ಬೆಂಗಳೂರು: ನಗರದಾದ್ಯಂತ ಅದ್ಧೂರಿಯಾಗಿ ಹೊಸ ವರ್ಷವನ್ನು ಸ್ವಾಗತ ಮಾಡಿದ್ದು ಇದೀಗ ಈ ದಿನದಂದು ರಾಜ್ಯ ಸರ್ಕಾರಕ್ಕೆ ಮದ್ಯ ಮಾರಾಟದಿಂದ ಭರ್ಜರಿ ಆದಾಯ ಸಂಗ್ರಹವಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷದ ಡಿಸೆಂಬರ್ನಲ್ಲಿ ₹454.58 ಕೋಟಿ ಹೆಚ್ಚು ಅಬಕಾರಿ ಆದಾಯ ಸಂಗ್ರಹವಾಗಿದೆ.ಇನ್ನೂ 2024ರ ಹೊಸ ವರ್ಷದಂದು ₹154.04 ಕೋಟಿ, ಡಿ.31 ರಂದು 266. 73 ಕೋಟಿ ಆದಾಯ ಸಂಗ್ರಹವಾಗಿದೆ. ಆದರೆ ಈ ಬಾರಿ ಡಿ. 30 ರಂದು ₹261.09 ಕೋಟಿ, ಡಿ.31 ರಂದು ₹204.10 ಕೋಟಿ ಆದಾಯ ಸಂಗ್ರಹವಾಗಿದೆ.
ಬೆಂಗಳೂರು: ಕೋಗಿಲು ಅಕ್ರಮ ಗುಡಿಸಲು- ಮನೆ ತೆರವು ಪ್ರಕರಣದ ಹೊರದೇಶದವರಿಗೆ ಮನೆ ನೀಡಿದರೆ ಅದನ್ನು ನ್ಯಾಯಾಲಯದಲ್ಲಿ ಪ್ರಶ್ನಿಸುತ್ತೇವೆ. ಇದರ ವಿರುದ್ಧ ಮಾನ್ಯ ರಾಜ್ಯಪಾಲರಿಗೆ ಮನವಿ ನೀಡುತ್ತೇವೆ ಎಂದು ಶಾಸಕ ಎಸ್.ಆರ್.ವಿಶ್ವನಾಥ್ ಅವರು ತಿಳಿಸಿದರು.ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಬಿಬಿಎಂಪಿಗೆ ಸೇರಿದ ಜಾಗದಲ್ಲಿ ಅಕ್ರಮವಾಗಿ ಗುಡಿಸಲು ಕಟ್ಟಿಕೊಂಡಿದ್ದಾರೆ. ಇವತ್ತು ನಿಜವಾದ ಫಲಾನುಭವಿ 10.5 ಲಕ್ಷ ರೂಪಾಯ ದುಡ್ಡು ಕಟ್ಟಬೇಕಾಗುತ್ತದೆ. ಬ್ಯಾಂಕ್ ಸಾಲ; ಇಲ್ಲವೇ ಸ್ವಂತ ಪ್ರಯತ್ನದಿಂದ ಇದನ್ನು ಕಟ್ಟಬೇಕು. ಈಗ ಏನು ಒಂದು ಲಕ್ಷ ಮನೆಗಳನ್ನ ಕಟ್ಟುತ್ತಿದ್ದಾರೆ. ಬೆಂಗಳೂರು ಸುತ್ತು ಮುತ್ತಲು 45 ಸಾವಿರ ಮನೆಗಳು ಆಗುತ್ತಿವೆ. ಅವರು ಯಾರು ಕೂಡ ದುಡ್ಡು ಕಟ್ಟಲ್ಲ.
ನವದೆಹಲಿ: ಕಾನ್ಸುಲರ್ ಪ್ರವೇಶ 2008 ರ ದ್ವಿಪಕ್ಷೀಯ ಒಪ್ಪಂದದ ನಿಬಂಧನೆಗಳ ಅಡಿಯಲ್ಲಿ, ಭಾರತ ಮತ್ತು ಪಾಕಿಸ್ತಾನಗಳು ಗುರುವಾರ ರಾಜತಾಂತ್ರಿಕ ಮಾರ್ಗಗಳ ಮೂಲಕ ಏಕಕಾಲದಲ್ಲಿ ನವದೆಹಲಿ ಮತ್ತು ಇಸ್ಲಾಮಾಬಾದ್ನಲ್ಲಿ ಪರಸ್ಪರ ವಶದಲ್ಲಿರುವ ಸಿವಿಲ್ ಕೈದಿಗಳು ಮತ್ತು ಮೀನುಗಾರರ ಪಟ್ಟಿಯನ್ನು ವಿನಿಮಯ ಮಾಡಿಕೊಂಡಿವೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಹೇಳಿದೆ. ಹೇಳಿಕೆಯಲ್ಲಿ 3 ನಾಗರಿಕರು ಮತ್ತು ಮೀನುಗಾರರ 3 ವಿವರಗಳನ್ನು ಹಂಚಿಕೊಂಡಿದೆ.ಅಂತೆಯೇ, ಪಾಕಿಸ್ತಾನವು ತನ್ನ ವಶದಲ್ಲಿರುವ 58 ನಾಗರಿಕ ಕೈದಿಗಳು ಮತ್ತು 199 ಮೀನುಗಾರರ ವಿವರಗಳೊಂದಿಗೆ ಪಟ್ಟಿಗಳನ್ನು ಹಂಚಿಕೊಂಡಿದೆ, ಅವರು ಭಾರತೀಯರು ಅಥವಾ ಭಾರತೀಯರು ಎಂದು ನಂಬಲಾಗಿದೆ" ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.
ವಿಟ್ಜರ್ಲೆಂಡ್ನ ಕ್ರಾನ್ಸ್ ಮೊಂಟಾನಾದಲ್ಲಿರುವ ಬಾರ್ನಲ್ಲಿ ಸಂಭವಿಸಿದ ಭಾರಿ ಬೆಂಕಿಯಲ್ಲಿ 100 ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಡಜನ್ಗಟ್ಟಲೆ ಜನರು ಸತ್ತಿದ್ದಾರೆಂದು ಭಾವಿಸಲಾಗಿದೆ. ಹೊಸ ವರ್ಷದ ಆಚರಣೆಯ ಸಂದರ್ಭದಲ್ಲಿ ಐಷಾರಾಮಿ ಆಲ್ಪೈನ್ ಸ್ಕೀ ರೆಸಾರ್ಟ್ ಪಟ್ಟಣವಾದ ಕ್ರಾನ್ಸ್ ಮೊಂಟಾನಾದ ಲೆ ಕಾನ್ಸ್ಟೆಲೇಷನ್ ಎಂಬ ಬಾರ್ನಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಸ್ವಿಸ್ ಪೊಲೀಸರು ಗುರುವಾರ ಮುಂಜಾನೆ ತಿಳಿಸಿದ್ದಾರೆ.ಇದು ಭಯೋತ್ಪಾದಕರ ದಾಳಿಯಲ್ಲ, ಬೆಂಕಿ ಅವಘಡ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ. ಪ್ರದೇಶದ ಭದ್ರತಾ ಮುಖ್ಯಸ್ಥರು
ಮುಂಬೈ: ನಗರವು 2026 ವರ್ಷದ ಮೊದಲ ದಿನವನ್ನು ವರುಣನ ಆಗಮನದೊಂದಿಗೆ ಸ್ವಾಗತಿಸಲಾಯಿತು. ಮುಂಬೈನ ಹಲವಾರು ಭಾಗಗಳಲ್ಲಿ ಗುರುವಾರ ಬೆಳಿಗ್ಗೆ ಭಾರೀ ಮಳೆಗೆ ಸಾಕ್ಷಿಯಾದವು.ಸೂರ್ಯನ ಮೊದಲ ಕಿರಣಗಳೊಂದಿಗೆ ವರ್ಷವನ್ನು ಸ್ವಾಗತಿಸುವ ಬದಲು, ಮುಂಬೈನ ಕೆಲವು ಭಾಗಗಳು, ವಿಶೇಷವಾಗಿ ದ್ವೀಪ ನಗರವು ಮಳೆಯಿಂದ ಸ್ವಾಗತಿಸಿತು.ಬೆಳಗ್ಗೆ 6 ಗಂಟೆಯ ಮೊದಲು ಮಳೆ ಆರಂಭವಾಯಿತು. ಹಲವಾರು ಪ್ರದೇಶಗಳಲ್ಲಿ ಇದು ಹೆಚ್ಚು ತೀವ್ರವಾಗಿದ್ದರೆ, ಇತರ ಹಲವು
ಬೆಂಗಳೂರು : ಎಲ್ಲರಂತೆ ನನಗೂ ಆಕಾಂಕ್ಷೆ ಇದೆ. ಹೈಕಮಾಂಡ್ ತೀರ್ಮಾನ ಮಾಡಿದರೆ ರಾಜಕೀಯದಲ್ಲಿ ಪದೋನ್ನತಿ ಆಗುತ್ತದೆಯೆಂದು ಗೃಹ ಸಚಿವ ಜಿ ಪರಮೇಶ್ವರ್ ಹೇಳಿದರು. ಗುರುವಾರ ಸದಾಶಿವನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದರು. ರಾಜಕೀಯ ಪದೋನ್ನತಿ ಬಗ್ಗೆ ಮಾಧ್ಯಮದವರು ಪ್ರತಿಕ್ರಿಯಿಸಿದ ಅವರು ನಾನು ಇಲ್ಲಿಯವರೆಗೆ ಆಶಾವಾದಿಯಾಗಿಯೇ ಬದುಕಿದ್ದೇನೆ.
ಸಂಜೆಯ ಸಮಯ ದೇವರ ಕೈಮುಗಿಯುವಾಗ ದೀಪ ಹಚ್ಚುವ ಸಮಯ ತುಂಬಾನೇ ಮುಖ್ಯವಾಗುತ್ತದೆ. ಶಾಸ್ತ್ರಗಳ ಪ್ರಕಾರ, ಇದನ್ನು 'ಪ್ರದೋಷ ಕಾಲ' ಅಥವಾ 'ಸಂಧ್ಯಾ ಕಾಲ' ಎಂದು ಕರೆಯಲಾಗುತ್ತದೆ.ಈ ಸುದ್ದಿಯಲ್ಲಿ ದೀಪ ಹಚ್ಚಲು ಸರಿಯಾದ ಸಮಯ ಮತ್ತು ಅದರ ಮಹತ್ವದ ವಿವರ ಇಲ್ಲಿದೆ: ಸೂರ್ಯಾಸ್ತದ ಸಮಯ: ಸೂರ್ಯ ಮುಳುಗುವ 24 ನಿಮಿಷಗಳ ಮೊದಲು ಮತ್ತು ಸೂರ್ಯ ಮುಳುಗಿದ 24 ನಿಮಿಷಗಳ
ಎಳನೀರನ್ನು ಚಳಿಗಾಲದಲ್ಲಿ ಕುಡಿಯುವುದು ಆರೋಗ್ಯಕ್ಕೆ ಒಳ್ಳೆಯದೇ ಅಥವಾ ಕೆಟ್ಟದ್ದೇ ಎಂಬ ಗೊಂದಲ ಹೆಚ್ಚಿನವರಲ್ಲಿ ಇದೆ. ಎಳನೀರು ದೇಹಕ್ಕೆ ತಂಪಾಗಿದ್ದು, ಚಳಿಗಾಲದಲ್ಲಿ ಇದನ್ನು ಮಿತವಾಗಿ ಕುಡಿಯುವುದಿರಂದ ಆರೋಗ್ಯಕ್ಕೆ ಕೆಲವು ಅದ್ಭುತ ಪ್ರಯೋಜಗಳನ್ನು ಪಡೆಯಬಹುದು. ಎಳನೀರನ್ನು ಮಿತವಾಗಿ ಕುಡಿಯುವುದರಿಂದ ಆರೋಗ್ಯದ ಮೇಲಾಗುವ ಪ್ರಯೋಜನಗಳು ಇಲ್ಲಿದೆ. ಚರ್ಮದ ಆರೋಗ್ಯ: ಚಳಿಗಾಲದಲ್ಲಿ ಚರ್ಮ ಒಣಗುವುದು ಸಾಮಾನ್ಯ. ಎಳನೀರು ದೇಹವನ್ನು ಒಳಗಿನಿಂದ ಹೈಡ್ರೇಟ್ ಮಾಡಿ, ಚರ್ಮದ ತೇವಾಂಶವನ್ನು ಕಾಪಾಡುತ್ತದೆ ಮತ್ತು ನೈಸರ್ಗಿಕ ಹೊಳಪನ್ನು ನೀಡುತ್ತದೆ.
