ಬೆಂಗಳೂರು: ಅಭಿವೃದ್ಧಿಯನ್ನು ಮರೆತು ಹಿಂದೂಗಳಿಗೆ ಅಪಮಾನ ಮಾಡಿಕೊಂಡು ಅಲ್ಪಸಂಖ್ಯಾತರ ಓಲೈಕೆ ರಾಜಕಾರಣ ಮಾಡುತ್ತಿರುವ ಕಾಂಗ್ರೆಸ್ ಸರಕಾರದ ಆಡಳಿತಕ್ಕೆ ಇತಿಶ್ರೀ ಹಾಡುವ ದಿನಗಳು ಬಂದೇಬರಲಿವೆ. ಆಗ ರಾಜ್ಯದ ಜನರೂ ಇದಕ್ಕೆ ಉತ್ತರ ಕೊಡಲಿದ್ದಾರೆ ಎಂದು ಶಾಸಕ ಹಾಗೂ ಬಿಜೆಪಿ ರಾಜ್ಯಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಹೇಳಿದ್ದಾರೆ.ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಹಿಜಾಬ್ಗೆ ಅವಕಾಶ ಕೊಡುವುದಾಗಿ ಅಧಿಕೃತ ಮುದ್ರೆಯನ್ನು ಒತ್ತಲಾಗಿದೆ. ಶಿಕ್ಷಣ ಸಚಿವರು ಹೇಳಿರುವುದು ಖಂಡಿತ ಸರಿಯಲ್ಲ ಎಂದು ಆಕ್ಷೇಪಿಸಿದರು. ಮಾಡಬೇಕಾದ ಕೆಲಸಗಳು ನೂರಾರಿವೆ.
ಬೆಂಗಳೂರು: ಶಾಲೆಗಳಲ್ಲಿ ವಸ್ತ್ರಸಂಹಿತೆ ಇರಬೇಕೇ ಬೇಡವೇ ಎಂದು ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಅವರು ಪ್ರಶ್ನಿಸಿದ್ದಾರೆ.ರಾಜ್ಯ ಬಿಜೆಪಿ ಕಾರ್ಯಾಲಯದಲ್ಲಿ ಇಂದು ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, ಹಿಜಾಬ್ಗೆ ಅನುಮತಿ ನೀಡಿ, ಜನಿವಾರ- ರುದ್ರಾಕ್ಷಿಯನ್ನೂ ಎಳೆದು ತಂದು, ಕೇಸರಿ ಶಾಲಿಗೆ ನಿಷೇಧ ಹೇರಿ ಒಂದು ಸುತ್ತೋಲೆಯನ್ನು ಸರಕಾರ ಹೊರಡಿಸಿದೆ ಎಂದರು. ಬಿಜೆಪಿ, ಹಿಜಾಬ್ ವಿರೋಧಿಯಲ್ಲ; ನಾವು ಹಿಜಾಬ್ ವಿರೋಧಿಸಿಲ್ಲ ಎಂದು ಇದೇವೇಳೆ ಸ್ಪಷ್ಟಪಡಿಸಿದರು.ಯಾವಾಗಿನಿಂದ ಯೂನಿಫಾರಂ (ವಸ್ತ್ರಸಂಹಿತೆ) ಆರಂಭವಾಗಿದೆ? ಯಾವ ಉದ್ದೇಶಕ್ಕೆ ಅದು ಪ್ರಾರಂಭವಾಗಿದೆ? ಎಂದು ಕೇಳಿದ ಅವರು, ಅಕ್ಷರ ಮತ್ತು ಜ್ಞಾನ ಹೆಚ್ಚಿಸಬೇಕಾದ ಶಿಕ್ಷಣ ಸಚಿವರಿಗೆ ಅದರ ಉದ್ದೇಶದ ಬಗ್ಗೆಯೂ ಸ್ಪಷ್ಟತೆ ಇಲ್ಲ.
ಬೆಂಗಳೂರು: ಕರ್ನಾಟಕದಲ್ಲೂ ಮತದಾರರ ಪಟ್ಟಿ ಸದ್ಯದಲ್ಲೇ ಶುರುವಾಗಲಿದೆ. ಯಾವಾಗ ಇತ್ಯಾದಿ ಎಲ್ಲಾ ವಿವರ ಇಲ್ಲಿದೆ ನೋಡಿ. ಚುನಾವಣಾ ಆಯೋಗವು ಮೇ 30 ರಿಂದ ಮೂರನೇ ಹಂತದ ಮತದಾರರ ಪಟ್ಟಿ ಪರಿಷ್ಕರಣೆಗೆ ಮುಂದಾಗಿದೆ. ಅದರಂತೆ 16 ರಾಜ್ಯಗಳು, 3 ಕೇಂದ್ರಾಡಳಿತ ಪ್ರದೇಶಗಳಲ್ಲಿ ಮೂರನೇ ಹಂತದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ನಡೆಯಲಿದೆ. ಈ ಪೈಕಿ ಕರ್ನಾಟಕವೂ ಸೇರಿದೆ. ಮೊದಲ ಎರಡು ಹಂತಗಳಲ್ಲಿ 13 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಮಾಡಲಾಗಿದೆ.
ಕೇರಳದ ರಾಜಕೀಯದಲ್ಲಿ ಇತ್ತೀಚೆಗೆ ನಡೆದ ಅತ್ಯಂತ ಮಹತ್ವದ ಬೆಳವಣಿಗೆಯೆಂದರೆ ಅದು ವಿ.ಡಿ. ಸತೀಶನ್ ಅವರ ಮುಖ್ಯಮಂತ್ರಿ ಆಯ್ಕೆ. ರಾಹುಲ್ ಗಾಂಧಿಯವರ ಅತ್ಯಂತ ಆಪ್ತರು ಮತ್ತು ಎಐಸಿಸಿ (AICC) ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ. ವೇಣುಗೋಪಾಲ್ ಅವರ ಹೆಸರೂ ಈ ಓಟದಲ್ಲಿ ಕೇಳಿಬಂದಿತ್ತಾದರೂ, ಕಾಂಗ್ರೆಸ್ ಹೈಕಮಾಂಡ್ ಅಂತಿಮವಾಗಿ ವಿ.ಡಿ. ಸತೀಶನ್ ಅವರಿಗೆ ಮಣೆ ಹಾಕಿತು.ಈ ನಿರ್ಧಾರದ ಹಿಂದಿರುವ ಪ್ರಮುಖ ರಾಜಕೀಯ ಕಾರಣಗಳ ವಿಶ್ಲೇಷಣೆ ಇಲ್ಲಿದೆ:ಕೆ.ಸಿ. ವೇಣುಗೋಪಾಲ್ ಬದಲಿಗೆ ವಿ.ಡಿ. ಸತೀಶನ್ ಅವರ ಆಯ್ಕೆ: ಹೈಕಮಾಂಡ್ ಲೆಕ್ಕಾಚಾರವೇನು?ಕೇರಳದಲ್ಲಿ ಕಾಂಗ್ರೆಸ್ ನೇತೃತ್ವದ ಯು.ಡಿ.ಎಫ್ (UDF) ಅಧಿಕಾರಕ್ಕೆ ಬಂದಾಗ, ಮುಖ್ಯಮಂತ್ರಿ ಸ್ಥಾನಕ್ಕೆ ಇಬ್ಬರು ಪ್ರಬಲ ನಾಯಕರ ನಡುವೆ ಪೈಪೋಟಿ ಏರ್ಪಟ್ಟಿತ್ತು.
ಬೆಂಗಳೂರು: ಹಿಜಾಬ್, ಜನಿವಾರ ಧರಿಸಲು ಅವಕಾಶ ಕೊಟ್ಟಿದ್ದೇವೆ. ಆದರೆ ಕೇಸರಿ ಶಾಲು, ಪೇಟ ಹಾಕಲು ಅವಕಾಶ ಕೊಟ್ಟಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ರಾಜ್ಯದಲ್ಲಿ ಹಿಜಾಬ್ ವಿವಾದ ಮತ್ತೆ ಭುಗಿಲೆದ್ದಿದೆ. ಬಿಜೆಪಿ ಅವಧಿಯಲ್ಲಿ ಶಾಲಾ, ಕಾಲೇಜುಗಳಲ್ಲಿ ಹಿಜಾಬ್ ಗೆ ನಿಷೇಧ ಹೇರಲಾಗಿತ್ತು. ಆದರೆ ಈಗ ಕಾಂಗ್ರೆಸ್ ಸರ್ಕಾರ ಹಿಜಾಬ್ ಮೇಲಿನ ನಿಷೇಧ ತೆರವುಗೊಳಿಸಿದ್ದು ಶಾಲಾ, ಕಾಲೇಜುಗಳಲ್ಲಿ ಧರಿಸಲು ಅವಕಾಶ ಕೊಟ್ಟಿದೆ. ಆದರೆ ಇದು ಹಿಂದೂ ಸಂಘಟನೆಗಳ ಆಕ್ರೋಶಕ್ಕೆ ಕಾರಣವಾಗಿದೆ. ಕೇಸರಿ ಶಾಲು, ಪೇಟ ಧರಿಸಲೂ ಅವಕಾಶ ಕೊಡಬೇಕು ಎಂದು ಆಗ್ರಹಿಸಿವೆ. ಇದರ ಬಗ್ಗೆ ಮಾಧ್ಯಮಗಳ ಮುಂದೆ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.
ಮುಂಬೈ: ಪ್ರಧಾನಿ ಮೋದಿ ಇಂಧನ ಉಳಿತಾಯ ಮಾಡಿ ಎಂದು ಕರೆ ನೀಡಿದ್ದಕ್ಕೆ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವಿಸ್ ವಿಧಾನಸಭೆಗೆ ಹೇಗೆ ಬಂದ್ರು ಈ ವಿಡಿಯೋ ನೋಡಿ. ಮಧ್ಯಪ್ರಾಚ್ಯದಲ್ಲಿ ಯುದ್ಧದಿಂದಾಗಿ ದೇಶದ ಆರ್ಥಿಕತೆಗೆ ತೊಂದರೆಯಾಗಬಾರದು ಎಂಬ ಕಾರಣಕ್ಕೆ ಪ್ರಧಾನಿ ಮೋದಿ ಹಲವು ಸಲಹೆ ನೀಡಿದ್ದರು. ಆ ಪೈಕಿ ಚಿನ್ನ ಖರೀದಿ ಮಾಡಬೇಡಿ, ಇಂಧನ ಉಳಿತಾಯ ಮಾಡಿ ಎಂಬುದು ಪ್ರಮುಖ ಸಲಹೆಯಾಗಿತ್ತು. ಕೇವಲ ಹೇಳಿಕೆ ಮಾತ್ರವಲ್ಲ, ತಾವೇ ಬೆಂಗಾವಲು ಪಡೆಯ ಸಂಖ್ಯೆಯನ್ನು ಶೇ.50 ಕ್ಕೆ ಇಳಿಕೆ ಮಾಡಿ ಪ್ರಧಾನಿ ಮೋದಿ ಮಾದರಿಯಾಗಿದ್ದರು. ಹಲವು ಬಿಜೆಪಿ ನಾಯಕರೂ ಮೋದಿ ಹೇಳಿದ ಬೆನ್ನಲ್ಲೇ ತಮ್ಮದೇ ರೀತಿಯಲ್ಲಿ ಇಂಧನ ಉಳಿತಾಯಕ್ಕೆ ಮುಂದಾಗಿದ್ದಾರೆ.
