Shorts

ಬೆಂಗಳೂರು: ಅಡುಗೆ ಹಾಗೂ ವಾಣಿಜ್ಯ ಸಿಲಿಂಡರ್‌ಗೆ ದೇಶದಲ್ಲಿ ಯಾವುದೇ ಕೊರತೆ ಇಲ್ಲ. ಆದರೆ ಸಿಲಿಂಡರ್ ಪೂರೈಕೆ ವಿಷಯದಲ್ಲಿ ಕಾಂಗ್ರೆಸ್, ಜನರನ್ನು ತಪ್ಪು ದಾರಿಗೆ ಎಳೆಯುವ ಪ್ರಯತ್ನ ಮಾಡುತ್ತಾ ಇದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಆರೋಪಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಗ್ಯಾಸ್ ಸಿಲಿಂಡರ್ ಸಂಬಂಧ ಜನರನ್ನು ಗೊಂದಲಕ್ಕೀಡು ಮಾಡುವ ಪ್ರಯತ್ನವನ್ನು ಕಾಂಗ್ರೆಸ್ ಮಾಡುತ್ತಾ ಇದೆ. ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಕೊರತೆ ಸಹ ಆಗುತ್ತದೆ ಎಂದು ರಾಹುಲ್ ಗಾಂಧಿ ಅವರು ನಿನ್ನೆ ಹೇಳಿದ್ದಾರೆ. ಇದು ಸುಳ್ಳು. ಇಡೀ ದೇಶದಲ್ಲಿ ಈಗಲೂ ಮತ್ತು ಮುಂದೆಯೂ ಪೆಟ್ರೋಲಿಯಂ ಉತ್ಪನ್ನಗಳ ಕೊರತೆ ಆಗುವುದಿಲ್ಲ. ಕೊರತೆ ಆಗದಂತೆ ಪ್ರಧಾನಿ

ಕಾಠ್ಮಂಡು: ನೇಪಾಳ ಚುನಾವಣೆಯಲ್ಲಿ ಬಾಲೇಂದ್ರ ಶಾ ಅವರು ಝಾಪಾ-5 ಕ್ಷೇತ್ರದಿಂದ ಅಭೂತಪೂರ್ವ ಗೆಲುವು ಸಾಧಿಸಿದ್ದಾರೆ. ಈಗ ಅವರು ಪ್ರಧಾನಿ ಹುದ್ದೆಯ ರೇಸ್‌ನಲ್ಲಿದ್ದಾರೆ.ನೇಪಾಳದಲ್ಲಿ ವಿದ್ಯಾರ್ಥಿಗಳ ದಂಗೆಯ ಬಳಿಕ ಪ್ರಧಾನಿಯಾಗಿದ್ದ ಕೆ.ಪಿ. ಓಲಿ ಅವರು ರಾಜೀನಾಮೆ ಸಲ್ಲಿಸಿ ಕೆಳಗಿಳಿದರು. ಬಳಿಕ ನಡೆದ ಚುನಾವಣೆಯಲ್ಲಿ ಬಾಲೇಂದ್ರ ಶಾ ಪ್ರತಿನಿಧಿಸುತ್ತಿರುವ ಪಕ್ಷವು ಬಹುಮತ ಪಡೆದಿದೆ. ಈಗ ಬಾಲೇಂದ್ರ ಅವರೇ ಪ್ರಧಾನಿಯಾಗುತ್ತಾರೆ ಎನ್ನಲಾಗುತ್ತಿದೆ. ವಿಶೇಷವೆಂದರೆ ಬಾಲೇಂದ್ರ ಅವರು ಪುನೀತ್‌ರಾಜ್‌ ಕುಮಾರ್‌ ಅವರ ಅಪ್ಪಟ ಅಭಿಮಾನಿ. 35 ವರ್ಷದ ಅವರು 2016 ರಿಂದ 2018ರ ಅವಧಿಯಲ್ಲಿ ಬೆಂಗಳೂರಿನಲ್ಲಿ ವಾಸಿಸುತ್ತಿದ್ದರು. ನಿಟ್ಟೆ ಮೀನಾಕ್ಷಿ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಸ್ಟ್ರಕ್ಚರಲ್ ಎಂಜಿನಿಯರಿಂಗ್‌ನಲ್ಲಿ ಸ್ನಾತಕೋತ್ತರ ಪದವಿ ಪಡೆದುಕೊಂಡಿದ್ದಾರೆ.

