ಬೆಂಗಳೂರು: ಮನ್ರೇಗಾ ಕುರಿತು ಸುಳ್ಳು ಮತ್ತು ಅಸತ್ಯವನ್ನು ಮಾನ್ಯ ರಾಜ್ಯಪಾಲರ ಮೂಲಕ ಹೇಳಿಸಲು ಕರ್ನಾಟಕ ಸರಕಾರ ಬಯಸಿತ್ತು. ಕಾಂಗ್ರೆಸ್ ಪಕ್ಷವು ಸುಳ್ಳಿನ ಯಂತ್ರ ಎಂದು ಕೇಂದ್ರ ಕೃಷಿ, ರೈತರ ಕಲ್ಯಾಣ ಮತ್ತು ಗ್ರಾಮೀಣಾಭಿವೃದ್ಧಿ ಖಾತೆ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ಆರೋಪಿಸಿದ್ದಾರೆ.ನಗರದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸುಳ್ಳಿನ ಯಂತ್ರ, ಭ್ರಮೆಯ ಅಂಗಡಿ ಆಗಿದೆ ಎಂದು ಆಕ್ಷೇಪಿಸಿದರು. ಕರ್ನಾಟಕದ ವಿಧಾನಸಭೆಯಲ್ಲಿ ಇಂದು ಪ್ರಜಾಸತ್ತಾತ್ಮಕ ಮೌಲ್ಯಗಳ ಕೊಲೆ ಆಗಿದೆ. ಸಂವಿಧಾನಕ್ಕೂ ಧಕ್ಕೆ ಮಾಡಿದ್ದಾರೆ ಎಂದು ಟೀಕಿಸಿದರು. ಮಾನ್ಯ ಗವರ್ನರ್ ಅವರ ಭಾಷಣದಲ್ಲಿ ಸುಳ್ಳುಗಳಿದ್ದವು. ಅದನ್ನು ಓದಲು ಸಾಧ್ಯ ಇರಲಿಲ್ಲ ಎಂದು ವಿಶ್ಲೇಷಿಸಿದರು.
ಬೆಂಗಳೂರು: ಬಿಗ್ ಬಾಸ್ ಕನ್ನಡ ಸೀಸನ್ 12 ರ ವಿಜೇತರಾಗಿದ್ದ ಗಿಲ್ಲಿ ನಟ ಇಂದು ಸಿಎಂ ಸಿದ್ದರಾಮಯ್ಯನವರನ್ನು ಭೇಟಿಯಾಗಿದ್ದಾರೆ. ಈ ವೇಳೆ ಗಿಲ್ಲಿ ನಟನ ಬಗ್ಗೆ ತಿಳಿದು ಸಿಎಂ ಶಾಕ್ ಆಗಿದ್ದಾರೆ. ಬಿಗ್ ಬಾಸ್ ಕನ್ನಡ ಸೀಸನ್ 12 ರ ಫೈನಲ್ ನಲ್ಲಿ ಗಿಲ್ಲಿಗೆ ಬಂದಷ್ಟು ವೋಟ್ ಇದುವರೆಗೆ ಯಾರಿಗೂ ಬಂದಿರಲಿಲ್ಲ. ಸುಮಾರು 45 ಕೋಟಿ ವೋಟ್ ಬಂದಿದೆ ಎಂದು ಗಿಲ್ಲಿ ಹೇಳಿದಾಗ ಸಿಎಂ ಶಾಕ್ ಆಗಿದ್ದಾರೆ. ತುಂಬಾ ಜನಪ್ರಿಯವಾಗಿರುವ ಪ್ರೋಗ್ರಾಂ ಇದು. ಇದುವರೆಗೆ ಇಷ್ಟು ಯಾರೂ ತೆಗೆದುಕೊಂಡಿರಲಿಲ್ಲ ಎಂದಿದ್ದಾರೆ.
ಬೆಂಗಳೂರು: ಈ ರಾಜ್ಯ ಸರಕಾರವು ಸದನದ ಪಾವಿತ್ರ್ಯತೆಯನ್ನು ಹಾಳು ಮಾಡುವ ಕೆಲಸಕ್ಕೆ ಕೈ ಹಾಕಿರುವುದು ದುರ್ದೈವ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಟೀಕಿಸಿದ್ದಾರೆ. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಪ್ರಶ್ನೆಗೆ ಉತ್ತರ ಕೊಟ್ಟರು. ಸದನವು ಈ ನಾಡಿನ ಏಳಿಗೆಗೆ, ನಾಡಿನ ಅಭಿವೃದ್ಧಿಗೆ ಸಂಬಂಧಿಸಿ ಚರ್ಚೆ ಆಗಲು ವೇದಿಕೆ ಆಗಬೇಕೇ ವಿನಾ ಇವರ ರಾಜಕೀಯ ದ್ವೇಷಕ್ಕಾಗಿ ರಾಜ್ಯವನ್ನು ಕೇಂದ್ರ ಸರಕಾರದ ವಿರುದ್ಧ ಎತ್ತಿ ಕಟ್ಟುವ ಷಡ್ಯಂತ್ರ-ಕುತಂತ್ರಕ್ಕೆ ಸದನವನ್ನು ಬಳಸುವುದನ್ನು ಬಿಜೆಪಿ ವಿರೋಧಿಸುತ್ತದೆ ಎಂದು ತಿಳಿಸಿದರು.
ಬೆಳ್ತಂಗಡಿ: ಧನು ಪೂಜೆಗೆ ಹೋಗುವಾಗ ನಿಗೂಢವಾಗಿ ಸಾವನ್ನಪ್ಪಿದ್ದ ಬೆಳ್ತಂಗಡಿಯ ಸುಮಂತ್ ಪ್ರಕರಣ ಎಲ್ಲಿಯವರೆಗೆ ಬಂದಿದೆ? ಆರೋಪಿಗಳು ಸಿಕ್ಕಿಬಿದ್ದರಾ? ಇಲ್ಲಿದೆ ಲೇಟೆಸ್ಟ್ ಮಾಹಿತಿ. ಸುಮಂತ್ ಪ್ರಕರಣ ನಡೆದು ವಾರವೇ ಕಳೆದಿದೆ. ಆದರೆ ಇನ್ನೂ ಆರೋಪಿಗಳು ಪೊಲೀಸರ ಕೈಗೆ ಸಿಕ್ಕಿಲ್ಲ. ಸಂಕ್ರಾಂತಿ ಸಂದರ್ಭದಲ್ಲಿಯೇ ಬೆಳ್ಳಂ ಬೆಳಿಗ್ಗೆ ಕಾಲುದಾರಿಯಲ್ಲಿ ಮನೆ ಪಕ್ಕದ ದೇವಸ್ಥಾನಕ್ಕೆ ಹೋಗುವಾಗ ಸುಮಂತ್ ನಿಗೂಢವಾಗಿ ಸಾವನ್ನಪ್ಪಿದ್ದ. ಆತನ ಮೃತದೇಹ ಮನೆ ಪಕ್ಕದ ಕೆರೆಯಲ್ಲಿ ಪತ್ತೆಯಾಗಿತ್ತು. ಆದರೆ ಮೈಮೇಲಿದ್ದ ಗಾಯಗಳು ಆತನದ್ದು ಕೊಲೆ ಎಂದು ಖಚಪಡಿಸಿತ್ತು. ಇದಾದ ಬಳಿಕ ಪೊಲೀಸರು ಈಗಲೂ ನಿರಂತರವಾಗಿ ತನಿಖೆ ನಡೆಸುತ್ತಲೇ ಇದ್ದಾರೆ. ಆದರೆ ಇನ್ನೂ ಆರೋಪಿಗಳು ಸಿಕ್ಕಿಲ್ಲ.
ಬೆಂಗಳೂರು: ಸದನದಲ್ಲಿ ಮಾನ್ಯ ರಾಜ್ಯಪಾಲರ ಉಪಸ್ಥಿತಿ ವೇಳೆ ಗೂಂಡಾಗಿರಿ ಪ್ರದರ್ಶನದ ಹೊಣೆ ಹೊತ್ತು ಮುಖ್ಯಮಂತ್ರಿ ಸಿದ್ದರಾಯ್ಯನವರು ತಕ್ಷಣ ರಾಜೀನಾಮೆ ಕೊಡಬೇಕು ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಆಗ್ರಹಿಸಿದ್ದಾರೆ.ವಿಧಾನಸೌಧದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕಾಂಗ್ರೆಸ್ಸಿನ ಗೂಂಡಾಗಿರಿ ಕೇವಲ ರಸ್ತೆಗಳಿಗೆ ಸೀಮಿತವಾಗಿತ್ತು. ಈಗ ಅದು ಸದನ ಪ್ರವೇಶವನ್ನೂ ಮಾಡಿದೆ ಎಂದು ಆಕ್ಷೇಪಿಸಿದರು. ಗೌರವಾನ್ವಿತ ರಾಜ್ಯಪಾಲರು ಭಾಷಣ ಓದುವ ಸಂದರ್ಭದಲ್ಲಿ ಕೆಲವು ಸದಸ್ಯರು ಅವರ ಮೇಲೆ ಬಿದ್ದು ಅವರನ್ನು ಥಳಿಸುವ ಹಂತಕ್ಕೂ ಬಂದಿದ್ದುದು ಈಗಾಗಲೇ ಕೆಲವು ಮಾಧ್ಯಮಗಳಲ್ಲಿ ವರದಿಯಾಗಿದೆ; ಇದನ್ನು ನಾವು ಖಂಡಿಸುತ್ತೇವೆ ಎಂದು ತಿಳಿಸಿದರು.
ಬೆಂಗಳೂರು: ಸರ್ಕಾರ ನೀಡಿದ ಭಾಷಣ ಓದದೇ ತಾವೇ ಸಿದ್ಧಪಡಿಸಿದ ಮೂರು ಸಾಲುಗಳ ಭಾಷಣ ಮಾಡಿದ ರಾಜ್ಯಪಾಲರ ವಿರುದ್ಧ ಕ್ರಮ ಕೈಗೊಳ್ಳುವ ಬಗ್ಗೆ ಸಿಎಂ ಸಿದ್ದರಾಮಯ್ಯ ಮಹತ್ವದ ಹೇಳಿಕೆ ನೀಡಿದ್ದಾರೆ. ಇಂದು ವಿಶೇಷ ಅಧಿವೇಶನದಲ್ಲಿ ಸರ್ಕಾರ ಸಿದ್ಧಪಡಿಸಿದ ಭಾಷಣ ಓದದೇ ತಾವೇ ಸಿದ್ಧಪಡಿಸಿದ ಭಾಷಣ ಓದಿದ ರಾಜ್ಯಪಾಲರ ವಿರುದ್ಧ ಕಾಂಗ್ರೆಸ್ ಸರ್ಕಾರ ಸಿಟ್ಟಿಗೆದ್ದಿದೆ. ವಿಧಾನಸಭೆಯಲ್ಲಿ ಇಂದು ರಾಜ್ಯಪಾಲರನ್ನು ತಡೆಯುವ ಪ್ರಯತ್ನವೂ ನಡೆಯಿತು. ಈ ವೇಳೆ ಹೈಡ್ರಾಮಾವೇ ನಡೆದಿದೆ. ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ ‘ವರ್ಷದ ಮೊದಲ ಜಂಟಿ ಅಧಿವೇಶನದಲ್ಲಿ ಮಾನ್ಯ ರಾಜ್ಯಪಾಲರು ಸಚಿವ ಸಂಪುಟ ಸಿದ್ಧಪಡಿಸಿದ ಭಾಷಣವನ್ನು ಓದದೇ, ಸಂವಿಧಾನದ ವಿಧಿಗಳನ್ನು ಉಲ್ಲಂಘನೆ ಮಾಡಿದ್ದಾರೆ.
