ಬೆಂಗಳೂರು: ನನ್ನ ಹಾದಿ ಎಂದಿಗೂ ಹೂವಿನ ಹಾಸಿಗೆಯಾಗಿರಲಿಲ್ಲ. ಕೊನೆ ಉಸಿರುವವರೆಗೂ ಸಾಮಾಜಿಕ ನ್ಯಾಯಕ್ಕಾಗಿ ಹೋರಾಡುತ್ತೇನೆ ಎಂದು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿ ಸಿಎಂ ಸಿದ್ದರಾಮಯ್ಯ ಸಂಚಲನ ಮೂಡಿಸಿದ್ದಾರೆ. ಒಂದೆಡೆ ಸಿಎಂ ಸಿದ್ದರಾಮಯ್ಯ ವಿರುದ್ಧ ಮುಡಾ ಹಗರಣದ ಆರೋಪ ಮಾಡಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್ ಆಗಿದ್ದರೆ ಇನ್ನೊಂದೆಡೆ ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರ ಚರ್ಚೆಯಲ್ಲಿರುವಾಗಲೇ ಸಿಎಂ ಸಿದ್ದರಾಮಯ್ಯ ಸಾಮಾಜಿಕ ನ್ಯಾಯದ ಕುರಿತು ಈ ಪೋಸ್ಟ್ ಮಾಡಿದ್ದಾರೆ. ನನ್ನ ನಾಲ್ಕು ದಶಕಗಳ ರಾಜಕೀಯ ಜೀವನ ಎಂದಿಗೂ ಹೂವಿನ ಹಾಸಿಗೆ ಆಗಿರಲಿಲ್ಲ, ಅದು ಕಲ್ಲು - ಮುಳ್ಳುಗಳ ಹಾದಿಯಾಗಿತ್ತು.
ಬೆಂಗಳೂರು: ಬಾಗಲಕೋಟೆಯಲ್ಲಿ ಶಿವಾಜಿ ಜಯಂತಿಯ ಸಂದರ್ಭದಲ್ಲಿ ಮೆರವಣಿಗೆ ಮೇಲೆ ಕಲ್ಲು ತೂರಾಟ ನಡೆಸಿದವರನ್ನು ಒದ್ದು ಒಳಗೆ ಹಾಕಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಆಗ್ರಹಿಸಿದ್ದಾರೆ.ಅವರು ಇಂದು ಮಾಧ್ಯಮಗಳ ಜೊತೆ ಮಾತನಾಡಿದರು. ಬಾಗಲಕೋಟೆಯಲ್ಲಿ ಶಿವಾಜಿ ಜಯಂತಿಯ ಸಂದರ್ಭದಲ್ಲಿ ಕೆಲವು ದೇಶದ್ರೋಹಿಗಳು ಮೆರವಣಿಗೆ ಮೇಲೆ ಕಲ್ಲು ತೂರಾಟ ನಡೆಸಿದ್ದು, ಇವರು ಯಾರೆಂದು ಪೊಲೀಸರು ಪತ್ತೆ ಹಚ್ಚಿದ್ದಾರೆ. ಇಂಥ ದೇಶದ್ರೋಹಿಗಳನ್ನು ಒದ್ದು ಒಳಗೆ ಹಾಕಬೇಕೆಂದು ಮುಖ್ಯಮಂತ್ರಿಗಳಲ್ಲಿ ಹಾಗೂ ಗೃಹ ಸಚಿವರಲ್ಲಿ ಆಗ್ರಹಿಸುತ್ತೇನೆ ಎಂದು ತಿಳಿಸಿದರು.
ಮುಂಬೈ: ಟೀಂ ಇಂಡಿಯಾ ಟಿ20 ವಿಶ್ವಕಪ್ 2026 ಗೆಲ್ಲೋದು ಬಿಡಿ, ಸೆಮಿಫೈನಲ್ ಗೂ ರೀಚ್ ಆಗಲ್ಲ ಎಂದು ಪಾಕಿಸ್ತಾನದ ಕ್ರಿಕೆಟಿಗ ಭವಿಷ್ಯ ವಾಣಿ ನುಡಿದಿದ್ದಾರೆ. ಟಿ20 ವಿಶ್ವಕಪ್ ನಲ್ಲಿ ಭಾರತ ಇದುವರೆಗೆ ಸೋಲರಿಯದೇ ಮುನ್ನುಗ್ಗುತ್ತಿದೆ. ಇದೀಗ ಸೂಪರ್ 8 ಹಂತಕ್ಕೆ ತಲುಪಿದ್ದು ಮೊದಲ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾವನ್ನು ಎದುರಿಸಲಿದೆ. ಈ ಬಾರಿ ಟೀಂ ಇಂಡಿಯಾವೇ ವಿಶ್ವಕಪ್ ಮತ್ತೊಮ್ಮೆ ಗೆಲ್ಲುತ್ತದೆ ಎಂದು ಎಲ್ಲರೂ ಅಭಿಪ್ರಾಯಪಡುತ್ತಿದ್ದಾರೆ. ಆದರೆ ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಮೊಹಮ್ಮದ್ ಅಮೀರ್, ಭಾರತ ವಿಶ್ವಕಪ್ ಫೈನಲ್ ಅಲ್ಲ, ಸೆಮಿಫೈನಲ್ ಗೂ ತಲುಪಲ್ಲ ಎಂದಿದ್ದಾರೆ. ಭಾರತದ ಬ್ಯಾಟಿಂಗ್ ಅಷ್ಟು ಪ್ರಬಲವಾಗಿಲ್ಲ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ಬೆಂಗಳೂರು: ಸರಕಾರಿ ನೌಕರರು, ಹಿಂದೂ ಕಾರ್ಯಕರ್ತರಿಗೆ ರಕ್ಷಣೆ ಇಲ್ಲವಾಗಿದೆ. ನಾವು ಅಲ್ಪಸಂಖ್ಯಾತರಿಗೆ, ಮುಸಲ್ಮಾನ ಬಂಧುಗಳಿಗೆ ಮಾತ್ರ ರಕ್ಷಣೆ ಕೊಡುವುದಾಗಿ ರಾಜ್ಯ ಸರಕಾರ ಘೋಷಿಸಲಿ ಎಂದು ವಿಧಾನಪರಿಷತ್ ವಿಪಕ್ಷದ ಮುಖ್ಯ ಸಚೇತಕ ಎನ್.ರವಿಕುಮಾರ್ ಅವರು ಆಗ್ರಹಿಸಿದ್ದಾರೆ.ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಅವರು ಮಾಧ್ಯಮಗಳ ಜೊತೆ ಮಾತನಾಡಿದರು. ವಿಧಾನಸೌಧದಲ್ಲಿ ಪಾಕಿಸ್ತಾನಕ್ಕೆ ಜಯವಾಗಲಿ ಎಂದು ಘೋಷಣೆ ಕೂಗಿದರೂ ನಾವೇನೂ ಮಾಡುವುದಿಲ್ಲ ಎಂದು ತಿಳಿಸಿ ಎಂದು ಒತ್ತಾಯಿಸಿದರು. ಇದು ನಮ್ಮ ಸರಕಾರ ಎಂದು ಇವರಿಗೆ ಅನಿಸಿರಬೇಕು ಎಂದು ತಿಳಿಸಿದರು.
ನವದೆಹಲಿ: ದೆಹಲಿಯಲ್ಲಿ ನಡೆಯತ್ತಿರುವ ಜಾಗತಿಕ ಮಟ್ಟದ ಎಐ ಇಂಪ್ಯಾಕ್ಟ್ ಇಂಡಿಯಾ ಸಮ್ಮೇಳನದಲ್ಲಿ ಯೂತ್ ಕಾಂಗ್ರೆಸ್ ಕಾರ್ಯಕರ್ತರು ಶರ್ಟ್ ಲೆಸ್ ಪ್ರತಿಭಟನೆ ಮಾಡಿದ್ದಾರೆ. ಇದಕ್ಕೆ ಬಿಜೆಪಿ ಛೀಮಾರಿ ಹಾಕಿದ್ದು ದೇಶದ ಮಾನ ಕಳೆಯುತ್ತಿದ್ದೀರಿ ಎಂದು ಆಕ್ರೋಶ ವ್ಯಕ್ತಪಡಿಸಿದೆ. ಎಐ ಇಂಪ್ಯಾಕ್ಟ್ ಸಮ್ಮೇಳನಕ್ಕೆ ವಿದೇಶದ ದಿಗ್ಗಜ ಎಐ ಕಂಪನಿಗಳ ಪ್ರತಿನಿಧಿಗಳೂ ಬಂದಿದ್ದರು. ಈ ಸಮ್ಮೇಳನ ಜಾಗತಿಕ ಮಟ್ಟದಲ್ಲಿ ಸದ್ದು ಮಾಡಿದೆ. ವಿದೇಶೀಯರೂ ಈ ಸಮ್ಮೇಳನದ ಮೇಲೆ ಕಣ್ಣಿರಿಸಿದ್ದಾರೆ. ಇಂತಹ ಹೊತ್ತಿನಲ್ಲಿ ಯೂತ್ ಕಾಂಗ್ರೆಸ್ಸಿಗರು ಮೋದಿ ವಿರುದ್ಧ ಪ್ರತಿಭಟನೆ ಮಾಡಲು ಇದೇ ವೇದಿಕೆಯನ್ನು ಬಳಸಿಕೊಂಡಿದ್ದಾರೆ.
ಯಾರೂ ನನ್ನ ಹತ್ತಿರ ಸೇರಿಸಿಕೊಳ್ಳಲ್ಲ ನನಗೆ ಯಾರೂ ಇಲ್ಲ ಎಂದು ಕೊರಗುವವರು ಒಮ್ಮೆ ಈ ಮಂಗನ ಮರಿಯ ವಿಡಿಯೋ ನೋಡಲೇಬೇಕು. ನಿಮ್ಮ ಕಣ್ಣಂಚು ಒದ್ದೆಯಾಗುವುದು ಗ್ಯಾರಂಟಿ. ಇದು ಜಪಾನ್ ನ ಮೃಗಾಲಯವೊಂದರಲ್ಲಿ ನಡೆದ ರಿಯಲ್ ಕಹಾನಿ. ಮಂಗಗಳನ್ನು ಸಾಮಾನ್ಯವಾಗಿ ನಾವು ಮನರಂಜನೆ ಕೊಡುವ ಪ್ರಾಣಿಯಂತೆ ನೋಡುತ್ತೇವೆ. ಆದರೆ ಈ ಮಂಗ ಆಡುವ ಆಟ ನಮ್ಮ ಕಣ್ಣಲ್ಲಿ ನೀರು ತರಿಸುತ್ತದೆ. ಮೃಗಾಲಯದಲ್ಲಿ ಹಲವು ಮಂಗಗಳ ಜೊತೆ ಈ ಮರಿಯನ್ನೂ ಬಿಡಲಾಗುತ್ತದೆ. ಆದರೆ ಎಲ್ಲಾ ಮಂಗಗಳೂ ಇದನ್ನು ದೂರ ತಳ್ಳುತ್ತವೆ. ಅದರಲ್ಲೂ ದಡೂತಿ ಮಂಗವೊಂದು ಕೈಯಿಂದ ಹೊಡೆದು ತಮ್ಮ ಗುಂಪಿನಿಂದ ಆಚೆ ಹಾಕುತ್ತವೆ.
ಅಹ್ಮದಾಬಾದ್: ಟಿ20 ವಿಶ್ವಕಪ್ ನಲ್ಲಿ ಟೀಂ ಇಂಡಿಯಾ ಸೂಪರ್ 8 ರ ಹಂತದ ಪಂದ್ಯಗಳನ್ನು ಆಡಲು ಸಜ್ಜಾಗಿದೆ. ಆದರೆ ಅಂತಿಮ ಘಟ್ಟದ ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ ಈ ಪ್ರಮುಖ ಬ್ಯಾಟಿಗನನ್ನೇ ಕಿತ್ತು ಹಾಕಲಾಗುತ್ತಾ ಎಂಬ ಪ್ರಶ್ನೆ ಮೂಡಿದೆ. ಲೀಗ್ ಹಂತದ ಪಂದ್ಯಗಳಲ್ಲಿ ಟೀಂ ಇಂಡಿಯಾ ಭರ್ಜರಿ ಗೆಲುವು ಪಡೆದಿತ್ತು. ಇದೀಗ ಫೆಬ್ರವರಿ 22 ರಿಂದ ಸೂಪರ್ 8 ಹಂತದ ಪಂದ್ಯವನ್ನು ಆಡಲಿದೆ. ಸೂಪರ್ 8 ರ ಮೊದಲ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ, ಎರಡನೇ ಪಂದ್ಯದಲ್ಲಿ ಜಿಂಬಾಬ್ವೆ ಮತ್ತು ಮೂರನೇ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಭಾರತ ಆಡಬೇಕಿದೆ.
ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ನದ್ದು ಕಮಿಷನ್ ಚೋರ್ ಸರ್ಕಾರ, ಅದಕ್ಕೆ ಇರುವವರು ಕಾಮ್ ಚೋರ್ ಮುಖ್ಯಮಂತ್ರಿ ಎಂದು ವಿಪಕ್ಷ ನಾಯಕ ಆರ್ ಅಶೋಕ್ ವಾಗ್ದಾಳಿ ನಡೆಸಿದ್ದಾರೆ. ಇಎಸ್ಐ ಆಸ್ಪತ್ರೆಗಳಿಗೆ ಕಾರ್ಮಿಕ ಇಲಾಖೆ ಇದುವರೆಗೆ ಹಣ ನೀಡಿಲ್ಲ ಎಂಬ ಪತ್ರಿಕಾ ವರದಿಗಳನ್ನು ಉಲ್ಲೇಖಿಸಿ ಆರ್ ಅಶೋಕ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ‘ಒಂದು ಕಡೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಹಣಕಾಸು ಇಲಾಖೆಯಿಂದ ₹880 ಕೋಟಿ ಅನುದಾನ ಬಿಡುಗಡೆ ಆಗಿದ್ದರೂ ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಿ ಖರೀದಿ ಮಾಡದೆ, ಸ್ಕ್ಯಾನಿಂಗ್ ಸೇವೆ ಒದಗಿಸುವ ಕಂಪನಿಗಳಿಗೆ ₹143 ಕೋಟಿ ಬಾಕಿ ಬಿಲ್ ಪಾವತಿ ಮಾಡದೆ, ಸಾರ್ವಜನಿಕರು ಪರದಾಡುವಂತೆ ಮಾಡಿದ್ದಾರೆ.
ಬೆಂಗಳೂರು: ಅಡಿಕೆ ಬೆಲೆ ಕಳೆದ ವಾರ ಏರಿಕೆ-ಇಳಿಕೆಯಾಗಿತ್ತು. ನಿನ್ನೆ ವಾರದ ಆರಂಭದಲ್ಲೇ ಅಡಿಕೆ ಬೆಲೆ ಕೊಂಚ ಏರಿಕೆಯಾಗಿತ್ತು. ಇಂದು ಅಡಿಕೆ ಮತ್ತು ಕಾಳು ಮೆಣಸು, ಕೊಬ್ಬರಿ ದರ ಹೇಗಿದೆ ಇಲ್ಲಿದೆ ವಿವರ. ಕಳೆದ ವಾರ ಅಡಿಕೆ ಬೆಲೆಯಲ್ಲಿ ಕೊಂಚ ಏರಿಕೆಯಾಗಿತ್ತು. ಇದು ಬೆಳೆಗಾರರಿಗೆ ಸಮಾಧಾನ ತಂದಿತ್ತು. ಮತ್ತೆ ಅಡಿಕೆ ಬೆಲೆಯಲ್ಲಿ ಚೇತರಿಕೆ ಕಂಡುಬರುತ್ತಿದೆ. ಆದರೆ ಇಂದು ಯಥಾ ಸ್ಥಿತಿಯಲ್ಲಿದೆ. ಇಂದು ಹೊಸ ಅಡಿಕೆ ಬೆಲೆ 485 ರೂ.ಗಳಷ್ಟಿದೆ. ಹಳೆ ಅಡಿಕೆ ಬೆಲೆ 550 ರೂ. ಗಳಾಗಿದೆ. ಡಬಲ್ ಚೋಲ್ ಬೆಲೆಯೂ 550 ರೂ.ಗಳಷ್ಟಾಗಿದೆ.
ರಾಯ್ಪುರ: ಪೆಟ್ರೋಲ್ ಬಂಕ್ ನಲ್ಲಿ ಸಿಗರೇಟು ಸೇದಬೇಡ ಎಂದು ತಡೆಯಲು ಹೋಗಿದ್ದಕ್ಕೆ ಇಲ್ಲೊಬ್ಬ ವ್ಯಕ್ತಿ ಮಾಡಿದ ಕೆಲಸಕ್ಕೆ ಈಗ ಎಲ್ಲರೂ ಛೀಮಾರಿ ಹಾಕುತ್ತಿದ್ದಾರೆ. ಇಂತಹದ್ದೊಂದು ವಿಡಿಯೋ ಈಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಛತ್ತೀಸ್ ಘಡದ ರಾಯ್ಪುರದಲ್ಲಿ ಘಟನೆ ನಡೆದಿದೆ. ಪೆಟ್ರೋಲ್ ಬಂಕ್ ನಲ್ಲಿ ಸಿಗರೇಟು, ಲೈಟರ್, ಬೆಂಕಿ ಕಡ್ಡಿ ಯಾವುದೂ ಹಚ್ಚುವಂತಿಲ್ಲ. ಇದರಿಂದ ಬೆಂಕಿ ಹತ್ತಿಕೊಳ್ಳುವ ಅಪಾಯವಿದೆ. ಇದನ್ನು ಎಲ್ಲಾ ಬಂಕ್ ಗಳಲ್ಲೂ ಎಚ್ಚರಿಕೆ ಫಲಕ ಹಾಕಿರುತ್ತಾರೆ. ಆದರೆ ಈ ವ್ಯಕ್ತಿ ಬೈಕ್ ಗೆ ಪೆಟ್ರೋಲ್ ತುಂಬಿಸುತ್ತಿದ್ದಾಗ ಅಲ್ಲಿಯೇ ನಿಂತುಕೊಂಡು ಲೈಟರ್ ಆನ್ ಮಾಡಿ ಸಿಗರೇಟು ಸೇದಲು ಮುಂದಾಗಿದ್ದಾನೆ.
ಬೆಂಗಳೂರು: ಕಳೆದ ಕೆಲವು ದಿನಗಳಿಂದ ಚಿನ್ನದ ದರ ಏರಿಕೆ, ಇಳಿಕೆಯಾಗುತ್ತಲೇ ಇದೆ. ಇಂದು ಪರಿಶುದ್ಧ ಚಿನ್ನದ ದರ ಏರಿಕೆಯಾಗಿದೆ ಮತ್ತುಇತರೆ ಚಿನ್ನದ ದರ ಇಳಿಕೆಯಾಗಿದೆ. ಇಂದು ಪರಿಶುದ್ಧ ಚಿನ್ನದ ದರ ಮತ್ತು ಇತರೆ ಚಿನ್ನದ ದರ ವಿವರ ಇಲ್ಲಿದೆ ನೋಡಿ. ಚಿನ್ನದ ದರ ಏರಿಕೆಕಳೆದ ವಾರ ಪರಿಶುದ್ಧ ಚಿನ್ನದ ದರ ಸತತವಾಗಿ ದಾಖಲೆಯ ಏರಿಕೆ ಕಂಡಿತ್ತು. ಈ ವಾರ ಅದೇ ರೀತಿ ಬೆಲೆ ಏರಿಳಿಕೆಯಾಗುವ ಲಕ್ಷಣವಿದೆ. ಇಂದು ಪರಿಶುದ್ಧ ಚಿನ್ನದ ದರ ಇಂದು ಏರಿಕೆಯಾಗಿದೆ. ಪರಿಶುದ್ಧ ಚಿನ್ನದ ದರ ನಿನ್ನೆ 1,56,370.00 ರೂ.ಗಳಿತ್ತು. ಇಂದೂ 1,59,095.00 ರೂ.ಗಳಷ್ಟಿದೆ.
ನವದೆಹಲಿ: ಆರ್ ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಪ್ರಯಾಣಿಸುತ್ತಿದ್ದ ವಂದೇ ಭಾರತ್ ರೈಲಿನ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ಮೋಹನ್ ಭಾಗವತ್ ಸುರಕ್ಷಿತರಾಗಿದ್ದಾರೆ ಎಂದು ತಿಳಿದುಬಂದಿದೆ. ನಿನ್ನೆ ಮಧ್ಯಾಹ್ನ 3.20 ರ ಸುಮಾರಿಗೆ ಘಟನೆ ನಡೆದಿರುವುದು ಈಗ ಬೆಳಕಿಗೆ ಬಂದಿದೆ. ರೈಲು ದೆಹಲಿ ಕಡೆಗೆ ಹೋಗುತ್ತಿತ್ತು. ಕೌಡಾ ಗ್ರಾಮದ ಬಳಿ ಯಾರೋ ದುಷ್ಕರ್ಮಿಗಳು ಮೋಹನ್ ಭಾಗವತ್ ಇದ್ದ ರೈಲಿಗೆ ಕಲ್ಲು ಎಸೆದಿದ್ದಾರೆ. ಕಲ್ಲು ಎಸೆದ ಪರಿಣಾಮ ಕಿಟಿಕಿಯ ಗಾಜುಗಳಿಗೆ ಹಾನಿಯಾಗಿದೆ. ಅದೃಷ್ಟವಶಾತ್ ಯಾರಿಗೂ ಯಾವುದೇ ಅಪಾಯವಾಗಿಲ್ಲ ಎಂದು ತಿಳಿದುಬಂದಿದೆ.
ಬೆಂಗಳೂರು: ಟಾಕ್ಸಿಕ್ ಸಿನಿಮಾದ ಟೀಸರ್ ಬಿಡುಗಡೆಯಾಗಿದ್ದು, ಟೀಸರ್ ನಲ್ಲಿ ರಾಕಿಂಗ್ ಸ್ಟಾರ್ ಯಶ್ ನೀಡಿದ ಸರ್ಪೈಸ್ ಗೆ ಫ್ಯಾನ್ಸ್ ಶಾಕ್ ಆಗಿದ್ದಾರೆ. ಯಶ್ ಹುಟ್ಟುಹಬ್ಬಕ್ಕೆ ಟಾಕ್ಸಿಕ್ ಸಿನಿಮಾ ತಂಡ ಬರ್ತ್ ಡೇ ಟೀಸರ್ ಬಿಡುಗಡೆ ಮಾಡಿತ್ತು. ಆದರೆ ಈಗ ಸಿನಿಮಾ ಬಿಡುಗಡೆಗೆ ಮುನ್ನ ರಿಯಲ್ ಟೀಸರ್ ಬಿಡುಗಡೆ ಮಾಡಿದೆ. ಈ ಟೀಸರ್ ನಲ್ಲಿ ಯಶ್ ದ್ವಿಪಾತ್ರದಲ್ಲಿ ಕಾಣಿಸಿಕೊಳ್ಳುತ್ತಾರೆ. ಒಂದು ಪಾತ್ರದಲ್ಲಿ ಉದ್ದ ಗಡ್ಡ, ಕೂದಲು ಬಿಟ್ಟುಕೊಂಡು ಏಕ್ ದಂ ಆಕ್ಷನ್ ಲುಕ್ ನಲ್ಲಿ ಯಶ್ ಕಾಣಿಸಿಕೊಂಡಿದ್ದಾರೆ. ಇನ್ನೊಂದು ಪಾತ್ರದಲ್ಲಿ ಗಡ್ಡ, ಮೀಸೆಯಿಲ್ಲದೇ ಇನ್ನೂ ಚಿಕ್ಕವಯಸ್ಸಿನ ಹುಡುಗನ ರೀತಿ ಕಾಣಿಸಿಕೊಂಡಿದ್ದಾರೆ.
