Shorts

ಇಸ್ಲಾಮಾಬಾದ್: ಒಂದೆಡೆ ತನ್ನ ಮಧ್ಯಸ್ಥಿಕೆಯಲ್ಲಿ ಇರಾನ್, ಅಮೆರಿಕಾ ನಡುವೆ ಮಾತುಕತೆ ನಡೆಸಲು ವೇದಿಕೆ ಸಿದ್ಧ ಮಾಡುತ್ತಿದ್ದರೆ ಇತ್ತ ಪಾಕಿಸ್ತಾನ ಸಚಿವ ಆಸಿಫ್ ಖ್ವಾಜಾ ಇಸ್ರೇಲ್ ಗೆ ಶಾಪ ಹಾಕಿದ್ದಾರೆ. ಮಾತುಕತೆಗೆ ಸಿದ್ಧತೆ ನಡೆಯುತ್ತಿರುವಾಗಲೇ ಇಸ್ರೇಲ್ ಮತ್ತು ಪಾಕಿಸ್ತಾನ ನಡುವೆ ವಾಗ್ವಾದ ತಾರಕಕ್ಕೇರಿದೆ. ಅಮೆರಿಕಾ ಮತ್ತು ಇರಾನ್ ನಡುವೆ ಸಂಧಾನ ನಡೆಸಿ ರಾಜಿ ಮಾಡಿಸಿದ್ದು ತಾನೇ ಎಂದು ಬೀಗುತ್ತಿರುವ ಪಾಕಿಸ್ತಾನಕ್ಕೆ ಇಸ್ರೇಲ್ ಮಗ್ಗುಲ ಮುಳ್ಳಾಗಿದೆ. ಪಾಕಿಸ್ತಾನದ ಮಧ್ಯಸ್ಥಿಕೆಯನ್ನು ಇಸ್ರೇಲ್ ತಳ್ಳಿ ಹಾಕಿದೆ. ಇದರ ನಡುವೆಯೇ ಪಾಕಿಸ್ತಾನದ ಸಚಿವ ಆಸಿಫ್ ಖ್ವಾಜಾ ಯುರೋಪಿನ ಯಹೂದಿಗಳಿಂದ ಮುಕ್ತಿ ಪಡೆಯಲು ಪ್ಯಾಲೆಸ್ತೀನ್ ಭೂಮಿಯಲ್ಲಿ ಈ ಕ್ಯಾನ್ಸರ್ ಕಾರಕ ದೇಶವನ್ನು ಸೃಷ್ಟಿಸಿದವರು

ಮುಂಬೈ: ಮಾಜಿ ಉಪಮುಖ್ಯಮಂತ್ರಿ ಅಜಿತ್‌ ಪವಾರ್‌ ಸಾವಿನಿಂದ ತೆರವಾದ ಬಾರಾಮತಿ ವಿಧಾನಸಭಾ ಉಪಚುನಾವಣೆಯಿಂದ ಕಾಂಗ್ರೆಸ್‌ ಹಿಂದೆ ಸರಿದಿದೆ. ಇದರಿಂದಾಗಿ ಸುನೇತ್ರಾ ಪವಾರ್ ಅವರ ಅವಿರೋಧ ಆಯ್ಕೆ ಬಹುತೇಕ ಖಚಿತವಾಗಿದೆ.ಎನ್‌ಸಿಪಿ ನಾಯಕ ಅಜಿತ್ ಪವಾರ್ ಅಕಾಲಿಕ ನಿಧನದ ಬಳಿಕ ತೆರವಾದ ಬಾರಾಮತಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಕಣದಿಂದ ಕೊನೆಗೂ ಕಾಂಗ್ರೆಸ್ ಹಿಂದೆ ಸರಿದಿದೆ. ಹೀಗಾಗಿ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸುನೇತ್ರಾ ಪವಾರ್ ಅವರು ಅವಿರೋಧವಾಗಿ ಆಯ್ಕೆಯಾಗಲಿದ್ದಾರೆ.ನಾಮಪತ್ರ ಹಿಂಪಡೆಯಲು ಕೊನೆಯ ದಿನವಾದ ಇಂದು ಕಾಂಗ್ರೆಸ್, ಬಾರಾಮತಿ ವಿಧಾನಸಭಾ ಉಪಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಘೋಷಿಸಿದ್ದು, ಈ ಮೂಲಕ ಸುನೇತ್ರಾ ಪವಾರ್ ಅವರ ಅವಿರೋಧ ಆಯ್ಕೆಗೆ ದಾರಿ ಮಾಡಿಕೊಟ್ಟಿದೆ.