ಚಿಕ್ಕಮಗಳೂರು: ತಾನು ಮದುವೆಯಾಗುವ ಯುವತಿಗೆ ಹುಟ್ಟುಹಬ್ಬದ ಶುಭಾಶಯಕೋರಿದ ಯುವಕನನ್ನು ವ್ಯಕ್ತಿಯೊಬ್ಬ ಹತ್ಯೆ ಮಾಡಿದ ಘಟನೆ ತರೀಕೆರೆ ತಾಲ್ಲೂಕಿನ ಅತ್ತಿಗನಾಳು ಗ್ರಾಮದಲ್ಲಿ ವರದಿಯಾಗಿದೆ. ಯುವತಿಯ ಹುಟ್ಟುಹಬ್ಬದ ದಿನ ಯುವತಿಗೆ ಸಾಮಾಜಿಕ ಜಾಲತಾಣದ ಮೆಸೇಜ್ ಮಾಡಿದ್ದೆ ಕೊಲೆಗೆ ಕಾರಣ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. ಉಡೇವಾ ಮೂಲದ ಮಂಜುನಾಥ್ (28) ಕೊಲೆಯಾದ ಯುವಕ. ಯುವತಿಯೊಂದಿಗೆ ವಿವಾಹ ನಿಶ್ಚಿತಾರ್ಥವಾಗಿದ್ದ ಯುವಕ ವೇಣು ಮತ್ತು ಕೊಲೆ ಆರೋಪಿಗಳು ಎಂದು ಹೇಳಲಾಗಿದೆ.
ನವದೆಹಲಿ: ದಟ್ಟವಾದ ಮಂಜಿನಿಂದಾಗಿ ದೆಹಲಿ ಸೇರಿದಂತೆ ಉತ್ತರ ಮತ್ತು ಪೂರ್ವ ಭಾರತದಾದ್ಯಂತ ವಿಮಾನ ಕಾರ್ಯಾಚರಣೆಗೆ ಅಡ್ಡಿಯುಂಟಾಗಿದ್ದು, ವಿಮಾನಯಾನ ಸಂಸ್ಥೆಗಳು ಪ್ರಯಾಣಿಕರಿಗೆ ಸಲಹೆ ಸೂಚನೆಗಳನ್ನು ನೀಡಿದೆ.ಗೋಚರತೆಯ ಸಮಸ್ಯೆಗಳು ಬಹು ವಿಮಾನ ನಿಲ್ದಾಣಗಳ ಮೇಲೆ ಪರಿಣಾಮ ಬೀರಿತು, ಏರ್ ಇಂಡಿಯಾ ಮತ್ತು ಇಂಡಿಗೋದಂತಹ ವಿಮಾನಯಾನ ಸಂಸ್ಥೆಗಳು ವಿಮಾನ ನವೀಕರಣಗಳನ್ನು ಮೇಲ್ವಿಚಾರಣೆ ಮಾಡಲು ಪ್ರಯಾಣಿಕರಿಗೆ ಎಚ್ಚರಿಕೆ ನೀಡುವಂತೆ ಪ್ರೇರೇಪಿಸಿತು. ಏರ್ ಇಂಡಿಯಾದ 'ಫಾಗ್ಕೇರ್' ಉಪಕ್ರಮವು ಫ್ಲೈಟ್ ಮರುಹೊಂದಿಕೆ ಅಥವಾ ಮರುಪಾವತಿಯನ್ನು ಒದಗಿಸುತ್ತದೆ, ಆದರೆ
ಬೆಂಗಳೂರು: ಹೊಸ ವರ್ಷದ ಸಂಭ್ರಮದಲ್ಲಿ ನಮ್ಮ ಮೆಟ್ರೋದಲ್ಲಿ ಭಾರೀ ಮಂದಿ ಪ್ರಯಾಣ ಬೆಳೆಸಿದ್ದು, ಇದೀಗ ಒಂದೇ ದಿನದಲ್ಲಿ 8.93 ಲಕ್ಷ ಜನರು ಪ್ರಯಾಣಿಸುವ ಮೂಲಕ ₹3.08 ಕೋಟಿ ಆದಾಯ ಸಂಗ್ರಹವಾಗಿದೆ.ಪ್ರಯಾಣಿಕರಿಗೆ ಸುಲಭ ಸಂಚಾರ ದೃಷ್ಟಿಕೋಣದಿಂದ ಹೊಸ ವರ್ಷಾಚರಣೆ ಹಿನ್ನೆಲೆ ಬಿಎಂಆರ್ಸಿಎಲ್ ಮೂರು ಮಾರ್ಗಗಳಾದ ನೇರಳೆ, ಹಸಿರು ಹಾಗೂ ಹಳದಿ ಮೆಟ್ರೋ ರೈಲುಗಳ ಸೇವಾ ಸಮಯ ವಿಸ್ತರಿಸಿತ್ತು. 2025ರ ಡಿ.31ರಂದು ಬೆಳಿಗ್ಗೆ 5 ಗಂಟೆಯಿಂದ ಮಧ್ಯರಾತ್ರಿ 3:10ರವರೆಗೆ ಮೆಟ್ರೋ ರೈಲುಗಳು ಸಂಚರಿಸಿದ್ದು, ಈ ಅವಧಿಯಲ್ಲಿ ಬರೋಬ್ಬರಿ 8,93,903 ಜನರು ಮೆಟ್ರೋದಲ್ಲಿ ಪ್ರಯಾಣಿಸಿದ್ದಾರೆ.
ಬೆಂಗಳೂರು: ಹೊಸ ವರ್ಷದ ದಿನದಂದು ರಾಯರ ದರ್ಶನಕ್ಕೆ ಮಂತ್ರಾಲಯಕ್ಕೆ ಭಕ್ತಸಾಗರವೇ ಹರಿದುಬಂದಿದೆ. ಇನ್ನೂ ಹೊಸ ವರ್ಷ 2026ಕ್ಕೆ ಜಗತ್ತು ಕಾಲಿಟ್ಟಾಗಿದೆ. ರಾಯರಲ್ಲಿ ಈ ವರ್ಷ ಒಳಿತು ಮಾಡು ಎಂದು ಬೇಡಲು ಮಂತ್ರಾಲಯಕ್ಕೆ ಭಕ್ತಸಾಗರವೇ ಹರಿದು ಬಂದಿದೆ.2025ರ ವರ್ಷಾಂತ್ಯ, 2026 ರ ಆರಂಭ ಹಾಗೂ ಗುರುವಾರವೇ ಹೊಸ ವರ್ಷದ ಮೊದಲ ದಿನವಾದ ಹಿನ್ನಲೆ ರಾಯಚೂರಿನ ಮಂತ್ರಾಲಯದ ರಾಯರ ಮಠಕ್ಕೆ ಸಾಗರೋಪಾದಿಯಲ್ಲಿ ಬಂದ ಜನರು ತುಂಗಾಭದ್ರಾ ನದಿಯಲ್ಲಿ ಪುಣ್ಯಸ್ನಾನ ಮಾಡಿ
ಸ್ವಿಸ್ ಸ್ಕೀ ರೆಸಾರ್ಟ್ ಪಟ್ಟಣವಾದ ಕ್ರಾನ್ಸ್-ಮೊಂಟಾನಾದ ಬಾರ್ನಲ್ಲಿ ಸ್ಫೋಟ ಸಂಭವಿಸಿದ ನಂತರ ಹಲವಾರು ಜನರು ಸಾವನ್ನಪ್ಪಿದ್ದಾರೆ ಮತ್ತು ಇತರರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಸ್ವಿಸ್ ಸ್ಕೀ ರೆಸಾರ್ಟ್ ಪಟ್ಟಣವಾದ ಕ್ರಾನ್ಸ್-ಮೊಂಟಾನಾದ ಬಾರ್ನಲ್ಲಿ ಸ್ಫೋಟ ಸಂಭವಿಸಿದ ನಂತರ ಹಲವಾರು ಜನರು ಸಾವನ್ನಪ್ಪಿದ್ದಾರೆ ಮತ್ತು ಇತರರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಾನ್ಸ್ಟೆಲೇಷನ್ ಎಂಬ ಬಾರ್ನಲ್ಲಿ ಬೆಳಿಗ್ಗೆ 1:30 ಕ್ಕೆ ಸ್ಫೋಟ ಸಂಭವಿಸಿದೆ ಎಂದು ಪೊಲೀಸರು ಬಿಬಿಸಿಗೆ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ನ್ಯೂಯಾರ್ಕ್: ಭಾರತೀಯ ಮೂಲದ 34 ವರ್ಷದ ಝೊಹ್ರಾನ್ ಮಮ್ದಾನಿ ಅವರು ಅಮೆರಿಕದ ಅತಿದೊಡ್ಡ ನಗರ ನ್ಯೂಯಾರ್ಕ್ ನ 112ನೇ ಮೇಯರ್ ಆಗಿ ಪ್ರಮಾಣವಚನ ಸ್ವೀಕರಿಸಿದರು.ಡೆಮಾಕ್ರಟಿಕ್ ಪಕ್ಷದ ನಾಯಕ, ಸಮಾಜವಾದಿ ಝೊಹ್ರಾನ್ ಮಮ್ದಾನಿ ಗುರುವಾರ ಮುಂಜಾನೆ ಪ್ರಮಾಣವಚನ ಸ್ವೀಕರಿಸಿದರು. ನ್ಯೂಯಾರ್ಕ್ ನಗರದ ಮೊದಲ ಮುಸ್ಲಿಂ ಮೇಯರ್ ಅವರಾಗಿದ್ದಾರೆ. ದಕ್ಷಿಣ ಏಷ್ಯಾ ಮೂಲದ ಮೊದಲ ಮೇಯರ್ ಹಾಗೂ ಒಂದು ಶತಮಾನಕ್ಕೂ ಹೆಚ್ಚು ಅವಧಿಯಲ್ಲಿ ಈ ಹುದ್ದೆ ಅಲಂಕರಿಸಿದ ಅತಿಕಿರಿಯ ವ್ಯಕ್ತಿ ಎಂಬ ದಾಖಲೆಗೆ ಪಾತ್ರರಾಗಿದ್ದಾರೆ.ಐತಿಹಾಸಿಕ ನಿಷ್ಕ್ರಿಯ ಸುರಂಗಮಾರ್ಗ ನಿಲ್ದಾಣದಲ್ಲಿ ನಡೆದ ಸಮಾರಂಭದಲ್ಲಿ ಮಮ್ದಾನಿ ಕುರಾನ್ ಮೇಲೆ ಕೈ ಇಟ್ಟು ಪ್ರಮಾಣವಚನ ಸ್ವೀಕರಿಸಿದರು. ಇದು ನನ್ನ ಜೀವನದ ಮಹತ್ತರ ಗೌರವ ಎಂದು ಅವರು ಹೇಳಿದರು.
