ವಡೋದರಾ: ಡಬ್ಲ್ಯುಪಿಎಲ್ 2026 ರಲ್ಲಿ ಗುಜರಾತ್ ಜೈಂಟ್ಸ್ ತಂಡವನ್ನು 7 ವಿಕೆಟ್ ಗಳಿಂದ ಮಣಿಸಿದ ಡೆಲ್ಲಿ ಕ್ಯಾಪಿಟಲ್ಸ್ ಎರಡನೇ ಬಾರಿಗೆ ಡಬ್ಲ್ಯುಪಿಎಲ್ ಫೈನಲ್ ಗೇರಿದೆ. ಇದರೊಂದಿಗೆ ಎರಡನೇ ಬಾರಿ ಆರ್ ಸಿಬಿ-ಡೆಲ್ಲಿ ಫೈನಲ್ ನಲ್ಲಿ ಮುಖಾಮುಖಿಯಾಗುತ್ತಿದೆ. ಇಂದು ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ಮೊದಲು ಫೀಲ್ಡಿಂಗ್ ಆಯ್ದುಕೊಂಡಿತು. ಗುಜರಾತ್ ಪರ ಬೆತ್ ಮೂನಿ ಹೋರಾಟದ 62, ಜಾರ್ಜಿಯಾ ವಾರೆಹಾಮ್ 35 ರನ್ ಗಳಿಸಿದರು. ಹಾಗಿದ್ದರೂ ಗುಜರಾತ್ 20 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 168 ರನ್ ಗಳಿಸಲಷ್ಟೇ ಶಕ್ತವಾಯಿತು.
ಬೆಂಗಳೂರು: ರಾಜ್ಯ ವಿಧಾನಸಭೆ ವಿಶೇಷ ಅಧಿವೇಶನ ನಡೆಯುತ್ತಿದ್ದು ಇಂದು ರಾತ್ರಿ ಬಿಜೆಪಿ ಶಾಸಕರು ವಿಧಾನಸೌಧದಲ್ಲೇ ಮೊಕ್ಕಾಂ ಹೂಡಲಿದ್ದಾರೆ. ಅಬಕಾರಿ ಇಲಾಖೆಯಲ್ಲಿ ನಡೆದಿದೆ ಎನ್ನಲಾದ ಸಾವಿರಾರು ಕೋಟಿ ರೂ. ಹಗರಣಕ್ಕೆ ಸಂಬಂಧಿಸಿದಂತೆ ಅಬಕಾರಿ ಸಚಿವ ಆರ್ ಬಿ ತಿಮ್ಮಾಪುರ ರಾಜೀನಾಮೆಗೆ ಬಿಜೆಪಿ ಪಟ್ಟು ಹಿಡಿದಿದೆ. ಈ ಸಂಬಂಧ ಇಂದು ಬಿಜೆಪಿ ಶಾಸಕರು ಸದನದಲ್ಲೇ ಇದ್ದು ಅಹೋರಾತ್ರಿ ಧರಣಿ ನಡೆಸಲಿದ್ದಾರೆ. ಬಿಜೆಪಿ ಶಾಸಕರಿಗೆ ಜೆಡಿಎಸ್ ಶಾಸಕರೂ ಸಾಥ್ ನೀಡಿದ್ದಾರೆ. ಈ ಸಂಬಂಧ ಮಾಧ್ಯಮಗಳೊಂದಿಗೆ ಮಾತನಾಡಿದ ಬಿವೈ ವಿಜಯೇಂದ್ರ, ‘ಅಬಕಾರಿ ಸಚಿವರ ಮೇಲೆ ನೇರ ಆರೋಪ ಬಂದಿದೆ.
ಬೆಂಗಳೂರು: ಪ್ರಧಾನಿ ಮೋದಿ ದೇಶದ್ರೋಹಿ ಎಂದು ಕಾಂಗ್ರೆಸ್ ಎಂಎಲ್ ಸಿ ನಸೀರ್ ಅಹ್ಮದ್ ಗೆ ರಾಜ್ಯ ಬಿಜೆಪಿ ಘಟಕ ತಿರುಗೇಟು ನೀಡಿದ್ದು ಹಾಗಿದ್ದರೆ ರಾಹುಲ್ ಗಾಂಧಿಯನ್ನು ಏನು ಹೇಳಬೇಕು ಎಂದು ಪ್ರಶ್ನೆ ಮಾಡಿದೆ. ಸದನದಲ್ಲಿ ನಸೀರ್ ಅಹ್ಮದ್ ನಾಲಿಗೆ ಹರಿಯಬಿಟ್ಟಿದ್ದರು. ಇದು ಬಿಜೆಪಿ ಮತ್ತು ಕಾಂಗ್ರೆಸ್ ಶಾಸಕರ ನಡುವೆ ಭಾರೀ ಗದ್ದಲಕ್ಕೆ ಕಾರಣವಾಗಿತ್ತು. ಈ ಬಗ್ಗೆ ಈಗ ಸೋಷಿಯಲ್ ಮೀಡಿಯಾದಲ್ಲಿ ವಾಗ್ದಾಳಿ ನಡೆಸಿರುವ ಬಿಜೆಪಿ ‘ದೇಶದ ಪ್ರಧಾನಿ ಅವರನ್ನು ಅನಾವಶ್ಯಕವಾಗಿ ಸದನಕ್ಕೆ ಎಳೆದು ತಂದು ʼದ್ರೋಹಿʼ ಎಂದಿರುವ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್ ಅವರ ನಡೆ ಖಂಡನೀಯ.
ನವದೆಹಲಿ: ಅಮೆರಿಕಾ ಒತ್ತಡಕ್ಕೆ ಮಣಿದು ಪ್ರಧಾನಿ ಮೋದಿ ದೇಶವನ್ನೇ ಮಾರಿದ್ದಾರೆ ಎಂದು ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಆರೋಪ ಮಾಡಿದ್ದಾರೆ. ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಪ್ರಧಾನಿ ಮೋದಿ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದರು. ಇದರ ಬೆನ್ನಲ್ಲೇ ಭಾರತದ ಮೇಲಿನ ಸುಂಕವನ್ನು ಟ್ರಂಪ್ 18% ಕ್ಕೆ ಇಳಿಕೆ ಮಾಡಿದ್ದರು. ಅಲ್ಲದೆ, ಅಮೆರಿಕಾ ಜೊತೆ ದೊಡ್ಡ ವ್ಯಾಪಾರ ಒಪ್ಪಂದಕ್ಕೂ ಮುಂದಾಗಿದ್ದಾರೆ. ಈ ವಿಚಾರವಾಗಿ ರಾಹುಲ್ ಗಾಂಧಿ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ‘ಯುರೋಪ್ ಒಪ್ಪಂದದ ಬೆನ್ನಲ್ಲೇ ಮೋದಿ ಇದ್ದಕ್ಕಿದ್ದಂತೆ ಅಮೆರಿಕಾ ಜೊತೆ ವ್ಯಾಪಾರ ಒಪ್ಪಂದಕ್ಕೆ ಒಪ್ಪಿಕೊಂಡಿದ್ದಾರೆ. ಮೋದಿಜೀ ಅಮೆರಿಕಾದ ಒತ್ತಡಕ್ಕೆ ಮಣಿದಿದ್ದಾರೆ.
ಮಣಿಪುರ: ಮಂಗಳವಾರ ಬಿಜೆಪಿ ಮಣಿಪುರದಲ್ಲಿ ಶಾಸಕಾಂಗ ಪಕ್ಷದ ನಾಯಕರಾಗಿ ಯುಮ್ನಮ್ ಖೇಮ್ಚಂದ್ ಸಿಂಗ್ ಅವರನ್ನು ಆಯ್ಕೆ ಮಾಡಿದೆ. ಖೇಮ್ಚಂದ್ ಮಣಿಪುರದ ಮುಂದಿನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.ಈಶಾನ್ಯ ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಕೊನೆಗೊಳ್ಳುವ ಕೆಲವು ದಿನಗಳ ಮೊದಲು ದೆಹಲಿಯಲ್ಲಿ ನಡೆದ ಮಣಿಪುರದ ಬಿಜೆಪಿ ಶಾಸಕರ ಸಭೆಯ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಬಿಜೆಪಿ ಶಾಸಕರ ಸಭೆಯ ನಂತರ, ಮಣಿಪುರದಲ್ಲಿ ಎನ್ಡಿಎ ಪಾಲುದಾರರು ಮಂಗಳವಾರ ಸಭೆ ಸೇರಿದರು.
ಬೆಂಗಳೂರು: ಹಾಲು ಸೇವನೆ ಮಾಡಿದರೆ ಕೆಲವರಿಗೆ ಅಲರ್ಜಿಯಾಗುತ್ತದೆ. ಯಾರಿಗೆಲ್ಲಾ ಹಾಲಿನ ಸೇವನೆಯಿಂದ ಅಲರ್ಜಿಯಾಗುತ್ತದೆ ಮತ್ತು ಇದಕ್ಕೆ ಕಾರಣವೇನು ಇಲ್ಲಿದೆ ವಿವರ. ಹಾಲು ಸೇವನೆ ಮಾಡುವುದು ಆರೋಗ್ಯಕ್ಕೆ ಉತ್ತಮ. ಹಾಲು ಒಂದು ಪರಿಪೂರ್ಣ ಆಹಾರವಾಗಿದ್ದು ಶಕ್ತಿ ವರ್ಧಕ. ಆದರೆ ಕೆಲವರಿಗೆ ಹಾಲು ಸೇವನೆ ಮಾಡುವುದರಿಂದ ಚರ್ಮದ ಅಲರ್ಜಿ, ಹೊಟ್ಟೆಯ ಕಿರಿ ಕಿರಿ, ಉಸಿರಾಟಕ್ಕೆ ಸಂಬಂಧಿಸಿದ ಸಮಸ್ಯೆಯಾಗುತ್ತದೆ. ವಿಶೇಷವಾಗಿ ನವಜಾತ ಮಕ್ಕಳಿಗೆ ಹಾಲು ಅಲರ್ಜಿಯಾಗಬಹುದು. ಇಲ್ಲವೇ ಕುಟುಂಬದಲ್ಲಿ ಈ ರೀತಿ ಹಿನ್ನಲೆಯಿದ್ದವರಿಗೆ ಅಥವಾ ಉಸಿರಾಟದ ಸಮಸ್ಯೆ ಇರುವವರಿಗೆ ಹಾಲು ಅಲರ್ಜಿಕಾರಕವಾಗಬಹುದು. ಇದಕ್ಕೆ ಕಾರಣವೂ ಇದೆ.
