Shorts

ಬೆಂಗಳೂರು: ಮಹಿಳೆಯರ ಆರೋಗ್ಯ ಮತ್ತು ಘನತೆಯನ್ನು ಎತ್ತಿಹಿಡಿಯುವ ಮಹತ್ವದ ತೀರ್ಪಿನಲ್ಲಿ ಕರ್ನಾಟಕ ಹೈಕೋರ್ಟ್ 18 ರಿಂದ 52 ವರ್ಷ ವಯಸ್ಸಿನ ಮಹಿಳಾ ಉದ್ಯೋಗಿಗಳಿಗೆ ತಿಂಗಳಿಗೆ ಒಂದು ದಿನ ವೇತನ ಸಹಿತ ಋತುಚಕ್ರ ರಜೆ ನೀಡುವ ನೀತಿಯನ್ನು "ಕಟ್ಟುನಿಟ್ಟಾಗಿ ಮತ್ತು ನಿಷ್ಠೆಯಿಂದ" ಜಾರಿಗೊಳಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.ಈ ಹಿಂದೆ ರಾಜ್ಯ ಸರ್ಕಾರವು ಮುಟ್ಟಿನ ರಜೆಯ ಪರಿಕಲ್ಪನೆಯನ್ನು ಅನುಮೋದಿಸಿದ್ದರೂ, ಹಲವಾರು ಕಂಪನಿಗಳು ಮತ್ತು ಸಂಸ್ಥೆಗಳು ತಮ್ಮ ಮಹಿಳಾ ಸಿಬ್ಬಂದಿಗೆ ಅದನ್ನು ನೀಡಲು ಹಿಂದೇಟು ಹಾಕುತ್ತಿವೆ ಎಂದು ನ್ಯಾಯಾಲಯ ಗಮನಿಸಿದೆ. ಪರಿಣಾಮವಾಗಿ, ಈ ನೀತಿಯನ್ನು ಕಡ್ಡಾಯಗೊಳಿಸಬೇಕು ಮತ್ತು ಎಲ್ಲಾ ಕ್ಷೇತ್ರಗಳಲ್ಲಿ ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು ಎಂದು ಹೈಕೋರ್ಟ್ ಆದೇಶಿಸಿದೆ.

ಹೈದರಾಬಾದ್: ಸನ್‌ರೈಸರ್ಸ್‌ ಹೈದರಾಬಾದ್‌ ತಂಡದ ಪೂರ್ಣಕಾಲಿಕ ನಾಯಕ ಪ್ಯಾಟ್‌ ಕಮಿನ್ಸ್‌ ಕ್ರಿಕೆಟ್‌ ಆಸ್ಟ್ರೇಲಿಯಾ ನಡೆಸಿದ ಫಿಟ್‌ನೆಸ್ ಪರೀಕ್ಷೆಯಲ್ಲಿ ತೇರ್ಗಡೆಯಾಗಿದ್ದಾರೆ. ಇದರೊಂದಿಗೆ ಸನ್‌ರೈಸರ್ಸ್‌ ತಂಡಕ್ಕೆ ಆನೆಬಲ ಬಂದಂತಾಗಿದೆ. ಸನ್‌ರೈಸರ್‌ ತಂಡದ ಪ್ರಮುಖ ವೇಗಿಯಾಗಿರುವ ಪ್ಯಾಟ್ ಕಮಿನ್ಸ್ ಫಿಟ್ನೆಸ್ ಟೆಸ್ಟಲ್ಲಿ ಪಾಸ್ ಆಗಿದ್ದು, ಆಡಲು ಅನುಮತಿ ದೊರೆತಿದೆ. ಈ ಮೂಲಕ ಹೈದರಾಬಾದ್ ತಂಡಕ್ಕೆ ಆವೃತ್ತಿ ಮಧ್ಯದಲ್ಲಿ ಗುಡ್‌ನ್ಯೂಸ್ ಸಿಕ್ಕಿದೆ.ಐಪಿಎಲ್ 2026ರ ಆವೃತ್ತಿ ಆರಂಭಕ್ಕೂ ಮುನ್ನ ಕಮ್ಮಿನ್ಸ್ ಭಾರತಕ್ಕೆ ಆಗಮಿಸಿದ್ದರು. ಆದರೆ ಒಂದೇ ಒಂದು ಪಂದ್ಯದಲ್ಲಿಯೂ ಆಡಿರಲಿಲ್ಲ. ಬಳಿಕ ಪ್ಯಾಟ್ ಕಮಿನ್ಸ್ ಆಸ್ಟ್ರೇಲಿಯಾಕ್ಕೆ ವಾಪಸ್ಸಾಗಿದ್ದರು. ಅಲ್ಲಿ ಕೆಲವು ಸ್ಕ್ಯಾನಿಂಗ್‌ಗೆ ಒಳಪಟ್ಟಿದ್ದಾರೆ. ಇದೀಗ ಫಿಟ್ನೆಸ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ.