ನವದೆಹಲಿ: ಹೊಸ ವರ್ಷದಲ್ಲಿ ಹೊಸ ನಿಯಮಗಳು ಇಂದಿನಿಂದಲೇ ಜಾರಿಗೆ ಬರಲಿದೆ. ದೇಶದಲ್ಲಿ ನಿಯಮಗಳಲ್ಲಿ ಮಹತ್ವದ ಬದಲಾವಣೆಗಳಾಗಲಿವೆ. ಹಲವು ವಸ್ತುಗಳ ಬೆಲೆಯಲ್ಲಿ ಏರಿಳಿತವಾಗಲಿದೆ.ಇಂದಿನಿಂದಲೇ ಪಿಎಂ ಕಿಸಾನ್, ಯುಪಿಐ, ಮತ್ತು ಸಿಮ್ ದೃಢೀಕರಣದಂತಹ ಹಲವಾರು ನಿಯಮಗಳಲ್ಲಿ ಮಹತ್ವದ ಬದಲಾವಣೆಗಳಾಗಲಿವೆ. ಮಾತ್ರವಲ್ಲ, ಫ್ರಿಡ್ಜ್, ಎಸಿ ಮತ್ತು ಕಾರುಗಳ ಬೆಲೆಗಳು ಏರಿಕೆಯಾಗಲಿದೆ.ಹೊಸ ವರ್ಷಕ್ಕೆ ಪಿಎಂ ಕಿಸಾನ್ ಯೋಜನೆಯಡಿ ಸೌಲಭ್ಯಗಳನ್ನು ಪಡೆಯಲು ರೈತರು ವಿಶೇಷ ಕಿಸಾನ್ ಐಡಿ ಹೊಂದುವುದು ಕಡ್ಡಾಯವಾಗಲಿದೆ. ರೈತರ ಭೂ ದಾಖಲೆಗಳು, ಬೆಳೆ ಮಾಹಿತಿ, ಆಧಾರ್ ಮತ್ತು ಬ್ಯಾಂಕ್ ವಿವರಗಳು ಈ ಐಡಿಗೆ ಲಿಂಕ್ ಆಗಿರಲಿವೆ. ಯೋಜನೆಯ ದುರುಪಯೋಗ ತಡೆದು, ಅರ್ಹರಷ್ಟೇ ಅದರ ಲಾಭ ಪಡೆಯುವಂತೆ ಮಾಡಲು ಈ ನಿಯಮ ಜಾರಿಗೆ ತರಲಾಗಿದೆ.
ಮಂಗಳೂರು: ಮಾಜಿ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಅವರ ಸಹೋದರ, ನಿಟ್ಟೆ ಶಿಕ್ಷಣ ಸಂಸ್ಥೆಗಳ ಸ್ಥಾಪಕ, ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ಕುಲಪತಿ ಡಾ. ಎನ್.ವಿನಯ ಹೆಗ್ಡೆ ಗುರುವಾರ ಬೆಳಗಿನ ಜಾವ ನಿಧನರಾದರು. ಅವರಿಗೆ 86 ವರ್ಷ ವಯಸ್ಸಾಗಿತ್ತು.ಲೋಕಸಭಾ ಸ್ಪೀಕರ್ ಆಗಿದ್ದ ದಿವಂಗತ ಜಸ್ಟಿಸ್ ಕೆ.ಎಸ್. ಹೆಗ್ಡೆ ಅವರ ಪುತ್ರನಾದ ಡಾ. ವಿನಯ ಹೆಗ್ಡೆ ಅವರು ರಾಜ್ಯದ ಪ್ರಮುಖ ಶಿಕ್ಷಣ ತಜ್ಞರು, ಉದ್ಯಮಿ ಮತ್ತು ಸಮಾಜ ಸೇವಕರಾಗಿ ಅವರು ಗುರುತಿಸಿಕೊಂಡಿದ್ದರು.ವಿನಯ ಹೆಗ್ಡೆ ಅವರಿಗೆ ಶಿಕ್ಷಣ ಮತ್ತು ಸಮಾಜ ಸೇವೆಗಾಗಿ ಅವರಿಗೆ ಕರ್ನಾಟಕ ಸರ್ಕಾರದಿಂದ ರಾಜ್ಯೋತ್ಸವ ಪ್ರಶಸ್ತಿ. ಮಂಗಳೂರು ವಿಶ್ವವಿದ್ಯಾಲಯದ ಗೌರವ ಡಾಕ್ಟರೇಟ್ ಲಭಿಸಿದೆ. ಕರಾವಳಿ ಕರ್ನಾಟಕದ ಶೈಕ್ಷಣಿಕ ಮತ್ತು ಕೈಗಾರಿಕಾ ಕ್ರಾಂತಿಯಲ್ಲಿ ಪ್ರಮುಖ ಪಾತ್ರ ವಹಿಸಿದ್ದ ದೂರದೃಷ್ಟಿಯ ನಾಯಕರಾಗಿದ್ದರು.
ನವದೆಹಲಿ: ದೇಶದಾದ್ಯಂತ ಹೊಸ ವರ್ಷದ ಸಂಭ್ರಮಾಚರಣೆ ಜೋರಾಗಿತ್ತು. ಯುವಜನರಂತೂ ನ್ಯೂ ಇಯರ್ ಪಾರ್ಟಿಯ ಸಂಭ್ರಮದಲ್ಲಿ ತೇಲಾಡಿದ್ದರು. ಹೊಸ ವರ್ಷಕ್ಕೆ ಗಣ್ಯರು ಶುಭಾಶಯ ಕೋರಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ, ಉಪರಾಷ್ಟ್ರಪತಿ ರಾಧಾಕೃಷ್ಣನ್ ಸೇರಿದಂತೆ ಅನೇಕ ಗಣ್ಯರು ದೇಶದ ಜನತೆಗೆ ಹೊಸ ವರ್ಷದ ಶುಭಾಶಯವನ್ನು ತಿಳಿಸಿದ್ದಾರೆ.ಎಲ್ಲರಿಗೂ 2026ರ ಹೊಸ ವರ್ಷದ ಶುಭಾಶಯಗಳು. ಈ ವರ್ಷವು ಎಲ್ಲರಿಗೂ ಆರೋಗ್ಯ ಮತ್ತು ಸಮೃದ್ಧಿ ತರಲಿ. ನಿಮ್ಮ ಪ್ರಯತ್ನಗಳಲ್ಲಿ ಯಶಸ್ಸು ಸಿಗಲಿ ಮತ್ತು ನಿಮ್ಮ ಎಲ್ಲಾ ಕಾರ್ಯಗಳು ಸುಗಮವಾಗಿ ನೆರವೇರಲಿ ಎಂದು ಹಾರೈಸುತ್ತೇನೆ. ನಮ್ಮ ಸಮಾಜದಲ್ಲಿ ಶಾಂತಿ ಮತ್ತು ಸಂತೋಷ ನೆಲೆಸಲಿ ಎಂದು ಮೋದಿ ಎಕ್ಸ್ನಲ್ಲಿ ತಿಳಿಸಿದ್ದಾರೆ.
ಬೆಂಗಳೂರು: ಪ್ರತೀ ವರ್ಷ ಹೊಸ ವರ್ಷದ ಮೊದಲ ದಿನ ನಮ್ಮ ಜೀವನದ ಬಗ್ಗೆ ನಿರ್ಧಾರಗಳನ್ನು ಮಾಡುತ್ತೇವೆ. ನಿರ್ಧಾರ ಮಾಡುವ ಮೊದಲು ನಟ ರಮೇಶ್ ಅರವಿಂದ್ ಅವರ ಈ ಸ್ಪೂರ್ತಿಯುತ ಮೂರು ಮಾತುಗಳನ್ನು ಪಾಲಿಸಿ. ಜೀವನದಲ್ಲಿ ಅಂದುಕೊಂಡಿದ್ದು ಆಗುವೇ ಇಲ್ಲ ಎನ್ನುವವರು ಈ ಮೂರು ಮಾತು ಪಾಲಿಸಿದರೆ ಸಾಕು. ಎಲ್ಲರಿಗೂ ಗೊತ್ತಿರುವ ಹಾಗೆ, ರಮೇಶ್ ಅರವಿಂದ್ ಉತ್ತಮ ನಟ ಮಾತ್ರವಲ್ಲ. ಚಿಂತಕ, ಸ್ಪೂರ್ತಿಯ ಮಾತನಾಡುವ ಮಾತುಗಾರ. ಹೊಸ ವರ್ಷಕ್ಕೆ ಅವರು ಜನತೆಗೆ ಈ ಒಂದು ಸಂದೇಶ ತಿಳಿಸಿದ್ದಾರೆ.
ಬೆಂಗಳೂರು: ಹೊಸ ವರ್ಷದ ಮೊದಲ ದಿನವೇ ಚಿನ್ನ ಖರೀದಿದಾರರಿಗೆ ಗುಡ್ ನ್ಯೂಸ್. ಇಂದು ಪರಿಶುದ್ಧ ಚಿನ್ನದ ದರ ಮತ್ತು ಇತರೆ ಚಿನ್ನದ ದರ ಇಳಿಕೆ ಕಂಡಿದೆ. ಇಂದು ಪರಿಶುದ್ಧ ಚಿನ್ನದ ದರ ಮತ್ತು ಇತರೆ ಚಿನ್ನದ ದರ ವಿವರ ಇಲ್ಲಿದೆ ನೋಡಿ. ಚಿನ್ನದ ದರ ಏರಿಕೆಕಳೆದ ವಾರ ಪರಿಶುದ್ಧ ಚಿನ್ನದ ದರ ಸತತ ಇಳಿಕೆ ಕಂಡಿತ್ತು. ಆದರೆ ವಾರಂತ್ಯಕ್ಕೆ ಚಿನ್ನದ ದರ ಏರಿಕೆ-ಇಳಿಕೆಯಾಗುತ್ತಲೇ ಇತ್ತು. ಈ ವಾರ ಆರಂಭದಿಂದಲೇ ಇಳಿಕೆಯತ್ತ ಸಾಗಿದೆ. ಇಂದು ಪರಿಶುದ್ಧ ಚಿನ್ನದ ದರ ಮತ್ತಷ್ಟು ಇಳಿಕೆಯಾಗಿದೆ. ಪರಿಶುದ್ಧ ಚಿನ್ನದ ದರ ಮೊನ್ನೆ 1,39,095.00 ರೂ.ಗಳಿತ್ತು. ಇಂದು 1,37,095.00 ರೂ.ಗಳಷ್ಟಾಗಿದೆ.
ಬೆಂಗಳೂರು: ಇತ್ತೀಚೆಗೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆ ಎಂದರೆ ಅದು ಎಣ್ಣೆ ಪಾರ್ಟಿಯಂತೆ ಭಾಸವಾಗುತ್ತಿದೆ. ನಿನ್ನೆಯೂ ನ್ಯೂ ಇಯರ್ ಪಾರ್ಟಿ ಮಾಡಿ ಯುವಜನ ಕುಡಿದ ಮತ್ತಿನಲ್ಲಿ ರಸ್ತೆಯಲ್ಲೇ ರಂಪಾಟ ಮಾಡಿದ ಸಾಕಷ್ಟು ಘಟನೆಗಳು ನಡೆದಿವೆ. ವಿಶೇಷವಾಗಿ ಎಂಜಿ ರೋಡ್ ನಂತಹ ಐಷಾರಾಮಿ ಏರಿಯಾಗಳಲ್ಲೇ ವಿದ್ಯಾವಂತರೆನಿಸಿಕೊಂಡ ಯುವಕ-ಯುವತಿಯರೇ ಕುಡಿದ ಮತ್ತಿನಲ್ಲಿ ತೂರಾಡುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು. ಕೆಲವರು ಬೀದಿ ರಂಪಾಟ ಮಾಡಿದ್ದಾರೆ. ಮತ್ತೆ ಕೆಲವರು ಕುಡಿದ ಮತ್ತಿನಲ್ಲಿ ರಸ್ತೆಯಲ್ಲೇ ಬೋರಲು ಮಲಗಿದ್ದರು. ಎಲ್ಲೆಂದರಲ್ಲಿ ಮಲಗಿದ್ದವರನ್ನು ಪೊಲೀಸರು ಎತ್ತಿಕೊಂಡು ಹೋಗುತ್ತಿದ್ದ ದೃಶ್ಯವೂ ಕಂಡುಬಂದಿದೆ.
