Shorts

ಇಂದು ಗುರುವಾರವಾಗಿದ್ದು ಗುರು ರಾಘವೇಂದ್ರ ರಾಯರಿಗೆ ವಿಶೇಷವಾದ ದಿನವಾಗಿದೆ. ಈ ದಿನ ರಾಯರನ್ನು ಕುರಿತು ರಾಘವೇಂದ್ರ ಮಂಗಳಾಷ್ಟಕಂ ತಪ್ಪದೇ ಓದಿ. ಕನ್ನಡದಲ್ಲಿ ಇಲ್ಲಿದೆ.ಶ್ರೀಮದ್ರಾಮಪಾದಾರವಿಂದಮಧುಪಃ ಶ್ರೀಮಧ್ವವಂಶಾಧಿಪಃಸಚ್ಚಿಷ್ಯೋಡುಗಣೋಡುಪಃ ಶ್ರಿತಜಗದ್ಗೀರ್ವಾಣಸತ್ಪಾದಪಃ ।ಅತ್ಯರ್ಥಂ ಮನಸಾ ಕೃತಾಚ್ಯುತಜಪಃ ಪಾಪಾಂಧಕಾರಾತಪಃಶ್ರೀಮತ್ಸದ್ಗುರುರಾಘವೇಂದ್ರಯತಿರಾಟ್ ಕುರ್ಯಾದ್ಧ್ರುವಂ ಮಂಗಳಮ್ ॥ 1 ॥ ಕರ್ಮಂದೀಂದ್ರಸುಧೀಂದ್ರಸದ್ಗುರುಕರಾಂಭೋಜೋದ್ಭವಃ ಸಂತತಂಪ್ರಾಜ್ಯಧ್ಯಾನವಶೀಕೃತಾಖಿಲಜಗದ್ವಾಸ್ತವ್ಯಲಕ್ಷ್ಮೀಧವಃ ।ಸಚ್ಛಾಸ್ತ್ರಾದಿ ವಿದೂಷಕಾಖಿಲಮೃಷಾವಾದೀಭಕಂಠೀರವಃಶ್ರೀಮತ್ಸದ್ಗುರುರಾಘವೇಂದ್ರಯತಿರಾಟ್ ಕುರ್ಯಾದ್ಧ್ರುವಂ ಮಂಗಳಮ್ ॥ 2 ॥ ಸಾಲಂಕಾರಕಕಾವ್ಯನಾಟಕಕಲಾಕಾಣಾದಪಾತಂಜಲ-ತ್ರಯ್ಯರ್ಥಸ್ಮೃತಿಜೈಮಿನೀಯಕವಿತಾಸಂಕೀತಪಾರಂಗತಃ ।ವಿಪ್ರಕ್ಷತ್ರವಿಡಂಘ್ರಿಜಾತಮುಖರಾನೇಕಪ್ರಜಾಸೇವಿತಃಶ್ರೀಮತ್ಸದ್ಗುರುರಾಘವೇಂದ್ರಯತಿರಾಟ್ ಕುರ್ಯಾದ್ಧ್ರುವಂ ಮಂಗಳಮ್ ॥ 3 ॥ ರಂಗೋತ್ತುಂಗತರಂಗಮಂಗಲಕರ ಶ್ರೀತುಂಗಭದ್ರಾತಟ-ಪ್ರತ್ಯಕ್ಸ್ಥದ್ವಿಜಪುಂಗವಾಲಯ ಲಸನ್ಮಂತ್ರಾಲಯಾಖ್ಯೇ ಪುರೇ ।ನವ್ಯೇಂದ್ರೋಪಲನೀಲಭವ್ಯಕರಸದ್ವೃಂದಾವನಾಂತರ್ಗತಃಶ್ರೀಮತ್ಸದ್ಗುರುರಾಘವೇಂದ್ರಯತಿರಾಟ್ ಕುರ್ಯಾದ್ಧ್ರುವಂ ಮಂಗಳಮ್ ॥ 4 ॥

ಕೇರಳ: ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ತಿರುವಾಂಕೂರು ದೇವಸ್ವಂ ಮಂಡಳಿ (ಟಿಡಿಬಿ) ಮಾಜಿ ಕಾರ್ಯದರ್ಶಿ ಎಸ್.