ಬೆಂಗಳೂರು: ಪದವಿ ಮುಗಿಸಿ ಕೆಲಸಕ್ಕಾಗಿ ಕಾಯುತ್ತಿರುವ ಯುವ ಸಮೂಹಕ್ಕೆ ಆರ್ಥಿಕ ಶಕ್ತಿ ನೀಡುವ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ‘ಯುವನಿಧಿ’ ಯೋಜನೆ ಯಶಸ್ವಿಯಾಗಿ ಮೂರು ವರ್ಷ ಪೂರೈಸಿದೆ. ಈ ಹಿನ್ನೆಲೆಯಲ್ಲಿ 2025-26ನೇ ಸಾಲಿನಲ್ಲಿ ತೇರ್ಗಡೆಯಾದ ಹೊಸ ಪದವೀಧರರು ತಡಮಾಡದೆ ಯೋಜನೆಯಡಿ ನೋಂದಾಯಿಸಿಕೊಂಡು ಭತ್ಯೆ ಪಡೆಯುವಂತೆ ಶಾಸಕ ಹಾಗೂ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ರಾಜ್ಯ ಉಪಾಧ್ಯಕ್ಷ ದಿನೇಶ್ ಗೂಳಿಗೌಡ ಅವರು ಕರೆ ನೀಡಿದ್ದಾರೆ.ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ರಾಜ್ಯ ಉಪಾಧ್ಯಕ್ಷ ದಿನೇಶ್ ಗೂಳಿಗೌಡ, ಕಾಂಗ್ರೆಸ್ ಪಕ್ಷವು ಸದಾ ಜನಪರ ಚಿಂತನೆಯುಳ್ಳದ್ದು ಎಂಬುದು ಪದೇ ಪದೆ ಸಾಬೀತಾಗುತ್ತಲೇ ಬಂದಿದೆ.
ಬೆಂಗಳೂರು: ಕಾನೂನುಬಾಹಿರವಾಗಿ ರಾಜ್ಯದ ವಿವಿಧೆಡೆ ಕಾಂಗ್ರೆಸ್ ಭವನಗಳಿಗೆ ಸಿ.ಎ.ನಿವೇಶನ ನೀಡಲಾಗಿದ್ದು, ಈ ಸಂಬಂಧ ಹೈಕೋರ್ಟ್ ಛೀಮಾರಿ ಹಾಕಿದೆ. ಸಿ.ಎ.ನಿವೇಶನ ನೀಡಿದ್ದರ ವಿರುದ್ಧ ಭಾರತೀಯ ಜನತಾ ಪಾರ್ಟಿ ವತಿಯಿಂದ ಹೋರಾಟ ನಡೆಸಲಾಗುವುದು ಎಂದು ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್ ಹೇಳಿದ್ದಾರೆ. ರಾಜ್ಯ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜಕೀಯ ಪಕ್ಷಗಳಿಗೆ ಸಿಎ ನಿವೇಶನ ನೀಡುವಂತಿಲ್ಲ ಎಂಬ ಕಾನೂನು ಇದೆ. ಆದರೆ ಅದನ್ನು ಬದಿಗೊತ್ತಿ ನಿವೇಶನ ನೀಡಲಾಗಿದೆ. ಈ ಬಗ್ಗೆ ವಿಧಾನ ಮಂಡಲ ಕಲಾಪದಲ್ಲಿ ಪ್ರಶ್ನೆ ಮಾಡಿದ್ದ ವೇಳೆ ನಗರಾಭಿವೃದ್ಧಿ ಸಚಿವರು ಹಾರಿಕೆ ಉತ್ತರ ನೀಡಿದ್ದರು. ಇದೀಗ ಸರ್ಕಾರಕ್ಕೆ ಹೈಕೋರ್ಟ್ ಛೀಮಾರಿ ಹಾಕಿದೆ ಎಂದರು.
ಬೆಂಗಳೂರು: ಯಡಿಯೂರಪ್ಪನವರ ಅಭಿಮಾನೋತ್ಸವ ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ಏಪ್ರಿಲ್ 26ರಂದು ಬೆಳಿಗ್ಗೆ 10 ಗಂಟೆಗೆ ಭೂಮಿಪೂಜೆ ನೆರವೇರಿಸಲಾಗುವುದು ಎಂದು ಮಾಜಿ ಉಪ ಮುಖ್ಯಮಂತ್ರಿ ಮತ್ತು ಸಂಸದ ಗೋವಿಂದ ಕಾರಜೋಳ ಅವರು ತಿಳಿಸಿದ್ದಾರೆ. ಕಾರ್ಯಕ್ರಮದ ಸ್ಥಳಗಳಲ್ಲಿ ಪೆಂಡಾಲ್, ಸ್ಟೇಜ್ ಮುಂತಾದ ವ್ಯವಸ್ಥೆಗಳನ್ನು ಪ್ರಾರಂಭಿಸಲು ಭೂಮಿಪೂಜೆ ನಡೆಯಲಿದೆ ಎಂದರು.ಬಿಜೆಪಿ ರಾಜ್ಯ ಕಾರ್ಯಾಲಯ "ಜಗನ್ನಾಥ ಭವನ" ದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಭೂಮಿಪೂಜೆಗೆ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರನ್ನು ಆಹ್ವಾನಿಸಿದ್ದೇವೆ. ಅವರು, ಸಂಸದರು, ಮಾಜಿ ಸಂಸದರು, ಶಾಸಕರು, ಮಾಜಿ ಶಾಸಕರು, ವಿಧಾನಪರಿಷತ್ ಸದಸ್ಯರು, ವಿಪಕ್ಷ ನಾಯಕರಾದ ಆರ್.ಅಶೋಕ್, ಛಲವಾದಿ ನಾರಾಯಣಸ್ವಾಮಿ ಸೇರಿ ಅನೇಕ ಗಣ್ಯರು ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದರು.
ಕೋಲ್ಕತ್ತ: ನಾನು ಜಲ್ಮುರಿ ತಿಂದಿದ್ರು, ಅದರ ಮೆಣಸಿಕಾಯಿ ಖಾರ ತಟ್ಟಿದ್ದು ಮಾತ್ರ ಟಿಎಂಸಿ ನಾಯಕರಿಗೆ ಎಂದು ಪ್ರಧಾನಿ ನರೇಂದ್ರ ಮೋದಿ ವ್ಯಂಗ್ಯ ಮಾಡಿದ್ದಾರೆ. ಇಂದು (ಗುರುವಾರ) ಪಶ್ಚಿಮ ಬಂಗಾಳದಲ್ಲಿ ಮೊದಲ ಹಂತದ ಚುನಾವಣೆ ನಡೆಯುತ್ತಿದ್ದು, ಮತದಾರರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.ಈ ನಡುವೆ ಕೃಷ್ಣನಗರದಲ್ಲಿ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಜಲ್ಮುರಿ ವಿಷಯವನ್ನು ಮುಂದಿಟ್ಟು ಟಿಎಂಸಿಯನ್ನು ತರಾಟೆಗೆ ತೆಗೆದುಕೊಂಡರು.
ಬೆಂಗಳೂರು: 2026ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ- 1ರ ಫಲಿತಾಂಶ ಗುರುವಾರ ಪ್ರಕಟಗೊಂಡಿದ್ದು, ದಾಖಲೆಯ ಫಲಿತಾಂಶ ಪ್ರಕಟವಾಗಿದೆ. ದಕ್ಷಿಣ ಕನ್ನಡ ಜಿಲ್ಲೆ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದೆ. ಈ ಸಲ ಪರೀಕ್ಷೆಯಲ್ಲಿ ಏಳು ವಿದ್ಯಾರ್ಥಿಗಳು 625 ಕ್ಕೆ 625 ಅಂಕ ಗಳಿಸಿದ್ದಾರೆ. ದಾವಣಗೆರೆಯ ಭರತ್, ರಾಯಚೂರಿನ ಸುಖದೇವ್, ಚಿಕ್ಕೋಡಿಯ ಪ್ರಾರ್ಥನಾ, ಚಿಕ್ಕಮಗಳೂರಿನ ಬೃಂದಾ, ಉಡುಪಿ ಪ್ರೀತಂ, ವಿಜಯಪುರದ ಸೌಜನ್ಯ, ಬೆಂಗಳೂರು ಉತ್ತರ ಧನುಷ್ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ್ದಾರೆ.ಅನುತ್ತೀರ್ಣಗೊಂಡ ಮಕ್ಕಳಿಗೆ ಎರಡನೇ ಬಾರಿ ಪರೀಕ್ಷೆ ಬರೆಯಲು ಅವಕಾಶವಿದ್ದು, ಮೇ 18ರಿಂದ ಪರೀಕ್ಷೆ ಆರಂಭ ಆಗಲಿದೆ. ಈ ಬಾರಿ ಫೇಲಾದ ಮಕ್ಕಳಿಗೆ ಮೂರನೇ ಬಾರಿ ಪರೀಕ್ಷೆ ಇರುವುದಿಲ್ಲ.
ಬೆಂಗಳೂರು: ಈ ಸಾಲಿನ ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ಕಲಬುರಗಿ ಕೊನೆಯ ಸ್ಥಾನದಲ್ಲಿದ್ದು, ಇದಕ್ಕೆ ಬಿಜೆಪಿ ತನ್ನ ಸೋಷಿಯಲ್ ಮೀಡಿಯಾದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಕಾಲೆಳೆದಿದೆ. ಪ್ರಿಯಾಂಕ್ ಖರ್ಗೆ ಕಲಬುರಗಿಯವರು. ಇತ್ತೀಚೆಗೆ ದಕ್ಷಿಣ ಕನ್ನಡ ಮತ್ತು ಕರಾವಳಿ ಭಾಗದವರು ಕೋಮುವಾದದಿಂದಾಗಿ ಅಭಿವೃದ್ಧಿಯಾಗುತ್ತಿಲ್ಲ. ಅಲ್ಲಿ ಐಟಿ ಕಂಪನಿಗಳು ಸ್ಥಾಪನೆಯಾಗುತ್ತಿಲ್ಲ ಎಂದು ಟ್ರೋಲ್ ಗೊಳಗಾಗಿದ್ದರು. ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲೂ ಕಲಬುರಗಿ ಕೊನೆಯಲ್ಲಿ ಸ್ಥಾನದಲ್ಲಿತ್ತು. ಇದೀಗ ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲೂ ಕೊನೆಯ ಸ್ಥಾನದಲ್ಲಿದೆ. ಕಲಬುರಗಿ ಸಾಮಾನ್ಯವಾಗಿ ಪ್ರತೀ ವರ್ಷವೂ ದ್ವಿತೀಯ ಪಿಯುಸಿ, ಎಸ್ಎಸ್ಎಲ್ ಸಿ ಪರಿಕ್ಷೆಗಳಲ್ಲಿ ಕೊನೆಯ ಸ್ಥಾನದಲ್ಲೇ ಇರುತ್ತದೆ.
