ಹಿಂದಿ ಸಿನಿಮಾ ರಂಗದಲ್ಲಿ ತನ್ನ ಮಧುರ ಗಾಯನದಿಂದ ಗುರುತಿಸಿಕೊಂಡಿದ್ದ ಗಾಯಕ ಅರಿಜಿತ್ ಸಿಂಗ್ ಅವರ ದಿಢೀರ್ ನಿರ್ಧಾರ ಅವರ ಅಭಿಮಾನಿ ಬಳಗವನ್ನೇ ಅಚ್ಚರಿಗೆ ದೂಡಿದೆ. ಹಿನ್ನೆಲೆ ಗಾಯನದಿಂದ ಗುಡ್ಬೈ ಹೇಳುತ್ತಿರುವುದಾಗಿ ಗಾಯಕ ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ಘೋಷಣೆ ಮಾಡಿದ್ದಾರೆ. ಅವರು ತಮ್ಮ ಸಾಮಾಜಿಕ ಮಾಧ್ಯಮಕ್ಕೆ ಕರೆದೊಯ್ದು, ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಸಂದೇಶವನ್ನು ಪೋಸ್ಟ್ ಮಾಡುವಾಗ, ಅವರು ಇನ್ನು ಮುಂದೆ ಯಾವುದೇ ಹೊಸ ಹಿನ್ನೆಲೆ ಗಾಯನ ನಿಯೋಜನೆಗಳನ್ನು ತೆಗೆದುಕೊಳ್ಳುವುದಿಲ್ಲ ಎಂದು ಘೋಷಣೆ ಮಾಡಿದ್ದಾರೆ.
ಚಿಕ್ಕಬಳ್ಳಾಪುರ: ಶಿಡ್ಲಘಟ್ಟದ ನಗರಸಭೆ ಪೌರಾಯುಕ್ತೆ ಅಮೃತಗೌಡ ಅವಾಚ್ಯ ಶಬ್ದಗಳಿಂದ ನಿಂದಿಸಿಮ ಧಮ್ಕಿ ಹಾಕಿದ ಪ್ರಕರಣ ಸಂಬಂಧ ಕೈ ನಾಯಕ ರಾಜೀವ್ ಗೌಡ ಇದೀಗ ಜೈಲು ಪಾಲಾಗಿದ್ದಾರೆ.ಕೇರಳಕ್ಕೆ ಪರಾರಿಯಾಗಲು ಯತ್ನಿಸುತ್ತಿದ್ದ ವೇಳೆ ಪೊಲೀಸ್ ಕೈಗೆ ಸಿಕ್ಕಿಬಿದ್ದ ರಾಜೀವ್ರನ್ನು ವಶಕ್ಕೆ ಪಡೆದ ಪೊಲೀಸರುವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದ ಬಳಿಕ ಪೊಲೀಸರು ಇಂದು ಜೆಎಂಎಫ್ಸಿ ಕೋರ್ಟ್ ಮುಂದೆ ಹಾಜರು ಪಡಿಸಿದರು. ರಾಜೀವ್ಗೌಡ ಪರ ವಕೀಲ ವಿವೇಕ್ ರೆಡ್ಡಿ ವಾದ ಮಂಡಿಸಿ ಜಾಮೀನು ಅರ್ಜಿ ಸಲ್ಲಿಸಿದರು.ಪೊಲೀಸರ ಪರ ವಾದ ಮಂಡಿಸಿದ ವಕೀಲ ಮೊಹಮ್ಮದ್ ಖ್ವಾಜಾ, ತನಿಖೆ ಸಂಬಂಧ ಆರೋಪಿಯ ಮೊಬೈಲ್ ಅನ್ನು ಸೀಜ್
ಬೆಂಗಳೂರು: ರಾಜ್ಯದಲ್ಲಿ ಚಳಿಯ ಜತೆಗೆ ಇದೀಗ ವರುಣನ ಆಗಮನವೂ ಜನರಿಗೆ ಮತ್ತಷ್ಟು ಚಳಿಯನ್ನು ಹೆಚ್ಚಿಸಿದೆ. ನಿನ್ನೆಯೂ ರಾಜ್ಯದ ಹಲವೆಡೆ ಮಳೆಯಾಗಿದ್ದು, ಇನ್ನೂ ಬೆಂಗಳೂರಿನಲ್ಲಿ ಚಳಿಯ ತೀವ್ರತೆ ಹೆಚ್ಚುತ್ತಿದೆ. ಇದೀಗ ರಾಜ್ಯದಲ್ಲಿ ಆಗುತ್ತಿರುವ ಹವಾಮಾನ ಏರುಪೇರಿಗೆ ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಎನ್ನಲಾಗಿದೆ. ಇಂದಿನ ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ಪ್ರಕಾರ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಹಲವು ಕಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.ಇಂದು ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳ ಕಾಲ ಮೋಡ ಕವಿದ ವಾತಾವರಣ ಇರಲಿದೆ.
ಬುಧವಾರದಂದು ವಿಶೇಷವಾಗಿ ವಿಘ್ನವಿನಾಶಕ ಗಣೇಶ ಹಾಗೂ ಬುಧ ಗ್ರಹದ ಆರಾಧನೆಯನ್ನು ಮಾಡುವುದರಿಂದ ಬರುವ ಸಂಕಷ್ಟಗಳು ದೂರವಾಗುತ್ತದೆ ಎಂಬ ನಂಬಿಕೆಯಿದೆ. ಇನ್ನೂ ಯಾಕೆ ಈ ದೇವತೆಗಳನ್ನು ಪೂಜಿಸಿದರೆ ಈ ದಿನ ಅತ್ಯಂತ ಮಂಗಳಕರ ಎಂಬುದನ್ನು ಇಲ್ಲಿ ತಿಳಿಸಲಾಗಿದೆ. 1. ಗಣಪತಿ (ವಿಘ್ನೇಶ್ವರ)ಯಾವುದೇ ಕಾರ್ಯದಲ್ಲಿ ಅಡೆತಡೆಗಳು ಬಾರದಿರಲು ಬುಧವಾರ ಗಣೇಶನ ಆರಾಧನೆ ಮಾಡಲಾಗುತ್ತದೆ. ಪೂಜೆ ಹೇಗೆ?: ಗಣೇಶನಿಗೆ ಪ್ರಿಯವಾದ ಗರಿಕೆ (ದೂರ್ವೆ) ಅರ್ಪಿಸುವುದು ತುಂಬಾ ಶ್ರೇಷ್ಠ
ವಡೋದರಾ: ನಡೆಯುತ್ತಿರುವ ಮಹಿಳಾ ಪ್ರೀಮಿಯರ್ ಲೀಗ್ (WPL) 2026 ಟೂರ್ನಮೆಂಟ್ನ 17 ನೇ ಪಂದ್ಯದಲ್ಲಿ ಗುಜರಾತ್ ಜೈಂಟ್ಸ್ ವಿರುದ್ಧ ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ಫೀಲ್ಡಿಂಗ್ ಮಾಡಲು ನಿರ್ಧರಿಸಿತು. ಜೆಮಿಮಾ ರೊಡ್ರಿಗಸ್ ನೇತೃತ್ವದ ಕ್ಯಾಪಿಟಲ್ಸ್ WPL ಅಂಕಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ. ಅವರು ಮೂರು ಪಂದ್ಯಗಳನ್ನು ಗೆದ್ದಿದ್ದಾರೆ ಮತ್ತು ಆರು ಪಂದ್ಯಗಳಲ್ಲಿ ಅಷ್ಟೇ ಸೋಲುಗಳನ್ನು ಅನುಭವಿಸಿದ್ದಾರೆ. ಡೆಲ್ಲಿ -0.169 ನಿವ್ವಳ ರನ್ ರೇಟ್ನೊಂದಿಗೆ ಆರು ಅಂಕಗಳನ್ನು ಹೊಂದಿದೆ.
ಬೆಂಗಳೂರು: ಕರ್ನಾಟಕ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮಂಗಳವಾರ "6,000 ಕೋಟಿ ರೂ.ಗಳಿಗೂ ಹೆಚ್ಚು ಹಗರಣ" ಎಂದು ಆರೋಪಿಸಿ ಭಾರತೀಯ ಜನತಾ ಪಕ್ಷ (ಬಿಜೆಪಿ) ರಾಜ್ಯ ಅಬಕಾರಿ ಸಚಿವ ರಾಮಪ್ಪ ತಿಮ್ಮಾಪುರ ಅವರ ರಾಜೀನಾಮೆಗೆ ಮಾಡಿದ ಬೇಡಿಕೆಗಳನ್ನು ತಳ್ಳಿಹಾಕಿದರು. ರಾಜ್ಯದ ವಿರೋಧ ಪಕ್ಷವು ದಲಿತ ಸಚಿವರ ಹೆಸರು ಕೆಣಕಲು ಪ್ರಯತ್ನಿಸುತ್ತಿದೆ ಎಂದು ಹೇಳಿದರು. "ಇದೆಲ್ಲವೂ ನಕಲಿ. ಏನೂ ಇಲ್ಲ. ಅವರು ಹೇಳುತ್ತಿರುವುದು ರಾಜಕೀಯ ಪ್ರೇರಿತ. ಅವರು ದಲಿತ ಸಚಿವರ ಹೆಸರು ಕೆಣಕಲು ಪ್ರಯತ್ನಿಸುತ್ತಿದ್ದಾರೆ ಎಂದರು. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಅವಮಾನ ಮಾಡಲಾಗಿದೆ ಎಂಬ ಆರೋಪ ಸೇರಿದಂತೆ ವಿವಿಧ ವಿಷಯಗಳ
ಇತ್ತೀಚೆಗೆ ಸ್ಮೃತಿ ಮಂಧಾನ ಅವರೊಂದಿಗಿನ ವಿವಾಹ ರದ್ದಾದ ಸುದ್ದಿಯಲ್ಲಿರುವ ಸಂಗೀತ ಸಂಯೋಜಕ ಪಲಾಶ್ ಮುಚ್ಚಲ್, ಮರಾಠಿ ನಟ-ನಿರ್ಮಾಪಕ ವಿಜ್ಞಾನ್ ಮಾನೆ ಅವರಿಂದ ವಂಚನೆ ಆರೋಪ ಎದುರಿಸುತ್ತಿದ್ದಾರೆ, ಅವರು ತಮಗೆ ₹40 ಲಕ್ಷ ವಂಚನೆಯಾಗಿದೆ ಎಂದು ಹೇಳಿಕೊಂಡಿದ್ದಾರೆ. ಪಲಾಶ್ ಆರೋಪಗಳನ್ನು ನಿರಾಕರಿಸಿದರು, ತಮ್ಮ ವಕೀಲರೊಂದಿಗೆ ನ್ಯಾಯಾಲಯಕ್ಕೆ ಹಾಜರಾಗಿ, ಮಾನೆ ವಿರುದ್ಧ ₹10 ಕೋಟಿ ಮಾನನಷ್ಟ ಮೊಕದ್ದಮೆ ಹೂಡಿದರು.ಸಂಗೀತ ಸಂಯೋಜಕ ಮತ್ತು ಗಾಯಕನಾಗಿ ಕೆಲಸ ಮಾಡಿದ್ದಕ್ಕೆ ಹೆಸರುವಾಸಿಯಾದ ಪಲಾಶ್ ಮುಚ್ಚಲ್ ಮತ್ತೊಮ್ಮೆ ವಿವಾದದಲ್ಲಿ ಸಿಲುಕಿದ್ದಾರೆ.