ಜಯಶ್ರೀ ಮತ್ತು ಮಧ್ಯವರ್ತಿ ಕಲ್ಪೇಶ್ ಅವರಿಗೆ ಜಾರಿ ನಿರ್ದೇಶನಾಲಯ (ಇಡಿ) ನೋಟಿಸ್ ಜಾರಿ ಮಾಡಿದೆ. ಮುಂದಿನ ವಾರ ಇಡಿ ಕೊಚ್ಚಿ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗುವಂತೆ ತಿಳಿಸಲಾಗಿದೆ.ಪ್ರಕರಣದ ಪ್ರಮುಖ ಆರೋಪಿ ಉಣ್ಣಿಕೃಷ್ಣನ್ ಪೊಟ್ಟಿ ಅವರೊಂದಿಗಿನ ಸಂಬಂಧ ಮತ್ತು ಶಂಕಿತ ಹಣಕಾಸಿನ ವಹಿವಾಟಿನ ಕುರಿತು ಮುಂದಿನ ವಾರ ನಟ ಜಯರಾಮ್ ಅವರನ್ನು ವಿಚಾರಣೆಗೆ ತನಿಖಾ ಸಂಸ್ಥೆ ಕರೆದಿದೆ. ಉಣ್ಣಿಕೃಷ್ಣನ್‌ ಪೊಟ್ಟಿ ಅವರು 2019 ರಲ್ಲಿ ಚೆನ್ನೈನಲ್ಲಿ ಆಯೋಜಿಸಲಾದ ಪೂಜೆಯಲ್ಲಿ ನಟನು ದೇವಾಲಯದಿಂದ ಚಿನ್ನದ ಲೇಪನಕ್ಕಾಗಿ ತೆಗೆದ ಕಲಾಕೃತಿಗಳೊಂದಿಗೆ ಭಾಗವಹಿಸುತ್ತಿರುವುದನ್ನು ತೋರಿಸುವ ವೀಡಿಯೊಗಳ ಪ್ರಸಾರದ ನಂತರ ಈ ಬೆಳವಣಿಗೆಯಾಗಿದೆ.

ಬೆಳ್ತಂಗಡಿ: ಇಲ್ಲಿಯ ಜೂನಿಯರ್ ಕಾಲೇಜು ಹಿಂದುಗಡೆ ರಸ್ತೆಯಲ್ಲಿ ಮುಸುಕುಧಾರಿಗಳ ತಂಡವೊಂದು ಶಾಲಾ ವಿದ್ಯಾರ್ಥಿನಿಯನ್ನು ಅಪಹರಿಸಲು ಯತ್ನಿಸಿ, ಚೂರಿಯಿಂದ ತಿವಿದ ಪ್ರಕರಣ ಕ್ಲೈಮ್ಯಾಕ್ಸ್ ಕಂಡಿದೆ. ಆದರೆ ಇದೀಗ ಇದೊಂದು ವಿದ್ಯಾರ್ಥಿನಿಯ ಕಟ್ಟುಕತೆ ಎಂಬ ವಿಚಾರ ಬೆಳಕಿಗೆ ಬಂದಿದೆ. ಸುದೇಮುಗೇರು ಸಮೀಪದ ವಿದ್ಯಾರ್ಥಿನಿ ಕಾಲೇಜಿಗೆ ಹೋಗಲೆಂದು ನಿನ್ನೆ ಬೆಳಿಗ್ಗೆ ಸುಮಾರು 8.45ಕ್ಕೆ ತನ್ನ ದ್ವಿಚಕ್ರವಾಹನದಲ್ಲಿ ಬರುತ್ತಿದ್ದಾಗ ಬೆಳ್ತಂಗಡಿ ಜೂನಿಯರ್ ಕಾಲೇಜಿನ ಹಿಂಭಾಗದಲ್ಲಿ ಸುದೇಮುಗೇರು ಸಮೀಪ ರಸ್ತೆ ತಿರುವಿನಲ್ಲಿ ಕಾರಿನಲ್ಲಿ ಬಂದ ಮೂರು ಮಂದಿ ಮುಸುಕುಧಾರಿಗಳ ತಂಡ ದ್ವಿಚಕ್ರವಾಹವನ್ನು ತಡೆಗಟ್ಟಿ ವಿದ್ಯಾರ್ಥಿನಿಯನ್ನು ಎಳೆದೊಯ್ಯಲು ಯತ್ನಿಸಿದರು ಎಂದು ವಿದ್ಯಾರ್ಥಿನಿ ಗಂಭೀರ ಆರೋಪ ಮಾಡಿದ್ದಳು.

