ದಾವಣಗೆರೆ: ಉಚ್ಚಾನೆಗೊಂಡಿರುವ ವಚನಾನಂದ ಸ್ವಾಮೀಜಿ ಅವರಿಗೆ ಹರಿಹರದ ವೀರಶೈವ ಲಿಂಗಾಯತ ಪಂಚಮಸಾಲಿ ಗುರುಪೀಠದಿಂದ ಏ.23ರ ಒಳಗೆ ಮಠದಿಂದ ಗೌರವಯುತವಾಗಿ ನಿರ್ಗಮಿಸಬೇಕು. ಇಲ್ಲವಾದರೆ ಸಾವಿರಾರು ಭಕ್ತರು ಮಠಕ್ಕೆ ಧಾವಿಸಿ ಹೊರಹಾಕುತ್ತೇವೆ ಎಂದು ಗುರುಪೀಠದ ಟ್ರಸ್ಟಿ ಎಚ್.ಎಸ್. ನಾಗರಾಜ್ ಹೇಳಿದ್ದಾರೆ.ಟ್ರಸ್ಟ್ ತೀರ್ಮಾನವನ್ನು ಮೀರಿ ಸ್ವಾಮೀಜಿ ಮಠದಲ್ಲಿ ಮುಂದುವರಿಯಲು ಸಾಧ್ಯವಿಲ್ಲ. ಟ್ರಸ್ಟ್ ವಿರುದ್ಧ ಭಕ್ತರನ್ನು ಎತ್ತಿಕಟ್ಟುವ ಅವರ ಪ್ರಯತ್ನವೂ ಫಲ ನೀಡುವುದಿಲ್ಲ.
ಕೇರಳ ಸಾಹಿತ್ಯ ಉತ್ಸವದ ವೇದಿಕೆಯಲ್ಲಿ ಪ್ರಕಾಶ್ ರಾಜ್ ಅವರು ಮಾತನಾಡಿದ್ದ ವಿಡಿಯೋ ವೈರಲ್ ಆಗಿದೆ. ಇದರಲ್ಲಿ ಅವರು ರಾಮಾಯಣದ ಬಗ್ಗೆ ಮಾತನಾಡಿದ್ದಾರೆ. ಈಗಿನ ರಾಜಕೀಯ ಪರಿಸ್ಥಿತಿಯ ವಿಡಂಬನೆಗೆ ಅವರು ರಾಮಾಯಣವನ್ನು ಉದಾಹರಣೆಯಾಗಿ ತೆಗೆದುಕೊಂಡಿದ್ದಾರೆ. ಆದರೆ ಅವರು ಮಾತನಾಡಿದ್ದನ್ನು ಅನೇಕರು ಖಂಡಿಸಿದ್ದಾರೆ. ಈ ಸಂಬಂಧ ಪ್ರಕಾಶ್ ರಾಜ್ ವಿರುದ್ಧ ಕಾನೂನು ಕ್ರಮಕ್ಕೆ ಒತ್ತಾಯಿಸಿದ್ದಾರೆ.ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ಹಂಚಿಕೊಂಡಿರುವ ಅನೇಕರು ತಮ್ಮ ಅನಿಸಿಕೆ ತಿಳಿಸಿದ್ದಾರೆ. ಪ್ರಕಾಶ್ ರಾಜ್ ಹೇಳುವುದೇನೆಂದರೆ ರಾಮನು ಉತ್ತರ ಭಾರತೀಯ, ರಾವಣನು ದಕ್ಷಿಣ ಭಾರತೀಯ ಆದಿವಾಸಿ. ರಾಮನು
ಬೆಂಗಳೂರು: ರಾಜ್ಯದಲ್ಲಿ ಐದು ಜಿಲ್ಲೆಗಳನ್ನು ಹೊರತುಪಡಿಸಿ, ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷಿಸಲಾಗಿದೆ. ಇನ್ನೂ ಕುಡಿಯುವ ನೀರಿಗೆ ತೊಂದರೆಯಾಗದಂತೆ ಮುಂಜಾಗ್ರೂತ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ವಿಧಾನಸೌಧ ಸಭಾಂಗಣದಲ್ಲಿ ಇಂದು ನಡೆದ ಗ್ರಾಮೀಣ ಹಾಗೂ ಪಟ್ಟಣ ಪ್ರದೇಶಗಳಲ್ಲಿನ ಕುಡಿಯುವ ನೀರು ಪೂರೈಕೆ ಕುರಿತ ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಭೆಯಲ್ಲಿ ಮಾತನಾಡಿದರು.
ಪ್ರಸಿದ್ಧ ಕನ್ನಡಕದ ಕಂಪನಿಯಾದ ಲೆನ್ಸ್ಕಾರ್ಟ್ ತನ್ನ ಉದ್ಯೋಗಿಗಳಿಗೆ ರೂಪಿಸಿರುವ ಸ್ಟೈಲ್ಗೈಡ್ ವಿವಾದ ಸೃಷ್ಟಿಸಿದ ಬೆನ್ನಲ್ಲೇ ಸಿಇಒ ಸ್ಪಷ್ಟನೆಯನ್ನು ನೀಡಿದ್ದಾರೆ. ಲೆನ್ಸ್ಕಾರ್ಟ್ಗೆ ಲಿಂಕ್ ಮಾಡಲಾದ ಆಂತರಿಕ ದಾಖಲೆಯು ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರವಾದ ನಂತರ ವ್ಯಾಪಕ ವಿವಾದವನ್ನು ಹುಟ್ಟುಹಾಕಿತು. ಉದ್ಯೋಗಿಗಳಿಗೆ ಹಿಜಾಬ್ ಅನ್ನು ಅನುಮತಿಸುವಾಗ ಬಿಂದಿ ಮತ್ತು ತಿಲಕವನ್ನು ಅನುಮತಿಸದ ಕೆಲಸದ ಸ್ಥಳದ ಡ್ರೆಸ್ ಕೋಡ್ ಭಾರೀ ವಿವಾದಕ್ಕೆ ಕಾರಣವಾಗಿತ್ತು. ಹಕ್ಕುಗಳು ತ್ವರಿತವಾಗಿ ಟೀಕೆಗಳನ್ನು ಸೆಳೆಯಿತು ಮತ್ತು ಕೆಲಸದಲ್ಲಿ ಧಾರ್ಮಿಕ ಅಭಿವ್ಯಕ್ತಿಯ ಸುತ್ತ ಚರ್ಚೆಗಳನ್ನು ಹುಟ್ಟುಹಾಕಿತು
ಬೆಂಗಳೂರು: ಮಹಿಳೆಯರ ಆರೋಗ್ಯ ಮತ್ತು ಘನತೆಯನ್ನು ಎತ್ತಿಹಿಡಿಯುವ ಮಹತ್ವದ ತೀರ್ಪಿನಲ್ಲಿ ಕರ್ನಾಟಕ ಹೈಕೋರ್ಟ್ 18 ರಿಂದ 52 ವರ್ಷ ವಯಸ್ಸಿನ ಮಹಿಳಾ ಉದ್ಯೋಗಿಗಳಿಗೆ ತಿಂಗಳಿಗೆ ಒಂದು ದಿನ ವೇತನ ಸಹಿತ ಋತುಚಕ್ರ ರಜೆ ನೀಡುವ ನೀತಿಯನ್ನು "ಕಟ್ಟುನಿಟ್ಟಾಗಿ ಮತ್ತು ನಿಷ್ಠೆಯಿಂದ" ಜಾರಿಗೊಳಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.ಈ ಹಿಂದೆ ರಾಜ್ಯ ಸರ್ಕಾರವು ಮುಟ್ಟಿನ ರಜೆಯ ಪರಿಕಲ್ಪನೆಯನ್ನು ಅನುಮೋದಿಸಿದ್ದರೂ, ಹಲವಾರು ಕಂಪನಿಗಳು ಮತ್ತು ಸಂಸ್ಥೆಗಳು ತಮ್ಮ ಮಹಿಳಾ ಸಿಬ್ಬಂದಿಗೆ ಅದನ್ನು ನೀಡಲು ಹಿಂದೇಟು ಹಾಕುತ್ತಿವೆ ಎಂದು ನ್ಯಾಯಾಲಯ ಗಮನಿಸಿದೆ. ಪರಿಣಾಮವಾಗಿ, ಈ ನೀತಿಯನ್ನು ಕಡ್ಡಾಯಗೊಳಿಸಬೇಕು ಮತ್ತು ಎಲ್ಲಾ ಕ್ಷೇತ್ರಗಳಲ್ಲಿ ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು ಎಂದು ಹೈಕೋರ್ಟ್ ಆದೇಶಿಸಿದೆ.