ಬೆಂಗಳೂರು: ರಾಜ್ಯ ಸರಕಾರವು ತನ್ನ ವೈಫಲ್ಯಗಳನ್ನು ಮುಚ್ಚಿ ಹಾಕಿಕೊಳ್ಳುವ ಸಲುವಾಗಿ ಕೇಂದ್ರ ಸರಕಾರದ ವಿರುದ್ಧ ದ್ವೇಷ ರಾಜಕಾರಣ ಮಾಡಲು ಸದನವನ್ನು ಬಳಸುತ್ತಿರುವುದು ಖಂಡಿತ ಸರಿಯಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಆಕ್ಷೇಪಿಸಿದ್ದಾರೆ.ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಮಾನ್ಯ ರಾಜ್ಯಪಾಲರು ಜಂಟಿ ಅಧಿವೇಶನವನ್ನು ಉದ್ದೇಶಿಸಿ ಇವತ್ತು ಮಾತನಾಡಿದ್ದಾರೆ. ಆದರೆ, ಸದನದ ಒಳಗಡೆ ಗೌರವಾನ್ವಿತ ರಾಜ್ಯಪಾಲರಿಗೆ ಅಗೌರವ ಸೂಚಿಸುವ ಕೆಲಸವನ್ನು ಆಡಳಿತ ಪಕ್ಷದವರು ಮಾಡಿದ್ದು ಖಂಡನಾರ್ಹ ಎಂದು ತಿಳಿಸಿದರು.
ಬೆಂಗಳೂರು: ಜಾಕಿ ಸಿನಿಮಾ ನಟಿ ಭಾವನಾ ಮೆನನ್ ಗಂಡನ ಜೊತೆಗಿಲ್ವಾ? ಆಕೆಗೆ ವಿಚ್ಛೇದನವಾಗಿದ್ಯಾ ಎಂದೆಲ್ಲಾ ರೂಮರ್ ಗಳಿಗೆ ಇಂದು ಒಂದೇ ಒಂದು ಪೋಸ್ಟ್ ಮೂಲಕ ತಕ್ಕ ಉತ್ತರ ಕೊಟ್ಟಿದ್ದಾರೆ. ನಟಿ ಭಾವನಾ ಮೆನನ್ ಕನ್ನಡ, ಮಲಯಾಳಂ, ತೆಲುಗು, ತಮಿಳು ಸೇರಿದಂತೆ ಬಹುಭಾಷಾ ಸಿನಿಮಾಗಳಲ್ಲಿ ನಟಿಸಿದವರು. ಕನ್ನಡದಲ್ಲಿ ಜಾಕಿ, ರೋಮಿಯೋ, 99 ಸೇರಿದಂತೆ ಹಲವು ಸಿನಿಮಾಗಳಲ್ಲಿ ನಟಿಸಿ ಕನ್ನಡ ಸಿನಿ ಪ್ರೇಕ್ಷಕರಿಗೆ ಹತ್ತಿರವಾಗಿದ್ದಾರೆ. ಕೆಲವು 2018 ರಲ್ಲಿ ಅವರು ಕನ್ನಡ ಸಿನಿಮಾ ನಿರ್ಮಾಪಕ ನವೀನ್ ಜೊತೆ ಮದುವೆಯಾಗಿದ್ದರು. ಕೆಲವು ಸಮಯದ ಹಿಂದೆ ಅವರು ಗಂಡನಿಂದ ದೂರವಾಗಿದ್ದಾರೆ ಎಂದು ಸುದ್ದಿ ಹಬ್ಬಿತ್ತು.
ಬೆಂಗಳೂರು: ಇಂದು ವಿಶೇಷ ಅಧಿವೇಶನಕ್ಕೆ ಮುನ್ನ ಭಾಷಣ ಮಾಡಲು ಬಂದ ರಾಜ್ಯಪಾಲ ಥ್ಯಾವರ್ ಚಂದ್ ಗೆಹ್ಲೋಟ್ ಸರ್ಕಾರ ಬರೆದುಕೊಟ್ಟ ಭಾಷಣ ಓದದೇ ತಮ್ಮದೇ ಭಾಷಣ ಮಾಡಿದ್ದು ಹೈಡ್ರಾಮಾಕ್ಕೆ ಕಾರಣವಾಗಿದೆ. ನಿನ್ನೆಯೇ ಸರ್ಕಾರದ ಬರೆದುಕೊಟ್ಟಿದ್ದ ಭಾಷಣದಲ್ಲಿರುವ ಕೆಲವು ಅಂಶಗಳ ಬಗ್ಗೆ ರಾಜ್ಯಪಾಲ ಥ್ಯಾವರ್ ಚಂದ್ ಗೆಹ್ಲೋಟ್ ಆಕ್ಷೇಪ ವ್ಯಕ್ತಪಡಿಸಿದ್ದರು. ಸಾಕಷಟು ವಿವಾದದ ಬಳಿಕ ಇಂದು ಕೊನೆಗೂ ರಾಜ್ಯಪಾಲರು ಸದನಕ್ಕೆ ಬಂದಿದ್ದಾರೆ. ಆದರೆ ಸರ್ಕಾರ ಬರೆದುಕೊಟ್ಟ ಭಾಷಣ ಓದದೇ ಕೇವಲ ಎರಡೇ ನಿಮಿಷದಲ್ಲಿ ತಮ್ಮದೇ ಮಾತನಾಡಿ ನಿರ್ಗಮಿಸಿದ್ದಾರೆ.
ಬೆಂಗಳೂರು: ಸಂಘರ್ಷಗಳ ಬಳಿಕ ಕೊನೆಗೂ ಇಂದು ರಾಜ್ಯಪಾಲರು ಅಧಿವೇಶನದಲ್ಲಿ ಭಾಷಣ ಮಾಡಲು ವಿಧಾನಸೌಧಕ್ಕೆ ಬಂದಿದ್ದಾರೆ. ಸ್ವತಃ ಸಿಎಂ ಸಿದ್ದರಾಮಯ್ಯನವರೇ ಸ್ವಾಗತಿಸಿದ್ದಾರೆ. ಮನರೇಗಾ ಯೋಜನೆಗೆ ತಿದ್ದುಪಡಿ ಮಾಡಿದ ಕೇಂದ್ರದ ವಿರುದ್ಧ ಚರ್ಚೆಗೆ ರಾಜ್ಯ ಸರ್ಕಾರ ವಿಶೇಷ ಅಧಿವೇಶನ ಕರೆದಿದೆ. ಈ ಅಧಿವೇಶನಕ್ಕೆ ಮೊದಲು ರಾಜ್ಯಪಾಲ ಥ್ಯಾವರ್ ಚಂದ್ ಗೆಹ್ಲೋಟ್ ಗೆ ಭಾಷಣ ಮಾಡಬೇಕಿತ್ತು. ಆದರೆ ಸರ್ಕಾರ ಸಿದ್ಧಪಡಿಸಿರುವ ಭಾಷಣದಲ್ಲಿ ಕೆಲವು ತಿದ್ದುಪಡಿಗೆ ಸೂಚಿಸಿದ್ದ ರಾಜ್ಯಪಾಲರು ಇಲ್ಲದೇ ಹೋದರೆ ಭಾಷಣ ಮಾಡಲ್ಲ ಎಂದಿದ್ದರು. ಇದು ರಾಜ್ಯ ಸರ್ಕಾರ ಮತ್ತು ಗವರ್ನರ್ ನಡುವೆ ಸಂಘರ್ಷಕ್ಕೆ ದಾರಿ ಮಾಡಿಕೊಟ್ಟಿತ್ತು. ಆದರೆ ಈಗ ಕೊನೆಗೂ ರಾಜ್ಯಪಾಲರು ವಿಧಾನಸೌಧಕ್ಕೆ ಬಂದಿದ್ದಾರೆ.
ಬೆಂಗಳೂರು: ಅಡಿಕೆ ಬೆಲೆ ಕಳೆದ ವಾರ ಏರಿಕೆ-ಇಳಿಕೆಯಾಗಿತ್ತು. ಆದರೆ ಇಂದು ಮತ್ತೆ ಬೆಲೆ ಯಥಾಸ್ಥಿತಿಯಲ್ಲಿದೆ. ಇಂದು ಅಡಿಕೆ ಮತ್ತು ಕಾಳು ಮೆಣಸು, ಕೊಬ್ಬರಿ ದರ ಹೇಗಿದೆ ಇಲ್ಲಿದೆ ವಿವರ. ಕಳೆದ ವಾರ ಅಡಿಕೆ ಬೆಲೆಯಲ್ಲಿ ಏರಿಕೆ ಆರಂಭವಾಗಿತ್ತು. ಸತತವಾಗಿ ನಾಲ್ಕು ದಿನಗಳ ಕಾಲ ಏರಿಕೆಯಾಗಿದ್ದು ರೈತರ ಸಂತಸಕ್ಕೆ ಕಾರಣವಾಗಿತ್ತು. ಆದರೆ ಇಂದು ಯಾವುದೇ ವ್ಯತ್ಯಾಸ ಕಂಡುಬರುತ್ತಿಲ್ಲ. ಇಂದು ಹೊಸ ಅಡಿಕೆ ಬೆಲೆ 460 ರೂ.ಗಳಷ್ಟಿದೆ. ಹಳೆ ಅಡಿಕೆ ಬೆಲೆ ಯಥಾಸ್ಥಿತಿಯಲ್ಲಿದ್ದು 535 ರೂ. ಗಳಾಗಿತ್ತು. ಇಂದೂ ಅಷ್ಟೇ ಇದೆ. ಡಬಲ್ ಚೋಲ್ ಬೆಲೆಯೂ 535 ರೂ.ಗಳಷ್ಟಾಗಿದೆ.
ಬೆಂಗಳೂರು: ಚಿನ್ನದ ಬೆಲೆ ಮತ್ತೆ ಏರಿಕೆ ಮತ್ತು ಇಳಿಕೆಯಾಗುತ್ತಲೇ ಇದೆ. ಆದರೆ ಇಂದು ವಾರದ ಆರಂಭದಲ್ಲೇ ಪರಿಶುದ್ಧ ಚಿನ್ನದ ದರ ದಾಖಲೆಯ ಏರಿಕೆಯಾದರೆ ಮತ್ತು ಇತರೆ ಚಿನ್ನದ ದರ ಇಳಿಕೆ ಕಂಡಿದೆ. ಇಂದು ಪರಿಶುದ್ಧ ಚಿನ್ನದ ದರ ಮತ್ತು ಇತರೆ ಚಿನ್ನದ ದರ ವಿವರ ಇಲ್ಲಿದೆ ನೋಡಿ. ಚಿನ್ನದ ದರ ಏರಿಕೆಕಳೆದ ವಾರ ಪರಿಶುದ್ಧ ಚಿನ್ನದ ದರ ಸತತ ಏರಿಕೆ ಮತ್ತು ಇಳಿಕೆ ಕಂಡಿತ್ತು. ಆದರೆ ಈ ವಾರದ ಆರಂಭದಲ್ಲೇ ಚಿನ್ನದ ದರ ಏರಿಕೆಯಾಗಿತ್ತು. ಇಂದು ಪರಿಶುದ್ಧ ಚಿನ್ನದ ದರ ಭಾರೀ ಏರಿಕೆಯಾಗಿದೆ. ಪರಿಶುದ್ಧ ಚಿನ್ನದ ದರ ಮೊನ್ನೆ 1,52,585.00 ರೂ.ಗಳಿತ್ತು. ಇಂದು 1,58,665.00 ರೂ.ಗಳಷ್ಟಾಗಿದೆ.
