Shorts

ಇಂದು ಸೋಮವಾರವಾಗಿದ್ದು ಶಿವನಿಗೆ ವಿಶೇಷವಾದ ದಿನವಾಗಿದೆ. ಇಂದು ಶಿವನ ಅನುಗ್ರಹಕ್ಕಾಗಿ ಶಿವ ತಾಂಡವ ಸ್ತೋತ್ರವನ್ನು ತಪ್ಪದೇ ಭಜಿಸಿ. ಕನ್ನಡದಲ್ಲಿ ಇಲ್ಲಿದೆ.ಜಟಾಟವೀಗಲಜ್ಜಲಪ್ರವಾಹಪಾವಿತಸ್ಥಲೇಗಲೇವಲಂಬ್ಯ ಲಂಬಿತಾಂ ಭುಜಂಗತುಂಗಮಾಲಿಕಾಮ್ ।ಡಮಡ್ಡಮಡ್ಡಮಡ್ಡಮನ್ನಿನಾದವಡ್ಡಮರ್ವಯಂಚಕಾರ ಚಂಡತಾಂಡವಂ ತನೋತು ನಃ ಶಿವಃ ಶಿವಮ್ ॥ 1 ॥ ಜಟಾಕಟಾಹಸಂಭ್ರಮಭ್ರಮನ್ನಿಲಿಂಪನಿರ್ಝರೀ--ವಿಲೋಲವೀಚಿವಲ್ಲರೀವಿರಾಜಮಾನಮೂರ್ಧನಿ ।ಧಗದ್ಧಗದ್ಧಗಜ್ಜ್ವಲಲ್ಲಲಾಟಪಟ್ಟಪಾವಕೇಕಿಶೋರಚಂದ್ರಶೇಖರೇ ರತಿಃ ಪ್ರತಿಕ್ಷಣಂ ಮಮ ॥ 2 ॥ ಧರಾಧರೇಂದ್ರನಂದಿನೀವಿಲಾಸಬಂಧುಬಂಧುರಸ್ಫುರದ್ದಿಗಂತಸಂತತಿಪ್ರಮೋದಮಾನಮಾನಸೇ ।ಕೃಪಾಕಟಾಕ್ಷಧೋರಣೀನಿರುದ್ಧದುರ್ಧರಾಪದಿಕ್ವಚಿದ್ದಿಗಂಬರೇ ಮನೋ ವಿನೋದಮೇತು ವಸ್ತುನಿ ॥ 3 ॥ ಜಟಾಭುಜಂಗಪಿಂಗಳಸ್ಫುರತ್ಫಣಾಮಣಿಪ್ರಭಾಕದಂಬಕುಂಕುಮದ್ರವಪ್ರಲಿಪ್ತದಿಗ್ವಧೂಮುಖೇ ।ಮದಾಂಧಸಿಂಧುರಸ್ಫುರತ್ತ್ವಗುತ್ತರೀಯಮೇದುರೇಮನೋ ವಿನೋದಮದ್ಭುತಂ ಬಿಭರ್ತು ಭೂತಭರ್ತರಿ ॥ 4 ॥

ನವದೆಹಲಿ: ಹಾಲಿ ಚಾಂಪಿಯನ್‌ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಗಾಯದ ಆಘಾತ ಎದುರಾಗಿದೆ. ಸ್ಫೋಟಕ ಆರಂಭಿಕ ಆಟಗಾರ ಫಿಲ್ ಸಾಲ್ಟ್ ಅವರು ಮುಂದಿನ ಪಂದ್ಯಕ್ಕೂ ಅಲಭ್ಯರಾಗಿದ್ದಾರೆ.ಇಂಗ್ಲೆಂಡ್‌ನ ಈ ಬ್ಯಾಟರ್‌ ಗಾಯದಿಂದ ಇನ್ನೂ ಚೇತರಿಸಿಕೊಂಡಿಲ್ಲ. ಹೀಗಾಗಿ ಅವರು ಸೋಮವಾರ ದೆಹಲಿಯಲ್ಲಿ ನಡೆಯಲಿರುವ ಡೆಲ್ಲಿ ಕ್ಯಾಪಿಟಲ್ಸ್‌ ವಿರುದ್ಧದ ಪಂದ್ಯದಲ್ಲಿ ಆಡುತ್ತಿಲ್ಲ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಡೆಲ್ಲಿ ತಂಡವು ಆರ್‌ಸಿಬಿಯನ್ನು ಸೋಲಿಸಿತ್ತು. ಇದೀಗ ಆರ್‌ಸಿಬಿ ಮುಯ್ಯಿ ತೀರಿಸಿಕೊಳ್ಳುವ ತವಕದಲ್ಲಿದೆ.ಮುಂದಿನ ಪಂದ್ಯಕ್ಕೆ ಅವರು ಆಯ್ಕೆಗೆ ಲಭ್ಯವಿಲ್ಲ ಎಂದು ತಂಡದ ಬ್ಯಾಟಿಂಗ್ ಕೋಚ್ ದಿನೇಶ್ ಕಾರ್ತಿಕ್ ಅವರು ದೃಢಪಡಿಸಿದ್ದಾರೆ. ಹೀಗಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಮುಂದಿನ ಐಪಿಎಲ್ ಪಂದ್ಯಕ್ಕೆ ಫಿಲ್ ಸಾಲ್ಟ್ ಇಲ್ಲದೆ ಆಡಲಿದೆ.

