ಬೆಂಗಳೂರು: ರಾಜ್ಯಾದ್ಯಂತ ಈಗ ಜಾತಿಗಣತಿಗೆ ಸರ್ಕಾರ ಆದೇಶ ನೀಡಿದೆ. ಆದರೆ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಇನ್ನೂ ಜಾತಿಗಣತಿಯಾಗಿಲ್ಲ. ಬೆಂಗಳೂರಿನಲ್ಲಿ ಯಾವಾಗ ಜಾತಿಗಣತಿ ಆರಂಭವಾಗಲಿದೆ ಇಲ್ಲಿದೆ ಉತ್ತರ. ಈ ಬಗ್ಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮುಖ್ಯ ಅಯುಕ್ತ ಮಹೇಶ್ವರ ರಾವ್ ಮಾಹಿತಿ ನೀಡಿದ್ದಾರೆ. ಬೆಂಗಳೂರಿನಲ್ಲಿ ಅಕ್ಟೋಬರ್ 3 ರಿಂದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಆರಂಭವಾಗಲಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. ಈಗಾಗಲೇ ಸಿಎಂ ಸಿದ್ದರಾಮಯ್ಯ ಅಕ್ಟೋಬರ್ 7 ರೊಳಗಾಗಿ ಎಲ್ಲಾ ಜಿಲ್ಲೆಗಳಲ್ಲಿ ಸಮೀಕ್ಷೆ ಮುಗಿಯಬೇಕು ಎಂದು ಆದೇಶ ಹೊರಡಿಸಿದ್ದಾರೆ. ಆದರೆ ಹಲವು ತಾಂತ್ರಿಕ ಸಮಸ್ಯೆಗಳನ್ನು ಎದುರಿಸುತ್ತಿರುವ ಕಾರಣಕ್ಕೆ ಆಮೆಗತಿಯಲ್ಲಿ ಗಣತಿ ನಡೆಯುತ್ತಿದೆಯಷ್ಟೇ.

ದುಬೈ: ಏಷ್ಯಾ ಕಪ್ ಕ್ರಿಕೆಟ್ ಫೈನಲ್ ನಲ್ಲಿ ಪಾಕಿಸ್ತಾನವನ್ನು ಸೋಲಿಸಿದ ಬಳಿಕ ಟೀಂ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್ ಮಹತ್ವದ ತೀರ್ಮಾನವೊಂದನ್ನು ಪ್ರಕಟಿಸಿದ್ದಾರೆ. ಇದಕ್ಕೆ ನೆಟ್ಟಿಗರಿಂದ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ. ಏಷ್ಯಾ ಕಪ್ ಕ್ರಿಕೆಟ್ ಎನ್ನುವುದಕ್ಕಿಂತ ಇದು ಭಾರತ-ಪಾಕಿಸ್ತಾನ ನಡುವಿನ ಜಿದ್ದಾಜಿದ್ದಿಗೆ ವೇದಿಕೆಯಾಗಿತ್ತು. ಪಹಲ್ಗಾಮ್ ದಾಳಿ ಬಳಿಕ ಭಾರತ-ಪಾಕಿಸ್ತಾನ ನಡುವಿನ ಮೊದಲ ಪಂದ್ಯಗಳು ಇದಾಗಿತ್ತು. ಹೀಗಾಗಿ ಸಹಜವಾಗಿಯೇ ಈ ಎರಡೂ ತಂಡಗಳ ನಡುವೆ ಜಿದ್ದಾಜಿದ್ದಿ ತಾರಕಕ್ಕೇರಿತ್ತು. ಏಷ್ಯಾ ಕಪ್ ನ ಲೀಗ್ ಪಂದ್ಯದಲ್ಲಿ ಪಾಕಿಸ್ತಾನವನ್ನು ಸೋಲಿಸಿದ ಬಳಿಕ ಮಾತನಾಡಿದ್ದ ಸೂರ್ಯಕುಮಾರ್ ಯಾದವ್ ಗೆಲುವನ್ನು ಪಹಲ್ಗಾಮ್ ಸಂತ್ರಸ್ತರಿಗೆ ಮತ್ತು ಭಾರತೀಯ ಸೇನೆಗೆ ಅರ್ಪಿಸಿದ್ದರು.