ಬೆಂಗಳೂರು: ಮುಖ್ಯಮಂತ್ರಿಗಳು ದೇಶದ ಪ್ರಧಾನಮಂತ್ರಿಗಳ ವಿರುದ್ಧ ಹೇಡಿ ಎಂಬ ಕೆಟ್ಟ ಪದ ಬಳಸಿದ್ದು ಸರಿಯೇ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಪ್ರಶ್ನಿಸಿದ್ದಾರೆ. ಇದನ್ನು ಖಂಡತುಂಡವಾಗಿ ಖಂಡಿಸುತ್ತೇವೆ ಎಂದು ತಿಳಿಸಿದರು.ಅವರು ಇಂದು ಮಾಧ್ಯಮಗಳ ಜೊತೆ ಮಾತನಾಡಿದರು. ಮುಖ್ಯಮಂತ್ರಿಗಳಿಗೆ ಪಶ್ಚಾತ್ತಾಪ ಆಗಿದ್ದರೆ ಅವರು ತಕ್ಷಣ ದೇಶದ ಕ್ಷಮೆ ಕೇಳಬೇಕು. ಮೋದಿಜೀ ಅವರ ಕ್ಷಮೆ ಕೇಳಬೇಕೆಂದು ಆಗ್ರಹಿಸಿದರು. ಮುಖ್ಯಮಂತ್ರಿಯವರು ತಾಳ್ಮೆ ಕಳಕೊಂಡು ಹೀಗೆ ಮಾತನಾಡುತ್ತಿದ್ದಾರಾ? ರಾಹುಲ್ ಗಾಂಧಿಯವರ ಓಲೈಕೆಗಾಗಿ ಹೀಗೆ ಮಾತನಾಡುತ್ತಾರಾ? ಮುಖ್ಯಮಂತ್ರಿ ಪದವಿಯಲ್ಲಿ ಇನ್ನೊಂದಷ್ಟು ದಿನ ಉಳಕೊಳ್ಳಲು ಹೀಗೆ ಮಾತಾಡಿದ್ದಾರಾ? ಅಥವಾ ತಲೆಗಿಲೆ ಕೆಟ್ಟು ಇಂಥ ಪದ ಬಳಸುತ್ತಿದ್ದಾರಾ?

