿಎಂ ಸಿದ್ದರಾಮಯ್ಯ ಮತ್ತೊಮ್ಮೆ ಟ್ವೀಟ್ ಮಾಡಿ ಮೆಟ್ರೊ ದರ ಏರಿಕೆಗೆ ಕೇಂದ್ರ ಸರ್ಕಾರವೇ ಕಾರಣ ಎಂದಿದ್ದಾರೆ.
ಟೊರೆಂಟೊ: ಲ್ಯಾಂಡಿಂಗ್ ವೇಳೆ ವಿಮಾನ ಮಗುಚಿ ಬಿದ್ದು ಟೊರೆಂಟೊದಲ್ಲಿ ಭಾರೀ ಅನಾಹುತ ಸಂಭವಿಸಿದೆ. ಈ ಭಯಾನಕ ವಿಡಿಯೋ ಈಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಪ್ಯಾಸೆಂಜರ್ ವಿಮಾನದಲ್ಲಿ ಸುಮಾರು 80 ಪ್ರಯಾಣಿಕರಿದ್ದರು ಎಂದು ತಿಳಿದುಬಂದಿದೆ. ಘಟನೆಯಲ್ಲಿ 18 ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಅದೃಷ್ಟವಶಾತ್ ಸಾವಿನ ವರದಿಯಾಗಿಲ್ಲ. ವಿಮಾನ ಸೀದಾ ಮೇಲು ಕೆಳಗಾಗಿದ್ದು, ಪ್ರಯಾಣಿಕರು ಕೈಗೆ ಸಿಕ್ಕಿದ್ದನ್ನು ಹಿಡಿದು ನೇತಾಡಿ ಪ್ರಾಣ ರಕ್ಷಿಸಿಕೊಂಡಿದ್ದಾರೆ. ಬಳಿಕ ರಕ್ಷಣಾ ಸಿಬ್ಬಂದಿ ಎಲ್ಲಾ ಪ್ರಯಾಣಿಕರನ್ನು ಸುರಕ್ಷಿತವಾಗಿ ಹೊರಗೆ ಕರೆದೊಯ್ದರು.
ಬೆಂಗಳೂರು: ಇಂದಿನ ಹವಾಮಾನ ವರದಿ ಮತ್ತು ಇಂದು ದೇಶದ ಯಾವ ಭಾಗಗಳಿಗೆ ಮಳೆಯ ಸೂಚನೆಯಿದೆ ಇತ್ಯಾದಿ ಲೇಟೆಸ್ಟ್ ಹವಾಮಾನ ವರದಿ ಇಲ್ಲಿದೆ ನೋಡಿ. ಕರ್ನಾಟಕದಲ್ಲಿ ಈಗ ತಾಪಮಾನ ದಿನೇ ದಿನೇ ಏರಿಕೆಯಾಗುತ್ತಿದೆ. ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಈಗಲೇ ಸುಡು ಬಿಸಲಿಗೆ ಜನರು ಕಂಗಾಲಾಗಿದ್ದಾರೆ. ಮಧ್ಯಾಹ್ನದ ವೇಳೆ ಹೊರಗೆ ಕಾಲಿಡಲೂ ಆಗದಷ್ಟು ಬಿಸಿಲಿರುತ್ತದೆ. ರಾಜ್ಯದಲ್ಲಿ ಗರಿಷ್ಠ ತಾಪಮಾನ ಈಗಾಗಲೇ 35 ಡಿಗ್ರಿ ದಾಟಿದೆ. ಇಂದೂ ಕೂಡಾ ಬಹುತೇಕ ರಾಜ್ಯದ ಎಲ್ಲಾ ಕಡೆ ಬಿಸಿಲಿನ ಝಳ ಮುಂದುವರಿಯಲಿದೆ. ಈ ವಾರವಿಡೀ ರಾಜ್ಯದಲ್ಲಿ ಶುಷ್ಕ ಹವಾಮಾನ ಮುಂದುವರಿಯಲಿದೆ ಎಂದು ಹವಾಮಾನ ವರದಿಗಳು ಹೇಳುತ್ತಿವೆ.
ಬೆಂಗಳೂರು: ಇನ್ನೇನು ಬಿರು ಬೇಸಿಗೆ ಬರುತ್ತಿದ್ದು, ವಿಪರೀತ ಸೆಖೆಯಾಗುವುದು ಖಂಡಿತಾ. ಹೀಗಾಗಿ ಮನೆಯಲ್ಲಿಯೇ ಕೂಲರ್ ಇಟ್ಟುಕೊಳ್ಳಲು ಬಯಸುತ್ತಿದ್ದರೆ ಕಡಿಮೆ ಬೆಲೆಯ ಟಾಪ್ 5 ಕೂಲರ್ ಗಳ ಪಟ್ಟಿ ಇಲ್ಲಿದೆ ನೋಡಿ. ಆನ್ ಲೈನ್ ನಲ್ಲಿ ಮಾರಾಟಕ್ಕೆ ಲಭ್ಯವಿರುವ 2000 ರೂ.ಗಳವರೆಗಿನ ಅಗ್ಗದ ಬೆಲೆಯ ಕೂಲರ್ ಗಳು ಯಾವುವು ಎಂದು ಇಲ್ಲಿ ನೋಡಿ. Symphony Duet Mini Portable Cooler: ಸಿಂಫೊನಿ ಡ್ಯುಯೆಟ್ ಮಿನಿ ಏರ್ ಕೂಲರ್ ಮನೆ ಮತ್ತು ಕಚೇರಿಗೆ ಹೇಳಿ ಮಾಡಿಸಿದಂತಿದೆ. ಇದಕ್ಕೆ ಒಂದು ವರ್ಷಗಳ ವ್ಯಾರಂಟಿಯೂ ಸಿಗುತ್ತದೆ. ಇದರ ಬೆಲೆ ಕೇವಲ 1991 ರೂ.ಗಳು.
ವಡೋದರಾ: ಡಬ್ಲ್ಯುಪಿಎಲ್ ನಲ್ಲಿ ಸತತ ಮತ್ತೊಂದು ಗೆಲುವು ಸಾಧಿಸಿದ ಆರ್ ಸಿಬಿ ಹೆಣ್ಮಕ್ಳನ್ನು ಈಗ ಅಭಿಮಾನಿಗಳು ನೀವೇ ಸ್ಟ್ರಾಂಗ್ ಅಂತಿದ್ದಾರೆ. ನೀವೇನಂತೀರಿ? ನಿನ್ನೆ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ನಡೆದ ಪಂದ್ಯವನ್ನು ಆರ್ ಸಿಬಿ ಕೇವಲ ಗೆದ್ದಿದ್ದು ಮಾತ್ರವಲ್ಲ, ಚಾಂಪಿಯನ್ ರೀತಿ ಎಲ್ಲಾ ವಿಭಾಗದಲ್ಲಿ ಸೋಲಿಸಿತು. ಮೊದಲು ಬ್ಯಾಟಿಂಗ್ ಮಾಡಿದ್ದ ಡೆಲ್ಲಿ ಕ್ಯಾಪಿಟಲ್ಸ್ ಗೆ ಆರ್ ಸಿಬಿ ದಾಳಿಗೆ ತತ್ತರಿಸಿ ಕೇವಲ 141 ರನ್ ಗಳಿಗೆ ಆಲೌಟ್ ಆಯಿತು. ಬಳಿಕ ಬ್ಯಾಟಿಂಗ್ ನಲ್ಲೂ ಆರ್ ಸಿಬಿ ಭರ್ಜರಿ ಪ್ರದರ್ಶನ ನೀಡಿತು. ಬಹಳ ದಿನಗಳಿಂದ ಕ್ವೀನ್ ಸ್ಮೃತಿ ಮಂಧನಾ ಬ್ಯಾಟಿಂಗ್ ನೋಡಲು ಅಭಿಮಾನಿಗಳು ಕಾದಿದ್ದರು.
ಬೆಂಗಳೂರು: ಮಂಗಳವಾರದಂದು ಆಂಜನೇಯ ಸ್ವಾಮಿಗೆ ವಿಶೇಷವಾದ ದಿನವಾಗಿದೆ. ಈ ದಿನ ಈ ವಸ್ತುಗಳನ್ನು ಆಂಜನೇಯನಿಗೆ ಅರ್ಪಿಸುವುದರಿಂದ ನಿಮ್ಮ ಹಣಕಾಸಿನ ಸಮಸ್ಯೆ ದೂರವಾಗುತ್ತದೆ. ಆಂಜನೇಯ ಸ್ವಾಮಿಯು ಸಂಕಟ ನಿವಾರಕ. ಜೀವನದಲ್ಲಿ ಬರುವ ಯಾವುದೇ ಸಮಸ್ಯೆಗಳನ್ನು ಆತ ನಿವಾರಿಸಿ ನಮಗೆ ಅನುಗ್ರಹಿಸುವನು. ಉದ್ಯೋಗ, ಹಣಕಾಸು, ಕೌಟುಂಬಿಕ, ಮಕ್ಕಳ ಯಾವುದೇ ಸಮಸ್ಯೆ ನಿವಾರಣೆಗೂ ಆಂಜನೇಯ ಸ್ವಾಮಿಯ ಅನುಗ್ರಹ ಬೇಕು. ವಿಶೇಷವಾಗಿ ಮಂಗಳವಾರದಂದು ಆಂಜನೇಯ ಸ್ವಾಮಿಗೆ ಆತನ ಪ್ರಿಯವಾದ ಆಹಾರವಾದ ಬೆಲ್ಲ, ಬಾಳೆಹಣ್ಣು, ಶೇಂಗಾ ನೈವೇದ್ಯವಾಗಿ ನೀಡಬೇಕು. ಇಲ್ಲವೇ ಮಂಗಗಳಿಗೆ ಇವುಗಳನ್ನು ಆಹಾರವಾಗಿ ನೀಡಿದರೂ ಸಾಕು.
ಬೆಂಗಳೂರು: ನಿಮ್ಮ ಇಂದಿನ ಭವಿಷ್ಯ, ರಾಶಿ ಫಲ ಹೇಗಿದೆ ಎಂದು ತಿಳಿದುಕೊಳ್ಳಿ.ಮೇಷ: ಮನಸ್ಸಿನ ಚಂಚಲತೆಯನ್ನು ನಿಯಂತ್ರಿಸಿ. ಕಾನೂನು ಅಡೆತಡೆಗಳು ನಿವಾರಣೆಯಾದ ನಂತರ ಪರಿಸ್ಥಿತಿ ಅನುಕೂಲಕರವಾಗಿರುತ್ತದೆ. ನಿಮ್ಮ ಸಂಗಾತಿಯ ಕಡೆಗೆ ಪರಸ್ಪರ ದಯೆ ಇರುತ್ತದೆ. ಆತುರದಲ್ಲಿ ಹಣದ ನಷ್ಟವಾಗಬಹುದು. ವ್ಯಾಪಾರದಲ್ಲಿ ಬೆಳವಣಿಗೆ ಕಂಡುಬರಲಿದೆ. ಉದ್ಯೋಗದಲ್ಲಿ ಶಾಂತಿ ನೆಲೆಸಲಿದೆ. ಹೂಡಿಕೆ ಲಾಭದಾಯಕವಾಗಲಿದೆ. ಕಾಮಗಾರಿ ನಡೆಯಲಿದೆ. ಮನೆಯ ಒಳಗೆ ಮತ್ತು ಹೊರಗೆ ಸಂತೋಷ ಮತ್ತು ಶಾಂತಿ ಇರುತ್ತದೆ.ವೃಷಭ: ಶಾಶ್ವತ ಆಸ್ತಿಯ ಖರೀದಿ ಮತ್ತು ಮಾರಾಟದಿಂದ ಹೆಚ್ಚಿನ ಲಾಭವನ್ನು ಪಡೆಯಬಹುದು. ಪೈಪೋಟಿ ಇರುತ್ತದೆ.
