ಹಾಸನ: ತಮ್ಮ ಮನೆಯ ಪಕ್ಕದಲ್ಲಿ ಹಾಕಲಾಗಿದ್ದ ಕಾಂಪೌಂಡ್‌ ಧ್ವಂಸಗೊಳಿಸಿದ ವಿಚಾರಕ್ಕೆ ಸಂಬಂಧಪಟ್ಟಂತೆ ಯಶ್ ತಾಯಿ ಪುಷ್ಪಾ ಅರುಣ್ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.ಹಾಸನದ ವಿದ್ಯಾನಗರದಲ್ಲಿರುವ ನಿವೇಶನದಲ್ಲಿ ಅಕ್ರಮವಾಗಿ ಕಾಂಪೌಂಡ್ ನಿರ್ಮಾಣ ಮಾಡಲಾಗಿದೆ ಎಂದು ಆರೋಪಿಸಿ ಇಂದು ಬೆಳ್ಳಂಬೆಳಿಗ್ಗೆ ಜೆಸಿಬಿ ಮೂಲಕ ತೆರವು ಮಾಡಲಾಗಿದೆ. ಇದೀಗ ಕಾಂಪೌಂಡ್‌ ತೆರವುಗೊಳಿಸಿದವರ ವಿರುದ್ಧ ಹಾಗೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವಿರುದ್ಧ ಕೆಂಡಕಾರಿದ್ದಾರೆ. ಪಿಡಿಒ ನಟರಾಜ್ ಅಂತಾ ಇದ್ದಾರೆ. ಇದೆಲ್ಲ ಅವರ ಕುಮ್ಮಕ್ಕಿನಿಂದ ನಡೀತಿದೆ. ನಾವು ಜಾಗಕ್ಕೆ ಟ್ಯಾಕ್ಸ್ ಕಟ್ಟಿದ್ದೀವಿ. ಎಲ್ಲ ದಾಖಲೆ ನನ್‌ ಕಡೆ ಇದೆ. ಕಾನೂನು ಮುಖಾಂತರ ಎಲ್ಲದಕ್ಕೂ ಉತ್ತರ ಕೊಡುತ್ತೇನೆ. ಜೊತೆಗೆ ಅವರ ಮೇಲೆ ಮಾನಹಾನಿ ಮೊಕದ್ದಮೆ ಹಾಕುತ್ತೇನೆ ಎಂದು ಪುಷ್ಪಾ ಎಚ್ಚರಿಸಿದ್ದಾರೆ.

ಢಾಕಾ: ಬಾಂಗ್ಲಾದೇಶದ ಎಡಗೈ ವೇಗಿ ಮುಸ್ತಾಫಿಜುರ್‌ ರಹಮಾನ್‌ ಅವರನ್ನು ಪಿಪಿಎಲ್‌ನಿಂದ ಹೊರಹಾಕಿದ ಬೆನ್ನಲ್ಲೇ ಬಾಂಗ್ಲಾದೇಶ ಕ್ರಿಕೆಟ್‌ ಮಂಡಳಿ ಹೊಸ ವರಸೆ ತೆಗೆದಿದೆ.ಬಾಂಗ್ಲಾದೇಶ ವಿರುದ್ಧ ದ್ವಿಪಕ್ಷೀಯ ಸರಣಿ ಆಡದಿರಲು ಬಿಸಿಸಿಐ ಚಿಂತನೆ ನಡೆಸುತ್ತಿದೆ ಎನ್ನುವ ಸುದ್ದಿ ಹೊರಬೀಳುತ್ತಿದ್ದಂತೆ ವಿಚಲಿತಗೊಂಡಿರುವ ಬಾಂಗ್ಲಾ ಕ್ರಿಕೆಟ್‌ ಮಂಡಳಿ ಫೆ.7ರಿಂದ ಆರಂಭಗೊಳ್ಳಲಿರುವ ಟಿ20 ವಿಶ್ವಕಪ್‌ನಲ್ಲಿ ತನ್ನ ಪಂದ್ಯಗಳನ್ನು ಭಾರತದಿಂದ ಸ್ಥಳಾಂತರಿಸುವಂತೆ ಐಸಿಸಿಗೆ ಒತ್ತಾಯಿಸಿದೆ. ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿಗೆ ಔಪಚಾರಿಕವಾಗಿ ತಿಳಿಸಲು ಮತ್ತು ಟೂರ್ನಮೆಂಟ್‌ನಲ್ಲಿ ಬಾಂಗ್ಲಾದೇಶದ ಪಂದ್ಯಗಳಿಗೆ ಪರ್ಯಾಯ ಸ್ಥಳವಾಗಿ ಶ್ರೀಲಂಕಾವನ್ನು ಪ್ರಸ್ತಾಪಿಸಲು ಮಧ್ಯಂತರ ಸರ್ಕಾರವು ಬಿಸಿಬಿಗೆ ನಿರ್ದೇಶನ ನೀಡಿದೆ.