ಇಂದಿನ ವೇಗದ ಜಗತ್ತಿನಲ್ಲಿ, ಒತ್ತಡವು ದೈನಂದಿನ ಜೀವನದ ಸಾಮಾನ್ಯ ಭಾಗವಾಗಿ ಬಿಟ್ಟಿದೆ. ಸಾಂದರ್ಭಿಕ ಒತ್ತಡವು ಸಾಮಾನ್ಯವಾಗಿದ್ದರೂ, ದೀರ್ಘಕಾಲದ ಒತ್ತಡವು ಮಾನಸಿಕ ಮತ್ತು ದೈಹಿಕ ಯೋಗಕ್ಷೇಮದ ಮೇಲೆ ಪರಿಣಾಮ ಬೀರಬಹುದು. ಆದರೆ ಸರಳವಾದ ಜೀವನಶೈಲಿ ಒತ್ತಡವನ್ನು ಪರಿಣಾಮಕಾರಿಯಾಗಿ ನಿರ್ವಹಿಸಲು ಸಹಾಯ ಮಾಡುತ್ತದೆ. ಆಳವಾದ ಉಸಿರಾಟವನ್ನು ಅಭ್ಯಾಸ ಮಾಡಿಆಳವಾದ ಉಸಿರಾಟದ ವ್ಯಾಯಾಮಗಳು ನರಮಂಡಲವನ್ನು ಶಾಂತಗೊಳಿಸಲು ಮತ್ತು ಆತಂಕವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಕೆಲವು ನಿಮಿಷಗಳ ಕಾಲ ನಿಧಾನವಾಗಿ, ಆಳವಾದ ಉಸಿರನ್ನು ತೆಗೆದುಕೊಳ್ಳುವುದು ಹೃದಯ ಬಡಿತವನ್ನು
ದೆಹಲಿಯ ಇಂದಿರಾಗಾಂಧಿ ಅಂತರಾಷ್ಟ್ರೀಯ (ಐಜಿಐ) ವಿಮಾನ ನಿಲ್ದಾಣದಲ್ಲಿ ಎರಡು ವಿಮಾನಗಳ ನಡುವೆ ಅಪಘಾತ ಸಂಭವಿಸಿದೆ. ಇದೀಗ ಸಿಕ್ಕಿರುವ ಮಾಹಿತಿ ಪ್ರಕಾರ ಪ್ರಾಥಮಿಕ ವರದಿಗಳ ಪ್ರಕಾರ ಆಕಾಶ ವಿಮಾನದಲ್ಲಿದ್ದ ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ.ವಿಮಾನ ಅಪಘಾತದ ಸಮಯದಲ್ಲಿ, ಸ್ಪೈಸ್ಜೆಟ್ ವಿಮಾನದ ಬಲ ರೆಕ್ಕೆ ಮತ್ತು ಆಕಾಶ ಏರ್ನ ಎಡಗೈ ಹಾರಿಜಾಂಟಲ್ ಸ್ಟೆಬಿಲೈಸರ್ ಹಾನಿಗೊಳಗಾದವು.ದೆಹಲಿ ವಿಮಾನ ನಿಲ್ದಾಣದಲ್ಲಿ ಟ್ಯಾಕ್ಸಿ ಮಾಡುವಾಗ ಸ್ಪೈಸ್ಜೆಟ್ B737-700 ವಿಮಾನ ಬಲ ರೆಕ್ಕೆಗೆ ಹಾನಿಯಾಗಿದೆ ಎಂದು
ಹೈದರಾಬಾದ್: ಸನ್ರೈಸರ್ಸ್ ಹೈದರಾಬಾದ್ ತಂಡದ ಪೂರ್ಣಕಾಲಿಕ ನಾಯಕ ಪ್ಯಾಟ್ ಕಮಿನ್ಸ್ ಕ್ರಿಕೆಟ್ ಆಸ್ಟ್ರೇಲಿಯಾ ನಡೆಸಿದ ಫಿಟ್ನೆಸ್ ಪರೀಕ್ಷೆಯಲ್ಲಿ ತೇರ್ಗಡೆಯಾಗಿದ್ದಾರೆ. ಇದರೊಂದಿಗೆ ಸನ್ರೈಸರ್ಸ್ ತಂಡಕ್ಕೆ ಆನೆಬಲ ಬಂದಂತಾಗಿದೆ. ಸನ್ರೈಸರ್ ತಂಡದ ಪ್ರಮುಖ ವೇಗಿಯಾಗಿರುವ ಪ್ಯಾಟ್ ಕಮಿನ್ಸ್ ಫಿಟ್ನೆಸ್ ಟೆಸ್ಟಲ್ಲಿ ಪಾಸ್ ಆಗಿದ್ದು, ಆಡಲು ಅನುಮತಿ ದೊರೆತಿದೆ. ಈ ಮೂಲಕ ಹೈದರಾಬಾದ್ ತಂಡಕ್ಕೆ ಆವೃತ್ತಿ ಮಧ್ಯದಲ್ಲಿ ಗುಡ್ನ್ಯೂಸ್ ಸಿಕ್ಕಿದೆ.ಐಪಿಎಲ್ 2026ರ ಆವೃತ್ತಿ ಆರಂಭಕ್ಕೂ ಮುನ್ನ ಕಮ್ಮಿನ್ಸ್ ಭಾರತಕ್ಕೆ ಆಗಮಿಸಿದ್ದರು. ಆದರೆ ಒಂದೇ ಒಂದು ಪಂದ್ಯದಲ್ಲಿಯೂ ಆಡಿರಲಿಲ್ಲ. ಬಳಿಕ ಪ್ಯಾಟ್ ಕಮಿನ್ಸ್ ಆಸ್ಟ್ರೇಲಿಯಾಕ್ಕೆ ವಾಪಸ್ಸಾಗಿದ್ದರು. ಅಲ್ಲಿ ಕೆಲವು ಸ್ಕ್ಯಾನಿಂಗ್ಗೆ ಒಳಪಟ್ಟಿದ್ದಾರೆ. ಇದೀಗ ಫಿಟ್ನೆಸ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ.
ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ನಾಸಿಕ್ ಕಚೇರಿಯಲ್ಲಿ ಲವ್ ಜಿಹಾದ್ ಸಂಬಂಧ ಎದ್ದಿರುವ ವಿವಾದ ಇದೀಗ ತೀವ್ರಗೊಂಡಿದೆ. ಆರೋಪಿ ಉದ್ಯೋಗಿಗಳು ಮತಾಂತರ ಮಾಡುವ ಉದ್ದೇಶದಿಂದ ಹಿಂದೂ ಮಹಿಳೆಯರ ಜತೆ ಪ್ರೀತಿ ನಾಟಕವಾಡಿ, ವಿವಾಹ ಆಗುವಂತೆ ಹೇಳಿ ಅವರನ್ನು ಧರ್ಮ ಪರಿವರ್ತಿಸಲು ಉದ್ಯೋಗಿಗಳು ಪ್ರೋತ್ಸಾಹಿಸುತ್ತಿರುವ ಬಗ್ಗೆ ಪ್ರಮುಖ ಸಾಕ್ಷಿಯೊಬ್ಬರು ಗಂಭೀರ ಆರೋಪ ಮಾಡಿದ್ದಾರೆ. ಹಿಂದೂ ಹುಡುಗಿಯರನ್ನು ನಿಮ್ಮ ಗೆಳತಿಯನ್ನಾಗಿ ಮಾಡಿಕೊಳ್ಳಿ ಮತ್ತು ಅವರನ್ನು ಮದುವೆಯಾಗಿ. ನಂತರ ಅವರನ್ನು ನಿಮ್ಮ
ಬುಧವಾರ ನಡೆದ ಐಪಿಎಲ್ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ (ಎಲ್ಎಸ್ಜಿ) ತಂಡವನ್ನು ಐದು ವಿಕೆಟ್ಗಳಿಂದ ಆರ್ಸಿಬಿ ಸೋಲಿಸಿದೆ. ಆದರೆ ಈ ಪಂದ್ಯಾಟದಲ್ಲಿ ಇನ್ನೇನು ಒಂದು ರನ್ ಗಳಿಸಿ ಅರ್ಧ ಸೆಂಚುರಿ ಬಾರಿಸಬೇಕೆನ್ನುವಷ್ಟರಲ್ಲಿ ವಿರಾಟ್ ಕೊಹ್ಲಿ ಔಟಾಗಿದ್ದು, ಅವರ ಅಭಿಮಾನಿಗಳಿಗೆ ನಿರಾಸೆ ಮೂಡಿಸಿತು. ಲಾಂಗ್-ಆನ್ ಕಡೆಗೆ ಗಾಳಿಯಲ್ಲಿ ಶಾಟ್ ಮಾಡಲು ಪ್ರಯತ್ನಿಸುತ್ತಿರುವಾಗ ಅವೇಶ್ ಖಾನ್ ಎಸೆತದಲ್ಲಿ ನಿಕೋಲಸ್ ಪೂರನ್ ಕ್ಯಾಚ್ ಪಡೆದರು.ವಿರಾಟ್ ಕೊಹ್ಲಿ ತಮ್ಮ ಐಪಿಎಲ್ ವೃತ್ತಿಜೀವನದಲ್ಲಿ 49 ರನ್ ಗಳಿಸಿ ಔಟಾದದ್ದು ಇದೇ ಮೊದಲು. ಅರ್ಧಶತಕದಿಂದ
ನವದೆಹಲಿ: ಜಾತಿ ಆಧಾರಿತ ಜನಗಣತಿಯನ್ನು ವಿಳಂಬ ಮಾಡಲು ಬಯಸುತ್ತದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಗುರುವಾರ ಭಾರತೀಯ ಜನತಾ ಪಕ್ಷವನ್ನು (ಬಿಜೆಪಿ) ತರಾಟೆಗೆ ತೆಗೆದುಕೊಂಡರು. ಕೇಂದ್ರವು ಜಾತಿ ಆಧಾರಿತ ಅಂಕಿಅಂಶಗಳನ್ನು ಬಿಡುಗಡೆ ಮಾಡಬೇಕಾಗುತ್ತದೆ ಮತ್ತು ಹಿಂದುಳಿದ ಸಮುದಾಯಗಳಿಗೆ ಜಾತಿ ಆಧಾರಿತ ಮೀಸಲಾತಿಯನ್ನು ಜಾರಿಗೊಳಿಸಬೇಕಾಗುತ್ತದೆ ಎಂದು ಲೋಕಸಭೆಯಲ್ಲಿ ಮಹಿಳಾ ಪಕ್ಷವು ಒತ್ತಿಹೇಳಿತು.ಸಂಸತ್ತಿನಲ್ಲಿ ಮಹಿಳೆಯರಿಗೆ 1/3 ಸ್ಥಾನಗಳನ್ನು ಮೀಸಲಿಡುವ ಮಸೂದೆ, ಆದರೆ ಅದರ ಅನುಷ್ಠಾನದ ತರಾತುರಿಯಲ್ಲಿ ಸರ್ಕಾರದ "ಉದ್ದೇಶಗಳ" ಬಗ್ಗೆ ಪ್ರಶ್ನೆಗಳನ್ನು ಎತ್ತಿದರು.
ನವದೆಹಲಿ: ಮಹಿಳಾ ಮೀಸಲಾತಿ ಜಾರಿ ಮಸೂದೆ ಮಂಡನೆಗೆ ಮುನ್ನ ಲೋಕಸಭೆಯಲ್ಲಿ ಇಂದು ಮಾತನಾಡಿದ ಪ್ರಧಾನಿ ಮೋದಿ ಈ ಮಸೂದೆ ದೇಶದ ಹಿತಕ್ಕಾಗಿ ಮಾಡಲಾಗುತ್ತಿದೆ. ಇದಕ್ಕೆ ರಾಜಕೀಯ ಬಣ್ಣ ಬಳಿಯಬೇಡಿ ಎಂದು ಮನವಿ ಮಾಡಿದ್ದಾರೆ. ಮಹಿಳಾ ಸಬಲೀಕರಣದ ದೃಷ್ಟಿಯಿಂದ ಇದೊಂದು ಐತಿಹಾಸಿಕ ಹೆಜ್ಜೆಯಾಗಿದೆ. ಮಹಿಳಾ ಮೀಸಲಾತಿ ವಿಧೇಯಕಕ್ಕೆ ರಾಜಕೀಯ ಬಣ್ಣ ಬಳಿಯುವ ಅವಶ್ಯಕತೆಯಿಲ್ಲ. ಇದನ್ನು 25-30 ವರ್ಷಗಳ ಹಿಂದೆಯೇ ಮಾಡಬೇಕಿತ್ತು. ನಾವೆಲ್ಲರೂ ಒಟ್ಟಾಗಿ ಇದನ್ನು ಜಾರಿಗೊಳಿಸಿದರೆ ದೇಶಕ್ಕಾಗಿ ಮಾಡಿದ ಈ ಸೇವೆಯನ್ನು ಇತಿಹಾಸ ನೆನಪಿನಲ್ಲಿಟ್ಟುಕೊಳ್ಳುತ್ತದೆ ಎಂದಿದ್ದಾರೆ.
ನವದೆಹಲಿ: ಮಾಜಿ ನಾಯಕ ಎಂಎಸ್ ಧೋನಿ ಏಪ್ರಿಲ್ 23 ರಂದು ವಾಂಖೆಡೆ ಸ್ಟೇಡಿಯಂನಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಐಪಿಎಲ್ 2026 ರ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (CSK) ಗೆ ಮರಳುವ ಸಾಧ್ಯತೆಯಿದೆ.ಧೋನಿ 2026 ರ ಋತುವಿನ ಆರಂಭದ ಮೊದಲು ಎರಡು ವಾರಗಳ ಕಾಲ ಪಂದ್ಯಾಟದಿಂದ ಹೊರಗುಳಿದಿದ್ದರು. ಅವರ ಅನುಪಸ್ಥಿತಿಯಲ್ಲಿ, CSK ತನ್ನ ಮೊದಲ ಮೂರು ಪಂದ್ಯಗಳನ್ನು ಕಳೆದುಕೊಂಡಿತು ಆದರೆ ನಂತರ ಸತತವಾಗಿ ಎರಡು ಪಂದ್ಯಗಳನ್ನು ತವರಿನಲ್ಲಿ ಗೆದ್ದಿದೆ. ಸಿಎಸ್ಕೆ ಮುಂದಿನ ಪಂದ್ಯ ಹೈದರಾಬಾದ್ನಲ್ಲಿ ಸನ್ರೈಸರ್ಸ್ ಹೈದರಾಬಾದ್ (ಎಸ್ಆರ್ಎಚ್) ವಿರುದ್ಧ ನಡೆಯಲಿದೆ.