ಬೆಂಗಳೂರು: ಮನರೇಗಾ ಯೋಜನೆ ರದ್ದುಗೊಳಿಸಿದ ಕೇಂದ್ರದ ವಿರುದ್ಧ ರಾಜ್ಯ ಸರ್ಕಾರ ವಿಶೇಷ ಅಧಿವೇಶನ ಕರೆದಿದೆ. ಆದರೆ ಈ ಸದನವನ್ನು ಉದ್ದೇಶಿಸಿ ರಾಜ್ಯಪಾಲರು ಭಾಷಣ ಮಾಡಲು ಕೆಲವು ತಕರಾರು ತೆಗೆದಿದ್ದಾರೆ. ರಾಜ್ಯಪಾಲರಿಗೆ ನಿನ್ನೆಯೇ ಭಾಷಣದ ಪ್ರತಿಯನ್ನು ಕಳುಹಿಸಿಕೊಡಲಾಗಿದೆ. ಆದರೆ ಇದರಲ್ಲಿ ಕೇಂದ್ರದ ವಿರುದ್ಧ ಇರುವ ಕೆಲವು ಅಂಶಗಳನ್ನು ತೆಗೆದು ಹಾಕುವಂತೆ ರಾಜ್ಯಪಾಲರು ಸೂಚಿಸಿದ್ದರು. ಇದು ಸರ್ಕಾರ ಮತ್ತು ರಾಜ್ಯಪಾಲರ ನಡುವಿನ ಸಂಘರ್ಷವಾಗಿ ಮಾರ್ಪಟ್ಟಿತ್ತು. ಇದಾದ ಬಳಿಕ ಸರ್ಕಾರದ ಕೆಲವು ಸಚಿವರು ರಾಜ್ಯಪಾಲರ ಜೊತೆ ಮಾತುಕತೆಯನ್ನೂ ನಡೆಸಿವೆ.
ಉಡುಪಿ: ಪರ್ಯಾಯ ಉತ್ಸವದಲ್ಲಿ ಕೇಸರಿ ಧ್ವಜ ಹಾರಿಸಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿ ಜಿಲ್ಲಾಧಿಕಾರಿ ವಿರುದ್ಧ ಉಡುಪಿ ಕಾಂಗ್ರೆಸ್ ಕ್ರಮಕ್ಕೆ ಆಗ್ರಹಿಸಿತ್ತು. ಇದರ ಬೆನ್ನಲ್ಲೇ ಕಾಂಗ್ರೆಸ್ ನಾಯಕ, ಮಾಜಿ ಸಚಿವ ರಮಾನಾಥ ರೈ ದೇವಾಲಯದಲ್ಲಿ ಕೇಸರಿ ಧ್ವಜ ಹಾರಿಸಬಾರದು ಎಂದು ವಿವಾದ ಸೃಷ್ಟಿಸಿದ್ದಾರೆ. ದೇವಸ್ಥಾನಗಳಲ್ಲಿ ಕೇಸರಿ ಬಾವುಟ ಸೇರಿದಂತೆ ಯಾವುದೇ ಬಾವುಟ ಹಾರಿಸಬೇಡಿ. ಕಾಂಗ್ರೆಸ್ ಬಾವುಟವಿರಲಿ, ಕೇಸರಿ ಬಾವುಟವಿರಲಿ ಯಾವುದೇ ಒಂದು ರಾಜಕೀಯ ಪ್ರೇರಿತ ಪತಾಕೆ ಧಿಕ್ಕರಿಸಬೇಕು ಎಂದಿದ್ದಾರೆ. ಅವರ ಹೇಳಿಕೆ ಭಾರೀ ವಿವಾದಕ್ಕೆ ಕಾರಣವಾಗಿದೆ.
ದಕ್ಷಿಣ ಕನ್ನಡ: ಪುತ್ತೂರು ಶಾಸಕ ಅಶೋಕ್ ರೈ ಸರ್ಕಾರೀ ಜಾಗದಲ್ಲಿರುವ ಮಾವಿನ ಮಿಡಿ ಕೊಯ್ಯಬೇಡಿ ಎಂದು ಆರ್ಡರ್ ಮಾಡಿದ್ದಾರೆ. ಇದಕ್ಕೆ ಕಾರಣವೇನು ನೋಡಿ. ದಕ್ಷಿಣ ಕನ್ನಡ ಭಾಗದಲ್ಲಿ ಜನವರಿ ಕಳೆದರೆ ಮಾವಿನ ಮಿಡಿ ಕೊಯ್ಯುವ ಸಂಭ್ರಮ. ಮಾವಿನ ಮಿಡಿ ಉಪ್ಪಿನಕಾಯಿ ಈ ಭಾಗದಲ್ಲಿ ಫೇಮಸ್. ಹೀಗಾಗಿ ಜನ ಎಲ್ಲೆಂದರಲ್ಲಿಂದ ಮಾವಿನ ಮಿಡಿ ಸಂಗ್ರಹಿಸಿ ಉಪ್ಪಿನಕಾಯಿ ಹಾಕುತ್ತಾರೆ. ಅದರಲ್ಲೂ ಕೆಲವು ಸರ್ಕಾರೀ ಜಾಗದಲ್ಲಿರುವ ಮರಗಳಿಂದ ಮಿಡಿ ಕೊಯ್ದು ಸಾವಿರಾರು ರೂಪಾಯಿಗಳಿಗೆ ಮಾರಾಟ ಮಾಡುತ್ತಾರೆ. ಕೆಲವರಿಗೆ ಈ ಸಮಯದಲ್ಲಿ ಇದು ವ್ಯಾಪಾರವೇ ಆಗಿರುತ್ತದೆ. ಆದರೆ ಅಂತಹವರಿಗೆ ಶಾಸಕ ಅಶೋಕ್ ಕುಮಾರ್ ರೈ ಶಾಕ್ ಕೊಟ್ಟಿದ್ದಾರೆ.
ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವೆಂದರೆ ವಿರಾಟ್ ಕೊಹ್ಲಿಗೆ ಎರಡನೇ ಮನೆಯಿದ್ದಂತೆ. ಇದೀಗ ಅವರ ಪತ್ನಿ ಅನುಷ್ಕಾ ಶರ್ಮಾ ಆರ್ ಸಿಬಿಗೆ ಒಡತಿಯಾಗಲು ಹೊರಟಿದ್ದಾರೆ. ವಿರಾಟ್ ಕೊಹ್ಲಿ ಐಪಿಎಲ್ ನಲ್ಲಿ ಆಡುವಾಗ ಅನುಷ್ಕಾ ಶರ್ಮಾ ಸಾಮಾನ್ಯವಾಗಿ ಗ್ಯಾಲರಿಯಲ್ಲಿ ಕೂತು ವೀಕ್ಷಣೆ ಮಾಡುತ್ತಾರೆ. ಆರ್ ಸಿಬಿಯ ದೊಡ್ಡ ಅಭಿಮಾನಿಗಳಲ್ಲಿ ಅನುಷ್ಕಾ ಕೂಡಾ ಒಬ್ಬರು. ಆದರೆ ಈಗ ಅನುಷ್ಕಾ ಆರ್ ಸಿಬಿಗೇ ಒಡತಿಯಾಗಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಆರ್ ಸಿಬಿಯ 3 ಶೇಕಡಾ ಷೇರು ಖರೀದಿ ಮಾಡಲು ಅನುಷ್ಕಾ ಶರ್ಮಾ ಆಸಕ್ತಿ ಹೊಂದಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.
ಬೆಂಗಳೂರು: ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆಗೆ ಧಮ್ಕಿ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ರಾಜೀವ್ ಗೌಡಗೆ ತಕ್ಕ ಪಾಠ ಕಲಿಸಲು ಕೆಪಿಸಿಸಿ ಮುಂದಾಗಿದೆ. ರಾಜೀವ್ ಗೌಡ ಮೇಲೆ ಕೇಸ್ ದಾಖಲಾಗಿದ್ದರೂ ಇದುವರೆಗೆ ಅವರನ್ನು ಬಂಧಿಸಲಾಗಿಲ್ಲ. ಈ ಸಂಬಂಧ ಕೋರ್ಟ್ ಈಗಾಗಲೇ ಸರ್ಕಾರಕ್ಕೆ ಛೀಮಾರಿ ಹಾಕಿದೆ. ಇದರ ನಡುವೆ ವಿಪಕ್ಷಗಳೂ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸುತ್ತಿದೆ. ಇದರ ನಡುವೆ ಕೆಪಿಸಿಸಿ ಶಿಸ್ತು ಸಮಿತಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ ಸಿ ಚಂದ್ರಶೇಖರ್ ಆರೋಪಿ ರಾಜೀವ್ ಗೌಡರನ್ನು ಪಕ್ಷದಿಂದ ಅಮಾನತು ಮಾಡಲು ಶಿಫಾರಸ್ಸು ಮಾಡಿದ್ದಾರೆ. ಪೌರಾಯುಕ್ತೆಗೆ ಬೆದರಿಕೆ ಹಾಕಿದ ಪ್ರಕರಣದಲ್ಲಿ ಕಾರಣ ಕೇಳಿ ಕೆಪಿಸಿಸಿ ನೋಟಿಸ್ ಜಾರಿ ಮಾಡಿತ್ತು.
ಉಡುಪಿ: ಇಲ್ಲಿ ಕೃಷ್ಣ ಮಠದ ಪರ್ಯಾಯೋತ್ಸವಕ್ಕೆ ಚಾಲನೆ ನೀಡುವಾಗ ಜಿಲ್ಲಾಧಿಕಾರಿಗಳು ಭಗವಧ್ವಜ ಹಿಡಿದಿದ್ದು ವಿವಾದವಾಗಿದೆ. ಇದಕ್ಕೆ ಸೋಷಿಯಲ್ ಮೀಡಿಯಾದಲ್ಲಿ ಆಕ್ರೋಶ ವ್ಯಕ್ತಪಡಿಸಿರುವ ಸಾರ್ವಜನಿಕರು ಉಡುಪಿ ಪರ್ಯಾಯೋತ್ಸವ ಹಿಂದೂಗಳ ಕಾರ್ಯಕ್ರಮವಲ್ವಾ, ಇಲ್ಲಿ ಭಗವಧ್ವಜ ಹಿಡಿದರೆ ತಪ್ಪೇನು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಉಡುಪಿಯಲ್ಲಿ ಪರ್ಯಾಯ ಉತ್ಸವಕ್ಕೆ ಚಾಲನೆ ನೀಡಲು ಬಂದಿದ್ದ ಜಿಲ್ಲಾಧಿಕಾರಿಗಳಿಗೆ ಭಗವಧ್ವಜ ನೀಡಿ ಚಾಲನೆ ನೀಡಲು ಹೇಳಲಾಗಿತ್ತು. ಅದರಂತೆ ಜಿಲ್ಲಾಧಿಕಾರಿಗಳು ಭಗವಧ್ವಜ ಹಿಡಿದಿದ್ದರು. ಆದರೆ ಇದು ಉಡುಪಿ ಕಾಂಗ್ರೆಸ್ ನಾಯಕರ ಕಣ್ಣು ಕೆಂಪಗಾಗಿಸಿದೆ.
