ಅಹ್ಮದಾಬಾದ್: ಇಲ್ಲಿ ನಡೆಯುತ್ತಿರುವ ಐಪಿಎಲ್ 2026 ರ ಇಂದಿನ ಗುಜರಾತ್ ವಿರುದ್ಧದ ಪಂದ್ಯದಲ್ಲಿ ಮುಂಬೈ ಪರ ತಿಲಕ್ ವರ್ಮ ಭರ್ಜರಿ ಶತಕ ದಾಖಲಿಸಿ ತಂಡಕ್ಕೆ ಟಾನಿಕ್ ನೀಡಿದ್ದಾರೆ. ರೋಹಿತ್ ಶರ್ಮಾ ಈ ಪಂದ್ಯಕ್ಕೂ ಅಲಭ್ಯರಾಗಿದ್ದಾರೆ. ಆದರೆ ಟಾಪ್ ಆರ್ಡರ್ ಬ್ಯಾಟಿಗರ ಪೈಕಿ ಸೂರ್ಯಕುಮಾರ್ ಯಾದವ್, ದ್ಯಾನಿಶ್, ಹಾರ್ದಿಕ್ ಪಾಂಡ್ಯ ವೈಫಲ್ಯ ಅನುಭವಿಸಿದರು. ಈ ವೇಳೆ ತಂಡಕ್ಕೆ ಆಧಾರವಾಗಿದ್ದು ನಮನ್ ಧೀರ್ ಮತ್ತು ತಿಲಕ್ ವರ್ಮ. ನಮನ್ ಧೀರ್ 45 ರನ್ ಗಳಿಸಿ ಔಟಾದರು. ಜೊತೆಗೆ ಕೊನೆಯ ಹಂತದಲ್ಲಿ ಕಗಿಸೊ ರಬಾಡ ತಂಡದ ರನ್ ವೇಗಕ್ಕೆ ಕಡಿವಾಣ ಹಾಕಿದ್ದರು.
ಬೆಂಗಳೂರು: ಮಹಿಳಾ ಮೀಸಲಾತಿ ಮಸೂದೆ ಜಾರಿಗೆ ತಂದು ಪ್ರಧಾನಿ ಮೋದಿ ಮಾಸ್ಟರ್ ಪ್ಲ್ಯಾನ್ ಏನಿತ್ತು ಎಂಬುದನ್ನು ರಾಜ್ಯ ಬಿಜೆಪಿ ಘಟಕ ರಿವೀಲ್ ಮಾಡಿದೆ. ಮೊನ್ನೆಯಷ್ಟೇ ಲೋಕಸಭೆಯಲ್ಲಿ ಮಹಿಳೆಯರಿಗೆ ಲೋಕಸಭೆ ಮತ್ತು ವಿಧಾನಸಭೆಗೆ ಸ್ಪರ್ಧಿಸಲು ಶೇ.33 ರಷ್ಟು ಮೀಸಲಾತಿ ನೀಡುವ ಮಸೂದೆಯನ್ನು ಮಂಡಿಸಲಾಗಿತ್ತು. ಆದರೆ ವಿಪಕ್ಷಗಳು ಇದನ್ನು ವಿರೋಧಿಸಿ ಮತ ಹಾಕಿದ್ದವು. ಪರಿಣಾಮ ಸಂಸತ್ ನಲ್ಲಿ ಬಹುಮತ ಸಿಗದೇ ಮಸೂದೆ ಬಿದ್ದು ಹೋಗಿತ್ತು. ಆದರೆ ಈ ಮಸೂದೆ ಜಾರಿಗೆ ತರುವ ಮೋದಿ ಮಾಸ್ಟರ್ ಪ್ಲ್ಯಾನ್ ಬೇರೆಯೇ ಇತ್ತು ಎಂದು ಬಿಜೆಪಿ ಹೇಳಿಕೊಂಡಿದೆ.
ಹುಬ್ಬಳ್ಳಿ: Fly91 ಏರ್ ಲೈನ್ಸ್ IC3401( ATRTURBOPROP AT7) ಸಂಖ್ಯೆಯ ಫ್ಲೈಟ್ ನಲ್ಲಿ ನಿಜಕ್ಕೂ ಆಗಿದ್ದೇನು, ದುರಂತ ತಪ್ಪಿದ್ದು ಹೇಗೆ ಇಲ್ಲಿದೆ ವಿವರ. ನಿನ್ನೆ ಮಧ್ಯಾಹ್ನ 3 ಗಂಟೆಗೆ ಹೈದರಾಬಾದ್ ನಿಂದ ಟೇಕ್ ಆಫ್ ಆಗಿದ್ದ ವಿಮಾನ 4.30 ಕ್ಕೆ ಹುಬ್ಬಳ್ಳಿಯಲ್ಲಿ ಲ್ಯಾಂಡ್ ಆಗಿತ್ತು. ಆದರೆ ನಾಲ್ಕು ಗಂಟೆ ಅಗಸದಲ್ಲೇ ಚಕ್ಕರ್ ಹೊಡೆದು ಪ್ರಯಾಣಿಕರು ಜೀವ ಭಯದಲ್ಲಿ ಕಣ್ಣೀರಿಡುವಂತೆ ಮಾಡಿತ್ತು. ಅನೇಕರು ಸೋಷಿಯಲ್ ಮೀಡಿಯಾ ಮೂಲಕ ತಮ್ಮ ಮನೆಯವರಿಗೆ ಇದು ಕೊನೆಯ ಸಂದೇಶ ಎಂದು ಕಣ್ಣೀರಿಟ್ಟು ಸಂದೇಶ ರವಾನಿಸಿದ್ದರು. ಇದು ತಮ್ಮ ಜೀವನದ ಕೊನೆಯ ಗಳಿಗೆ ಎಂದು ವಿಡಿಯೋ ಹಂಚಿಕೊಂಡಿದ್ದರು.
ಬೆಂಗಳೂರು: ಕ್ಷೇತ್ರ ಮರುವಿಂಗಡನೆಯನ್ನು ಹೊಸ ಜನಗಣತಿಯಾದ ನಂತರ ಮಾಡುವುದು ಸೂಕ್ತ ಎನ್ನುವುದು ನನ್ನ ಅಭಿಪ್ರಾಯ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಇಂದು ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು ಕ್ಷೇತ್ರ ಮರುವಿಂಗಡಣೆ ಬಗ್ಗೆ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ. ‘ಕ್ಷೇತ್ರ ಮರುವಿಂಗಡನೆಯನ್ನು ಹೊಸ ಜನಗಣತಿಯಾದ ನಂತರ ಮಾಡುವುದು ಸೂಕ್ತ ಎನ್ನುವುದು ನನ್ನ ಅಭಿಪ್ರಾಯ. ನಾವು ಅದಕ್ಕಾಗಿಯೇ ಕ್ಷೇತ್ರ ಮರು ವಿಂಗಡಣೆಯನ್ನು ವಿರೋಧ ಮಾಡಿದೆವು. ನಾವು ಎಂದಿಗೂ ಮಹಿಳಾ ಮೀಸಲಾತಿಯ ಪರವಾಗಿಯೇ ಇದ್ದೇವೆ. ಸಂವಿಧಾನಕ್ಕೆ 73, 74ನೇ ತಿದ್ದುಪಡಿಯನ್ನು ತಂದಿದ್ದು ಕಾಂಗ್ರೆಸ್ ನೇತೃತ್ವದ ಸರ್ಕಾರ. ಸ್ಥಳೀಯ ಸಂಸ್ಥೆಗಳಲ್ಲಿ 50% ಮಹಿಳಾ ಮೀಸಲಾತಿ ತಂದಿದ್ದು ಕೂಡ ಕಾಂಗ್ರೆಸ್ ಸರ್ಕಾರವೇ.
ಚಂಢೀಘಡ: ಐಪಿಎಲ್ 2026 ರಲ್ಲಿ ನಿನ್ನೆ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ 54 ರನ್ ಗಳ ಗೆಲುವು ಸಾಧಿಸಿದ ಬಳಿಕ ಪಂಜಾಬ್ ಮಾಲಕಿ ಪ್ರೀತಿ ಜಿಂಟಾ ಬೌಲರ್ ಅರ್ಷ್ ದೀಪ್ ಸಿಂಗ್ ರನ್ನು ತಬ್ಬಿಕೊಂಡಿದ್ದಾರೆ. ಈ ವೇಳೆ ಅರ್ಷ್ ದೀಪ್ ರಿಯಾಕ್ಷನ್ ವಿಡಿಯೋ ವೈರಲ್ ಆಗಿದೆ. ಪಂಜಾಬ್ ಕಿಂಗ್ಸ್ ಈ ಸೀಸನ್ ನಲ್ಲಿ ಅದ್ಭುತ ಪ್ರದರ್ಶನ ನೀಡುತ್ತಿದೆ. ಶ್ರೇಯಸ್ ಅಯ್ಯರ್ ನೇತೃತ್ವದ ಟೀಂ ಸತತ ಗೆಲುವಿನಿಂದ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಈ ಖುಷಿ ಮಾಲಕಿ ಪ್ರೀತಿ ಜಿಂಟಾ ಮುಖದಲ್ಲಿ ಎದ್ದು ಕಾಣುತ್ತಿದೆ.
ಬೆಂಗಳೂರು: ರಾಜ್ಯದ ಉದ್ಯೋಗಾಂಕ್ಷಿಗಳಿಗೆ ನೆರವಾಗುವ ನಿಟ್ಟಿನಲ್ಲಿ ಮಲ್ಲೇಶ್ವರದಲ್ಲಿ ಉದ್ಯೋಗ ಮೇಳವನ್ನು ಆಯೋಜನೆ ಮಾಡಲಾಗಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಹಾಗೂ ಶಾಸಕರಾದ ಡಾ. ಸಿ.ಎನ್. ಅಶ್ವತ್ಥನಾರಾಯಣ ಅವರು ಹೇಳಿದರು.ಮಲ್ಲೇಶ್ವರದ ಎಸ್.ಎಚ್.ವಿ.ಎನ್.ಎಂ ಪದವಿಪೂರ್ವ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ 'ಯುವೋತ್ಸವ' ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಉದ್ಯೋಗಾಕಾಂಕ್ಷಿಗಳಿಗೆ ಉದ್ಯೋಗ ಪಡೆಯಲು ಹಾಗೂ ಅವರಿಗೆ ನೆರವಾಗಲು ಇಂತಹ ಮೇಳಗಳು ಸಹಕಾರಿಯಾಗಿವೆ. ವಿದ್ಯಾರ್ಥಿಗಳಿಗೆ ಕರಿಯರ್ ಗೈಡೆನ್ಸ್ ನೀಡಲಾಗುವುದು. ನಮ್ಮ ಈ ಕಾರ್ಯಕ್ರಮಕ್ಕೆ ಹಲವಾರು ಸಂಸ್ಥೆಗಳು ಕೈ ಜೋಡಿಸಿವೆ ಎಂದು ಹೇಳಿದರು.