ವಡೋದರಾ: ಡಬ್ಲ್ಯುಪಿಎಲ್ ಇಂದಿನ ಪಂದ್ಯದಲ್ಲಿ ಪ್ರಬಲ ಡೆಲ್ಲಿ ಕ್ಯಾಪಿಟಲ್ಸ್ ಬ್ಯಾಟಿಗರ ಮೇಲೆ ಸಂಪೂರ್ಣ ನಿಯಂತ್ರಣ ಸಾಧಿಸಿದ ಆರ್ ಸಿಬಿ ಗರ್ಲ್ಸ್ ತಾವು ಸ್ಟ್ರಾಂಗ್ ಟೀಂ ಎಂದು ಮತ್ತೊಮ್ಮೆ ನಿರೂಪಿಸಿದ್ದು ಎದುರಾಳಿಯನ್ನು 141 ರನ್ ಗಳಿಗೆ ಆಲೌಟ್ ಮಾಡಿದೆ. ಟೀಂ ಇಂಡಿಯಾ ಜೊತೆಗಾತಿ ಶಫಾಲಿ ವಿಕೆಟ್ ಕೀಳಲು ಪಕ್ಕಾ ಪ್ಲ್ಯಾನ್ ಮಾಡಿದ ಸ್ಮೃತಿ ಮಂಧನಾ ಸಕ್ಸಸ್ ಕಂಡರು. ಇಂದು ಮತ್ತೊಮ್ಮೆ ಟಾಸ್ ಗೆದ್ದ ಆರ್ ಸಿಬಿ ನಾಯಕಿ ಸ್ಮೃತಿ ಮಂಧನಾ ಮೊದಲು ಫೀಲ್ಡಿಂಗ್ ಆಯ್ದುಕೊಂಡರು. ಮೊದಲ ಕೆಲವು ಓವರ್ ಗಳ ಬಳಿಕ ಬೌಲರ್ ಗಳಿಗೆ ಸಹಾಯ ಸಿಗಬಹುದು ಎಂದು ಸ್ಮೃತಿ ಮೊದಲು ಫೀಲ್ಡಿಂಗ್ ಆಯ್ದುಕೊಂಡರು. ಅವರ ಆಯ್ಕೆ ಸರಿಯಾಗಿಯೇ ಇತ್ತು.
ಧಾರವಾಡ: ವಾಹನಕ್ಕೆ HSRP ನಂಬರ್ ಪ್ಲೇಟ್ ಅಳವಡಿಸುವ ಸಲುವಾಗಿ ಗ್ರಾಹಕರಿಗೆ ಹೆಚ್ಚುವರಿ ಶುಲ್ಕ ವಿಧಿಸಿದ ಫೋಕ್ಸ್ವ್ಯಾಗನ್ ಶೋರೂಮ್ಗೆ ಗ್ರಾಹಕ ನ್ಯಾಯಾಲಯ ಭರ್ಜರಿ ದಂಡ ವಿಧಿಸಿದೆ.ದ ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷ ಶ್ರೀ ಈಶಪ್ಪ ಕೆ. ಭೂತೆ ಮತ್ತು ಸದಸ್ಯರಾದ ವಿಶಾಲಾಕ್ಷಿ ಎ. ಬೋಳಶೆಟ್ಟಿ ಅವರಿದ್ದ ನ್ಯಾಯಪೀಠ ಈ ದಂಡ ವಿಧಿಸಿ ಆದೇಶ ಹೊರಡಿಸಿದೆ.HSRP ನಂಬರ್ ಪ್ಲೇಟ್ ಅಳವಡಿಸುವ ಸಲುವಾಗಿ ಗ್ರಾಹಕರಿಂದ ₹200 ಶುಲ್ಕ ಪಡೆದುಕೊಂಡಿದ್ದರು. ಇದರಿಂದ ಬಾಧಿತರಾಧ ಗ್ರಾಹಕ/ದೂರುದಾರರು ಧಾರವಾಡದ ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗದಲ್ಲಿ ದೂರನ್ನು ಸಲ್ಲಿಸಿದ್ದರು.ಈ ದೂರನ್ನು ವಿಚಾರಣೆಗೆ ಕೈಗೆತ್ತಿಕೊಂಡ ಆಯೋಗವು ದೂರನ್ನು ಪುರಸ್ಕರಿಸಿ ಆದೇಶ ಹೊರಡಿಸಿತು.
ವಡೋದರ: ಡಬ್ಲ್ಯುಪಿಎಲ್ 2025ರ ಗುಜರಾತ್ ಜೈಂಟ್ಸ್ ವಿರುದ್ಧದ ಆರಂಭಿಕ ಪಂದ್ಯಾಟದಲ್ಲಿ ಹೊಸ ದಾಖಲೆಯೊಂದಿಗೆ ಜಯದ ಓಟ ಆರಂಭಿಸಿದ ಆರ್ಸಿಬಿ ಇಂದು ಎರಡನೇ ಪಂದ್ಯಾಟವನ್ನು ಎದುರಿಸಲಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ಹಾಗೂ ಡೆಲ್ಲಿ ಕ್ಯಾಪಿಟಲ್ಸ್ (ಡಿಸಿ), ವಡೋದರದ ಕೊತಂಬಿ ಕ್ರೀಡಾಂಗಣದಲ್ಲಿ ಮುಖಾಮುಖಿಯಾಗಿವೆ. ಟಾಸ್ ಗೆದ್ದಿರುವ ಆರ್ಸಿಬಿ ನಾಯಕಿ ಸ್ಮೃತಿ ಮಂದಾನ ಬೌಲಿಂಗ್ ಆಯ್ದುಕೊಂಡು, ಡಿಸಿಯನ್ನು ಬ್ಯಾಟಿಂಗ್ಗೆ ಸ್ವಾಗತಿಸಿದೆ.ಮೊದಲ ಪಂದ್ಯದಲ್ಲಿ ಗುಜರಾತ್ ಜೈಂಟ್ಸ್ ಎದುರು ದಾಖಲೆ ಮೊತ್ತ ಬೆನ್ನತ್ತಿ ಗೆದ್ದಿರುವ ಆರ್ಸಿಬಿ ಇದೀಗ ಮತ್ತೇ ಗೆಲುವಿನ ನಿರೀಕ್ಷೆಯಲ್ಲಿ ಗ್ರೌಂಡ್ಗಿಳಿದಿದ್ದಾರೆ. ಮೊದಲ ಪಂದ್ಯಾಟದಲ್ಲೂ ಗುಜರಾತ್ ವಿರುದ್ಧ ಟಾಸ್ ಗೆದ್ದ ಆರ್ಸಿಬಿ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತ್ತು. ಇಂದು ಕೂಡಾ ಟಾಸ್ ಗೆದ್ದು, ಹೊಸ ದಾಖಲೆಯನ್ನು ಮಾಡುತ್ತಾ ಕಾದು ನೋಡಬೇಕು.ಡೆಲ್ಲಿ ಪಡೆ ಎರಡು ಬದಲಾವಣೆಗಳೊಂದಿಗೆ ಕಣಕ್ಕಿಳಿಯುತ್ತಿದೆ. ಅನುಭವಿಗಳಾದ ಜೆಸ್ ಜಾನ್ಸನ್ ಮತ್ತು ಮರಿಜನ್ನೆ ಕೇಪ್ ತಂಡ್ಕೆ ವಾಪಸ್ ಆಗಿದ್ದಾರೆ
ಮೈಸೂರು: ಉದಯಗಿರಿ ಪೊಲೀಸ್ ಠಾಣೆ ಮೇಲೆ ಹಾಗೂ ಪೊಲೀಸರ ಮೇಲೆ ನಡೆದ ಕಲ್ಲು ತೂರಾಟ ಪ್ರಕರಣ ಸಂಬಂಧ ವಿವಾದಿತ ಪೋಸ್ಟ್ ಹಾಕಿದ್ದ ಆರೋಪಿ ಸತೀಶ್ಗೆ ಕೋರ್ಟ್ ಜಾಮೀನು ಮಂಜೂರು ಮಾಡಿದೆ.ಆರೋಪಿ ಸತೀಶ್ಗೆ ಮೈಸೂರು ಕೋರ್ಟ್ ಷರತ್ತುಬದ್ಧ ಜಾಮೀನು ನೀಡಿದೆ. 2ನೇ ಅಪರ ಸಿವಿಲ್ ನ್ಯಾಯಾಧೀಶರಾದ ಸರೋಜಾ ಅವರು ಆದೇಶ ಪ್ರಕಟಿಸಿದ್ದಾರೆ. ಆರೋಪಿ ಸತೀಶ್ ಪರ ವಕೀಲ ಹ.ಮಾ ಭಾಸ್ಕರ್ ವಾದ ಮಂಡಿಸಿದ್ದರು.ರಾಜ್ಯದಲ್ಲಿ ಭಾರೀ ಸದ್ದು ಮಾಡಿದ್ದ ಉದಯಗಿರಿ ಪೊಲೀಸ್ ಠಾಣೆ ಮೇಲಿನ ಕಲ್ಲು ತೂರಾಟ ಪ್ರಕರಣಕ್ಕೆ ಪ್ರಚೋಧನೆ ನೀಡಿದ್ದು ಆರೋಪಿ ಸತೀಶ್ ಹಾಕಿದ್ದ ಪೋಸ್ಟ್.
ರಾಮನಗರ: ಕೇಂದ್ರ ಸಚಿವ ಎಚ್ಡಿ ಕುಮಾರಸ್ವಾಮಿ ವಿರುದ್ಧ ತಾಲೂಕಿನ ಬಿಡದಿ ಹೋಬಳಿ ವ್ಯಾಪ್ತಿಯ ಕೇತಗಾನಹಳ್ಳಿಯಲ್ಲಿ ಭೂಮಿ ಒತ್ತುವರಿ ಆರೋಪ ವಿಚಾರವಾಗಿ ಈಚೆಗೆ ಹೈಕೋರ್ಟ್ ತರಾಟೆ ತೆಗೆದುಕೊಂಡ ಬೆನ್ನಲ್ಲೇ ಕಂದಾಯ ಇಲಾಖೆ ಅಧಿಕಾರಿಗಳಿಂದ ಸರ್ವೆ ಕಾರ್ಯ ಮಾಡಲಾಗಿದೆ.14 ಎಕರೆ ಭೂಮಿ ಸರ್ಕಾರಿ ಜಮೀನನ್ನ ಒತ್ತುವರಿ ಮಾಡಿದ್ದಾರೆಂದು ಸಾಮಾಜಿಕ ಹೋರಾಟಗಾರರು ದೂರು ನೀಡಿದ್ದರು. ವರದಿ ನೀಡಲು ವಿಳಂಬ ಹಿನ್ನಲೆ ಕಂದಾಯ ಇಲಾಖೆ ಆಯುಕ್ತರಿಗೆ ಶೀಘ್ರ ವರದಿ ನೀಡುವಂತೆ ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿತ್ತು.
