Shorts

ನವದೆಹಲಿ: ಪಶ್ಚಿಮ ಏಷ್ಯಾ ಸಂಘರ್ಷದ ನಡುವೆ ಗಲ್ಫ್ ಪ್ರದೇಶದಾದ್ಯಂತ ನಡೆದ ಪ್ರತ್ಯೇಕ ಘಟನೆಗಳಲ್ಲಿ ಆರು ಭಾರತೀಯ ಪ್ರಜೆಗಳು ಪ್ರಾಣ ಕಳೆದುಕೊಂಡಿದ್ದಾರೆ ಮತ್ತು ಒಬ್ಬರು ನಾಪತ್ತೆಯಾಗಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಶುಕ್ರವಾರ ಹೇಳಿದ್ದಾರೆ. ಸಹಾಯ ಮತ್ತು ವಾಪಸಾತಿಗಾಗಿ ಭಾರತೀಯ ಮಿಷನ್‌ಗಳು ಸ್ಥಳೀಯ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸುತ್ತಿವೆ. ಅಂತರ ಸಚಿವಾಲಯದ ಬ್ರೀಫಿಂಗ್ ಅನ್ನು ಉದ್ದೇಶಿಸಿ ಮಾತನಾಡಿದ ಎಂಇಎ ಹೆಚ್ಚುವರಿ ಕಾರ್ಯದರ್ಶಿ (ಗಲ್ಫ್) ಅಸೀಮ್ ಆರ್ ಮಹಾಜನ್, ನಾಪತ್ತೆಯಾದ ವ್ಯಕ್ತಿಯನ್ನು ಪತ್ತೆಹಚ್ಚಲು ಮತ್ತು ಮೃತರನ್ನು ಭಾರತಕ್ಕೆ ಹಿಂದಿರುಗಿಸಲು ಹಲವಾರು ದೇಶಗಳಲ್ಲಿನ ಭಾರತೀಯ ಮಿಷನ್‌ಗಳು ಅಧಿಕಾರಿಗಳೊಂದಿಗೆ ನಿಕಟವಾಗಿ ಕೆಲಸ ಮಾಡುತ್ತಿವೆ ಎಂದು ಹೇಳಿದರು.

ಇಂದು ಶುಕ್ರವಾರವಾಗಿದ್ದು ಇಂದು ಲಕ್ಷ್ಮೀ ದೇವಿಯ ಆರಾಧನೆಗೆ ಸೂಕ್ತವಾದ ದಿನವಾಗಿದೆ. ಇಂದು ಲಕ್ಷ್ಮೀ ದೇವಿಯ ಕುರಿತಾದ ಲಕ್ಷ್ಮೀ ಅಷ್ಟೋತ್ತರ ಶತನಾಮ ಸ್ತೋತ್ರವನ್ನು ತಪ್ಪದೇ ಓದಿ.ದೇವ್ಯುವಾಚದೇವದೇವ! ಮಹಾದೇವ! ತ್ರಿಕಾಲಜ್ಞ! ಮಹೇಶ್ವರ!ಕರುಣಾಕರ ದೇವೇಶ! ಭಕ್ತಾನುಗ್ರಹಕಾರಕ! ॥ಅಷ್ಟೋತ್ತರ ಶತಂ ಲಕ್ಷ್ಮ್ಯಾಃ ಶ್ರೋತುಮಿಚ್ಛಾಮಿ ತತ್ತ್ವತಃ ॥ ಈಶ್ವರ ಉವಾಚದೇವಿ! ಸಾಧು ಮಹಾಭಾಗೇ ಮಹಾಭಾಗ್ಯ ಪ್ರದಾಯಕಮ್ ।ಸರ್ವೈಶ್ವರ್ಯಕರಂ ಪುಣ್ಯಂ ಸರ್ವಪಾಪ ಪ್ರಣಾಶನಮ್ ॥ಸರ್ವದಾರಿದ್ರ್ಯ ಶಮನಂ ಶ್ರವಣಾದ್ಭುಕ್ತಿ ಮುಕ್ತಿದಮ್ ।ರಾಜವಶ್ಯಕರಂ ದಿವ್ಯಂ ಗುಹ್ಯಾದ್-ಗುಹ್ಯತರಂ ಪರಮ್ ॥ದುರ್ಲಭಂ ಸರ್ವದೇವಾನಾಂ ಚತುಷ್ಷಷ್ಟಿ ಕಳಾಸ್ಪದಮ್ ।ಪದ್ಮಾದೀನಾಂ ವರಾಂತಾನಾಂ ನಿಧೀನಾಂ ನಿತ್ಯದಾಯಕಮ್ ॥ಸಮಸ್ತ ದೇವ ಸಂಸೇವ್ಯಂ ಅಣಿಮಾದ್ಯಷ್ಟ ಸಿದ್ಧಿದಮ್ ।ಕಿಮತ್ರ ಬಹುನೋಕ್ತೇನ ದೇವೀ ಪ್ರತ್ಯಕ್ಷದಾಯಕಮ್ ॥