ಬೆಂಗಳೂರು: ಬಿಟ್ ಕಾಯಿನ್ ಮೂಲಕ ಬೇರೆ ಬೇರೆ ದೇಶಗಳಲ್ಲಿ ರಾಜಕಾರಣಿಗಳು ಹೂಡಿಕೆ ಮಾಡಿದ್ದಾರೆ. ವಿಶೇಷವಾಗಿ ಕಾಂಗ್ರೆಸ್ ರಾಜಕಾರಣಿಗಳು ಹೂಡಿಕೆ ಮಾಡಿದ್ದಾರೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಆರೋಪಿಸಿದರು.ಬಿಡಿಎ ಅಧ್ಯಕ್ಷ ಹಾಗೂ ಶಾಸಕ ಎನ್.ಎ. ಹ್ಯಾರಿಸ್ ಅವರ ಮನೆ ಮೇಲೆ ಇಡಿ ದಾಳಿ ಕುರಿತು ಅವರು ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಇವರು, ನಿರಂತರವಾಗಿ ಕಾಂಗ್ರೆಸ್ ಆರ್ಥಿಕ ಅಪರಾಧಗಳನ್ನು ಮಾಡುತ್ತಲೇ ಬರುತ್ತಿದೆ. ಇದರಲ್ಲಿ ಬಿಟ್ ಕಾಯಿನ್ ಸಹ ಒಂದು. ಬಿಟ್ ಕಾಯಿನ್ ನಲ್ಲಿ ಹೂಡಿಕೆ ಆಗಿದೆ ಎಂಬ ಮಾಹಿತಿ ಆಧರಿಸಿ ದಾಳಿ ನಡೆದಿದೆ ಎಂದರು.
ಚೆನ್ನೈ: ದಳಪತಿ ವಿಜಯ್ ವಿರುದ್ಧ ಪತ್ನಿ ಸಂಗೀತಾ ಸಲ್ಲಿಸಿದ್ದ ವಿಚ್ಛೇದನ ಅರ್ಜಿಯ ಕೋರ್ಟ್ ವಿಚಾರಣೆ ಇಂದಿನಿಂದ ಶುರುವಾಗಲಿದೆ. ಈ ನಡುವೆ ವಿಜಯ್ ತಮ್ಮ ಪತ್ನಿಗೆ ದೊಡ್ಡ ಮೊತ್ತದ ಜೀವನಾಂಶ ನೀಡಬೇಕು ಎಂದು ವರದಿಯಾಗಿದೆ. ವಿಜಯ್ ವಿರುದ್ಧ ವಿವಾಹೇತರ ಸಂಬಂಧ, ಮಾನಸಿಕ ಹಿಂಸೆ ಇತ್ಯಾದಿ ಆರೋಪಗಳನ್ನು ಮಾಡಿರುವ ಸಂಗೀತಾ ಕೋರ್ಟ್ ನಲ್ಲಿ ವಿಚ್ಛೇದನ ಕೋರಿ ಅರ್ಜಿ ಸಲ್ಲಿಸಿದ್ದರು. ನಟನಿಗೆ ನಟಿಯೊಬ್ಬರೊಂದಿಗೆ ವಿವಾಹೇತರ ಸಂಬಂಧವಿದೆ ಎಂದು ಪತ್ನಿ ಆರೋಪಿಸಿದ್ದು ದೊಡ್ಡ ಸುದ್ದಿಯಾಗಿತ್ತು. ಈ ಸಂಬಂಧ ಈಗ ಕೋರ್ಟ್ ವಿಚಾರಣೆ ನಡೆಸಲಿದೆ. ಚೆಂಗಲಪಟ್ಟು ಕೌಟುಂಬಿಕ ಕೋರ್ಟ್ ನಲ್ಲಿ ವಿಜಯ್-ಸಂಗೀತಾ ವಿಚ್ಛೇದನ ಅರ್ಜಿ ವಿಚಾರಣೆ ನಡೆಯಲಿದೆ.
ಬೆಂಗಳೂರು: ಅಡಿಕೆ ಬೆಲೆ ಕಳೆದ ವಾರ ಏರಿಕೆ-ಇಳಿಕೆಯಾಗಿತ್ತು. ಕಳೆದ ವಾರದಂತೆ ಈ ವಾರವೂ ಅದೇ ಟ್ರೆಂಡ್ ಮುಂದುವರಿದಿದೆ. ಇಂದು ಅಡಿಕೆ ಮತ್ತು ಕಾಳು ಮೆಣಸು, ಕೊಬ್ಬರಿ ದರ ಹೇಗಿದೆ ಇಲ್ಲಿದೆ ವಿವರ. ಕಳೆದ ವಾರ ಅಡಿಕೆ ಬೆಲೆಯಲ್ಲಿ ಕೊಂಚ ಏರಿಳಿಕೆಯಾಗುತ್ತಲೇ ಇತ್ತು. ಕಳೆದ ವಾರ ಎರಡು ದಿನ ಸತತವಾಗಿ ಬೆಲೆ ಏರಿಕೆ ಕಂಡುಬರುತ್ತಿತ್ತು. ಅಡಿಕೆ ಬೆಲೆಯಲ್ಲಿ ಇಂದು ಕೊಂಚ ವ್ಯತ್ಯಾಸವಾಗಿಲ್ಲ. ಹೊಸ ಅಡಿಕೆ ಬೆಲೆ ಯಥಾಸ್ಥಿತಿಯಲ್ಲಿದ್ದು 480 ರೂ.ಗಳಷ್ಟಿದೆ. ಹಳೆ ಅಡಿಕೆ ಬೆಲೆ ಯಥಾಸ್ಥಿತಿಯಲ್ಲಿದ್ದು 550 ರೂ. ಗಳಾಗಿದೆ. ಡಬಲ್ ಚೋಲ್ ಬೆಲೆಯೂ 550 ರೂ.ಗಳಷ್ಟಾಗಿದೆ.
ಗುವಾಹಟಿ: ರಾಜಸ್ಥಾನ್ ರಾಯಲ್ಸ್ ತಂಡದ ಹಾಲುಗಲ್ಲದ ಹೊಡೆಬಡಿಯ ಆಟಗಾರ ವೈಭವ್ ಸೂರ್ಯವಂಶಿ ಬ್ಯಾಟಿಂಗ್ ನಲ್ಲಿ ಮಾತ್ರ ರಾಕ್ಷಸ, ಇಲ್ಲವೆಂದರೆ ಅಳುಮುಂಜಿ ಎಂಬುದು ಮತ್ತೆ ಸಾಬೀತಾಗಿದೆ. 15 ರ ಹುಡುಗ ವೈಭವ್ ಸೂರ್ಯವಂಶಿ ರಾಜಸ್ಥಾನ್ ರಾಯಲ್ಸ್ ತಂಡದ ಪರ ಐಪಿಎಲ್ ಆಡುತ್ತಾರೆ. ಪ್ರತೀ ಪಂದ್ಯದಲ್ಲೂ ಸ್ಟಾರ್ ಬೌಲರ್ ಗಳು ಎಂದೂ ನೋಡದೇ ಹಿಗ್ಗಾಮುಗ್ಗಾ ಚಚ್ಚಿ ರನ್ ಗುಡ್ಡೆ ಹಾಕುತ್ತಾರೆ. ಅವರ ಬ್ಯಾಟಿಂಗ್ ನೋಡುತ್ತಿದ್ದರೆ ಅನುಭವಿಗಳೂ ಬೆರಗಾಗುತ್ತಾರೆ. ಆದರೆ ಸೋಲು ಮತ್ತು ವೈಫಲ್ಯವನ್ನು ಅವರಿಗೆ ಅರಗಿಸಿಕೊಳ್ಳಲಾಗುತ್ತಿಲ್ಲ.
ಬೆಂಗಳೂರು: ಕಳೆದ ಕೆಲವು ದಿನಗಳಿಂದ ಚಿನ್ನದ ದರ ಏರಿಕೆ, ಇಳಿಕೆಯಾಗುತ್ತಲೇ ಇದೆ. ಇಂದು ಪರಿಶುದ್ಧ ಚಿನ್ನದ ದರ ಏರಿಕೆಯಾಗಿದ್ದರೆ ಮತ್ತುಇತರೆ ಚಿನ್ನದ ದರ ಇಳಿಕೆಯಾಗಿದೆ. ಇಂದು ಪರಿಶುದ್ಧ ಚಿನ್ನದ ದರ ಮತ್ತು ಇತರೆ ಚಿನ್ನದ ದರ ವಿವರ ಇಲ್ಲಿದೆ ನೋಡಿ. ಚಿನ್ನದ ದರ ಏರಿಕೆಕಳೆದ ವಾರ ಪರಿಶುದ್ಧ ಚಿನ್ನದ ದರ ಸತತವಾಗಿ ಬೆಲೆ ಏರಿಳಿಕೆಯಾಗುತ್ತಲೇ ಇತ್ತು. ಆದರೆ ವಾರಂತ್ಯಕ್ಕೆ ಪರಿಶುದ್ಧ ಚಿನ್ನದ ದರದಲ್ಲಿ ಕೊಂಚ ಇಳಿಕೆಯಾಗಿತ್ತು. ಪರಿಶುದ್ಧ ಚಿನ್ನದ ದರ ವಾರಂತ್ಯಕ್ಕೆ 1,57,210.00 ರೂ.ಗಳಿತ್ತು. ಆದರೆ ಇಂದು ಏರಿಕೆಯಾಗಿದ್ದು 1,57,600.00 ರೂ.ಗಳಷ್ಟಿದೆ.
ಜಾರಗ್ರಾಮ: ಪಶ್ಚಿಮ ಬಂಗಾಲದಲ್ಲಿ ಚುನಾವಣಾ ಪ್ರಚಾರದ ನಡುವೆ ದಿಡೀರ್ ಆಗಿ ಪ್ರಧಾನಿ ಮೋದಿ ಲೋಕಲ್ ಅಂಗಡಿಯೊಂದಕ್ಕೆ ತೆರಳಿ ಜಲ್ ಮುರಿ ಸೇವಿಸಿದ್ದರು. ಆ ಅಂಗಡಿಯಾತನ ಅದೃಷ್ಟವೇ ಈಗ ಬದಲಾಗಿದೆ. ಪ್ರಧಾನಿ ಮೋದಿ ನಿನ್ನೆ ಚುನಾವಣಾ ಪ್ರಚಾರದ ವೇಳೆ ಕಾರು ನಿಲ್ಲಿಸಿ ರಸ್ತೆ ಬದಿ ಅಂಗಡಿಯೊಂದಕ್ಕೆ ತೆರಳಿ ಜಲ್ ಮುರಿ ಸೇವಿಸಿದ್ದರು. ಅಂಗಡಿಯಾತನೊಂದಿಗೆ ಸಂವಾದ ನಡೆಸಿದ್ದಲ್ಲದೆ, ಸ್ಥಳೀಯರ ಜೊತೆಗೂ ಬೆರೆತಿದ್ದರು. ಮೋದಿಯ ಈ ನಡೆ ಎಲ್ಲ ಗಮನ ಸೆಳೆದಿತ್ತು. ಇದಾದ ಬಳಿಕ ಈಗ ಆ ಅಂಗಡಿಯಾತನ ಅದೃಷ್ಟವೇ ಬದಲಾಗಿದೆ. ದೇಶದ ಪ್ರಧಾನಿಯೇ ಒಂದು ಅಂಗಡಿಗೆ ಹೋಗಿದ್ದಾರೆಂದರೆ ಕುತೂಹಲಕ್ಕಾದರೂ ಕೆಲವರು ಅಲ್ಲಿಗೆ ಹೋಗಿಯೇ ಹೋಗುತ್ತಾರೆ.
ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಳ್ಳುವ ಉದ್ದೇಶದಿಂದ 20 ನೇ ಮಹಡಿಯಿಂದ ಇನ್ನೇನು ಹಾರಲಿದ್ದಳು. ಕೊನೆಯ ಕ್ಷಣದಲ್ಲಿ ಏನಾಯ್ತು ಈ ಮೈ ಜುಮ್ ಎನಿಸುವ ವಿಡಿಯೋ ತಪ್ಪದೇ ನೋಡಿ. ಈ ಘಟನೆ ನಡೆದಿರುವುದು ಕೊರಿಯಾದ ಗಂಗ್ನಾಂ ಸ್ಟೇಷನ್ ನಲ್ಲಿ. ಇತ್ತೀಚೆಗಿನ ದಿನಗಳಲ್ಲಿ ಕ್ಷುಲ್ಲುಕ ಕಾರಣಗಳಿಗೆ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಕರಣಗಳು ಹೆಚ್ಚಾಗುತ್ತಿವೆ. ಯುವ ಜನತೆ ಒತ್ತಡ ನಿಭಾಯಿಸಲು ಸೋಲುತ್ತಿದ್ದಾರೆ. ಈ ಯುವತಿಗೂ ಅದೇನು ಕಷ್ಟವಿತ್ತೋ. ಒಟ್ಟಿನಲ್ಲಿ ಕೊರಿಯಾದ ಈ ಯುವತಿ ಬಹುಮಹಡಿ ಕಟ್ಟಡದ 20 ನೇ ಮಹಡಿಯಿಂದ ಜಿಗಿಯಲು ಹೊರಟಿದ್ದಳು.
ಕೋಲ್ಕತ್ತಾ: ಪ್ರಧಾನಿ ಮೋದಿ ನಿನ್ನೆ ಪಶ್ಚಿಮ ಬಂಗಾಲದಲ್ಲಿ ಪ್ರಚಾರದ ನಡುವೆ ದಿಡೀರ್ ಆಗಿ ಅಂಗಡಿಗೆ ಹೋಗಿ ಜಲ್ ಮುರಿ ತಿಂದಿದ್ದಕ್ಕೆ ಜಾರ್ಖಂಡ್ ಸಿಎಂಗೆ ತೊಂದರೆಯಾಗಿದೆಯತೆ. ಟಿಎಂಸಿ ಆರೋಪಕ್ಕೆ ಕಾರಣ ಇಲ್ಲಿದೆ. ಪ್ರಧಾನಿ ಮೋದಿ ನಿನ್ನೆ ಜಾರಗ್ರಾಮದಲ್ಲಿ ಬಿರುಸಿನ ಪ್ರಚಾರ ನಡೆಸಿದ್ದಾರೆ. ಈ ವೇಳೆ ಕೊಂಚ ಬಿಡುವು ಮಾಡಿಕೊಂಡ ಪ್ರಧಾನಿ ಮೋದಿ ಸ್ಥಳೀಯ ಚ್ಯಾಟ್ ಸೆಂಟರ್ ಒಂದಕ್ಕೆ ಹೋಗಿದ್ದಾರೆ. ಅಲ್ಲಿ 10 ರೂ. ಕೊಟ್ಟು ಜಲ್ ಮುರಿ ಖರೀದಿ ಮಾಡಿ ತಾವೂ ಸೇವಿಸಿ ಪಕ್ಕದಲ್ಲಿದ್ದವರಿಗೆ ಹಂಚಿ ಖುಷಿಪಟ್ಟಿದ್ದಾರೆ.
ಚಂಢೀಘಡ: ಐಪಿಎಲ್ 2026 ರಲ್ಲಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ ಪಂಜಾಬ್ ಕ್ರಿಕೆಟಿಗ ಶಶಾಂಕ್ ಸಿಂಗ್ ಬಾಲ್ ಪಕ್ಕದಲ್ಲೇ ಬಿದ್ದರೂ ನೋಡುತ್ತಾ ನಿಂತ ಫನ್ನಿ ವಿಡಿಯೋವೊಂದು ವೈರಲ್ ಆಗಿದೆ. ನಿನ್ನೆ ಲಕ್ನೋ ವಿರುದ್ಧ ಪಂಜಾಬ್ ಕಿಂಗ್ಸ್ 54 ರನ್ ಗಳ ಗೆಲುವು ಸಾಧಿಸಿತು. ಮೊದಲು ಬ್ಯಾಟಿಂಗ್ ಮಾಡಿದ್ದ ಪಂಜಾಬ್ ಕಿಂಗ್ಸ್ 254 ರನ್ ಗಳಿಸಿತ್ತು. ಇದಕ್ಕೆ ಉತ್ತರವಾಗಿ ಲಕ್ನೋ 200 ರನ್ ಗಳಿಸಲಷ್ಟೇ ಶಕ್ತವಾಯಿತು. ಇದರೊಂದಿಗೆ ಪಂಜಾಬ್ ಅಗ್ರಸ್ಥಾನ ಭದ್ರಪಡಿಸಿತು.
ನವದೆಹಲಿ: ಮಹಿಳಾ ಮೀಸಲು ಮಸೂದೆ ವಿಫಲಗೊಳಿಸಲು ಕೇಂದ್ರ ಸರ್ಕಾರದ ವಿರುದ್ಧ ವಿಪಕ್ಷಗಳು ಮಾಡಿದ್ದ ಮಾಸ್ಟರ್ ಪ್ಲ್ಯಾನ್ ರಿವೀಲ್ ಆಗಿದೆ. ಲೋಕಸಭೆಯಲ್ಲಿ ಮೊನ್ನೆ ಮಹಿಳಾ ಮೀಸಲಾತಿ ಜಾರಿಗೆ ಸಂಬಂಧಿಸಿದ ಕ್ಷೇತ್ರ ಮರುವಿಂಗಡಣೆ ಮಸೂದೆಯನ್ನು ವಿಪಕ್ಷಗಳು ಒಗ್ಗಟ್ಟಾಗಿ ಸೋಲಿಸಿತ್ತು. ಇದು ಲೋಕಸಭೆ ಕ್ಷೇತ್ರಗಳ ಮರು ವಿಂಗಡಣೆಗೆ ಯೋಜನೆ ಹಾಕಿದ್ದ ಕೇಂದ್ರ ಸರ್ಕಾರಕ್ಕೆ ತೀವ್ರ ಹಿನ್ನಡೆಯುಂಟು ಮಾಡಿತ್ತು. ಕೇಂದ್ರ ಸರ್ಕಾರ ಮಸೂದೆ ಮಂಡನೆ ಮಾಡುತ್ತಿದೆ ಎಂದು ತಿಳಿದ ತಕ್ಷಣವೇ ವಿಪಕ್ಷಗಳು ಮಸೂದೆ ಸೋಲಿಸುವುದಾಗಿ ಘೋಷಿಸಿದ್ದವು.
ಟೆಹ್ರಾನ್: ಒಂದೆಡೆ ಶಾಂತಿ ಮಾತುಕತೆ ಪ್ರಯತ್ನಗಳು ನಡೆಯುತ್ತಿದ್ದರೆ ಇತ್ತ ಇರಾನ್ ಹಡಗನ್ನು ಅಮೆರಿಕಾ ವಶಕ್ಕೆ ಪಡೆದುಕೊಂಡಿದ್ದು ಮತ್ತೆ ಉದ್ವಿಗ್ನ ವಾತಾವರಣ ಸೃಷ್ಟಿಸಿದೆ. ಹೊರ್ಮುಜ್ ಜಲಸಂಧಿಯಲ್ಲಿ ಇರಾನ್ ಹಡುಗಿನ ಮೇಲೆ ದಾಳಿ ನಡೆಸಿದ ಅಮೆರಿಕಾ ವಶಕ್ಕೆ ಪಡೆದುಕೊಂಡಿದೆ. ಉಭಯ ದೇಶಗಳ ನಡುವೆ ಯುದ್ಧ ಆರಂಭವಾದ ಬಳಿಕ ಹೊರ್ಮುಜ್ ಜಲಸಂಧಿಯನ್ನು ಇರಾನ್ ಹಡಗನ್ನು ಅಮೆರಿಕಾ ವಶಕ್ಕೆ ಪಡೆದಿರುವುದು ಇದೇ ಮೊದಲ ಬಾರಿಯಾಗಿದೆ. ಒಂದೆಡೆ ಶಾಂತಿ-ಸಂಧಾನ ಮಾತುಕತೆ, ಕದನ ವಿರಾಮ ಮಾತನಾಡುತ್ತಿರುವಾಗಲೇ ಇನ್ನೊಂದೆಡೆ ತನ್ನ ಹಡಗನ್ನು ಅಮೆರಿಕಾ ವಶಕ್ಕೆ ಪಡೆದಿರುವುದು ಇರಾನ್ ಸಿಟ್ಟಿಗೆ ಕಾರಣವಾಗಿದೆ.
ಬೈಕ್ ಸ್ಟಂಟ್ ಮಾಡಲು ಹೋಗಿ ನೋಡ ನೋಡುತ್ತಲೇ ಮೂವರು ಯುವಕರು ಪ್ರಾಣ ಕಳೆದುಕೊಂಡ ಭೀಕರ ವಿಡಿಯೋವೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ಘಟನೆ ನಡೆದಿರುವುದು ಮಧ್ಯಪ್ರದೇಶದಲ್ಲಿ. ಇತ್ತೀಚೆಗೆ ಯುವಕರು ರೀಲ್ಸ್ ಹುಚ್ಚಿಗೆ ಇಲ್ಲವೇ ವೀಲಿಂಗ್ ಮಾಡುವ ಹುಚ್ಚಿಗೆ ತಮ್ಮ ಪ್ರಾಣವನ್ನೇ ಪಣಕ್ಕಿಡುತ್ತಿದ್ದಾರೆ. ಪೊಲೀಸ್ ಇಲಾಖೆ, ಸರ್ಕಾರ ಎಷ್ಟೇ ಎಚ್ಚರಿಕೆ, ದಂಡ ಹಾಕಿದರೂ ಇಂತಹ ಹುಚ್ಚಾಟಗಳು ನಿಲ್ಲುತ್ತಿಲ್ಲ. ಇದೇ ರೀತಿ ಮಧ್ಯಪ್ರದೇಶದ ಮೂವರು ಯುವಕರು ಹೆಲ್ಮೆಟ್ ಹಾಕದೇ ಒಂದೇ ಬೈಕ್ ನಲ್ಲಿ ಹೆದ್ದಾರಿಯಲ್ಲಿ ವೇಗವಾಗಿ ಬೈಕ್ ಸ್ಟಂಟ್ ಮಾಡಿದ್ದಾರೆ.