ಚೆನ್ನೈ: ಕ್ಯಾಂಡಿಡೇಟ್‌ ಚೆಸ್‌ ಟೂರ್ನಿಯಲ್ಲಿ ಬುಧವಾರ ನಡೆದ ಅಂತಿಮ ಸುತ್ತಿನಲ್ಲಿ ರಷ್ಯಾದ ಕಟೆರಿನಾ ಲಗ್ನೋ ಅವರನ್ನು ಸೋಲಿಸುವ ಮೂಲಕ ಗ್ರ್ಯಾಂಡ್‌ಮಾಸ್ಟರ್ ಆರ್ ವೈಶಾಲಿ ಅವರು ಫಿಡೆ ಮಹಿಳಾ ಕ್ಯಾಂಡಿಡೇಟ್‌ ಪ್ರಶಸ್ತಿಯನ್ನು ಗೆದ್ದ ಮೊದಲ ಭಾರತೀಯ ಆಟಗಾರ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾದರು.2001ರಲ್ಲಿ ಜನಿಸಿದ ಆರ್. ವೈಶಾಲಿ ರಮೇಶಬಾಬು ಭಾರತದ ಅತ್ಯಂತ ಪ್ರತಿಭಾವಂತ ಚೆಸ್‌ ಗ್ರ್ಯಾಂಡ್‌ಮಾಸ್ಟರ್. ಇವರು 2026ರ ಫಿಡೆ ಮಹಿಳಾ ಅಭ್ಯರ್ಥಿಗಳ ಟೂರ್ನಮೆಂಟ್ ಗೆದ್ದು ಇತಿಹಾಸ ಸೃಷ್ಟಿಸಿದ್ದಾರೆ. 15 ವರ್ಷಗಳ ನಂತರ ವಿಶ್ವ ಚಾಂಪಿಯನ್‌ಶಿಪ್‌ಗೆ ಅರ್ಹತೆ ಪಡೆದ ಭಾರತೀಯರಾಗಿದ್ದಾರೆ. ಪ್ರಸಿದ್ಧ ಚೆಸ್ ಪಟು ಪ್ರಜ್ಞಾನಂದ ಅವರ ಸಹೋದರಿಯಾಗಿರುವ ವೈಶಾಲಿ, 2023 ಮತ್ತು 2025ರ ಗ್ರ್ಯಾಂಡ್ ಸ್ವಿಸ್ ಟೂರ್ನಮೆಂಟ್ ಚಾಂಪಿಯನ್ ಆಗಿದ್ದಾರೆ.