ಇಂದು ಸೋಮವಾರವಾಗಿದ್ದು ಅದರಲ್ಲೂ ನವರಾತ್ರಿಯ ವಿಶೇಷ ದಿನವಾಗಿದೆ. ಈ ದಿನ ಶಿವನ ಜೊತೆಗೆ ಪಾರ್ವತಿಯ ಕೃಪೆಗೆ ಪಾತ್ರರಾಗಲು ಅರ್ಧನಾರೀಶ್ವರ ಅಷ್ಟಕಂ ಮಂತ್ರವನ್ನು ತಪ್ಪದೇ ಓದಿ.ಅಂಭೋಧರಶ್ಯಾಮಲಕುಂತಲಾಯೈತಟಿತ್ಪ್ರಭಾತಾಮ್ರಜಟಾಧರಾಯ |ನಿರೀಶ್ವರಾಯೈ ನಿಖಿಲೇಶ್ವರಾಯನಮಃ ಶಿವಾಯೈ ಚ ನಮಃ ಶಿವಾಯ || ೧ ||ಪ್ರದೀಪ್ತರತ್ನೋಜ್ಜ್ವಲಕುಂಡಲಾಯೈಸ್ಫುರನ್ಮಹಾಪನ್ನಗಭೂಷಣಾಯ |ಶಿವಪ್ರಿಯಾಯೈ ಚ ಶಿವಪ್ರಿಯಾಯನಮಃ ಶಿವಾಯೈ ಚ ನಮಃ ಶಿವಾಯ || ೨ ||ಮಂದಾರಮಾಲಾಕಲಿತಾಲಕಾಯೈಕಪಾಲಮಾಲಾಂಕಿತಕಂಧರಾಯ |ದಿವ್ಯಾಂಬರಾಯೈ ಚ ದಿಗಂಬರಾಯನಮಃ ಶಿವಾಯೈ ಚ ನಮಃ ಶಿವಾಯ || ೩ ||ಕಸ್ತೂರಿಕಾಕುಂಕುಮಲೇಪನಾಯೈಶ್ಮಶಾನಭಸ್ಮಾಂಗವಿಲೇಪನಾಯ |ಕೃತಸ್ಮರಾಯೈ ವಿಕೃತಸ್ಮರಾಯನಮಃ ಶಿವಾಯೈ ಚ ನಮಃ ಶಿವಾಯ || ೪ ||ಪಾದಾರವಿಂದಾರ್ಪಿತಹಂಸಕಾಯೈಪಾದಾಬ್ಜರಾಜತ್ಫಣಿನೂಪುರಾಯ |ಕಲಾಮಯಾಯೈ ವಿಕಲಾಮಯಾಯನಮಃ ಶಿವಾಯೈ ಚ ನಮಃ ಶಿವಾಯ || ೫ ||

ದುಬೈ: ಏಷ್ಯಾಕಪ್‌ ಟಿ20 ಕ್ರಿಕೆಟ್‌ ಟೂರ್ನಿಯ ಫೈನಲ್‌ ಪಂದ್ಯದಲ್ಲಿ ಪಾಕಿಸ್ತಾನ ತಂಡದ ಬ್ಯಾಟರ್‌ಗಳು ಭಾರತದ ಸ್ಪಿನ್‌ ಸುಳಿಗೆ ತತ್ತರಿಸಿದರು.ಆರಂಭಿಕ ಬ್ಯಾಟರ್‌ಗಳು ಉತ್ತಮ ಪ್ರದರ್ಶನ ನೀಡಿದರೂ ಭಾರತದ ಎದುರು ಬೃಹತ್‌ ಮೊತ್ತ ಕಲೆಹಾಕುವ ಪಾಕ್‌ ಪ್ರಯತ್ನ ಕೈಗೂಡಲಿಲ್ಲ. 19.1 ಓವರ್‌ಗಳಲ್ಲಿ 146 ರನ್‌ಗಳಿಗೆ ಸರ್ವಪತನ ಕಂಡಿದೆ.ದುಬೈ ಅಂತರರಾಷ್ಟ್ರೀಯ ಕ್ರಿಕೆಟ್‌ ಮೈದಾನದಲ್ಲಿ ಪಂದ್ಯದಲ್ಲಿ, ಮಧ್ಯಮ ಹಾಗೂ ಕೆಳ ಕ್ರಮಾಂಕದ ಬ್ಯಾಟರ್‌ಗಳು ಸ್ಪಿನ್‌ ಸುಳಿಯಲ್ಲಿ ಸಿಲುಕಿದ ಪರಿಣಾಮ ದಿಢೀರ್‌ ಕುಸಿಯಿತು.ಟಾಸ್‌ ಗೆದ್ದ ಟೀಂ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್‌ ಬೌಲಿಂಗ್‌ ಆಯ್ದುಕೊಂಡರು. ಪಾಕ್‌ ಪಡೆಯ ಆರಂಭಿಕ ಬ್ಯಾಟರ್‌ಗಳಾದ ಸಾಹಿಬ್‌ಝಾದಾ ಫರ್ಹಾನ್ ಮತ್ತು ಫಖರ್‌ ಜಮಾನ್‌ ಭಾರತದ ನಾಯಕನ ನಿರ್ಧಾರವನ್ನು ತಲೆಕೆಳಗಾಗಿಸುವಂತಹ ಆಟವಾಡಿದರು.