ಕೆಲ ಚಟುವಟಿಕೆಗಳು ನಮ್ಮ ಮೆದುಳಿನ ಶಕ್ತಿಯನ್ನು ಸುಧಾರಿಸಬಹುದು ಮತ್ತು ಸಂರಕ್ಷಿಸಬಹುದು. ಮೆಮೊರಿ ಚಟುವಟಿಕೆಗಳು. ಕೆಲವು ಚಟುವಟಿಕೆಗಳು ಮೆದುಳಿನ ಕಾರ್ಯ ಮತ್ತು ಸಂಪರ್ಕವನ್ನು ಸುಧಾರಿಸಬಹುದು. ಕೆಲವು ಚಟುವಟಿಕೆಗಳು ಹೀಗಿದೆ.ಧ್ಯಾನಧ್ಯಾನವು ಶಾಂತ ಮತ್ತು ಸಮತೋಲನದ ಮಾಡುತ್ತದೆ. ಭಾವನಾತ್ಮಕ ಯೋಗಕ್ಷೇಮ ಮತ್ತು ಒಟ್ಟಾರೆ ಆರೋಗ್ಯವನ್ನು ಸುಧಾರಿಸುತ್ತದೆ. ಇದು ಮೆದುಳು ಮತ್ತು ದೇಹ ಎರಡಕ್ಕೂ ಹಲವಾರು ಪ್ರಯೋಜನಗಳನ್ನು ನೀಡುತ್ತದೆ. ಧ್ಯಾನವು ಮೆದುಳಿಗೆ ಅದರ ರಚನೆ ಮತ್ತು ಅದರ ಕಾರ್ಯಚಟುವಟಿಕೆಗಳ ಮೇಲೆ ಪರಿಣಾಮ ಬೀರುವ ಮೂಲಕ ಪ್ರಯೋಜನವನ್ನು ಪಡೆಯಬಹುದು.
ಮುಂಬೈ: ಇಂಡಿಯಾಸ್ ಗಾಟ್ ಲ್ಯಾಲೆಂಟ್ ಶೋನಲ್ಲಿ ನೀಡಿದ ವಿವಾದಾತ್ಮಕ ಹೇಳಿಕೆ ಸಂಬಂಧ ಫೆಬ್ರವರಿ 24 ರಂದು ಮಹಾರಾಷ್ಟ್ರ ಸೈಬರ್ ಸೆಲ್ ಮುಂದೆ ಹಾಜರಾಗುವಂತೆ ಯುಟ್ಯೂಬರ್ ರಣವೀರ್ ಅಲ್ಲಾಬಾಡಿಯಾಗೆ ಸಮನ್ಸ್ ನೀಡಿದೆ.'ಇಂಡಿಯಾಸ್ ಗಾಟ್ ಲ್ಯಾಟೆಂಟ್' ಕಾರ್ಯಕ್ರಮದಲ್ಲಿ ಆಕ್ಷೇಪಾರ್ಹ ಹೇಳಿಕೆ ಸಂಬಂಧ ರಣವೀರ್ ಅಲ್ಲಾಬಾಡಿಯಾ ಮತ್ತು ಇತರರ ವಿರುದ್ಧ ಸೈಬರ್ ಸೆಲ್ ತನಿಖೆ ನಡೆಸುತ್ತಿದೆ.ಹಾಸ್ಯನಟ ಸಮಯ್ ರೈನಾ ಅವರಿಗೂ ನಾಳೆ ಸೈಬರ್ ಸೆಲ್ ಮುಂದೆ ಹಾಜರಾಗುವಂತೆ ಸೂಚಿಸಲಾಗಿದೆ.
ನವದೆಹಲಿ: ಸೋಮವಾರ ಮುಂಜಾನೆ ರಾಷ್ಟ್ರ ರಾಜಧಾನಿಯಲ್ಲಿ 4.0 ತೀವ್ರತೆಯ ಭೂಕಂಪ ಸಂಭವಿಸಿದ್ದರಿಂದ ದೆಹಲಿಯ ನಿವಾಸಿಗಳು ಮತ್ತು ರಾಷ್ಟ್ರೀಯ ರಾಜಧಾನಿ ಪ್ರದೇಶ (ಎನ್ಸಿಆರ್)ನಲ್ಲಿರುವವರು ಬಲವಾದ ಕಂಪನದಿಂದ ಭಯಭೀತರಾಗಿದ್ದಾರೆ.ದಕ್ಷಿಣ ದೆಹಲಿಯ ಧೌಲಾ ಕುವಾನ್ನಲ್ಲಿರುವ ದುರ್ಗಾಬಾಯಿ ದೇಶಮುಖ್ ಕಾಲೇಜ್ ಆಫ್ ಸ್ಪೆಷಲ್ ಎಜುಕೇಶನ್ ಬಳಿ ಭೂಕಂಪನದ ಕೇಂದ್ರಬಿಂದುವಾಗಿದೆ ಎಂದು ಅಧಿಕಾರಿಯೊಬ್ಬರು ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.ಬೆಳಗ್ಗೆ 5.36ಕ್ಕೆ ಐದು ಕಿಲೋಮೀಟರ್ ಆಳದಲ್ಲಿ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ಟ್ವೀಟ್ ಮಾಡಿದೆ. ದೆಹಲಿ-ಎನ್ಸಿಆರ್ನಲ್ಲಿ ಭೂಕಂಪ ಸಂಭವಿಸಿದಾಗ ದೊಡ್ಡ ಶಬ್ದ ಕೇಳಿಸಿತು ಮತ್ತು ಕಂಪನವು 35 ಸೆಕೆಂಡುಗಳ ಕಾಲ ನಡೆಯಿತು ಎಂದು ಅಧಿಕಾರಿ ಹೇಳಿದರು.
ಬೆಂಗಳೂರು: ಈಚೆಗೆ ಸಿಎಂ ರಾಜಕೀಯ ಸಲಹೆಗಾರ ಹುದ್ದೆಗೆ ರಾಜೀನಾಮೆ ನೀಡಿದ್ದ ಸಿದ್ದರಾಮಯ್ಯ ಆಪ್ತ, ಅಳಂದ ಕಾಂಗ್ರೆಸ್ ಶಾಸಕ ಬಿಆರ್ ಪಾಟೀಲ್ ಅವರನ್ನು ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷರಾಗಿ ನೇಮಕ ಮಾಡಲಾಗಿದೆ. ಅಲ್ಲದೆ ಬಿಆರ್ ಪಾಟೀಲ್ ಅವರಿಗೆ ಸಂಪುಟ ದರ್ಜೆ ಸ್ಥಾನಮಾನ ನೀಡಲಾಗಿದೆ.ರಾಜ್ಯ ಸರ್ಕಾರದ ಆದೇಶದಂತೆ ಆಳಂದ ಶಾಸಕ ಬಿ ಆರ್ ಪಾಟೀಲ್ ಅವರನ್ನು ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆಯ ಉಪಾಧ್ಯಕ್ಷರಾಗಿ ನೇಮಕ ಮಾಡುವುದರ ಜೊತೆಗೆ ಸಚಿವ ಸಂಪುಟ ದರ್ಜೆಯ ಸ್ಥಾನಮಾನ ಮತ್ತು ಎಲ್ಲಾ ಸೌಲಭ್ಯಗಳೊಂದಿಗೆ ತಕ್ಷಣದಿಂದ ಜಾರಿಗೆ ಬರುವಂತೆ ಸೂಚಿಸಿದೆ.ಫೆಬ್ರವರಿ 1 ರಂದು ಸಿಎಂ ರಾಜಕೀಯ ಸಲಹೆಗಾರ ಹುದ್ದೆಗೆ ನಾನು ರಾಜೀನಾಮೆ ನೀಡಿದ್ದೇನೆ.
ಬೆಂಗಳೂರು: ಕ್ರಿಕೆಟ್ ಪ್ರೇಮಿಗಳ ಇಂಡಿಯನ್ ಪ್ರೀಮಿಯರ್ ಲೀಗ್ 2025 ಮಾರ್ಚ್ 22 ರಂದು ಶುಭಾರಂಭಗೊಳ್ಳಲಿದ್ದು, ಹಾಲಿ ಚಾಂಪಿಯನ್ ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ವಿರುದ್ಧ ಮೊದಲ ಪಂದ್ಯಾಟ ನಡೆಯಲಿದೆ.ಪಂದ್ಯಾವಳಿಯಲ್ಲಿ 10 ತಂಡಗಳು, 13 ಸ್ಥಳಗಳಲ್ಲಿ, 74 ಪಂದ್ಯಗಳಲ್ಲಿ ಸೆಣಸಾಡಲಿವೆ. ಮೊದಲ ಪಂದ್ಯಾಟ ಕೋಲ್ಕತ್ತಾದ ಐತಿಹಾಸಿಕ ಈಡನ್ ಗಾರ್ಡನ್ಸ್ನಲ್ಲಿ ಆರಂಭಗೊಳ್ಳಲಿದೆ.ಈಗಾಗಲೇ ಐಪಿಎಲ್ ಅಭಿಮಾನಿಗಳು ಕ್ರೀಡಾಂಗಣದಲ್ಲಿಯೇ ಪಂದ್ಯಾಟವನ್ನು ವೀಕ್ಷಿಸುವ ಸಲುವಾಗಿ ಟಿಕೆಟ್ ಬುಕ್ ಮಾಡಲು ಕಾಯುತ್ತಿದ್ದಾರೆ. ಟಿಕೆಟ್ ಬುಕಿಂಗ್ ವಿವರಗಳು ಪಟ್ಟಣದ ಚರ್ಚೆಯಾಗಿ ಮಾರ್ಪಟ್ಟಿವೆ.