ಚಿಕ್ಕಮಗಳೂರು: ಆಂಧ್ರಪ್ರದೇಶ ರಾಜ್ಯದ ಕರ್ನೂಲ್ ಜಿಲ್ಲೆಯ ಮಂತ್ರಾಲಯ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಚಿಕ್ಕಮಗಳೂರು ಮೂಲದ ಎಂಟು ಭಕ್ತರು ಮೃತಪಟ್ಟಿದ್ದಾರೆ. ಮಂತ್ರಾಲಯದಲ್ಲಿ ರಾಯರ ದರ್ಶನಕ್ಕೆ ಬೊಲೆರೊ ವಾಹನದಲ್ಲಿ ತೆರಳುತ್ತಿದ್ದಾಗ ಸಿಮೆಂಟ್ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ.ಚಿಕ್ಕಮಗಳೂರು ಮೂಲದ ಭಕ್ತರು ಬೊಲೆರೋ ವಾಹನದ ಮೂಲಕ ರಾಯರ ದರ್ಶನಕ್ಕೆ ಆಗಮಿಸುತ್ತಿದ್ದರು. ಈ ವೇಳೆ ಮಾರ್ಗ ಮಧ್ಯೆ ಬೊಲೆರೋ ವಾಹನಕ್ಕೆ ಸಿಮೆಂಟ್ ಮತ್ತು ಜಲ್ಲಿಕಲ್ಲು ಟ್ಯಾಂಕರ್‌ ಡಿಕ್ಕಿ ಹೊಡೆದಿದೆ. ಬೊಲೆರೋ ವಾಹನದಲ್ಲಿ ಒಟ್ಟು 21 ಜನರು ಪ್ರಯಾಣಿಸುತ್ತಿದ್ದರು ಎಂದು ತಿಳಿದು ಬಂದಿದೆ.ಮೃತರನ್ನು ಚಿಕ್ಕಮಗಳೂರು ಭಾಗದ ಕಣನಾಯಕನಹಳ್ಳಿಯ ಕುಮಾರ (50), ದೀಪಿಕಾ (40), ಬೆಳ್ಳಿ (5), ಬೇಲೂರು ತಾಲ್ಲೂಕಿನ ಚಟ್ಟನಹಳ್ಳಿ ಗ್ರಾಮದ ಸುನೀಲ್ (40), ಯಶೋದಾ (60), ಲೋಲಾಕ್ಷಿ, ಉದ್ದೇವ ಗ್ರಾಮದ ಪುಟ್ಟಮ್ಮ (55) ಹಾಗೂ ಮೀನಾಕ್ಷಿ ಎಂದು ಗುರುತಿಸಲಾಗಿದೆ.

ಚೆನ್ನೈ: ಐದು ಬಾರಿಯ ಐಪಿಎಲ್‌ ಚಾಂಪಿಯನ್‌ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡವು ಹಾಲಿ ಟೂರ್ನಿಯಲ್ಲಿ ಹ್ಯಾಟ್ರಿಕ್‌ ಸೋಲಿನ ಬಳಿಕ ಗೆಲುವಿನ ಹಳಿಗೆ ಮರಳಿದೆ. ಸತತ ಎರಡು ಗೆಲುವಿನ ಬಳಿಕ ತಂಡಕ್ಕೆ ಬಿಗ್‌ ಶಾಕ್‌ ಎದುರಾಗಿದೆ.ಚೆನ್ನೈ ಇಲ್ಲಿಯವರೆಗೆ ಆಡಿರುವ ಎಲ್ಲ ಐದು ಪಂದ್ಯಗಳಲ್ಲಿ ಭಾಗವಹಿಸಿದ್ದ ಪ್ರಮುಖ ವೇಗಿ ಖಲೀಲ್ ಅಹ್ಮದ್ ಅತ್ಯುತ್ತಮ ಪ್ರದರ್ಶನ ನೀಡುವ ಮೂಲಕ ತಂಡದ ಗೆಲುವಿಗೆ ಕಾರಣರಾಗಿದ್ದರು. ಆದರೆ, ಅವರು ಗಾಯಗೊಂಡಿದ್ದು ತಂಡಕ್ಕೆ ಭಾರೀ ಹಿನ್ನಡೆಯಾಗಿದೆ.ತಂಡದ ಪ್ರಮುಖ ವೇಗಿ ಖಲೀಲ್ ಅಹ್ಮದ್ ಕ್ವಾಡ್ರೈಸ್ಪ್ಸ್ ಗಾಯದಿಂದಾಗಿ ಟೂರ್ನಿಯಿಂದಲೇ ಹೊರಗುಳಿದಿದ್ದಾರೆ. ಏಪ್ರಿಲ್ 14 ರಂದು ಕೋಲ್ಕತ್ತಾ ನೈಟ್ ರೈಡರ್ಸ್ವಿರುದ್ಧದ ಹಿಂದಿನ ಪಂದ್ಯದ ಸಮಯದಲ್ಲಿ ಬಲಭಾಗದ ಸೊಂಟದಲ್ಲಿ ನೋವು ಕಾಣಿಸಿಕೊಂಡಿತ್ತು. ಬಳಿಕ ಅವರು ಇನಿಂಗ್ಸ್‌ ಮಧ್ಯದಲ್ಲಿಯೇ ಮೈದಾನ ತೊರೆದಿದ್ದರು.