ದುಬೈ: ಏಷ್ಯಾ ಕಪ್ ಕ್ರಿಕೆಟ್‌ ಟೂರ್ನಿಯ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಭಾರತ ಮತ್ತು ಪಾಕಿಸ್ತಾನ ಫೈನಲ್‌ನಲ್ಲಿ ಮುಖಾಮುಖಿಯಾಗುತ್ತಿವೆ. ದುಬೈ ಅಂತರಾಷ್ಟ್ರೀಯ ಕ್ರೀಡಾಂಗಣವು ಹೈವೋಲ್ಟೇಜ್‌ ಪಂದ್ಯಕ್ಕೆ ಸಜ್ಜಾಗಿದೆ. ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.ಇಂದಿನ ಪಂದ್ಯಕ್ಕೆ ಭಾರತ ತಂಡಕ್ಕೆ ಆಘಾತ ಎದುರಾಗಿದೆ. ಆಲ್‌ರೌಂಡರ್‌ ಹಾರ್ದಿಕ್ ಪಾಂಡ್ಯ ಫೈನಲ್ ಕದನಕ್ಕೆ ಅಲಭ್ಯರಾಗಿದ್ದಾರೆ. ಇವರ ಜಾಗಕ್ಕೆ ರಿಂಕು ಸಿಂಗ್ ಆಯ್ಕೆ ಆಗಿದ್ದಾರೆ. ಹಾಗೆಯೆ ಕಳೆದ ಸೂಪರ್ 4 ನಲ್ಲಿ ಶ್ರೀಲಂಕಾ ವಿರುದ್ಧ ವಿಶ್ರಾಂತಿ ಪಡೆದುಕೊಂಡಿದ್ದ ಜಸ್​ಪ್ರಿತ್ ಬೂಮ್ರಾ ಕಮ್​ಬ್ಯಾಕ್ ಮಾಡಿದ್ದಾರೆ. ಶಿವಂ ದುವೆ ಕೂಡ ತಂಡಕ್ಕೆ ಮರಳಿದ್ದಾರೆ. ಅರ್ಷದೀಪ್‌ ಹೊರಗುಳಿದಿದ್ದಾರೆ.

ದುಬೈ: ಏಷ್ಯಾ ಕಪ್ ಕ್ರಿಕೆಟ್ ಫೈನ್‌ಲ್‌ಗೆ ದುಬೈ ಅಂತರರಾಷ್ಟ್ರೀಯ ಕ್ರೀಡಾಂಗಣ ಸಜ್ಜಾಗಿದೆ. 41 ವರ್ಷಗಳ ಇತಿಹಾಸದಲ್ಲಿ ಭಾರತ-ಪಾಕಿಸ್ತಾನ ತಂಡಗಳು ಮೊದಲ ಬಾರಿ ಏಷ್ಯಾ ಕಪ್‌ ಫೈನಲ್‌ನಲ್ಲಿ ಮುಖಾಮುಖಿಯಾಗುತ್ತಿವೆ.ರಾತ್ರಿ 8 ಗಂಟೆಗೆ ಪಂದ್ಯ ಶುರುವಾಗಲಿದೆ. ಟೂರ್ನಿಯಲ್ಲಿ ಹಿಂದಿನ ಎರಡು ಪಂದ್ಯಗಳಲ್ಲಿ ಹೀನಾಯ ಸೋಲು ಕಂಡಿದ್ದ ಪಾಕ್‌ ಭಾರತದ ವಿರುದ್ಧ ಸೇಡು ತೀರಿಸಿಕೊಳ್ಳಲು ಕಾಯುತ್ತಿದೆ. ಇತ್ತ ಭಾರತ ಕೂಡ ಮೂರನೇ ಪಂದ್ಯದಲ್ಲೂ ಪಾರಮ್ಯ ಸಾಧಿಸುವ ಛಲದಲ್ಲಿದೆ.ಹಸ್ತಲಾಗವ ಮಾಡದೆ ಮೈದಾನದಲ್ಲಿ ಕಿರಿಕಿರಿಗಳಿಂದ ಕೂಡಿದ್ದ ಹಿಂದಿನ ಎರಡೂ ಪಂದ್ಯಗಳು ಅನೇಕ ವಿವಾದಗಳಿಗೆ ಎಡೆ ಮಾಡಿಕೊಟ್ಟಿದ್ದವು. ಈ ನಡುವೆ ಐಸಿಸಿ ಕೆಲವು ಆಟಗಾರರಿಗೆ ದಂಡವನ್ನೂ ವಿಧಿಸಿ ಎಚ್ಚರಿಸಿತು. ಹೀಗಾಗಿ ಹೀಗಾಗಿ ಮೂರನೇ ಪಂದ್ಯದ ತೀವ್ರತೆ ಜೋರಾಗಿಯೇ ಇದೆ.

