ಮಂಗಳೂರು: ರಾಜ್ಯದ ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಈ ಬಾರಿ ವಾಡಿಕೆಗಿಂತ ಅಧಿಕ ಮಳೆಯಾಗಿದ್ದರಿಂದ ಕೃಷಿಕರು ಕಂಗಾಲಾಗಿದ್ದಾರೆ. ಅಡಿಕೆ ಮರಗಳಲ್ಲಿ ಉಳಿದ ಬೆಳೆಯನ್ನು ಉಳಿಸಿಕೊಳ್ಳುವುದೇ ದೊಡ್ಡ ಸವಾಲಾಗಿದೆ. ಕರಾವಳಿ ಪ್ರದೇಶದಲ್ಲಿ ಕಳೆದ ಕೆಲ‌ ದಿನಗಳಿಂದ ನಿರಂತರವಗಿ ಸುರಿಯುತ್ತಿರುವುದರಿಂದ ಮಳೆಯಿಂದಾಗಿ ರೋಗದಿಂದಾಗಿ ಕಾಯಿ ಅಡಿಕೆಗಳು‌ ಬೀಳುತ್ತಿದ್ದು, ಇದರಿಂದ ರೈತರು ಕಂಗಲಾಗಿದ್ದಾರೆ. ಒಂದೆಡೆ ಅಡಿಕೆ ಧಾರಣೆ ಕುಸಿತದ ಬಿಸಿ ತಟ್ಟಿದರೆ, ಮತ್ತೊಂದೆಡೆ ಇಳುವರಿ ಮೇಲೆ ನೇರ ಪರಿಣಾಮ ಬೀರುತ್ತಿದೆ. ನಿರಂತರ ಮಳೆಯಿಂದಾಗಿ ಕೊಯ್ಲಿ ಮಾಡಿರುವ ಅಡಿಕೆಗಳನ್ನು ಒಣಗಿಸಲು ಸಾಧ್ಯವಾಗುತ್ತಿಲ್ಲ. ಇನ್ನೊಂದೆಡೆ ಕಾಯಿ ಅಡಿಕೆಗಳು ಉದುರುತ್ತಿದೆ. ಇದು‌ ಮುಂದಿನ ಅಡಿಕೆ‌ ಇಳುವರಿ‌ ಮೇಲೆ ನೇರ ಪರಿಣಾಮ ಬೀರುತ್ತದೆ ಎಂದು ಬೆಳ್ತಂಗಡಿ ತಾಲ್ಲೂಕಿನ ಮರೋಡಿಯ ಅಡಿಕೆ ಬೆಳೆಗಾರ ಲಿಂಗಪ್ಪ ಪೂಜಾರಿ ಹೇಳಿದ್ಧರೆ.

ಬೆಂಗಳೂರು: ಧರ್ಮಸ್ಥಳ ಚಲೋ ಮೆರವಣಿಗೆಯಲ್ಲಿ ತೆರಳುತ್ತಿದ್ದ ನಮ್ಮ ನಾಯಕರು ಮತ್ತು ಚುನಾಯಿತ ಪ್ರತಿನಿಧಿಗಳ ವಿಡಿಯೋ ಸೆರೆಹಿಡಿದು ಹಾನಿಕಾರಕ ಕಂಟೆಂಟ್ ಹಾಕಿದ್ದಾರೆ. ಇದನ್ನು ತಡೆಯಲು ಸರಕಾರ, ಗೃಹ ಇಲಾಖೆ ಕ್ರಮ ವಹಿಸಿಲ್ಲ ಎಂದು ಮಾಜಿ ಉಪಮುಖ್ಯಮಂತ್ರಿ ಹಾಗೂ ಶಾಸಕ ಡಾ. ಸಿ.ಎನ್. ಅಶ್ವತ್ಥನಾರಾಯಣ್ ಅವರು ಆಕ್ಷೇಪಿಸಿದ್ದಾರೆ.ನಗರದಲ್ಲಿ ಮಾಧ್ಯಮಗಳ ಜೊತೆ ಇಂದು ಮಾತನಾಡಿದ ಅವರು, ಸೌಜನ್ಯ ವಿಚಾರದಲ್ಲಿ ಯಾವುದೇ ಒಪ್ಪಂದದ ನಡೆ ಇಲ್ಲ ಎಂದು ಸ್ಪಷ್ಟಪಡಿಸಿದರು. ಸೌಜನ್ಯರ ತಾಯಿ ಇಟ್ಟಿರುವ ಬೇಡಿಕೆಯ ಪರವಾಗಿ ಇರುವುದಾಗಿ ನಮ್ಮ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ತಿಳಿಸಿದ್ದಾರೆ. ಅವರ ಮನೆಗೂ ಭೇಟಿ ಕೊಟ್ಟಿದ್ದಾರೆ ಎಂದರು. ಧರ್ಮದ ವಿಚಾರದಲ್ಲಿ ಇಂಥ ಹುಡುಗಾಟ ಮಾಡಿದರೆ, ನಾವು ಸಹಿಸುವುದಿಲ್ಲ ಎಂದರು.