ಮೇಷಾದಿ ದ್ವಾದಶ ರಾಶಿಗಳಲ್ಲಿ ರವ್ಯಾದಿ ನವಗ್ರಹರ ರಾಶಿ ಬದಲಾವಣೆಯಿಂದ ಆಗುವ ಗೋಚರಫಲ 01-01-2026 ರಿಂದ 31-12-2026 ರ ವರೆಗೆ : ಖ್ಯಾತ ಜ್ಯೋತಿಷಿ ವೆಂಕಟೇಶ್ವರ ಭಟ್ ಇವರಿಂದ. ಗುರು ಗ್ರಹವು 01-06-2026 ನೇ ದಿನಾಂಕದಂದು ಕರ್ಕಾಟಕ ರಾಶಿಯ ಪ್ರವೇಶ ಮೇಷರಾಶಿ:-ಈ ವರ್ಷ ದೈವಬಲ ಕಡಿಮೆ. ವರ್ಷದ ಬಹುಪಾಲು ಗುರುವು ಸುಖಸ್ಥಾನದಲ್ಲಿ ಪ್ರತಿಕೂಲನು, ಶನಿಯು ವರ್ಷಪೂರ್ತಿ ವ್ಯಯಸ್ಥಾನದಲ್ಲಿ ಸಂಚರಿಸುತ್ತಾ ನಷ್ಟ ಕಷ್ಟ, ದುರ್ವ್ಯವಹಾರಗಳು, ಅಪಘಾತಭಯ ಇತ್ಯಾದಿಗಳಿಗೆ ಕಾರಣನೆನಿಸುವನು. ಈ ಕಾಲದಲ್ಲಿ ಸ್ಥಾನಮಾನಗಳಿಗೆ ಅನುಕೂಲವಲ್ಲ. ಕೌಟುಂಬಿಕ ಜೀವನದಲ್ಲಿ ಸುಖವು ಕಡಿಮೆ. ಮನಸ್ಸಿನ ನಮ್ಮದಿ ಕೆಡುವುದು. ಸಮೀಪದ ಬಂಧುಗಳಿಗೆ ತೊಂದರೆಯಿದೆ.
ರಾತ್ರಿ ಮಲಗುವ ಸಮಯದಲ್ಲಿ ನಾವು ಮಾಡುವ ಕೆಲವು ತಪ್ಪುಗಳು ನಮ್ಮ ಆರೋಗ್ಯದ ಮೇಲೆ ನೇರ ಪರಿಣಾಮ ಬೀರುತ್ತದೆ. ಕೆಲವೊಂದು ಬಾರಿ ಅದು ನಮ್ಮ ನಿದ್ದೆಯಾ ಮೇಲೂ ಪರಿಣಾಮ ಬೀರುತ್ತದೆ.ರಾತ್ರಿ ಮಲಗಿದ ತಕ್ಷಣ ನಿದ್ದೆ ಬೀಳಲು ಕೆಲ ತಪ್ಪುಗಳನ್ನು ಮಾಡಬಾರದು. ಈ ಸುದ್ದಿಯಲ್ಲಿ ಉತ್ತಮ ನಿದ್ರೆಗಾಗಿ ಕೆಲವು ಸಲಹೆಗಳು ಇಲ್ಲಿದೆ. ಮಲಗುವ ಮುನ್ನ ಉಗುರು ಬೆಚ್ಚಗಿನ ಹಾಲನ್ನು ಕುಡಿಯುವುದರಿಂದ ಬೇಗನೆ ನಿದ್ದೆ ಬೀಳಲು ಸಹಕಾರಿಯಾಗುತ್ತದೆ. ಪುಸ್ತಕ ಓದುವ ಅಭ್ಯಾಸ ಮಾಡಿಕೊಂಡರು ನಿದ್ದೆ ಬೇಗ ಬರುತ್ತದೆ.
ತಿರುವನಂತಪುರಂ: ಬೆಂಗಳೂರಿನ ಫಕೀರ್ ಕಾಲೋನಿ ಮತ್ತು ವಸೀಂ ಲೇಔಟ್ನಲ್ಲಿನ ಮನೆಗಳನ್ನು ಕೆಡವಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕರ್ನಾಟಕ ಸರ್ಕಾರವನ್ನು ತೀವ್ರವಾಗಿ ಟೀಕಿಸಿದ ಬೆನ್ನಲ್ಲೇ, ಕೇರಳದ ಮುಖ್ಯಮಂತ್ರಿ ಮತ್ತು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ತಿರುವನಂತಪುರದಲ್ಲಿ ವೇದಿಕೆ ಹಂಚಿಕೊಂಡಿದ್ದಾರೆ.ಇಬ್ಬರೂ ಮುಖ್ಯಮಂತ್ರಿಗಳು ಮನೆಗಳ ಧ್ವಂಸದ ಬಗ್ಗೆ ಯಾವುದೇ ಪ್ರಸ್ತಾಪವನ್ನು ಮಾಡಲಿಲ್ಲ ಆದರೆ ಧಾರ್ಮಿಕ ಮತ್ತು ಕೋಮು ವಿಭಜನೆಯನ್ನು ಸೃಷ್ಟಿಸುವ ಪ್ರಯತ್ನಗಳ ನಡುವೆ ಸಮಾಜ ಸುಧಾರಕ ಶ್ರೀ ನಾರಾಯಣ ಗುರುಗಳ ಉಪದೇಶದ ಪ್ರಸ್ತುತತೆಯ ಬಗ್ಗೆ ಒತ್ತಿ ಹೇಳಿದರು.
ಬೆಂಗಳೂರು: ಪಾನಮತ್ತ ದ್ವಿಚಕ್ರ ವಾಹನ ಸವಾರನೊಬ್ಬ ಬ್ರೀತ್ ಅಲೈಸರ್ ತಪಾಸಣೆ ವೇಳೆ ಟ್ರಾಫಿಕ್ ಪೊಲೀಸರನ್ನು ಬೆದರಿಸಿ, ಪೊಲೀಸ್ ಠಾಣೆಯ ಹೊರಗೆ ತನ್ನದೇ ಮೋಟಾರ್ ಸೈಕಲ್ಗೆ ಬೆಂಕಿ ಹಚ್ಚಿ ಸ್ಥಳದಿಂದ ಪರಾರಿಯಾಗಿದ್ದಾನೆ.ಆರೋಪಿಯು ಇದು ತನ್ನ ಎರಡನೇ ಅಪರಾಧ ಎಂದು ಹೇಳಿಕೊಂಡಿದ್ದಾನೆ ಮತ್ತು ದಂಡ ಪಾವತಿಸುವ ಬದಲು ಆತ್ಮಹತ್ಯೆ ಬೆದರಿಕೆ ಹಾಕಿದ್ದಾನೆ.ಮೈಸೂರು ರಸ್ತೆಯಲ್ಲಿ ತಡರಾತ್ರಿ ಮದ್ಯಪಾನ ಮಾಡಿ ವಾಹನ ಚಲಾಯಿಸುತ್ತಿದ್ದ ತಪಾಸಣೆ ನಾಟಕೀಯವಾಗಿ ಮಾರ್ಪಟ್ಟಿದ್ದು,
ಹೈದರಾಬಾದ್: ತೆಲಂಗಾಣದ ಜಗ್ತಿಯಾಲ್ ಜಿಲ್ಲೆಯಲ್ಲಿ 80 ವರ್ಷದ ವ್ಯಕ್ತಿಯೊಬ್ಬರು ಜೀವಂತವಾಗಿರುವಾಗಲೇ ತಮ್ಮದೇ ಆದ ಸಮಾಧಿಯನ್ನು ನಿರ್ಮಿಸಿಕೊಂಡಿದ್ದಾರೆ. ಪತ್ನಿಯ ಸಮಾಧಿಯ ಪಕ್ಕದಲ್ಲಿ ಲಕ್ಷ್ಮೀಪುರಂ ಗ್ರಾಮದಲ್ಲಿ ಸ್ವಂತ ಸಮಾಧಿ ನಿರ್ಮಿಸಿರುವ ನಕ್ಕ ಇಂದ್ರಯ್ಯ, ಸಮಾಧಿ ಸ್ಥಳದಲ್ಲಿ ಜೀವನ್ಮರಣದ ಸತ್ಯ ಸಂದೇಶವಿರುವ ಫಲಕವನ್ನೂ ಹಾಕಿದ್ದಾರೆ.ತಮಿಳುನಾಡಿನ ಮೇಸ್ತ್ರಿಗಳ ಸಹಾಯದಿಂದ 12 ಲಕ್ಷ ರೂಪಾಯಿ ವೆಚ್ಚದಲ್ಲಿ ಸಮಾಧಿ, ಗ್ರಾನೈಟ್ ರಚನೆಯನ್ನು ನಿರ್ಮಿಸಲಾಗಿದೆ.