ಹಾಸನ: ನಟ ಯಶ್ ತಾಯಿ ಪುಷ್ಪಾ ಮನೆ ಮುಂದೆ ಬೆಳ್ಳಂಬೆಳಿಗ್ಗೆ ಜೆಸಿಬಿ ಗರ್ಜಿಸಿದೆ. ಅಕ್ರಮ ಕಾಂಪೌಂಡ್ ನಿರ್ಮಾಣ ಆರೋಪ ಪ್ರಕರಣದಲ್ಲಿ ಪುಷ್ಪಾ ಅವರಿಗೆ ಶಾಕ್‌ ಎದುರಾಗಿದೆ.ಬೇರೆಯವರ ಜಾಗದಲ್ಲಿ ನಿರ್ಮಿಸಿದ್ದಾರೆ ಎನ್ನಲಾದ ಕಾಂಪೌಂಡ್‌ ಅನ್ನು ಕೆಡವಿ ಹಾಕಲಾಗಿದೆ. ಹಾಸನ ನಗರದ ವಿದ್ಯಾನಗರದಲ್ಲಿ ಪುಷ್ಪಾ ಅವರ ಮನೆ ಇದೆ. ಇವರು ನಿರ್ಮಿಸಿದ್ದ ಕಾಂಪೌಂಡ್‌ ಅನ್ನು ಮೂಲ ಮಾಲೀಕ ಧ್ವಂಸಗೊಳಿಸಿದ್ದಾರೆ. 1,500 ಅಡಿ ಜಾಗವನ್ನು ಒತ್ತುವರಿ ಮಾಡಿದ ಆರೋಪ ಪುಷ್ಪಾ ಅವರ ಮೇಲಿದೆ. ಕೋರ್ಟ್ ಅನುಮತಿಯ ಮೇರೆಗೆ ಕಾಂಪೌಂಡ್ ತೆರವುಗೊಳಿಸಲಾಗಿದೆ. ಲಕ್ಷ್ಮಮ್ಮ ಎಂಬವರ ಜಾಗದಲ್ಲಿ ಅಕ್ರಮ ಕಾಂಪೌಂಡ್ ನಿರ್ಮಿಸಿದ್ದಾರೆಂದು ಆರೋಪಿಸಲಾಗಿತ್ತು. ಸುಮಾರು 1,500 ಅಡಿ ಜಾಗವನ್ನು ಒತ್ತುವರಿ ಮಾಡಲಾಗಿದೆ ಎಂದು ಮಾಲೀಕ ದೇವರಾಜು ಕಿಡಿಕಾರಿದ್ದಾರೆ.