ಬೆಂಗಳೂರು: ಒಂದೆಡೆ ಹೊಸ ವಿವಿಗಳಿಗೆ ಬೀಗ, ಮತ್ತೊಂದೆಡೆ ಇರೋ ವಿವಿಗಳಿಗೆ ಇಲ್ಲ ಅನುದಾನ. ಧಾರವಾಡದ ಕರ್ನಾಟಕ ವಿವಿಯ ನಿವೃತ್ತರ ಪಿಂಚಣಿಗೂ ಇಲ್ಲ ಅನುದಾನ ಎಂದು ಕಾಂಗ್ರೆಸ್ ಸರ್ಜಾರದ ವಿರುದ್ಧ ಬಿಜೆಪಿ ಆರೋಪ ಮಾಡಿದೆ.ಈ ಬಗ್ಗೆ ರಾಜ್ಯ ಬಿಜೆಪಿ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಹಾಕಿದೆ. ಬಿಜೆಪಿ ಅವಧಿಯಲ್ಲಿ ಹೊಸ ವಿವಿಗಳ ಸ್ಥಾಪನೆ, ವಿವೇಕ ಕೊಠಡಿ ಯೋಜನೆ, ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್ ಸೇರಿದಂತೆ ರಾಜ್ಯದಲ್ಲಿ ಶೈಕ್ಷಣಿಕ ಅಭಿವೃದ್ಧಿಗಾಗಿ ಪಣತೊಟ್ಟಿತ್ತು.ಕಾಂಗ್ರೆಸ್ ಸರ್ಕಾರ ಬಿಜೆಪಿ ಅವಧಿಯ ಜನಪರ ಯೋಜನೆಗಳನ್ನು ರದ್ದುಗೊಳಿಸಿ ರಾಜ್ಯದ ವಿದ್ಯಾರ್ಥಿಗಳ
ಬೆಂಗಳೂರು: ಗಂಡನ ಅಕ್ರಮ ಸಂಬಂಧಕ್ಕೆ ಬೇಸತ್ತ ಪತ್ನಿ ತನ್ನ ಮಗಳನ್ನು ಕೊಂದು ತಾನೂ ಆತ್ಮಹತ್ಯೆಗೆ ಶರಣಾದ ಘಟನೆ ಬೆಂಗಳೂರಿನ ಬಗಲಗುಂಟೆಯಲ್ಲಿ ನಡೆದಿದೆ.ಶೃತಿ (33) ಆತ್ಮಹತ್ಯೆ ಮಾಡಿಕೊಂಡ ಪತ್ನಿ. ಆತ್ಮಹತ್ಯೆಗೆ ಶರಣಾಗುವ ಮುನ್ನಾ ತನ್ನ 5ವರ್ಷದ ಮಗಳು ರೋಶಿನಿಯನ್ನು ನೇಣು ಹಾಕಿದ್ದಳು. ಬಳಿಕ ತಾನೂ ಆತ್ಮಹತ್ಯೆಗೆ ಶರಣಾಗಿದ್ದಾರೆ. ಈಕೆ ಪಾವಘಡದ ಗುಂಡಾರನಹಳ್ಳಿ ಗ್ರಾಮಪಂಚಾಯ್ತಿ ಅಧ್ಯಕ್ಷೆಯಾಗಿದ್ದರು.ಪತಿ ಗೋಪಾಲಕೃಷ್ಣನ ಅಕ್ರಮ ಸಂಬಂಧಕ್ಕೆ ಬೇಸತ್ತಿದ್ದ ಶೃತಿ, ಡೆತ್ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಭಾನುವಾರ ಸಂಜೆ ಘಟನೆ ನಡೆದಿದೆ. ಸ್ಥಳಕ್ಕೆ ಬಗಲಗುಂಟೆ ಪೊಲೀಸರು ಭೇಟಿ ನೀಡಿ
ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರಕಾರವು ಗ್ಯಾರಂಟಿಗಳ ಅನುಷ್ಠಾನಕ್ಕೆ ಬಜೆಟ್ನಲ್ಲಿ ಮೀಸಲಿಟ್ಟ 52,009 ಕೋಟಿ ರೂ. ಹಣ ಎಲ್ಲಿ ಹೋಗುತ್ತಿದೆ? ಯಾರು ನುಂಗುತ್ತಿದ್ದಾರೆ ಎಂಬುದಕ್ಕೆ ಸರಕಾರ ಉತ್ತರಿಸಬೇಕು ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಆಗ್ರಹಿಸಿದ್ದಾರೆ.ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ” ದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನಿಗದಿತ ಸಮಯಕ್ಕೆ ಗ್ಯಾರಂಟಿಗಳು ತಲುಪುತ್ತಿಲ್ಲವೇಕೆ? ಎಂದು ಪ್ರಶ್ನಿಸಿದರು. ಕಾಂಗ್ರೆಸ್ ಪಕ್ಷ ಮತ್ತು ಸರಕಾರದ ಒಳಗಡೆ ಗ್ಯಾರಂಟಿ ಕೊಡಬೇಕೇ ಬೇಡವೇ ಎಂಬ ವಿಚಾರ ಚರ್ಚೆಯಲ್ಲಿದೆ ಎಂದು ವಿಶ್ಲೇಷಿಸಿದರು. ಈ ಕಾರಣದಿಂದ ಜನರಿಗೆ ಅನುಮಾನ ಬರುವಂತಾಗಿದೆ ಎಂದರು.
ಬೆಂಗಳೂರು:ಕರ್ನಾಟಕದ ಬಜೆಟ್ ಮಂಡನೆಗೆ ಮುಹೂರ್ತ ಫಿಕ್ಸ್ ಆಗಿದೆ. ಮುಂದಿನ ತಿಂಗಳು 7ರಂದು ಮುಖ್ಯಮಂತ್ರಿ ಮತ್ತು ಹಣಕಾಸು ಮಂತ್ರಿಯೂ ಆಗಿರುವ ಸಿದ್ದರಾಮಯ್ಯ ದಾಖಲೆಯ 16ನೇ ಬಜೆಟ್ ಮಂಡನೆ ಮಾಡಲಿದ್ದಾರೆ.ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಹಿತಿ ನೀಡಿದ್ದಾರೆ. 2025ನೇ ಸಾಲಿನ ಮೊದಲ ಅಧಿವೇಶನ ಮಾರ್ಚ್ 3ರಂದು ಆರಂಭವಾಗಲಿದೆ. 7ರಂದು ಬಜೆಟ್ ಮಂಡಿಸಲಾಗುತ್ತದೆ ಎಂದು ಹೇಳಿದ್ದಾರೆ.ಅಧಿವೇಶನದ ಮೊದಲ ದಿನ ರಾಜ್ಯಪಾಲ ಥಾವರ್ಚಂದ್ ಗೆಹಲೋತ್ ವಿಧಾನಮಂಡಲದ ಜಂಟಿ ಅಧಿವೇಶನದಲ್ಲಿ ಭಾಷಣ ಮಾಡಲಿದ್ದಾರೆ. ಬಳಿಕ ಅವರ ಭಾಷಣದ ಮೇಲೆ ಚರ್ಚೆ ನಡೆಯುತ್ತದೆ ಎಂದು ತಿಳಿಸಿದ್ದಾರೆ.
ಬೆಂಗಳೂರು: ಈ ಹಿಂದೆ ಮೌಢ್ಯಾಚಾರಣೆ ಹಾಗೂ ಕಂದಾಚಾರದ ವಿರುದ್ಧ ವಿರೋಧ ವ್ಯಕ್ತಪಡಿಸಿದ್ದ ನಟ ಡಾಲಿ ಧನಂಜಯ್ ಅವರು ಇದೀಗ ಅದ್ಧೂರಿಯಾಗಿ ಮದುವೆಯಾಗಿರುವುದಕ್ಕೆ ಭಾರೀ ಟ್ರೋಲ್ಗೆ ಒಳಗಾಗಿದ್ದಾರೆ.ತಮ್ಮಂದೇ ಆದ ಸಿದ್ಧಾಂತಗಳನ್ನು ಹೊಂದಿರುವ ನಟ ಧನಂಜಯ್ ಅವರು ಈ ಹಿಂದೆ ಮಂತ್ರಮಾಂಗಲ್ಯದ ಬಗ್ಗೆ ಒಲವು ತೋರಿಸಿದ್ದರು. ಆದರೆ ಅವರು ಮಾತ್ರ ಕೋಟ್ಯಂತರ ರೂಪಾಯಿ ಹಣ ಖರ್ಚು ಮಾಡಿ, ಅದ್ಧೂರಿಯಾಗಿ ಡಾ.ಧನ್ಯತಾ ಜತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟರು.ಈ ವಿಚಾರವನ್ನು ಮುಂದಿಟ್ಟು ಅವರನ್ನು ಟ್ರೋಲ್ ಮಾಡಲಾಗಿದೆ. ಅದಲ್ಲದೆ ಅವರ ಸಿನಿಮಾದಲ್ಲಿ ಬಡವರ ಮಕ್ಕಳು ಬೆಳಿಬೇಕು ಎನ್ನುವ ಡೈಲಾಂಗ್ ಮುಂದಿಟ್ಟು, ಕೋಟಿ ಖರ್ಚು ಮಾಡಿ
ಬೆಂಗಳೂರು: ಮೆಟ್ರೋ ಟಿಕೆಟ್ ದರ ಏರಿಕೆ ಹೊಣೆಯನ್ನು ರಾಜ್ಯ ಸರ್ಕಾರದ ಮೇಲೆ ಹೊರಿಸಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ಗೆ ತಿರುಗೇಟು ನೀಡಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಬಿಜೆಪಿ ಅಂದರೆ ಬುರುಡೆ ಜನರ ಪಕ್ಷ. ಸುಳ್ಳು ಹೇಳುವುದರಲ್ಲಿ ಇವರನ್ನು ಬಿಟ್ರೆ ಬೇರೆ ಯಾರು ಇಲ್ಲ ಎಂದು ತಿರುಗೇಟು ನೀಡಿದ್ದಾರೆ.ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೆಟ್ರೋ ದರ ಏರಿಕೆ ಬಗ್ಗೆ ರಾಜ್ಯ ಸರ್ಕಾರದ ಮೇಲೆ ಬಿಜೆಪಿ ಗೂಬೆ ಕೂರಿಸುತ್ತಿದೆ. ಬಿಜೆಪಿ ನಾಯಕರು ಎಷ್ಟು ದಿನ ಈ ರೀತಿ ಬೂಟಾಟಿಕೆ ರಾಜಕೀಯ ಮಾಡುತ್ತೀರಿ? ಕೇಂದ್ರ ರೈಲ್ವೆ ಸಚಿವರಿಗೂ ಸುಳ್ಳಿನ ಸರದಾರ ಎಂಬ ಕುಖ್ಯಾತಿ ನೀಡಿದ ಕೀರ್ತಿ ಬಿಜೆಪಿಗೆಗೆ ಸಲ್ಲುತ್ತದೆ ಎಂದರು ವಾಗ್ದಾಳಿ ನಡೆಸಿದರು.
ಬೆಂಗಳೂರು: ಸತತ ಬಿಸಿಲಿನಿಂದ ತತ್ತರಿಸಿದ್ದ ಜನರಿಗೆ ಗುಡ್ ನ್ಯೂಸ್ ಸಿಕ್ಕಿದೆ. ಈ ದಿನದಿಂದ 13 ರಾಜ್ಯಗಳಲ್ಲಿ ಹವಾಮಾನ ಇಲಾಖೆ ಮಳೆಯ ಮುನ್ಸೂಚನೆ ನೀಡಿದೆ. ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಲಿದ್ದು, ದೇಶದ ಹಲವೆಡೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ವರದಿ ನೀಡಿದೆ. ಮುಂದಿನ ಏಳು ದಿನಗಳವರೆಗೆ ಮಳೆಯಾಗುವ ಸಾಧ್ಯತೆಯಿದೆ ಎಂದು ವರದಿಯಾಗಿದೆ. ಸಮುದ್ರಮಟ್ಟದಿಂದ 1.5 ಕಿ.ಮೀ. ಎತ್ತರದಲ್ಲಿ ಚಂಡಮಾರುತ ರೂಪುಗೊಳ್ಳುತ್ತಿದೆ. ಇದರಿಂದಾಗಿ ಫೆಬ್ರವರಿ 15 ರಿಂದ 21 ರ ನಡುವೆ ಮಳೆ ಮತ್ತು ಉತ್ತರದ ಕೆಲವು ಭಾಗಗಳಲ್ಲಿ ಹಿಮಪಾತವಾಗುವ ಸಾಧ್ಯತೆಯಿದೆ.