ನವದೆಹಲಿ: ಕಾಂಗ್ರೆಸ್ ಜೊತೆಗಿನ ಮದುವೆ ಹಿಂಸಾತ್ಮಕವಾಗಿತ್ತು. ಹೀಗಾಗಿ ವಿಚ್ಛೇದನ ಪಡೆಯಬೇಕಾಯ್ತು ಎಂದು ರಾಜ್ಯಸಭೆಯಲ್ಲಿ ಇಂದು ಮಲ್ಲಿಕಾರ್ಜುನ ಖರ್ಗೆಗೆ ದೇವೇಗೌಡರು ತಿರುಗೇಟು ನೀಡಿದ್ದಾರೆ. ರಾಜ್ಯಸಭೆಯಲ್ಲಿ ಇಂದು ನಿವೃತ್ತಿ ಹೊಂದುತ್ತಿರುವ ಸದಸ್ಯರಿಗೆ ಬೀಳ್ಕೊಡುಗೆ ಸಮಾರಂಭವಿತ್ತು. ಈ ವೇಳೆ ಮಾತನಾಡಿದ್ದ ಮಲ್ಲಿಕಾರ್ಜುನ ಖರ್ಗೆ ಹಾಸ್ಯ ಮತ್ತು ವ್ಯಂಗ್ಯವಾಗಿ ದೇವೇಗೌಡರು ನಮ್ಮನ್ನು ಪ್ರೀತಿಸಿದರು. ಆದರೆ ನಂತರ ಮೋದಿಯವರನ್ನು ಮದುವೆಯಾದರು ಎಂದಿದ್ದರು. ಆದರೆ ಖರ್ಗೆ ಮಾತನಾಡುವಾಗ ದೇವೇಗೌಡರು ಇರಲಿಲ್ಲ. ಹೀಗಾಗಿ ಸೋಷಿಯಲ್ ಮೀಡಿಯಾದಲ್ಲಿ ಇದಕ್ಕೆ ತಮ್ಮದೇ ಶೈಲಿಯಲ್ಲಿ ತಿರುಗೇಟು ನೀಡಿದ್ದಾರೆ. ಕಾಂಗ್ರೆಸ್ ಜೊತೆಗಿನ ಮದುವೆ ಹಿಂಸಾತ್ಮಕವಾಗಿತ್ತು. ಹೀಗಾಗಿ ವಿಚ್ಛೇದನ ಪಡೆದೆ ಎಂದಿದ್ದಾರೆ.

ಹೈದರಾಬಾದ್: ಐಪಿಎಲ್ 2026 ರಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡವನ್ನು ಮುನ್ನಡೆಸಲು ಹೊಸ ನಾಯಕನನ್ನು ಫ್ರಾಂಚೈಸಿ ಘೋಷಿಸಿದೆ. ಟೀಂ ಇಂಡಿಯಾ ಆಟಗಾರನಿಗೆ ಅದೃಷ್ಟ ಖುಲಾಯಿಸಿದೆ. ಸನ್ ರೈಸರ್ಸ್ ಹೈದರಾಬಾದ್ ತಂಡಕ್ಕೆ ಆಸ್ಟ್ರೇಲಿಯಾ ಮೂಲದ ಪ್ಯಾಟ್ ಕುಮಿನ್ಸ್ ನಾಯಕರಾಗಿದ್ದರು. ಕಳೆದ ಆವೃತ್ತಿಯಲ್ಲಿ ಅವರೇ ತಂಡವನ್ನು ಮುನ್ನಡೆಸಿದ್ದರು. ಆದರೆ ಈ ಆವೃತ್ತಿಯಲ್ಲಿ ಅವರು ಬೆನ್ನು ನೋವಿನ ಕಾರಣದಿಂದ ಅಲಭ್ಯರಾಗಿದ್ದಾರೆ. ಈ ಕಾರಣಕ್ಕೆ ಹೊಸ ನಾಯಕನನ್ನು ಆಯ್ಕೆ ಮಾಡಲಾಗಿದೆ. ಟೀಂ ಇಂಡಿಯಾದ ಇಶಾನ್ ಕಿಶನ್ ಹೈದರಾಬಾದ್ ತಂಡವನ್ನು ಮುನ್ನಡೆಸಲಿದ್ದಾರೆ. ಕಳೆದ ಆವೃತ್ತಿಯಲ್ಲೂ ಇಶಾನ್ ಹೈದರಾಬಾದ್ ಪರ ಆಡಿದ್ದರು. ಇತ್ತೀಚೆಗೆ ನಡೆದ ಟಿ20 ವಿಶ್ವಕಪ್ ನಲ್ಲಿ ಇಶಾನ್ ಕಿಶನ್ ಅದ್ಭುತ ಪ್ರದರ್ಶನ ನೀಡಿದ್ದರು.