Shorts

ಕೋಲ್ಕತ್ತ: ಪಂದ್ಯ ನಡೆಯುವ ವೇಳೆ ಅಂಪೈರ್‌ ಜೊತೆ ವಾಗ್ವಾಗ ನಡೆಸಿದ ಸನ್‌ರೈಸರ್ಸ್‌ ಹೈದರಾಬಾದ್‌ ತಂಡದ ಆರಂಭಿಕ ಬ್ಯಾಟರ್‌ ಅಭಿಷೇಕ್‌ ಶರ್ಮಾ ಅವರಿಗೆ ಬಿಸಿಸಿಐ ಬಿಗ್‌ಶಾಕ್‌ ನೀಡಿದೆ.ಈಡನ್‌ ಗಾರ್ಡನ್‌ನಲ್ಲಿ ಕೋಲ್ಕತ್ತಾ ನೈಟ್‌ರೈಡರ್ಸ್‌ ವಿರುದ್ಧ ಗುರುವಾರ ನಡೆದ ಪಂದ್ಯದಲ್ಲಿ ಅಭಿಷೇಕ್‌ ಅಬ್ಬರಿಸಿದ್ದರು. ಈ ಪಂದ್ಯದಲ್ಲಿ 228.57 ಸ್ಟ್ರೈಕ್‌ರೇಟ್‌ನಲ್ಲಿ ಬ್ಯಾಸ್‌ ಬೀಸಿ 48 ರನ್‌ ಗಳಿಸಿದ್ದರು. ಅವರಿಗೆ ಈಗ ದಂಡದ ಬಿಸಿ ತಟ್ಟಿದೆ.ಕೆಕೆಆರ್‌ ವಿರುದ್ಧದ ಪಂದ್ಯದಲ್ಲಿ ನೀತಿ ಸಂಹಿತೆ ಉಲ್ಲಂಘಿಸಿದ್ದಕ್ಕಾಗಿ ಎಸ್‌ಆರ್‌ಹೆಚ್‌ ತಂಡದ ಆಲ್‌ರೌಂಡರ್‌ ಅಭಿಷೇಕ್‌ ಬಿಸಿಸಿಐ ನಿಂದ ಶಿಕ್ಷೆಗೆ ಗುರಿಯಾಗಿದ್ದಾರೆ. ಪಂದ್ಯದ ವೇಳೆ ಆಕ್ಷೇಪಾರ್ಹ ಪದ ಬಳಕೆ ಮಾಡಿದ್ದಕ್ಕಾಗಿ ಅಭಿಗೆ ಬಿಸಿಸಿಐ, ಪಂದ್ಯ ಶುಲ್ಕದ ಶೇ.25 ರಷ್ಟು ದಂಡ ಹಾಗೂ 1 ಡಿಮೆರಿಟ್‌ ಪಾಯಿಂಟ್‌ ಅನ್ನು ಕೂಡ ಸಂಗ್ರಹಿಸಿದೆ.

ಬಾಗಲಕೋಟೆ: ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿರುವ ಸಿದ್ದರಾಮಯ್ಯನವರು ತಮ್ಮ ಅಧಿಕಾರವನ್ನು ಸ್ವಂತಕ್ಕೋಸ್ಕರ, ಸ್ವಾರ್ಥಕ್ಕೋಸ್ಕರ ಮತ್ತು ರಾಜ್ಯದ ಜನರಿಗೆ ವಂಚನೆ ಮಾಡುವ ಕೆಲಸ ಮಾಡಿ, ಈ ರಾಜ್ಯವನ್ನು ಕತ್ತಲೆ ಕೋಣೆಯಲ್ಲಿಡುವ ಕೆಲಸ ಮಾಡಿದ್ದಾರೆ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಅವರು ಆರೋಪಿಸಿದ್ದಾರೆ.ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾವು ಬೆಂಗಳೂರು ನಗರದ ಅಭಿವೃದ್ಧಿಯಲ್ಲಿ ನಮ್ಮದೇ ಆದ ಪಾಲುದಾರಿಕೆಯನ್ನು ಕೊಟ್ಟಿದ್ದೇವೆ ಎಂದು ತಿಳಿಸಿದರು. ಯಾವುದೇ ಶಾಸಕರೂ ತನ್ನ ಕಾರ್ಯಕ್ಷೇತ್ರಕ್ಕೆ ಹೋಗಿ ನಾನು ಒಳ್ಳೆಯ ಕೆಲಸ ಮಾಡಿದ್ದೇನೆ; ನನ್ನಿಂದ ಇಷ್ಟು ಕೆಲಸ ಆಗಿದೆ ಎಂದು ಹೇಳುವ ನೈತಿಕತೆಯನ್ನು ಕೇವಲ ವಿಪಕ್ಷದವರಷ್ಟೇ ಅಲ್ಲ; ಆಡಳಿತ ಪಕ್ಷದವರೂ ಕಳಕೊಂಡಿದ್ದಾರೆ ಎಂದು ನುಡಿದರು.