ಚೆನ್ನೈ:ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಮಧ್ಯೆ ಚೆನ್ನೈ ಸೂಪರ್ ಕಿಂಗ್ಸ್ ಸ್ಟಾರ್ ಬೌಲರ್ ಮುಖೇಶ್ ಚೌಧರಿ ಅವರಿಗೆ ದೊಡ್ಡ ಆಘಾತ ಎದುರಾಗಿದೆ. ಅವರ ತಾಯಿ ಮಂಗಳವಾರ ನಿಧನರಾಗಿದ್ದಾರೆ.ಅನಾರೋಗ್ಯದ ಬಳಲುತ್ತಿದ್ದ ತಾಯಿ ಪ್ರೇಮ್ ದೇವಿ ಅವರು ಮುಂಬೈನ ಟಾಟಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ. ಈ ಆವೃತ್ತಿಯಲ್ಲಿ ಈವರೆಗೆ ಮುಖೇಶ್ ಚೌಧರಿ ಒಂದೇ ಒಂದು ಪಂದ್ಯವನ್ನು ಆಡಿದ್ದು, ಗುರುವಾರ ಮುಂಬೈ ವಿರುದ್ಧದ ಪಂದ್ಯದ ಬಳಿಕ ತಂಡಕ್ಕೆ ಮರಳುವ ಸಾಧ್ಯತೆಯಿದೆ ಎನ್ನಲಾಗಿದೆ.ಶನಿವಾರ ಸನ್ರೈಸರ್ಸ್ ಹೈದರಾಬಾದ್ ವಿರುದ್ಧದ ಸಿಎಸ್ಕೆ ಪಂದ್ಯದ ನಂತರ ಮುಖೇಶ್ ಚೌಧರಿ ಅವರು ರಾಜಸ್ಥಾನದ ಭಿಲ್ವಾರಾದ ತಮ್ಮ ಊರಿಗೆ ತೆರಳಿದರು. ಬಳಿಕ ಅಣ್ಣ ಡಾ. ರಾಜೇಶ್ ಚೌಧರಿ ಅವರೊಂದಿಗೆ ಸೇರಿ ಬುಧವಾರ ತಾಯಿಯ ಅಂತ್ಯಕ್ರಿಯೆಯನ್ನು ನೆರವೇರಿಸಿದ್ದಾರೆ ಎಂದು ತಿಳಿದುಬಂದಿದೆ.
ಬೆಂಗಳೂರು: ಅಡಿಕೆ ಬೆಲೆ ಕಳೆದ ವಾರ ಏರಿಕೆ-ಇಳಿಕೆಯಾಗಿತ್ತು. ಕಳೆದ ವಾರದಂತೆ ಈ ವಾರವೂ ಅದೇ ಟ್ರೆಂಡ್ ಮುಂದುವರಿದಿದೆ. ಇಂದು ಅಡಿಕೆ ಮತ್ತು ಕಾಳು ಮೆಣಸು, ಕೊಬ್ಬರಿ ದರ ಹೇಗಿದೆ ಇಲ್ಲಿದೆ ವಿವರ. ಕಳೆದ ವಾರ ಅಡಿಕೆ ಬೆಲೆಯಲ್ಲಿ ಕೊಂಚ ಏರಿಳಿಕೆಯಾಗುತ್ತಲೇ ಇತ್ತು. ಕಳೆದ ವಾರ ಎರಡು ದಿನ ಸತತವಾಗಿ ಬೆಲೆ ಏರಿಕೆ ಕಂಡುಬರುತ್ತಿತ್ತು. ಅಡಿಕೆ ಬೆಲೆಯಲ್ಲಿ ಇಂದು ಯಥಾಸ್ಥಿತಿಯಲ್ಲಿದೆ. ಹೊಸ ಅಡಿಕೆ ಬೆಲೆ ಯಥಾಸ್ಥಿತಿಯಲ್ಲಿದ್ದು 475 ರೂ.ಗಳಷ್ಟಿದೆ. ಹಳೆ ಅಡಿಕೆ ಬೆಲೆ ಯಥಾಸ್ಥಿತಿಯಲ್ಲಿದ್ದು 550 ರೂ. ಗಳಾಗಿದೆ. ಡಬಲ್ ಚೋಲ್ ಬೆಲೆಯೂ 550 ರೂ.ಗಳಷ್ಟಾಗಿದೆ.
ದೆಹಲಿ: ಇಂಡಿಯನ್ ಪ್ರೀಮಿಯರ್ ಲೀಗ್ ಆಡುವ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಆನೆಬಲ ಬಂದಿದೆ. ವಿಶ್ವದ ಪ್ರಮುಖ ವೇಗದ ಬೌಲರ್ ಮಿಚೆಲ್ ಸ್ಟಾರ್ಕ್ ಡೆಲ್ಲಿ ತಂಡವನ್ನು ಸೇರಿಕೊಳ್ಳಲು ಸಜ್ಜಾಗಿದ್ದಾರೆ. ಸ್ಟಾರ್ಕ್ ಅವರು ಭುಜ ಮತ್ತು ಮೊಣಕೈ ಗಾಯದಿಂದಾಗಿ 2026ರ ಐಪಿಎಲ್ ಆವೃತಿಯ ಆರಂಭಿಕ ಕೆಲ ಪಂದ್ಯಗಳಿಗೆ ಅಲಭ್ಯರಾಗಿದ್ದರು. ಇದೀಗ ಮೇ 1ರ ವೇಳೆಗೆ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಸೇರಿಕೊಳ್ಳಲಿದ್ದಾರೆ ಎಂದು ವರದಿಯಾಗಿದೆ.ಆಸ್ಟ್ರೇಲಿಯಾದ ಪ್ರಮುಖ ಎಡಗೈ ವೇಗದ ಬೌಲರ್ ಮಿಚೆಲ್ ಸ್ಟಾರ್ಕ್ ಮಾರಕ ಇನ್ಸ್ವಿಂಗಿಂಗ್ ಯಾರ್ಕರ್ಗಳಿಗೆ ಹೆಸರುವಾಸಿ. ಟೆಸ್ಟ್ ಮತ್ತು ಏಕದಿನ ಕ್ರಿಕೆಟ್ನಲ್ಲಿ ಆಸ್ಟ್ರೇಲಿಯಾದ ಅಗ್ರ ವಿಕೆಟ್ ಟೇಕರ್ಗಳಲ್ಲಿ ಒಬ್ಬರು. 2024ರ ಐಪಿಎಲ್ನಲ್ಲಿ ದಾಖಲೆ ಬೆಲೆಗೆ (₹24.75 ಕೋಟಿ) ಕೆಕೆಆರ್ ತಂಡಕ್ಕೆ ಸೇರಿದ್ದರು. ಈ ಬಾರಿ ಡೆಲ್ಲಿ ಕ್ಯಾಪಿಟಲ್ಸ್ ತಂಡದಲ್ಲಿದ್ದಾರೆ.
ಇರಾನ್ ಜೊತೆಗಿನ ರಾಜತಾಂತ್ರಿಕ ಸೋಲಿನ ನಂತರ ಅಮೆರಿಕ ಹೇಗೆ "ಮಾನಸಿಕ ಕಾರ್ಯಾಚರಣೆ" (ಸೈ-ಆಪ್ಸ್) ನಡೆಸುತ್ತಿದೆ ಎಂಬುದನ್ನು ತಿಳಿಯಿರಿ. ಸೋರಿಕೆಯಾದ ವರ್ಗೀಕೃತ ಮಾರ್ಕೊ ರುಬಿಯೊ ಕೇಬಲ್ಗಳು ಪ್ರಮುಖ ಬಹಿರಂಗಪಡಿಸುವಿಕೆಯನ್ನು ಬಹಿರಂಗಪಡಿಸುತ್ತವೆ. ನೀವು ಸಾಮಾಜಿಕ ಮಾಧ್ಯಮದಲ್ಲಿ ನೋಡುವುದು ಅಥವಾ ರೂಪಿಸುವ ಅಭಿಪ್ರಾಯಗಳು ನಿಮ್ಮ ಸ್ವಂತದ್ದೆಂದು ನೀವು ಭಾವಿಸುತ್ತೀರಾ? ಬಹುಶಃ ಅಲ್ಲ. ಒಂದು ಕಾಲದಲ್ಲಿ ಕ್ಷಿಪಣಿಗಳು ಮತ್ತು ನಿರ್ಬಂಧಗಳಿಂದ ಜಗತ್ತನ್ನು ನಿಯಂತ್ರಿಸುತ್ತಿದ್ದ ವಿಶ್ವದ ಶ್ರೇಷ್ಠ ಸೂಪರ್ ಪವರ್ ಈಗ ಅಪಾಯಕಾರಿ ಆಟವನ್ನು ಆಡುತ್ತಿದೆ. ಈ ಆಟವನ್ನು ಸೈಕಲಾಜಿಕಲ್ ಆಪರೇಷನ್ಸ್ ಎಂದು ಕರೆಯಲಾಗುತ್ತದೆ.
ಬೆಂಗಳೂರು: ಇಡೀ ವಿಶ್ವವೇ ನರೇಂದ್ರ ಮೋದಿಜೀ ಅವರ ನಾಯಕತ್ವವನ್ನು ಒಪ್ಪಿಕೊಳ್ಳುವ ಸಂದರ್ಭದಲ್ಲಿ ಎ.ಐ.ಸಿ.ಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮೋದಿಜೀ ಅವರನ್ನು ಭಯೋತ್ಪಾದಕರೆಂದು ಹೇಳಿದ್ದು ಬಿಜೆಪಿ ಮಾತ್ರವಲ್ಲದೇ ಇಡೀ ದೇಶ ಇದನ್ನು ಬಲವಾಗಿ ಖಂಡಿಸುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದ್ದಾರೆ.ದೇಶದ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿ ಅವರನ್ನು ಉಗ್ರವಾದಿ ಎಂದು ಹೇಳಿದ ಎ.ಐ.ಸಿ.ಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆಯನ್ನು ಖಂಡಿಸಿ ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಇಂದು ಏರ್ಪಡಿಸಿದ್ದ ಪ್ರತಿಭಟನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಖರ್ಗೆಯವರು ಮತ್ತು ಕಾಂಗ್ರೆಸ್ಸಿಗೆ ಪ್ರಧಾನಿಯವರ ಜನಪ್ರಿಯತೆ ಸಹಿಸಿಕೊಳ್ಳಲು ಆಗುತ್ತಿಲ್ಲ ಎಂದು ತಿಳಿಸಿದರು.
ಬೆಂಗಳೂರು: ಕೇಂದ್ರ ಸರಕಾರದ ಸಂಸ್ಕøತಿ ಸಚಿವಾಲಯವು ಇದೇ 11ರಿಂದ 2028ರ ಏಪ್ರಿಲ್ 11ರವರೆಗೆ ಎರಡು ವರ್ಷಗಳ ಕಾಲ ಮಹಾತ್ಮ ಜ್ಯೋತಿಬಾ ಫುಲೆ ಅವರ 200ನೇ ಜನ್ಮದಿನೋತ್ಸªದ ಅಂಗವಾಗಿ ವಿವಿಧ ಕಾರ್ಯಕ್ರಮಗಳನ್ನು ಸಂಘಟಿಸಲಿದೆ.ಈ ಕುರಿತು ಕೇಂದ್ರ ಸರಕಾರದ ಸಂಸ್ಕøತಿ ಸಚಿವಾಲಯವು ಉನ್ನತ ಮಟ್ಟದ ಸಮಿತಿ ರಚಿಸಿದ್ದು, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ರಾಜ್ಯದ ವಿಧಾನಪರಿಷತ್ ಸದಸ್ಯ ಕೇಶವ ಪ್ರಸಾದ್, ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಅವರನ್ನು ಸಮಿತಿಗೆ ನೇಮಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಬೆಂಗಳೂರು: ಕಳೆದ ಕೆಲವು ದಿನಗಳಿಂದ ಚಿನ್ನದ ದರ ಏರಿಕೆ, ಇಳಿಕೆಯಾಗುತ್ತಲೇ ಇದೆ. ಇಂದು ಪರಿಶುದ್ಧ ಚಿನ್ನದ ದರ ಮತ್ತುಇತರೆ ಚಿನ್ನದ ದರ ಇಳಿಕೆಯಾಗಿದೆ. ಇಂದು ಪರಿಶುದ್ಧ ಚಿನ್ನದ ದರ ಮತ್ತು ಇತರೆ ಚಿನ್ನದ ದರ ವಿವರ ಇಲ್ಲಿದೆ ನೋಡಿ. ಚಿನ್ನದ ದರ ಏರಿಕೆಕಳೆದ ವಾರ ಪರಿಶುದ್ಧ ಚಿನ್ನದ ದರ ಸತತವಾಗಿ ಬೆಲೆ ಏರಿಳಿಕೆಯಾಗುತ್ತಲೇ ಇತ್ತು. ಆದರೆ ವಾರಂತ್ಯಕ್ಕೆ ಪರಿಶುದ್ಧ ಚಿನ್ನದ ದರದಲ್ಲಿ ಕೊಂಚ ಇಳಿಕೆಯಾಗಿತ್ತು. ಪರಿಶುದ್ಧ ಚಿನ್ನದ ದರ ವಾರಂತ್ಯಕ್ಕೆ 1,57,110.00 ರೂ.ಗಳಿತ್ತು. ಆದರೆ ಇಂದು ಇಳಿಕೆಯಾಗಿದ್ದು 1,56,605.00 ರೂ.ಗಳಷ್ಟಿದೆ.
