Shorts

ಬೆಂಗಳೂರು: ಕಮಿಷನ್, ಭ್ರಷ್ಟಾಚಾರ, ಲೂಟಿ, ದುಂಡಾವರ್ತಿ ಸರಕಾರವು ಇವತ್ತು ರಾಜ್ಯವನ್ನಾಳುತ್ತಿದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಟೀಕಿಸಿದ್ದಾರೆ.ವಿಧಾನಸೌಧದ ಮಹಾತ್ಮ ಗಾಂಧೀಜಿ ಪ್ರತಿಮೆ ಬಳಿ ಇಂದು ಪ್ರತಿಭಟನೆ ವೇಳೆ ಮಾತನಾಡಿದ ಅವರು, ಈ ಆರೋಪವನ್ನು ನಾವು ಹೇಳುತ್ತಿಲ್ಲ; ರಾಜ್ಯದ ಜನರು ಮಾತನಾಡುತ್ತಿದ್ದಾರೆ ಎಂದು ತಿಳಿಸಿದರು. ನಮಗೆ ಕೆಲವು ಸ್ನೇಹಿತರು ಕಾಂಗ್ರೆಸ್ಸಿನಲ್ಲಿದ್ದಾರೆ. ಅವರಿಗೂ ಈ ಸರಕಾರದ ವರ್ತನೆ ಬೇಸರ ತರಿಸಿದೆ. ಫೋನ್ ಮಾಡಿದರೆ, ‘ಬಿಡಬೇಡ್ರಿ ಈ ನನ್ಮಕ್ಕಳನ್ನು’ ಎನ್ನುತ್ತಾರೆ ಎಂದು ಹೇಳಿದರು.ಈ ಸರಕಾರ ಮಾಡುವ ತಪ್ಪುಗಳನ್ನು ಜನರ ಗಮನಕ್ಕೆ ತರಲೇಬೇಕಾಗಿದೆ. ಅದನ್ನು ನಾವಿವತ್ತು ಪ್ರತಿಭಟನೆ ಮೂಲಕ ಮಾಡುತ್ತಿದ್ದೇವೆ ಎಂದು ವಿವರಿಸಿದರು.

ಭಗವಾನ್ ಶಿವನ ಅನುಗ್ರಹಕ್ಕಾಗಿ ದಕ್ಷಿಣಾ ಮೂರ್ತಿ ಸ್ತೋತ್ರನ್ನು ಓದಿ. ಇದರಿಂದ ಜೀವನದಲ್ಲಿ ಆಯಸ್ಸು, ಆರೋಗ್ಯ, ನೆಮ್ಮದಿ ವೃದ್ಧಿಯಾಗುತ್ತದೆ.ಶಾಂತಿಪಾಠಃಓಂ ಯೋ ಬ್ರಹ್ಮಾಣಂ ವಿದಧಾತಿ ಪೂರ್ವಂಯೋ ವೈ ವೇದಾಂಶ್ಚ ಪ್ರಹಿಣೋತಿ ತಸ್ಮೈ ।ತಂ ಹ ದೇವಮಾತ್ಮಬುದ್ಧಿಪ್ರಕಾಶಂಮುಮುಕ್ಷುರ್ವೈ ಶರಣಮಹಂ ಪ್ರಪದ್ಯೇ ॥ ಧ್ಯಾನಂಓಂ ಮೌನವ್ಯಾಖ್ಯಾ ಪ್ರಕಟಿತ ಪರಬ್ರಹ್ಮತತ್ತ್ವಂ ಯುವಾನಂವರ್ಷಿಷ್ಠಾಂತೇ ವಸದೃಷಿಗಣೈರಾವೃತಂ ಬ್ರಹ್ಮನಿಷ್ಠೈಃ ।ಆಚಾರ್ಯೇಂದ್ರಂ ಕರಕಲಿತ ಚಿನ್ಮುದ್ರಮಾನಂದಮೂರ್ತಿಂಸ್ವಾತ್ಮಾರಾಮಂ ಮುದಿತವದನಂ ದಕ್ಷಿಣಾಮೂರ್ತಿಮೀಡೇ ॥ 