ನವದೆಹಲಿ: ಭಾರತದ ಲೆಜೆಂಡರಿ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ಪುತ್ರಿ ಸಾರಾ ತೆಂಡೂಲ್ಕರ್ ಸದ್ಯ ಗೋವಾದಲ್ಲಿ ರಜೆಯಲ್ಲಿದ್ದಾರೆ. ಆಕೆಯ ಇತ್ತೀಚಿನ ವೀಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಬಿರುಗಾಳಿಯ ಮೂಲಕ ಆನ್ಲೈನ್ನಲ್ಲಿ ವ್ಯಾಪಕ ಚರ್ಚೆಯನ್ನು ಹುಟ್ಟುಹಾಕಿದೆ.ವೈರಲ್ ವಿಡಿಯೋದಲ್ಲಿ, ಸಾರಾ ತನ್ನ ಸ್ನೇಹಿತರೊಂದಿಗೆ ಗೋವಾದ ಬೀದಿಗಳಲ್ಲಿ ಕೆಂಪು ಹೂವಿನ ಸಣ್ಣ ಉಡುಗೆಯನ್ನು ಧರಿಸಿ ಹೋಗುತ್ತಿರುವುದನ್ನು ಕಾಣಬಹುದು. ಆಕೆಯ ಆರಾಮವಾಗಿರುವ, ಬೀಚ್-ಪಾರ್ಟಿಯ ನೋಟ, ಕೈಯಲ್ಲಿ ಬಿಯರ್ ಬಾಟಲಿಯೊಂದಿಗೆ, ಅಭಿಮಾನಿಗಳಿಗೆ ಅವಳ
ಇಂದೋರ್: ಮಧ್ಯಪ್ರದೇಶದ ಇಂದೋರ್ ನಗರದಲ್ಲಿ ಕಲುಷಿತ ನೀರನ್ನು ಸೇವಿಸಿದ ನಂತರ ಅತಿಸಾರ ಮತ್ತು ವಾಂತಿಯಿಂದ ಇದುವರೆಗೆ ಏಳು ಜನರು ಸಾವನ್ನಪ್ಪಿದ್ದಾರೆ ಎಂದು ಮೇಯರ್ ಪುಷ್ಯಮಿತ್ರ ಭಾರ್ಗವ ಬುಧವಾರ ದೃಢಪಡಿಸಿದ್ದಾರೆ.ಭಾಗೀರಥ್ಪುರ ಪ್ರದೇಶದಲ್ಲಿ ಅತಿಸಾರ ಭೇದಿ ಕಾಣಿಸಿಕೊಂಡು ಮೂರು ಮಂದಿ ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಇಲಾಖೆ ವರದಿ ಮಾಡಿದೆ. ಆದರೆ ನನಗೆ ತಿಳಿದಂತೆ ಈ ಕಾಯಿಲೆಯಿಂದ ಬಳಲುತ್ತಿದ್ದ ಇನ್ನೂ ನಾಲ್ವರನ್ನು ಆಸ್ಪತ್ರೆಗೆ ಕರೆತರಲಾಗಿದ್ದು, ಅವರೂ ಸಾವನ್ನಪ್ಪಿದ್ದಾರೆ ಎಂದು ಸುದ್ದಿಗಾರರಿಗೆ ತಿಳಿಸಿದರು.ಪ್ರಾಥಮಿಕ ಮೌಲ್ಯಮಾಪನವು ಸೋರಿಕೆಯಿಂದಾಗಿ ಕುಡಿಯುವ ನೀರಿನ ಪೈಪ್ಲೈನ್ಗೆ ಒಳಚರಂಡಿ ನೀರು ಪ್ರವೇಶಿಸಿದೆ ಎಂದು
ಬೆಂಗಳೂರು: ಬಯೋಕಾನ್ ಕಂಪನಿಯ ಉದ್ಯೋಗಿ ಅನಂತಕುಮಾರ್(26) 5ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಸಂಬಂಧ ಕಂಪನಿ ಮುಖ್ಯಸ್ಥೆ ಕಿರಣ್ ಮುಜುಂಧಾರ್ ಶಾ ಆಘಾತ ವ್ಯಕ್ತಪಡಿಸಿದ್ದಾರೆ. ಈ ಘಟನೆ ಎಲೆಕ್ಟ್ರಾನಿಕ್ ಸಿಟಿಯಲ್ಲಿ ವರದಿಯಾಗಿದೆ. ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಈ ಕುರಿತು ಕಿರಣ್ ಅವರು ಬರೆದುಕೊಂಡಿದ್ದಾರೆ. ಈ ದುರಂತದ ಸುದ್ದಿ ಕೇಳಿ ನನಗೆ ಆಘಾತವಾಯಿತು. ಅವರ ಕುಟುಂಬಕ್ಕೆ ನನ್ನ ಸಂತಾಪಗಳು ಎಂದು ಬರೆದುಕೊಂಡಿದ್ದಾರೆ.ಈ ಸಂಬಂಧ ಪೊಲೀಸರಲ್ಲಿ ಮಾಹಿತಿ ಪಡೆದುಕೊಂಡಾಗ, ಬನಶಂಕರಿಯ ಅನಂತ್ ಕುಮಾರ್ ಅವರು ಕಳೆದ ಎರಡು
ಮುಂಬೈ: ಯುವ ಬ್ಯಾಟರ್ ಸರ್ಫರಾಜ್ ಖಾನ್ ಅವರು ಇಂದು ಮೈದಾದದಲ್ಲಿ ಅಬ್ಬರಿಸಿ ಬೊಬ್ಬಿರಿದಿದ್ದಾರೆ. ಅವರ ಈ ಆರ್ಭಟ ಬಿಸಿಸಿಐ ಆಯ್ಕೆ ಸಮಿತಿಗೆ ಹೊಸ ಸವಾಲನ್ನು ತಂದೊಡ್ಡಿದೆ.ಬುಧವಾರ ಗೋವಾ ವಿರುದ್ಧ ಮುಂಬೈನ ವಿಜಯ್ ಹಜಾರೆ ಟ್ರೋಫಿ ಪಂದ್ಯದಲ್ಲಿ ಕೇವಲ 75 ಎಸೆತಗಳಲ್ಲಿ 157 ರನ್ ಗಳಿಸಿದ್ದಾರೆ. 28 ವರ್ಷದ ಸರ್ಫರಾಜ್ ಅದ್ಭುತ ಫಾರ್ಮ್ನಲ್ಲಿದ್ದು, 14 ಸಿಕ್ಸರ್ಗಳು ಮತ್ತು 9 ಬೌಂಡರಿಗಳನ್ನು ಬಾರಿಸಿದ್ಧಾರೆ. ಈ ಮೂಲಕ ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಗೂ ಮುನ್ನ ಆಯ್ಕೆದಾರರಿಗೆ ಸರ್ಫರಾಜ್ ಖಾನ್ ಭರ್ಜರಿ ಸಂದೇಶವನ್ನು ಕಳುಹಿಸಿದ್ದಾರೆ. ದೇಶೀಯ ಕ್ರಿಕೆಟ್ನಲ್ಲಿ ಉತ್ತರ ಪ್ರದರ್ಶನ ನೀಡಿರುವ ಸರ್ಫರಾಜ್ ಖಾನ್ ಅವರ ಈ ಇನಿಂಗ್ಸ್ ಜನವರಿ 11 ರಂದು ಪ್ರಾರಂಭವಾಗುವ ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಗೂ ಮುನ್ನ ಆಯ್ಕೆದಾರರಿಗೆ ನೀಡಿರುವ ಸಂದೇಶ ಎಂದೇ ಭಾವಿಸಲಾಗುತ್ತಿದೆ.
ಲಕ್ನೋ: ಬಾಲಿವುಡ್ ನಟಿ, ನೀಲಿಚಿತ್ರಗಳ ಮಾಜಿ ತಾರೆ ಸನ್ನಿ ಲಿಯೋನ್ ಅವರ ಕಾರ್ಯಕ್ರಮಕ್ಕೆ ಕಾಯುತ್ತಿದ್ದ ಅಭಿಮಾನಿಗಳಿಗೆ ಭಾರೀ ನಿರಾಸೆಯಾಗಿದೆ. ಹೊಸ ವರ್ಷಕ್ಕೆ ನಿಗದಿಯಾಗಿದ್ದ ಕಾರ್ಯಕ್ರಮ ದಿಢೀರ್ ರದ್ದಾಗಿದೆ.ಉತ್ತರ ಪ್ರದೇಶದ ಮಥುರಾದಲ್ಲಿ ಹೊಸ ವರ್ಷಾಚರಣೆ ಪ್ರಯುಕ್ತ ಆಯೋಜಿಸಲಾಗಿದ್ದ ಬಾಲಿವುಡ್ ನಟಿ ಸನ್ನಿ ಲಿಯೋನ್ ಅವರ ಕಾರ್ಯಕ್ರಮ ರದ್ದುಗೊಳಿಸಲಾಗಿದೆ. ಈ ಕಾರ್ಯಕ್ರಮಕ್ಕೆ ವಿರೋಧ ವ್ಯಕ್ತವಾಗಿತ್ತು.ಸ್ಥಳೀಯ ಮಠಾಧೀಶರು, ಧಾರ್ಮಿಕ ಸಂಘಟನೆಗಳು ಹಾಗೂ ಸಂತರಿಂದ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆ ಕಾರ್ಯಕ್ರಮವನ್ನ ರದ್ದುಗೊಳಿಸಲಾಗಿದೆ ಎಂದು ಆಯೋಜಕರು ತಿಳಿಸಿದ್ದಾರೆ. ಇದು ಶ್ರೀಕೃಷ್ಣನ ಜನ್ಮಸ್ಥಳವಾಗಿದೆ. ಇಂತಹ ಸ್ಥಳದಲ್ಲಿ ಸನ್ನಿ ಲಿಯೋನ್ ಅವರನ್ನು ಕರೆಸಿ ಡಿಜೆ ಕಾರ್ಯಕ್ರಮ ಆಯೋಜಿಸಿರೋದು ಅಸಮಾಧಾನಕ್ಕೆ ಕಾರಣವಾಗಿತ್ತು.
ವಿಶ್ವದ ಎಲ್ಲಾ ರಾಷ್ಟ್ರಗಳಿಗಿಂತ ಮೊದಲು ಈ ಒಂದು ಪುಟ್ಟ ದ್ವೀಪ ರಾಷ್ಟ್ರ ಹೊಸ ವರ್ಷ 2026 ರನ್ನು ಸ್ವಾಗತಿಸಿದೆ. ಭಾರತದಲ್ಲಿ ಇನ್ನೂ ಹೊಸ ವರ್ಷಾಚರಣೆಗೆ ಕೆಲವು ಗಂಟೆಗಳು ಬಾಕಿಯಿದೆ. ಪೆಸಿಫಿಕ್ ನಲ್ಲಿರುವ ಪುಟ್ಟ ದ್ವೀಪ ಕಿರಿಬಾಟಿ ಈಗಾಗಲೇ ಹೊಸ ವರ್ಷ 2026 ಕ್ಕೆ ಕಾಲಿಟ್ಟಿದೆ. ಭಾರತೀಯ ಕಾಲಮಾನ ಪ್ರಕಾರ ಅಪರಾಹ್ನ 3.30 ಕ್ಕೆ ಅಲ್ಲಿ ಜನವರಿ 1 ಆರಂಭವಾಗಿದೆ. ವಿಶ್ವದಲ್ಲಿ ಮೊದಲು ಹೊಸ ವರ್ಷ ಸ್ವಾಗತಿಸುವ ದ್ವೀಪ ರಾಷ್ಟ್ರವಿದು. ಕಿರಿಬಾಟಿ ಗ್ರೀನ್ ವಿಚ್ ಸಮಯಕ್ಕಿಂತ 11 ಗಂಟೆ ಮುಂದಿದೆ. ಪ್ರಪಂಚದ ಅನೇಕ ರಾಷ್ಟ್ರಗಳಲ್ಲಿ ಇನ್ನೂ ಡಿಸೆಂಬರ್ 31 ಜಾರಿಯಲ್ಲಿದೆ.
ಇಂದೋರ್: ಮಧ್ಯಪ್ರದೇಶ ರಾಜ್ಯದಲ್ಲಿ ಇಂದೋರ್ನಲ್ಲಿ ಭೀಕರ ದುರ್ಘಟನೆ ಸಂಭವಿಸಿದೆ. ಕಲುಷಿತ ನೀರು ಸೇವನೆಯಿಂದ ಉಂಟಾದ ಅತಿಸಾರ ಮತ್ತು ವಾಂತಿಯಿಂದ ಈವರೆಗೆ ಎಂಟು ಮಂದಿ ಮೃತಪಟ್ಟಿದ್ದಾರೆ.ದೇಶದಲ್ಲಿಯೇ ಸತತ ಎಂಟು ಬಾರಿ ಅತ್ಯಂತ ಸ್ವಚ್ಛ ನಗರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದ ಇಂದೋರ್ನಲ್ಲಿ ಭಾರಿ ದುರಂತವೊಂದು ಸಂಭವಿಸಿದೆ. ನೂರಾರು ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ಮೂವರು ಅಧಿಕಾರಿಗಳನ್ನು ಅಮಾನತುಗೊಳಿಸಿದೆ.ಡಿಸೆಂಬರ್ 25 ರಂದು ಭಗೀರಥಪುರ ಪ್ರದೇಶಕ್ಕೆ ಸರಬರಾಜಾದ ಕುಡಿಯುವ ನೀರಿನಲ್ಲಿ ಅಸಾಮಾನ್ಯ ವಾಸನೆ ಮತ್ತು ರುಚಿ ಕಂಡುಬಂದಿತ್ತು. ಈ ನೀರನ್ನು ಸೇವಿಸಿದ ನಂತರ ಸ್ಥಳೀಯ ನಿವಾಸಿಗಳಲ್ಲಿ ವಾಂತಿ, ಭೇದಿ ಮತ್ತು ತೀವ್ರ ಹೊಟ್ಟೆ ನೋವು ಕಾಣಿಸಿಕೊಂಡಿದೆ.