ಗುವಾಹಟಿ: ಪಶ್ಚಿಮ ಏಷ್ಯಾ ಸಂಘರ್ಷ ಹೆಚ್ಚುತ್ತಿರುವ ಮಧ್ಯೆ ದೇಶದಲ್ಲಿ "ಅನಿಲ ಅಥವಾ ಇಂಧನದ ಕೊರತೆಯಿಲ್ಲ" ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಗುರುವಾರ ಭರವಸೆ ನೀಡಿದ್ದಾರೆ, ಏಕೆಂದರೆ ಜನರು ಯಾವುದೇ ಸಮಸ್ಯೆಗಳನ್ನು ಎದುರಿಸದಂತೆ ಸರ್ಕಾರವು ವಿವಿಧ ಕ್ರಮಗಳನ್ನು ಅಳವಡಿಸಿಕೊಂಡಿದೆ. ಎಎನ್‌ಎಯೊಂದಿಗೆ ಮಾತನಾಡಿದ ಗಡ್ಕರಿ ಅವರು, ಭಾರತವು ತನ್ನ ಇಂಧನ ಅಗತ್ಯಗಳನ್ನು ಪೂರೈಸಲು ಆಮದುಗಳ ಮೇಲೆ ಅವಲಂಬಿತವಾಗಿದೆ ಎಂದು ಒಪ್ಪಿಕೊಂಡರು ಆದರೆ ಹೆಚ್ಚು ರಫ್ತು-ಕೇಂದ್ರಿತ ವ್ಯಾಪಾರಕ್ಕೆ ತಳ್ಳಲು ಪರ್ಯಾಯ ಆಯ್ಕೆಗಳನ್ನು ಅಳವಡಿಸಿಕೊಳ್ಳುವ ಮೂಲಕ ಸರ್ಕಾರದ ಸ್ವಾವಲಂಬನೆಯ ವಿಧಾನವನ್ನು ಎತ್ತಿ ತೋರಿಸಿದರು. ಸರಕಾರ ಹಲವು ಕ್ರಮಗಳನ್ನು ಕೈಗೊಂಡಿದ್ದು, ಇಂದು ದೇಶದಲ್ಲಿ ಗ್ಯಾಸ್, ಇಂಧನದ ಕೊರತೆ ಇಲ್ಲ.ಹೌದು ಕಷ್ಟಗಳಿವೆ.ಆದರೆ