ಬೆಂಗಳೂರು: ಕಾಂಗ್ರೆಸ್ ಸರ್ಕಾರ ಹಿಜಾಬ್ ವಿಷಯವನ್ನು ಮತ್ತೆ ಮುನ್ನೆಲೆಗೆ ತಂದು ಮಕ್ಕಳಲ್ಲಿ ಮತೀಯ ವಿಷ ಬೀಜ ಬಿತ್ತಲು ಶುರು ಮಾಡಿದೆ ಎಂದು ಶಾಸಕ ಮಹೇಶ್ ಟೆಂಗಿನಕಾಯಿ ಅವರು ಆರೋಪಿಸಿದ್ದಾರೆ.ರಾಜ್ಯ ಬಿಜೆಪಿ ಕಾರ್ಯಾಲಯದಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, 2022 ರಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿ ಇದ್ದಾಗ ವಸ್ತ್ರ ಸಂಹಿತೆ ಬೇಕು ಎಂದು ನ್ಯಾಯಾಲಯವು ಸಹ ಎತ್ತಿ ಹಿಡಿದಿತ್ತು. ಆದರೆ ಇಂದು ಕಾಂಗ್ರೆಸ್ ಸರ್ಕಾರ ಹಿಜಾಬ್ ಧರಿಸಲು ತೀರ್ಮಾನ ಕೈಗೊಂಡಿದೆ ಎಂದು ದೂರಿದರು. ದಾವಣಗೆರೆ ಉಪ ಚುನಾವಣೆ ನಂತರ ಸರ್ಕಾರಕ್ಕೆ ಹೆದರಿಕೆ, ಅಂಜಿಕೆ ಆರಂಭವಾಗಿದೆ. ಅಲ್ಪ ಸಂಖ್ಯಾತರನ್ನು ಓಲೈಸಲು ಯತ್ನಿಸುತ್ತಿದೆ. ಅದಕ್ಕಾಗಿ ಇಂತಹ ಪ್ರಯತ್ನ ಮಾಡುತ್ತಿದೆ ಎಂದರು.
ಕೇರಳದ ರಾಜಕೀಯ ಇತಿಹಾಸದಲ್ಲಿ ಒಂದು ಪ್ರಮುಖ ಬದಲಾವಣೆ ಸಂಭವಿಸಿದೆ. ಸುದೀರ್ಘ ಕಾಲದ ನಂತರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (UDF) ಅಧಿಕಾರಕ್ಕೆ ಬಂದಿದ್ದು, ಅನುಭವಿ ನಾಯಕ ವಿ.ಡಿ. ಸತೀಶನ್ ಅವರು ಮುಖ್ಯಮಂತ್ರಿಯಾಗಿ ರಾಜ್ಯದ ಚುಕ್ಕಾಣಿ ಹಿಡಿದಿದ್ದಾರೆ.ಯಾರು ಈ ವಿ.ಡಿ. ಸತೀಶನ್?ವಿ.ಡಿ. ಸತೀಶನ್ ಅವರು ಕೇರಳದ ಎರ್ನಾಕುಲಂ ಜಿಲ್ಲೆಯ ಪರವೂರು ವಿಧಾನಸಭಾ ಕ್ಷೇತ್ರವನ್ನು ಸತತವಾಗಿ ಪ್ರತಿನಿಧಿಸುತ್ತಾ ಬಂದಿರುವ ಹಿರಿಯ ನಾಯಕರು. ವೃತ್ತಿಯಿಂದ ವಕೀಲರಾಗಿರುವ ಇವರು, ವಿದ್ಯಾರ್ಥಿ ದೆಸೆಯಲ್ಲೇ ಕೆ.ಎಸ್.ಯು (KSU) ಮೂಲಕ ರಾಜಕೀಯ ಪ್ರವೇಶಿಸಿದವರು. ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿ ಇವರು ನೀಡಿದ ಪ್ರಖರ ಭಾಷಣಗಳು ಮತ್ತು ಸರ್ಕಾರದ ಲೋಪದೋಷಗಳನ್ನು ಎತ್ತಿ ತೋರಿಸುತ್ತಿದ್ದ ರೀತಿ ಜನಮನ್ನಣೆ ಗಳಿಸಿತ್ತು.
ತಿರುವನಂತಪುರಂ: ಕೊನೆಗೂ ಕೇರಳಂ ಹೊಸ ಮುಖ್ಯಮಂತ್ರಿಯ ಘೋಷಣೆಯಾಗಿದೆ. ವಿಡಿ ಸತೀಶನ್ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದಾರೆ. ಕೇರಳಂ ವಿಧಾನಸಭೆ ಚುನಾವಣೆ ಫಲಿತಾಂಶ ಬಂದು 10 ದಿನವಾಗಿದ್ದರೂ ಸಿಎಂ ಘೋಷಣೆಯಾಗಿರಲಿಲ್ಲ. ಈ ಬಗ್ಗೆ ವಿಪಕ್ಷಗಳಿಂದ ಟೀಕೆಗಳೂ ಕೇಳಿಬರತೊಡಗಿದ್ದವು. ಕೊನೆಗೂ ಇಂದು ನೂತನ ಸಿಎಂ ಯಾರು ಎಂದು ಘೋಷಣೆಯಾಗಿದೆ. ವಿಡಿ ಸತೀಶನ್, ರಮೇಶ್ ಚೆನ್ನಿತ್ತಲ ಮತ್ತು ಕೆಸಿ ವೇಣುಗೋಪಾಲ್ ನಡುವೆ ತೀವ್ರ ಪೈಪೋಟಿಯಿತ್ತು. ಇದರಿಂದಾಗಿ ಸಿಎಂ ಆಯ್ಕೆ ಮಾಡುವುದು ಕಾಂಗ್ರೆಸ್ ಹೈಕಮಾಂಡ್ ಗೆ ದೊಡ್ಡ ತಲೆನೋವಾಗಿತ್ತು. ಇದೀಗ ವಿಡಿ ಸತೀಶನ್ ಗೆ ಅವಕಾಶ ನೀಡಲಾಗಿದೆ.
ಬೆಂಗಳೂರು: ಕಳೆದ ಕೆಲವು ದಿನಗಳಿಂದ ಚಿನ್ನದ ದರ ಏರಿಕೆ, ಇಳಿಕೆಯಾಗುತ್ತಲೇ ಇದೆ. ಇಂದು ಪರಿಶುದ್ಧ ಚಿನ್ನದ ದರ ಮತ್ತುಇತರೆ ಚಿನ್ನದ ದರ ಭಾರೀ ಏರಿಕೆಯಾಗಿದೆ. ಇಂದು ಪರಿಶುದ್ಧ ಚಿನ್ನದ ದರ ಮತ್ತು ಇತರೆ ಚಿನ್ನದ ದರ ವಿವರ ಇಲ್ಲಿದೆ ನೋಡಿ. ಚಿನ್ನದ ದರ ಏರಿಕೆಕಳೆದ ವಾರ ಪರಿಶುದ್ಧ ಚಿನ್ನದ ದರ ಸತತವಾಗಿ ಬೆಲೆ ಏರಿಳಿಕೆಯಾಗುತ್ತಲೇ ಇತ್ತು. ಆದರೆ ವಾರಂತ್ಯಕ್ಕೆ ಪರಿಶುದ್ಧ ಚಿನ್ನದ ದರದಲ್ಲಿ ಕೊಂಚ ಇಳಿಕೆಯಾಗಿತ್ತು. ಪರಿಶುದ್ಧ ಚಿನ್ನದ ದರ ವಾರಂತ್ಯಕ್ಕೆ 1,56,590.00 ರೂ.ಗಳಿತ್ತು. ಆದರೆ ಇಂದು ಏರಿಕೆಯಾಗಿದ್ದು 1,65,825.00 ರೂ.ಗಳಷ್ಟಿದೆ.
ಬೆಂಗಳೂರು: ಅಡಿಕೆ ಬೆಲೆ ಕಳೆದ ವಾರ ಏರಿಕೆ-ಇಳಿಕೆಯಾಗಿತ್ತು. ಕಳೆದ ವಾರದಂತೆ ಈ ವಾರವೂ ಅದೇ ಟ್ರೆಂಡ್ ಮುಂದುವರಿದಿದೆ. ಇಂದು ಅಡಿಕೆ ಮತ್ತು ಕಾಳು ಮೆಣಸು, ಕೊಬ್ಬರಿ ದರ ಹೇಗಿದೆ ಇಲ್ಲಿದೆ ವಿವರ. ಕಳೆದ ವಾರ ಅಡಿಕೆ ಬೆಲೆಯಲ್ಲಿ ಕೊಂಚ ಏರಿಳಿಕೆಯಾಗುತ್ತಲೇ ಇತ್ತು. ಕಳೆದ ವಾರ ಎರಡು ದಿನ ಸತತವಾಗಿ ಬೆಲೆ ಏರಿಕೆ ಕಂಡುಬರುತ್ತಿತ್ತು. ಅಡಿಕೆ ಬೆಲೆಯಲ್ಲಿ ಇಂದು ಯಥಾಸ್ಥಿತಿಯಲ್ಲಿದೆ. ಹೊಸ ಅಡಿಕೆ ಬೆಲೆ 5 ರೂ. ಇಳಿಕೆಯಾಗಿದ್ದ 470 ರೂ.ಗಳಷ್ಟಿದೆ. ಹಳೆ ಅಡಿಕೆ ಬೆಲೆ ಯಥಾಸ್ಥಿತಿಯಲ್ಲಿದ್ದು 550 ರೂ. ಗಳಾಗಿದೆ. ಡಬಲ್ ಚೋಲ್ ಬೆಲೆಯೂ 550 ರೂ.ಗಳಷ್ಟಾಗಿದೆ.
ರೈಲು, ಬಸ್ ನಿಲ್ದಾಣದಲ್ಲಿ ಇರುವಾಗ ಮೈಮರೆತು ಕೂತುಕೊಂಡು ಮೊಬೈಲ್ ನೋಡುವವರು ತಪ್ಪದೇ ಈ ವಿಡಿಯೋವನ್ನು ನೋಡಲೇಬೇಕು. ಸಾಮಾನ್ಯವಾಗಿ ನಾವು ಬಸ್ ಅಥವಾ ರೈಲಿಗೆ ಕಾಯುವಾಗ ಇಲ್ಲವೇ ಆಸ್ಪತ್ರೆಗಳಲ್ಲಿ ಗಂಟೆಗಟ್ಟಲೇ ಕಾಯಬೇಕು ಎಂದಾಗ ನಮ್ಮ ಬ್ಯಾಗ್ ಪಕ್ಕದಲ್ಲೇ ಇಟ್ಟುಕೊಂಡು ಮೊಬೈಲ್ ನೋಡುತ್ತಾ ಕಾಲಹರಣ ಮಾಡುತ್ತೇವೆ. ಆದರೆ ಈ ರೀತಿ ಮಾಡುವವರು ತಪ್ಪದೇ ಈ ವಿಡಿಯೋ ನೋಡಬೇಕು. ಮೊಬೈಲ್ ನಲ್ಲಿ ಮುಳುಗಿರುವಾಗ ಕೆಲವೊಮ್ಮೆ ನಮಗೆ ನಮ್ಮ ಸುತ್ತಮುತ್ತ ಏನಾಗುತ್ತಿದೆ ಎಂಬುದರ ಅರಿವೂ ಇರಲ್ಲ.