ಬೆಂಗಳೂರು: ಈ ಸಾಲಿನ ಎಸ್ಎಸ್ಎಲ್ ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು ಶೇ. ರಷ್ಟು ಫಲಿತಾಂಶ ಬಂದಿದೆ. ಇನ್ನು ಅನುತ್ತೀರ್ಣರಾದವರಿಗೆ ಇನ್ನು ಎರಡು ಅವಕಾಶವಿದ್ದು ಭಯ ಬೇಡ. ನೇರವಾಗಿ ವೆಬ್ ಸೈಟ್ ಮುಖಾಂತರವೇ ಪರೀಕ್ಷಾ ಮಂಡಳಿ ಫಲಿತಾಂಶ ಪ್ರಕಟಿಸಿದೆ. ಈ ಬಾರಿ ಒಟ್ಟು ಮೂವರಿಗೆ 625 ಕ್ಕೆ 625 ಅಂಕಗಳು ಬಂದಿವೆ. ಹಾಸನದ ಜಾನವಿ, ಉತ್ಸವ ಪಾಟೀಲ್, ಬೆಳಗಾವಿ ರೂಪಾ ಚನಗೌಡ ಪಾಟೀಲ 625 ಅಂಕ ಪಡೆದ ವಿದ್ಯಾರ್ಥಿಗಳು. ಪತ್ರಿಕಾಗೋಷ್ಠಿಯಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಫಲಿತಾಂಶ ಘೋಷಣೆ ಮಾಡಿದ್ದಾರೆ. ‘ಈ ಬಾರಿ ದಾಖಲೆಯ 94.1 ಶೇ. ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ.
ಚೆನ್ನೈ: ಸಿನಿಮಾ ಸ್ಟಾರ್ಗಳ ಅಧಿಪತ್ಯಕ್ಕೆ ಹೆಸರಾದ ತಮಿಳುನಾಡಿನ ರಾಜಕೀಯ ರಂಗದಲ್ಲಿ ಈಗ ಮತ್ತೊಬ್ಬ ತಾರೆಯ ಅಬ್ಬರ ಜೋರಾಗಿದೆ. ತಮಿಳು ಚಿತ್ರರಂಗದ ‘ದಳಪತಿ’ ಎಂದು ಕರೆಯಲ್ಪಡುವ ನಟ ವಿಜಯ್ ‘ತಮಿಳಗ ವೆಟ್ರಿ ಕಳಗಂ’ TVK ಎಂಬ ಹೆಸರಿನೊಂದಿಗೆ ಹೊಸ ರಾಜಕೀಯ ಪಕ್ಷವನ್ನು ಅಧಿಕೃತವಾಗಿ ಘೋಷಿಸಿದ್ದಾರೆ. ಇದರೊಂದಿಗೆ 2026ರ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಇವರ ಪಕ್ಷ ಎಷ್ಟರಮಟ್ಟಿಗೆ ಯಶಸ್ಸು ಗಳಿಸಬಹುದು ಎಂಬ ಚರ್ಚೆಗಳು ರಾಜಕೀಯ ವಲಯದಲ್ಲಿ ತೀವ್ರಗೊಂಡಿವೆ. ವಿಜಯ್ ಅವರ ಟಿವಿಕೆ ಪಕ್ಷವು ತಮಿಳುನಾಡು ಚುನಾವಣೆಯಲ್ಲಿ ಯಶಸ್ವಿಯಾಗಲು ಇರುವ ಪ್ರಮುಖ ಕಾರಣಗಳು ಮತ್ತು ಸವಾಲುಗಳನ್ನು ಈ ಲೇಖನದಲ್ಲಿ ವಿಶ್ಲೇಷಿಸಲಾಗಿದೆ:
ಬೆಂಗಳೂರು: ಕರ್ನಾಟಕ ಎಸ್ಎಸ್ಎಲ್ ಸಿ ಪರೀಕ್ಷೆ ಫಲಿತಾಂಶ ಇನ್ನು ಕೆಲವೇ ಕ್ಷಣಗಳಲ್ಲಿ ಪ್ರಕಟವಾಗಲಿದ್ದು, ಪರೀಕ್ಷಿಸುವುದು ಎಲ್ಲಿ ಮತ್ತು ಹೇಗೆ ಎಂಬ ಬಗ್ಗೆ ಇಲ್ಲಿದೆ ವಿವರ. ಈ ಸಾಲಿನ ಎಸ್ಎಸ್ಎಲ್ ಸಿ ಪರೀಕ್ಷೆ ಫಲಿತಾಂಶ ಇಂದು 12 ಗಂಟೆಗೆ ಪ್ರಕಟವಾಗಲಿದೆ. ಈ ಬಾರಿ 9 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಎಸ್ಎಸ್ಎಲ್ ಸಿ ಪರೀಕ್ಷೆ ಬರೆದಿದ್ದು, ಫಲಿತಾಂಶಕ್ಕಾಗಿ ಎದಿರು ನೋಡುತ್ತಿದ್ದಾರೆ. ಹಿಂದಿ ಭಾಷೆಗೆ ಕೋರ್ಟ್ ಆದೇಶದಂತೆ ಅಂಕವನ್ನೇ ನೀಡಲಾಗುತ್ತಿದೆ. ಮೊದಲು ಶಿಕ್ಷಣ ಸಚಿವರು ಪತ್ರಿಕಾಗೋಷ್ಠಿಯಲ್ಲಿ ಫಲಿತಾಂಶ ಪ್ರಕಟಿಸಲಿದ್ದು ನಂತರ ವೆಬ್ ಸೈಟ್ ಗಳಲ್ಲಿ ಫಲಿತಾಂಶ ಲಭ್ಯವಿರಲಿದೆ.
ಮೂಕ ಪ್ರಾಣಿಯೇ ಆದರೂ ಸುಖಾ ಸುಮ್ಮನೇ ಹಿಂಸೆ ಮಾಡಲು ಯತ್ನಿಸಿದರೆ ಅದು ತಿರುಗಿ ಬೀಳೋದು ಖಚಿತ ಎನ್ನುವುದಕ್ಕೆ ಈ ಗೋವು ಸಾಕ್ಷಿಯಾಗಿದೆ. ದನವನ್ನು ಗೋಮಾತೆ ಎಂದು ಪೂಜಿಸುವ ಪರಂಪರೆ ನಮ್ಮದು. ಆಕಾರದಲ್ಲಿ ದೈತ್ಯವಾಗಿದ್ದರೂ ದನಗಳು ಇನ್ನೊಬ್ಬರಿಗೆ ತೊಂದರೆ ಮಾಡುವುದು ತೀರಾ ವಿರಳ. ಬೀಡಾಡಿ ದನಗಳು ಮಾತ್ರ ಕೆಲವೊಮ್ಮೆ ಆಹಾರ ಸಿಗದೇ ಕೆರಳುವುದು ಇದೆ. ಆದರೆ ಸಾಮಾನ್ಯವಾಗಿ ದನಗಳು ಮನುಷ್ಯರಿಗೆ ತೊಂದರೆ ಮಾಡಲ್ಲ. ಆದರೆ ಇಲ್ಲಿ ತನ್ನ ಪಾಡಿಗೆ ತಾನು ಬೀದಿಯಲ್ಲಿ ಓಡಾಡುತ್ತಿದ್ದ ದನವನ್ನು ನೋಡಿ ವ್ಯಕ್ತಿಯೊಬ್ಬರು ಕಲ್ಲಿನಿಂದ ಹೊಡೆದಿದ್ದಾರೆ.
ಚೆನ್ನೈ: ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಸೂಪರ್ ಸ್ಟಾರ್ ರಜನೀಕಾಂತ್ ಮತ ಚಲಾಯಿಸಿದ್ದು ಅವರು ಮತದಾನ ಮಾಡುವಾಗ ಹಿಂದೆ, ಮುಂದೆಯೇ ಜನರಿದ್ದರು. ಇಂದು ತಮಿಳುನಾಡು ವಿಧಾನಸಭೆ ಮತದಾನ ಪ್ರಕ್ರಿಯೆ ಜಾರಿಯಲ್ಲಿದೆ. ಚೆನ್ನೈನಲ್ಲಿ ಇಂದು ಬೆಳಿಗ್ಗೆಯೇ ಸೂಪರ್ ಸ್ಟಾರ್ ರಜನೀಕಾಂತ್ ತಮ್ಮ ಮತಗಟ್ಟೆಗೆ ಬಂದು ಮತ ಚಲಾಯಿಸಿದ್ದಾರೆ. ರಜನೀಕಾಂತ್ ಮತ ಚಲಾಯಿಸುತ್ತಾರೆ ಎಂದು ತಿಳಿದು ಸಾಕಷ್ಟು ಮಾಧ್ಯಮ ಪ್ರತಿನಿಧಿಗಳೂ ಕ್ಯಾಮರಾ ಸಮೇತ ಅಲ್ಲಿದ್ದರು. ಇನ್ನು, ಮತಗಟ್ಟೆಯ ಸಿಬ್ಬಂದಿಗಳು, ಭದ್ರತಾ ಸಿಬ್ಬಂದಿಗಳೂ ನೆರೆದಿದ್ದರು. ರಜನೀಕಾಂತ್ ಮತ ಯಂತ್ರದ ಮುಂದೆ ನಿಂತು ಮತ ಚಲಾಯಿಸುವಾಗ ಮಾಧ್ಯಮಗಳು ಪಕ್ಕದಲ್ಲೇ ನಿಂತು ಫೋಟೋ, ವಿಡಿಯೋ ತೆಗೆಯಲು ನೂಕುನುಗ್ಗಲು ನಡೆಸಿದ್ದರು.