ಮೆಟ್ಟಿಲಿನಿಂದ ಕಾಲು ಜಾರಿ ಬಿದ್ದ ಮಗುವನ್ನು ಹೀರೋ ಥರಾ ಕ್ಯಾಚ್ ಮಾಡಿ ವ್ಯಕ್ತಿಯೊಬ್ಬರು ಪ್ರಾಣ ಉಳಿಸಿದ ಮೈ ಜುಮ್ ಎನಿಸುವ ವಿಡಿಯೋವೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಮಕ್ಕಳನ್ನು ಕರೆದುಕೊಂಡು ಹೋಗುವಾಗ ಎಷ್ಟು ಎಚ್ಚರಿಕೆಯಿಂದಿರಬೇಕು ಎಂಬುದಕ್ಕೆ ಈ ಘಟನೆಯೇ ಸಾಕ್ಷಿ. ಅದರಲ್ಲೂ ಮಾಲ್, ಕಾಂಪ್ಲೆಕ್ಸ್ ಗಳಲ್ಲಿ ಸ್ಟೇರ್ ಕೇಸ್ ಹತ್ತುವಾಗ ತುಂಬಾ ಎಚ್ಚರಿಕೆಯಿಂದಿರಬೇಕು. ಅನೇಕ ಬಾರಿ ಅಪಘಾತಗಳು ಆಗಿದ್ದು ಇದೆ. ಇದೇ ರೀತಿ ಹುಡುಗನೊಬ್ಬ ಬಹುಮಹಡಿ ಕಾಂಪ್ಲೆಕ್ಸ್ ನಲ್ಲಿ ಆರಾಮವಾಗಿ ಮೆಟ್ಟಿಲು ಹತ್ತುತ್ತಿದ್ದ. ಆದರೆ ಇನ್ನೇನು ಮೇಲೆ ಏರಿ ಆಯ್ತು ಎನ್ನುವಾಗ ಹುಡುಗನ ಕಾಲು ಜಾರುತ್ತದೆ.
ಕಾಬೂಲ್: ಪತ್ನಿಯರಿಗೆ ಗಂಡಂದಿರು ಇನ್ನು ಮುಂದೆ ಹೊಡೆಯಬಹುದು, ಆದರೆ ಮೂಳೆ ಮುರಿಯುವ ಹಾಗಿಲ್ಲ... ಇಂತಹದ್ದೊಂದು ಹೊಸ ನಿಯಮ ಜಾರಿಗೆ ತರಲಾಗಿದೆ. ಆದರೆ ಇದು ಭಾರತದಲ್ಲಿ ಅಲ್ಲ. ನೆರೆಯ ತಾಲಿಬಾನ್ ಸರ್ಕಾರದ ಹೊಸ ನಿಯಮವಿದು. ಈ ಮೂಲಕ ಕೌಟುಂಬಿಕ ದೌರ್ಜನ್ಯಕ್ಕೆ ಸರ್ಕಾರವೇ ಅನುಮತಿ ನೀಡಿದಂತಾಗಿದೆ. ಹೆಣ್ಣು ಮಕ್ಕಳ ಮೇಲೆ ತಾಲಿಬಾನ್ ನಲ್ಲಿ ದೌರ್ಜನ್ಯವಾಗುತ್ತಿರುವುದು ಇದೇ ಮೊದಲಲ್ಲ. ಅನೇಕ ವರ್ಷಗಳಿಂದಲೂ ಅಲ್ಲಿ ಹೆಣ್ಣು ಮಕ್ಕಳಿಗೆ ಸ್ವಾತಂತ್ರ್ಯವೇ ಇಲ್ಲ. ಹೆಣ್ಣನ್ನು ಭೋಗದ ವಸ್ತು ಎಂದು ತಿಳಿದಿರುವ ಮನಸ್ಥಿತಿಯವರು. ಇದೀಗ ಇಂತಹದ್ದೊಂದು ವಿಚಿತ್ರ ಕಾನೂನಿನ ಮೂಲಕ ತಾಲಿಬಾನಿಗರು ಮತ್ತೆ ಸುದ್ದಿಯಾಗಿದ್ದಾರೆ.
ಬೆಂಗಳೂರು: ಚೆನ್ನಾಗಿಲ್ಲ ಅಂದ್ರೂ ಪರ್ವಾಗಿಲ್ಲ ಆಸೆ ಪಟ್ಟು ಸಿನಿಮಾ ಮಾಡಿರ್ತಾರೆ.. 100 ರೂ ಕೊಟ್ಟು ಥಿಯೇಟರ್ ಗೆ ಹೋಗ್ರೀ ನಿಮ್ಮ ಗಂಟೇನೂ ಹೋಗಲ್ಲ ಎಂದಿದ್ದ ಕ್ರೇಜಿಸ್ಟಾರ್ ರವಿಚಂದ್ರನ್ ಮೇಲೆ ನೆಟ್ಟಿಗರು ಗರಂ ಆಗಿದ್ದು ದುಡ್ಡಿನ ಬೆಲೆ ಗೊತ್ತಾ ಎಂದು ಪ್ರಶ್ನೆ ಮಾಡಿದ್ದಾರೆ. ನೀನಾಸಂ ಸತೀಶ್ ನಾಯಕರಾಗಿರುವ ದಿ ರೈಸ್ ಆಫ್ ಅಶೋಕ ಸಿನಿಮಾದ ಟ್ರೈಲರ್ ಲಾಂಚ್ ಕಾರ್ಯಕ್ರಮದಲ್ಲಿ ಮಾತನಾಡಿದ್ದ ರವಿಚಂದ್ರನ್, ‘ಒಳ್ಳೆಯ ಸಿನಿಮಾಗಳನ್ನು ನೀವು ಗೆಲ್ಲಿಸ್ತಿಲ್ಲ. ಬದಲಾಗಿ ಎಲ್ಲರೂ ಮೊಬೈಲ್ ನಲ್ಲೇ ಕಳೆದು ಹೋಗ್ತಿದ್ದೀರಿ. ಅದನ್ನು ಬಿಟ್ಟು ಚಿತ್ರಮಂದಿರಗಳಿಗೆ ಹೋಗಿ ಸಿನಿಮಾ ನೋಡಿ. ಸಿನಿಮಾಗೋಸ್ಕರ ನೂರು ರೂಪಾಯಿ ಖರ್ಚು ಮಾಡಕ್ಕೆ ಆಗುವುದಿಲ್ಲವೇ? ಪಾಪ.. ಯಾರೋ ಆಸೆಪಟ್ಟು ಸಿನಿಮಾ ಮಾಡಿರ್ತಾರೆ.
ನ್ಯೂಯಾರ್ಕ್: ಭಾರತ ಮತ್ತು ಪಾಕಿಸ್ತಾನಕ್ಕೆ ಇದೊಂದು ಎಚ್ಚರಿಕೆ ಕೊಟ್ಟೆ. ಇಬ್ಬರೂ ಮರು ಮಾತನಾಡದೇ ಯುದ್ಧ ನಿಲ್ಲಿಸಲು ಒಪ್ಪಿಕೊಂಡ್ರು ಎಂದು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತೆ ಸ್ವಯಂ ಹೊಗಳಿಕೊಂಡಿದ್ದಾರೆ. ಪಹಲ್ಗಾಮ್ ದಾಳಿ ನಂತರ ಭಾರತ ಮತ್ತು ಪಾಕಿಸ್ತಾನ ನಡುವೆ ಘರ್ಷಣೆಯಾಗಿತ್ತು. ಆದರೆ ಈ ಕದನ ಎರಡೇ ದಿನಕ್ಕೆ ಕೊನೆಯಾಗಿತ್ತು. ಎರಡೇ ದಿನಕ್ಕೆ ಎರಡೂ ದೇಶಗಳೂ ಕದನ ವಿರಾಮ ಒಪ್ಪಂದ ಮಾಡಿಕೊಂಡಿದ್ದವು. ಈ ಕದನ ವಿರಾಮ ಘೋಷಿಸಲು ನಾನೇ ಕಾರಣ ಎಂದು ಡೊನಾಲ್ಡ್ ಟ್ರಂಪ್ ಅನೇಕ ಬಾರಿ ಹೇಳಿ ಭಾರತವನ್ನು ಇಕ್ಕಟ್ಟಿಗೆ ಸಿಲುಕಿಸಿದ್ದಾರೆ.
ಬೆಂಗಳೂರು: ಡಿಸಿಎಂ ಡಿಕೆ ಶಿವಕುಮಾರ್ ನಿನ್ನೆ ಕಾಂಗ್ರೆಸ್ ಹೈಕಮಾಂಡ್ ನಾಯಕಿ ಪ್ರಿಯಾಂಕ ಗಾಂಧಿ ವಾದ್ರಾ ಜೊತೆ ಅಸ್ಸಾಂನ ಕಾಮಾಕ್ಯ ಮಂದಿರಕ್ಕೆ ಭೇಟಿ ನೀಡಿದ್ದಾರೆ. ಇದಕ್ಕೆ ನೆಟ್ಟಿಗರು ಸಾಕಷ್ಟು ಇಂಟ್ರೆಸ್ಟಿಂಗ್ ಕಾಮೆಂಟ್ ಮಾಡಿದ್ದಾರೆ. ಅಸ್ಸಾಂ ಚುನಾವಣೆ ಸಿದ್ಧತೆ ಕುರಿತು ಎಐಸಿಸಿ ಸಭೆಯಲ್ಲಿ ಪಾಲ್ಗೊಳ್ಳಲು ಅಸ್ಸಾಂಗೆ ತೆರಳಿದ್ದ ಡಿಕೆ ಶಿವಕುಮಾರ್ ಇದೇ ವೇಳೆ ಪ್ರಿಯಾಂಕ ಗಾಂಧಿ ವಾದ್ರಾ ಜೊತೆ ಅಲ್ಲಿನ ಇತಿಹಾಸ ಪ್ರಸಿದ್ಧ ಕಾಮಾಕ್ಯ ದೇವಿ ಮಂದಿರಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ. ಈ ಕ್ಷಣಗಳನ್ನು ಡಿಕೆಶಿ ತಮ್ಮ ಸೋಷಿಯಲ್ ಮೀಡಿಯಾ ಪುಟದಲ್ಲಿ ಹಂಚಿಕೊಂಡಿದ್ದಾರೆ. ಕಾಮಾಕ್ಯ ಮಂದಿರಕ್ಕೆ ಸಾಂಪ್ರದಾಯಿಕ ಉಡುಗೆಯಲ್ಲಿ ಭೇಟಿ ಕೊಟ್ಟ ಡಿಕೆಶಿ ಬಳಿಕ ಅಲ್ಲಿ ವಿಶೇಷ ಪೂಜೆಯನ್ನೂ ನೆರವೇರಿಸಿದ್ದಾರೆ.
ಬೆಂಗಳೂರು: ರಾಜ್ಯದಲ್ಲಿ ದಿನೇ ದಿನೇ ತಾಪಮಾನ ಏರಿಕೆಯಾಗುತ್ತಿದೆ. ಇಂದಿನ ಹವಾಮಾನ ವರದಿ ಗಮನಿಸಿದರೆ ಮತ್ತಷ್ಟು ತಾಪಮಾನದಲ್ಲಿ ಏರಿಕೆ ಕಾಣಬಹುದಾಗಿದೆ. ಕಳೆದ ಎರಡು ದಿನಗಳಿಂದ ಕೆಲವು ಜಿಲ್ಲೆಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಕಂಡುಬರುತ್ತಿದೆ. ಕೇರಳದಲ್ಲಿ ಇಂದು ಮಳೆಯ ಸೂಚನೆಯಿದೆ. ಈ ಹಿನ್ನಲೆಯಲ್ಲಿ ಕೆಲವು ಕಡೆ ಮೋಡ ಕವಿದ ವಾತಾವರಣ ಕಂಡುಬಂದಿತ್ತು. ಆದರೆ ಇಂದು ರಾಜ್ಯದಲ್ಲಿ ಬಹುತೇಕ ಬಿಸಿಲಿನ ವಾತಾವರಣವಿರಲಿದೆ. ಹವಾಮಾನ ವರದಿಗಳ ಪ್ರಕಾರ ಇಂದು ರಾಜ್ಯದಲ್ಲಿ ಮಳೆಯ ಸೂಚನೆಯಿಲ್ಲ. ಚಳಿಯೂ ಇಂದು ತಕ್ಕಮಟ್ಟಿಗೆ ಕಡಿಮೆಯಾಗಿರಲಿದೆ. ಬಹುತೇಕ ಒಣ ಹವೆ ಮುಂದುವರಿಯುವುದು.
