ಬಾಲಿವುಡ್ ನಟಿ ವಿದ್ಯಾ ಬಾಲನ್ ತಮ್ಮ ನಟನೆ, ದಿಟ್ಟ ಚಿತ್ರ ಆಯ್ಕೆಗಳು ಮತ್ತು ತಮ್ಮ ಕಲೆಗೆ ಬದ್ಧತೆಯಿಂದ ಬಾಲಿವುಡ್‌ನಲ್ಲಿ ಬಹುಬೇಡಿಕೆಯ ನಟಿಯರಲ್ಲಿ ಒಬ್ಬರಾಗಿದ್ದಾರೆ. ನಟಿ ಇಂದು 47ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ವಿದ್ಯಾ ಬಾಲನ್ ನಿರಂತರವಾಗಿ ರೂಢಿಗಳನ್ನು ಸವಾಲು ಮಾಡಿದ್ದಾರೆ ಮತ್ತು ಪ್ರೇಕ್ಷಕರ ಮೇಲೆ ಶಾಶ್ವತವಾದ ಪ್ರಭಾವ ಬೀರುವ ಪ್ರದರ್ಶನಗಳನ್ನು ನೀಡಿದ್ದಾರೆ.ವಿದ್ಯಾ ಅವರ ಬಾಲಿವುಡ್ ಚೊಚ್ಚಲ ಸಂಗೀತ ಚಿತ್ರದಲ್ಲಿ ಅವರ ಅಪಾರ ಪ್ರತಿಭೆ ಮತ್ತು ಪರದೆಯ ಉಪಸ್ಥಿತಿಯನ್ನು ಪ್ರದರ್ಶಿಸಿದರು. ಪ್ರೀತಿ ಮತ್ತು ಸಾಮಾಜಿಕ ಒತ್ತಡದ ಸುಳಿಯಲ್ಲಿ ಸಿಲುಕಿದ ಮಹಿಳೆ ಲೋಲಿತಾ ಪಾತ್ರದಲ್ಲಿ ವಿದ್ಯಾ ಅವರು ವಿಮರ್ಶಕರು ಮತ್ತು ಪ್ರೇಕ್ಷಕರ ಮೆಚ್ಚುಗೆಯನ್ನು ಗಳಿಸಿದರು. ಸೈಫ್ ಅಲಿ ಖಾನ್ ಅವರೊಂದಿಗಿನ ಅವರ ರಸಾಯನಶಾಸ್ತ್ರವು

ಬೆಂಗಳೂರು: ಚಾಲೆಂಜಿಂಗ್‌ ಸ್ಟಾರ್‌ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ಅವರಿಗೆ ಅಶ್ಲೀಲ ಕಾಮೆಂಟ್ ಮಾಡಿದ ಇಬ್ಬರು ಆರೋಪಿಗಳನ್ನು ಪೊಲೀಸರು ಕೊನೆಗೂ ಬಂಧಿಸಿದ್ದಾರೆ. ವಿಜಯಲಕ್ಷ್ಮಿ ಅವರಿಗೆ ನಿಂದಿಸಿದ್ದ ಪ್ರಕರಣ ಸಂಬಂಧ ಬೆಂಗಳೂರು ಮೂಲದ ಇಬ್ಬರು ಆರೋಪಿಗಳನ್ನು ಸೈಬರ್ ಪೊಲೀಸರು ಬಂಧಿಸಿದ್ದಾರೆ. ತಾನು ನೀಡಿದ ದೂರಿನ ಬಗ್ಗೆ ಯಾವುದೇ ಕ್ರಮವನ್ನು ಪೊಲೀಸರು ಕ್ರಮಕೈಗೊಂಡಿಲ್ಲ ಎಂದು ವಿಜಯಲಕ್ಷ್ಮ ಅಸಮಾಧಾನ ವ್ಯಕ್ತಪಡಿಸಿದ ಬೆನ್ನಲ್ಲೇ ಇಬ್ಬರನ್ನು ಬಂಧಿಸಲಾಗಿದೆ.ವಿಜಯಲಕ್ಷ್ಮಿ ಅವರು 2025ರ ಡಿಸೆಂಬರ್‌ನಲ್ಲಿ ದಾವಣಗೆರೆಯಲ್ಲಿ ಹೇಳಿಕೆಯೊಂದನ್ನು ನೀಡಿದ್ದರು. ಈ ಹೇಳಿಕೆ ನೀಡಿದ ಬಳಿಕ ವಿಜಯಲಕ್ಷ್ಮಿ ಅವರ ಕುರಿತು ಕೆಲವು ಅಶ್ಲೀಲ ಕಾಮೆಂಟ್‌ಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದವು.