ಬೆಂಗಳೂರು: ಮಹಿಳಾ ಮೀಸಲಾತಿ ಮಸೂದೆಗಾಗಿ ಸಂಸತ್ತಿನ ವಿಶೇಷ ಅಧಿವೇಶನ ನಡೆಯುತ್ತಿದ್ದು, ಮಹಿಳೆಯರಿಗೂ ಕಾನೂನು ರಚನೆಗೆ ಸಮಾನ ಅವಕಾಶ ಸಿಗಲಿದೆ. ಇದಕ್ಕೆ ವಿರೋಧಪಕ್ಷ ಕಾಂಗ್ರೆಸ್ ಬೆಂಬಲ ನೀಡಲಿದೆ ಎಂಬ ವಿಶ್ವಾಸವಿದೆ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಹೇಳಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಅವರು ಮಾಧ್ಯಮಗಳ ಜೊತೆ ಮಾತನಾಡಿದರು. ಬಾಬಾ ಸಾಹೇಬ್ ಡಾ.ಅಂಬೇಡ್ಕರ್ ಅವರು ದೇಶದಲ್ಲಿ ಸರ್ವರಿಗೂ ಸಮಾನ ಹಕ್ಕು ಇರಬೇಕು, ಸಮಾನ ಅವಕಾಶ ಸಿಗಬೇಕು ಎಂದು ಬಯಸಿದ್ದರು. ಹೆಣ್ಣೊಂದು ಕಲಿತರೆ ಶಾಲೆಯೊಂದು ತೆರೆದಂತೆ ಎಂದೂ ಹೇಳಿದ್ದರು.
ಬೆಂಗಳೂರು: ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಮತ್ತು ಸಹಚರರು ದೋಷಿ ಎಂದು ಕೋರ್ಟ್ ತೀರ್ಪು ನೀಡಿದೆ. ಈ ಪ್ರಕರಣವನ್ನು ಸಿಬಿಐಗೆ ವಹಿಸಲು ಕಾರಣವಾಗಿದ್ದೇ ಈ ಇಬ್ಬರು ಎನ್ನಲಾಗಿದೆ. ಧಾರವಾಡ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಯೋಗೀಶ್ ಗೌಡರನ್ನು 2016 ರ ಜೂನ್ 25 ಕ್ಕೆ ಅವರ ಜಿಮ್ ನಲ್ಲೇ ಖಾರದ ಪುಡಿ ಎರಚಿ ಕೊಚ್ಚಿ ಕೊಲೆ ಮಾಡಲಾಗಿತ್ತು. ಈ ಪ್ರಕರಣವನ್ನು ಆಗ ರಾಜ್ಯ ಪೊಲೀಸ್ ಇಲಾಖೆಯೇ ತನಿಖೆ ನಡೆಸುತ್ತಿತ್ತು. ಅಂದು ಅಧಿಕಾರದಲ್ಲಿದ್ದಿದ್ದು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ.
ಚೆನ್ನೈ: ಕ್ಯಾಂಡಿಡೇಟ್ ಚೆಸ್ ಟೂರ್ನಿಯಲ್ಲಿ ಬುಧವಾರ ನಡೆದ ಅಂತಿಮ ಸುತ್ತಿನಲ್ಲಿ ರಷ್ಯಾದ ಕಟೆರಿನಾ ಲಗ್ನೋ ಅವರನ್ನು ಸೋಲಿಸುವ ಮೂಲಕ ಗ್ರ್ಯಾಂಡ್ಮಾಸ್ಟರ್ ಆರ್ ವೈಶಾಲಿ ಅವರು ಫಿಡೆ ಮಹಿಳಾ ಕ್ಯಾಂಡಿಡೇಟ್ ಪ್ರಶಸ್ತಿಯನ್ನು ಗೆದ್ದ ಮೊದಲ ಭಾರತೀಯ ಆಟಗಾರ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾದರು.2001ರಲ್ಲಿ ಜನಿಸಿದ ಆರ್. ವೈಶಾಲಿ ರಮೇಶಬಾಬು ಭಾರತದ ಅತ್ಯಂತ ಪ್ರತಿಭಾವಂತ ಚೆಸ್ ಗ್ರ್ಯಾಂಡ್ಮಾಸ್ಟರ್. ಇವರು 2026ರ ಫಿಡೆ ಮಹಿಳಾ ಅಭ್ಯರ್ಥಿಗಳ ಟೂರ್ನಮೆಂಟ್ ಗೆದ್ದು ಇತಿಹಾಸ ಸೃಷ್ಟಿಸಿದ್ದಾರೆ. 15 ವರ್ಷಗಳ ನಂತರ ವಿಶ್ವ ಚಾಂಪಿಯನ್ಶಿಪ್ಗೆ ಅರ್ಹತೆ ಪಡೆದ ಭಾರತೀಯರಾಗಿದ್ದಾರೆ. ಪ್ರಸಿದ್ಧ ಚೆಸ್ ಪಟು ಪ್ರಜ್ಞಾನಂದ ಅವರ ಸಹೋದರಿಯಾಗಿರುವ ವೈಶಾಲಿ, 2023 ಮತ್ತು 2025ರ ಗ್ರ್ಯಾಂಡ್ ಸ್ವಿಸ್ ಟೂರ್ನಮೆಂಟ್ ಚಾಂಪಿಯನ್ ಆಗಿದ್ದಾರೆ.
ಬೆಂಗಳೂರು: ಬಿಜೆಪಿ ಕಾರ್ಯಕರ್ತ ಯೋಗೀಶ್ ಗೌಡ ಮರ್ಡರ್ ಕೇಸ್ ನಲ್ಲಿ ದೋಷಿಯಾಗಿರುವ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಇಂದು ನ್ಯಾಯಾಧೀಶರು ನೀಡಿರುವ ತೀರ್ಮಾನ ಮತ್ತೆ ಎದೆಬಡಿತ ಹೆಚ್ಚಿಸಿದೆ. ನಿನ್ನೆ ಜನಪ್ರತಿನಿಧಿಗಳ ಕೋರ್ಟ್ ನಲ್ಲಿ ವಿನಯ್ ಕುಲಕರ್ಣಿ ಮತ್ತು ಅವರ ಸಹಚರರು ದೋಷಿಗಳು ಎಂದು ತೀರ್ಪು ಬಂದಿದೆ. ಇದರ ಬೆನ್ನಲ್ಲೇ ಶಾಸಕರನ್ನು ಪರಪ್ಪನ ಅಗ್ರಹಾರ ಜೈಲಿಗೆ ಕರೆದೊಯ್ಯಲಾಗಿದೆ. ಇಂದು ಶಿಕ್ಷೆಯ ಪ್ರಮಾಣ ಪ್ರಕಟಿಸಬೇಕಿತ್ತು. ಆದರೆ ಇದಕ್ಕಿಂತ ಮೊದಲು ಇಂದು ಶಿಕ್ಷೆ ಪ್ರಮಾಣ ಕುರಿತು ಎರಡೂ ಕಡೆ ವಕೀಲರು ವಾದ ಮಂಡಿಸಿದ್ದಾರೆ. ಇಂದು ಶಾಸಕರ ಪರ ಹಿರಿಯ ವಕೀಲ ಶ್ಯಾಮಸುಂದರ್ ವಾದ ಮಂಡಿಸಿದ್ದು ಶಾಸಕರು ಅನೇಕ ಜನರ ಪ್ರತಿನಿಧಿಯಾಗಿ ಆಯ್ಕೆಯಾದವರು.
ಚಿಕ್ಕಮಗಳೂರು: ಆಂಧ್ರಪ್ರದೇಶ ರಾಜ್ಯದ ಕರ್ನೂಲ್ ಜಿಲ್ಲೆಯ ಮಂತ್ರಾಲಯ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಚಿಕ್ಕಮಗಳೂರು ಮೂಲದ ಎಂಟು ಭಕ್ತರು ಮೃತಪಟ್ಟಿದ್ದಾರೆ. ಮಂತ್ರಾಲಯದಲ್ಲಿ ರಾಯರ ದರ್ಶನಕ್ಕೆ ಬೊಲೆರೊ ವಾಹನದಲ್ಲಿ ತೆರಳುತ್ತಿದ್ದಾಗ ಸಿಮೆಂಟ್ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ.ಚಿಕ್ಕಮಗಳೂರು ಮೂಲದ ಭಕ್ತರು ಬೊಲೆರೋ ವಾಹನದ ಮೂಲಕ ರಾಯರ ದರ್ಶನಕ್ಕೆ ಆಗಮಿಸುತ್ತಿದ್ದರು. ಈ ವೇಳೆ ಮಾರ್ಗ ಮಧ್ಯೆ ಬೊಲೆರೋ ವಾಹನಕ್ಕೆ ಸಿಮೆಂಟ್ ಮತ್ತು ಜಲ್ಲಿಕಲ್ಲು ಟ್ಯಾಂಕರ್ ಡಿಕ್ಕಿ ಹೊಡೆದಿದೆ. ಬೊಲೆರೋ ವಾಹನದಲ್ಲಿ ಒಟ್ಟು 21 ಜನರು ಪ್ರಯಾಣಿಸುತ್ತಿದ್ದರು ಎಂದು ತಿಳಿದು ಬಂದಿದೆ.ಮೃತರನ್ನು ಚಿಕ್ಕಮಗಳೂರು ಭಾಗದ ಕಣನಾಯಕನಹಳ್ಳಿಯ ಕುಮಾರ (50), ದೀಪಿಕಾ (40), ಬೆಳ್ಳಿ (5), ಬೇಲೂರು ತಾಲ್ಲೂಕಿನ ಚಟ್ಟನಹಳ್ಳಿ ಗ್ರಾಮದ ಸುನೀಲ್ (40), ಯಶೋದಾ (60), ಲೋಲಾಕ್ಷಿ, ಉದ್ದೇವ ಗ್ರಾಮದ ಪುಟ್ಟಮ್ಮ (55) ಹಾಗೂ ಮೀನಾಕ್ಷಿ ಎಂದು ಗುರುತಿಸಲಾಗಿದೆ.
ನವದೆಹಲಿ: ಇಂದು ಸಂಸತ್ ನಲ್ಲಿ ಸಮಾಜವಾದಿ ಪಕ್ಷದ ಸಂಸದ ಅಖಿಲೇಶ್ ಯಾದವ್ ಮತ್ತು ಗೃಹಸಚಿವ ಅಮಿತ್ ಶಾ ನಡುವೆ ವಾಗ್ಯುದ್ಧ ನಡೆದಿದೆ. ಮುಸ್ಲಿಂ ಮಹಿಳೆಯರಿಗೆ ಮೀಸಲಾತಿ ಬಗ್ಗೆ ಅಖಿಲೇಶ್ ಯಾದವ್ ಕೇಳಿದರೆ ನಿಮ್ಮ ಪಕ್ಷದ ಟಿಕೆಟ್ ಎಲ್ಲವೂ ಅವರಿಗೇ ಕೊಡಿ ಎಂದು ಶಾ ಟಾಂಗ್ ಕೊಟ್ಟಿದ್ದಾರೆ. ಲೋಕಸಭೆಯಲ್ಲಿ ಮಹಿಳೆಯರಿಗೆ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಯಲ್ಲಿ ಮೀಸಲಾತಿ ಹೆಚ್ಚಿಸುವ ಬಗ್ಗೆ ಚರ್ಚೆಯಾಗುತ್ತಿದೆ. ಈ ವೇಳೆ ಅಖಿಲೇಶ್ ಯಾದವ್ ಮುಸ್ಲಿಂ ಮಹಿಳೆಯರಿಗೆ ಪ್ರತ್ಯೇಕ ಮೀಸಲಾತಿ ನೀಡಬೇಕು ಎಂದು ಆಗ್ರಹಿಸಿದರು.