ಬೆಂಗಳೂರು: ನಾನು ದಾಖಲಿಸಿದ ದೂರು ಸಂಪೂರ್ಣವಾಗಿ ನಿರ್ಲಕ್ಷಿಸಲ್ಪಟ್ಟಿದೆ, ಆದರೆ ಬೇರೊಬ್ಬ ಮಹಿಳೆಯ ದೂರಿನ ಮೇಲೆ ಒಂದೇ ದಿನದಲ್ಲಿ ಕ್ರಮ ಕೈಗೊಳ್ಳಲಾಗಿದೆ ಎಂದು ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರು ಪೊಲೀಸರಿಗೆ ಟಕ್ಕರ್ ನೀಡಿದ್ದರೆ. ಸಾಮಾಜಿಕ ಜಾಲತಾಣದಲ್ಲಿ ತಮ್ಮ ವಿರುದ್ಧ ಅವಹೇಳನಕಾರಿ ಕಮೆಂಟ್ ಮಾಡಿದ್ದವರ ವಿರುದ್ಧ ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಬೆಂಗಳೂರು ಸಿಟಿ ಸೈಬರ್ ಕ್ರೈಂ ಪೊಲೀಸರಿಗೆ ಕೆಲವು ದಿನಗಳ ಹಿಂದೆ ದೂರು ನೀಡಿದ್ದರು. ಆದರೆ ಆ ದೂರಿನ ಬಗ್ಗೆ ಪೊಲೀಸರು ಇದುವರೆಗೆ ಯಾವುದೇ ಕ್ರಮ ತೆಗೆದುಕೊಂಡಿಲ್ಲ ಎಂದು ವಿಜಯಲಕ್ಷ್ಮಿ ದರ್ಶನ್ ಸೋಷಿಯಲ್ ಮೀಡಿಯಾದಲ್ಲಿ ಅಸಮಾಧಾನ ಹೊರಹಾಕಿದ್ದಾರೆ.
ಬೆಂಗಳೂರು: ಸಿದ್ದರಾಮಯ್ಯರ ನೇತೃತ್ವದ ಕಾಂಗ್ರೆಸ್ ಸರಕಾರ ಟೋಪಿ ಸರಕಾರ; ಇವರು ಇಷ್ಟು ದಿನ ಕರ್ನಾಟಕದ ಕನ್ನಡಿಗರಿಗೆ ಟೋಪಿ ಹಾಕಿ, ಇವತ್ತು ಕರ್ನಾಟಕದಲ್ಲಿ ಮಿನಿ ಬಾಂಗ್ಲಾದೇಶವನ್ನು ನಿರ್ಮಿಸುತ್ತಿದ್ದಾರೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಆಕ್ಷೇಪಿಸಿದ್ದಾರೆ.ಒತ್ತುವರಿ ಹಿನ್ನೆಲೆಯಲ್ಲಿ ಅಕ್ರಮವಾಗಿ ವಾಸವಿದ್ದವರನ್ನು ತೆರವುಗೊಳಿಸಿದ ಯಲಹಂಕದ ಕೋಗಿಲು ಬಡಾವಣೆಗೆ ಇಂದು ಭೇಟಿ ನೀಡಿದ ವೇಳೆ ಅವರು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದರು. ಈ ಸರಕಾರ ಬಂದ ಬಳಿಕ ಕರ್ನಾಟಕವು ಮಿನಿ ಬಾಂಗ್ಲಾದೇಶೀಯರ ತಾಣ ಆಗುತ್ತಿದೆ ಎಂದು ಟೀಕಿಸಿದರು. ಇವರು ಯಾರು? ಎಲ್ಲಿಂದ ಬಂದರು ಎಂದು ಕೇಳಿದರು.
ಬೆಂಗಳೂರು: ಸಿಲಿಕಾನ್ ಸಿಟಿಯ ಮಂದಿ ಹೊಸ ವರ್ಷ ಸ್ವಾಗತಕ್ಕೆ ಸಜ್ಜಾಗಿದ್ದಾರೆ. ಇಂದು ಬೆಂಗಳೂರು ಬಹುತೇಕ ರಸ್ತೆಗಳು ಜನದಟ್ಟಣೆಯಿಂದ ಕೂಡಿರಲಿದೆ. ಹೀಗಾಗಿ, ಪ್ರಮುಖ ರಸ್ತೆಗಳಲ್ಲಿ ವಾಹನ ಸಂಚಾರ, ಪಾರ್ಕಿಂಗ್ ನಿಷೇಧಿಸಲಾಗಿದೆ.ನಗರದಲ್ಲಿ ಅಹಿತಕರ ಘಟನೆಗಳು ಸಂಭವಿಸದಂತೆ ತಡೆಯಲು ಹಲವು ಮುಂಜಾಗ್ರತಾ ಕ್ರಮಗಳನ್ನು ಪೊಲೀಸ್ ಇಲಾಖೆ ತೆಗೆದುಕೊಂಡಿದೆ. ಹೀಗಾಗಿ, ಹಲವು ರಸ್ತೆಗಳಲ್ಲಿ ಸಂಚಾರಕ್ಕೆ ನಿರ್ಬಂಧಿಸಲಾಗಿದೆ. ಪ್ರಮುಖ ರಸ್ತೆಗಳಲ್ಲಿ ಬಣ್ಣದ ವಿದ್ಯುತ್ ದೀಪಗಳ ಅಲಂಕಾರದಿಂದ ಕಂಗೊಳಿಸುತ್ತಿವೆ. ಪಬ್, ಕ್ಲಬ್, ರೆಸ್ಟೊರೆಂಟ್ಗಳು ಬುಧವಾರ ರಾತ್ರಿ ಪಾರ್ಟಿ ಆಯೋಜಿಸಲು ಸಿದ್ಧತೆಗೊಂಡಿವೆ.ಮಹಾತ್ಮ ಗಾಂಧಿ ರಸ್ತೆ, ಚರ್ಚ್ ಸ್ಟ್ರೀಟ್, ಬ್ರಿಗೇಡ್ ರಸ್ತೆ, ಕೋರಮಂಗಲ, ಒಪೆರಾ ಜಂಕ್ಷನ್, ರೆಸ್ಟ್ಹೌಸ್ ರಸ್ತೆ, ಸೇಂಟ್ ಮಾರ್ಕ್ ರಸ್ತೆ, ರಿಚ್ಮಂಡ್ ರಸ್ತೆ, ರೆಸಿಡೆನ್ಸಿ ರಸ್ತೆಗೆ ದೊಡ್ಡ ಸಂಖ್ಯೆಯಲ್ಲಿ ಯುವ ಸಮೂಹ ಬರುವ ನಿರೀಕ್ಷೆಯಿದೆ.
ಬೆಂಗಳೂರು: ಅಕ್ರಮ ಒತ್ತುವರಿ ತೆರವುಗೊಳಿಸಿದ ಯಲಹಂಕದ ಕೋಗಿಲು ಲೇಔಟ್ ಗೆ ಇಂದು ಆರ್ ಅಶೋಕ್ ನೇತೃತ್ವದಲ್ಲಿ ಬಿಜೆಪಿ ನಾಯಕರು ಭೇಟಿ ಕೊಟ್ಟಿದ್ದಾರೆ. ಈ ವೇಳೆ ಮಹಿಳೆಯೊಬ್ಬರಿಗೆ ಎಷ್ಟು ವರ್ಷದಿಂದ ಇದ್ದೀಯಮ್ಮಾ ಎಂದಾಗ ಆಕೆ ಕೊಟ್ಟ ಉತ್ತರಕ್ಕೆ ಬಿಜೆಪಿ ನಾಯಕರೇ ಶಾಕ್ ಆಗಿದ್ದಾರೆ. ಕೋಗಿಲು ಲೇಔಟ್ ನಲ್ಲಿ ಮನೆ ತೆರವುಗೊಳಿಸಿದ ಜಾಗಕ್ಕೆ ಇಂದು ಆರ್ ಅಶೋಕ್, ಛಲವಾದಿ ನಾರಾಯಣಸ್ವಾಮಿ ಸೇರಿದಂತೆ ಬಿಜೆಪಿ ನಾಯಕರ ನಿಯೋಗ ಭೇಟಿ ಕೊಟ್ಟಿದೆ. ಈ ವೇಳೆ ಅಲ್ಲಿದ್ದ ಮಹಿಳೆಯೊಬ್ಬಳ ಬಳಿ ಎಷ್ಟು ವರ್ಷದಿಂದ ಇದ್ದೀಯಮ್ಮಾ ಎಂದು ಕೇಳಿದ್ದಾರೆ. ಅದಕ್ಕೆ ಆಕೆ 30 ವರ್ಷದಿಂದ ಇದ್ದೀವಿ ಎಂದಿದ್ದಾಳೆ.
ಬೆಂಗಳೂರು: ಹೊಸ ವರ್ಷವನ್ನು ಅದ್ಧೂರಿಯಾಗಿ ಸ್ವಾಗತಿಸಲು ಪ್ಲಾನ್ ಮಾಡಿರುವ ಸಿಲಿಕಾನ್ ಸಿಟಿ ಮಂದಿಗೆ ಮೆಟ್ರೊ ಮತ್ತು ಬಿಎಂಟಿಸಿ ಗುಡ್ನ್ಯೂಸ್ ನೀಡಿದೆ. ಇಂದು ತಡರಾತ್ರಿವರೆಗೆ ಸಾರಿಗೆ ಸೇವೆಯನ್ನು ವಿಸ್ತರಿಸಿದೆ. ಮಧ್ಯರಾತ್ರಿವರೆಗೂ ಸಂಭ್ರಮಿಸುವ ಬೆಂಗಳೂರಿಗರ ಸುರಕ್ಷತೆ ಸಂಚಾರಕ್ಕಾಗಿ ಮೆಟ್ರೊ, ಬಿಎಂಟಿಸಿ ತನ್ನ ಸೇವೆ ಸಮಯ ಮತ್ತು ಮಾರ್ಗಗಳನ್ನ ವಿಸ್ತರಿಸಿದೆ. ತಡರಾತ್ರಿವರೆಗೂ ಜನರ ಅನೂಕೂಲಕ್ಕಾಗಿ ಸಂಚಾರ ನಾಡಿಗಳು ಸೇವೆ ನೀಡಲಿವೆ.ಇಂದು ರಾತ್ರಿ ಹಾಗೂ ಜನವರಿ 1ರಂದು ಮೆಟ್ರೋ ವಿಶೇಷ ವೇಳಾಪಟ್ಟಿ ಜಾರಿಯಲ್ಲಿರಲಿದೆ. ನೇರಳೆ, ಹಸಿರು ಮತ್ತು ಹಳದಿ ಮಾರ್ಗಗಳಲ್ಲಿ ಸೇವಾ ಸಮಯವನ್ನ ತಡರಾತ್ರಿವರೆಗೆ ವಿಸ್ತರಣೆ ಮಾಡಲಾಗಿದೆ. ಹೊಸ ವರ್ಷದ ಸಂಭ್ರಮದಲ್ಲಿ ಜನಸಂದಣಿ ಹೆಚ್ಚಾಗುವ ಹಿನ್ನೆಲೆ, ಪ್ರಯಾಣಿಕರ ಅನುಕೂಲಕ್ಕಾಗಿ ಮೆಟ್ರೋ ಕೊನೆಯ ರೈಲು ಸಮಯವನ್ನು ವಿಸ್ತರಿಸಲಾಗಿದೆ.