ಚೆನ್ನೈ: ದೇಶಾದ್ಯಂತ ಕೇಳಿಬರುತ್ತಿರುವ ನೀಟ್ (NEET-UG) ಪರೀಕ್ಷಾ ಅಕ್ರಮ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿವಾದದ ನಡುವೆ, ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್’ ಅನ್ನು ಕೇಂದ್ರ ಸರ್ಕಾರವು ಸಂಪೂರ್ಣವಾಗಿ ರದ್ದುಗೊಳಿಸಬೇಕು ಎಂದು ತಮಿಳುನಾಡು ಮುಖ್ಯಮಂತ್ರಿ ವಿಜಯ್ ಆಗ್ರಹಿಸಿದ್ದಾರೆ. ರಾಜ್ಯಗಳು ತಮ್ಮ ವ್ಯಾಪ್ತಿಯ MBBS, BDS ಮತ್ತು ಆಯುಷ್ (AYUSH) ಕೋರ್ಸ್ಗಳಿಗೆ 12ನೇ ತರಗತಿಯ ಅಂಕಗಳ ಆಧಾರದ ಮೇಲೆ ಪ್ರವೇಶ ನೀಡಲು ಅನುಮತಿ ನೀಡಬೇಕು ಎಂದು ಸಿಎಂ ವಿಜಯ್ ಪ್ರತಿಪಾದಿಸಿದ್ದಾರೆ.
ರಾಯ್ಪುರ: ಎದುರಾಳಿ ಆಟಗಾರನಾಗಿದ್ದರೂ ಕನ್ನಡಿಗ ಮನೀಶ್ ಪಾಂಡೆ ಸಾಹಸ ನೋಡಿ ವಿರಾಟ್ ಕೊಹ್ಲಿ ಮೈದಾನದಲ್ಲೇ ಶಹಬ್ಬಾಷ್ ಎಂದ ವಿಡಿಯೋ ವೈರಲ್ ಆಗಿದೆ. ಐಪಿಎಲ್ 2026 ರಲ್ಲಿ ನಿನ್ನೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ನಡುವೆ ಪಂದ್ಯವಿತ್ತು. ಈ ಪಂದ್ಯದಲ್ಲಿ ಆರ್ ಸಿಬಿ ಚೇಸಿಂಗ್ ವೇಳೆ ಕೆಕೆಆರ್ ಫೀಲ್ಡರ್ ಮನೀಶ್ ಪಾಂಡೆ ಅದ್ಭುತ ಕ್ಯಾಚ್ ಪಡೆದಿದ್ದರು. ಆರ್ ಸಿಬಿ ಹೊಡೆ ಬಡಿಯ ಆಟಗಾರ ಟಿಮ್ ಡೇವಿಡ್ ನೀಡಿದ ಕ್ಯಾಚ್ ನ್ನು ಅದ್ಭುತವಾಗಿ ಹಿಡಿದಿದ್ದರು. ಅವರು ಕ್ಯಾಚ್ ಪಡೆದ ರೀತಿ ಸ್ವತಃ ಟಿಮ್ ಡೇವಿಡ್ ಮತ್ತು ಇನ್ನೊಂದು ತುದಿಯಲ್ಲಿದ್ದ ವಿರಾಟ್ ಕೊಹ್ಲಿಗೂ ಬೆರಗು ಮೂಡಿಸಿತ್ತು.
ಚೆನ್ನೈ: ಮೊದಲು ನಿಮ್ಮ ತಾಯಿ ದೇವಸ್ಥಾನಕ್ಕೆ ಹೋಗದಂತೆ ತಡೆಯಿರಿ. ಆಮೇಲೆ ಬೇರೆಯವರನ್ನು ತಡೆಯುವುದರ ಬಗ್ಗೆ ಯೋಚನೆ ಮಾಡಿ ಎಂದು ಉದಯನಿಧಿ ಸ್ಟಾಲಿನ್ ಗೆ ಬಿಜೆಪಿ ನಾಯಕ ಅಣ್ಣಾಮಲೈ ಸವಾಲು ಹಾಕಿದ್ದಾರೆ. ತಮಿಳುನಾಡು ವಿಧಾನಸಭೆಯಲ್ಲಿ ವಿಪಕ್ಷ ನಾಯಕನಾಗಿ ತಮ್ಮ ಮೊದಲ ಭಾಷಣದಲ್ಲೇ ಉದಯನಿಧಿ ಸ್ಟಾಲಿನ್, ಸನಾತನ ಧರ್ಮ ವಿಭಜಿಸುತ್ತದೆ, ಇದನ್ನು ನಿರ್ಮೂಲನೆ ಮಾಡಬೇಕು ಎಂದಿದ್ದರು. ಅವರ ಹೇಳಿಕೆಗೆ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಹಿಂದೂಗಳು ಬೀದಿಗಳಿದು ಪ್ರತಿಭಟನೆ ನಡೆಸಿದ್ದರು. ಇದು ಎರಡನೇ ಬಾರಿಗೆ ಉದಯನಿಧಿ ಇಂತಹ ಹೇಳಿಕೆ ನೀಡುತ್ತಿದ್ದಾರೆ.
ಬೆಂಗಳೂರು: ಮುಸ್ಲಿಮರ ಮುನಿಸು ಮರೆಸಲು ಕಾಂಗ್ರೆಸ್ ಸರ್ಕಾರ ಹಿಜಾಬ್ ಮುಲಾಮು ಹಚ್ಚಿದೆ ಎಂದು ವಿಪಕ್ಷ ನಾಯಕ ಆರ್ ಅಶೋಕ್ ಆರೋಪಿಸಿದ್ದಾರೆ. ಶಾಲಾ, ಕಾಲೇಜುಗಳಲ್ಲಿ ಹಿಜಾಬ್ ಗೆ ನಿಷೇಧ ಹೇರಿದ್ದ ಬಿಜೆಪಿ ಸರ್ಕಾರದ ಆದೇಶವನ್ನು ಕಾಂಗ್ರೆಸ್ ಸರ್ಕಾರ ಹಿಂಪಡೆದ ಬಗ್ಗೆ ಅವರು ಪ್ರತಿಕ್ರಿಯಿಸಿದ್ದಾರೆ. ‘ದಾವಣಗೆರೆ ಉಪಚುನಾವಣೆ ಸುತ್ತ ನಡೆದ ಘಟನೆಗಳ ನಂತರ ಅಲ್ಪಸಂಖ್ಯಾತರ ಆಕ್ರೋಶಕ್ಕೆ ಬೆದರಿರುವ ಕಾಂಗ್ರೆಸ್ ಸರ್ಕಾರ, ಈಗ ತನ್ನ ಮತಬ್ಯಾಂಕ್ ಉಳಿಸಿಕೊಳ್ಳಲು 'ಹಿಜಾಬ್' ಅಸ್ತ್ರವನ್ನು ಕೈಗೆತ್ತಿಕೊಂಡಿದೆ. ಶಾಲಾ ಕಾಲೇಜುಗಳಲ್ಲಿ ಹಿಜಾಬ್ ನಿಷೇಧಿಸಿ 2022ರಲ್ಲಿ ಅಂದಿನ ಬಿಜೆಪಿ ಸರ್ಕಾರ ಜಾರಿಗೆ ತಂದಿದ್ದ ವಸ್ತ್ರಸಂಹಿತೆಯನ್ನು ಮಾನ್ಯ ಹೈಕೋರ್ಟ್ ಎತ್ತಿ ಹಿಡಿದಿತ್ತು.
ಬೆಂಗಳೂರು: ಶಾಲಾ, ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ಅನುಮತಿ ನೀಡಿರುವ ರಾಜ್ಯ ಸರ್ಕಾರದ ವಿರುದ್ಧ ಹಿಂದೂ ಸಂಘಟನೆಗಳು ಸಿಡಿದೆದ್ದಿದ್ದಾರೆ. ರಾಜ್ಯದಲ್ಲಿ ಮತ್ತೆ ಹಿಜಾಬ್ ವಿಚಾರ ಸುದ್ದಿಯಲ್ಲಿದೆ. ಈ ಹಿಂದೆ ಬಿಜೆಪಿ ಸರ್ಕಾರವಿದ್ದಾಗ ಹಿಜಾಬ್ ಗೆ ಅವಕಾಶ ನೀಡದೇ ಇದ್ದಿದ್ದು ಮುಸ್ಲಿಮರಿಂದ ಭಾರೀ ಪ್ರತಿಭಟನೆಯಾಗಿತ್ತು. ಇದಕ್ಕೆ ಪ್ರತಿಯಾಗಿ ಹಿಂದೂಗಳು ಕೇಸರಿ ಶಾಲು ಧರಿಸಿ ಬಂದು ವಿವಾದವಾಗಿತ್ತು. ಇದೀಗ ಕಾಂಗ್ರೆಸ್ ಸರ್ಕಾರ ಮುಸ್ಲಿಂ ವಿದ್ಯಾರ್ಥಿಗಳಿಗೆ ಹಿಜಾಬ್ ಧರಿಸಿ ಬರಲು ಅವಕಾಶ ನೀಡಿದೆ. ಇದು ಹಿಂದೂ ಸಂಘಟನೆಗಳ ಆಕ್ರೋಶಕ್ಕೆ ಗುರಿಯಾಗಿದೆ. ರಾಜ್ಯ ಸರ್ಕಾರ ಮುಸ್ಲಿಂ ಓಲೈಕೆ ಮಾಡುತ್ತಿದೆ ಎಂದು ಆರೋಪಿಸಿ ಪ್ರತಿಭಟನೆಗೆ ಮುಂದಾಗಿದೆ.
ರಾಯ್ಪುರ: ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ನಿನ್ನೆಯ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಬ್ಯಾಟಿಂಗ್ ಮಾಡುವಾಗ ಅಭಿಮಾನಿಯೊಬ್ಬ ಮೈದಾನಕ್ಕೆ ನುಗ್ಗಿದ್ದಾನೆ. ಈ ವೇಳೆ ಕೊಹ್ಲಿ ಮಾಡಿದ್ದೇನು ಈ ವಿಡಿಯೋ ನೋಡಿ. ಐಪಿಎಲ್ 2026 ರಲ್ಲಿ ನಿನ್ನೆ ಕೆಕೆಆರ್ ವಿರುದ್ಧದ ಪಂದ್ಯದಲ್ಲಿ ಆರ್ ಸಿಬಿ ಪರ ವಿರಾಟ್ ಕೊಹ್ಲಿ ಭರ್ಜರಿ ಶತಕ ಸಿಡಿಸಿದ್ದಾರೆ. ಕೊನೆಯವರೆಗೂ ಅಜೇಯರಾಗಿ ಉಳಿದು ತಂಡವನ್ನು ಗೆಲುವಿನ ದಡ ಮುಟ್ಟಿಸಿದ್ದಾರೆ. ಸತತ ಎರಡು ಶೂನ್ಯದ ಬಳಿಕ ಕೊಹ್ಲಿ ಶತಕದ ವೈಭವ ನೋಡಿದ ಅಭಿಮಾನಿಗಳು ದಿಲ್ ಖುಷ್ ಆಗಿದ್ದರು.