ಬೆಂಗಳೂರು: ಕೇಂದ್ರದ ವಿಬಿ ಜಿ ರಾಮ್ ಜಿ ಬಿಲ್ ವಿರೋಧಿಸಿ ರಾಜ್ಯ ಸರ್ಕಾರ ಕರೆದಿರುವ ವಿಶೇಷ ಅಧಿವೇಶನದಲ್ಲಿ ಭಾಷಣ ಮಾಡಲು ರಾಜ್ಯಪಾಲ ಥ್ಯಾವರ್ ಚಂದ್ರ ಗೆಹ್ಲೋಟ್ ನಿರಾಕರಿಸಿದ್ದಾರೆ. ಒಂದು ವೇಳೆ ಅವರು ಇಂದು ಸದನಕ್ಕೆ ಬಾರದೇ ಇದ್ದರೆ ಏನಾಗುತ್ತದೆ? ರಾಜ್ಯಪಾಲರಿಗೆ ಇಂದು ಮಾಡಬೇಕಿರುವ ಭಾಷಣವನ್ನು ನಿನ್ನೆಯೇ ಕಳುಹಿಸಿಕೊಡಲಾಗಿತ್ತು. ಈ ಭಾಷಣದಲ್ಲಿ ಜಿ ರಾಮ್ ಜಿ ಬಿಲ್ ಬಗ್ಗೆ ಟೀಕೆ ಮಾಡಲಾಗಿದೆ. ಭಾಷಣದಲ್ಲಿರುವ ಕೆಲವು ಅಂಶಗಳನ್ನು ತಿದ್ದುಪಡಿ ಮಾಡದೇ ಭಾಷಣ ಮಾಡಲ್ಲ ಎಂದು ರಾಜ್ಯಪಾಲರು ಸೂಚನೆ ನೀಡಿದ್ದರು. ಇದರಿಂದ ಈಗ ಸಾಂವಿಧಾನಿಕ ಬಿಕ್ಕಟ್ಟು ಎದುರಾಗುವ ಭೀತಿ ಎದುರಾಗಿದೆ. ಒಂದು ವೇಳೆ ರಾಜ್ಯಪಾಲರು ಸದನಕ್ಕೆ ಬಾರದೇ ಹೋದಲ್ಲಿ ಸದನ ನಡೆಯದೇ ಹೋಗಬಹುದು.
ಬೆಂಗಳೂರು: ರಾಜ್ಯದಲ್ಲಿ ಈ ವಾರ ಚಳಿ ದಿನೇ ದಿನೇ ಹೆಚ್ಚಾಗುತ್ತಿದೆ. ಇಂದು ಈ ಕೆಲವು ಜಿಲ್ಲೆಗಳಿಗೆ ಮೈ ಕೊರೆಯುವ ಚಳಿಯಿರಲಿದೆ ಎಂದು ಹವಾಮಾನ ವರದಿಗಳು ಹೇಳುತ್ತಿವೆ. ವಾರದ ಆರಂಭದಿಂದಲೇ ತಾಪಮಾನದಲ್ಲಿ ಇಳಿಕೆಯಾಗುತ್ತಲೇ ಇದ್ದು ಚಳಿ ತೀವ್ರವಾಗುತ್ತಲೇ ಇದೆ. ನಿನ್ನೆಗೆ ಹೋಲಿಸಿದರೆ ಇಂದು ಮತ್ತಷ್ಟು ಚಳಿ ಕಂಡುಬರಲಿದೆ ಎಂದು ವರದಿಗಳು ಹೇಳುತ್ತಿವೆ. ನಿನ್ನೆ ಕನಿಷ್ಠ ತಾಪಮಾನ 16 ಡಿಗ್ರಿಯಷ್ಟಿತ್ತು. ಇಂದು ಮತ್ತಷ್ಟು ಇಳಿಕೆಯಾಗಲಿದೆ. ಇಂದು ರಾಜ್ಯದ ಸರಾಸರಿ ಕನಿಷ್ಠ ತಾಪಮಾನ 15 ಡಿಗ್ರಿಗೆ ಇಳಿಕೆಯಾಗಲಿದೆ. ಗರಿಷ್ಠ ತಾಪಮಾನ 27 ಡಿಗ್ರಿಯಷ್ಟಿರಲಿದೆ. ನಿನ್ನೆಯೂ ಗರಿಷ್ಠ ತಾಪಮಾನ 27 ಡಿಗ್ರಿಯಷ್ಟಿತ್ತು. ಇಂದು ಕೆಲವು ಜಿಲ್ಲೆಗಳಲ್ಲಂತೂ ಚಳಿಯ ಜೊತೆ ಮಂಜು ಕವಿದ ವಾತಾವರಣವಿರಲಿದೆ.
ಇಂದು ಗುರುವಾರವಾಗಿದ್ದು ಮಹಾವಿಷ್ಣುವಿಗೆ ವಿಶೇಷವಾದ ದಿನವಾಗಿದೆ. ಆರೋಗ್ಯ, ಆಯುಷ್ಯ, ನೆಮ್ಮದಿಗಾಗಿ ಮಹಾವಿಷ್ಣುವಿನ ಕುರಿತ ಸ್ತೋತ್ರಗಳನ್ನು ಪಠಿಸಿದರೆ ಉತ್ತಮ. ಅದಕ್ಕಾಗಿ ಬಾಲ ಮುಕುಂದಾಷ್ಟಕಂ ಸ್ತೋತ್ರ ಇಲ್ಲಿದೆ ಮತ್ತು ಇದನ್ನು ಮಕ್ಕಳಿಗೆ ಹೇಳಿಸಿ.ಕರಾರವಿಂದೇನ ಪದಾರವಿಂದಂ ಮುಖಾರವಿಂದೇ ವಿನಿವೇಶಯಂತಮ್ ।ವಟಸ್ಯ ಪತ್ರಸ್ಯ ಪುಟೇ ಶಯಾನಂ ಬಾಲಂ ಮುಕುಂದಂ ಮನಸಾ ಸ್ಮರಾಮಿ ॥ 1 ॥ ಸಂಹೃತ್ಯ ಲೋಕಾನ್ವಟಪತ್ರಮಧ್ಯೇ ಶಯಾನಮಾದ್ಯಂತವಿಹೀನರೂಪಮ್ ।ಸರ್ವೇಶ್ವರಂ ಸರ್ವಹಿತಾವತಾರಂ ಬಾಲಂ ಮುಕುಂದಂ ಮನಸಾ ಸ್ಮರಾಮಿ ॥ 2 ॥ ಇಂದೀವರಶ್ಯಾಮಲಕೋಮಲಾಂಗಂ ಇಂದ್ರಾದಿದೇವಾರ್ಚಿತಪಾದಪದ್ಮಮ್ ।ಸಂತಾನಕಲ್ಪದ್ರುಮಮಾಶ್ರಿತಾನಾಂ ಬಾಲಂ ಮುಕುಂದಂ ಮನಸಾ ಸ್ಮರಾಮಿ ॥ 3 ॥ ಲಂಬಾಲಕಂ ಲಂಬಿತಹಾರಯಷ್ಟಿಂ ಶೃಂಗಾರಲೀಲಾಂಕಿತದಂತಪಂಕ್ತಿಮ್ ।ಬಿಂಬಾಧರಂ ಚಾರುವಿಶಾಲನೇತ್ರಂ ಬಾಲಂ ಮುಕುಂದಂ ಮನಸಾ ಸ್ಮರಾಮಿ ॥ 4 ॥
ಬೆಂಗಳೂರು: ಅಭಿವೃದ್ಧಿ ಶೂನ್ಯ ಆಡಳಿತ, ಸಾಲು ಸಾಲು ಭ್ರಷ್ಟಾಚಾರ ಹಗರಣಗಳು ಹಾಗೂ ಆಡಳಿತಾತ್ಮಕ ವೈಫಲ್ಯವನ್ನು ಮರೆಮಾಚಲು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವ ರಾಜ್ಯಪಾಲರ ಭಾಷಣವನ್ನು ರಾಜಕೀಯ ಅಸ್ತ್ರವಾಗಿ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ತೀವ್ರ ವಾಗ್ದಾಳಿ ನಡೆಸಿದ್ದಾರೆ.ಬುಧವಾರ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ ಅವರು, “ರಾಜ್ಯಪಾಲರು ಕಾಂಗ್ರೆಸ್ ಸರ್ಕಾರದ ವಕ್ತಾರರಲ್ಲ; ಅವರು ಸಂವಿಧಾನದ ರಕ್ಷಕರು. ಅವರ ಘನತೆಗೆ ಧಕ್ಕೆ ತರುವ ಮೂಲಕ ಕಾಂಗ್ರೆಸ್ ಸರ್ಕಾರ ಸಂವಿಧಾನ ಮತ್ತು ಫೆಡರಲ್ ವ್ಯವಸ್ಥೆಯ ಮೇಲೆ ನೇರ ದಾಳಿ ನಡೆಸುತ್ತಿದೆ” ಎಂದು ಹೇಳಿದರು.
ನಾಗ್ಪುರ: ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೊದಲ ಟಿ20 ಪಂದ್ಯದಲ್ಲಿ ಅವಕಾಶ ಸಿಕ್ಕರೂ ಸಂಜು ಸ್ಯಾಮ್ಸನ್, ಇಶಾನ್ ಕಿಶನ್ ವಿಫಲರಾದರೆ ರಿಂಕು ಸಿಂಗ್ ಎರಡೂ ಕೈಯಿಂದ ಬಾಚಿಕೊಂಡಿದ್ದಾರೆ. ಇಂದು ನ್ಯೂಜಿಲೆಂಡ್ ಟಾಸ್ ಗೆದ್ದು ಭಾರತವನ್ನು ಮೊದಲು ಬ್ಯಾಟಿಂಗ್ ಗೆ ಇಳಿಸಿತು. ಅಭಿಷೇಕ್ ಶರ್ಮಾ ಎಂದಿನಂತೆ ಅಬ್ಬರದ ಆರಂಭ ನೀಡಿದರು. ಕೇವಲ 35 ಎಸೆತಗಳನ್ನು ಎದುರಿಸಿದ ಅವರು 8 ಸಿಕ್ಸರ್, 5 ಬೌಂಡರಿ ಸಹಿತ 84 ರನ್ ಗಳಿಸಿ ಮತ್ತೊಮ್ಮೆ ಶತಕದ ಗಡಿ ದಾಟದೇ ಔಟಾದರು.
ಬೆಂಗಳೂರು: ಸಂಪೂರ್ಣ ವಿದ್ಯುಚ್ಛಾಲಿತ ಇಂಟರ್ ಸಿಟಿ ಬಸ್ ಸೇವೆ ಫ್ರೆಶ್ ಬಸ್ ಇಂದು ಬೆಂಗಳೂರು ಮೂಲದ ತಂತ್ರಜ್ಞಾನ ಕಂಪನಿ ಎಕ್ಸ್ಪೊನೆಂಟ್ ಎನರ್ಜಿಯೊಂದಿಗೆ ಮಹತ್ತರ ಒಡಂಬಡಿಕೆ (ಎಂಒಯು)ಗೆ ಸಹಿ ಹಾಕಿದೆ. ಈ ಸಹಯೋಗವು ಭಾರತದ ವೇಗದ ಚಾರ್ಜಿಂಗ್ ನ, ದೂರ ಪ್ರಯಾಣದ ಎಲೆಕ್ಟ್ರಿಕ್ ಇಂಟರ್ ಸಿಟಿ ಬಸ್ ಪ್ಲಾಟ್ ಫಾರಂ ಅನ್ನು ಪರಿಚಯಿಸುತ್ತಿದ್ದು ಅತ್ಯಂತ ಅನುಕೂಲಕರ, ಸುಸ್ಥಿರ, ವಿಸ್ತರಿಸಬಲ್ಲ ಮತ್ತು ಭಾರತದಾದ್ಯಂತ ವಾಣಿಜ್ಯ ರೀತಿಯಲ್ಲಿ ವಿಸ್ತರಿಸಲಿದೆ. ಈ ಸಹಯೋಗವು ಭಾರತದ ಸಾರಿಗೆ ವಲಯಕ್ಕೆ ಮಹತ್ತರ ಕ್ಷಣವಾಗಿದೆ.