ಬೆಂಗಳೂರು: ರಾಜ್ಯದಲ್ಲಿ ವಿಪರೀತ ತಾಪಮಾನದ ಏರಿಕೆಯಾಗುತ್ತಿದೆ. ಇದರ ನಡುವೆಯೂ ಅಲ್ಲಲ್ಲಿ ಮಳೆಯ ಸೂಚನೆಯಿದೆ. ಈ ವಾರದ ಆರಂಭದಲ್ಲೇ ಕೆಲವು ಜಿಲ್ಲೆಗಳಲ್ಲಿ ಮಳೆಯ ಸೂಚನೆಯಿದೆ. ಇಲ್ಲಿದೆ ವಾರದ ಹವಾಮಾನ ವರದಿ. ಒಂದೆಡೆ ವಿಪರೀತ ಬಿಸಿಲು, ಸೆಖೆಯಿಂದ ಜನರು ತತ್ತರಿಸುತ್ತಿದ್ದರೆ ಕೆಲವು ಜಿಲ್ಲೆಗಳಲ್ಲಿ ಮಾತ್ರ ಸಣ್ಣ ಮಳೆಯ ಸೂಚನೆಯೂ ಕಂಡುಬರುತ್ತಿದೆ. ತಾಪಮಾನ ಕಳೆದ ವಾರವೂ 40 ಡಿಗ್ರಿ ದಾಟಿತ್ತು. ಈ ವಾರವೂ ಕೆಲವು ಜಿಲ್ಲೆಗಳಲ್ಲಿ ತಾಪಮಾನ ಗರಿಷ್ಠ ಮಟ್ಟ ತಲುಪಲಿದೆ. ಇದರ ನಡುವೆಯೂ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಕೊಡಗು, ಬೆಳಗಾವಿ ಜಿಲ್ಲೆಗಳಲ್ಲಿ ವಾರದ ಆರಂಭದಲ್ಲಿ ಸಣ್ಣ ಮಳೆಯಾಗುವ ಸೂಚನೆಯಿದೆ.
ಇಂದು ಸೋಮವಾರವಾಗಿದ್ದು ಶಿವನಿಗೆ ವಿಶೇಷವಾದ ದಿನವಾಗಿದೆ. ಆರೋಗ್ಯ, ಆಯುಷ್ಯ, ಸಂತೋಷ, ನೆಮ್ಮದಿಗಾಗಿ ಶಿವನನ್ನು ಕುರಿತ ಸ್ತೋತ್ರವನ್ನು ಓದಿ. ಅದಕ್ಕಾಗಿ ಇಂದು ಶಿವಾಷ್ಟಕಂ ಸ್ತೋತ್ರವನ್ನು ಪಠಿಸಿ. ಕನ್ನಡದಲ್ಲಿ ಇಲ್ಲಿದೆ.ಪ್ರಭುಂ ಪ್ರಾಣನಾಥಂ ವಿಭುಂ ವಿಶ್ವನಾಥಂ ಜಗನ್ನಾಥ ನಾಥಂ ಸದಾನಂದ ಭಾಜಾಮ್ ।ಭವದ್ಭವ್ಯ ಭೂತೇಶ್ವರಂ ಭೂತನಾಥಂ, ಶಿವಂ ಶಂಕರಂ ಶಂಭು ಮೀಶಾನಮೀಡೇ ॥ 1 ॥ ಗಳೇ ರುಂಡಮಾಲಂ ತನೌ ಸರ್ಪಜಾಲಂ ಮಹಾಕಾಲ ಕಾಲಂ ಗಣೇಶಾದಿ ಪಾಲಮ್ ।ಜಟಾಜೂಟ ಗಂಗೋತ್ತರಂಗೈರ್ವಿಶಾಲಂ, ಶಿವಂ ಶಂಕರಂ ಶಂಭು ಮೀಶಾನಮೀಡೇ ॥ 2॥
ಕೋಲ್ಕತ್ತಾ: ಪಶ್ಚಿಮ ಬಂಗಾಲದಲ್ಲಿ ಚುನಾವಣಾ ಪ್ರಚಾರಕ್ಕೆ ತೆರಳಿದ ಪ್ರಧಾನಿ ಮೋದಿ ಲೋಕಲ್ ಅಂಗಡಿಯೊಂದರಲ್ಲಿ ಝುಲ್ಮುರಿ ಖರೀದಿಸಿ ಸುತ್ತಲಿದ್ದವರಿಗೂ ಹಂಚಿ ಖುಷಿಪಟ್ಟಿದ್ದಾರೆ. ಪಶ್ಚಿಮ ಬಂಗಾಲದಲ್ಲಿ ಚುನಾವಣೆ ಕಾವು ಜೋರಾಗಿದೆ. ಇಂದು ಪಶ್ಚಿಮ ಬಂಗಾಳದಲ್ಲಿ ಬಿರುಸಿನ ಪ್ರಚಾರ ನಡೆಸಿದ ಪ್ರಧಾನಿ ಮೋದಿ ಪುರುಲಿಯಾದಲ್ಲಿ ರೋಡ್ ಶೋ ಕೂಡಾ ನಡೆಸಿದ್ದಾರೆ. ಈ ವೇಳೆ ಸಾಕಷ್ಟು ಜನ ಬಿಸಿಲನ್ನೂ ಲೆಕ್ಕಿಸದೇ ನೆರೆದಿದ್ದರು. ಇನ್ನು, ಚುನಾವಣಾ ಪ್ರಚಾರ ನಡುವೆ ಪ್ರಧಾನಿಯವರು ಜರ್ಗಾಮ್ ನಲ್ಲಿ ಸಾಮಾನ್ಯ ಲಘು ಉಪಹಾರ ಚಾಟ್ಸ್ ಗೆ ಭೇಟಿ ನೀಡಿದರು. ಲೋಕಲ್ ಅಂಗಡಿಗೆ ಭೇಟಿ ಕೊಟ್ಟ ಪ್ರಧಾನಿ ಮೋದಿ ಚುರುಮುರಿ ನೀಡುವಂತೆ ಕೇಳಿದರು.
ಬೆಂಗಳೂರು: ಮಹಿಳಾ ಮೀಸಲಾತಿ ವಿಚಾರದಲ್ಲಿ ಭಾರತೀಯ ಜನತಾ ಪಾರ್ಟಿಯ ನಿಲುವು ಅಂದಿನಿಂದ ಇಂದಿನವರೆಗೆ ಒಂದೇ ಆಗಿದೆ. ಸಂಸತ್ತಿನಲ್ಲಿ ಈ ಹಿಂದೆ ಮಂಡನೆಯಾದಾಗೆಲ್ಲ ಬಿಜೆಪಿ ವಿರೋಧ ಪಕ್ಷದಲ್ಲಿದ್ದರೂ ಬೆಂಬಲ ನೀಡಿದೆ. ಆದರೆ ನರೇಂದ್ರ ಮೋದಿ ಅವರಿಗೆ ಇದರ ಯಶಸ್ಸಿನ ಲಾಭ ಸಿಗುತ್ತದೆ ಎಂಬ ಭಯದಲ್ಲಿ ಕಾಂಗ್ರೆಸ್ ವಿರೋಧ ಮಾಡುತ್ತಿದೆ ಎಂದು ಸಂಸದ ತೇಜಸ್ವಿ ಸೂರ್ಯ ಅವರು ವಿಶ್ಲೇಷಿಸಿದ್ದಾರೆ. ಮಹಿಳಾ ಮೀಸಲು ಮಸೂದೆಗೆ ಲೋಕಸಭೆಯಲ್ಲಿ ವಿರೋಧ ಮಾಡಿದ ಕಾಂಗ್ರೆಸ್ ಧೋರಣೆ ಖಂಡಿಸಿ ಜಯನಗರದ ಆರ್.ವಿ ಡೆಂಟಲ್ ಕಾಲೇಜಿನ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಸಬಲ ನಾರಿ- ಸಮರ್ಥ ಭಾರತ ಸಂವಾದದಲ್ಲಿ ಅವರು ಮಾತನಾಡಿದರು.
ತಮಿಳುನಾಡಿನಲ್ಲಿ ಕಾಂಗ್ರೆಸ್ನ ಪ್ರಚಾರದಲ್ಲಿ ರಾಹುಲ್ ಗಾಂಧಿ ಹೇಳಿರುವ ಭಾಷಣದ ಅರ್ಥವನ್ನೇ ಟ್ರಾನ್ಸ್ಲೇಟರ್ ಉಲ್ಟಾ ಮಾಡಿ ಹೇಳಿ ಇದೀಗ ಟ್ರೋಲ್ಗೆ ಒಳಗಾಗಿದ್ದಾರೆ. ಮುಂದಿನ ವಾರ 23 ರಂದು ತಮಿಳುನಾಡು ವಿಧಾನಸಭಾ ಚುನಾವಣೆ ನಡೆಯಲಿದ್ದು, ಭಾರತದ ಪ್ರತಿಯೊಂದು ಪಕ್ಷಗಳು ಚುನಾವಣಾ ಪ್ರಚಾರದಲ್ಲಿ ಬ್ಯುಸಿಯಾಗಿದೆ. ಡಿಎಂಕೆ - ಕಾಂಗ್ರೆಸ್ ಮೈತ್ರಿಕೂಟದ ಬೆಂಬಲವಾಗಿ ನಿನ್ನೆ ರಾಣಿಪೇಟೆಯಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಭಾಗವಹಿಸಿ ಜನರನ್ನು ಉದ್ದೇಶಿಸಿ, ಬಿಜೆಪಿಯನ್ನು ಟೀಕಿಸಿ ಮಾತನಾಡಿದರು.
ಆರ್ಸಿಬಿ ವಿರುದ್ಧದ ಪಂದ್ಯಾಟದ ವೇಳೆ ಅಕ್ಷರ್ ಪಟೇಲ್ ವೇಳೆ ಗಾಯಗೊಂಡರು. ಈ ವೇಳೆ ಅವರು ಆಟವಾವನ್ನು ಅಂತ್ಯ ಮಾಡಕ್ಕಾಗದೆ ಗ್ರೌಂಡ್ನಿಂದ ಹೊರನಡೆದರು. ಈ ಸಂದರ್ಭದಲ್ಲಿ ಕೃನಾಲ್ ಪಾಂಡ್ಯ ಅವರು ಕ್ರೀಡಾಮನೋಭಾವಕ್ಕೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ. ಗ್ರೌಂಡ್ನಿಂದ ಹೊರನಡೆಯಲು ಕಷ್ಟಪಡುತ್ತಿದ್ದ ಅಕ್ಷರ್ ಪಟೇಲ್ಗೆ ಕೃನಾಲ್ ಅವರು ಹೆಗಲು ಕೊಟ್ಟು ನಡೆಯಲು ಸಹಾಯ ಮಾಡಿದರು. ಇದನ್ನು ನೋಡಿದ ಕ್ರೀಡಾಭಿಮಾನಿಗಳು ಭಾರೀ ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದಾರೆ.
ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆರ್ಸಿಬಿ ವಿರುದ್ಧ ನಿನ್ನೆ ನಡೆದ ಪಂದ್ಯಾಟ ಕೆಎಲ್ ರಾಹುಲ್ಗೆ ತುಂಬಾನೇ ವಿಶೇಷವಾಗಿತ್ತು. ಕೆಎಲ್ ರಾಹುಲ್ ಅವರು ನಿನ್ನೆ 34ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಂಡರು. ಇನ್ನೂ ಅದೇ ದಿನವೇ ಕೆಎಲ್ ರಾಹುಲ್ ಅವರು ತಾನು ಆಡಿ ಬೆಳೆದ ಸ್ಟೇಡಿಯಂ ಆದ ಎಂ ಚಿನ್ನಸ್ವಾಮಿಯಲ್ಲಿ ಆರ್ಸಿಬಿಯನ್ನು ಎದುರಿಸಿ, ಗೆದ್ದು ಬೀಗಿದರು. ಇನ್ನೂ ಕೆಎಲ್ ರಾಹುಲ್ ಅವರು ಬ್ಯಾಟಿಂಗ್ಗೆ ಇಳಿದಾಗ ಹುಟ್ಟುಹಬ್ಬದ ಹಿನ್ನೆಲೆ ರಾಜ್ಕುಮಾರ್ ಅವರು ಹಾಡಿರುವ ನಗುತಾ ನಗುತಾ ಬಾಳು ನೀನು ನೂರು ವರುಷ ಹಾಡನ್ನು ಹಾಡಿ ಶುಭಕೋರಿದರು.
ಬೆಂಗಳೂರು: ಕೇಂದ್ರದ ಬಿಜೆಪಿ ಸರ್ಕಾರವು ಮಹಿಳಾ ಸಬಲೀಕರಣದ ಮುಖವಾಡ ಧರಿಸಿ ದಕ್ಷಿಣ ಭಾರತದ ರಾಜಕೀಯ ಅಸ್ಮಿತೆಯನ್ನು ಅಳಿಸಲು ‘ಭೀಕರ ಸಂಚು’ ರೂಪಿಸಿದೆ ಎಂದು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ತೀವ್ರ ವಾಗ್ದಾಳಿ ನಡೆಸಿದ್ದಾರೆ.ಬಿಜೆಪಿ ಜಾರಿಗೆ ತರಲು ಹೊರಟಿರುವ ಮಹಿಳಾ ಮೀಸಲಾತಿ ಮಸೂದೆಯು ಕೇವಲ ಒಂದು ‘ಮಾಯಾಜಾಲ’ವಾಗಿದ್ದು, ಇದು ದಕ್ಷಿಣದ ರಾಜ್ಯಗಳ ಹಕ್ಕುಗಳನ್ನು ಕಸಿದುಕೊಳ್ಳಲು ನಡೆಸುತ್ತಿರುವ ‘ರಾಜಕೀಯ ಸರ್ಜಿಕಲ್ ಸ್ಟ್ರೈಕ್’ ಎಂದು ಪ್ರಕಟಣೆಯಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮೃಗಾಲಯಕ್ಕೆ ಬಂದ ಸಂದರ್ಶಕರ ಮೇಲೆ ಕಲ್ಲು ಎಸೆಯಲು ಯತ್ನಿಸಿದ ಮರಿ ಚಿಂಪಾಂಜಿಗೆ ತಾಯಿ ಚಿಂಪಾಂಜಿಯು ಕೋಲಿನಲ್ಲಿ ಹೊಡೆದಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ವಿಡಿಯೋ ನೋಡಿ ಮಕ್ಕಳು ತಪ್ಪು ಮಾಡಿದಾಗ ತಾಯಿ ಪೆಟ್ಟು ಕೊಟ್ಟು ಬುದ್ಧಿ ಹೇಳಿದ ಹಾಗೆಯೇ ತಾಯಿ ಚಿಂಪಾಂಜಿ ನಡೆಸಿಕೊಂಡಿದೆ ಎಂದು ನೆಟ್ಟಿಗರು ಹೇಳಿದ್ದಾರೆ. ವೈರಲ್ ವಿಡಿಯೋದಲ್ಲಿ ಏನಿದೆ: ಚಿಂಪಾಂಜಿಯ ಗುಂಪೊಂದು ಕಲ್ಲು ಬಂಡೆಯ ಮೇಲೆ ಕೂತಿತ್ತು. ಈ ಚಿಂಪಾಂಜಿಗಳನ್ನು ನೋಡಿ
ಕೋಲ್ಕತ್ತಾ: ಮುಂಬರುವ ಪಶ್ವಿಮ ಬಂಗಾಳದ ಚುನಾವಣೆ ಹೊಸ ಇತಿಹಾಸ ಸೃಷ್ಟಿಸಲಿದೆ. ಟಿಎಂಸಿ ನಾಯಕರು ಬಳಸುತ್ತಿರುವ ಭಾಷೆಗಳನ್ನ ನೋಡಿದ್ರೆ ಫಲಿತಾಂಶದ ಬಗ್ಗೆ ಅವರಿಗೆ ಇರುವ ಭಯವನ್ನು ತೋರಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಟಿಎಂಸಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.ಬಂಕುರಾದಲ್ಲಿ ನಡೆದ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, ತೃಣಮೂಲ ಕಾಂಗ್ರೆಸ್ ಪಕ್ಷ, ಕಾಂಗ್ರೆಸ್ ಜೊತೆಗೆ ಸೇರಿ ಪಿತೂರಿ ಮಾಡಿದೆ. ಈ ಮೂಲಕ ಬಂಗಾಳದ ಮಹಿಳೆಯರಿಗೆ ದ್ರೋಹ ಬಗೆದಿದೆ ಎಂದು ಕಿಡಿಕಾಡಿದರು. ನಾನು ಎಲ್ಲಾ ಟಿಎಂಸಿ ಗೂಂಡಾಗಳು, ಸಿಂಡಿಕೇಟ್ಗಳು ಮತ್ತು ಭ್ರಷ್ಟರಿಗೆ ಕೊನೇ ಅವಕಾಶ ನೀಡುತ್ತಿದ್ದೇನೆ. ಏಪ್ರಿಲ್ 29 ಕ್ಕೂ ಮೊದಲು ನಿಮ್ಮ ಹತ್ತಿರದ ಪೊಲೀಸ್ ಠಾಣೆಗಳಲ್ಲಿ ಶರಣಾಗಿ, ಮೇ 4 ರ ನಂತರ ಯಾರಿಗೂ ಉಳಿಗಾಲ ಇರೋದಿಲ್ಲ ಎಂದು ಮೋದಿ ಎಚ್ಚರಿಕೆ ನೀಡಿದರು.
ಬೆಂಗಳೂರು: ಧುರಂಧರ್ ದಿ ರಿವೇಂಜ್ ಚಿತ್ರದ ಸಕ್ಸಸ್ನಲ್ಲಿರುವ ಬಾಲಿವುಡ್ ನಟ ರಣವೀರ್ ಸಿಂಗ್ ಹಾಗೂ ದೀಪಿಕಾ ಪಡುಕೋಣೆ ದಂಪತಿ ಭಾನುವಾರ ಮತ್ತೊಂದು ಗುಡ್ ನ್ಯೂಸ್ ನೀಡಿದ್ದಾರೆ.ತಾರಾ ದಂಪತಿ ತಮ್ಮ ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ದೀಪಿಕಾ ಪಡುಕೋಣೆ ಮತ್ತು ರಣವೀರ್ ಸಿಂಗ್ ಇನ್ಸ್ಟಾಗ್ರಾಮ್ನಲ್ಲಿ ಜಂಟಿಯಾಗಿ ಪೋಸ್ಟ್ ಒಂದನ್ನು ಹಂಚಿಕೊಂಡಿದ್ದಾರೆ. ಚಿತ್ರದಲ್ಲಿ ಅವರ ಮಗಳು ದುವಾ ಗರ್ಭಧಾರಣೆಯ ಪಾಸಿಟಿವ್ ಪರೀಕ್ಷಾ ಕಿಟ್ ಅನ್ನು ಹಿಡಿದುಕೊಂಡಿದ್ದಾರೆ. ಈ ಚಿತ್ರಕ್ಕೆ ರಣವೀರ್ ಹಾಗೂ ದೀಪಿಕಾ ಪಡುಕೋಣೆ ಎರಡು ಕಣ್ಣಿನ ಎಮೋಜಿಯ ಶೀರ್ಷಿಕೆ ನೀಡಿದ್ದಾರೆ.ದೀಪಿಕಾ ಮತ್ತು ರಣವೀರ್ ಸಿಂಗ್ 2018ರ ನವೆಂಬರ್ 14ರಂದು ಇಟಲಿಯ ಲೇಕ್ ಕೊಮೊದಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ವಿವಾಹವಾಗಿದ್ದರು.
ಹೈದರಾಬಾದ್: ಅಭಿಷೇಕ್ ಶರ್ಮಾ ಮತ್ತು ಹೆನ್ರಿಚ್ ಕ್ಲಾಸೆನ್ ಅವರು ಮಿಂಚಿನ ಅರ್ಧಶತಕದ ಬಳಿಕ ಶ್ರೀಲಂಕಾದ ವೇಗಿ ಇಶಾನ್ ಮಾಲಿಂಗ ಮಿಂಚಿನ ದಾಳಿ ನಡೆಸಿದರು. ಇದರಿಂದಾಗಿ ಸನ್ರೈಸರ್ಸ್ ಹೈದರಾಬಾದ್ ತಂಡವು ಹಾಲಿ ಐಪಿಎಲ್ ಟೂರ್ನಿಯಲ್ಲಿ ಸತತ ಎರಡನೇ ಗೆಲುವು ದಾಖಲಿಸಿತು. ಸನ್ ರೈಸರ್ಸ್ ಹೈದರಾಬಾದ್ ತಂಡ ಗೆಲುವು ಸಾಧಿಸುತ್ತಿದ್ದಂತೆ ತಂಡದ ಒಡತಿ ಕಾವ್ಯ ಮಾರನ್ ಸಾಕಷ್ಟು ಸಂಭ್ರಮಿಸಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಹರ್ಷೋದ್ಘಾರದೊಂದಿಗೆ ಎದ್ದುನಿಂತು ಚಪ್ಪಾಳೆ ತಟ್ಟುವ ಮೂಲಕ ಆಟಗಾರರನ್ನು ಪ್ರೋತ್ಸಾಹಿಸಿದ್ದಾರೆ. ಸನ್ರೈಸರ್ಸ್ ಹೈದರಾಬಾದ್ ತಂಡದ ನಾಯಕ ಇಶಾನ್ ಕಿಶನ್ ಯುವ ವೇಗಿಗಳ ಬೆನ್ನುತಟ್ಟಿ ಅವರನ್ನು ಅಭಿನಂದಿಸಿದ್ದಾರೆ.ಹೈದರಾಬಾದ್ನಲ್ಲಿ ನಡೆದ ರೋಚಕ ಐಪಿಎಲ್ ಪಂದ್ಯದಲ್ಲಿ ಸನ್ರೈಸರ್ಸ್ ತಂಡ ಚೆನ್ನೈ ವಿರುದ್ಧ ರೋಚಕ ಗೆಲುವು ಸಾಧಿಸಿತು.