ಕೋಲ್ಕತ್ತಾ: ಪಶ್ಚಿಮ ಬಂಗಾಲದಲ್ಲಿ ಮೊದಲ ಹಂತದ ಮತದಾನ ಪ್ರಕ್ರಿಯೆ ವೇಳೆ ಮತಗಟ್ಟೆಗೆ ಬಂದ ಅತಿಥಿಯೊಬ್ಬರನ್ನು ನೋಡಿ ಜನ ಬೆಚ್ಚಿಬಿದ್ದಿದ್ದಾರೆ. ಪಶ್ಚಿಮ ಬಂಗಾಲದಲ್ಲಿ ಇಂದು ಮೊದಲ ಹಂತದ ಚುನಾವಣೆ ನಡೆಯುತ್ತಿದೆ. ಇಂದು ಬೆಳಿಗ್ಗೆಯೇ ಸಾಕಷ್ಟು ಜನ ಮತಗಟ್ಟೆಗೆ ಬಂದು ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ. ಅದೇ ರೀತಿ ಜಾರಗ್ರಾಮದಲ್ಲೂ ಮತದಾನ ಪ್ರಕ್ರಿಯೆ ನಡೆಯುತ್ತಿದೆ. ಆದರೆ ಇಲ್ಲಿನ ಮತಗಟ್ಟೆಯೊಂದರಲ್ಲಿ ಜನ ಮತ ಚಲಾಯಿಸಲು ಕ್ಯೂ ನಿಂತಿದ್ದಾಗ ಆನೆಯೊಂದು ಪ್ರತ್ಯಕ್ಷವಾಗಿದೆ. ಮತಗಟ್ಟೆಗೆ ಆನೆಯೊಂದು ಬಂದಿದ್ದು ನೋಡಿ ಕ್ಯೂ ನಿಂತಿದ್ದ ಜನ ಬೆಚ್ಚಿ ಬಿದ್ದಿದ್ದಾರೆ. ಮತಗಟ್ಟೆಯ ಬಳಿಯೆಲ್ಲಾ ಸುತ್ತಾಡಿದ ಆನೆ ವಾಪಸ್ ಆಗಿದೆ.
ಗುವಾಹಟಿ: ಅಭಿಮಾನಿಗಳು ಕರೆದರೂ ಕೇಳದಂತೆ ಬಸ್ ನಲ್ಲಿ ಕುಳಿತಿದ್ದ ರಾಜಸ್ಥಾನ್ ರಾಯಲ್ಸ್ ಕ್ರಿಕೆಟಿಗ ವೈಭವ್ ಸೂರ್ಯವಂಶಿ ವರ್ತನೆ ಬಗ್ಗೆ ಅಸಮಾಧಾನ ವ್ಯಕ್ತವಾಗಿದೆ. ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ರಾಜಸ್ಥಾನ್ ರಾಯಲ್ಸ್ ಪರ ಐಪಿಎಲ್ ಆಡುವ ವೈಭವ್ ಸೂರ್ಯವಂಶಿ ತಮ್ಮ ಹೊಡೆಬಡಿಯ ಆಟದಿಂದ ಈಗಲೇ ಸಾಕಷ್ಟು ಅಭಿಮಾನಿಗಳನ್ನು ಸಂಪಾದಿಸಿದ್ದಾರೆ. ಇನ್ನೂ 15 ವರ್ಷದ ಕ್ರಿಕೆಟಿಗ. ಆದರೆ ಹೋದಲ್ಲೆಲ್ಲಾ ಅಭಿಮಾನಿಗಳು ಅವರನ್ನು ಮುತ್ತಿಕೊಳ್ಳುತ್ತಾರೆ. ವೈಭವ್ ಅನೇಕ ಬಾರಿ ಅಭಿಮಾನಿಗಳಿಗೆ ಖುಷಿಯಿಂದಲೇ ಆಟೋಗ್ರಾಫ್ ನೀಡಿದ್ದು ಇದೆ.
ಹೇರ್ ಸ್ಟೈಲಿಂಗ್ ಮಾಡಲು ಬ್ಯೂಟಿ ಪಾರ್ಲರ್ ನಲ್ಲಿ ಕೂತಿದ್ದ ಮಹಿಳೆಗೆ ಶಾಕ್ ತಗುಲಿದ ಭಯಾನಕ ವಿಡಿಯೋವೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು ಮಹಿಳೆಯರು ಎಚ್ಚರವಾಗಿರುವುದು ಮುಖ್ಯ. ಇತ್ತೀಚೆಗೆ ಬ್ಯೂಟಿ ಪಾರ್ಲರ್, ಹೇರ್ ಸಲೂನ್ ಗಳಲ್ಲಿ ನಿಮ್ಮ ಅಂದ ಹೆಚ್ಚಿಸಲು ಅನೇಕ ಇಲೆಕ್ಟ್ರಾನಿಕ್ ಸಾಧನಗಳೂ ಬಂದಿವೆ. ಆದರೆ ಇಲೆಕ್ಟ್ರಾನಿಕ್ ಸಾಧನಗಳಿಂದ ಎಷ್ಟು ಅನುಕೂಲವಿದೆಯೋ ಅಷ್ಟೇ ಅಪಾಯಕಾರಿ ಕೂಡಾ ಎಂಬುದಕ್ಕೆ ಈ ವಿಡಿಯೋ ಸಾಕ್ಷಿಯಾಗಿದೆ. ಈ ಘಟನೆ ನಡೆದಿರುವುದು ಚೀನಾದಲ್ಲಿ. ಮಹಿಳೆಯೊಬ್ಬರು ಹೇರ್ ಸಲೂನ್ ನಲ್ಲಿ ಸ್ಟೈಲಿಂಗ್ ಮಾಡಲು ಕೂತಿರುತ್ತಾರೆ. ಅವರ ತಲೆ ಕೂದಲಿಗೆ ಇಲೆಕ್ಟ್ರಾನಿಕ್ ಸಾಧನಗಳನ್ನು ಕನೆಕ್ಟ್ ಮಾಡಲಾಗಿರುತ್ತದೆ.
ಲಕ್ನೋ: ತಮ್ಮ ತಂಡ ಸೋತಾಗಲೆಲ್ಲಾ ಕ್ಯಾಪ್ಟನ್ ಜೊತೆ ಕೋಪ, ತಾಪ ಪ್ರದರ್ಶಿಸುವ ಲಕ್ನೋ ಸೂಪರ್ ಜೈಂಟ್ಸ್ ನಾಯಕ ಸಂಜೀವ್ ಗೊಯೆಂಕಾ ನಿನ್ನೆಯ ವರ್ತನೆ ಶಾಕಿಂಗ್ ಅಗಿದೆ. ನಿನ್ನೆ ರಾಜಸ್ಥಾನ್ ರಾಯಲ್ಸ್ ವಿರುದ್ಧ ಲಕ್ನೋ ಸೂಪರ್ ಜೈಂಟ್ಸ್ 40 ರನ್ ಗಳಿಂದ ಪಂದ್ಯ ಸೋತಿದೆ. ಈ ಪಂದ್ಯ ಸೋತ ಬಳಿಕ ಲಕ್ನೋ ಮಾಲಿಕ ಸಂಜೀವ್ ಗೊಯೆಂಕಾ ಮತ್ತು ಕ್ಯಾಪ್ಟನ್ ರಿಷಭ್ ಪಂತ್ ಮೈದಾನದಲ್ಲಿ ಮಾತನಾಡಿದ್ದಾರೆ. ಸಾಮಾನ್ಯವಾಗಿ ಪಂದ್ಯ ಸೋತಾಗ ಸಂಜೀವ್ ಗೊಯೆಂಕಾ ಮೈದಾನವೆಂದೂ ನೋಡದೇ ನಾಯಕನ ಬಳಿ ಸಿಟ್ಟಿನಿಂದಲೇ ತರಾಟೆಗೆ ತೆಗೆದುಕೊಳ್ಳುತ್ತಾರೆ.
ನವದೆಹಲಿ: ತಮಿಳುನಾಡು ಮತ್ತು ಪಶ್ಚಿಮ ಬಂಗಾಲದಲ್ಲಿ ಮೊದಲ ಹಂತದ ಮತದಾನ ಪ್ರಕ್ರಿಯೆ ಶುರುವಾಗಿದೆ. ಬೆಳಿಗ್ಗೆಯೇ ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್ ಕುಟುಂಬ ಸಮೇತ ಬಂದು ಮತ ಚಲಾಯಿಸಿದ್ದಾರೆ. ತಮಿಳುನಾಡಿನಲ್ಲಿ 234 ಸ್ಥಾನಗಳಿಗೆ ವೋಟಿಂಗ್ ಆರಂಭವಾಗಿದೆ. ಈ ಬಾರಿ ತಮಿಳುನಾಡಿನಲ್ಲಿ ಡಿಎಂಕೆ, ಎಐಡಿಎಂಕೆಗೆ ಪ್ರತಿಸ್ಪರ್ಧಿಯಾಗಿ ದಳಪತಿ ವಿಜಯ್ ಅವರ ಟಿವಿಕೆ ಪಕ್ಷವಿದೆ. ಹೀಗಾಗಿ ತಮಿಳುನಾಡಿನ ಫಲಿತಾಂಶ ಏನಾಗಲಿದೆ ಎಂಬ ಕುತೂಹಲವಿದೆ. ಬೆಳ್ಳಂ ಬೆಳಿಗ್ಗೆಯೇ ಚೆನ್ನೈನ ಎಸ್ಐಇಟಿ ಕಾಲೇಜಿಗೆ ಪುತ್ರ ದಯಾನಿಧಿ ಮಾರನ್ ಮತ್ತು ಇತರೆ ಕುಟುಂಬ ಸದಸ್ಯರ ಜೊತೆ ಬಂದ ಸಿಎಂ ಎಂಕೆ ಸ್ಟಾಲಿನ್ ಮತ ಚಲಾಯಿಸಿದ್ದಾರೆ.
ಮುಂಬೈ: ಐಪಿಎಲ್ 2026 ರಲ್ಲಿ ಅಭಿಮಾನಿಗಳು ಬಹಳ ದಿನಗಳಿಂದ ಕಾಯುತ್ತಿದ್ದ ಗಳಿಗೆ ಬಂದೇ ಬಿಟ್ಟಿದೆ. ಇಂದು ಚೆನ್ನೈ ಸೂಪರ್ ಕಿಂಗ್ಸ್ ಅಭಿಮಾನಿಗಳಿಗೆ ನಿಜಕ್ಕೂ ಹಬ್ಬದ ಸಡಗರ. ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ ಇಂಡಿಯನ್ಸ್ ನಡುವೆ ಇಂದು ಮಹತ್ವದ ಪಂದ್ಯ ನಡೆಯಲಿದೆ. ಈ ಪಂದ್ಯ ಎರಡೂ ತಂಡಗಳಿಗೆ ಮುಂದಿನ ಹಂತಕ್ಕೇರುವ ದೃಷ್ಟಿಯಿಂದ ಮಹತ್ವದ ಪಂದ್ಯವಾಗಿದೆ. ಆದರೆ ಅದಕ್ಕಿಂತ ಹೆಚ್ಚು ಅಭಿಮಾನಿಗಳಿಗೆ ಖುಷಿಗೆ ಕಾರಣವಾಗಿರುವುದು ಧೋನಿ. ಈ ಬಾರಿ ಇದುವರೆಗೆ ಧೋನಿ ಗಾಯದ ಕಾರಣದಿಂದ ಒಂದೇ ಒಂದು ಪಂದ್ಯವಾಡಲು ಸಾಧ್ಯವಾಗಿರಲಿಲ್ಲ. ಆದರೆ ಅಭಿಮಾನಿಗಳ ಮೆಚ್ಚಿನ ತಲಾ ಫಿಟ್ ಆಗಿದ್ದು ಇಂದಿನ ಪಂದ್ಯಕ್ಕೆ ಕಣಕ್ಕಿಳಿಯಲಿದ್ದಾರೆ ಎಂದು ತಂಡದ ಮೂಲಗಳಿಂದ ತಿಳಿದುಬಂದಿದೆ.