ಬೆಂಗಳೂರು: ಗೌರವಾನ್ವಿತ ರಾಜ್ಯಪಾಲರ ಭಾಷಣದಲ್ಲಿ ಕೇಂದ್ರ ಸರ್ಕಾರದ ವಿರುದ್ಧದ ಅಂಶಗಳನ್ನು ಅಳವಡಿಕೆ ಮಾಡದೇ ಆರೋಗ್ಯಕರ ಪ್ರಜಾಪ್ರಭುತ್ವ, ಸಕಾರಾತ್ಮಕ ಒಕ್ಕೂಟ ವ್ಯವಸ್ಥೆಯಡಿ ವಿಧಾನ ಮಂಡಲದ ಉಭಯ ಸದನಗಳ ಅಧಿವೇಶನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅನುವು ಮಾಡಿಕೊಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಆಗ್ರಹಿಸಿದ್ದಾರೆ.ಮಾನ್ಯ ರಾಜ್ಯಪಾಲರು ಭಾಷಣ ಮಾಡಲು ಎಲ್ಲಿಯೂ ವಿರೋಧಿಸಿಲ್ಲ. ರಾಜ್ಯ ಸರ್ಕಾರವು ಸುಳ್ಳು ಹಾಗೂ ತಪ್ಪು ಮಾಹಿತಿಯನ್ನು ಹರಡುವುದಕ್ಕೆ ಮತ್ತು ಜನಸಾಮಾನ್ಯರನ್ನು ಕೇಂದ್ರ ಸರ್ಕಾರದ ವಿರುದ್ಧ ಅಪಪ್ರಚಾರಕ್ಕೆ ಬಳಸಿಕೊಳ್ಳುತ್ತಿರುವುದನ್ನು ಮಾತ್ರ ವಿರೋಧಿಸಿದ್ದಾರೆ ಎಂದು ಅವರು ಗಮನ ಸೆಳೆದಿದ್ದಾರೆ.
ಕೋಝಿಕ್ಕೋಡ್: ಕೇರಳ ಮೂಲದ ಮಾರಾಟ ವ್ಯವಸ್ಥಾಪಕರೊಬ್ಬರ ಆತ್ಮಹತ್ಯೆ ಪ್ರಕರಣದ ಆರೋಪಿ ಶಿಮ್ಜಿತಾ ಮುಸ್ತಫಾ ಅವರನ್ನು 14 ದಿನಗಳ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ.ಸಂತ್ರಸ್ತೆಯ ವೀಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಬಂಧಿಸಿದ ನಂತರ ಅವರನ್ನು ಕುನ್ನಮಂಗಲಂ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಾಯಿತು, ಅದರಲ್ಲಿ ಅವರು ಅನುಚಿತವಾಗಿ ಸ್ಪರ್ಶಿಸಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.ಇದಕ್ಕೂ ಮೊದಲು, ಕೋಝಿಕ್ಕೋಡ್ ವೈದ್ಯಕೀಯ ಕಾಲೇಜು ಪೊಲೀಸರು ವಡಕರ ನಿವಾಸಿ ಮುಸ್ತಫಾ (35) ಅವರ ವಿರುದ್ಧ
ಬೆಂಗಳೂರು: ಕಾಂಗ್ರೆಸ್ ಸರ್ಕಾರ ವಿಶೇಷ ಅಧಿವೇಶನ ಕರೆದು ಕೇಂದ್ರ ಸರ್ಕಾರದ ಯೋಜನೆಗೆ ಅಡ್ಡಗಾಲು ಹಾಕಲು ಯತ್ನಿಸುತ್ತಿದೆ, ಆದರೆ ಯೋಜನೆಯ ವಿರುದ್ಧದ ನಿರ್ಣಯದಿಂದ ಯಾವುದೇ ಪ್ರಯೋಜನವಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಹೇಳಿದರು.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಬಿ ಜಿ ರಾಮ್ ಜಿ ಯೋಜನೆಯ ವಿರುದ್ಧ ನಿರ್ಣಯ ಕೈಗೊಂಡು ಅದನ್ನು ಕೇಂದ್ರ ಸರ್ಕಾರಕ್ಕೆ ಕಳುಹಿಸಲಾಗುತ್ತದೆ. ಪ್ರಧಾನಿ ನರೇಂದ್ರ ಮೋದಿ ಅವರು ಈ ಯೋಜನೆಯಿಂದ ನಿಜವಾದ ಫಲಾನುಭವಿಗಳಿಗೆ ಕೂಲಿ ಸಿಗುವಂತೆ ಮಾಡಿದ್ದಾರೆಂದು ಹೇಳಿದರು.ಇನ್ನೂ ಸಿಎಜಿ ವರದಿಯಲ್ಲೂ ಉದ್ಯೋಗ ಖಾತರಿ ಯೋಜನೆಯಲ್ಲಿ ಸಾವಿರಾರು ಕೋಟಿ ಅಕ್ರಮ ನಡೆದಿರುವುದು ಸಾಬೀತಾಗಿದೆ.
ಬೆಂಗಳೂರು: ಮುಂದಿನ ಎರಡು ತಿಂಗಳುಗಳಲ್ಲಿ ಶಾಲಾ ಬಾಲಕಿಯರಿಗೆ ಮುಟ್ಟಿನ ಕಪ್ಗಳನ್ನು ಪೂರೈಸಲು ಯೊಜನೆ ನಡೆಸುತ್ತಿರುವ ಹಿನ್ನೆಲೆ ಇದೀಗ ಕರ್ನಾಟಕ ಆರೋಗ್ಯ ಇಲಾಖೆಯು ಶಿಕ್ಷಕರು ಮತ್ತು ತಾಯಂದಿರಿಗೆ ತರಬೇತಿ ನೀಡಲು ಪ್ರಾರಂಭಿಸಲಿದೆ. ಇದು ಶಿಕ್ಷಣ ಸಂಸ್ಥೆಗಳಲ್ಲಿ ಮುಟ್ಟಿನ ನೈರ್ಮಲ್ಯ ನಿರ್ವಹಣೆಯಲ್ಲಿ ಗಮನಾರ್ಹ ಬದಲಾವಣೆಯನ್ನು ಸೂಚಿಸುತ್ತದೆ.ಈ ಉಪಕ್ರಮವು 9 ರಿಂದ 12 ನೇ ತರಗತಿಯಲ್ಲಿ ಓದುತ್ತಿರುವ ಹುಡುಗಿಯರ ಮೇಲೆ ಕೇಂದ್ರೀಕರಿಸಲಿದ್ದು, ಶಾಲೆಗಳು ಮತ್ತು ಕಾಲೇಜುಗಳಲ್ಲಿ ಮುಟ್ಟಿನ ಕಪ್ಗಳನ್ನು ಹಂತಹಂತವಾಗಿ ಬಿಡುಗಡೆ ಮಾಡಲು ಇಲಾಖೆ ಯೋಜಿಸಿದೆ. ವಿದ್ಯಾರ್ಥಿಗಳು ಆರಾಮವಾಗಿ ಪರಿವರ್ತನೆಗೊಳ್ಳಲು ಸಹಾಯ ಮಾಡಲು, ಆರು ತಿಂಗಳಿಗೆ ಸಾಕಾಗುವಷ್ಟು ಸ್ಯಾನಿಟರಿ ಪ್ಯಾಡ್ಗಳೊಂದಿಗೆ ಮುಟ್ಟಿನ ಕಪ್ಗಳನ್ನು ವಿತರಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬೆಂಗಳೂರು: ಜಂಟಿ ಅಧಿವೇಶನ ಆರಂಭಕ್ಕೂ ಮುನ್ನಾ ರಾಜ್ಯಪಾಲ ಥಾವರ್ ಸಿಂಗ್ ಗೆಹ್ಲೋಟ್ ಅವರು ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಓದಲು ನಿರಾಕರಿಸಿದ ಹಿನ್ನೆಲೆ ರಾಜ್ಯಪಾಲರು Vs ಸರ್ಕಾರದ ಸಂಘರ್ಷ ಆರಂಭವಾಗಿದೆ.ದಕ್ಷಿಣ ರಾಜ್ಯಗಳ ಮೇಲೆ ತಾರತಮ್ಯ ವಿಚಾರವಾಗಿ ರಾಜ್ಯ ಸರ್ಕಾರ ಐದಾರು ಬಾರಿ ಕೇಂದ್ರ ಸರ್ಕಾರದ ಮೇಲೆ ಅಸಮಾಧಾನ ವ್ಯಕ್ತಪಡಿಸಿದ ಅಂಶವನ್ನು ಭಾಷಣದಲ್ಲಿ ಉಲ್ಲೇಖಿಸಲಾಗಿದೆ. ಭಾಷಣದಲ್ಲಿ ವಿಚಾರ ಪ್ರಸ್ತಾಪವಾದ ಬೆನ್ನಲ್ಲೇ ರಾಜ್ಯಪಾಲರು ಭಾಷಣ ಓದದೇ ಇರುವ ನಿರ್ಧಾರ ತೆಗೆದುಕೊಂಡಿದ್ದಾರೆ.ರಾಜ್ಯಪಾಲರು ತಮ್ಮ ನಿರ್ಧಾರ ಪ್ರಕಟಿಸುತ್ತಿದ್ದಂತೆ ಮಧ್ಯಾಹ್ನ 1 ಗಂಟೆಗೆ ರಾಜಭವನದಿಂದ ಕಾನೂನು ಸಚಿವ
ಬಿಗ್ಬಾಸ್ ಸ್ಪರ್ಧಿ, ನಟ ಉಗ್ರಂ ಮಂಜು ಅವರು ಈಚೆಗೆ ಸಂಧ್ಯಾ ಜತೆ ನಿಶ್ಚಿತಾರ್ಥಮಾಡಿಕೊಂಡಿದ್ದು, ಇದೀಗ ಈ ಜೋಡಿ ಹೊಸ ಬದುಕಿಗೆ ಕಾಲಿಡಲು ಸಜ್ಜಾಗಿದ್ದಾರೆ. ಸಂಧ್ಯಾ ಅವರನ್ನು ವಿವಾಹವಾಗಲಿರುವ ಉಗ್ರಂ ಮಂಜು ಅವರ ಮನೆಯಲ್ಲಿ ಇಂದು ಅರಿಶಿನ ಶಾಸ್ತ್ರದ ಸಂಭ್ರಮ ಜೋರಾಗಿದೆ. ಅರಿಶಿನ ಶಾಸ್ತ್ರದಲ್ಲಿ ತಮ್ಮ ಮನೆಯವರ ಜತೆ ಉಗ್ರಂ ಮಂಜು ಹೆಜ್ಜೆ ಹಾಕಿ ಸಂಭ್ರಮಿಸಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಉಗ್ರಂ ಮಂಜು ಅವರ ತಿಂಗಳ ಹಿಂದೆ ಸಂಧ್ಯಾ ಅವರ ಜತೆ ತಮ್ಮ ಕುಟುಂಬ ಹಾಗೇ ಸ್ನೇಹಿತರ ಸಮ್ಮುಖದಲ್ಲಿ ನಿಶ್ಚಿತಾರ್ಥ