ಗುಜರಾತ್ ಜೈಂಟ್ಸ್ ವಿರುದ್ಧದ WPL 2026 ಎಲಿಮಿನೇಟರ್ ಪಂದ್ಯದಲ್ಲಿ, ಡೆಲ್ಲಿ ಕ್ಯಾಪಿಟಲ್ಸ್ ನಾಯಕಿ ಜೆಮಿಮಾ ರೋಡ್ರಿಗಸ್ ಅವರು ಕೋಟಂಬಿಯ ವಡೋದರಾ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡರು.ಟೂರ್ನಮೆಂಟ್ನ ಎರಡನೇ ಫೈನಲಿಸ್ಟ್ ಅನ್ನು ನಿರ್ಧರಿಸುವ ಪಂದ್ಯವನ್ನು ವಡೋದರಾದ ಬಿಸಿಎ ಕ್ರೀಡಾಂಗಣ ಆಯೋಜಿಸಲಿದೆ. ಈ ಹೈ-ಸ್ಟೇಕ್ಸ್ ಪಂದ್ಯದ ವಿಜೇತರು ಫೆಬ್ರವರಿ 5, ಗುರುವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಎದುರಿಸಲಿದ್ದಾರೆ.ಗುಜರಾತ್ ಜೈಂಟ್ಸ್: ಬೆತ್ ಮೂನಿ (WK), ಸೋಫಿ ಡಿವೈನ್, ಅನುಷ್ಕಾ ಶರ್ಮಾ, ಆಶ್ಲೀ ಗಾರ್ಡ್ನರ್ (C),
ಬಾಗಲಕೋಟೆ: ಕುಡಿದ ಮತ್ತಿನಲ್ಲಿ ವ್ಯಕ್ತಿಯೊಬ್ಬ ತನ್ನ ಪತ್ನಿಯ ತಲೆ ಬೋಳಿಸಿರುವ ಘಟನೆ ವರದಿಯಾಗಿದೆ. ಈ ಘಟನೆ ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲ್ಲೂಕಿನ ತೊದಲಬಾಗಿ ಗ್ರಾಮದಲ್ಲಿ ವರದಿಯಾಗಿದೆ. ಸಪತ್ನಿಯ ತಲೆ ಬೋಳಿಸಿದ ಪತಿಯನ್ನು ಉಮೇಶ್ ಕೊಟ್ಟಲಗಿ ಎಂದು ಗುರುತಿಸಲಾಗಿದೆ. ಆರೋಪಿಯನ್ನು ಸಾವಳಗಿ ಪೊಲೀಸರು ಬಂಧಿಸಿದ್ದಾರೆ.
ಚಿತ್ರದುರ್ಗ: ಶಾಲಾ ಶಿಕ್ಷಕನೊಬ್ಬ ವಿದ್ಯಾರ್ಥಿನಿಯರಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಬಗ್ಗೆ ಗಂಭೀರ ಆರೋಪ ಕೇಳಬಂದ ಘಟನೆ ತಾಲೂಕಿನ ಭರಮಸಾಗರ ಗ್ರಾಮದಲ್ಲಿ ಕೇಳಿಬಂದಿದೆ. ಇಲ್ಲಿನ ಪ್ರತಿಷ್ಠಿತ ಮಠವೊಂದಕ್ಕೆ ಸೇರಿದ ಶಾಲೆಯಲ್ಲಿ ಶಿಕ್ಷಕ ನೀಚ ಕೃತ್ಯ ಬಯಲಾಗಿದೆ. ಶಿಕ್ಷಕ ವಿದ್ಯಾರ್ಥಿಗಳನ್ನು ಪ್ರತ್ಯೇಕ ಕೋಣೆಗೆ ಕರೆದು ಲೈಂಗಿಕ ಕಿರುಕುಳ ನೀಡಿದ್ದಾನೆಂದು ಆರೋಪ ಬಂದಿದೆ. ವಿಷಯ ತಿಳಿದು ಆಘಾತಕ್ಕೊಳಗಾದ ಶಾಲಾ ಆಡಳಿತ ಮಂಡಳಿಯು ಘಟನೆಯನ್ನು ಗಂಭೀರವಾಗಿ ಪರಿಗಣಿಸಿ, ಕೂಡಲೇ ಕಾನೂನು ಕ್ರಮಕ್ಕೆ ಮುಂದಾಗಿದೆ.
ನವದೆಹಲಿ: ಇರಾನ್ನಲ್ಲಿನ ಬೆಳವಣಿಗೆಗಳ ನಂತರ ಇಂಡಿಗೋ ಮಂಗಳವಾರ ಪ್ರಯಾಣ ಸಲಹೆಯನ್ನು ನೀಡಿದೆ ಮತ್ತು ಗ್ರಾಹಕರು ಮತ್ತು ಸಿಬ್ಬಂದಿಗೆ "ಸುರಕ್ಷಿತ ಮತ್ತು ತಡೆರಹಿತ" ಅನುಭವವನ್ನು ಖಚಿತಪಡಿಸಿಕೊಳ್ಳಲು ತನ್ನ ವಿಮಾನ ವೇಳಾಪಟ್ಟಿಯನ್ನು ಸರಿಹೊಂದಿಸಿದೆ.ಎಕ್ಸ್ನಲ್ಲಿನ ಪೋಸ್ಟ್ನಲ್ಲಿ, ಇಂಡಿಗೋ ಟಿಬಿಲಿಸಿ, ಅಲ್ಮಾಟಿ, ಬಾಕು ಮತ್ತು ತಾಷ್ಕೆಂಟ್ಗೆ ಮತ್ತು ಅಲ್ಲಿಂದ ಹೊರಡುವ ತನ್ನ ವಿಮಾನಗಳನ್ನು ಫೆಬ್ರವರಿ 28 ರವರೆಗೆ ರದ್ದುಗೊಳಿಸಲಾಗಿದೆ ಎಂದು ಗಮನಿಸಿದೆ. ಪ್ರಯಾಣ ಸಲಹೆ- ಇರಾನ್ನ ಸುತ್ತಮುತ್ತಲಿನ ಅಭಿವೃದ್ಧಿಶೀಲ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ನಮ್ಮ ಗ್ರಾಹಕರು ಮತ್ತು ಸಿಬ್ಬಂದಿಗೆ ಸುರಕ್ಷಿತ ಮತ್ತು ತಡೆರಹಿತ
ಬೆಂಗಳೂರು: ಮಂಗಳೂರಿನ ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ನಡೆಯುತ್ತಿರುವ ದುರಾಡಳಿತದ ಬಗ್ಗೆ ಕರ್ನಾಟಕ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಅಧಿಕಾರಿಗಳು ಪ್ರಾಣಿಗಳನ್ನು ಸರಿಯಾಗಿ ನೋಡಿಕೊಳ್ಳಲು ಸಾಧ್ಯವಾಗದಿದ್ದರೆ ಜೈವಿಕ ಉದ್ಯಾನವನವನ್ನು ತಕ್ಷಣವೇ ಮುಚ್ಚಬೇಕೆಂದು ರಾಜ್ಯ ಸರ್ಕಾರಕ್ಕೆ ಕಠಿಣ ಎಚ್ಚರಿಕೆ ನೀಡಿದೆ.ವನ್ಯಜೀವಿ ಸಂರಕ್ಷಣಾ ತಜ್ಞ ಭುವನ್ ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ ವಿಚಾರಣೆಯ ಸಂದರ್ಭದಲ್ಲಿ ಈ ಅಭಿಪ್ರಾಯ ವ್ಯಕ್ತಪಡಿಸಲಾಗಿದೆ.ಪ್ರಾಣಿಗಳ ಸ್ಥಿತಿಯನ್ನು ಗಂಭೀರವಾಗಿ ಗಮನಿಸಿದ ನ್ಯಾಯಾಲಯವು, ರಕ್ಷಣೆ ಮತ್ತು ಸರಿಯಾದ
ಚೆನ್ನೈನ ಬೀದಿಯಲ್ಲಿ ಸಿಕ್ಕಿದ ₹45 ಲಕ್ಷದ ಚಿನ್ನವಿದ್ದ ಚೀಲವನ್ನು ಪೊಲೀಸರಿಗೆ ನೀಡಿ ಪ್ರಾಮಾಣಿಕತೆ ಮೆರೆದ ಪೌರ ಕಾರ್ಮಿಕ ಮಹಿಳೆ ಪದ್ಮಾಗೆ ಸೂಪರ್ ಸ್ಟಾರ್ ರಜನಿಕಾಂತ್ ಚಿನ್ನದ ಸರ ಉಡುಗೊರೆ ಗೌರವಿಸಿದ್ದಾರೆ. ಇದಕ್ಕೂ ಮೊದಲು, ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಅವರು ಪದ್ಮಾ ಅವರನ್ನು ಸನ್ಮಾನಿಸಿದ್ದರು.ರಜನಿಕಾಂತ್ ಮಂಗಳವಾರ ಚೆನ್ನೈನ ಅವರ ನಿವಾಸದಲ್ಲಿ ನೈರ್ಮಲ್ಯ ಕಾರ್ಯಕರ್ತೆ ಪದ್ಮಾ ಅವರನ್ನು ಭೇಟಿಯಾಗಿ ಅವರ ಪ್ರಾಮಾಣಿಕತೆಯನ್ನು ಶ್ಲಾಘಿಸಿದರು. ಟಿ ನಗರದಲ್ಲಿ ಕೆಲಸ ಮಾಡುವ ಪದ್ಮಾ ಅವರು ತಮ್ಮ ಪಾಳಿಯಲ್ಲಿ ಚಿನ್ನದ ಆಭರಣಗಳನ್ನು ಹೊಂದಿದ್ದ ಒಂದು ಹಕ್ಕುದಾರರಿಲ್ಲದ ಚೀಲವನ್ನು ಕಂಡುಕೊಂಡಿದ್ದರು. ಅವರು ತಕ್ಷಣ ತಮ್ಮ ಮೇಲ್ವಿಚಾರಕರಿಗೆ ಮಾಹಿತಿ ನೀಡಿ ಚೀಲವನ್ನು ಪಾಂಡಿ ಬಜಾರ್ ಪೊಲೀಸ್ ಠಾಣೆಗೆ ಹಸ್ತಾಂತರಿಸಿದರು. ನಂತರ, ಆಭರಣಗಳನ್ನು ಅದರ ನಿಜವಾದ
ಕಾರವಾರ: ಖ್ಯಾತ ಜ್ಯೋತಿಷಿ ಕಮಲಾಕರ ಭಟ್ ಗುರೂಜಿ ಜತೆಗೆ ಅಕ್ರಮ ಸಂಬಂಧ ಹೊಂದಿದ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ಆಕೆಯ ಪತಿಯ ಸಹೋದರನ ಕೊಲೆಯಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರದಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿ ಶಿವಮೊಗ್ಗ ಮೂಲದ ಜ್ಯೋತಿಷಿ ಕಮಲಾಕರ ಭಟ್ ಗುರೂಜಿ ಸೇರಿದಂತೆ 7ಮಂದಿ ಆರೋಪಿಗಳನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಸಿದ್ದಾಪುರ ತಾಲೂಕಿನ ಅವರಗುಪ್ಪ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು ವಸಂತ್ ನಾಯ್ಕ (41) ಎಂದು ಗುರುತಿಸಲಾಗಿದೆ. ಮಹೇಶ್ ಹಾಗೂ ಕುಮಾರ್ ಎಂಬುವವರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಪುತ್ತೂರು: ಪುತ್ತೂರಿನ ಮಹಾಲಿಂಗೇಶ್ವರ ದೇವಸ್ಥಾನದ ಎದುರಿನ ನೆಲ್ಲಿಕಟ್ಟೆಯ ಖಾಸಗಿ ಬಸ್ ನಿಲ್ದಾಣದ ಬಳಿ 1 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ರಾಜ್ಯದ ಮೂರನೇ ಅತಿ ಎತ್ತರದ ರಾಷ್ಟ್ರೀಯ ಧ್ವಜಸ್ತಂಭದಲ್ಲಿ ಫೆಬ್ರವರಿ 1 ರ ಭಾನುವಾರ ಸಂಜೆ ತ್ರಿವರ್ಣ ಧ್ವಜವನ್ನು ಸ್ವಲ್ಪ ಸಮಯದವರೆಗೆ ಪ್ರಾಯೋಗಿಕವಾಗಿ ಹಾರಿಸಲಾಯಿತು.80 ಮೀಟರ್ ಎತ್ತರದ ಬೃಹತ್ ರಾಷ್ಟ್ರೀಯ ಧ್ವಜಸ್ತಂಭದ ಸ್ಥಾಪನೆಯು ಭಾನುವಾರ ಬೆಳಿಗ್ಗೆ ಪ್ರಾರಂಭವಾಯಿತು. ದೊಡ್ಡ ಕ್ರೇನ್ ಬಳಸಿ ಧ್ವಜಸ್ತಂಭವನ್ನು ಸ್ಥಾಪಿಸಲಾಯಿತು, ಮತ್ತು ಸಂಜೆಯ ಹೊತ್ತಿಗೆ, ರಾಷ್ಟ್ರೀಯ ತ್ರಿವರ್ಣ ಧ್ವಜವನ್ನು ಪ್ರಾಯೋಗಿಕವಾಗಿ ಸಂಕ್ಷಿಪ್ತವಾಗಿ ಹಾರಿಸಲಾಯಿತು ಮತ್ತು ನಂತರ ಕೆಳಗಿಳಿಸಲಾಯಿತು. ಶಾಸಕ ಅಶೋಕ್ ಕುಮಾರ್ ರೈ ಮತ್ತು ಇತರರು ಸ್ಥಾಪನೆಯ ಸಮಯದಲ್ಲಿ ಹಾಜರಿದ್ದರು. ನೂರಾರು ಜನರು ಸ್ಥಳದಲ್ಲಿ ಜಮಾಯಿಸಿ ತೀವ್ರ ಆಸಕ್ತಿಯಿಂದ ವೀಕ್ಷಿಸಿದರು.