ಚೆನ್ನೈ: ಐದು ಬಾರಿಯ ಐಪಿಎಲ್ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಹಾಲಿ ಟೂರ್ನಿಯಲ್ಲಿ ಹ್ಯಾಟ್ರಿಕ್ ಸೋಲಿನ ಬಳಿಕ ಗೆಲುವಿನ ಹಳಿಗೆ ಮರಳಿದೆ. ಸತತ ಎರಡು ಗೆಲುವಿನ ಬಳಿಕ ತಂಡಕ್ಕೆ ಬಿಗ್ ಶಾಕ್ ಎದುರಾಗಿದೆ.ಚೆನ್ನೈ ಇಲ್ಲಿಯವರೆಗೆ ಆಡಿರುವ ಎಲ್ಲ ಐದು ಪಂದ್ಯಗಳಲ್ಲಿ ಭಾಗವಹಿಸಿದ್ದ ಪ್ರಮುಖ ವೇಗಿ ಖಲೀಲ್ ಅಹ್ಮದ್ ಅತ್ಯುತ್ತಮ ಪ್ರದರ್ಶನ ನೀಡುವ ಮೂಲಕ ತಂಡದ ಗೆಲುವಿಗೆ ಕಾರಣರಾಗಿದ್ದರು. ಆದರೆ, ಅವರು ಗಾಯಗೊಂಡಿದ್ದು ತಂಡಕ್ಕೆ ಭಾರೀ ಹಿನ್ನಡೆಯಾಗಿದೆ.ತಂಡದ ಪ್ರಮುಖ ವೇಗಿ ಖಲೀಲ್ ಅಹ್ಮದ್ ಕ್ವಾಡ್ರೈಸ್ಪ್ಸ್ ಗಾಯದಿಂದಾಗಿ ಟೂರ್ನಿಯಿಂದಲೇ ಹೊರಗುಳಿದಿದ್ದಾರೆ. ಏಪ್ರಿಲ್ 14 ರಂದು ಕೋಲ್ಕತ್ತಾ ನೈಟ್ ರೈಡರ್ಸ್ವಿರುದ್ಧದ ಹಿಂದಿನ ಪಂದ್ಯದ ಸಮಯದಲ್ಲಿ ಬಲಭಾಗದ ಸೊಂಟದಲ್ಲಿ ನೋವು ಕಾಣಿಸಿಕೊಂಡಿತ್ತು. ಬಳಿಕ ಅವರು ಇನಿಂಗ್ಸ್ ಮಧ್ಯದಲ್ಲಿಯೇ ಮೈದಾನ ತೊರೆದಿದ್ದರು.
ರೈಲ್ವೇ ಟ್ರ್ಯಾಕ್ ಮೇಲಿದ್ದ ಮಗುವಿಗೆ ಇನ್ನೇನು ರೈಲು ಬಂದು ಗುದ್ದಬೇಕು ಎನ್ನುವಷ್ಟರಲ್ಲಿ ಗೋವು ಬಂದು ಪವಾಡವನ್ನೇ ಮಾಡಿದೆ. ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಸಾವು ಯಾವಾಗ ಬರಬೇಕು ಎಂದು ದೇವರು ಮೊದಲೇ ನಿರ್ಧರಿಸುತ್ತಾನೆ. ಆ ಸಮಯ ಬರುವವರೆಗೂ ಗುಂಡು ಕಲ್ಲು ತಲೆ ಮೇಲೆ ಬಿದ್ದರೂ ಏನೂ ಆಗಲ್ಲ. ಅದೇ ರೀತಿ ಈ ಮಗು ರೈಲ್ವೇ ಟ್ರ್ಯಾಕ್ ಮೇಲಿದ್ದರೂ ಕೂದಲೆಳೆಯಲ್ಲಿ ಪಾರಾಗಿದೆ. ಮಗುವೊಂದು ರೈಲ್ವೇ ಟ್ರ್ಯಾಕ್ ಬಳಿಯೇ ನಿಂತಿತ್ತು. ಇದೇ ವೇಳೆಗೆ ಎಕ್ಸ್ ಪ್ರೆಸ್ ರೈಲು ಒಂದು ವೇಗವಾಗಿ ಬರುತ್ತಿತ್ತು.
ಬೆಂಗಳೂರು: ಕೇಂದ್ರ ಸರ್ಕಾರವು ಲೋಕಸಭೆ ಕ್ಷೇತ್ರಗಳ ಮರು ವಿಂಗಡನೆ ಮಾಡುವ ಹೊಸ ಮಸೂದೆ ಜಾರಿ ಮಾಡಲು ಮುಂದಾಗಿದೆ. ಇದು ಜಾರಿಯಾದರೆ ಕರ್ನಾಟಕಕ್ಕೆ ಎಷ್ಟು ಲೋಕಸಭೆ ಕ್ಷೇತ್ರಗಳು ಸಿಗಲಿವೆ ನೋಡಿ. ಲೋಕಸಭೆ ಕ್ಷೇತ್ರ ಈಗ 540 ಇದ್ದು ಹೊಸ ಮಸೂದೆ ಜಾರಿ ಮಾಡುವ ಮೂಲಕ ಇದನ್ನು 850 ಕ್ಕೆ ಏರಿಕೆ ಮಾಡಲು ಕೇಂದ್ರ ಸರ್ಕಾರ ಮುಂದಾಗಿದೆ. ಈ ಮಸೂದೆ ಸಂಸತ್ ನಲ್ಲಿ ಪ್ರಸ್ತಾಪನೆಯಾಗಲಿದ್ದು ಬಿಲ್ ಪಾಸಾದ ಬಳಿಕ ರಾಷ್ಟ್ರಪತಿಗಳ ಅಂಕಿತಕ್ಕೆ ಹೋಗಲಿದೆ. ಎಲ್ಲಾ ರಾಜ್ಯಗಳ ಲೋಕಸಭಾ ಸ್ಥಾನಗಳ ಹಂಚಿಕೆಯನ್ನು ಶೇ.50 ಕ್ಕೆ ಹೆಚ್ಚಿಸಲಾಗುತ್ತದೆ ಎಂದು ಕೇಂದ್ರ ಸರ್ಕಾರ ಹೇಳಿದೆ. 2011 ರ ಜನಗಣತಿಯನ್ನು ಆಧರಿಸಿ ಮರುವಿಂಗಡಣೆ ಮಾಡಲಾಗುತ್ತದೆ ಎನ್ನಲಾಗಿದೆ.
ಬೆಂಗಳೂರು: ಕಳೆದ ಕೆಲವು ದಿನಗಳಿಂದ ಚಿನ್ನದ ದರ ಏರಿಕೆ, ಇಳಿಕೆಯಾಗುತ್ತಲೇ ಇದೆ. ಇಂದು ಪರಿಶುದ್ಧ ಚಿನ್ನದ ದರ ಮತ್ತುಇತರೆ ಚಿನ್ನದ ದರ ಏರಿಕೆಯಾಗಿದೆ. ಇಂದು ಪರಿಶುದ್ಧ ಚಿನ್ನದ ದರ ಮತ್ತು ಇತರೆ ಚಿನ್ನದ ದರ ವಿವರ ಇಲ್ಲಿದೆ ನೋಡಿ. ಚಿನ್ನದ ದರ ಏರಿಕೆಕಳೆದ ವಾರ ಪರಿಶುದ್ಧ ಚಿನ್ನದ ದರ ಸತತವಾಗಿ ಬೆಲೆ ಏರಿಳಿಕೆಯಾಗುತ್ತಲೇ ಇತ್ತು. ಆದರೆ ವಾರಂತ್ಯಕ್ಕೆ ಪರಿಶುದ್ಧ ಚಿನ್ನದ ದರದಲ್ಲಿ ಕೊಂಚ ಇಳಿಕೆಯಾಗಿತ್ತು. ಪರಿಶುದ್ಧ ಚಿನ್ನದ ದರ ವಾರಂತ್ಯಕ್ಕೆ 1,54,770.00 ರೂ.ಗಳಿತ್ತು. ಆದರೆ ಇಂದು ಏರಿಕೆಯಾಗಿದ್ದು 1,57,945.00 ರೂ.ಗಳಷ್ಟಿದೆ.
ಬೆಂಗಳೂರು: ಅಡಿಕೆ ಬೆಲೆ ಕಳೆದ ವಾರ ಏರಿಕೆ-ಇಳಿಕೆಯಾಗಿತ್ತು. ಕಳೆದ ವಾರದಂತೆ ಈ ವಾರವೂ ಅದೇ ಟ್ರೆಂಡ್ ಮುಂದುವರಿದಿದೆ. ಇಂದು ಅಡಿಕೆ ಮತ್ತು ಕಾಳು ಮೆಣಸು, ಕೊಬ್ಬರಿ ದರ ಹೇಗಿದೆ ಇಲ್ಲಿದೆ ವಿವರ. ಕಳೆದ ವಾರ ಅಡಿಕೆ ಬೆಲೆಯಲ್ಲಿ ಕೊಂಚ ಏರಿಳಿಕೆಯಾಗುತ್ತಲೇ ಇತ್ತು. ಕಳೆದ ವಾರ ಎರಡು ದಿನ ಸತತವಾಗಿ ಬೆಲೆ ಏರಿಕೆ ಕಂಡುಬರುತ್ತಿತ್ತು. ಅಡಿಕೆ ಬೆಲೆಯಲ್ಲಿ ಇಂದು ಕೊಂಚ ಇಳಿಕೆಯಾಗಿದೆ. ಹೊಸ ಅಡಿಕೆ ಬೆಲೆ 5 ರೂ. ಇಳಿಕೆಯಾಗಿ 485 ರೂ.ಗಳಷ್ಟಿದೆ. ಹಳೆ ಅಡಿಕೆ ಬೆಲೆ 555 ರೂ. ಗಳಾಗಿದೆ. ಡಬಲ್ ಚೋಲ್ ಬೆಲೆಯೂ 555 ರೂ.ಗಳಷ್ಟಾಗಿದೆ.
ಮೈಸೂರು: ಕುಟುಂಬ ರಾಜಕಾರಣ ಮಾಡುತ್ತಿಲ್ಲ, ತಂದೆಯ ಲೆಗೆಸಿ ಮುಂದುವರಿಸಲು ರಾಜಕಾರಣಕ್ಕೆ ಬಂದೆ ಅಷ್ಟೇ ಎಂದು ಸಿಎಂ ಪುತ್ರ ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ನೀಡಿದ್ದು ಟ್ರೋಲ್ ಗೊಳಗಾಗಿದೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ್ದ ಯತೀಂದ್ರ ಸಿದ್ದರಾಮಯ್ಯ ಜೆಡಿಎಸ್ ನಾಯಕ, ಕೇಂದ್ರ ಸಚಿವ ಕುಮಾರಸ್ವಾಮಿಯವರನ್ನು ಟೀಕೆ ಮಾಡಿದ್ದರು. ಈ ವೇಳೆ ನಮ್ಮದು ಕುಮಾರಸ್ವಾಮಿಯವರಂತೆ ಕುಟುಂಬ ರಾಜಕಾರಣ ಅಲ್ಲ ಎಂದಿದ್ದಾರೆ. ನಾನು ಎಂಎಲ್ ಸಿ ಆಗಿರುವುದು ಕುಟಂಬ ರಾಜಕಾರಣಕ್ಕಾಗಿ ಅಲ್ಲ. ನಮ್ಮ ತಂದೆಯ ರಾಜಕೀಯ ಜೀವನ ಮುಂದುವರಿಸಲು ಎಂಎಲ್ ಸಿಯಾಗಿದ್ದೇನೆ.