ಲಖನೌ: ಭಾರತ ತಂಡದ ಅನುಭವಿ ಸ್ಪಿನ್ನರ್‌ ಕುಲದೀಪ್ ಯಾದವ್ ಇದೇ ಶನಿವಾರ ಹೊಸ ಇನಿಂಗ್ಸ್‌ ಆರಂಭಿಸಲಿದ್ದಾರೆ. ಮಾರ್ಚ್ 14 ರಂದು ಮಸ್ಸೂರಿಯ ರೆಸಾರ್ಟ್‌ನಲ್ಲಿ ತಮ್ಮ ಬಾಲ್ಯದ ಗೆಳತಿ ವಂಶಿಕಾ ಅವರೊಂದಿಗೆ ವಿವಾಹವಾಗಲಿದ್ದಾರೆ. ಟಿ20 ವಿಶ್ವಕಪ್‌ ಗೆದ್ದ ತಂಡದಲ್ಲಿದ್ದ ಕುಲದೀಪ್‌ ಅವರ ಮದುವೆಗೆ ಭರ್ಜರಿ ಸಿದ್ಧತೆಗಳು ನಡೆಯುತ್ತಿದೆ. ಈ ವಿವಾಹ ಕಾರ್ಯಕ್ರಮಕ್ಕೆ ಗಣ್ಯರನ್ನು ಆಹ್ವಾನಿಸಲಾಗಿದೆ. ಭಾರತದ ಸ್ಟಾರ್‌ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಭಾಗವಹಿಸುವ ಸಾಧ್ಯತೆಯಿದೆ. ಕೊಹ್ಲಿ, ರೋಹಿತ್ ಮತ್ತು ವೇಗಿ ಜಸ್‌ಪ್ರೀತ್‌ ಬುಮ್ರಾ ಸೇರಿದಂತೆ ಹಲವಾರು ಕ್ರಿಕೆಟಿಗರು ದಂಪತಿ ಸಮೇತವಾಗಿ ನಿರೀಕ್ಷೆಯಿದೆ. ಕುಲದೀಪ್ ಮದುವೆಗಾಗಿ ಇಡೀ ಹೋಟೆಲ್ ಅನ್ನು ಬುಕ್ ಮಾಡಲಾಗಿದೆ. ದಿ ಸವೊಯ್‌ನಲ್ಲಿ ಸುಮಾರು 80 ಕೊಠಡಿಗಳನ್ನು ಕಾಯ್ದಿರಿಸಲಾಗಿದೆ ಎಂದು ಹೋಟೆಲ್ ಆಡಳಿತ ಮಂಡಳಿ ದೃಢಪಡಿಸಿದೆ.

ಶುಕ್ರವಾರ ಮಹಾಲಕ್ಷ್ಮೀ ದೇವಿಗೆ ವಿಶೇಷವಾದ ದಿನವಾಗಿದೆ. ಜೀವನದಲ್ಲಿ ಸುಖ, ಸೌಖ್ಯ, ಐಶ್ವರ್ಯ, ಸಮೃದ್ಧಿಯಾಗಬೇಕೆಂದರೆ ಲಕ್ಷ್ಮೀ ದೇವಿಯ ಪೂಜೆ ಮಾಡಿ. ಇಂದು ಲಕ್ಷ್ಮೀ ದೇವಿಯ ಕಲ್ಯಾಣವೃಷ್ಟಿ ಸ್ತವಃ ಸ್ತೋತ್ರವನ್ನು ಓದಿ.ಕಲ್ಯಾಣವೃಷ್ಟಿಭಿರಿವಾಮೃತಪೂರಿತಾಭಿ--ರ್ಲಕ್ಷ್ಮೀಸ್ವಯಂವರಣಮಂಗಲದೀಪಿಕಾಭಿಃ ।ಸೇವಾಭಿರಂಬ ತವ ಪಾದಸರೋಜಮೂಲೇನಾಕಾರಿ ಕಿಂ ಮನಸಿ ಭಾಗ್ಯವತಾಂ ಜನಾನಾಮ್ ॥ 1 ॥ ಏತಾವದೇವ ಜನನಿ ಸ್ಪೃಹಣೀಯಮಾಸ್ತೇತ್ವದ್ವಂದನೇಷು ಸಲಿಲಸ್ಥಗಿತೇ ಚ ನೇತ್ರೇ ।ಸಾಂನಿಧ್ಯಮುದ್ಯದರುಣಾಯುತಸೋದರಸ್ಯತ್ವದ್ವಿಗ್ರಹಸ್ಯ ಪರಯಾ ಸುಧಯಾಪ್ಲುತಸ್ಯ ॥ 2 ॥ ಈಶತ್ವನಾಮಕಲುಷಾಃ ಕತಿ ವಾ ನ ಸಂತಿಬ್ರಹ್ಮಾದಯಃ ಪ್ರತಿಭವಂ ಪ್ರಲಯಾಭಿಭೂತಾಃ ।ಏಕಃ ಸ ಏವ ಜನನಿ ಸ್ಥಿರಸಿದ್ಧಿರಾಸ್ತೇಯಃ ಪಾದಯೋಸ್ತವ ಸಕೃತ್ಪ್ರಣತಿಂ ಕರೋತಿ ॥ 3 ॥