ಗುವಾಹಟಿ: ಸೋಮವಾರ ಅಸ್ಸಾಂನ ಮಜುಲಿ ಜಿಲ್ಲೆಯ ವಿವಿಧ ಭಾಗಗಳಲ್ಲಿ ಸುಮಾರು 50 ವಲಸೆ ಹಕ್ಕಿಗಳ ಮೃತದೇಹಗಳು ಪತ್ತೆಯಾಗಿದ್ದು, ವಿಷಪ್ರಾಶನಕ್ಕೆ ಕಾರಣವಾಗಿರಬಹುದು ಎಂದು ಅಧಿಕಾರಿಗಳು ಶಂಕಿಸಿದ್ದಾರೆ.ವರದಿಗಳ ಪ್ರಕಾರ, ಕಮರ್ಗಾಂವ್ ಪ್ರದೇಶ ಮತ್ತು ಹತ್ತಿರದ ಪ್ರದೇಶಗಳ ಕೃಷಿ ಹೊಲಗಳಿಂದ ಮೃತದೇಹಗಳನ್ನು ವಶಪಡಿಸಿಕೊಳ್ಳಲಾಗಿದೆ. "ಪಕ್ಷಿಗಳು ಆಹಾರ ಹುಡುಕಿಕೊಂಡು ಹೊಲಗಳಿಗೆ ಬಂದಿದ್ದು, ಗುರುತಿಸಲಾಗದ ವ್ಯಕ್ತಿಗಳು ಕೃಷಿಭೂಮಿಯಲ್ಲಿ ಕೀಟನಾಶಕಗಳು ಮತ್ತು ಇತರ ರಾಸಾಯನಿಕ ವಸ್ತುಗಳನ್ನು ಬಳಸಿದ್ದಾರೆ ಎಂದು ಆರೋಪಿಸಲಾಗಿದೆ, ಇದರ ಪರಿಣಾಮವಾಗಿ ಸಾವು ಸಂಭವಿಸಿದೆ
ರಾಂಚಿ: ಪೊಲೀಸ್ ಠಾಣೆಯ ಆವರಣದಲ್ಲೇ ಪತ್ನಿಯೊಂದಿಗೆ ಸಮವಸ್ತ್ರದಲ್ಲೇ ರೋಮ್ಯಾಂಟಿಕ್ ರೀಲ್ ಮಾಡಿ ಪೊಲೀಸ್ ಅಧಿಕಾರಿ ಇದೀಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಈ ವಿಡಿಯೋ ವೈರಲ್ ಬೆನ್ನಲ್ಲೇ ಜಾರ್ಖಂಡ್ನ ಪಲಮುವಿನ ಹುಸೇನಾಬಾದ್ ಪೊಲೀಸ್ ಠಾಣೆ ಎಸ್ಡಿಪಿಒ ಮೊಹಮ್ಮದ್ ಯಾಕೂಬ್ ಅವರ ವಿರುದ್ಧ ತನಿಖೆಗೆ ಆದೇಶಿಸಲಾಗಿದೆ. ವಿಡಿಯೋದ ಸಮಯದಲ್ಲಿ ಅವರು ತಮ್ಮ ಪತ್ನಿಯ ತಲೆಯ ಮೇಲೆ ತಮ್ಮ ಕ್ಯಾಪ್ ಹಾಕುತ್ತಿರುವುದನ್ನು ಸಹ ಕಾಣಬಹುದು.
ಬೆಂಗಳೂರು: “ಪಕ್ಷದ ಕಚೇರಿ ನಿರ್ಮಾಣ ವಿಚಾರದಲ್ಲಿ ಆಸಕ್ತಿ ತೋರಿರುವ ಹಾಗೂ ತೋರದವರ ಬಗ್ಗೆ ಲಿಖಿತ ರೂಪದಲ್ಲಿ ಮಾಹಿತಿ ನೀಡುವಂತೆ ಎಐಸಿಸಿ ನಾಯಕರು ಕೇಳಿದ್ದು, ಎರಡು ದಿನಗಳಲ್ಲಿ ಮಾಹಿತಿ ನೀಡುತ್ತೇನೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.ಕೆಪಿಸಿಸಿ ಕಚೇರಿಯಲ್ಲಿ ಮಂಗಳವಾರ ನಡೆದ ಕಾಂಗ್ರೆಸ್ ಭವನ್ ಟ್ರಸ್ಟ್ ಸಮಿತಿ ಸಭೆ ಬಳಿಕ ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದರು.ಕಾಂಗ್ರೆಸ್ ಪಕ್ಷದ ನೂರು ಕಚೇರಿ ನಿರ್ಮಾಣ ಕಾರ್ಯದ ತಯಾರಿ ಬಗ್ಗೆ ಕೇಳಿದಾಗ, “ನಮ್ಮ ಪ್ರಧಾನ ಕಾರ್ಯದರ್ಶಿಗಳು
ಏಷ್ಯಾದಾದ್ಯಂತ ವಿಮಾನ ನಿಲ್ದಾಣಗಳು ಕಟ್ಟೆಚ್ಚರದಲ್ಲಿವೆ ಮತ್ತು ಭಾರತದಲ್ಲಿ ನಿಪಾ ವೈರಸ್ ಹರಡಿದ ನಂತರ ಕೋವಿಡ್ ಶೈಲಿಯ ಆರೋಗ್ಯ ತಪಾಸಣೆಗಳನ್ನು ಮತ್ತೆ ಪರಿಚಯಿಸಲು ಸೂಚಿಸಲಾಗಿದೆ. ಪಶ್ಚಿಮ ಬಂಗಾಳವು ಐದು ನಿಪಾ ಪ್ರಕರಣಗಳನ್ನು ದೃಢಪಡಿಸಿದ ನಂತರ ಥೈಲ್ಯಾಂಡ್, ನೇಪಾಳ ಮತ್ತು ತೈವಾನ್ನಂತಹ ಏಷ್ಯಾದ ದೇಶಗಳು ಫ್ಲೈಯರ್ಗಳ ತಪಾಸಣೆ ಮತ್ತು ಪರೀಕ್ಷೆಯನ್ನು ತೀವ್ರಗೊಳಿಸಿವೆ. ನಿಪಾ ಒಂದು ಸಾಂಕ್ರಾಮಿಕ ವೈರಸ್ ಆಗಿದ್ದು, ಬಾವಲಿಗಳು ಮತ್ತು ಹಂದಿಗಳಂತಹ ಪ್ರಾಣಿಗಳಿಂದ ಹರಡಬಹುದು. ಆದಾಗ್ಯೂ,
ಜಮ್ಮು: ಜಮ್ಮು ಮತ್ತು ಕಾಶ್ಮೀರದ ಉಧಂಪುರ ಜಿಲ್ಲೆಯಲ್ಲಿ ಮಂಗಳವಾರ ಬಸ್ಸೊಂದು ನಿಂತಿದ್ದ ರಸ್ತೆ ವಾಹಕ ಮತ್ತು ಮೋಟಾರ್ ೈಕಲ್ಗೆ ಡಿಕ್ಕಿ ಹೊಡೆದ ಪರಿಣಾಮ ಸಿಆರ್ಪಿಎಫ್ ಜವಾನ ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯ ಜಖಾನಿ-ಚೆನಾನಿ ಪ್ರದೇಶದ ಬಳಿ ಬೆಳಿಗ್ಗೆ 11 ಗಂಟೆ ಸುಮಾರಿಗೆ ಈ ಅಪಘಾತ ಸಂಭವಿಸಿದೆ.ದೋಡಾದಿಂದ ಜಮ್ಮುವಿಗೆ ಹೋಗುತ್ತಿದ್ದ ಬಸ್ಸಿನ ಚಾಲಕನ ನಿಯಂತ್ರಣ ತಪ್ಪಿ ಮೋಟಾರ್ ಸೈಕಲ್ಗೆ ಡಿಕ್ಕಿ ಹೊಡೆದ ನಂತರ
ಶಿವಮೊಗ್ಗ: ಶಾಲೆಯಲ್ಲಿ ಊಟದ ಬಳಿಕ 10ಕ್ಕೂ ಅಧಿಕ ಮಕ್ಕಳು ವಾಂತಿ ಮಾಡಿಕೊಂಡು, ಅಸ್ವಸ್ಥರಾಗಿರುವ ಘಟನೆ ತಾಲ್ಲೂಕಿನ ಅರಳಹಳ್ಳಿಯಲ್ಲಿರುವ ಸರ್ಕಾರ ಪ್ರಾಥಮಿಕ ಶಾಲೆಯಲ್ಲಿ ವರದಿಯಾಗಿದೆ. ಭದ್ರವಾತಿ ತಾಲೂಕಿನ ಅರಳಹಳ್ಳಿಯಲ್ಲಿರುವ ಸರ್ಕಾರಿ ಪ್ರಾಥಮಿಕ ಶಾಲೆಯ10ಕ್ಕೂ ಹೆಚ್ಚು ಮಕ್ಕಳಲ್ಲಿ ವಾಂತಿ ಕಾಣಿಸಿಕೊಂಡು ಅಸ್ವಸ್ಥರಾಗಿದ್ದಾರೆ. ಕೂಡಲೇ ಮಕ್ಕಳನ್ನು ಭದ್ರಾವತಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ.ಅಸ್ವಸ್ಥರಾದವರಲ್ಲಿ 6ನೇ ತರಗತಿ ಮಕ್ಕಳೇ ಹೆಚ್ಚಾಗಿದ್ದಾರೆ. ಇನ್ನೂ ಊಟ ಆದ ಮೇಲೆ ನೀಡಿದ ಟಾನಿಕ್ ನಿಂದ ಮಕ್ಕಳು
ರಾತ್ರಿ ಅಥವಾ ಮಧ್ಯಾಹ್ನ ಊಟವಾದ ನಂತರ ಸಾಮಾನ್ಯವಾಗಿ ನಮಗೆ ಸ್ವಲ್ಪ ಆಲಸ್ಯ ಅಥವಾ ನಿದ್ದೆ ಬರುವುದು ಸಹಜ. ಆರೋಗ್ಯದ ದೃಷ್ಟಿಯಲ್ಲಿ ಈ ಸಮಯವನ್ನು ಸರಿಯಾದ ರೀತಿಯಲ್ಲಿ ಕಳೆದರೆ ಆರೋಗ್ಯಕ್ಕೆ ತುಂಬಾನೆ ಒಳ್ಳೆಯದು. ಊಟದ ನಂತರ ನಮ್ಮ ಚಟುವಟಿಕೆ ಈ ರೀತಿ ಇದ್ದರೆ ತುಂಬಾನೇ ಒಳ್ಳೆಯದು. *ಸ್ವಲ್ಪ ಸಮಯ ನಡೆಯಿರಿ: ಊಟ ಮುಗಿದ ತಕ್ಷಣ ಒಂದೇ ಕಡೆ ಕುಳಿತುಕೊಳ್ಳಬೇಡಿ. ಸುಮಾರು 10 ರಿಂದ 15 ನಿಮಿಷಗಳ ಕಾಲ ನಿಧಾನವಾಗಿ ಅಡ್ಡಾಡುವುದರಿಂದ ಜೀರ್ಣಕ್ರಿಯೆ ಸುಲಭವಾಗುತ್ತದೆ ಮತ್ತು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯವಾಗುತ್ತದೆ. *ವಜ್ರಾಸನದಲ್ಲಿ ಕುಳಿತುಕೊಳ್ಳಿ: ನೀವು ಯೋಗ ಮಾಡುವವರಾಗಿದ್ದರೆ, ಊಟದ ನಂತರ 5-10 ನಿಮಿಷ ವಜ್ರಾಸನದಲ್ಲಿ
ಬೆಂಗಳೂರು: ಇಂದು ಕಾಂಗ್ರೆಸ್ ಮನರೇಗಾ ಉಳಿಸಿ ಹೋರಾಟ ಕೈಗೊಂಡಿತ್ತು. ಈ ವೇಳೆ ಸಿದ್ದರಾಮಯ್ಯ ಮುಂದೆ ಡಿಕೆ ಶಿವಕುಮಾರ್ ಗೆ ಕೆಲವರು ಜೈಕಾರ ಹಾಕಿದ್ದಕ್ಕೆ ಅವರು ಸಿಟ್ಟಾದ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಫ್ರೀಡಂ ಪಾರ್ಕ್ ನಲ್ಲಿ ಇಂದು ಮನರೇಗಾ ಉಳಿಸಿ ಹೋರಾಟ ಸಮಾವೇಶ ನಡೆದಿತ್ತು. ಎಐಸಿಸಿ ನಾಯಕ ರಣದೀಪ್ ಸುರ್ಜೇವಾಲ, ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸೇರಿದಂತೆ ಕಾಂಗ್ರೆಸ್ ನ ಬಹುತೇಕ ನಾಯಕರು ಈ ಸಮಾವೇಶದ ವೇದಿಕೆಯಲ್ಲಿದ್ದರು. ಈ ವೇಳೆ ಸಿದ್ದರಾಮಯ್ಯ ಭಾಷಣ ಮಾಡಲು ಮೈಕ್ ಬಳಿ ಬರುತ್ತಿರುವಾಗ ಕೆಲವರು ಡಿಕೆ ಶಿವಕುಮಾರ್ ಗೆ ಜೈಕಾರ ಕೂಗುತ್ತಿದ್ದರು. ಇದರಿಂದ ಸಿದ್ದರಾಮಯ್ಯ ಸಿಟ್ಟಾದರು.
