Shorts

ಕೊಲ್ಲಂ: ಇತ್ತೀಚಿನ ಎಲ್‌ಪಿಜಿ ಮತ್ತು ಇತರ ಇಂಧನಗಳ ಬೆಲೆ ಏರಿಕೆಯ ನಡುವೆ ಪ್ರಧಾನಿ ನರೇಂದ್ರ ಮೋದಿ ಅವರು ಭಾರತದ ಪರವಾಗಿ ನಿಲ್ಲುವ ಬದಲು ಇಸ್ರೇಲ್, ಅಮೆರಿಕಕ್ಕೆ ತಲೆ ಬಾಗಿದ್ದಾರೆ ಎಂದು ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ವಾಗ್ದಾಳಿ ನಡೆಸಿದರು. ಎಲ್‌ಪಿಜಿ ಮತ್ತು ಇಂಧನ ಬೆಲೆಗಳು ಏರುತ್ತಿವೆ, ಈ ಪರಿಸ್ಥಿತಿಯಲ್ಲಿ ವ್ಯಾಪಾರವು ಕಷ್ಟಕರವಾಗಲಿದೆ. ಇದೆಲ್ಲದರ ಮಧ್ಯೆ, ನರೇಂದ್ರ ಮೋದಿ ನೇತೃತ್ವದ ನಮ್ಮ ಕೇಂದ್ರ ಸರ್ಕಾರದ ನೀತಿ ಏನು? ಅವರು ತಮ್ಮ ಜನರಿಗಾಗಿ ಹೋರಾಡುತ್ತಿಲ್ಲ. ಅವರು ಭಾರತಕ್ಕಾಗಿ ಹೋರಾಡುತ್ತಿಲ್ಲ. ಅವರು ಭಾರತಕ್ಕಾಗಿ ಹೋರಾಡುತ್ತಿಲ್ಲ. ಅವರು ಭಾರತದ ಪರವಾಗಿ ನಿಲ್ಲುತ್ತಿಲ್ಲ. ಅವರು ಮಾಡುತ್ತಿರುವುದು ಅಮೆರಿಕ ಹಾಗೂ ಇಸ್ರೇಲ್‌ಗೆ ತಲೆ ಬಾಗಿರುವುದುಎ ಎಂದು ಅಸಮಾಧಾನ ಹೊರಹಾಕಿದರು.

ದಾವಣಗೆರೆ: ದಾವಣಗೆರೆ ದಕ್ಷಿಣ ಕ್ಷೇತ್ರಕ್ಕೆ ಕಾಂಗ್ರೆಸ್ ಕೊಡುಗೆ ದೊಡ್ಡ ಸೊನ್ನೆ. ಈ ಕ್ಷೇತ್ರದಲ್ಲಿ ಒಂದೇ ಕುಟುಂಬದ ಸದಸ್ಯರೇ ಹಲವು ವರ್ಷಗಳಿಂದ ಆಡಳಿತದಲ್ಲಿ ಇದ್ದರೂ ಅಭಿವೃದ್ಧಿಗೆ ಏನೂ ಮಾಡಲಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ಅವರು ಆರೋಪಿಸಿದರು.ದಾವಣಗೆರೆ ದಕ್ಷಿಣ ಕ್ಷೇತ್ರದ ಉಪ ಚುನಾವಣೆ ಹಿನ್ನೆಲೆಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಕ್ಷೇತ್ರಕ್ಕೆ ಕಾಂಗ್ರೆಸ್ ಶಾಸಕರು, ಸಂಸದರು ಏನು ಮಾಡಲಿಲ್ಲ. ಅಭಿವೃದ್ಧಿ ಏನಿದ್ದರೂ ಬಿಜೆಪಿ ಅವಧಿಯಲ್ಲೇ ಆಗಿರುವುದು. ಜಿ ಎಂ ಸಿದೇಶ್ವರ ಅವರು ಸಂಸದರಾಗಿದ್ದಾಗ ನಾನು ಕೇಂದ್ರ ರೈಲ್ವೆ ಸಚಿವನಾಗಿದ್ದ ವೇಳೆ ತುಮಕೂರು -ಚಿತ್ರದುರ್ಗ- ದಾವಣಗೆರೆ ನೇರ ರೈಲ್ವೆ ಮಾರ್ಗಕ್ಕೆ ಮನವಿ ಸಲ್ಲಿಸಲು ನಿಯೋಗದಲ್ಲಿ ಬಂದಿದ್ದರು.