ಬಳ್ಳಾರಿ: ಎರಡು ದಿನಗಳ ಹಿಂದೆ ಬಳ್ಳಾರಿಯಲ್ಲಿ ನಡೆದ ಗುಂಡಿನ ಘರ್ಷಣೆಯ ಬೆನ್ನಲ್ಲೇ ಗಂಗಾವತಿ ಕ್ಷೇತ್ರದ ಬಿಜೆಪಿ ಶಾಸಕ, ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರು ಸರ್ಕಾರಕ್ಕೆ ಹೊಸ ಬೇಡಿಕೆ ಮುಂದಿಟ್ಟಿದ್ದಾರೆ.ತನ್ನ ಜೀವಕ್ಕೆ ಅಪಾಯವಿದ್ದು, ತುರ್ತಾಗಿ ಝಡ್‌ ಶ್ರೇಣಿಯ ಭದ್ರತೆ ಒದಗಿಸಬೇಕು ಎಂದು ಒತ್ತಾಯಿಸಿ ಜನಾರ್ದನ ರೆಡ್ಡಿ ಅವರು ಕೇಂದ್ರ ಗೃಹ ಸಚಿವ ಅಮಿತ್‌ ಶಾ, ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹಸಚಿವ ಜಿ.ಪರಮೇಶ್ವರ್ ಮತ್ತು ಪೊಲೀಸ್‌ ಮಹಾನಿರ್ದೇಶಕರಿಗೆ ಪತ್ರ ಬರೆದಿದ್ದಾರೆ.ತುರ್ತಾಗಿ ನನಗೆ ಹಾಗೂ ನನ್ನ ಕುಟುಂಬಕ್ಕೆ ಝಡ್‌ ಶ್ರೇಣಿ ಅಥವಾ ಅದಕ್ಕೆ ಸಮಾನವಾದ ಉನ್ನತ ಪೊಲೀಸ್‌ ಭದ್ರತೆ ಒದಗಿಸಬೇಕು. ಈ ವಿಷಯದಲ್ಲಿ ನಿರ್ಲಕ್ಷ್ಯ ಮಾಡಿ ಒಂದು ವೇಳೆ ಮತ್ತೆ ದಾಳಿ ನಡೆದರೆ ಅದಕ್ಕೆ ಸರ್ಕಾರವೇ ಹೊಣೆ ಎಂದೂ ಅವರು ಎಚ್ಚರಿಕೆ ನೀಡಿದ್ದಾರೆ.

ನಾವು ಸರಿಯಾದ ಆಹಾರ ಕ್ರಮವನ್ನು ದಿನನಿತ್ಯದಲ್ಲಿ ಅನುಸರಿಸಿದರೆ ನಮ್ಮ ಆರೋಗ್ಯವೂ ಉತ್ತಮವಾಗಿರುತ್ತದೆ. ಹೃದಯದ ಆರೋಗ್ಯವನ್ನು ಕಾಪಾಡಿಕೊಳ್ಳಲು ಸರಿಯಾದ ಆಹಾರ ಪದ್ಧತಿ ಬಹಳ ಮುಖ್ಯ. ಇನ್ನೂ ಹೃದಯ ಕಾಳಜಿ ಹಿನ್ನೆಲೆ, ಉತ್ತಮವಾದ ಪ್ರಮುಖ ಹಣ್ಣುಗಳ ಮಾಹಿತಿ ಇಲ್ಲಿದೆ.*ಸೇಬು: ಪೆಕ್ಟಿನ್ ಎಂಬ ಕರಗುವ ನಾರಿನಂಶವಿರುವುದರಿಂದ ರಕ್ತದಲ್ಲಿನ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ದಿನಕ್ಕೊಂದು ಸೇಬು ತಿಂದರೆ ಹೃದಯದ ಕಾಯಿಲೆಗಳ ಅಪಾಯ ಕಡಿಮೆಯಾಗುತ್ತದೆ.*ಬೆರ್ರಿ ಹಣ್ಣುಗಳು : ಸ್ಟ್ರಾಬೆರಿ, ಬ್ಲೂಬೆರಿ ಮತ್ತು ರಾಸ್ಬೆರಿಗಳಲ್ಲಿ ಆಂಥೋಸಯಾನಿನ್‌ಗಳಂತಹ ಆಂಟಿ-ಆಕ್ಸಿಡೆಂಟ್‌ಗಳು ಸಮೃದ್ಧವಾಗಿವೆ. ಇವು ರಕ್ತನಾಳಗಳ ಉರಿಯೂತವನ್ನು ಮಾಡುವುದರಿಂದ ರಕ್ತದೊತ್ತಡವನ್ನು ನಿಯಂತ್ರಣದಲ್ಲಿಡುತ್ತವೆ.