ಉಡುಪಿ: ಉಡುಪಿಯ ಮಲ್ಪೆ ಬಂದರಿನಲ್ಲಿ ಅಪರೂಪದ ಮತ್ತು ಅಚ್ಚರಿಯ ಘಟನೆ ವರದಿಯಾಗಿದೆ, ಕತ್ತರಿಸಿದ ನಂತರವೂ ಬಂಗುಡೆ ಮೀನು ಜೀವಂತವಾಗಿ ಕಂಡುಬಂದಿದೆ.ಒಬ್ಬ ಗ್ರಾಹಕ ಬಂದರಿನಲ್ಲಿ ಮಹಿಳಾ ಮಾರಾಟಗಾರರಿಂದ ಮ್ಯಾಕೆರೆಲ್ ಖರೀದಿಸಿ ಅದನ್ನು ಕತ್ತರಿಸಲು ಕೇಳಿಕೊಂಡಿದ್ದರು.ಮಾರಾಟಗಾರ ಮೀನು ಸ್ವಚ್ಛಗೊಳಿಸಿ ಕತ್ತರಿಸಿ ಟಬ್ನಲ್ಲಿ ಇಡುತ್ತಿದ್ದಾಗ, ಒಂದು ಮೀನು ಒದ್ದಾಡಿದೆ. ಅದು ಇನ್ನೂ ಜೀವಂತವಾಗಿದೆ ಎಂದು ಸೂಚಿಸುತ್ತದೆ.
ಬೆಂಗಳೂರು: ಮನರೇಗಾ ಯೋಜನೆ ಬಡವರ ಹಕ್ಕು. ಕೇಂದ್ರ ಸರ್ಕಾರ ಇದನ್ನು ಮರು ಜಾರಿ ಮಾಡುವವರೆಗೂ ನಮ್ಮ ಹೋರಾಟ ಕೈ ಬಿಡಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಕಾಂಗ್ರೆಸ್ ನಾಯಕರು ಇಂದು ಕೇಂದ್ರ ಮನರೇಗಾ ಯೋಜನೆ ಹೆಸರು ಬದಲಾವಣೆ ಮಾಡಿದ್ದನ್ನು ವಿರೋಧಿಸಿ ಪ್ರತಿಭಟನೆ ಹಮ್ಮಿಕೊಂಡಿತ್ತು. ಈ ವೇಳೆ ಮಾತನಾಡಿದ ಡಿಕೆ ಶಿವಕುಮಾರ್ ‘ಮನರೇಗಾ ಯೋಜನೆ ಇದು ಬಡವರ ಹಕ್ಕು ಹಾಗೂ ಉದ್ಯೋಗ. ಬಡವರ ಹಕ್ಕಿಗೋಸ್ಕರ ನಾವು ಹೋರಾಟ ಮಾಡುತ್ತಿದ್ದೇವೆ. ಬಡವರಿಗೆ ಮನರೇಗಾ ಅಡಿ ಕೂಲಿ ಕೆಲಸ ಕೊಟ್ಟಿದ್ದು ಮನಮೋಹನ್ ಸಿಂಗ್ ಅವರ ಸರ್ಕಾರ.
ವಿಶಾಖಪಟ್ಟಣಂ: ನ್ಯೂಜಿಲೆಂಡ್ ವಿರುದ್ಧ ಟಿ20 ಸರಣಿಗೆ ಆರಂಭಿಕರಾಗಿ ಕಣಕ್ಕಿಳಿಯುತ್ತಿರುವ ಸಂಜು ಸ್ಯಾಮ್ಸನ್ ಈ ಒಂದು ಕಾರಣಕ್ಕಾಗಿಯಾದರೂ ಮತ್ತೆ ಫಾರ್ಮ್ ಗೆ ಮರಳಬೇಕಿದೆ. ಸಂಜು ಸ್ಯಾಮ್ಸನ್ ಕಳೆದ ಮೂರು ಪಂದ್ಯಗಳಲ್ಲೂ ಕಳಪೆ ಮೊತ್ತಕ್ಕೆ ಔಟಾಗಿದ್ದಾರೆ. ಶುಭಮನ್ ಗಿಲ್ ಬದಲಿಗೆ ಅವರಿಗೆ ಆರಂಭಿಕರಾಗಿ ತಂಡದಲ್ಲಿ ಅವಕಾಶ ನೀಡಲಾಗಿತ್ತು. ಟಿ20 ವಿಶ್ವಕಪ್ ಕೂಟದಲ್ಲೂ ಅವರೇ ಟೀಂ ಇಂಡಿಯಾ ಓಪನರ್ ಎನ್ನಲಾಗಿತ್ತು. ಆದರೆ ಸಂಜು ಪದೇ ಪದೇ ವೈಫಲ್ಯಕ್ಕೊಳಗಾಗುತ್ತಿರುವುದು ತಂಡದ ಚಿಂತೆ ಹೆಚ್ಚಿಸಿದೆ. ಹಾಗಿದ್ದರೂ ನಾಳೆ ವಿಶಾಖಪಟ್ಟಣಂನಲ್ಲಿ ನಡೆಯಲಿರುವ ನಾಲ್ಕನೇ ಟಿ20 ಪಂದ್ಯದಲ್ಲೂ ಸಂಜುಗೆ ಮತ್ತೊಂದು ಅವಕಾಶ ನೀಡಲು ಮ್ಯಾನೇಜ್ ಮೆಂಟ್ ತೀರ್ಮಾನಿಸಿದೆ.
ಬೆಂಗಳೂರು: 6 ಸಾವಿರ ಕೋಟಿಗೂ ಹೆಚ್ಚು ಮೊತ್ತದ ಅಬಕಾರಿ ಹಗರಣದ ಸಮರ್ಪಕ ತನಿಖೆ ಆಗಲೇಬೇಕು. ಹೈಕೋರ್ಟಿನ ಹಾಲಿ ನ್ಯಾಯಾಧೀಶರು ಅಥವಾ ಸಿಬಿಐನಿಂದ ಇದರ ತನಿಖೆ ಆಗಲೇಬೇಕೆಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಆಗ್ರಹಿಸಿದ್ದಾರೆ.ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಬಿಜೆಪಿ ಮತ್ತು ಜೆಡಿಎಸ್ ಒಗ್ಗೂಡಿ, ದುಷ್ಟ ಭ್ರಷ್ಟ ಕಾಂಗ್ರೆಸ್ ಸರಕಾರದ ವಿರುದ್ಧ ವಿಧಾನಸೌಧದ ಮಹಾತ್ಮ ಗಾಂಧೀಜಿ ಪ್ರತಿಮೆ ಬಳಿ ಪ್ರತಿಭಟನೆ ಮಾಡುತ್ತಿದ್ದೇವೆ. ಇದರಲ್ಲಿ ವಿಪಕ್ಷ ನಾಯಕರಾದ ಆರ್.ಅಶೋಕ್, ಛಲವಾದಿ ನಾರಾಯಣಸ್ವಾಮಿ, ಜೆಡಿಎಸ್ ನಾಯಕರಾದ ಸುರೇಶ್ ಬಾಬು, ಭೋಜೇಗೌಡರು ಸೇರಿ ಎರಡೂ ಪಕ್ಷಗಳ ಶಾಸಕರು, ವಿಧಾನಪರಿಷತ್ ಸದಸ್ಯರು ಎಲ್ಲರೂ ಇದ್ದಾರೆ ಎಂದು ತಿಳಿಸಿದರು.
ಬೆಂಗಳೂರು: ಕಮಿಷನ್, ಭ್ರಷ್ಟಾಚಾರ, ಲೂಟಿ, ದುಂಡಾವರ್ತಿ ಸರಕಾರವು ಇವತ್ತು ರಾಜ್ಯವನ್ನಾಳುತ್ತಿದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಟೀಕಿಸಿದ್ದಾರೆ.ವಿಧಾನಸೌಧದ ಮಹಾತ್ಮ ಗಾಂಧೀಜಿ ಪ್ರತಿಮೆ ಬಳಿ ಇಂದು ಪ್ರತಿಭಟನೆ ವೇಳೆ ಮಾತನಾಡಿದ ಅವರು, ಈ ಆರೋಪವನ್ನು ನಾವು ಹೇಳುತ್ತಿಲ್ಲ; ರಾಜ್ಯದ ಜನರು ಮಾತನಾಡುತ್ತಿದ್ದಾರೆ ಎಂದು ತಿಳಿಸಿದರು. ನಮಗೆ ಕೆಲವು ಸ್ನೇಹಿತರು ಕಾಂಗ್ರೆಸ್ಸಿನಲ್ಲಿದ್ದಾರೆ. ಅವರಿಗೂ ಈ ಸರಕಾರದ ವರ್ತನೆ ಬೇಸರ ತರಿಸಿದೆ. ಫೋನ್ ಮಾಡಿದರೆ, ‘ಬಿಡಬೇಡ್ರಿ ಈ ನನ್ಮಕ್ಕಳನ್ನು’ ಎನ್ನುತ್ತಾರೆ ಎಂದು ಹೇಳಿದರು.ಈ ಸರಕಾರ ಮಾಡುವ ತಪ್ಪುಗಳನ್ನು ಜನರ ಗಮನಕ್ಕೆ ತರಲೇಬೇಕಾಗಿದೆ. ಅದನ್ನು ನಾವಿವತ್ತು ಪ್ರತಿಭಟನೆ ಮೂಲಕ ಮಾಡುತ್ತಿದ್ದೇವೆ ಎಂದು ವಿವರಿಸಿದರು.