1 ॥ ವಟವಿಟಪಿಸಮೀಪೇಭೂಮಿಭಾಗೇ ನಿಷಣ್ಣಂಸಕಲಮುನಿಜನಾನಾಂ ಜ್ಞಾನದಾತಾರಮಾರಾತ್ ।ತ್ರಿಭುವನಗುರುಮೀಶಂ ದಕ್ಷಿಣಾಮೂರ್ತಿದೇವಂಜನನಮರಣದುಃಖಚ್ಛೇದದಕ್ಷಂ ನಮಾಮಿ ॥ 2 ॥ ಚಿತ್ರಂ ವಟತರೋರ್ಮೂಲೇ ವೃದ್ಧಾಃ ಶಿಷ್ಯಾ ಗುರುರ್ಯುವಾ ।ಗುರೋಸ್ತು ಮೌನಂ ವ್ಯಾಖ್ಯಾನಂ ಶಿಷ್ಯಾಸ್ತುಚ್ಛಿನ್ನಸಂಶಯಾಃ ॥ 3 ॥

ಗುವಾಹಟಿ: ಭಾರತ ಟಿ20 ಕ್ರಿಕೆಟ್‌ ತಂಡದ ಆರಂಭಿಕ ಬ್ಯಾಟರ್ ಅಭಿಷೇಕ್‌ ಶರ್ಮಾ ಮೈದಾನದಲ್ಲಿ ರನ್‌ ಹೊಳೆ ಹರಿಸುತ್ತಿದ್ದಾರೆ. ವಿಶ್ವದ ನಂಬರ್‌ 1 ಬ್ಯಾಟರ್‌ ಆಗಿರುವ ಅವರು ಎದುರಾಳಿ ಬೌಲರ್‌ಗಳನ್ನು ಮನಬಂದಂತೆ ದಂಡಿಸುತ್ತಿದ್ದಾರೆ. ನ್ಯೂಜಿಲೆಂಡ್‌ ವಿರುದ್ಧ ಮೊದಲ ಟಿ20 ವಿರುದ್ಧ ಅಬ್ಬರಿಸಿದ್ದ ಅಭಿಷೇಕ್‌ ಅವರು ಭಾನುವಾರ ನಡೆದ ಮೂರನೇ ಪಂದ್ಯದಲ್ಲೂ ಸಿಡಿಲಬ್ಬರದ ಬ್ಯಾಟಿಂಗ್‌ ಪ್ರದರ್ಶಿಸಿದ್ದರು. ಅವರ ಆಟದ ನೆರವಿನಿಂದ ಭಾರತ 8 ವಿಕೆಟ್‌ಗಳಿಂದ ಗೆದ್ದು, ಸರಣಿಯನ್ನು ವಶ ಮಾಡಿಕೊಂಡಿತ್ತು.ಭಾರತ ತಂಡದ ಆರಂಭಿಕ ಬ್ಯಾಟ್ಸ್‌ಮನ್‌ ಅಭಿಷೇಕ್‌ ಶರ್ಮಾ ಅವರು 300ಕ್ಕೂ ಅಧಿಕ ಸ್ಟ್ರೈಕ್‌ ರೇಟ್‌ನಲ್ಲಿ ರನ್‌ ಗಳಿಸಿ ಎಲ್ಲರಿಗೂ ಅಚ್ಚರಿ ಮೂಡಿಸಿದರು. ಅವರು ಆಡಿದ ಕೇವಲ 20 ಎಸೆತಗಳಲ್ಲಿ 5 ಸಿಕ್ಸರ್‌ ಹಾಗೂ 7 ಬೌಂಡರಿಗಳೊಂದಿಗೆ 68 ರನ್‌ಗಳನ್ನು ಸಿಡಿಸಿದರು. ಅಲ್ಲದೆ 340ರ ಸ್ಟ್ರೈಕ್‌ ರೇಟ್‌ನಲ್ಲಿ ರನ್‌ ಬಾರಿಸಿ ಕಿವೀಸ್‌ ಆಟಗಾರರಿಗೆ ಶಾಕ್‌ ನೀಡಿದರು.