ಇಂದು ಶುಕ್ರವಾರವಾಗಿದ್ದು ಲಕ್ಷ್ಮೀ ದೇವಿಯ ಮಂತ್ರ ಪಠಿಸುವುದರಿಂದ ಮನೆಯಲ್ಲಿ ಸಕಲ ಐಶ್ವರ್ಯಾಭಿವೃದ್ಧಿಯಾಗುವುದು. ಇಂದು ಲಕ್ಷ್ಮೀ ದೇವಿಯನ್ನು ಕುರಿತ ಸೌಭಾಗ್ಯ ಲಕ್ಷ್ಮೀ ಸ್ತೋತ್ರವನ್ನು ತಪ್ಪದೇ ಓದಿ. ಕನ್ನಡದಲ್ಲಿ ಇಲ್ಲಿದೆ.ಓಂ ಶುದ್ಧಲಕ್ಷ್ಮ್ಯೈ ಬುದ್ಧಿಲಕ್ಷ್ಮೈ ವರಲಕ್ಷ್ಮೈ ನಮೋ ನಮಃ |ನಮಸ್ತೇ ಸೌಭಾಗ್ಯಲಕ್ಷ್ಯೈ ಮಹಾಲಕ್ಷ್ಮ್ಯೈ ನಮೋ ನಮಃ || ೧ || ವಚೋಲಕ್ಷ್ಮೈ ಕಾವ್ಯಲಕ್ಷ್ಮೈ ಗಾನಲಕ್ಷ್ಮ್ಯೈ ನಮೋ ನಮಃ |ನಮಸ್ತೇ ಶೃಂಗಾರಲಕ್ಷ್ಮ್ಯೈ ಮಹಾಲಕ್ಷ್ಮ್ಯೈ ನಮೋ ನಮಃ || ೨ || ಧನಲಕ್ಷ್ಮ್ಯೈ ಧಾನ್ಯಲಕ್ಷ್ಮ್ಯೈ ಧರಾಲಕ್ಷ್ಮ್ಯೈ ನಮೋ ನಮಃ |ನಮಸ್ತೇ ಅಷ್ಟೈಶ್ವರ್ಯಲಕ್ಷ್ಮ್ಯೈ ಮಹಾಲಕ್ಷ್ಮ್ಯೈ ನಮೋ ನಮಃ || ೩ ||
ಇಂದು ಶನಿವಾರವಾಗಿದ್ದು ಶನಿ ದೋಷ ನಿವಾರಣೆಗೆ ತಪ್ಪದೇ ಶನಿ ದೇವನ ಕುರಿತಾದ ಪೂಜೆ, ಮಂತ್ರಗಳನ್ನು ಪಠಿಸುವುದು ಉತ್ತಮ. ಅದಕ್ಕಾಗಿ ಇಂದು ಶನಿ ಗ್ರಹ ಪಂಚರತ್ನ ಸ್ತೋತ್ರವನ್ನು ತಪ್ಪದೇ ಓದಿ. ಸುಲಭವಾಗಿ ಓದಬಹುದಾದ ಮತ್ತು ಚಿಕ್ಕದಾದ ಶನಿ ಮಂತ್ರ ಇದಾಗಿದೆ. ಚಿಕ್ಕಮಕ್ಕಳೂ ಹೇಳಬಹುದಾಗಿದೆ. ಹಿಮಕುಂದ ಮೃಣಾಳಾಭಂ ದೈತ್ಯಾನಾಂ ಪರಮಂ ಗುರುಮ್ ।ಸರ್ವಶಾಸ್ತ್ರ ಪ್ರವಕ್ತಾರಂ ಭಾರ್ಗವಂ ಪ್ರಣಮಾಮ್ಯಹಮ್ ॥ 1 ॥ ಶುಕ್ಲಾಂಬರಂ ಶುಕ್ಲ ಮಾಲ್ಯಂ ಶುಕ್ಲ ಗಂಧಾನುಲೇಪನಮ್ ।ವಜ್ರ ಮಾಣಿಕ್ಯ ಭೂಷಾಢ್ಯಂ ಕಿರೀಟ ಮಕುಟೋಜ್ಜ್ವಲಮ್ ॥ 2 ॥ ಶ್ವೇತಾಂಬರ ಶ್ವೇತವಪುಶ್ಚತುರ್ಭುಜ ಸಮನ್ವಿತಃ ।ರತ್ನ ಸಿಂಹಾಸನಾರೂಡೋ ರಥಸ್ಥೋರಜತಪ್ರಭಃ ॥ 3 ॥
ಬೆಂಗಳೂರು: ಕರ್ನಾಟಕದ ಹೆಮ್ಮೆಯ ಬ್ರ್ಯಾಂಡ್ ನಂದಿನಿ ಉತ್ಪನ್ನವನ್ನು ಸೇವಿಸಿದರೆ ಕ್ಯಾನ್ಸರ್ ಬರುತ್ತದೆ ಎಂಬ ಸುದ್ದಿಗಳ ಬಗ್ಗೆ ಇದೀಗ ಕೆಎಂಎಫ್ ಸ್ಪಷ್ಟನೆ ನೀಡಿದೆ. ನಂದಿನಿ ಬ್ರ್ಯಾಂಡ್ ಎಂದರೆ ಕರ್ನಾಟಕಕ್ಕೇ ಹೆಮ್ಮೆ. ಈ ಬ್ರ್ಯಾಂಡ್ ಎಂದರೆ ಜನ ಕಣ್ಣು ಮುಚ್ಚಿಕೊಂಡು ಸುರಕ್ಷಿತ ಎಂದುಕೊಳ್ಳುತ್ತಾರೆ. ಹಾಲಿನಿಂದ ಹಿಡಿದು ಈಗ ವಿವಿಧ ಉತ್ಪನ್ನಗಳು ಬಿಡುಗಡೆಯಾಗುತ್ತಿರುವ ಕಾರಣ ನಂದಿನಿ ಮತ್ತಷ್ಟು ಜನಪ್ರಿಯವಾಗಿದೆ. ಇಂತಹ ಹೊತ್ತಿನಲ್ಲೇ ನಂದಿನಿ ಉತ್ಪನ್ನ ಸೇವಿಸುವುದರಿಂದ ಕ್ಯಾನ್ಸರ್ ಬರಬಹುದು. ಈ ಉತ್ಪನ್ನಗಳಲ್ಲಿ ಬಳಸುವ ವಸ್ತುಗಳಿಂದ ಕ್ಯಾನ್ಸರ್ ಬರಬಹುದು ಎಂದು ಡಾ ಶರಣ್ಯ ಸಂತೋಷ್ ಎಂಬವರು ಸೋಷಿಯಲ್ ಮೀಡಿಯಾದಲ್ಲಿ ವಿಡಿಯೋ ಹಂಚಿಕೊಂಡಿದ್ದರು.
ಬೆಂಗಳೂರು: ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಸರ್ಕಾರದ ವಿರುದ್ಧ ಮುಷ್ಕರಕ್ಕೆ ಕರೆ ನೀಡಿದ್ದ ಕರ್ನಾಟಕ ರಸ್ತೆ ಸಾರಿಗೆ ನಿಗಮದ ನೌಕರರು ಮುಷ್ಕರ ಹಿಂಪಡೆದಿದ್ದಾರೆ. ಇದರಿಂದ ಸಾರಿಗೆ ಬಸ್ ಪ್ರಯಾಣಿಕರು ನೆಮ್ಮದಿಯ ನಿಟ್ಟುಸಿರುವ ಬಿಡುವಂತಾಗಿದೆ. ಇಂದು ಸಂಜೆ ಫ್ರೀಡಂ ಪಾರ್ಕ್ ನಲ್ಲಿ ಬೆಂಗಳೂರು ಚಲೋಗೆ ಕರೆ ಕೊಟ್ಟಿದ್ದ ನೌಕರರ ಸಂಘ ಬಳಿಕ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲು ತೀರ್ಮಾನಿಸಿತ್ತು. ಮುಷ್ಕರದಲ್ಲಿ ನಾಲ್ಕೂ ಸಾರಿಗೆ ನಿಗಮದ ನೌಕರರು ಭಾಗಿಯಾಗಲಿದ್ದರು.ಆದರೆ ನಿನ್ನೆ ರಾಜ್ಯ ಸರ್ಕಾರ 26 ತಿಂಗಳ ಹಿಂಬಾಕಿ ಪಾವತಿಸಿತ್ತು.
ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರಕಾರವು ದಲಿತರಿಗೆ ಅನ್ಯಾಯ ಮಾಡುತ್ತಿದೆ ಎಂದು ಮಾಜಿ ಉಪ ಮುಖ್ಯಮಂತ್ರಿ ಮತ್ತು ಸಂಸದ ಗೋವಿಂದ ಕಾರಜೋಳ ಅವರು ಆಕ್ಷೇಪಿಸಿದರು.ಇಂದು ರಾಜ್ಯ ಬಿಜೆಪಿ ಕಾರ್ಯಕಾರಿಣಿಯಲ್ಲಿ ಅಂಗೀಕರಿಸಿದ ಖಂಡನಾ ನಿರ್ಣಯ ಕುರಿತು ಅವರು ಮಾಹಿತಿ ನೀಡಿದರು. ಬಹಳ ಪ್ರಮುಖವಾಗಿ ಅವರು ದಲಿತರಿಗೆ ಮೀಸಲಿಟ್ಟ 39,500 ಕೋಟಿ ರೂಪಾಯಿಯನ್ನು ಗ್ಯಾರಂಟಿ ಮತ್ತು ಅನ್ಯ ಉದ್ದೇಶಕ್ಕೆ ಬಳಸಿಕೊಂಡಿದ್ದಾರೆ ಎಂದು ಟೀಕಿಸಿದರು. ಇದನ್ನು ಕೂಡಲೇ ಎಸ್ಸಿ, ಎಸ್ಟಿ ಸಮುದಾಯದ ಕಲ್ಯಾಣಕ್ಕೆ ಬಳಸಬೇಕು ಎಂದು ಆಗ್ರಹಿಸಿದರು.
ಲಕ್ನೋ: ಕರ್ನಾಟಕ ಕ್ರಿಕೆಟ್ ತಂಡ ರಣಜಿ ಟ್ರೋಫಿ ಫೈನಲ್ ಗೇರಿದ್ದು ಬರೋಬ್ಬರಿ 11 ವರ್ಷಗಳ ಬಳಿಕ ಈ ಸಾಧನೆ ಮಾಡಿದೆ. ಕೊನೆಯ ಬಾರಿಗೆ 2014 ರಲ್ಲಿ ಕರ್ನಾಟಕ ಫೈನಲ್ ಗೇರಿತ್ತು. ಉತ್ತರಾಖಂಡ ವಿರುದ್ಧದ ಸೆಮಿಫೈನಲ್ ಪಂದ್ಯವನ್ನು ಡ್ರಾ ಮಾಡಿಕೊಂಡಿದೆ. ಮೊದಲ ಇನಿಂಗ್ಸ್ ನಲ್ಲಿ ಭರ್ಜರಿ ಮುನ್ನಡೆ ಸಾಧಿಸಿದ್ದ ಕಾರಣಕ್ಕೆ ಕರ್ನಾಟಕ ಫೈನಲ್ ಗೆ ಅರ್ಹತೆ ಪಡೆಯಿತು. ದ್ವಿತೀಯ ಇನಿಂಗ್ಸ್ ನಲ್ಲಿ 727 ರನ್ ಗಳ ಬೃಹತ್ ಮೊತ್ತದ ಗೆಲುವಿನ ಗುರಿ ಪಡೆದಿದ್ದ ಉತ್ತರಾಖಂಡ ಇಂದು ಕೊನೆಯ ದಿನ 6 ವಿಕೆಟ್ ನಷ್ಟಕ್ಕೆ 260 ರನ್ ಗಳಿಸಿತ್ತು.