ಬೆಂಗಳೂರು: ಹೈಕಮಾಂಡ್ ನಿಂದ ಪದಚ್ಯುತಿಗೆ ಸೂಚನೆ ಬಂದಿದೆ ಎಂಬ ವದಂತಿಗಳ ಬೆನ್ನಲ್ಲೇ ಸಚಿವ ಜಮೀರ್ ಅಹ್ಮದ್ ಮಾಧ್ಯಮಗಳ ಮುಂದೆ ಶಾಕಿಂಗ್ ರಿಯಾಕ್ಷನ್ ಕೊಟ್ಟಿದ್ದಾರೆ. ದಾವಣಗೆರೆ ಬೈ ಎಲೆಕ್ಷನ್ ಬಂಡಾಯದ ದಳ್ಳುರಿ ಈಗ ಕಾಂಗ್ರೆಸ್ ನಲ್ಲಿ ಜೋರಾಗುತ್ತಿದೆ. ದಾವಣಗೆರೆಯಲ್ಲಿ ಪಕ್ಷ ಬೆಂಬಲಿಸದ ಅಲ್ಪಸಂಖ್ಯಾತ ಸಮುದಾಯದ ನಾಯಕರ ತಲೆದಂಡವಾಗುತ್ತಿದೆ. ಈಗಾಗಲೇ ಎಂಎಲ್ ಸಿ ನಸೀರ್ ಅಹ್ಮದ್, ಜಬ್ಬಾರ್ ತಲೆದಂಡವಾಗಿದೆ. ಇದೀಗ ಸಚಿವ ಜಮೀರ್ ಅಹ್ಮದ್ ಗೂ ಕೊಕ್ ಕೊಡಲು ಹೈಕಮಾಂಡ್ ನಿಂದ ಒತ್ತಡವಿದೆ ಎಂಬ ಮಾತು ಕೇಳಿಬರುತ್ತಿದೆ. ಈಗಾಗಲೇ ಸಿಎಂ ಸಿದ್ದರಾಮಯ್ಯ ಕೂಡಾ ಜಮೀರ್ ರನ್ನು ಕರೆಸಿ ಒಂದು ಸುತ್ತಿನ ಮಾತುಕತೆ ನಡೆಸಿದ್ದಾರೆ.
ಇಂಧೋರ್: ಮಂಗನನ್ನು ಓಡಿಸಲು ಹೋಗಿ ಹೋಟೆಲ್ ರೂಂ ಬಾಯ್ ಒಬ್ಬ ಅಕಸ್ಮಾತ್ತಾಗಿ ಲೈವ್ ವಿದ್ಯುತ್ ತಂತಿ ಸ್ಪರ್ಶಿಸಿದ್ದು ನಿಂತಲ್ಲಿಯೇ ಸುಟ್ಟು ಕರಕಲಾದ ಭಯಾನಕ ವಿಡಿಯೋವೊಂದು ಇಲ್ಲಿದೆ. ಈ ಘಟನೆ ನಡೆದಿರುವುದು ಮಧ್ಯಪ್ರದೇಶದ ಛತ್ತಾರ್ ಪುರದಲ್ಲಿ. ಮೃತನನ್ನು ಪ್ರದೀಪ್ ರಾಯ್ಕವಾರ್ ಎಂದು ಗುರುತಿಸಲಾಗಿದೆ. ಸಾವು ಎನ್ನುವುದು ಅನಿರೀಕ್ಷಿತವಾಗಿ ಬರುತ್ತದೆ. ಇದೇ ರೀತಿ ಈತ ಕೂಡಾ ಯಾರೂ ಊಹಿಸಲಾಗದ ಸ್ಥಿತಿಯಲ್ಲಿ ಪ್ರಾಣ ಕಳೆದುಕೊಂಡಿದ್ದಾನೆ. ಹೋಟೆಲ್ ನ ಆವರಣದಲ್ಲಿ ಮಂಗಗಳು ಕಾಣಿಸಿಕೊಂಡಿದ್ದವು. ಅವುಗಳನ್ನು ಓಡಿಸಲು ಈತ ಕಬ್ಬಿಣದ ಪೈಪ್ ನ್ನು ಹಿಡಿದು ಓಡಿಸುವ ಪ್ರಯತ್ನ ಮಾಡಿದ್ದಾನೆ.
ಬೆಂಗಳೂರು: ಐಪಿಎಲ್ 2026 ರಲ್ಲಿ ನಿನ್ನೆ ಲಕ್ನೋ ಸೂಪರ್ ಜೈಂಟ್ಸ್ ಪಂದ್ಯದ ಬಳಿಕ ವಿರಾಟ್ ಕೊಹ್ಲಿ ಮಾತನಾಡುತ್ತಿದ್ದಾಗಲೇ ಎದುರಾಳಿ ಆಟಗಾರ ನಮನ್ ತಿವಾರಿ ಸೀದಾ ಕಾಲಿಗೆ ಬಿದ್ದು ನಮಸ್ಕರಿಸಿದ್ದಾರೆ. ಕೊಹ್ಲಿ ರಿಯಾಕ್ಷನ್ ವಿಡಿಯೋ ಇಲ್ಲಿದೆ. ಐಪಿಎಲ್ 2026 ರಲ್ಲಿ ನಿನ್ನೆ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಪಂದ್ಯದಲ್ಲಿ ಆರ್ ಸಿಬಿ 5 ವಿಕೆಟ್ ಗಳ ಭರ್ಜರಿ ಗೆಲುವು ಸಾಧಿಸಿತ್ತು. 147 ರನ್ ಗಳ ಗುರಿಯನ್ನು ಕೇವಲ 15 ಓವರ್ ನಲ್ಲೇ ಸಾಧಿಸಿತ್ತು. ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಇಂಪ್ಯಾಕ್ಟ್ ಪ್ಲೇಯರ್ ಆಗಿ ಆಡಿ 49 ರನ್ ಗಳಿಸಿ ಔಟಾಗಿದ್ದಾರೆ.
ಬೆಂಗಳೂರು: ಕ್ರಿಕೆಟ್ ಕಿಂಗ್ ವಿರಾಟ್ ಕೊಹ್ಲಿಯನ್ನು ತೀರಾ ಹತ್ತಿರದಿಂದ ನೀಡಿ ಗಾಯಕಿ ಪೃಥ್ವಿ ಭಟ್ ಗಳ ಗಳನೆ ಕಣ್ಣೀರು ಹಾಕಿರುವ ವಿಡಿಯೋವೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ವಿರಾಟ್ ಕೊಹ್ಲಿಯನ್ನು ಒಮ್ಮೆ ನೋಡಲು ಎಷ್ಟೋ ಅಭಿಮಾನಿಗಳು ಮೈದಾನಕ್ಕೆ ಪಂದ್ಯ ವೀಕ್ಷಿಸಲು ಹೋಗುತ್ತಾರೆ. ಅದೇ ರೀತಿ ನಿನ್ನೆ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಐಪಿಎಲ್ ಪಂದ್ಯ ನೋಡಲು ಪೃಥ್ವಿ ಭಟ್ ತಮ್ಮ ಪತಿ ಜೊತೆಗೆ ಚಿನ್ನಸ್ವಾಮಿ ಮೈದಾನಕ್ಕೆ ಹೋಗಿದ್ದರು. ಈ ವೇಳೆ ವಿರಾಟ್ ಕೊಹ್ಲಿ ಪಂದ್ಯಕ್ಕೆ ಮುನ್ನ ಬೌಂಡರಿ ಗೆರೆ ಬಳಿ ನಿಂತು ಬ್ಯಾಟಿಂಗ್ ಪ್ರಾಕ್ಟೀಸ್ ಮಾಡುತ್ತಿದ್ದರು.
ಬೆಂಗಳೂರು: ಮನೆ ಕೆಲಸದಾಕೆಗೆ ಬೇಸಿಗೆಯ ಬೇಗೆ ತಡೆಯಲು ಒಡತಿ ಕೂಲರ್ ಖರೀದಿಸಿ ಕೊಟ್ಟು ಸರ್ಪೈಸ್ ಕೊಟ್ಟ ಗಳಿಗೆಯ ವಿಡಿಯೋವೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಇದು ನಡೆದಿರುವುದು ನಮ್ಮ ಬೆಂಗಳೂರಿನಲ್ಲೇ. ಕಳೆದ ಕೆಲವು ದಿನಗಳಿಂದ ರಾಜ್ಯದ ಎಲ್ಲಾ ಭಾಗಗಳಲ್ಲೂ ತಡೆಯಲಾಗದಷ್ಟು ಉರಿಬಿಸಿಲು, ಸೆಖೆ. ಮನೆ ಒಳಗೆ ಸದಾ ಕೂಲರ್, ಫ್ಯಾನ್ ಆನ್ ಆಗಿರಲೇಬೇಕು ಎನ್ನುವ ಪರಿಸ್ಥಿತಿ. ಆದರೆ ಬಡವರಿಗೆ ಕೂಲರ್ ಎನ್ನುವುದೆಲ್ಲಾ ಕೈಗುಟುಕದ ವಸ್ತು. ಆದರೆ ಇಲ್ಲೊಬ್ಬ ಮನೆ ಒಡತಿ ತನ್ನ ಕೆಲಸದಾಕೆಗೆ ಕೂಲರ್ ತೆಗೆದುಕೊಟ್ಟು ಹೃದಯವಂತಿಕೆ ಮೆರೆದಿದ್ದಾರೆ.
ಬೆಂಗಳೂರು: ಬಿಜೆಪಿ ಮುಖಂಡ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ದೋಷಿ ಎಂದು ಕೋರ್ಟ್ ನಿನ್ನೆ ತೀರ್ಪಿತ್ತಿದೆ. ಆದರೆ ಶಾಸಕರ ಶಿಕ್ಷೆ ಪ್ರಮಾಣ ಇಂದು ಪ್ರಕಟವಾಗಲಿದ್ದು ಅವರ ಮುಂದಿನ ನಡೆಯೇನು ಎಂಬ ಬಗ್ಗೆ ಇಲ್ಲಿದೆ ವಿಸ್ತೃತ ಮಾಹಿತಿ. ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಶಾಸಕ ವಿನಯ್ ಕುಲಕರ್ಣಿ ಈಗ ಅಪರಾಧಿ. ಜನಪ್ರತಿನಿಧಿಗಳ ಕೋರ್ಟ್ ಇಂದು ಶಿಕ್ಷೆಯ ಪ್ರಮಾಣ ಪ್ರಕಟ ಮಾಡುವ ಮುನ್ನ ವಾದ ವಿವಾದ ಆಲಿಸಿ ತೀರ್ಪು ಪ್ರಕಟಿಸಲಿದೆ. ಅವರು ಅಪರಾಧಿ ಎಂದು ಘೋಷಣೆಯಾಗುತ್ತಿದ್ದಂತೇ ಸಿಬಿಐ ಅಧಿಕಾರಿಗಳು ಕೋರ್ಟ್ ನಲ್ಲೇ ಶಾಸಕರನ್ನು ವಶಕ್ಕೆ ಪಡೆದು ಪರಪ್ಪನ ಅಗ್ರಹಾರ ಜೈಲಿಗೆ ಕರೆದೊಯ್ದಿದ್ದಾರೆ.
