ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಏಪ್ರಿಲ್ 15 ರಂದು ಕರ್ನಾಟಕಕ್ಕೆ ಭೇಟಿ ನೀಡಲಿದ್ದಾರೆ. ಆದಿ ಚುಂಚನಗಿರಿ ಮಠಾಧೀಶರಾದ ಬಾಲಗಂಗಾಧರನಾಥ ಸ್ವಾಮಿಗಳ ಸ್ಮಾರಕ ಶ್ರೀಗುರು ಭೈರವ್ಯಕ್ಯ ಮಂದಿರವನ್ನು ಉದ್ಘಾಟಿಸಲಿದ್ದಾರೆ ಎಂದು ಮಠದ ಮೂಲಗಳು ತಿಳಿಸಿವೆ.ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಆದಿಚುಂಚನಗಿರಿಯ ಮಠದ ಆವರಣದಲ್ಲಿರುವ ಕಾಲಭೈರವೇಶ್ವರ ದೇವಸ್ಥಾನದ ಬಳಿ ಈ ಸ್ಮಾರಕವಿದೆ.ಡಿಸಿ ಕುಮಾರ ಶುಕ್ರವಾರ ಭೇಟಿಯ ಪೂರ್ವಭಾವಿ ಸಿದ್ಧತಾ ಸಭೆಯಲ್ಲಿ ಭದ್ರತೆ, ಶಿಷ್ಟಾಚಾರ ಮತ್ತು ವ್ಯವಸ್ಥೆಗಳ ಪರಿಶೀಲನೆ
ಬೆಂಗಳೂರು: ಇದೇ ವರ್ಷ ನಡೆಯಲಿರುವ ಮಹಿಳಾ ಟಿ20 ವಿಶ್ವಕಪ್ ಟೂರ್ನಿಗೆ ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ ದಾಖಲೆಯ ಬಹುಮಾನ ಘೋಷಿಸಿದೆ. ಟೂರ್ನಿಯು ಇಂಗ್ಲೆಂಡ್ ಮತ್ತು ವೇಲ್ಸ್ ಆತಿಥ್ಯದಲ್ಲಿ ನಡೆಯಲಿದೆ.ಈ ಬಾರಿಯ ಮಹಿಳಾ ಟಿ20 ವಿಶ್ವಕಪ್ ಟೂರ್ನಿಗೆ ₹82 ಕೋಟಿ ಬಹುಮಾನ ಮೊತ್ತವನ್ನು ಘೋಷಿಸಲಾಗಿದೆ. ಹಿಂದಿನ ಆವೃತ್ತಿಗಿಂತ ಒಟ್ಟು ಬಹುಮಾನ ಮೊತ್ತದಲ್ಲಿ ಶೇ 10 ರಷ್ಟು ಹೆಚ್ಚಿಸಲಾಗಿದೆ. ಟೂರ್ನಿಯಲ್ಲಿ ಒಟ್ಟು 12 ತಂಡಗಳು ಸ್ಪರ್ಧಿಸಲಿವೆ. ಜೂನ್ 12ರಿಂದ ಜುಲೈ5 ರವರೆಗೆ ಏಳು ತಾಣಗಳಲ್ಲಿ ಪಂದ್ಯಗಳು ನಡೆಯಲಿದೆ. ಜೂನ್ 12ರಂದು ಬರ್ಮಿಂಗ್ಹ್ಯಾಮ್ನ ಎಡ್ಜ್ಬಾಸ್ಟನ್ನಲ್ಲಿ ಆತಿಥೇಯ ಇಂಗ್ಲೆಂಡ್ ಮತ್ತು ಶ್ರೀಲಂಕಾ ತಂಡಗಳ ನಡುವೆ
ಚೆನ್ನೈ: ಕೇಂದ್ರ ಸಚಿವ ಮತ್ತು ತಮಿಳುನಾಡು ಬಿಜೆಪಿ ಚುನಾವಣಾ ಉಸ್ತುವಾರಿ ಪಿಯೂಷ್ ಗೋಯಲ್ ಅವರು ಸೋಮವಾರ ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದ ಕೌಶಲ್ಯವನ್ನು ಶ್ಲಾಘಿಸಿದ್ದಾರೆ.ಮುಂಬರುವ ತಮಿಳುನಾಡು ವಿಧಾನಸಭಾ ಚುನಾವಣೆಗೆ ಮುನ್ನ ಎನ್ಡಿಎ ಗೆಲುವಿನ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ. ‘ಭ್ರಷ್ಟ ಡಿಎಂಕೆ’ಯನ್ನು ಸೋಲಿಸಲು ಪ್ರಧಾನಿಯವರ ಕಾರ್ಯಕ್ರಮ ಪಕ್ಷದ ಕಾರ್ಯಕರ್ತರಲ್ಲಿ ಆತ್ಮಸ್ಥೈರ್ಯವನ್ನು ಹೆಚ್ಚಿಸಲಿದೆ ಎಂದರು.
ನವದೆಹಲಿ: ಎಲ್ಪಿಜಿ ಅಥವಾ ಇತರ ಯಾವುದೇ ಇಂಧನದ ಕೊರತೆಯಿಲ್ಲದೆ, ರಾಜಧಾನಿಯಲ್ಲಿ ದೇಶೀಯ ಮತ್ತು ವಾಣಿಜ್ಯ ಎಲ್ಪಿಜಿ ಪೂರೈಕೆ ಸ್ಥಿರ, ಸಮರ್ಪಕ ಮತ್ತು ನಿಯಂತ್ರಣದಲ್ಲಿದೆ ಎಂದು ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಸೋಮವಾರ ನಿವಾಸಿಗಳಿಗೆ ಭರವಸೆ ನೀಡಿದ್ದಾರೆ. ಜನರು ವದಂತಿಗಳು ಅಥವಾ ಗಾಬರಿಯಿಂದ ಪ್ರಭಾವಿತರಾಗಬೇಡಿ ಮತ್ತು ಶಾಂತವಾಗಿರಲು ಅವರು ಜನರನ್ನು ಒತ್ತಾಯಿಸಿದರು. ದೇಶೀಯ ಎಲ್ಪಿಜಿ ಕುರಿತು ನವೀಕರಣವನ್ನು ಹಂಚಿಕೊಂಡ ಮುಖ್ಯಮಂತ್ರಿ, ಏಪ್ರಿಲ್ 12 ರಂದು ಒಟ್ಟು 1,11,766
ದಾವಣಗೆರೆ: ತಮ್ಮನ್ನು ಹರಿಹರ ಪಂಚಮಸಾಲಿ ಪೀಠದಿಂದ ಪದಚ್ಯುತಿಗೊಳಿಸಿದ ಬೆನ್ನಲ್ಲೇ ಟ್ರಸ್ಟಿಗಳ ವಿರುದ್ಧ ವಚನಾನಂದ ಸ್ವಾಮೀಜಿ ಆಕ್ರೋಶ ಹೊರಹಾಕಿದ್ದಾರೆ. ಕರ್ನಾಟಕದಲ್ಲಿ ಪಂಚಮಸಾಲಿ ಸಮಾಜ ದಿನದಿಂದ ದಿನಕ್ಕೆ ಬಲಿಷ್ಠವಾಗುತ್ತಿದೆ. ಅದರಲ್ಲೂ ಪಂಚಮಸಾಲಿ ನಾಯಕರು ತುಂಬಾ ಪ್ರಭಾವಿಗಳಾಗುತ್ತಿದ್ದಾರೆ. ಹೀಗಾಗಿ, ಬೇಕಂತಲೇ ನಮ್ಮ ಪಂಚಮಸಾಲಿ ನಾಯಕರೊಂದಿಗೆ ನಮ್ಮ ಸಮಾಜದ ಸ್ವಾಮೀಜಿಗಳನ್ನೂ ಟಾರ್ಗೆಟ್ ಮಾಡುತ್ತಿದ್ದಾರೆ ಎಂದು ಹೇಳಿದರು. ಈ ಸಂಬಂಧ ಮಾಧ್ಯಮದವರ ಜತೆ ಮಾತನಾಡಿದ ಅವರು, ನಾವು 2018ರಲ್ಲಿ ಪಂಚಮಸಾಲಿ ಪೀಠಕ್ಕೆ ಬಂದ ಮೇಲೆ ನಮ್ಮ
ಬೆಂಗಳೂರು: ಭಾರತೀಯ ರೈಲ್ವೇ ವಂದೇ ಭಾರತ್ ಸ್ಲೀಪರ್ ಸೇವೆಯನ್ನು ಅನುಮೋದಿಸುವುದರೊಂದಿಗೆ ಬೆಂಗಳೂರು ಮತ್ತು ಮುಂಬೈ ನಡುವಿನ ರೈಲು ಪ್ರಯಾಣಕ್ಕೆ ಅನುಮೋದನೆ ಸಿಕ್ಕಿದೆ. ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಬೆಂಗಳೂರು ಸೆಂಟ್ರಲ್ ಸಂಸದ ಪಿಸಿ ಮೋಹನ್ ಅವರಿಗೆ ಹೊಸ ಸ್ಲೀಪರ್ ರೈಲಿಗೆ ಅನುಮೋದನೆ ಕುರಿತು ಪತ್ರದಲ್ಲಿ ತಿಳಿಸಿದ್ದಾರೆ. ರೈಲ್ವೆಯು ಈ ಪ್ರಸ್ತಾವನೆಯನ್ನು ಸಕ್ರಿಯವಾಗಿ ಪರಿಗಣಿಸುತ್ತಿದೆ ಎಂದು ಜನವರಿ 6 ರಂದು ವರದಿ ಮಾಡಿದೆ.
ಮುಂಬೈ: ಪ್ರಸಿದ್ಧ ಗಾಯಕಿ ಆಶಾ ಭೋಂಸ್ಲೆ ಅವರ ಪಾರ್ಥಿವ ಶರೀರವನ್ನು ಶಿವಾಜಿ ಪಾರ್ಕ್ ಸ್ಮಶಾನದಲ್ಲಿ ಅಂತಿಮ ವಿಧಿವಿಧಾನಗಳಿಗಾಗಿ ಕೊಂಡೊಯ್ಯುವ ಸಂದರ್ಭದಲ್ಲಿ ಸೋಮವಾರ ಮುಂಬೈನ ಬೀದಿಗಳಲ್ಲಿ ಜನಸಾಗರವೇ ಜಮಾಯಿಸಿ ಅವರಿಗೆ ಅಂತಿಮ ವಿದಾಯ ಹೇಳಿದರು. ಅಭಿಮಾನಿಗಳು ಮತ್ತು ಸಂಗೀತ ಮತ್ತು ಚಲನಚಿತ್ರ ಭ್ರಾತೃತ್ವದ ಸದಸ್ಯರು ಭಾರತದ ಶ್ರೇಷ್ಠ ಗಾಯಕಿಗೆ ಗೌರವ ನೀಡಿತು. ರಾಜಕೀಯ ನಾಯಕರು, ನಟರು, ಸಂಗೀತಗಾರರು ಮತ್ತು ಆತ್ಮೀಯ ಸ್ನೇಹಿತರು ಅಂತಿಮ ನಮನ ಸಲ್ಲಿಸಿದರು.