ಬೆಂಗಳೂರು: ಈ ವಾರ ಕರಾವಳಿ ಮತ್ತು ಮಲೆನಾಡು ಭಾಗದಲ್ಲೂ ಮಳೆಯಾಗುವ ಸಾಧ್ಯತೆ ತೀರಾ ಕಡಿಮೆಯಾಗಿದೆ. ರಾಜ್ಯದ ಸಿಲಿಕಾನ್ ಸಿಟಿ ಮಂದಿ ತಮ್ಮ ಆರೋಗ್ಯದ ಬಗ್ಗೆ ಎಚ್ಚರ ವಹಿಸುವುದು ಅಗತ್ಯವಿದೆ. ಮುಂಜಾನೆ ದಟ್ಟ ಆವರಿಸಿದ ಮಂಜಿನಿಂದ ವಾತಾವರಣ ಕೂಡಿದ್ದು, ಮಧ್ಯಾಹ್ನ ಭಾಗಶಃ ಮೋಡ ಕವಿದ ವಾತಾವರಣ ಇರುತ್ತದೆ. ಇದರಿಂದ ಆರೋಗ್ಯದಲ್ಲಿ ಏರುಪೇರಾಗುವ ಸಾಧ್ಯತೆಯಿದೆ. ಆದ್ದರಿಂದ ಆರೋಗ್ಯದಲ್ಲಿ ಹುಷಾರಾಗಿರುಬೇಕು.ಕಳೆದೊಂದು ವಾರದಿಂದ ತೀವ್ರಮಟ್ಟಕ್ಕೆ ಏರಿದ್ದ ಚಳಿಯ ತೀವ್ರತೆ ಇದೀಗ ಕೊಂಚ ಇಳಿಕೆಯಾಗಿದೆ. ಹವಾಮಾನ ಇಲಾಖೆಯ ಇತ್ತೀಚಿನ ವರದಿಯ ಪ್ರಕಾರ, ರಾಜ್ಯದಲ್ಲಿ ಕನಿಷ್ಠ ತಾಪಮಾನ ಏರಿಕೆಯಾಗುತ್ತಿದ್ದು, ಜನ ನಿಟ್ಟುಸಿರು ಬಿಡುವಂತಾಗಿದೆ.ಜಿಲ್ಲೆಯಲ್ಲಿ ಎಲ್ಲೆಲ್ಲಿ ಚಳಿ ಹೇಗಿದೆ. ಬೆಳಗ್ಗಿನ ಜಾವ ಮನೆಯಿಂದ ಹೊರಬರಲಾರದಷ್ಟು ಬೀದರ್ ಮತ್ತು ವಿಜಯಪುರದಲ್ಲಿ ಚಳಿ ಇತ್ತು. ಆದರೆ ಇದೀಗ ಅಲ್ಲಿಯೂ ತಾಪಮಾನ ಸಾಮಾನ್ಯಕ್ಕಿಂತ 1 ರಿಂದ 3 ಡಿಗ್ರಿ ಸೆಲ್ಸಿಯಸ್ ಏರಿಕೆಯಾಗಿದೆ.ಕನಿಷ್ಠ ತಾಪಮಾನ (11°C – 16°C): ಧಾರವಾಡ, ಬೆಳಗಾವಿ, ವಿಜಯಪುರ, ಬೀದರ್, ಹಾಸನ, ದಾವಣಗೆರೆ, ಚಿಂತಾಮಣಿ ಮತ್ತು ಮೈಸೂರು. ಇಲ್ಲಿ ಚಳಿ ಸಾಧಾರಣ ಸ್ಥಿತಿಗೆ ಬಂದಿದೆ.