ಇಂದು ಗುರುವಾರವಾಗಿದ್ದು ಮಹಾವಿಷ್ಣುವಿಗೆ ವಿಶೇಷವಾದ ದಿನವಾಗಿದೆ. ಇಂದು ಮಹಾವಿಷ್ಣುವಿನ ಅವತಾರವಾದ ವೆಂಕಟೇಶ್ವರ ಸ್ವಾಮಿಯ ಕುರಿತಾದ ವೆಂಕಟೇಶ್ವರ ಮಂಗಳಾಷ್ಟಕಂ ಸ್ತೋತ್ರವನ್ನು ತಪ್ಪದೇ ಓದಿ.ಶ್ರೀಕ್ಷೋಣ್ಯೌ ರಮಣೀಯುಗಂ ಸುರಮಣೀಪುತ್ರೋಽಪಿ ವಾಣೀಪತಿಃಪೌತ್ರಶ್ಚಂದ್ರಶಿರೋಮಣಿಃ ಫಣಿಪತಿಃ ಶಯ್ಯಾ ಸುರಾಃ ಸೇವಕಾಃ ।ತಾರ್ಕ್ಷ್ಯೋ ಯಸ್ಯ ರಥೋ ಮಹಶ್ಚ ಭವನಂ ಬ್ರಹ್ಮಾಂಡಮಾದ್ಯಃ ಪುಮಾನ್ಶ್ರೀಮದ್ವೇಂಕಟಭೂಧರೇಂದ್ರರಮಣಃ ಕುರ್ಯಾದ್ಧರಿರ್ಮಂಗಳಮ್ ॥ 1 ॥ ಯತ್ತೇಜೋ ರವಿಕೋಟಿಕೋಟಿಕಿರಣಾನ್ ಧಿಕ್ಕೃತ್ಯ ಜೇಜೀಯತೇಯಸ್ಯ ಶ್ರೀವದನಾಂಬುಜಸ್ಯ ಸುಷಮಾ ರಾಕೇಂದುಕೋಟೀರಪಿ ।ಸೌಂದರ್ಯಂ ಚ ಮನೋಭವಾನಪಿ ಬಹೂನ್ ಕಾಂತಿಶ್ಚ ಕಾದಂಬಿನೀಂಶ್ರೀಮದ್ವೇಂಕಟಭೂಧರೇಂದ್ರರಮಣಃ ಕುರ್ಯಾದ್ಧರಿರ್ಮಂಗಳಮ್ ॥ 2 ॥

ಬೆಂಗಳೂರು: ರಾಯಲ್ ಚಾಲೆಂಜರ್ಸ್‌ ಬೆಂಗಳೂರು ತಂಡವು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಹ್ಯಾಟ್ರಿಕ್‌ ಗೆಲುವು ದಾಖಲಿಸಿದೆ. ಅಲ್ಲದೆ, ಅಂಕಪಟ್ಟಿಯಲ್ಲೂ ಅಗ್ರಸ್ಥಾನಕ್ಕೆ ಬಡ್ತಿ ಪಡೆದಿದೆ.ಐಪಿಎಲ್‌ನ 23ನೇ ಪಂದ್ಯದಲ್ಲಿ 5 ವಿಕೆಟ್‌ಗಳಿಂದ ಲಕ್ನೋ ಸೂಪರ್ ಜೈಂಟ್ಸ್‌ (ಎಲ್‌ಎಸ್‌ಜಿ) ತಂಡವನ್ನು ಮಣಿಸಿ ತವರಿನಲ್ಲಿ ಹ್ಯಾಟ್ರಿಕ್‌ ಗೆಲುವಿನ ನಗೆ ಬೀರಿದೆ. ಇದಕ್ಕೂ ಮೊದಲು ಬೆಂಗಳೂರಿನ ಎಂ ಚಿನ್ನಸ್ವಾಮಿ ಮೈದಾನದಲ್ಲಿ ಆರ್‌ಸಿಬಿ, ಸನ್‌ರೈಸರ್ಸ್‌ ಹೈದರಾಬಾದ್, ಚೆನ್ನೈ ಸೂಪರ್ ಕಿಂಗ್ಸ್‌ ತಂಡವನ್ನು ಮಣಿಸಿತ್ತು. ಈಗ ಎಲ್‌ಎಸ್‌ಜಿ ತಂಡವನ್ನು ಮಣಿಸಿ ಅಬ್ಬರಿಸಿದೆ. ಎಲ್‌ಎಸ್‌ಜಿ ನೀಡಿದ್ದ 146 ರನ್‌ಗಳ ಗುರಿಯನ್ನು ಹಿಂಬಾಲಿಸಿದ ಆರ್‌ಸಿಬಿ ತಂಡದ ಆರಂಭ ಕಳಪೆಯಾಗಿತ್ತು. ಆರಂಭಿಕರಾದ ಫಿಲ್ ಸಾಲ್ಟ್‌ (7) ರನ್‌ ಕಲೆ ಹಾಕುವಲ್ಲಿ ವಿಫಲರಾದರು.