ವಡೋದರ: ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡಕ್ಕೆ ಇಂದು ಮಹತ್ವದ ಪಂದ್ಯ. ಮಹಿಳಾ ಪ್ರೀಮಿಯರ್‌ ಲೀಗ್‌ನಲ್ಲಿ ಇಂದು ಮುಂಬೈ ಇಂಡಿಯನ್ಸ್‌ ತಂಡವನ್ನು ಎದುರಿಸಲಿದ್ದು, ಗೆದ್ದರೆ ನೇರ ಫೈನಲ್‌ ಪ್ರವೇಶ ಪಡೆಯಿತು. ಸ್ಮೃತಿ ಮಂದಾನ ನೇತೃತ್ವದ ತಂಡವು ಟೂರ್ನಿಯ ಅಂಕಪಟ್ಟಿಯಲ್ಲಿ ಪ್ರಸ್ತುತ 10 ಅಂಕಗಳೊಂದಿಗೆ ಅಗ್ರಸ್ಥಾನದಲ್ಲಿದೆ. ಅಲ್ಲದೇ ಪ್ಲೇ ಆಫ್‌ ಕೂಡ ಪ್ರವೇಶಿಸಿದೆ. ಆದರೆ ಮುಂಬೈ ಸ್ಥಿತಿ ಚೆನ್ನಾಗಿಲ್ಲ. ಕೇವಲ 4 ಅಂಕ ಗಳಿಸಿ ನಾಲ್ಕನೇ ಸ್ಥಾನದಲ್ಲಿದೆ. ಆರ್‌ಸಿಬಿಯು ಮೈಮರೆಯುವಂತಿಲ್ಲ. ಡೆಲ್ಲಿ ಕ್ಯಾಪಿಟಲ್ಸ್ ಎದುರಿನ ಸೋಲಿನಿಂದ ಬಹಳಷ್ಟು ಪಾಠಗಳನ್ನು ಕಲಿಯಬೇಕಿದೆ. ಪ್ರಮುಖವಾಗಿ ಬ್ಯಾಟಿಂಗ್ ವೈಫಲ್ಯದಿಂದ ಹೊರಬರಬೇಕಿದೆ. ಕೋತಂಬಿ ಕ್ರೀಡಾಂಗಣದ ಪಿಚ್‌ ಬೌಲರ್‌ಗಳಿಗೆ ಹೆಚ್ಚು ನೆರವು ಕೊಡುತ್ತಿರುವುದರಿಂದ ಆರ್‌ಸಿಬಿ ಬ್ಯಾಟರ್‌ಗಳು ತಮ್ಮ ಕೌಶಲಗಳಿಗೆ ಸಾಣೆ ಹಿಡಿಯಬೇಕಿದೆ.