ಬೆಂಗಳೂರು: ಗರೋಡಿ ಶ್ರೀ ಬ್ರಹ್ಮ ಬೈದರ್ಕಳ ಕ್ಷೇತ್ರದ ಜಾತ್ರಾ ಮಹೋತ್ಸವದ ಅಂಗವಾಗಿ ನಡೆಯುವ ಕೋಳಿ ಅಂಕ ಬಗ್ಗೆ ನನಗೆ ಮಾಹಿತಿ ಇಲ್ಲ. ಆದರೂ ಕೆಲವು ಪಟ್ಟಭದ್ರ ಹಿತಾಸಕ್ತಿಗಳು ನನ್ನ ಹೆಸರಿನ ಮೂಲಕ ಸಾಮಾಜಿಕ ಜಾಲತಾಣದಲ್ಲಿ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ವಿಧಾನ ಪರಿಷತ್ತಿನ ಸದಸ್ಯ ಬಿ.ಕೆ. ಹರಿಪ್ರಸಾದ್ ಹೇಳಿದ್ದಾರೆ.ಶನಿವಾರ ಈ ಕುರಿತು ತಮ್ಮ ಎಕ್ಸ್ ಖಾತೆಯಿಂದ ಪ್ರತಿಕ್ರಿಯಿಸಿರುವ ಅವರು, ಗರೋಡಿ ಶ್ರೀ ಬ್ರಹ್ಮ ಬೈದರ್ಕಳ ಕ್ಷೇತ್ರದ ಜಾತ್ರಾ ಮಹೋತ್ಸವದ ಅಂಗವಾಗಿ ನಡೆಯುವ ಕೋಳಿ ಅಂಕವನ್ನು ಪೊಲೀಸ್ ಬಲದ ಬಿ ಕೆ ಹರಿಪ್ರಸಾದ್ ತಡೆಯಲು ಹೊರಟಿದ್ದಾರೆ ಎಂದು ಕೆಲವು ಪಟ್ಟಭದ್ರ ಹಿತಾಸಕ್ತಿಗಳು ಸಾಮಾಜಿಕ ಜಾಲತಾಣದಲ್ಲಿ ಅಪಪ್ರಚಾರ, ಸುಳ್ಳು ಸುದ್ದಿಗಳನ್ನು ಹರಡುತ್ತಿದ್ದಾರೆ.ಗರೋಡಿ ಶ್ರೀ ಬ್ರಹ್ಮ ಬೈದರ್ಕಳ ಕ್ಷೇತ್ರದ ಜಾತ್ರಾ ಮಹೋತ್ಸವದಲ್ಲಿ ಕೋಳಿ ಅಂಕ ನಡೆಯುತ್ತಿದೆಯೋ ಇಲ್ಲವೋ ಎಂಬ ವಿಚಾರವೇ

ಬೆಂಗಳೂರು: ವದಂತಿಗೆ ಕಾರಣವಾಗಿದ್ದ ಬಳ್ಳಾರಿ ಎಸ್‌ಪಿ ಪವನ್‌ ನಿಜ್ಜೂರ್‌ ಆತ್ಮಹತ್ಯೆ ಸಂಬಂಧ ಸ್ನೇಹಿತ, ಬೆಂಗಳೂರು ಸಿಸಿಬಿ ಡಿಸಿಪಿ ಶ್ರೀಹರಿಬಾಬು ಅವರು ಪ್ರತಿಕ್ರಿಯಿಸಿ ಅವರು ವಿಶ್ರಾಂತಿಯಲ್ಲಿದ್ದಾರೆಂದರು. ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಈಗ ಶಿರಾ ಬಳಿಯ ಫಾರ್ಮ್‌ಹೌಸ್‌ನಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. ಅವರು ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂಬುದು ಸುಳ್ಳು ಎಂದು ಹೇಳಿದರು. ಸರ್ಕಾರ ಅಮಾನುತು ಆದೇಶ ಪ್ರಕಟಿಸಿದ ಬಳಿಕ ಬಳ್ಳಾರಿ ಎಸ್‌ಪಿ ಪವನ್‌ ನಿಜ್ಜೂರ್‌ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂಬ ವದಂತಿ ಹರಡಿತ್ತು. ಜ.1 ರಂದು ಅಧಿಕಾರ ಸ್ವೀಕರಿಸಿದ್ದ ಪವನ್‌ ನಿಜ್ಜೂರ್‌ ಅವರನ್ನು ಕರ್ತವ್ಯ ಲೋಪದ ಆರೋಪದ ಅಡಿ ಸರ್ಕಾರ ನಿನ್ನೆ