ಬೆಂಗಳೂರು: ರಾಜ್ಯದಲ್ಲಿ ಹವಾಮಾನದಲ್ಲಿ ದಿನೇ ದಿನೇ ಬದಲಾವಣೆಯಾಗುತ್ತಿದೆ. ಇಂದಿನ ಹವಾಮಾನ ವರದಿ ಪ್ರಕಾರ ಈ ಕೆಲವು ಜಿಲ್ಲೆಗಳಲ್ಲಿ ಇಂದು ರಣಬಿಸಿಲು ಕಂಡುಬರಲಿದೆ. ಕರ್ನಾಟಕದಲ್ಲಿ ಈಗ ಕೆಲವು ಜಿಲ್ಲೆಗಳಲ್ಲಿ ದಿಡೀರ್ ಬೇಸಿಗೆ ಮಳೆಯಾಗುತ್ತಿದ್ದರೆ ಮತ್ತೆ ಕೆಲವು ಜಿಲ್ಲೆಗಳಲ್ಲಿ ತಾಪಮಾನ ದಾಖಲೆಯ ಮಟ್ಟಕ್ಕೆ ಏರಿಕೆಯಾಗುತ್ತಿದೆ. ಇಂದು ಕೆಲವು ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ 40 ಡಿಗ್ರಿಯ ಆಸುಪಾಸು ಕಂಡುಬರಲಿದೆ ಎನ್ನುತ್ತಿದೆ ಹವಾಮಾನ ವರದಿಗಳು. ಈ ವಾರದ ಆರಂಭದಲ್ಲಿ ಕರಾವಳಿ, ಚಿಕ್ಕಮಗಳೂರು ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಸಣ್ಣ ಮಳೆಯಾಗಿತ್ತು. ಆದರೆ ಇಂದು ಯಾವುದೇ ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆಯಿಲ್ಲ.
ಇಂದು ಗುರುವಾರವಾಗಿದ್ದು ಮಹಾವಿಷ್ಣುವಿಗೆ ವಿಶೇಷವಾದ ದಿನವಾಗಿದೆ. ಇಂದು ತಪ್ಪದೇ ಮಹಾವಿಷ್ಣುವಿನ ಕುರಿತಾದ ವಿಷ್ಣು ಷಟ್ಪದಿ ಸ್ತೋತ್ರವನ್ನು ಓದಿ. ಕನ್ನಡದಲ್ಲಿ ಇಲ್ಲಿದೆ.ಅವಿನಯಮಪನಯ ವಿಷ್ಣೋ ದಮಯ ಮನಃ ಶಮಯ ವಿಷಯಮೃಗತೃಷ್ಣಾಮ್ ।ಭೂತದಯಾಂ ವಿಸ್ತಾರಯ ತಾರಯ ಸಂಸಾರಸಾಗರತಃ ॥ 1 ॥ ದಿವ್ಯಧುನೀಮಕರಂದೇ ಪರಿಮಳಪರಿಭೋಗಸಚ್ಚಿದಾನಂದೇ ।ಶ್ರೀಪತಿಪದಾರವಿಂದೇ ಭವಭಯಖೇದಚ್ಛಿದೇ ವಂದೇ ॥ 2 ॥ ಸತ್ಯಪಿ ಭೇದಾಪಗಮೇ ನಾಥ ತವಾಽಹಂ ನ ಮಾಮಕೀನಸ್ತ್ವಮ್ ।ಸಾಮುದ್ರೋ ಹಿ ತರಂಗಃ ಕ್ವಚನ ಸಮುದ್ರೋ ನ ತಾರಂಗಃ ॥ 3 ॥ ಉದ್ಧೃತನಗ ನಗಭಿದನುಜ ದನುಜಕುಲಾಮಿತ್ರ ಮಿತ್ರಶಶಿದೃಷ್ಟೇ ।ದೃಷ್ಟೇ ಭವತಿ ಪ್ರಭವತಿ ನ ಭವತಿ ಕಿಂ ಭವತಿರಸ್ಕಾರಃ ॥ 4 ॥
ಲಕ್ನೋ: ಸತತ ಎರಡು ಪಂದ್ಯಗಳಲ್ಲಿ ಸೋತಿದ್ದ ರಾಜಸ್ಥಾನ ರಾಯಲ್ಸ್ ತಂಡವು ಗೆಲುವಿನ ಲಯಕ್ಕೆ ಮರಳಿದೆ. ಬೌಲಿಂಗ್, ಅತ್ಯುತ್ತಮ ಫೀಲ್ಡಿಂಗ್ ನೆರವಿನಿಂದ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ರಾಜಸ್ಥಾನ ತಂಡವು 40 ರನ್ಗಳ ಜಯ ಸಾಧಿಸಿದೆ.ಈ ಗೆಲುವಿನೊಂದಿಗೆ ರಾಯಲ್ಸ್ ತಂಡವು ಅಂಕಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೆ ಜಿಗಿದಿದೆ. ಟಾಸ್ ಸೋತು ಮೊದಲು ಬ್ಯಾಟ್ ಬೀಸಿದ ರಾಜಸ್ಥಾನ 6 ವಿಕೆಟ್ ನಷ್ಟನಕ್ಕೆ 159 ರನ್ ಹೊಡೆಯಿತು. ಸುಲಭದ ಸವಾಲನ್ನು ಬೆನ್ನಟ್ಟಿದ ಲಕ್ನೋ 17.6 ಓವರ್ಗಳಲ್ಲಿ 119 ರನ್ಗಳಿಗೆ ಎಲ್ಲಾ ವಿಕೆಟ್ ಕಳೆದುಕೊಂಡು ಸೋಲನ್ನು ಒಪ್ಪಿಕೊಂಡಿತು.7 ಪಂದ್ಯಗಳಿಂದ 10 ಅಂಕ, 0.790 ನೆಟ್ ರನ್ ರೇಟ್ನೊಂದಿಗೆ ರಾಜಸ್ಥಾನ ಎರಡನೇ ಸ್ಥಾನಕ್ಕೆ ಜಿಗಿಯಿತು. 6 ಪಂದ್ಯಗಳಿಂದ 8 ಅಂಕ 1.171 ನೆಟ್ ರನ್ ರೇಟ್ ಹೊಂದಿರುವ ಬೆಂಗಳೂರು ಮೂರನೇ ಸ್ಥಾನಕ್ಕೆ ಜಾರಿದೆ.
ಬೆಂಗಳೂರು: ಎಸ್ಸೆಸ್ಸೆಲ್ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಏ.23 ಮಧ್ಯಾಹ್ನ 12 ಗಂಟೆಗೆ ಪ್ರಕಟವಾಗಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ತಿಳಿಸಿದೆ. ಹಿಂದಿ ಭಾಷೆಯ ಅಂಕಗಳ ವಿಚಾರದಲ್ಲಿ ಹೈಕೋರ್ಟ್ನಲ್ಲಿ ವಿಚಾರಣೆ ಬಾಕಿ ಇದ್ದ ಕಾರಣ ತಡೆಹಿಡಿಯಲಾಗಿದ್ದ SSLC ಪರೀಕ್ಷೆಯ ಫಲಿತಾಂಶವನ್ನು ನಾಳೆ ಪ್ರಕಟಿಸಲಾಗುವುದು. ಹೈಕೋರ್ಟ್ ತೀರ್ಪಿನ ನಂತರ, ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಗುರುವಾರ ಮಧ್ಯಾಹ್ನ 12 ಗಂಟೆಗೆ ಫಲಿತಾಂಶ ಪ್ರಕಟಿಸುವುದಾಗಿ ತಿಳಿಸಿದ್ದಾರೆ. ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿವಾಸದಲ್ಲಿ ನಡೆದ ಮಹತ್ವದ ಸಭೆಯ ಬಳಿಕ ಶಿಕ್ಷಣ ಸಚಿವ ಮಧು ಬಂಗಾರಪ್ಪ ಈ ವಿಷಯವನ್ನು ಖಚಿತಪಡಿಸಿದ್ದಾರೆ.ವಿದ್ಯಾರ್ಥಿಗಳು ಪರೀಕ್ಷಾ ಮಂಡಳಿಯ ವೆಬ್ಸೈಟ್ https://karresults.nic.in/ ಮತ್ತು ಕರ್ನಾಟಕ ಒನ್ ಆ್ಯಪ್ ಮೂಲಕ ಪಡೆಯಬಹುದಾಗಿದೆ.
ಸೊರಬ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ತೃತೀಯ ಭಾಷೆ ಹಿಂದಿಗೆ ಗ್ರೇಡ್ ಬದಲು ಅಂಕ ನೀಡುವಂತೆ ಕೋರ್ಟ್ ಆದೇಶ ನೀಡಿದ ಹಿನ್ನೆಲೆ ಅದರಂತೆ ಅಂಕ ನೀಡಲಾಗುವುದೆಂದು ಸಚಿವ ಮಧು ಬಂಗಾರಪ್ಪ ಹೇಳಿದರು. ಪಟ್ಟಣದಲ್ಲಿರುವ ಬಂಗಾರಧಾಮದಲ್ಲಿ ಬುಧವಾರ ತಮ್ಮ ತಾಯಿ ಶಕುಂತಲಾ ಬಂಗಾರಪ್ಪ ಅವರ ಪುಣ್ಯಸ್ಮರಣೆ ಅಂಗವಾಗಿ ಸಮಾಧಿಗೆ ವಿಶೇಷ ಪೂಜೆ ಸಲ್ಲಿಸಿದ ನಂತರ ಅವರು ಮಾಧ್ಯಮಕ್ಕೆ ಪ್ರತಿಕ್ರಿಯಿಸಿದರು. ಈ ಬಾರಿ ಹಿಂದಿ ವಿಷಯಕ್ಕೆ ಅಂಕಗಳನ್ನು ನೀಡಲಾಗುವುದು. ಮುಂದಿನ ವರ್ಷ ಗ್ರೇಡ್ ನೀಡುವ ಕುರಿತು ಸರ್ಕಾರ ನಿರ್ಧರಿಸಲಿದೆ ಎಂದರು.
ಹರ್ಯಾನ್ವಿ ನಟಿ ದಿವ್ಯಾಂಕಾ ಸಿರೋಹಿ ಹೃದಯಾಘಾತದಿಂದ 30 ನೇ ವಯಸ್ಸಿನಲ್ಲಿ ನಿಧನರಾದರು. ಹರ್ಯಾನ್ವಿ ಮನರಂಜನಾ ಉದ್ಯಮದಲ್ಲಿ 30 ನೇ ವಯಸ್ಸಿನಲ್ಲಿ ದಿವ್ಯಾಂಕಾ ಸಿರೋಹಿ ಅವರ ಹಠಾತ್ ನಿಧನವು ಭಾರೀ ದೊಡ್ಡ ಆಘಾತವನ್ನು ನೀಡಿದೆ. ವರದಿಗಳ ಪ್ರಕಾರ, ನಟಿ ಮಂಗಳವಾರ ತಡರಾತ್ರಿ ತಮ್ಮ ನಿವಾಸದಲ್ಲಿ ಹೃದಯಾಘಾತಕ್ಕೆ ಒಳಗಾಗಿದ್ದಾರೆ.ಕುಟುಂಬಸ್ಥರು ಆಕೆಯನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ದರು, ಆದರೆ ವೈದ್ಯರು ಬರುವಷ್ಟರಲ್ಲಿ ಅವರು ಸಾವನ್ನಪ್ಪಿದ್ದಾರೆ ಎಂದು ಘೋಷಿಸಿದರು.