ಚೆನ್ನೈ: ಗೆಲುವಿನ ಹಳಿಗೆ ಮರಳಿದ್ದ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡ ತವರಿನಲ್ಲಿ ಮತ್ತೊಂದು ಸೋಲು ಅನುಭವಿಸಿದೆ. ಬ್ಯಾಟಿಂಗ್‌ ಹಾಗೂ ಬೌಲಿಂಗ್‌ನಲ್ಲಿ ನೀರಸ ಪ್ರದರ್ಶನ ತೋರಿದ ಐದು ಬಾರಿಯ ಚಾಂಪಿಯನ್‌ ಚೆನ್ನೈ ಸೂಪರ್‌ ಕಿಂಗ್ಸ್‌ (ಸಿಎಸ್‌ಕೆ) ತಂಡವುವು ಗುಜರಾತ್ ಟೈಟನ್ಸ್‌ಗೆ ಸುಲಭ ತುತ್ತಾಯಿತು.ಚೆನ್ನೈನ ಎಂ.ಎ. ಚಿದಂಬರಂ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಕಿಂಗ್ಸ್‌ ನೀಡಿದ್ದ 159 ರನ್‌ಗಳ ಗುರಿ ಎದುರು ಆಡಿದ ಟೈಟನ್ಸ್‌ ಬ್ಯಾಟರ್‌ಗಳು, ಇನ್ನೂ 20 ಎಸೆತಗಳು ಬಾಕಿ ಇರುವಂತೆಯೇ 162 ರನ್‌ ಗಳಿಸಿದರು. ಇದರೊಂದಿಗೆ, ಟೂರ್ನಿಯಲ್ಲಿ ಆಡಿರುವ 8 ಪಂದ್ಯಗಳಲ್ಲಿ 4ನೇ ಜಯ ಸಾಧಿಸಿದ ಗಿಲ್‌ ಪಡೆ, ಪಾಯಿಂಟ್‌ ಪಟ್ಟಿಯಲ್ಲಿ 5ನೇ ಸ್ಥಾನಕ್ಕೇರಿತು. ಚೆನ್ನೈ ಕೂಡ ಇಷ್ಟೇ ಪಂದ್ಯಗಳನ್ನಾಡಿದ್ದು, ಮೂರರಲ್ಲಷ್ಟೇ ಗೆದ್ದಿದೆ.

ಹೈದರಾಬಾದ್‌: 14 ವರ್ಷದ ಪೋರ ವೈಭವ್‌ ಸೂರ್ಯವಂಶಿ ಮತ್ತೊಂದು ಮಿಂಚಿನ ಶತಕ ದಾಖಲಿಸಿದ್ದಾರೆ. ರಾಜಸ್ಥಾನ ರಾಯಲ್ಸ್‌ನ ಈ ಬ್ಯಾಟರ್‌ ಸನ್‌ರೈಸರ್ಸ್‌ ವಿರುದ್ಧದ ಪಂದ್ಯದಲ್ಲಿ 37 ಎಸೆತಗಳಲ್ಲಿ 103 ರನ್‌ ಗಳಿಸಿ ಅಬ್ಬರಿಸಿದರು. ವೈಭವ್‌ ಶತಕದ ಹೊರತಾಗಿಯೂ ಈ ರೋಚಕ ಪಂದ್ಯವನ್ನು ಸನ್‌ರೈಸರ್ಸ್‌ ತಂಡವು ಐದು ವಿಕೆಟ್‌ಗಳಿಂದ ಜಯಿಸಿತು. ಪಂದ್ಯದ ನಂತರ ಮಾತನಾಡಿದ ಸನ್‌ರೈಸರ್ಸ್‌ ನಾಯಕ ಪ್ಯಾಟ್‌ ಕಮಿನ್ಸ್‌ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಅನುಭವಿ ವೇಗಿ ಆಗಿರುವ ಕಮಿನ್ಸ್‌ ಅವರು ಸೂರ್ಯವಂಶಿ ತನ್ನ ನೆಚ್ಚಿನ ಆಟಗಾರ ಎಂದು ಹೇಳಿದ್ದಾರೆ.ಸೂರ್ಯವಂಶಿ ನನ್ನ ಹೊಸ ನೆಚ್ಚಿನ ಆಟಗಾರ ಎಂದು ನಾನು ಭಾವಿಸುತ್ತೇನೆ. ಅವರು ಚೆಂಡನ್ನು ತುಂಬಾ ಕಠಿಣವಾಗಿ ಹೊಡೆಯುತ್ತಾರೆ. ಇದನ್ನು ನೋಡಲು ಅದ್ಭುತವಾಗಿದೆ. ಇದು ಒಳ್ಳೆಯ ಮಜಾ ನೀಡುತ್ತದೆ.