ನವದೆಹಲಿ: ಕಾಗದಗಳನ್ನು ಹರಿದು ಕುರ್ಚಿಯ ಮೇಲೆ ಎಸೆದ ಆರೋಪ ಸೇರಿದಂತೆ 'ಅಶಿಸ್ತಿನ ವರ್ತನೆ'ಗಾಗಿ ಎಂಟು ಪ್ರತಿಪಕ್ಷ ಸದಸ್ಯರನ್ನು ಲೋಕಸಭೆಯಿಂದ ಮಂಗಳವಾರ ಅಮಾನತುಗೊಳಿಸಲಾಗಿದೆ.ಸದನವು ಹಲವು ಬಾರಿ ಮುಂದೂಡಿಕೆಯಾದ ನಂತರ ಮಧ್ಯಾಹ್ನ 3 ಗಂಟೆಗೆ ಸಭೆ ಸೇರಿದ ತಕ್ಷಣ, ಅಧ್ಯಕ್ಷರಾಗಿದ್ದ ದಿಲೀಪ್ ಸೈಕಾ ಅವರು ಎಂಟು ಕಾಂಗ್ರೆಸ್ ಸದಸ್ಯರನ್ನು ಹೆಸರಿಸಿದರು.ತರುವಾಯ, ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು ಏಪ್ರಿಲ್ 2 ರಂದು
ಬೆಂಗಳೂರು: ಈಚೆಗೆ ನಟ ದುನಿಯಾ ವಿಜಯ್, ರಚಿತಾ ರಾಮ್ ಅವರು ಅಭಿನಯಿಸಿದ ಲ್ಯಾಂಡ್ಲಾರ್ಡ್ ಸಿನಿಮಾಗೆ ರಾಜ್ಯ ಸರ್ಕಾರದಿಂದ ತೆರಿಗೆ ವಿನಾಯಿತಿ ಪಡೆದಿದೆ.ಚಿತ್ರತಂಡದ ಮನವಿಯನ್ನು ಪುರಸ್ಕರಿಸಿ, ಅಧಿಕಾರಿಗಳಿಗೆ ಈ ಸಂಬಂಧ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಸಾಮಾಜಿಕ ನ್ಯಾಯ ಮತ್ತು ಶೋಷಣೆಯ ವಿರುದ್ಧದ ಹೋರಾಟದ ಕಥೆಯನ್ನು ಹೊಂದಿರುವ ಲ್ಯಾಂಡ್ಲಾರ್ಡ್ ಸಿನಿಮಾ ರಾಜ್ಯ ಸರ್ಕಾರದಿಂದ ತೆರಿಗೆ ವಿನಾಯಿತಿ ಪಡೆದಿದೆ.
ಆಂಧ್ರದ ವ್ಯಕ್ತಿಯೊಬ್ಬರು ಬರೋಬ್ಬರಿ ₹2.08 ಕೋಟಿ ರೂಪಾಯಿಗೆ ನಂಬರ್ ಪ್ಲೇಟ್ ಅನ್ನು ಖರೀದಿಸಿರುವ ಘಟನೆ ವರದಿಯಾಗಿದೆ. ಈ ಕಾರಿನ ನಂಬರ್ "DDC 001" ಅನ್ನು 2.08 ಕೋಟಿಗೆ ಮಾರಾಟ ಮಾಡುವ ಮೂಲಕ ಹೊಸ ಮೈಲಿಗಲ್ಲನ್ನು ಮುಟ್ಟಿದೆ, ಇದು ದೇಶದಲ್ಲಿ ಇದುವರೆಗೆ ಮಾರಾಟವಾದ ಅತ್ಯಂತ ದುಬಾರಿ ನಂಬರ್ ಪ್ಲೇಟ್ ಆಗಿದೆ. ಬಿಗ್ ಬಾಯ್ ಟಾಯ್ಜ್ನಿಂದ ಹರಾಜು ಹೌಸ್ನ ಪ್ರಾರಂಭದ ಸಮಯದಲ್ಲಿ ದಾಖಲೆ-ಮುರಿಯುವ ವಹಿವಾಟು ನಡೆಯಿತು, ಆದರೂ ಸ್ಪಾಟ್ಲೈಟ್ ತ್ವರಿತವಾಗಿ ವೇದಿಕೆಯಿಂದ ವಿಂಟೇಜ್ ಸಂಖ್ಯೆಯಿಂದ
ಮಂಜೇಶ್ವರ: ಮಾದಕ ವ್ಯಸನಿ ತಂದೆಯೊಬ್ಬ ಇದ್ದ ಒಬ್ಬ ಮಗಳನ್ನು ಕೊಂದ ಘಟನೆ ಕುಂಜತ್ತೂರು ತೂಮಿನಕಾಡು ಹಿಲ್ ಟಾಪ್ನಲ್ಲಿ ನಡೆದಿದೆ. ಮಗಳನ್ನು ಕತ್ತಿಯಿಂದ ಇರಿದು ಪಾಪಿ ತಂದೆ ದಾರುಣವಾಗಿ ಕೊಲೆಗೈದಿದ್ದಾನೆ. ರಕ್ತದ ಮಡುವಿನಲ್ಲಿದ್ದ ಜುಮೈಲಾ (18)ಳನ್ನು ಆಸ್ಪತ್ರೆಗೆ ದಾಖಲಿಸಿದರು, ಯಾವುದೇ ಪ್ರಯೋಜನವಾಗಿಲ್ಲ. ಇನ್ನೂ ಘಟನೆಯಲ್ಲಿ ಗಾಯಗೊಂಡಿರುವ ಜುಮೈಲಾ ಅವರ ದೊಡ್ಡಪ್ಪ ಶೇಕುಂಞಿ( 65) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಮನೆಯಲ್ಲಿ ಕಿರುಚಾಟ ಕೇಳಿ ಪರಿಸರದ ಜನರು ಸ್ಥಳಕ್ಕೆ ಧಾವಿಸಿದಾಗ ಜುಮೈಲಾ ರಕ್ತದ
ಬೆಂಗಳೂರು: ದೇಶಾದ್ಯಂತ ಹಲವು ರಾಜ್ಯಗಳಲ್ಲಿ ನಿಫಾ ವೈರಸ್ ಮರುಕಳಿಸುತ್ತಿರುವ ಬಗ್ಗೆ ವರದಿಯಾಗುತ್ತಿದ್ದು, ಕರ್ನಾಟಕ ಆರೋಗ್ಯ ಇಲಾಖೆ ಸಂಪೂರ್ಣ ಕಟ್ಟೆಚ್ಚರ ವಹಿಸಿದೆ. ವೈರಸ್ ಮುಖ್ಯವಾಗಿ ಬಾವಲಿಗಳು ಭಾಗಶಃ ತಿನ್ನುವ ಹಣ್ಣುಗಳ ಸೇವನೆಯಿಂದ ಅಥವಾ ಹಂದಿಮಾಂಸವನ್ನು ಸೇವಿಸುವ ಮೂಲಕ ಹರಡುತ್ತದೆ ಎಂದು ತಿಳಿದುಬಂದಿದೆ.ಕೆಲವು ಸಂದರ್ಭಗಳಲ್ಲಿ, ಮಾನವನಿಂದ ಮನುಷ್ಯನಿಗೆ ಹರಡುವಿಕೆ ವರದಿಯಾಗಿದೆ. ಅತ್ಯಂತ ಆತಂಕಕಾರಿ ಅಂಶವೆಂದರೆ ನಿಫಾ ವೈರಸ್ನ ಮರಣ ಪ್ರಮಾಣವು 60 ರಿಂದ 75 ಪ್ರತಿಶತದಷ್ಟು ಎಂದು ಅಂದಾಜಿಸಲಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯಕ್ಕೆ ವೈರಸ್ ಬಾರದಂತೆ ಆರೋಗ್ಯ ಇಲಾಖೆ ಕಟ್ಟುನಿಟ್ಟಿನ ಮುಂಜಾಗ್ರತಾ
ನವದೆಹಲಿ: ಗೌಪ್ಯತೆ ಉಲ್ಲಂಘನೆ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ವಾಟ್ಸಪ್ ಒಡೆತನದ ಮೆಟಾ ಸಂಸ್ಥೆಗೆ ಸುಪ್ರೀಂ ಕೋರ್ಟ್ ಗಂಭೀರ ವಾರ್ನಿಂಗ್ ನೀಡಿದೆ. ದೇಶದ ನಿಯಮಗಳನ್ನ ಪಾಲಿಸಲು ಸಾಧ್ಯವಾಗದಿದ್ದರೆ ದೇಶ ಬಿಟ್ಟು ತೊಲಗಿ ಎಂದು ಎಚ್ಚರಿಕೆ ನೀಡಿದೆ. ಮೆಟಾ ಸಂಸ್ಥೆಯನ್ನ ತೀವ್ರವಾಗಿ ತರಾಟೆಗೆ ತೆಗೆದುಕೊಂಡ ಕೋರ್ಟ್, ಬಹುರಾಷ್ಟ್ರೀಯ ಕಂಪನಿಯೊಂದರ ವ್ಯವಹಾರ ಹಿತಾಸಕ್ತಿಗಾಗಿ ನಾಗರಿಕರ ಗೌಪ್ಯತೆಯನ್ನ ರಾಜೀ ಮಾಡಿಕೊಳ್ಳಲು ಅನುಮತಿಸುವುದಿಲ್ಲ. ಸುರಕ್ಷತೆಯನ್ನ ಖಚಿತಪಡಿಸಿಕೊಳ್ಳದಿದ್ದರೆ ಅಂತಹ ಡೇಟಾ ಹಂಚಿಕೆಯನ್ನ ನಿಷೇಧಿಸಬಹುದು ಎಂದು ಹೇಳಿದೆ.ಮೆಟಾ ಸಂಸ್ಥೆಯು ಉದ್ದೇಶಿತ ಜಾಹೀರಾತಿಗಾಗಿ ವಾಟ್ಸ್ಆ್ಯಪ್ ಬಳಕೆದಾರರ ಖಾಸಗಿ ಡೇಟಾವನ್ನ ಹಂಚಿಕೊಳ್ಳುತ್ತಿದೆ ಎನ್ನುವ ಆರೋಪ ಕೇಳಿಬಂದ ಹಿನ್ನೆಲೆ ಸುಪ್ರೀಂ ಕೋರ್ಟ್ ಈ ಸೂಚನೆ ನೀಡಿದೆ.