ಬೆಂಗಳೂರು: ದರ್ಶನ್ ಜೈಲಿಗೆ ಹೋದ್ಮೇಲೆ ಕಿಚ್ಚ ಸುದೀಪ್ ಜಾಸ್ತಿ ನಿಗರಾಡ್ತಾವ್ರೇ ಎಂದು ನಾಲಿಗೆ ಹರಿಬಿಟ್ಟಿದ್ದ ಆರ್ಯವರ್ಧನ್ ಗುರೂಜಿ ಈಗ ಕಿಚ್ಚನ ಫ್ಯಾನ್ಸ್ ಎಚ್ಚರಿಕೆ ಬೆನ್ನಲ್ಲೇ ತಪ್ಪಾಯ್ತು ಎಂದು ಕೈ ಮುಗಿದು ಕ್ಷಮೆ ಯಾಚಿಸಿದ್ದಾರೆ. ಸಂಖ್ಯಾ ಶಾಸ್ತ್ರದ ಮೂಲಕವೇ ಜನಪ್ರಿಯವಾಗಿರುವ ಆರ್ಯವರ್ಧನ್ ಗುರೂಜಿ ಈ ಹಿಂದೆ ಬಿಗ್ ಬಾಸ್ ಗೂ ಹೋಗಿ ಬಂದಿದ್ದವರು. ವಾಹಿನಿಯೊಂದರ ಭವಿಷ್ಯ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಆರ್ಯವರ್ಧನ್ ಗುರೂಜಿ ಸುದೀಪ್ ಬಗ್ಗೆ ಆಕ್ಷೇಪಾರ್ಹವಾಗಿ ಮಾತನಾಡಿದ್ದರು. ದರ್ಶನ್ ಜೈಲಿಗೆ ಹೋದ ಮೇಲೆ ಸುದೀಪ್ ಜಾಸ್ತಿ ನಿಗರಾಡ್ತಾವ್ರೇ. ಮಾಧ್ಯಮಗಳ ಮುಂದೆ ಜಾಸ್ತಿ ಮಾತಾಡ್ತಾವ್ರೇ. ಮೊನ್ನೆ ಅದ್ಯಾರೋ ಮುಂದೆ ಪ್ಯಾಂಟ್ ಬಿಚ್ಚಿ ತೋರಿಸ್ಲಾ ಎಂದಿದ್ದರು’ ಎಂದೆಲ್ಲಾ ಹೇಳಿದ್ದರು.

ರಾಯಪುರ: ಛತ್ತೀಸ್‌ಗಢದಲ್ಲಿ ಮತ್ತೆ ಗುಂಡಿನ ಮೊರೆತ ಮೊಗಳಿದೆ. ಬಸ್ತಾರ್‌ ಪ್ರದೇಶದಲ್ಲಿ ಭದ್ರತಾ ಪಡೆಯ ಎನ್‌ಕೌಂಟರ್‌ಗೆ 14 ನಕ್ಸಲರು ಉಸಿರು ಚೆಲ್ಲಿದ್ದಾರೆ.ಮಾರ್ಚ್ 31 ರೊಳಗೆ ಭಾರತದಲ್ಲಿ ನಕ್ಸಲಿಸಂ ಅನ್ನು ಕೊನೆಗೊಳಿಸಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಗಡುವು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ, ಛತ್ತೀಸ್‌ಗಢದಲ್ಲಿ ಭದ್ರತಾ ಪಡೆಗಳು ನಕ್ಸಲ್ ವಿರೋಧಿ ಕಾರ್ಯಾಚರಣೆಗಳನ್ನು ತೀವ್ರಗೊಳಿಸಿವೆ. ಈ ವರ್ಷ ಛತ್ತೀಸ್‌ಗಢದಲ್ಲಿ ನಡೆದ ಪ್ರತ್ಯೇಕ ಎನ್‌ಕೌಂಟರ್‌ಗಳಲ್ಲಿ ಒಟ್ಟು 285 ನಕ್ಸಲರನ್ನು ಭದ್ರತಾ ಪಡೆಗಳು ಹೊಡೆದುರುಳಿಸಿದಂತಾಗಿದೆ.ರಾಜ್ಯದಲ್ಲಿ ಎರಡು ಪ್ರತ್ಯೇಕ ಕಡೆಗಳಲ್ಲಿ ಎನ್‌ಕೌಂಟರ್‌ ನಡೆಸಲಾಗಿದೆ. ಉಗ್ರರ ಬಗ್ಗೆ ನಿರ್ದಿಷ್ಟ ಮಾಹಿತಿ ಪಡೆದ ನಂತರ ಜಿಲ್ಲಾ ಮೀಸಲು ಪಡೆ ಬಸ್ತಾರ್ ಪ್ರದೇಶದಲ್ಲಿ ಕಾರ್ಯಾಚರಣೆಯನ್ನು ಪ್ರಾರಂಭಿಸಿತ್ತು.