ಚೆನ್ನೈ: ನಟ ಹಾಗೂ ರಾಜಕಾರಣಿ ದಳಪತಿ ವಿಜಯ್ ಅವರು ತಮಿಳುನಾಡು ಕರೂರಿನಲ್ಲಿ ಆಯೋಜಿಸಿದ್ದ ಚುನಾವಣಾ ಪ್ರಚಾರದ ರ‍್ಯಾಲಿ ವೇಳೆ ಕಾಲ್ತುಳಿತ ಘಟನೆಯಲ್ಲಿ ಮೃತಪಟ್ಟ 39 ಜನರ ಪೈಕಿ 35 ಮಂದಿ ಮೃತದೇಹಗಳ ಗುರುತು ಪತ್ತೆಯಾಗಿದೆ.ಗುರುತು ಪತ್ತೆಯಾದವರಲ್ಲಿ ಕರೂರು ಜಿಲ್ಲೆಯವರು 28 ಜನ, ಈರೋಡ್, ತಿರುಪುರ, ಧಾರಾಪುರಂ ಜಿಲ್ಲೆಗಳ ತಲಾ ಇಬ್ಬರು, ಸೇಲಂ ಜಿಲ್ಲೆಯ ಒಬ್ಬರ ಗುರುತು ಪತ್ತೆಯಾಗಿದೆ. ಉಳಿದ 4 ಶವಗಳನ್ನು ಗುರುತಿಸುವ ಕಾರ್ಯವನ್ನು ಸ್ಥಳೀಯ ಪೊಲೀಸರು ಮಾಡುತ್ತಿದ್ದಾರೆ. ಕರೂರು ಸರ್ಕಾರಿ ವೈದ್ಯಕೀಯ ಮಹಾವಿದ್ಯಾಲಯ ಆಸ್ಪತ್ರೆಗೆ ಕಾಲ್ತುಳಿತದಲ್ಲಿ ಗಾಯಗೊಂಡ 50 ಜನರನ್ನ ಆಸ್ಪತ್ರೆಗೆ ದಾಖಲಿಸಲಾಗಿದೆ. ಕರೂರಿನ ಖಾಸಗಿ ಆಸ್ಪತ್ರೆಗಳಲ್ಲಿ 61 ಜನರೂ ಸೇರಿ ಒಟ್ಟು 111 ಜನರು ನಿರಂತರ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ರಸ್ತೆ ಗುಂಡಿಗಳ ಬಗ್ಗೆ ಭಾರೀ ಆಕ್ರೋಶ ವ್ಯಕ್ತವಾಗಿದ್ದು, ಇದೀಗ ಅವ್ಯವಸ್ಥೆ ವೀಕ್ಷಿಸಲು ಖುದ್ದಾಗಿ ಸಿಎಂ ಸಿದ್ದರಾಮಯ್ಯ ರಂಗಕ್ಕಿಳಿದಿದ್ದಾರೆ. ಇಂದು ಅಧಿಕಾರಿಗಳ ಜೊತೆ ಸಿಟಿ ರೌಂಡ್ಸ್ ಮಾಡಿದ ಸಿಎಂ ಸಿದ್ದರಾಮಯ್ಯ ರಸ್ತೆ ಗುಂಡಿ, ಮೆಟ್ರೋ ಕಾಮಗಾರಿಯಿಂದಾಗಿ ರಸ್ತೆ ಅವ್ಯವಸ್ಥೆಯಾಗಿರುವುದರ ಬಗ್ಗೆ ಪರಿಶೀಲನೆ ನಡೆಸಿದರು. ಬಳಿಕ ಅಧಿಕಾರಿಗಳ ಅವ್ಯವಸ್ಥೆ ಸರಿಪಡಿಸಲು ಸೂಚನೆ ನೀಡಿದ್ದಾರೆ. ‘ವೈಟ್ ಟಾಪಿಂಗ್‌ ಅಡಿ ಅಭಿವೃದ್ಧಿಪಡಿಸಲಾದ ರಸ್ತೆಗಳಲ್ಲಿ ಗುಂಡಿಗಳು ಬಿದ್ದರೆ ಅದರ ಹೊಣೆಯನ್ನು ಗುತ್ತಿಗೆದಾರರೇ ಹೊರಬೇಕಿದೆ. ಓಮ್ಮೆ ವೈಟ್ ಟಾಪಿಂಗ್ ಗೆ ರಸ್ತೆಯನ್ನು ಒಪ್ಪಿಸಿದ ಮೇಲೆ ಆ ರಸ್ತೆಗಳ ನಿರ್ವಹಣೆಗೆ ಬಿಬಿಎಂಪಿ ಹಣ ಕೊಡಲು ಬರುವುದಿಲ್ಲ.