ಬೆಂಗಳೂರು : ಲ್ಯಾಂಡ್ ಲಾರ್ಡ್ ಸಿನಿಮಾ ಹಾಡಿ ಹೊಗಳಿದ ಸಿಎಂ ಸಿದ್ದರಾಮಯ್ಯ ತೆರಿಗೆ ವಿನಾಯಿತಿ ಘೋಷಿಸಿದ್ದಾರೆ.ದುನಿಯಾ ವಿಜಯ್ ನಾಯಕರಾಗಿರುವ ಲ್ಯಾಂಡ್ ಲಾರ್ಡ್ ಸಿನಿಮಾ ಇತ್ತೀಚೆಗೆ ಬಿಡುಗಡೆಯಾಗಿದೆ. ಈ ಸಿನಿಮಾದಲ್ಲಿ ಸಮಾಜಕ್ಕೆ ಉತ್ತಮ ಸಂದೇಶ ನೀಡಲಾಗಿದೆ ಎಂದು ತೆರಿಗೆ ವಿನಾಯಿತಿ ಘೋಷಿಸಲಾಗಿದೆ. ಈ ಬಗ್ಗೆ ಸೋಷಿಯಲ್ ಮೀಡಿಯಾ ಎಕ್ಸ್ ನಲ್ಲಿ ಸಂದೇಶ ಹಂಚಿಕೊಂಡಿರುವ ಸಿಎಂ ಸಿದ್ದರಾಮಯ್ಯಸಾಮಾಜಿಕ ಅಸಮಾನತೆ ಮತ್ತು ಜಾತಿಯಾಧಾರಿತ ಶೋಷಣೆ ವಿಷಯಾಧಾರಿತ ದುನಿಯಾ ವಿಜಯ್ ನಾಯಕತ್ವದ "ಲ್ಯಾಂಡ್ ಲಾರ್ಡ್" ಚಲನಚಿತ್ರಕ್ಕೆ ತೆರಿಗೆ ವಿನಾಯಿತಿ ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ.
ಬೆಂಗಳೂರು: ಅಕ್ರಮ ಬಾಂಗ್ಲಾದೇಶ ವಲಸಿಗರ ವಿರುದ್ಧ ಯಾಕೆ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಬಿಜೆಪಿ ನಾಯಕ ಸಿಟಿ ರವಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.20 ಲಕ್ಷ ಬಾಂಗ್ಲಾದೇಶ ಅಕ್ರಮ ವಲಸಿಗರು ಇದ್ದಾರೆ ಎಂಬ ವರದಿಗಳನ್ನು ಆಧರಿಸಿ ಅವರು ಸರ್ಕಾರವನ್ನು ಪ್ರಶ್ನೆ ಮಾಡಿದ್ದಾರೆ. ವರದಿಗಳಿದ್ದರೂ ನಿರ್ಲಕ್ಷ್ಯ ಮಾಡುತ್ತಿರುವುದು ಯಾಕೆ ಎಂದು ಪ್ರಶ್ನೆ ಮಾಡಿದ್ದಾರೆ.ರಾಜ್ಯದಲ್ಲಿ 20 ಲಕ್ಷ ಬಾಂಗ್ಲಾದೇಶಿ ಪ್ರಜೆಗಳು ವಾಸವಾಗಿದ್ದಾರೆ. ಈ ವಿಚಾರ ರಾಜ್ಯ ಸರ್ಕಾರಕ್ಕೆ ತಿಳಿದಿದ್ದೂ ಕಾನೂನು ಕ್ರಮ ಕೈಗೊಳ್ಳಲು ಯಾಕೆ ಮುಂದಾಗುತ್ತಿಲ್ಲ?
ಬೆಂಗಳೂರು: ಕಾನ್ಫಿಡೆನ್ಸ್ ಸಂಸ್ಥೆ ಮುಖಸ್ಥ, ಉದ್ಯಮಿ ಸಿಜೆ ರಾಯ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹಸಚಿವ ಡಾ ಜಿ ಪರಮೇಶ್ವರ್ ಮಹತ್ವದ ಹೇಳಿಕೆ ನೀಡಿದ್ದಾರೆ. ಸಿಜೆ ರಾಯ್ ಮೊನ್ನೆಯಷ್ಟೇ ತಮ್ಮ ಕಚೇರಿಯಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಅವರು ಐಟಿ ದಾಳಿಯ ಬೆನ್ನಲ್ಲೇ ಮಾನಸಿಕ ಒತ್ತಡಕ್ಕೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿತ್ತು. ಈ ಬಗ್ಗೆ ಸರ್ಕಾರ ಎಸ್ ಐಟಿ ರಚನೆ ಮಾಡಿದ್ದು ತನಿಖೆ ನಡೆಸಲಾಗುತ್ತಿದೆ. ತನಿಖೆಯ ಪ್ರಗತಿ ಬಗ್ಗೆ ಗೃಹಸಚಿವ ಡಾ ಜಿ ಪರಮೇಶ್ವರ್ ಹೇಳಿಕೆ ನೀಡಿದ್ದಾರೆ.
ಬೆಂಗಳೂರು: ಅಡಿಕೆ ಬೆಲೆ ಕಳೆದ ವಾರ ಏರಿಕೆ-ಇಳಿಕೆಯಾಗಿತ್ತು. ಇಂದು ಪಟೋರ ದರ ಮಾತ್ರ ಏರಿಕೆಯಾಗಿದೆ. ಉಳಿದವು ಯಥಾಸ್ಥಿತಿಯಲ್ಲಿದೆ. ಇಂದು ಅಡಿಕೆ ಮತ್ತು ಕಾಳು ಮೆಣಸು, ಕೊಬ್ಬರಿ ದರ ಹೇಗಿದೆ ಇಲ್ಲಿದೆ ವಿವರ. ಕಳೆದ ವಾರ ಅಡಿಕೆ ಬೆಲೆಯಲ್ಲಿ ಏರಿಕೆ ಆರಂಭವಾಗಿತ್ತು. ಸತತವಾಗಿ ನಾಲ್ಕು ದಿನಗಳ ಕಾಲ ಏರಿಕೆಯಾಗಿದ್ದು ರೈತರ ಸಂತಸಕ್ಕೆ ಕಾರಣವಾಗಿತ್ತು. ಆದರೆ ಇಂದು ಯಾವುದೇ ವ್ಯತ್ಯಾಸ ಕಂಡುಬರುತ್ತಿಲ್ಲ. ಇಂದು ಹೊಸ ಅಡಿಕೆ ಬೆಲೆ 460 ರೂ.ಗಳಷ್ಟಿದೆ. ಹಳೆ ಅಡಿಕೆ ಬೆಲೆ ಯಥಾಸ್ಥಿತಿಯಲ್ಲಿದ್ದು 535 ರೂ. ಗಳಾಗಿತ್ತು. ಇಂದೂ ಅಷ್ಟೇ ಇದೆ. ಡಬಲ್ ಚೋಲ್ ಬೆಲೆಯೂ 535 ರೂ.ಗಳಷ್ಟಾಗಿದೆ.
ಬೆಂಗಳೂರು: ಕೇಂದ್ರ ಬಜೆಟ್ ಗೆ ಮುನ್ನ ಚಿನ್ನದ ದರ ಭರ್ಜರಿ ಇಳಿಕೆ ಕಂಡಿದೆ. ಇಂದು ಪರಿಶುದ್ಧ ಚಿನ್ನದ ದರ ಮತ್ತು ಇತರೆ ಚಿನ್ನದ ದರ ಭಾರೀ ಇಳಿಕೆಯಾಗಿದೆ. ಇಂದು ಪರಿಶುದ್ಧ ಚಿನ್ನದ ದರ ಮತ್ತು ಇತರೆ ಚಿನ್ನದ ದರ ವಿವರ ಇಲ್ಲಿದೆ ನೋಡಿ. ಚಿನ್ನದ ದರ ಏರಿಕೆಕಳೆದ ವಾರ ಪರಿಶುದ್ಧ ಚಿನ್ನದ ದರ ಸತತ ಏರಿಕೆ ಮತ್ತು ಇಳಿಕೆ ಕಂಡಿತ್ತು. ಆದರೆ ಈ ವಾರದ ಆರಂಭದಲ್ಲೇ ಚಿನ್ನದ ದರ ಏರಿಕೆಯಾಗಿತ್ತು. ಇಂದು ಪರಿಶುದ್ಧ ಚಿನ್ನದ ದರ ಇಂದು ಭರ್ಜರಿ ಇಳಿಕೆಯಾಗಿದೆ. ಪರಿಶುದ್ಧ ಚಿನ್ನದ ದರ ನಿನ್ನೆ 1,64,290.00 ರೂ.ಗಳಿತ್ತು. ಇಂದೂ 1,52,060.00 ರೂ.ಗಳಷ್ಟಿದೆ.