ನವದೆಹಲಿ: ಇಸ್ರೇಲ್- ಅಮೆರಿಕ ಹಾಗೂ ಇರಾನ್ ನಡುವೆ ನಡೆಯುತ್ತಿರುವ ಯುದ್ಧದ ನಡುವೆಯೂ ಭಾರತದ ತೈಲ ಟ್ಯಾಂಕರ್‌ ಮುಂಬೈಗೆ ಬಂದಿದೆ. ಇದು ವಿಶ್ವಮಟ್ಟದಲ್ಲಿ ದೊರೆದ ದೊಡ್ಡ ರಾಜತಾಂತ್ರಿಕ ಗೆಲುವು ಎಂದು ಬಣ್ಣಿಸಲಾಗುತ್ತಿದೆ. ಕಂಟೈನರ್‌ ಹಡಗುಗಳಿಗೆ ಹಾರ್ಮುಜ್ ಜಲಸಂಧಿಯ ಮೂಲಕ ಸಂಚರಿಸಲು ಇರಾನ್‌ ಅನುಮತಿ ನೀಡಿದೆ. ವಿದೇಶಾಂಗ ಸಚಿವ ಎಸ್. ಜೈಶಂಕರ್ ಮತ್ತು ಇರಾನ್‌ ವಿದೇಶಾಂಗ ಸಚಿವ ಸಯ್ಯದ್ ಅಬ್ಬಾಸ್ ಅರಾಗ್ಚಿ ನಡುವಿನ ದೂರವಾಣಿ ಮಾತುಕತೆಯ ನಂತರ ಅನುಮತಿ ಸಿಕ್ಕಿದೆ. ಇದಾದ ನಂತರ ಭಾರತೀಯ ಟ್ಯಾಂಕರ್‌ಗಳು ಹಾರ್ಮುಜ್ ಜಲಸಂಧಿಯ ಮೂಲಕ ಸುರಕ್ಷಿತವಾಗಿ ಹಾದುಹೋಗುತ್ತಿವೆ ಎಂದು ವರದಿಯಾಗಿದೆ. ಈ ಮಧ್ಯೆ ಹಾರ್ಮುಜ್ ಜಲಸಂಧಿಯಿಂದ ಕಚ್ಚಾ ತೈಲ ಹೊತ್ತ ಹಡಗು ಭಾರತಕ್ಕೆ ಆಗಮಿಸಿದೆ. ಸೌದಿ ಅರೇಬಿಯಾದಿಂದ ಕಚ್ಚಾ ತೈಲವನ್ನು ಹೊತ್ತ ಲೈಬೀರಿಯನ್ ಧ್ವಜದ ಟ್ಯಾಂಕರ್ ಮುಂಬೈ ಬಂದರಿಗೆ ಬಂದಿದೆ.

ನವದೆಹಲಿ: ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರ ವಿರುದ್ಧ ಪ್ರತಿಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವನ್ನು ಬುಧವಾರ ಧ್ವನಿ ಮತದ ಮೂಲಕ ಸೋಲಿಸಲಾಯಿತು. ಇದರಿಂದ ಪ್ರತಿಪಕ್ಷಗಳಿಗೆ ತೀವ್ರ ಮುಖಭಂಗವಾಗಿದೆ.ಇದರಿಂದ ಆತ್ಮವಿಶ್ವಾಸ ವೃದ್ಧಿಸಿಕೊಂಡಿರುವ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ವಿಪಕ್ಷಗಳಿಗೆ ಖಡಕ್‌ ಸಂದೇಶ ರವಾನಿಸಿದ್ದಾರೆ. ಯಾರು ಒಪ್ಪಿದರೂ, ಒಪ್ಪದೇ ಹೋದರೂ ನಿಯಮಗಳ ಪ್ರಕಾರವೇ ಲೋಕಸಭೆ ಕಾರ್ಯನಿರ್ವಹಿಸಲಿದೆ. ಭವಿಷ್ಯದಲ್ಲೂ ಹಾಗೆಯೇ ಮುಂದುವರೆಯುತ್ತದೆ ಎಂದುಹೇಳಿದ್ದಾರೆ.ಲೋಕಸಭೆಯ ಕಾರ್ಯವೈಖರಿ ನಿಯಮಾನುಸಾರ ನಡೆಯುತ್ತಿದೆ. ಮುಂದೆಯೂ ಇದೇ ರೀತಿಯಲ್ಲಿ ನಡೆಯಲಿದೆ. ನಾನು ನನ್ನ ಕರ್ತವ್ಯವನ್ನು ಪೂರ್ಣ ನಿಷ್ಠೆ, ನ್ಯಾಯಪೂರ್ಣತೆ ಮತ್ತು ಪಾರದರ್ಶಕತೆಯಿಂದ ನಿರ್ವಹಿಸುತ್ತೇನೆಂದು ತಿಳಿಸಿದರು.