ರಾಯ್ಪುರ: ಐಪಿಎಲ್ 2026 ರಲ್ಲಿ ನಿನ್ನೆ 9 ನೇ ಶತಕ ಸಿಡಿಸಿದ ವಿರಾಟ್ ಕೊಹ್ಲಿ ನಿನ್ನೆಯ ಇನಿಂಗ್ಸ್ ನ ಮೊದಲ ರನ್ ಗಳಿಸಿದ ಬಳಿಕ ಭಾರೀ ಸಂಭ್ರಮಪಟ್ಟಿದ್ದಾರೆ. ಇದಕ್ಕೆ ಕಾರಣವೂ ಇದೆ. ವಿರಾಟ್ ಕೊಹ್ಲಿ ಇದಕ್ಕಿಂತ ಮೊದಲು ಕಳೆದ ಎರಡು ಇನಿಂಗ್ಸ್ ಗಳಲ್ಲಿ ಸತತವಾಗಿ ಶೂನ್ಯ ಗಳಿಸಿದ್ದರು. ಇದರಿಂದ ಅವರಿಗೂ ನಿರಾಸೆಯಾಗಿತ್ತು. ಆದರೆ ನಿನ್ನೆಯ ಇನಿಂಗ್ಸ್ ನಲ್ಲಿ ಕೊಹ್ಲಿ ಮೊದಲ ರನ್ ತೆಗೆದುಕೊಂಡಾಗ ತುಂಬಾ ನಿರಾಳರಾದರು. ಹೀಗಾಗಿ ಮೊದಲ ರನ್ ಗಳಿಸಿದ ಬಳಿಕ ಅವರು ಪಂಪ್ ಅಪ್ ಮಾಡಿ ಸಂಭ್ರಮಿಸಿದ್ದಾರೆ.
ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ನಿರಂತರ ಮಳೆಯಾಗುತ್ತಲೇ ಇದೆ. ಇಂದೂ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸೂಚನೆಯಿದೆ ಎಂದು ಹವಾಮಾನ ವರದಿಗಳು ಹೇಳುತ್ತಿವೆ. ಕಳೆದ ಎರಡು ವಾರಗಳಿಂದ ರಾಜ್ಯದ ನಾನಾ ಭಾಗಗಳಲ್ಲಿ ಮಳೆಯಾಗುತ್ತಿದೆ. ಅದರಲ್ಲೂ ಕರಾವಳಿ ಜಿಲ್ಲೆ ದಕ್ಷಿಣ ಕನ್ನಡದಲ್ಲಿ ನಿರಂತರ ಮಳೆಯಾಗುತ್ತಿದೆ. ಬೆಂಗಳೂರಿನ ಸುತ್ತಮುತ್ತಲಿನ ಜಿಲ್ಲೆಗಳಲ್ಲೂ ತಕ್ಕಮಟ್ಟಿಗೆ ಮಳೆಯಾಗುತ್ತಲೇ ಇದೆ. ಇಂದು ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಕೊಡಗು, ಹಾಸನ, ಚಿಕ್ಕಮಗಳೂರು, ಮೈಸೂರು, ಮಂಡ್ಯ, ಚಾಮರಾಜನಗರ, ಹಾವೇರಿ, ಕೊಪ್ಪಳ, ಬೆಳಗಾವಿ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗಲಿದೆ.
ಜಾತಕದಲ್ಲಿ ಗುರು ದೋಷವಿದ್ದರೆ ವಿದ್ಯಾರ್ಜನೆಗೆ, ಯಶಸ್ಸಿಗೆ ಕಡಿವಾಣ ಬೀಳುತ್ತದೆ. ಗುರು ದೋಷ ನಿವಾರಣೆಗಾಗಿ ಇಂದು ತಪ್ಪದೇ ಗುರು ಪಾದುಕಾ ಸ್ತೋತ್ರವನ್ನು ಪಠಿಸಿ.ಅನಂತಸಂಸಾರ-ಸಮುದ್ರತಾರ-ನೌಕಾಯಿತಾಭ್ಯಾಂ ಗುರುಭಕ್ತಿದಾಭ್ಯಾಮ್ ।ವೈರಾಗ್ಯಸಾಮ್ರಾಜ್ಯದ-ಪೂಜನಾಭ್ಯಾಂನಮೋ ನಮಃ ಶ್ರೀಗುರುಪಾದುಕಾಭ್ಯಾಮ್ ॥ 1 ॥ ಕವಿತ್ವವಾರಾಶಿ-ನಿಶಾಕರಾಭ್ಯಾಂದೌರ್ಭಾಗ್ಯ-ದಾವಾಂಬುದ-ಮಾಲಿಕಾಭ್ಯಾಮ್ ।ದೂರೀಕೃತಾನಮ್ರ-ವಿಪತ್ತಿತಾಭ್ಯಾಂನಮೋ ನಮಃ ಶ್ರೀಗುರುಪಾದುಕಾಭ್ಯಾಮ್ ॥ 2 ॥ ನತಾ ಯಯೋಃ ಶ್ರೀಪತಿತಾಂ ಸಮೀಯುಃಕದಾಚಿದಪ್ಯಾಶು ದರಿದ್ರವರ್ಯಾಃ ।ಮೂಕಾಶ್ಚ ವಾಚಸ್ಪತಿತಾಂ ಹಿ ತಾಭ್ಯಾಂನಮೋ ನಮಃ ಶ್ರೀಗುರುಪಾದುಕಾಭ್ಯಾಮ್ ॥ 3 ॥ ನಾಲೀಕನೀಕಾಶ-ಪದಾಹೃತಾಭ್ಯಾಂನಾನಾವಿಮೋಹಾದಿ-ನಿವಾರಿಕಾಭ್ಯಾಮ್ ।ನಮಜ್ಜನಾಭೀಷ್ಟ-ತತಿಪ್ರದಾಭ್ಯಾಂನಮೋ ನಮಃ ಶ್ರೀಗುರುಪಾದುಕಾಭ್ಯಾಮ್ ॥ 4 ॥
ರಾಯಪುರ: ಕಿಂಗ್ ವಿರಾಟ್ ಕೊಹ್ಲಿ ಸಿಡಿಲಬ್ಬರದ ಬ್ಯಾಟಿಂಗ್ಗೆ ಕೋಲ್ಕತ್ತ ನೈಟ್ ರೈಡರ್ಸ್ ತಂಡವು ತತ್ತರಿಸಿದೆ. ಬುಧವಾರ ನಡೆದ ಐಪಿಎಲ್ ಪಂದ್ಯದಲ್ಲಿ ಆರ್ಸಿಬಿ ತಂಡವು ಆರು ವಿಕೆಟ್ಗಳ ಭರ್ಜರಿ ಗೆಲುವು ಸಾಧಿಸಿ, ಅಂಕಪಟ್ಟಿಯಲ್ಲಿ ಮತ್ತೆ ಅಗ್ರಸ್ಥಾನಕ್ಕೇರಿತು. ಮಾತ್ರವಲ್ಲ, ಪ್ಲೇ ಆಫ್ಗೆ ಸ್ಥಾನವನ್ನು ಬಹುತೇಕ ಖಚಿತಪಡಿಸಿಕೊಂಡಿತು.ರಾಯಪುರದ ಶಹೀದ್ ವೀರ್ ನಾರಾಯಣ್ ಸಿಂಗ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಮಣಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಈ ಆವೃತ್ತಿಯಲ್ಲಿ 8ನೇ ಗೆಲುವು ದಾಖಲಿಸಿತು. ಇತ್ತ ಆರ್ಸಿಬಿ ವಿರುದ್ಧ ಸೋತ ಕೆಕೆಆರ್ ಮೂರನೇ ತಂಡವಾಗಿ ಪ್ಲೇಆಫ್ನಿಂದ ಹೊರಬಿದ್ದಿದೆ. ವಿರಾಟ್ ಕೊಹ್ಲಿ ಆರ್ಸಿಬಿ ಜೆರ್ಸಿ ಧರಿಸಿ ತಮ್ಮ 279ನೇ ಐಪಿಎಲ್ ಪಂದ್ಯವನ್ನು ಆಡಿದ್ದು ಗಮನಾರ್ಹ ಸಾಧನೆಯಾಗಿದೆ. ಈ ಸಾಧನೆ ಮೂಲಕ, ಕೊಹ್ಲಿ ಭಾರತೀಯ ಕ್ರಿಕೆಟ್ ದಂತಕಥೆಗಳಾದ ಮಹೇಂದ್ರ ಸಿಂಗ್ ಧೋನಿ ಮತ್ತು ರೋಹಿತ್ ಶರ್ಮಾ ಅವರನ್ನು ಹಿಂದಿಕ್ಕಿದರು.
ನವದೆಹಲಿ: ಪಕ್ಷದ ಹೈಕಮಾಂಡ್ನ ಆಂತರಿಕ ಚರ್ಚೆಯ ನಂತರ ನಾಳೆ ಕೇರಳದ ಮುಂದಿನ ಮುಖ್ಯಮಂತ್ರಿಯ ನಿರ್ಧಾರವನ್ನು ಪ್ರಕಟಿಸಲಾಗುವುದು ಎಂದು ಕಾಂಗ್ರೆಸ್ನ ಸಂವಹನ ಉಸ್ತುವಾರಿ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಬುಧವಾರ ಹೇಳಿದ್ದಾರೆ. ಕೇರಳದ ಮುಂದಿನ ಸಿಎಂ ಯಾರೆಂಬುದರ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ಎಲ್ಲಾ ಚರ್ಚೆಗಳನ್ನು ಪೂರ್ಣಗೊಳಿಸಿದೆ. 2026 ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ಯುಡಿಎಫ್ ನಿರ್ಣಾಯಕ ಜನಾದೇಶವನ್ನು ಪಡೆದುಕೊಂಡ ಹತ್ತು ದಿನಗಳ ನಂತರ ಇದೀಗ ಕೇರಳದ ಮುಂದಿನ ಸಿಎಂ ಯಾರೆಂಬುದು ತಿಳಿದುಬರಲಿದೆ.