ಬೆಂಗಳೂರು: ಬಿಗ್ಬಾಸ್ ಸೀಸನ್ 12ರ ರನ್ನರ್ ಆಗಿರುವ ರಕ್ಷಿತಾ ಶೆಟ್ಟಿಗೆ ತವರೂರು ಉಡುಪಿಯಲ್ಲಿ ಭವ್ಯ ಸ್ವಾಗತ ಸಿಕ್ಕಿದೆ. ಊರಿಗೆ ಬಂದ ರಕ್ಷಿತಾ ಶೆಟ್ಟಿಗೆ ಮೆರವಣಿಗೆ ಮೂಲಕ ಅಭಿಮಾನಿಗಳು ಸ್ವಾಗತವನ್ನು ಕೋರಿದ್ದಾರೆ. ಈ ವೇಳೆ ಅಲ್ಲೇ ಇದ್ದ ಅಭಿಮಾನಿಯೊಬ್ಬರು ಬಂಗುಡೆ ಮೀನನ್ನು ನೀಡಿ ರಕ್ಷಿತಾ ಶುಭಹಾರೈಸಿದರು. ಮೀನನ್ನು ಕೈಯಲ್ಲಿ ಹಿಡಿದು, ಅಭಿಮಾನಿಗಳಿಗೆ ಥ್ಯಾಂಕ್ಸ್ ಹೇಳುತ್ತಾ ಡ್ಯಾನ್ಸ್ ಮಾಡಿ, ಖುಷಿ ವ್ಯಕ್ತಪಡಿಸಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಬಿಗ್ಬಾಸ್ ಮನೆಯಲ್ಲೂ ಮೀನಿನ ಮೇಲಿನ ತನ್ನ ವಿಶೇಷ ಪ್ರೀತಿ ಬಗ್ಗೆ ರಕ್ಷಿತಾ ಹೇಳಿಕೊಳ್ಳುತ್ತಿದ್ದರು. ತನಗೆ ಮೀನೆಂದರೆ ತುಂಬಾ
ಬೆಳಗ್ಗೆ ಎದ್ದ ತಕ್ಷಣ ಖಾಲಿ ಹೊಟ್ಟೆಯಲ್ಲಿ ನಿಂಬೆ ಹಣ್ಣಿನ ಜ್ಯೂಸ್ ಅನ್ನು ಕುಡಿಯುವುದರಿಂದ ಆರೋಗ್ಯಕ್ಕೆ ಸಾಕಷ್ಟು ಪ್ರಯೋಜನವನ್ನು ಪಡೆಯಬಹುದು. ಬೆಳಗ್ಗೆ ನಿಂಬೆ ಜ್ಯೂಸ್ ಸೇವನೆಯಿಂದ ಆಗುವ ಪ್ರಯೋಜನಗಳು ಇಲ್ಲಿದೆ. *ಜೀರ್ಣಕ್ರಿಯೆಗೆ ಸಹಕಾರಿ: ಜೀರ್ಣಾಂಗವ್ಯೂಹವನ್ನು ಶುದ್ಧೀಕರಿಸಿ, ಮಲಬದ್ಧತೆ ಸಮಸ್ಯೆಯನ್ನು ಬಗೆಹರಿಸಲು ಸಹಾಯಮಾಡುತ್ತದೆ. *ರೋಗನಿರೋಧಕ ಶಕ್ತಿ ಹೆಚ್ಚಳ: ಇದರಲ್ಲಿ ವಿಟಮಿನ್ ಸಿ ಸಮೃದ್ಧವಾಗಿರುವುದರಿಂದ, ಇದು ದೇಹದ ರೋಗನಿರೋಧಕ ಶಕ್ತಿಯನ್ನು
ಹೈದರಾಬಾದ್ ಹೊರವಲಯದಲ್ಲಿರುವ ಯಾಚಾರಂ ಗ್ರಾಮದಲ್ಲಿ ಸುಮಾರು 100 ಬೀದಿ ನಾಯಿಗಳಿಗೆ ವಿಷ ನೀಡಿ ಕೊಂದ ಆರೋಪದ ಮೇಲೆ ಯಾಚಾರಂ ಪೊಲೀಸರು ಸ್ಥಳೀಯ ಗ್ರಾಮ ಪಂಚಾಯತ್ ಸರಪಂಚ್ ಮತ್ತು ಕಾರ್ಯದರ್ಶಿ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿದ್ದಾರೆ.ಜನವರಿ 19, 2026 ರಂದು ನಾಯಿಗಳಿಗೆ ವಿಷ ನೀಡಿ ಕೊಂದಿದ್ದಾರೆ ಎಂದು ಸ್ಟ್ರೇ ಅನಿಮಲ್ ಫೌಂಡೇಶನ್ಗೆ ಸಂಬಂಧಿಸಿದ ಪ್ರಾಣಿ ಕಲ್ಯಾಣ ಕಾರ್ಯಕರ್ತರೊಬ್ಬರು ನೀಡಿದ ದೂರಿನ ಆಧಾರದ ಮೇಲೆ ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಲಾಗಿದೆ ಎಂದು ಯಾಚಾರಂ ಪೊಲೀಸ್ ಇನ್ಸ್ಪೆಕ್ಟರ್ ಎ. ನಂದೀಶ್ವರ್ ರೆಡ್ಡಿ
ಬಳ್ಳಾರಿ: ಬ್ಯಾನರ್ ಗಲಭೆ ಖಂಡಿಸಿ ಜನವರಿ 17 ರಂದು ನಡೆದ ಬೃಹತ್ ಸಮಾವೇಶದಲ್ಲಿ POCSO ಪ್ರಕರಣದ ಸಂತ್ರಸ್ತೆಯ ಹೆಸರು ಹಾಗೂ ವಿವರಣೆಯನ್ನು ಬಹಿರಂಗಪಡಿಸಿದ ವಿಚಾರಕ್ಕೆ ಸಂಬಂಧ ಮಾಜಿ ಸಚಿವ ಶ್ರೀರಾಮುಲು ಅವರು ಕ್ಷಮೆಯಾಚನೆ ಮಾಡಿದ್ದಾರೆ. ಬಳ್ಳಾರಿಯಲ್ಲಿ ಮಾತನಾಡಿದ ಅವರು ಗಲಭೆ ಖಂಡಿಸಿ ನಡೆದ ಸಮಾವೇಶದಲ್ಲಿ ಸಾಕಷ್ಟು ವಿಚಾರಗಳನ್ನ ನಮ್ಮ ನಾಯಕರು ಮಾತನಾಡಿದ್ದಾರೆ. ಈ ಸಂದರ್ಭದಲ್ಲಿ ನಾನು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಕೆಲ ವಿಚಾರಗಳನ್ನು ಹಂಚಿಕೊಂಡಿದ್ದೇನೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗ ದಾಂಧಲೆ ನಡೆಯುತ್ತಿದೆ ಎಂದು ದೂರಿದರು.
ಬೆಂಗಳೂರು: ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳನ್ನು ಆಯೋಜಿಸಲು ಕೆಎಸ್ಸಿಎ ಅಧಿಕೃತವಾಗಿ ಘೋಷಣೆ ಮಾಡಿದೆ. ಅಧಿಕೃತವಾಗಿ ಕೆಎಸ್ಸಿಎ ಅಧ್ಯಕ್ಷ ವೆಂಕಟೇಶ್ ಪ್ರಸಾದ್ ಅವರು ಸುದ್ದಿಗೋಷ್ಠಿಯಲ್ಲಿ ಈ ಮಾಹಿತಿ ಹಂಚಿಕೊಂಡಿದ್ದಾರೆ. ಈ ಬಗ್ಗೆ ಜಿಬಿಎ, ಬೆಸ್ಕಾಂ, ಜಲಮಂಡಳಿಗೂ ಮನವಿ ಮಾಡಿದ್ದೇವೆ. ಕೆಎಸ್ಸಿಎ ಸುರಕ್ಷತೆಗೆ ಹೆಚ್ಚು ಆಧ್ಯತೆ ನೀಡಲಿದೆ ಎಂದು ಅವರು ತಿಳಿಸಿದ್ದಾರೆ.
ಕೊಲ್ಲಂ: ಶಬರಿಮಲೆಯ ಶ್ರೀಕೋವಿಲ್ (ಗರ್ಭಗುಡಿ) ಬಾಗಿಲಿನ ಚೌಕಟ್ಟುಗಳಿಂದ ಚಿನ್ನ ಕಳೆದುಹೋದ ಪ್ರಕರಣದ ಪ್ರಮುಖ ಆರೋಪಿ ಬೆಂಗಳೂರು ಮೂಲದ ಉದ್ಯಮಿ ಉನ್ನಿಕೃಷ್ಣನ್ ಪೊಟ್ಟಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ.ಆದಾಗ್ಯೂ, ದೇವಾಲಯದ ದ್ವಾರಪಾಲಕ (ರಕ್ಷಕ ದೇವರು) ವಿಗ್ರಹಗಳಿಂದ ಚಿನ್ನ ಕಳೆದುಹೋದ ಪ್ರಕರಣದಲ್ಲಿ ಪೊಟ್ಟಿ ಅವರನ್ನು ಬಂಧಿಸಲಾಗಿರುವುದರಿಂದ ಅವರು ಸದ್ಯಕ್ಕೆ ಜೈಲಿನಲ್ಲಿದ್ದಾರೆ.ಕೋವಿಲ್ ಬಾಗಿಲಿನ ಚೌಕಟ್ಟುಗಳ ಪ್ರಕರಣದಲ್ಲಿ ಅವರಿಗೆ ಇಲ್ಲಿನ ವಿಜಿಲೆನ್ಸ್ ನ್ಯಾಯಾಲಯ ಜಾಮೀನು ನೀಡಿದೆ.
ಉತ್ತರ ಪ್ರದೇಶ: ಪ್ರಯಾಗ್ರಾಜ್ನಲ್ಲಿ ಬುಧವಾರ ನಿಯಮಿತ ತರಬೇತಿ ಹಾರಾಟವನ್ನು ಕೈಗೊಳ್ಳುತ್ತಿದ್ದಾಗ ಭಾರತೀಯ ವಾಯುಪಡೆಯ ತರಬೇತಿ ವಿಮಾನವು ಕೊಳಕ್ಕೆ ಅಪ್ಪಳಿಸಿದೆ. ವಿಮಾನದಲ್ಲಿದ್ದ ಇಬ್ಬರೂ ಪೈಲಟ್ಗಳನ್ನು ಸುರಕ್ಷಿತವಾಗಿ ರಕ್ಷಿಸಲಾಯಿತು ಮತ್ತು ಅವರಿಗೆ ಗಂಭೀರ ಗಾಯಗಳಾಗಿಲ್ಲ ಎಂದು ಅಧಿಕಾರಿಗಳು ದೃಢಪಡಿಸಿದರು.ಪ್ರತ್ಯಕ್ಷದರ್ಶಿಗಳ ಪ್ರಕಾರ, ಸಣ್ಣ ಪ್ರೊಪೆಲ್ಲರ್ ಚಾಲಿತ ವಿಮಾನವು ನೀರಿಗೆ ಧುಮುಕುವ ಮೊದಲು ಗಾಳಿಯಲ್ಲಿ ನಿಯಂತ್ರಣ ಕಳೆದುಕೊಂಡಂತೆ ಕಂಡುಬಂದಿದೆ.
ಬೆಂಗಳೂರು: ಅಬಕಾರಿ ಸಚಿವರನ್ನು ವಜಾ ಮಾಡದೇ ಇಟ್ಟುಕೊಂಡಿದ್ದನ್ನು ನೋಡಿದಾಗ ಮಾನ್ಯ ಮುಖ್ಯಮಂತ್ರಿಗಳ ಕೃಪಾಕಟಾಕ್ಷದಲ್ಲೇ ಅಬಕಾರಿ ಸಚಿವರೂ ಭ್ರಷ್ಟಾಚಾರ ನಡೆಸುತ್ತಿರುವುದು ಸ್ಪಷ್ಟವಾಗುತ್ತದೆ ಎಂದು ಬಿಜೆಪಿ ರಾಷ್ಟ್ರೀಯ ಮಾಜಿ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಅವರು ಆರೋಪಿಸಿದ್ದಾರೆ.ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಪ್ರಶ್ನೆಗೆ ಉತ್ತರಿಸಿದರು. ಅಬಕಾರಿ ಇಲಾಖೆ ಭ್ರಷ್ಟಾಚಾರ ಒಂದು ವರ್ಷದ ಹಿಂದೆಯೇ ಜಗಜ್ಜಾಹೀರಾಗಿತ್ತು. ಆ ಸಂದರ್ಭದಲ್ಲಿ ತೇಪೆ ಹಾಕುವ ಕೆಲಸ ಮಾಡಿದ್ದರು. ಅವತ್ತೇ ಮಂತ್ರಿಯನ್ನು ವಜಾ ಮಾಡಬೇಕಿತ್ತು ಎಂದು ತಿಳಿಸಿದರು.