ಮಂಡ್ಯ: ಜಲ ಸಂರಕ್ಷಣೆ, ನೈಸರ್ಗಿಕ ಕೃಷಿ, ಫಿಟ್‍ನೆಸ್ ಮತ್ತು ಸೇವೆ ಸೇರಿದಂತೆ ಒಂಬತ್ತು ಸಾಮೂಹಿಕ ಪ್ರತಿಜ್ಞೆಗಳನ್ನು ಕೈಗೊಳ್ಳುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ಜನರಿಗೆ ಮನವಿ ಮಾಡಿದರು.ಮಂಡ್ಯದ ಆದಿಚುಂಚನಗಿರಿ ಮಹಾಸಂಸ್ಥಾನದಲ್ಲಿಅವರು ಮಾತನಾಡಿದರು. ನೀರಿನ ಸಂರಕ್ಷಣೆ ಮತ್ತು ನೀರಿನ ಉತ್ತಮ ನಿರ್ವಹಣೆ, ತಾಯಿಯ ಹೆಸರಿನಲ್ಲಿ ಒಂದು ಸಸಿ ಮರ ನೆಡುವುದು, ಸಾರ್ವಜನಿಕ ಮತ್ತು ಧಾರ್ಮಿಕ ಸ್ಥಳಗಳಲ್ಲಿ ಸ್ವಚ್ಛತೆ, ಸ್ಥಳೀಯ ಉತ್ಪನ್ನಗಳನ್ನು ಬಲಪಡಿಸುವುದು, ದೇಶೀಯ ಪ್ರವಾಸೋದ್ಯಮವನ್ನು ಉತ್ತೇಜಿಸುವುದು, ರಾಸಾಯನಿಕಮುಕ್ತ ನೈಸರ್ಗಿಕ ಕೃಷಿಯನ್ನು ಅಳವಡಿಸಿಕೊಳ್ಳುವುದು, ರಾಗಿಯೊಂದಿಗೆ ಆರೋಗ್ಯಕರ ಆಹಾರವನ್ನು ಪ್ರೋತ್ಸಾಹಿಸುವುದು ಮತ್ತು ತೈಲ ಬಳಕೆಯನ್ನು ಕಡಿಮೆ ಮಾಡುವುದು ನಿಮ್ಮ ಆದ್ಯತೆಯಾಗಲಿ ಎಂದು ಕರೆ ನೀಡಿದರು.