ಮುಂಬೈ: ಐಸಿಸಿ ಟಿ20 ವಿಶ್ವಕಪ್ ಆರಂಭಕ್ಕೆ ಕ್ಷಣಗಣನೆ ಶುರುವಾಗಿದೆ. ಫೆಬ್ರವರಿ 7 ರಿಂದ ಲೀಗ್ ಹಂತದ ಪಂದ್ಯಗಳು ಆರಂಭವಾಗಲಿದ್ದು, ಟೀಂ ಇಂಡಿಯಾ ವೇಳಾಪಟ್ಟಿ ಇಲ್ಲಿದೆ. ಈ ಬಾರಿ ಭಾರತದ ಆತಿಥ್ಯದಲ್ಲಿ ಟಿ20 ವಿಶ್ವಕಪ್ ನಡೆಯುತ್ತಿದೆ. ಇನ್ನು, ಭಾರತದಲ್ಲಿ ಆಡಲೊಪ್ಪದ ಪಾಕಿಸ್ತಾನದ ಪಂದ್ಯಗಳು ಶ್ರೀಲಂಕಾದಲ್ಲಿ ನಡೆಯಲಿದೆ. ಟೀಂ ಇಂಡಿಯಾ ಹಾಲಿ ಚಾಂಪಿಯನ್ ಕೂಡಾ ಆಗಿರುವುದರಿಂದ ಮತ್ತಷ್ಟು ನಿರೀಕ್ಷೆಯ ಭಾರ ಹೊತ್ತುಕೊಂಡು ಮೈದಾನಕ್ಕಿಳಿಯಲಿದೆ. ಫೆಬ್ರವರಿ 7 ಕ್ಕೆ ಆರಂಭವಾಗಲಿರುವ ಟೂರ್ನಿ ಮಾರ್ಚ್ 8 ಕ್ಕೆ ಮುಕ್ತಾಯವಾಗಲಿದೆ. ಟೀಂ ಇಂಡಿಯಾ ವಿಶ್ವಕಪ್ ಲೀಗ್ ಪಂದ್ಯಕ್ಕೆ ಮುನ್ನ ದಕ್ಷಿಣ ಆಫ್ರಿಕಾ ವಿರುದ್ಧ ಫೆಬ್ರವರಿ 4 ರಂದು ಅಭ್ಯಾಸ ಪಂದ್ಯವಾಡಲಿದೆ.
ಕೋಝಿಕ್ಕೋಡ್: ಬಸ್ ನಡಿಗೆ ಸಿಲುಕಲಿದ್ದ ಪುಟಾಣಿ ಹೆಣ್ಣು ಮಗುವೊಂದು ಕೂದಲೆಳೆಯಲ್ಲಿ ಪಾರಾದ ಎದೆ ಝಲ್ಲೆನಿಸುವ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ಘಟನೆ ನಡೆದಿರುವುದು ಕೇರಳದ ಕೋಝಿಕ್ಕೋಡ್ ನಲ್ಲಿ ಎನ್ನಲಾಗಿದೆ. ಮಕ್ಕಳನ್ನು ರಸ್ತೆ ಬದಿಯಲ್ಲಿ ಕರೆದುಕೊಂಡು ಹೋಗುವಾಗ ಯಾವತ್ತೂ ಕೈ ಹಿಡಿದುಕೊಂಡೇ ನಡೆಯಬೇಕು ಎನ್ನುವುದು ಯಾಕೆ ಎಂದು ಈ ವಿಡಿಯೋ ನೋಡಿದರೆ ಗೊತ್ತಾಗುತ್ತದೆ. ಪುಟಾಣಿ ಮಗುವೊಂದು ತನ್ನ ಪೋಷಕರ ಕೈ ಬಿಟ್ಟು ರಸ್ತೆ ಬದಿ ಫುಟ್ ಪಾತ್ ನಲ್ಲಿ ಏಕಾಂಗಿಯಾಗಿ ನಡೆಯುತ್ತಿರುತ್ತದೆ. ಇದ್ದಕ್ಕಿದ್ದಂತೆ ಅದು ರಸ್ತೆಗೇ ಬಂದು ಬಿಟ್ಟಿರುತ್ತದೆ. ಈ ವೇಳೆ ಹಿಂದಿನಿಂದ ಖಾಸಗಿ ಬಸ್ ಒಂದು ವೇಗವಾಗಿ ಬರುತ್ತದೆ.
ಮುಂಬೈ: ಟೀಂ ಇಂಡಿಯಾ ಮಾಜಿ ವೇಗಿ ಜಹೀರ್ ಖಾನ್ ಪತ್ನಿ, ಮಗನ ಸಮೇತ ಅಯೋಧ್ಯೆ ರಾಮಮಂದಿರಕ್ಕೆ ಭೇಟಿ ನೀಡಿದ್ದಾರೆ. ಇದು ಕಟ್ಟಾ ಸಂಪ್ರದಾಯವಾದಿಗಳ ಕಣ್ಣು ಕೆಂಪಗಾಗಿಸಿದ್ದು ಮತಾಂತರವಾಗಿ ಎಂದು ಕಿಡಿ ಕಾರಿದ್ದಾರೆ. ಜಹೀರ್ ಖಾನ್ ಪತ್ನಿ ಸಾಗರಿಕಾ ಮತ್ತು ಮಗನ ಜೊತೆ ಅಯೋಧ್ಯೆ ರಾಮಮಂದಿರಕ್ಕೆ ಭೇಟಿ ನೀಡಿದ ವಿಡಿಯೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ. ಜಹೀರ್ ಖಾನ್ ಮೂಲತಃ ಮುಸ್ಲಿಂ ಧರ್ಮೀಯರಾದರೂ ಅವರ ಪತ್ನಿ ಸಾಗರಿಕಾ ಹಿಂದೂ ಧರ್ಮದವರು. ಹೀಗಾಗಿ ದಂಪತಿ ಎರಡೂ ಧರ್ಮವನ್ನೂ ಸಮಾನವಾಗಿ ಗೌರವಿಸುತ್ತಾರೆ.
ನವದೆಹಲಿ: ಯುರೋಪಿಯನ್ ಒಕ್ಕೂಟದ ಜೊತೆ ವ್ಯಾಪಾರ ಒಪ್ಪಂದ ಮಾಡಿ ಇಡೀ ಜಗತ್ತನ್ನೇ ಭಾರತ ನಿಬ್ಬೆರಗಾಗಿಸಿದ ಬೆನ್ನಲ್ಲೇ ಅಮೆರಿಕಾ ತಣ್ಣಗಾಗಿದೆ. ಇಷ್ಟು ದಿನ ಸುಂಕ ಹೆಚ್ಚಿಸುತ್ತೇನೆ ಎಂದು ಹಾರಾಡುತ್ತಿದ್ದ ಡೊನಾಲ್ಡ್ ಟ್ರಂಪ್ ಈಗ ಸುಂಕ ಇಳಿಕೆ ಮಾಡಿದ್ದಾರೆ. ಅಮೆರಿಕಾ ತನ್ನ ಮೇಲೆ 50% ಸುಂಕ ವಿಧಿಸಿದರೂ ಸೊಪ್ಪು ಹಾಕದ ಭಾರತ ಯುರೋಪಿಯನ್ ಒಕ್ಕೂಟ ರಾಷ್ಟ್ರಗಳೊಂದಿಗೆ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕಿತ್ತು. ಇದು ಐತಿಹಾಸಿಕ ಒಪ್ಪಂದವಾಗಿದ್ದು, ಭಾರತ ನೀವಲ್ಲದೇ ಇದ್ದರೆ ನಮಗೆ ಅನ್ಯ ಆಯ್ಕೆಗಳಿವೆ ಎಂದು ಅಮೆರಿಕಾಗೆ ಪರೋಕ್ಷವಾಗಿ ಸಂದೇಶ ನೀಡಿದಂತಾಗಿತ್ತು.
ಬೆಂಗಳೂರು: ರಾಜ್ಯದ ಶಾಲೆಗಳಿಗೆ ರಂಜಾನ್ ಹಬ್ಬದ ಹಿನ್ನಲೆಯಲ್ಲಿ ಮುಸ್ಲಿಂ ವಿದ್ಯಾರ್ಥಿಗಳಿಗೆ ಅನುಕೂಲವಾಗಲು ಶಾಲೆ ಸಮಯವೇ ಬದಲಿಸಲಾಗಿದೆ. ಆದರೆ ಇದು ಹಿಂದೂಗಳ ಆಕ್ರೋಶಕ್ಕೆ ಕಾರಣವಾಗಿದೆ. ರಂಜಾನ್ ಹಬ್ಬದ ಹಿನ್ನಲೆಯಲ್ಲಿ ರಾಜ್ಯದ ಉರ್ದು ಪ್ರಾಥಮಿಕ ಮತ್ತು ಪ್ರೌಢಶಾಲೆ ಸಮಯದಲ್ಲಿ ಬದಲಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಮುಸ್ಲಿಂ ವಿದ್ಯಾರ್ಥಿಗಳು ಪ್ರಾರ್ಥನೆ ಮಾಡಲು ಮನೆಗೆ ಹೋಗಲು ಅವಕಾಶ ನೀಡಲು ಈ ನಿರ್ಧಾರ ಮಾಡಲಾಗಿದೆ. ಶಾಲೆಗಳ ಸಮಯವನ್ನು ಬೆಳಿಗ್ಗೆ 8 ಗಂಟೆಯಿಂದ ಮಧ್ಯಾಹ್ನ 12.45 ಕ್ಕೆ ಬದಲಾವಣೆ ಮಾಡಲಾಗಿದೆ.
ನವದೆಹಲಿ: ನಾನು ಏನು ಮಾತನಾಡಬೇಕು ಎಂದು ನೀವೇ ಹೇಳಿ ಎಂದು ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಪ್ರಶ್ನೆ ಮಾಡಿದರೆ ನಾನು ನಿಮ್ಮ ಸಲಹೆಗಾರನಲ್ಲ ಎಂದು ಸ್ಪೀಕರ್ ಓಂ ಬಿರ್ಲಾ ತಿರುಗೇಟು ನೀಡಿದ ಘಟನೆ ನಿನ್ನೆ ಕಲಾಪದಲ್ಲಿ ನಡೆದಿದೆ. ಈ ವಿಡಿಯೋ ಈಗ ಸೋಷಿಯಲ್ ಮೀಡಿಯಾದಲ್ಲಿ ಸಾಕಷ್ಟು ಟ್ರೋಲ್ ಆಗುತ್ತಿದೆ. ಬಜೆಟ್ ನಂತರ ನಿನ್ನೆ ಲೋಕಸಭೆಯಲ್ಲಿ ವಿಪಕ್ಷ ನಾಯಕ ರಾಹುಲ್ ಗಾಂಧಿ ಮಾತನಾಡಿದ್ದಾರೆ. ಈ ವೇಳೆ ಅವರು ದೇಶದ ಭದ್ರತೆ ಬಗ್ಗೆ ಮಾತನಾಡಲು ಹೊರಟಿದ್ದಾರೆ.