ಕೊಲ್ಲಂ: ಇತ್ತೀಚಿನ ಎಲ್‌ಪಿಜಿ ಮತ್ತು ಇತರ ಇಂಧನಗಳ ಬೆಲೆ ಏರಿಕೆಯ ನಡುವೆ ಪ್ರಧಾನಿ ನರೇಂದ್ರ ಮೋದಿ ಅವರು ಭಾರತದ ಪರವಾಗಿ ನಿಲ್ಲುವ ಬದಲು ಇಸ್ರೇಲ್, ಅಮೆರಿಕಕ್ಕೆ ತಲೆ ಬಾಗಿದ್ದಾರೆ ಎಂದು ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ವಾಗ್ದಾಳಿ ನಡೆಸಿದರು. ಎಲ್‌ಪಿಜಿ ಮತ್ತು ಇಂಧನ ಬೆಲೆಗಳು ಏರುತ್ತಿವೆ, ಈ ಪರಿಸ್ಥಿತಿಯಲ್ಲಿ ವ್ಯಾಪಾರವು ಕಷ್ಟಕರವಾಗಲಿದೆ. ಇದೆಲ್ಲದರ ಮಧ್ಯೆ, ನರೇಂದ್ರ ಮೋದಿ ನೇತೃತ್ವದ ನಮ್ಮ ಕೇಂದ್ರ ಸರ್ಕಾರದ ನೀತಿ ಏನು? ಅವರು ತಮ್ಮ ಜನರಿಗಾಗಿ ಹೋರಾಡುತ್ತಿಲ್ಲ. ಅವರು ಭಾರತಕ್ಕಾಗಿ ಹೋರಾಡುತ್ತಿಲ್ಲ. ಅವರು ಭಾರತಕ್ಕಾಗಿ ಹೋರಾಡುತ್ತಿಲ್ಲ. ಅವರು ಭಾರತದ ಪರವಾಗಿ ನಿಲ್ಲುತ್ತಿಲ್ಲ. ಅವರು ಮಾಡುತ್ತಿರುವುದು ಅಮೆರಿಕ ಹಾಗೂ ಇಸ್ರೇಲ್‌ಗೆ ತಲೆ ಬಾಗಿರುವುದುಎ ಎಂದು ಅಸಮಾಧಾನ ಹೊರಹಾಕಿದರು.

ದಾವಣಗೆರೆ: ದಾವಣಗೆರೆ ದಕ್ಷಿಣ ಕ್ಷೇತ್ರಕ್ಕೆ ಕಾಂಗ್ರೆಸ್ ಕೊಡುಗೆ ದೊಡ್ಡ ಸೊನ್ನೆ. ಈ ಕ್ಷೇತ್ರದಲ್ಲಿ ಒಂದೇ ಕುಟುಂಬದ ಸದಸ್ಯರೇ ಹಲವು ವರ್ಷಗಳಿಂದ ಆಡಳಿತದಲ್ಲಿ ಇದ್ದರೂ ಅಭಿವೃದ್ಧಿಗೆ ಏನೂ ಮಾಡಲಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ಅವರು ಆರೋಪಿಸಿದರು.ದಾವಣಗೆರೆ ದಕ್ಷಿಣ ಕ್ಷೇತ್ರದ ಉಪ ಚುನಾವಣೆ ಹಿನ್ನೆಲೆಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಕ್ಷೇತ್ರಕ್ಕೆ ಕಾಂಗ್ರೆಸ್ ಶಾಸಕರು, ಸಂಸದರು ಏನು ಮಾಡಲಿಲ್ಲ. ಅಭಿವೃದ್ಧಿ ಏನಿದ್ದರೂ ಬಿಜೆಪಿ ಅವಧಿಯಲ್ಲೇ ಆಗಿರುವುದು. ಜಿ ಎಂ ಸಿದೇಶ್ವರ ಅವರು ಸಂಸದರಾಗಿದ್ದಾಗ ನಾನು ಕೇಂದ್ರ ರೈಲ್ವೆ ಸಚಿವನಾಗಿದ್ದ ವೇಳೆ ತುಮಕೂರು -ಚಿತ್ರದುರ್ಗ- ದಾವಣಗೆರೆ ನೇರ ರೈಲ್ವೆ ಮಾರ್ಗಕ್ಕೆ ಮನವಿ ಸಲ್ಲಿಸಲು ನಿಯೋಗದಲ್ಲಿ ಬಂದಿದ್ದರು.