ಮೈಸೂರು: ತನ್ನ ಅಕ್ರಮ ಸಂಬಂಧಕ್ಕೆ ಪತಿ ಅಡ್ಡಿಯಾದನೆಂದು ಆತನನ್ನೇ ಪ್ರಿಯಕರನ ಜತೆ ಸೇರಿ ಕೊಲೆ ಮಾಡಿರುವ ಆಘಾತಕಾರಿ ಘಟನೆ ಮೈಸೂರು ಜಿಲ್ಲೆಯ ಸರಗೂರು ತಾಲೂಕಿನ ಕುರ್ಣೇಗಾಲ ಗ್ರಾಮದಲ್ಲಿ ನಡೆದಿದೆ.ಪತ್ನಿಯಿಂದಲೇ ಕೊಲೆಯಾದ ಪತಿಯನ್ನು ಕುರ್ಣೇಗಾಲದ ಜವರಪ್ಪ ಎಂದು ಗುರುತಿಸಲಾಗಿದೆ. ಮೈಸೂರು ತಾಲೂಕಿನ ಮಾವಿನಹಳ್ಳಿ ಗ್ರಾಮದ ಸಿದ್ದೇಶ್ (32), ಕುರ್ಣೆಗಾಲ ಗ್ರಾಮದ ಅಮೃತಾ (26) ಬಂಧಿತ ಆರೋಪಿಗಳು. ಅನುಮಾನಸ್ಪದ ರೀತಿಯಲ್ಲಿ ಜವರಪ್ಪ ಶವ ಪತ್ತೆಯಾಗಿತ್ತು. ಈ ಬಗ್ಗೆ ಪೊಲೀಸರು ತನಿಖೆ ನಡೆಸಿದಾಗ ಸತ್ಯ ಬಯಲಾಗಿದೆ.
ಮಂಗಳೂರು: ಕರಾವಳಿ ಭಾಗದಾದ್ಯಂತ ತಾಪಮಾನದಲ್ಲಿ ನಿರಂತರ ಏರಿಕೆಯಾಗುತ್ತಿದ್ದು, ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಸೇರಿದಂತೆ ಕರಾವಳಿ ಭಾಗದಲ್ಲಿ ದಿನದಿಂದ ದಿನಕ್ಕೆ ಬಿಸಿಲ ತಾಪ ಏರುತ್ತಿದ್ದು, ಮಧ್ಯಾಹ್ನದ ನಂತರ ಅಲ್ಲಲ್ಲಿ ಮಳೆಯಾಗುತ್ತಿದೆ. ಜಿಟಿಜಿಟಿ ಮಳೆ ಹಿನ್ನೆಲೆ ರಾತ್ರಿ ವೇಳೆ ಸೆಕೆಯ ಧಗೆಗೆ ಜನರು ನಿದ್ರೆ ಬಾರದೆ ಸಂಕಷ್ಟ ಅನುಭವಿಸುತ್ತಿದ್ದಾರೆ.ಮೋಡ ಮುಸುಕಿದ ಆಕಾಶದ ಹೊರತಾಗಿಯೂ, ಶಾಖವು ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ.
ಬೆಂಗಳೂರು: ಚಿರತೆಯಿಂದ ಅತ್ತೆಯನ್ನು ರಕ್ಷಿಸಿದ ಸೊಸೆಗೆ ರಾಣಿ ಚೆನ್ನಮ್ಮ ಪ್ರಶಸ್ತಿ ನೀಡುವುದಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಭರವಸೆ ನೀಡಿದರು. ಮೈಸೂರಿನ ಸಿದ್ಧಾರ್ಥನಗರದ ಮನೆಯೊಂದರಲ್ಲಿ ಚಿರತೆ ಮಂಚದಡಿ ಅಡಗಿದ್ದ ವೇಳೆ ಪ್ರಾಣದ ಹಂಗು ತೊರೆದು ವೃದ್ಧ ಅತ್ತೆಯನ್ನು ಸುರಕ್ಷಿತವಾಗಿ ಹೊರಗೆ ಕರೆತಂದ ಸೊಸೆ ಸುಜಾತಾ ಅವರ ಸಾಹಸಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮಿ ಹೆಬ್ಬಾಳಕರ್ ಪ್ರಶಂಸೆ ವ್ಯಕ್ತವಾಗಿದೆ.
ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಹಾಗೂ ನಟ ಪವನ್ ಕಲ್ಯಾಣ್ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಶನಿವಾರ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ.ಇನ್ನೂ ಪವನ್ ಕಲ್ಯಾಣ್ ಶೀಘ್ರ ಗುಣಮುಖರಾಗಲೆಂದು ಪ್ರಧಾನಿ ನರೇಂದ್ರ ಮೋದಿ ಹಾರೈಸಿದ್ದಾರೆ. ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಗಾರು ಅವರೊಂದಿಗೆ ಮಾತನಾಡಿ ಯೋಗಕ್ಷೇಮ ವಿಚಾರಿಸಿದ್ದೇನೆ. ಅವರು ಗಮನಾರ್ಹವಾಗಿ ಧೈರ್ಯಶಾಲಿಯಾಗಿದ್ದಾರೆ ಮತ್ತು ಅವರು ಶೀಘ್ರದಲ್ಲೇ ಚೇತರಿಸಿಕೊಳ್ಳುತ್ತಾರೆ ಎಂದು ನನಗೆ ಖಾತ್ರಿಯಿದೆ. ಅವರ ಉತ್ತಮ ಆರೋಗ್ಯಕ್ಕಾಗಿ ಪ್ರಾರ್ಥಿಸುತ್ತೇನೆ ಎಂದು ಶುಭಹಾರೈಸಿದ್ದಾರೆ.
ಟೆಹ್ರಾನ್: ಅಮೆರಿಕಾ ನಡುವೆ ವಾಸ್ತವದಲ್ಲಿ ಶಾಂತಿ ಒಪ್ಪಂದದ ದಾರಿ ಇನ್ನೂ ದೂರದಲ್ಲಿದ್ದು, ಅಂತಿಮ ಹಂತ ತಲುಪಿಲ್ಲ ಎಂದು ಇರಾನ್ ಸ್ಪಷ್ಟಪಡಿಸಿದೆ. ಇದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಉದ್ವಿಗ್ನತೆ ಮತ್ತಷ್ಟು ಹೆಚ್ಚಾಗಿದೆ. ಜಾಗತಿಕ ತೈಲ ಸಾಗಾಟದ ಪ್ರಮುಖ ಮಾರ್ಗವಾದ ಈ ಜಲಸಂಧಿಯಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವುದು ವಿಶ್ವ ಮಾರುಕಟ್ಟೆಯ ಮೇಲೂ ಪರಿಣಾಮ ಬೀರುತ್ತಿದೆ.ಅಮೆರಿಕದೊಂದಿಗೆ ನಡೆದ ಮಾತುಕತೆಗಳಲ್ಲಿ ಕೆಲವು ಪ್ರಗತಿ ಕಂಡುಬಂದಿದೆಯಾದರೂ, ಇನ್ನೂ ಹಲವು ಮೂಲಭೂತ ವಿಷಯಗಳಲ್ಲಿ ಭಿನ್ನಾಭಿಪ್ರಾಯಗಳು ಮುಂದುವರಿದಿವೆ. ನಾವು ಇನ್ನೂ ಅಂತಿಮ ಹಂತದಿಂದ ದೂರದಲ್ಲಿದ್ದೇವೆ ಎಂದು ಇರಾನ್ ಸಂಸತ್ತಿನ ಸ್ಪೀಕರ್ ಮೊಹಮ್ಮದ್ ಬಘರ್ ಘಾಲಿಬಾಫ್ ತಿಳಿಸಿದ್ದಾರೆ.ಹಾರ್ಮುಜ್ ಜಲಸಂಧಿಯನ್ನು ಮತ್ತೆ ಮುಚ್ಚಿರುವುದಾಗಿ ಇರಾನ್ ಘೋಷಿಸಿದ್ದು, ಅಮೆರಿಕ ತನ್ನ ನೌಕಾ ದಿಗ್ಬಂಧನವನ್ನು ತೆಗೆದುಹಾಕುವವರೆಗೂ ಸಂಚಾರವನ್ನು ಸಂಪೂರ್ಣವಾಗಿ ಪುನರಾರಂಭಿಸುವುದಿಲ್ಲ ಎಂದು ವಾರ್ನಿಂಗ್ ನೀಡಿದೆ.
ಬೆಂಗಳೂರು: ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಬಗ್ಗೆ ಪುತ್ರಿ ವೈಶಾಲಿ ಅವರು ಇನ್ಸ್ಟಾಗ್ರಾಂನಲ್ಲಿ ಭಾವುಕ ಫೋಸ್ಟ್ವೊಂದನ್ನು ಹಂಚಿಕೊಂಡಿದ್ದಾರೆ. ತಂದೆಯ ಜತೆಗಿನ ಬಾಲ್ಯದ ಫೋಟೋವನ್ನು ಹಂಚಿಕೊಂಡ ಅವರು ಅಪ್ಪನ ಕೆಲಸದ ಬಗ್ಗೆ ಭಾವುಕವಾಗಿ ಬರೆದುಕೊಂಡಿದ್ದಾರೆ. ರಾಜ್ಯ ವನ್ಯಜೀವಿ ಮಂಡಳಿ ಸದಸ್ಯೆಯೂ ಆಗಿರುವ ವೈಶಾಲಿ ಅವರ ಪೋಸ್ಟ್ನಲ್ಲಿ ಏನಿದೆ?ಉತ್ತರ ಕರ್ನಾಟಕದಾದ್ಯಂತ, ವಿದ್ಯಾರ್ಥಿ ನಾಯಕರಿಂದ ರಾಜ್ಯ ನಾಯಕರಾಗುವವರೆಗೆ ಅವರ ಪಯಣವನ್ನು ಜನರು ಸಾಕ್ಷಿಯಾಗಿ ನೋಡಿದ್ದಾರೆ. ರೈತ ಕುಟುಂಬದಲ್ಲಿ ಜನಿಸಿ, ಸಾವಿರಾರು ಪಶುಗಳೊಂದಿಗಿನ ದೊಡ್ಡ ಡೈರಿ ಕಾರ್ಯಾಚರಣೆಯನ್ನು ನಿರ್ಮಿಸಿ i
ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಪಂದ್ಯದಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 6 ವಿಕೆಟ್ಗಳ ಸೋಲು ಅನುಭವಿಸಿದೆ. ಇದರೊಂದಿಗೆ ತವರಿನಲ್ಲಿ ಮೊದಲ ಸೋಲು ಅನುಭವಿಸಿದೆ.ಪಂದ್ಯದ ಬಳಿಕ ಮಾತನಾಡಿದ ಆರ್ಸಿಬಿ ನಾಯಕ ರಜತ್ ಪಾಟಿದಾರ್, ಮಧ್ಯಮ ಕ್ರಮಾಂಕದಲ್ಲಿ ರನ್ ಗಳಿಸಲು ಸಾಧ್ಯವಾಗದೇ ಇರುವುದು ನಮ್ಮ ಸೋಲಿಗೆ ಪ್ರಮುಖ ಕಾರಣವಾಯಿತು. ನಮ್ಮ ತಪ್ಪುಗಳ ಬಗ್ಗೆ ಆತ್ಮಾವಲೋಕನ ಮಾಡಿಕೊಂಡು ಅವುಗಳನ್ನು ಸರಿಪಡಿಸಿಕೊಳ್ಳುತ್ತೇವೆ ಎಂದರು.ಗೆಲುವು ನಿಜಕ್ಕೂ ಹತ್ತಿರದಲ್ಲಿ ಇತ್ತು. ಆದರೆ ನಾವು 15 ರಿಂದ 20 ರನ್ ಕಡಿಮೆ ಮಾಡಿದೆವು ಎಂದು ನಾನು ಭಾವಿಸುತ್ತೇನೆ. ನಾವು ಬ್ಯಾಟಿಂಗ್ ಪ್ರಾರಂಭಿಸಿದ ರೀತಿ, ವಿಶೇಷವಾಗಿ ವಿರಾಟ್ ಕೊಹ್ಲಿ ಮತ್ತು ಸಾಲ್ಟ್ ಅವರು ಉತ್ತಮ ಆರಂಭ ನೀಡಿದರು. ಬಳಿಕ ನಾವು ನಿರಂತರವಾಗಿ ವಿಕೆಟ್ಗಳನ್ನು ಕಳೆದುಕೊಳ್ಳಲು ಪ್ರಾರಂಭಿಸಿದೆವು ಎಂದು ಹೇಳಿದರು.