ನವದೆಹಲಿ: ಬಾಹ್ಯಾಕಾಶ ನೌಕೆಯಲ್ಲಿ ಹೊಸ ಇತಿಹಾಸ ಬರೆದ ಗಗನಯಾತ್ರಿ ಶುಭಾಂಶು ಶುಕ್ಲಾಗೆ ಅವರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಭಾರತದ ಅತ್ಯುನ್ನತ ಶಾಂತಿಕಾಲದ ಶೌರ್ಯ ಪ್ರಶಸ್ತಿ ಅಶೋಕ ಚಕ್ರವನ್ನ ಪ್ರದಾನ ಮಾಡಿದರು.ಬಾಹ್ಯಾಕಾಶದಲ್ಲಿ ಭಾರತದ ಪತಾಕೆ ಹಾರಿಸಿದಂತಹ ಮಹತ್ತರ ಕೀರ್ತಿ ಶುಭಾಂಶು ಅವರಿಗೆ ಸಲ್ಲುತ್ತದೆ. ಈ ಅನನ್ಯ ಸಾಧನೆ ಮತ್ತು ಧೈರ್ಯಕ್ಕಾಗಿ ಅಶೋಕ ಚಕ್ರ ಶ್ರೇಷ್ಠ ಗೌರವವನ್ನ ನೀಡಲಾಗಿದೆ. ಈ ಪ್ರಶಸ್ತಿಯು ಶುಕ್ಲಾ ಅವರು ರಾಷ್ಟ್ರಕ್ಕಾಗಿ ನೀಡಿದ ಅಪ್ರತಿಮ ಕೊಡುಗೆಯನ್ನ ಸ್ಮರಿಸುತ್ತದೆ. ಗಣರಾಜ್ಯೋತ್ಸವ ಸಂಭ್ರಮದಲ್ಲಿ ಅದನ್ನು ಪ್ರದಾನ ಮಾಡಲಾಯಿತು.ಅಶೋಕ ಚಕ್ರವು ಭಾರತದ ಅತ್ಯುನ್ನತ ಶಾಂತಿಕಾಲದ ಶೌರ್ಯ ಪ್ರಶಸ್ತಿಯಾಗಿದೆ. ಯುದ್ಧಭೂಮಿಯ ಹೊರಗೆ ತೋರುವ ಅದ್ಭುತ ಸಾಹಸ, ಆತ್ಮತ್ಯಾಗ ಅಥವಾ ಧೈರ್ಯಕ್ಕಾಗಿ ಸೈನಿಕರು ಮತ್ತು ನಾಗರಿಕರಿಗೆ ನೀಡಲಾಗುತ್ತದೆ.

ಬೆಂಗಳೂರು: ಯುಪಿಎ ಸರ್ಕಾರ ಜಾರಿಗೊಳಿಸಿದ ಮನರೇಗಾ ಉಳಿಸುವ ಸಲುವಾಗಿ ಮಂಗಳವಾರ ರಾಜಭವನ ಚಲೋ ನಡೆಸಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.ಕೆಪಿಸಿಸಿ ಕಚೇರಿ ಬಳಿ ಮಾಧ್ಯಮಗಳಿಗೆ ಸೋಮವಾರ ಪ್ರತಿಕ್ರಿಯೆ ನೀಡಿದರು ಪ್ರತಿ ತಾಲ್ಲೂಕಿನಲ್ಲೂ ಕನಿಷ್ಠ ಐದು ಕಿಲೋಮೀಟರ್ ಪಾದಯಾತ್ರೆ ನಡೆಸಲಾಗುವುದು. ಪ್ರತಿ ಪಂಚಾಯತಿ ಮಟ್ಟದಲ್ಲೂ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಹೇಳಿದರು. .20 ವರ್ಷಗಳ ಹಿಂದೆ ಸೋನಿಯಾಗಾಂಧಿ ಅವರ ನಾಯಕತ್ವದಲ್ಲಿ ಮನಮೋಹನ್ ಸಿಂಗ್ ಅವರ ಸರ್ಕಾರ ಜಾರಿಗೆ ತಂದಿದ್ದ ಸಾಂವಿಧಾನಿಕ ಹಕ್ಕಾಗಿ ಬಂದಿರುವ ಮನರೇಗಾವನ್ನು ನಾಶ ಮಾಡಲು ಹೊರಟಿರುವುದು ನಮಗೆಲ್ಲಾ ಆಶ್ಚರ್ಯ ಉಂಟು ಮಾಡಿದೆ. ಮಹಾತ್ಮಗಾಂಧಿ ಅವರ ಹೆಸರಿನಲ್ಲಿ ಪ್ರಾರಂಭವಾದ ಯೋಜನೆ ಗ್ರಾಮೀಣ ಭಾಗದ ಜನರ ಉದ್ಯೋಗದ ಹಕ್ಕಿಗೆ ಖಾತ್ರಿ ನೀಡಿತ್ತು ಎಂದರು.