ಬೆಂಗಳೂರು: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸ್ವಂತ ಶಕ್ತಿಯ ಮೇಲೆ ಕರ್ನಾಟಕದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವ ಹಾಗೂ ಭ್ರಷ್ಟ ಕಾಂಗ್ರೆಸ್ ಸರಕಾರವನ್ನು ಕಿತ್ತೊಗೆಯುವ ಸಂಕಲ್ಪ ಮಾಡಬೇಕಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತಿಳಿಸಿದ್ದಾರೆ.ನಗರದ ಅರಮನೆ ಮೈದಾನದ ಗೇಟ್ ನಂ.4, ಗಾಯತ್ರಿ ಗ್ರ್ಯಾಂಡ್ ನಲ್ಲಿ ಇಂದು ನಡೆದ ರಾಜ್ಯ ಕಾರ್ಯಕಾರಿಣಿಯ ಸಂದರ್ಭದಲ್ಲಿ 50 ವರ್ಷ ಸಕ್ರಿಯ ರಾಜಕಾರಣದಲ್ಲಿ ನಡೆದು ಬಂದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಅಭಿನಂದಿಸಲಾಯಿತು. ಕಾರ್ಯಕರ್ತರಿಂದ ಗೌರವ ಸಮರ್ಪಿಸಲಾಯಿತು. ಬಳಿಕ ಅಭಿನಂದನೆಗೆ ಉತ್ತರವಾಗಿ ಯಡಿಯೂರಪ್ಪ ಅವರು ಮಾತನಾಡಿದರು.
ಬೆಂಗಳೂರು: ತೆಲಂಗಾಣ, ಹಿಮಾಚಲ ಪ್ರದೇಶ ಮತ್ತು ಕರ್ನಾಟಕದಲ್ಲಿ ಮಾತ್ರ ಕಾಂಗ್ರೆಸ್ ಪಕ್ಷ ಉಸಿರಾಡುತ್ತಿದೆ. ಕರ್ನಾಟಕದಲ್ಲಿ ಅಭಿವೃದ್ಧಿ ಶೂನ್ಯ ಸ್ಥಿತಿ ಇದ್ದು, ಆಡಳಿತ ಪಕ್ಷದ ಶಾಸಕರೇ ಸರಕಾರದ ವಿರುದ್ಧ ದಂಗೆ ಏಳುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ವಿಶ್ಲೇಷಿಸಿದ್ದಾರೆ.ನಗರದ ಅರಮನೆ ಮೈದಾನದ ಗೇಟ್ ನಂ.4, ಗಾಯತ್ರಿ ಗ್ರ್ಯಾಂಡ್ ನಲ್ಲಿ ಇಂದು ನಡೆದ ರಾಜ್ಯ ಕಾರ್ಯಕಾರಿಣಿಯ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು. ಕರ್ನಾಟಕದಲ್ಲಿ ಸಿದ್ದರಾಮಯ್ಯರ ನೇತೃತ್ವದ ಕಾಂಗ್ರೆಸ್ ಸರಕಾರ ಆಡಳಿತಕ್ಕೆ ಬಂದ ಬಳಿಕ ಹಿಂದೂ ಕಾರ್ಯಕರ್ತರ, ದಲಿತರ ಹತ್ಯೆ ಆಗುತ್ತಿದೆ ಎಂದ ಅವರು, ಸುರತ್ಕಲ್, ಯಲ್ಲಾಪುರದಲ್ಲಿ ಆದ ಹತ್ಯೆಯನ್ನು ಉಲ್ಲೇಖಿಸಿದರು.
ನವದೆಹಲಿ: ದೆಹಲಿಯ ಇಂಡಿಯಾ ಎಐ ಇಂಪ್ಯಾಕ್ಟ್ ಸಮ್ಮೇಳನದಲ್ಲಿ ಮಾತನಾಡಿದ ಪ್ರಧಾನಿ ಮೋದಿ ಭಾರತ ಕೇವಲ ಎಐ ತಂತ್ರಜ್ಞಾನದ ಭಾಗವಲ್ಲ, ಅದನ್ನು ಮುನ್ನಡೆಸಿಕೊಂಡು ಹೋಗುತ್ತಿದೆ ಎಂದಿದ್ದಾರೆ. ಎಐ ಇಂಪ್ಯಾಕ್ಟ್ ಸಮ್ಮೇಳನದಲ್ಲಿ ಇಂದು ಗೂಗಲ್ ಸಿಇಒ ಸುಂದರ್ ಪಿಚ್ಚೈ ಸೇರಿದಂತೆ ಜಾಗತಿಕ ಐಟಿ ದಿಗ್ಗಜರೊಂದಿಗೆ ವೇದಿಕೆ ಹಂಚಿಕೊಂಡ ಪ್ರಧಾನಿ ಮೋದಿ ಬಳಿಕ ಭಾಷಣ ಮಾಡಿದ್ದಾರೆ. ಕೃತಕ ಬುದ್ಧಿಮತ್ತೆ (ಎಐ) ಎಲ್ಲರಿಗೂ ಲಭ್ಯವಾಗುವಂತಿರಬೇಕು ಎಂದಿದ್ದಾರೆ. ಕೃತಕ ಬುದ್ಧಿಮತ್ತೆ ಮಾನವ ಜೀವನದಲ್ಲಿ ಹೊಸ ಪರಿವರ್ತನೆಯನ್ನೇ ತಂದಿದೆ. ಇಂದು ಭಾರತ ಕೇವಲ ಎಐ ತಂತ್ರಜ್ಞಾನದ ಭಾಗವಾಗಿಲ್ಲ.
ಲಕ್ನೋ: ಉತ್ತರಾಖಂಡ ವಿರುದ್ಧ ಕರ್ನಾಟಕದ ರಣಜಿ ಟ್ರೋಫಿ ಸೆಮಿಫೈನಲ್ ಪಂದ್ಯದಲ್ಲಿ ಅದ್ಭುತ ಬ್ಯಾಟಿಂಗ್ ಮಾಡುತ್ತಿದ್ದ ಕೆಎಲ್ ರಾಹುಲ್ ಗೆ ಗೆಳೆಯ ಪ್ರಸಿದ್ಧ ಕೃಷ್ಣರಿಂದ ಅದ್ಭುತ ಅವಕಾಶವೊಂದು ಕೈ ತಪ್ಪಿ ಹೋಗಿದೆ. ರಣಜಿ ಟ್ರೋಫಿ ಸೆಮಿಫೈನಲ್ ನಲ್ಲಿ ಮೊದಲ ಇನಿಂಗ್ಸ್ ನಲ್ಲಿ ಶತಕ ದಾಖಲಿಸಿದ್ದ ಕೆಎಲ್ ರಾಹುಲ್ ದ್ವಿತೀಯ ಇನಿಂಗ್ಸ್ ನಲ್ಲೂ ಶತಕದ ಅಂಚಿನಲ್ಲಿದ್ದರು. ನಿನ್ನೆಯ ದಿನದಂತ್ಯಕ್ಕೆ ಅವರು 70 ರನ್ ಗಳಿಸಿ ಇಂದಿಗೆ ಬ್ಯಾಟಿಂಗ್ ಕಾಯ್ದುಕೊಂಡಿದ್ದರು. ಇಂದೂ ಅವರು ಶತಕ ಗಳಿಸಿಬಹುದು ಎಂದು ಎಲ್ಲರ ನಿರೀಕ್ಷೆಯಾಗಿತ್ತು.
ಪಾಟ್ನಾ: ಬಿಹಾರ ಡಿಸಿಎಂ ಸಾಮ್ರಾಟ್ ಚೌಧರಿ ಸದನದಲ್ಲೇ ಕದ್ದು ಮುಚ್ಚಿ ತಂಬಾಕು ಉತ್ಪನ್ನ ಸೇವಿಸಿದ್ರಾ? ಹೀಗೊಂದು ವಿಡಿಯೋ ಈಗ ವೈರಲ್ ಆಗಿದ್ದು ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಬಿಹಾರದ ನಿತೀಶ್ ಕುಮಾರ್ ಸಿಎಂ ಆಗಿರುವ ಸರ್ಕಾರದಲ್ಲಿ ಬಿಜೆಪಿ ಸಾಮ್ರಾಟ್ ಚೌಧರಿ ಉಪಮುಖ್ಯಮಂತ್ರಿಯಾಗಿದ್ದಾರೆ. ಇತ್ತೀಚೆಗೆ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಬಿಹಾರದಲ್ಲಿ ಅಭೂತಪೂರ್ವ ಗೆಲುವು ಸಾಧಿಸುತ್ತಿದ್ದಂತೇ ಅವರನ್ನು ಹೈಕಮಾಂಡ್ ನಾಯಕರು ಉಪಮುಖ್ಯಮಂತ್ರಿ ಮತ್ತು ಗೃಹಮಂತ್ರಿಯಾಗಿ ಆಯ್ಕೆ ಮಾಡಿದ್ದಾರೆ. ಇದೀಗ ಬಿಹಾರದಲ್ಲಿ ವಿಧಾನಸಭೆ ಕಲಾಪ ನಡೆಯುತ್ತಿದ್ದು ಸದನದಲ್ಲಿಯೇ ಸಾಮ್ರಾಟ್ ಚೌಧರಿ ಬಾಯಿಗೆ ಕೈ ಅಡ್ಡ ಇಟ್ಟುಕೊಂಡು ತಂಬಾಕು ಉತ್ಪನ್ನವನ್ನು ಕದ್ದು ಮುಚ್ಚಿ ಸೇವಿಸುತ್ತಿರುವ ವಿಡಿಯೋ ವೈರಲ್ ಆಗಿದೆ.
ಬೆಂಗಳೂರು: ಕಳೆದ ಕೆಲವು ದಿನಗಳಿಂದ ಚಿನ್ನದ ದರ ಏರಿಕೆ, ಇಳಿಕೆಯಾಗುತ್ತಲೇ ಇದೆ. ಇಂದು ಪರಿಶುದ್ಧ ಚಿನ್ನದ ದರ ಇಳಿಕೆಯಾಗಿದೆ ಮತ್ತುಇತರೆ ಚಿನ್ನದ ದರ ಏರಿಕೆಯಾಗಲಿದೆ. ಇಂದು ಪರಿಶುದ್ಧ ಚಿನ್ನದ ದರ ಮತ್ತು ಇತರೆ ಚಿನ್ನದ ದರ ವಿವರ ಇಲ್ಲಿದೆ ನೋಡಿ. ಚಿನ್ನದ ದರ ಏರಿಕೆಕಳೆದ ವಾರ ಪರಿಶುದ್ಧ ಚಿನ್ನದ ದರ ಸತತವಾಗಿ ದಾಖಲೆಯ ಏರಿಕೆ ಕಂಡಿತ್ತು. ಈ ವಾರ ಅದೇ ರೀತಿ ಬೆಲೆ ಏರಿಳಿಕೆಯಾಗುವ ಲಕ್ಷಣವಿದೆ. ಇಂದು ಪರಿಶುದ್ಧ ಚಿನ್ನದ ದರ ಇಂದು ಇಳಿಕೆಯಾಗಿದೆ. ಪರಿಶುದ್ಧ ಚಿನ್ನದ ದರ ನಿನ್ನೆ 1,56,655.00 ರೂ.ಗಳಿತ್ತು. ಇಂದೂ 1,56,370.00 ರೂ.ಗಳಷ್ಟಿದೆ.
ಬೆಂಗಳೂರು: ರಾಜ್ಯದಲ್ಲಿ ಈಗ ನಾಯಕತ್ವ ಬದಲಾವಣೆ ವಿಚಾರ ಸದ್ದು ಮಾಡುತ್ತಿದೆ. ಇದರ ನಡುವೆ ಯುಗಾದಿ ನಡುವೆ ರಾಜ್ಯದಲ್ಲಿ ಸಿಎಂ ಬದಲಾವಣೆಯಾಗಬಹುದೇ ಎಂಬ ಪ್ರಶ್ನೆಗೆ ಕೋಡಿ ಮಠದ ಶ್ರೀಗಳು ಶಾಕಿಂಗ್ ಭವಿಷ್ಯ ನುಡಿದಿದ್ದಾರೆ. ಈ ಮೊದಲು ಸಂಕ್ರಾಂತಿ ಬಳಿಕ ಕ್ರಾಂತಿಯಾಗಬಹುದು ಎಂದು ನಿರೀಕ್ಷಿಸಲಾಗಿತ್ತು. ಆದರೆ ಹೈಕಮಾಂಡ್ ಯಾಕೋ ನಾಯಕತ್ವ ಬದಲಾವಣೆ ವಿಚಾರದಲ್ಲಿ ಇದುವರೆಗೆ ಯಾವುದೇ ನಿರ್ಧಾರ ತೆಗೆದುಕೊಳ್ಳಲು ತಯಾರಾಗಿಲ್ಲ. ಈಗಲೂ ಡಿಕೆ ಶಿವಕುಮಾರ್ ಮತ್ತು ಸಿಎಂ ಸಿದ್ದರಾಮಯ್ಯನವರನ್ನು ಕರೆದು ಮಾತುಕತೆ ನಡೆಸಲು ಮನಸ್ಸು ಮಾಡುತ್ತಿಲ್ಲ.