ಬೆಂಗಳೂರು: ಕೇಂದ್ರದ ವಿರುದ್ಧ ಮನರೇಗಾ ಉಳಿಸಿ ಹೋರಾಟದಲ್ಲಿ ಭಾಗಿಯಾದ ಸಿಎಂ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಅಪರೂಪದ ಸನ್ನಿವೇಶವೊಂದು ಎಲ್ಲರ ಗಮನ ಸೆಳೇದಿದೆ. ಇಂದು ಕಾಂಗ್ರೆಸ್ ಮನರೇಗಾ ಉಳಿಸಿ ಹೋರಾಟ ನಡೆಸಿತ್ತು. ಈ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್, ಕಾಂಗ್ರೆಸ್ ಹೈಕಮಾಂಡ್ ನಾಯಕ ರಣದೀಪ್ ಸುರ್ಜೇವಾಲ, ಸಚಿವ ಎಚ್ ಮಹದೇವಪ್ಪ ಸೇರಿದಂತೆ ಅನೇಕ ನಾಯಕರು ಭಾಗಿಯಾಗಿದ್ದರು. ಮನರೇಗಾ ಯೋಜನೆಯನ್ನು ಕೇಂದ್ರ ಸರ್ಕಾರ ಬದಲಾವಣೆ ಮಾಡಿದ್ದು ಸರಿಯಲ್ಲ. ಹಿಂದೆ ಇದ್ದಂತೇ ಮತ್ತೆ ಮನರೇಗಾ ಯೋಜನೆ ಪುನಸ್ಥಾಪಿಸಬೇಕು. ಬದಲಾವಣೆಯಿಂದಾಗಿ ರಾಜ್ಯಗಳಿಗೆ ಹೆಚ್ಚುವರಿ ಹೊರೆಯಾಗಿದೆ ಎಂದು ಕಾಂಗ್ರೆಸ್ ಪ್ರತಿಭಟನೆ ನಡೆಸಿದೆ.
ಬೆಂಗಳೂರು: ಅಡಿಕೆ ಬೆಲೆ ಕಳೆದ ವಾರ ಏರಿಕೆ-ಇಳಿಕೆಯಾಗಿತ್ತು. ಇಂದು ಪಟೋರ ದರ ಮಾತ್ರ ಏರಿಕೆಯಾಗಿದೆ. ಉಳಿದವು ಯಥಾಸ್ಥಿತಿಯಲ್ಲಿದೆ. ಇಂದು ಅಡಿಕೆ ಮತ್ತು ಕಾಳು ಮೆಣಸು, ಕೊಬ್ಬರಿ ದರ ಹೇಗಿದೆ ಇಲ್ಲಿದೆ ವಿವರ. ಕಳೆದ ವಾರ ಅಡಿಕೆ ಬೆಲೆಯಲ್ಲಿ ಏರಿಕೆ ಆರಂಭವಾಗಿತ್ತು. ಸತತವಾಗಿ ನಾಲ್ಕು ದಿನಗಳ ಕಾಲ ಏರಿಕೆಯಾಗಿದ್ದು ರೈತರ ಸಂತಸಕ್ಕೆ ಕಾರಣವಾಗಿತ್ತು. ಆದರೆ ಇಂದು ಯಾವುದೇ ವ್ಯತ್ಯಾಸ ಕಂಡುಬರುತ್ತಿಲ್ಲ. ಇಂದು ಹೊಸ ಅಡಿಕೆ ಬೆಲೆ 460 ರೂ.ಗಳಷ್ಟಿದೆ. ಹಳೆ ಅಡಿಕೆ ಬೆಲೆ ಯಥಾಸ್ಥಿತಿಯಲ್ಲಿದ್ದು 535 ರೂ. ಗಳಾಗಿತ್ತು. ಇಂದೂ ಅಷ್ಟೇ ಇದೆ. ಡಬಲ್ ಚೋಲ್ ಬೆಲೆಯೂ 535 ರೂ.ಗಳಷ್ಟಾಗಿದೆ.
ಬೆಂಗಳೂರು: ಚಿನ್ನದ ಬೆಲೆ ಮತ್ತೆ ಏರಿಕೆ ಮತ್ತು ಇಳಿಕೆಯಾಗುತ್ತಲೇ ಇದೆ. ಆದರೆ ಇಂದು ಪರಿಶುದ್ಧ ಚಿನ್ನದ ದರ ಏರಿಕೆಯಾದರೆ ಮತ್ತು ಇತರೆ ಚಿನ್ನದ ದರ ಯಥಾಸ್ಥಿತಿಯಲ್ಲಿದೆ. ಇಂದು ಪರಿಶುದ್ಧ ಚಿನ್ನದ ದರ ಮತ್ತು ಇತರೆ ಚಿನ್ನದ ದರ ವಿವರ ಇಲ್ಲಿದೆ ನೋಡಿ. ಚಿನ್ನದ ದರ ಏರಿಕೆಕಳೆದ ವಾರ ಪರಿಶುದ್ಧ ಚಿನ್ನದ ದರ ಸತತ ಏರಿಕೆ ಮತ್ತು ಇಳಿಕೆ ಕಂಡಿತ್ತು. ಆದರೆ ಈ ವಾರದ ಆರಂಭದಲ್ಲೇ ಚಿನ್ನದ ದರ ಏರಿಕೆಯಾಗಿತ್ತು. ಇಂದು ಪರಿಶುದ್ಧ ಚಿನ್ನದ ದರ ಮತ್ತೆ ಏರಿಕೆಯಾಗಿದೆ. ಪರಿಶುದ್ಧ ಚಿನ್ನದ ದರ ಮೊನ್ನೆ 1,59,565.00 ರೂ.ಗಳಿತ್ತು. ಇಂದು 1,63,045.00 ರೂ.ಗಳಷ್ಟಾಗಿದೆ.
ಬೆಂಗಳೂರು: ಕಿರುತೆರೆ ನಟಿ ಕಾವ್ಯ ಗೌಡ ಮತ್ತು ಆಕೆಯ ಪತಿ ಸೋಮಶೇಖರ್ ಮೇಲೆ ಹಲ್ಲೆ ನಡೆದಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಸಂಬಂಧ ದೂರು ದಾಖಲಾಗಿದೆ. ಕಾವ್ಯ ಅವರ ಸಹೋದರಿ ಈ ಸಂಬಂಧ ಠಾಣೆಯಲ್ಲಿ ದೂರನ್ನು ನೀಡಿದ್ದಾರೆ. ಕಾವ್ಯ ಅವರ ಪತಿ ಸೋಮಶೇಖರ್ ಅವರ ಅತ್ತಿಗೆಯ ತಂದೆಯಿಂದ ಹಲ್ಲೆ ನಡೆದಿದೆ ಎನ್ನಲಾಗಿದೆ. ನಟಿ ಕಾವ್ಯ ಗೌಡ ಜನಪ್ರಿಯತೆಯನ್ನ ಸಿಹಿಸಲಾಗದೇ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ.ಮನೆಗೆ ನುಗ್ಗಿ ಹಲ್ಲೆ ಮಾಡಿ, ಕಾವ್ಯ ಅವರನ್ನು ರೇಪ್ ಮಾಡುತ್ತೇವೆಂದು ಬೆದರಿಕೆ ಹಾಕಿದ್ದಾರೆ. ಮನೆಗೆ ನುಗ್ಗಿ ಅವಾವ್ಯ ಶಬ್ದಗಳಿಂದ
ಕುಕ್ಕರ್ ಬ್ಲಾಸ್ಟ್ ಆಗುವ ಮೊದಲು ಕೆಲವೊಂದು ಲಕ್ಷಣಗಳು ಕಂಡುಬರುತ್ತವೆ. ಅದನ್ನು ಮೊದಲೇ ಗುರುತಿಸಿದರೆ ಅಪಾಯ ತಪ್ಪಿಸಬಹುದು. ಪ್ರೆಷರ್ ಕುಕ್ಕರ್ ಬ್ಲಾಸ್ಟ್ ಕೆಲವೊಮ್ಮೆ ಗಂಭೀರ ಅಪಾಯಕ್ಕೆ ಕಾರಣವಾಗಬಹುದು. ಎಷ್ಟೇ ಸುರಕ್ಷಿತವಾಗಿ ಇದನ್ನು ನಿರ್ಮಿಸಿದ್ದರೂ ಹಳತಾದಂತೆ ಅಥವಾ ಇನ್ನಿತರ ಕಾರಣಗಳಿಗೆ ಬ್ಲಾಸ್ಟ್ ಆಗುವ ಅಪಾಯವಿರುತ್ತದೆ. ಗ್ಯಾಸ್ಗೆಟ್ ಸಮಸ್ಯೆ, ವಿಶಲ್ ಸಮಸ್ಯೆ, ಸೇಫ್ಟೀ ವಾಲ್ ದೋಷಗಳಿದ್ದಾಗ ಕುಕ್ಕರ್ ಬ್ಲಾಸ್ಟ್ ಆಗುವ ಸಾಧ್ಯತೆಗಳಿರುತ್ತವೆ.-ಯಾವತ್ತಿನ ಹೊತ್ತಿಗೆ ವಿಶಲ್ ಹಾಕದೇ ಇದ್ದರೆ ಅಪಾಯದ ಲಕ್ಷಣ ಎನ್ನಬಹುದು. ಪ್ರೆಷರ್ ಹಿಡಿದಿಟ್ಟುಕೊಳ್ಳಲು ಆಗದೇ ಹೋದಾಗ ಕುಕ್ಕರ್ ಬ್ಲಾಸ್ಟ್ ಆಗುತ್ತದೆ.
ಕಾಶ್ಮೀರದಲ್ಲಿ ಹಿಮಪಾತದಿಂದಾಗಿ ಮಂಗಳವಾರ ಶ್ರೀನಗರ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮತ್ತು ಅಲ್ಲಿಂದ ಹೊರಡುವ ಸುಮಾರು 50 ವಿಮಾನಗಳನ್ನು ರದ್ದುಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ."ಪ್ರತಿಕೂಲ ಹವಾಮಾನ ಪರಿಸ್ಥಿತಿಗಳು ಮತ್ತು ಶ್ರೀನಗರ ವಿಮಾನ ನಿಲ್ದಾಣದಲ್ಲಿ ನಿರಂತರ ಹಿಮಪಾತದ ಹಿನ್ನೆಲೆಯಲ್ಲಿ, ವಿಮಾನಯಾನ ಸಂಸ್ಥೆಗಳು ಇಂದಿನ ಹೆಚ್ಚಿನ ವಿಮಾನಗಳನ್ನು ರದ್ದುಗೊಳಿಸಿವೆ" ಎಂದು ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದ ಅಧಿಕಾರಿಯೊಬ್ಬರು ಇಲ್ಲಿ ತಿಳಿಸಿದ್ದಾರೆ.