NEET UG-2026 ಪರೀಕ್ಷೆಗೆ ಸಂಬಂಧಿಸಿದ ಅಕ್ರಮಗಳು ಮತ್ತು ಪೇಪರ್ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (CBI) ಬುಧವಾರ (ಮೇ 13, 2026) ಐದು ಆರೋಪಿಗಳನ್ನು ಬಂಧಿಸಿದೆ ಮತ್ತು ದೇಶದಾದ್ಯಂತ ಹಲವಾರು ಸ್ಥಳಗಳಲ್ಲಿ ಶೋಧ ನಡೆಸಿತು.ವೈದ್ಯಕೀಯ ಕಾಲೇಜುಗಳಲ್ಲಿ ಪದವಿಪೂರ್ವ ಕೋರ್ಸ್ಗಳ ಪ್ರವೇಶಕ್ಕಾಗಿ ಮೇ 3 ರಂದು ನಡೆದ NEET (UG) 2026 ಪರೀಕ್ಷೆಯನ್ನು ಮಂಗಳವಾರ (ಮೇ 12, 2026) ಪತ್ರಿಕೆ ಸೋರಿಕೆಯ ಆರೋಪದ ಹಿನ್ನೆಲೆಯಲ್ಲಿ ರದ್ದುಗೊಳಿಸಲಾಗಿದೆ.ವೈದ್ಯಕೀಯ ಪ್ರವೇಶ ಪರೀಕ್ಷೆಯ ನಿರ್ವಹಣೆಯಲ್ಲಿನ ಅವ್ಯವಹಾರದ ಕುರಿತು ಶಿಕ್ಷಣ ಸಚಿವಾಲಯದ ಅಡಿಯಲ್ಲಿ ಉನ್ನತ ಶಿಕ್ಷಣ
ಶಹೀದ್ ವೀರ್ ನಾರಾಯಣ್ ಸಿಂಗ್ ಅಂತರಾಷ್ಟ್ರೀಯ ಸ್ಟೇಡಿಯಂನಲ್ಲಿ ಮಳೆಯಿಂದಾಗಿ RCB vs KKR IPL 2026 ಪಂದ್ಯ ವಿಳಂಬವಾಗಿದೆ. ರಾತ್ರಿ 07:00 ಗಂಟೆಗೆ ಟಾಸ್ ನಡೆಯಬೇಕಿತ್ತು, ಆದರೆ ಮಳೆಯು ಪ್ರಕ್ರಿಯೆಗಳ ಮೇಲೆ ಪರಿಣಾಮ ಬೀರಿದೆ. ಪಿಚ್ ಮತ್ತು ಆಟದ ಮೈದಾನಕ್ಕೆ ಯಾವುದೇ ಹಾನಿಯಾಗದಂತೆ ಮೈದಾನವನ್ನು ಮುಚ್ಚಲಾಗಿದೆ.ಹಾಲಿ ಚಾಂಪಿಯನ್ಗಳಿಗೆ ಪ್ಲೇಆಫ್ಗೆ ಪ್ರವೇಶಿಸಲು ಒಂದು ಗೆಲುವಿನ ಅಗತ್ಯವಿದೆ, ಆದರೆ ಕೋಲ್ಕತ್ತಾ ನೈಟ್ ರೈಡರ್ಸ್
ಕೆಲವು ಪ್ರದೇಶಗಳ ಮೇಲಿನ ವಾಯುಪ್ರದೇಶದ ನಿರ್ಬಂಧಗಳು ಮತ್ತು ದಾಖಲೆಯ ಹೆಚ್ಚಿನ ಜೆಟ್ ಇಂಧನ ಬೆಲೆಗಳಿಂದಾಗಿ ಜೂನ್ ಮತ್ತು ಆಗಸ್ಟ್ ನಡುವೆ ಆಯ್ದ ಅಂತರರಾಷ್ಟ್ರೀಯ ಮಾರ್ಗಗಳಲ್ಲಿ ತನ್ನ ಸೇವೆಗಳನ್ನು ಕಡಿಮೆಗೊಳಿಸುವುದಾಗಿ ಏರ್ ಇಂಡಿಯಾ ಬುಧವಾರ ಹೇಳಿದೆ.ಪ್ರತಿ ತಿಂಗಳು 1,200 ಕ್ಕೂ ಹೆಚ್ಚು ಅಂತರಾಷ್ಟ್ರೀಯ ವಿಮಾನಗಳನ್ನು ನಿರ್ವಹಿಸುವುದನ್ನು ಮುಂದುವರಿಸುವುದಾಗಿ ಏರ್ಲೈನ್ ಹೇಳಿದೆ.ಉತ್ತರ ಅಮೆರಿಕಕ್ಕೆ ವಾರಕ್ಕೆ 33 ವಿಮಾನಗಳು, ಯುರೋಪ್ಗೆ ವಾರಕ್ಕೆ 47 ವಿಮಾನಗಳು, ವಾರಕ್ಕೆ 57 ವಿಮಾನಗಳು ಯುಕೆ
ಬೆಂಗಳೂರು: ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟವಾದ 10 ದಿನಗಳ ನಂತರವೂ ಕೇರಳದ ಮುಂದಿನ ಮುಖ್ಯಮಂತ್ರಿ ಯಾರೆಂಬ ಸಸ್ಪೆನ್ಸ್ ಮುಂದುವರಿದಿದೆ.ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬುಧವಾರ ಪಕ್ಷದ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ ಅಂತಿಮ ಸುತ್ತಿನ ಚರ್ಚೆ ನಡೆಸಿದರು.ರಾಜ್ಯದಲ್ಲಿ ಈಗಷ್ಟೇ ಮುಕ್ತಾಯಗೊಂಡ ಚುನಾವಣೆಯಲ್ಲಿ ಮೂರನೇ ಎರಡರಷ್ಟು ಬಹುಮತದೊಂದಿಗೆ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಗೆಲುವಿನತ್ತ ದಾಪುಗಾಲು ಹಾಕಿದ ನಂತರ ಕಾಂಗ್ರೆಸ್ ಮುಖ್ಯಮಂತ್ರಿಯನ್ನು ನಿರ್ಧರಿಸಲು ಚಿಂತಿಸಿದೆ.
ಬೆಂಗಳೂರು: ಚಂದನವನದ ನಟ, ನಿರ್ಮಾಪಕ ದಿಲೀಪ್ ರಾಜ್ ಅವರ ನಿಧನಕ್ಕೆ ಕನ್ನಡ ಕಿರುತೆರೆ, ಸಿನಿಮಾ ಲೋಕವೇ ಕಣ್ಣೀರು ಹಾಕಿದೆ. ‘ಹಿಟ್ಲರ್ ಕಲ್ಯಾಣ‘ದಲ್ಲಿ ದಿಲೀಪ್ ಅವರೊಂದಿಗೆ ನಟಿಸಿದ್ದ ಮಲೈಕಾ ವಾಸುಪಾಲ್ ಭಾವುಕ ಪೋಸ್ಟ್ ಹಂಚಿಕೊಂಡಿದ್ದಾರೆ.ದಿಲೀಪ್ ಅವರ ಜೊತೆಗಿನ ಫೋಟೊ ಹಂಚಿಕೊಂಡು ಸಂತಾಪ ಸೂಚಿಸಿರುವ ಅವರು, ‘ನಿಮ್ಮ ನಿರ್ದೇಶನದಲ್ಲಿ ಮೂಡಿಬಂದಿದ್ದ ಧಾರಾವಾಹಿಯಿಂದ ನನ್ನ ನಟನೆ ವೃತ್ತಿ ಆರಂಭವಾಯಿತು. ಈ ಅವಕಾಶ ನೀಡಿದಕ್ಕೆ ನಿಮಗೆ ಸದಾ ಚಿರಋಣಿಯಾಗಿರುತ್ತೇನೆ. ನಿಮ್ಮ ಸಾವಿನ ಸುದ್ದಿ ಈಗಲೂ ನಂಬಲೂ ಆಗುತ್ತಿಲ್ಲ. ಏನು ಹೇಳಬೇಕೆಂದು ತಿಳಿಯುತ್ತಿಲ್ಲ. ನಿಮ್ಮ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ’ ಎಂದು ಬರೆದುಕೊಂಡಿದ್ದಾರೆ. ಮಲೈಕಾ ಅವರು 2021ರಲ್ಲಿ ಆರಂಭವಾದ ‘ಹಿಟ್ಲರ್ ಕಲ್ಯಾಣ’ ಧಾರಾವಾಹಿಯಲ್ಲಿ ಲೀಲಾ ಪಾತ್ರದಲ್ಲಿ ನಟಿಸಿದ್ದರು. ಈ ಸೀರಿಯಲ್
ಪಶ್ಚಿಮ ಬಂಗಾಳ: ಕೋಲ್ಕತ್ತಾದ ತಿಲಜಾಲಾ ಪ್ರದೇಶದಲ್ಲಿ ಸಂಭವಿಸಿದ ದುರಂತ ಬೆಂಕಿಯಲ್ಲಿ ಇಬ್ಬರು ಜೀವಗಳನ್ನು ಕಳೆದುಕೊಂಡು ಐವರು ಗಂಭೀರವಾಗಿ ಗಾಯಗೊಂಡ ನಂತರ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಸುವೆಂದು ಅಧಿಕಾರಿ ಬುಧವಾರ ಅಕ್ರಮ ನಿರ್ಮಾಣಗಳ ವಿರುದ್ಧ "ಶೂನ್ಯ ಸಹಿಷ್ಣುತೆ ನೀತಿ" ಘೋಷಿಸಿದ್ದಾರೆ. ನಾವು ಜಂಟಿ ಸಮಿತಿಯನ್ನು ರಚಿಸಿದ್ದೇವೆ ಮತ್ತು ನಾವು ಯಾವುದೇ ಅನುಮೋದಿತ ಕಟ್ಟಡದ ಯೋಜನೆ ಇಲ್ಲ, ಮತ್ತು ಸರಿಯಾದ ವಿದ್ಯುತ್ ವ್ಯವಸ್ಥೆಯು ಸಂಪೂರ್ಣವಾಗಿ ಕಾನೂನುಬಾಹಿರ ಎಂದು ಕಂಡುಬಂದಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಳಿಸಿ, ಸಿಇಎಸ್ಸಿಗೆ ಮಾನ್ಯತೆ ಇಲ್ಲದ ಕಟ್ಟಡಗಳ ಸಂಪರ್ಕ ಕಡಿತಗೊಳಿಸುವಂತೆ ಸೂಚಿಸಲಾಗಿದೆ.
ಗುವಾಹಟಿ: ಮಣಿಪುರದ ಕಾಂಗ್ಪೋಕ್ಪಿ ಜಿಲ್ಲೆಯಲ್ಲಿ ಬುಧವಾರ ಬೆಳಗ್ಗೆ ನಡೆದ ಶಸ್ತ್ರಸಜ್ಜಿತ ದಾಳಿಯಲ್ಲಿ ಕನಿಷ್ಠ ಮೂವರು ಕುಕಿ ಚರ್ಚ್ ನಾಯಕರು ಸಾವನ್ನಪ್ಪಿದ್ದಾರೆ ಮತ್ತು ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.ಮೂಲಗಳ ಪ್ರಕಾರ, ಬಲಿಪಶುಗಳು ಚುರಾಚಂದ್ಪುರದಿಂದ ಕಾಂಗ್ಪೋಕ್ಪಿಗೆ ಅಂತರ-ಸಂಘದ ಚರ್ಚ್ನಲ್ಲಿ ಭಾಗವಹಿಸಲು ಪ್ರಯಾಣಿಸುತ್ತಿದ್ದ ಹಿರಿಯ ಪಾದ್ರಿಗಳು ಆಗಿದ್ದರು. ZUF ಜೊತೆಗಿನ ಸಹಯೋಗದಲ್ಲಿ NSCN-IM ಸಿಬ್ಬಂದಿಗಳ ಒಳಗೊಳ್ಳುವಿಕೆ, ಮತ್ತು ಇದು ಶಾಂತಿ ಪ್ರಯತ್ನಗಳನ್ನು
ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಹೃದಯಾಘಾತಕ್ಕೆ ಒಳಗಾದ ವ್ಯಕ್ತಿಯೊಬ್ಬರನ್ನು ಸಿಆರ್ಪಿಎಫ್ ಜವಾನ್ ರಕ್ಷಿಸಿರುವ ಘಟನೆ ನಡೆದಿದೆ. ಇದರ ವಿಡಿಯೋ ಕೂಡಾ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಸಿಆರ್ಎಫ್ ಜವಾನರ ಸಮಯ ಪ್ರಜ್ಞೆಗೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ. ವಾಹನ ಚಲಾಯಿಸುತ್ತಾ ಬರುತ್ತಿದ್ದ ವ್ಯಕ್ತಿಗೆ ಹೃದಯಾಘಾತವಾಗಿದೆ.