ಬೆಂಗಳೂರು: ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಚಳಿಯ ತೀವ್ರತೆ ಕಡಿಮೆಯಾಗಿತ್ತು. ಆದರೆ ಇಂದು ಮತ್ತೆ ಮೈ ಕೊರೆಯುವ ಚಳಿಯಿರಲಿದೆ ಎಂದು ಹವಾಮಾನ ವರದಿ ಹೇಳುತ್ತಿದೆ. ಕಳೆದ ಕೆಲವು ದಿನಗಳಿಂದ ಚಳಿ ತಕ್ಕಮಟ್ಟಿಗೆ ಕಡಿಮೆಯಾಗಿದೆ. ಹಾಗಿದ್ದರೂ ಬೆಳಿಗ್ಗಿನ ವೇಳೆಗೆ ಮಂಜು ಬೀಳುತ್ತಿದ್ದು ರಾತ್ರಿ ಚಳಿ ಕಂಡುಬರುತ್ತಿದೆ. ಕಳೆದ ನಾಲ್ಕೈದು ದಿನಗಳಲ್ಲಿ ಕನಿಷ್ಠ ತಾಪಮಾನ ಸರಾಸರಿ 18 ಡಿಗ್ರಿಯಷ್ಟಿತ್ತು. ಆದರೆ ಇಂದು ಮತ್ತೆ ಇಳಿಕೆಯಾಗಲಿದೆ. ಮುಂದಿನ ಮೂರು ದಿನಗಳಿಗೆ ಹಗಲು ವಿಪರೀತ ಬಿಸಿಲು ಕಂಡುಬರಲಿದೆ. ಹಾಗಿದ್ದರೂ ಇಂದು ಕನಿಷ್ಠ ತಾಪಮಾನ ಸರಾಸರಿ 16 ಡಿಗ್ರಿಯಷ್ಟು ಇಳಿಕೆಯಾಗಲಿದೆ.
ಊಟ ಮಾಡುವಾಗ ಮಹಾವಿಷ್ಣುವಿನ ನಾಮಸ್ಮರಣೆ ಮಾಡುವುದು ಅತ್ಯಂತ ಶ್ರೇಯಸ್ಕರ ಎಂದು ನಂಬಲಾಗಿದೆ. ಅಷ್ಟಕ್ಕೂ ಊಟ ಮಾಡುವಾಗ ಮಹಾವಿಷ್ಣುವಿನ ಸ್ಮರಣೆ ಮಾಡುವುದು ಯಾಕೆ ಗೊತ್ತಾ? ನಾವು ನೋಡಿರಬಹುದು, ವಿಶೇಷವಾಗಿ ಬ್ರಾಹ್ಮಣರು ಭೋಜನ ಮಾಡುವಾಗ ದೇವರ ಶ್ಲೋಕಗಳನ್ನು ಹೇಳುತ್ತಾರೆ. ಇದು ಊಟ ಮಾಡಿದ್ದು ಜೀರ್ಣವಾಗಲಿ ಎಂಬ ಕಾರಣಕ್ಕೆ ಅಲ್ಲ. ಊಟ ಮಾಡುವಾಗ ಮಹಾವಿಷ್ಣುವಿನ ಸ್ಮರಣೆ ಮಾಡುವುದು ಶ್ರೇಷ್ಠ ಎಂಬ ಕಾರಣಕ್ಕೆ. ಅನ್ನ ಎಲ್ಲಕ್ಕಿಂತ ಶ್ರೇಷ್ಠವಾದುದು. ನಾವು ಊಟ ಮಾಡುವಾಗ ದೇವರ ಸ್ಮರಣೆ ಮಾಡುವುದರಿಂದ ಆ ಮಹಾವಿಷ್ಣುವೂ ಸಂತೃಪ್ತನಾಗುತ್ತಾನೆ ಎಂಬ ನಂಬಿಕೆಯಿದೆ. ಮಹಾವಿಷ್ಣುವು ಅನ್ನದ ರೂಪದಲ್ಲಿ ನಮ್ಮನ್ನು ಅನುಗ್ರಹಿಸುತ್ತಾನೆ ಎಂಬುದು ನಂಬಿಕೆ.
ನವದೆಹಲಿ: ಲೋಕಸಭೆಯಲ್ಲಿ ರಾಹುಲ್ ಗಾಂಧಿ ಮಾತಿಗೆ ವಿಪಕ್ಷ ಸದಸ್ಯರೇ ನಕ್ಕಿದ್ದು ಇದಕ್ಕೆ ಸ್ಪೀಕರ್ ಗರಂ ಆಗಿ ನಿಮ್ಮದೇ ನಾಯಕನ ಮಾತಿಗೆ ನೀವೇ ನಗ್ತೀರಾ ಎಂದು ಕೇಳಿದ ಘಟನೆ ನಡೆದಿದೆ. ಈ ವಿಡಿಯೋ ಈಗ ವೈರಲ್ ಆಗಿದೆ. ಲೋಕಸಭೆ ಕಲಾಪದಲ್ಲಿ ವಿಪಕ್ಷ ನಾಯಕ ರಾಹುಲ್ ಗಾಂಧಿ ‘ಸ್ಪೀಕರ್ ಸಾರ್ ನಾನೀಗ ದೇಶದ ಭದ್ರತೆ ವಿಚಾರವಾಗಿ ಮಾತನಾಡಲು ಬಯಸುತ್ತೇನೆ’ ಎಂದು ಹೇಳಿದರು. ಆಗ ವಿಪಕ್ಷದ ಕೆಲವು ಸದಸ್ಯರು ಮೇಜು ತಟ್ಟಿದರೆ ಮತ್ತೆ ಕೆಲವರು ನಕ್ಕಿದ್ದು ಕೇಳಿಬಂತು.
ಶಿವಮೊಗ್ಗ: ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ದ್ವೇಷ ಭಾಷಣ ಮಸೂದೆ ಸಂಬಂಧ ಚರ್ಚೆಗೆ ಅವಕಾಶ ನೀಡದೆ ಆತುಆತುರವಾಗಿ ಮಂಜೂರು ಮಾಡಿರುವ ಹಿಂದೆ ವಿಪಕ್ಷವನ್ನು ಮಟ್ಟ ಹಾಕುವ ತಂತ್ರವಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಶಾಸಕ ಬಿವೈ ವಿಜಯೇಂದ್ರ ಆರೋಪಿಸಿದರು. ಮಾಧ್ಯಮಗಳ ಜತೆ ಮಾತನಾಡಿದ ಅವರು, ಈ ಕಾಯ್ದೆ ವಿಪಕ್ಷವನ್ನು ಮಟ್ಟ ಹಾಕಲು ತಂದ ಕಾಯ್ದೆಎಂದು ಹೇಳಿದರು.ರಾಜ್ಯಪಾಲರು ಮಸೂದೆಗೆ ಅಂಕಿತ ಹಾಕದಿರುವ ಕುರಿತು ಪ್ರಶ್ನೆಗೆ ಉತ್ತರ ಕೊಟ್ಟರು. ಈ ಮಸೂದೆ ಪ್ರಜಾಪ್ರಭುತ್ವ ವ್ಯವಸ್ಥೆಗೆ
ಹುಬ್ಬಳ್ಳಿ: ಯೂನಿಯನ್ ಬಜೆಟ್ 2026ರ ಬಗ್ಗೆ ರಾಜ್ಯ ಕಾಂಗ್ರೆಸ್ ನಾಯಕರು ಮಾಡುವ ಆರೋಪದಲ್ಲಿ ಯಾವುದೇ ಹುರುಳಿಲ್ಲ, ಕೇಂದ್ರ ಸರ್ಕಾರ ಕರ್ನಾಟಕದ ತೆರಿಗೆ ಪಾಲನ್ನ ಶೇ.4.131 ಕ್ಕೆ ಹೆಚ್ಚಳ ಮಾಡಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸ್ಪಷ್ಟನೆ ನೀಡಿದರು. ಕರ್ನಾಟಕದ ಶೇ.3.647 ರಷ್ಟಿದ್ದ ತೆರಿಗೆ ಪಾಲನ್ನ ಇದೀಗ ಶೇ.4.131 ಕ್ಕೆ ಹೆಚ್ಚಿಸಲಾಗಿದೆ. ಈ ಮೂಲಕ ಕರ್ನಾಟಕಕ್ಕೆ ಸಾವಿರಾರು ಕೋಟಿ ತೆರಿಗೆ ಪಾಲು ಸಿಗಲಿದೆ ಎಂದರು. ಇನ್ನೂ ರಾಜ್ಯ ಕಾಂಗ್ರೆಸ್ ನಾಯಕರು ‘ಕರ್ನಾಟಕಕ್ಕೆ ತೆರಿಗೆ ಪಾಲಿನಲ್ಲಿ ಅನ್ಯಾಯ’ವಾಗುತ್ತಿದೆ ಎಂಬ ಆರೋಪವನ್ನು
ಸರ್ಕಾರಿ ವಸತಿ ಯೋಜನೆಯಲ್ಲಿ ಭೂಮಿ ಹಂಚಿಕೆಯಲ್ಲಿನ ಅಕ್ರಮಗಳಿಗೆ ಸಂಬಂಧಿಸಿದ ಎರಡು ಪ್ರತ್ಯೇಕ ಭ್ರಷ್ಟಾಚಾರ ಪ್ರಕರಣಗಳಲ್ಲಿ ಪದಚ್ಯುತ ಪ್ರಧಾನಿ ಶೇಖ್ ಹಸೀನಾ ಅವರಿಗೆ ಬಾಂಗ್ಲಾದೇಶದ ನ್ಯಾಯಾಲಯವು 10 ವರ್ಷಗಳ ಜೈಲು ಶಿಕ್ಷೆಯನ್ನು ಸೋಮವಾರ ವಿಧಿಸಿದೆ.ರಾಜಧಾನಿಯ ಹೊರವಲಯದಲ್ಲಿರುವ ಪುರ್ಬಚೋಲ್ನಲ್ಲಿರುವ ರಾಜುಕ್ ನ್ಯೂ ಟೌನ್ ಪ್ರಾಜೆಕ್ಟ್ ಅಡಿಯಲ್ಲಿ ತನ್ನ ಸೋದರ ಸೊಸೆ, ಯುಕೆ ಕಾರ್ಮಿಕ ಸಂಸದ ಮತ್ತು ಬ್ರಿಟನ್ನ ಮಾಜಿ ಸಚಿವ ಟುಲಿಪ್ ಸಿದ್ದಿಕ್ ಸೇರಿದಂತೆ ಇತರರಿಗೆ ವಸತಿ ಪ್ಲಾಟ್ಗಳನ್ನು ಹಂಚಿಕೆ ಮಾಡುವಲ್ಲಿ ತನ್ನ ಅಧಿಕೃತ ಪ್ರಭಾವವನ್ನು ಬಳಸಿದ್ದಕ್ಕಾಗಿ ಢಾಕಾದ ವಿಶೇಷ ನ್ಯಾಯಾಧೀಶರ ನ್ಯಾಯಾಲಯವು 79 ವರ್ಷದ ಹಸೀನಾಗೆ 10 ವರ್ಷಗಳ ಕಠಿಣ ಜೈಲು ಶಿಕ್ಷೆಯನ್ನು ವಿಧಿಸಿದೆ.