ನವದೆಹಲಿ: ಲೋಕಸಭೆಯಲ್ಲಿ ಆಡಳಿತ ಮತ್ತು ವಿಪಕ್ಷಗಳ ನಡುವೆ ಮತ್ತೊಂದು ಸುತ್ತಿನ ಕದನಕ್ಕೆ ವೇದಿಕೆ ಸಜ್ಜಾಗಿದೆ. ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ವಿರುದ್ಧ ಕಾಂಗ್ರೆಸ್ ಪಕ್ಷ ಮಂಗಳವಾರ ಅವಿಶ್ವಾಸ ಗೊತ್ತುವಳಿ ಮಂಡಿಸಲು ನೋಟಿಸ್ ಸಲ್ಲಿಸಿದೆ.ಕಾಂಗ್ರೆಸ್‌ನ ಈ ನಡೆ ಸಂಸತ್ತಿನಲ್ಲಿ ಸರ್ಕಾರ–ಪ್ರತಿಪಕ್ಷಗಳ ನಡುವಿನ ಉದ್ವಿಗ್ನತೆ ಮತ್ತಷ್ಟು ಹೆಚ್ಚಾಗಿದೆ. ಸಂಸತ್ತಿನ ಕಲಾಪಕ್ಕೆ ನಿರಂತರ ಅಡಚಣೆಗಳ ನಡುವೆ ಈ ಬೆಳವಣಿಗೆ ನಡೆದಿದೆ. ವಿರೋಧ ಪಕ್ಷದ ನಾಯಕರಾದ ಕೆ. ಸುರೇಶ್ ಮತ್ತು ಮುಹಮ್ಮದ್ ಜಾವೇದ್ ಸದನದ ಪ್ರಧಾನ ಕಾರ್ಯದರ್ಶಿಗೆ ನೋಟಿಸ್ ಸಲ್ಲಿಸಿದ್ದಾರೆ. ಕಾಂಗ್ರೆಸ್‌ ನೀಡಿದ ನೋಟಿಸ್ ಗೆ 118 ಸಂಸದರು ಸಹಿ ಹಾಕಿದ್ದಾರೆ ಎಂದು ಮೂಲಗಳು ತಿಳಿಸಿವೆ. ಆದರೆ ತೃಣಮೂಲ ಕಾಂಗ್ರೆಸ್ ಈ ಕ್ರಮದಿಂದ ದೂರ ಉಳಿದು, ಸಹಿ ಮಾಡಿದವರ ಪಟ್ಟಿಯಲ್ಲಿ ಸೇರಿಲ್ಲ.

ಬೆಂಗಳೂರು: ವಿಧಾನಸೌಧದಲ್ಲಿರುವ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಅವರ ಕಚೇರಿಯಲ್ಲಿ ಚಿನ್ನಾಭರಣ ಹಾಗೂ ನಗದು ಇದ್ದ ಕೈಚೀಲ ಕಳವಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಡಿ ಗ್ರೂಪ್ ನೌಕರನನ್ನು ವಿಧಾನಸೌಧ ಪೊಲೀಸರು ಬಂಧಿಸಿದ್ದಾರೆ.ನವೀನ್ ಎಂಬವರು ಕೆಲಸದ ನಿಮಿತ್ತ ಸಚಿವ ಭೈರತಿ ಸುರೇಶ್ ಅವರ ಕಚೇರಿಗೆ ಬಂದಿದ್ದರು. ಆ ವೇಳೆ 300 ಗ್ರಾಂ ಚಿನ್ನಾಭರಣ ಹಾಗೂ 1.50 ಲಕ್ಷ ನಗದು ಇದ್ದ ಕೈಚೀಲವನ್ನು ತಂದಿದ್ದು, ತೆರಳುವಾಗ ಅದನ್ನು ಕಚೇರಿಯಲ್ಲೇ ಮರೆತು ಹೊರಟಿದ್ದರು. ಮಾರನೇ ದಿನ ಕಚೇರಿಗೆ ಬಂದು ಪರಿಶೀಲಿಸಿದಾಗ ಕೈಚೀಲ ನಾಪತ್ತೆಯಾಗಿರುವುದು ಗಮನಕ್ಕೆ ಬಂದಿದೆ.ಈ ಬಗ್ಗೆ ನವೀನ್ ವಿಧಾನಸೌಧ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಅದರಂತೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಕಚೇರಿಯ ಸಿಸಿಟಿವಿ ಕ್ಯಾಮರಾದ ದೃಶ್ಯಗಳನ್ನು ಪರಿಶೀಲಿಸಿದರು. ಈ ವೇಳೆ ಡಿಪಿಎಆರ್ ಇಲಾಖೆಯ ಡಿ ಗ್ರೂಪ್ ನೌಕರ ಆಂಟೋನಿ ಎಂಬಾತ ಬ್ಯಾಗ್ ಕೊಂಡೊಯ್ದಿರುವುದು ಪತ್ತೆಯಾಗಿದೆ.