ಬೆಂಗಳೂರು: ರಾಜ್ಯದಲ್ಲಿ ಈ ವಾರವಂತೂ ತಾಪಮಾನದಲ್ಲಿ ಗಣನೀಯವಾಗಿ ಏರಿಕೆಯಾಗುತ್ತಿದೆ. ಇಂದು ರಾಜ್ಯದ ಈ ಕೆಲವು ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ ದಾಖಲೆಯ ಮಟ್ಟಕ್ಕೆ ಏರಿಕೆಯಾಗಲಿದೆ. ಹವಾಮಾನ ತಜ್ಞರ ಪ್ರಕಾರ ಈ ತಿಂಗಳಲ್ಲೇ ದೇಶದ ನಾನಾ ಭಾಗಗಳಲ್ಲಿ ದಾಖಲೆಯ ಮಟ್ಟಕ್ಕೆ ತಾಪಮಾನ ಏರಿಕೆಯಾಗಲಿದೆ. ಅದರ ಮುನ್ಸೂಚನೆ ಎಂಬಂತೆ ಈ ವಾರವೇ ದಿನದಿಂದ ದಿನಕ್ಕೆ ತಾಪಮಾನದಲ್ಲಿ ಏರಿಕೆ ಕಂಡುಬರುತ್ತಲೇ ಇದೆ. ನಿನ್ನೆಯಂತೇ ಇಂದೂ ವಿಪರೀತ ಬಿಸಿಲು ಕಂಡುಬರಲಿದೆ. ಇಂದು ರಾಯಚೂರು, ವಿಜಯಪುರ, ಕಲಬುರಗಿ ಜಿಲ್ಲೆಗಳಲ್ಲಿ ಇಂದು ಗರಿಷ್ಠ ತಾಪಮಾನ 41 ಡಿಗ್ರಿಗೆ ಏರಿಕೆಯಾಗಲಿದೆ.
ಇಂದು ಗುರುವಾರವಾಗಿದ್ದು ಮಹಾವಿಷ್ಣುವಿಗೆ ವಿಶೇಷವಾದ ದಿನವಾಗಿದೆ. ಇಂದು ಮಹಾವಿಷ್ಣುವಿನ ಅವತಾರವಾದ ವೆಂಕಟೇಶ್ವರ ಸ್ವಾಮಿಯ ಕುರಿತಾದ ವೆಂಕಟೇಶ್ವರ ಮಂಗಳಾಷ್ಟಕಂ ಸ್ತೋತ್ರವನ್ನು ತಪ್ಪದೇ ಓದಿ.ಶ್ರೀಕ್ಷೋಣ್ಯೌ ರಮಣೀಯುಗಂ ಸುರಮಣೀಪುತ್ರೋಽಪಿ ವಾಣೀಪತಿಃಪೌತ್ರಶ್ಚಂದ್ರಶಿರೋಮಣಿಃ ಫಣಿಪತಿಃ ಶಯ್ಯಾ ಸುರಾಃ ಸೇವಕಾಃ ।ತಾರ್ಕ್ಷ್ಯೋ ಯಸ್ಯ ರಥೋ ಮಹಶ್ಚ ಭವನಂ ಬ್ರಹ್ಮಾಂಡಮಾದ್ಯಃ ಪುಮಾನ್ಶ್ರೀಮದ್ವೇಂಕಟಭೂಧರೇಂದ್ರರಮಣಃ ಕುರ್ಯಾದ್ಧರಿರ್ಮಂಗಳಮ್ ॥ 1 ॥ ಯತ್ತೇಜೋ ರವಿಕೋಟಿಕೋಟಿಕಿರಣಾನ್ ಧಿಕ್ಕೃತ್ಯ ಜೇಜೀಯತೇಯಸ್ಯ ಶ್ರೀವದನಾಂಬುಜಸ್ಯ ಸುಷಮಾ ರಾಕೇಂದುಕೋಟೀರಪಿ ।ಸೌಂದರ್ಯಂ ಚ ಮನೋಭವಾನಪಿ ಬಹೂನ್ ಕಾಂತಿಶ್ಚ ಕಾದಂಬಿನೀಂಶ್ರೀಮದ್ವೇಂಕಟಭೂಧರೇಂದ್ರರಮಣಃ ಕುರ್ಯಾದ್ಧರಿರ್ಮಂಗಳಮ್ ॥ 2 ॥
ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಹ್ಯಾಟ್ರಿಕ್ ಗೆಲುವು ದಾಖಲಿಸಿದೆ. ಅಲ್ಲದೆ, ಅಂಕಪಟ್ಟಿಯಲ್ಲೂ ಅಗ್ರಸ್ಥಾನಕ್ಕೆ ಬಡ್ತಿ ಪಡೆದಿದೆ.ಐಪಿಎಲ್ನ 23ನೇ ಪಂದ್ಯದಲ್ಲಿ 5 ವಿಕೆಟ್ಗಳಿಂದ ಲಕ್ನೋ ಸೂಪರ್ ಜೈಂಟ್ಸ್ (ಎಲ್ಎಸ್ಜಿ) ತಂಡವನ್ನು ಮಣಿಸಿ ತವರಿನಲ್ಲಿ ಹ್ಯಾಟ್ರಿಕ್ ಗೆಲುವಿನ ನಗೆ ಬೀರಿದೆ. ಇದಕ್ಕೂ ಮೊದಲು ಬೆಂಗಳೂರಿನ ಎಂ ಚಿನ್ನಸ್ವಾಮಿ ಮೈದಾನದಲ್ಲಿ ಆರ್ಸಿಬಿ, ಸನ್ರೈಸರ್ಸ್ ಹೈದರಾಬಾದ್, ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಮಣಿಸಿತ್ತು. ಈಗ ಎಲ್ಎಸ್ಜಿ ತಂಡವನ್ನು ಮಣಿಸಿ ಅಬ್ಬರಿಸಿದೆ. ಎಲ್ಎಸ್ಜಿ ನೀಡಿದ್ದ 146 ರನ್ಗಳ ಗುರಿಯನ್ನು ಹಿಂಬಾಲಿಸಿದ ಆರ್ಸಿಬಿ ತಂಡದ ಆರಂಭ ಕಳಪೆಯಾಗಿತ್ತು. ಆರಂಭಿಕರಾದ ಫಿಲ್ ಸಾಲ್ಟ್ (7) ರನ್ ಕಲೆ ಹಾಕುವಲ್ಲಿ ವಿಫಲರಾದರು.
ಬೆಂಗಳೂರು: ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಇಂದಿನ ಐಪಿಎಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ವಿರಾಟ್ ಕೊಹ್ಲಿ ಹೊಸ ಪಾತ್ರ ನಿರ್ವಹಿಸಲಿದ್ದಾರೆ. ಕಳೆದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಅರ್ಧಶತಕ ಸಿಡಿಸಿದ್ದರೂ ನಿಧಾನಗತಿಯ ಇನಿಂಗ್ಸ್ ಆಡಿದ್ದರು ಎಂದು ಟೀಕೆಗೊಳಗಾಗಿದ್ದರು. ಆದರೆ ಕಳೆದ ಪಂದ್ಯದಲ್ಲಿ ಅವರು ಗಾಯಗೊಂಡಿದ್ದರು. ಹೀಗಾಗಿ ಫೀಲ್ಡಿಂಗ್ ಮಾಡಲು ಮೈದಾನಕ್ಕಿಳಿದಿರಲಿಲ್ಲ. ಈ ಪಂದ್ಯದಲ್ಲಿ ಅವರು ಆಡುತ್ತಾರೋ ಇಲ್ಲವೋ ಎಂಬ ಅನುಮಾನ ಅಭಿಮಾನಿಗಳಿಗಿತ್ತು. ಆದರೆ ಇಂದು ವಿರಾಟ್ ಕೊಹ್ಲಿ ಆರ್ ಸಿಬಿ ಪರ ಇಂಪ್ಯಾಕ್ಟ್ ಪ್ಲೇಯರ್ ಆಗಿ ಕಣಕ್ಕಿಳಿಯುತ್ತಿದ್ದಾರೆ.
ಮಂಡ್ಯ: ಜಲ ಸಂರಕ್ಷಣೆ, ನೈಸರ್ಗಿಕ ಕೃಷಿ, ಫಿಟ್ನೆಸ್ ಮತ್ತು ಸೇವೆ ಸೇರಿದಂತೆ ಒಂಬತ್ತು ಸಾಮೂಹಿಕ ಪ್ರತಿಜ್ಞೆಗಳನ್ನು ಕೈಗೊಳ್ಳುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ಜನರಿಗೆ ಮನವಿ ಮಾಡಿದರು.ಮಂಡ್ಯದ ಆದಿಚುಂಚನಗಿರಿ ಮಹಾಸಂಸ್ಥಾನದಲ್ಲಿಅವರು ಮಾತನಾಡಿದರು. ನೀರಿನ ಸಂರಕ್ಷಣೆ ಮತ್ತು ನೀರಿನ ಉತ್ತಮ ನಿರ್ವಹಣೆ, ತಾಯಿಯ ಹೆಸರಿನಲ್ಲಿ ಒಂದು ಸಸಿ ಮರ ನೆಡುವುದು, ಸಾರ್ವಜನಿಕ ಮತ್ತು ಧಾರ್ಮಿಕ ಸ್ಥಳಗಳಲ್ಲಿ ಸ್ವಚ್ಛತೆ, ಸ್ಥಳೀಯ ಉತ್ಪನ್ನಗಳನ್ನು ಬಲಪಡಿಸುವುದು, ದೇಶೀಯ ಪ್ರವಾಸೋದ್ಯಮವನ್ನು ಉತ್ತೇಜಿಸುವುದು, ರಾಸಾಯನಿಕಮುಕ್ತ ನೈಸರ್ಗಿಕ ಕೃಷಿಯನ್ನು ಅಳವಡಿಸಿಕೊಳ್ಳುವುದು, ರಾಗಿಯೊಂದಿಗೆ ಆರೋಗ್ಯಕರ ಆಹಾರವನ್ನು ಪ್ರೋತ್ಸಾಹಿಸುವುದು ಮತ್ತು ತೈಲ ಬಳಕೆಯನ್ನು ಕಡಿಮೆ ಮಾಡುವುದು ನಿಮ್ಮ ಆದ್ಯತೆಯಾಗಲಿ ಎಂದು ಕರೆ ನೀಡಿದರು.