2026 ರ ಟಿ 20 ವಿಶ್ವಕಪ್ನಲ್ಲಿ ಫೆಬ್ರವರಿ 15 ರ ಗುಂಪು ಹಂತದ ಪಂದ್ಯದಲ್ಲಿ ಭಾರತದ ವಿರುದ್ಧ ತನ್ನ ಪುರುಷರ ತಂಡವು ಮೈದಾನಕ್ಕಿಳಿಯುವುದಿಲ್ಲ ಎಂದು ಪಾಕಿಸ್ತಾನ ಸರ್ಕಾರ ಘೋಷಿಸಿದ ಬಗ್ಗೆ ಅಂತರರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಹೇಳಿಕೆಯನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) 'ಸಂಪೂರ್ಣವಾಗಿ ಒಪ್ಪುತ್ತದೆ'.ಈ ನಿಲುವನ್ನು ಬಿಸಿಸಿಐ ಉಪಾಧ್ಯಕ್ಷ ರಾಜೀವ್ ಶುಕ್ಲಾ ಸೋಮವಾರ ಖಚಿತಪಡಿಸಿದ್ದಾರೆ."ಐಸಿಸಿ ಒಂದು ದೊಡ್ಡ ಹೇಳಿಕೆಯನ್ನು ನೀಡಿದೆ; ಅವರು ಕ್ರೀಡಾ ಮನೋಭಾವದ ಬಗ್ಗೆ ಮಾತನಾಡಿದ್ದಾರೆ. ನಾವು ಐಸಿಸಿಯನ್ನು
ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ನ ಅಧ್ಯಕ್ಷ ಸಿಜೆ ರಾಯ್ ಆತ್ಮಹತ್ಯೆ ಸಂಬಂಧ ಇದೀಗ ಎಸ್ಐಟಿಗೆ 9 ಪುಟಗಳ ಆತ್ಮಹತ್ಯೆ ಪತ್ರ ಕೈಸೇರಿದ್ದು, ಅದರ ಅನ್ವಯ ತನಿಖೆಯನ್ನು ಮತ್ತಷ್ಟು ಚುರುಕು ಮಾಡಿದ್ದಾರೆ. ಇನ್ನೂ ಡೆತ್ನೋಟ್ನಲ್ಲಿ ವೈಯಕ್ತಿಕ, ಹಣಕಾಸು ಮತ್ತು ವ್ಯವಹಾರ ವಿಷಯಗಳನ್ನು ವಿವರಿಸುತ್ತದೆಕಾನ್ಫಿಡೆಂಟ್ ಗ್ರೂಪ್ನಲ್ಲಿ ಉತ್ತರಾಧಿಕಾರಿಗಳನ್ನು ಹೆಸರಿಸುತ್ತದೆ, ವಿಶ್ವಾಸಾರ್ಹ ಉದ್ಯೋಗಿಗಳನ್ನು ಉಳಿಸಿಕೊಳ್ಳಲು ಒತ್ತಾಯಿಸುತ್ತದೆಆದಾಯ ತೆರಿಗೆ ಇಲಾಖೆ ತನಿಖೆಯ ಸಮಯದಲ್ಲಿ ಆತ್ಮಹತ್ಯೆ ಮಾಡಿಕೊಂಡ ಬೆಂಗಳೂರು ಮೂಲದ ಉದ್ಯಮಿ ಸಿಜೆ ರಾಯ್
ಬೆಂಗಳೂರು: ಇದೇ 6ರಂದು ರಾಜ್ ಬಿ ಶೆಟ್ಟಿ ನಟನೆಯ ರಕ್ಕಸಪುರದೊಳ್ ಚಿತ್ರವು ಬಿಡುಗಡೆಯಾಗಲಿದೆ. ಈ ಕುರಿತು ಸಾಮಾಜಿಕ ಮಾಧ್ಯಮ ಇನ್ಸ್ಸ್ಟಾಗ್ರಾಂನಲ್ಲಿ ಮಾಹಿತಿ ನೀಡಿದ್ದಾರೆ.ರಾಜ್ ಬಿ ಶೆಟ್ಟಿ ಖಡಕ್ ಪೊಲೀಸ್ ಆಫೀಸರ್ ಆಗಿ ಅಬ್ಬರಿಸಿರುವ 'ರಕ್ಕಸಪುರದೊಳ್' ಸಿನಿಮಾ ಕುತೂಹಲ ಮೂಡಿಸಿದೆ. ಈಗಾಗಲೇ ಚಿತ್ರದ ಟ್ರೈಲರ್ ಬಿಡುಗಡೆ ಆಗಿ ಗಮನ ಸೆಳೆದಿದ್ದು, ಹೊಸ ಭರವಸೆಯನ್ನು ಮೂಡಿಸಿದೆ.ಹಾಸ್ಯ ಪಾತ್ರಗಳಲ್ಲಿ ಮಾತ್ರವಲ್ಲ ಖಡಕ್ ಮಾಸ್ ಅವತಾರದಲ್ಲಿ ಕೂಡ ಅಬ್ಬರಿಸಬಲ್ಲೆ ಎಂದು ರಾಜ್ ಪದೇ ಪದೆ ಸಾಬೀತು
ತಿರುವನಂತಪುರಂ: ಐಟಿ ಇಲಾಖೆ ದಾಳಿ ವೇಳೆ ನಡೆದಿರುವ ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ‘ಅಸ್ವಾಭಾವಿಕ ಸಾವು’ ದೇಶದ ತೆರಿಗೆ ಆಡಳಿತಕ್ಕೆ ಕಳಂಕ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿದ್ದಾರೆ. ಘಟನೆ ಸಂಬಂಧ ನ್ಯಾಯಾಂಗ ತನಿಖೆಗೆ ಒತ್ತಾಯಿಸಿ ಅವರು ಕೇಂದ್ರ ಸಚಿವ ನಿರ್ಮಲಾ ಸೀತಾರಾಮನ್ ಅವರಿಗೆ ಪತ್ರ ಬರೆದಿದೆ. ಬರೆದ ಪತ್ರದಲ್ಲಿ, ಘಟನೆಯು ಗಂಭೀರ ಶ್ರದ್ಧೆಯ ಕೊರತೆಯನ್ನು ತೋರಿಸಿದೆ. ಐಟಿ ಶೋಧ ಕಾರ್ಯಾಚರಣೆ ವೇಳೆ ಮನೆಯಲ್ಲಿದ್ದ ವ್ಯಕ್ತಿಯು ಲೋಡ್ ಮಾಡಿದ ಬಂದೂಕು ತೆಗೆದುಕೊಂಡು ತನ್ನನ್ನು ತಾನೇ ಶೂಟ್ ಮಾಡಿಕೊಳ್ಳಬಹುದು ಎಂಬುದು ಆತಂಕಕಾರಿಯಾಗಿದೆ ಎಂದು ಎಂದಿದ್ದಾರೆ.ರಾಯ್ ಅವರನ್ನು ಶೋಧದ ಸ್ಥಳದಲ್ಲಿ ಇರಿಸುವ ಬದಲು ಮತ್ತೊಂದು ಕೊಠಡಿಗೆ ಸ್ಥಳಾಂತರಿಸಲಾಗಿದೆ ಎನ್ನುವ ಇತ್ತೀಚಿನ
ಲಾಹೋರ್: ಇದೇ ತಿಂಗಳು ಆರಂಭವಾಗುವ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಭಾರತದ ವಿರುದ್ಧದ ಪಂದ್ಯವನ್ನು ಬಹಿಷ್ಕರಿಸಲು ಮುಂದಾದ ಪಾಕಿಸ್ಥಾನಕ್ಕೆ ಅಂತರರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ ಎಚ್ಚರಿಕೆ ನೀಡಿದೆ. ಪಾಕಿಸ್ತಾನ ಸರ್ಕಾರದ ನಿರ್ಧಾರವನ್ನು ಪ್ರಶ್ನೆ ಮಾಡಿರುವ ಐಸಿಸಿ, ಭಾರತ ವಿರುದ್ಧದ ಪಂದ್ಯದಿಂದ ಹಿಂದೆ ಸರಿದರೆ ದಂಡನೆ ಸೇರಿದಂತೆ ಅದರ ಪರಿಣಾಮ ಎದುರಿಸಬೇಕಾದಿತು ಎಂದು ಎಚ್ಚರಿಸಿದೆ.ವಿಶ್ವಕಪ್ ಟೂರ್ನಿಯಲ್ಲಿ ತಂಡವು ಭಾಗವಹಿಸಲು ಪಾಕಿಸ್ತಾನ ಕ್ರಿಕೆಟ್ ತಂಡಕ್ಕೆ ಅನುಮತಿ ನೀಡಲಾಗಿದೆ. ಆದರೆ ಭಾರತದ ವಿರುದ್ಧದ ಹೈ-ಪ್ರೊಫೈಲ್ ಪಂದ್ಯವನ್ನು ಆಡಬಾರದು ಎಂದು ಷರತ್ತು ವಿಧಿಸಿದೆ.