ಬೆಂಗಳೂರು: ಅಬಕಾರಿ ಇಲಾಖೆಯಲ್ಲಿ ಕಮಿಷನ್ ದಂಧೆ, ಭ್ರಷ್ಟಾಚಾರ ನಡೆಯುತ್ತಿದೆ ಎಂಬ ಆರೋಪಗಳ ಬೆನ್ನಲ್ಲೇ ವಿಪಕ್ಷ ನಾಯಕ ಆರ್ ಅಶೋಕ್ ಕಮಿಷನ್ ಸಂಗ್ರಹಿಸಲು ಹೇಳಿದವರೇ ರಾಹುಲ್ ಗಾಂಧಿ ಎಂದಿದ್ದಾರೆ. ಅಬಕಾರಿ ಇಲಾಖೆ ಭ್ರಷ್ಟಾಚಾರದ ಬಗ್ಗೆ ರಾಹುಲ್ ಗಾಂಧಿಗೆ ದೂರು ನೀಡಲು ಮದ್ಯ ಮಾರಾಟಗಾರರ ಸಂಘ ತೀರ್ಮಾನಿಸಿದೆ. ಇದಕ್ಕೆ ಅಶೋಕ್ ವ್ಯಂಗ್ಯ ಮಾಡಿದ್ದಾರೆ. ‘ಅಬಕಾರಿ ಇಲಾಖೆಯಲ್ಲಿ ನಡೆಯುತ್ತಿರುವ ಎಗ್ಗಿಲ್ಲದೆ ಕಮಿಷನ್ ದಂಧೆ, ಭ್ರಷ್ಟಾಚಾರದ ಬಗ್ಗೆ ಬೇಸತ್ತಿರುವ ಮದ್ಯ ಮಾರಾಟಗಾರರ ಸಂಘ, ಈ ಬಗ್ಗೆ ರಾಹುಲ್ ಗಾಂಧಿ ಅವರಿಗೆ ದೂರು ಕೊಡಲು ಮುಂದಾಗಿರುವ ನಡೆ, ಸಿಎಂ ಸಿದ್ದರಾಮಯ್ಯ ಹಾಗು ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ನಿಜಕ್ಕೂ ನಾಚಿಕೆಗೇಡಿನ ವಿಷಯ.
ಕೋಲಾರ: ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ನೀಡಿ, ಆಕೆಯನ್ನು ಗರ್ಭಿಣಿಯನ್ನಾಗಿ ಮಾಡಿರುವ ಆರೋಪದಡಿಯಲ್ಲಿ ರೈತ ಸಂಘದ ಜಿಲ್ಲಾಧ್ಯಕ್ಷ ರಾಮೇಗೌಡರನ್ನು ಇದೀಗ ಪೊಲೀಸರು ಅರೆಸ್ಟ್ ಮಾಡಿದ್ದಾರೆ. 14ವರ್ಷದ ಸಂತ್ರಸ್ತ ಬಾಲಕಿಯ ತಂಕೋಲಾರ: ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ನೀಡಿ, ಆಕೆಯನ್ನು ಗರ್ಭಿಣಿಯನ್ನಾಗಿ ಮಾಡಿರುವ ಆರೋಪದಡಿಯಲ್ಲಿ ರೈತ ಸಂಘದ ಜಿಲ್ಲಾಧ್ಯಕ್ಷ ರಾಮೇಗೌಡರನ್ನು ಇದೀಗ ಪೊಲೀಸರು ಅರೆಸ್ಟ್ ಮಾಡಿದ್ದಾರೆ. 14ವರ್ಷದ ಸಂತ್ರಸ್ತ ಬಾಲಕಿಯ ತಂದೆ ನೀಡಿದ ದೂರಿನ ಆಧಾರದ ಮೇಲೆ ಬಂಗಾರ ಪೇಟೆ ಪೊಲೀಸರು ಆರೋಪಿಯನ್ನು ಅರೆಸ್ಟ್ ಮಾಡಿದ್ದಾರೆ. ಪ್ರಕರಣ ಕೈಗೆತ್ತಿಕೊಂಡ ಬಂಗಾರಪೇಟೆ ಪೊಲೀಸರು ಪೋಕ್ಸೋ ಕಾಯ್ದೆಯಡಿ ಆತನನ್ನು ಬಂಧಿಸಿದ್ದಾರೆ. ಈ ಘಟನೆ
ಬೆಂಗಳೂರು: ದೊಡ್ಮನೆ ಸೊಸೆ ಅಶ್ವಿನಿ ಪುನೀತ್ ರಾಜ್ ಕುಮಾರ್ ಗೆ ರಾಜಕೀಯಕ್ಕೆ ಬನ್ನಿ ಎಂದು ಡಿಕೆ ಶಿವಕುಮಾರ್ ಕರೆದಾಗ ಏನಾಯ್ತು? ಇಲ್ಲಿದೆ ಇಂಟ್ರೆಸ್ಟಿಂಗ್ ಮಾಹಿತಿ. ದಿವಂಗತ ಪುನೀತ್ ರಾಜ್ ಕುಮಾರ್ ಅವರಿಗೆ ಸಂಬಂಧಿಸಿದ ಕಾರ್ಯಕ್ರಮವೊಂದರಲ್ಲಿ ಡಿಕೆ ಶಿವಕುಮಾರ್ ಭಾಗಿಯಾಗಿದ್ದರು. ಈ ವೇಳೆ ಅವರು ಪುನೀತ್ ಜೊತೆಗಿನ ಸ್ನೇಹ ಮತ್ತು ಅವರ ಪತ್ನಿಯನ್ನು ರಾಜಕೀಯಕ್ಕೆ ಕರೆದ ಕ್ಷಣವನ್ನು ಸ್ಮರಿಸಿದ್ದರು. ‘ಪುನೀತ್ ನನಗೆ ಉತ್ತಮ ಸ್ನೇಹಿತರಾಗಿದ್ದರು. ನಮ್ಮ ಮನೆ ಪಕ್ಕದಲ್ಲೇ ಅವರ ಮನೆಯಿತ್ತು.
ಬೆಂಗಳೂರು: ಶಿಡ್ಲಘಟ್ಟ ಪೌರಯುಕ್ತೆಗೆ ಧಮ್ಕಿ ಹಾಕಿದ ಪ್ರಕರಣ ಸಂಬಂಧ ರಾಜೀವ್ ಗೌಡ ಅವರು ಪರಾರಿಯಾಗಿದ್ದರು. ಇದೀಗ ಕಾನೂನಿನ ಪ್ರಕಾರ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ಹೇಳಿದರು. ಬೆಂಗಳೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಅವರ ವಿರುದ್ಧ ಪಕ್ಷ ಕ್ರಮ ಕೈಗೊಂಡಿದೆ. ಅವರ ವಿರುದ್ಧ ಕಾನೂನು ಕ್ರಮ ದಾಖಲಾದ ಬಳಿಕ ನಾಪತ್ತೆಯಾಗಿದ್ದರು. 11 ದಿನಗಳ ಬಳಿಕ ಕೇರಳಕ್ಕೆ ಪರಾರಿಯಾಗಲು ಯತ್ನಿಸುತ್ತಿದ್ದ ವೇಳೆ ಸಿಕ್ಕಿಬಿದ್ದಿದ್ದಾರೆ. ಮುಂದೆ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುತ್ತದೆ. ರಾಜೀವ್ ಗೌಡ ಅವರಿಗೆ ಕೋರ್ಟ್ ವಿಚಾರಗಳಲ್ಲಿ ಅವರಿಗೆ ಸಂಪೂರ್ಣವಾದ ಚಿತ್ರಣ ಸಿಕ್ಕಿ ನಂತರ ಸರ್ಕಾರ ಅವರನ್ನು ಅರೆಸ್ಟ್
ವಡೋದರ: ಡಬ್ಲ್ಯುಪಿಎಲ್ ನಲ್ಲಿ ಸತತವಾಗಿ ಎರಡು ಪಂದ್ಯಗಳನ್ನು ಸೋತಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಈಗ ಸುಲಭವಾಗಿ ಫೈನಲ್ ಗೇರುವ ಅವಕಾಶವನ್ನು ಕಳೆದುಕೊಂಡಿದೆ. ನೇರವಾಗಿ ಫೈನಲ್ ಗೇರಲು ಏನು ಮಾಡಬೇಕು ನೋಡಿ.ಕಳೆದ ಪಂದ್ಯದಲ್ಲಿ ಡೆಲ್ಲಿ ವಿರುದ್ಧ ನಿನ್ನೆಯ ಪಂದ್ಯದಲ್ಲಿ ಮುಂಬೈ ವಿರುದ್ಧ ಆರ್ ಸಿಬಿ ಸೋತಿದೆ. ಈ ಎರಡು ಪಂದ್ಯಗಳ ಪೈಕಿ ಒಂದನ್ನು ಗೆದ್ದಿದ್ದರೆ ಆರ್ ಸಿಬಿ ಈಗ ನೇರವಾಗಿ ಫೈನಲ್ ಗೇರುವ ಅವಕಾಶ ಪಡೆಯುತ್ತಿತ್ತು. ಆದರೆ ಈಗ ನೇರವಾಗಿ ಫೈನಲ್ ಗೇರುವ ಅವಕಾಶ ದುರ್ಗಮವಾಗಿದೆ. ಆದರೆ ಅವಕಾಶವೇ ಇಲ್ಲವೆಂದಲ್ಲ. ಆರ್ ಸಿಬಿಗೆ ಇನ್ನೂ ಒಂದು ಲೀಗ್ ಪಂದ್ಯ ಬಾಕಿಯಿದೆ.
ಬೆಂಗಳೂರು: ರಾಧಾ ರಮಣ ಧಾರವಾಹಿ ಖ್ಯಾತಿಯ ನಟಿ ಕಾವ್ಯಾ ಗೌಡ ಮತ್ತು ಪತಿ ಸೋಮಶೇಖರ್ ಮೇಲೆ ಸಂಬಂಧಿಕರೇ ಹಲ್ಲೆ ನಡೆಸಿರುವ ಘಟನೆ ವರದಿಯಾಗಿದೆ. ರಾಧಾ ರಮಣ ಮತ್ತು ಕಾದಂಬರಿ ಧಾರವಾಹಿಗಳ ಮೂಲಕ ಖ್ಯಾತಿ ಪಡೆದಿದ್ದ ಕಾವ್ಯಾ ಗೌಡ ಮತ್ತು ಸೋಮಶೇಖರ್ ಮೇಲೆ ಅವರ ಸಮೀಪದ ಸಂಬಂಧಿಯೇ ಹಲ್ಲೆ ನಡೆಸಿದ್ದಾರೆ. ಸೋಮಶೇಖರ್ ಅಣ್ಣನ ಹೆಂಡತಿ ಅತ್ತಿಗೆ ಹಾಗೂ ಅವರ ತಂದೆಯಿಂದ ಹಲ್ಲೆ ನಡೆದಿದೆ ಎನ್ನಲಾಗಿದೆ. ಸೋಮಶೇಖರ್, ಕಾವ್ಯಾ ಗೌಡ ಮನೆಗೆ ನುಗ್ಗಿ ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಲ್ಲದೆ ಹಲ್ಲೆ ನಡೆಸಿದ್ದಾರೆ. ಕಾವ್ಯಾ ಗೌಡಗೆ ರೇಪ್ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ.