ಉಡುಪಿ: ಶೀರೂರು ಮಠದ ಪರ್ಯಾಯ ಮಹೋತ್ಸವ ಪ್ರಯುಕ್ತ ಉಡುಪಿಯ ಜೋಡುಕಟ್ಟೆಯಿಂದ ಆರಂಭವಾದ ಮೆರವಣಿಗೆಗೆ ಕೇಸರಿ ಧ್ವಜ ತೋರಿಸಿ ಉಡುಪಿ ಜಿಲ್ಲಾಧಿಕಾರಿ ಚಾಲನೆ ನೀಡಿದ್ದು, ಈ ವಿಚಾರ ರಾಜಕೀಯ ಕೆಸರೆರೆಚಾಟಕ್ಕೆ ಕಾರಣವಾಗಿದೆ. ಆರ್ಎಸ್ಎಸ್ ಧ್ವಜ ಪ್ರದರ್ಶಿಸಿದ ಜಿಲ್ಲಾಧಿಕಾರಿ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಕಾನೂನು ಮತ್ತು ಮಾನವ ಹಕ್ಕುಗಳ ವಿಭಾಗದ ಅಧ್ಯಕ್ಷ ಹರೀಶ್ ಶೆಟ್ಟಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ದೂರು ನೀಡಿದ್ದಾರೆ.ಜ.18ರಂದು ಮುಂಜಾನೆ 3 ಗಂಟೆಗೆ ಉಡುಪಿ ನಗರದ ಜೋಡುಕಟ್ಟೆಯಿಂದ ಶ್ರೀಕೃಷ್ಣ ಮಠದವರೆಗೆ ಪರ್ಯಾಯ ಮೆರವಣಿಗೆ ನಡೆದಿದ್ದು, ಮೆರವಣಿಗೆ ಆರಂಭಕ್ಕೂ ಮೊದಲು ಶಾಸಕ ಯಶ್ಪಾಲ್ ಸುವರ್ಣ ಅವರು ಆರ್ಎಸ್ಎಸ್ ಧ್ವಜವನ್ನು ಜಿಲ್ಲಾಧಿಕಾರಿ ಕೈಗೆ ನೀಡಿದ್ದಾರೆ.
ಬೆಂಗಳೂರು: ಮಂತ್ಲಿ ಮನಿ ಬಹಿರಂಗ ಆದಾಗಲೇ ಅಬಕಾರಿ ಸಚಿವರನ್ನ ವಜಾ ಮಾಡಬೇಕಿತ್ತು. ಸಿದ್ದರಾಮಯ್ಯ ಸರ್ಕಾರ ಜನರ ವಿಶ್ವಾಸ ಸಹ ಕಳೆದುಕೊಂಡಿದೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ ರವಿ ವಾಗ್ದಾಳಿ ನಡೆಸಿದ್ದಾರೆ.ಅಬಕಾರಿ ಇಲಾಖೆ ಭ್ರಷ್ಟಾಚಾರ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು ಪ್ರಸ್ತುತ ರಾಜ್ಯದಲ್ಲಿರುವ ಈ ಸರ್ಕಾವರೇ ಭ್ರಷ್ಟಾಚಾರದಲ್ಲಿ ತೊಡಗಿಕೊಂಡಿದೆ. ಭ್ರಷ್ಟಾಚಾರದ ಚರಮಸೀಮೆಗೆ ಸರ್ಕಾರ ತಲುಪಿದೆ. ಸಿಎಂ ಕೂಡಾ ಇನ್ನೆಷ್ಟು ದಿನ ಇರ್ತೀನೋ? ಇರುವಷ್ಟು ದಿನ ಚೀಲ ತುಂಬಿಸಿಕೊಳ್ಳೋಣ ಅಂತ ಇದ್ದಾರೆ ಎಂದು ವ್ಯಂಗ್ಯವಾಡಿದರು. ಸರ್ಕಾರದ ವಿರುದ್ಧ ಜನಾಭಿಪ್ರಾಯ ಇದೆ. ಆ ಜನಾಭಿಪ್ರಾಯವನ್ನ ಈ ಸರ್ಕಾರ ಬದಲಾಯಿಸಲು ಆಗಲ್ಲ. ಸರ್ಕಾರ ಜನರ ವಿಶ್ವಾಸ ಗೆಲ್ಲುವಂಥ ಯಾವ ಕೆಲಸವನ್ನೂ ಕಳೆದ ಎರಡೂವರೆ ವರ್ಷದಲ್ಲಿ ಮಾಡಿಲ್ಲ ಎಂದು ದೂರಿದರು.
ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್ನ ಹಾಲಿ ಆವೃತ್ತಿಗೆ ದಿನಗಣನೆ ಆರಂಭವಾಗಿದೆ. ಆದರೆ, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಇನ್ನೂ ಹೋಂ ಗ್ರೌಂಡ್ ಆಯ್ಕೆ ಮಾಡದಿರುವುದು ಬಿಸಿಸಿಐ ತಲೆನೋವಾಗಿದೆ.ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಮುಂದಿನ ಸೀಸನ್ನಲ್ಲಿ ಯಾವ ಸ್ಟೇಡಿಯಂನಲ್ಲಿ ಕಣಕ್ಕಿಳಿಯಲಿದೆ ಎಂಬುದು ಇನ್ನೂ ಸಹ ಖಚಿತವಾಗಿಲ್ಲ. ಹೀಗಾಗಿಯೇ ಇದೀಗ ಬಿಸಿಸಿಐ ಈ ಬಗ್ಗೆ ಸ್ಪಷ್ಟನೆ ನೀಡುವಂತೆ ಆರ್ಸಿಬಿ ಫ್ರಾಂಚೈಸಿಗೆ ಸೂಚನೆ ನೀಡಿದೆ.ಈ ಬಾರಿಯ 19ನೇ ಆವೃತ್ತಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕಣಕ್ಕಿಳಿಯುವುದು ಎಲ್ಲ. ಈ ಪ್ರಶ್ನೆಗೆ ಇನ್ನೂ ಸಹ ಸ್ಪಷ್ಟ ಉತ್ತರ ದೊರೆತಿಲ್ಲ. ಇದಕ್ಕೆ ಮುಖ್ಯ ಕಾರಣ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿನ ಷರತ್ತುಗಳು.
ಅನೇಕರಿಗೆ ಮದ್ಯಪಾನ ಚಟವಾಗಿಬಿಟ್ಟಿರುತ್ತದೆ. ಆದರೆ ಒಂದು ವಾರಕ್ಕೆ ಎಷ್ಟು ಬಾರಿ ಅಥವಾ ಎಷ್ಟು ಮದ್ಯ ಸೇವನೆ ಮಾಡಿದರೆ ಆರೋಗ್ಯ ಸುರಕ್ಷಿತವಾಗಿರುತ್ತದೆ ನೋಡಿ. ಮದ್ಯಸೇವನೆ ಮಾಡುವುದು ಆರೋಗ್ಯಕ್ಕೆ ಒಳ್ಳೆಯದಲ್ಲ. ಹಾಗಿದ್ದರೂ ಒಮ್ಮೆ ಚಟ ಹತ್ತಿಕೊಂಡರೆ ಅದನ್ನು ಬಿಡಲು ಕಷ್ಟ. ಆಧುನಿಕ ಜಗತ್ತಿಗೆ ಅನಿವಾರ್ಯವಾಗಿಯೋ, ಪಾರ್ಟಿ ನೆಪದಲ್ಲೋ ಮದ್ಯ ಸೇವನೆ ಮಾಡುವುದು ಫ್ಯಾಶನ್ ಆಗಿಬಿಟ್ಟಿದೆ. ಆದರೆ ಅತಿಯಾದ ಮದ್ಯ ಸೇವನೆ ಖಂಡಿತಾ ಉತ್ತಮವಲ್ಲ. ತಜ್ಞರ ಪ್ರಕಾರ ಪುರುಷರು ಒಂದು ವಾರಕ್ಕೆ 15 ಸ್ಟ್ಯಾಂಡರ್ಡ್ ಡ್ರಿಂಕ್ಸ್ ಗಿಂತ ಕಡಿಮೆ ಕುಡಿಯಬೇಕು ಮತ್ತು ಒಂದು ದಿನಕ್ಕೆ 4 ಸ್ಟ್ಯಾಂಡರ್ಡ್ ಡ್ರಿಂಕ್ಸ್ ಗಿಂತ ಹೆಚ್ಚು ಕುಡಿಯಬಾರದು.
ಬೆಂಗಳೂರು: ಚಿನ್ನದ ಬೆಲೆ ಮತ್ತೆ ಏರಿಕೆ ಮತ್ತು ಇಳಿಕೆಯಾಗುತ್ತಲೇ ಇದೆ. ಆದರೆ ಇಂದು ವಾರದ ಆರಂಭದಲ್ಲೇ ಪರಿಶುದ್ಧ ಚಿನ್ನದ ದರ ಮತ್ತು ಇತರೆ ಚಿನ್ನದ ದರ ಏರಿಕೆ ಕಂಡಿದೆ. ಇಂದು ಪರಿಶುದ್ಧ ಚಿನ್ನದ ದರ ಮತ್ತು ಇತರೆ ಚಿನ್ನದ ದರ ವಿವರ ಇಲ್ಲಿದೆ ನೋಡಿ. ಚಿನ್ನದ ದರ ಏರಿಕೆಕಳೆದ ವಾರ ಪರಿಶುದ್ಧ ಚಿನ್ನದ ದರ ಸತತ ಏರಿಕೆ ಮತ್ತು ಇಳಿಕೆ ಕಂಡಿತ್ತು. ಆದರೆ ಈ ವಾರದ ಆರಂಭದಲ್ಲೇ ಚಿನ್ನದ ದರ ಏರಿಕೆಯಾಗಿತ್ತು. ಇಂದು ಪರಿಶುದ್ಧ ಚಿನ್ನದ ದರ ಭಾರೀ ಏರಿಕೆಯಾಗಿದೆ. ಪರಿಶುದ್ಧ ಚಿನ್ನದ ದರ ಮೊನ್ನೆ 1,48,770.00 ರೂ.ಗಳಿತ್ತು. ಇಂದು 1,52,585.00 ರೂ.ಗಳಷ್ಟಾಗಿದೆ.