ಅಂಜನಾದ್ರಿ ಕ್ಷೇತ್ರದ ಅಭಿವೃದ್ಧಿಗೆ ಸಂಬಂಧಿಸಿದಂತೆ ಇಂದು ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಕಾವೇರಿ ನಿವಾಸದಲ್ಲಿ ನಡೆದ ಸಭೆ ನಡೆಯಿತು. ಈ ವೇಳೆ ಅಂಜನಾದ್ರಿ ಕ್ಷೇತ್ರದ ಅಭಿವೃದ್ಧಿಗೆ ಕೈಗೊಳ್ಳಬೇಕಾದ ಕೆಲಸಗಳ ಬಗ್ಗೆ ಮಹತ್ವದ ತೀರ್ಮಾನಗಳನ್ನು ತೆಗೆದುಕೊಳ್ಳಲಾಯಿತು. ಅದರ ಮುಖ್ಯಾಂಶಗಳು ಇಲ್ಲಿದೆ ನೋಡಿ. * ಹನುಮ ಜಯಂತಿ ಸಂದರ್ಭದಲ್ಲಿ ಲಕ್ಷಾಂತರ ಜನರು ಬೆಟ್ಟಕ್ಕೆ ಭೇಟಿ ನೀಡುತ್ತಾರೆ. ಉತ್ತರ ಭಾರತದ ಪ್ರವಾಸಿಗರು ಸಹ ಹೆಚ್ಚಿನ ಸಂಖ್ಯೆಯಲ್ಲಿ ಕ್ಷೇತ್ರಕ್ಕೆ ಭೇಟಿ ನೀಡುತ್ತಾರೆ.‌ ಯಾತ್ರಿಕರು ಉಳಿದುಕೊಳ್ಳಲು ಡಾರ್ಮೆಟರಿ ವ್ಯವಸ್ಥೆ, ಹಿರಿಯ ಭಕ್ತಾಧಿಗಳು ಬೆಟ್ಟವೇರಲು ಅನುಕೂಲವಾಗುವಂತೆ ಮೆಟ್ಟಿಲುಗಳ ವ್ಯವಸ್ಥೆ, ಸಮುದಾಯ ಭವನ ನಿರ್ಮಾಣ ಹಾಗೂ ಇತರ ಪ್ರವಾಸಿ ಸೌಲಭ್ಯಗಳು ಸೇರಿ ಕ್ಷೇತ್ರದ ಸುತ್ತ ಮುತ್ತ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿ ಪಡಿಸಬೇಕಿದೆ.

ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸಂಭ್ರಮಾಚರಣೆಯ ವೇಳೆ ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಉಂಟಾದ ಕಾಲ್ತುಳಿತ ದುರಂತದ ಬಗ್ಗೆ ಆರ್‌ಸಿಬಿ ತಂಡದ ತಾರೆ ವಿರಾಟ್ ಕೊಹ್ಲಿ ಮೂರು ತಿಂಗಳ ಬಳಿಕ ಮೌನ ಮುರಿದಿದ್ದಾರೆ.ಐಪಿಎಲ್‌ ಟೂರ್ನಿಯಲ್ಲಿ ಚೊಚ್ಚಲ ಟ್ರೋಫಿ ಗೆದ್ದ ಆರ್‌ಸಿಬಿ ತಂಡದ ಸಂಭ್ರಮಾಚರಣೆಯ ವೇಳೆ ಉಂಟಾದ ಕಾಲ್ತುಳಿತ ದುರಂತದಲ್ಲಿ 11 ಮಂದಿ ಮೃತಪಟ್ಟರೆ, ಹಲವು ಮಂದಿ ಗಾಯಗೊಂಡಿದ್ದರು. ಈ ಬಗ್ಗೆ ಕೊಹ್ಲಿ ಭಾವುಕ ಸಂದೇಶವನ್ನು ಹಂಚಿದ್ದಾರೆ.ಕಾಲ್ತುಳಿತದ ದುರಂತ ಬಳಿಕ ಕೊಹ್ಲಿ ಅವರಿಂದ ದಾಖಲಾದ ಮೊದಲ ವಿಸ್ತೃತ ಹೇಳಿಕೆ ಇದಾಗಿದೆ. ಕೊಹ್ಲಿ ಪ್ರತಿಕ್ರಿಯೆ ನೀಡದಿರುವ ಬಗ್ಗೆ ವ್ಯಾಪಕ ಟೀಕೆಗಳು ಬಂದಿದ್ದವು. ಮೂರು ತಿಂಗಳ ಬಳಿಕ ಹೇಳಿಕೆ ಹಂಚಿಕೊಂಡಿದ್ದಾರೆ.

ಜೀವನವೆಂದರೆ ಕಷ್ಟ-ನಷ್ಟಗಳು ಸಾಮಾನ್ಯ. ಆದರೆ ಕಡು ಕಷ್ಟಗಳು ಬಂದಾಗ ಮುಂದೇನು ದಾರಿ ಎಂದು ತಿಳಿಯದೇ ಹೋದಾಗ ಗುರು ದತ್ತಾತ್ರೇಯರ ಕಡು ಕಷ್ಟೋದ್ಧಾರಣ ಮಂತ್ರವನ್ನು ಪಠಿಸಿ. ಕನ್ನಡದಲ್ಲಿ ಇಲ್ಲಿದೆ.ಶ್ರೀಪಾದ ಶ್ರೀವಲ್ಲಭ ತ್ವಂ ಸದೈವಶ್ರೀದತ್ತಾಸ್ಮಾನ್ಪಾಹಿ ದೇವಾಧಿದೇವ |ಭಾವಗ್ರಾಹ್ಯ ಕ್ಲೇಶಹಾರಿನ್ಸುಕೀರ್ತೇಘೋರಾತ್ಕಷ್ಟಾದುದ್ಧರಾಸ್ಮಾನ್ನಮಸ್ತೇ || ೧ ||ತ್ವಂ ನೋ ಮಾತಾ ತ್ವಂ ಪಿತಾಽಪ್ತೋಽಧಿಪಸ್ತ್ವಂತ್ರಾತಾ ಯೋಗಕ್ಷೇಮಕೃತ್ಸದ್ಗುರುಸ್ತ್ವಮ್ |ತ್ವಂ ಸರ್ವಸ್ವಂ ನೋ ಪ್ರಭೋ ವಿಶ್ವಮೂರ್ತೇಘೋರಾತ್ಕಷ್ಟಾದುದ್ಧರಾಸ್ಮಾನ್ನಮಸ್ತೇ || ೨ ||ಪಾಪಂ ತಾಪಂ ವ್ಯಾಧಿಮಾಧಿಂ ಚ ದೈನ್ಯಂಭೀತಿಂ ಕ್ಲೇಶಂ ತ್ವಂ ಹರಾಶು ತ್ವದನ್ಯಮ್ |ತ್ರಾತಾರಂ ನೋ ವೀಕ್ಷ್ಯ ಈಶಾಸ್ತಜೂರ್ತೇಘೋರಾತ್ಕಷ್ಟಾದುದ್ಧರಾಸ್ಮಾನ್ನಮಸ್ತೇ || ೩ ||ನಾನ್ಯಸ್ತ್ರಾತಾ ನಾಽಪಿ ದಾತಾ ನ ಭರ್ತಾತ್ವತ್ತೋ ದೇವ ತ್ವಂ ಶರಣ್ಯೋಽಕಹರ್ತಾ |ಕುರ್ವಾತ್ರೇಯಾನುಗ್ರಹಂ ಪೂರ್ಣರಾತೇಘೋರಾತ್ಕಷ್ಟಾದುದ್ಧರಾಸ್ಮಾನ್ನಮಸ್ತೇ || ೪ ||

ಸುಡಾನ್: ಸುಡಾನ್ ನ ಪೂರ್ವ ಡಾರ್ಫುರ್ ಪ್ರಾಂತ್ಯದಲ್ಲಿ ಸಂಭವಿಸಿದ ಭಯಾನಕ ಭೂಕುಸಿತದಲ್ಲಿ 1,000ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. ಭಾರೀ ಮಳೆಯ ನಂತರ ಭಾನುವಾರ ಸಂಭವಿಸಿದ ಈ ದುರಂತದಲ್ಲಿ ಮರ್ರಾ ಪರ್ವತ ಪ್ರದೇಶದಲ್ಲಿರುವ ತಾರಾಸಿನ್ ಗುಡ್ಡಗಾಡು ಗ್ರಾಮ ನಾಶವಾಗಿದೆ ಎಂದು ಸುಡಾನ್ ವಿಮೋಚನಾ ಸೇನೆ ಹೇಳಿಕೆಯಲ್ಲಿ ತಿಳಿಸಿದೆ.ಪ್ರಾಥಮಿಕ ವರದಿಗಳ ಪ್ರಕಾರ, ಎಲ್ಲ ಗ್ರಾಮಸ್ಥರೂ ಮೃತಪಟ್ಟಿದ್ದಾರೆ ಎಂಬ ಸಂಶಯ ವ್ಯಕ್ತವಾಗಿದ್ದು, 1,000ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ ಎಂದು ಅಂದಾಜಿಸಲಾಗಿದೆ. ಈ ಘಟನೆಯಲ್ಲಿ ಕೇವಲ ಓರ್ವ ವ್ಯಕ್ತಿ ಮಾತ್ರ ಬದುಕುಳಿದಿದ್ದಾರೆ ಎಂದು ಬಂಡುಕೋರರ ಗುಂಪು ಹೇಳಿದೆ.ಸಿಟ್ರಸ್ ಉತ್ಪಾದನೆಗೆ ಹೆಸರುವಾಸಿಯಾದ ಪ್ರದೇಶ ವಿನಾಶಕಾರಿ ಭೂ ಕುಸಿತದಿಂದ ನಾಶವಾಗಿದೆ ಸೇನೆ ಹೇಳಿದೆ. ಅವಶೇಷಗಳಡಿ ಸಿಲುಕಿರುವವರ ರಕ್ಷಣೆಗಾಗಿ ವಿಶ್ವಸಂಸ್ಥೆ ಮತ್ತಿತರ ಸಂಸ್ಥೆಗಳಿಗೆ ಮನವಿ ಮಾಡಿದೆ.