ನವದೆಹಲಿ: ದೇಶದಾದ್ಯಂತ ಇಂದು ರಾಷ್ಟ್ರೀಕೃತ ಬ್ಯಾಂಕ್ಗಳ ಸೇವೆಯಲ್ಲಿ ಭಾರೀ ವ್ಯತ್ಯಯವಾಗಲಿದೆ. ವಾರದಲ್ಲಿ ಐದು ದಿನ ಕೆಲಸದ ವ್ಯವಸ್ಥೆಯನ್ನು ಕೂಡಲೇ ಜಾರಿಗೊಳಿಸಬೇಕು ಎಂದು ಒತ್ತಾಯಿಸಿ ಬ್ಯಾಂಕ್ ನೌಕರರು ಇಂದು ಮುಷ್ಕರ ನಡೆಸಲಿದ್ದಾರೆ.ಕೇಂದ್ರ ಮುಖ್ಯ ಕಾರ್ಮಿಕ ಆಯುಕ್ತರೊಂದಿಗೆ ಜನವರಿ 23ರಂದು ನಡೆದ ಸಂಧಾನ ಸಭೆ ಯಶಸ್ವಿಯಾಗದ ಹಿನ್ನೆಲೆಯಲ್ಲಿ ಬ್ಯಾಂಕ್ ಸಂಘಟನೆಗಳ ಸಂಯುಕ್ತ ವೇದಿಕೆಈ ಮುಷ್ಕರಕ್ಕೆ ಕರೆ ನೀಡಿದೆ.ಭಾರತೀಯ ಸ್ಟೇಟ್ ಬ್ಯಾಂಕ್, ಪಂಜಾಬ್ ನ್ಯಾಷನಲ್ ಬ್ಯಾಂಕ್, ಬ್ಯಾಂಕ್ ಆಫ್ ಬರೋಡಾ ಸೇರಿದಂತೆ ಸರ್ಕಾರಿ ಸ್ವಾಮ್ಯದ ಎಲ್ಲಾ ಬ್ಯಾಂಕ್ ಗಳ ಶಾಖೆಗಳಲ್ಲಿ ರೇವಣಿ, ಹಣ ಹಿಂಪಡೆಯುವಿಕೆ, ಚೆಕ್ ಕ್ಲಿಯರ್ ನಂತಹ ಸೇವೆಗಳ ಮೇಲೆ ಪರಿಣಾಮ ಉಂಟಾಗುವ ಸಾಧ್ಯತೆಯಿದೆ.
ಬೆಂಗಳೂರು: ಕೆಲವು ದಿನಗಳ ಹಿಂದೆ ಕೇರಳ ಸಿಎಂ ಪಿಣರಾಯಿ ವಿಜಯನ್ ಟ್ವೀಟ್ ಮಾಡಿದ ಬೆನ್ನಲ್ಲೇ ಕೋಗಿಲು ಲೇಔಟ್ ನ ಅಕ್ರಮ ವಸತಿ ನಿರ್ಮಾಣ ತೆರವು ಕಾರ್ಯ ಸದ್ದು ಮಾಡಿತ್ತು. ಆದರೆ ಈಗ ನಿವಾಸಿಗಳ ಬಗ್ಗೆ ಶಾಕಿಂಗ್ ಸತ್ಯ ಹೊರಬಿದ್ದಿದೆ. ಕೇರಳ ಸಿಎಂ ಬೆಂಗಳೂರಿನ ಕೋಗಿಲು ಲೇಔಟ್ ನಿವಾಸಿಗಳನ್ನು ತೆರವುಗೊಳಿಸಿದ್ದಕ್ಕೆ ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯ, ಬುಲ್ಡೋಜರ್ ಸಂಸ್ಕೃತಿ ಎಂದು ಕರ್ನಾಟಕ ಸರ್ಕಾರದ ವಿರುದ್ಧ ಕಿಡಿ ಕಾರಿದ್ದರು. ಇದರ ಬೆನ್ನಲ್ಲೇ ಕರ್ನಾಟಕ ಇಲ್ಲಿನ ನಿವಾಸಿಗಳಿಗೆ ವಿರೋಧದ ನಡುವೆಯೂ ಪುನರ್ವಸತಿ ಕಲ್ಪಿಸಲು ಮುಂದಾಗಿದೆ.
ನವದೆಹಲಿ: ಬರ್ಮರ್ ಜಿಲ್ಲಾಧಿಕಾರಿ, ಐಎಎಸ್ ಟೀನಾ ದಾಬಿ ಗಣರಾಜ್ಯೋತ್ಸವ ವೇಳೆ ಧ್ವಜಾರೋಹಣ ಮಾಡುವಾಗ ಎಡವಟ್ಟು ಮಾಡಿಕೊಂಡಿದ್ದು ಭಾರೀ ಚರ್ಚೆಗೆ ಕಾರಣವಾಗಿದೆ. ನಿನ್ನೆ ರಿಪಬ್ಲಿಕ್ ಡೇ ಸಂಭ್ರಮಾಚರಣೆ ನಿಮಿತ್ತ ಬರ್ಮರ್ ಜಿಲ್ಲಾಧಿಕಾರಿ ಐಎಎಸ್ ಟೀನಾ ಧ್ವಜಾರೋಹಣ ಮಾಡಿದ್ದಾರೆ. ಧ್ವಜಾರೋಹಣ ಮಾಡುವಾಗ ಅವರಿಗೆ ಪಕ್ಕದಲ್ಲಿದ್ದ ಅಧಿಕಾರಿ ನೆರವಾಗಿದ್ದಾರೆ. ಧ್ವಜಾರೋಹಣ ಮಾಡಿದ ಬಳಿಕ ನಿಯಮದಂತೆ ರಾಷ್ಟ್ರಗೀತೆ ಮೊಳಗುತ್ತದೆ. ಆಗ ಅವರು ಸೆಲ್ಯೂಟ್ ಮಾಡಬೇಕು. ಆದರೆ ಟೀನಾ ಧ್ವಜಕ್ಕೆ ಬೆನ್ನು ಮಾಡಿ ನಿಂತು ಸೆಲ್ಯೂಟ್ ಮಾಡಲು ಹೊರಟಿದ್ದಾರೆ. ಅದೂ ಅವರ ಮುಖದಲ್ಲಿ ಯಾವುದೇ ಗಾಂಭೀರ್ಯತೆಯೂ ಇರಲಿಲ್ಲ.
ವಡೋದರಾ: ಡಬ್ಲ್ಯುಪಿಎಲ್ ನಲ್ಲಿ ನಿನ್ನೆ ಮುಂಬೈ ಇಂಡಿಯನ್ಸ್ ವಿರುದ್ಧ ಆರ್ ಸಿಬಿ ರಿಚಾ ಘೋಷ್ ಹೋರಾಟದ ಇನಿಂಗ್ಸ್ ಆಡಿದರೂ ಸೋತಿದೆ. ಆದರೆ ಇದು ಶುಭ ಸೂಚನೆ ಅಂತಿದ್ದಾರೆ ಫ್ಯಾನ್ಸ್. ನಿನ್ನೆಯ ಪಂದ್ಯದಲ್ಲಿ ಮುಂಬೈ ಗೆಲ್ಲಲೇಬೇಕಿತ್ತು. ಇಲ್ಲದೇ ಹೋದರೆ ಈ ಕೂಟದಿಂದ ನಿರ್ಗಮಿಸುತ್ತಿತ್ತು. ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ 199 ರನ್ ಗಳ ಗುರಿ ನೀಡಿತು. ಇದಕ್ಕೆ ಉತ್ತರವಾಗಿ ಆರ್ ಸಿಬಿ 20 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 184 ರನ್ ಗಳಿಸಲಷ್ಟೇ ಶಕ್ತವಾಯಿತು. ಆರ್ ಸಿಬಿಗೆ ಮತ್ತೆ ಟಾಪ್ ಆರ್ಡರ್ ಬ್ಯಾಟಿಗರು ಕೈ ಕೊಟ್ಟರು. ಆದರೆ ಕೆಳ ಕ್ರಮಾಂಕದಲ್ಲಿ ರಿಚಾ ಘೋಷ್ ಏಕಾಂಗಿ ಹೋರಾಟ ನಡೆಸಿದರು.
ಬೆಂಗಳೂರು: ನಟ ಡಾಲಿ ಧನಂಜಯ ಲಿಂಗಾಯತ ಪಂಗಡಕ್ಕೆ ಸೇರಿದ್ದರೂ ಮಾಂಸ ಸೇವನೆ ಮಾಡಿದ್ದು ತಪ್ಪಾ? ಹೀಗಂತ ಸೋಷಿಯಲ್ ಮೀಡಿಯಾದಲ್ಲಿ ಸಾಕಷ್ಟು ಪರ-ವಿರೋಧ ಚರ್ಚೆಗಳಾಗುತ್ತಿವೆ. ಇತ್ತೀಚೆಗೆ ಯಾವುದೋ ರೆಸ್ಟೋರೆಂಟ್ ನಲ್ಲಿ ಡಾಲಿ ಧನಂಜಯ ತಮ್ಮ ಸಂಗಡಿಗರೊಂದಿಗೆ ಕೂತು ಮಟನ್ ಬಿರಿಯಾನಿ ಸೇವಿಸುತ್ತಿರುವ ಫೋಟೋ, ವಿಡಿಯೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ. ಡಾಲಿ ಧನಂಜಯ ಲಿಂಗಾಯತ ಪಂಗಡಕ್ಕೆ ಸೇರಿದವರು. ಲಿಂಗ ಪೂಜೆ ಮಾಡುವವರು ಮಾಂಸಾಹಾರ ಸೇವನೆ ಮಾಡಲ್ಲ. ಆದರೆ ಡಾಲಿ ಮಾಂಸಾಹಾರ ಸೇವಿಸಿ ತಮ್ಮ ಪಂಗಡದ ಆಚರಣೆಗೆ ಧಕ್ಕೆ ತಂದಿದ್ದಾರೆ ಎಂದು ಕೆಲವರು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದರು.
ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ರಾಜ್ಯದ ಕೆಲವು ಜಿಲ್ಲೆಗಳಿಗೆ ತಟ್ಟಿದೆ. ಇಂದೂ ಕೆಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯ ರಾಜಧಾನಿ ಬೆಂಗಳೂರು ಮತ್ತು ಸುತ್ತಮುತ್ತಲ ಜಿಲ್ಲೆಗಳಲ್ಲಿ ನಿನ್ನೆ ಅಪರಾಹ್ನದ ವೇಳೆಗೆ ತುಂತುರು ಮಳೆ, ದಟ್ಟ ಮೋಡ ಕವಿದ ವಾತಾವರಣ ಕಂಡುಬಂದಿತ್ತು. ಇದರಿಂದಾಗಿ ಚಳಿ ಪ್ರಮಾಣ ಗಣನೀಯವಾಗಿ ಏರಿಕೆಯಾಗಿದೆ. ಇಂದೂ ಬೆಂಗಳೂರು ಸುತ್ತಮುತ್ತಲ ಜಿಲ್ಲೆಗಳಿಗೆ ಸಣ್ಣ ಮಟ್ಟಿಗಿನ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ಹೊರತುಪಡಿಸಿ ಮೈಸೂರು, ಮಂಡ್ಯ, ರಾಮನಗರ, ಚಾಮರಾಜನಗರ, ತುಮಕೂರು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಇಂದು ಮೋಡ ಕವಿದ ವಾತಾವರಣ ಮತ್ತು ಕೆಲವೆಡೆ ತುಂತುರು ಮಳೆಯಾಗುವ ಸಾಧ್ಯತೆಯಿದೆ.