ಜೈಪುರ: ರೀಲ್ಸ್ ಗಾಗಿ ಪುಟಾಣಿ ಬಾಲಕನಿಗೆ ಸಿಗರೇಟು ಮತ್ತು ಬಿಯರ್ ಕೊಟ್ಟ ಯುವಕನ ವಿಡಿಯೋವೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು ಭಾರೀ ಆಕ್ರೋಶ ವ್ಯಕ್ತವಾಗಿದೆ. ಇತ್ತೀಚೆಗಿನ ದಿನಗಳಲ್ಲಿ ಜನ ರೀಲ್ಸ್ ಗಾಗಿ ಏನೇನೋ ಸರ್ಕಸ್ ಮಾಡುತ್ತಾರೆ. ಆದರೆ ಈ ಯುವಕ ಮಾಡಿರುವುದು ಮಾತ್ರ ಅಕ್ಷಮ್ಯ ಅಪರಾಧ. ಚಿಕ್ಕಮಕ್ಕಳಿಗೆ ಇಂತಹ ಪಾಠ ಕಲಿಸಿದರೆ ಅವರ ಭವಿಷ್ಯ ಏನಾಗಬಹುದು ಎಂಬ ಯೋಚನೆಯೂ ಇಲ್ಲದೇ ಈ ಯುವಕ ನಡೆದುಕೊಂಡಿದ್ದಾನೆ. ಈ ಘಟನೆ ರಾಜಸ್ಥಾನದಲ್ಲಿ ನಡೆದಿದೆ ಎನ್ನಲಾಗಿದೆ. ಓರ್ವ ಯುವಕ ಬೈಕ್ ಮೇಲೆ ಕೂತುಕೊಂಡು ಒಂದು ಕೈಯಲ್ಲಿ ಸಿಗರೇಟು ಇನ್ನೊಂದು ಕೈಯಲ್ಲಿ ಬಿಯರ್ ಬಾಟಲಿ ಹಿಡಿದುಕೊಂಡಿದ್ದಾನೆ.
ಬೆಂಗಳೂರು: ಇಂದು ಸಂಜೆ ಕೆಎಸ್ಆರ್ ಟಿಸಿ ನೌಕರರು ನಡೆಸಲು ಉದ್ದೇಶಿಸಿರುವ ಬೆಂಗಳೂರು ಚಲೋ ಪ್ರತಿಭಟನೆಯನ್ನು ತಡೆಯಲು ಸರ್ಕಾರ ಪ್ರಯತ್ನಿಸಿದರೂ ಪ್ರಯೋಜನವಾಗಿಲ್ಲ. ಕೆಎಸ್ಆರ್ ಟಿಸಿ ನೌಕರರು 38 ತಿಂಗಳ ಹಿಂಬಾಕಿಗೆ ಬೇಡಿಕೆಯಿಟ್ಟಿದ್ದರು. ನೌಕರರು ಮುಷ್ಕರಕ್ಕೆ ಕರೆ ನೀಡುತ್ತಿದ್ದಂತೇ ರಾಜ್ಯ ಸರ್ಕಾರ 26 ತಿಂಗಳ ಹಿಂಬಾಕಿ ಪಾವತಿ ಮಾಡಿ ಸದ್ಯಕ್ಕೆ ಉರಿಯುವ ಬೆಂಕಿ ನಂದಿಸುವ ಪ್ರಯತ್ನ ಮಾಡಿದೆ. ಆದರೆ ಸರ್ಕಾರದ ಪ್ರಯತ್ನ ಫಲಕೊಟ್ಟಂತೆ ಕಾಣುತ್ತಿಲ್ಲ. ಸರ್ಕಾರ ಹಿಂಬಾಕಿ ಪಾವತಿ ಮಾಡಿದರೂ ಕೆಎಸ್ಆರ್ ಟಿಸಿ ನೌಕರರು ಇಂದು ಸಂಜೆ ಬೆಂಗಳೂರು ಚಲೋ ಮುಂದುವರಿಸಲು ತೀರ್ಮಾನಿಸಿದ್ದಾರೆ.
ಬೆಂಗಳೂರು: ಬೆಳಗಿನ ತಿಂಡಿಗೆ ಏನು ಮಾಡುವುದು ಎಂದರೆ ಸುಲಭವಾಗಿ ಚಿತ್ರಾನ್ನ ಬಿಟ್ಟರೆ ನಮಗೆ ಹೊಳೆಯುವುದು ಅವಲಕ್ಕಿ ಉಪ್ಪಿಟ್ಟು. ಆದರೆ ಅವಲಕ್ಕಿ ಹೇಗೆ ಪ್ಯಾಕ್ ಮಾಡ್ತಾರೆ ಎಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿರುವ ಈ ವಿಡಿಯೋ ನೋಡಿದರೆ ನೀವು ಗಾಬರಿಯಾಗೋದು ಗ್ಯಾರಂಟಿ. ಇತ್ತೀಚೆಗಿನ ದಿನಗಳಲ್ಲಿ ಪ್ಯಾಕೆಟ್ ನಲ್ಲಿ ಸೀಲ್ ಆಗಿ ಬರುವ ಆಹಾರ ವಸ್ತುಗಳು ತಕ್ಕಮಟ್ಟಿಗೆ ಸೇಫ್ ಎಂದು ನಾವು ಅಂದುಕೊಳ್ಳುತ್ತೇವೆ. ಆದರೆ ಈ ವಿಡಿಯೋ ನೋಡಿದರೆ ಅದು ಸುಳ್ಳೆನಿಸುತ್ತದೆ. ಫ್ಯಾಕ್ಟರಿಯೊಂದರಲ್ಲಿ ಅವಲಕ್ಕಿ ಪ್ಯಾಕ್ ಮಾಡುವ ವಿಡಿಯೋವೊಂದು ನಿಮಗೆ ಶಾಕ್ ಉಂಟು ಮಾಡಬಹುದು.
ಬೆಂಗಳೂರು: ಡಿಕೆ ಶಿವಕುಮಾರ್ ಬೆದರಿಕೆ ಎಲ್ಲಾ ನಮ್ಮ ಜೊತೆ ಬೇಡ. ಅವರ ಗೊಡ್ಡು ಬೆದರಿಕೆಗೆಲ್ಲಾ ಹೆದರುವವರಲ್ಲ ನಾವು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದ್ದಾರೆ. ಬೆಂಗಳೂರಿನ ಕಸವನ್ನು ನಿಯಮಬಾಹಿರವಾಗಿ ದೊಡ್ಡಬಳ್ಳಾಪುರಕ್ಕೆ ಸಾಗಿಸಲಾಗುತ್ತಿದೆ ಎಂದು ಬಿಜೆಪಿ ಅಡ್ಡಿಪಡಿಸುತ್ತಿರುವುದಕ್ಕೆ ಡಿಕೆ ಶಿವಕುಮಾರ್ ಗರಂ ಆಗಿ ಗರಂ ಆಗಿ ಬಿಜೆಪಿ ನಾಯಕರ ಮನೆ ಮುಂದೆಯೇ ಕಸ ಸುರಿಯುತ್ತೇವೆ ಎಂದು ಎಚ್ಚರಿಕೆ ನೀಡಿದ್ದರು. ಇದಕ್ಕೆ ಬಿಜೆಪಿ ನಾಯಕ ವಿಜಯೇಂದ್ರ ತಿರುಗೇಟು ನೀಡಿದ್ದಾರೆ. ‘ಉಪ ಮುಖ್ಯಮಂತ್ರಿಗಳ ಗೊಡ್ಡು ಬೆದರಿಕೆಗೆ ಬಿಜೆಪಿ ಬಗ್ಗುವುದಿಲ್ಲ.
ಮುಂಬೈ: ಟಿ20 ವಿಶ್ವಕಪ್ ನಲ್ಲಿ ಟೀಂ ಇಂಡಿಯಾ ಸೂಪರ್ 8 ಕ್ಕೆ ಈಗಾಗಲೇ ಲಗ್ಗೆಯಿಟ್ಟಿದೆ. ಸೂಪರ್ 8 ಹಂತದ ಟೀಂ ಇಂಡಿಯಾ ಪಂದ್ಯಗಳ ವೇಳಾಪಟ್ಟಿ, ಯಾವ ತಂಡಗಳು ಎದುರಾಳಿ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ. ನಾಲ್ಕು ಗುಂಪುಗಳ ಅಗ್ರ ಎರಡು ತಂಡಗಳು ಸೂಪರ್ 8 ಕ್ಕೆ ಅರ್ಹತೆ ಪಡೆಯುತ್ತದೆ. ಅದರಂತೆ ಎ ಗುಂಪಿನ ಅಗ್ರಸ್ಥಾನಿ ಟೀಂ ಇಂಡಿಯಾ ಈಗಾಗಲೇ ಸೂಪರ್ 8 ಕ್ಕೆ ಅರ್ಹತೆ ಪಡೆದಿತ್ತು. ಇದೀಗ ಸೂಪರ್ 8 ಹಂತದಲ್ಲಿ ಎಲ್ಲಾ ತಂಡಗಳು ಮೂರು ಪಂದ್ಯಗಳನ್ನು ಆಡಬೇಕಾಗುತ್ತದೆ. ಟೀಂ ಇಂಡಿಯಾಗೆ ಮೊದಲ ಪಂದ್ಯ ಯಾವಾಗ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.
ಬೆಂಗಳೂರು: ರಾಜ್ಯದ ಹವಾಮಾನದಲ್ಲಿ ನಿನ್ನೆಯಿಂದ ಕೊಂಚ ಬದಲಾವಣೆ ಗಮನಿಸಿರಬಹುದು. ಇದೀಗ ಕೇರಳಕ್ಕೆ ಮಳೆಯ ನಿರೀಕ್ಷೆಯಿದ್ದು ಕರ್ನಾಟಕದಲ್ಲಿ ಮಳೆಯಿದೆಯಾ ಇಲ್ಲಿದೆ ಇಂದಿನ ಹವಾಮಾನ ವರದಿ. ರಾಜ್ಯದಲ್ಲಿ ನಿನ್ನೆ ಬೆಂಗಳೂರು, ಕರಾವಳಿ ಜಿಲ್ಲೆಗಳಲ್ಲಿ ಭಾಗಶಃ ಮೋಡಕವಿದ ವಾತಾವರಣ ಕಂಡುಬಂದಿತ್ತು. ಇಂದೂ ಕೂಡಾ ಬೆಳಗಿನ ವೇಳೆ ಚಳಿ ಕಂಡುಬಂದಿದ್ದು ನಿನ್ನೆಗೆ ಹೋಲಿಸಿದರೆ ಬಿಸಿಲಿನ ಝಳ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ. ಕೇರಳದಲ್ಲಿ ನಾಳೆ ಮತ್ತು ನಾಡಿದ್ದು ಮಳೆಯ ಸಾಧ್ಯತೆಯಿದೆ ಎನ್ನಲಾಗಿದೆ. ಮೊನ್ನೆಯಿಂದಲೇ ಬೆಳಗ್ಗಿನ ಹೊತ್ತು ಮೋಡ ಕಂಡುಬರುತ್ತಿದೆ.