ಬೆಂಗಳೂರು: ಕೇರಳ ಸಿಎಂ ಪಿಣರಾಯಿ ವಿಜಯನ್ ಭೇಟಿ ಮಾಡಿದ ಕ್ಷಣವನ್ನು ಸಿಎಂ ಸಿದ್ದರಾಮಯ್ಯ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ಇದಕ್ಕೆ ಪ್ರತಿಕ್ರಿಯಿಸಿರುವ ನೆಟ್ಟಿಗರು ಇಬ್ಬರೂ ಕೇರಳ ಸಿಎಂ ಒಂದೇ ಫ್ರೇಮ್ ನಲ್ಲಿ ಎಂದು ಟಾಂಗ್ ಕೊಟ್ಟಿದ್ದಾರೆ. ಕೋಗಿಲು ಲೇಔಟ್ ನಲ್ಲಿ ಅಕ್ರಮ ವಸತಿಗಳನ್ನು ಕೆಡವಿದ್ದಕ್ಕೆ ಕರ್ನಾಟಕ ಸರ್ಕಾರದ ವಿರುದ್ಧ ಕೇರಳ ಸಿಎಂ ಟ್ವೀಟ್ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದರು. ಕೇರಳ ಸಿಎಂ ಮಾತಿಗೆ ಒಂದೂ ಎದುರಾಡದೇ ಕರ್ನಾಟಕ ಸರ್ಕಾರ ಅಕ್ರಮವಾಗಿ ಮನೆ ಮಾಡಿಕೊಂಡಿದ್ದವರಿಗೆ ಮನೆ ಕೊಡಲು ಮುಂದಾಗಿದೆ.
ಬೆಂಗಳೂರು: ಲೇಡಿ ಸೂಪರ್ ಸ್ಟಾರ್, ಬಹುಭಾಷಾ ತಾರೆ ನಯನಾತಾರಾ ಅಭಿಮಾನಿಗಳಿಗೆ ಟಾಕ್ಸಿಕ್ ಚಿತ್ರತಂಡ ಗುಡ್ನ್ಯೂಸ್ ನೀಡಿದೆ. ಚಿತ್ರದಲ್ಲಿನ ಫಸ್ಟ್ಲುಕ್ ಬಿಡುಗಡೆ ಮಾಡಿದ್ದು, ಖಡಕ್ ಲುಕ್ನಲ್ಲಿ ನಯನಾತಾರಾ ಕಾಣಿಸಿಕೊಂಡಿದ್ದಾರೆ. ಕೆಜಿಎಫ್ ಖ್ಯಾತಿಯ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಚಿತ್ರ ಟಾಕ್ಸಿಕ್: ಎ ಫೇರಿಟೇಲ್ ಫಾರ್ ಗ್ರೋನ್-ಅಪ್ಸ್ ಸಿನಿಮಾವು ಮಾರ್ಚ್ 19ರಂದು ತೆರೆಗೆ ಬರಲಿದೆ.ಬಿಗ್ಬಜೆಟ್ನ ಈ ಚಿತ್ರದ ಮೇಲಿನ ಕುತೂಹಲ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಈ ಚಿತ್ರದ ಒಂದೊಂದೇ ಪಾತ್ರಗಳನ್ನು ಪರಿಚಯಿಸುತ್ತಿರುವ ಚಿತ್ರತಂಡ, ಇದೀಗ ನಟಿ ನಯನತಾರಾ ಅವರ ಗಂಗಾ ಪಾತ್ರದ ಪೋಸ್ಟರ್ ಅನ್ನು ರಿಲೀಸ್ ಮಾಡಿದೆ. ಈ ಪೋಸ್ಟರ್ಗೆ ಅಭಿಮಾನಿಗಳು ಫುಲ್ ಫಿದಾ ಆಗಿದ್ದಾರೆ.
ಬೆಂಗಳೂರು: ನಾನು ದೂರು ಕೊಟ್ರೆ ಕ್ರಮ ಕೈಗೊಳ್ಳಲ್ಲ. ಆದರೆ ಆ ಲೇಡಿ ಕೊಟ್ಟ ದೂರಿಗೆ ಒಂದೇ ದಿನದಲ್ಲಿ ಕ್ರಮ ಕೈಗೊಳ್ಳುತ್ತಾರೆ. ಹೀಗಂತ ದರ್ಶನ್ ಪತ್ನಿ ವಿಜಯಲಕ್ಷ್ಮಿ ಸೋಷಿಯಲ್ ಮೀಡಿಯಾದಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ದರ್ಶನ್ ಪತ್ನಿ ವಿಜಯಲಕ್ಷ್ಮಿ ಮೊನ್ನೆಯಷ್ಟೇ ಸೋಷಿಯಲ್ ಮೀಡಿಯಾದಲ್ಲಿ ತಮಗೆ ಕಿಚ್ಚ ಸುದೀಪ್ ಅಭಿಮಾನಿಗಳ ಹೆಸರಿನಲ್ಲಿ ಅಶ್ಲೀಲ ಕಾಮೆಂಟ್ ಮಾಡಿದವರ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದರು. ತಮಗೆ ಕಾಮೆಂಟ್ ಮಾಡಿದವರ ಸ್ಕ್ರೀನ್ ಶಾಟ್ ಗಳನ್ನೂ ಅವರು ಲಗತ್ತಿಸಿದ್ದರು. ಆದರೆ ಇದುವರೆಗೆ ಸೂಕ್ತ ಕ್ರಮ ಕೈಗೊಂಡಿಲ್ಲ ಎಂಬುದು ವಿಜಯಲಕ್ಷ್ಮಿ ಅಸಮಾಧಾನಕ್ಕೆ ಕಾರಣವಾಗಿದೆ.
ನವದೆಹಲಿ: ಭಾರತ ಮತ್ತು ಪಾಕಿಸ್ತಾನ ನಡುವಿನ ಕದನ ವಿರಾಮದಲ್ಲಿ ಕ್ರೆಡಿಟ್ ಪಡೆಯಲು ಬಂದ ಅಮೆರಿಕ ಮತ್ತು ಚೀನಾಕ್ಕೆ ಭಾರತ ತಕ್ಕ ಪ್ರತ್ಯುತ್ತರ ನೀಡಿದೆ.ಅಮೆರಿಕ ಬೆನ್ನಲ್ಲೇ ಚೀನಾವು ಕದನ ವಿರಾಮದಲ್ಲಿ ಮಧ್ಯಸ್ಥಿಕೆ ವಹಿಸಿದ್ದೇವೆ ಎಂದು ಹೇಳಿಕೊಂಡಿತ್ತು. ಇದಕ್ಕೆ ತೀಷ್ಣವಾಗಿ ಪ್ರತಿಕ್ರಿಯಿಸಿದ ಭಾರತ ಕದನ ವಿರಾಮದಲ್ಲಿ ಮೂರನೇ ವ್ಯಕ್ತಿಗಳ ಪಾತ್ರವಿಲ್ಲ ಎಂದು ಸ್ಪಷ್ಟವಾಗಿ ಹೇಳಿದೆ.ಭಾರತ ಮತ್ತು ಪಾಕಿಸ್ತಾನ ಸಂಘರ್ಷದ ನಡುವೆ ಮಧ್ಯಸ್ಥಿಕೆ ವಹಿಸಿದೆ ಎಂಬ ಚೀನಾದ ಹೇಳಿಕೆಯನ್ನು ಭಾರತ ದೃಢವಾಗಿ ತಿರಸ್ಕರಿಸಿದೆ. ಕದನ ವಿರಾಮ ನಿರ್ಧಾರದಲ್ಲಿ ಯಾವುದೇ ಮೂರನೇ ವ್ಯಕ್ತಿ ಭಾಗಿಯಾಗಿಲ್ಲ ಎಂದು ಪುನರುಚ್ಚರಿಸಿದೆ.
ರಕ್ತ ಕೂಡಾ ಹೆಪ್ಪುಗಟ್ಟುವಷ್ಟು ಚಳಿ ಎಂದು ನಾವು ಹೇಳುತ್ತೇವೆ. ಹಾಗಿದ್ದರೆ ಚಳಿಗಾಲದಲ್ಲಿ ನಿಜವಾಗಿಯೂ ರಕ್ತಹೆಪ್ಪುಗಟ್ಟುತ್ತಾ? ಏನು ಅಪಾಯಗಳಿವೆ ನೋಡಿ. ಚಳಿಗಾಲದಲ್ಲಿ ಇತರೆ ಹವಾಮಾನಗಳಿಗೆ ಹೋಲಿಸಿದರೆ ರಕ್ತ ಹೆಚ್ಚು ಮಂದವಾಗುತ್ತದೆ. ವಿಪರೀತ ಚಳಿಯಿಂದ ನಮ್ಮ ದೇಹದಲ್ಲಿ ರಕ್ತಪರಿಚಲನೆ ಸುಗಮವಾಗಿ ನಡೆಯುವುದಿಲ್ಲ. ಸ್ವಲ್ಪ ನಿಧಾನವಾಗುತ್ತದೆ. ಇದಕ್ಕೆ ರಕ್ತ ಮಂದವಾಗುವುದು ಕಾರಣ. ಇದರಿಂದ ಗಂಭೀರ ಸಮಸ್ಯೆಗಳೂ ಎದುರಾಗಬಹುದು. ವಿಪರೀತ ಚಳಿಯಿಂದ ಹೃದಯಾಘಾತ, ಪಕ್ಷಪಾತದಂತಹ ಗಂಭೀರ ಆರೋಗ್ಯ ಸಮಸ್ಯೆ ಎದುರಾಗಬಹುದು. ರಕ್ತನಾಳಗಳಲ್ಲಿ ಅಲ್ಲಲ್ಲಿ ರಕ್ತ ಹೆಪ್ಪುಗಟ್ಟುವುದರಿಂದ ಹೃದಯಕ್ಕೆ ಸಾಕಷ್ಟು ಪ್ರಮಾಣದಲ್ಲಿ ರಕ್ತ ಪೂರೈಕೆಯಾಗದೇ ಸಮಸ್ಯೆಯಾಗಬಹುದು.
ವರ್ಕಳ: ಕೋಗಿಲು ಲೇಔಟ್ ನಲ್ಲಿ ಅಕ್ರಮ ವಸತಿಗಳನ್ನು ತೆರವುಗೊಳಿಸಿದ ಪ್ರಕರಣದಲ್ಲಿ ಕರ್ನಾಟಕ ಸರ್ಕಾರದ ವಿರುದ್ಧ ಸಿಎಂ ಪಿಣರಾಯಿ ವಿಜಯನ್ ಕಿಡಿ ಕಾರಿದ್ದರು. ಇದರ ಬೆನ್ನಲ್ಲೇ ಈಗ ಕೇರಳಕ್ಕೆ ಭೇಟಿ ಕೊಟ್ಟಿರುವ ಸಿಎಂ ಸಿದ್ದರಾಮಯ್ಯ ಕೇರಳ ಸಿಎಂ ಜೊತೆ ನಗುತ್ತಲೇ ಪೋಸ್ ಕೊಟ್ಟಿದ್ದಾರೆ. ಕೇರಳದ ವರ್ಕಳದಲ್ಲಿ ಶಿವಗಿರಿ ಮಠ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗಿಯಾದ ಸಿಎಂ ಸಿದ್ದರಾಮಯ್ಯ ಅಲ್ಲಿನ ಸಿಎಂ ಪಿಣರಾಯಿ ವಿಜಯನ್ ಅವರನ್ನು ಭೇಟಿ ಮಾಡಿದ್ದಾರೆ. ಈ ವೇಳೆ ಸಿದ್ದರಾಮಯ್ಯ ಮತ್ತು ಪಿಣರಾಯಿ ನಗು ನಗುತ್ತಲೇ ಪರಸ್ಪರ ಕುಶಲೋಪರಿ ವಿಚಾರಿಸಿ ಫೋಟೋಗೆ ಪೋಸ್ ಕೊಟ್ಟಿದ್ದಾರೆ.