ಭಗವಾನ್ ಶಿವನ ಅನುಗ್ರಹಕ್ಕಾಗಿ ದಕ್ಷಿಣಾ ಮೂರ್ತಿ ಸ್ತೋತ್ರನ್ನು ಓದಿ. ಇದರಿಂದ ಜೀವನದಲ್ಲಿ ಆಯಸ್ಸು, ಆರೋಗ್ಯ, ನೆಮ್ಮದಿ ವೃದ್ಧಿಯಾಗುತ್ತದೆ.ಶಾಂತಿಪಾಠಃಓಂ ಯೋ ಬ್ರಹ್ಮಾಣಂ ವಿದಧಾತಿ ಪೂರ್ವಂಯೋ ವೈ ವೇದಾಂಶ್ಚ ಪ್ರಹಿಣೋತಿ ತಸ್ಮೈ ।ತಂ ಹ ದೇವಮಾತ್ಮಬುದ್ಧಿಪ್ರಕಾಶಂಮುಮುಕ್ಷುರ್ವೈ ಶರಣಮಹಂ ಪ್ರಪದ್ಯೇ ॥ ಧ್ಯಾನಂಓಂ ಮೌನವ್ಯಾಖ್ಯಾ ಪ್ರಕಟಿತ ಪರಬ್ರಹ್ಮತತ್ತ್ವಂ ಯುವಾನಂವರ್ಷಿಷ್ಠಾಂತೇ ವಸದೃಷಿಗಣೈರಾವೃತಂ ಬ್ರಹ್ಮನಿಷ್ಠೈಃ ।ಆಚಾರ್ಯೇಂದ್ರಂ ಕರಕಲಿತ ಚಿನ್ಮುದ್ರಮಾನಂದಮೂರ್ತಿಂಸ್ವಾತ್ಮಾರಾಮಂ ಮುದಿತವದನಂ ದಕ್ಷಿಣಾಮೂರ್ತಿಮೀಡೇ ॥ 1 ॥ ವಟವಿಟಪಿಸಮೀಪೇಭೂಮಿಭಾಗೇ ನಿಷಣ್ಣಂಸಕಲಮುನಿಜನಾನಾಂ ಜ್ಞಾನದಾತಾರಮಾರಾತ್ ।ತ್ರಿಭುವನಗುರುಮೀಶಂ ದಕ್ಷಿಣಾಮೂರ್ತಿದೇವಂಜನನಮರಣದುಃಖಚ್ಛೇದದಕ್ಷಂ ನಮಾಮಿ ॥ 2 ॥ ಚಿತ್ರಂ ವಟತರೋರ್ಮೂಲೇ ವೃದ್ಧಾಃ ಶಿಷ್ಯಾ ಗುರುರ್ಯುವಾ ।ಗುರೋಸ್ತು ಮೌನಂ ವ್ಯಾಖ್ಯಾನಂ ಶಿಷ್ಯಾಸ್ತುಚ್ಛಿನ್ನಸಂಶಯಾಃ ॥ 3 ॥
ಮಂಗಳೂರು: ಶಿಡ್ಲಘಟ್ಟ ಪೌರಾಯುಕ್ತೆಗೆ ಧಮ್ಕಿ ಹಾಕಿ ಪ್ರಕರಣ ದಾಖಲಾದ ಬೆನ್ನಲ್ಲೇ ನಾಪತ್ತೆಯಾಗಿದ್ದ ಕಾಂಗ್ರೆಸ್ ನಾಯಕ ರಾಜೀವ್ ಗೌಡ ಇದೀಗ ಖಾಕಿ ಬಲೆಗೆ ಬಿದ್ದಿದ್ದಾರೆ. ಪೌರಾಯುಕ್ತೆಗೆ ಜೀವ ಬೆದರಿಕೆ ಹಾಕಿ ಎಸ್ಕೇಪ್ ಆಗಿದ್ದ ರಾಜೀವ್ ಗೌಡನನ್ನು ಕೇರಳದಲ್ಲಿ ಬಂಧಿಸಲಾಗಿದೆ. ನಿನ್ನೆ ಮಂಗಳೂರಿನಿಂದ ರೈಲಿನಲ್ಲಿ ಕೇರಳಕ್ಕೆ ಪರಾರಿಯಾಗಿದ್ದ ರಾಜೀವ್ ಗೌಡನನ್ನು ಚಿಕ್ಕಬಳ್ಳಾಪುರ ಪೊಲೀಸರು ಕೊನೆಗೂ ಅರೆಸ್ಟ್ ಮಾಡಿದ್ದಾರೆ.ಧಮ್ಕಿ ಪ್ರಕರಣದ ಬಳಿಕ ತಲೆಮರೆಸಿಕೊಂಡಿದ್ದ ರಾಜೀವ್ ಗೌಡ, 12 ದಿನಗಳ ಬಳಿಕ ಲಾಕ್ ಆಗಿದ್ದಾರೆ.
ಸೋಮವಾರ ವಡೋದರಾದ ಕೋಟಂಬಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ನಡೆದ WPL 2026 ರ 16 ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವು ಗೆಲುವು ಸಾಧಿಸಿತು. ಈ ಮೂಲಕ ಎರಡು ಬಾರಿ WPL ಚಾಂಪಿಯನ್ಗಳು ಎಂಬುದನ್ನು ಮುಂಬೈ ಇಂಡಿಯನ್ಸ್ ವನಿತೆಯರು ತೋರಿಸಿಕೊಟ್ಟರು. ಬೆಂಗಳೂರು ವಿರುದ್ಧದ ಗೆಲುವಿನೊಂದಿಗೆ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಪಾಯಿಂಟ್ಸ್ ಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೆ ಜಿಗಿದಿದೆ.
ಬೆಂಗಳೂರು: ಉಪೇಂದ್ರ ಹಾಗೂ ರಮ್ಯಾ ಅವರು ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದು, ಕಾರಣಾಂತರದಿಂದ ಬಿಡುಗಡೆ ವಿಳಂಬವಾಗಿದ್ದ ‘ರಕ್ತ ಕಾಶ್ಮೀರ’ ಸಿನಿಮಾ ಶೀಘ್ರದಲ್ಲೇ ತೆರೆಗೆ ಬರಲಿದೆ.ಹಲವು ವರ್ಷಗಳ ಹಿಂದೆಯೇ ‘ರಕ್ತ ಕಾಶ್ಮೀರ’ ಸಿನಿಮಾದ ಶೂಟಿಂಗ್ ನಡೆದಿತ್ತು. ಕಾರಣಾಂತರಗಳಿಂದ ಚಿತ್ರದ ಕೆಲಸಗಳು ಪೂರ್ಣಗೊಳ್ಳುವುದು ತಡವಾಗಿತ್ತು. ಜನವರಿ 30ರಂದು ಈ ಸಿನಿಮಾ ಬಿಡುಗಡೆ ಆಗಲಿದೆ. ಎಸ್.ವಿ. ರಾಜೇಂದ್ರ ಸಿಂಗ್ ಬಾಬು ನಿರ್ದೇಶನದ ಈ ಚಿತ್ರವನ್ನು ‘ಎಂಡಿಎಂ ಪ್ರೊಡಕ್ಷನ್ಸ್’ ಮೂಲಕ ‘ರಕ್ತ ಕಾಶ್ಮೀರ’ ಸಿನಿಮಾ ನಿರ್ಮಾಣ ಆಗಿದೆ. ಮುಖೇಶ್ ರಿಶಿ, ದೊಡ್ಡಣ್ಣ, ಓಂ ಪ್ರಕಾಶ್ ರಾವ್, ತೆಲುಗು ನಟಿ ಅನಿಲ, ಕುರಿ ಪ್ರತಾಪ್ ಮುಂತಾದವರು ಪಾತ್ರವರ್ಗದಲ್ಲಿ ಇದ್ದಾರೆ.
ಗುವಾಹಟಿ: ಭಾರತ ಟಿ20 ಕ್ರಿಕೆಟ್ ತಂಡದ ಆರಂಭಿಕ ಬ್ಯಾಟರ್ ಅಭಿಷೇಕ್ ಶರ್ಮಾ ಮೈದಾನದಲ್ಲಿ ರನ್ ಹೊಳೆ ಹರಿಸುತ್ತಿದ್ದಾರೆ. ವಿಶ್ವದ ನಂಬರ್ 1 ಬ್ಯಾಟರ್ ಆಗಿರುವ ಅವರು ಎದುರಾಳಿ ಬೌಲರ್ಗಳನ್ನು ಮನಬಂದಂತೆ ದಂಡಿಸುತ್ತಿದ್ದಾರೆ. ನ್ಯೂಜಿಲೆಂಡ್ ವಿರುದ್ಧ ಮೊದಲ ಟಿ20 ವಿರುದ್ಧ ಅಬ್ಬರಿಸಿದ್ದ ಅಭಿಷೇಕ್ ಅವರು ಭಾನುವಾರ ನಡೆದ ಮೂರನೇ ಪಂದ್ಯದಲ್ಲೂ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ್ದರು. ಅವರ ಆಟದ ನೆರವಿನಿಂದ ಭಾರತ 8 ವಿಕೆಟ್ಗಳಿಂದ ಗೆದ್ದು, ಸರಣಿಯನ್ನು ವಶ ಮಾಡಿಕೊಂಡಿತ್ತು.ಭಾರತ ತಂಡದ ಆರಂಭಿಕ ಬ್ಯಾಟ್ಸ್ಮನ್ ಅಭಿಷೇಕ್ ಶರ್ಮಾ ಅವರು 300ಕ್ಕೂ ಅಧಿಕ ಸ್ಟ್ರೈಕ್ ರೇಟ್ನಲ್ಲಿ ರನ್ ಗಳಿಸಿ ಎಲ್ಲರಿಗೂ ಅಚ್ಚರಿ ಮೂಡಿಸಿದರು. ಅವರು ಆಡಿದ ಕೇವಲ 20 ಎಸೆತಗಳಲ್ಲಿ 5 ಸಿಕ್ಸರ್ ಹಾಗೂ 7 ಬೌಂಡರಿಗಳೊಂದಿಗೆ 68 ರನ್ಗಳನ್ನು ಸಿಡಿಸಿದರು. ಅಲ್ಲದೆ 340ರ ಸ್ಟ್ರೈಕ್ ರೇಟ್ನಲ್ಲಿ ರನ್ ಬಾರಿಸಿ ಕಿವೀಸ್ ಆಟಗಾರರಿಗೆ ಶಾಕ್ ನೀಡಿದರು.
ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಜಾರಿಗೊಳಿಸಬೇಕು. ಈ ಮೂಲಕ ಅಕ್ರಮ ಬಾಂಗ್ಲಾ ವಲಸಿಗರನ್ನು ಅವರ ದೇಶಕ್ಕೆ ಗಡೀಪಾರು ಮಾಡಬೇಕು ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರದ ಮೂಲಕ ಒತ್ತಾಯಿಸಿದ್ದಾರೆ. ರಾಜ್ಯ ಕಾಂಗ್ರೆಸ್ ಸರ್ಕಾರದ ವೈಫಲ್ಯದಿಂದ ಕರ್ನಾಟಕ ಬಾಂಗ್ಲಾ ನಿವಾಸಿಗಳ ತವರೂರಾಗಿದೆ. ರಾಜ್ಯದಲ್ಲಿರುವ ಪ್ರತಿಯೊಬ್ಬ ಬಾಂಗ್ಲಾದೇಶೀಯರನ್ನು ಎಸ್ಐಆರ್ ಮಾದರಿಯಂತೆ ಪತ್ತೆ ಮಾಡಿ, ಅವರ ದಾಖಲಾತಿಯನ್ನು ಅಳಿಸುವುದು ಹಾಗೂ ಅವರ ದೇಶಕ್ಕೆ ಗಡಿಪಾರು ಮಾಡಿ ಎಂದು ಮನವಿ ಮಾಡಿದ್ದೇನೆ ಎಂದು ಎಕ್ಸ್ನಲ್ಲಿ ತಿಳಿಸಿದ್ದಾರೆ.