ಗುರುವಾರ ಇಂದು ಗುರು ನಾಮಸ್ಮರಣೆ ಮಾಡಿ. ಜೀವನದಲ್ಲಿ ಅಡೆತಡೆಗಳಿಂದ ಸಾಕಷ್ಟು ತೊಂದರೆ ಅನುಭವಿಸುತ್ತಿದ್ದರೆ ಇಂದು ತಪ್ಪದೇ ಗುರು ಪಾದುಕಾ ಸ್ತೋತ್ರವನ್ನು ಓದಿ. ಕನ್ನಡದಲ್ಲಿ ಇಲ್ಲಿದೆ.ಅನಂತಸಂಸಾರ-ಸಮುದ್ರತಾರ-ನೌಕಾಯಿತಾಭ್ಯಾಂ ಗುರುಭಕ್ತಿದಾಭ್ಯಾಮ್ ।ವೈರಾಗ್ಯಸಾಮ್ರಾಜ್ಯದ-ಪೂಜನಾಭ್ಯಾಂನಮೋ ನಮಃ ಶ್ರೀಗುರುಪಾದುಕಾಭ್ಯಾಮ್ ॥ 1 ॥ ಕವಿತ್ವವಾರಾಶಿ-ನಿಶಾಕರಾಭ್ಯಾಂದೌರ್ಭಾಗ್ಯ-ದಾವಾಂಬುದ-ಮಾಲಿಕಾಭ್ಯಾಮ್ ।ದೂರೀಕೃತಾನಮ್ರ-ವಿಪತ್ತಿತಾಭ್ಯಾಂನಮೋ ನಮಃ ಶ್ರೀಗುರುಪಾದುಕಾಭ್ಯಾಮ್ ॥ 2 ॥ ನತಾ ಯಯೋಃ ಶ್ರೀಪತಿತಾಂ ಸಮೀಯುಃಕದಾಚಿದಪ್ಯಾಶು ದರಿದ್ರವರ್ಯಾಃ ।ಮೂಕಾಶ್ಚ ವಾಚಸ್ಪತಿತಾಂ ಹಿ ತಾಭ್ಯಾಂನಮೋ ನಮಃ ಶ್ರೀಗುರುಪಾದುಕಾಭ್ಯಾಮ್ ॥ 3 ॥ ನಾಲೀಕನೀಕಾಶ-ಪದಾಹೃತಾಭ್ಯಾಂನಾನಾವಿಮೋಹಾದಿ-ನಿವಾರಿಕಾಭ್ಯಾಮ್ ।ನಮಜ್ಜನಾಭೀಷ್ಟ-ತತಿಪ್ರದಾಭ್ಯಾಂನಮೋ ನಮಃ ಶ್ರೀಗುರುಪಾದುಕಾಭ್ಯಾಮ್ ॥ 4 ॥
ಅಹಮದಾಬಾದ್: ಭಾರತ ಹಾಗೂ ನೆದರ್ಲ್ಯಾಂಡ್ ತಂಡಗಳ ನಡುವೆ ಸಿ ಗುಂಪಿನ ಕೊನೆಯ ಲೀಗ್ ಪಂದ್ಯ ನಡೆಯುತ್ತಿದೆ. ಈ ಪಂದ್ಯದಲ್ಲಿ ಭಾರತ ತಂಡದ ಸ್ಫೋಟಕ ಆರಂಭಿಕ ಬ್ಯಾಟರ್ ಅಭಿಷೇಕ್ ಶರ್ಮಾ ಅನಗತ್ಯ ದಾಖಲೆಯೊಂದನ್ನು ತಮ್ಮ ಹೆಸರಿಗೆ ಸೇರಿಸಿಕೊಂಡಿದ್ದಾರೆ. ವಿಶ್ವನ ನಂಬರ್ ಒನ್ ಬ್ಯಾಟರ್ ಅಭಿಷೇಕ್ ಶರ್ಮಾ ಅವರು, ಟೂರ್ನಿಯಲ್ಲಿ ಲೀಗ್ ಹಂತದ 4 ಪಂದ್ಯಗಳ ಪೈಕಿ ಮೂರು ಪಂದ್ಯಗಳಲ್ಲಿ ಬ್ಯಾಟಿಂಗ್ ಮಾಡಿದ್ದಾರೆ. ಸ್ಫೋಟಕ ಆಟಕ್ಕೆ ಹೆಸರುವಾಸಿಯಾಗಿರುವ ಅವರು, ಆಡಿರುವ ಮೂರು ಪಂದ್ಯಗಳಿಂದ ರನ್ ಖಾತೆಯನ್ನೇ ತೆರೆದಿಲ್ಲ. ಅಮೆರಿಕ ವಿರುದ್ಧ (0), ಪಾಕಿಸ್ತಾನ ವಿರುದ್ಧ (0) ಹಾಗೂ ಇಂದಿನ ಪಂದ್ಯದಲ್ಲಿ ನೆದರ್ಲ್ಯಾಂಡ್ ವಿರುದ್ಧವೂ ಖಾತೆ ತೆರೆಯದೆ ಪೆವಿಲಿಯನ್ ಸೇರಿಕೊಂಡಿದ್ದಾರೆ. ಇಂದಿನ ಪಂದ್ಯದಲ್ಲಿ ಶೂನ್ಯಕ್ಕೆ ಔಟ್ ಆಗುವ ಮೂಲಕ ಅಭಿಷೇಕ್ ಶರ್ಮಾ ಅವರು, ಟಿ20 ವಿಶ್ವಕಪ್ನಲ್ಲಿ ಸತತವಾಗಿ ಅತೀ ಹೆಚ್ಚು ಬಾರಿ ಶೂನ್ಯ ಸುತ್ತಿದ ಆರಂಭಿಕ ಬ್ಯಾಟರ್ ಎಂಬ ಅನಗತ್ಯ ದಾಖಲೆಗೆ ಒಳಗಾದರು ಹಾಗೂ ಈ ಅನಗತ್ಯ ದಾಖಲೆ ಮಾಡಿದ ವಿಶ್ವದ 4ನೇ ಆಟಗಾರ ಎನಿಸಿಕೊಂಡರು.
ಢಾಕಾ: ಬಾಂಗ್ಲಾದೇಶ ರಾಷ್ಟ್ರೀಯವಾದಿ ಪಕ್ಷವು(ಬಿಎನ್ಪಿ) ಅಧಿಕಾರಕ್ಕೆ ಬಂದು ಪಕ್ಷದ ಅಧ್ಯಕ್ಷ ತಾರಿಖ್ ರೆಹಮಾನ್ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದರು. ಹಸೀನಾ ಅವರು ದೇಶಬಿಟ್ಟ ಬಳಿಕ ನಡೆದ ಮೊದಲ ಚುನಾವಣೆಯಲ್ಲಿ ಸಂಸತ್ತಿನ 299 ಕ್ಷೇತ್ರಗಳ ಪೈಕಿ ಬಿಎನ್ಪಿ 212 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ.ಫೆಬ್ರುವರಿ 12ರಂದು ಬಾಂಗ್ಲಾದೇಶದಲ್ಲಿ ನಡೆದ ಸಾರ್ವತ್ರಿಕ ಚುನಾವಣೆಯೂ ದೇಶದ ರಾಜಕೀಯ ಚಿತ್ರಣವನ್ನೇ ಬದಲಿಸಿತು. ಈ ನಡುವೆ ಸಂಪುಟದಲ್ಲಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಂಸದರ ಪೈಕಿ ಏಕೈಕ ಹಿಂದೂ ನಿತಾಯಿ ರಾಯ್ ಚೌಧುರಿ. ಬಿಎನ್ಪಿಯ ಉಪಾಧ್ಯಕ್ಷರಾಗಿರುವ ಚೌಧರಿ, ಮಗುರಾ–2 ಕ್ಷೇತ್ರದಿಂದ ಆಯ್ಕೆಯಾಗಿದ್ದಾರೆ.1949ರ ಜನವರಿ 7ರಂದು ಬಾಂಗ್ಲಾದ ಮಗುರಾ ಜಿಲ್ಲೆಯ ಹಟಬಾರಿಯಾ ಎಂಬ ಗ್ರಾಮದಲ್ಲಿ ಜನಿಸಿದ ಚೌಧುರಿ, ಅಲೋಕ್ಡಿಯಾ ಪುಖುರಿಯಾ ಪ್ರೌಢಶಾಲೆಯಲ್ಲಿ ಶಾಲಾ ಶಿಕ್ಷಣ ಮುಗಿಸಿದ್ದರು. ಬಳಿಕ, ಮಗುರಾದ ಸರ್ಕಾರಿ ಕಾಲೇಜಿನಲ್ಲಿ ಪದವಿ ಪಡೆದಿದ್ದರು.
ಕೊಲಂಬೊ: ಪಾಕಿಸ್ತಾನ ತಂಡವು ಟಿ20 ವಿಶ್ವಕಪ್ ಟೂರ್ನಿಯಲ್ಲಿ ಎಂಟನೇ ತಂಡವಾಗಿ ಸೂಪರ್ ಎಂಟರ ಘಟ್ಟಕ್ಕೆ ಲಗ್ಗೆ ಹಾಕಿದೆ. ಬುಧವಾರ ನಡೆದ ಗುಂಪು ಹಂತದ ಕೊನೆಯ ಪಂದ್ಯದಲ್ಲಿ ನಮೀಬಿಯಾ ತಂಡವನ್ನು ಮಣಿಸಿ ಮುಂದಿನ ಸುತ್ತು ಪ್ರವೇಶಿಸಿದೆ.ಸಾಹಿಬ್ಝಾದ ಫರ್ಹಾನ್ ಅವರ ಶತಕ ಹಾಗೂ ಉಸ್ಮಾನ್ ತಾರಿಖ್ ಮತ್ತು ಶದಾಬ್ ಖಾನ್ ಅವರ ಸ್ಪಿನ್ ಮೋಡಿಯ ಸಹಾಯದಿಂದ ಪಾಕಿಸ್ತಾನ ತಂಡ, ನಮೀಬಿಯಾ ತಂಡವನ್ನು ತನ್ನ ಕೊನೆಯ ಲೀಗ್ ಪಂದ್ಯದಲ್ಲಿ 102 ರನ್ಗಳಿಂದ ಮಣಿಸಿತು. ಸಲ್ಮಾನ್ ಅಲಿ ಆಘಾ ನಾಯಕತ್ವದ ಪಾಕ್ ತಂಡದ ಸೋಲನ್ನು ಬಯಸುತ್ತಿದ್ದ ಯುಎಸ್ಎ ತಂಡ ಅಧಿಕೃತವಾಗಿ ಚುಟುಕು ವಿಶ್ವಕಪ್ ಟೂರ್ನಿಯಿಂದ ಹೊರ ನಡೆಯಿತು. ನಮೀಬಿಯಾ ತಂಡ ಒಂದೂ ಗೆಲುವು ಕಾಣದೆ ಈ ಟೂರ್ನಿಯಲ್ಲಿನ ತನ್ನ ಅಭಿಯಾನವನ್ನು ಮುಗಿಸಿತು.
ಮುಂಬೈ: ಬಾಲಿವುಡ್ನ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಅವರ ತಂದೆ, ಹಿಂದಿ ಸಿನಿಮಾ ದಂತಕಥೆ ಸಲೀಮ್ ಖಾನ್ ಅವರ ಆರೋಗ್ಯದಲ್ಲಿ ಏರುಪೇರಾಗಿದೆ. ಅವರನ್ನು ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.90 ವರ್ಷದ ಸಲೀಮ್ ಖಾನ್ ಅವರಿಗೆ ಮಂಗಳವಾರ ಸಣ್ಣ ಪ್ರಮಾಣದ ಮಿದುಳಿನ ರಕ್ತಸ್ರಾವದಿಂದ ಬಳಲುತ್ತಿದ್ದು, ಮುಂಬೈನ ಲೀಲಾವತಿ ಆಸ್ಪತ್ರೆಯಲ್ಲಿ ವೈದ್ಯಕೀಯ ಚಿಕಿತ್ಸೆಗೆ ಒಳಗಾಗಿದ್ದಾರೆ.ಪ್ರಸ್ತುತ ಸಲೀಂ ಖಾನ್ ಅವರಿಗೆ ಪ್ರಸ್ತುತ ವೆಂಟಿಲೇಟರ್ನಲ್ಲಿ ಚಿಕಿತ್ಸೆಗೊಳಪಡಿಸಲಾಗಿದೆ. ಅವರು ಮಿದುಳಿನ ರಕ್ತಸ್ರಾವದಿಂದ ಬಳಲುತ್ತಿದ್ದು ತೀವ್ರ ನಿಗಾ ಘಟಕದಲ್ಲಿ ನಿಕಟ ವೀಕ್ಷಣೆಯಲ್ಲಿದ್ದಾರೆ.ಸಲೀಂ ಖಾನ್ ಅವರಿಗೆ ಸಣ್ಣ ಪ್ರಮಾಣದ ಮಿದುಳಿನ ರಕ್ತಸ್ರಾವವಿತ್ತು. ಬೆಳಿಗ್ಗೆ ಡಿಎಸ್ಎ ಎಂಬ ಶಸ್ತ್ರಚಿಕಿತ್ಸೆ ಮಾಡಲಾಯಿತು. ಅವರು ಇನ್ನೂ ವೆಂಟಿಲೇಟರ್ನಲ್ಲಿದ್ದಾರೆ.
ಅಹಮದಾಬಾದ್: ಹ್ಯಾಟ್ರಿಕ್ ಗೆಲುವು ಸಾಧಿಸಿರುವ ಭಾರತ ಕ್ರಿಕೆಟ್ ತಂಡವು ಟಿ20 ವಿಶ್ವಕಪ್ ಟೂರ್ನಿಯಲ್ಲಿ ಈಗಾಗಲೇ ಸೂಪರ್ ಎಂಟರ ಘಟ್ಟ ಪ್ರವೇಶಿಸಿದೆ. ಆದರೆ, ಗುಂಪು ಹಂತದ ಕೊನೆಯ ಪಂದ್ಯದಲ್ಲಿ ಇದು ನೆದರ್ಲೆಂಡ್ಸ್ ತಂಡವನ್ನು ಎದುರಿಸಲಿದೆ.ಇಂದಿನ ಪಂದ್ಯಕ್ಕೆ ಹೆಚ್ಚಿನ ಮಹತ್ವವಿಲ್ಲ. ನೆದರ್ಲೆಂಡ್ಸ್ ತಂಡ ಈಗಾಗಲೇ ಟೂರ್ನಿಯಿಂದ ಹೊರಬಿದ್ದಿದೆ. ಭಾರತ ತಂಡವು ಈ ಪಂದ್ಯವನ್ನು ಗೆದ್ದು ಅಜೇಯವಾಗಿ ಸೂಪರ್ ಎಂಟರ ಘಟ್ಟ ಪ್ರವೇಶಿಸುವತ್ತ ಗಮನ ಹರಿಸಿದೆ.ಇಂದು ಟಾಸ್ ಗೆದ್ದ ನಾಯಕ ಸೂರ್ಯಕುಮಾರ್ ಯಾದವ್ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಹೀಗಾಗಿ, ರನ್ ಮಳೆಯಾಗುವ ನಿರೀಕ್ಷೆಯಿದೆ. ಭಾರತದ ಆರಂಭಿಕ ಆಟಗಾರರಾದ ಇಶಾನ್ ಕಿಶನ್, ಅಭಿಷೇಕ್ ಶರ್ಮಾ ಮೇಲೆ ಹೆಚ್ಚಿನ ನಿರೀಕ್ಷೆಯಿದೆ.
ಇಂದೋರ್: 24 ವರ್ಷದ ಎಂಬಿಎ ವಿದ್ಯಾರ್ಥಿನಿ ಸೆಕ್ಸ್ಗೆ ಸಹಕರಿಸಲಿಲ್ಲವೆಂದು ಬಾಯ್ಫ್ರೆಂಡ್ ಆಕೆಯನ್ನು ಹತ್ಯೆ ಮಾಡಿದ ಪ್ರಕರಣ ಇಡೀ ದೇಶವನ್ನೇ ಬೆಚ್ಚಿಬೀಳಿಸಿತು. ಇದೀಗ ಪ್ರಕರಣ ಸಂಬಂಧ ಆರೋಪಿ ಅರೆಸ್ಟ್ ಆಗಿದ್ದಾನೆ. ಈ ಸಂದರ್ಭದಲ್ಲಿ ಮಾಧ್ಯಮದವರು ಆತನನ್ನು ಪ್ರಶ್ನಿಸಿದಾಗ ಯಾವುದೇ ಪಾಪ ಪ್ರಜ್ಞೆಯಿಲ್ಲದೆ ಆತ ನಡೆದುಕೊಂಡಿದ್ದಾನೆ. ಕೊಲೆಯ ಹಿಂದಿನ ಅವನ ಉದ್ದೇಶದ ಬಗ್ಗೆ ಮಾಧ್ಯಮದವರು ಪ್ರಶ್ನಿಸಿದಾಗ ಆತ "ಏನೂ ಆಗಿಲ್ಲ, ಬಿಟ್ಟುಬಿಡಿ" ಎಂದು ಪ್ರಕರಣದ ಬಗ್ಗೆ ಯಾವುದೇ ಪಾಪಪ್ರಜ್ಞೆಯಿಲ್ಲದಂತ್ತೆ ನಡೆದುಕೊಂಡಿದ್ದಾನೆ. "ಮಾಡಿದ್ದು ಮುಗಿಯಿತು. ನನ್ನ ಉತ್ತರವನ್ನು ತಿಳಿದ ನಂತರ ನೀವು ಈಗ ಏನು ಮಾಡಬಹುದು?" ಇನ್ನೂ ಕೊಲೆ ಬಬಗ್ಗೆ
ರಾಜ್ಯ ರಾಜಧಾನಿಯಲ್ಲಿ ಚಳಿಯ ತೀವ್ರತೆ ಕಡಿಮೆಯಾಗುತ್ತಿದ್ದ ಹಾಗೇ ಬಿಸಿಲ ಬೇಗೆ ದಿನದಿಂದ ದಿನಕ್ಕೆ ಜಾಸ್ತಿಯಾಗುತ್ತಲೇ ಇದೆ. ಇನ್ನೂ ಇಂತಹ ಸಮಯದಲ್ಲಿ ನಮ್ಮ ದೇಹವನ್ನು ಆರೋಗ್ಯದಲ್ಲಿಡಲು ಆದಷ್ಟು ಮುತುವರ್ಜಿ ವಹಿಸಬೇಕು. ಬಿಸಿಲಿನ ಬೇಗೆಯಿಂದ ತಪ್ಪಿಸಿಕೊಳ್ಳಲು ಇಲ್ಲಿವೆ ಕೆಲವು ಉಪಯುಕ್ತ ಸಲಹೆಗಳು ಇಲ್ಲಿದೆ. ಹೈಡ್ರೇಶನ್ (ನೀರಿನಾಂಶ) ಅತಿ ಮುಖ್ಯಬಿಸಿಲಿನಲ್ಲಿ ದೇಹದ ನೀರಿನಾಂಶ ಬೇಗನೆ ಕಡಿಮೆಯಾಗುತ್ತದೆ . ಇದನ್ನು ತಡೆಗಟ್ಟಲು: ಹೆಚ್ಚು ನೀರು ಕುಡಿಯಿರಿ: ಬಾಯಾರಿಕೆ ಆಗದಿದ್ದರೂ ದಿನವಿಡೀ ಅಲ್ಪ ಪ್ರಮಾಣದಲ್ಲಿ ನೀರು ಕುಡಿಯುತ್ತಿರಿ.
ಕುನೋ ರಾಷ್ಟ್ರೀಯ ಉದ್ಯಾನವನಕ್ಕೆ ಸ್ಥಳಾಂತರಗೊಂಡ ದಕ್ಷಿಣ ಆಫ್ರಿಕಾದ ಚೀತಾ ಗಾಮಿನಿ ಮೂರು ಮರಿಗಳಿಗೆ ಜನ್ಮ ನೀಡಿದ್ದು, ಭಾರತದ ಚಿರತೆಯ ಸಂಖ್ಯೆ 38ಕ್ಕೆ ಏರಿಕೆಯಾಗಿದೆ. ಕುನೋ ರಾಷ್ಟ್ರೀಯ ಉದ್ಯಾನವನದ ಹುಲ್ಲುಗಾವಲುಗಳಲ್ಲಿ, ಮೃದುವಾದ ಆರಂಭವು ಪ್ರಬಲ ಸಂದೇಶವನ್ನು ನೀಡಿದೆ. ದಕ್ಷಿಣ ಆಫ್ರಿಕಾದ ಚೀತಾ "ಗಾಮಿನಿ" ಈಗ ಎರಡನೇ ಬಾರಿಗೆ ತಾಯಿಯಾಗಿದೆ. ಮರುಪರಿಚಯ ಕಾರ್ಯಕ್ರಮದ ಅಡಿಯಲ್ಲಿ ಭಾರತದಲ್ಲಿ ಜನಿಸಿದ ಒಂಬತ್ತನೇ ಯಶಸ್ವಿ ಚೀತಾ ಇದಾಗಿದೆ. ತಾಯಿ ಚೀತಾ
ರೋಹ್ಟಕ್: ಜಜ್ಜರ್ ಜಿಲ್ಲೆಯ ಬಹದ್ದೂರ್ಘರ್ ಬಳಿ 27 ವರ್ಷದ ಬ್ಯಾಂಕ್ ಉದ್ಯೋಗಿಯೊಬ್ಬಳ ಕೊಲೆ ಪ್ರಕರಣವನ್ನು 18 ಗಂಟೆಗಳಲ್ಲಿ ಭೇದಿಸಲಾಗಿದ್ದು, ಪೊಲೀಸರು ಪ್ರಮುಖ ಆರೋಪಿ ಹಿಸಾರ್ನ ಚಾರ್ಟರ್ಡ್ ಅಕೌಂಟೆಂಟ್ ಪತಿಯನ್ನು ಬಂಧಿಸಿದ್ದಾರೆ. ಆರೋಪಿಯು ತನ್ನ ಪತ್ನಿಯ ಬಗ್ಗೆ ಪದೇ ಪದೇ ಅನುಮಾನಗೊಂಡು ಕೊಂದು ನಂತರ ಅದನ್ನು ದರೋಡೆ-ಕೊಲೆ ಎಂದು ನಂಬಿಸಲು ಯತ್ನಿಸಿದ್ದಾನೆ ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ. ಸಂತ್ರಸ್ತೆ, ಮಹಾಕ್, ಗುರ್ಗಾಂವ್ನ ಎಚ್ಡಿಎಫ್ಸಿ ಬ್ಯಾಂಕ್ನಲ್ಲಿ ಕೆಲಸ ಮಾಡುತ್ತಿದ್ದರು. ಅವರು ಚಾರ್ಟರ್ಡ್ ಅಕೌಂಟೆಂಟ್ ಮತ್ತು ಹಿಸಾರ್ ಸೆಕ್ಟರ್ 14 ರ ನಿವಾಸಿ ಅನ್ಶುಲ್ ಧವನ್ ಅವರನ್ನು ಸೆಪ್ಟೆಂಬರ್ 25, 2025 ರಂದು ಮದುವೆಯಾದರು.
ಬೆಂಗಳೂರು: ಇಲ್ಲಿನ ತಮ್ಮ ಅಪಾರ್ಟ್ಮೆಂಟ್ನಲ್ಲಿ ಪತ್ನಿಯನ್ನು ಕತ್ತು ಹಿಸುಕಿ ಕೊಂದ ಆರೋಪದ ಮೇಲೆ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ದ 65 ವರ್ಷದ ನಿವೃತ್ತ ಉದ್ಯೋಗಿಯನ್ನು ಬುಧವಾರ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅವಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬೆಳಗ್ಗೆ 11 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ.ನಾಗೇಶ್ವರ್ ರಾವ್ ಎಂದು ಗುರುತಿಸಲಾದ ಆರೋಪಿಯು ಬೊಮ್ಮೇಹಳ್ಳಿ ಪ್ರದೇಶದಲ್ಲಿನ ಅವರ ನಿವಾಸದಲ್ಲಿ ಟವೆಲ್ ಬಳಸಿ ಪತ್ನಿ ಸಂದ್ಯಾ ಶ್ರೀ ಅವರ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ. ರಾವ್ ಅವರನ್ನು ಸ್ಥಳದಿಂದ ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.