ಬೆಂಗಳೂರು: ಕರ್ನಾಟಕ ರಾಜ್ಯ ಬಜೆಟ್ ಮಂಡನೆ ಯಾವಾಗ ಮತ್ತು ಬಜೆಟ್ ಅಧಿವೇಶನ ಯಾವಾಗ ಎಂದು ಸಿಎಂ ಸಿದ್ದರಾಮಯ್ಯ ದಿನಾಂಕ ಘೋಷಣೆ ಮಾಡಿದ್ದಾರೆ. ಈಗಾಗಲೇ ಕೇಂದ್ರ ಬಜೆಟ್ ಮಂಡನೆಯಾಗಿದ್ದು ರಾಜ್ಯ ಬಜೆಟ್ ಮಂಡನೆ ಯಾವಾಗ ಎಂದು ಜನ ಎದಿರು ನೋಡುತ್ತಿದ್ದಾರೆ. ಈ ನಡುವೆ ಸಿಎಂ ಸಿದ್ದರಾಮಯ್ಯ ಇಂದು ಬಜೆಟ್ ಮಂಡನೆ ದಿನಾಂಕ ಘೋಷಣೆ ಮಾಡಿದ್ದಾರೆ. ಮಾರ್ಚ್ 3 ರಿಂದ ಕರ್ನಾಟಕ ವಿಧಾನ ಮಂಡಲ ಅಧಿವೇಶನ ಆರಂಭವಾಗಲಿದೆ. ಮಾರ್ಚ್ 7 ರಂದು ರಾಜ್ಯದ ಈ ಆರ್ಥಿಕ ವರ್ಷದ ಬಜೆಟ್ ಮಂಡನೆಯಾಗಲಿದೆ ಎಂದು ಸಿಎಂ ಸಿದ್ದರಾಮಯ್ಯ ಇಂದು ಘೋಷಣೆ ಮಾಡಿದ್ದಾರೆ.
ಉಡುಪಿ: ರೈಲು ಹಳಿಯ ಕಬ್ಬಿಣ ಕದಿಯುತ್ತಿದ್ದ ಇಬ್ಬರು ಬಾಲಕರನ್ನು ಹಿಡಿದು ಪ್ರಶ್ನಿಸಿದ ರೈಲು ಸಿಬ್ಬಂದಿಗೆ ಈಗ ಸನ್ಮಾನದ ಬದಲು ಕೇಸ್ ಜಡಿದು ಶಿಕ್ಷೆ ನೀಡಲಾಗುತ್ತಿದೆ! ಇದು ನಡೆದಿರುವುದು ಉಡುಪಿಯಲ್ಲಿ. ಹಳಿಯ ಕಬ್ಬಿಣ ಕದಿಯುತ್ತಿದ್ದ ಇಬ್ಬರು ಶಾಲಾ ಬಾಲಕರನ್ನು ಅಲ್ಲಿಯೇ ರೆಡ್ ಹ್ಯಾಂಡ್ ಆಗಿ ಹಿಡಿದು ಕೊಂಕಣ ರೈಲ್ವೇ ಸಿಬ್ಬಂದಿಯೊಬ್ಬರು ಬೆತ್ತದಿಂದ ಹೊಡೆದಿದ್ದಾರೆ. ಬಳಿಕ ನೀವು ಯಾರು ನಿಮ್ಮ ಶಾಲೆ ಯಾವುದು ಎಂದೆಲ್ಲಾ ಪ್ರಶ್ನಿಸಿ ವಿಡಿಯೋ ಮಾಡಿದ್ದಾರೆ. ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು.
ಬೆಂಗಳೂರು: ಕರ್ನಾಟಕ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಹಣ ಮೂರು ತಿಂಗಳಿನಿಂದ ಬಾಕಿಯಿದೆ. ಅನ್ನಭಾಗ್ಯ ಯೋಜನೆಯ ಬಾಬ್ತು ಕೊಡಬೇಕಾದ ಹಣವೂ ಬಾಕಿಯಿದೆ. ರಾಜ್ಯ ಸರ್ಕಾರದ ಬಳಿ ಕೊಡಲು ಹಣವೇ ಇಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಮೂರು ತಿಂಗಳಿನಿಂದ ಗೃಹಲಕ್ಷ್ಮಿ ಹಣ ಮನೆ ಯಜಮಾನಿಯ ಖಾತೆಗೆ ಜಮಾ ಆಗಿಲ್ಲ. ಅನ್ನಭಾಗ್ಯ ಯೋಜನೆಯಡಿ ಕೊಡಬೇಕಾದ ಅಕ್ಕಿಯ ಹಣವನ್ನೂ ಸರ್ಕಾರ ನೀಡಿಲ್ಲ ಎಂದು ಸಾರ್ವಜನಿಕರೂ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನವದೆಹಲಿ: ದೆಹಲಿ ವಿಧಾನಸಭೆ ಚುನಾವಣೆಯ ಪ್ರಚಾರಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ನೀಡಿದ ಭರವಸೆಯಂತೆ ಮಲಿನಗೊಂಡಿರುವ ಯಮುನಾ ನದಿಯ ಸ್ವಚ್ಛತಾ ಕಾರ್ಯ ಆರಂಭವಾಗಿದೆ.ರಾಷ್ಟ್ರ ರಾಜಧಾನಿ ದೆಹಲಿಯ ವಿಧಾನಸಭೆ ಚುನಾವಣೆಯಲ್ಲಿ ಅರವಿಂದ ಕೇಜ್ರಿವಾಲ್ ನಾಯಕತ್ವದ ಆಪ್ ಆದ್ಮಿ ಪಕ್ಷಕ್ಕೆ ಸೋಲಾಗಿದೆ. 27 ವರ್ಷಗಳ ಬಳಿಕ ಬಿಜೆಪಿ ಬಹುಮತ ಪಡೆದಿದೆ. ಬಿಜೆಪಿಯು ಅಧಿಕಾರದ ಗದ್ದುಗೆಗೆ ಏರುವ ಮುನ್ನವೇ ಚುನಾವಣೆಯ ವೇಳೆ ನೀಡಿದ ಭರವಸೆಯಂತೆ ಯಮುನಾ ನದಿಗೆ ಕಾಯಕಲ್ಪ ನೀಡುವ ಕೆಲಸವನ್ನು ಶುರು ಮಾಡಿದೆ.ಯಮುನಾ ನದಿಯನ್ನು ಮಾಲಿನ್ಯದಿಂದ ಮುಕ್ತಗೊಳಿಸುವ ನಾಲ್ಕು ಹಂತದ ಕಾರ್ಯತಂತ್ರವನ್ನು ಆಧರಿಸಿ ಭಾನುವಾರವೇ ಶುದ್ಧೀಕರಣ ಕಾರ್ಯ ಆರಂಭವಾಗಿದೆ. ನೀರಿನಿಂದ ಕಸ ತೆಗೆಯುವ ಯಂತ್ರಗಳು, ಕಳೆ ಕೊಯ್ಲು ಯಂತ್ರಗಳು, ಹೂಳೆತ್ತುವ ಸಾಧನಗಳು ಮತ್ತು ಡ್ರೆಡ್ಜರ್ನೊಂದಿಗೆ ಕೆಲಸಕ್ಕೆ ಚಾಲನೆ ನೀಡಲಾಗಿದೆ.
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ2 ಆರೋಪಿಯಾಗಿರುವ ನಟ ದರ್ಶನ್ ಹಲವು ತಿಂಗಳ ಜೈಲುವಾಸ ಅನುಭವಿಸಿ, ಹೈಕೋರ್ಟ್ನಿಂದ ಜಾಮೀನು ಪಡೆದು ಹೊರಬಂದಿದ್ದಾರೆ.ನಟ ದರ್ಶನ್ ಸೇರಿದಂತೆ ಆರೋಪಿಗಳಿಗೆ ಹೈಕೋರ್ಟ್ ಜಾಮೀನು ನೀಡಿರುವುದನ್ನು ಪ್ರಶ್ನಿಸಿ ಬೆಂಗಳೂರು ಪೊಲೀಸರು ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಿದ್ದಾರೆ. ಸುಪ್ರೀಂ ಕೋರ್ಟ್ನಲ್ಲಿ ಈ ಪ್ರಕರಣದ ವಿಚಾರಣೆ ಶೀಘ್ರದಲ್ಲೇ ಬರಲಿದೆ. ಕರ್ನಾಟಕ ಹೈಕೋರ್ಟ್ನಲ್ಲಿ ದರ್ಶನ್ ಪರ ಹಿರಿಯ ವಕೀಲ ಸಿ.ವಿ. ನಾಗೇಶ್ ವಾದ ಮಂಡಿಸಿದ್ದರು. ಆದರೆ, ಸುಪ್ರೀಂ ಕೋರ್ಟ್ನಲ್ಲಿ ದರ್ಶನ್ ಪರ ಯಾರು ವಾದ ಮಂಡಿಸಲಿದ್ದಾರೆ ಎಂಬ ಕುತೂಹಲ ಜನರಲ್ಲಿದೆ. ಮೂಲಗಳ ಪ್ರಕರಣ ಸುಪ್ರೀಂ ಕೋರ್ಟ್ನ ಹಿರಿಯ ವಕೀಲ ಕಪಿಲ್ ಸಿಬಲ್ ಅವರು ದರ್ಶನ್ ಪರ ವಾದ ಮಂಡಿಸಲಿದ್ದಾರೆ.
ನವದೆಹಲಿ: ಸದಾ ವಿವಾದಾತ್ಮಕ ಹೇಳಿಕೆಗಳಿಂದಲೇ ಸುದ್ದಿಯಾಗುವ ಕಾಂಗ್ರೆಸ್ ಸಾಗರೋತ್ತರ ವಿಭಾಗದ ಮುಖ್ಯಸ್ಥ ಸ್ಯಾಮ್ ಪಿತ್ರೋಡಾ ಚೀನಾ ನಮ್ಮ ಶತ್ರು ರಾಷ್ಟ್ರವೇ ಅಲ್ಲ ಎನ್ನುವ ಮೂಲಕ ಹೊಸ ಚರ್ಚೆ ಹುಟ್ಟು ಹಾಕಿದ್ದಾರೆ. ಈ ಮೊದಲು ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಪಿತ್ರಾರ್ಜಿತ ಆಸ್ತಿಯನ್ನು ಸರ್ಕಾರ ವಶಪಡಿಸಿಕೊಳ್ಳಬೇಕು ಎಂದು ಹೇಳಿಕೆ ನೀಡಿ ಕಾಂಗ್ರೆಸ್ ಗೇ ಮುಳುವಾಗಿದ್ದ ಸ್ಯಾಮ್ ಪಿತ್ರೋಡಾ ಈಗ ಮತ್ತೊಮ್ಮೆ ವಿವಾದ ಸೃಷ್ಟಿಸಿದ್ದಾರೆ. ಸುದ್ದಿ ಸಂಸ್ಥೆ ಜೊತೆ ಮಾತನಾಡಿದ ಅವರು ಚೀನಾ ನಮ್ಮ ಶತ್ರು ರಾಷ್ಟ್ರವೇ ಅಲ್ಲ.