ಮುಂಬೈ: ಬಹುನಿರೀಕ್ಷಿತ ನಿತೀಶ್ ತಿವಾರಿ ನಿರ್ದೇಶನದ ರಾಮಾಯಣ ಸಿನಿಮಾದ ಟೀಸರ್ ಕೊನೆಗೂ ರಿಲೀಸ್‌ ಆಗಿದೆ. ಮರ್ಯಾದಾ ಪುರುಷೋತ್ತಮನ ಪಾತ್ರಕ್ಕೆ ಬಾಲಿವುಡ್‌ ನಟ ರಣಬೀರ್ ಕಪೂರ್ ಜೀವತುಂಬಿದ್ದಾರೆ.ನಿತೇಶ್ ತಿವಾರಿ ನಿರ್ದೇಶಿಸಿರುವ `ರಾಮಾಯಣ ಚಿತ್ರವನ್ನ ಯಶ್ ಒಡೆತನದ ಮಾನ್‌ಸ್ಟರ್ ಮೈಂಡ್ ಹಾಗೂ ನಮಿತ್ ಮಲ್ಲೋತ್ರಾ ಜಂಟಿಯಾಗಿ ನಿರ್ಮಿಸಿದ್ದಾರೆ. ಹನುಮಂತನ ಲುಕ್‌ನ್ನ ಸೀಕ್ರೆಟಾಗಿ ಇಡಲಾಗಿದೆ. ಹನುಮಂತನ ಪಾತ್ರದಲ್ಲಿ ಸನ್ನಿ ಡಿಯೋಲ್ ನಟಿಸಿದ್ದಾರೆ. ಬಹುತಾರಾಗಣದ ರಾಮಾಯಣದ ಫಸ್ಟ್ ಪಾರ್ಟ್ ನವೆಂಬರ್ ತಿಂಗಳಲ್ಲಿ ತೆರೆಗೆ ಬರಲಿದೆ.ಹನುಮ ಜಯಂತಿ ಹಿನ್ನೆಲೆ ಸಿನಿಮಾದ ಟೀಸರ್‌ನ್ನು ಇಂದು ರಿಲೀಸ್ ಮಾಡಲಾಗಿದೆ. 2:38 ನಿಮಿಷದ ಝಲಕ್ ಹಂಚಿಕೊಂಡಿದ್ದು, ಮರ್ಯಾದಾ ಪುರುಷೋತ್ತಮ ರಾಮನ ರಾಜ್ಯಭಾರದಿಂದ ಹಿಡಿದು ವನವಾಸಕ್ಕೆ ತೆರಳುವವರೆಗಿನ ಸಣ್ಣ ತುಣುಕನ್ನ ವಿವರಿಸಿದ್ದಾರೆ.

ಬೆಂಗಳೂರು: ಕರ್ನಾಟಕ ರಾಜ್ಯ ಪೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷೆಗೆ ಅಂಕಗಳ ಬದಲಿಗೆ ಗ್ರೇಡ್‌ ನೀಡುವುದಕ್ಕೆ ಮುಂದಾಗಿರುವ ರಾಜ್ಯ ಸರ್ಕಾರದ ಪ್ರಸ್ತಾವ ಪ್ರಶ್ನಿಸಿ ಕರ್ನಾಟಕ ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದೆ.ಬೆಂಗಳೂರಿನ ಎಚ್‌ ಎನ್‌ ಚಂದನಾ ಮತ್ತು ಎಸ್ ವೆಂಕಟೇಶ್ ಅವರು ಅರ್ಜಿ ಸಲ್ಲಿಸಿದ್ದು, ಶಾಲಾ ಶಿಕ್ಷಣ ಇಲಾಖೆ ಕಾರ್ಯದರ್ಶಿ, ಆಯುಕ್ತರು, ಶಿಕ್ಷಣ ಇಲಾಖೆ ಸಚಿವ ಮಧು ಬಂಗಾರಪ್ಪ ಅವರನ್ನು ಪ್ರತಿವಾದಿಗಳನ್ನಾಗಿಸಲಾಗಿದೆ. ಅರ್ಜಿಯು ಇನ್ನಷ್ಟೇ ವಿಚಾರಣೆಗೆ ಬರಬೇಕಿದೆ.ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಇತ್ತೀಚೆಗೆ ನಡೆದ ಪತ್ರಿಕಾಗೋಷ್ಠಿಯಲ್ಲಿ, ಹಿಂದಿ ಭಾಷೆ ಸೇರಿದಂತೆ ತೃತೀಯ ಭಾಷೆಗಳು ಕಡ್ಡಾಯವಲ್ಲ. ಈ ಭಾಷೆಗಳಿಗೆ ಅಂಕಗಳ ಬದಲಿಗೆ ಗ್ರೇಡ್​ಗಳನ್ನಾಗಿ ಪರಿಗಣಿಸಲಾಗುತ್ತದೆ.