ನವದೆಹಲಿ: ನ್ಯಾಷನಲ್ ಕಾನ್ಫರೆನ್ಸ್‌ನ ಮುಖಂಡ ಫಾರೂಕ್ ಅಬ್ದುಲ್ಲಾ ಅವರ ಮೇಲೆ ಬುಧವಾರ ಕೊಲೆ ಯತ್ನ ನಡೆದಿದೆ. ಅದರ ಬೆನ್ನಲ್ಲೇ ಕೇಂದ್ರ ಸರ್ಕಾರದ ವಿರುದ್ಧ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮುಗಿಬಿದ್ದಿದ್ಧರೆ. ಕಾಶ್ಮೀರದ ಜನರು ನಿಮ್ಮ ಆಡಳಿತದಲ್ಲಿ ಸುರಕ್ಷಿತವಾಗಿಲ್ಲ ಎಂದು ರಾಜ್ಯ ಸಭೆಯ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ನರೇಂದ್ರ ಮೋದಿ ಸರ್ಕಾರದ ವಿರುದ್ಧ ರಾಜ್ಯಸಭೆಯಲ್ಲಿ ಗುರುವಾರ ಆರೋಪಿಸಿದ್ದಾರೆ. ಮದುವೆ ಸಮಾರಂಭಕ್ಕೆ ತೆರಳಿದ್ದ ವೇಳೆ ನ್ಯಾಷನಲ್‌ ಕಾನ್ಫರೆನ್ಸ್‌(ಎನ್‌ಸಿ) ಅಧ್ಯಕ್ಷ ಫಾರೂಕ್‌ ಅಬ್ದುಲ್ಲಾ ಹಾಗೂ ಜಮ್ಮು–ಕಾಶ್ಮೀರದ ಉಪಮುಖ್ಯಮಂತ್ರಿ ಸುರೀಂದರ್ ಚೌಧರಿ ಅವರ ಮೇಲೆ ಬಂದೂಕುಧಾರಿಯೊಬ್ಬ ಗುಂಡಿನ ದಾಳಿ ನಡೆಸಲು ಯತ್ನಿಸಿದ ಘಟನೆ ಬುಧವಾರ ರಾತ್ರಿ ನಡೆದಿದೆ.

ಟೆಹ್ರಾನ್: ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧಕ್ಕೆ ಮಹತ್ವದ ಟ್ವಿಸ್ಟ್ ಸಿಕ್ಕಿದೆ. ನಾವು ಯುದ್ಧ ಕೊನೆಗೊಳಿಸಲು ರೆಡಿ ಎಂದು ಇರಾನ್ ಹೇಳಿದೆ. ಆದರೆ ಇದಕ್ಕೆ ಷರತ್ತೂ ವಿಧಿಸಿದೆ. ಇರಾನ್ ಮೇಲೆ ಇಸ್ರೇಲ್ ಮತ್ತು ಅಮೆರಿಕಾ ಜಂಟಿಯಾಗಿ ನಡೆಸುತ್ತಿರುವ ದಾಳಿಯಿಂದ ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಯುದ್ಧದ ಪರಿಣಾಮ ಭಾರತ ಸೇರಿದಂತೆ ಜಗತ್ತಿನ ಬಹುತೇಕ ರಾಷ್ಟ್ರಗಳಿಗೆ ತಟ್ಟಿದೆ. ಈ ನಡುವೆ ಮೊನ್ನೆ ಡೊನಾಲ್ಡ್ ಟ್ರಂಪ್ ಯುದ್ಧ ಸದ್ಯದಲ್ಲೇ ಕೊನೆಯಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದರು. ಇದೀಗ ಇರಾನ್ ಇದಕ್ಕೆ ಪ್ರತ್ಯುತ್ತರ ನೀಡಿದ್ದು ಯುದ್ಧ ಕೊನೆಗೊಳಿಸಲು ನಾವು ರೆಡಿ, ಆದರೆ ಮೂರು ಷರತ್ತುಗಳನ್ನು ಒಪ್ಪಿಬೇಕು ಎಂದು ಬೇಡಿಕೆ ಮುಂದಿಟ್ಟಿದೆ.