ಬೆಂಗಳೂರು: ರಾಜ್ಯ ರಾಜಧಾನಿ ನಾಗರಿಕರಿಗೆ ವಾರಕ್ಕೊಂದು ಬೆಲೆ ಏರಿಕೆ ಬಿಸಿ ಎಂಬಂತಾಗಿದೆ. ಈ ವಾರ ಕಾವೇರಿ ನೀರಿನ ಸರದಿ ಎಂದು ವರದಿಯಾಗಿದೆ. ಕಳೆದ ವಾರ ಬೆಂಗಳೂರು ಮೆಟ್ರೊ ಪ್ರಯಾಣ ದರ ದುಪ್ಪಟ್ಟಾಗಿತ್ತು. ಇದರ ಬಗ್ಗೆ ಸಾಕಷ್ಟು ಆಕ್ರೋಶ ವ್ಯಕ್ತವಾಗಿತ್ತು. ಮೆಟ್ರೊ ಪ್ರಯಾಣ ದುಬಾರಿಯಾಗಿರುವುದರಿಂದ ಜನ ಈಗ ಬಸ್ ಅಥವಾ ಖಾಸಗಿ ವಾಹನಗಳನ್ನು ಆಶ್ರಯಿಸುತ್ತಿದ್ದಾರೆ. ಇದಕ್ಕೆ ಮೊದಲು ಬಸ್ ಪ್ರಯಾಣ ದರವನ್ನು ರಾಜ್ಯ ಸರ್ಕಾರ ಹೆಚ್ಚು ಮಾಡಿತ್ತು. ಕೆಎಸ್ ಆರ್ ಟಿಸಿ ಸೇರಿದಂತೆ ಎಲ್ಲಾ ನಿಗಮಗಳ ಬಸ್ ಪ್ರಯಾಣ ದರವನ್ನು ಶೇ.15 ರಷ್ಟು ಹೆಚ್ಚಳ ಮಾಡಿತ್ತು. ಇದೂ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿತ್ತು.
ಬೆಂಗಳೂರು: ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರವಾಗಿ ಹೇಳಿಕೆ ಕೊಟ್ಟಿದ್ದ ಕೆಎನ್ ರಾಜಣ್ಣಗೆ ಡಿಕೆ ಶಿವಕುಮಾರ್ ಎಚ್ಚರಿಕೆ ನೀಡಿದ್ದಾರೆ. ಡಿಕೆ ಶಿವಕುಮಾರ್ ಎಚ್ಚರಿಕೆಯೆಲ್ಲ ನನ್ನತ್ರ ನಡೆಯಲ್ಲ ಎಂದು ರಾಜಣ್ಣ ಎಚ್ಚರಿಕೆ ನೀಡಿದ್ದಾರೆ. ರಾಜ್ಯ ಕಾಂಗ್ರೆಸ್ ನಲ್ಲಿ ಈಗ ಸಿಎಂ ಬದಲಾವಣೆ, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರವಾಗಿ ಭಾರೀ ಚರ್ಚೆಯಾಗುತ್ತಿದೆ. ಬಹಿರಂಗವಾಗಿ ಕೆಎನ್ ರಾಜಣ್ಣ ಹೇಳಿಕೆ ನೀಡಿದ ಬೆನ್ನಲ್ಲೇ ಡಿಸಿಎಂ ಡಿಕೆ ಶಿವಕುಮಾರ್ ಬಹಿರಂಗವಾಗಿ ಯಾರೂ ಹೇಳಿಕೆ ನೀಡಬಾರದು ಎಂದು ಎಚ್ಚರಿಕೆ ನೀಡಿದ್ದರು. ಇದರ ಬಗ್ಗೆ ಪ್ರತಿಕ್ರಿಯಿಸಿರುವ ರಾಜಣ್ಣ ‘ಎಚ್ಚರಿಕೆ ಗಿಚ್ಚರಿಕೆ ಎಲ್ಲಾ ನಡೆಯಲ್ಲ. ತಪ್ಪು ಮಾಡಿದ್ರೆ ತಾನೇ ಎಚ್ಚರಿಕೆ ಮಾತು. ನಾವೇನೂ ತಪ್ಪು ಮಾಡಿಲ್ಲ.
ಬೆಂಗಳೂರು: ಬುರ್ಖಾ ಹಾಕಿಕೊಂಡು ಬಂದು ಆರ್ ಎಸ್ಎಸ್ ನವರು ಮೈಸೂರಿನಲ್ಲಿ ಗಲಾಟೆ ಮಾಡಿದ್ದಾರೆ ಎಂದು ಆರೋಪ ಮಾಡಿದ್ದ ಕಾಂಗ್ರೆಸ್ ನಾಯಕ ಬಿಕೆ ಹರಿಪ್ರಸಾದ್ ಗೆ ತಾಕತ್ತಿದ್ದರೆ ಬುರ್ಖಾ ಬ್ಯಾನ್ ಮಾಡಿ ಎಂದು ಕೆಲವು ನೆಟ್ಟಿಗರು ಸವಾಲು ಹಾಕಿದ್ದಾರೆ. ಸೋಷಿಯಲ್ ಮೀಡಿಯಾ ಪುಟದಲ್ಲಿ ಧರ್ಮಗುರುಗಳ ಬಗ್ಗೆ ಅವಹೇಳನಕಾರೀ ಪೋಸ್ಟ್ ಮಾಡಿದ್ದಾರೆಂಬ ಕಾರಣಕ್ಕೆ ಮೈಸೂರಿನಲ್ಲಿ ಇತ್ತೀಚೆಗೆ ಉದಯಗಿರಿ ಪೊಲೀಸ್ ಠಾಣೆ ಮೇಲೆ ಮುಸ್ಲಿಂ ಯುವಕರ ಗುಂಪು ದಾಳಿ ಮಾಡಿತ್ತು. ಘಟನೆ ಬಗ್ಗೆ ಪ್ರತಿಕ್ರಿಯಿಸಿದ್ದ ಬಿಕೆ ಹರಿಪ್ರಸಾದ್ ನಿನ್ನೆ ಈ ಗಲಾಟೆ ಮಾಡಿದವರು ಆರ್ ಎಸ್ಎಸ್ ನವರು.
ವಡೋದರಾ: ಡಬ್ಲ್ಯುಪಿಎಲ್ ನಲ್ಲಿ ಮೊದಲ ಪಂದ್ಯ ಗೆದ್ದ ಆರ್ ಸಿಬಿಗೆ ಇಂದು ಎರಡನೇ ಪಂದ್ಯದಲ್ಲಿ ಪ್ರಬಲ ಡೆಲ್ಲಿ ಕ್ಯಾಪಿಟಲ್ಸ್ ತಂಡ ಎದುರಾಳಿಯಾಗಿದೆ. ಆದರೆ ಆರ್ ಸಿಬಿ ಫ್ಯಾನ್ಸ್ ಈ ಬಾರಿ ಲೋಕಲ್ ಪ್ರತಿಭೆ, ಕರ್ನಾಟಕ ಕ್ರಶ್ ಶ್ರೇಯಾಂಕ ಪಾಟೀಲ್ ರನ್ನು ಮಿಸ್ ಮಾಡಿಕೊಳ್ಳುತ್ತಿದ್ದಾರೆ. ಗಾಯದಿಂದಾಗಿ ಈ ಬಾರಿ ಶ್ರೇಯಾಂಕ ಪಾಟೀಲ್ ಡಬ್ಲ್ಯುಪಿಎಲ್ ಪಂದ್ಯಾವಳಿಯ ಭಾಗವಾಗಿಲ್ಲ. ಅವರು ಬೇಗನೇ ಚೇತರಿಸಿಕೊಂಡು ತಂಡವನ್ನು ಕೂಡಿಕೊಳ್ಳಲಿ ಎಂದು ಫ್ಯಾನ್ಸ್ ಆಗ್ರಹಿಸುತ್ತಿದ್ದಾರೆ. ಯಾಕೆಂದರೆ ಶ್ರೇಯಾಂಕಗೆ ಆರ್ ಸಿಬಿಯಲ್ಲೇ ಅವರದ್ದೇ ಅಭಿಮಾನಿ ವರ್ಗದವರಿದ್ದಾರೆ.
ದುಬೈ: ಚಾಂಪಿಯನ್ಸ್ ಟ್ರೋಫಿ ಪಂದ್ಯಾವಳಿಯಲ್ಲಿ ಪಾಲ್ಗೊಳ್ಳಲು ದುಬೈಗೆ ಬಂದಿಳಿದಿರುವ ಟೀಂ ಇಂಡಿಯಾಗೆ ಬಿಸಿಸಿಐ ಕೆಲವೊಂದು ಕಠಿಣ ನಿಯಮಗಳನ್ನು ವಿಧಿಸಿದೆ. ಆದರೆ ವಿರಾಟ್ ಕೊಹ್ಲಿಗೆ ಮಾತ್ರ ವಿಶೇಷ ಆಹಾರ ವ್ಯವಸ್ಥೆ ಮಾಡಲಾಗಿದ್ದು ಕೊಹ್ಲಿ ಈ ನಿಯಮ ಅನ್ವಯವಾಗಲ್ವಾ ಎಂದು ಪ್ರಶ್ನಿಸುವಂತಾಗಿದೆ. ಟೀಂ ಇಂಡಿಯಾದ ಯಾವುದೇ ಆಟಗಾರರೂ ದುಬೈನಲ್ಲಿ ವಿಶೇಷ ಕುಕ್ ಇಟ್ಟುಕೊಳ್ಳಬಾರದು. ಎಲ್ಲರೂ ಒಂದೇ ರೀತಿಯ ಆಹಾರ ಸೇವನೆ ಮಾಡಬೇಕು ಎಂಬುದು ನಿಯಮಗಳಲ್ಲಿ ಒಂದಾಗಿದೆ. ಆದರೆ ದುಬೈಗೆ ಬಂದಿಳಿದ ತಕ್ಷಣ ವಿರಾಟ್ ಕೊಹ್ಲಿ ಲೋಕಲ್ ಮ್ಯಾನೇಜರ್ ಜೊತೆ ಕೆಲವು ಕ್ಷಣ ಮಾತುಕತೆ ನಡೆಸಿದ್ದಾರೆ. ಅದಾದ ಬಳಿಕ ಅವರಿಗೆ ಪ್ರತ್ಯೇಕ ಆಹಾರದ ಪಾರ್ಸೆಲ್ ಬಂದಿದೆ.
