ಇಸ್ಲಾಮಾಬಾದ್: ಭಾರತ ಮತ್ತು ಪಾಕಿಸ್ತಾನ ನಡುವೆ ಫೆಬ್ರವರಿ 15 ರಂದು ನಡೆಯಬೇಕಿರುವ ಟಿ20 ವಿಶ್ವಕಪ್ ಲೀಗ್ ಪಂದ್ಯ ನಡೆಯುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ. ಈ ಮೊದಲು ಪಾಕಿಸ್ತಾನ ನಾವು ಭಾರತದ ವಿರುದ್ಧ ಪಂದ್ಯ ಬಹಿಷ್ಕರಿಸಲು ನಿರ್ಧರಿಸಿದ್ದೇವೆ ಎಂದು ಘೋಷಿಸಿತ್ತು. ಬಾಂಗ್ಲಾದೇಶ ಭಾರತಕ್ಕೆ ಬರಲು ನಿರಾಕರಿಸಿದ ಕಾರಣಕ್ಕೆ ಆ ತಂಡವನ್ನು ಟೂರ್ನಿಯಿಂದ ಹೊರಗಿಟ್ಟಿದ್ದನ್ನು ಪ್ರತಿರೋಧಿಸಿ ಪಾಕಿಸ್ತಾನ ತಂಡ ಭಾರತದ ವಿರುದ್ಧದ ಪಂದ್ಯವನ್ನು ಬಹಿಷ್ಕರಿಸುವುದಾಗಿ ಹೇಳಿತ್ತು. ಪಾಕಿಸ್ತಾನ ಪ್ರಧಾನಿ ಷಹಬಾಜ್ ಷರೀಫ್ ಅವರೇ ಈ ಹೇಳಿಕೆ ನೀಡಿದ್ದರು. ಕೊಲೊಂಬೋದಲ್ಲಿ ನಡೆಯಬೇಕಿರುವ ಈ ಪಂದ್ಯಕ್ಕೆ ಭಾರತವಂತೂ ಈಗಾಗಲೇ ಟಿಕೆಟ್ ಬುಕಿಂಗ್ ಮಾಡಿ ಹೋಗಲು ರೆಡಿಯಾಗಿದೆ.
ಮೈಸೂರು: ದರ ಏರಿಕೆ ವಿಚಾರವಾಗಿ ಕೇಂದ್ರ ಮತ್ತು ರಾಜ್ಯದ ನಡುವೆ ಜಟಾಪಟಿ ನಡೆಯುತ್ತಿರುವ ನಡುವೆಯೇ ಮೈಸೂರು ಸಂಸದ ಯದುವೀರ್ ಒಡೆಯರ್ ನಮ್ಮ ಮೆಟ್ರೋದಲ್ಲಿ ಪ್ರಯಾಣಿಸಿ ಅನುಭವ ಹಂಚಿಕೊಂಡಿದ್ದಾರೆ. ಈ ಬಗ್ಗೆ ಅವರು ಸೋಷಿಯಲ್ ಮೀಡಿಯಾದಲ್ಲಿ ವಿಡಿಯೋ ಹಂಚಿಕೊಂಡಿದ್ದಾರೆ. ಮೆಟ್ರೋ ತಡೆರಹಿತ ಪ್ರಯಾಣ ಜನರಿಗೆ ತುಂಬಾ ಅನುಕೂಲ ಎಂದಿದ್ದಾರೆ. ‘ಬೆಂಗಳೂರು ನಗರದ ಕೇಂದ್ರ ಸ್ಥಾನದಲ್ಲಿ ತುರ್ತು ಕಾರ್ಯಕ್ರಮದ ನಿಮಿತ್ತ ಶೀಘ್ರವಾಗಿ ತಲುಪಲು ನಾನು ಮೈಸೂರು ರಸ್ತೆಯಿಂದ ನಮ್ಮ ಮೆಟ್ರೊ ನೇರಳೆ ಮಾರ್ಗದ ಮೂಲಕ ಸಂಚರಿಸಿದೆ.
ಬೆಂಗಳೂರು: ಕರ್ನಾಟಕದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿರುವ ಶಕ್ತಿ ಯೋಜನೆ ಬಗ್ಗೆ ಸ್ವತಃ ಕಾಂಗ್ರೆಸ್ ನಾಯಕ ಆರ್ ವಿ ದೇಶಪಾಂಡೆಯವರೇ ವ್ಯಂಗ್ಯ ಮಾಡಿದ ವಿಡಿಯೋವೊಂದು ಈಗ ವೈರಲ್ ಆಗಿದೆ. ಈ ಹಿಂದೆಯೂ ಒಮ್ಮೆ ಆರ್ ವಿ ದೇಶಪಾಂಡೆ ಗ್ಯಾರಂಟಿ ಯೋಜನೆಯನ್ನು ಟೀಕಿಸಿ ಸುದ್ದಿಯಾಗಿದ್ದರು. ಇದೀಗ ಸಾರ್ವಜನಿಕ ಕಾರ್ಯಕ್ರಮವೊಂದರ ವೇದಿಕೆಯಲ್ಲಿ ಸಾಕಷ್ಟು ಜನರ ಮುಂದೆ ಶಕ್ತಿ ಯೋಜನೆ ಬಗ್ಗೆ ವ್ಯಂಗ್ಯ ಮಾಡಿದ್ದಾರೆ. ‘ಈವತ್ತು ಸಿದ್ದರಾಮಯ್ಯನವರು ಹೆಣ್ಮಕ್ಳಿಗೆ ಬಸ್ ಫ್ರೀ ಮಾಡ್ಬಿಟ್ಟ. ಒಳಗೆ ಹೋಗ್ಲಿಕೇ ಬರೋದಿಲ್ಲ.
ಬೆಂಗಳೂರು: ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆ ಕುರಿತು ಇಂದು ಸ್ವತಃ ಫೀಲ್ಡಿಗಿಳಿದು ಜನರ ಅಭಿಪ್ರಾಯ ಸಂಗ್ರಹಿಸಿದ ಸಂಸದ ತೇಜಸ್ವಿ ಸೂರ್ಯ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ನಮ್ಮ ಮೆಟ್ರೋ ದರ ಏರಿಕೆ ಕುರಿತಂತೆ ರಾಜ್ಯ ಮತ್ತು ಕೇಂದ್ರದ ನಡುವೆ ಜಟಾಪಟಿ ನಡೆಯುತ್ತಿದೆ. ನಿನ್ನೆಯಷ್ಟೇ ಕೇಂದ್ರ ಸಚಿವರ ಜೊತೆ ಈ ಬಗ್ಗೆ ಚರ್ಚಿಸಿರುವುದಾಗಿ ಹೇಳಿದ್ದ ಸಂಸದ ತೇಜಸ್ವಿ ಸೂರ್ಯ ಇಂದು ಆರ್ ವಿ ರೋಡ್ ಮೆಟ್ರೋ ಸ್ಟೇಷನ್ ಗೆ ಬಂದು ಜನರಿಗೆ ಜಾಗೃತಿ ಮೂಡಿಸುವ ಕೆಲಸ ಮಾಡಿದ್ದಾರೆ.
ಮುಂಬೈ: ಜೆಮಿಮಾ ರೊಡ್ರಿಗಸ್ ಗೆ ಜೀಸಸ್ ಕೈ ಹಿಡಿಯಲಿಲ್ಲ ಅದರೆ ತಿರುಪತಿ ತಿಮ್ಮಪ್ಪನ ನಂಬಿದ್ದ ಸ್ಮೃತಿ ಮಂಧಾನಗೆ ದೇವರು ಕೈ ಬಿಡಲಿಲ್ಲ. ಹೀಗೊಂದು ಸೋಷಿಯಲ್ ಮೀಡಿಯಾ ಪೋಸ್ಟ್ ಬಗ್ಗೆ ನಟ ಪ್ರಕಾಶ್ ರಾಜ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೊನ್ನೆಯಷ್ಟೇ ಡಬ್ಲ್ಯುಪಿಎಲ್ 2026 ಫೈನಲ್ ನಲ್ಲಿ ಜೆಮಿಮಾ ನಾಯಕತ್ವದ ಡೆಲ್ಲಿ ವಿರುದ್ಧ ಸ್ಮೃತಿ ಮಂಧಾನ ನಾಯಕತ್ವದ ಆರ್ ಸಿಬಿ ಗೆದ್ದು ಚಾಂಪಿಯನ್ ಆಗಿತ್ತು. ಈ ಹಿನ್ನಲೆಯಲ್ಲಿ ಕೆಲವರು ಜೆಮಿಮಾರನ್ನು ಸೋಷಿಯಲ್ ಮೀಡಿಯಾದಲ್ಲಿ ಟ್ರೋಲ್ ಮಾಡಿದ್ದಾರೆ.
ಬೆಂಗಳೂರು: ಬಿಎಂಟಿಸಿ ಬಸ್ ನಲ್ಲಿ ಕಳೆದುಹೋಗಿದ್ದ ಬ್ಯಾಗ್ ಮರಳಿ ಪಡೆದ ಮಹಿಳೆಯೊಬ್ಬರು ಕಣ್ಣೀರು ಹಾಕಿದ್ದಾರೆ. ಈ ವಿಡಿಯೋ ಈಗ ವೈರಲ್ ಆಗಿದೆ. ಬಿಎಂಟಿಸಿ ಬಸ್ ನಲ್ಲಿ ಪ್ರಯಾಣಿಸಿದ್ದ ಮಹಿಳೆಯೊಬ್ಬರು ತಮ್ಮ ಬ್ಯಾಗ್ ಮರೆತು ಹೋಗಿದ್ದರು. ಬಸ್ ನಲ್ಲಿ ಬಾಕಿಯಾದ ಬ್ಯಾಗ್ ಮತ್ತೆ ಪಡೆಯುವುದೆಂದರೆ ಈಗಿನ ಕಾಲದಲ್ಲಿ ಅದು ಅಪರೂಪದ ವಿದ್ಯಮಾನವೇ ಸರಿ. ಆದರೆ ಈ ಮಹಿಳೆಗೆ ಕಳೆದು ಹೋದ ಬ್ಯಾಗ್ ಸಿಕ್ಕಿದೆ. ಇದಕ್ಕೆ ಬಿಎಂಟಿಸಿ ಬಸ್ ಚಾಲಕ ಮತ್ತು ಕಂಡಕ್ಟರ್ ನ ಪ್ರಾಮಾಣಿಕತೆ ಕಾರಣ. ಬ್ಯಾಗ್ ಕಳೆದು ಹೋದ ಮಹಿಳೆಯನ್ನು ಹೇಗೋ ಪತ್ತೆ ಮಾಡಿ ಡ್ರೈವರ್, ಕಂಡಕ್ಟರ್ ಕರೆಸಿಕೊಂಡಿದ್ದಾರೆ.
ಮುಂಬೈ: ಟೀಂ ಇಂಡಿಯಾ ಟಿ20 ವಿಶ್ವಕಪ್ ತಂಡಕ್ಕೆ ಕೊನೆಯ ಕ್ಷಣದಲ್ಲಿ ಬದಲಿ ಆಟಗಾರನಾಗಿ ಎಂಟ್ರಿ ಕೊಟ್ಟ ವೇಗಿ ಮೊಹಮ್ಮದ್ ಸಿರಾಜ್ ಈ ಬಗ್ಗೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ್ದಾರೆ. ಸೂರ್ಯ ಭಾಯಿ ಕೊನೆಯ ಬ್ಯಾಗ್ ಪ್ಯಾಕ್ ಮಾಡು ಎಂದ್ರು. ನನಗೆ ನಂಬಕ್ಕೇ ಆಗಲಿಲ್ಲ ಎಂದಿದ್ದಾರೆ. ಟೀಂ ಇಂಡಿಯಾ ಟಿ20 ವಿಶ್ವಕಪ್ ತಂಡ ಘೋಷಿಸಿದಾಗ ಮೊಹಮ್ಮದ್ ಸಿರಾಜ್ ಇರಲಿಲ್ಲ. ಆದರೆ ಮೊದಲ ಪಂದ್ಯಕ್ಕೆ ಎರಡು ದಿನ ಬಾಕಿಯಿರುವಾಗ ವೇಗಿ ಹರ್ಷಿತ್ ರಾಣಾ ಗಾಯಗೊಂಡು ಟೂರ್ನಿಯಿಂದಲೇ ಹೊರಬಿದ್ದರು. ಹೀಗಾಗಿ ಮೊಹಮ್ಮದ್ ಸಿರಾಜ್ ರನ್ನು ಬದಲಿ ಆಟಗಾರನನ್ನಾಗಿ ತಂಡಕ್ಕೆ ಸೇರ್ಪಡೆಗೊಳಿಸಲಾಯಿತು.
ಕೆಲವರಿಗೆ ಕಾಲಿನ ಮಾಂಸಖಂಡಗಳಲ್ಲಿ ನೋವು, ಸೆಳೆತದಿಂದಾಗಿ ರಾತ್ರಿ ನಿದ್ರೆಯೇ ಬರಲ್ಲ. ಅಷ್ಟಕ್ಕೂ ಕಾಲಿನ ಮಾಂಸಖಂಡಗಳಲ್ಲಿ ನೋವು ಕಾಣಿಸಿಕೊಳ್ಳಲು ಕಾರಣಗಳೇನು ನೋಡಿ. ರಕ್ತಹೀನತೆಯ ಲಕ್ಷಣ: ಅನಿಮೀಯಾ ಅಥವಾ ರಕ್ತ ಹೀನತೆಯ ಸಮಸ್ಯೆಯಿದ್ದಾಗ ಕಾಲಿನ ಮಾಂಸಖಂಡಗಳು ಹಿಡಿದುಕೊಂಡಂತಾಗುವುದು ಅಥವಾ ನೋವು ಕಾಣಿಸಿಕೊಳ್ಳಬಹುದು.ಗಂಟು ನೋವು: ಗಂಟು ನೋವು ಅಥವಾ ಆರ್ಥರೈಟಿಸ್ ನ ಸಮಸ್ಯೆಯಿದ್ದಾಗ ಕಾಲಿಗೆ ಸರಿಯಾಗಿ ರಕ್ತ ಸಂಚಾರವಿಲ್ಲದೇ ನೋವು ಬರಬಹುದು. ವಿಟಮಿನ್ ಕೊರತೆ: ವಿಟಮಿನ್ ಬಿ12, ಪೊಟ್ಯಾಶಿಯಂ ಅಥವಾ ಮ್ಯಾಗ್ನೀಶಿಯಂ ಕೊರತೆಯಿದ್ದಾಗ ಕಾಲಿನ ಮಾಂಸಖಂಡಗಳಲ್ಲಿ ನೋವು ಕಾಣಿಸಿಕೊಳ್ಳುತ್ತದೆ.
ಬೆಂಗಳೂರು: ಕಳೆದ ಕೆಲವು ದಿನಗಳಿಂದ ಚಿನ್ನದ ದರ ಏರಿಕೆ, ಇಳಿಕೆಯಾಗುತ್ತಲೇ ಇದೆ. ಇಂದು ಪರಿಶುದ್ಧ ಚಿನ್ನದ ದರ ಇಳಿಕೆಯಾದರೆ ಮತ್ತುಇತರೆ ಚಿನ್ನದ ದರ ಯಥಾಸ್ಥಿತಿಯಲ್ಲಿದೆ. ಇಂದು ಪರಿಶುದ್ಧ ಚಿನ್ನದ ದರ ಮತ್ತು ಇತರೆ ಚಿನ್ನದ ದರ ವಿವರ ಇಲ್ಲಿದೆ ನೋಡಿ. ಚಿನ್ನದ ದರ ಏರಿಕೆಕಳೆದ ವಾರ ಪರಿಶುದ್ಧ ಚಿನ್ನದ ದರ ಸತತವಾಗಿ ದಾಖಲೆಯ ಏರಿಕೆ ಕಂಡಿತ್ತು. ಆದರೆ ಈ ವಾರದ ಆರಂಭದಲ್ಲೇ ಚಿನ್ನದ ದರ ಇಳಿಕೆಯಾಗಿತ್ತು. ಇಂದು ಪರಿಶುದ್ಧ ಚಿನ್ನದ ದರ ಇಂದು ಮತ್ತೆ ಏರಿಕೆಯಾಗಿದೆ. ಪರಿಶುದ್ಧ ಚಿನ್ನದ ದರ ನಿನ್ನೆ 1,56,380.00 ರೂ.ಗಳಿತ್ತು. ಇಂದೂ 1,59,600.00 ರೂ.ಗಳಷ್ಟಿದೆ.
ಮುಂಬೈ: ಟಿ20 ವಿಶ್ವಕಪ್ ನಲ್ಲಿ ನಿನ್ನೆ ಯುಎಸ್ಎ ವಿರುದ್ಧದ ಪಂದ್ಯದಲ್ಲಿ ಟಾಸ್ ವೇಳೆ ಮೈದಾನದಲ್ಲಿದ್ದ ರೋಹಿತ್ ಶರ್ಮಾ ಜೊತೆ ಟೀಂ ಇಂಡಿಯಾ ಕ್ಯಾಪ್ಟನ್ ಸೂರ್ಯಕುಮಾರ್ ಯಾದವ್ ಫೀಲ್ಡಿಂಗ್ ಮಾಡ್ಲಾ, ಬ್ಯಾಟಿಂಗ್ ಮಾಡ್ಲಾ ಎಂದು ಕೇಳಿದ ಫನ್ನಿ ವಿಡಿಯೋ ಒಂದು ಇಲ್ಲಿದೆ ನೋಡಿ. ನಿನ್ನೆ ಟಿ20 ವಿಶ್ವಕಪ್ ಗೆ ಚಾಲನೆ ಸಿಕ್ಕಿದೆ. ಮುಂಬೈನ ವಾಂಖೆಡೆ ಮೈದಾನದಲ್ಲಿ ಅತಿಥೇಯ ಟೀಂ ಇಂಡಿಯಾ, ಯುಎಸ್ಎ ತಂಡವನ್ನು ಎದುರಿಸಿದೆ. ಈ ಪಂದ್ಯದಲ್ಲಿ ಭಾರತ 29 ರನ್ ಗಳ ಗೆಲುವು ಸಾಧಿಸಿದೆ.
ಮುಂಬೈ: ಟಿ20 ವಿಶ್ವಕಪ್ ನ ಭಾರತ ಮತ್ತು ಯುಎಸ್ಎ ನಡುವಿನ ಪಂದ್ಯ ವೀಕ್ಷಣೆ ವೇಳೆ ರೋಹಿತ್ ಶರ್ಮಾಗೆ ಉದ್ಯಮಿ ಮುಕೇಶ್ ಅಂಬಾನಿ ಚಹಾ, ಪಕೋಡಾ ಕೊಟ್ಟರೆ ರೋಹಿತ್ ಶರ್ಮಾ ಏನು ಮಾಡಿದ್ರು ಗೊತ್ತಾ? ರೋಹಿತ್ ಈ ಬಾರಿಯ ಟಿ20 ವಿಶ್ವಕಪ್ ರಾಯಭಾರಿ. ಹೀಗಾಗಿ ನಿನ್ನೆಯ ಮೊದಲ ಪಂದ್ಯಕ್ಕೆ ಅವರು ಮೈದಾನಕ್ಕೆ ಬಂದಿದ್ದರು. ಗ್ಯಾಲರಿಯಲ್ಲಿ ಮುಕೇಶ್ ಅಂಬಾನಿ ಮತ್ತು ನೀತಾ ಅಂಬಾನಿ ದಂಪತಿ ಹಾಗೂ ಅವರ ಪುತ್ರ ಆಕಾಶ್ ಅಂಬಾನಿ ಕೂಡಾ ಇದ್ದರು. ಅವರ ಜೊತೆಗೆ ರೋಹಿತ್ ಕೂಡಾ ಕೂತು ಪಂದ್ಯ ವೀಕ್ಷಿಸಿದ್ದಾರೆ. ಪಂದ್ಯದ ನಡುವೆ ಅಂಬಾನಿ ಪ್ರೀತಿಯಿಂದ ರೋಹಿತ್ ಗೆ ಚಹಾ ಮತ್ತು ಪಕೋಡಾ ನೀಡಿದ್ದಾರೆ.
ಮುಂಬೈ: ಟಿ20 ವಿಶ್ವಕಪ್ 2026 ರ ರಾಯಭಾರಿಯಾಗಿರುವ ಟೀಂ ಇಂಡಿಯಾ ಕ್ರಿಕೆಟಿಗ ರೋಹಿತ್ ಶರ್ಮಾಗೆ ಮುಂಬೈ ಪ್ರೇಕ್ಷಕರು ಎಂಥಾ ಪ್ರೀತಿ ತೋರಿಸಿದರು ಎನ್ನುವುದಕ್ಕೆ ಈ ವಿಡಿಯೋನೇ ಸಾಕ್ಷಿ. ಮುಂಬೈ ವಾಂಖೆಡೆ ಮೈದಾನದಲ್ಲಿ ರೋಹಿತ್ ಶರ್ಮಾ ನಿನ್ನೆ ಟ್ರೋಫಿ ಹಿಡಿದುಕೊಂಡು ಬಂದು ಗೌರವ ಸಲ್ಲಿಸಿದ್ದಾರೆ. ಈ ವೇಳೆ ಟೀಂ ಇಂಡಿಯಾ ಕ್ರಿಕೆಟಿಗರು ಅವರತ್ತ ಬಂದು ಮಾತನಾಡಿಸಿದ್ದರು. ಆದರೆ ಎಲ್ಲಕ್ಕಿಂತ ಹೆಚ್ಚು ಗಮನ ಸೆಳೆದಿದ್ದು ಮುಂಬೈ ಪ್ರೇಕ್ಷಕರ ಪ್ರೀತಿ. ಮುಂಬೈ ರೋಹಿತ್ ಶರ್ಮಾ ತವರು. ಇಲ್ಲಿ ಆಡುವಾಗಲೂ ರೋಹಿತ್ ಶರ್ಮಾಗೆ ದೊಡ್ಡ ಮಟ್ಟದಲ್ಲಿ ಚಿಯರ್ ಮಾಡಲು ಪ್ರೇಕ್ಷಕರು ಬರುತ್ತಾರೆ.
ಬೆಂಗಳೂರು: ತಮ್ಮ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ನಿರ್ಮಾಪಕ ಕನಕಪುರ ಶ್ರೀನಿವಾಸ್ ಗೆ ಕಿಚ್ಚ ಸುದೀಪ್ ತಮ್ಮದೇ ಶೈಲಿಯಲ್ಲಿ ಗುಮ್ಮಿದ್ದಾರೆ.ಕನಕಪುರ ಶ್ರೀನಿವಾಸ್ ಕಿಚ್ಚ ಸುದೀಪ್, ಪ್ರೇಮ್ ಸೇರಿದಂತೆ ಹಲವು ಘಟಾನುಘಟಿಗಳಿಗೆ ಸಿನಿಮಾ ನಿರ್ಮಾಣ ಮಾಡಿದವರು. ಆದರೆ ಇತ್ತೀಚೆಗೆ ಕಾರ್ಯಕ್ರಮವೊಂದರ ವೇದಿಕೆಯಲ್ಲಿ ಜೋಗಿ ಪ್ರೇಮ್, ಕಿಚ್ಚ ಸುದೀಪ್, ದರ್ಶನ್, ಪುನೀತ್ ರಾಜ್ ಕುಮಾರ್ ಸೇರಿದಂತೆ ಎಲ್ಲಾ ನಟರ ಬಗ್ಗೆ ಕೀಳುಮಟ್ಟದ ಭಾಷೆ ಬಳಸಿ ಮಾತನಾಡಿದ್ದರು. ಇದರ ವಿರುದ್ಧ ನಿನ್ನೆ ಜೋಗಿ ಪ್ರೇಮ್ ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷೆ ಜಯಮಾಲಗೆ ಲಿಖಿತ ದೂರು ಸಲ್ಲಿಸಿದ್ದರು.
ಬೆಂಗಳೂರು: ರಾಜ್ಯದಲ್ಲಿ ಮತ್ತೆ ಸಿಎಂ ಬದಲಾವಣೆ ವಿಚಾರ ಸದ್ದು ಮಾಡುತ್ತಿದೆ. ಒಮ್ಮೆ ತಣ್ಣಗಾಗಿದ್ದ ರಾಜಕೀಯ ವಿದ್ಯಮಾನಗಳು ಈಗ ಮತ್ತೆ ಭುಗಿಲೇಳಲು ಕಾರಣಗಳು ಹಲವು ಎನ್ನಲಾಗುತ್ತಿದೆ. ಡಿಸೆಂಬರ್ ನಲ್ಲಿ ಸುಂಟರ ಗಾಳಿ ಎಬ್ಬಿಸಿದ್ದ ಸಿಎಂ ಬದಲಾವಣೆ ವಿಚಾರ ಜನವರಿ ಹೊತ್ತಿಗೆ ತಣ್ಣಗಾಗಿತ್ತು. ಹೈಕಮಾಂಡ್ ನಿಂದ ಸ್ವಲ್ಪ ದಿನ ಕಾಯುವಂತೆ ಸಂದೇಶ ಬಂದ ಹಿನ್ನಲೆಯಲ್ಲಿ ಇಷ್ಟು ದಿನ ಎರಡೂ ಬಣದ ನಾಯಕರು ಸುಮ್ಮನಿದ್ದರು ಎಂದು ಹೇಳಲಾಗುತ್ತಿದೆ. ಆದರೆ ಹೈಕಮಾಂಡ್ ಎರಡು ಅಧಿವೇಶನಗಳೇ ಮುಗಿದರೂ ಇನ್ನೂ ರಾಜ್ಯ ನಾಯಕರಿಗೆ ಬುಲಾವ್ ನೀಡದೇ ಇರುವುದು ಡಿಕೆಶಿ ಬಣದ ಅಸಮಾಧಾನಕ್ಕೆ ಕಾರಣವಾಗಿದೆ ಎನ್ನಲಾಗಿದೆ.
ಬೆಂಗಳೂರು: ರಾಜ್ಯದಲ್ಲಿ ಈಗ ಹವಾಮಾನದಲ್ಲಿ ಸಾಕಷ್ಟು ಬದಲಾವಣೆಗಳಾಗುತ್ತಿದೆ. ಇಂದು ರಾಜ್ಯದ ಹವಾಮಾನ ಹೇಗಿರಲಿದೆ ಇಲ್ಲಿದೆ ಇಂದಿನ ಹವಾಮಾನ ವರದಿ. ರಾಜ್ಯದಲ್ಲಿ ಈಗ ಹಗಲು ಬಿಸಿಲಿನ ತಾಪ ದಿನೇ ದಿನೇ ಹೆಚ್ಚಾಗುತ್ತಿದೆ. ಬೆಳಿಗ್ಗೆ 10 ರಿಂದ ಸಂಜೆ 3 ಗಂಟೆಯವರೆಗೆ ಹೊರಗೆ ಕಾಲಿಡಲಾಗದಷ್ಟು ಬಿಸಿಲಿನ ಝಳ ಕಂಡುಬರುತ್ತಿದೆ. ಆದರೆ ರಾತ್ರಿ ಚಳಿಯೂ ಇರುವುದರಿಂದ ಹೆಚ್ಚು ಸೆಖೆ ಕಂಡುಬರುತ್ತಿಲ್ಲ. ಇಂದು ಕೆಲವೆಡೆ ಭಾಗಶಃ ಮೋಡ ಕವಿದ ಮತ್ತು ಬಿಸಿಲಿನ ವಾತಾವರಣವಿರಲಿದೆ. ರಾಜ್ಯದಲ್ಲಿ ಗರಿಷ್ಠ ತಾಪಮಾನ ಇಂದು 29 ಡಿಗ್ರಿಗೆ ಏರಿಕೆಯಾಗಲಿದೆ. ಕನಿಷ್ಠ ತಾಪಮಾನ 17 ಡಿಗ್ರಿಯಷ್ಟು ಕಂಡುಬರಲಿದೆ ಎಂದು ಹವಾಮಾನ ವರದಿಗಳು ಹೇಳುತ್ತಿವೆ.
ಇಂದು ಭಾನುವಾರವಾಗಿದ್ದು ಸೂರ್ಯ ದೇವನನ್ನು ಪ್ರಾರ್ಥಿಸುವುದರಿಂದ ಒಳಿತಾಗಲಿದೆ. ಸೂರ್ಯ ದೇವನ ಅನುಗ್ರಹಕ್ಕಾಗಿ ಇಂದು ಸೂರ್ಯ ಮಂಡಲ ಸ್ತೋತ್ರವನ್ನು ಓದಿ. ಕನ್ನಡದಲ್ಲಿ ಇಲ್ಲಿದೆ.ನಮೋಽಸ್ತು ಸೂರ್ಯಾಯ ಸಹಸ್ರರಶ್ಮಯೇಸಹಸ್ರಶಾಖಾನ್ವಿತ ಸಂಭವಾತ್ಮನೇ ।ಸಹಸ್ರಯೋಗೋದ್ಭವ ಭಾವಭಾಗಿನೇಸಹಸ್ರಸಂಖ್ಯಾಯುಧಧಾರಿಣೇ ನಮಃ ॥ 1 ॥ ಯನ್ಮಂಡಲಂ ದೀಪ್ತಿಕರಂ ವಿಶಾಲಂರತ್ನಪ್ರಭಂ ತೀವ್ರಮನಾದಿರೂಪಮ್ ।ದಾರಿದ್ರ್ಯದುಃಖಕ್ಷಯಕಾರಣಂ ಚಪುನಾತು ಮಾಂ ತತ್ಸವಿತುರ್ವರೇಣ್ಯಮ್ ॥ 2 ॥ ಯನ್ಮಂಡಲಂ ದೇವಗಣೈಃ ಸುಪೂಜಿತಂವಿಪ್ರೈಃ ಸ್ತುತಂ ಭಾವನಮುಕ್ತಿಕೋವಿದಮ್ ।ತಂ ದೇವದೇವಂ ಪ್ರಣಮಾಮಿ ಸೂರ್ಯಂಪುನಾತು ಮಾಂ ತತ್ಸವಿತುರ್ವರೇಣ್ಯಮ್ ॥ 3 ॥ ಯನ್ಮಂಡಲಂ ಜ್ಞಾನಘನಂತ್ವಗಮ್ಯಂತ್ರೈಲೋಕ್ಯಪೂಜ್ಯಂ ತ್ರಿಗುಣಾತ್ಮರೂಪಮ್ ।ಸಮಸ್ತತೇಜೋಮಯದಿವ್ಯರೂಪಂಪುನಾತು ಮಾಂ ತತ್ಸವಿತುರ್ವರೇಣ್ಯಮ್ ॥ 4 ॥
ವಾಂಖೆಡೆ: ಐಸಿಸಿ ಟಿ20 ವಿಶ್ವಕಪ್ನಲ್ಲಿ ಭಾರತ ತಂಡವು ಶುಭಾರಂಭ ಮಾಡಿದೆ. ವಾಂಖೆಡೆ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಪಂದ್ಯದಲ್ಲಿ ಆತಿಥೇಯ ಭಾರತ ತಂಡವು 29 ರನ್ಗಳಿಂದ ಅಮೆರಿಕಾ ತಂಡವನ್ನು ಮಣಿಸಿ ಶುಭಾರಂಭ ಮಾಡಿದೆ.ಟಾಸ್ ಗೆದ್ದ ಅಮೆರಿಕಾ ತಂಡವು ಫೀಲ್ಡಿಂಗ್ ಆಯ್ದಕೊಂಡಿತು. ನಾಯಕ ನಿರ್ಧಾರವನ್ನು ಸಮರ್ಥಿಸುವಂತೆ ಬೌಲಿಂಗ್ ದಾಳಿ ಸಂಘಟಿಸಿದ ಅಮೆರಿಕಾ ಬೌಲರ್ಗಳು ಆರಂಭದಲ್ಲೇ ಮೇಲುಗೈ ಸಾಧಿಸಿದರು. 77 ರನ್ಗಳಿಗೆ 6 ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿದ್ದ ಭಾರತ ತಂಡಕ್ಕೆ ನಾಯಕ ಸೂರ್ಯಕುಮಾರ್ ಆಸರೆಯಾದರು. ಅವರ ಆಟದ ನೆರವಿನಿಂದ ಭಾರತ ತಂಡವು 20 ಓವರ್ಗಳಲ್ಲಿ 9 ವಿಕೆಟ್ಗೆ 161 ರನ್ ಗಳಿಸಿತು.ಅಭಿಷೇಕ್ ಶರ್ಮಾ, ಶಿವಂ ದುಬೆ ಸೊನ್ನೆ ಸುತ್ತಿದರು. ರಿಂಕು ಸಿಂಗ್, ಹಾರ್ದಿಕ್ ಪಾಂಡ್ಯ ಕೂಡಾ ನಿರಾಸೆ ಮೂಡಿಸಿದರು.
ಬಸ್ತಾರ್ (ಛತ್ತೀಸ್ಗಢ): ಮಾವೋವಾದದ ವಿರುದ್ಧದ ಭಾರತದ ಕಾರ್ಯಾಚರಣೆಗೆ ಭಾರಿ ವಿಜಯವಾಗಿ, ಛತ್ತೀಸ್ಗಢದ ಬಸ್ತಾರ್ನಲ್ಲಿ 51 ನಕ್ಸಲೀಯರು ಶರಣಾಗಿದ್ದಾರೆ. ಇವರಿಗೆ ಒಟ್ಟು 1.61 ಕೋಟಿ ಬಹುಮಾನವನ್ನು ಘೋಷಣೆ ಮಾಡಲಾಗಿದೆ. ಅಧ್ಯಕ್ಷ ದ್ರೌಪದಿ ಮುರ್ಮು ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮೂರು ದಿನಗಳ ಭೇಟಿಗಾಗಿ ರಾಯ್ಪುರಕ್ಕೆ ಆಗಮಿಸಿದ ಬಸ್ತಾರ್ ಜಿಲ್ಲೆಯ ಪ್ರಧಾನ ಕಛೇರಿಯಾದ ಜಗದಲ್ಪುರದಲ್ಲಿ ಬಸ್ತಾರ್ ಪಾಂಡುಮ್ 2026 ಉತ್ಸವದ ಉದ್ಘಾಟನೆಯೊಂದಿಗೆ ಶರಣಾಗತಿ ಹೊಂದಿಕೆಯಾಯಿತು. ಶರಣಾದ ಕಾರ್ಯಕರ್ತರಲ್ಲಿ 34 ಮಹಿಳೆಯರು ಸೇರಿದ್ದಾರೆ.ಬಿಜಾಪುರ ಜಿಲ್ಲೆಯಲ್ಲಿ 20 ಮಹಿಳೆಯರು ಸೇರಿದಂತೆ 30 ಕಾರ್ಯಕರ್ತರು ಶರಣಾದರು, 14 ಮಹಿಳಾ ಸದಸ್ಯರು ಸೇರಿದಂತೆ 21
ಬೆಳಗಾವಿ: ಕೇಂದ್ರದ ಬಿಜೆಪಿ ಸರ್ಕಾರ ರೈಲ್ವೆಯೂ ಸೇರಿದಂತೆ ಹಲವು ಯೋಜನೆಗಳನ್ನು ರಾಜ್ಯಕ್ಕೆ ನೀಡಿದ್ದರು, ರಾಜ್ಯ ಸರ್ಕಾರ ನಿಗದಿತ ಭೂಮಿ ಸ್ವಾಧೀನ ಮಾಡಿ ಕೊಡುವಲ್ಲಿ ಹಿಂದೇಟು ಹಾಕುತ್ತಿದೆ. ಈ ಹಿನ್ನೆಲೆ ಎಲ್ಲ ಯೋಜನೆಗಳು ಕುಂಟುತ್ತಾ ನಡೆಯುತ್ತಿದೆ ಎಂದು ಕೇಂದ್ರ ರೈಲ್ವೆ ರಾಜ್ಯ ಸಚಿವ ಸೋಮಣ್ಣ ಆರೋಪಿಸಿದರು.ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರವು ಬೆಳಗಾವಿ– ಕಿತ್ತೂರು– ಧಾರವಾಡ ರೈಲು ಮಾರ್ಗ, ಶಿವಮೊಗ್ಗ– ರಾಣೆಬೆನ್ನೂರ, ಗದಗ– ವಾಡಿ, ಶಿವಮೊಗ್ಗ– ಹರಿಹರ, ವೈಟ್ಫೀಲ್ಡ್– ಕೋಲಾರ, ಹಾಸನ– ಬೇಲೂರು, ತುಮಕೂರು– ದಾವಣಗೆರೆ, ಹುಬ್ಬಳ್ಳಿ– ಅಂಕೋಲಾ ಮಾರ್ಗ, ರಾಮದುರ್ಗ– ಲೋಕಾಪುರ ಮಾರ್ಗ ಹೀಗೆ ಹಲವು ಯೋಜನೆಗಳನ್ನು ಮಂಜೂರು
ಮುಂಬೈ (ಮಹಾರಾಷ್ಟ್ರ): ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಶನಿವಾರ ನಡೆದ ಐಸಿಸಿ ಟಿ20 ವಿಶ್ವಕಪ್ ಅಭಿಯಾನದ ಆರಂಭಿಕ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಭಾರತ ವಿರುದ್ಧ ಅಮೆರಿಕದ ನಾಯಕ ಮೊನಾಂಕ್ ಪಟೇಲ್ ಟಾಸ್ ಗೆದ್ದು ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಮೆನ್ ಇನ್ ಬ್ಲೂ ಅವರು USA ವಿರುದ್ಧ ತಮ್ಮ T20 ವಿಶ್ವಕಪ್ ಪ್ರಶಸ್ತಿಯನ್ನು ತನ್ನದಾಗಿಸುವಲ್ಲಿ ಟೀಂ ಇಂಡಿಯಾ ಇಂದು ಮೊದಲ ನಿರೀಕ್ಷೆಯಲ್ಲಿದೆ.
ಮುಂಬೈ: ಆರ್ಎಸ್ಎಸ್ ಯಾರ ವಿರುದ್ಧವೂ ಅಲ್ಲ, ಅದು ಅಧಿಕಾರ ಅಥವಾ ಜನಪ್ರಿಯತೆಯನ್ನು ಬಯಸುವುದಿಲ್ಲ ಎಂದು ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದರು.ಇಲ್ಲಿ ನಡೆದ ಸಾರ್ವಜನಿಕ ಸಭೆಯೊಂದರಲ್ಲಿ ಮಾತನಾಡಿದ ಭಾಗವತ್, ಸ್ವಾತಂತ್ರ್ಯ ಚಳವಳಿಯ ಸಂದರ್ಭದಲ್ಲಿ ಹೊರಹೊಮ್ಮಿದ ವಿವಿಧ ಚಿಂತನಾ ಧಾರೆಗಳನ್ನು ಉಲ್ಲೇಖಿಸಿದರು, ರಾಜಾ ರಾಮ್ ಮೋಹನ್ ರಾಯ್, ಸ್ವಾಮಿ ವಿವೇಕಾನಂದ ಮತ್ತು ದಯಾನಂದ ಸರಸ್ವತಿ ಸೇರಿದಂತೆ ಸುಧಾರಕರು ಮತ್ತು ನಾಯಕರು ಪ್ರತಿನಿಧಿಸಿದರು.
ಕೌಲಾಲಂಪುರ: ಆಗ್ನೇಯ ಏಷ್ಯಾ ರಾಷ್ಟ್ರಕ್ಕೆ ಎರಡು ದಿನಗಳ ಪ್ರವಾಸದ ಭಾಗವಾಗಿ ಮಲೇಷ್ಯಾಕ್ಕೆ ಆಗಮಿಸಿದ ನಂತರ ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ತಮ್ಮ ಮಲೇಷ್ಯಾ ಸಹವರ್ತಿ ಅನ್ವರ್ ಇಬ್ರಾಹಿಂ ಅವರೊಂದಿಗೆ ಕಾರಿನಲ್ಲಿ ಪ್ರಯಾಣಿಸಿದ್ದಾರೆ. "ಭಾರತ-ಮಲೇಷ್ಯಾ ಜನರು-ಜನರ ನಡುವಿನ ಸಂಪರ್ಕವನ್ನು ಆಚರಿಸುತ್ತಿದ್ದೇವೆ. ಪ್ರಧಾನಿ ಅನ್ವರ್ ಇಬ್ರಾಹಿಂ ಮತ್ತು ನಾನು ಕೌಲಾಲಂಪುರದಲ್ಲಿ ಸಮುದಾಯ ಕಾರ್ಯಕ್ರಮಕ್ಕೆ ಹೋಗುತ್ತಿದ್ದೇವೆ" ಎಂದು ಹೇಳಿದರು. ಮಲೇಷ್ಯಾ ರಾಜಧಾನಿಗೆ ಬಂದಿಳಿದ ನಂತರ, ಪ್ರಧಾನ ಮಂತ್ರಿ ಅನ್ವರ್ ಇಬ್ರಾಹಿಂ ಅವರು ವಿಮಾನ ನಿಲ್ದಾಣದಲ್ಲಿ ನೀಡಿದ ಆತ್ಮೀಯ
ಮೆಟ್ರೋ ಪ್ರಯಾಣ ದರ ಏರಿಕೆ ಆತಂಕದಲ್ಲಿದ್ದ ಪ್ರಯಾಣಿಕರಿಗೆ ಸಂಸದ ತೇಜಸ್ವಿ ಸೂರ್ಯ ಅವರು ಗುಡ್ನ್ಯೂಸ್ ನೀಡಿದ್ದಾರೆ. ಈ ಸಂಬಂಧ ಎಕ್ಸ್ ಪೋಸ್ಟ್ನಲ್ಲಿ ಮಾಹಿತಿ ನೀಡಿದ್ದಾರೆ. ಕೇಂದ್ರ ಗೃಹ ವ್ಯವಹಾರಗಳ ಸಚಿವ ಮನೋಹರ್ ಲಾಲ್ ಕಟ್ಟರ್ ಅವರೊಂದಿಗೆ ವಿವರವಾದ ದೂರವಾಣಿ ಸಂಭಾಷಣೆ ನಡೆಸಿದ್ದೇನೆಸೋಮವಾರದಿಂದ ಪ್ರಾರಂಭಿಸಲು ಪ್ರಸ್ತಾಪಿಸಲಾದ ರಾಜ್ಯ ಸರ್ಕಾರದ ಅನ್ಯಾಯದ ಬೆಂಗಳೂರು ಮೆಟ್ರೋ ದರ ಏರಿಕೆಯ ವಿರುದ್ಧ ತಕ್ಷಣದ ಮಧ್ಯಪ್ರವೇಶವನ್ನು ಕೋರಿದ್ದೇನೆ. ಬೆಂಗಳೂರಿನಲ್ಲಿ ಈಗಾಗಲೇ ಭಾರತದಲ್ಲಿ ಅತ್ಯಂತ ದುಬಾರಿ ಮೆಟ್ರೋ
ನವದೆಹಲಿ: ಶಬರಿಮಲೆ ಚಿನ್ನ ಕಳವು ಪ್ರಕರಣದ ತನಿಖೆ ನಡೆಸುತ್ತಿರುವ ಕೇರಳ ಹೈಕೋರ್ಟ್ ನೇಮಿಸಿದ ವಿಶೇಷ ತನಿಖಾ ತಂಡ (ಎಸ್ಐಟಿ) ಶನಿವಾರ (ಫೆಬ್ರವರಿ 7, 2026) ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸಂಚಾಲಕ ಮತ್ತು ಕಾಂಗ್ರೆಸ್ ಸಂಸದ ಅಡೂರ್ ಪ್ರಕಾಶ್ ಅವರನ್ನು ತಿರುವನಂತಪುರಂನಲ್ಲಿರುವ ಕೇರಳ ಪೊಲೀಸ್ ಕ್ರೈಂ ಬ್ರಾಂಚ್ ಪ್ರಧಾನ ಕಛೇರಿಯಲ್ಲಿ ಪ್ರಶ್ನಿಸಿತ್ತು.ಸಂವೇದನಾಶೀಲ ಪ್ರಕರಣದ ಪ್ರಧಾನ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ ಅವರೊಂದಿಗಿನ ಛಾಯಾಚಿತ್ರಗಳು ಸಾರ್ವಜನಿಕ ಡೊಮೇನ್ನಲ್ಲಿ ಕಾಣಿಸಿಕೊಂಡ ನಂತರ ಪ್ರಕಾಶ್ ಅವರು ತನಿಖೆಯಲ್ಲಿ "ಆಸಕ್ತಿಯ ವಿಷಯ" ವಾಗಿ ಹೊರಹೊಮ್ಮಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮುಂಬೈ: ಪಾಲಾಶ್ ಮುಚ್ಚಲ್ ರನ್ನು ರೋಸ್ಟ್ ಮಾಡಿ ಪೋಸ್ಟ್ ಒಂದನ್ನು ಮಾಡಿದ್ದ ಆರ್ ಸಿಬಿ ನಾಯಕಿ ಸ್ಮೃತಿ ಮಂಧಾನ ತಾಯಿ ವಿವಾದವಾಗುತ್ತಿದ್ದಂತೇ ಅದನ್ನು ಡಿಲೀಟ್ ಮಾಡಿದ್ದಾರೆ. ಪಾಲಾಶ್ ಮುಚ್ಚಲ್ ಜೊತೆಗೆ ಆರು ವರ್ಷ ಡೇಟಿಂಗ್ ಮಾಡುತ್ತಿದ್ದ ಸ್ಮೃತಿ ನವಂಬರ್ ನಲ್ಲಿ ಮದುವೆಯಾಗಬೇಕಿತ್ತು. ಆದರೆ ಮದುವೆ ದಿನವೇ ಮದುವೆ ಮುರಿದುಬಿತ್ತು. ಅದಕ್ಕೆ ಕಾರಣಗಳ ಬಗ್ಗೆ ಹಲವು ರೂಮರ್ ಗಳು ಹರಿದಾಡುತ್ತಿವೆ. ವೈಯಕ್ತಿಕ ಜೀವನದಲ್ಲಿ ಸಾಕಷ್ಟು ನೋವು ಕಂಡಿರುವ ಸ್ಮೃತಿ ಕ್ರಿಕೆಟ್ ಮೂಲಕ ಅದನ್ನು ಮರೆಯುತ್ತಿದ್ದಾರೆ. ಇದೀಗ ಡಬ್ಲ್ಯುಪಿಎಲ್ ನಲ್ಲಿ ಗರಿಷ್ಠ ರನ್ ಗಳಿಸಿ ಆರೆಂಜ್ ಕ್ಯಾಪ್ ಗಳಿಸಿದ್ದಲ್ಲದೆ, ಆರ್ ಸಿಬಿ ಚಾಂಪಿಯನ್ ಆಗುವಂತೆ ಮಾಡಿದ್ದಾರೆ.
ಬೆಂಗಳೂರು: ಜನರು ಇನ್ನೂ ಕಳೆದ ಬಾರಿ ಮಾಡಿದ ಮೆಟ್ರೋ ದರ ಏರಿಕೆಯ ಬರೆಯಿಂದ ಚೇತರಿಸಿಕೊಳ್ಳುವ ಮೊದಲೇ ಎರಡನೇ ಬಾರಿ ಮೆಟ್ರೋ ದರ ಹೆಚ್ಚಿಸಲು ರಾಜ್ಯ ಸರಕಾರ, ಬಿಎಂಆರ್ಸಿಎಲ್ ಸಿದ್ಧವಾಗಿವೆ ಎಂದು ಸಂಸದ ತೇಜಸ್ವಿ ಸೂರ್ಯ ಅವರು ಆಕ್ಷೇಪಿಸಿದ್ದಾರೆ.ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಈ ವಿಚಾರವನ್ನು ಕಳೆದ ಒಂದು ವರ್ಷದಿಂದ ಸತತವಾಗಿ ಬೆಲೆ ಏರಿಕೆ, ಮೆಟ್ರೋ ದುಬಾರಿ ಟಿಕೆಟ್ ವಿರುದ್ಧ ಸತತವಾಗಿ ಎತ್ತುತ್ತಿದ್ದೇನೆ. ರಾಜ್ಯ ಸರಕಾರವು ಪ್ರತಿ ಬಾರಿ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಗಳ ನೇತೃತ್ವದಲ್ಲೇ ಇದು ನಮ್ಮದಲ್ಲ; ಕೇಂದ್ರ ಸರಕಾರ ಮಾಡಿರುವುದು ಎಂದು ಸುಳ್ಳು ಹೇಳುತ್ತಿದ್ದಾರೆ ಎಂದು ಆರೋಪಿಸಿದರು.
ಬೆಂಗಳೂರು: ಇಂದು ಬೆಳಿಗ್ಗೆಯಿಂದ ಗ್ರೇಟರ್ ಬೆಂಗಳೂರು ಅಥಾರಿಟಿ (ಜಿಬಿಎ) ಚುನಾವಣೆಯ ಹಿನ್ನೆಲೆಯಲ್ಲಿ ಮಹತ್ವದ ಸಭೆ ಆಯೋಜಿಸಲಾಗಿತ್ತು ಎಂದು ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದ್ದಾರೆ.ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಯಾವತ್ತೇ ಜಿಬಿಎ ಚುನಾವಣೆ ನಡೆದರೂ ನಾವು ಗೆದ್ದೇ ಗೆಲ್ಲುತ್ತೇವೆ. ಕಾಂಗ್ರೆಸ್ ಪಕ್ಷದ ತಂತ್ರ- ಕುತಂತ್ರದ ನಡುವೆಯೂ 5 ಜಿಬಿಎಯಲ್ಲೂ ಬಿಜೆಪಿ ಜಯಭೇರಿ ಬಾರಿಸಲು ಒಳ್ಳೆಯ ಅವಕಾಶವಿದೆ. ಹಾಗಾಗಿ ಅತಿ ಶೀಘ್ರದಲ್ಲಿ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಯನ್ನೂ ಆರಂಭಿಸಬೇಕು. ಜೆಡಿಎಸ್ ಜೊತೆ ಚರ್ಚಿಸಿ ಅವರ ಅಭಿಪ್ರಾಯ ಪಡೆದುಕೊಂಡು ಚುನಾವಣೆಗೆ ಸಜ್ಜಾಗಲು ನಿರ್ಧರಿಸಿದ್ದಾಗಿ ವಿವರಿಸಿದರು.
ನವದೆಹಲಿ: ಪಶ್ಚಿಮ ದೆಹಲಿಯ ಜನಕ್ಪುರಿ ಪ್ರದೇಶದಲ್ಲಿ ರಸ್ತೆ ಕಾಮಗಾರಿ ವೇಳೆ ದೆಹಲಿ ಜಲ ಮಂಡಳಿ ಅಗೆದಿದ್ದ ಆಳವಾದ ಮುಚ್ಚಳವಿಲ್ಲದ ಹೊಂಡಕ್ಕೆ ಮೋಟಾರ್ ಸೈಕಲ್ನೊಂದಿಗೆ 25 ವರ್ಷದ ಯುವಕ ಬಿದ್ದು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪ ಗುತ್ತಿಗೆದಾರ ರಾಜೇಶ್ ಪ್ರಜಾಪತಿಯನ್ನು ದೆಹಲಿ ಪೊಲೀಸರು ಶನಿವಾರ ಬಂಧಿಸಿದ್ದಾರೆ. 25 ವರ್ಷದ ಕಮಲ್ ಎಂಬಾತ ಹೊಂಡಕ್ಕೆ ಬಿದ್ದಾಗ ಕುಟುಂಬವೊಂದು ಹಾದು ಹೋಗುತ್ತಿತ್ತು ಎಂದು ಪೊಲೀಸ್ ತನಿಖೆಯಿಂದ ತಿಳಿದುಬಂದಿದ್ದು, ಮನೆಯವರು ಅಲ್ಲಿದ್ದ ಭದ್ರತಾ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ನಂತರ ಉಪಗುತ್ತಿಗೆದಾರ ರಾಜೇಶ್ ಪ್ರಜಾಪತಿ ಅವರಿಗೆ 12:22 AM ಕ್ಕೆ ಮಾಹಿತಿ ನೀಡಲಾಯಿತು. ರಾಜೇಶ್ ಸ್ಥಳಕ್ಕೆ ಬಂದರೂ
ನವದೆಹಲಿ: ಮಗನನ್ನು ಮೆಟ್ರೋ ಸ್ಟೇಷನ್ ನಲ್ಲಿ ನೋಡಿದ ತಾಯಿ ಅಲ್ಲೇ ಯುವ ಜೋಡಿಗೆ ನಿಶ್ಚಿತಾರ್ಥ ಮಾಡಿದ ವಿಡಿಯೋವೊಂದು ಈಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ಘಟನೆ ದೆಹಲಿ ಮೆಟ್ರೋ ಸ್ಟೇಷನ್ ನಲ್ಲಿ ನಡೆದಿದೆ ಎನ್ನಲಾಗಿದೆ. ಮಕ್ಕಳನ್ನು ಗರ್ಲ್ ಫ್ರೆಂಡ್ ಅಥವಾ ಬಾಯ್ ಫ್ರೆಂಡ್ ಜೊತೆ ನೋಡಿದ ಹೆತ್ತವರಿಗೆ ಒಂದು ಕ್ಷಣ ಎದೆ ಧಸಕ್ ಎನ್ನುತ್ತದೆ. ಸಿಟ್ಟು ಬಂದು ದಂಡಿಸುತ್ತಾರೆ. ಆದರೆ ಈ ತಾಯಿ ಮಾಡಿದ ಕೆಲಸ ಎಲ್ಲರನ್ನೂ ದಂಗುಬಡಿಸಿದೆ. ವಯಸ್ಸಿಗೆ ಬಂದ ಮಗ ಮೆಟ್ರೋ ಸ್ಟೇಷನ್ ನಲ್ಲಿ ತನ್ನ ಗರ್ಲ್ ಫ್ರೆಂಡ್ ಜೊತೆಗೆ ಕುಳಿತು ಹರಟೆ ಹೊಡೆಯುತ್ತಿದ್ದ. ಇದನ್ನು ಆತನ ತಾಯಿ ನೋಡಿದ್ದಾರೆ.
ಮಂಗಳೂರು: ನಗರದ ನಂತೂರು ಬಳಿ ಸಂಭವಿಸಿದ ಅಪಘಾತಕ್ಕೆ ಸಂಬಂಧಿಸಿದಂತೆ ಖಾಸಗಿ ಆಸ್ಪತ್ರೆಯಿಂದ ಕದ್ರಿ ಪೊಲೀಸ್ ಠಾಣೆಗೆ ದೀಪ್ತಿ ಅವರ ಪಾರ್ಥಿವ ಶರೀರವನ್ನು ತಂದು ಪ್ರತಿಭಟನೆ ನಡೆಸಿದ ಆರೋಪದ ಮೇಲೆ ಹಲವರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.ಪೊಲೀಸರ ಪ್ರಕಾರ, ಬಲ್ಲಾಳ್ಬಾಗ್ ಬಳಿಯ ವಿವೇಕನಗರದ ಅಮಿತ್, ಕೀರ್ತನ್, ನವೀತ್, ಭರತ್ರಾಜ್, ಪವನ್ ಮತ್ತು ಲೋಕೇಶ್; ಬಲ್ಲಾಲ್ಬಾಗ್ನಿಂದ ಮನ್ವೀತ್; ಕಂಕನಾಡಿಯಿಂದ ಅನಿಲ್ ಕುಮಾರ್; ಬಲ್ಲಾಳ್ಬಾಗ್ನಿಂದ ಪ್ರೇಮನಾಥ್; ಮತ್ತು ಸುಮಾರು 50 ಮಂದಿ ಆಂಬ್ಯುಲೆನ್ಸ್ನೊಂದಿಗೆ ದ್ವಿಚಕ್ರ ವಾಹನಗಳು ಮತ್ತು ಕಾರುಗಳಲ್ಲಿ ಕದ್ರಿ ಪೊಲೀಸ್ ಠಾಣೆ ಬಳಿ ಬಂದು ಪ್ರತಿಭಟನೆ ನಡೆಸಲು ಕಾನೂನುಬಾಹಿರವಾಗಿ ಸಭೆ ನಡೆಸಿದರು.
ಚಿಕ್ಕಬಳ್ಳಾಪುರ: ಇಲ್ಲಿನ ವಸತಿ ಶಾಲೆಯಲ್ಲಿ ಎಸ್ಸೆಸ್ಸೆಲ್ಸಿ ಓದುತ್ತಿರುವ ವಿದ್ಯಾರ್ಥಿಣಿ ಗರ್ಭಿಣಿಯಾಗಿರುವ ಆಘಾತಕಾರಿ ಘಟನೆ ವರದಿಯಾಗಿದೆ. ಈ ಸಂಬಂಧ ಕ್ಯಾಬ್ ಚಾಲಕನನ್ನು ವಶಕ್ಕೆ ಪಡೆಯಲಾಗಿದೆ. ಪ್ರಕರಣ ವರದಿಯಾದ ಬೆನ್ನಲ್ಲೇ ಪೊಲೀಸರು ಬಾಲಕಿಯ ಸಂಬಂಧಿ ಎಂದು ಹೇಳಲಾದ ಆರೋಪಿಯ ವಿರುದ್ಧ ಪೋಕ್ಸೊ ಪ್ರಕರಣ ದಾಖಲಿಸಿ ಆತನನ್ನು ಅರೆಸ್ಟ್ ಮಾಡಿದ್ದಾರೆ. ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ನಿರ್ದೇಶಕ (ಕೆಆರ್ಇಐಎಸ್) ಕಾಂತರಾಜು, ಶಾಲೆಯ ಪ್ರಾಂಶುಪಾಲರು ಮತ್ತು ವಾರ್ಡನ್
ಈಚೆಗೆ ವಿಮಾನ ದುರಂತದಲ್ಲಿ ಸಾವನ್ನಪ್ಪಿದ ಡಿಸಿಎಂ ಅಜಿತ್ ಪವಾರ್ ಸಾವಿನ ಬಗ್ಗೆ ಎನ್ಸಿಪಿ (ಎಸ್ಪಿ) ನಾಯಕ ರೋಹಿತ್ ಪವಾರ್ ಸ್ಫೋಟಕ ಮಾತು ಭಾರೀ ಚರ್ಚೆಗೆ ಕಾರಣವಾಗಿದೆ. ವಿಮಾನ ಅಪಘಾತದಲ್ಲಿ ಸಾವಿನ ಸುತ್ತಲಿನ ಸನ್ನಿವೇಶಗಳ ಬಗ್ಗೆ ಎಲ್ಲರಿಗೂ ಅನುಮಾನಗಳಿವೆ ಮತ್ತು ಫೆಬ್ರವರಿ 10, 2026 ರಂದು ಅದರ ಬಗ್ಗೆ ವಿವರವಾದ ಪ್ರಸ್ತುತಿಯನ್ನು ನೀಡುವುದಾಗಿ ಹೇಳಿದರು.ಬಾರಾಮತಿಯಲ್ಲಿ ಜಿಲ್ಲಾ ಪರಿಷತ್ ಚುನಾವಣೆಯಲ್ಲಿ ಮತ ಚಲಾಯಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕರು
ನವದೆಹಲಿ: ಅಮೆರಿಕ ಜೊತೆ ಉತ್ತಮ ಬಾಂಧವ್ಯ ಹೊಂದಿ ಭಾರತದ ವಿರುದ್ಧ ಸದಾ ಕತ್ತಿ ಮಸೆಯುತ್ತಿದ್ದ ಪಾಕ್ಗೆ ಬಿಗ್ಶಾಕ್ ಎದುರಾಗಿದೆ. ಅಮೆರಿಕಾ ಬಿಡುಗಡೆ ಮಾಡಿದ ನಕ್ಷೆಯನ್ನು ಕಂಡು ಪಾಕಿಸ್ತಾನ ಕಂಗಾಲಾಗಿದೆ.ಭಾರತ-ಅಮೆರಿಕ ನಡುವಣ ದ್ವಿಪಕ್ಷೀಯ ಮಧ್ಯಂತರ ವ್ಯಾಪಾರ ಒಪ್ಪಂದದ ಕುರಿತು ಅಮೆರಿಕಾ ಬಿಡುಗಡೆ ಮಾಡಿರುವ ನಕ್ಷೆ ಪಾಕಿಸ್ತಾನದ ಕೆಂಗಣ್ಣಿಗೆ ಗುರಿಯಾಗಿದೆ. ಇತ್ತೀಚೆಗಿನ ವರ್ಷಗಳಲ್ಲಿ ವಿಶೇಷವಾಗಿಯೂ ಪಾಕ್ ಮೇಲೆ ಭಾರತದ ಆಪರೇಷನ್ ಸಿಂಧೂರ ಮಿಲಿಟರಿ ಕಾರ್ಯಾಚರಣೆಯ ಬಳಿಕ ಅಮೆರಿಕದೊಂದಿಗೆ ಪಾಕಿಸ್ತಾನ ಉತ್ತಮ ಬಾಂಧವ್ಯ ಕಾಪಾಡಿಕೊಂಡಿತ್ತು. ವ್ಯಾಪಾರ ಒಪ್ಪಂದ ಸಂಬಂಧ ಯುನೈಟೆಡ್ ಸ್ಟೇಟ್ಸ್ ಆಫ್ ಟ್ರೇಡ್ ರೆಪ್ರೆಸೆಂಟೇಟಿವ್ ಬಿಡುಗಡೆ ಮಾಡಿರುವ ಭಾರತದ ಭೂಪಟದಲ್ಲಿ ಕಾಶ್ಮೀರ ಭಾರತದ ಅವಿಭಾಜ್ಯ ಅಂಗ ಎಂದು ಬಿಂಬಿಸಿದೆ.
ಮುಂಬೈ: ಮುಂಬೈ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಚಾರಿತ್ರಿಕ ಗೆಲುವು ಸಾಧಿಸಿದ ಬೆನ್ನಲ್ಲೇ ಮೇಯರ್ ಗಿರಿಗೆ ಅಭ್ಯರ್ಥಿಯ ಆಯ್ಕೆ ನಡೆದಿದೆ. ರಿತು ತಾವಡೆ ಅವರನ್ನು ಭಾರತೀಯ ಜನತಾ ಪಕ್ಷ (ಬಿಜೆಪಿ) ಅಭ್ಯರ್ಥಿಯಾಗಿ ಶನಿವಾರ ಆಯ್ಕೆ ಮಾಡಿದೆ. ಬಿಜೆಪಿ ಮೈತ್ರಿಪಕ್ಷ ಶಿವಸೇನೆ ಸಂಜಯ್ ಘಾಡಿ ಅವರನ್ನು ಉಪ ಮೇಯರ್ ಹುದ್ದೆಗೆ ತನ್ನ ಅಭ್ಯರ್ಥಿಯಾಗಿ ಘೋಷಿಸಿದೆ. ರಿತು ತಾವಡೆ ವಾರ್ಡ್ ಸಂಖ್ಯೆ 132ರ ಕಾರ್ಪೊರೇಟರ್ ಆಗಿದ್ದಾರೆ. ಸಂಜಯ್ ಘಾಡಿ ವಾರ್ಡ್ ಸಂಖ್ಯೆ 5ರಿಂದ ಆಯ್ಕೆಯಾಗಿದ್ದಾರೆ. ಸಂಜಯ್ ಈ ಹಿಂದೆ 15 ತಿಂಗಳ ಕಾಲ ಉಪಮೇಯರ್ ಆಗಿ ಕೆಲಸ ಮಾಡಿದ್ದರು.227 ಸದಸ್ಯ ಬಲದ ಪಾಲಿಕೆ ಚುನಾವಣೆ ಇತ್ತೀಚೆಗೆ ನಡೆದಿತ್ತು. ಬಿಜೆಪಿ 89 ಸ್ಥಾನಗಳೊಂದಿಗೆ ಏಕೈಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ.
ಅಮರಾವತಿ: ತಿರುಮಲ ತಿರುಪತಿ ಶ್ರೀ ವೆಂಕಟೇಶ್ವರ ದೇವಸ್ಥಾನದ ಲಡ್ಡು ಪ್ರಸಾದ ಕಲಬೆರಕೆ ಪ್ರಕರಣ ಸ್ಫೋಟಕ ಟ್ವಿಸ್ಟ್ ಪಡೆದುಕೊಂಡಿದೆ. ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಮಹತ್ವದ ಮಾಹಿತಿಯನ್ನು ಬಿಚ್ಚಿಟ್ಟಿದ್ದಾರೆ. ಹಿಂದಿನ ವೈಎಸ್ಆರ್ಸಿಪಿ ಸರ್ಕಾರದ ಅವಧಿಯಲ್ಲಿ ಲಡ್ಡುಗಳನ್ನು ತಯಾರಿಸಲು ಐದು ವರ್ಷ ಬಾತ್ರೂಮ್ ಸ್ವಚ್ಛಗೊಳಿಸಲು ಬಳಸುವ ರಾಸಾಯನಿಕ ಬೆರೆತಿದ್ದ ಕಲಬೆರಕೆ ತುಪ್ಪ ಬಳಕೆ ಮಾಡಲಾಗಿತ್ತು ಎಂದು ಎನ್. ಚಂದ್ರಬಾಬು ನಾಯ್ಡು ಆರೋಪಿಸಿದ್ದಾರೆ.ಕಲಬೆರಕೆ ತುಪ್ಪ ಬಳಕೆ ಮಾಡಿದ ಪ್ರಸಾದದಿಂದ ತಿರುಪತಿಯ ದೇವಾಲಯದ ಪಾವಿತ್ರ್ಯತೆಗೆ ಧಕ್ಕೆ ಉಂಟಾಗಿದೆ. ಇದನ್ನು ಸರಿಪಡಿಸಲು ನಾವು ಪ್ರಯತ್ನಿಸುತ್ತಿದ್ದೇವೆ ಎಂದು ನಾಯ್ಡು ತಿಳಿಸಿದರು.
ಮುಂಬೈ: ಟಿ20 ವಿಶ್ವಕಪ್ ಇಂದು ಆರಂಭವಾಗಲಿದ್ದು ಮೊದಲ ಪಂದ್ಯ ಆರಂಭಕ್ಕೆ ಮುನ್ನವೇ ಟೀಂ ಇಂಡಿಯಾಗೆ ಶಾಕ್ ಎದುರಾಗಿದೆ. ಈ ಸ್ಟಾರ್ ಆಟಗಾರ ಇಂದು ಆಡುವುದು ಅನುಮಾನವಾಗಿದೆ. ನಿನ್ನೆಯಷ್ಟೇ ಅಭ್ಯಾಸದ ವೇಳೆ ಗಾಯಗೊಂಡಿದ್ದ ವೇಗಿ ಹರ್ಷಿತ್ ರಾಣಾ ಟೂರ್ನಿಯಿಂದಲೇ ಹೊರಬಿದ್ದಿದ್ದರು. ಅವರ ಸ್ಥಾನಕ್ಕೆ ಮೊಹಮ್ಮದ್ ಸಿರಾಜ್ ರನ್ನು ತಂಡಕ್ಕೆ ಕರೆಸಿಕೊಳ್ಳಲಾಗಿದೆ. ಇದರ ಬೆನ್ನಲ್ಲೇ ಈಗ ಬುಮ್ರಾ ಬಗ್ಗೆ ಅಹಿತ ಸುದ್ದಿಯೊಂದು ಕೇಳಿಬರುತ್ತಿದೆ. ಜಸ್ಪ್ರೀತ್ ಬುಮ್ರಾ ಅನಾರೋಗ್ಯಕ್ಕೊಳಗಾಗಿದ್ದು ಇಂದಿನ ಪಂದ್ಯದಲ್ಲಿ ಆಡುವುದು ಅನುಮಾನವೆನ್ನಲಾಗಿದೆ.
ಬೆಂಗಳೂರು: ಮೆಟ್ರೊ ದರ ಏರಿಕೆಯಲ್ಲಿ ರಾಜ್ಯ ಸರ್ಕಾರದ ಪಾತ್ರವಿಲ್ಲ. ದೆಹಲಿಯಲ್ಲಿ ಕರ್ನಾಟಕದ ಹಿತಾಸಕ್ತಿಗಳನ್ನು ರಕ್ಷಿಸುವಲ್ಲಿ ವಿಫಲರಾದ ಬಿಜೆಪಿ ನಾಯಕರು ಈಗ ಬೆಂಗಳೂರಿನಲ್ಲಿ ಮೊಸಳೆ ಕಣ್ಣೀರು ಸುರಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.ನಮ್ಮ ಮೆಟ್ರೋ ಪ್ರಯಾಣ ದರ ಹೆಚ್ಚಳಕ್ಕೆ ಸಂಬಂಧಿಸಿದಂತೆ ಮತ್ತೆ ಆಡಳಿತರೂಢ ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ಆರೋಪ ಪ್ರತ್ಯಾರೋಪ ಜೋರಾಗಿದೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾಮಾಜಿಕ ಜಾಲತಾಣದಲ್ಲಿ ಸ್ಪಷ್ಟನೆ ನೀಡಿದ್ದಾರೆ.ಈ ವಿಚಾರದಲ್ಲಿ ಕರ್ನಾಟಕ ಸರ್ಕಾರವನ್ನು ದೂಷಿಸುವುದು ವಾಸ್ತವಿಕವಾಗಿ ತಪ್ಪು ಮತ್ತು ಉದ್ದೇಶಪೂರ್ವಕವಾಗಿ ದಾರಿತಪ್ಪಿಸಲಾಗುತ್ತಿದೆ ಎಂದು ಬಿಜೆಪಿ ವಿರುದ್ಧ ಕಿಡಿ ಕಾರಿದ್ದಾರೆ. ಕಾನೂನು ಚೌಕಟ್ಟು ಏನೇ ಇದ್ದರೂ, ರಾಜ್ಯ ಸರ್ಕಾರವು ಜನರ ಪರವಾಗಿ ನಿಲ್ಲಲಿದೆ ಎಂದು ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.
ಬೆಂಗಳೂರು: ಯತೀಂದ್ರ ಅವರೇ ನಮ್ಮ ಹೈಕಮಾಂಡ್ ಎಂದು ವ್ಯಂಗ್ಯ ಮಾಡಿದ್ದ ಡಿಕೆ ಶಿವಕುಮಾರ್ ಗೆ ಪ್ರತಿಕ್ರಿಯಿಸಿದ್ದಾರೆ. ಯಾವಾಗ್ಲೂ ಹೈಕಮಾಂಡ್ ಹೈಕಮಾಂಡೇ ಎಂದಿದ್ದಾರೆ. ಯತೀಂದ್ರ ನಿನ್ನೆ ಮಾಧ್ಯಮಗಳ ಮುಂದೆ ಸಿದ್ದರಾಮಯ್ಯನವರೇ ಐದು ವರ್ಷವೂ ಮುಂದುವರಿಯುತ್ತಾರೆ ಎಂದು ಹೇಳಿಕೆ ನೀಡಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ್ದ ಡಿಕೆ ಶಿವಕುಮಾರ್, ಯತೀಂದ್ರ ಅವರೇ ನಮ್ಮ ಹೈಕಮಾಂಡ್. ಅವರು ಹೇಳಿದ್ಮೇಲೆ ಮುಗೀತು ಎಂದು ವ್ಯಂಗ್ಯ ಮಾಡಿದ್ದರು. ಡಿಕೆಶಿ ಹೇಳಿಕೆಗೆ ಇಂದು ಪ್ರತಿಕ್ರಿಯಿಸಿರುವ ಯತೀಂದ್ರ, ‘ಯಾವತ್ತಿದ್ರೂ ಹೈಕಮಾಂಡ್ ಹೈಕಮಾಂಡೇ. ಹೈಕಮಾಂಡ್ ಅವರ ತೀರ್ಮಾನಕ್ಕೇ ಎಲ್ಲರೂ ಬದ್ಧರಾಗಿರುತ್ತಾರೆ.
ಕೆಲವರಿಗೆ ತಿಂಗಳಿಗೆ ಸರಿಯಾಗಿ ಮುಟ್ಟು ಬರಲ್ಲ. ಮುಟ್ಟು ತಡವಾಗುವುದಕ್ಕೆ ಕಾರಣಗಳು ಅನೇಕ. ಅವುಗಳು ಯಾವುವೆಲ್ಲಾ ಇಲ್ಲಿದೆ ನೋಡಿ ವಿವರ. ಮೂಡ್ ಬದಲಾವಣೆ: ಕೆಲವೊಮ್ಮೆ ಅತಿಯಾದ ದುಃಖ, ಖುಷಿ, ಒತ್ತಡ, ಆತಂಕ, ಭಯ ಮೊದಲಾದ ಮೂಡ್ ಬದಲಾವಣೆಗಳು ಮುಟ್ಟಿನ ಮೇಲೆ ಪರಿಣಾಮ ಬೀರಬಹುದು.ಆಹಾರ ಬದಲಾವಣೆ: ಅತಿಯಾದ ಕೆಫೈನ್ ಅಂಶದ ಆಹಾರ ಸೇವನೆ, ಅತಿಯಾದ ಖಾರದ ಆಹಾರ ಸೇವನೆ, ಹೈ ಪ್ರೊಟೀನ್ ಆಹಾರಗಳು ಮುಟ್ಟು ತಡವಾಗುವುದಕ್ಕೆ ಕಾರಣಗಳಾಗಬಹುದು.ಹಾರ್ಮೋನ್ ಬದಲಾವಣೆ: ವಯಸ್ಸು 30 ದಾಟಿದ ಮೇಲೆ ಮಹಿಳೆಯರಲ್ಲಿ ಹಾರ್ಮೋನ್ ಬದಲಾವಣೆಗಳಾಗುತ್ತವೆ. ಥೈರಾಯ್ಡ್ ಹೆಚ್ಚಳ, ಈಸ್ಟ್ರೋಜನ್ ಮತ್ತು ಪ್ರೊಜೆಸ್ಟಿರೋನ್ ಹಾರ್ಮೋನ್ ಸರಿಯಾಗಿ ಬಿಡುಗಡೆ ಆಗದೇ ಇರುವುದು ಕಾರಣವಾಗಬಹುದು.
ಬೆಂಗಳೂರು: ಜನರಿಗೆ ತೊಂದರೆ ಕೊಡಕ್ಕೆ ಬಿಡಲ್ಲ. ಮೆಟ್ರೋ ದರ ಪರಿಷ್ಕರಣೆ ಬಗ್ಗೆ ಮಾತನಾಡುತ್ತೇನೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆ ನೀಡಿದ್ದಾರೆ. ಫೆಬ್ರವರಿ 9 ರಿಂದ ಮೆಟ್ರೋ ದರ ಶೇ.5 ರಷ್ಟು ಹೆಚ್ಚಳವಾಗುವುದಾಗಿ ಈಗಾಗಲೇ ಘೋಷಣೆಯಾಗಿದೆ. ಆದರೆ ಕಳೆದ ವರ್ಷವಷ್ಟೇ ಹೆಚ್ಚಳವಾಗಿತ್ತು. ಈಗ ಮತ್ತೆ ಒಂದೇ ವರ್ಷದ ಅಂತರದಲ್ಲಿ ಮತ್ತೆ ಏರಿಕೆ ಮಾಡುತ್ತಿರುವುದಕ್ಕೆ ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಡಿಸಿಎಂ ಡಿಕೆ ಶಿವಕುಮಾರ್ ‘ಮೆಟ್ರೋ ದರ ಪರಿಷ್ಕರಣೆ ವಿಚಾರವಾಗಿ ಯಾರೂ ನಮ್ಮ ಜೊತೆ ಚರ್ಚಿಸಿಲ್ಲ.
ಮನುಷ್ಯರ ತಂತ್ರಜ್ಞಾನಗಳು ಪ್ರಾಣಿಗಳಿಗೆ ತಲೆಬುಡ ಅರ್ಥವಾಗಲ್ಲ. ಇದೇ ರೀತಿ ಎಸ್ಕಲೇಟರ್ ಏರಲು ಹೋದ ಬೆಕ್ಕು ಫುಲ್ ಕನ್ ಫ್ಯೂಸ್ ಫನ್ನಿ ವಿಡಿಯೋ ವೈರಲ್ ಆಗಿದೆ. ಸಾಮಾನ್ಯವಾಗಿ ಬೆಕ್ಕುಗಳು ಸೂಕ್ಷ್ಮ ಸಂವೇದಿಗಳು. ಬಹುಬೇಗನೇ ಎಲ್ಲವನ್ನೂ ಅರ್ಥ ಮಾಡಿಕೊಳ್ಳುವ ಬುದ್ಧಿವಂತ ಜೀವಿಗಳು. ಆದರೆ ಇಲ್ಲೊಂದು ಬೆಕ್ಕು ಎಸ್ಕಲೇಟರ್ ಏರಲು ಹೋಗಿ ಇದೇನು ಆಗ್ತಿದೆ ಎಂದು ತಿಳಿಯದೇ ಕನ್ ಫ್ಯೂಸ್ ಆಗಿದೆ. ಕೆಳಗೆ ಇಳಿಯುವ ಎಸ್ಕಲೇಟರ್ ಗೆ ಬೆಕ್ಕು ಏರಿದೆ. ಆರಾಮವಾಗಿಯೇ ಎಸ್ಕಲೇಟರ್ ಏರಿದ್ದ ಬೆಕ್ಕು ಸ್ವಲ್ಪ ಮೇಲೆ ಸಾಮಾನ್ಯ ಮೆಟ್ಟಿಲು ಏರುವಂತೆ ಹತ್ತಿಕೊಂಡು ಹೋಗಿದೆ.
ಬೆಂಗಳೂರು: ಕಳೆದ ಕೆಲವು ದಿನಗಳಿಂದ ಚಿನ್ನದ ದರ ಏರಿಕೆ, ಇಳಿಕೆಯಾಗುತ್ತಲೇ ಇದೆ. ಇಂದು ಪರಿಶುದ್ಧ ಚಿನ್ನದ ದರ ಇಳಿಕೆಯಾದರೆ ಮತ್ತುಇತರೆ ಚಿನ್ನದ ದರ ಏರಿಕೆಯಾಗಿದೆ. ಇಂದು ಪರಿಶುದ್ಧ ಚಿನ್ನದ ದರ ಮತ್ತು ಇತರೆ ಚಿನ್ನದ ದರ ವಿವರ ಇಲ್ಲಿದೆ ನೋಡಿ. ಚಿನ್ನದ ದರ ಏರಿಕೆಕಳೆದ ವಾರ ಪರಿಶುದ್ಧ ಚಿನ್ನದ ದರ ಸತತವಾಗಿ ದಾಖಲೆಯ ಏರಿಕೆ ಕಂಡಿತ್ತು. ಆದರೆ ಈ ವಾರದ ಆರಂಭದಲ್ಲೇ ಚಿನ್ನದ ದರ ಇಳಿಕೆಯಾಗಿತ್ತು. ಇಂದು ಪರಿಶುದ್ಧ ಚಿನ್ನದ ದರ ಇಂದು ಮತ್ತೆ ಇಳಿಕೆಯಾಗಿದೆ. ಪರಿಶುದ್ಧ ಚಿನ್ನದ ದರ ನಿನ್ನೆ 1,57,025.00 ರೂ.ಗಳಿತ್ತು. ಇಂದೂ 1,56,380.00 ರೂ.ಗಳಷ್ಟಿದೆ.
ಬೆಂಗಳೂರು: ಅಡಿಕೆ ಬೆಲೆ ಕಳೆದ ವಾರ ಏರಿಕೆ-ಇಳಿಕೆಯಾಗಿತ್ತು. ಆದರೆ ಇದೀಗ ಅಡಿಕೆ ದರ ಯಥಾಸ್ಥಿತಿಯಲ್ಲಿದೆ. ಇಂದು ಅಡಿಕೆ ಮತ್ತು ಕಾಳು ಮೆಣಸು, ಕೊಬ್ಬರಿ ದರ ಹೇಗಿದೆ ಇಲ್ಲಿದೆ ವಿವರ. ಕಳೆದ ವಾರ ಅಡಿಕೆ ಬೆಲೆಯಲ್ಲಿ ಏರಿಕೆ ಆರಂಭವಾಗಿತ್ತು. ಸತತವಾಗಿ ನಾಲ್ಕು ದಿನಗಳ ಕಾಲ ಏರಿಕೆಯಾಗಿದ್ದು ರೈತರ ಸಂತಸಕ್ಕೆ ಕಾರಣವಾಗಿತ್ತು. ಆದರೆ ಇಂದು ಯಾವುದೇ ವ್ಯತ್ಯಾಸ ಕಂಡುಬರುತ್ತಿಲ್ಲ. ಇಂದು ಹೊಸ ಅಡಿಕೆ ಬೆಲೆ 460 ರೂ.ಗಳಷ್ಟಿದೆ. ಹಳೆ ಅಡಿಕೆ ಬೆಲೆ ಯಥಾಸ್ಥಿತಿಯಲ್ಲಿದ್ದು 535 ರೂ. ಗಳಾಗಿತ್ತು. ಇಂದೂ ಅಷ್ಟೇ ಇದೆ. ಡಬಲ್ ಚೋಲ್ ಬೆಲೆಯೂ 535 ರೂ.ಗಳಷ್ಟಾಗಿದೆ.
ಬೆಂಗಳೂರು: ಯಾವಾಗ ಕಿಂಗ್ ವಿರಾಟ್ ಕೊಹ್ಲಿ ಆ ಒಂದು ಮಾತು ಹೇಳಿದ್ರೋ ಆವತ್ತಿಂದ ಆರ್ ಸಿಬಿ ಮಹಿಳೆ ಮತ್ತು ಪುರುಷರ ತಂಡದ ಅದೃಷ್ಟವೇ ಬದಲಾಗಿದೆ. ಅಷ್ಟಕ್ಕೂ ವಿರಾಟ್ ಆವತ್ತು ಹೇಳಿದ್ದೇನು ಗೊತ್ತಾ? 2024 ರ ಐಪಿಎಲ್ ಗೆ ಮೊದಲು ವಿರಾಟ್ ಕೊಹ್ಲಿ ಬೆಂಗಳೂರಿನ ಚಿನ್ನಸ್ವಾಮಿ ಮೈದಾನದಲ್ಲಿ ಆರ್ ಸಿಬಿ ಅನ್ ಬಾಕ್ಸ್ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಈ ವೇಳೆ ಅಭಿಮಾನಿಗಳನ್ನು ಉದ್ದೇಶಿಸಿ ಮಾತನಾಡಿದ್ದ ಕೊಹ್ಲಿ ಕನ್ನಡದಲ್ಲಿ ‘ಇದು ಆರ್ ಸಿಬಿಯ ಹೊಸ ಅಧ್ಯಾಯ’ ಎಂದಿದ್ದರು.
ಮಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರ ಮತ್ತೆ ಚರ್ಚೆಯಾಗುತ್ತಿದೆ. ಬಜೆಟ್ ಬಳಿಕ ಸಿಎಂ ಆಗ್ತೀರಾ ಎಂಬ ಪ್ರಶ್ನೆಗೆ ಡಿಸಿಎಂ ಡಿಕೆ ಶಿವಕುಮಾರ್ ಶಾಕಿಂಗ್ ಉತ್ತರ ನೀಡಿದ್ದಾರೆ. ನಿನ್ನೆ ಮೈಸೂರಿನಲ್ಲಿ ಸಿಎಂ ಪುತ್ರ ಯತೀಂದ್ರ ಸಿದ್ದರಾಮಯ್ಯ ಐದು ವರ್ಷದವರೆಗೂ ತಮ್ಮ ತಂದೆಯೇ ಸಿಎಂ ಆಗಿ ಮುಂದುವರಿಯುತ್ತಾರೆ. ಹೈಕಮಾಂಡ್ ಯಾರ ಒತ್ತಡಕ್ಕೂ ಮಣಿದಿಲ್ಲ. ಬದಲಾವಣೆ ಬಗ್ಗೆ ಹೇಳಿಲ್ಲ ಎಂದು ಹೇಳಿಕೆ ನೀಡಿದ್ದರು. ಇದರ ಬೆನ್ನಲ್ಲೇ ಮತ್ತೆ ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರ ದೊಡ್ಡ ಸುದ್ದಿಯಾಗುತ್ತಿದೆ. ಡಿಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಬಣದ ನಾಯಕರು ಬಹಿರಂಗವಾಗಿಯೇ ಮತ್ತೆ ಹೇಳಿಕೆ ನೀಡಲು ಮುಂದಾಗಿದ್ದಾರೆ.
ಬೆಂಗಳೂರು: ನಮ್ಮ ಮೆಟ್ರೋ ದರ ಏರಿಕೆ ಮಾಡಿದ್ದಕ್ಕೆ ರಾಜ್ಯ ಸರ್ಕಾರ ಕೇಂದ್ರ ಸರ್ಕಾರಕ್ಕೆ ಒಂದು ಪತ್ರ ಬರೆಯಲಿ. ಉಳಿದಿದ್ದನ್ನು ನಾನು ನೋಡಿಕೊಳ್ತೇನೆ ಎಂದು ತೇಜಸ್ವಿ ಸೂರ್ಯ ಸವಾಲು ಹಾಕಿದ್ದಾರೆ. ನಾನು ಉಪ ಮುಖ್ಯಮಂತ್ರಿಗಳಿಗೆ ಒಂದು ಪ್ರಶ್ನೆ ಕೇಳ್ತೇನೆ. ನಾವಿವತ್ತು ರಾಜ್ಯದ ಪ್ರತಿನಿಧಿಗಳಾಗಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದೇವೆ. ನಿಮಗೂ ದರ ಕಡಿಮೆಯಾಗಬೇಕು ಎಂದಿದ್ದರೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಿರಿ. ಸಿಎಂ ಆಗಲೀ, ಡಿಸಿಎಂ ಆಗಲೀ ಒಂದು ಸಿಂಗಲ್ ಪತ್ರ ಬರೆಯಿರಿ. ಎಂಟು ತಿಂಗಳ ಹಿಂದಷ್ಟೇ ಹೆಚ್ಚು ಮಾಡಿದ್ದೀರಿ. ಮತ್ತೆ ದರ ಏರಿಕೆ ಮಾಡುತ್ತೀದ್ದೀರಿ. ಹೀಗಾಗಿ ದರ ಕಡಿಮೆ ಮಾಡಿ ಎಂದು ಪತ್ರ ಬರೆಯಲಿ.
ಮುಂಬೈ: ಟಿ20 ವಿಶ್ವಕಪ್ 2026 ಕ್ಕೆ ಇಂದು ಚಾಲನೆ ಸಿಗುತ್ತಿದೆ. ಇಂದಿನ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಟೀಂ ಇಂಡಿಯಾ, ಅಮೆರಿಕಾ ಮುಖಾಮುಖಿಯಾಗಲಿದೆ. ಈ ಪಂದ್ಯ ಎಷ್ಟು ಗಂಟೆಗೆ ಆರಂಭವಾಗಲಿದೆ, ಎಲ್ಲಿ ವೀಕ್ಷಿಸಬೇಕು ನೋಡಿ. ಟಿ20 ವಿಶ್ವಕಪ್ ನಲ್ಲಿ ಕಳೆದ ಬಾರಿ ಅಮೆರಿಕಾದಲ್ಲಿ ಟೀಂ ಇಂಡಿಯಾ ಚಾಂಪಿಯನ್ ಆಗಿತ್ತು. ಈ ಬಾರಿ ತವರಿನಲ್ಲಿ ವಿಶ್ವಕಪ್ ನಡೆಯುತ್ತಿರುವುದರಿಂದ ನಿರೀಕ್ಷೆ ಹೆಚ್ಚಾಗಿದೆ. ಸೂರ್ಯಕುಮಾರ್ ಯಾದವ್ ಬಳಗ ಈಗಷ್ಟೇ ನ್ಯೂಜಿಲೆಂಡ್ ವಿರುದ್ಧ ಟಿ20 ಸರಣಿ ಗೆದ್ದು ಭರ್ಜರಿ ಅತ್ಮವಿಶ್ವಾಸದಲ್ಲಿದೆ.
ಬೆಂಗಳೂರು: ಕಳೆದ ಕೆಲವು ದಿನಗಳಿಂದ ರಾಜ್ಯದಲ್ಲಿ ಒಣಹವೆಯಿದ್ದು ತಾಪಮಾನದಲ್ಲಿ ಏರಿಕೆ ಕಂಡುಬರುತ್ತಿದೆ. ವಾರಂತ್ಯಕ್ಕೆ ರಾಜ್ಯದ ಹವಾಮಾನ ಹೇಗಿರಲಿದೆ ಇಲ್ಲಿದೆ ವಿವರ. ರಾಜ್ಯದ ಹವಾಮಾನದಲ್ಲಿ ಈಗ ದಿನಕ್ಕೊಂದು ವಿಚಿತ್ರ ಹವಾಮಾನ ಬದಲಾವಣೆ ಕಂಡುಬರುತ್ತಿದೆ. ಒಮ್ಮೆ ವಿಪರೀತ ಚಳಿ, ಹಗಲು ವಿಪರೀತ ಬಿಸಿಲು ಇನ್ನು ಕೆಲವರು ಕಡೆ ಭಾಗಶಃ ಮೋಡ ಕವಿದ ವಾತಾವರಣವೂ ಕಂಡುಬರುತ್ತಿದೆ. ಈ ವಾರಂತ್ಯದಲ್ಲಿ ರಾಜ್ಯದದಲ್ಲಿ ಗರಿಷ್ಠ ತಾಪಮಾನದಲ್ಲಿ ಇನ್ನಷ್ಟು ಏರಿಕೆಯಾಗುವ ಸಾಧ್ಯತೆಯಿದೆ. ಇಂದು ಬಹುತೇಕ ಕಡೆ ಭಾಗಶಃ ಮೋಡ, ಬಿಸಿಲಿನ ವಾತಾವರಣವಿದ್ದರೆ ನಾಳೆ ಸಂಪೂರ್ಣ ಬಿಸಿಲಿರಲಿದೆ.
ಇಂದು ಶನಿವಾರವಾಗಿದ್ದು ಶನಿದೇವನಿಗೆ ವಿಶೇಷವಾದ ದಿನವಾಗಿದೆ. ಶನಿದೋಷದಿಂದ ನಾನಾ ಸಮಸ್ಯೆಗಳು ಎದುರಾಗುತ್ತಿದ್ದಲ್ಲಿ ಇಂದು ತಪ್ಪದೇ ಶನಿ ಅಷ್ಟೋತ್ತರ ಶತನಾಮ ಸ್ತೋತ್ರವನ್ನು ಓದಿ. ಕನ್ನಡದಲ್ಲಿ ಇಲ್ಲಿದೆ.ಶನೈಶ್ಚರಾಯ ಶಾಂತಾಯ ಸರ್ವಾಭೀಷ್ಟಪ್ರದಾಯಿನೇ ।ಶರಣ್ಯಾಯ ವರೇಣ್ಯಾಯ ಸರ್ವೇಶಾಯ ನಮೋ ನಮಃ ॥ 1 ॥ ಸೌಮ್ಯಾಯ ಸುರವಂದ್ಯಾಯ ಸುರಲೋಕವಿಹಾರಿಣೇ ।ಸುಖಾಸನೋಪವಿಷ್ಟಾಯ ಸುಂದರಾಯ ನಮೋ ನಮಃ ॥ 2 ॥ ಘನಾಯ ಘನರೂಪಾಯ ಘನಾಭರಣಧಾರಿಣೇ ।ಘನಸಾರವಿಲೇಪಾಯ ಖದ್ಯೋತಾಯ ನಮೋ ನಮಃ ॥ 3 ॥ ಮಂದಾಯ ಮಂದಚೇಷ್ಟಾಯ ಮಹನೀಯಗುಣಾತ್ಮನೇ ।ಮರ್ತ್ಯಪಾವನಪಾದಾಯ ಮಹೇಶಾಯ ನಮೋ ನಮಃ ॥ 4 ॥ ಛಾಯಾಪುತ್ರಾಯ ಶರ್ವಾಯ ಶರತೂಣೀರಧಾರಿಣೇ ।ಚರಸ್ಥಿರಸ್ವಭಾವಾಯ ಚಂಚಲಾಯ ನಮೋ ನಮಃ ॥ 5 ॥
ಹರಾರೆ: ಅಂಡರ್ 19 ವಿಶ್ವಕಪ್ ನಲ್ಲಿ ಇಂಗ್ಲೆಂಡ್ ತಂಡವನ್ನು 100 ರನ್ ಗಳಿಂದ ಸೋಲಿಸಿ ಭಾರತ ತಂಡ ಆರನೇ ಬಾರಿಗೆ ವಿಶ್ವ ಚಾಂಪಿಯನ್ ಆಗಿ ಬೀಗಿದೆ. ಇಂದು ಮೊದಲು ಬ್ಯಾಟಿಂಗ್ ಮಾಡಿದ್ದ ಭಾರತ 50 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 411 ರನ್ ಗಳಿಸಿತ್ತು. ಇದು ವಿಶ್ವಕಪ್ ಫೈನಲ್ ನಲ್ಲಿ ದಾಖಲಾದ ಗರಿಷ್ಠ ಮೊತ್ತವಾಗಿತ್ತು. ವೈಭವ್ ಸೂರ್ಯವಂಶಿ 175 ರನ್ ಗಳ ಭರ್ಜರಿ ಇನಿಂಗ್ಸ್ ಆಡಿದ್ದರು. ಇದಕ್ಕೆ ಉತ್ತರವಾಗಿ ಇಂಗ್ಲೆಂಡ್ 40.2 ಓವರ್ ಗಳಲ್ಲಿ 311 ರನ್ ಗಳಿಸಿ ಆಲೌಟ್ ಆಗಿದೆ. ಇಂಗ್ಲೆಂಡ್ ಪರ ಫಾಲ್ಕನೂರ್ 67 ಎಸೆತಗಳಲ್ಲಿ 115 ರನ್ ಗಳಿಸಿ ದಿಟ್ಟ ಹೋರಾಟ ನೀಡಿದರು.