ಬೆಂಗಳೂರು: ಸಚಿವ ಸ್ಥಾನದಿಂದ ವಜಾಗೊಂಡಿರುವ ಕೆ.ಎನ್. ರಾಜಣ್ಣ ಅವರು ಬಿಜೆಪಿಗೆ ಅರ್ಜಿ ಹಾಕಿದ್ದು, ನೂರಕ್ಕೆ ನೂರರಷ್ಟು ಅವರು ಬಿಜೆಪಿ ಸೇರುತ್ತಾರೆ ಎಂದು ದು ಮಾಗಡಿ ಶಾಸಕ ಎಚ್.ಸಿ. ಬಾಲಕೃಷ್ಣ ಹೊಸ ಬಾಂಬ್‌ ಸಿಡಿಸಿದ್ದಾರೆ.ರಾಜಣ್ಣ ಅವರು ಸಚಿವ ಸ್ಥಾನ ಕಳೆದುಕೊಂಡಿದ್ದರ ಹಿಂದೆ ಯಾರ ಷಡ್ಯಂತ್ರವೂ‌ ಇಲ್ಲ. ‌ಹೈಕಮಾಂಡ್ ವಿರುದ್ಧ ಮಾತನಾಡಿದ್ದಕ್ಕೆ ರಾಜಣ್ಣ ವಜಾಗೊಂಡಿದ್ದಾರೆ. ತಮ್ಮ ಮಾತಿನಿಂದಲೇ ಕೆಟ್ಟಿದ್ದಾರೆ. ಬೇರೆ ಪಕ್ಷಕ್ಕೆ ಹೋಗುವ ಮುನ್ನ ನಮ್ಮ ಮೇಲೆ ಗೂಬೆ ಕೂರಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಟೀಕಿಟಿದರು.ಸಚಿವರಾಗಿದ್ದಾಗ ರಾಜಣ್ಣ ಹೇಗೆ ನಡೆದುಕೊಂಡರು ಎಂಬುದು ಎಲ್ಲರಿಗೂ ಗೊತ್ತಿದೆ. ಅವರ ಮಾತುಗಳು, ಮಾತು ಮನೆ ಕೆಡಿಸಿತು, ತೂತು ಒಲೆ ಕೆಡಿಸಿತು ಎಂಬಂತಿದ್ದವು ಎಂದು ಲೇವಡಿ ಮಾಡಿದರು.

ಬೆಂಗಳೂರು: ಧರ್ಮಸ್ಥಳ ವಿಚಾರದಲ್ಲಿ ಬಿಜೆಪಿಯವರ ಹೋರಾಟ ಆರ್‌ಎಸ್‌ಎಸ್ ವರ್ಸಸ್ ಆರ್‌ಎಸ್‌ಎಸ್ ಮಧ್ಯೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಎಂದು ಟಾಂಗ್ ನೀಡಿದರು. ಗಿರೀಶ್ ಮಟ್ಟಣ್ಣವರ್ ಮತ್ತು ಮಹೇಶ್ ಶೆಟ್ಟಿ ತಿಮರೋಡಿ ಎಂಬ ಇಬ್ಬರು ಹೋರಾಟಗಾರರು ಆರ್‌ಎಸ್‌ಎಸ್ ಮತ್ತು ಬಿಜೆಪಿಯೊಂದಿಗೆ ನೇರ ಸಂಬಂಧ ಹೊಂದಿದ್ದಾರೆ ಎಂದು ಮಂಗಳವಾರ ಆರೋಪಿಸಿದರು. ಹೀಗಾಗಿ, ಧರ್ಮಸ್ಥಳ ವಿಚಾರದಲ್ಲಿ ಬಿಜೆಪಿಯವರು ಯಾರಾ ವಿರುದ್ಧ ಹೋರಾಟ ನಡೆಸುತ್ತಿದ್ದಾರೆ ಎಂದು ಪ್ರಶ್ನೆ ಮಾಡಿದರು. ಧರ್ಮಸ್ಥಳ ವಿರುದ್ಧ ಮಾತನಾಡುವರಲ್ಲಿ ಒಬ್ಬರಾಗಿರುವ ಗಿರೀಶ್ ಮಟ್ಟಣ್ಣನವರ್ ಬಿಜೆಪಿಯ ಸಕ್ರಿಯ ಕಾರ್ಯಕರ್ತನಾಗಿದ್ದು, ಯುವ ಮೋರ್ಚಾದ ಅಧ್ಯಕ್ಷರಾಗಿದ್ದ. 2013ರಲ್ಲಿ ಗುರುಮಠಕಲ್ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿದ್ದವರು. ಇನ್ನು ಮಹೇಶ್ ಶೆಟ್ಟಿ ತಿಮರೋಡಿ, ಸಂಘಪರಿವಾರದ ನಾಯಕರು.