ಬೆಂಗಳೂರು: ಕುಡಿದು ಟೈಟ್ ಆದವರನ್ನು ಮನೆಗೆ ಬಿಡ್ತೀವಿ ಎಂದಿದ್ದಕ್ಕೆ ಟ್ರೋಲ್ ಆದ ಬಳಿಕ ಗೃಹಸಚಿವ ಡಾ ಜಿ ಪರಮೇಶ್ವರ್ ಮಾಧ್ಯಮಗಳಿಗೆ ತಮ್ಮ ಹೇಳಿಕೆ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಕುಡಿದು ಮತ್ತಿನಲ್ಲಿರುವ ಎಲ್ಲರನ್ನೂ ಮನೆಗೆ ಬಿಡ್ತೀವಿ ಎಂದು ಅರ್ಥವಲ್ಲ. ಕೆಲವರು ಕುಡಿದು ಪ್ರಜ್ಞೆಯೇ ಇಲ್ಲದ ಸ್ಥಿತಿಯಲ್ಲಿರುತ್ತಾರೆ. ವಿಶೇಷವಾಗಿ ಮಹಿಳೆಯರು ಈ ಸ್ಥಿತಿಯಲ್ಲಿದ್ದಾಗ ಅವರ ಜೊತೆ ದುರ್ವರ್ತನೆ ತೋರುವ ಸಾಧ್ಯತೆಯಿರುತ್ತದೆ. ಹೀಗಾಗಿ ಅವರ ಸುರಕ್ಷತೆ ದೃಷ್ಟಿಯಿಂದ ಈ ರೀತಿ ವ್ಯವಸ್ಥೆ ಮಾಡಿದ್ದೇವೆ. ತೀರಾ ಆಗದವರನ್ನು ಕೆಲವು ಕಡೆ ಪೊಲೀಸರೇ ಕೇಂದ್ರಗಳನ್ನು ಮಾಡಿದ್ದಾರೆ. ಅಲ್ಲಿಗೆ ಕರೆದುಕೊಂಡು ಹೋಗಿ ಸ್ವಲ್ಪ ಸುಧಾರಿಸಿದ ಮೇಲೆ ಮನೆಗೆ ಬಿಡಲಾಗುತ್ತದೆ.
ಬೆಂಗಳೂರು: ಚಿನ್ನದ ಬೆಲೆ ಪ್ರತಿನಿತ್ಯ ಏರಿಳಿಕೆಯಾಗುತ್ತಲೇ ಇದೆ. ಇಂದು ಪರಿಶುದ್ಧ ಚಿನ್ನದ ದರ ಮತ್ತು ಇತರೆ ಚಿನ್ನದ ದರ ಸತತ ಮೂರನೇ ದಿನ ಇಳಿಕೆ ಕಂಡಿದೆ. ಇಂದು ಪರಿಶುದ್ಧ ಚಿನ್ನದ ದರ ಮತ್ತು ಇತರೆ ಚಿನ್ನದ ದರ ವಿವರ ಇಲ್ಲಿದೆ ನೋಡಿ. ಚಿನ್ನದ ದರ ಏರಿಕೆಕಳೆದ ವಾರ ಪರಿಶುದ್ಧ ಚಿನ್ನದ ದರ ಸತತ ಇಳಿಕೆ ಕಂಡಿತ್ತು. ಆದರೆ ವಾರಂತ್ಯಕ್ಕೆ ಚಿನ್ನದ ದರ ಏರಿಕೆ-ಇಳಿಕೆಯಾಗುತ್ತಲೇ ಇತ್ತು. ಈ ವಾರ ಆರಂಭದಿಂದಲೇ ಇಳಿಕೆಯತ್ತ ಸಾಗಿದೆ. ಇಂದು ಪರಿಶುದ್ಧ ಚಿನ್ನದ ದರ ಮತ್ತಷ್ಟು ಇಳಿಕೆಯಾಗಿದೆ. ಪರಿಶುದ್ಧ ಚಿನ್ನದ ದರ ಮೊನ್ನೆ 1,40,975.00 ರೂ.ಗಳಿತ್ತು. ಇಂದು 1,39,095.00 ರೂ.ಗಳಷ್ಟಾಗಿದೆ.
ಬೆಂಗಳೂರು: ಅಡಿಕೆ ಬೆಲೆ ಒಂದು ವಾರದಿಂದ ಯಥಾಸ್ಥಿತಿಯಲ್ಲಿತ್ತು. ಇಂದು ಕೊಂಚ ದರ ಏರಿಕೆಯಾಗಿರುವುದು ಸಮಾಧಾನ ತಂದಿದೆ. ಇಂದು ಅಡಿಕೆ ಮತ್ತು ಕಾಳು ಮೆಣಸು, ಕೊಬ್ಬರಿ ದರ ಹೇಗಿದೆ ಇಲ್ಲಿದೆ ವಿವರ. ಅಡಿಕೆ ಬೆಲೆ ಏರಿಕೆಯೂ ಅಲ್ಲ ಇಳಿಕೆಯೂ ಇಲ್ಲ ಎನ್ನುವ ಸ್ಥಿತಿಯಲ್ಲಿತ್ತು. ಒಂದೆಡೆ ಬೆಳೆ ಕಡಿಮೆ, ಇನ್ನೊಂದೆಡೆ ಬೆಲೆ ಏರಿಕೆಯಾಗದೇ ಇರುವುದು ರೈತರ ಚಿಂತೆಗೆ ಕಾರಣವಾಗಿದೆ. ಅಡಿಕೆ ಬೆಲೆ ಇಳಿಕೆಯಾಗುತ್ತಿದೆಯೇ ಹೊರತು ಏರಿಕೆಯಾಗುತ್ತಿಲ್ಲ ಎಂಬ ಚಿಂತೆ ಬೆಳೆಗಾರರದ್ದು. ಆದರೆ ಇಂದು ಹೊಸ ಅಡಿಕೆ ಬೆಲೆ 10 ರೂ.ಗಳಷ್ಟು ಏರಿಕೆಯಾಗಿದ್ದು 425 ರೂ.ಗಳಷ್ಟಿದೆ.
ಮುಂಬೈ: ಟೀಂ ಇಂಡಿಯಾ ವೇಗಿ ಮೊಹಮ್ಮದ್ ಶಮಿ ವಿಚಾರದಲ್ಲಿ ಬಿಸಿಸಿಐ ಮಹತ್ವದ ತೀರ್ಮಾನ ತೆಗೆದುಕೊಳ್ಳಲು ಮುಂದಾಗಿದೆ ಎಂಬ ಸುದ್ದಿ ಹರಿದಾಡುತ್ತಿದೆ. 2023 ರ ಏಕದಿನ ವಿಶ್ವಕಪ್ ಹೀರೋ ಆಗಿದ್ದ ಮೊಹಮ್ಮದ್ ಶಮಿ ಬಳಿಕ ಟೀಂ ಇಂಡಿಯಾ ಪರ ಒಂದು ಸರಣಿ ಬಿಟ್ಟರೆ ಮತ್ತೆಲ್ಲೂ ಆಯ್ಕೆಯೇ ಆಗಿಲ್ಲ. ಸ್ವತಃ ಶಮಿಯೇ ತಮ್ಮನ್ನು ಕಡೆಗಣಿಸುತ್ತಿರುವುದಕ್ಕೆ ಅಸಮಾಧಾನ ಹೊರಹಾಕಿದ್ದರು. ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ಪದೇ ಪದೇ ಶಮಿ ಫಿಟ್ನೆಸ್ ಬಗ್ಗೆ ಬೆರಳು ತೋರಿಸುತ್ತಿದ್ದಾರೆ.
ಬೆಂಗಳೂರು: ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರ ಇನ್ನೂ ತಣ್ಣಗಾಗಿಲ್ಲ. ಈ ವಿಚಾರವಾಗಿ ಡಿಕೆ ಶಿವಕುಮಾರ್ ಹೊಸ ವರ್ಷದ ಹೊಸ್ತಿಲಲ್ಲೇ ಮಹತ್ವದ ಹೇಳಿಕೆ ನೀಡಿದ್ದಾರೆ. ಅಧಿಕಾರ ಹಂಚಿಕೆ ವಿಚಾರವಾಗಿ ಈ ವರ್ಷವಂತೂ ಯಾವುದೇ ತೀರ್ಮಾನವಾಗಿಲ್ಲ. ಎಲ್ಲಾ ಹೈಕಮಾಂಡ್ ನಿರ್ಧರಿಸುತ್ತದೆ ಎಂದು ರಾಜ್ಯ ನಾಯಕರು ಹೇಳುತ್ತಿದ್ದಾರೆ. ಆದರೆ ರಾಜ್ಯ ನಾಯಕರಿಗೆ ಹೈಕಮಾಂಡ್ ಇನ್ನೂ ಯಾವುದೇ ಸ್ಪಷ್ಟತೆ ನೀಡಿಲ್ಲ. ಮೊನ್ನೆಯಷ್ಟೇ ಡಿಕೆಶಿ ಆಪ್ತ ಶಾಸಕ ಇಕ್ಬಾಲ್ ಹುಸೇನ್ ಜನವರಿ 6 ಕ್ಕೆ ಅಥವಾ 9 ಕ್ಕೆ ಡಿಕೆ ಶಿವಕುಮಾರ್ ಸಿಎಂ ಆಗೋದು ಪಕ್ಕಾ ಎಂದಿದ್ದರು. ಅವರು ಇದು ಎರಡನೇ ಬಾರಿ ಈ ಹೇಳಿಕೆ ನೀಡುತ್ತಿದ್ದಾರೆ. ಇದರ ಬಗ್ಗೆ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.
ಹೊಸ ವರ್ಷ 2026 ರನ್ನು ಸ್ವಾಗತಿಸಲು ಇನ್ನೇನು ಕೆಲವೇ ಕ್ಷಣಗಳು ಬಾಕಿಯಿವೆ. ಪ್ರತೀ ಬಾರಿ ಹೊಸ ವರ್ಷಾಚರಣೆ ಸಂದರ್ಭದಲ್ಲಿ ವಿಶೇಷವಾಗಿ ಮಹಿಳೆಯರ ಸುರಕ್ಷತೆ ಬಗ್ಗೆ ಪ್ರಶ್ನೆ ಮೂಡುತ್ತದೆ. ಹೀಗಾಗಿ ಹೊಸ ವರ್ಷದ ಪಾರ್ಟಿಗೆ ಹೋಗುವ ಯುವತಿಯರು ಹುಷಾರಾಗಿರಿ. ಬೆಂಗಳೂರಿನಲ್ಲಂತೂ ಹೊಸ ವರ್ಷಾಚರಣೆ ಇತ್ತೀಚೆಗಿನ ವರ್ಷಗಳಲ್ಲಿ ಕುಡಿತದ ದಿನದಂತೆ ಬದಲಾಗಿದೆ. ಯುವಕ-ಯುವತಿಯರು ರಸ್ತೆಯಲ್ಲಿ ಕುಡಿದು ತೂರಾಡುತ್ತಿರುವ ದೃಶ್ಯಗಳು ಸಾಮಾನ್ಯವಾಗುತ್ತಿದೆ. ಈ ಬಾರಿಯೂ ಇಂತಹ ದೃಶ್ಯಗಳು ಕಂಡುಬರುವುದು ಸಹಜ. ಇಂತಹ ಸಂದರ್ಭಗಳಲ್ಲೇ ಕುಡಿದ ಮತ್ತಿನಲ್ಲಿ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಅತೀ ಹೆಚ್ಚು ದಾಖಲಾಗುತ್ತವೆ.