ನವದೆಹಲಿ: ಆಗ್ನೇಯ ದೆಹಲಿಯ ಅಮರ್ ಕಾಲೋನಿಯಲ್ಲಿರುವ ತನ್ನ ನಿವಾಸದಲ್ಲಿ ಹಿರಿಯ ಐಆರ್ಎಸ್ ಅಧಿಕಾರಿಯೊಬ್ಬರ ಮಗಳು 21 ವರ್ಷದ ಮಹಿಳೆಯೊಬ್ಬರು ಕೊಲೆಯಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.ಮೂಲಗಳ ಪ್ರಕಾರ, ಬಲಿಪಶುವನ್ನು ಮೊಬೈಲ್ ಫೋನ್ ಚಾರ್ಜರ್ ಕೇಬಲ್ನಿಂದ ಕತ್ತು ಹಿಸುಕಿ, ಲೈಂಗಿಕ ದೌರ್ಜನ್ಯ ನೀಡಿ ಹತ್ಯೆ ಮಾಡಲಾಗಿದೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. ಘಟನೆ ನಡೆದಾಗ ಆಕೆ ಮನೆಯಲ್ಲಿ ಒಬ್ಬಳೇ ಇದ್ದಳು ಎನ್ನಲಾಗಿದೆ.ಒಂದು ತಿಂಗಳ ಹಿಂದೆ ಕೆಲಸದಿಂದ ವಜಾಗೊಳಿಸಲಾದ ಮಾಜಿ ಮನೆಕೆಲಸಗಾರನ ಪಾಲ್ಗೊಳ್ಳುವಿಕೆಯನ್ನು ಪೊಲೀಸರು
ಮಾಧ್ಯಮಗಳಲ್ಲಿ ಡಿವೋರ್ಸ್ ವದಂತಿ ನಡುವೆ ಅಭಿಷೇಕ್ ಬಚ್ಚನ್ ಅವರು ಐಶ್ವರ್ಯಾ ರೈ ನನ್ನ ಜೀವನದ ಸಂಗಾತಿ ಎಂದು ಕೊಂಡಾಡಿದ್ದಾರೆ. ಬಾಲಿವುಡ್ ನಟ ಅಭಿಷೇಕ್ ಬಚ್ಚನ್ ಹಾಗೂ ಮಾಜಿ ವಿಶ್ವಸುಂದರಿ ಐಶ್ವರ್ಯಾ ರೈ ಬಚ್ಚನ್ ಅವರು ಏಪ್ರಿಲ್ 20ರಂದು 19 ವರ್ಷಗಳ ದಾಂಪತ್ಯ ವಾರ್ಷಿಕೋತ್ಸವವನ್ನು ಆಚರಿಸಿಕೊಂಡರು. ಈ ಸಂದರ್ಭದಲ್ಲಿ ಮಗಳೊಂದಿಗಿನ ಫೋಟೋವನ್ನು ಹಂಚಿಕೊಂಡರು. ಈಚೆಗೆ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಅಭಿಷೇಕ್ ಅವರು ಐಶ್ವರ್ಯಾಳೊಂದಿಗೆ ಪ್ರೀತಿಗೆ ಬೀಳುವ ದಿನದಿಂದ ನೆನಪಿಸಿಕೊಂಡರು.
ನವದೆಹಲಿ: ಪ್ರಧಾನಿ ಮೋದಿಯನ್ನು ಭಯೋತ್ಪಾದಕ ಎಂದು ಕರೆದಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು ನೀಡಿದೆ. ಕೇಂದ್ರ ಸಚಿವ ಕಿರಣ್ ರಿಜಿಜು ನೇತೃತ್ವದ ಬಿಜೆಪಿಯ ಉನ್ನತ ನಿಯೋಗ ಇಂದು ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದೆ. ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಚುನಾವಣಾ ಆಯೋಗಕ್ಕೆ ಬಿಜೆಪಿ ಒತ್ತಾಯಿಸಿದೆ. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿರುವ ಕಿರಣ್ ರಿಜಿಜು, ಕಾಂಗ್ರೆಸ್ ತನ್ನ ಕೀಳು ಮಟ್ಟದ ಪರಮಾವಧಿಯನ್ನು ತಲುಪಿದೆ. ನಾವು ಹಲವು ಬಾರಿ ಚುನಾವಣೆ ವಿಚಾರವಾಗಿ ಚುನಾವಣಾ ಆಯೋಗದ ಕಚೇರಿಗೆ ಭೇಟಿ ನೀಡಿದ್ದೆವು.
ಮಜಾಭಾರತ, ಗಿಚ್ಚಿಗಿಲಿಗಿಲಿ ಹಾಗೂ ಬಿಗ್ಬಾಸ್ ಖ್ಯಾತಿಯ ಮಂಜು ಪಾವಗಡ ಅವರು ಗಂಡು ಮಗುವಿನ ತಂದೆಯಾಗಿರುವ ಬಗ್ಗೆ ಖುಷಿ ಹಂಚಿಕೊಂಡಿದ್ದಾರೆ. 2024ರಲ್ಲಿ ನಂದಿನಿ ಎಂಬುವವರನ್ನು ಮದುವೆಯಾದ ಮಂಜು ಅವರು 7 ತಿಂಗಳ ಹಿಂದೆಯೇ ಗಂಡು ಮಗುವನ್ನು ಸ್ವಾಗತಿಸಿರುವುದಾಗಿ ಹೇಳಿಕೊಂಡಿದ್ದಾರೆ. ಕಳೆದ ವರ್ಷ ಅಂದರೆ 2025ರ ಕೊನೆಯಲ್ಲಿ ಮಂಜು ಪಾವಗಡ ಅವರಿಗೆ ಮಗ ಹುಟ್ಟಿದ ಸಂತಸದ ವರ್ಷ. ಸದ್ಯ ಮಗನಿಗೆ 7
ಪಶ್ಚಿಮ ಬಂಗಾಳ: ಬಿಜೆಪಿಯು ಪಶ್ಚಿಮ ಬಂಗಾಳದ ಚುನಾವಣೆಯಲ್ಲಿ ವಿಶ್ವಾಸ ವ್ಯಕ್ತಪಡಿಸಿದ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಪಶ್ಚಿಮ ಬಂಗಾಳದ ಐತಿಹಾಸಿಕ ಪರಂಪರೆಯನ್ನು ಶ್ಲಾಘಿಸಿದರು. ತೃಣಮೂಲ ಕಾಂಗ್ರೆಸ್ (ಟಿಎಂಸಿ) ಕಾರ್ಯಕರ್ತರು ತಮ್ಮ ಸಾರ್ವಜನಿಕ ಸಭೆಯಲ್ಲಿ ಗೊಂದಲವನ್ನು ಸೃಷ್ಟಿಸಿದ್ದಾರೆ ಎಂದು ಅವರು ಆರೋಪಿಸಿದರು. ರ್ಯಾಲಿಯನ್ನು ಮಹತ್ವದ ತಿರುವು ಎಂದು ಕರೆದ ಆದಿತ್ಯನಾಥ್, ಇದು ಪಶ್ಚಿಮ ಬಂಗಾಳದ ರಾಜಕೀಯದಲ್ಲಿ "ಹೊಸ ಯುಗಕ್ಕೆ ನಾಂದಿ" ಎಂದು ಹೇಳಿದರು.
ಪಶ್ಚಿಮ ಬಂಗಾಳ: ಪ್ರಧಾನಿ ನರೇಂದ್ರ ಮೋದಿ ಅವರನ್ನು ಭಯೋತ್ಪಾದಕ ಎಂದು ಹೇಳಿದ ದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಕೇಂದ್ರ ಗೃಹ ಸಚಿವ ಮತ್ತು ಬಿಜೆಪಿ ನಾಯಕ ಅಮಿತ್ ಶಾ ಅವರು ಬುಧವಾರ ತೀವ್ರ ವಾಗ್ದಾಳಿ ನಡೆಸಿದರು. ಭಯೋತ್ಪಾದನೆ ನಿರ್ಮೂಲನೆ ಮಾಡಿದ ನರೇಂದ್ರ ಮೋದಿ ಜಿ ಅವರನ್ನು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭಯೋತ್ಪಾದಕ ಎಂದು ಕರೆಯುತ್ತಿದ್ದಾರೆ. ರಾಹುಲ್ ಬಾಬಾ ಅವರ ಸುತ್ತ ಇದ್ದು ಖರ್ಗೆ ಅವರ ಭಾಷೆಯನ್ನೂ ಕೆಡಿಸಲು ಆರಂಭಿಸಿದ್ದಾರೆ ಎಂದು ಹೇಳಿದ ಶಾ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದರು.
ಬೆಂಗಳೂರು: ಪ್ರಧಾನಿ ಮೋದಿ ಭಯೋತ್ಪಾದಕ ಎಂದು ಕರೆದಿದ್ದ ಮಲ್ಲಿಕಾರ್ಜುನ ಖರ್ಗೆ ಪರ ಪುತ್ರ, ಸಚಿವ ಪ್ರಿಯಾಂಕ್ ಖರ್ಗೆ ಬ್ಯಾಟಿಂಗ್ ಮಾಡಿದ್ದಾರೆ. ಚಂದ್ರಬಾಬು ನಾಯ್ಡು ಕೂಡಾ ಒಮ್ಮೆ ಮೋದಿ ಭಯೋತ್ಪಾದಕ ಎಂದರಲಿಲ್ವೇ ಎಂದು ಪ್ರಶ್ನೆ ಮಾಡಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಬಿಜೆಪಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ನಾಳೆ ಕರ್ನಾಟಕ ಬಿಜೆಪಿ ನಾಯಕರು ಪ್ರತಿಭಟನೆ ನಡೆಸಲು ತೀರ್ಮಾನಿಸಿದ್ದಾರೆ. ದೇಶದ ಪ್ರಧಾನ ಮಂತ್ರಿಯನ್ನು ಭಯೋತ್ಪಾದಕ ಎಂದು ಕರೆದ ಖರ್ಗೆ ದೇಶದ ಕ್ಷಮೆ ಯಾಚಿಸಬೇಕು ಎಂದು ಆಗ್ರಹಿಸುತ್ತಿದ್ದಾರೆ. ಇದರ ಬಗ್ಗೆ ಮಾಧ್ಯಮಗಳಿಗೆ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯಿಸಿದ್ದಾರೆ. ‘ಬಿಜೆಪಿಯವರು ಪ್ರತಿಭಟನೆ ಮಾಡುವುದಿದ್ದರೆ ಮಾಡಲಿ.