ಚ್ಯಾಟ್ಸ್ ಮಾರಾಟ ಮಾಡುತ್ತಿದ್ದ ಮಹಿಳೆಯರ ಸೀರೆ ಹಿಡಿದೆಳೆದು ರೈಲ್ವೇ ಕ್ಯಾಂಟೀನ್ ಸಿಬ್ಬಂದಿ ವಿಕೃತಿ ಮೆರೆಯುತ್ತಿದ್ದರೆ ಇತ್ತ ಪ್ರಯಾಣಿಕರು ಮೂಕ ಪ್ರೇಕ್ಷಕರಂತೆ ನೋಡುತ್ತಿದ್ದ ದಯನೀಯ ವಿಡಿಯೋವೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಗುವಾಹಟಿ - ಬೆಂಗಳೂರು ಎಸ್.ಎಂ.ವಿ.ಟಿ ಎಕ್ಸ್ಪ್ರೆಸ್ (12510) ರೈಲಿನಲ್ಲಿ ನಡೆದ ಈ ಘಟನೆ ನಾಗರಿಕ ಸಮಾಜ ತಲೆತಗ್ಗಿಸುವಂತಿದೆ. ಚನಾ ಚಾಟ್ ಮಾರಿ ಜೀವನ ನಡೆಸುತ್ತಿದ್ದ ಬಡ ವೃದ್ಧೆಯೊಬ್ಬರ ಮೇಲೆ ಕ್ಯಾಂಟೀನ್ ಸಿಬ್ಬಂದಿ ನಡೆಸಿದ ದೌರ್ಜನ್ಯ ಮತ್ತು ಮಾನಸಿಕ ಕಿರುಕುಳ ಅಕ್ಷಮ್ಯ. ಅಮಾನವೀಯ ವರ್ತನೆ: ಕ್ಯಾಂಟೀನ್ ಸಿಬ್ಬಂದಿ ಆ ವೃದ್ಧೆಯನ್ನು ಅವಮಾನಿಸಿ, ಮಾನಸಿಕವಾಗಿ ಹಿಂಸೆ ನೀಡಿದ್ದಾರೆ.
ಬೆಂಗಳೂರು: ಪ್ರಧಾನಿಯವರು ಪೆಟ್ರೋಲಿಯಂ ಉತ್ಪನ್ನ ಕಡಿಮೆ ಬಳಕೆ, ಚಿನ್ನ ಖರೀದಿ ಮಾಡದೇ ಇರುವುದು ಸೇರಿ ವಿವಿಧ ವಿಷಯಗಳಲ್ಲಿ ವಿನಂತಿ ಮಾಡಿದ್ದಾರೆ. ನಾವು ಕೂಡ ಇದಕ್ಕೆ ಸ್ಪಂದಿಸುತ್ತಿದ್ದೇವೆ ಎಂದು ವಿಧಾನಸಭೆ ವಿರೋಧಪಕ್ಷದ ನಾಯಕ ಆರ್ ಅಶೋಕ್ ಅವರು ತಿಳಿಸಿದ್ದಾರೆ.ರಾಜ್ಯ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾವು ಬಳಸುವ ಕಾರುಗಳ ಪೆಟ್ರೋಲ್, ಡೀಸೆಲ್ ಪ್ರಮಾಣವನ್ನು ಶೇ 30ರಿಂದ 50ರಷ್ಟು ಕಡಿಮೆ ಮಾಡಲಿದ್ದೇವೆ. ಅನಿವಾರ್ಯ ಸಂದರ್ಭಗಳಲ್ಲಿ ಮಾತ್ರ ಬೆಂಗಾವಲು ವಾಹನ ಬಳಸಲಿದ್ದೇವೆ ಎಂದು
ಮಂಗಳೂರು: ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡುಗಳಲ್ಲಿ ಮೇ 12ರಂದು ಗುಡುಗು, ಮಿಂಚು, ಬಿರುಗಾಳಿ ಸಹಿತ ಅಕಾಲಿಕ ತುಂತುರು ಮಳೆಯಾಗಿದ್ದು, ಬಿಸಿಲಿನ ಝಳಕ್ಕೆ ಕೊಂಚ ವಿರಾಮ ನೀಡಿದ್ದು, ಹಲವೆಡೆ ವಿದ್ಯುತ್ ವ್ಯತ್ಯಯವಾಗಿದ್ದು, ಆಸ್ತಿ ಹಾನಿಯಾಗಿದೆ.ಮಂಗಳೂರು ನಗರದಲ್ಲಿ ರಾತ್ರಿ ಉತ್ತಮ ಮಳೆಯಾದ ವರದಿಯಾಗಿದೆ. ಬೆಳ್ತಂಗಡಿ, ವೇಣೂರು, ಉಜಿರೆ, ಶಿರ್ಲಾಲು, ಗುರಿಪಳ್ಳ, ಸುಳ್ಯ, ನಿಂತಿಕಲ್ಲು, ಐವರ್ನಾಡು, ಬೆಳ್ಳಾರೆ, ಬಂಟ್ವಾಳ, ಪುತ್ತೂರು ಸೇರಿದಂತೆ ದಕ್ಷಿಣ ಕನ್ನಡದ ಹಲವು ಭಾಗಗಳಲ್ಲೂ ಮಳೆಯಾಗಿದೆ. ನಗರದಲ್ಲಿ ಮಂಗಳವಾರ ಗರಿಷ್ಠ ತಾಪಮಾನ 34.8°C ಮತ್ತು ಕನಿಷ್ಠ 25.1°C ದಾಖಲಾಗಿದೆ. ಮೋಡ ಕವಿದ ಮುಂಜಾನೆಯ ನಂತರ, ಸಂಜೆಯ ತುಂತುರು ಮಳೆಯ ಮೊದಲು ವಾತಾವರಣವು ಬಿಸಿ ಮತ್ತು ತೇವಾಂಶದಿಂದ ಕೂಡಿತ್ತು.
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂಧನ ಬಳಕೆ ಕಡಿಮೆ ಮಾಡುವಂತೆ ಕರೆ ಕೊಟ್ಟ ಬೆನ್ನಲ್ಲೇ ಗೃಹ ಸಚಿವ ಅಮಿತ್ ಶಾ ಅವರು ತಮ್ಮ ಬೆಂಗಾವಲು ವಾಹನಗಳ ಸಂಖ್ಯೆಯನ್ನು ಕಡಿಮೆ ಮಾಡಿದ್ದಾರೆ. ಈಚೆಗೆ ಹೈದರಾಬಾದ್ನಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿದ್ದ ಪ್ರಧಾನಿ ಮೋದಿ ಅವರು, ಪಶ್ಚಿಮ ಏಷ್ಯಾದ ಯುದ್ಧದಿಂದಾಗಿ ಭಾರತದ ಆರ್ಥಿಕತೆಯ ಮೇಲೆ ಬೀರುವ ಪರಿಣಾಮಗಳನ್ನು ಎದುರಿಸಲು ಕೆಲವು ಸಲಹೆಗಳನ್ನು ನೀಡಿದ್ದರು.ಪೆಟ್ರೋಲ್ ಮತ್ತು ಡೀಸೆಲ್ ಬಳಕೆ ಕಡಿಮೆ ಮಾಡುವುದು, ಮೆಟ್ರೊ ರೈಲು ಬಳಕೆ, ಕಾರ್ಪೂಲಿಂಗ್ ಮತ್ತು ಎಲೆಕ್ಟ್ರಿಕ್ ವಾಹನಗಳಿಗೆ
ನವದೆಹಲಿ: ಮೌನಿ ರಾಯ್ ಅಂತಿಮವಾಗಿ ಸೂರಜ್ ನಂಬಿಯಾರ್ ಅವರೊಂದಿಗೆ ವಿಚ್ಛೇದನದ ಊಹಾಪೋಹಕ್ಕೆ ಪ್ರತಿಕ್ರಿಯಿಸಿದ್ದಾರೆ. ಮಂಗಳವಾರದಿಂದ, ಮೌನಿ ಮತ್ತು ಸೂರಜ್ ಮದುವೆಯಾಗಿ ನಾಲ್ಕು ವರ್ಷಗಳ ನಂತರ ಬೇರೆಯಾಗಲು ನಿರ್ಧರಿಸಿದ್ದಾರೆ ಎಂಬ ವದಂತಿ ಹಬ್ಬಿತ್ತು.ಹೈ ಜವಾನಿ ತೋ ಇಷ್ಕ್ ಹೋನಾ ಹೈ ನಟ Instagram ಗೆ ಕರೆದೊಯ್ದರು ಮತ್ತು ಅಂತಿಮವಾಗಿ ಮದುವೆಯ ಸುತ್ತ ನಡೆಯುತ್ತಿರುವ buzzಗೆ ಪ್ರತಿಕ್ರಿಯಿಸಿದರು. ಎಲ್ಲಾ ಮಾಧ್ಯಮ ಸಂಸ್ಥೆಗಳು ಸುಳ್ಳು ನಿರೂಪಣೆಗಳನ್ನು ಪ್ರಕಟಿಸಬೇಡಿ ಮತ್ತು ನಮಗೆ ಜಾಗ ಮತ್ತು ಗೌಪ್ಯತೆಯನ್ನು
ಬೆಂಗಳೂರು: ದಲಿತರ ಪರ, ಸಂವಿಧಾನದ ಪರ ಮತ್ತು ಡಾ. ಅಂಬೇಡ್ಕರರ ಪರ ಎನ್ನುವ ಕಾಂಗ್ರೆಸ್ಸಿನವರು ಈಗ ಮೀಸಲಾತಿ ವಿಚಾರದಲ್ಲಿ ಈ ಮೂರಕ್ಕೂ ಎಳ್ಳುನೀರು ಬಿಟ್ಟಿದ್ದಾರೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಆರೋಪಿಸಿದ್ದಾರೆ. ಹೆಚ್ಚುವರಿ ಮೀಸಲಾತಿ ಪ್ರಮಾಣವನ್ನು ಕಾಂಗ್ರೆಸ್ ಸರಕಾರ ತಡೆಹಿಡಿದಿದೆ. ರಾಜ್ಯ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಸವರಾಜ ಬೊಮ್ಮಾಯಿ ಅವರ ಬಿಜೆಪಿ ಸರಕಾರ ಇದ್ದಾಗ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಬಹುದಿನಗಳ ಹೋರಾಟಕ್ಕೆ ತೆರೆ ಎಳೆಯಲು ಎಸ್ಸಿ, ಎಸ್ಟಿ ಮೀಸಲಾತಿ ಪ್ರಮಾಣವನ್ನು ಹೆಚ್ಚಿಸಿದ್ದರು ಎಂದು ತಿಳಿಸಿದರು.