ಮಂಡ್ಯ: ಪ್ರಧಾನಿ ನರೇಂದ್ರ ಮೋದಿ ಅವರು ಆದಿಚುಂಚನಗಿರಿ ಮಠದಲ್ಲಿ ಶ್ರೀಗುರು ಭೈರವೈಕ್ಯ ಮಂದಿರ ಉದ್ಘಾಟಿಸಿದರು. ಬಳಿಕ ಕರ್ನಾಟಕದ ಎಲ್ಲಾ ಸಹೋದರ, ಸಹೋದರಿಯರಿಗೆ ನನ್ನ ನಮಸ್ಕಾರಗಳು ಎಂದು ಕನ್ನಡದಲ್ಲೇ ಮಾತು ಆರಂಭಿಸಿ ಕನ್ನಡಿಗರ ಮನಗೆದ್ದರು. ಆದಿಚುಂಚನಗಿರಿ ಮಠ ಆಧ್ಯಾತ್ಮಿಕ ಪರಂಪರೆ ಹೊಂದಿದೆ. ಮಠವು ನೈತಿಕ ಮೌಲ್ಯಗಳಿಂದ ದಾರಿದೀಪವಾಗಿದೆ. ಕಾಲಭೈರನ ದರ್ಶನ ಪಡೆದುಕೊಂಡಿದ್ದೇನೆ. ಭೈರವೈಕ್ಯ ಮಂದಿರವನ್ನು ಉದ್ಘಾಟಿಸಿದ್ದೇನೆ. ನಿಮ್ಮೆಲ್ಲರ ದರ್ಶನ ಪಡೆದುಕೊಂಡಿದ್ದೇನೆ. ಶಬ್ದದಲ್ಲಿ ಈ ಭಾವವನ್ನು ಹೇಳಲು ಸಾಧ್ಯವಿಲ್ಲ. ಪ್ರತಿ ಸಲ ಕರ್ನಾಟಕಕ್ಕೆ ಬಂದಾಗ ಪ್ರೇರಣೆ ಸಿಗುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಬಣ್ಣಿಸಿದರು.ಆದಿಚುಂಚನಗಿರಿ ಮಠದಂತಹ ಆಧ್ಯಾತ್ಮಿಕ ಕೇಂದ್ರ ಈ ರಾಜ್ಯದಲ್ಲಿದೆ. ಇವೆಲ್ಲವೂ ಸಮಾಜಕ್ಕೆ ದಾರಿಯನ್ನು ತೋರಿಸುತ್ತಿದೆ. ಜಗತ್ತಿನಲ್ಲಿ ಎಲ್ಲೂ ನಮ್ಮ ತರಹದ ದೊಡ್ಡ ಪರಂಪರೆ ಇಲ್ಲ

ಬೆಂಗಳೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಂದು ಬೆಂಗಳೂರಿನ ಹೆಚ್‌ಎಎಲ್‌ ವಿಮಾನ ನಿಲ್ದಾಣದಲ್ಲಿ ಬಂದಿಳಿದಾಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರೀತಿಯಿಂದ ಸ್ವಾಗತಿಸಿದರು. ಪ್ರಧಾನಿ ಮೋದಿ ಅವರು ಮಂಡ್ಯದ ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡಲಿದ್ದಾರೆ.ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಮಾನ ನಿಲ್ದಾಣದಲ್ಲಿ ರಾಜ್ಯದ ಸಮಸ್ಯೆಗಳು ಹಾಗೂ ಅಭಿವೃದ್ಧಿ ಯೋಜನೆಗಳ ಕುರಿತಾದ 18 ಪ್ರಮುಖ ಬೇಡಿಕೆಗಳ 5 ಪುಟಗಳ ಮನವಿ ಪತ್ರವನ್ನು ಪ್ರಧಾನ ಮಂತ್ರಿಯವರಿಗೆ ಸಿಎಂ ಸಲ್ಲಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಐದು ಪುಟಗಳ ವಿವರವಾದ ಮನವಿಯನ್ನು ಸಲ್ಲಿಸಿ, ಪ್ರಮುಖ ಅಭಿವೃದ್ಧಿ ವಿಷಯಗಳಲ್ಲಿ ಕೇಂದ್ರ ಸರ್ಕಾರದ ತುರ್ತು ಹಸ್ತಕ್ಷೇಪವನ್ನು ಕೋರಿದರು.