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರಕಾರವು ಶಾಸಕ ಜನಾರ್ದನ ರೆಡ್ಡಿಯವರಿಗೆ ಸಮರ್ಪಕ ಭದ್ರತಾ ವ್ಯವಸ್ಥೆ ಕಲ್ಪಿಸಬೇಕು ಎಂದು ಬಿಜೆಪಿ ರಾಜ್ಯ ಸಹ ಉಸ್ತುವಾರಿ ಸುಧಾಕರ ರೆಡ್ಡಿ ಅವರು ಆಗ್ರಹಿಸಿದ್ದಾರೆ. ಕರ್ನಾಟಕದಲ್ಲಿ ಕಾನೂನು- ಸುವ್ಯವಸ್ಥೆ ಕಾಪಾಡುವಲ್ಲಿ ಈ ಸರಕಾರ ಸಂಪೂರ್ಣ ವಿಫಲವಾಗಿದೆ ಎಂದು ಅವರು ಆಕ್ಷೇಪಿಸಿದ್ದಾರೆ.ಜನಾರ್ದನ ರೆಡ್ಡಿಯವರ ಮೇಲೆ ನಡೆದ ಹಲ್ಲೆಯನ್ನು ಅವರು ತೀವ್ರವಾಗಿ ಖಂಡಿಸಿದ್ದಾರೆ. ಕರ್ನಾಟಕದಲ್ಲಿ ಮಾದಕವಸ್ತು (ಡ್ರಗ್) ಮಾಫಿಯ ಹೆಚ್ಚಾಗಿದೆ. ಕಾನೂನು- ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದಿದೆ. ಕರ್ನಾಟಕದಲ್ಲಿ ಗೂಂಡಾರಾಜ್ಯ ತಾಂಡವವಾಡುತ್ತಿದೆ. ಕಾಂಗ್ರೆಸ್ ಪ್ರೇರಿತ ಗೂಂಡಾ ವ್ಯವಸ್ಥೆಯಿಂದ ಸಮಸ್ಯೆ ಉಂಟಾಗುತ್ತಿದೆ ಎಂದು ಅವರು ಕಳವಳ ವ್ಯಕ್ತಪಡಿಸಿದ್ದಾರೆ.

ನ್ಯೂಯಾರ್ಕ್: ಭಾರತೀಯ ಮೂಲದ 34 ವರ್ಷದ ಝೊಹ್ರಾನ್ ಮಮ್ದಾನಿ ಅವರು ಅಮೆರಿಕದ ಅತಿದೊಡ್ಡ ನಗರ ನ್ಯೂಯಾರ್ಕ್ ನ 112ನೇ ಮೇಯರ್ ಆಗಿ ಪ್ರಮಾಣವಚನ ಸ್ವೀಕರಿಸಿದರು.ಡೆಮಾಕ್ರಟಿಕ್ ಪಕ್ಷದ ನಾಯಕ, ಸಮಾಜವಾದಿ ಝೊಹ್ರಾನ್ ಮಮ್ದಾನಿ ಗುರುವಾರ ಮುಂಜಾನೆ ಪ್ರಮಾಣವಚನ ಸ್ವೀಕರಿಸಿದರು. ನ್ಯೂಯಾರ್ಕ್ ನಗರದ ಮೊದಲ ಮುಸ್ಲಿಂ ಮೇಯರ್ ಅವರಾಗಿದ್ದಾರೆ. ದಕ್ಷಿಣ ಏಷ್ಯಾ ಮೂಲದ ಮೊದಲ ಮೇಯರ್ ಹಾಗೂ ಒಂದು ಶತಮಾನಕ್ಕೂ ಹೆಚ್ಚು ಅವಧಿಯಲ್ಲಿ ಈ ಹುದ್ದೆ ಅಲಂಕರಿಸಿದ ಅತಿಕಿರಿಯ ವ್ಯಕ್ತಿ ಎಂಬ ದಾಖಲೆಗೆ ಪಾತ್ರರಾಗಿದ್ದಾರೆ.ಐತಿಹಾಸಿಕ ನಿಷ್ಕ್ರಿಯ ಸುರಂಗಮಾರ್ಗ ನಿಲ್ದಾಣದಲ್ಲಿ ನಡೆದ ಸಮಾರಂಭದಲ್ಲಿ ಮಮ್ದಾನಿ ಕುರಾನ್ ಮೇಲೆ ಕೈ ಇಟ್ಟು ಪ್ರಮಾಣವಚನ ಸ್ವೀಕರಿಸಿದರು. ಇದು ನನ್ನ ಜೀವನದ ಮಹತ್ತರ ಗೌರವ ಎಂದು ಅವರು ಹೇಳಿದರು.