ತಮಿಳುನಾಡು: ತನ್ನ ರಾಜಕೀಯ ಭವಿಷ್ಯದ ಬಗ್ಗೆ ನುಡಿದಿದ್ದ ಜ್ಯೋತಿಷಿ ರಿಕ್ಕಿ ರಾಧನ್ ಪಂಡಿತ್ ವೆಟ್ರಿವೇಲ್ ಅವರನ್ನು ಸಿಎಂ ವಿಜಯ್ ಅವರು ವಿಶೇಷ ಕರ್ಯವ್ಯಾಧಿಕಾರಿಯನ್ನಾಗಿ ನೇಮಕ ಮಾಡಿದ್ದಕ್ಕೆ ಟೀಕೆಗಳು ಬರುತ್ತಿದ್ದ ಹಾಗೇ ಅವರ ಸರ್ಕಾರ ಎಚ್ಚೆತ್ತುಕೊಂಡಿದೆ. ಒಎಸ್ಡಿಯಾಗಿ ನೇಮಕ ಮಾಡಿದ್ದಕ್ಕೆ ವಿರೋಧ ಪಕ್ಷಗಳಿಂದ ತೀವ್ರ ಟೀಕೆ ವ್ಯಕ್ತವಾಗುತ್ತಿದ್ದ ಹಾಗೇ ಸರ್ಕಾರವು ವೆಟ್ರಿವೇಲ್ ನೇಮಕಾತಿಯನ್ನು ಹಿಂಪಡೆದಿದೆ.ವಿಜಯ್ ನೇತೃತ್ವದ ಸರ್ಕಾರವು ಮಂಗಳವಾರ (ಮೇ 12) ಶ್ರೀ ವೆಟ್ರಿವೇಲ್ ಅವರನ್ನು ಹುದ್ದೆಗೆ ನೇಮಿಸಿತು ಮತ್ತು ಇದು ಟಿವಿಕೆ
ನವದೆಹಲಿ: ತ್ರಿಶಾ ಕೃಷ್ಣನ್ ಅವರ ಮುಂಬರುವ ಚಿತ್ರ, ಕರುಪ್ಪು, ಮೇ 14 ರಂದು ಚಲನಚಿತ್ರದ ಥಿಯೇಟ್ರಿಕಲ್ ಬಿಡುಗಡೆಗೆ ಮುಂಚಿತವಾಗಿ ವಿಶೇಷ 9 AM ಶೋಗಳನ್ನು ಅನುಮತಿಸಿದ್ದಕ್ಕಾಗಿ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರಿಗೆ ಧನ್ಯವಾದಗಳನ್ನು ತಿಳಿಸಿದ್ದಾರೆ. ಚಿತ್ರದಲ್ಲಿ ಸೂರ್ಯ ಮತ್ತು ತ್ರಿಶಾ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ ಮತ್ತು ಈಗಾಗಲೇ ಆನ್ಲೈನ್ನಲ್ಲಿ ಬಲವಾದ ಬಜ್ ಅನ್ನು ಸೃಷ್ಟಿಸುತ್ತಿದೆ.ಕರುಪ್ಪು ಅವರ ನಿರ್ಮಾಣ ಸಂಸ್ಥೆಯು ಎಕ್ಸ್ (ಹಿಂದೆ ಟ್ವಿಟರ್) ನಲ್ಲಿ ವಿಜಯ್ಗೆ ಕೃತಜ್ಞತೆಯನ್ನು ವ್ಯಕ್ತಪಡಿಸುವ ಟಿಪ್ಪಣಿಯನ್ನು
ಪತ್ನಿಯ ಕಣ್ಣೆದುರಲ್ಲೇ ಪತಿ ಯಮುನಾ ನದಿಯಲ್ಲಿ ಈಜಲು ಹೋಗಿ ಮುಳುಗಿ ಸಾವನ್ನಪ್ಪಿದ ಕರುಣಾಜನಕ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ಘಟನೆ ನಡೆದಿರುವುದು ಮುಸಾನಗರ್ ನಲ್ಲಿ. ಕಾಳಿ ಮುಕ್ತೇಶ್ವರಿ ದೇವಿಯ ದರ್ಶನಕ್ಕೆ ಬಂದಿದ್ದಾಗ ಮೋಹಿತ್ ಎನ್ನುವ ವ್ಯಕ್ತಿ ಯಮುನಾ ನದಿಯಲ್ಲಿ ಈಜಲು ಹೋಗಿ ಎಲ್ಲರೂ ನೋಡುತ್ತಿರುವಾಗಲೇ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಈಜು ಸರಿಯಾಗಿ ಬಾರದೇ ನೀರಿಗೆ ಇಳಿಯುವ ದುಸ್ಸಾಹಸ ಮಾಡಬಾರದು ಎನ್ನುವುದಕ್ಕೆ ಇದೇ ಪಾಠ. ಅದರಲ್ಲೂ ನದಿ ಮತ್ತು ಸಮುದ್ರ ಮೇಲಿನಿಂದ ತಣ್ಣಗೆ ಕಾಣಿಸಿದರೂ ಒಳಗೆ ಆಳ ಎಷ್ಟಿದೆ ಎಂದು ಕೆಲವೊಮ್ಮೆ ನಮ್ಮ ಊಹೆಗೂ ನಿಲುಕದು. ಇಲ್ಲಿ ಆಗಿದ್ದೂ ಇದೆ.
ಬೆಂಗಳೂರು: ಕಾಂಗ್ರೆಸ್ನವರು ಏಕಾಏಕಿ ಕುತಂತ್ರ, ಷಡ್ಯಂತ್ರ ಮಾಡಿ ದಲಿತ ಸಮುದಾಯಕ್ಕೆ ಅನ್ಯಾಯ ಮಾಡಿದ್ದಾರೆ. ಮೀಸಲಾತಿ ಪ್ರಮಾಣ ಇಳಿಸುವ ಮೂಲಕ ವಂಚನೆ, ದ್ರೋಹವೆಸಗಿದ್ದಾರೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಆಕ್ಷೇಪಿಸಿದ್ದಾರೆ. ರಾಜ್ಯ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಮ್ಮ ಸರಕಾರವು ಎಸ್ಸಿ ಮೀಸಲಾತಿಯನ್ನು ಶೇ 15ರಿಂದ 17ಕ್ಕೆ ಏರಿಸಿತ್ತು. ಎಸ್ಟಿ ಮೀಸಲಾತಿಯನ್ನು ಶೇ 3ರಿಂದ 7ಕ್ಕೆ ಹೆಚ್ಚಿಸಿತ್ತು. ಎಸ್ಟಿ ಸಮುದಾಯಕ್ಕೆ ನ್ಯಾಯಯುತ ಬೇಡಿಕೆಯನ್ನು ನಾವು ಈಡೇರಿಸಿದ್ದೆವು ಎಂದು ಗಮನ ಸೆಳೆದರು. ಮಾಧುಸ್ವಾಮಿ ವರದಿ, ಸದಾಶಿವ ಆಯೋಗವನ್ನು ಗಮನದಲ್ಲಿ ಇಟ್ಟುಕೊಂಡು ನಾವು ಮೀಸಲಾತಿಯನ್ನು ಹೆಚ್ಚಿಸಿದ್ದೆವು.
ಚೆನ್ನೈ: ತಮಿಳುನಾಡಿನಲ್ಲಿ ನೂತನವಾಗಿ ಅಧಿಕಾರಕ್ಕೇರಿದ ಟಿವಿಕೆ ಇಂದು ವಿಧಾನಸಭೆಯಲ್ಲಿ ವಿಶ್ವಾಸಮತದ ಅಗ್ನಿ ಪರೀಕ್ಷೆಯನ್ನು ಯಶಸ್ವಿಯಾಗಿ ಪೂರೈಸಿದೆ. ಸಿಎಂ ವಿಜಯ್ ಸರ್ಕಾರ ವಿಶ್ವಾಸ ಮತ ಗೆದ್ದುಕೊಂಡಿದೆ. 107 ಸ್ಥಾನಗಳನ್ನು ಗೆದ್ದು ಅತೀ ದೊಡ್ಡ ಪಕ್ಷವಾಗಿ ಸರ್ಕಾರ ರಚನೆಗೆ ಮುಂದಾದ ವಿಜಯ್ ಗೆ ಬಹುಮತ ಸಾಬೀತುಪಡಿಸಲು 118 ಸ್ಥಾನ ಬೇಕಾಗಿತ್ತು. ಕಾಂಗ್ರೆಸ್, ಸಿಪಿಐ, ವಿಸಿಕೆ ಪಕ್ಷಗಳ ಸಹಾಯದೊಂದಿಗೆ ವಿಜಯ್ ಬಹುಮತ ಪಡೆದು ಸರ್ಕಾರ ರಚಿಸಿದ್ದರು. ಆದರೆ ಇಂದು ಅವರಿಗೆ ವಿಧಾನಸಭೆಯಲ್ಲಿ ವಿಶ್ವಾಸಮತದ ಪರೀಕ್ಷೆ ಎದುರಾಗಿತ್ತು. ಇಂದು ವಿಶ್ವಾಸಮತ ಯಾಚನೆ ವೇಳೆ ವಿಜಯ್ ಸರ್ಕಾರಕ್ಕೆ ಬರೋಬ್ಬರಿ 144 ಶಾಸಕರ ಬೆಂಬಲ ಸಿಕ್ಕಿದೆ.
ಬೆಂಗಳೂರು: ಕನ್ನಡ ಹಿರಿತೆರೆ ಮತ್ತು ಕಿರುತೆರೆ ನಟ, ನಿರ್ಮಾಪಕ ದಿಲೀಪ್ ರಾಜ್ ನಿಧನರಾಗಿದ್ದಾರೆ. ಅವರ ಹಠಾತ್ ಸಾವಿಗೆ ಮುನ್ನ ನಡೆದ ವಿಚಾರ ಈಗ ಬಯಲಾಗಿದೆ. ನಟ, ನಿರ್ಮಾಪಕ, ಕಂಠದಾನ ಕಲಾವಿದನಾಗಿ ಗುರುತಿಸಿಕೊಂಡಿದ್ದ ದಿಲೀಪ್ ರಾಜ್ 47 ನೇ ವಯಸ್ಸಿಗೆ ಹೃದಯಾಘಾತವಾಗಿ ನಿಧನರಾಗಿದ್ದಾರೆ. ಅವರ ಸಾವು ಕುಟುಂಬದವರನ್ನು ಕಂಗೆಡಿಸಿದೆ. ಆರೋಗ್ಯವಾಗಿದ್ದ ದಿಲೀಪ್ ಗೆ ಸಾಯುವಂತದ್ದು ಏನಾಯ್ತು ಎಂದು ಎಲ್ಲರಿಗೂ ಶಾಕ್ ಉಂಟು ಮಾಡಿದೆ. ನಿನ್ನೆ ರಾತ್ರಿ ಊಟ ಮಾಡಿದ್ದ ಮಲಗಿದ್ದ ದಿಲೀಪ್ ಇಂದು ಬೆಳಿಗ್ಗೆ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.