ಬೆಂಗಳೂರು: ಹಾಲಿ ಚಾಂಪಿಯನ್‌ ರಾಯಲ್ ಚಾಲೆಂಜರ್ಸ್‌ ಬೆಂಗಳೂರು ತಂಡವು ಇಂದು ಐಪಿಎಲ್‌ನ ಪಂದ್ಯದಲ್ಲಿ ಲಖನೌ ಸೂಪರ್‌ ಜೈಂಟ್ಸ್‌ ತಂಡವನ್ನು ಎದುರಿಸಲಿದೆ. ಈ ಪಂದ್ಯಕ್ಕೆ ವಿರಾಟ್‌ ಕೊಹ್ಲಿ ಲಭ್ಯವಿದ್ದರಾ ಎಂಬ ಅನುಮಾನ ಹೆಚ್ಚಿದೆ.ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಗಾಯಗೊಂಡಿದ್ದ ವಿರಾಟ್ ಕೊಹ್ಲಿ ಬ್ಯಾಟಿಂಗ್‌ ಬಳಿಕ ವಿಶ್ರಾಂತಿ ಮೊರೆ ಹೋಗಿದ್ದರು. ಹೀಗಾಗಿ, ಲಖನೌ ಸೂಪರ್ ಜೈಂಟ್ಸ್ ವಿರುದ್ಧದ ಇಂದಿನ ಪಂದ್ಯಕ್ಕೆ ಅಲಭ್ಯರಾಗುವ ಸಾಧ್ಯತೆಯಿದೆ. ಅಭ್ಯಾಸದ ವೇಳೆ ಕಾಲಿಗೆ ಪಟ್ಟಿ ಕಟ್ಟಿಕೊಂಡು ಕಾಣಿಸಿಕೊಂಡಿದ್ದು, ಅವರು ಸಂಪೂರ್ಣ ಫಿಟ್ ಆಗದಿದ್ದರೆ ತಂಡದಿಂದ ಹೊರಗುಳಿಯುವ ಸಾಧ್ಯತೆ ಇದೆ ಎಂದು ವರದಿಯಾಗಿದೆ. ಇದೀಗ ವಿರಾಟ್ ಕೊಹ್ಲಿಯ ಗಾಯದ ಸಮಸ್ಯೆಯೇ ಹಾಲಿ ಚಾಂಪಿಯನ್ ಆರ್‌ಸಿಬಿ ತಂಡಕ್ಕೆ ದೊಡ್ಡ ಹಿನ್ನಡೆಯಾಗಿ ಪರಿಣಮಿಸುವ ಸಾಧ್ಯತೆಯಿದೆ.

ಚೆನ್ನೈ: 2026ರ ಐಪಿಎಲ್ ಆವೃತ್ತಿಯಲ್ಲಿ ಮೂರು ಬಾರಿಯ ಚಾಂಪಿಯನ್‌ ಕೋಲ್ಕತ್ತ ನೈಟ್‌ ರೈಡರ್ಸ್ ತಂಡವು ಇನ್ನೂ ಗೆಲುವಿನ ಖಾತೆಯನ್ನು ತೆರೆದಿಲ್ಲ. ಈ ಮಧ್ಯೆ ತಂಡದ ನಾಯಕ ಅಜಿಂಕ್ಯ ರಹಾನೆಗೆ ಮತ್ತೊಂದು ಶಾಕ್ ಎದುರಾಗಿದೆ. ಮಂಗಳವಾರ ಚೆಪಾಕ್‌ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಚೆನ್ನೈ ಸೂಪರ್‌ ಕಿಂಗ್ಸ್‌ ವಿರುದ್ಧ ಅಗತ್ಯವಾದ ಓವರ್ ರೇಟ್ ಕಾಯ್ದುಕೊಳ್ಳಲು ವಿಫಲವಾಗಿದೆ. ಐಪಿಎಲ್ ನೀತಿ ಸಂಹಿತೆಯ ಆರ್ಟಿಕಲ್ 2.22ರ ಅಡಿಯಲ್ಲಿ ಕನಿಷ್ಠ ಓವರ್ ರೇಟ್‌ಗೆ ಸಂಬಂಧಿಸಿದ್ದು, ಮೊದಲ ಬಾರಿ ಉಲ್ಲಂಘಿಸಿದ್ದಕ್ಕಾಗಿ 12 ಲಕ್ಷ ರೂ. ದಂಡ ವಿಧಿಸಲಾಗಿದೆ ಎಂದು ಬಿಸಿಸಿಐ ತಿಳಿಸಿದೆ.ಈ ಆವೃತ್ತಿಯಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಈವರೆಗೂ 5 ಪಂದ್ಯಗಳನ್ನಾಡಿದ್ದು, ಒಂದು ಪಂದ್ಯದಲ್ಲಿಯೂ ಗೆಲುವು ಸಾಧಿಸಿಲ್ಲ. ಶುಕ್ರವಾರ ಗುಜರಾತ್ ಟೈಟನ್ಸ್‌ ಜೊತೆ ಕೆಕೆಆರ್ ತನ್ನ 6ನೇ ಪಂದ್ಯವನ್ನು ಆಡಲಿದೆ.