ಬೆಂಗಳೂರು: ಇಂದಿನಿಂದ ಫಾಸ್ಟ್ ಟ್ಯಾಗ್ ನಲ್ಲಿ ಹೊಸ ನಿಯಮ ಜಾರಿಗೆ ಬರಲಿದೆ. ಹೆದ್ದಾರಿಗಳಲ್ಲಿ ಪ್ರಯಾಣಿಸುವ ಮೊದಲು ಈ ಹೊಸ ನಿಯಮಗಳ ಬಗ್ಗೆ ಗಮನದಲ್ಲಿರಲಿ. ಇನ್ನು ಹೆದ್ದಾರಿಯಲ್ಲಿ ಪ್ರಯಾಣಿಸುವ ಮೊದಲು ನಿಮ್ಮ ಫಾಸ್ಟ್ ಟ್ಯಾಗ್ ನಲ್ಲಿ ಎಲ್ಲವೂ ಸರಿಯಾಗಿದೆಯೇ ಎಂದು ಸರಿಯಾಗಿ ಪರೀಕ್ಷಿಸಿಕೊಂಡು ಹೊರಡಿ. ಯಾಕೆಂದರೆ ಇಂದಿನಿಂದ ಕಡಿಮೆ ಬ್ಯಾಲೆನ್ಸ್, ವಿಳಂಬ ಪಾವತಿ, ಕೆವೈಸಿ ನಿಯಮಗಳನ್ನು ಪಾಲಿಸದೇ ಇದ್ದಲ್ಲಿ ಅಥವಾ ಕಪ್ಪುಪಟ್ಟಿಗೆ ಸೇರ್ಪಡೆಯಾದ ಫಾಸ್ಟ್ ಟ್ಯಾಗ್ ಗಳಿಗೆ ದಂಡ ವಿಧಿಸುವ ಹೊಸ ನಿಯಮ ಜಾರಿಗೆ ಬರಲಿದೆ. ರಾಷ್ಟ್ರೀಯ ಟೋಲ್ ಪಾವತಿ ನಿಗಮ ಎನ್ ಪಿಸಿಐ ಹೊಸ ನಿಯಮ ಜಾರಿಗೆ ತಂದಿದೆ.
ಮುಂಬೈ: ಹಾರ್ವರ್ಡ್ ಇಂಡಿಯಾ ಕಾನ್ಫರೆನ್ಸ್ ನಲ್ಲಿ ಉದ್ಯಮಿ ನೀತಾ ಅಂಬಾನಿಗೆ ನಿಮ್ಮ ಗಂಡ ಮುಕೇಶ್ ಮತ್ತು ಪ್ರಧಾನಿ ಮೋದಿ ನಡುವೆ ಒಬ್ಬರನ್ನು ಆಯ್ಕೆ ಮಾಡಿ ಎಂದರೆ ಯಾರನ್ನು ಆಯ್ಕೆ ಮಾಡುತ್ತೀರಿ ಎಂದು ಕೇಳಲಾಯಿತು. ಇದಕ್ಕೆ ಅವರ ಉತ್ತರವೇನು ಗೊತ್ತಾ? ಎಲ್ಲರಿಗೂ ಗೊತ್ತಿರುವ ಹಾಗೆ ಪ್ರಧಾನಿ ಮೋದಿಗೆ ಅಂಬಾನಿ ಕುಟುಂಬದ ಜೊತೆ ಉತ್ತಮ ಸ್ನೇಹ ಸಂಬಂಧವಿದೆ. ಹಾರ್ವರ್ಡ್ ಇಂಡಿಯಾ ಸಮಾವೇಶನದಲ್ಲಿ ನೀತಾ ಅಂಬಾನಿಯನ್ನು ಸಂದರ್ಶನ ಮಾಡಲಾಯಿತು. ಈ ವೇಳೆ ಅವರಿಗೆ ಇಂತಹದ್ದೊಂದು ಕಠಿಣ ಪ್ರಶ್ನೆ ಕೇಳಲಾಗಿದೆ.
ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಇಂದು ಬೆಳಿಗ್ಗೆಯೇ ಭೂಕಂಪನದ ಶಾಕ್ ಸಿಕ್ಕಿದೆ. ಭೂಮಿ ಕಂಪಿಸಿದ ವಿಡಿಯೋಗಳು ಈಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಇಂದು ಬೆಳಿಗ್ಗೆ 5.36 ರ ಸುಮಾರಿಗೆ ದೆಹಲಿಯಲ್ಲಿ ಭೂಕಂಪವಾಗಿದ್ದು ರಿಕ್ಟರ್ ಮಾಪಕದಲ್ಲಿ 4.0 ರಷ್ಟು ತೀವ್ರತೆ ದಾಖಲಾಗಿದೆ. ಸ್ಥಳೀಯ ಸಿಸಿಟಿವಿ ಕ್ಯಾಮರಾಗಳಲ್ಲೂ ಭೂ ಕಂಪಿಸಿದ ವಿಡಿಯೋಗಳು ದಾಖಲಾಗಿವೆ. ದೆಹಲಿ, ನೋಯ್ಡಾ, ಗಾಜಿಯಾಬಾದ್ ಮತ್ತು ಗುರುಗ್ರಾಮ ಸೇರಿದಂತೆ ಹಲವು ಕಡೆಗಳಲ್ಲಿ ಕಟ್ಟಡ, ಮನೆಯಲ್ಲಿರುವ ವಸ್ತುಗಳು ಅಲುಗಾಡಿದ ಅನುಭವವಾಗಿದೆ. ಇದರಿಂದಾಗಿ ಜನ ಭಯಭೀತರಾಗಿದ್ದು ತಕ್ಷಣವೇ ಮನೆಗಳಿಂದ ಹೊರಬಂದಿದ್ದಾರೆ.
ಬೆಂಗಳೂರು: ಫ್ರೀ ಕೆಲಸ ಮಾಡಕ್ಕೂ ರೆಡಿ ಒಟ್ನಿಲ್ಲಿ ಕೆಲಸ ಕೊಡಿ ಸಾರ್ ಎಂದು ಬೆಂಗಳೂರಿನ ಟೆಕಿಯೊಬ್ಬರು ಅಂಗಲಾಚಿದ್ದಾರೆ. ರೆಡಿಟ್ ನಲ್ಲಿ ತನ್ನ ಬಯೋಡೇಟಾದಲ್ಲಿ ತನ್ನ ಸಮಸ್ಯೆ ಹೇಳಿಕೊಂಡಿದ್ದಾರೆ. ಬೆಂಗಳೂರು ಮೂಲದ ಸಾಫ್ಟ್ ವೇರ್ ಇಂಜಿನಿಯರ್ ರೆಡಿಟ್ ನಲ್ಲಿ ಉದ್ಯೋಗಕ್ಕಾಗಿ ಪೋಸ್ಟ್ ಮಾಡಿದ್ದಾನೆ. ಇದರಲ್ಲಿ ತಾನು 2023 ರಲ್ಲಿ ಪದವಿ ಮುಗಿಸಿದ್ದೇನೆ. ಆದರೆ ಇದುವರೆಗೆ ಸ್ಥಿರ ಉದ್ಯೋಗವೊಂದೂ ಸಿಕ್ಕಿಲ್ಲ. ಫ್ರೀ ಆಗಿ ಕೆಲಸ ಮಾಡಲೂ ರೆಡಿ. ನನಗೆ ಒಂದು ಕೆಲಸ ಕೊಡಿ. ಹಾಗಾದರೂ ಸ್ವಲ್ಪ ಅನುಭವ ಪಡೆದುಕೊಳ್ಳುತ್ತೇನೆ ಎಂದು ಅಳಲು ತೋಡಿಕೊಂಡಿದ್ದೇನೆ.
ಬೆಂಗಳೂರು: ನಟಿ ರಾಧಿಕಾ ಪಂಡಿತ್ ತಮ್ಮ ಯೂ ಟ್ಯೂಬ್ ಚಾನೆಲ್ ನಲ್ಲಿ ಪ್ರಕಟಿಸಿದ ವಿಡಿಯೋವೊಂದರಲ್ಲಿ ಮಕ್ಕಳ ಜೊತೆ ಇಂಗ್ಲಿಷ್ ನಲ್ಲಿ ಮಾತನಾಡಿದ್ದಕ್ಕೆ ಟ್ರೋಲ್ ಆಗಿದ್ದಾರೆ. ಬೆಳೆದ ಮೇಲೆ ನಿಮಗೆ ಕನ್ನಡ ಬೇಡ ಇಂಗ್ಲಿಷ್ ಸಾಕಲ್ವಾ ಎಂದು ನೆಟ್ಟಿಗರು ಕಿಡಿ ಕಾರಿದ್ದಾರೆ. ರಾಧಿಕಾ ವ್ಯಾಲೆಂಟೈನ್ಸ್ ಡೇ ನಿಮಿತ್ತ ಮಕ್ಕಳ ಜೊತೆಗೆ ಕೇಕ್ ತಯಾರಿಸುವ ವಿಡಿಯೋ ಹಂಚಿಕೊಂಡಿದ್ದರು. ಮಗ ಯಥರ್ವ್ ಮತ್ತು ಐರಾ ಪರಸ್ಪರ ಕಿತ್ತಾಡುತ್ತಲೇ ಕೇಕ್ ತಯಾರಿಸುವ ತುಂಟತನದ ವಿಡಿಯೋ ಹಂಚಿಕೊಂಡಿದ್ದಾರೆ. ಈ ವೇಳೆ ಐರಾ ತನಗೆ ಕೇಕ್ ಮಿಕ್ಸ್ ಮಾಡಲು ಕೊಡದ ತಮ್ಮನಿಗೆ ಹೊಡೆಯುತ್ತಾಳೆ. ಬಳಿಕ ಯಥರ್ವ್ ಕೂಡಾ ಹೊಡೆಯುತ್ತಾನೆ.
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಈಗ ಎಲ್ಲೆಡೆ ಬಿಸಿಲಿನ ಝಳದಿಂದ ಜನರು ತತ್ತರಿಸಿದ್ದಾರೆ. ಈ ನಡುವೆ ಮಳೆಯ ಬಗ್ಗೆ ಸುದ್ದಿಯೊಂದು ಹಬ್ಬಿದೆ. ಇದು ನಿಜವೇ, ಲೇಟೆಸ್ಟ್ ಹವಾಮಾನ ವರದಿ ಏನು ಹೇಳುತ್ತಿದೆ ನೋಡಿ. ಕಳೆದ ಎರಡು ವಾರಗಳಿಂದ ವಿಪರೀತ ಬಿಸಿಲು ಕಂಡುಬರುತ್ತಿದೆ ತಾಪಮಾನ 32-35 ರ ನಡುವೆ ಇದೆ. ದಕ್ಷಿಣ ಕನ್ನಡದಲ್ಲಂತೂ ನಿನ್ನೆ ತಾಪಮಾನ 36 ಡಿಗ್ರಿಗೆ ತಲುಪಿತ್ತು. ಇದು ಇನ್ನೂ ಏರಿಕೆಯಾಗುವ ಸಾಧ್ಯತೆಯಿದೆ. ಈ ನಡುವೆ ಮಳೆಯ ಸುದ್ದಿಯೊಂದು ಹರಿದಾಡುತ್ತಿದೆ. ವಾಯುಭಾರ ಕುಸಿತದಿಂದ ಈ ವಾರದಲ್ಲಿ ಮಳೆಯಾಗಲಿದೆ ಎಂಬ ಸುದ್ದಿಯಿದೆ.