ದೇಶ ವಿದೇಶದಲ್ಲೂ ಭಾರೀ ಸದ್ದು ಮಾಡಿದ ಹಿಂದಿ ಸಿನಿಮಾ ಧುರಂಧರ್ನಲ್ಲಿ ಅಭಿನಯಿಸಿದ ನಟ ನದೀಮ್ ಖಾನ್ ಅವರನ್ನು ಅರೆಸ್ಟ್ ಮಾಡಲಾಗಿದೆ. ಮದುವೆಯ ನೆಪದಲ್ಲಿ ಸುಮಾರು ಒಂದು ದಶಕದಿಂದ ತನ್ನ ಮನೆಕೆಲಸದಾಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಬಂಧನವಾಗಿದೆ ಎಂದು ತಿಳಿದುಬಂದಿದೆ.41 ವರ್ಷದ ದೂರುದಾರ ಆಕೆಯನ್ನು ಮದುವೆಯಾಗಲು ನಿರಾಕರಿಸಿದ ನಂತರ ಪೊಲೀಸರನ್ನು ಸಂಪರ್ಕಿಸಿದರು, ನಂತರ ಪ್ರಕರಣವನ್ನು ಮಾಲ್ವಾನಿ ಪೊಲೀಸರಿಗೆ ವರ್ಗಾಯಿಸಲಾಯಿತು.
ಪುಟ್ಟಕ್ಕನ ಮಕ್ಕಳುʼಧಾರಾವಾಹಿಯಿಂದ ಹೆಚ್ಚು ಖ್ಯಾತಿ ಗಳಿಸಿದ ನಟಿ ಸಂಜನಾ ಬುರ್ಲಿ ಅವರು ಸದ್ದಿಲ್ಲದೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಸಂಜನಾ ಅವರು ಪ್ರಸ್ತುತ ಕಲರ್ಸ್ ಕನ್ನಡದ ಶ್ರೀಗಂಧದಗುಡಿ ಸೀರಿಯಲ್ನಲ್ಲಿ ನಾಯಕಿಯಾಗಿ ಅಭಿನಯಿಸುತ್ತಿದ್ದಾರೆ. ಎಂಗೇಜ್ಮೆಂಟ್ ಆಗಿರುವ ಬಗ್ಗೆ ಸಂಜನಾ ಅವರು ತಮ್ಮ ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ತಮ್ಮ ಮದುವೆಯ ಸಿಹಿ ಸುದ್ದಿಯನ್ನ ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಂಡಿದ್ದಾರೆ.
ವಡೋದರ: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಇಂದು ಮಹತ್ವದ ಪಂದ್ಯ. ಮಹಿಳಾ ಪ್ರೀಮಿಯರ್ ಲೀಗ್ನಲ್ಲಿ ಇಂದು ಮುಂಬೈ ಇಂಡಿಯನ್ಸ್ ತಂಡವನ್ನು ಎದುರಿಸಲಿದ್ದು, ಗೆದ್ದರೆ ನೇರ ಫೈನಲ್ ಪ್ರವೇಶ ಪಡೆಯಿತು. ಸ್ಮೃತಿ ಮಂದಾನ ನೇತೃತ್ವದ ತಂಡವು ಟೂರ್ನಿಯ ಅಂಕಪಟ್ಟಿಯಲ್ಲಿ ಪ್ರಸ್ತುತ 10 ಅಂಕಗಳೊಂದಿಗೆ ಅಗ್ರಸ್ಥಾನದಲ್ಲಿದೆ. ಅಲ್ಲದೇ ಪ್ಲೇ ಆಫ್ ಕೂಡ ಪ್ರವೇಶಿಸಿದೆ. ಆದರೆ ಮುಂಬೈ ಸ್ಥಿತಿ ಚೆನ್ನಾಗಿಲ್ಲ. ಕೇವಲ 4 ಅಂಕ ಗಳಿಸಿ ನಾಲ್ಕನೇ ಸ್ಥಾನದಲ್ಲಿದೆ. ಆರ್ಸಿಬಿಯು ಮೈಮರೆಯುವಂತಿಲ್ಲ. ಡೆಲ್ಲಿ ಕ್ಯಾಪಿಟಲ್ಸ್ ಎದುರಿನ ಸೋಲಿನಿಂದ ಬಹಳಷ್ಟು ಪಾಠಗಳನ್ನು ಕಲಿಯಬೇಕಿದೆ. ಪ್ರಮುಖವಾಗಿ ಬ್ಯಾಟಿಂಗ್ ವೈಫಲ್ಯದಿಂದ ಹೊರಬರಬೇಕಿದೆ. ಕೋತಂಬಿ ಕ್ರೀಡಾಂಗಣದ ಪಿಚ್ ಬೌಲರ್ಗಳಿಗೆ ಹೆಚ್ಚು ನೆರವು ಕೊಡುತ್ತಿರುವುದರಿಂದ ಆರ್ಸಿಬಿ ಬ್ಯಾಟರ್ಗಳು ತಮ್ಮ ಕೌಶಲಗಳಿಗೆ ಸಾಣೆ ಹಿಡಿಯಬೇಕಿದೆ.
ನವದೆಹಲಿ: ಬಾಹ್ಯಾಕಾಶ ನೌಕೆಯಲ್ಲಿ ಹೊಸ ಇತಿಹಾಸ ಬರೆದ ಗಗನಯಾತ್ರಿ ಶುಭಾಂಶು ಶುಕ್ಲಾಗೆ ಅವರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಭಾರತದ ಅತ್ಯುನ್ನತ ಶಾಂತಿಕಾಲದ ಶೌರ್ಯ ಪ್ರಶಸ್ತಿ ಅಶೋಕ ಚಕ್ರವನ್ನ ಪ್ರದಾನ ಮಾಡಿದರು.ಬಾಹ್ಯಾಕಾಶದಲ್ಲಿ ಭಾರತದ ಪತಾಕೆ ಹಾರಿಸಿದಂತಹ ಮಹತ್ತರ ಕೀರ್ತಿ ಶುಭಾಂಶು ಅವರಿಗೆ ಸಲ್ಲುತ್ತದೆ. ಈ ಅನನ್ಯ ಸಾಧನೆ ಮತ್ತು ಧೈರ್ಯಕ್ಕಾಗಿ ಅಶೋಕ ಚಕ್ರ ಶ್ರೇಷ್ಠ ಗೌರವವನ್ನ ನೀಡಲಾಗಿದೆ. ಈ ಪ್ರಶಸ್ತಿಯು ಶುಕ್ಲಾ ಅವರು ರಾಷ್ಟ್ರಕ್ಕಾಗಿ ನೀಡಿದ ಅಪ್ರತಿಮ ಕೊಡುಗೆಯನ್ನ ಸ್ಮರಿಸುತ್ತದೆ. ಗಣರಾಜ್ಯೋತ್ಸವ ಸಂಭ್ರಮದಲ್ಲಿ ಅದನ್ನು ಪ್ರದಾನ ಮಾಡಲಾಯಿತು.ಅಶೋಕ ಚಕ್ರವು ಭಾರತದ ಅತ್ಯುನ್ನತ ಶಾಂತಿಕಾಲದ ಶೌರ್ಯ ಪ್ರಶಸ್ತಿಯಾಗಿದೆ. ಯುದ್ಧಭೂಮಿಯ ಹೊರಗೆ ತೋರುವ ಅದ್ಭುತ ಸಾಹಸ, ಆತ್ಮತ್ಯಾಗ ಅಥವಾ ಧೈರ್ಯಕ್ಕಾಗಿ ಸೈನಿಕರು ಮತ್ತು ನಾಗರಿಕರಿಗೆ ನೀಡಲಾಗುತ್ತದೆ.
ಬೆಂಗಳೂರು: ಯುಪಿಎ ಸರ್ಕಾರ ಜಾರಿಗೊಳಿಸಿದ ಮನರೇಗಾ ಉಳಿಸುವ ಸಲುವಾಗಿ ಮಂಗಳವಾರ ರಾಜಭವನ ಚಲೋ ನಡೆಸಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.ಕೆಪಿಸಿಸಿ ಕಚೇರಿ ಬಳಿ ಮಾಧ್ಯಮಗಳಿಗೆ ಸೋಮವಾರ ಪ್ರತಿಕ್ರಿಯೆ ನೀಡಿದರು ಪ್ರತಿ ತಾಲ್ಲೂಕಿನಲ್ಲೂ ಕನಿಷ್ಠ ಐದು ಕಿಲೋಮೀಟರ್ ಪಾದಯಾತ್ರೆ ನಡೆಸಲಾಗುವುದು. ಪ್ರತಿ ಪಂಚಾಯತಿ ಮಟ್ಟದಲ್ಲೂ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಹೇಳಿದರು. .20 ವರ್ಷಗಳ ಹಿಂದೆ ಸೋನಿಯಾಗಾಂಧಿ ಅವರ ನಾಯಕತ್ವದಲ್ಲಿ ಮನಮೋಹನ್ ಸಿಂಗ್ ಅವರ ಸರ್ಕಾರ ಜಾರಿಗೆ ತಂದಿದ್ದ ಸಾಂವಿಧಾನಿಕ ಹಕ್ಕಾಗಿ ಬಂದಿರುವ ಮನರೇಗಾವನ್ನು ನಾಶ ಮಾಡಲು ಹೊರಟಿರುವುದು ನಮಗೆಲ್ಲಾ ಆಶ್ಚರ್ಯ ಉಂಟು ಮಾಡಿದೆ. ಮಹಾತ್ಮಗಾಂಧಿ ಅವರ ಹೆಸರಿನಲ್ಲಿ ಪ್ರಾರಂಭವಾದ ಯೋಜನೆ ಗ್ರಾಮೀಣ ಭಾಗದ ಜನರ ಉದ್ಯೋಗದ ಹಕ್ಕಿಗೆ ಖಾತ್ರಿ ನೀಡಿತ್ತು ಎಂದರು.
ಇಂದಿನ ಆಹಾರ ಪದ್ಧತಿಯಿಂದಾಗಿ ಹೆಚ್ಚಿನವರಲ್ಲಿ ಗ್ಯಾಸ್ಟಿಕ್ ಸಮಸ್ಯೆಗಳು ಕಾಣಿಸುತ್ತದೆ. ಇನ್ನೂ ಈ ಸಮಸ್ಯೆಗೆ ಆಹಾರ ಕ್ರಮ ಬದಲಾವಣೆ ಜತೆಗೆ ಮನೆಮದ್ದನ್ನು ಮಾಡುವುದು ಒಳ್ಳೆಯದು.ಗ್ಯಾಸ್ಟ್ರಿಕ್ ಅಥವಾ ಹೊಟ್ಟೆ ಉಬ್ಬರದ ಸಮಸ್ಯೆಗೆ ಅಡುಗೆಮನೆಯಲ್ಲಿಯೇ ಸುಲಭವಾಗಿ ಸಿಗುವ ಪದಾರ್ಥಗಳ ಮೂಲಕ ಪರಿಹಾರ ಕಂಡುಕೊಳ್ಳಬಹುದು. ನಿಮಗಾಗಿ ಕೆಲವು ಪರಿಣಾಮಕಾರಿ ಮನೆಮದ್ದುಗಳು ಇಲ್ಲಿವೆ: