ಬಿಗ್ಬಾಸ್ ಸೀಸನ್ 12ರಲ್ಲಿ ಟಾಸ್ಕ್ ಮಾಸ್ಟರ್ ಎಂದೇ ಹೆಚ್ಚು ಗುರುತಿಸಿಕೊಂಡಿದ್ದ ಧನುಷ್ ಗೌಡ ಇದೀಗ ದೊಡ್ಮನೆಯಿಂದ ಎಲಿಮಿನೇಟ್ ಆಗಿ ಹೊರಬಂದಿದ್ದಾರೆಂಬ ಸುದ್ದಿ ಹರಿದಾಡುತ್ತಿದೆ. ಈ ಸೀಸನ್ನಲ್ಲಿ ಸ್ಟ್ರಾಂಗ್ ಸ್ಪರ್ಧಿಗಳಲ್ಲಿ ಒಬ್ಬರಾಗಿದ್ದ ಧನುಷ್ ಅವರು ಇಬ್ಬರು ಫೈನಲ್ ಸ್ಪರ್ಧಿಗಳಲ್ಲಿ ಒಬ್ಬರಾಗಿರುತ್ತಾರೆಂಬ ಭರವಸೆಯಿತ್ತು. ಟಿಕೆಟ್ ಟು ಫಿನಾಲೆ ಟಾಸ್ಕ್ನಲ್ಲಿ ವಿನ್ನರ್ ಆಗಿ ಗ್ರ್ಯಾಂಡ್ ಫಿನಾಲೆ ವೇದಿಕೆಗೆ ಡೈರೆಕ್ಟ್ ಆಗಿ ಪ್ರವೇಶಿಸಿದ್ದ ಧನುಷ್ ಇದೀಗ ದೊಡ್ಮನೆಯಿಂದ ಹೊರಬಂದಿದ್ದಾರೆಂಬ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಧನುಷ್ ಅವರು ಬಿಗ್ಬಾಸ್ಗೆ ಬಂದಮೇಲಿಂದಲೂ ಸ್ಟ್ರಾಂಗ್ ಅಭ್ಯರ್ಥಿಯಾಗಿ ಗುರುತಿಸಿಕೊಂಡಿದ್ದು, ಟಾಸ್ಕ್ ಮಾಸ್ಟರ್ ಎಂದೇ
ಬೆಂಗಳೂರು: ಕನ್ನಡತಿ, ಆಫ್ ಸ್ಪಿನ್ನರ್ ಶ್ರೇಯಾಂಕ ಪಾಟೀಲ ಅವರು ಮಹಿಳಾ ಪ್ರೀಮಿಯರ್ ಲೀಗ್ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪರ ಮಿಂಚುತ್ತಿದ್ದಾರೆ. ಗಾಯದಿಂದ ಚೇತರಿಸಿಕೊಂಡಿರುವ ಅವರು ಮತ್ತೆ ಸ್ಪರ್ಧಾ ಕಣಕ್ಕೆ ಮರಳಿದ್ದಾರೆ. ಆರ್ಸಿಬಿಗೆ ಆಡುತ್ತಿರುವ ಶ್ರೇಯಾಂಕ ಕಳೆದ ನಾಲ್ಕು ಪಂದ್ಯಗಳಲ್ಲಿ ಎಂಟು ವಿಕೆಟ್ ಕಬಳಿಸಿದ್ದಾರೆ. ಅದರಲ್ಲೂ ಗುಜರಾತ್ ಜೈಂಟ್ಸ್ ವಿರುದ್ಧ ಐದು ವಿಕೆಟ್ ಗೊಂಚಲು ಪಡೆದು, ವೈಯಕ್ತಿಕ ಶ್ರೇಷ್ಠ ಸಾಧನೆ ಮೆರೆದಿದ್ದಾರೆ. ಅದರ ಬೆನ್ನಲ್ಲೇ ಅವರಿಗೆ ಭಾರತ ಟಿ20 ತಂಡಕ್ಕೆ ಪ್ರವೇಶ ಪಡೆದಿದ್ದಾರೆ. 23 ವರ್ಷದ ಶ್ರೇಯಾಂಕ ಅವರು 2024ರಲ್ಲಿ ಡಬ್ಲ್ಯುಪಿಎಲ್ನಲ್ಲಿ ಗರಿಷ್ಠ ವಿಕೆಟ್ ಪಡೆದ ಬೌಲರ್ ಎನಿಸಿದ್ದರು. ನಂತರದಲ್ಲಿ ಅವರು ಭಾರತ ತಂಡದಲ್ಲಿ ಸ್ಥಾನ ಪಡೆದಿದ್ದರು. ಕಳೆದ ಒಂದು ವರ್ಷದಿಂದ ಗಾಯದಿಂದ ಬಳಲುತ್ತಿದ್ದ ಅವರು ಚೇತರಿಸಿಕೊಂಡು, ಭಾರತ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.
ಚಳಿಗಾಲದಲ್ಲಿ ಸಮಯದಲ್ಲಿ ಸಿಗುವ ಹೆಚ್ಚಾಗಿ ಸಿಗುವ ಸಿಹಿ ಗೆಣಸನ್ನು ನಮ್ಮ ಆಹಾರದಲ್ಲಿ ಸೇರಿಸುವುದರಿಂದ ಸಾಕಷ್ಟು ಆರೋಗ್ಯ ಪ್ರಯೋಜನಗಳನ್ನು ಕಾಣಬಹುದು. ಸಿಹಿ ಗೆಣಸು ಕೇವಲ ರುಚಿಕರ ಮಾತ್ರವಲ್ಲ, ಆರೋಗ್ಯಕ್ಕೆ ಅತ್ಯಗತ್ಯವಾದ ಅನೇಕ ಪೋಷಕಾಂಶಗಳ ಗಣಿಯಾಗಿದೆ. ಇದರ ಕೆಲ ಪ್ರಯೋಜನಗಳು ಇಲ್ಲಿದೆ. 1. ಹೆಚ್ಚಿಮ ಉತ್ತಮ ಪೋಷಕಾಂಶ: ಸಿಹಿ ಗೆಣಸಿನಲ್ಲಿ ವಿಟಮಿನ್ A (ಬೀಟಾ-ಕ್ಯಾರೋಟಿನ್ ರೂಪದಲ್ಲಿ), ವಿಟಮಿನ್ C, ಮ್ಯಾಂಗನೀಸ್, ವಿಟಮಿನ್ B6 ಮತ್ತು ಪೊಟ್ಯಾಸಿಯಮ್ ಹೇರಳವಾಗಿದೆ. ಇದು ದೇಹಕ್ಕೆ ಶಕ್ತಿಯನ್ನು ನೀಡುವ ಉತ್ತಮ ಕಾರ್ಬೋಹೈಡ್ರೇಟ್ ಹೊಂದಿದೆ.2. ಕಣ್ಣಿನ ಆರೋಗ್ಯಕ್ಕೆ ಸಹಕಾರಿ
ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೂರು ಪಂದ್ಯಗಳ ODI ಸರಣಿಯು ನಿರ್ಣಾಯಕ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ಶುಭ್ಮನ್ ಗಿಲ್ ಟಾಸ್ ಗೆದ್ದು ಮೊದಲು ಫೀಲ್ಡಿಂಗ್ ಆಯ್ದುಕೊಂಡಿದ್ದಾರೆ. ಭಾನುವಾರ ಇಂದೋರ್ನಲ್ಲಿ ಮೂರನೇ ಮತ್ತು ಅಂತಿಮ ODI ಪಂದ್ಯದಲ್ಲಿ ಎರಡೂ ತಂಡಗಳು ಮುಖಾಮುಖಿಯಾಗಲಿದ್ದು, ರೋಚಕ ಅಂತ್ಯ ಕಾಣಲಿದೆ. ಸರಣಿ 1-1 ರಲ್ಲಿ ಸಮಬಲಗೊಂಡಿರುವುದರಿಂದ, ಪಂದ್ಯವು 'ಮಾಡು ಇಲ್ಲವೇ ಮಡಿ' ಸ್ಪರ್ಧೆಯಾಗಿ ಮಾರ್ಪಟ್ಟಿದ್ದು, ವಿಜೇತರು ಸರಣಿಯನ್ನು ವಶಪಡಿಸಿಕೊಳ್ಳುತ್ತಾರೆ. ಮೊದಲ ODI ಪಂದ್ಯವನ್ನು ಗೆದ್ದು ಎರಡನೇ ಪಂದ್ಯದಲ್ಲಿ ಮುನ್ನಡೆಯನ್ನು ಕಳೆದುಕೊಂಡ ನಂತರ ಭಾರತವು ತಮ್ಮ ತವರು ಪ್ರೇಕ್ಷಕರ ಮುಂದೆ ಸರಣಿ ಗೆಲುವಿನೊಂದಿಗೆ ವರ್ಷವನ್ನು ಪ್ರಾರಂಭಿಸಲು ಉತ್ಸುಕವಾಗಿದೆ.
ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಮುಂದುವರೆದಿದ್ದು, ಹಿಂದೂಗಳ ಸುರಕ್ಷತೆ ಮತ್ತು ಹಿತಾಸಕ್ತಿಗಾಗಿ ಭಾರತ ಸರ್ಕಾರಕ್ಕೆ ಕನ್ನಡ ನಟ ಅನಿರುದ್ಧ್ ಅವರು ವಿಶೇಷ ಮನವಿ ಮಾಡಿದ್ದಾರೆ. ಈ ಸಂಬಂಧ ಅವರು ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಬರೆದುಕೊಂಡಿದ್ದಾರೆ. ಬಾಂಗ್ಲಾದೇಶದಲ್ಲಿ ಹಿಂದೂಗಳು ಹತ್ಯೆಗೊಳಗಾಗುತ್ತಿರುವ ಸುದ್ದಿಯನ್ನು ಕೇಳುವುದು ಅತ್ಯಂತ ನೋವುತುಂಬಿದ ಹಾಗೂ ಹೃದಯವಿದ್ರಾವಕ ಸಂಗತಿ. ಯಾವುದೇ ನಿರಪರಾಧ ಜೀವದ ನಷ್ಟವೂ ಮಾನವೀಯತೆಯ ಸೋಲು.
ಮುಂಬೈ: ನಟ-ಗಾಯಕ ಮತ್ತು ಭಾರತೀಯ ಜನತಾ ಪಕ್ಷದ (ಬಿಜೆಪಿ) ಸಂಸದ ಮನೋಜ್ ತಿವಾರಿ ಅವರ ಮುಂಬೈ ನಿವಾಸದಲ್ಲಿ ಕಳ್ಳತನ ನಡೆದಿದ್ದು, ₹5.40 ಲಕ್ಷ ಮೌಲ್ಯದ ನಗದು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಉದ್ಯೋಗಿಯನ್ನು ಬಂಧಿಸಲಾಗಿದೆ. ಅಂಧೇರಿ ಪಶ್ಚಿಮದ ಶಾಸ್ತ್ರಿ ನಗರ ಪ್ರದೇಶದಲ್ಲಿರುವ ಸುಂದರ್ಬನ್ ಅಪಾರ್ಟ್ಮೆಂಟ್ನಲ್ಲಿರುವ ತಿವಾರಿ ಅವರ ಫ್ಲಾಟ್ನಲ್ಲಿ ಈ ಘಟನೆ ನಡೆದಿದ್ದು, ಸುಮಾರು ₹5.40 ಲಕ್ಷ ನಗದು ಕಳವು ಮಾಡಲಾಗಿದೆ.ಮನೋಜ್ ತಿವಾರಿ ಅವರ ಮ್ಯಾನೇಜರ್ ಪ್ರಮೋದ್ ಜೋಗೇಂದ್ರ ಪಾಂಡೆ ಅವರು ಅಂಬೋಲಿ ಪೊಲೀಸ್ ಠಾಣೆಯಲ್ಲಿ ನೀಡಿದ
ಬೆಂಗಳೂರು: ಬಿಗ್ಬಾಸ್ ಸೀಸನ್ 12ರ ಸೀಸನ್ನ ಕಿಚ್ಚನ ಚಪ್ಪಾಳೆಯನ್ನು ಧ್ರುವಂತ್ ನೀಡಿದ ವಿಚಾರವಾಗಿ ಕಿಚ್ಚ ಸುದೀಪ್ ಅವರನ್ನು ಭಾರೀ ಟೀಕೆ ಮಾಡಿ, ಟ್ರೋಲ್ ಮಾಡಲಾಯಿತು. ಧ್ರುವಂತ್ ಬದಲು ಗಿಲ್ಲಿಗೆ ಸೀಸನ್ ಚಪ್ಪಾಳೆ ಕೊಡಬಹುದಿತ್ತು ಎಂಬುದು ಅನೇಕರ ಅಭಿಪ್ರಾಯ ಆಗಿತ್ತು. ಸುದೀಪ್ ಅವರನ್ನೇ ಅನೇಕರು ಟೀಕಿಸಿದರು. ಇದೀಗ ಈ ವಿಚಾರ ಸಂಬಂಧ ಸುದೀಪ್, ಬಿಗ್ಬಾಸ್ ಪ್ರೀ ಫಿನಾಲೆ ವೇದಿಕೆಯಲ್ಲಿ ಉತ್ತರಿಸಿದ್ದಾರೆ. ಈ ಬಿಗ್ಬಾಸ್ ನಡೆಯುವುದು ಒಬ್ಬರಿಂದ ಅಲ್ಲ, ಅಥವಾ ಕಿಚ್ಚ ಸುದೀಪ್ನಿಂದಲೂ ಅಲ್ಲ. ಕಿಚ್ಚನ ಚಪ್ಪಾಳೆ ನನ್ನ ಅನಿಸಿಕೆ. ಯಾರು ಅರ್ಹರೋ ಅವರನ್ನು ಹುರಿದುಂಬಿಸಬೇಕು ಎಂದು ಶಾಲೆಯಲ್ಲಿ ಟೀಚರ್ ಹೇಳಿಕೊಟ್ಟಿದ್ದರು. ಬಿಗ್ ಬಾಸ್ ಎಲ್ಲರ ಕೊಡುಗೆ.
ಕಾರವಾರ: ಕದ್ರಾ ನಿವಾಸಿ ರಿಶೇಲ್ ಡಿಸೋಜಾ ಆತ್ಮಹತ್ಯೆ ಪ್ರಕರಣದ ತನಿಖೆಯಲ್ಲಿ ನಿರ್ಲಕ್ಷ್ಯ ವಹಿಸಿದ ಆರೋಪದಡಿಯಲ್ಲಿ ಕದ್ರಾ ಠಾಣೆ ಪಿಎಸ್ಐ ಅವರನ್ನು ಅಮಾನತು ಮಾಡಿದ್ದಾರೆ. ರೀನಾ ಹಾಗೂ ಕ್ರಿಸ್ತೋದ್ ಡಿಸೋಜಾ ಪುತ್ರಿ ರಿಶೇಲ್ ಡಿಸೋಜಾ ಇತ್ತೀಚೆಗೆ ಆತ್ಮಹತ್ಯೆಗೆ ಶರಣಾಗಿದ್ದರು. ಪ್ರಕರಣದ ಪ್ರಾಥಮಿಕ ಹಂತದಲ್ಲೇ ನಿಷ್ಕಾಳಜಿ, ಆರೋಪಿಯನ್ನು ಬಂಧಿಸುವಲ್ಲಿ ವಿಫಲವಾದ ವಿಚಾರದಲ್ಲಿ ಇದೀಗ ಕದ್ರಾ ಪೊಲೀಸ್ ಠಾಣೆಯ ಪಿಎಸ್ಐ ಸುನೀಲ್ ಬಂಡಿವಡ್ಡರ್ ಅಮಾನತು ಮಾಡಲಾಗಿದೆ.
ಬೆಂಗಳೂರು: ಕಳೆದ ಎರಡು ಮೂರು ದಿನಗಳಿಂದ ಚಳಿ ಸಮತೋಲನದಲ್ಲಿದ್ದು, ಯಾವುದೇ ಜಿಲ್ಲೆಯಲ್ಲಿ ಮಳೆಯ ವರದಿ ದಾಖಲಾಗಿಲ್ಲ. ಇನ್ನೂ ಬೆಂಗಳೂರು, ಚಿಕ್ಕಬಳ್ಳಾಪುರ, ಕೋಲಾರ, ಚಿಕ್ಕಮಗಳೂರು, ತುಮಕೂರು, ಮೈಸೂರು, ಹಾಸನ, ಮಂಡ್ಯ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನ 8.8°C ರಿಂದ 11.7°C ದಾಖಲಾಗಿದೆ.ಇನ್ನೂ ರಾಜ್ಯದಲ್ಲಿ ಹವಾಮಾನ ಮುನ್ಸೂಚನೆ ಪ್ರಕಾರ ಮಳೆಯ ಮುನ್ಸೂಚನೆಯಿಲ್ಲ. ಬೆಂಗಳೂರಲ್ಲಿ ಚಳಿ ಮುಂದುವರೆಯಲಿದೆ. ಬೆಳಗಿನ ಸಮಯದಲ್ಲಿ ಕೆಲವು ಪ್ರದೇಶಗಳಲ್ಲಿ ಮಂಜು ಅಥವಾ ಮಂಜು ಬೀಳುವ ಸಾಧ್ಯತೆ ಇದೆ. ಮಳೆಯ ಮುನ್ಸೂಚನೆಯನ್ನು ನೀಡಲಾಗಿಲ್ಲ.ಕಳೆದ 12 ಗಂಟೆಗಳ ಹವಾಮಾನ ಇಲಾಖೆ ಮಾಹಿತಿಯ ಪ್ರಕಾರ, ಬೆಂಗಳೂರು ನಗರದಲ್ಲಿ ಗರಿಷ್ಠ ತಾಪಮಾನ 29.8 ಡಿಗ್ರಿ
ನವದೆಹಲಿ: ಕಳೆದ ತಿಂಗಳು ವಿಮಾನಯಾನ ಸೇವೆಯಲ್ಲಿ ಆಗಿರುವ ಭಾರಿ ವ್ಯತ್ಯಯಕ್ಕೆ ಸಂಬಂಧಿಸಿದಂತೆ ನಾಗರಿಕ ವಿಮಾನಯಾನಗಳ ಮಹಾನಿರ್ದೇಶನಾಲಯವು ಇಂಡಿಗೋ ವಿಮಾನಯಾನ ಸಂಸ್ಥೆಯ ವಿರುದ್ಧ ಕಠಿಣ ಕ್ರಮ ಕೈಗೊಂಡಿದೆ. ಬರೋಬ್ಬರಿ ₹ 22.2 ಕೋಟಿ ದಂಡ ವಿಧಿಸಿದೆ.ಡಿಸೆಂಬರ್ 3 ರಿಂದ 5 ರ ವರೆಗೆ ಇಂಡಿಗೋ ವಿಮಾನಗಳ ಕಾರ್ಯಾಚರಣೆಯಲ್ಲಿ ಭಾರೀ ವ್ಯತ್ಯಯ ಉಂಟಾಗಿತ್ತು. 2,507 ವಿಮಾನಗಳ ಹಾರಾಟ ರದ್ದುಗೊಳಿಸಲಾಗಿತ್ತು, ಜೊತೆಗೆ 1,852 ವಿಮಾನಗಳ ಹಾರಾಟದಲ್ಲಿ ವಿಳಂಬವಾಗಿತ್ತು. ಇದರಿಂದ 3 ಲಕ್ಷಕ್ಕೂ ಅಧಿಕ ಪ್ರಯಾಣಿಕರು ವಿವಿಧ ವಿಮಾನ ನಿಲ್ದಾಣಗಳಲ್ಲಿ ಸಿಲುಕಿದ್ದರು. ಕಳೆದ ತಿಂಗಳು ಇಂಡಿಗೋ ವಿಮಾನಗಳ ವೇಳಾಪಟ್ಟಿಯಲ್ಲಿ ಭಾರಿ ವ್ಯತ್ಯಯವಾದ ಹಿನ್ನೆಲೆಯಲ್ಲಿ ರಚಿಸಲಾಗಿದ್ದ ನಾಲ್ವರು ಸದಸ್ಯರ ಸಮಿತಿ ನೀಡಿದ ವರದಿಯನ್ನು ಶನಿವಾರ ರಾತ್ರಿ ನಿಯಂತ್ರಕ ಸಂಸ್ಥೆ ಬಿಡುಗಡೆ ಮಾಡಿದೆ.
ಬೆಂಗಳೂರು: ಕನ್ನಡದ ಜನಪ್ರಿಯ ರಿಯಾಲಿಟಿ ಶೋ ಬಿಗ್ಬಾಸ್ ಕೊನೆಯ ಘಟ್ಟಕ್ಕೆ ತಲುಪಿದೆ. ಇನ್ನು ಕೆಲವೇ ಗಂಟೆಯಲ್ಲಿ ಬಿಗ್ಬಾಸ್ ಕಿರೀಟ ಯಾರ ಮಡಿಲಿಗೆ ಸೇರಲಿದೆ ಎಂಬುದು ಗೊತ್ತಾಗಲಿದೆ. ಬಿಗ್ಬಾಸ್ಗೂ 37 ಕೋಟಿಗೂ ಅಧಿಕ ವೋಟ್ಗಳು ಬಂದಿವೆ ಎನ್ನಲಾಗಿದೆ.12ರ ಆವೃತ್ತಿಯ ಬಿಗ್ ಬಾಸ್ ಗ್ರ್ಯಾಂಡ್ ಫಿನಾಲೆಗೆ ಕೌಂಟ್ಡೌನ್ ಶುರುವಾಗಿದೆ. ಈ ಬಾರಿಯ ಬಿಗ್ ಬಾಸ್ ವಿನ್ನರ್ ಯಾರಾಗ್ತಾರೆ ಅನ್ನೋ ಕುತೂಹಲ ಹೆಚ್ಚಾಗ್ತಿದೆ. ಎಲ್ಲೆಡೆ ಅಭಿಮಾನಿಗಳು ತಮ್ಮ ನೆಚ್ಚಿನ ಸ್ಪರ್ಧಿಗಳ ಗೆಲುವಿಗೆ ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ. ಗಿಲ್ಲಿ ನಟ, ರಕ್ಷಿತಾ ಶೆಟ್ಟಿ ಮತ್ತು ಅಶ್ವಿನಿ ಗೌಡ ನಡುವೆ ತೀವ್ರ ಪೈಪೋಟಿಯಿದೆ. ಆದರೆ, ಗಿಲ್ಲಿ ನಟನ ಮೇಲೆ ಹೆಚ್ಚಿನ ನಿರೀಕ್ಷೆಯಿದೆ.
ಮುಂಬೈ: ಮಹಿಳಾ ಪ್ರೀಮಿಯರ್ ಲೀಗ್ನ ಹಾಲಿ ಆವೃತ್ತಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಗೆಲುವಿನ ಓಟ ಮುಂದುವರಿದಿದೆ.ಸ್ಮೃತಿ ಮಂದಾನ ನಾಯಕತ್ವದ ಆರ್ಸಿಬಿ ತಂಡವು ಶನಿವಾರ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಎಂಟು ವಿಕೆಟ್ಗಳಿಂದ ಮಣಿಸಿತು. ಇದರೊಂದಿಗೆ ಸತತ ನಾಲ್ಕನೇ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಭದ್ರಪಡಿಸಿಕೊಂಡಿದೆ.ನಾಯಕಿ ಸ್ಮೃತಿ ಮಂದಾನ (96;61ಎ) , ಜಾರ್ಜಿಯಾ ವೋಲ್ (54;42ಎ) ಅರ್ಧಶತಕಗಳ ಬ್ಯಾಟಿಂಗ್ ನೆರವಿನಿಂದ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಎಂಟು ವಿಕೆಟ್ಗಳ ಭರ್ಜರಿ ಗೆಲುವು ಸಾಧಿಸಿದೆ.ಮುಂಬೈನ ಡಿವೈ ಪಾಟೀಲ ಕ್ರೀಡಾಂಗಣದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಶಫಾಲಿ ವರ್ಮಾ ಅವರ ಅರ್ಧಶತಕದ ನೆರವಿನಿಂದ 20 ಓವರ್ಗಳಲ್ಲಿ 166 ರನ್ಗಳಿಗೆ ಆಲೌಟ್ ಆಯಿತು. ಗುರಿ ಬೆನ್ನಟ್ಟಿದ ಆರ್ಸಿಬಿ 18.2 ಓವರ್ಗಳಲ್ಲೇ 2 ವಿಕೆಟ್ ನಷ್ಟಕ್ಕೆ 169 ರನ್ ಬಾರಿಸಿ ಗೆಲುವು ಸಾಧಿಸಿತು.
ಬೆಂಗಳೂರು: ಇದುವರೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಕ್ರಿಕೆಟ್ ಪಂದ್ಯ ನಡೆಯುತ್ತದೆಯಾ ಎಂಬ ಚರ್ಚೆಗೆ ಕೊನೆಗೆ ಇದೀಗ ಉತ್ತರ ಸಿಕ್ಕಿದೆ. ಇದೀಗ ಆರ್ಸಿಬಿ ಅಭಿಮಾನಿಗಳಿಗೆ ಸಿಹಿ ಸುದ್ದಿ ಸಿಕ್ಕಿದೆ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಪಂದ್ಯಗಳನ್ನು ಆಯೋಜಿಸಲು ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ಗೆ ರಾಜ್ಯ ಗೃಹ ಇಲಾಖೆ ಒಪ್ಪಿಗೆ ನೀಡಿದ್ದು ಈ ಮೂಲಕ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಅಂತರಾಷ್ಟ್ರೀಯ ಮತ್ತು ಐಪಿಎಲ್ ಪಂದ್ಯಗಳನ್ನು ಆಯೋಜಿಸಲು ಗ್ರೀನ್ ಸಿಗ್ನಲ್ ಸಿಕ್ಕಂತಾಗಿದೆ.ಇದೀಗ ನ್ಯಾಯಮೂರ್ತಿ ಕುನ್ಹಾ ವರದಿಯಲ್ಲಿನ ಅಂಶಗಳನ್ನು ಜಾರಿಗೊಳಿಸಿ ಪಂದ್ಯಗಳನ್ನು ನಡೆಸಲು ಒಪ್ಪಿಗೆ ನೀಡಲಾಗಿದೆ.
ಗುವಾಹಟಿ: ಸಾಂಪ್ರದಾಯಿಕ ಬೋಡೋ ಸಾಂಸ್ಕೃತಿಕ ಕಾರ್ಯಕ್ರಮವಾದ 'ಬಾಗುರುಂಬಾ ದ್ವೌ 2026' ನಲ್ಲಿ ಭಾಗವಹಿಸುವ ಮುನ್ನ ಪ್ರಧಾನಿ ನರೇಂದ್ರ ಮೋದಿ ಶನಿವಾರ ಗುವಾಹಟಿಯ ಸರುಸಜೈ ಕ್ರೀಡಾಂಗಣದಲ್ಲಿ ಭವ್ಯ ರೋಡ್ ಶೋ ನಡೆಸಿದರು.ರೋಡ್ ಶೋನಲ್ಲಿ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಪ್ರಧಾನಿಯೊಂದಿಗೆ ಇದ್ದರು.ಅಲ್ಲಿ ಸಾವಿರಾರು ಬೆಂಬಲಿಗರು ಪ್ರಧಾನಿ ಮೋದಿಯನ್ನು ಪ್ರತಿಧ್ವನಿಸುವ ಘೋಷಣೆಗಳೊಂದಿಗೆ ಸ್ವಾಗತಿಸಿದರು. ಇದಕ್ಕೂ ಮೊದಲು, ಶನಿವಾರ ಗುವಾಹಟಿಯ ಲೋಕಪ್ರಿಯ ಗೋಪಿನಾಥ್ ಬೋರ್ಡೊಲೊಯ್ ಅಂತರಾಷ್ಟ್ರೀಯ ವಿಮಾನ
ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಶನಿವಾರ ಮಧ್ಯಪ್ರದೇಶಕ್ಕೆ ಭೇಟಿ ನೀಡಿ ಇಂದೋರ್ನಲ್ಲಿ ನೀರಿನ ಮಾಲಿನ್ಯದಿಂದ ಉಂಟಾದ ವಾಂತಿ ಮತ್ತು ಅತಿಸಾರದಿಂದ ಬಳಲುತ್ತಿರುವ ರೋಗಿಗಳು ಮತ್ತು ಕುಟುಂಬಗಳನ್ನು ಭೇಟಿ ಮಾಡಿದರು. ಖಾಸಗಿ ಸೌಲಭ್ಯವಾದ ಬಾಂಬೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ನಾಲ್ವರು ರೋಗಿಗಳನ್ನು ಗಾಂಧಿ ಭೇಟಿ ಮಾಡಿ, ಅವರ ಆರೋಗ್ಯದ ಬಗ್ಗೆ ವಿಚಾರಿಸಿದರು ಮತ್ತು ಅವರ ಕುಟುಂಬ ಸದಸ್ಯರನ್ನು ಭೇಟಿ ಮಾಡಿದರು ಎಂದು ಎಎನ್ಐ ವರದಿ ಮಾಡಿದೆ. ಕಳೆದ ತಿಂಗಳು ಸಾಂಕ್ರಾಮಿಕ ರೋಗದಿಂದ ಹೆಚ್ಚು ಹಾನಿಗೊಳಗಾದ ಪ್ರದೇಶವಾದ ಭಾಗೀರಥಪುರಕ್ಕೂ ಭೇಟಿ ನೀಡಿ, ಮೃತರ
ತಮಿಳುನಾಡು: ಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಎಡಪ್ಪಾಡಿ ಕೆ ಪಳನಿಸ್ವಾಮಿ ಶನಿವಾರ ಮುಂಬರುವ ತಮಿಳುನಾಡು ವಿಧಾನಸಭಾ ಚುನಾವಣೆಗೆ ಪಕ್ಷದ ಚುನಾವಣಾ ಭರವಸೆಗಳ ಮೊದಲ ಹಂತವನ್ನು ಪ್ರಕಟಿಸಿದರು.ಎಐಎಡಿಎಂಕೆ ಚುನಾವಣಾ ಭರವಸೆಗಳಲ್ಲಿ ಮಹಿಳಾ ಕಲ್ಯಾಣ ಕುಲವಿಲಕ್ಕು ಯೋಜನೆ ಸೇರಿದೆ, ಇದರ ಅಡಿಯಲ್ಲಿ ಎಲ್ಲಾ ಪಡಿತರ ಚೀಟಿ ಹೊಂದಿರುವ ಕುಟುಂಬಗಳಿಗೆ ಮಾಸಿಕ 2,000 ರೂ.ಗಳ ಆರ್ಥಿಕ ಸಹಾಯವನ್ನು ಕುಟುಂಬದ ಮಹಿಳಾ ಮುಖ್ಯಸ್ಥರ ಬ್ಯಾಂಕ್ ಖಾತೆಗೆ ನೇರವಾಗಿ ಜಮಾ ಮಾಡಲಾಗುತ್ತದೆ.ನಗರ ಬಸ್ಗಳಲ್ಲಿ ಪುರುಷರಿಗೆ ಉಚಿತ ಬಸ್ ಪ್ರಯಾಣ ಯೋಜನೆಯನ್ನು ಜಾರಿಗೆ ತರಲಾಗುವುದು, ಆದರೆ ಮಹಿಳೆಯರಿಗೆ
ಬಳ್ಳಾರಿ: ಬ್ಯಾನರ್ ವಿಚಾರವಾಗಿ ಶಾಸಕ ಜನಾರ್ದನ ರೆಡ್ಡಿ ಮನೆಮುಂದೆ ನಡೆದ ಶೂಟೌಟ್ನಲ್ಲಿ ಸಾವನ್ನಪ್ಪಿದ ಕೈ ಕಾರ್ಯಕರ್ತ ರಾಜಶೇಖರ ರೆಡ್ಡಿ ಕುಟುಂಬವನ್ನು ವಿಪಕ್ಷ ನಾಯಕ ಆರ್ ಅಶೋಕ್ ನಿಯೋಗ ಭೇಟಿಯಾಗಿ, ಸಾಂತ್ವನ ಹೇಳಿದರು. ಭೇಟಿ ಸಂಬಂಧ ಆರ್ ಅಶೋಕ್ ಅವರು ತಮ್ಮ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಬರೆದುಕೊಂಡಿದ್ದಾರೆ. ಬಳ್ಳಾರಿಯಲ್ಲಿ ಕಾಂಗ್ರೆಸ್ ಪಕ್ಷದ ಗೂಂಡಾಗಿರಿಗೆ ಬಲಿಯಾದ ರಾಜಶೇಖರ ರೆಡ್ಡಿ ಅವರ ನಿವಾಸಕ್ಕೆ ಭೇಟಿ ನೀಡಿ, ಶೋಕತಪ್ತ ಕುಟುಂಬದವರಿಗೆ ಸಾಂತ್ವನ ಹೇಳಿ, ಬಿಜೆಪಿ ವತಿಯಿಂದ ₹10 ಲಕ್ಷ ಆರ್ಥಿಕ ನೆರವು ನೀಡಲಾಯಿತು.
ಬೆಂಗಳೂರು: ಮೊನ್ನೆ ಮೊನ್ನೆಯಷ್ಟೇ ದರ ಏರಿಕೆಯಿಂದಾಗಿ ಶಾಕ್ಗೆ ಒಳಗಾಗಿದ್ದ ಮೆಟ್ರೋ ಪ್ರಯಾಣಿಕರಿಗೆ ಇದೀಗ ಮತ್ತೇ ಶಾಕ್ ಕಾದಿದೆ. ಬಿಎಂಆರ್ಸಿಎಲ್ ಬೆಂಗಳೂರಿಗರಿಗೆ ಮತ್ತೆ ದರ ಏರಿಕೆ ಶಾಕ್ ಕೊಡೋಕೆ ಮುಂದಾಗಿದೆ. ಈ ಬಗ್ಗೆ ಸಂಸದ ತೇಜಸ್ವಿ ಸೂರ್ಯ ಸಿಎಂ ಸಿದ್ದರಾಮಯ್ಯ ಹಾಗೂ ಕೇಂದ್ರ ಸಚಿವರಿಗೆ ಪತ್ರ ಬರೆದಿದ್ದಾರೆ.ನಮ್ಮ ಮೆಟ್ರೋ ದೇಶದಲ್ಲೇ ಅತ್ಯಂತ ದುಬಾರಿ ಮೆಟ್ರೋ ಎಂಬ ಹಣೆಪಟ್ಟಿಯನ್ನು ಹೊಂದಿದ್ದು, ಪದೇ ಪದೇ ಮೆಟ್ರೋ ಪ್ರಯಾಣ ದರ ಹೆಚ್ಚಳದಿಂದ ಪ್ರಯಾಣಿಕರಿಗೆ ಮತ್ತಷ್ಟು ಹೊರೆ ಆಗಲಿದೆ.
ಮುಂಬೈ: ಇತ್ತೀಚೆಗೆ ಸಾಮಾಜಿಕ ಮಾಧ್ಯಮಗಳಲ್ಲಿ ಮೃಣಾಲ್ ಠಾಕೂರ್ ಮತ್ತು ಧನುಷ್ ಮದುವೆಯಾಗಲಿದ್ದಾರೆಯೇ ಎಂಬ ದೊಡ್ಡ ವದಂತಿ ಹರಿದಾಡುತ್ತಿದೆ. ಪ್ರೇಮಿಗಳ ದಿನದಂದು ಈ ಇಬ್ಬರು ತಾರೆಯರು ವಿವಾಹವಾಗಲಿದ್ದಾರೆ ಎಂಬ ಚರ್ಚೆ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಅಭಿಮಾನಿಗಳು ಉತ್ಸುಕರಾಗಿದ್ದರು, ಕುತೂಹಲ ಹೊಂದಿದ್ದರು ಮತ್ತು ಆನ್ಲೈನ್ನಲ್ಲಿ ಅಭಿನಂದನಾ ಸಂದೇಶಗಳನ್ನು ಹಂಚಿಕೊಳ್ಳಲು ಬೇಗನೆ ಪ್ರಾರಂಭಿಸಿದರು. ಆದರೆ ಈಗ, ಮೃಣಾಲ್ ಅಂತಿಮವಾಗಿ ತನ್ನದೇ ಆದ ಸೂಕ್ಷ್ಮ ರೀತಿಯಲ್ಲಿ ಮೌನ ಮುರಿದಿದ್ದಾರೆ.
ಚಿಕ್ಕಬಳ್ಳಾಪುರ: ಈಚೆಗೆ ಭಾರೀ ಸುದ್ದಿಗೆ ಕಾರಣವಾದ ಶಿಡ್ಲಘಟ್ಟ ನಗರಸಭೆಯ ಪೌರಾಯುಕ್ತೆ ಅಮೃತ ಗೌಡ ಅವರಿಗೆ ಧಮ್ಕಿ ಹಾಕಿದ ಪ್ರಕರಣ ಸಂಬಂಧ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ನಿರೀಕ್ಷಣಾ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ.ಚಿಕ್ಕಬಳ್ಳಾಪುರ ಎರಡನೇ ಜಿಲ್ಲಾ ಅಪರ ಸತ್ರ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ರಾಜೀವ್ ಗೌಡ ಪರ ವಕೀಲ ಶಿವಶಂಕರ ರೆಡ್ಡಿ ಇಂದು ನ್ಯಾಯಾಲಯದ ಪ್ರಕರಣದ ಸಂಖ್ಯೆ 11-2026 ರ ಅನ್ವಯ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ.
ಕೊಲ್ಲಂ (ಕೇರಳ): ಅಯ್ಯಪ್ಪ ದೇವಸ್ಥಾನದ ವಿವಿಧ ಕಲಾಕೃತಿಗಳು ಮತ್ತು ಬಾಗಿಲು ಚೌಕಟ್ಟುಗಳ ತಾಮ್ರದ ಹೊದಿಕೆಗಳ ಮೇಲಿನ ಚಿನ್ನದ ವಿಶ್ಲೇಷಣೆಯ ವರದಿಯನ್ನು ವಿಶೇಷ ತನಿಖಾ ತಂಡಕ್ಕೆ (SIT) ಶನಿವಾರ ಸಲ್ಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಶಬರಿಮಲೆ ಚಿನ್ನ ನಷ್ಟ ಪ್ರಕರಣಗಳ ಕುರಿತು ನಡೆಯುತ್ತಿರುವ ತನಿಖೆಗಳ ಮಧ್ಯೆ ಕೇರಳ ಹೈಕೋರ್ಟ್ ಈ ವೈಜ್ಞಾನಿಕ ಅಧ್ಯಯನಕ್ಕೆ ಆದೇಶಿಸಿದೆ.ವಿಎಸ್ಎಸ್ಸಿ ನ್ಯಾಯಾಲಯದ ಆದೇಶದ ಮೇರೆಗೆ ವರದಿಯನ್ನು ಸಿದ್ಧಪಡಿಸುತ್ತದೆ.ವಿಕ್ರಮ್ ಸಾರಾಭಾಯಿ ಬಾಹ್ಯಾಕಾಶ ಕೇಂದ್ರ (ವಿಎಸ್ಎಸ್ಸಿ) ವರದಿಯನ್ನು ಸಿದ್ಧಪಡಿಸಿದ್ದು, ಅದನ್ನು ಮುಚ್ಚಿದ ಕವರ್ನಲ್ಲಿ
ದೇವಸ್ಥಾನಗಳಲ್ಲಿ ಹಾಗೂ ಹಿಂದೂಗಳ ಮನೆಗಳಲ್ಲಿ ಶಂಖವನ್ನು ಊದಲಾಗುತ್ತದೆ. ಇದರಿಂದ ಮನೆಯಲ್ಲಿ ಸಕಾರಾತ್ಮಕ ಬದಲಾವಣೆಯನ್ನು ನಾವು ಕಾಣಬಹುದು. ಇನ್ನೂ ಮನೆಯಲ್ಲಿ ಶಂಖ ಊದುವವರು ತಿಳಿದುಕೊಳ್ಳಲೆಬೇಕಾದ ಅಂಶಗಳು ಇಲ್ಲಿದೆ. ಶಂಖ ಊದಲು ಸೂಕ್ತವಾದ ಸಮಯಗಳು ಇಲ್ಲಿವೆ:1. ಪೂಜೆಯ ಸಮಯ: ಬೆಳಗ್ಗೆ ಅಥವಾ ಸಂಜೆ ವೇಳೆ ದೀಪ ಇಡುವಾಗ ಶಂಖ ಊದುವುದು ಅತ್ಯಂತ ಮಂಗಳಕರ. ಇದು ಮನೆಯಲ್ಲಿ ಹೊಸ ಚೈತನ್ಯವನ್ನು ತುಂಬುತ್ತದೆ.ಸಂಧ್ಯಾಕಾಲ: ಸೂರ್ಯಾಸ್ತದ ಸಮಯದಲ್ಲಿ (ಸಂಜೆ ಪೂಜೆ) ಶಂಖ ಊದುವುದರಿಂದ ದಿನವಿಡೀ ಸಂಗ್ರಹವಾದ ನಕಾರಾತ್ಮಕ
ನವದೆಹಲಿ: ನ್ಯೂಜಿಲೆಂಡ್ ವಿರುದ್ಧದ ಸರಣಿ ನಿರ್ಣಾಯಕ ಮೂರನೇ ಏಕದಿನ ಪಂದ್ಯಕ್ಕೂ ಮುನ್ನ ಶನಿವಾರ ಉಜ್ಜಯಿನಿಯ ಶ್ರೀ ಮಹಾಕಾಳೇಶ್ವರ ದೇವಸ್ಥಾನಕ್ಕೆ ಭಾರತ ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿ, ಸ್ಪಿನ್ನರ್ ಕುಲದೀಪ್ ಯಾದವ್ ಅವರೊಂದಿಗೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ದೇವಾಲಯ ಭೇಟಿಯ ನಂತರ, ಕೊಹ್ಲಿ "ಜೈ ಶ್ರೀ ಮಹಾಕಾಲ್" ಎಂದು ಹೇಳಿ ಅಲ್ಲಿ ನೆರೆದಿದ್ದವರನ್ನು ಸಂಕ್ಷಿಪ್ತವಾಗಿ ಸ್ವಾಗತಿಸಿದರು.ಜನವರಿ 18 ರಂದು ಹೋಳ್ಕರ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿರುವ ಮೂರು ಪಂದ್ಯಗಳ ಸರಣಿಯ ಮೂರನೇ ಮತ್ತು ಅಂತಿಮ ಏಕದಿನ ಪಂದ್ಯದಲ್ಲಿ ಈ ಇಬ್ಬರು ಆಟಗಾರರು ಆಡಲಿದ್ದಾರೆ. ರಾಜ್ಕೋಟ್ನಲ್ಲಿ ನಡೆದ ಎರಡನೇ ಏಕದಿನ ಪಂದ್ಯದಲ್ಲಿ ಮೈಕೆಲ್ ಬ್ರೇಸ್ವೆಲ್ ನೇತೃತ್ವದ ನ್ಯೂಜಿಲೆಂಡ್ ತಂಡವು ಬಲವಾಗಿ
ಬಳ್ಳಾರಿ: ಜನಾರ್ಧನ ರೆಡ್ಡಿ ಮತ್ತು ಅವರ ಆತ್ಮೀಯ ಸ್ನೇಹಿತ ಬಿ.ಶ್ರೀರಾಮುಲು ಅವರು ಒಂದಾಗಿದ್ದಾರೆ. ಇದರಿಂದ ಕಾಂಗ್ರೆಸ್ಸಿನ ಬಳ್ಳಾರಿ ಜಿಲ್ಲೆಯ ನಾಯಕರ ಕುರ್ಚಿ ಅಲ್ಲಾಡತೊಡಗಿದೆ ಎಂದು ಮಾಜಿ ಮುಖ್ಯಮಂತ್ರಿ ಮತ್ತು ಸಂಸದ ಬಸವರಾಜ ಬೊಮ್ಮಾಯಿ ಅವರು ವಿಶ್ಲೇಷಿಸಿದ್ದಾರೆ.ಬಿಜೆಪಿ ವತಿಯಿಂದ ಬಳ್ಳಾರಿಯಲ್ಲಿ ಇಂದು ಕಾಂಗ್ರೆಸ್ ಸರಕಾರದ ವಿರುದ್ಧ ಬೃಹತ್ ಪ್ರತಿಭಟನೆ ನಡೆಸಲಾಯಿತು. ಈ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಮುಲು ಅವರ ವೇಗ- ಜನಾರ್ಧನ ರೆಡ್ಡಿಯವರ ಶಕ್ತಿ, ಬಿರುಗಾಳಿ ಮತ್ತು ಬೆಂಕಿಯಂತೆ ಎಂದು ಅವರು ನುಡಿದರು. ಇದೇ ಕಾರಣಕ್ಕಾಗಿ ಬಳ್ಳಾರಿಯಲ್ಲಿ ಈ ಕೃತ್ಯ ನಡೆದಿದೆ ಎಂದು ತಿಳಿಸಿದರು.
ಬೆಂಗಳೂರು: ಬಿಗ್ ಬಾಸ್ ಕನ್ನಡ ಸೀಸನ್ 12 ರಲ್ಲಿ ಗಿಲ್ಲಿ ನಟ ಗೆಲ್ಲಲಿ ಎಂದು ಅವರ ಅಭಿಮಾನಿಗಳು ಏನೇನು ಮಾಡ್ತಿದ್ದಾರೆ ಎಂದು ನೋಡಿದರೆ ಶಾಕ್ ಆಗ್ತೀರಿ. ಬಿಗ್ ಬಾಸ್ ಕನ್ನಡ ಸೀಸನ್ 12 ಫೈನಲ್ ಹಂತಕ್ಕೆ ಬಂದಿದೆ. ವಿಶೇಷವಾಗಿ ಈಗ ಗಿಲ್ಲಿ ನಟ ಮತ್ತು ಕನ್ನಡ ಪರ ಹೋರಾಟಗಾರ್ತಿ, ನಟಿ ಅಶ್ವಿನಿ ಗೌಡ ನಡುವೆ ಜಿದ್ದಾ ಜಿದ್ದಿನ ಫೈಟ್ ಇದೆ. ಇಬ್ಬರಲ್ಲಿ ಯಾರು ಗೆಲ್ಲಬಹುದು ಎಂಬುದೇ ಅಭಿಮಾನಿಗಳ ಕುತೂಹಲ. ಗಿಲ್ಲಿ ನಟ ಗೆಲ್ಲಬೇಕು ಎಂದು ಸ್ವತಃ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರೇ ಹೇಳಿದ್ದಾರೆ. ಇದೀಗ ಮಂಡ್ಯದಾದ್ಯಂತ ಗಿಲ್ಲಿ ನಟನ ಗೆಲುವಿಗಾಗಿ ಪ್ರಾರ್ಥನೆಯೇ ನಡೆಯುತ್ತಿದೆ.
ನವದೆಹಲಿ: ಭಾರತೀಯ ರೈಲ್ವೆಯು ಇತಿಹಾಸದಲ್ಲಿ ಮತ್ತೊಂದು ಸುವರ್ಣಾಕ್ಷರದ ಕ್ಷಣಕ್ಕೆ ಸಾಕ್ಷಿಯಾಗಿದೆ. ಪ್ರಧಾನಿ ನರೇಂದ್ರ ಮೋದಿಯವರು ಇಂದು ಪಶ್ಚಿಮ ಬಂಗಾಳದ ಮಾಲ್ಡಾ ಟೌನ್ನಿಂದ ದೇಶದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಅಧಿಕೃತವಾಗಿ ಹಸಿರು ನಿಶಾನೆ ತೋರಿದರು.ಈ ಅತ್ಯಾಧುನಿಕ ಸ್ಲೀಪರ್ ರೈಲು ಪಶ್ಚಿಮ ಬಂಗಾಳದ ಹೌರಾ ಮತ್ತು ಅಸ್ಸಾಂನ ಗುವಾಹಟಿಯ ಕಾಮಾಖ್ಯ ನಡುವೆ ಸಂಚರಿಸಲಿದ್ದು, ಪ್ರಯಾಣಿಕರಿಗೆ ವಿಮಾನದ ಮಾದರಿಯ ಪ್ರೀಮಿಯಂ ಸೌಕರ್ಯಗಳನ್ನು ಒದಗಿಸಲಿದೆ.ಈ ರೈಲು ಒಟ್ಟು 16 ಎಸಿ ಕೋಚ್ಗಳಿದ್ದು, ಇದರಲ್ಲಿ 11 ಎಸಿ-3 ಟೈರ್, 4 ಎಸಿ-2 ಟೈರ್ ಮತ್ತು 1 ಫಸ್ಟ್ ಎಸಿ ಕೋಚ್ಗಳಿವೆ.
ಬೆಂಗಳೂರು: 2024ರ ಮಹಿಳಾ ಪ್ರೀಮಿಯರ್ ಲೀಗ್ನಲ್ಲಿ ಗರಿಷ್ಠ ವಿಕೆಟ್ ಪಡೆದಿದ್ದ ಟಗರು ಪುಟ್ಟಿ ಖ್ಯಾತಿಯ ಶ್ರೇಯಾಂಕಾ ಪಾಟೀಲ್ ಈ ಬಾರಿ ಮತ್ತೊಂದು ದಾಖಲೆ ಬರೆದಿದ್ದಾರೆ.23 ವರ್ಷದ ಶ್ರೇಯಾಂಕಾ ಪಾಟೀಲ್ ಈವರೆಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ 18 ಪಂದ್ಯಗಳನ್ನಾಡಿದ್ದಾರೆ. ಈ ಹದಿನೆಂಟು ಪಂದ್ಯಗಳಲ್ಲಿ 317 ಎಸೆತಗಳನ್ನು ಎಸೆದಿರುವ ಶ್ರೇಯಾಂಕಾ ಒಟ್ಟು 27 ವಿಕೆಟ್ ಕಬಳಿಸಿದ್ದಾರೆ. ಮಹಿಳಾ ಪ್ರೀಮಿಯರ್ ಲೀಗ್ನಲ್ಲಿ ಶುಕ್ರವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಲ್ರೌಂಡರ್ ಶ್ರೇಯಾಂಕಾ ಪಾಟೀಲ್ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಅದು ಕೂಡ 5 ವಿಕೆಟ್ ಕಬಳಿಸುವ ಮೂಲಕ. ಈ ಐದು ವಿಕೆಟ್ಗಳೊಂದಿಗೆ ಭರ್ಜರಿ ದಾಖಲೆಯೊಂದನ್ನು ತಮ್ಮದಾಗಿಸಿಕೊಂಡಿದ್ದಾರೆ. ಗುಜರಾತ್ ಜೈಂಟ್ಸ್ ವಿರುದ್ಧ 3.5 ಓವರ್ ಎಸೆದ ಶ್ರೇಯಾಂಕಾ ಪಾಟೀಲ್ ಕೇವಲ 23 ರನ್ ನೀಡಿ 5 ವಿಕೆಟ್ ಕಬಳಿಸಿದ್ದರು. ಇದರೊಂದಿಗೆ ಡಬ್ಲ್ಯುಪಿಎಲ್ನಲ್ಲಿ 5 ವಿಕೆಟ್ ಕಬಳಿಸಿದ ಅತ್ಯಂತ ಕಿರಿಯ ಆಟಗಾರ್ತಿ ಎಂಬ ಹೆಗ್ಗಳಿಕೆ ಶ್ರೇಯಾಂಕಾ ಪಾಲಾಯಿತು.
ಬೆಂಗಳೂರು: ಕನ್ನಡದ ಜನಪ್ರಿಯ ರಿಯಾಲಿಟಿ ಶೋ ಬಿಗ್ಬಾಸ್ ಫೈನಲ್ ವಾರ ನಡೆಯುತ್ತಿದೆ. ಭಾನುವಾರ ಫೈನಲ್ ಎಪಿಸೋಡ್ ಪ್ರಸಾರವಾಗಲಿದ್ದು, ಕಪ್ ಯಾರ ಪಾಲಾಗಲಿದೆ ಎಂಬ ಕುತೂಹಲ ಎಲ್ಲರಲ್ಲೂ ಮೂಡಿದೆ. ಬಿಗ್ಬಾಸ್ ಪ್ರೀ ಫಿನಾಲೆ ಇಂದು ನಡೆಯಲಿದ್ದು, ನಾಳೆ ಗ್ರ್ಯಾಂಡ್ ಫಿನಾಲೆ ನಡೆಯುತ್ತಿದೆ. ಫಿನಾಲೆಯಲ್ಲಿ ಅಶ್ವಿನಿ ಗೌಡ, ಗಿಲ್ಲಿ ನಟ, ರಘು, ರಕ್ಷಿತಾ, ಧನುಷ್, ಕಾವ್ಯಾ ಇದ್ದಾರೆ. ಬಿಗ್ಬಾಸ್ನ ಕೊನೆಯ ಏಳನೇ ಸ್ಥಾನದಲ್ಲಿ ಧ್ರುವಂತ್ ಹೊರಬಿದ್ದಿದ್ದರು.ಬಿಗ್ಬಾಸ್ ಫೈನಲ್ ಹೊಸ್ತಿಲಲ್ಲೇ ಕಲಾವಿದ ಧ್ರುವಂತ್ ಅವರು ಮಿಡ್ವೀಕ್ ಎಲಿಮಿನೇಷನ್ನಲ್ಲಿ ಹೊರಬಿದ್ದಿದ್ದರು. ಬಿಗ್ಬಾಸ್ ಕನ್ನಡದ 12ನೇ ಆವೃತ್ತಿಯಲ್ಲಿ ಜೈ ಮಹಾಕಾಲ್ ಎನ್ನುವ ಸಾಲಿನಿಂದಲೇ ಖ್ಯಾತಿಗಳಿಸಿದ್ದ ಧ್ರುವಂತ್ 108ನೇ ದಿನ ನಡೆದ ಮಿಡ್ ವೀಕ್ ಎಲಿಮಿನೇಷನ್ನಲ್ಲಿ ನಿರ್ಗಮಿಸಿದ್ದರು.
ಮುಂಬಯಿ: ನನ್ನನ್ನು ನಿಂದಿಸಿದ, ನನ್ನ ಮನೆಯನ್ನು ಕೆಡವಿದವರು, ಮಹಾರಾಷ್ಟ್ರ ತೊರೆಯುವಂತೆ ಬೆದರಿಕೆ ಹಾಕಿದವರಿಗೆ ಇಂದು ಮತದಾರರು ತಕ್ಕ ಪಾಠ ಕಲಿಸಿದ್ದಾರೆ. ಇಂದು ಅವರನ್ನೇ ಮಹಾರಾಷ್ಟ್ರ ತೊರೆಯುವಂತೆ ಮಾಡಿದೆ ಎಂದು ನಟಿ ಮತ್ತು ಸಂಸದೆ ಕಂಗನಾ ರನೌತ್ ಹೇಳಿದ್ದಾರೆ.ದೇಶದ ಅತ್ಯಂತ ಶ್ರೀಮಂತ ಪುರಸಭೆಯಾದ ಬೃಹತ್ ಮುಂಬಯಿ ಮುನ್ಸಿಪಲ್ ಕಾರ್ಪೊರೇಷನ್ (ಬಿಎಂಸಿ) ಚುನಾವಣೆಯಲ್ಲಿ ಐತಿಹಾಸಿಕ ಗೆಲುವಿಗಾಗಿ ಕಂಗನಾ ಅವರು ಪ್ರಧಾನಿ ನರೇಂದ್ರ ಮೋದಿ ಮತ್ತು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಸೇರಿದಂತೆ ಬಿಜೆಪಿ ನಾಯಕರನ್ನು ಅಭಿನಂದಿಸಿದ್ದಾರೆ.2020ರಲ್ಲಿ ಅವಿಭಜಿತ ಶಿವಸೇನೆ ಅಧಿಕಾರದಲ್ಲಿದ್ದಾಗ ಬೃಹತ್ ಮುಂಬಯಿ ಮುನ್ಸಿಪಲ್ ಕಾರ್ಪೊರೇಷನ್ ಮುಂಬೈನಲ್ಲಿರುವ ಅವರ ಬಂಗಲೆಗೆ ಹೊಂದಿಕೊಂಡ ಕಚೇರಿಯನ್ನು ಕೆಡವಿದ್ದ ನಟಿಗೆ ಇಂದು ನ್ಯಾಯ ಸಿಕ್ಕಿದೆ ಎನ್ನಲಾಗಿದೆ. ಬಿಎಂಸಿ ಚುನಾವಣೆಯಲ್ಲಿ ಶಿವಸೇನೆಯನ್ನು ಕೆಳಗಿಳಿಸಲಾಗಿದೆ.
ಬಳ್ಳಾರಿ: ಭರತ್ ರೆಡ್ಡಿಯವರು 5 ನಿಮಿಷ ಸಾಕು; ಜನಾರ್ಧನ ರೆಡ್ಡಿಯವರ ಮನೆ ಸುಟ್ಟು ಭಸ್ಮ ಮಾಡುತ್ತೇನೆ ಎಂದಿದ್ದಾರೆ. ಇದು ಶಾಸಕರು ಆಡುವ ಮಾತೇ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಪ್ರಶ್ನಿಸಿದರು.ಬಿಜೆಪಿ ವತಿಯಿಂದ ಬಳ್ಳಾರಿಯಲ್ಲಿ ಇಂದು ಕಾಂಗ್ರೆಸ್ ಸರಕಾರದ ವಿರುದ್ಧ ಬೃಹತ್ ಪ್ರತಿಭಟನೆ ನಡೆಸಲಾಯಿತು. ಈ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಎಂಥ ಭಸ್ಮಾಸುರನಿಗೆ ಜನ್ಮ ಕೊಟ್ಟಿದ್ದಾರೆ ಈ ಬಳ್ಳಾರಿಯಲ್ಲಿ ಎಂದು ಕಳವಳ ವ್ಯಕ್ತಪಡಿಸಿದರು. ಇವತ್ತಲ್ಲ ನಾಳೆ ಜನಾರ್ಧನ ರೆಡ್ಡಿ ಮುಗಿಸಿ ಬಿಡುವುದಾಗಿ ಹೇಳುತ್ತೀರಿ. ಏನು ಅಷ್ಟೂ ತಾಕತ್ತಿದೆಯೇ ನಿಮಗೆ ಎಂದು ಸವಾಲು ಹಾಕಿದರು.
ಬಳ್ಳಾರಿ: ಮುಖ್ಯಮಂತ್ರಿಗಳು ರಾಜಶೇಖರ್ ಸಾವಿನ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡು, ಚೆಲ್ಲಾಟ ಆಡದೇ ಸಮಗ್ರ ತನಿಖೆ ಮಾಡಿಸಬೇಕು. ಬಡ ಕುಟುಂಬಕ್ಕೆ ನ್ಯಾಯ ಸಿಗಲು ಸಿಬಿಐ ತನಿಖೆ ಮಾಡಿಸಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಆಗ್ರಹಿಸಿದ್ದಾರೆ.ಇಂದು ಮೃತ ರಾಜಶೇಖರ್ ಅವರ ಮನೆಗೆ ಭೇಟಿ ನೀಡಿದಾಗ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕಾಂಗ್ರೆಸ್ ಮುಖಂಡರೇ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರರನ್ನು ಕೊಲೆ ಮಾಡಿದ್ದಾರೆ. ಅವರೇ ಗುಂಡು ಹಾರಿಸಿದ್ದರಿಂದ ಪ್ರಾಣ ಕಳಕೊಂಡಿದ್ದಾರೆ ಎಂದು ಆರೋಪಿಸಿದರು.
ಇಂಧೋರ್: ನ್ಯೂಜಿಲೆಂಡ್ ವಿರುದ್ಧ ಅಂತಿಮ ಏಕದಿನ ಪಂದ್ಯವಾಡಲು ಇಂಧೋರ್ ಗೆ ಬಂದ ಟೀಂ ಇಂಡಿಯಾ ನಾಯಕ ಶುಭಮನ್ ಗಿಲ್ ತಮ್ಮ ಜೊತೆಗೆ ದುಬಾರಿ ಬೆಲೆಯ ನೀರು ಶುದ್ಧೀಕರಣ ಮೆಷಿನ್ ಒಂದನ್ನು ಹೊತ್ತು ತಂದಿದ್ದಾರೆ. ಇದಕ್ಕೆ ಕಾರಣವೇನು ಗೊತ್ತಾ? ಇಂಧೋರ್ ನಲ್ಲಿ ಇತ್ತೀಚೆಗೆ ಮಲಿನ ನೀರು ಸೇವಿಸಿ ಹಲವರು ಅಸ್ವಸ್ಥಗೊಂಡಿದ್ದರು. ಈ ವಿಚಾರ ರಾಷ್ಟ್ರಾದ್ಯಂತ ಸುದ್ದಿಯಾಗಿತ್ತು. ಇಂಧೋರ್ ನಲ್ಲಿ ಈಗಲೂ ನೀರು ಕುಡಿಯುವಾಗ ಶುದ್ಧೀಕರಿಸದೇ ಕುಡಿಯುವ ಸ್ಥಿತಿಯಲ್ಲಿಲ್ಲ. ಇಂತಹ ಪರಿಸ್ಥಿತಿಯಲ್ಲಿ ಕ್ರಿಕೆಟಿಗರೂ ಇಲ್ಲಿನ ನೀರು ಸೇವನೆ ಮಾಡಲು ಹಿಂಜರಿದಿದ್ದಾರೆ.