ವಿಜಯನಗರ: ಆಂಧ್ರಪ್ರದೇಶದ 26 ವರ್ಷದ ಸಾಫ್ಟ್ವೇರ್ ಇಂಜಿನಿಯರ್ ಅಮೆರಿಕದಲ್ಲಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ವರದಿಯಾಗಿದೆ. ಅವರ ಹುಟ್ಟುಹಬ್ಬದ ದಿನವಾದ ಶನಿವಾರ ಈ ಘಟನೆ ನಡೆದಿದೆ. ಅವರು ಸ್ನೇಹಿತರ ಗುಂಪಿನೊಂದಿಗೆ ಕ್ಯಾಲಿಫೋರ್ನಿಯಾದ ಜಲಪಾತಕ್ಕೆ ಸಂಭ್ರಮಾಚರಣೆಗೆ ತೆರಳಿದ್ದರು. ಇದು ಅಪಾಯಕಾರಿ ನೀರಿನ ಪರಿಸ್ಥಿತಿಯಿಂದ ಉಂಟಾದ ಅಪಘಾತ ಎಂದು ಅಧಿಕಾರಿಗಳು ವಿವರಿಸಿದ್ದಾರೆ.ಸಿಂಗಿರೆಡ್ಡಿ ಸಾಯಿ ಶ್ರೀಹರಿಕೃಷ್ಣ ಅವರು ಅಮೇರಿಕಾದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿ ಇತ್ತೀಚೆಗಷ್ಟೇ ಸೇಂಟ್
ಪಶ್ಚಿಮ ಬಂಗಾಳ: ಪ್ರಧಾನಿ ನರೇಂದ್ರ ಮೋದಿ ಮತ್ತು ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ವರಿಷ್ಠ (ಟಿಎಂಸಿ) ಮತ್ತು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು "ಒಂದೇ ನಾಣ್ಯದ ಎರಡು ಮುಖಗಳು" ಎಂದು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಸೋಮವಾರ ಆರೋಪ ಮಾಡಿದ್ದಾರೆ.ಮುಂಬರುವ ಪಶ್ಚಿಮ ಬಂಗಾಳ ಚುನಾವಣೆಗಾಗಿ ಮುರ್ಷಿದಾಬಾದ್ನ ರಘುನಾಥ್ಗಂಜ್ ವಿಧಾನಸಭಾ ಕ್ಷೇತ್ರದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಈ ಆರೋಪಗಳನ್ನು ಮಾಡಲಾಗಿದೆ.ಬಂಗಾಳದ ಮುಸ್ಲಿಮರ ಹಿತಾಸಕ್ತಿಗಳನ್ನು ಮಜ್ಲಿಸ್ ಸಹಿಸುವುದಿಲ್ಲ ಎಂದು ನಾನು ಘೋಷಿಸಿದ್ದೇನೆ.
ರಾಯ್ಪುರ: ಎನ್ಕೌಂಟರ್ನಲ್ಲಿ ಉನ್ನತ ನಕ್ಸಲ್ ಕಮಾಂಡ್ ಒಬ್ಬರನ್ನು ಹತ್ಯೆಗೈಯ್ಯಲಾಗಿದೆ ಎಂದು ಛತ್ತೀಸ್ಗಢದ ಕಂಕೇರ್ ಜಿಲ್ಲೆಯ ದಟ್ಟ ಅರಣ್ಯದಲ್ಲಿ ನಡೆದಿದೆ.ಹತ್ಯೆಯಾದ ನಕ್ಸಲ್ ಕಮಾಂಡರ್ನ್ನು ರೂಪಿ ಎಂದು ಗುರುತಿಸಲಾಗಿದೆ. ಟೆಬೆಥಿಯಾ-ಪರ್ತಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಮಚ್ಪಲ್ಲಿ-ಅರಾಮ್ಜೋರಾ-ಹಿದೂರ್ ಬೆಲ್ಟ್ನಲ್ಲಿ ಶಸ್ತ್ರಸಜ್ಜಿತ ನಕ್ಸಲರಿರುವ ಮಾಹಿತಿ ಪೊಲೀಸರಿಗೆ ಸಿಕ್ಕಿತ್ತು.
ಬೆಂಗಳೂರು: ರಾಜಕೀಯ ವಲಯದಲ್ಲಿ ಎಂಎಲ್ಸಿ ನಜೀರ್ ಅಹ್ಮದ್ಗೆ ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ಸ್ಥಾನಕ್ಕೆ ರಾಜೀನಾಮೆ ನೀಡಲು ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಡೆಡ್ಲೈಲ್ ನೀಡಿದ್ದಾರೆ ಎನ್ನಲಾಗಿದೆ. ಇಂದು ಸಂಜೆಯೊಳಗೆ ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ರಾಜೀನಾಮೆ ನೀಡಬೇಕೆಂದು ಸೂಚನೆ ನೀಡಿದ್ದಾರೆ. ಒಂದು ವೇಳೆ ಸಂಜೆಯೊಳಗೆ ನಜೀರ್ ಅಹಮ್ಮದ್ ರಾಜೀನಾಮೆ ನೀಡದಿದ್ದರೆ ಅವರನ್ನು ಕಾರ್ಯದರ್ಶಿ ಸ್ಥಾನದಿಂದ ವಜಾ ಮಾಡಲು ಸಿದ್ದರಾಮಯ್ಯ ಸೂಚಿಸಿದ್ದಾರೆ ಎಂದು ತಿಳಿಸಿದ್ದಾರೆ.
ಬೆಂಗಳೂರು: ಭ್ರಷ್ಟಾಚಾರ ನಿಯಂತ್ರಣ ಮತ್ತು ಪಾರದರ್ಶಕತೆ ತರಲು ಉದ್ಯೋಗ ಖಾತ್ರಿ ಯೋಜನೆಗೆ ಒಂದಿಷ್ಟು ಪರಿಷ್ಕರಣೆ ಮಾಡುವ ಕೆಲಸವನ್ನು ನರೇಂದ್ರ ಮೋದಿಯವರ ಸರಕಾರ ಮಾಡಿದೆ. ಇದರ ಕುರಿತು ಜನಸಾಮಾನ್ಯರಲ್ಲಿ ತಪ್ಪು ಗ್ರಹಿಕೆ ಬರುವಂತೆ ರಾಜ್ಯ ಸರಕಾರದ ಗ್ರಾಮೀಣಾಭಿವೃದ್ಧಿ ಇಲಾಖೆ ಮಾಡುತ್ತಿರುವುದು ದುರದೃಷ್ಟಕರ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ತಿಳಿಸಿದ್ದಾರೆ.ಮಾಧ್ಯಮಗಳ ಜೊತೆ ಇಂದು ಮಾತನಾಡಿದ ಅವರು, ರಾಜ್ಯ ಸರಕಾರವು ಬಜೆಟ್ನಡಿ ಕೇಂದ್ರಕ್ಕೆ ಪೂರಕವಾದ ನಿಮ್ಮ ಪಾಲಿನ ಅನುದಾನ ಕಾದಿರಿಸಿ ಯೋಜನೆಯನ್ನು ಯಶಸ್ವಿ ಮಾಡಿದರೆ ಜನಸಾಮಾನ್ಯರಿಗೆ ಅನುಕೂಲ ಆಗಲಿದೆ. ಕಾರ್ಮಿಕರಿಗೆ ಹೆಚ್ಚು ವೇತನ ಬೇಗನೆ ಸಿಗಲಿದೆ. ಅಪಪ್ರಚಾರ ಕೈಬಿಟ್ಟು ಕೇಂದ್ರ ಸರಕಾರದ ಜೊತೆ ಸಹಭಾಗಿತ್ವದಿಂದ ಕೆಲಸ ಮಾಡಬೇಕೆಂದು ಆಗ್ರಹಿಸಿದರು.
ಬೆಂಗಳೂರು: ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ. ಬಿ ಆರ್ ಅಂಬೇಡ್ಕರ್ ಅವರ ಜಯಂತಿಯ ಅಂಗವಾಗಿ ರಾಜ್ಯದಾದ್ಯಂತ ನಾಳೆಯಿಂದ (ಏ.13) ರಿಂದ 20 ರವರೆಗೆ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ಸಂಸದ ಗೋವಿಂದ ಕಾರಜೋಳ ಅವರು ಹೇಳಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಅವರು ಮಾಧ್ಯಮಗಳ ಜೊತೆ ಮಾತನಾಡಿದ ಅವರು ಬಾಬಾ ಸಾಹೇಬ್ ಅವರ ಜಯಂತಿ ಅಂಗವಾಗಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲು ಇಡೀ ರಾಜ್ಯಕ್ಕೆ ಎಲ್ಲ ಜಿಲ್ಲೆ ಮತ್ತು ತಾಲೂಕುಗಳಿಗೇ ಭಾರತೀಯ ಜನತಾ ಪಕ್ಷ ವತಿಯಿಂದ ಸೂಚನೆ ನೀಡಲಾಗಿದೆ ಎಂದರು.
ಬೆಂಗಳೂರು: ಸ್ಯಾಂಡಲ್ವುಡ್ ನಟ ಧ್ರುವ ಸರ್ಜಾ ಆಟೋ ಚಾಲಕರ ಸಹಾಯಕ್ಕೆ ಬಂದಿದ್ದಾರೆ. ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅವರು ಆಟೋ ಚಾಲಕರು ಎದುರಿಸುತ್ತಿರುವ ಎಲ್ಪಿಜಿ ಗ್ಯಾಸ್ ಸಮಸ್ಯೆಯ ಬಗ್ಗೆ ಧ್ವನಿ ಎತ್ತಿದ್ದಾರೆ. ಸದ್ಯ ಆಟೋಗಳಿಗೆ ಎಲ್ಪಿಜಿ ಗ್ಯಾಸ್ ಸಿಗದೇ ಆಟೋ ನಂಬಿ ಜೀವನ ನಡೆಸುತ್ತಿರುವವರು ಕಷ್ಟಪಡುತ್ತಿದ್ದಾರೆ. ಇವರ ಕಷ್ಟಕ್ಕೆ ಮರುಗಿರುವ ಧ್ರುವ ಆಟೋ ಚಾಲಕರ ಕುಟುಂಬಗಳಿಗೆ ಸಹಾಯವಾಗುವಂತೆ 25 ಲಕ್ಷ ರೂಪಾಯಿಯನ್ನು ನೀಡಿದ್ದಾರೆ. ಜೊತೆಗೆ ಈ ಸಮಸ್ಯೆಯನ್ನು ಬೇಗ ಬಗೆಹರಿಸುವಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರವನ್ನು ಮನವಿ ಮಾಡಿದ್ದಾರೆ.ಆಟೋ ಚಾಲಕರು ನಮ್ಮ ದೇಶದ ಬೆನ್ನೆಲುಬು. ಸಾಕಷ್ಟು ಒಳ್ಳೆಯ ಕೆಲಸಗಳನ್ನು ಮಾಡಿಕೊಂಡು ಬಂದಿದ್ದಾರೆ. ಆದರೆ, ಅವರೇ ಈಗ ಕಷ್ಟದಲ್ಲಿದ್ದಾರೆ. ಎಲ್ಲಿಯೂ ಎಲ್ಪಿಜಿ ಗ್ಯಾಸ್ ಸಿಗುತ್ತಿಲ್ಲ.