ಬೆಂಗಳೂರು: ಹಾಲಿ ಚಾಂಪಿಯನ್‌ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡವು ಹಾಲಿ ಐಪಿಎಲ್‌ನಲ್ಲಿ ತನ್ನ ಎರಡನೇ ಪಂದ್ಯದಲ್ಲಿ ಐದು ಬಾರಿಯ ಚಾಂಪಿಯನ್‌ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡವನ್ನು ಏಪ್ರಿಲ್‌ 5ರಂದು ಎದುರಿಸಲಿದೆ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಈ ಬದ್ಧ ಎದುರಾಳಿಗಳ ಹೈವೋಲ್ಟೇಜ್‌ ಪಂದ್ಯ ನಡೆಯಲಿದೆ. ಆರ್‌ಸಿಬಿ ತಂಡವು ಸನ್‌ರೈಸರ್ಸ್‌ ಹೈದರಾಬಾದ್‌ ತಂಡವನ್ನು ಮಣಿಸಿ ಹಾಲಿ ಆವೃತ್ತಿಯಲ್ಲಿ ಶುಭಾರಂಭ ಮಾಡಿದ್ದರೆ, ಚೆನ್ನೈ ತಂಡವು ರಾಜಸ್ಥಾನ ರಾಯಲ್ಸ್‌ ವಿರುದ್ಧ ಹೀನಾಯವಾಗಿ ಸೋತಿದೆ.ಹಾಲಿ ಐಪಿಎಲ್‌ನ ಉದ್ಘಾಟನಾ ಪಂದ್ಯದಲ್ಲಿ ಆರ್‌ಸಿಬಿ ತಂಡವು ಸನ್‌ರೈಸರ್ಸ್‌ ತಂಡವನ್ನು ಆರು ವಿಕೆಟ್‌ಗಳಿಂದ ಮಣಿಸಿತ್ತು. ಜೇಕಬ್‌ ಡಫಿ ಬೌಲಿಂಗ್‌ನಲ್ಲಿ ಮಿಂಚಿದ್ದರೆ, ವಿರಾಟ್‌ ಕೊಹ್ಲಿ, ದೇವದತ್ತ ಪಡಿಕ್ಕಲ್‌ ಬ್ಯಾಟಿಂಗ್‌ನಲ್ಲಿ ಅಬ್ಬರಿಸಿದ್ದರು. ಹೈದರಾಬಾದ್‌ ತಂಡವು ನೀಡಿದ್ದ 201 ರನ್‌ಗಳ ಗುರಿಯನ್ನು 26 ಎಸೆತ ಬಾರಿ ಇರುವಂತೆ ಜಯಿಸಿತ್ತು.

ನವದೆಹಲಿ: ಸ್ಯಾಂಡಲ್‌ವುಡ್‌ ನಟ ರಕ್ಷಿತ್ ಶೆಟ್ಟಿ ಮತ್ತು ಅವರ ನಿರ್ಮಾಣ ಸಂಸ್ಥೆ ಪರಂವಾ ಸ್ಟುಡಿಯೋಸ್‌ಗೆ ದೆಹಲಿ ಹೈಕೋರ್ಟ್ ಭಾರೀ ದಂಡ ವಿಧಿಸಿದೆ. ಬ್ಯಾಚುಲರ್‌ ಪಾರ್ಟ್‌ ಸಿನಿಮಾದಲ್ಲಿ ಒಮ್ಮೆ ನಿನ್ನನ್ನು ಹಾಡಿನ 31 ಸೆಕೆಂಡ್‌ಗಳು ಹಾಗೂ ನ್ಯಾಯ ಎಲ್ಲಿದೆ ಹಾಡಿನ 7 ಸೆಕೆಂಡ್‌ಗಳಷ್ಟು ಬಳಸಲಾಗಿದೆ. ಇದರ ವಿರುದ್ಧ ಬೆಂಗಳೂರಿನ ಎಂಆರ್‌ಟಿ ಸ್ಟುಡಿಯೋಸ್ ಕೋರ್ಟ್‌ ಮೆಟ್ಟಿಲೇರಿತ್ತು.ರಕ್ಷಿತ್ ಶೆಟ್ಟಿ ನಿರ್ಮಾಣದ ಬ್ಯಾಚುಲರ್ ಪಾರ್ಟಿ ಚಿತ್ರದಲ್ಲಿ ಅನುಮತಿಯಿಲ್ಲದೆ ಎರಡು ಹಾಡುಗಳನ್ನು ಬಳಸಿಕೊಂಡಿದ್ದಕ್ಕಾಗಿ ನ್ಯಾಯಾಲಯವು ಒಟ್ಟು ₹25 ಲಕ್ಷ ಪಾವತಿಸುವಂತೆ ಆದೇಶಿಸಿದೆ. ನ್ಯಾಯಮೂರ್ತಿ ತೇಜಸ್‌ ಕಾರಿಯಾ ಅವರಿದ್ದ ಪೀಠ ಈ ಆದೇಶ ಹೊರಡಿಸಿದೆ. 2024ರ ಆಗಸ್ಟ್‌ನಲ್ಲಿ ನಾಲ್ಕು ವಾರದಲ್ಲಿ ₹20 ಲಕ್ಷ ಪಾವತಿಸುವಂತೆ ಮಧ್ಯಂತರ ಆದೇಶ ಹೊರಡಿಸಿತ್ತು.