ಪಾಟ್ನಾ: ರೀಲ್ಸ್ ಗಾಗಿ ಶೋಕಿ ಮಾಡುವವರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ. ಬಿಹಾರದಲ್ಲಿ ಬೈಕ್ ಸವಾರನೊಬ್ಬ ರೀಲ್ಸ್ ಗಾಗಿ ಬೃಹತ್ ಟ್ರಕ್ ನಡಿಯಲ್ಲಿ ಬೈಕ್ ಚಾಲನೆ ಮಾಡಿದ ಭಯಾನಕ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಇತ್ತೀಚೆಗಿನ ದಿನಗಳಲ್ಲಿ ಜನರಿಗೆ ಸೋಷಿಯಲ್ ಮೀಡಿಯಾದಲ್ಲಿ ರೀಲ್ಸ್ ಹಂಚಿಕೊಳ್ಳುವುದು, ಮಿಲಿಯನ್ ಗಟ್ಟಲೆ ವ್ಯೂ ಪಡೆದುಕೊಳ್ಳುವ ಹುಚ್ಚು. ಇದಕ್ಕಾಗಿ ತಮ್ಮ ಪ್ರಾಣ ಪಣಕ್ಕಿಡಲೂ ಹಿಂದೆ ಮುಂದೆ ನೋಡಲ್ಲ. ಅಂತಹದ್ದೇ ವಿಡಿಯೋವೊಂದು ಈಗ ವೈರಲ್ ಆಗಿದೆ. ಬಿಹಾರದಲ್ಲಿ ಈ ಘಟನೆ ನಡೆದಿದೆ. ರಾತ್ರಿ ವೇಳೆ ಹೆದ್ದಾರಿಯಲ್ಲಿ ಬೃಹತ್ ಟ್ರಕ್ ಒಂದು ಚಲಿಸುತ್ತಿದ್ದರೆ ಅದನ್ನು ಬೆನ್ನಟ್ಟಿ ಓರ್ವ ಬೈಕ್ ಸವಾರ ಬಂದಿದ್ದಾನೆ.
ನಾಗ್ಪುರ: ಭಾರತ ಮತ್ತು ನ್ಯೂಜಿಲೆಂಡ್ ನಡುವೆ ಏಕದಿನ ಸರಣಿ ಮುಗದಿದ್ದು ಈಗ ಟಿ20 ಸರಣಿ ಆರಂಭವಾಗಲಿದೆ. ಇಂದು ಮೊದಲ ಪಂದ್ಯ ನಾಗ್ಪುರದಲ್ಲಿ ನಡೆಯುವುದು. ಐದು ಪಂದ್ಯಗಳ ಟಿ20 ಸರಣಿ ಇದಾಗಿದ್ದು ಮೊದಲ ಪಂದ್ಯ ಇಂದು ನಾಗ್ಪುರದಲ್ಲಿ ನಡೆಯಲಿದೆ. ಈಗಾಗಲೇ ಏಕದಿನ ಸರಣಿ ಸೋತಿರುವ ಟೀಂ ಇಂಡಿಯಾಗೆ ಈಗ ಟಿ20 ಸರಣಿ ಗೆಲ್ಲುವುದು ಪ್ರತಿಷ್ಠೆಯ ವಿಚಾರವಾಗಿದೆ. ಜೊತೆಗೆ ಇನ್ನೇನು ಕೆಲವೇ ದಿನಗಳಲ್ಲಿ ಭಾರತದಲ್ಲಿಯೇ ಟಿ20 ವಿಶ್ವಕಪ್ ಆರಂಭವಾಗಲಿದ್ದು, ಇದಕ್ಕೆ ಈ ಸರಣಿ ಸಿದ್ಧತೆಯ ವೇದಿಕೆ ಎಂದೇ ಹೇಳಬಹುದು. ಟಿ20 ಫಾರ್ಮ್ಯಾಟ್ ನಲ್ಲಿ ಸತತವಾಗಿ ಯಶಸ್ಸು ಪಡೆಯುತ್ತಲೇ ಬಂದಿದ್ದ ಟೀಂ ಇಂಡಿಯಾ ಕಳೆದ ಕೆಲವೊಂದು ಸರಣಿಗಳಿಂದ ಏಳು-ಬೀಳುಗಳನ್ನು ಕಾಣುತ್ತಿದೆ.
ಬೆಂಗಳೂರು: ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ ಜೀ ಕನ್ನಡದ ಡ್ಯಾನ್ಸ್ ರಿಯಾಲಿಟಿ ಶೋ ಸೆಟ್ ನಲ್ಲಿ ಮಗುವಿನ ಜೊತೆ ತಾವೂ ಮಗುವಾದ ಗಳಿಗೆಯೊಂದರ ವಿಡಿಯೋ ಈಗ ವೈರಲ್ ಆಗಿದೆ. ಎಷ್ಟೇ ದೊಡ್ಡ ಸ್ಟಾರ್ ಆದರೂ ಶಿವರಾಜ್ ಕುಮಾರ್ ಮಕ್ಕಳು ಎಂದರೆ ತಾವೂ ಮಗುವಾಗಿ ಬಿಡುತ್ತಾರೆ ಎಂಬುದಕ್ಕೆ ಇದೇ ಸಾಕ್ಷಿ. ಡಿಕೆಡಿ ರಿಯಾಲಿಟಿ ಶೋನಲ್ಲಿ ಶಿವಣ್ಣ ತೀರ್ಪುಗಾರರು. ಈ ರಿಯಾಲಿಟಿ ಶೋ ತಡರಾತ್ರಿಯವರೆಗೂ ಶೂಟಿಂಗ್ ನಡೆಯುತ್ತಿರುತ್ತದೆ. ಇದೇ ರೀತಿ ಶೂಟಿಂಗ್ ನಡುವೆ ಶೋಗೆ ತಂಡ ರೆಡಿ ಮಾಡುತ್ತಿರಬೇಕಾದರೆ ಇತ್ತ ಶಿವಣ್ಣ ಪುಟಾಣಿ ಸ್ಪರ್ಧಿ ಪ್ರೀತಂನನ್ನು ತಮ್ಮ ಸ್ವಂತ ಮೊಮ್ಮಗನ ರೀತಿ ಮಲಗಿಸಿಕೊಂಡು ಆತನ ಪಕ್ಕ ತಾವೂ ಮಲಗಿ ಲಾಲಿ ಹಾಡಿದ್ದಾರೆ.
ಬೆಂಗಳೂರು: ಚಿನ್ನದಂತೆ ತೈಲ ಉತ್ಪನ್ನವನ್ನೂ ದುಬೈನಿಂದ ಕಳ್ಳ ಸಾಗಣಿಕೆ ಮಾಡುವ ಬೃಹತ್ ಜಾಲವನ್ನು ಪೊಲೀಸರು ಬೇಧಿಸಿದ್ದಾರೆ. ಗಲ್ಫ್ ರಾಷ್ಟ್ರಗಳಿಂದ ತೈಲ ಉತ್ಪನ್ನಗಳನ್ನು ಕರ್ನಾಟಕಕ್ಕೆ ಕಳ್ಳ ಮಾರ್ಗದಲ್ಲಿ ತರಲಾಗುತ್ತಿತ್ತು. ಇದರಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಕೋಟ್ಯಾಂತರ ರೂಪಾಯಿ ತೆರಿಗೆ ವಂಚನೆ ಮಾಡಲಾಗುತ್ತಿತ್ತು. ಈ ಬಗ್ಗೆ ಪೊಲೀಸರು ಖಚಿತ ಮಾಹಿತಿ ಪಡೆದು ದಾಳಿ ನಡೆಸಿದ್ದಾರೆ. ಮುಂಬೈನಿಂದ ಬೆಳಗಾವಿ ಮಾರ್ಗವಾಗಿ ಬೆಂಗಳೂರಿಗೆ ಡೀಸೆಲ್ ಸಾಗಿಸುತ್ತಿದ್ದ ಟ್ಯಾಂಕರ್ ವಶಕ್ಕೆ ಪಡೆದು ಕಳ್ಳ ಸಾಗಣಿಕೆ ಜಾಲ ಬಯಲಿಗೆಳೆದಿದ್ದಾರೆ ಪೊಲೀಸರು. ಇನ್ಸ್ ಪೆಕ್ಟರ್ ಬಿಆರ್ ಗಡ್ಡೇಕರ್ ನೇತೃತ್ವದ ತಂಡ ದಾಳಿ ನಡೆಸಿದೆ.
ನ್ಯೂಯಾರ್ಕ್: ಭಾರತೀಯ ಮೂಲದ ನಾಸಾ ಗಗನಯಾತ್ರಿ ಸುನಿತಾ ವಿಲಿಯಮ್ಸ್ ನಿವೃತ್ತಿ ಹೊಂದಿದ್ದಾರೆ. ಕಳೆದ ವರ್ಷವಷ್ಟೇ ಅವರು ಬಾಹ್ಯಾಕಾಶ ಯಾತ್ರೆ ಮುಗಿಸಿ ಮರಳಿದ್ದರು. ಭಾರತೀಯ ಸಂಜಾತೆ ಸುನಿತಾ ವಿಲಿಯಮ್ಸ್ ಒಂದು ವಾರದ ಕೆಲಸಕ್ಕಾಗಿ ಬಾಹ್ಯಾಕಾಶಕ್ಕೆ ತೆರಳಿದ್ದರು. ಆದರೆ ಅಲ್ಲಿ ತಾಂತ್ರಿಕ ದೋಷ ಉಂಟಾಗಿದ್ದರಿಂದ 9 ತಿಂಗಳು ಬಾಹ್ಯಾಕಾಶ ನಿಲ್ದಾಣದಲ್ಲೇ ಕಳೆಯುವಂತಾಯಿತು. ಇದಾದ ಬಳಿಕ ಅವರನ್ನು ಇತರೆ ಗಗನಯಾತ್ರಿಗಳ ಜೊತೆ ಯಶಸ್ವಿಯಾಗಿ ಭೂಮಿಗೆ ಕರೆತರಲಾಯಿತು. ಸುನಿತಾ ಜನಿಸಿದ್ದು ಮತ್ತು ಬೆಳೆದಿದ್ದು ಅಮೆರಿಕಾದಲ್ಲಿಯೇ ಆದರೂ ಅವರ ತಂದೆ-ತಾಯಿ ಗುಜರಾತ್ ನವರು.
ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರ ಇನ್ನೂ ಬಿಸಿಯಾಗಿಯೇ ಇದೆ. ಇದರ ನಡುವೆ ಇಂದು ಡಿಕೆಶಿ ಬೆಂಬಲಿಗರ ಸಭೆ ನಡೆಸಲು ತೀರ್ಮಾನಿಸಿದ್ದರು. ಆದರೆ ಕೊನೆಯ ಕ್ಷಣದಲ್ಲಿ ಇದು ರದ್ದಾಗಿದೆ. ಡಿಕೆ ಶಿವಕುಮಾರ್ ಮೊನ್ನೆಯಷ್ಟೇ ದೆಹಲಿಗೆ ಹೋಗಿ ಹೈಕಮಾಂಡ್ ನಾಯಕರ ಜೊತೆ ಮಾತುಕತೆ ನಡೆಸಿ ಬಂದಿದ್ದಾರೆ. ಈ ವೇಳೆ ಅಧಿಕಾರ ಹಂಚಿಕೆ ಕುರಿತು ಏನು ಚರ್ಚೆಯಾಗಿದೆ ಎಂಬ ಬಗ್ಗೆ ಗುಟ್ಟು ಬಿಟ್ಟುಕೊಟ್ಟಿಲ್ಲ. ಏಪ್ರಿಲ್ ನಲ್ಲಿ ಗುಡ್ ನ್ಯೂಸ್ ನಿರೀಕ್ಷಿಸೋಣ ಎಂದಿದ್ದರು. ಇದರ ನಡುವೆ ಇಂದು ಡಿಕೆಶಿ ಬಣದಲ್ಲಿ ಗುರುತಿಸಿಕೊಂಡಿದ್ದ ಮಾಗಡಿ ಬಾಲಕೃಷ್ಣ ಸೇರಿದಂತೆ ಪ್ರಮುಖ ಸಚಿವರು ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಸಭೆ ನಡೆಸಲು ಪ್ಲ್ಯಾನ್ ಮಾಡಿದ್ದರು.