ನವದೆಹಲಿ: ಭಯೋತ್ಪಾದನಾ ಚಟುವಟಿಕೆಗಳನ್ನು ಯೋಜಿಸಿದ, ಸೂಕ್ಷ್ಮ ಸ್ಥಳಗಳ ವಿಚಕ್ಷಣಾ ಮತ್ತು ಎನ್ಕ್ರಿಪ್ಟ್ ಮಾಡಿದ ಆನ್ಲೈನ್ ಪ್ಲಾಟ್ಫಾರ್ಮ್ಗಳ ಮೂಲಕ ಇತರರನ್ನು ನೇಮಿಸಿಕೊಳ್ಳಲು ಯತ್ನಿಸಿದ ಮಹಾರಾಷ್ಟ್ರ, ಒಡಿಶಾ ಮತ್ತು ಬಿಹಾರದ ನಾಲ್ವರು ಶಂಕಿತ ಉಗ್ರರನ್ನು ಅರೆಸ್ಟ್ ದೆಹಲಿ ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.ಕಾರ್ಯಾಚರಣೆ ವೇಳೆ ಸುಧಾರಿತ ಸ್ಫೋಟಕ ಸಾಧನ (ಐಇಡಿ) ಮತ್ತು ಅದಕ್ಕೆ ಸಂಬಂಧಿಸಿದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಇಬ್ಬರು ಆರೋಪಿಗಳು ಐಇಡಿ ಅಳವಡಿಸಲಾದ ರಿಮೋಟ್ ಕಂಟ್ರೋಲ್ ಆಟಿಕೆ ಕಾರನ್ನು ಜನಸಂದಣಿ ಇರುವ ಸ್ಥಳಗಳನ್ನು ಗುರಿಯಾಗಿಸಿಕೊಂಡು ಜೋಡಿಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ನವದೆಹಲಿ: ಮಹಿಳಾ ಮೀಸಲು ಮಸೂದೆ ವಿಫಲವಾದ ಬೆನ್ನಲ್ಲೇ ಇಂದು ದೇಶವನ್ನು ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಿದ್ದು ಕಾಂಗ್ರೆಸ್ ಮತ್ತು ಮಿತ್ರ ಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಅವರ ಭಾಷಣದ ಸಂಪೂರ್ಣ ವಿವರ ಇಲ್ಲಿದೆ ನೋಡಿ. ‘ಗೆಳೆಯರೇ, ಭಾರತದ ಮಹಿಳೆಯರ ಕನಸನ್ನು ಹೇಗೆ ಭಗ್ನಗೊಳಿಸಲಾಯಿತು ಎಂದು ಇಡೀ ದೇಶ ನೋಡಿದೆ. ನಮ್ಮ ಹಲವು ಪ್ರಯತ್ನಗಳ ಹೊರತಾಗಿಯೂ ಮಹಿಳಾ ಮಸೂದೆ ತರಲು ಸಫಲರಾಗಲಿಲ್ಲ. ಇದಕ್ಕಾಗಿ ನಾನು ದೇಶದ ಮಾತೆಯರು, ಸಹೋದರಿಯರ ಕ್ಷಮೆ ಕೇಳುತ್ತೇನೆ. ಗೆಳೆಯರೇ ನಮಗೆ ದೇಶ ಹಿತವೇ ಎಲ್ಲಕ್ಕಿಂತ ಮುಖ್ಯ. ಆದರೆ ಕೆಲವರಿಗೆ ಪಕ್ಷ ಹಿತವೇ ಎಲ್ಲಕ್ಕಿಂತ ಮುಖ್ಯವಾಗುತ್ತದೆ.
ಬೆಂಗಳೂರು: ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯಾಟದಲ್ಲಿ ಆರ್ಸಿಬಿ 6 ವಿಕೆಟ್ಗಳಿಂದ ಸೋಲು ಅನುಭವಿಸಿತು. ಈ ಮೂಲಕ ತವರಿನಲ್ಲಿ ಮೊದಲನೇ ಸೋಲಿನ ಕಹಿ ಉಂಡಿತು. ಮೊದಲು ಬ್ಯಾಟಿಂಗ್ ಮಾಡಿದ ಆರ್ಸಿಬಿ 20 ಓವರ್ಗಳಲ್ಲಿ 8 ವಿಕೆಟ್ ಕಳೆದುಕೊಂಡು 175 ರನ್ ಗಳಿಸಿತು. ಈ ಗುರಿ ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ 19.5
ಬೀಜಿಂಗ್: ಗಂಡನ ಜತೆ ನಡೆದ ಜಗಳದಿಂದ ಸಿಟ್ಟಾದ ಪತ್ನಿಯೊಬ್ಬಳು ಅಪಾರ್ಟ್ಮೆಂಟ್ನಿಂದ ₹1.5 ಕೋಟಿ ಎಸೆದಿರುವ ಘಟನೆ ಗುವಾಂಗ್ಡಾಂಗ್ ಪ್ರಾಂತ್ಯದ ಶಾಂಟೌ ನಗರದಲ್ಲಿ ನಡೆದಿದೆ.ವರದಿಗಳ ಪ್ರಕಾರ, ಪತಿ ಮತ್ತು ಪತ್ನಿಯ ನಡುವೆ ತೀವ್ರ ಜಗಳ ನಡೆದಿದೆ. ಜಗಳದ ಆ ಕೋಪದಲ್ಲಿ ಆಕೆ ತನ್ನ ಕೈಯಲ್ಲಿದ್ದ ನೋಟುಗಳ ಕಂತೆಗಳನ್ನು ಬಾಲ್ಕನಿಯಿಂದ ಕೆಳಕ್ಕೆ ಎಸೆದು ತನ್ನ ಅಸಮಾಧಾನವನ್ನು ಹೊರಹಾಕಿದ್ದಾಳೆ.ಹಾಂಕಾಂಗ್ ಕರೆನ್ಸಿಯ 1,000 ಮುಖಬೆಲೆಯ ನೋಟುಗಳನ್ನು ಆಕೆ ಎಸೆದಿದ್ದು ಅದರ ಒಟ್ಟು ಮೌಲ್ಯ ಸುಮಾರು 1.5 ಕೋಟಿ ಎಂದು ಹೇಳಲಾಗಿದೆ.
ಬೆಂಗಳೂರು: ಆಸ್ಟ್ರೇಲಿಯದ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ಬ್ಯಾಟರ್ ಟಿಮ್ ಡೇವಿಡ್ ಶನಿವಾರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ನಲ್ಲಿ 1,000 ವೇಗವಾಗಿ ಸ್ಕೋರ್ ಮಾಡಿದ ಎರಡನೇ ಆಟಗಾರರಾದರು.ಶನಿವಾರ ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ (ಡಿಸಿ) ವಿರುದ್ಧದ ಐಪಿಎಲ್ ಪಂದ್ಯದಲ್ಲಿ ಟಿಮ್ ಈ ಮೈಲಿಗಲ್ಲು ಸಾಧಿಸಿದರು. ಪಂದ್ಯದ ಸಮಯದಲ್ಲಿ, ಡೇವಿಡ್ 17 ಎಸೆತಗಳಲ್ಲಿ ಮೂರು ಬೌಂಡರಿ ಮತ್ತು ಒಂದು ಸಿಕ್ಸರ್ನೊಂದಿಗೆ 26 ರನ್ ಗಳಿಸಿದರು, 152.94 ಸ್ಟ್ರೈಕ್ ರೇಟ್ನೊಂದಿಗೆ.ಮುಂಬೈ ಇಂಡಿಯನ್ಸ್ (MI) ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಗಾಗಿ 56 ಪಂದ್ಯಗಳು ಮತ್ತು 50
ಬೆಂಗಳೂರು: ಮಹಿಳಾ ಮೀಸಲು ಮಸೂದೆ ಸುಮಾರು ಏಳು ದಶಕಗಳ ಹೋರಾಟದ ನಂತರ ಜಾರಿಯಾಗುವುದರಲ್ಲಿತ್ತು. ಆದರೆ ಅದಕ್ಕೆ ಬೆಂಬಲ ನೀಡದೆ ಕಾಂಗ್ರೆಸ್ ಮತ್ತು ಅದರ ಮೈತ್ರಿ ಪಕ್ಷಗಳಿಂದ ಪ್ರಜಾಪ್ರಭುತ್ವಕ್ಕೆ ಅವಮಾನವಾಗಿದೆ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷೆ ಶ್ರೀಮತಿ ಮಾಳವಿಕಾ ಅವಿನಾಶ್ ಅವರು ಹೇಳಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಕಾಂಗ್ರೆಸ್ ಮಾಡಿದ ಅವಮಾನವನ್ನು ಭಾರತದ ಮಹಿಳೆಯರು ಎಂದೂ ಕ್ಷಮಿಸುವುದಿಲ್ಲ. ಮೀಸಲನ್ನು ಸಾಂವಿಧಾನಿಕ ಹಕ್ಕಾಗಿ ಪಡೆಯಲು ನಾವೆಲ್ಲ ಸಿದ್ಧರಾಗಿದ್ದೆವು. ಮಸೂದೆಗೆ ದೇಶದ ಮಹಿಳೆಯರ ವಿರೋಧ ಹೇಗೆ ಇರುತ್ತದೆ ಎಂಬುದನ್ನು ಮಂದಿನ ದಿನದಲ್ಲಿ ಕಾಂಗ್ರೆಸ್ ನೋಡಲಿ ಎಂದರು.