ಬೆಂಗಳೂರು: ಅಕ್ರಮವಾಗಿ ವಿದೇಶದಿಂದ ಚಿನ್ನವನ್ನು ಸಾಗಿಸುತ್ತಿದ್ದ ವೇಳೆ ಬೆಂಗಳೂರು ಏರ್ಪೋರ್ಟ್ನಲ್ಲಿ ರೆಡ್ಹ್ಯಾಂಡ್ ಆಗಿ ಸಿಕ್ಕಿಬಿದ್ದ ನಟಿ ರನ್ಯಾ ರಾವ್ಗೆ ಜಾಮೀನು ಸಿಕ್ಕಿದೆ. ಒಂದು ವರ್ಷದ ಹಿಂದೆ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ರನ್ಯಾ ರಾವ್ಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ನಟಿಗೆ ಆರ್ಥಿಕ ಅಪರಾಧಗಳ ತಡೆ ನ್ಯಾಯಾಲಯ ಜಾಮೀನು ನೀಡಿದೆ. 2025 ಮಾರ್ಚ್ 3ರಂದು ನಟಿ ರನ್ಯಾ ರಾವ್ 14.8 ಕೆಜಿ ಚಿನ್ನದ ಕಳ್ಳಸಾಗಣೆ ಮಾಡಿದ ಆರೋಪದ ಮೇಲೆ ಕೆಂಪೇಗೌಡ
ಉಡುಪಿ: ಮಲ್ಪೆಗೆ ಭೇಟಿ ನೀಡಿದ್ದ ಬೆಂಗಳೂರಿನ 37 ವರ್ಷದ ವ್ಯಕ್ತಿಯೊಬ್ಬರು ತಮ್ಮ ಹೋಟೆಲ್ ಕೊಠಡಿಯಲ್ಲಿ ನಿಗೂಢ ರೀತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.ಮೃತರನ್ನು ಬೆಂಗಳೂರಿನ ಆನೇಕಲ್ ನಿವಾಸಿ ಧನಂಜಯ್ ಕೆ ಎನ್ ಎಂದು ಗುರುತಿಸಲಾಗಿದೆ.ವರದಿಗಳ ಪ್ರಕಾರ, ಏಪ್ರಿಲ್ 19 ರಂದು ಸಂಜೆ ವಿಹಾರಕ್ಕೆ ಸ್ನೇಹಿತರ ಗುಂಪಿನೊಂದಿಗೆ ಧನಂಜಯ್ ಮಲ್ಪೆಗೆ ಆಗಮಿಸಿದ್ದರು. ಕಳೆದ ನಾಲ್ಕು ವರ್ಷಗಳಿಂದ ಅವರು ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು ಎಂದು ಹೇಳಲಾಗಿದೆ.
ರಾಜ್ಯದಲ್ಲಿ ಬಿಸಿಲ ಧಗೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಜನರು ಮನೆಯಿಂದ ಹೊರಹೋಗಲು ಸಂಕಷ್ಟ ಪಡುತ್ತಿದ್ದಾರೆ. ಸಾಮಾನ್ಯವಾಗಿ ಬೇಸಿಗೆಯಲ್ಲಿ ಚರ್ಮದ ಸಮಸ್ಯೆಯಾಗಿ ಸಣ್ಣ ಕೆಂಪು ಗುಳ್ಳೆಗಳು ಬೀಳುತ್ತದೆ. ಇದರು ವಿಪರೀತ ತುರಿಕೆ ಹಾಗೂ ಉರಿಯನ್ನು ಉಂಟು ಮಾಡುತ್ತದೆ. ಇನ್ನೂ ಈ ಗುಳ್ಳೆಗೆ ಸರಳವಾದ ಮತ್ತು ಪರಿಣಾಮಕಾರಿಯಾದ ಮನೆಮದ್ದುಗಳು ಇಲ್ಲಿದೆ. ಬೆವರು ಕಜ್ಜಿ ಇರುವ ಜಾಗಕ್ಕೆ ತಣ್ಣೀರು ಅಥವಾ ಐಸ್ ಕ್ಯೂಬ್ಗಳನ್ನು ಬಟ್ಟೆಯಲ್ಲಿ ಸುತ್ತಿ ಮೃದುವಾಗಿ ಒತ್ತಿಕೊಳ್ಳಿ. ಇದು ಉರಿ ಮತ್ತು ತುರಿಕೆಯನ್ನು ತಕ್ಷಣವೇ ಕಡಿಮೆ ಮಾಡುತ್ತದೆ.
ಬ್ಯಾರಕ್ಪುರ: ಪಶ್ಚಿಮ ಬಂಗಾಳದ ವಿಧಾಣಸಭಾ ಚುನಾವಣಾ ಪ್ರಚಾರದಲ್ಲಿ ಮೀನು ಮತ್ತು ಜಲ್ ಮುರಿ ನಡುವೆ ಸುತ್ತುವರೆದು ಟಿಎಂಸಿ ಮತ್ತು ಬಿಜೆಪಿ ನಡುವೆ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಮೀನು, ಮಾಂಸ ಮತ್ತು ಮೊಟ್ಟೆ ತಿನ್ನುವುದನ್ನು ನಿರ್ಬಂಧ ಹೇರಲಿದೆ ಎಂಬ ಟಿಎಂಸಿ ಆರೋಪ ಬೆನ್ನಲ್ಲೇ ಸಿಎಂ ಮಮತಾ ಬ್ಯಾನರ್ಜಿ ಅವರು ಪ್ರಧಾನಿ ಮೋದಿ ವಿರುದ್ಧ ಆಕ್ರೋಶ ಹೊರಹಾಕಿದರು.ಪ್ರಧಾನಿ ನರೇಂದ್ರ ಮೋದಿಗೆ ಮೀನು ತಿನ್ನಲು ಬಯಸಿದರೆ, ನಾನೇ ಅವರಿಗೆ ಅಡುಗೆ ಮಾಡಿ ಬಡಿಸುತ್ತೇನೆಂದು ಮಂಗಳವಾರ ಮಮತಾ ಬ್ಯಾನರ್ಜಿ ವಿರುದ್ಧ ಕಿಡಿಕಾರಿದರು.
ಬೆಂಗಳೂರು: ಅಕ್ರಮವಾಗಿ ಚಿನ್ನ ಸಾಗಣಿಕೆ ಮಾಡಿದ ಆರೋಪದಲ್ಲಿ ಬಂಧಿತರಾಗಿದ್ದ ನಟಿ ರನ್ಯಾ ರಾವ್ ಗೆ ಕೊನೆಗೂ ಬಿಡುಗಡೆ ಭಾಗ್ಯ ಸಿಕ್ಕಿದೆ. ಇದರೊಂದಿಗೆ ಒಂದು ವರ್ಷದ ಜೈಲು ವಾಸ ಕೊನೆಗೊಂಡಿದೆ. ತಮ್ಮ ತಂದೆ ಡಿಜಿಪಿ ರಾಮಚಂದ್ರ ರಾವ್ ಅವರ ಹೆಸರು ಬಳಸಿ ಏರ್ ಪೋರ್ಟ್ ನಲ್ಲಿ ತಪಾಸಣೆಯಿಂದ ವಿನಾಯ್ತಿ ಪಡೆಯುತ್ತಿದ್ದ ರನ್ಯಾ ರಾವ್ ದುಬೈಯಿಂದ ಚಿನ್ನ ಕಳ್ಳ ಸಾಗಣಿಕೆ ಮಾಡುತ್ತಿದ್ದರು ಎನ್ನಲಾಗಿದೆ. ಈ ಸಂಬಂಧ ಕಳೆದ ವರ್ಷ ಮಾರ್ಚ್ ನಲ್ಲಿ ಅವರು ಬಂಧಿತರಾಗಿದ್ದರು. ಇದಾದ ಬಳಿಕ ಅವರು ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದರು. ಇದರ ನಡುವೆ ಅವರ ಜಾಮೀನು ಅರ್ಜಿ ವಜಾಗೊಂಡಿತ್ತು.
ನವದೆಹಲಿ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ನೀಡಿರುವ ಹೇಳಿಕೆಯನ್ನು ಬಿಜೆಪಿ ಚುನಾವಣಾ ಅಸ್ತ್ರವಾಗಿಸಿಕೊಂಡಿದೆ. ಖರ್ಗೆ ಹೇಳಿಕೆ ಖಂಡಿಸಿ ಬಿಜೆಪಿ ಚುನಾವಣಾ ಆಯೋಗದ ಮೆಟ್ಟಿಲೇರಿದೆ.ಪ್ರಧಾನಿ ನರೇಂದ್ರ ಮೋದಿ ಅವರನ್ನು ಭಯೋತ್ಪಾದಕ ಎಂದು ಕರೆದಿದ್ದಖರ್ಗೆ ವಿರುದ್ಧ ಬಿಜೆಪಿ ನಾಯಕರು ಕಿಡಿಕಾರುತ್ತಿದ್ದಾರೆ. ಖರ್ಗೆ ಹೇಳಿಕೆಗೆ ಅಧಿಕೃತವಾಗಿ ಆಕ್ಷೇಪಣೆ ವ್ಯಕ್ತಪಡಿಸಲು ಕೇಂದ್ರ ಸಚಿವ ಕಿರಣ್ ರಿಜಿಜು ನೇತೃತ್ವದ ಬಿಜೆಪಿ ನಿಯೋಗವು ಬುಧವಾರ ಕೇಂದ್ರ ಚುನಾವಣಾ ಆಯೋಗವನ್ನು ಭೇಟಿ ಮಾಡಿ ದೂರು ನೀಡಿದೆ.ಬಿಜೆಪಿ ಈಗಾಗಲೇ ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದು, ಮಲ್ಲಿಕಾರ್ಜುನ ಖರ್ಗೆ ಹೇಳಿಕೆಯು ಮಾದರಿ ನೀತಿ ಸಂಹಿತೆಯ ಸ್ಪಷ್ಟ ಉಲ್ಲಂಘನೆಯಾಗಿದ್ದು, ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 175 ರ ಅಡಿಯಲ್ಲಿ ಅಪರಾಧವಾಗಿದೆ,
ಚಿಕ್ಕಮಗಳೂರು: ಮಲ್ಲಿಕಾರ್ಜುನ ಖರ್ಗೆ ಅವರು ಮಾನಸಿಕ ಅಸ್ವಸ್ಥರ ಹಾಗೇ ಹೇಳಿಕೆಯನ್ನು ಕೊಡ್ತಾ ಇದ್ದಾರೆ. ಇನ್ನೂ ಅವರ ಪಕ್ಷದವರೇ ಭಯೋತ್ಪಾದಕರನ್ನು ಬ್ರದರ್ಸ್ ಅಂತಾ ಕರಿತಾರೇ ಎಣದಯ ಬಿಜೆಪಿ ಎಂಎಲ್ಸಿ ಸಿಟಿ ರವಿ ಆಕ್ರೋಶ ಹೊರಹಾಕಿದರು. ಮೋದಿ ಭಯೋಫತ್ಪಾದಕ ಎಂಬ ಮಲ್ಲಿಕಾರ್ಜುನ್ ಖರ್ಗೆ ಚಿಕ್ಕಮಗಳೂರಿನಲ್ಲಿ ಸಿಟಿ ರವಿ ತಿರುಗೇಟು ನೀಡಿದರು. ಖರ್ಗೇ ಅವರೇ ನೀವು ಮಾನಸಿಕ ಅಸ್ವಸ್ಥರ ರೀತಿ ಹೇಳಿಕೆಯನ್ನು ನೀಡುತ್ತಿದ್ದೀರಿ. ನಿಮ್ಮ ಹೇಳಿಕೆ 6 ದಶಕಗಳ ರಾಜಕೀಯ ಅನುಭವಕ್ಕೆ ತಕ್ಕದ್ದಾಗಿಲ್ಲ. ನಿಜವಾದ ಭಯೋತ್ಪಾದಕರನ್ನು ನಿಮ್ಮ ಪಕ್ಷದ ಮುಖಂಡರು ಬ್ರದರ್ಸ್ ಎಂದು ಕರೆಯುತ್ತಾರೆಂದು ತಿರುಗೇಟು ನೀಡಿದರು.