ಬಾಗಲಕೋಟೆ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ 28 ವರ್ಷದ ಮಹಿಳೆಯೊಬ್ಬರು ತಮ್ಮ ಮೂವರು ಮಕ್ಕಳನ್ನು ಕೊಂದು ತಾನು ಆತ್ಮಹತ್ಯೆಗೆ ಯತ್ನಿಸಿರುವ ಬಗ್ಗೆ ಸೋಮವಾರ ವರದಿಯಾಗಿದೆ. ಬಾದಾಮಿ ತಾಲ್ಲೂಕಿನ ಹಿರೇಮುಚ್ಚಲ್ಗುಡ್ಡ ಗ್ರಾಮದಲ್ಲಿ ಭಾನುವಾರ ಈ ಘಟನೆ ನಡೆದಿದೆ ಎಂದು ಅವರು ತಿಳಿಸಿದ್ದಾರೆ.ಮೃತರನ್ನು ಸಮೃದ್ಧಿ ಗೌಡರ್ (5), ಪ್ರೀತಮ್ ಗೌಡರ್ (4) ಮತ್ತು ಸುಕ್ಷೀತ್ ಗೌಡರ್ (2) ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪಾಕಿಸ್ತಾನ: ಬಲೂಚಿಸ್ತಾನದಾದ್ಯಂತ ನಡೆದ ಸಂಘಟಿತ ದಾಳಿಗಳ ನಂತರ ಪಾಕಿಸ್ತಾನದ ಭದ್ರತಾ ಪಡೆಗಳು 40 ಗಂಟೆಗಳ ಅವಧಿಯಲ್ಲಿ 145 ಉಗ್ರರನ್ನು ಕೊಂದಿವೆ ಎಂದು ಪಾಕ್ ಹೇಳಿಕೊಂಡಿದೆ.ಬಲೂಚ್ ಲಿಬರೇಶನ್ ಆರ್ಮಿ ಸೇರಿದಂತೆ ವಿವಿಧ ಗುಂಪುಗಳು ಕ್ವೆಟ್ಟಾ, ಗ್ವಾದರ್, ಮಸ್ತುಂಗ್ ಮತ್ತು ನೋಶ್ಕಿಯಲ್ಲಿ ನಡೆಸಿದ ಸಂಘಟಿತ ದಾಳಿಯ ಪ್ರತೀಕಾರದಲ್ಲಿ ಪಾಕಿಸ್ತಾನಿ ಭದ್ರತಾ ಪಡೆಗಳು ಬಲೂಚಿಸ್ತಾನದಲ್ಲಿ 145 ಉಗ್ರರನ್ನು ಕೊಂದಿದೆ ಎಂದು ಹೇಳಿಕೊಂಡಿದೆ. ಸುಮಾರು 50 ಜನರು ಸಾವನ್ನಪ್ಪಿದ್ದಾರೆ ಮತ್ತು 17 ಕಾನೂನು ಜಾರಿ ಸಿಬ್ಬಂದಿ ಸಾವನ್ನಪ್ಪಿದ್ದಾರೆ.ಸಂಪನ್ಮೂಲ-ಸಮೃದ್ಧ ಪ್ರಾಂತ್ಯದಲ್ಲಿ ಈ ಹಿಂಸಾಚಾರವು ವರ್ಷಗಳಲ್ಲಿ ಅತ್ಯಂತ ಮಾರಕ ಸ್ಫೋಟಗಳಲ್ಲಿ ಒಂದಾಗಿದೆ, ಅಲ್ಲಿ
ಬೆಂಗಳೂರು: ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಫ್ನ ಅಧ್ಯಕ್ಷ ಸಿಜೆ ರಾಯ್ ಸಾವು ಪ್ರಕರಣ ಸಂಬಂಧ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಇದೀಗ ಮತ್ತೇ ಹೊಸ ಬಾಂಬ್ ಸಿಡಿಸಿದ್ದಾರೆ. ಇಂದು ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಅವರು, ಸಿಜೆ ರಾಯ್ ಅವರನ್ನು ಎಲ್ಲರೂ ಹೇಳುತ್ತಾರೆ ಶೂಟ್ ಮಾಡಿಕೊಂಡು ಸತ್ತಿದ್ದಾರೆಂದು, ಆದರೆ ನಾವು ಯಾರಾದರೂ ಶೂಟೌಟ್ ಮಾಡಿಕೊಂಡಿದ್ದನ್ನು ನೋಡಿದ್ದೇವಾ ಎಂದು ಪ್ರಶ್ನೆ ಮಾಡಿದರು. ಒಳಗೆಡೆ ಇದ್ದಿದ್ದು ಐಟಿ ಅಧಿಕಾರಿಗಳು, ಸತ್ತು ಹೋಗಿದ್ದು ಸಿಜೆ ರಾಯ್, ನಾವು ಯಾವಾ ಆಧಾರದಲ್ಲಿ ಅವರೇ ಶೂಟೌಟ್
ಕಲಬುರಗಿ: ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2026-27ರ ಕೇಂದ್ರ ಬಜೆಟ್ ರಾಜ್ಯವನ್ನು ನಿರ್ಲಕ್ಷಿಸಿದ್ದಾರೆ ಎಂದು ಆರೋಪಿಸಿದ್ದಾರೆ, ವಿಶೇಷವಾಗಿ ಹೈಸ್ಪೀಡ್ ರೈಲು, ನೀರಾವರಿ ಯೋಜನೆಗಳು ಮತ್ತು ತೆರಿಗೆ ವಿಕೇಂದ್ರೀಕರಣದ ಬಗ್ಗೆ, ರಕ್ಷಣೆ, ಕೃಷಿ, ವಿಪತ್ತು ಪರಿಹಾರ ಮತ್ತು ಭಾರತ AI ಮಿಷನ್ನಲ್ಲಿನ ಕಡಿತದ ಬಗ್ಗೆ ಮತ್ತು ಉತ್ತರ ಪ್ರದೇಶ ಮತ್ತು ಮಹಾರಾಷ್ಟ್ರದಂತಹ ಇತರ ರಾಜ್ಯಗಳಿಗೆ ಹೋಲಿಸಿದರೆ ಹಂಚಿಕೆಗಳಲ್ಲಿನ ಅಸಮಾನತೆಗಳನ್ನು ಎತ್ತಿ ತೋರಿಸಿದ್ದಾರೆ.ಕಲಬುರಗಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಸಿದ್ದರಾಮಯ್ಯ, ಕರ್ನಾಟಕಕ್ಕೆ ಬಜೆಟ್ನಲ್ಲಿ ಅರ್ಥಪೂರ್ಣವಾದ ಏನೂ ಸಿಕ್ಕಿಲ್ಲ ಎಂದು ಹೇಳಿದರು ಮತ್ತು ಕೇಂದ್ರ ಸರ್ಕಾರವು ರಾಜ್ಯದ ದೀರ್ಘಕಾಲದಿಂದ ಬಾಕಿ ಇರುವ ಬೇಡಿಕೆಗಳನ್ನು ನಿರ್ಲಕ್ಷಿಸಿದೆ ಎಂದು ಆರೋಪಿಸಿದರು.
ಚಾಮರಾಜನಗರ: ಕೊಳ್ಳೇಗಾಲದಲ್ಲಿ ಕಲ್ಯಾಣ ಮಂಟಪಕ್ಕೆ ಬರುತ್ತಿದ್ದ ವರನಿಗೆ ಚಾಕು ಇರಿತ ಪ್ರಕರಣದಲ್ಲಿ ಇದೀಗ ಮೇಜರ್ ಟ್ವಿಸ್ಟ್ ಪಡೆದುಕೊಂಡಿದೆ. ಈ ಪ್ರಕರಣದಲ್ಲಿ ವಧುವಿ ಪಾತ್ರವಿರುವುದು ತನಿಖೆಯಲ್ಲಿ ಬಯಲಾಗಿದೆ. ಏನಿದು ಪ್ರಕರಣ: ಡಿ.30ರಂದು ಕುಣಗಳ್ಳಿ ಗ್ರಾಮದ ರವೀಶ್ ಮತ್ತು ನಯನ ಮದುವೆ ಏರ್ಪಟ್ಟಿತ್ತು. ಹಿಂದಿನ ದಿನ ರಿಸೆಪ್ಶನ್ಗೆ ರವೀಶ್ ಸೇರಿದಂತೆ ಆತಕ ಕುಟುಂಬದವರು ಕಲ್ಯಾಣ ಮಂಟಪಕ್ಕೆ ಹೊರಟಿದ್ದಾರೆ. ಕೊಳ್ಳೇಗಾಲದ ವೆಂಕಟೇಶ್ವರ ಮಂಟಪಕ್ಕೆ ಕಾರಿನಲ್ಲಿ ಬರುತ್ತಿದ್ದಾಗ ಮತ್ತೊಂದು ಕಾರಿನಲ್ಲಿ ಬಂದ ಗುಂಪು ರವೀಶ್ ಕಾರನ್ನು
ತನ್ನ ಅವಳಿ ಮಕ್ಕಳು ಹಾಗೂ ಪತ್ನಿಯನ್ನು ಆಸ್ಪತ್ರೆಗೆ ತಮ್ಮ ಮಗಳು ಕ್ಲಿನ್ ಕಾರಾಳ ಜತೆ ಆಸ್ಪತ್ರೆಗೆ ಬಂದ ರಾಮ್ಚರಣೆ ಅವರನ್ನು ಅಭಿಮಾನಿಗಳು ಎಳೆದಾಡಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಖುಷಿಯಿಂದ ತನ್ನ ಅವಳಿ ಮಕ್ಕಳನ್ನು ನೋಡಲು ಬಂದ ನಟನಿಗೆ ಅಭಿಮಾನಿಗಳ ಗುಂಪಿನಿಂದಾದ ಎಳೆದಾಟ ಕೆಲ ಕ್ಷಣ ಭಯವನ್ನು ನೀಡಿತು. ಅದಲ್ಲದೆ ಮಗಳು ಕೂಡಾ ಇದ್ದಿದ್ದರಿಂದ ರಾಮ್ಚರಣ್ ಕೆಲ ಸಮಯ ಭಯದಿಂದಲೇ ಸಾಗುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ನಟ ರಾಮ್ ಚರಣ್ ಮತ್ತು ಅವರ ಪತ್ನಿ ಉಪಾಸನಾ ಕೊನಿಡೇಲಾ ಅವರು ಅವಳಿ ಮಕ್ಕಳು, ಗಂಡು ಮಗು ಮತ್ತು ಹೆಣ್ಣು
ನೋಯ್ಡಾ (ಉತ್ತರ ಪ್ರದೇಶ) : ಮುಂಬರುವ 2026 ರ T20 ವಿಶ್ವಕಪ್ನಲ್ಲಿ ಭಾರತದ ವಿರುದ್ಧದ ಲೀಗ್ ಪಂದ್ಯವನ್ನು ಬಹಿಷ್ಕರಿಸುವ ಪಾಕಿಸ್ತಾನದ ಘೋಷಣೆಗೆ ತೀವ್ರ ಟೀಕೆ ವ್ಯಕ್ತಪಡಿಸಿದ ಭಾರತೀಯ ಕುಸ್ತಿ ಒಕ್ಕೂಟ ಅಧ್ಯಕ್ಷ ಸಂಜಯ್ ಸಿಂಗ್, ಭಾರತ ಸರ್ಕಾರ ಮತ್ತು ಆಟಗಾರರು ನೆರೆಯ ದೇಶವನ್ನು ಸಹ ಬಹಿಷ್ಕರಿಸಬೇಕು ಎಂದು ಹೇಳಿದರು. ಫೆಬ್ರವರಿ 15 ರಂದು ನಡೆಯಲಿರುವ ಐಸಿಸಿ ವಿಶ್ವ ಟಿ20 ವಿಶ್ವಕಪ್ನಲ್ಲಿ ಭಾರತದ ವಿರುದ್ಧದ ಗುಂಪು ಹಂತದ ಪಂದ್ಯವನ್ನು ಬಹಿಷ್ಕರಿಸಲು ಪಾಕಿಸ್ತಾನ ನಿರ್ಧರಿಸಿದ ನಂತರ ಈ ಹೇಳಿಕೆ ಬಂದಿದೆ.
ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಶೀತ ವಾತಾವರಣ ಮುಂದುವರೆದಿದ್ದು, ಆರೋಗ್ಯದ ದೃಷ್ಟಿಯಿಂದ ಎಚ್ಚರಿಕೆಯಿಂದ ಇರುವ ಭಾರತೀಯ ಹವಾಮಾನ ಇಲಾಖೆ ಸೂಚನೆಯನ್ನು ನೀಡಿದೆ. ಬೆಂಗಳೂರಿನಲ್ಲಿ ಬೆಳಗ್ಗೆ ಮೋಡ ಕವಿದ ವಾತಾವರಣ ಕಂಡು ಬಂದಿದ್ದು, ಿನ್ನೂ ಚಳಿಯ ತೀವ್ರತೆ ಹಾಗೆಯೇ ಮುಂದುವರೆದಿದೆ. ಮಧ್ಯಾಹ್ನ ಬಿಸಿಲು ವಿಪರೀತವಿದ್ದು, ಹವಾಮಾನ ವೈಪರೀತ್ಯ ಆರೋಗ್ಯದ ಮೇಲೆ ಪರಿಣಾಮ ಬೀಳುವ ಸಾಧ್ಯತೆಯಿದೆ. ಎಲ್ಲೆಡೆ, ಶೀತ ಗಾಳಿಯಿಂದ ಜ್ವರ, ಕೆಮ್ಮು, ನೆಗಡಿ ಭಾದಿಸುವ ಸಾಧ್ಯತೆಗಳು ಇರುವುದರಿಂದ ಮುನ್ನೆಚ್ಚರಿಕೆ ವಹಿಸಲು ಸೂಚನೆ