ನವದೆಹಲಿ: ಬಿಹಾರದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಸಾಮ್ರಾಟ್ ಚೌಧರಿ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಹೃತ್ಪೂರ್ವಕ ಶುಭಾಶಯಗಳನ್ನು ತಿಳಿಸಿದ್ದಾರೆ.ಚೌಧರಿ ಅವರ ಶ್ರೇಷ್ಠತೆ, ಉತ್ಸಾಹ ಮತ್ತು ಅನುಭವವು ರಾಜ್ಯಕ್ಕೆ ಪ್ರಯೋಜನವನ್ನು ನೀಡುತ್ತದೆ ಮತ್ತು ಅಭಿವೃದ್ಧಿಯತ್ತ ಕೊಂಡೊಯ್ಯುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಈ ಸಂಬಂಧ ಅವರು ಎಕ್ಸ್ನಲ್ಲಿ ಬರೆದುಕೊಂಡಿದ್ದಾರೆ. ಬಿಹಾರದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಸಾಮ್ರಾಟ್ ಚೌಧರಿ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು
ಪಶ್ಚಿಮ ಬಂಗಾಳ: ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಬಿಜೆಪಿಯ ಗೆಲುವಿನ ಬಗ್ಗೆ ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಬುಧವಾರ ವಿಶ್ವಾಸ ವ್ಯಕ್ತಪಡಿಸಿದ್ದಾರೆ.ಜನರು ರಾಜ್ಯ ಸರ್ಕಾರವನ್ನು ಬದಲಾಯಿಸಲು ಅವರು ಬಹಿರಂಗವಾಗಿ ಒತ್ತಾಯಿಸುತ್ತಿದ್ದಾರೆ.ಎಎನ್ಐ ಜೊತೆ ಮಾತನಾಡಿದ ನಿರ್ಮಲಾ ಸೀತಾರಾಮನ್, ಪಶ್ಚಿಮ ಬಂಗಾಳದಲ್ಲಿ ಜನರು ಉತ್ತಮ ಸ್ಥಿತಿಯಲ್ಲಿಲ್ಲ ಮತ್ತು ಉತ್ತಮ ಆಡಳಿತವನ್ನು ಬಯಸುತ್ತಿದ್ದಾರೆ ಎಂದು ಹೇಳಿದರು.
ಗೆಳತಿಯ ಲವ್ಬೈಟ್ಗೆ ಯುವಕನೊಬ್ಬ ಸಾವನ್ನಪ್ಪಿದ ಆಘಾತಕಾರಿ ಘಟನೆ ಮೆಕ್ಸಿಕೋ ನಗರದಲ್ಲಿ ವರದಿಯಾಗಿದೆ. ಲವ್ಬೈಟ್ನಿಂದಾಗಿ ಮೆದುಳಿಗೆ ಚಲಿಸುವ ನರದಲ್ಲಿ ರಕ್ತ ಹೆಪ್ಪುಗಟ್ಟಿದೆ. ಇದರಿಂದ ಯುವಕ ಪಾರ್ಶ್ವವಾಯುವಿಗೆ ಒಳಗಾಗಿದ್ದಾರೆ. ಮೆಕ್ಸಿಕೋ ಸಿಟಿಯಿಂದ ವರದಿಯಾದ ಆಘಾತಕಾರಿ ಘಟನೆ ಇಡೀ ವಿಶ್ವವೇ ಬೆಚ್ಚಿಬಿದ್ದಿದೆ. ಪಾರ್ಶ್ವವಾಯುವಿಗೆ ಒಳಗಾದ ಯುವಕ "ಪ್ರೀತಿ ಕಡಿತ" ಪಡೆದ ನಂತರ ಸಾವನ್ನಪ್ಪಿದ್ದಾನೆ ಎಂದು ವರದಿಯಾಗಿದೆ, ಇದು ಮಾರಣಾಂತಿಕ ಪಾರ್ಶ್ವವಾಯುವಿಗೆ ಕಾರಣವಾಯಿತು.
ನವದೆಹಲಿ: ಹರಿಯಾಣದ ಶಿಕೋಹ್ಪುರದಲ್ಲಿನ ವಿವಾದಾತ್ಮಕ ಭೂ ವ್ಯವಹಾರಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ತನಿಖೆಗೆ ಸಂಬಂಧಿಸಿದಂತೆ ಉದ್ಯಮಿ ರಾಬರ್ಟ್ ವಾದ್ರಾ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ) ಸಲ್ಲಿಸಿರುವ ಆರೋಪಪಟ್ಟಿಯನ್ನು ದೆಹಲಿ ನ್ಯಾಯಾಲಯವು ಬುಧವಾರ ವಿಚಾರಣೆಗೆ ತೆಗೆದುಕೊಂಡಿದೆ. ವಿಶೇಷ ನ್ಯಾಯಾಧೀಶ ಸುಶಾಂತ್ ಚಂಗೋತ್ರಾ ಅವರು ವಾದ್ರಾ ಮತ್ತು ಇತರ ಆರೋಪಿಗಳನ್ನು ಮೇ 16 ರಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ಆದೇಶಿಸಿದ್ದಾರೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ. ವಿವರವಾದ ಆದೇಶಕ್ಕಾಗಿ ಕಾಯಲಾಗುತ್ತಿದೆ.
ಮಂಗಳೂರು: ಸ್ನೇಹಿತರೊಂದಿಗೆ ಕ್ರಿಕೆಟ್ ಆಡುತ್ತಿದ್ದಾಗ ವಿದ್ಯುತ್ ಸ್ಪರ್ಶದಿಂದ 15 ವರ್ಷದ ಬಾಲಕ ಮೃತಪಟ್ಟ ಘಟನೆ ಮಹಾಕಾಳಿಪಡ್ಪು ಬಳಿ ನಡೆದಿದೆ. ಘಟನೆ ತಡವಾಗಿ ಬೆಳಕಿಗೆ ಬಂದಿದೆ.ಮೃತ ವರುಣ್ (15) ಮಹಾಕಾಳಿಪಡ್ಪು ನಿರ್ಮಲನಗರ ನಿವಾಸಿ ಕಣ್ಣನಗೌಡ ಎಂಬುವರ ಪುತ್ರ. ಈ ಕುಟುಂಬ ಮೂಲತಃ ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಬನ್ನಿಹಟ್ಟಿ ಗ್ರಾಮದವರಾಗಿದ್ದು, ಕಳೆದ 25 ವರ್ಷಗಳಿಂದ ಮಂಗಳೂರಿನಲ್ಲಿ ನೆಲೆಸಿದೆ.ಮೂಲಗಳ ಪ್ರಕಾರ, ವರುಣ್ ತನ್ನ ಸ್ನೇಹಿತರೊಂದಿಗೆ ಮಹಾಕಾಳಿಪಡ್ಪು ಅಂಡರ್ಪಾಸ್ ಬಳಿ ಇರುವ ಭಜನಾ ಮಂದಿರದ ಬಳಿ
ಮೈಸೂರು: ಸಿದ್ದರಾಮಯ್ಯನವರೇ ಮುಂದಿನ ಐದು ವರ್ಷ ಸಿಎಂ ಆಗಲಿದ್ದಾರೆ ಎಂದು ಪುತ್ರ, ವಿಧಾನಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿದರು.ಇಲ್ಲಿ ಬುಧವಾರ ಮಾಧ್ಯಮದವರಿಗೆ ಪ್ರತಿಕ್ರಿಯಿಸಿದ ಅವರು, ಈ ವಿಚಾರವನ್ನು ಖುದ್ದು ಮುಖ್ಯಮಂತ್ರಿಯವರೇ ವಿಧಾನಮಂಡಲ ಅಧಿವೇಶನದಲ್ಲಿ ಸ್ಪಷ್ಟಪಡಿಸಿದ್ದಾರೆ. ಅವರೇ ಹೇಳಿರುವುದರಿಂದ ಬೇರೆ ಚರ್ಚೆಯೇ ಇಲ್ಲ ಎಂದರು.ಸಚಿವ ಸಂಪುಟ ಪುನರ್ರಚನೆ ಮಾಡುವಂತೆ ಕೇಳಲೆಂದು ಶಾಸಕರು ನವದೆಹಲಿಗೆ ಹೋಗಿದ್ದಾರೆ. ಇನ್ನೂ ಶಾಸಕರು ಅಲ್ಲಿಗೆ
ಮಂಡ್ಯ: ಪ್ರಧಾನಿ ನರೇಂದ್ರ ಮೋದಿ ಅವರು ಆದಿಚುಂಚನಗಿರಿ ಮಠದಲ್ಲಿ ಶ್ರೀಗುರು ಭೈರವೈಕ್ಯ ಮಂದಿರ ಉದ್ಘಾಟಿಸಿದರು. ಬಳಿಕ ಕರ್ನಾಟಕದ ಎಲ್ಲಾ ಸಹೋದರ, ಸಹೋದರಿಯರಿಗೆ ನನ್ನ ನಮಸ್ಕಾರಗಳು ಎಂದು ಕನ್ನಡದಲ್ಲೇ ಮಾತು ಆರಂಭಿಸಿ ಕನ್ನಡಿಗರ ಮನಗೆದ್ದರು. ಆದಿಚುಂಚನಗಿರಿ ಮಠ ಆಧ್ಯಾತ್ಮಿಕ ಪರಂಪರೆ ಹೊಂದಿದೆ. ಮಠವು ನೈತಿಕ ಮೌಲ್ಯಗಳಿಂದ ದಾರಿದೀಪವಾಗಿದೆ. ಕಾಲಭೈರನ ದರ್ಶನ ಪಡೆದುಕೊಂಡಿದ್ದೇನೆ. ಭೈರವೈಕ್ಯ ಮಂದಿರವನ್ನು ಉದ್ಘಾಟಿಸಿದ್ದೇನೆ. ನಿಮ್ಮೆಲ್ಲರ ದರ್ಶನ ಪಡೆದುಕೊಂಡಿದ್ದೇನೆ. ಶಬ್ದದಲ್ಲಿ ಈ ಭಾವವನ್ನು ಹೇಳಲು ಸಾಧ್ಯವಿಲ್ಲ. ಪ್ರತಿ ಸಲ ಕರ್ನಾಟಕಕ್ಕೆ ಬಂದಾಗ ಪ್ರೇರಣೆ ಸಿಗುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಬಣ್ಣಿಸಿದರು.ಆದಿಚುಂಚನಗಿರಿ ಮಠದಂತಹ ಆಧ್ಯಾತ್ಮಿಕ ಕೇಂದ್ರ ಈ ರಾಜ್ಯದಲ್ಲಿದೆ. ಇವೆಲ್ಲವೂ ಸಮಾಜಕ್ಕೆ ದಾರಿಯನ್ನು ತೋರಿಸುತ್ತಿದೆ. ಜಗತ್ತಿನಲ್ಲಿ ಎಲ್ಲೂ ನಮ್ಮ ತರಹದ ದೊಡ್ಡ ಪರಂಪರೆ ಇಲ್ಲ
ಬೆಂಗಳೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಂದು ಬೆಂಗಳೂರಿನ ಹೆಚ್ಎಎಲ್ ವಿಮಾನ ನಿಲ್ದಾಣದಲ್ಲಿ ಬಂದಿಳಿದಾಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರೀತಿಯಿಂದ ಸ್ವಾಗತಿಸಿದರು. ಪ್ರಧಾನಿ ಮೋದಿ ಅವರು ಮಂಡ್ಯದ ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡಲಿದ್ದಾರೆ.ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಮಾನ ನಿಲ್ದಾಣದಲ್ಲಿ ರಾಜ್ಯದ ಸಮಸ್ಯೆಗಳು ಹಾಗೂ ಅಭಿವೃದ್ಧಿ ಯೋಜನೆಗಳ ಕುರಿತಾದ 18 ಪ್ರಮುಖ ಬೇಡಿಕೆಗಳ 5 ಪುಟಗಳ ಮನವಿ ಪತ್ರವನ್ನು ಪ್ರಧಾನ ಮಂತ್ರಿಯವರಿಗೆ ಸಿಎಂ ಸಲ್ಲಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಐದು ಪುಟಗಳ ವಿವರವಾದ ಮನವಿಯನ್ನು ಸಲ್ಲಿಸಿ, ಪ್ರಮುಖ ಅಭಿವೃದ್ಧಿ ವಿಷಯಗಳಲ್ಲಿ ಕೇಂದ್ರ ಸರ್ಕಾರದ ತುರ್ತು ಹಸ್ತಕ್ಷೇಪವನ್ನು ಕೋರಿದರು.
ಬೆಂಗಳೂರು: ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಇಂದು ಐಪಿಎಲ್ನ ಪಂದ್ಯದಲ್ಲಿ ಲಖನೌ ಸೂಪರ್ ಜೈಂಟ್ಸ್ ತಂಡವನ್ನು ಎದುರಿಸಲಿದೆ. ಈ ಪಂದ್ಯಕ್ಕೆ ವಿರಾಟ್ ಕೊಹ್ಲಿ ಲಭ್ಯವಿದ್ದರಾ ಎಂಬ ಅನುಮಾನ ಹೆಚ್ಚಿದೆ.ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಗಾಯಗೊಂಡಿದ್ದ ವಿರಾಟ್ ಕೊಹ್ಲಿ ಬ್ಯಾಟಿಂಗ್ ಬಳಿಕ ವಿಶ್ರಾಂತಿ ಮೊರೆ ಹೋಗಿದ್ದರು. ಹೀಗಾಗಿ, ಲಖನೌ ಸೂಪರ್ ಜೈಂಟ್ಸ್ ವಿರುದ್ಧದ ಇಂದಿನ ಪಂದ್ಯಕ್ಕೆ ಅಲಭ್ಯರಾಗುವ ಸಾಧ್ಯತೆಯಿದೆ. ಅಭ್ಯಾಸದ ವೇಳೆ ಕಾಲಿಗೆ ಪಟ್ಟಿ ಕಟ್ಟಿಕೊಂಡು ಕಾಣಿಸಿಕೊಂಡಿದ್ದು, ಅವರು ಸಂಪೂರ್ಣ ಫಿಟ್ ಆಗದಿದ್ದರೆ ತಂಡದಿಂದ ಹೊರಗುಳಿಯುವ ಸಾಧ್ಯತೆ ಇದೆ ಎಂದು ವರದಿಯಾಗಿದೆ. ಇದೀಗ ವಿರಾಟ್ ಕೊಹ್ಲಿಯ ಗಾಯದ ಸಮಸ್ಯೆಯೇ ಹಾಲಿ ಚಾಂಪಿಯನ್ ಆರ್ಸಿಬಿ ತಂಡಕ್ಕೆ ದೊಡ್ಡ ಹಿನ್ನಡೆಯಾಗಿ ಪರಿಣಮಿಸುವ ಸಾಧ್ಯತೆಯಿದೆ.
ವಿಶ್ವದ ಅತ್ಯಂತ ಹಿರಿಯ 69 ವರ್ಷದ ಗೊರಿಲ್ಲಾಗೆ ಅದ್ಧೂರಿಯಾಗಿ ಬರ್ತಡೇ ಆಚರಿಸಲಾಗಿದೆ. ಬರ್ಲಿನ್ ಮೃಗಾಲಯದಲ್ಲಿರುವ ಗೊರಿಲ್ಲಾಗೆ ಚೆರ್ರಿ ಟೊಮ್ಯಾಟೊ, ಸೇರಿದಂತೆ ಹಣ್ಣು, ತರಕಾರಿಗಳನ್ನು ಬಡಿಸಿ 69ನೇ ಹುಟ್ಟುಹಬ್ಬವನ್ನು ಆಚರಿಸಲಾಯಿತು. ಆದರೆ ಹುಟ್ಟುಹಬ್ಬದ ಕೇಕ್ ಇಲ್ಲ, ಏಕೆಂದರೆ ವಯಸ್ಸಾದ ಪ್ರೈಮೇಟ್ಗೆ ಸಕ್ಕರೆ ಆರೋಗ್ಯಕರವಲ್ಲ.ಫಾಟೌ ಎಂಬ ಹೆಸರಿನ ಗೊರಿಲ್ಲವನ್ನು ಪಾಶ್ಚಿಮಾತ್ಯ ತಗ್ಗು ಪ್ರದೇಶದಿಂದ 1959 ರಲ್ಲಿ ಆಗಿನ ಪಶ್ಚಿಮ ಬರ್ಲಿನ್ಗೆ ಆಗಮಿಸಿತು. ಆ ಸಮಯದಲ್ಲಿ ಆಕೆಗೆ ಸುಮಾರು 2 ವರ್ಷ ವಯಸ್ಸಾಗಿತ್ತು ಎಂದು ನಂಬಲಾಗಿತ್ತು, ಆದರೂ ಆಕೆಯ ನಿಖರವಾದ ಜನ್ಮ ದಿನಾಂಕ
ಫತೇಘರ್ ಸಾಹಿಬ್: ಮಂಗಳವಾರ ತಡರಾತ್ರಿ ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಬಸ್ ಪಲ್ಟಿಯಾದ ಪರಿಣಾಮ 22ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಫತೇಘರ್ ಸಾಹಿಬ್ ಜಿಲ್ಲೆಯ ಬಸ್ಸಿ ಪಠಾನಾ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಚಾಲಕ ಸೇರಿದಂತೆ ಎಂಟು ಮಂದಿ ಸಾವನ್ನಪ್ಪಿದ್ದಾರೆ. ಬಲಿಪಶುಗಳು ಮುಖ್ಯ ಮಜ್ರಾ ಗ್ರಾಮದ ನಿವಾಸಿಗಳಾಗಿದ್ದು, ಶ್ರೀ ಆನಂದಪುರ ಸಾಹಿಬ್ನಲ್ಲಿ ಬೈಸಾಖಿ ಆಚರಣೆಯಿಂದ ಹಿಂದಿರುಗುತ್ತಿದ್ದಾಗ ಅವರ ಗಮ್ಯಸ್ಥಾನದಿಂದ ಕೆಲವೇ ಕಿಲೋಮೀಟರ್ ದೂರದಲ್ಲಿರುವ ಮೊರಿಂಡಾ-ಚುನ್ನಿ ರಸ್ತೆಯ ಹಿಮ್ಮತ್ಪುರ ಗ್ರಾಮದ ಬಳಿ ಅಪಘಾತ ಸಂಭವಿಸಿದೆ.
ಮುಂಬೈ: ತೀವ್ರವಾದ ಶಾಖದ ಸಮಯದಲ್ಲಿ ಪ್ರಯಾಣಿಕರಿಗೆ ಪರಿಹಾರವನ್ನು ಒದಗಿಸಲು ಮತ್ತು ಸುರಕ್ಷತೆಯನ್ನು ಸುಧಾರಿಸಲು ಮುಂಬೈ ಭಾರತದ ಮೊದಲ ಮುಚ್ಚಿದ ಬಾಗಿಲು, ನಾನ್-ಎಸಿ ಸ್ಥಳೀಯ ರೈಲನ್ನು ಪರಿಚಯಿಸಲು ಸಿದ್ಧವಾಗಿದೆ.ಈ ರೈಲನ್ನು ಸ್ವಯಂಚಾಲಿತ ಬಾಗಿಲು ಮುಚ್ಚುವ ಕಾರ್ಯವಿಧಾನದೊಂದಿಗೆ ವಿನ್ಯಾಸಗೊಳಿಸಲಾಗಿದೆ, ಇದು ಹಿಂದೆ ದುಬಾರಿ ಹವಾನಿಯಂತ್ರಿತ ಸ್ಥಳೀಯ ರೈಲುಗಳಿಗೆ ವಿಶೇಷವಾದ ವೈಶಿಷ್ಟ್ಯವಾಗಿದೆ.ಬಲವಂತದ ವಾತಾಯನ ಘಟಕಗಳನ್ನು ಪ್ರಮಾಣಿತ ಸ್ಥಳೀಯ ರೈಲುಗಳಿಗಿಂತ ಹೆಚ್ಚಿನ ಗಾಳಿ-ಬದಲಾವಣೆ ದರವನ್ನು ಒದಗಿಸಲು
ನವದೆಹಲಿ: ಬಿಹಾರದ ಮುಖ್ಯಮಂತ್ರಿಯಾಗಿ ಸಾಮ್ರಾಟ್ ಚೌಧರಿ ಬುಧವಾರ ಪ್ರಮಾಣ ವಚನ ಸ್ವೀಕರಿಸಿದ್ದು, ಭಾರತೀಯ ಜನತಾ ಪಕ್ಷದಿಂದ ರಾಜ್ಯದಲ್ಲಿ ಉನ್ನತ ಹುದ್ದೆಯನ್ನು ಅಲಂಕರಿಸಿದ ಮೊದಲ ನಾಯಕ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ರಾಜ್ಯಸಭೆಗೆ ನಾಮನಿರ್ದೇಶನಗೊಂಡ ನಂತರ ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ಅವರ ರಾಜೀನಾಮೆ ನೀಡಿದ್ದರು. 57 ವರ್ಷದ ಸಾಮ್ರಾಟ್ ಚೌಧರಿ ಅವರು ಮಂಗಳವಾರ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿದ್ದು, ಅವರ ನೇಮಕಕ್ಕೆ ದಾರಿ ಮಾಡಿಕೊಟ್ಟಿದ್ದಾರೆ. "ಎನ್ಡಿಎ ಶಾಸಕಾಂಗ ಪಕ್ಷದ ಸಭೆ ಶೀಘ್ರದಲ್ಲೇ ನಡೆಯಲಿದೆ. ಈ ಸಭೆಯಲ್ಲಿ ಸಾಮ್ರಾಟ್
ಚೆನ್ನೈ: 2026ರ ಐಪಿಎಲ್ ಆವೃತ್ತಿಯಲ್ಲಿ ಮೂರು ಬಾರಿಯ ಚಾಂಪಿಯನ್ ಕೋಲ್ಕತ್ತ ನೈಟ್ ರೈಡರ್ಸ್ ತಂಡವು ಇನ್ನೂ ಗೆಲುವಿನ ಖಾತೆಯನ್ನು ತೆರೆದಿಲ್ಲ. ಈ ಮಧ್ಯೆ ತಂಡದ ನಾಯಕ ಅಜಿಂಕ್ಯ ರಹಾನೆಗೆ ಮತ್ತೊಂದು ಶಾಕ್ ಎದುರಾಗಿದೆ. ಮಂಗಳವಾರ ಚೆಪಾಕ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಅಗತ್ಯವಾದ ಓವರ್ ರೇಟ್ ಕಾಯ್ದುಕೊಳ್ಳಲು ವಿಫಲವಾಗಿದೆ. ಐಪಿಎಲ್ ನೀತಿ ಸಂಹಿತೆಯ ಆರ್ಟಿಕಲ್ 2.22ರ ಅಡಿಯಲ್ಲಿ ಕನಿಷ್ಠ ಓವರ್ ರೇಟ್ಗೆ ಸಂಬಂಧಿಸಿದ್ದು, ಮೊದಲ ಬಾರಿ ಉಲ್ಲಂಘಿಸಿದ್ದಕ್ಕಾಗಿ 12 ಲಕ್ಷ ರೂ. ದಂಡ ವಿಧಿಸಲಾಗಿದೆ ಎಂದು ಬಿಸಿಸಿಐ ತಿಳಿಸಿದೆ.ಈ ಆವೃತ್ತಿಯಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಈವರೆಗೂ 5 ಪಂದ್ಯಗಳನ್ನಾಡಿದ್ದು, ಒಂದು ಪಂದ್ಯದಲ್ಲಿಯೂ ಗೆಲುವು ಸಾಧಿಸಿಲ್ಲ. ಶುಕ್ರವಾರ ಗುಜರಾತ್ ಟೈಟನ್ಸ್ ಜೊತೆ ಕೆಕೆಆರ್ ತನ್ನ 6ನೇ ಪಂದ್ಯವನ್ನು ಆಡಲಿದೆ.