ಈರುಳ್ಳಿ, ಬೆಳ್ಳುಳ್ಳಿ ಸೇವನೆ ಮಾಡಿದ ಬಳಿಕ ಬಾಯಿ ವಾಸನೆ ಬರುವುದು ಸಹಜ. ಇದರಿಂದ ಇನ್ನೊಬ್ಬರ ಮುಂದೆ ಬಾಯಿ ತೆರೆಯಲೂ ಸಂಕೋಚವಾಗುತ್ತದೆ. ಬಾಯಿ ವಾಸನೆ ಹೋಗಲಾಡಿಸಲು ಇಲ್ಲಿದೆ ಬೆಸ್ಟ್ ಉಪಾಯಗಳು. ಈರುಳ್ಳಿ ಅಥವಾ ಬೆಳ್ಳುಳ್ಳಿ ಪ್ರಬಲ ವಾಸನೆಯುಕ್ತ ಅಹಾರ ಪದಾರ್ಥಗಳು. ಇವುಗಳನ್ನು ಸೇವಿಸಿದರೆ ಬ್ರಷ್ ಮಾಡಿದರೂ ಕೆಲವೊಮ್ಮೆ ಬಾಯಿ ವಾಸನೆ ಹೋಗಲ್ಲ. ಇದರಿಂದಾಗಿ ಇನ್ನೊಬ್ಬರ ಜೊತೆ ಮಾತನಾಡುವಾಗ ಬಾಯಿಗೆ ಕೈ ಅಡ್ಡ ಇಟ್ಟುಕೊಳ್ಳುವ ಪರಿಸ್ಥಿತಿಯಾಗುತ್ತದೆ. ಇದರಿಂದ ಮುಕ್ತಿ ಬೇಕೆಂದರೆ ಈ ಸಿಂಪಲ್ ಟ್ರಿಕ್ಸ್ ಮಾಡಿ ನೋಡಿ. ಗ್ರೀನ್ ಆಪಲ್ ಸೇವನೆ ಮಾಡಿ: ಆಪಲ್ ನಲ್ಲಿ ಬಾಯಿ ವಾಸನೆ ಹೋಗಲಾಡಿಸುವ ಗುಣ ಹೊಂದಿದ್ದು ಇದನ್ನು ಸೇವನೆ ಮಾಡುವುದರಿಂದ ಬಾಯಿ ವಾಸನೆ ತೊಡೆದುಹೋಗುತ್ತದೆ.
ಬೆಂಗಳೂರು: ಒಂದೆಡೆ ನಾಯಕತ್ವ ವಿಚಾರವಾಗಿ ಹೈಕಮಾಂಡ್ ಜೊತೆ ಚರ್ಚಿಸಲು ಡಿಕೆ ಶಿವಕುಮಾರ್ ದೆಹಲಿಯಲ್ಲಿರುವಾಗಲೇ ಇತ್ತ ಸಿಎಂ ಬದಲಾವಣೆ ವಿಚಾರವಾಗಿ ಸಚಿವ ಜಮೀರ್ ಅಹ್ಮದ್ ಮಹತ್ವದ ಹೇಳಿಕೆ ನೀಡಿದ್ದಾರೆ. ಸಿಎಂ ಬದಲಾವಣೆ ವಿಚಾರ ಮತ್ತೊಮ್ಮೆ ಈಗ ಗರಿಗೆದರಿದೆ. ಸಿಎಂ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಬಣ ತಮ್ಮ ನಾಯಕರ ಪರವಾಗಿ ಬ್ಯಾಟಿಂಗ್ ಆರಂಭಿಸಿದ್ದಾರೆ. ಇದರ ನಡುವೆ ಡಿಕೆ ಶಿವಕುಮಾರ್ ನಿನ್ನೆ ದೆಹಲಿಗೆ ಹೋಗಿ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆಯವರನ್ನು ಭೇಟಿ ಮಾಡಿದ್ದಾರೆ.
ಬೆಂಗಳೂರು: ಚಿನ್ನದ ಬೆಲೆ ಮತ್ತೆ ಏರಿಕೆ ಮತ್ತು ಇಳಿಕೆಯಾಗುತ್ತಲೇ ಇದೆ. ಆದರೆ ಇಂದು ವಾರದ ಆರಂಭದಲ್ಲೇ ಪರಿಶುದ್ಧ ಚಿನ್ನದ ದರ ಇಳಿಕೆಯಾದರೆ ಮತ್ತು ಇತರೆ ಚಿನ್ನದ ದರ ಏರಿಕೆ ಕಂಡಿದೆ. ಇಂದು ಪರಿಶುದ್ಧ ಚಿನ್ನದ ದರ ಮತ್ತು ಇತರೆ ಚಿನ್ನದ ದರ ವಿವರ ಇಲ್ಲಿದೆ ನೋಡಿ. ಚಿನ್ನದ ದರ ಏರಿಕೆಕಳೆದ ವಾರ ಪರಿಶುದ್ಧ ಚಿನ್ನದ ದರ ಸತತ ಏರಿಕೆ ಮತ್ತು ಇಳಿಕೆ ಕಂಡಿತ್ತು. ಆದರೆ ಈ ವಾರದ ಆರಂಭದಲ್ಲೇ ಚಿನ್ನದ ದರ ಏರಿಕೆಯಾಗಿತ್ತು. ಇಂದು ಪರಿಶುದ್ಧ ಚಿನ್ನದ ದರ ಕೊಂಚ ಇಳಿಕೆಯಾಗಿದೆ. ಪರಿಶುದ್ಧ ಚಿನ್ನದ ದರ ಮೊನ್ನೆ 1,46,510.00 ರೂ.ಗಳಿತ್ತು. ಇಂದು 1,46,285.00 ರೂ.ಗಳಷ್ಟಾಗಿದೆ.
ಬೆಂಗಳೂರು: ಅಡಿಕೆ ಬೆಲೆ ನಿನ್ನೆ ಕೊಂಚ ಇಳಿಕೆಯಾಗಿತ್ತು. ಆದರೆ ಇಂದು ಮತ್ತೆ ಬೆಲೆ ಯಥಾಸ್ಥಿತಿಯಲ್ಲಿದೆ. ಇಂದು ಅಡಿಕೆ ಮತ್ತು ಕಾಳು ಮೆಣಸು, ಕೊಬ್ಬರಿ ದರ ಹೇಗಿದೆ ಇಲ್ಲಿದೆ ವಿವರ. ಕಳೆದ ವಾರ ಅಡಿಕೆ ಬೆಲೆಯಲ್ಲಿ ಏರಿಕೆ ಆರಂಭವಾಗಿತ್ತು. ಸತತವಾಗಿ ನಾಲ್ಕು ದಿನಗಳ ಕಾಲ ಏರಿಕೆಯಾಗಿದ್ದು ರೈತರ ಸಂತಸಕ್ಕೆ ಕಾರಣವಾಗಿತ್ತು. ಆದರೆ ಇಂದು ಯಾವುದೇ ವ್ಯತ್ಯಾಸ ಕಂಡುಬರುತ್ತಿಲ್ಲ. ಇಂದು ಹೊಸ ಅಡಿಕೆ ಬೆಲೆ 460 ರೂ.ಗಳಷ್ಟಿದೆ. ಹಳೆ ಅಡಿಕೆ ಬೆಲೆ ಯಥಾಸ್ಥಿತಿಯಲ್ಲಿದ್ದು 535 ರೂ. ಗಳಾಗಿತ್ತು. ಇಂದೂ ಅಷ್ಟೇ ಇದೆ. ಡಬಲ್ ಚೋಲ್ ಬೆಲೆಯೂ 535 ರೂ.ಗಳಷ್ಟಾಗಿದೆ.
ನವದೆಹಲಿ: ನಿನ್ನೆ ಮುಂಬೈ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವ ಮಹಾಯುತಿ ಗೆಲುವು ಸಾಧಿಸುತ್ತಿದ್ದಂತೇ ಇಂಡಿಯಾ ಒಕ್ಕೂಟದ ನಾಯಕ ರಾಹುಲ್ ಗಾಂಧಿ ಬೆರಳಿಗೆ ಹಾಕುವ ಶಾಯಿ ಬಗ್ಗೆ ಚಕಾರವೆತ್ತಿದ್ದರು. ಹಾಗಿದ್ದರೆ ಚುನಾವಣಾ ಆಯೋಗ ಬೆರಳಿಗೆ ಗುರುತು ಹಾಕಲು ಮಾರ್ಕರ್ ಪೆನ್ ಬಳಕೆ ಶುರು ಮಾಡಿದ್ದು ಯಾವಾಗ? ಇಲ್ಲಿದೆ ವಿವರ. ಮುಂಬೈ ನಗರ ಪಾಲಿಕೆ ಚುನಾವಣೆಯಲ್ಲಿ ಅನೇಕ ಕಡೆ ಮತದಾನ ಮಾಡಿದ ಬಳಿಕ ಮತದಾರರಿಗೆ ಬೆರಳಿಗೆ ಶಾಯಿ ಗುರುತು ಹಾಕಲು ಮಾರ್ಕರ್ ಪೆನ್ ಬಳಸಲಾಗಿದೆ. ಇದನ್ನು ಅಳಿಸುವುದು ಸುಲಭ. ಇದೇ ಕಾರಣಕ್ಕೆ ಅನೇಕರು ಒಂದಕ್ಕಿಂತ ಹೆಚ್ಚು ಬಾರಿ ಮತದಾನ ಮಾಡಿದ್ದಾರೆ. ಇದರಿಂದಲೇ ಬಿಜೆಪಿ ಗೆದ್ದಿದೆ. ಚುನಾವಣಾ ಆಯೋಗ ಭ್ರಷ್ಟಾಚಾರದಲ್ಲಿ ತೊಡಗಿದೆ.
ಇಂದೋರ್: ನ್ಯೂಜಿಲೆಂಡ್ ವಿರುದ್ಧ ಮೂರನೇ ಏಕದಿನ ಪಂದ್ಯಕ್ಕಾಗಿ ಇಂದೋರ್ ಗೆ ಬಂದಿರುವ ಟೀಂ ಇಂಡಿಯಾ ಕ್ರಿಕೆಟಿಗ ಕುಲದೀಪ್ ಯಾದವ್, ವಿರಾಟ್ ಕೊಹ್ಲಿ ಉಜ್ಜೈನಿ ಮಹಾಕಾಳೇಶ್ವರನ ದರ್ಶನ ಪಡೆದಿದ್ದಾರೆ. ವಿರಾಟ್ ಕೊಹ್ಲಿ ಉಜ್ಜೈನಿ ಮಹಾಕಾಳೇಶ್ವರನ ಭಕ್ತರು. ಆಗಾಗ ಇಲ್ಲಿಗೆ ಭೇಟಿ ಕೊಡುತ್ತಿರುತ್ತಾರೆ. ಈ ಹಿಂದೆ ಫಾರ್ಮ್ ಕಳೆದುಕೊಂಡಿದ್ದಾಗಲೂ ಇಲ್ಲಿಗೆ ಪತ್ನಿ ಅನುಷ್ಕಾ ಶರ್ಮಾ ಜೊತೆಗೆ ಬಂದು ಪೂಜೆ ಸಲ್ಲಿಸಿದ್ದರು. ಇದೀಗ ಮೂರನೇ ಪಂದ್ಯಕ್ಕೆ ಮುನ್ನ ಮಹಾಕಾಳೇಶ್ವರನ ದರ್ಶನ ಪಡೆದಿದ್ದಾರೆ. ಕೊಹ್ಲಿಗೆ ಕುಲದೀಪ್ ಯಾದವ್ ಕೂಡಾ ಸಾಥ್ ನೀಡಿದ್ದಾರೆ. ಆರತಿಯಲ್ಲಿ ಪಾಲ್ಗೊಂಡು ಭಕ್ತಿಯಿಂದ ಪೂಜೆ ಸಲ್ಲಿಸಿದ್ದಾರೆ.