ಬೆಂಗಳೂರು: ಕಾಂಗ್ರೆಸ್ ಮಹಿಳಾ ಮೀಸಲಾತಿ ವಿರೋಧಿಯಲ್ಲವಾಗಿದೆ. ಬಿಜೆಪಿ ತನ್ನ ರಾಜಕೀಯಕ್ಕಾಗಿ ಮಹಿಳಾ ಮೀಸಲಾತಿ ಮತ್ತು ಡಿಲಿಮಿಟೇಷನ್ ಒಟ್ಟಾಗಿ ಸಂವಿಧಾನದ ತಿದ್ದುಪಡಿ ಮಾಡಲು ಮುಂದಾಗಿದ್ದಕ್ಕೆ ಬಿಲ್ ಫೇಲ್ ಆಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಮಹಿಳಾ ಮೀಸಲಾತಿಗೆ ಕಾಂಗ್ರೆಸ್ ವಿರೋಧ ಎಂಬ ಬಿಜೆಪಿ ಆರೋಪ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ಮಹಿಳಾ ಮೀಸಲಾತಿ ಪರ ಇದೆ. ನಾವು ಮಹಿಳಾ ಮೀಸಲಾತಿಗೆ ವಿರೋಧ ಇಲ್ಲ. 2023 ರಲ್ಲಿ ಸಂಸತ್ನಲ್ಲಿ ಬಿಲ್ ಪಾಸ್ ಆಗಿದೆ. ಅದನ್ನ ಅವರು ಜಾರಿ ಮಾಡಬೇಕು. ಇನ್ನೂ ಮುಂದಿನ ಚುನಾವಣೆಗೆ ಮೀಸಲಾತಿ ಜಾರಿ ಮಾಡಲಿ ಎಂದು ಹೇಳಿದರು. ಇನ್ನೂ ನಿನ್ನೆ ಸಂವಿಧಾನಕ್ಕೆ ತಿದ್ದುಪಡಿ ತರುವುದಕ್ಕೆ ಹೋಗಿ ನಿನ್ನೆ ಫೇಲ್ ಆಯಿತು. ಮಹಿಳಾ ಮೀಸಲಾತಿಗೆ ಮಾತ್ರ ಸಂವಿಧಾನದ
ದೆಹಲಿಯ ಅಬ್ಬರದ ಬೌಲಿಂಗ್ಗೆ ಆರ್ಸಿಬಿ 20 ಓವರ್ಗಳಲ್ಲಿ 8 ವಿಕೆಟ್ ಕಳೆದುಕೊಂಡು ಡೆಲ್ಲಿಗೆ 176ರನ್ಗಳ ಗೆಲುವಿನ ಟಾರ್ಗೆಟ್ ನೀಡಿದೆ.ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶನಿವಾರ ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ನಾಯಕ ಅಕ್ಷರ್ ಪಟೇಲ್ ಟಾಸ್ ಗೆದ್ದು ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡರು.ಈ ಮೂಲಕ ಆರ್ಸಿಬಿಯನ್ನು ಮೊದಲು ಬ್ಯಾಟಿಂಗ್ಗೆ ಆಹ್ವಾನಿಸಿತು.ಪಿಲ್ ಸಾಲ್ಟ್ 38 ಎಸೆತಕ್ಕೆ 63 ರನ್, ವಿರಾಟ್ ಕೊಹ್ಲಿ 13 ಎಸೆತಕ್ಕೆ 19ರನ್, ದೇವದತ್ತ್ ಪಡಿಕ್ಕಲ್ 13 ಎಸೆತಕ್ಕೆ 18ರನ್,
ನಾಸಿಕ್: ಮಹಾರಾಷ್ಟ್ರದ ನಾಸಿಕ್ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು ಪ್ರಕರಣಗಳ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್ಐಟಿ), ತಲೆಮರೆಸಿಕೊಂಡಿರುವ ಆರೋಪಿ ನಿದಾ ಖಾನ್ ಅವರ ಪತಿಯನ್ನು ವಶಕ್ಕೆ ಪಡೆದಿದೆ.ನಾಸಿಕ್ ಪೊಲೀಸ್ ಕಮಿಷನರ್ ರಚಿಸಿರುವ ಎಸ್ಐಟಿ, ಮುಂಬ್ರಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮೊಯಿನ್ ನಾವಿದ್ ಇಕ್ಬಾಲ್ ಖಾನ್ (27) ನನ್ನು ಬಂಧಿಸಿದೆ. ಮೊಯಿನ್ ಖಾನ್ ಬಹುರಾಷ್ಟ್ರೀಯ ಕಂಪನಿಯಲ್ಲಿ ಕೆಲಸ ಮಾಡುತ್ತಾರೆ ಮತ್ತು ನಿದಾ ಖಾನ್ ಅವರ ಪತಿ, ಅವರ ಮೊದಲ ಹೆಸರು ನಿದಾ ಎಜಾಜ್ ಖಾನ್.
ಇವತ್ತು ನನ್ನ ಪತಿಯ ಹುಟ್ಟುಹಬ್ಬ, ಸ್ವಲ್ಪ ಬೇಗ ಪ್ರಶ್ನೆ ಕೇಳಿ ಎಂದು ಹೇಳುವ ಮೂಲಕ ಕಾಮಗ್ರೆಸ್ ಸಂಸದೆ ಪ್ರಿಯಾಂಕ ವಾದ್ರಾ ಇದೀಗ ಟೀಕೆಗೆ ಗುರಿಯಾಗಿದ್ದಾರೆ.ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಶನಿವಾರ ಮಹಿಳಾ ಮೀಸಲಾತಿ ಮಸೂದೆಯ ಬಗ್ಗೆ ಪ್ರತಿಪಕ್ಷದ ನಿಲುವಿನ ಬಗ್ಗೆ ಹೇಳಿದರು. ಈ ಸಮಯದಲ್ಲೇ ಮಾಧ್ಯಮದವರ ಬಳಿ ಇಂದು ನನ್ನ ಪತಿಯ ಹುಟ್ಟುಹಬ್ಬ ಸ್ವಲ್ಪ ಬೇಗ ಪ್ರಶ್ನೆಗಳು ಕೇಳಿ ಎನ್ನುವ ಮೂಲಕ ಟ್ರೋಲ್ಗೆ ಒಳಗಾಗಿದ್ದಾರೆ.
ಪಾಟ್ನಾ: ಬಿಹಾರದ ನೂತನ ಸಿಎಂ ಆಗಿ ಅಧಿಕಾರ ಸ್ವೀಕರಿಸಿರುವ ಸಮರ್ಥ್ ಚೌಧರಿಗೆ ಮುಸ್ಲಿಂ ಮೌಲ್ವಿಯೊಬ್ಬರು ಟೋಪಿ ಧರಿಸಿ ಗೌರವಿಸಲು ಬಂದಾಗ ಅವರು ಏನು ಮಾಡಿದ್ರು ಈ ವಿಡಿಯೋ ನೋಡಿ. ನಿತೀಶ್ ಕುಮಾರ್ ರಾಜೀನಾಮೆ ನೀಡಿ ರಾಜ್ಯ ಸಭೆಗೆ ಹೋದ ಬಳಿಕ ಈಗ ಬಿಹಾರದ ನೂತನ ಸಿಎಂ ಆಗಿ ಜೆಡಿಯು ಮಿತ್ರ ಪಕ್ಷ ಬಿಜೆಪಿಯ ಸಮರ್ಥ್ ಚೌಧರಿ ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಹೊಸ ಮುಖ್ಯಮಂತ್ರಿ ಎಂದ ತಕ್ಷಣ ಸಾಕಷ್ಟು ಜನ ಬಂದು ವಿಶ್ ಮಾಡೋದು ಸಹಜ. ಈ ಬಾರಿ ಬಿಹಾರದಲ್ಲಿ ಬಿಜೆಪಿ ಗೆಲುವಿಗೆ ಮುಸ್ಲಿಂ ಮತಗಳೂ ಪ್ರಮುಖ ಪಾತ್ರ ವಹಿಸಿದ್ದವು.
ಪ್ರಮುಖ ಐವೇರ್ ಸ್ಟಾರ್ಟ್ಅಪ್ ಸಂಸ್ಥೆಯಾದ ಲೆನ್ಸ್ಕಾರ್ಟ್ ತನ್ನ ಕಚೇರಿ ಡ್ರೆಸ್ಕೋಡ್ ಮಾರ್ಗಸೂಚಿಯಲ್ಲಿ ಹಿಂದೂ ಸಂಪ್ರದಾಯದ ಕುರುಹುಗಳಾದ ಬಿಂದಿ, ತಿಲಕ ಮತ್ತು ಕೈಗೆ ಕಟ್ಟುವ ದಾರಗಳನ್ನು ನಿಷೇಧಿಸಿ, ಹಿಜಾಬ್ಗೆ ಅನುಮತಿ ನೀಡಿದೆ ಎಂಬ ಆರೋಪ ಭಾರೀ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿತ್ತು. ಮಹಿಳಾ ಉದ್ಯೋಗಿಗಳು ಹಿಜಾಬ್ ಧರಿಸಬಹುದು ಆದರೆ ಹಣೆಗೆ ಬಿಂದಿ ಹಾಕಿಕೊಳ್ಳುವಂತಿಲ್ಲ ಎಂಬ ಲೆನ್ಸ್ಕಾರ್ಟ್ ನಿಯಮಾವಳಿ ಸಾಮಾಜಿಕ ಜಾಲತಾಣದಲ್ಲಿ ಭುಗಿಲೆದ್ದ ಬೆನ್ನಲ್ಲೇ ಶಾಪ್ಗೆ ಬಜರಂಗದಳದವರು ಎಂಟ್ರಿ ಕೊಟ್ಟಿದೆ.
ನವದೆಹಲಿ: ಅಪಾರ ಅಭಿಮಾನಿ ಬಳಗವನ್ನು ಹೊಂದಿರುವ ಕ್ರಿಕೆಟರ್ ವಿರಾಟ್ ಕೊಹ್ಲಿ ಅವರು ಈಚೆಗೆ ಜರ್ಮನ್ ಮಾಡೆಲ್ ಲಿಜ್ಲಾಜ್ ಅವರ ಫೋಟೋಗೆ ಲೈಕ್ ಕೊಟ್ಟು ಸುದ್ದಿಯಾಗಿದ್ದರು. ಲೈಕ್ ಕೊಟ್ಟಿರುವ ಸ್ಕ್ರೀನ್ ಶಾಟ್ ಕೂಡಾ ಸಾಮಾಜಿಕ ಜಾಲತಾಣ ವೈರಲ್ ಆಗಿತ್ತು. ಆದರೆ ಇದಾದ ಕೆಲವೇ ನಿಮಿಷಗಳಲ್ಲಿ ವಿರಾಟ್ ಕೊಹ್ಲಿ ಅನ್ಲೈಕ್ ಮಾಡಿದ್ದಾರೆ. ಪ್ರಸ್ತುತ ಐಪಿಎಲ್ 2026 ರಲ್ಲಿ ಕಾಣಿಸಿಕೊಂಡಿರುವ ಕೊಹ್ಲಿ, ಜರ್ಮನ್ ಮಾಡೆಲ್-ಪ್ರಭಾವಶಾಲಿ ಲಿಜ್ಲಾಜ್ ಅವರ ಫೋಟೋವನ್ನು 'ಲೈಕ್' ಮಾಡಿ ಅನ್ಲೈಕ್ ಮಾಡಿರುವ ಸಂಬಂಧ ಸುದ್ದಿಯಾಗಿದ್ದಾರೆ.