ಬೆಂಗಳೂರು: ಸಿಎಂ ಸಿದ್ದರಾಮಯ್ಯನವರಿಗೆ ಅವರ ಪಕ್ಷದವರೇ ಮಾಟ ಮಂತ್ರ ಮಾಡಿಸಿರಬೇಕು ಎಂದು ವಿಪಕ್ಷ ನಾಯಕ ಆರ್ ಅಶೋಕ್ ವ್ಯಂಗ್ಯ ಮಾಡಿದ್ದಾರೆ. ಇತ್ತೀಚೆಗೆ ಹಿರಿಯ ಕಾಂಗ್ರೆಸ್ ಶಾಸಕ ಎನ್ ರಾಜಣ್ಣ ಸಿದ್ದರಾಮಯ್ಯನವರು ಯಾಕೋ ಸೈಲೆಂಟ್ ಆಗಿದ್ದಾರೆ. ಅವರು ಮೌನವಾಗಿದ್ದಾರೆ. ಅವರಿಗೆ ಮಾಟ ಮಂತ್ರ ಮಾಡಿಸಿರಬೇಕು ಎಂದು ಹೇಳಿಕೆ ನೀಡಿದ್ದರು. ಅವರ ಹೇಳಿಕೆಗೆ ಆರ್ ಅಶೋಕ್ ಇಂದು ಪ್ರತಿಕ್ರಿಯಿಸಿದ್ದಾರೆ. ‘ರಾಜಣ್ಣ ಹೇಳಿದ್ಮೇಲೆ ಅದು ಸತ್ಯ ಅಂತಾನೇ ಲೆಕ್ಕ. ಅನುಮಾನವೇ ಬೇಡ. ಸಿದ್ದರಾಮಯ್ಯನವರು ಮಾಟ ಮಂತ್ರ ನಂಬಲ್ಲ ಅಂತಾರೆ. ರಾಜಣ್ಣ ಹೇಳಿರೋದು ಕಾಂಗ್ರೆಸ್ ನವರೇ ಮಾಡಿಸಿದ್ದಾರೆ ಅಂತ.
ನವದೆಹಲಿ: ನಿನ್ನೆಯಷ್ಟೇ ಬಹುತೇಕ ಮಹಿಳಾ ಸಂಸದರು ಪುರುಷ ನಾಯಕರೊಂದಿಗೆ ಹಾಸಿಗೆ ಹಂಚಿಕೊಂಡ ಬಳಿಕವಷ್ಟೇ ರಾಜಕೀಯಕ್ಕೆ ಎಂಟ್ರಿ ಕೊಡುತ್ತಾರೆ ಎಂದು ವಿವಾದ ಸೃಷ್ಟಿಸಿದ್ದ ಸಂಸದ ಪಪ್ಪು ಯಾದವ್ ಈಗ ಪುರುಷ ಸಂಸದರು ಪೋರ್ನ್ ವಿಡಿಯೋ ನೋಡ್ತಾರೆ ಎಂದು ಮತ್ತೆ ವಿವಾದಿತ ಹೇಳಿಕೆ ನೀಡಿದ್ದಾರೆ. ನಿನ್ನೆ ಪಪ್ಪು ಯಾದವ್ ನೀಡಿದ ಹೇಳಿಕೆ ವಿರುದ್ಧ ಮಹಿಳಾ ಆಯೋಗ ಕಿಡಿ ಕಾರಿತ್ತು. ಅಲ್ಲದೆ ಅವರ ವಿರುದ್ಧ ಕ್ರಮಕ್ಕೆ ನೋಟಿಸ್ ನೀಡಿತ್ತು. ಮಹಿಳಾ ಸಂಸದರ ಬಗ್ಗೆ ಹಗುರವಾಗಿ ಹೇಳಿಕೆ ನೀಡಿದ ಪಪ್ಪು ಯಾದವ್ ಬಗ್ಗೆ ಭಾರೀ ಆಕ್ರೋಶ ವ್ಯಕ್ತವಾಗಿತ್ತು.
ಬೆಂಗಳೂರು: ಅಡಿಕೆ ಬೆಲೆ ಕಳೆದ ವಾರ ಏರಿಕೆ-ಇಳಿಕೆಯಾಗಿತ್ತು. ಕಳೆದ ವಾರದಂತೆ ಈ ವಾರವೂ ಅದೇ ಟ್ರೆಂಡ್ ಮುಂದುವರಿದಿದೆ. ಇಂದು ಅಡಿಕೆ ಮತ್ತು ಕಾಳು ಮೆಣಸು, ಕೊಬ್ಬರಿ ದರ ಹೇಗಿದೆ ಇಲ್ಲಿದೆ ವಿವರ. ಕಳೆದ ವಾರ ಅಡಿಕೆ ಬೆಲೆಯಲ್ಲಿ ಕೊಂಚ ಏರಿಳಿಕೆಯಾಗುತ್ತಲೇ ಇತ್ತು. ಕಳೆದ ವಾರ ಎರಡು ದಿನ ಸತತವಾಗಿ ಬೆಲೆ ಏರಿಕೆ ಕಂಡುಬರುತ್ತಿತ್ತು. ಅಡಿಕೆ ಬೆಲೆಯಲ್ಲಿ ಇಂದು ಕೊಂಚ ಇಳಿಕೆಯಾಗಿದೆ. ಹೊಸ ಅಡಿಕೆ ಬೆಲೆ 5 ರೂ ಇಳಿಕೆಯಾಗಿದ್ದು 475 ರೂ.ಗಳಷ್ಟಿದೆ. ಹಳೆ ಅಡಿಕೆ ಬೆಲೆ ಯಥಾಸ್ಥಿತಿಯಲ್ಲಿದ್ದು 550 ರೂ. ಗಳಾಗಿದೆ. ಡಬಲ್ ಚೋಲ್ ಬೆಲೆಯೂ 550 ರೂ.ಗಳಷ್ಟಾಗಿದೆ.
ಬೆಂಗಳೂರು: ಕಳೆದ ಕೆಲವು ದಿನಗಳಿಂದ ಚಿನ್ನದ ದರ ಏರಿಕೆ, ಇಳಿಕೆಯಾಗುತ್ತಲೇ ಇದೆ. ಇಂದು ಪರಿಶುದ್ಧ ಚಿನ್ನದ ದರ ಮತ್ತುಇತರೆ ಚಿನ್ನದ ದರ ಇಳಿಕೆಯಾಗಿದೆ. ಇಂದು ಪರಿಶುದ್ಧ ಚಿನ್ನದ ದರ ಮತ್ತು ಇತರೆ ಚಿನ್ನದ ದರ ವಿವರ ಇಲ್ಲಿದೆ ನೋಡಿ. ಚಿನ್ನದ ದರ ಏರಿಕೆಕಳೆದ ವಾರ ಪರಿಶುದ್ಧ ಚಿನ್ನದ ದರ ಸತತವಾಗಿ ಬೆಲೆ ಏರಿಳಿಕೆಯಾಗುತ್ತಲೇ ಇತ್ತು. ಆದರೆ ವಾರಂತ್ಯಕ್ಕೆ ಪರಿಶುದ್ಧ ಚಿನ್ನದ ದರದಲ್ಲಿ ಕೊಂಚ ಇಳಿಕೆಯಾಗಿತ್ತು. ಪರಿಶುದ್ಧ ಚಿನ್ನದ ದರ ವಾರಂತ್ಯಕ್ಕೆ 1,57,210.00 ರೂ.ಗಳಿತ್ತು. ಆದರೆ ಇಂದು ಇಳಿಕೆಯಾಗಿದ್ದು 1,57,110.00 ರೂ.ಗಳಷ್ಟಿದೆ.
ಅಹ್ಮದಾಬಾದ್: ಐಪಿಎಲ್ 2026 ರಲ್ಲಿ ಗುಜರಾತ್ ಟೈಟನ್ಸ್ ಪರ ಆಡುತ್ತಿರುವ ಕಗಿಸೊ ರಬಾಡ ಮೈದಾನದಲ್ಲೇ ಸಿಗರೇಟು ಸೇದಿದ್ದು ತಕ್ಷಣವೇ ಸಹಾಯಕ ಸಿಬ್ಬಂದಿಗಳು ಪ್ರಶ್ನೆ ಮಾಡಿದ್ದಾರೆ. ಪ್ರದರ್ಶನ ಮಾತ್ರವಲ್ಲ, ಮೈದಾನದಲ್ಲಿ ಆಟಗಾರರ ವರ್ತನೆ ಹೇಗಿರುತ್ತದೆ ಎನ್ನುವುದು ಮುಖ್ಯವಾಗುತ್ತದೆ. ಕಗಿಸೊ ರಬಾಡ ಗುಜರಾತ್ ಟೈಟನ್ಸ್ ನ ಅದ್ಭುತ ಬೌಲರ್. ಆದರೆ ಅವರು ಮೈದಾನದಲ್ಲಿ ಸಿಗರೇಟು ಸೇದಿ ಶಿಸ್ತು ಉಲ್ಲಂಘಿಸಿರುವುದು ವಿವಾದಕ್ಕೆ ಕಾರಣವಾಗಿದೆ. ಮುಂಬೈ ಇಂಡಿಯನ್ಸ್ ವಿರುದ್ಧ ಮೊನ್ನೆ ಗುಜರಾತ್ ಟೈಟನ್ಸ್ ಸೋಲು ಅನುಭವಿಸಿತ್ತು. ಈ ಸೋಲಿನ ಬಳಿಕ ಪೆವಿಲಿಯನ್ ಗೆ ಹೋಗುವ ಹಾದಿಯಲ್ಲಿ ಕುಳಿತುಕೊಂಡಿದ್ದ ಕಗಿಸೊ ರಬಾಡ ಪುಂಖಾನುಪುಂಖವಾಗಿ ಸಿಗರೇಟು ಸೇದುತ್ತಿದ್ದರು.
ಬೆಂಗಳೂರು: ಸರ್ಪೈಸ್ ಎಂದು ಪ್ರಿಯಕರನನ್ನು ಉಪಾಯವಾಗಿ ಕೈ ಕಟ್ಟಿಹಾಕಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಂದ ಪ್ರೇಯಸಿ ಇವಳೇ ನೋಡಿ. ಬೆಂಗಳೂರಿನ ಬ್ಯಾಡರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂತಹದ್ದೊಂದು ಧಾರುಣ ಘಟನೆ ನಡೆದಿದೆ. ಪ್ರಿಯಕರ ಕಿರಣ್ ತನ್ನಿಂದ ದೂರವಾಗುತ್ತಿದ್ದಾನೆ ಎಂದು ಅನುಮಾನಗೊಂಡ ಪ್ರೇಯಸಿ ಪ್ರೇಮಾ ವಿದೇಶೀ ಮಾದರಿಯಲ್ಲಿ ಪ್ರಪೋಸ್ ಮಾಡುವುದಾಗಿ ಹೇಳಿ ನಂಬಿಸಿ ಮನೆಗೆ ಕರೆಸಿಕೊಳ್ಳುತ್ತಾಳೆ. ಬಳಿಕ ಕೈ, ಕಾಲುಗಳನ್ನು ಹಗ್ಗದಿಂದ ಕಟ್ಟಿ, ಕಣ್ಣಿಗೆ ಬಟ್ಟೆ ಬಿಗಿದು ಪೆಟ್ರೋಲ್ ಸುರಿದು ಬೆಂಕಿ ಹಚ್ಚುತ್ತಾಳೆ. ಪರಿಣಾಮ ಕಿರಣ್ ಸ್ಥಳದಲ್ಲೇ ಜೀವಂತವಾಗಿ ಸುಟ್ಟು ಭಸ್ಮವಾಗುತ್ತಾನೆ. ಮಂಗಳ ವಾರ ಸಂಜೆ ಈ ದುರ್ಘಟನೆ ನಡೆದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.