ದಾವಣಗೆರೆ: ಇಂದು ಬೆಳಿಗ್ಗೆಯಿಂದಲೇ ಪಂಚಮಸಾಲಿ ಗುರುಪೀಠದ ಧರ್ಮದರ್ಶಿ ಮಂಡಳಿ ಹಾಗೂ ಭಕ್ತರ ನಡುವಿನ ಸಂಘರ್ಷ ಮಠದ ಆವರಣದಲ್ಲಿ ಹೈಡ್ರಾಮಾ ಸೃಷ್ಟಿಸಿತ್ತು. ಇದರ ಬೆನ್ನಲ್ಲೇ ವಚನಾನಂದ ಸ್ವಾಮೀಜಿಗೆ ಬಿಗ್ ಶಾಕ್ ನೀಡಲಾಗಿದೆ.ಲೆಕ್ಕ ಕೊಡಿ ಅಭಿಯಾನ ತೀವ್ರ ಸ್ವರೂಪ ಪಡೆದ ಬೆನ್ನಲ್ಲೇ ಪಂಚಮಸಾಲಿ ಗುರುಪೀಠದಿಂದ ವಚನಾನಂದ ಸ್ವಾಮೀಜಿಯನ್ನು ಉಚ್ಛಾಟನೆ ಮಾಡಲಾಗಿದೆ. ಗುರುಪೀಠದಲ್ಲಿ ನಡೆದ ಧರ್ಮದರ್ಶಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.ಒಟ್ಟು 15 ಜನ ಇರುವ ಧರ್ಮದರ್ಶಿ ಸಮಿತಿ ಸಭೆಯಲ್ಲಿ 12 ಜನ ಈ ನಿರ್ಧಾರಕ್ಕೆ ಸಹಮತ ಸೂಚಿಸಿದ್ದಾರೆ ಎಂದು ಧರ್ಮದರ್ಶಿ ಸಮಿತಿ ಸದಸ್ಯರಾದ ಬಸವರಾಜ್ ದಿಂಡೂರ ಹಾಗೂ ಬಾವಿ ಬೆಟ್ಟಪ್ಪ ತಿಳಿಸಿದ್ದಾರೆ.
ಬಾಗಲಕೋಟೆ: ಬಸವ ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಎಸಗಿದ್ದ ಸಂತ್ರಸ್ತ ಮಹಿಳೆ ಇದೀಗ ಉಲ್ಟಾ ಹೊಡೆದಿದ್ದಾರೆ. ಈ ಮೂಲಕ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಈಚೆಗೆ ಸ್ವಾಮೀಜಿ ವಿರುದ್ಧ ಮಹಿಳೆಯೊಬ್ಬರು ಗಂಭೀರ ಆರೋಪ ಮಾಡಿದ್ದರು. ಇದೀಗ ಈ ಪ್ರಕರಣ ಸಂಬಂಧ ಸಂತ್ರಸ್ತ ಮಹಿಳೆ ವಿಡಿಯೋವೊಂದನ್ನು ಬಿಡುಗಡೆ ಮಾಡಿದ್ದಾರೆ. ನಾನು ಶ್ರೀಗಳ ವಿರುದ್ಧ ದೂರು ನೀಡಿಲ್ಲ. ನನ್ನ ಮತ್ತು ಸ್ವಾಮೀಜಿ ಮೇಲಿರುವ ಆರೋಪಗಳೆಲ್ಲವೂ ಸುಳ್ಳು. ಇನ್ನೂ ನನ್ನ ಹೆಸರಿನಲ್ಲಿ
ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ಸಿನವರು ಮಹಿಳಾ ಮೀಸಲಾತಿ ಒಂದು ರಾಜಕೀಯ ಗಿಮಿಕ್ ಎಂದಿದ್ದಾರೆ. ಈ ಹೇಳಿಕೆಯ ಮೂಲಕ ದೇಶದ ನಾರಿಶಕ್ತಿಗೆ ಅಪಮಾನ ಮಾಡುವ ಕೆಲಸವನ್ನು ಕಾಂಗ್ರೆಸ್ ಪಕ್ಷದವರು ಮಾಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ತಿಳಿಸಿದ್ದಾರೆ.ಮಾಧ್ಯಮಗಳ ಜೊತೆ ಇಂದು ಮಾತನಾಡಿದ ಅವರು, ಮಹಿಳಾ ಮೀಸಲಾತಿಯು ನರೇಂದ್ರ ಮೋದಿಜಿ ಅವರು ತೆಗೆದುಕೊಂಡ ಐತಿಹಾಸಿಕ ನಿರ್ಣಯ ಎಂದು ತಿಳಿಸಿದರು. ಉಪ ಚುನಾವಣೆಯಲ್ಲಿ ರಾಜ್ಯದ ಮುಖ್ಯಮಂತ್ರಿಗಳು ವಿಧಾನಸೌಧ ಮತ್ತು ಆಡಳಿತವನ್ನು ಸಂಪೂರ್ಣ ಮರೆತು ಬಾಗಲಕೋಟೆಯಲ್ಲಿ 8-9 ದಿನಗಳ ಕಾಲ ಇದ್ದರು. ದಾವಣಗೆರೆ ಬಗ್ಗೆ ಮುಖ್ಯಮಂತ್ರಿಗಳು ತಲೆ ಕೆಡಿಸಿಕೊಂಡಂತೆ ಕಾಣಲಿಲ್ಲ ಎಂದು ತಿಳಿಸಿದರು.
ಬೆಂಗಳೂರು: ಪಕ್ಷದ ಹಿರಿಯ ಶಾಸಕರು ಸಚಿವ ಸ್ಥಾನ ಕೇಳುವುದ್ರಲ್ಲಿ ಯಾವುದೇ ತಪ್ಪಿಲ್ಲ, ಅದೇನು ಗ್ಯಾಬ್ಲಿಂಗ್ ಅಲ್ಲ ಎಂದು ಗೃಹ ಸಚಿವ ಜಿ ಪರಮೇಶ್ವರ್ ಹೇಳಿದರು. ಈ ವಿಚಾರದಲ್ಲಿ ನಗರದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಎರಡೂ ಮೂರು ಬಾರಿ ಶಾಸಕರಾಗು ಗೆದ್ದಿರುವವರು, ಸಚಿವರಾಗಲು ಸಮರ್ಥರಾದವರು. ಅವರು ಸಚಿವ ಸ್ಥಾನ ಕೇಳುವುದರಲ್ಲಿ ತಪ್ಪಿಲ್ಲ. ಆದರೆ ಇದನ್ನು ಹೈಕಮಾಂಡ್ ತೀರ್ಮಾನವನ್ನು ಕೈಗೊಳ್ಳುತ್ತದೆಂದು ಹೇಳಿದರು. ಅದೇನು ಗ್ಯಾಂಬ್ಲಿಂಗ್ ಅಲ್ಲ. ಅವರಿಗೆ ಅರ್ಹತೆ ಇದೆ ಕೇಳ್ತಾರೆ. ನಾಯಕತ್ವ ವಿಚಾರ ಇರಲಿ, ಪುನಾರಚನೆ ಇರಲಿ ಹೈಕಮಾಂಡ್
ಸೋನ್ ಭದ್ರ: ಆಕ್ಸಿಡೆಂಟ್ ಆದ ಟ್ರಕ್ ನಲ್ಲಿ ಸಿಲುಕಿದ ಚಾಲಕ ಕಾಪಾಡಿ ಎಂದು ಕೂಗುತ್ತಿದ್ದರೂ ಸಹಾಯ ಮಾಡಲಾಗದೇ ಜನ ಅಸಹಾಯಕರಾಗಿ ನಿಂತಿದ್ದರೆ ಆತ ಕಣ್ಣೆದುರೇ ಬೆಂಕಿಗೆ ಆಹುತಿಯಾದ ಭೀಕರ ವಿಡಿಯೋ ವೈರಲ್ ಆಗಿದೆ. ಉತ್ತರ ಪ್ರದೇಶದ ಸೋನ್ ಭದ್ರದ ರೇಣುಕೂಟ್ ನಲ್ಲಿ ಈ ಘಟನೆ ನಡೆದಿದೆ. ಅಪಘಾತವಾದಾಗ ಸಾವು ನೋವುಗಳಾಗುವುದು ಸಹಜ. ಆದರೆ ಇಲ್ಲಿ ಸಾಕಷ್ಟು ಜನರಿದ್ದರೂ ಓರ್ವ ಚಾಲಕನನ್ನು ರಕ್ಷಿಸಲು ಸಾಧ್ಯವಾಗಲಿಲ್ಲ. ಇದಕ್ಕೆ ಕಾರಣವೂ ಇದೆ. ರೇಣುಕೂಟ್ ನಲ್ಲಿ ಎರಡು ಟ್ರಕ್ ಗಳ ನಡುವೆ ಭೀಕರ ಅಪಘಾತವಾಗಿತ್ತು. ಬೃಹತ್ ಗಾತ್ರದ ಟ್ರಕ್ ಗಳೆರಡು ಎದುರು ಬದರಾಗಿ ಢಿಕ್ಕಿ ಹೊಡೆದಿದ್ದವು.
ಬೆಂಗಳೂರು: ಮಂತ್ರಿಗಿರಿಗಾಗಿ ಬೇಡಿಕೆಯಿಟ್ಟಿರುವ ಶಾಸಕರಿಗೆ ಡಿಸಿಎಂ ಡಿಕೆ ಶಿವಕುಮಾರ್ ಖಡಕ್ ಸಂದೇಶ ರವಾನಿಸಿದ್ದು ಮೀಡಿಯಾ ನಿಮ್ಮ ಭವಿಷ್ಯ ಅಲ್ಲ, ಪಾರ್ಟಿ ನಿಮ್ಮ ಭವಿಷ್ಯ ಎಂದಿದ್ದಾರೆ. ಬೈ ಎಲೆಕ್ಷನ್ ಮುಕ್ತಾಯವಾಗುತ್ತಿದ್ದಂತೇ ಈಗ ಕರ್ನಾಟಕ ಕಾಂಗ್ರೆಸ್ ನಲ್ಲಿ ಚಟುವಟಿಕೆಗಳು ಗರಿಗೆದರಿವೆ. ಮತ್ತೆ ಸಂಪುಟ ಪುನರಾರಚನೆ ವಿಚಾರ ಸದ್ದು ಮಾಡುತ್ತಿವೆ. ಕೆಲವು ಶಾಸಕರು ಮಂತ್ರಿಗಿರಿಗಾಗಿ ದೆಹಲಿಗೆ ತೆರಳುವ ಸಿದ್ಧತೆಯಲ್ಲಿದ್ದಾರೆ. ಇನ್ನು ಕೆಲವರು ಈ ಬಗ್ಗೆ ಬಹಿರಂಗವಾಗಿ ಮಾಧ್ಯಮಗಳ ಮುಂದೆ ಹೇಳಿಕೆ ನೀಡುತ್ತಿದ್ದಾರೆ. ಇದು ಡಿಕೆ ಶಿವಕುಮಾರ್ ಸಿಟ್ಟಿಗೆ ಕಾರಣವಾಗಿದೆ.
ಚೆನ್ನೈ: ಟಿವಿಕೆ ಪಕ್ಷದ ನಾಯಕ, ನಟ ದಳಪತಿ ವಿಜಯ್ ಚುನಾವಣಾ ಪ್ರಚಾರದ ವೇಳೆ ಎಡವಟ್ಟಾಗಿದೆ. ಹೂ ಬಿಸಾಕಿದಾಗ ಬಾಂಬ್ ಎಂದುಕೊಂಡು ವಿಜಯ್ ಎದ್ನೋ ಬಿದ್ನೋ ಎಂದು ಓಡಿದ ವಿಡಿಯೋ ವೈರಲ್ ಆಗಿದೆ. ನಿನ್ನೆ ತಮಿಳುನಾಡಿನ ಕರೈಕುಡಿಯಲ್ಲಿ ವಿಜಯ್ ಸೈಕಲ್ ಜಾಥಾ ಮಾಡುತ್ತಿದ್ದರು. ಈ ವೇಳೆ ಅವರನ್ನು ನೋಡಲು ಸಾಕಷ್ಟು ಅಭಿಮಾನಿಗಳು ರಸ್ತೆಯ ಇಕ್ಕೆಲಗಳಲ್ಲೂ ನಿಂತಿದ್ದು. ಎಲ್ಲರತ್ತ ವಿಜಯ್ ಕೈ ಬೀಸುತ್ತಾ ಸೈಕಲ್ ತುಳಿದುಕೊಂಡು ಹೋಗುತ್ತಿದ್ದರು. ಈ ವೇಳೆ ಅವರ ಬೆಂಗಾವಲು ವಾಹನಗಳೂ ಹಿಂದೆ ಮುಂದೆ ಸಂಚರಿಸುತ್ತಿದ್ದವು. ವಿಜಯ್ ರನ್ನು ನೋಡಿ ಅಭಿಮಾನಿಗಳು ಅಲ್ಲಲ್ಲಿ ಹೂವಿನ ಮಳೆಗೆರೆಯುತ್ತಿದ್ದರು. ಅವರತ್ತ ವಿಜಯ್ ಕೈ ಬೀಸಿ ತೆರಳುತ್ತಿದ್ದರು.
ಬೆಂಗಳೂರು: ಅಡಿಕೆ ಬೆಲೆ ಕಳೆದ ವಾರ ಏರಿಕೆ-ಇಳಿಕೆಯಾಗಿತ್ತು. ಕಳೆದ ವಾರದಂತೆ ಈ ವಾರವೂ ಅದೇ ಟ್ರೆಂಡ್ ಮುಂದುವರಿದಿದೆ. ಇಂದು ಅಡಿಕೆ ಮತ್ತು ಕಾಳು ಮೆಣಸು, ಕೊಬ್ಬರಿ ದರ ಹೇಗಿದೆ ಇಲ್ಲಿದೆ ವಿವರ. ಕಳೆದ ವಾರ ಅಡಿಕೆ ಬೆಲೆಯಲ್ಲಿ ಕೊಂಚ ಏರಿಳಿಕೆಯಾಗುತ್ತಲೇ ಇತ್ತು. ಕಳೆದ ವಾರ ಎರಡು ದಿನ ಸತತವಾಗಿ ಬೆಲೆ ಏರಿಕೆ ಕಂಡುಬರುತ್ತಿತ್ತು. ಅಡಿಕೆ ಬೆಲೆಯಲ್ಲಿ ಮೊನ್ನೆ ಕೊಂಚ ಇಳಿಕೆಯಾಗಿತ್ತು. ಹೊಸ ಅಡಿಕೆ ಬೆಲೆ 490 ರೂ.ಗಳಷ್ಟಿದೆ. ಹಳೆ ಅಡಿಕೆ ಬೆಲೆ 555 ರೂ. ಗಳಾಗಿದೆ. ಡಬಲ್ ಚೋಲ್ ಬೆಲೆಯೂ 555 ರೂ.ಗಳಷ್ಟಾಗಿದೆ.
ಬೆಂಗಳೂರು: ಕಳೆದ ಕೆಲವು ದಿನಗಳಿಂದ ಚಿನ್ನದ ದರ ಏರಿಕೆ, ಇಳಿಕೆಯಾಗುತ್ತಲೇ ಇದೆ. ಇಂದು ಪರಿಶುದ್ಧ ಚಿನ್ನದ ದರ ಮತ್ತುಇತರೆ ಚಿನ್ನದ ದರ ಇಳಿಕೆಯಾಗಿದೆ. ಇಂದು ಪರಿಶುದ್ಧ ಚಿನ್ನದ ದರ ಮತ್ತು ಇತರೆ ಚಿನ್ನದ ದರ ವಿವರ ಇಲ್ಲಿದೆ ನೋಡಿ. ಚಿನ್ನದ ದರ ಏರಿಕೆಕಳೆದ ವಾರ ಪರಿಶುದ್ಧ ಚಿನ್ನದ ದರ ಸತತವಾಗಿ ಬೆಲೆ ಏರಿಳಿಕೆಯಾಗುತ್ತಲೇ ಇತ್ತು. ಆದರೆ ವಾರಂತ್ಯಕ್ಕೆ ಪರಿಶುದ್ಧ ಚಿನ್ನದ ದರದಲ್ಲಿ ಕೊಂಚ ಇಳಿಕೆಯಾಗಿತ್ತು. ಪರಿಶುದ್ಧ ಚಿನ್ನದ ದರ ವಾರಂತ್ಯಕ್ಕೆ 1,55,420.00 ರೂ.ಗಳಿತ್ತು. ಆದರೆ ಇಂದು ಇಳಿಕೆಯಾಗಿದ್ದು 1,55,165.00 ರೂ.ಗಳಷ್ಟಿದೆ.
ಶಿವ ದೇವರು ಅಶಿಸ್ತನ್ನು ಎಂದಿಗೂ ಸಹಿಸಲಾರ. ಬೇಗನೇ ಕೋಪಗೊಳ್ಳುವ ಆದರೆ ಅವನನ್ನು ನಂಬಿದವರ ಕೈ ಬಿಡದ ಕರುಣಾಳು ಆತ. ಆದರೆ ನೀವು ಮಾಡುವ ಈ ಕೆಲವೊಂದು ತಪ್ಪುಗಳು ಶಿವ ದೇವರ ಕೋಪಕ್ಕೆ ಕಾರಣವಾಗಬಹುದು. ಹಿರಿಯರನ್ನು, ಅಸಹಾಯಕರನ್ನು ಅಗೌರವಿಸಬೇಡಿಹಿರಿಯರನ್ನು ಮತ್ತು ಅಸಹಾಯಕರಾಗಿದ್ದವರನ್ನು ತಮಾಷೆ ಮಾಡುವುದು, ಕುಚೋದ್ಯ ಮಾಡುವುದು, ಕಿರುಕುಳ ನೀಡುವುದು ಮಾಡಿದರೆ ಶಿವ ದೇವರ ಕೋಪಕ್ಕೆ ಗುರಿಯಾಗಬೇಕಾದೀತು. ಅಪ್ರಮಾಣಿಕತೆ, ದುರಾಸೆಶಿವನನ್ನು ಯೋಗಿ ಎಂದು ಕರೆಯುತ್ತಾರೆ. ಆತನಿಗೆ ಅಪ್ರಮಾಣಿಕತೆ, ಇನ್ನೊಬ್ಬರ ವಸ್ತುವಿಗೆ ದುರಾಸೆ ಪಡುವುದು ಎಂದಿಗೂ ಇಷ್ಟವಾಗಲ್ಲ.
ಮುಂಬೈ: ಬೇಗ ಹೋಗು ಕ್ರೀಸ್ ಮುಟ್ಟು ಇಲ್ಲಾಂದ್ರೆ ಔಟ್ ಮಾಡ್ತೀನಿ.. ಹೀಗಂತ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಫನ್ ಮಾಡಿದ ವಿಡಿಯೋ ಇಲ್ಲಿದೆ. ಮುಂಬೈ ಇಂಡಿಯನ್ಸ್ ಮತ್ತು ಆರ್ ಸಿಬಿ ನಡುವಿನ ಪಂದ್ಯವೆಂದರೆ ಅನೇಕರು ರೋಹಿತ್ ಮತ್ತು ಕೊಹ್ಲಿ ನಡುವಿನ ಕ್ಷಣಗಳನ್ನು ನೋಡಲೆಂದೇ ಅಭಿಮಾನಿಗಳು ಕಾದಿದ್ದರು. ಅದಕ್ಕ ತಕ್ಕಂತೆ ನಿನ್ನೆ ಹಲವು ಕ್ಷಣಗಳು ನಡೆದಿದ್ದೆವು. ವಿರಾಟ್ ಕೊಹ್ಲಿ ಭರ್ಜರಿ ಹೊಡೆತಗಳನ್ನು ಹೊಡೆಯುತ್ತಿದ್ದರೆ ರೋಹಿತ್ ಶರ್ಮಾ ಕೊಂಚ ಹತಾಶೆಯ ಮುಖಭಾವ ತೋರ್ಪಡಿಸಿದ್ದರು.
ಮುಂಬೈ: ಕ್ರಿಕೆಟ್ ಸಹೋದರರಾದ ಹಾರ್ದಿಕ್ ಪಾಂಡ್ಯ ಮತ್ತು ಕೃನಾಲ್ ಪಾಂಡ್ಯ ನಡುವೆ ಎಲ್ಲವೂ ಸರಿಯಿಲ್ಲ ಎಂಬ ವರದಿಗಳ ನಡುವೆಯೇ ನಿನ್ನೆಯ ಪಂದ್ಯದಲ್ಲಿ ಹಾರ್ದಿಕ್ ಔಟಾದಾಗ ಕೃನಾಲ್ ನಡೆದುಕೊಂಡ ರೀತಿ ಚರ್ಚೆಗೆ ಕಾರಣವಾಗಿದೆ. ಹಾರ್ದಿಕ್ ಪಾಂಡ್ಯ ವಿಚ್ಛೇದನವಾಗಿ ಹೊಸ ಗೆಳತಿ ಬಂದ ಮೇಲೆ ಕೃನಾಲ್ ಮತ್ತು ಹಾರ್ದಿಕ್ ನಡುವೆ ಎಲ್ಲವೂ ಸರಿಯಿಲ್ಲ ಎಂದು ಕೆಲವು ಮಾಧ್ಯಮಗಳು ವರದಿ ಮಾಡಿದ್ದವು. ಇದಕ್ಕೆ ತಕ್ಕಂತೆ ಹಾರ್ದಿಕ್ ಮಾಜಿ ಪತ್ನಿ ನತಾಶಾ ಜೊತೆ ಈಗಲೂ ಕೃನಾಲ್ ದಂಪತಿ ಸಂಪರ್ಕದಲ್ಲಿದ್ದಾರೆ.