ದರೋಡೆಕೋರರು ಅಂಗಡಿಗೆ ನುಗ್ಗಿದಾಗ ಅಂಗಡಿ ಮಾಲಿಕ ತನ್ನ ಬುದ್ಧಿವಂತಿಕೆ ಬಳಸಿ ಮಾಡಿದ ಕೆಲಸಕ್ಕೆ ನೆಟ್ಟಿಗರು ಫಿದಾ ಆಗಿದ್ದಾರೆ. ಈ ವಿಡಿಯೋ ಇಲ್ಲಿದೆ ನೋಡಿ. ಕೆಲವು ದಿನಗಳ ಹಿಂದೆ ನಮ್ಮ ದೇಶದಲ್ಲೇ ಇಂತಹದ್ದೊಂದು ಘಟನೆ ನಡೆದಿತ್ತು. ದರೋಡೆ ಮಾಡಲು ಕಳ್ಳರು ನುಗ್ಗಿದಾಗ ಅಂಗಡಿಯಾತ ಉಪಾಯವಾಗಿ ಲಾಕ್ ಮಾಡಿದ್ದ. ಇದೀಗ ವಿದೇಶವೊಂದರಲ್ಲಿ ನಡೆದ ಘಟನೆಯೂ ಇದನ್ನೇ ಹೋಲುತ್ತದೆ. ಬಟ್ಟೆ ಅಂಗಡಿಗೆ ಇಬ್ಬರು ದರೋಡೆಕೋರರು ನುಗ್ಗುತ್ತಾರೆ. ತಕ್ಷಣವೇ ಅಂಗಡಿ ಮಾಲಿಕ ಅಲರ್ಟ್ ಆಗಿ ಓಡಿಕೊಂಡು ಹೋಗಿ ಅಂಗಡಿಯ ಶಟರ್ ಎಳೆದು ಹೊರಗೆ ಹೋಗುತ್ತಾನೆ.
ಬೆಂಗಳೂರು: ಕಳೆದ ಕೆಲವು ದಿನಗಳಿಂದ ಚಿನ್ನದ ದರ ಏರಿಕೆ, ಇಳಿಕೆಯಾಗುತ್ತಲೇ ಇದೆ. ಇಂದು ಪರಿಶುದ್ಧ ಚಿನ್ನದ ದರ ಮತ್ತುಇತರೆ ಚಿನ್ನದ ದರ ಭಾರೀ ಏರಿಕೆಯಾಗಿದೆ. ಇಂದು ಪರಿಶುದ್ಧ ಚಿನ್ನದ ದರ ಮತ್ತು ಇತರೆ ಚಿನ್ನದ ದರ ವಿವರ ಇಲ್ಲಿದೆ ನೋಡಿ. ಚಿನ್ನದ ದರ ಏರಿಕೆಕಳೆದ ವಾರ ಪರಿಶುದ್ಧ ಚಿನ್ನದ ದರ ಸತತವಾಗಿ ಬೆಲೆ ಏರಿಳಿಕೆಯಾಗುತ್ತಲೇ ಇತ್ತು. ಆದರೆ ವಾರಂತ್ಯಕ್ಕೆ ಪರಿಶುದ್ಧ ಚಿನ್ನದ ದರದಲ್ಲಿ ಕೊಂಚ ಇಳಿಕೆಯಾಗಿತ್ತು. ಪರಿಶುದ್ಧ ಚಿನ್ನದ ದರ ವಾರಂತ್ಯಕ್ಕೆ 1,56,480.00 ರೂ.ಗಳಿತ್ತು. ಆದರೆ ಇಂದು ಏರಿಕೆಯಾಗಿದ್ದು 1,56,590.00 ರೂ.ಗಳಷ್ಟಿದೆ.
ಅಹ್ಮದಾಬಾದ್: ಗುಜರಾತ್ ನ ಗಿರ್ ಅರಣ್ಯ ಪ್ರದೇಶದಲ್ಲಿ ಪ್ರವಾಸಿಗರ ಮುಂದೆಯೇ ಸಿಂಹಗಳು ಬೇಟೆಯಾಡಿದ ಭಯಾನಕ ವಿಡಿಯೋವೊಂದು ಇಲ್ಲಿದೆ ನೋಡಿ. ಸಿಂಹಗಳನ್ನು ಕಾಡಿನ ರಾಜ ಎಂದು ಸುಮ್ಮನೇ ಹೇಳಲ್ಲ. ಒಂಟಿಯಾಗಿ ಒಂದು ಪ್ರಾಣಿಯ ಕತ್ತಿಗೆ ಬಾಯಿ ಹಾಕಿತು ಎಂದರೇ ಅವುಗಳ ಕತೆ ಮುಗಿಯಿತು. ಆದರೆ ಇಲ್ಲಿ ಒಂದೇ ಸಮಯಕ್ಕೆ ಎರಡು ಸಿಂಹಗಳು ಒಟ್ಟಾಗಿ ಒಂದು ಪ್ರಾಣಿಯ ಮೇಲೆ ದಾಳಿ ಮಾಡುತ್ತವೆ. ಈ ರೀತಿ ಅವುಗಳು ಬೇಟೆಯಾಡುವ ದೃಶ್ಯ ಲೈವ್ ಕ್ಯಾಮರಾದಲ್ಲಿ ಸೆರೆಯಾಗುವುದು ಬಹಳ ಅಪರೂಪ. ಗಿರ್ ಫಾರೆಸ್ಟ್ ಏರಿ ಯಾದಲ್ಲಿ ಸಫಾರಿ ಹೋಗುತ್ತಿದ್ದಾಗ ಈ ರೀತಿ ಸಿಂಹಗಳು ಪಶುವಿನ ಮೇಲೆ ಒಟ್ಟಿಗೇ ಎರಗುವ ವಿಡಿಯೋ ಕ್ಯಾಮರಾದಲ್ಲಿ ಸೆರೆಯಾಗಿದೆ.
ಕೋಲ್ಕತ್ತಾ: ಸಾರ್ವಜನಿಕರು ಓಡಾಡುವ ರಸ್ತೆಯಲ್ಲಿ ನಮಾಜ್ ಮಾಡುವುದು, ಗೋವುಗಳ ಕಳ್ಳಸಾಗಣೆ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪಶ್ಚಿಮ ಬಂಗಾಲದ ನೂತನ ಸಿಎಂ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ಪಶ್ಚಿಮ ಬಂಗಾಲದಲ್ಲಿ ಇತ್ತೀಚೆಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ಪ್ರಚಂಡ ಬಹುಮತದೊಂದಿಗೆ ಬಿಜೆಪಿ ಅಧಿಕಾರಕ್ಕೇರಿದೆ. ಸಿಎಂ ಆದ ಬೆನ್ನಲ್ಲೇ ಸುವೇಂದು ಅಧಿಕಾರಿ ಕೆಲವು ಕಠಿಣ ನಿಯಮ ಜಾರಿಗೆ ತಂದಿದ್ದಾರೆ. ಅದರಲ್ಲಿ ನಮಾಜ್ ನಿಯಮವೂ ಒಂದು. ಇನ್ನು ಮುಂದೆ ಸಾರ್ವಜನಿಕ ರಸ್ತೆಯಲ್ಲಿ ನಮಾಜ್ ಮಾಡಿದರೆ ಕಠಿಣ ಕ್ರಮ ಕೈಗೊಳ್ಳಬೇಕಾಗುತ್ತದೆ.
ಬೆಂಗಳೂರು: ಆವತ್ತು ಅಲ್ಲಿ ಯಾರೂ ನನ್ನ ಕಡೆ ತಿರುಗಿಯೂ ನೋಡಲಿಲ್ಲ. ನನ್ನ ಅಹಂಗೆ ಅಲ್ಲಿ ಪೆಟ್ಟು ಬಿತ್ತು ಎಂದು ಸೂಪರ್ ಸ್ಟಾರ್ ರಜನೀಕಾಂತ್ ಶ್ರೀ ಶ್ರೀ ರವಿಶಂಕರ್ ಗುರೂಜಿ ಆಶ್ರಮದಲ್ಲಿ ನಡೆದ ಘಟನೆಯೊಂದನ್ನು ತಮಾಷೆಯಾಗಿ ಹೇಳಿಕೊಂಡಿದ್ದಾರೆ. ಬೆಂಗಳೂರಿನ ಆರ್ಟ್ ಆಫ್ ಲಿವಿಂಗ್ ಸೆಂಟರ್ ನಲ್ಲಿ ಈಗ ಹಬ್ಬದ ವಾತಾವರಣವಿದೆ. ಒಂದೆದೆ ರವಿಶಂಕರ್ ಗುರೂಜಿ ಜನ್ಮೋತ್ಸವವಾಗಿದ್ದರೆ ಇನ್ನೊಂದೆಡೆ ಆರ್ಟ್ ಆಫ್ ಲಿವಿಂಗ್ ಸೆಂಟರ್ ನ 45 ನೇ ವಾರ್ಷಿಕೋತ್ಸವದ ಸಂಭ್ರಮ. ಈ ಸಂಭ್ರಮದಲ್ಲಿ ರಜನೀಕಾಂತ್ ಕೂಡಾ ಭಾಗಿಯಾಗಿದ್ದಾರೆ. ಈ ವೇಳೆ ಅವರು ಹಿಂದೊಮ್ಮೆ ಆಶ್ರಮಕ್ಕೆ ಭೇಟಿ ನೀಡಿದ್ದ ಘಟನೆಯನ್ನು ನೆನಪಿಸಿಕೊಂಡಿದ್ದಾರೆ.
ಚೆನ್ನೈ: ತಮಿಳುನಾಡು ಸಿಎಂ ಜೊಸೆಫ್ ವಿಜಯ್ ತಮ್ಮ ವೈಯಕ್ತಿಕ ಜ್ಯೋತಿಷಿಗೆ ಸರ್ಕಾರಿ ಹುದ್ದೆ ನೀಡಿರುವುದಕ್ಕೆ ಮಿತ್ರ ಪಕ್ಷಗಳು ಗರಂ ಆಗಿವೆ. ಸಿಎಂಗೆ ಜ್ಯೋತಿಷಿ ಯಾಕೆ ಬೇಕು ಎಂದು ಪ್ರಶ್ನೆ ಮಾಡಿವೆ. ರಾಧಾನ್ ಪಂಡಿತ್ ವೆಟ್ರಿವೇಲ್ ಅವರನ್ನು ವಿಜಯ್ ತಮ್ಮ ವಿಶೇಷಾಧಿಕಾರಿಯಾಗಿ ನೇಮಕ ಮಾಡಿಕೊಂಡಿದ್ದಾರೆ. ವಿಜಯ್ ಸಿಎಂ ಆಗುತ್ತಾರೆ ಎಂದು ರಾಧಾನ್ ಪಂಡಿತ್ ಭವಿಷ್ಯ ನುಡಿದಿದ್ದರು. ರಾಜಕೀಯ ವ್ಯಕ್ತಿಗಳ ಆಪ್ತ ಜ್ಯೋತಿಷಿ ಅವರು. ಆದರೆ ಒಬ್ಬ ಜ್ಯೋತಿಷಿಗೆ ಸರ್ಕಾರಿ ಹುದ್ದೆ ನೀಡಿರುವುದಕ್ಕೆ ಕಾಂಗ್ರೆಸ್, ಸಿಪಿಐ ಸೇರಿದಂತೆ ಟಿವಿಕೆ ಮಿತ್ರ ಪಕ್ಷಗಳು ಗರಂ ಆಗಿವೆ.