ಬೆಂಗಳೂರು: ಇನ್ನೇನು ಬೇಸಿಗೆಕಾಲ ಶುರುವಾಗಿಯೇ ಹೋಗಿದ್ದು, ಈ ಸಮಯದಲ್ಲಿ ಕಲ್ಲಂಗಡಿ ಹಣ್ಣು ಹೇರಳವಾಗಿ ಸಿಗುತ್ತದೆ. ಆದರೆ ಕಲ್ಲಂಗಡಿ ಹಣ್ಣು ಸೇವನೆಯಿಂದ ಗಂಟಲು ನೋವು ಬರುತ್ತಿದ್ದರೆ ಏನು ಮಾಡಬೇಕು ನೋಡಿ. ಕಲ್ಲಂಗಡಿ ಹಣ್ಣಿನಲ್ಲಿ ನೀರಿನಂಶ ಹೇರಳವಾಗಿದ್ದು, ಹಸಿವು ಜೊತೆಗೆ ದಾಹವನ್ನೂ ನೀಗಿಸುತ್ತದೆ. ಜ್ಯೂಸ್ ಮಾಡಬೇಕೆಂದೇ ಇಲ್ಲ. ಹಾಗೆಯೇ ಸೇವನೆ ಮಾಡಿದರೂ ಜ್ಯೂಸ್ ನಷ್ಟೇ ರುಚಿ ಕೊಡುತ್ತದೆ. ಆದರೆ ಕಲ್ಲಂಗಡಿ ಹಣ್ಣು ಸೇವನೆ ಮಾಡಿದರೆ ಕೆಲವರಿಗೆ ಗಂಟಲು ನೋವು ಬರುತ್ತದೆ. ಶೀತ ಪ್ರಕೃತಿಯವರಿಗೆ ಬೇಸಿಗೆಯಲ್ಲೂ ಕಲ್ಲಂಗಡಿ ಹಣ್ಣಿನ ಸೇವನೆ ಅನಾರೋಗ್ಯಕ್ಕೆ ಕಾರಣವಾಗುವುದು ಇದೆ.
ಬೆಂಗಳೂರು: ಸೋಮವಾರ ಭಗವಾನ್ ಶಿವನಿಗೆ ಅರ್ಪಿತವಾದ ದಿನ. ಈ ದಿನ ಈ ಕೆಲಸ ಮಾಡುವುದರಿಂದ ಶಿವನ ಅನುಗ್ರಹಕ್ಕೆ ನೀವು ಪಾತ್ರರಾಗಬಹುದಾಗಿದೆ. ಸೋಮವಾರದಂದು ಶಿವನನನ್ನು ಕುರಿತು ಮಂತ್ರ ಪಠಣೆ ಮಾಡಿ, ಪೂಜೆ ಮಾಡುವುದು ಅತ್ಯಂತ ಶ್ರೇಯಸ್ಕರವಾಗಿದೆ. ಶಿವ ಹೆಚ್ಚು ಅಲಂಕಾರ ಪ್ರಿಯನಲ್ಲ. ವೈಭವದ ಪೂಜೆಯನ್ನೂ ಬೇಡುವವನಲ್ಲ. ಆದರೆ ಭಕ್ತಿಯಿಂದ ನಾವು ಈ ಎರಡು ಸೇವೆ ಮಾಡುವುದರಿಂದ ಶಿವನ ಅನುಗ್ರಹಕ್ಕೆ ಪಾತ್ರರಾಗಬಹುದು. ಸೋಮವಾರಗಳಂದು ಯಾವುದಾದರೂ ಶಿವ ದೇವಾಲಯಕ್ಕೆ ತೆರಳಿ ಶಿವನಿಗೆ ಜೇನು ತುಪ್ಪದಿಂದ ಅಭಿಷೇಕ ಮಾಡಿಸಿ. ಇದರಿಂದ ನಿಮಗೆ ಉದ್ಯೋಗ ಮತ್ತು ವ್ಯವಹಾರ ಹಾಗೂ ಆರ್ಥಿಕವಾಗಿ ಬರುವ ಅಡಚಣೆಗಳು ನಿವಾರಣೆಯಾಗುತ್ತದೆ.
ಬೆಂಗಳೂರು: ನಿಮ್ಮ ಇಂದಿನ ಭವಿಷ್ಯ, ರಾಶಿ ಫಲ ಹೇಗಿದೆ ಎಂದು ತಿಳಿದುಕೊಳ್ಳಿ.ಮೇಷ: ಕಚೇರಿ ಮತ್ತು ನ್ಯಾಯಾಲಯದ ಕೆಲಸಗಳಿಂದ ನೀವು ಪರಿಹಾರವನ್ನು ಪಡೆಯಬಹುದು. ವ್ಯಾಪಾರವು ಅಪೇಕ್ಷಿತ ಲಾಭವನ್ನು ನೀಡುತ್ತದೆ. ನಿಮ್ಮ ಸಂಗಾತಿಯಿಂದ ನೀವು ಬೆಂಬಲವನ್ನು ಪಡೆಯುತ್ತೀರಿ. ಕೆಲಸದಲ್ಲಿ ನಿಮ್ಮ ಕೆಲಸವನ್ನು ಪ್ರಶಂಸಿಸಲಾಗುತ್ತದೆ. ಉತ್ತಮ ಸ್ಥಿತಿಯಲ್ಲಿರಿ. ವ್ಯವಹಾರಗಳಲ್ಲಿ ಆತುರ ಬೇಡ. ಬುದ್ಧಿವಂತಿಕೆಯಿಂದ ಹೂಡಿಕೆ ಮಾಡಿ. ಪ್ರಯೋಜನವಾಗುತ್ತದೆ. ಅದೃಷ್ಟವು ಅನುಕೂಲಕರವಾಗಿರುತ್ತದೆ. ಲಾಭದ ಅವಕಾಶಗಳು ಬರಲಿವೆ. ನಿರ್ಲಕ್ಷ್ಯ ಮಾಡಬೇಡಿ.ವೃಷಭ: ಶಾಶ್ವತ ಆಸ್ತಿ ಖರೀದಿ ಮತ್ತು ಮಾರಾಟ ಇರಬಹುದು. ಬಹುಕಾಲದಿಂದ ಬಾಕಿ ಉಳಿದಿರುವ ಕೆಲಸಗಳು ಪೂರ್ಣಗೊಳ್ಳುವ ಸಾಧ್ಯತೆಗಳಿವೆ. ದೊಡ್ಡ ಲಾಭಗಳಿರಬಹುದು.
ಬೆಂಗಳೂರು: "ಯಾವುದೇ ಕ್ಷಣದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಯಬಹುದು. ಹೀಗಾಗಿ ಪಕ್ಷದ ನಾಯಕರು ಹಾಗೂ ಕಾರ್ಯಕರ್ತರು ಸಜ್ಜಾಗಬೇಕು" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಕರೆ ನೀಡಿದರು.ಕೆಪಿಸಿಸಿ ಕಚೇರಿಯಲ್ಲಿ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾಧ್ಯಮಗೋಷ್ಠಿ ಉದ್ದೇಶಿಸಿ ಶಿವಕುಮಾರ್ ಅವರು ಭಾನುವಾರ ಮಾತನಾಡಿದರು."ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸುವ ವಿಚಾರವಾಗಿ ನ್ಯಾಯಾಲಯದಿಂದ ಸಧ್ಯದಲ್ಲೇ ಸೂಚನೆ ಬರುವ ಸಾಧ್ಯತೆ ಇದೆ. ಇನ್ನು ಬೆಂಗಳೂರು ನಗರ ಪಾಲಿಕೆ ಚುನಾವಣೆಯನ್ನು ನಡೆಸಬೇಕಾಗಿದ್ದು ಗ್ರೇಟರ್ ಬೆಂಗಳೂರು ವಿಚಾರವಾಗಿ ಅಭಿಪ್ರಾಯ ಸಂಗ್ರಹಕ್ಕೆ ಮುಂದಾಗಿದ್ದೇವೆ. ಯಾವುದೇ ಕ್ಷಣದಲ್ಲಿ ಈ ಚುನಾವಣೆಗಳು ಘೋಷಣೆಯಾಗಬಹುದು. ಇದಕ್ಕೆ ನಾವೆಲ್ಲರೂ ಸಿದ್ಧತೆ ಮಾಡಿಕೊಳ್ಳಬೇಕು" ಎಂದರು.
ನವದೆಹಲಿ: ರೈಲು ನಿಲ್ದಾಣದಲ್ಲಿ ಕಾಲ್ತುಳಿತದ ನಂತರ ರಾಷ್ಟ್ರ ರಾಜಧಾನಿಯ ಡಾ. ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆಗೆ ತರಲಾದ ಮೃತರ ಹೆಚ್ಚಿನ ಶವಗಳ ಎದೆ ಮತ್ತು ಹೊಟ್ಟೆಯ ಪ್ರದೇಶಗಳಲ್ಲಿ ಗಾಯಗಳಾಗಿದ್ದು, ಉಸಿರುಕಟ್ಟುವಿಕೆ ಸಾವಿಗೆ ಕಾರಣವಾಗಿರಬಹುದು ಎಂದು ಆರ್ಎಂಎಲ್ ಆಸ್ಪತ್ರೆ ಮೂಲಗಳು ತಿಳಿಸಿವೆ.ಆರ್ಎಂಎಲ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ಅಜಯ್ ಶುಕ್ಲಾ, ನಾವು ಐದು ಮೃತದೇಹಗಳನ್ನು ಸ್ವೀಕರಿಸಿದ್ದೇವೆ, 25 ವರ್ಷ ವಯಸ್ಸಿನ ಒಬ್ಬ ಪುರುಷ ಮತ್ತು ನಾಲ್ಕು ಮಹಿಳೆಯರು- ಮೂವತ್ತರ ಮೂರು ಮತ್ತು 70 ವರ್ಷ ವಯಸ್ಸಿನ ಒಬ್ಬ. ನಾಲ್ಕು ದೇಹಗಳನ್ನು ಅವರ ಕುಟುಂಬಗಳಿಗೆ ಹಸ್ತಾಂತರಿಸಲಾಗಿದೆ ಎಂದು ಮಾಹಿತಿ ನೀಡಿದರು.
ಬೆಂಗಳೂರು: ಪಂಜಾಬಿನ ಪಟಿಯಾಲ ಬಳಿ ಸಂಭವಿಸಿದ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿರುವ ರೈತ ಮುಖಂಡ ಕುರುಬೂರು ಶಾಂತಕುಮಾರ್ ಅವರನ್ನು ಇಂದು ಏರ್ ಆಂಬುಲೆನ್ಸ್ ಮೂಲಕ ಬೆಂಗಳೂರಿಗೆ ಕರೆ ತರಲಾಗಿದೆ.ಚಿಕಿತ್ಸೆಗಾಗಿ ಶಾಂತಕುಮಾರ್ ಅವರನ್ನು ಇದೀಗ ಮಣಿಪಾಲ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಶಾಂತಕುಮಾರ್ ಅವರು ಶೀಘ್ರ ಗುಣಮುಖರಾಗಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಾರೈಸಿದ್ದಾರೆ.ಮೂರು ದಿನಗಳ ಹಿಂದೆ ಸಂಭವಿಸಿದ ಅಪಘಾತದಲ್ಲಿ ಶಾಂತಕುಮಾರ್ ಅವರು ಗಾಯಗೊಂಡು ಪಟಿಯಾಲದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.