ನವದೆಹಲಿ: ಹೊಸ ವರ್ಷದಲ್ಲಿ ಹೊಸ ನಿಯಮಗಳು ಇಂದಿನಿಂದಲೇ ಜಾರಿಗೆ ಬರಲಿದೆ. ದೇಶದಲ್ಲಿ ನಿಯಮಗಳಲ್ಲಿ ಮಹತ್ವದ ಬದಲಾವಣೆಗಳಾಗಲಿವೆ. ಹಲವು ವಸ್ತುಗಳ ಬೆಲೆಯಲ್ಲಿ ಏರಿಳಿತವಾಗಲಿದೆ.ಇಂದಿನಿಂದಲೇ ಪಿಎಂ ಕಿಸಾನ್, ಯುಪಿಐ, ಮತ್ತು ಸಿಮ್ ದೃಢೀಕರಣದಂತಹ ಹಲವಾರು ನಿಯಮಗಳಲ್ಲಿ ಮಹತ್ವದ ಬದಲಾವಣೆಗಳಾಗಲಿವೆ. ಮಾತ್ರವಲ್ಲ, ಫ್ರಿಡ್ಜ್, ಎಸಿ ಮತ್ತು ಕಾರುಗಳ ಬೆಲೆಗಳು ಏರಿಕೆಯಾಗಲಿದೆ.‌ಹೊಸ ವರ್ಷಕ್ಕೆ ಪಿಎಂ ಕಿಸಾನ್‌ ಯೋಜನೆಯಡಿ ಸೌಲಭ್ಯಗಳನ್ನು ಪಡೆಯಲು ರೈತರು ವಿಶೇಷ ಕಿಸಾನ್‌ ಐಡಿ ಹೊಂದುವುದು ಕಡ್ಡಾಯವಾಗಲಿದೆ. ರೈತರ ಭೂ ದಾಖಲೆಗಳು, ಬೆಳೆ ಮಾಹಿತಿ, ಆಧಾರ್ ಮತ್ತು ಬ್ಯಾಂಕ್ ವಿವರಗಳು ಈ ಐಡಿಗೆ ಲಿಂಕ್‌ ಆಗಿರಲಿವೆ. ಯೋಜನೆಯ ದುರುಪಯೋಗ ತಡೆದು, ಅರ್ಹರಷ್ಟೇ ಅದರ ಲಾಭ ಪಡೆಯುವಂತೆ ಮಾಡಲು ಈ ನಿಯಮ ಜಾರಿಗೆ ತರಲಾಗಿದೆ.

ಮಂಗಳೂರು: ಮಾಜಿ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಅವರ ಸಹೋದರ, ನಿಟ್ಟೆ ಶಿಕ್ಷಣ ಸಂಸ್ಥೆಗಳ ಸ್ಥಾಪಕ, ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ಕುಲಪತಿ ಡಾ. ಎನ್.ವಿನಯ ಹೆಗ್ಡೆ ಗುರುವಾರ ಬೆಳಗಿನ ಜಾವ ನಿಧನರಾದರು. ಅವರಿಗೆ 86 ವರ್ಷ ವಯಸ್ಸಾಗಿತ್ತು.ಲೋಕಸಭಾ ಸ್ಪೀಕರ್ ಆಗಿದ್ದ ದಿವಂಗತ ಜಸ್ಟಿಸ್ ಕೆ.ಎಸ್. ಹೆಗ್ಡೆ ಅವರ ಪುತ್ರನಾದ ಡಾ. ವಿನಯ ಹೆಗ್ಡೆ ಅವರು ರಾಜ್ಯದ ಪ್ರಮುಖ ಶಿಕ್ಷಣ ತಜ್ಞರು, ಉದ್ಯಮಿ ಮತ್ತು ಸಮಾಜ ಸೇವಕರಾಗಿ ಅವರು ಗುರುತಿಸಿಕೊಂಡಿದ್ದರು.ವಿನಯ ಹೆಗ್ಡೆ ಅವರಿಗೆ ಶಿಕ್ಷಣ ಮತ್ತು ಸಮಾಜ ಸೇವೆಗಾಗಿ ಅವರಿಗೆ ಕರ್ನಾಟಕ ಸರ್ಕಾರದಿಂದ ರಾಜ್ಯೋತ್ಸವ ಪ್ರಶಸ್ತಿ. ಮಂಗಳೂರು ವಿಶ್ವವಿದ್ಯಾಲಯದ ಗೌರವ ಡಾಕ್ಟರೇಟ್ ಲಭಿಸಿದೆ. ಕರಾವಳಿ ಕರ್ನಾಟಕದ ಶೈಕ್ಷಣಿಕ ಮತ್ತು ಕೈಗಾರಿಕಾ ಕ್ರಾಂತಿಯಲ್ಲಿ ಪ್ರಮುಖ ಪಾತ್ರ ವಹಿಸಿದ್ದ ದೂರದೃಷ್ಟಿಯ ನಾಯಕರಾಗಿದ್ದರು.