ಬೆಂಗಳೂರು: ತನ್ನ ಹೆಂಡತಿ ನೋಡಿ ಪಕ್ಕದ ಮನೆ ನಾಯಿ ಬೊಗಳಿತೆಂದು ಸಿಟ್ಟಿಗೆ ಅದಕ್ಕೆ ಹಿಗ್ಗಾಮುಗ್ಗಾ ಹೊಡೆದು ವ್ಯಕ್ತಿಯೊಬ್ಬ ಅಮಾನವೀಯವಾಗಿ ನಡೆದುಕೊಂಡ ವಿಡಿಯೋ ಇಲ್ಲಿದೆ ನೋಡಿ. ಈ ಘಟನೆ ನಡೆದಿರುವುದು ಬೆಂಗಳೂರಿನ ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ. ಪ್ರಾಣಿಗಳು ಮನುಷ್ಯರಷ್ಟು ಬುದ್ಧಿವಂತರು, ತಿಳಿದವರು ಅಲ್ಲ. ಆದರೆ ಕೆಲವೊಮ್ಮೆ ಮನುಷ್ಯ ತಾನು ಮಾನವ ಎಂಬುದನ್ನು ಮರೆತು ಮೃಗೀಯವಾಗಿ ನಡೆದುಕೊಳ್ಳುತ್ತಾನೆ. ಇಲ್ಲಿ ಆಗಿದ್ದೂ ಇದೆ. ಪಕ್ಕದ ಮನೆಯ ಸ್ಕೂಬಿ ಎನ್ನುವ ನಾಯಿ ತನ್ನ ಹೆಂಡತಿ ನೋಡಿ ಬೊಗಳಿತೆಂಬುದು ಗೋಪಿ ಎನ್ನುವ ವ್ಯಕ್ತಿಯ ಕೋಪಕ್ಕೆ ಕಾರಣವಾಗಿದೆ.
ಮುಂಬೈ: ಐಪಿಎಲ್ 2026 ರಲ್ಲಿ ನಿನ್ನೆ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಅಂಪಾಯರ್ ದಿಡೀರ್ ಬಾಲ್ ಬದಲಾಯಿಸಿದ್ದಕ್ಕೆ ಟಿಮ್ ಡೇವಿಡ್ ಅನುಮಾನ ಬಂದು ಪರಿಶೀಲನೆ ಮಾಡುತ್ತಿದ್ದರೆ ಇತ್ತ ಅಂಪಾಯರ್ ಅಳುವುದೊಂದೇ ಬಾಕಿ. ಈ ಫನ್ನಿ ವಿಡಿಯೋ ಇಲ್ಲಿದೆ ನೋಡಿ. ಮುಂಬೈ ಇಂಡಿಯನ್ಸ್ ವಿರುದ್ಧ ನಿನ್ನೆಯ ಪಂದ್ಯವನ್ನು ಆರ್ ಸಿಬಿ 18 ರನ್ ಗಳಿಂದ ಗೆದ್ದುಕೊಂಡಿದೆ. ಟಾಸ್ ಸೋತ ಆರ್ ಸಿಬಿ ಮೊದಲು ಬ್ಯಾಟಿಂಗ್ ಗಿಳಿಸಲ್ಪಟ್ಟಿತ್ತು. ಆರ್ ಸಿಬಿ ಬ್ಯಾಟಿಂಗ್ ವೇಳೆ ಅಂಪಾಯರ್ ದಿಡೀರ್ ಬಾಲ್ ಬದಲಾಯಿಸಿದ್ದಾರೆ.
ನ್ಯೂಯಾರ್ಕ್: ಶಾಂತಿ ಮಾತುಕತೆ ವಿಫಲವಾದ ಬೆನ್ನಲ್ಲೇ ಇನ್ನು ನೀವಾಗಿಯೇ ಬಂದ್ರೂ ಕೇರ್ ಮಾಡಲ್ಲ ಎಂದ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತೆ ಇರಾನ್ ವಿರುದ್ಧ ಯುದ್ಧ ಮಾಡ್ತಾರಾ ಎಂಬ ಅನುಮಾನ ಶುರುವಾಗಿದೆ. ಸದ್ಯಕ್ಕೆ ಇರಾನ್ ಮತ್ತು ಅಮೆರಿಕಾ ನಡುವೆ 15 ದಿನಗಳ ಕದನ ವಿರಾಮವಾಗಿದೆ. ಈ ಸಮಯದಲ್ಲಿ ಅಮೆರಿಕಾ ಯುದ್ಧ ಮಾಡುವ ಸಾಧ್ಯತೆ ಕಡಿಮೆ. ಆದರೆ ಕದನ ವಿರಾಮ ಮುಗಿದ ಬಳಿಕ ಅಮೆರಿಕಾ ಮತ್ತೆ ಯುದ್ಧ ಆರಂಭಿಸಿದರೂ ಅಚ್ಚರಿಯಿಲ್ಲ ಎನ್ನುತ್ತಿದೆ ಮೂಲಗಳು.
ಮುಂಬೈ: ಬಾಲ್ಕನಿಯಲ್ಲಿರುವ ಅನುಷ್ಕಾ ಶರ್ಮಾಗೆ ಕ್ಯೂಟ್ ಆಗಿ ತಲೆ ನೋಯ್ತಾ ಇದೆ ಎಂದು ವಿರಾಟ್ ಕೊಹ್ಲಿ ಸನ್ನೆ ಮಾಡಿ ಸಂದೇಶ ರವಾನಿಸಿರುವ ವಿಡಿಯೋ ಇಲ್ಲಿದೆ ನೋಡಿ. ಮುಂಬೈ ಇಂಡಿಯನ್ಸ್ ವಿರುದ್ಧ ಮೊದಲು ಬ್ಯಾಟಿಂಗ್ ಮಾಡಿದ ಆರ್ ಸಿಬಿ 240 ರನ್ ಗಳಿಸಿತು. ನಂತರ ಮುಂಬೈ 222 ರನ್ ಗಳಿಸಲಷ್ಟೇ ಶಕ್ತವಾಯಿತು. ಆದರೆ ವಿರಾಟ್ ಕೊಹ್ಲಿ ಎರಡನೇ ಇನಿಂಗ್ಸ್ ನಲ್ಲಿ ಮೈದಾನಕ್ಕಿಳಿದಿರಲಿಲ್ಲ. ಡಗೌಟ್ ನಲ್ಲೇ ಕುಳಿತಿದ್ದರು. ವಿರಾಟ್ ಕೊಹ್ಲಿ ಡಗೌಟ್ ನಲ್ಲಿ ಕೂತಿದ್ದನ್ನು ನೋಡಿ ಅನುಷ್ಕಾ ಶರ್ಮಾಗೆ ಅನುಮಾನವಾಗಿತ್ತು. ಯಾಕೆ ಮೈದಾನಕ್ಕಿಳಿಯಲಿಲ್ಲ ಎಂದು ಬಾಲ್ಕನಿಯಿಂದ ಪ್ರಶ್ನೆ ಮಾಡಿದ್ದರು.
ಮುಂಬೈ: ಐಪಿಎಲ್ 2026 ರಲ್ಲಿ ನಿನ್ನೆ ಮುಂಬೈ ಇಂಡಿಯನ್ಸ್ ಮತ್ತು ಆರ್ ಸಿಬಿ ನಡುವಿನ ಪಂದ್ಯದ ವೇಳೆ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ನಡುವಿನ ತಮಾಷೆಯ ಕ್ಷಣವೊಂದು ಎಲ್ಲರ ಗಮನ ಸೆಳೆದಿದೆ. ನಿನ್ನೆಯ ಪಂದ್ಯದಲ್ಲಿ ಆರ್ ಸಿಬಿ ಬ್ಯಾಟಿಗರು ಭರ್ಜರಿ ಪ್ರದರ್ಶನ ನೀಡಿದ್ದರು. ಟಾಸ್ ಗೆದ್ದು ಮೊದಲು ಆರ್ ಸಿಬಿಯನ್ನು ಮುಂಬೈ ಬ್ಯಾಟಿಂಗ್ ಗೆ ಇಳಿಸಿತು. ಫಿಲ್ ಸಾಲ್ಟ್, ವಿರಾಟ್ ಕೊಹ್ಲಿ, ರಜತ್ ಪಾಟೀದಾರ್ ಭರ್ಜರಿ ಬ್ಯಾಟಿಂಗ್ ನಿಂದಾಗಿ ಆರ್ ಸಿಬಿ 240 ರನ್ ಗಳಿಸಿತು.
ಬೆಂಗಳೂರು: ಉಪ ಚುನಾವಣೆ ಫಲಿತಾಂಶದ ಬಳಿಕ ರಾಜ್ಯ ಕಾಂಗ್ರೆಸ್ ನಲ್ಲಿ ಮಹತ್ವದ ಬದಲಾವಣೆಯಾಗುವುದು ಖಚಿತ ಎನ್ನುತ್ತಿದೆ ಇತ್ತೀಚೆಗಿನ ಕೆಲವು ವಿದ್ಯಮಾನಗಳು. ದಾವಣಗೆರೆ ಮತ್ತು ಬಾಗಲಕೋಟೆಯ ಎರಡು ಕ್ಷೇತ್ರಗಳಿಗೆ ಮೊನ್ನೆಯಷ್ಟೇ ಉಪಚುನಾವಣೆ ನಡೆದಿದ್ದು ಫಲಿತಾಂಶ ಇನ್ನಷ್ಟೇ ಬರಬೇಕಿದೆ. ಈ ಬಾರಿ ದಾವಣಗೆರೆ ಕ್ಷೇತ್ರದಲ್ಲಿ ಅಲ್ಪಸಂಖ್ಯಾತರು ಕಾಂಗ್ರೆಸ್ ವಿರುದ್ಧ ಬಂಡಾಯವೆದ್ದಿದ್ದರು. ಶ್ಯಾಮನೂರು ಶಿವಶಂಕರಪ್ಪನವರ ಕುಟುಂಬಕ್ಕೆ ಟಿಕೆಟ್ ನೀಡಿರುವುದು ಮುಸ್ಲಿಮರ ಕೋಪಕ್ಕೆ ಕಾರಣವಾಗಿತ್ತು. ಕೊನೆಯ ಕ್ಷಣದಲ್ಲಿ ಸಾದಿಕ್ ಪೈಲ್ವಾನ್ ಮನವೊಲಿಸಿ ನಾಮಪತ್ರ ಹಿಂಪಡೆದರೂ ಕಾಂಗ್ರೆಸ್ ನ ಅಲ್ಪ ಸಂಖ್ಯಾತ ನಾಯಕರು ಅದರಲ್ಲೂ ಪ್ರಮುಖವಾಗಿ ಜಮೀರ್ ಅಹ್ಮದ್ ಪ್ರಚಾರಕ್ಕೇ ಹೋಗಿರಲಿಲ್ಲ.
ಬೆಂಗಳೂರು: ಕಳೆದ ವಾರ ಹಲವು ಜಿಲ್ಲೆಗಳಲ್ಲಿ ಸಣ್ಣ ಮಟ್ಟಿಗೆ ಮಳೆಯಾಗಿತ್ತು. ಈ ವಾರ ಮಳೆಯಾಗುತ್ತಾ, ಅಥವಾ ಬಿಸಿಲು ಹೆಚ್ಚಾಗಲಿದೆಯಾ ಇಲ್ಲಿದೆ ವಾರದ ಹವಾಮಾನ ವರದಿ. ರಾಜ್ಯದಲ್ಲಿ ಈಗ ಕಡು ಬೇಸಿಗೆಯ ನಡುವೆ ಅಲ್ಲಲ್ಲಿ ಮಳೆ ತಂಪು ನೀಡುತ್ತಿದೆ. ವಾರಂತ್ಯದಲ್ಲೂ ಕೆಲವು ಜಿಲ್ಲೆಗಳಲ್ಲಿ ಮಳೆಯಾಗಿದ್ದರೆ, ಇನ್ನು ಕೆಲವು ಜಿಲ್ಲೆಗಳಲ್ಲಿ ತಾಪಮಾನ ಗರಿಷ್ಠ ಮಟ್ಟಕ್ಕೆ ತಲುಪಿತ್ತು. ಈ ವಾರವೂ ಕೆಲವು ಜಿಲ್ಲೆಗಳಲ್ಲಿ ಸಣ್ಣ ಮಳೆಯಾಗುವ ಸೂಚನೆಯಿದೆ. ಈ ವಾರವಿಡೀ ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧದ್ಯತೆಯಿದೆ. ಉಳಿದ ಜಿಲ್ಲೆಗಳಲ್ಲಿ ಈ ವಾರ ಮಳೆಯ ಸೂಚನೆಯಿಲ್ಲ.
ಸೋಮವಾರ ಶಿವನಿಗೆ ವಿಶೇಷವಾದ ದಿನವಾಗಿದ್ದು ಈ ದಿನ ಶಿವನ ಕುರಿತಾದ ಶಿವ ಮಾನಸ ಸ್ತೋತ್ರವನ್ನು ತಪ್ಪದೇ ಓದಿ. ಇದರಿಂದ ಆರೋಗ್ಯ, ಆಯುಷ್ಯ ವೃದ್ಧಿಯಾಗುತ್ತದೆ.ರತ್ನೈಃ ಕಲ್ಪಿತಮಾಸನಂ ಹಿಮಜಲೈಃ ಸ್ನಾನಂ ಚ ದಿವ್ಯಾಂಬರಂನಾನಾರತ್ನ ವಿಭೂಷಿತಂ ಮೃಗಮದಾ ಮೋದಾಂಕಿತಂ ಚಂದನಮ್ ।ಜಾತೀ ಚಂಪಕ ಬಿಲ್ವಪತ್ರ ರಚಿತಂ ಪುಷ್ಪಂ ಚ ಧೂಪಂ ತಥಾದೀಪಂ ದೇವ ದಯಾನಿಧೇ ಪಶುಪತೇ ಹೃತ್ಕಲ್ಪಿತಂ ಗೃಹ್ಯತಾಮ್ ॥ 1 ॥ ಸೌವರ್ಣೇ ನವರತ್ನಖಂಡ ರಚಿತೇ ಪಾತ್ರೇ ಘೃತಂ ಪಾಯಸಂಭಕ್ಷ್ಯಂ ಪಂಚವಿಧಂ ಪಯೋದಧಿಯುತಂ ರಂಭಾಫಲಂ ಪಾನಕಮ್ ।ಶಾಕಾನಾಮಯುತಂ ಜಲಂ ರುಚಿಕರಂ ಕರ್ಪೂರ ಖಂಡೋಜ್ಜ್ಚಲಂತಾಂಬೂಲಂ ಮನಸಾ ಮಯಾ ವಿರಚಿತಂ ಭಕ್ತ್ಯಾ ಪ್ರಭೋ ಸ್ವೀಕುರು ॥ 2 ॥
ಮುಂಬೈ: ಐಪಿಎಲ್ 2026 ರಲ್ಲಿ ಇಂದು ರಾಯಲ್ ಚಾಲೆಂಜರ್ಸ್ ವಿರುದ್ಧ ಟಾಸ್ ಗೆದ್ದ ಮುಂಬೈ ಇಂಡಿಯನ್ಸ್ ಮೊದಲು ಫೀಲ್ಡಿಂಗ್ ಆಯ್ದುಕೊಂಡಿದೆ. ಮುಂಬೈನ ವಾಂಖೆಡೆ ಮೈದಾನದಲ್ಲಿ ನಡೆಯುತ್ತಿರುವ ಪಂದ್ಯ ಇದಾಗಿದೆ. ಕಳೆದ ಪಂದ್ಯದಲ್ಲಿ ಸೋತಿದ್ದ ಆರ್ ಸಿಬಿ ಈಗ ಬಲಿಷ್ಠ ಮುಂಬೈ ತಂಡವನ್ನು ಅದರದ್ದೇ ನೆಲದಲ್ಲಿ ಸೋಲಿಸುವ ಉತ್ಸಾಹದಲ್ಲಿದೆ. ಇತ್ತ ರೋಹಿತ್ ಶರ್ಮಾ, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮ, ಜಸ್ಪ್ರೀತ್ ಬುಮ್ರಾರಂತಹ ಘಟಾನುಘಟಿಗಳನ್ನು ಒಳಗೊಂಡ ಮುಂಬೈ ತಂಡವೂ ಬಲಿಷ್ಠವಾಗಿದೆ. ಮುಂಬೈ ಮೈದಾನದಲ್ಲಿ ಟಾಸ್ ಗೆದ್ದು ಫೀಲ್ಡಿಂಗ್ ಮಾಡುವ ತಂಡಕ್ಕೆ ಗೆಲುವಿನ ಅವಕಾಶ ಹೆಚ್ಚು. ಹೀಗಾಗಿ ಮುಂಬೈ ಮೊದಲು ಫೀಲ್ಡಿಂಗ್ ಆಯ್ದುಕೊಂಡಿದೆ.
ಮುಂಬೈ: ಬಹುಭಾಷಾ ಗಾಯಕಿ ಆಶಾ ಭೋಸ್ಲೆ ನಮ್ಮನ್ನು ಅಗಲಿದ್ದಾರೆ. ಅವರು ತಮ್ಮ ಅಕ್ಕ ಲತಾ ಮಂಗೇಶ್ಕರ್ ಹೇಳಿದ ಮಾತನ್ನು ಕಾರ್ಯಕ್ರಮವೊಂದರಲ್ಲಿ ನೆನಪಿಸಿಕೊಂಡಿದ್ದರು. ಆ ವಿಡಿಯೋ ಈಗ ವೈರಲ್ ಆಗಿದೆ. ಆಶಾ ಭೋಸ್ಲೆ ಮತ್ತು ಲತಾ ಮಂಗೇಶ್ಕರ್ ಸಹೋದರಿಯರು. ಇಬ್ಬರೂ ಭಾರತ ಸಿನಿಮಾ ಸಂಗೀತವನ್ನು ಇನ್ನೊಂದು ಎತ್ತರಕ್ಕೆ ಕರೆದೊಯ್ದ ದೈತ್ಯ ಪ್ರತಿಭೆಗಳು. ಲತಾ ಮಂಗೇಶ್ಕರ್ 2022 ರಲ್ಲಿ ಸಾವನ್ನಪ್ಪಿದ್ದರು. ಇದಾಗಿ ನಾಲ್ಕು ವರ್ಷಗಳ ಬಳಿಕ ಈಗ ತಂಗಿ ಆಶಾ ಕೂಡಾ ಇಹಲೋಕ ತ್ಯಜಿಸಿದ್ದಾರೆ.
ಬೆಂಗಳೂರು: ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷ ಸ್ಥಾನಕ್ಕೆ ಅಬ್ದುಲ್ ಜಬ್ಬಾರ್ ಅವರು ನೀಡಿರುವ ರಾಜೀನಾಮೆಯನ್ನು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಅಂಗೀಕರಿಸಿದ್ದಾರೆ. "ಅಬ್ದುಲ್ ಜಬ್ಬಾರ್ ಅವರ ನೇತೃತ್ವದಲ್ಲಿ ರಚಿಸಲಾಗಿದ್ದ ಅಲ್ಪಸಂಖ್ಯಾತ ವಿಭಾಗದ ಸಮಿತಿಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ವಿಸರ್ಜಿಸಲಾಗಿದೆ ಎಂದು ಡಿ ಕೆ ಶಿವಕುಮಾರ್ ಅವರು ಮಾಧ್ಯಮ ಹೇಳಿಕೆಯಲ್ಲಿ ತಿಳಿಸಿದ್ದಾರೆ. "ನೂತನ ಸಮಿತಿ ಶೀಘ್ರ ರಚನೆಗೆ ಕ್ರಮ ವಹಿಸಲಾಗಿದೆ" ಎಂದು ಶಿವಕುಮಾರ್ ಅವರು ಹೇಳಿದ್ದಾರೆ. ಇತ್ತೀಚೆಗೆ ದಾವಣಗೆರೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ವೇಳೆ ಪಕ್ಷದ ಪರ ಪ್ರಚಾರ ಮಾಡಲು ಬಾರದೇ ಅಲ್ಪಸಂಖ್ಯಾತ ನಾಯಕರು ತಮ್ಮ ಅಸಮಧಾನ ತೋರಿಸಿದ್ದರು.
ತಂದೆ ಎಂದರೆ ಮಕ್ಕಳಿಗೆ ಹೀರೋನಂತೆ. ಈ ತಂದೆ ನಿಜಕ್ಕೂ ಆಕ್ಸಿಡೆಂಟ್ ಆಗುತ್ತಿದ್ದ ಮಗಳನ್ನು ರಕ್ಷಿಸಿ ತಾನು ಹೀರೋ ಆಗಿದ್ದಾನೆ. ಈ ವೈರಲ್ ವಿಡಿಯೋ ನೋಡಿ. ಕೆಲವೊಮ್ಮೆ ರಸ್ತೆ ಬದಿ ನಾವು ನಮ್ಮ ಪಾಡಿಗೆ ನಿಂತಿದ್ದರೂ ವಾಹನಗಳ ಚಾಲಕರು ಮಾಡುವ ತಪ್ಪಿನಿಂದ ಅನಾಹುತಕ್ಕೀಡಾಗಬೇಕಾಗುತ್ತದೆ. ಅಂತಹದ್ದೇ ಒಂದು ಘಟನೆ ಇದಾಗಿತ್ತು. ಆದರೆ ಇಲ್ಲಿ ತಂದೆ ಮಗಳನ್ನು ರಕ್ಷಿಸಿದ ರೀತಿ ಎಲ್ಲರ ಗಮನ ಸೆಳೆದಿದೆ. ಈ ಘಟನೆ ನಡೆದಿರುವುದು ಪಶ್ಚಿಮ ದೆಹಲಿಯಲ್ಲಿ. ಓರ್ವ ತಂದೆ ಮತ್ತು ಮಗಳು ಎಲ್ಲೋ ಹೊರಗಡೆ ಹೋಗಲು ಮನೆಯ ಗೇಟ್ ನಿಂದ ಆಗಷ್ಟೇ ಹೊರಬಂದು ರಸ್ತೆ ಬದಿ ನಿಂತಿರುತ್ತಾರೆ.
ಮುಂಬೈ: ಸಿನಿಮಾ ಸಂಗೀತ ಸಾಮ್ರಾಜ್ಞಿ ಆಶಾ ಭೋಸ್ಲೆಯವರು ನಮ್ಮನ್ನು ಅಗಲಿದ್ದಾರೆ. ಅವರು ಹಾಡಿರುವ ಟಾಪ್ 5 ಎವರ್ ಗ್ರೀನ್ ಹಿಟ್ ಹಾಡುಗಳು ಯಾವುವು ಮತ್ತು ಅದಕ್ಕಿರುವ ಒಂದು ಕನೆಕ್ಷನ್ ಏನು ನೋಡಿ. ಆಶಾ ಭೋಸ್ಲೆಯವರು ತಮ್ಮ ವಿಶಿಷ್ಠ ಕಂಠದ ಮೂಲಕ ಕೋಟ್ಯಾಂತರ ಅಭಿಮಾನಿಗಳನ್ನು ಸಂಪಾದಿಸಿದ್ದರು. ಅವರು ಹಾಡಿದ ಸಾವಿರಾರು ಹಾಡುಗಳು ಒಂದಕ್ಕಿಂತ ಒಂದು ಮುತ್ತುಗಳಂತೆ. ಆದರೆ ಅದರಲ್ಲೂ ಅವರು ಹಾಡಿರುವ ಈ 5 ಹಾಡುಗಳು ಮಾತ್ರ ಇಂದಿನ ಯುವ ಜನಾಂಗವೂ ನೆನೆಸಿಕೊಳ್ಳುತ್ತದೆ. ವಿಶೇಷವೆಂದರೆ ಈ ಎಲ್ಲಾ ಹಿಟ್ ಹಾಡುಗಳಿಗೂ ಸಂಗೀತ ಸಂಯೋಜಿಸಿದ್ದು ಅವರ ಪತಿ ಆರ್ ಡಿ ಬರ್ಮನ್. ಆ ಐದು ಹಾಡುಗಳು ಯಾವುವು ಯಾವ ಚಿತ್ರದ್ದು ಇಲ್ಲಿದೆ ವಿವರ.
ಮುಂಬೈ: ಖ್ಯಾತ ಗಾಯಕಿ ಆಶಾ ಭೋಸ್ಲೆ ಇಂದು ನಿಧನರಾಗಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು. ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ. ಆಶಾ ಭೋಸ್ಲೆ, ಖ್ಯಾತ ಹಿನ್ನಲೆ ಗಾಯಕಿ ಲತಾ ಮಂಗೇಶ್ಕರ್ ಅವರ ಸಹೋದರಿಯೂ ಹೌದು. ನಿನ್ನೆಯಷ್ಟೇ ಹೃದಯಾಘಾತಕ್ಕೀಡಾಗಿದ್ದ ಅವರನ್ನು ಮುಂಬೈನ ಬ್ರೀಚ್ ಕ್ಯಾಂಡೀ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದರ ಜೊತೆಗೆ ಉಸಿರಾಟದ ಸಮಸ್ಯೆಯಿಂದಲೂ ಬಳಲುತ್ತಿದ್ದರು. ಇಂದು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎಂದು ಆಸ್ಪತ್ರೆ ಮೂಲಗಳು ಖಚಿತಪಡಿಸಿವೆ. ನಿನ್ನೆಯಿಂದ ಅವರಿಗೆ ಐಸಿಯುವಿನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.
ಇಸ್ಲಾಮಾಬಾದ್: ಕದನ ವಿರಾಮದ ಬಳಿಕ ಪಾಕಿಸ್ತಾನದಲ್ಲಿ ಇರಾನ್ ಮತ್ತು ಅಮೆರಿಕಾ ಪ್ರತಿನಿಧಿಗಳು ನಡೆಸಿದ ಶಾಂತಿ ಮಾತುಕತೆ ವಿಫಲವಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಇರಾನ್, ಅಸಮಂಜಸ ಬೇಡಿಕೆ ಮುಂದಿಟ್ಟಿದ್ದರು, ಮಾತುಕತೆ ವಿಫಲಕ್ಕೆ ಅಮೆರಿಕಾವೇ ಕಾರಣ ಎಂದಿದೆ. ಇದಕ್ಕೆ ಮೊದಲು ಪತ್ರಿಕಾಗೋಷ್ಠಿ ನಡೆಸಿದ್ದ ಅಮೆರಿಕಾ ಉಪಾಧ್ಯಕ್ಷ ಜೆಡಿ ವ್ಯಾನ್ಸ್, ನಾವು ಒಮ್ಮತದ ಒಪ್ಪಂದಕ್ಕಾಗಿ ಸಾಕಷ್ಟು ಪ್ರಯತ್ನ ನಡೆಸಿದೆವು. ಆದರೆ ನಮ್ಮ ಷರತ್ತುಗಳನ್ನು ಇರಾನ್ ಒಪ್ಪಿಲ್ಲ. ಹೀಗಾಗಿ ಮಾತುಕತೆ ವಿಫಲವಾಗಿದೆ ಎಂದಿದ್ದರು. ಇದಕ್ಕೀಗ ಇರಾನ್ ಪ್ರತಿಕ್ರಿಯೆ ನೀಡಿದೆ. ಮಾತುಕತೆ ವಿಫಲವಾಗಲು ಅಮೆರಿಕಾವೇ ಕಾರಣ ಎಂದಿದೆ.
ಮಂಗಳೂರು: ಉಡುಪಿ ಉದ್ಯಮಿ ಸುದೀಪ್ ರೈ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಇದೀಗ ಪತ್ನಿ ಸೌಮ್ಯ ಶೆಟ್ಟಿಯನ್ನು ಪೊಲೀಸರು ಬಂಧಿಸಿದ್ದಾರೆ. ಫೆಬ್ರವರಿ 17 ರಂದು ಸೌಮ್ಯ ಶೆಟ್ಟಿಯನ್ನು ಪ್ರೀತಿಸಿ ಮದುವೆಯಾಗಿದ್ದ ಸುದೀಪ್ ರೈ ಮದುವೆಯಾದ ಒಂದೇ ತಿಂಗಳಿಗೆ ಆತ್ಮಹತ್ಯೆ ಮಾಡಿಕೊಂಡಿದ್ದು ಭಾರೀ ಅನುಮಾನಕ್ಕೆ ಕಾರಣವಾಗಿತ್ತು. ಮಗನ ಸಾವಿಗೆ ಸೊಸೆಯ ಕಿರುಕುಳವೇ ಕಾರಣ ಎಂದು ಸುದೀಪ್ ರೈ ಪೋಷಕರು ಆರೋಪಿಸಿದ್ದರು. ಇತ್ತ ಸೌಮ್ಯ ಶೆಟ್ಟಿ ಕೂಡಾ ಪತ್ರಿಕಾಗೋಷ್ಠಿಯಲ್ಲಿ ತನ್ನ ಅತ್ತೆ-ಮಾವನ ವಿರುದ್ಧ ಪ್ರತ್ಯಾರೋಪ ನಡೆಸಿ ಕಣ್ಣೀರು ಹಾಕಿದ್ದರು.
ಲಕ್ನೋ: ಕಳ್ಳತನ ಮಾಡಲು ವ್ಯಕ್ತಿಯೊಬ್ಬ ಕಿರು ಸಂಧಿಯಲ್ಲಿ ತಲೆ ತೂರಿಸಿಕೊಂಡಿದ್ದ. ಆದರೆ ಆತನ ತಲೆ ಸಿಕ್ಕಿ ಹಾಕಿಕೊಂಡಿತ್ತು. ಮುಂದೇನಾಯ್ತು ಎಂದು ತಿಳಿಯಲು ಇಲ್ಲಿರುವ ವಿಡಿಯೋ ನೋಡಿ. ಇತ್ತೀಚೆಗೆ ಮನೆಯೊಂದರ ಎಕ್ಸಾಸ್ಟರ್ ಮೂಲಕ ತಲೆ ತೂರಿಸಿ ಕಳ್ಳತನ ಮಾಡಲು ಯತ್ನಿಸಿದ ಖದೀಮ ಕೊನೆಗೆ ಹೊರಗೂ ಹೋಗಲಾಗದೇ ಒಳಗೂ ಹೋಗಲಾಗದೇ ಸಿಕ್ಕಿಬಿದ್ದಿದ್ದ ಘಟನೆ ಓದಿರುತ್ತೀರಿ. ಅಂತಹದ್ದೇ ಒಂದು ಘಟನೆ ಇಲ್ಲಿ ನಡೆದಿದೆ. ಇದು ನಡೆದಿರುವುದು ಉತ್ತರ ಪ್ರದೇಶದ ಗಾಝಿಯಾಬಾದ್ ನಲ್ಲಿ. ಕಳ್ಳನೊಬ್ಬ ಕ್ಲಿನಿಕ್ ಒಂದರಲ್ಲಿ ಕಳ್ಳತನ ಮಾಡಲು ಬರುತ್ತಾನೆ. ಶಟರ್ ಡೋರ್ ನ ಸಂಧಿಯಲ್ಲಿ ತಲೆ ತೂರಿಸಿದ್ದ ಆತನ ತಲೆ ಅಲ್ಲೇ ಲಾಕ್ ಆಗುತ್ತದೆ. ರಾತ್ರಿಯಿಡೀ ಇದೇ ಅವಸ್ಥೆಯಲ್ಲಿ ಆತ ಕಾಲಕಳೆಯುತ್ತಾನೆ.
ಚೆನ್ನೈ: ಐಪಿಎಲ್ 2026 ರಲ್ಲಿ ಮೊದಲ ಶತಕ ಗಳಿಸಿದ ಚೆನ್ನೈ ಸೂಪರ್ ಕಿಂಗ್ಸ್ ಆರಂಭಿಕ ಸಂಜು ಸ್ಯಾಮ್ಸನ್ ತಮ್ಮ ಲಕ್ಕಿ ಚಾರ್ಮ್ ಯಾರು ಎಂದು ಹೇಳಿದ್ದಾರೆ. ಕಳೆದ ಮೂರು ಪಂದ್ಯಗಳಿಂದ ಕಳೆಗುಂದಿದ್ದ ಸಂಜು ಸ್ಯಾಮ್ಸನ್ ನಿನ್ನೆ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ 56 ಎಸೆತಗಳಿಂದ 115 ರನ್ ಸಿಡಿಸಿ ಈ ಕೂಟದ ಮೊದಲ ಶತಕ ದಾಖಲಿಸಿದರು. ಈ ಪಂದ್ಯವನ್ನು ಚೆನ್ನೈ 23 ರನ್ ಗಳಿಂದ ಗೆದ್ದುಕೊಂಡಿತು. ಭರ್ಜರಿ ಶತಕ ಸಿಡಿಸಿದ್ದಕ್ಕಾಗಿ ಸಂಜು ಸ್ಯಾಮ್ಸನ್ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು.
ಇಸ್ಲಾಮಾಬಾದ್: ಪಾಕಿಸ್ತಾನದ ಮಧ್ಯಸ್ಥಿಕೆಯಲ್ಲಿ ನಡೆದಿದ್ದ ಇರಾನ್ ಮತ್ತು ಅಮೆರಿಕಾ ನಡುವಿನ ಶಾಂತಿ ಮಾತುಕತೆ ವಿಫಲವಾಗಿದೆ. ಈ ಬಗ್ಗೆ ಅಮೆರಿಕಾ ಉಪಾಧ್ಯಕ್ಷ ಜೆಡಿ ವ್ಯಾನ್ಸ್ ಹೇಳಿಕೆ ನೀಡಿದ್ದಾರೆ. ಪಾಕಿಸ್ತಾನದಲ್ಲಿ ಸುಮಾರು 21 ಗಂಟೆಗಳ ಕಾಲ ಇರಾನ್ ಮತ್ತು ಅಮೆರಿಕಾ ಪ್ರತಿನಿಧಿಗಳ ನಡುವೆ ಮಾತುಕತೆ ನಡೆದಿದೆ. ಇಂದು ಮೂರು ಸುತ್ತಿನ ಮಾತುಕತೆ ಮುಗಿದ ಬಳಿಕ ಜೆಡಿ ವ್ಯಾನ್ಸ್ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ್ದು ಕಹಿ ಸುದ್ದಿ ಎಂದಿದ್ದಾರೆ. ‘ಅವರು ನಮ್ಮ ಷರತ್ತುಗಳನ್ನು ಒಪ್ಪಿಕೊಳ್ಳುತ್ತಿಲ್ಲ. ನಾವು ಕೊಂಚ ಹೊಂದಿಕೊಳ್ಳಲು ರೆಡಿ ಇದ್ದೆವು. ಡೊನಾಲ್ಡ್ ಟ್ರಂಪ್ ಅವರು ಹೇಳಿದ್ದರು, ನೀವು ಒಂದು ನಂಬಿಕೆಯೊಂದಿಗೆ ಇಲ್ಲಿಗೆ ಬರಬೇಕು.
ವಿಮಾನದಲ್ಲಿ ಮಹಿಳೆ ಎದೆ ಹಾಲುಣಿಸುತ್ತಿದ್ದಳು. ಆದರೆ ಆಕೆ ಎದೆ ಹಾಲುಣಿಸುತ್ತಿದ್ದಿದ್ದು ಯಾರಿಗೆ ಎಂದು ತಿಳಿದ ಬಳಿಕ ಸಹ ಪ್ರಯಾಣಿಕನಿಗೆ ಶಾಕ್ ಆಗಿದ್ದಲ್ಲದೆ ರಂಪಾಟ ಮಾಡಿದ್ದಾನೆ. ಇಂತಹದ್ದೊಂದು ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ಘಟನೆ ನಡೆದಿರುವುದು ವಿದೇಶದ ವಿಮಾನ ಯಾನವೊಂದರಲ್ಲಿ ಇಬ್ಬರು ವಿದೇಶೀ ಪ್ರಯಾಣಿಕರ ನಡುವೆ. ಈ ವಿಡಿಯೋ ನೋಡಿದ ಮೇಲೆ ಪ್ರಪಂಚದಲ್ಲಿ ಎಂಥಾ ಜನರೆಲ್ಲಾ ಇರುತ್ತಾರೆ ಎಂದು ನಿಮಗೂ ಶಾಕ್ ಆಗಬಹುದು. ವಿಮಾನ ಪ್ರಯಾಣ ವೇಳೆ ಮಹಿಳೆಯೊಬ್ಬಳು ನೀಟ್ ಆಗಿ ಬಟ್ಟೆಯಲ್ಲಿ ಸುತ್ತಿಕೊಂಡು ಬೆಕ್ಕಿಗೆ ಎದೆ ಹಾಲುಣಿಸುತ್ತಿದ್ದಳು.
ಮುಂಬೈ: ಐಪಿಎಲ್ 2026 ರಲ್ಲಿ ಇಂದು ಬಹುನಿರೀಕ್ಷಿತ ಮುಂಬೈ ಇಂಡಿಯನ್ಸ್ ಮತ್ತು ಆರ್ ಸಿಬಿ ಪಂದ್ಯ ನಡೆಯಲಿದೆ. ಈ ಪಂದ್ಯಕ್ಕೆ ಆರ್ ಸಿಬಿಯಲ್ಲಿ ಈ ಆಟಗಾರನಿಗೆ ಕೊಕ್ ಕೊಡುವುದು ಖಚಿತವಾಗಿದೆ. ಕಳೆದ ಮೂರು ಪಂದ್ಯಗಳಿಂದ ಆರ್ ಸಿಬಿ ಎರಡು ತವರಿನ ಪಂದ್ಯಗಳನ್ನು ಗೆದ್ದುಕೊಂಡಿದ್ದರೆ ನಂತರ ಗುವಾಹಟಿಯಲ್ಲಿ ನಡೆದ ಪಂದ್ಯವನ್ನು ಸೋತಿತ್ತು. ಕಳೆದ ಪಂದ್ಯದಲ್ಲಿ ಆರ್ ಸಿಬಿ ಬೌಲಿಂಗ್ ಹುಳುಕುಗಳು ಬಯಲಿಗೆ ಬಂದಿತ್ತು. ಹೀಗಾಗಿ ಬೌಲಿಂಗ್ ವಿಭಾಗದಲ್ಲಿ ಒಂದು ಬದಲಾವಣೆಯಾಗುವುದು ಖಚಿತವಾಗಿದೆ. ಇದುವರೆಗೆ ಮೂರು ಪಂದ್ಯಗಳನ್ನು ಆಡಿರುವ ಅಭಿನಂದನ್ ಸಿಂಗ್ ಹೇಳಿಕೊಳ್ಳುವ ಪ್ರದರ್ಶನ ನೀಡಿಲ್ಲ. ಕಳೆದ ಪಂದ್ಯದಲ್ಲಂತೂ 3 ಓವರ್ ಗಳಲ್ಲಿ 50 ಪ್ಲಸ್ ರನ್ .
ಬೆಂಗಳೂರು: ಬಿರು ಬೇಸಿಗೆಯ ನಡುವೆಯೂ ಕೆಲವು ಜಿಲ್ಲೆಗಳಲ್ಲಿ ಆಗಾಗ ಮಳೆಯಾಗುತ್ತಿದೆ. ಇಂದು ಭಾನುವಾರ ಈ ಕೆಲವು ಜಿಲ್ಲೆಗಳಲ್ಲಿ ಮಳೆಯಾಗುವ ಸೂಚನೆಯಿದೆ ಎಂದು ಹವಾಮಾನ ವರದಿಗಳು ಹೇಳುತ್ತಿವೆ. ಮೊನ್ನೆ ಬೆಂಗಳೂರಿನಲ್ಲಿ ಕೆಲವು ಪ್ರದೇಶಗಳಲ್ಲಿ ತುಂತುರು ಮಳೆಯಾಗಿತ್ತು. ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಸಣ್ಣ ಮಳೆಯಾಗಿತ್ತು. ಒಂದೆಡೆ ವಿಪರೀತ ಬಿಸಿಲು, ಸೆಖೆಯಿದ್ದರೆ ಮತ್ತೊಂದೆಡೆ ಸಣ್ಣ ಮಳೆಯಾಗುತ್ತಿದೆ. ಇಂದೂ ಕೆಲವು ಜಿಲ್ಲೆಗಳಿಗೆ ಮಳೆಯ ಸೂಚನೆಯಿದೆ. ಇಂದು ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಗುಡುಗು ಸಹಿತ ಮಳೆಯಾಗುವ ಸೂಚನೆಯಿದೆ.
ಇಂದು ಭಾನುವಾರವಾಗಿದ್ದು ಸೂರ್ಯ ದೇವನಿಗೆ ವಿಶೇಷವಾದ ದಿನವಾಗಿದೆ. ಆರೋಗ್ಯ, ಆಯಸ್ಸು ವೃದ್ಧಿ ಜೊತೆಗೆ ಜೀವನದಲ್ಲಿ ಯಶಸ್ಸು ಸಾಧಿಸಬೇಕೆಂದರೆ ಸೂರ್ಯ ದೇವನ ಕುರಿತ ಸೂರ್ಯಾಷ್ಟಕಂ ಸ್ತೋತ್ರವನ್ನು ಇಂದು ತಪ್ಪದೇ ಓದಿ.ಶಾಂಬ ಉವಾಚಆದಿದೇವ ನಮಸ್ತುಭ್ಯಂ ಪ್ರಸೀದ ಮಮ ಭಾಸ್ಕರ ।ದಿವಾಕರ ನಮಸ್ತುಭ್ಯಂ ಪ್ರಭಾಕರ ನಮೋಽಸ್ತುತೇ ॥ 1 ॥ ಸಪ್ತಾಶ್ವ ರಥ ಮಾರೂಢಂ ಪ್ರಚಂಡಂ ಕಶ್ಯಪಾತ್ಮಜಮ್ ।ಶ್ವೇತ ಪದ್ಮಧರಂ ದೇವಂ ತಂ ಸೂರ್ಯಂ ಪ್ರಣಮಾಮ್ಯಹಮ್ ॥ 2॥ ಲೋಹಿತಂ ರಥಮಾರೂಢಂ ಸರ್ವ ಲೋಕ ಪಿತಾಮಹಮ್ ।ಮಹಾ ಪಾಪ ಹರಂ ದೇವಂ ತಂ ಸೂರ್ಯಂ ಪ್ರಣಮಾಮ್ಯಹಮ್ ॥ 3॥
ಗಂಟಲು ನೋವು ಸಾಮಾನ್ಯವಾಗಿ ನಮ್ಮ ಆಹಾರ ಕ್ರಮದಲ್ಲಿ ಬದಲಾವಣೆಯಾದಾಗ ಕಾಣಿಸುವ ಆರೋಗ್ಯ ಸಮಸ್ಯೆಯಾಗಿದೆ. ಆದರೆ ಈ ಸಮಸ್ಯೆಗೆ ಮನೆಮದ್ದುಗಳಿಂದ ಪರಿಹಾರವನ್ನು ಕಂಡುಕೊಳ್ಳಬಹುದು. ನೋಯುತ್ತಿರುವ ಗಂಟಲನ್ನು ನೈಸರ್ಗಿಕವಾಗಿ ಶಮನಗೊಳಿಸಲು ಐದು ಸುಲಭ ಮತ್ತು ಪರಿಣಾಮಕಾರಿ ಪರಿಹಾರಗಳು ಇಲ್ಲಿವೆ.ಬೆಚ್ಚಗಿನ ಉಪ್ಪು ನೀರು ಗರ್ಗ್ಲ್ಬೆಳಗ್ಗೆ ಎದ್ದ ತಕ್ಷಣ ಹಾಗೂ ಮಲಗುವ ಮುನ್ನಾ ಬೆಚ್ಚಗಿನ ಉಪ್ಪುನೀರಿನೊಂದಿಗೆ ಗಾರ್ಗ್ಲಿಂಗ್ ಮಾಡಿದ್ದಲ್ಲಿ ಗಂಟಲಿನ ಕಿರಿಕಿರಿಯನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಬ್ಯಾಕ್ಟೀರಿಯಾವನ್ನು ಕೊಲ್ಲುತ್ತದೆ, ಇದು ನೋವಿನಿಂದ ತ್ವರಿತ ಪರಿಹಾರವನ್ನು