ಮುಂಬೈ: ಬಹುನಿರೀಕ್ಷಿತ ನಿತೀಶ್ ತಿವಾರಿ ನಿರ್ದೇಶನದ ರಾಮಾಯಣ ಸಿನಿಮಾದ ಟೀಸರ್ ಕೊನೆಗೂ ರಿಲೀಸ್‌ ಆಗಿದೆ. ಮರ್ಯಾದಾ ಪುರುಷೋತ್ತಮನ ಪಾತ್ರಕ್ಕೆ ಬಾಲಿವುಡ್‌ ನಟ ರಣಬೀರ್ ಕಪೂರ್ ಜೀವತುಂಬಿದ್ದಾರೆ.ನಿತೇಶ್ ತಿವಾರಿ ನಿರ್ದೇಶಿಸಿರುವ `ರಾಮಾಯಣ ಚಿತ್ರವನ್ನ ಯಶ್ ಒಡೆತನದ ಮಾನ್‌ಸ್ಟರ್ ಮೈಂಡ್ ಹಾಗೂ ನಮಿತ್ ಮಲ್ಲೋತ್ರಾ ಜಂಟಿಯಾಗಿ ನಿರ್ಮಿಸಿದ್ದಾರೆ. ಹನುಮಂತನ ಲುಕ್‌ನ್ನ ಸೀಕ್ರೆಟಾಗಿ ಇಡಲಾಗಿದೆ. ಹನುಮಂತನ ಪಾತ್ರದಲ್ಲಿ ಸನ್ನಿ ಡಿಯೋಲ್ ನಟಿಸಿದ್ದಾರೆ. ಬಹುತಾರಾಗಣದ ರಾಮಾಯಣದ ಫಸ್ಟ್ ಪಾರ್ಟ್ ನವೆಂಬರ್ ತಿಂಗಳಲ್ಲಿ ತೆರೆಗೆ ಬರಲಿದೆ.ಹನುಮ ಜಯಂತಿ ಹಿನ್ನೆಲೆ ಸಿನಿಮಾದ ಟೀಸರ್‌ನ್ನು ಇಂದು ರಿಲೀಸ್ ಮಾಡಲಾಗಿದೆ. 2:38 ನಿಮಿಷದ ಝಲಕ್ ಹಂಚಿಕೊಂಡಿದ್ದು, ಮರ್ಯಾದಾ ಪುರುಷೋತ್ತಮ ರಾಮನ ರಾಜ್ಯಭಾರದಿಂದ ಹಿಡಿದು ವನವಾಸಕ್ಕೆ ತೆರಳುವವರೆಗಿನ ಸಣ್ಣ ತುಣುಕನ್ನ ವಿವರಿಸಿದ್ದಾರೆ.

ಬೆಂಗಳೂರು: ಕರ್ನಾಟಕ ರಾಜ್ಯ ಪೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷೆಗೆ ಅಂಕಗಳ ಬದಲಿಗೆ ಗ್ರೇಡ್‌ ನೀಡುವುದಕ್ಕೆ ಮುಂದಾಗಿರುವ ರಾಜ್ಯ ಸರ್ಕಾರದ ಪ್ರಸ್ತಾವ ಪ್ರಶ್ನಿಸಿ ಕರ್ನಾಟಕ ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದೆ.ಬೆಂಗಳೂರಿನ ಎಚ್‌ ಎನ್‌ ಚಂದನಾ ಮತ್ತು ಎಸ್ ವೆಂಕಟೇಶ್ ಅವರು ಅರ್ಜಿ ಸಲ್ಲಿಸಿದ್ದು, ಶಾಲಾ ಶಿಕ್ಷಣ ಇಲಾಖೆ ಕಾರ್ಯದರ್ಶಿ, ಆಯುಕ್ತರು, ಶಿಕ್ಷಣ ಇಲಾಖೆ ಸಚಿವ ಮಧು ಬಂಗಾರಪ್ಪ ಅವರನ್ನು ಪ್ರತಿವಾದಿಗಳನ್ನಾಗಿಸಲಾಗಿದೆ. ಅರ್ಜಿಯು ಇನ್ನಷ್ಟೇ ವಿಚಾರಣೆಗೆ ಬರಬೇಕಿದೆ.ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಇತ್ತೀಚೆಗೆ ನಡೆದ ಪತ್ರಿಕಾಗೋಷ್ಠಿಯಲ್ಲಿ, ಹಿಂದಿ ಭಾಷೆ ಸೇರಿದಂತೆ ತೃತೀಯ ಭಾಷೆಗಳು ಕಡ್ಡಾಯವಲ್ಲ. ಈ ಭಾಷೆಗಳಿಗೆ ಅಂಕಗಳ ಬದಲಿಗೆ ಗ್ರೇಡ್​ಗಳನ್ನಾಗಿ ಪರಿಗಣಿಸಲಾಗುತ್ತದೆ.