ಬೆಂಗಳೂರು: ಬಿಗ್ ಬಾಸ್ ಫೈನಲ್ ಇಂದೇ ನಡೆಯಬಹುದು ಎಂದು ಕಾದಿದ್ದ ಪ್ರೇಕ್ಷಕರಿಗೆ ಕಿಚ್ಚ ಸುದೀಪ್ ಮತ್ತು ಕಲರ್ಸ್ ವಾಹಿನಿ ಶಾಕ್ ಕೊಟ್ಟಿದೆ. ಇಂದಿನಿಂದಲೇ ಬಿಗ್ ಬಾಸ್ ಫೈನಲ್ ಆರಂಭವಾಗಲಿದೆ ಎಂದು ಫ್ಯಾನ್ಸ್ ಕಾದಿದ್ದರು. ಆದರೆ ಕಿಚ್ಚ ಸುದೀಪ್ ಸಿಸಿಎಲ್ ಟೂರ್ನಿಯಲ್ಲಿ ಬ್ಯುಸಿಯಾಗಿದ್ದಾರೆ. ಸಿಸಿಎಲ್ ಕಾರಣಕ್ಕೆ ಕಿಚ್ಚ ಸುದೀಪ್ ಇಂದು ಫೈನಲ್ ಚಿತ್ರೀಕರಣ ನಡೆಸಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ನಾಳೆ ಒಂದೇ ದಿನ ಬಿಗ್ ಬಾಸ್ ಫೈನಲ್ ಎಪಿಸೋಡ್ ಪ್ರಸಾರವಾಗಲಿದೆ. ಎರಡು ದಿನ ಫೈನಲ್ ನಿರೀಕ್ಷಿಸಿದ್ದ ಪ್ರೇಕ್ಷಕರಿಗೆ ನಿರಾಸೆಯಾಗಿದೆ. ಪ್ರತೀ ಬಾರಿ ಬಿಗ್ ಬಾಸ್ ಫೈನಲ್ ಎರಡು ದಿನ ನಡೆಯುತ್ತಿತ್ತು.
ಬೆಂಗಳೂರು: ಕಲ್ಟ್ ಸಿನಿಮಾ ಪತ್ರಿಕಾಗೋಷ್ಠಿಯಲ್ಲಿ ಮಂಗಳೂರು ಮೂಲದ ಪತ್ರಕರ್ತರೊಬ್ಬರು ನಟ ಝೈದ್ ಖಾನ್ ರನ್ನು ಮಂಗಳೂರಿನವರು ಕನ್ನಡ ಮಾತಾಡಲ್ಲ ಎಂದು ನಿಮಗೆ ಯಾರು ಹೇಳಿದ್ದು ಎಂದು ತರಾಟೆಗೆ ತೆಗೆದುಕೊಂಡ ಪ್ರಸಂಗ ನಡೆಯಿತು. ಇತ್ತೀಚೆಗೆ ನಟ ಝೈದ್ ಖಾನ್ ಇಂಗ್ಲಿಷ್, ತುಳು ಬಿಟ್ಟು ಕನ್ನಡ ಮಾತನಾಡಿ ಎಂದು ಮಂಗಳೂರಿನಲ್ಲಿ ಹೇಳಿಕೆ ನೀಡಿದ್ದರು. ಇದಕ್ಕೆ ಮಂಗಳೂರಿಗರು ನಿಮ್ಮ ಸಿನಿಮಾ ಬಂದ್ ಮಾಡ್ತೀವಿ ಎಂದು ಎಚ್ಚರಿಕೆ ನೀಡಿದ್ದರು. ಇದಕ್ಕೆ ಝೈದ್ ಖಾನ್ ನನಗೆ ಮಂಗಳೂರಿನಿಂದ ಕಲೆಕ್ಷನ್ ಬೇಡ ಎಂದಿದ್ದರು.
ಬೆಂಗಳೂರು: ಕೆಟ್ಟ ಕಾಮೆಂಟ್ ಮಾಡುವವರ ಬಗ್ಗೆ ಆಕ್ರೋಶ ವ್ಯಕ್ತಪಡಿಸುವ ಭರದಲ್ಲಿ ವೇದಿಕೆ ಮೇಲೆಯೇ ನಟಿ ರಚಿತಾ ರಾಮ್ f*** ಪದ ಬಳಸಿದ್ದು ಈಗ ಚರ್ಚೆಗೆ ಕಾರಣವಾಗಿದೆ. ಕಲ್ಟ್ ಸಿನಿಮಾ ಪತ್ರಿಕಾಗೋಷ್ಠಿಯಲ್ಲಿ ರಚಿತಾ ರಾಮ್ ಚಿತ್ರತಂಡದ ಸದಸ್ಯರ ಜೊತೆ ಭಾಗಿಯಾಗಿದ್ದರು. ಈ ವೇಳೆ ಪತ್ರಕರ್ತರು ಬಾಡಿ ಶೇಮಿಂಗ್ ಮಾಡುವವರ ಬಗ್ಗೆ ಪ್ರಶ್ನೆ ಕೇಳಿದ್ದಾರೆ. ಇದಕ್ಕೆ ರಚಿತಾ ಆಕ್ರೋಶ ಭರಿತರಾಗಿ ಮಾತನಾಡುತ್ತಿದ್ದರು. ಈ ವೇಳೆ ಅವರು ಬಾಯ್ತಪ್ಪಿ ಆ ಪದ ಬಳಕೆ ಮಾಡಿದ್ದಾರೆ. ಬಾಡಿ ಶೇಮಿಂಗ್ ಮಾಡುವವರಿಂದ ಎಷ್ಟೋ ಜನ ಆತ್ಮಹತ್ಯೆ ಮಾಡಿಕೊಂಡ ಉದಾಹರಣೆಗಳೂ ಇವೆ.
ಮುಂಬೈ: ಡಬ್ಲ್ಯುಪಿಎಲ್ 2026 ರಲ್ಲಿ ನಿನ್ನೆ ಗುಜರಾತ್ ಜೈಂಟ್ಸ್ ತಂಡವನ್ನು ಸೋಲಿಸಿದ ಆರ್ ಸಿಬಿ ವನಿತೆಯರು ಅಂಕ ಪಟ್ಟಿಯಲ್ಲಿ ನಂ1 ಸ್ಥಾನ ಭದ್ರಪಡಿಸಿದ್ದು ಇಂದು ಮತ್ತೊಂದು ಪಂದ್ಯವಾಡಲು ಸಿದ್ಧರಾಗಿದ್ದಾರೆ. ಆರ್ ಸಿಬಿ ಇದುವರೆಗೆ ಟೂರ್ನಿಯಲ್ಲಿ ಇದುವರೆಗೆ 3 ಪಂದ್ಯಗಳನ್ನಾಡಿದ್ದು ಮೂರೂ ಪಂದ್ಯಗಳಲ್ಲಿ ಗೆಲುವು ಸಿಕ್ಕಿದೆ. ಇದರೊಂದಿಗೆ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಸದ್ಯಕ್ಕೆ ಅಂಕ ಮತ್ತು ನೆಟ್ ರನ್ ರೇಟ್ ಎರಡರಲ್ಲಿಯೂ ಆರ್ ಸಿಬಿ ನಂ1 ಆಗಿದೆ.ನಿನ್ನೆಯ ಪಂದ್ಯದಲ್ಲಂತೂ ಆರ್ ಸಿಬಿ ಬ್ಯಾಟಿಂಗ್ ಜೊತೆಗೆ ಬೌಲಿಂಗ್ ನಲ್ಲೂ ಅದ್ಭುತ ಪ್ರದರ್ಶನ ನೀಡಿತ್ತು.
ಬೆಂಗಳೂರು: ಮಾಜಿ ಸಚಿವ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಮಾಜಿ ಅಧ್ಯಕ್ಷ ಮತ್ತು ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಭೀಮಣ್ಣ ಖಂಡ್ರೆ ಅವರ ನಿಧನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ.ಭಾಲ್ಕಿ ಪುರಸಭೆಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಅವರು, ಭಾಲ್ಕಿ ವಿಧಾನಸಭಾ ಕ್ಷೇತ್ರದಿಂದ ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. 1992 ರಲ್ಲಿ ಎಂ.ವೀರಪ್ಪ ಮೊಯ್ಲಿ ಅವರ ಸಂಪುಟದಲ್ಲಿ ಸಾರಿಗೆ ಸಚಿವರಾಗಿ ಸೇವೆ ಸಲ್ಲಿಸಿದ ಇವರು, ಎರಡು ಬಾರಿ ವಿಧಾನ ಪರಿಷತ್ ಸದಸ್ಯರಾಗಿಯೂ ಕಾರ್ಯನಿರ್ವಹಿಸಿದ್ದರು. ಸ್ವಾತಂತ್ರ್ಯ ಹೋರಾಟದಲ್ಲಿ ಸಕ್ರಿಯವಾಗಿ ಪಾಲ್ಗೊಂಡಿದ್ದರು.
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ನಾಯಕತ್ವ ಬದಲಾವಣೆ ವಿಚಾರ ಭಾರೀ ಸದ್ದು ಮಾಡುತ್ತಿರುವಾಗಲೇ ಡಿಕೆ ಶಿವಕುಮಾರ್ ಕೈಗೆ ಸಿಗದ ರಾಹುಲ್ ಗಾಂಧಿ ಬೇರೆ ನಾಯಕರನ್ನು ಭೇಟಿ ಮಾಡುತ್ತಿರುವುದು ಕುತೂಹಲ ಮೂಡಿಸಿದೆ. ನವಂಬರ್ ನಿಂದ ರಾಜ್ಯ ರಾಜಕೀಯದಲ್ಲಿ ಸಿಎಂ ಬದಲಾವಣೆ ಚರ್ಚೆ ಶುರುವಾದಾಗಿನಿಂದ ರಾಹುಲ್ ಗಾಂಧಿಯವರನ್ನು ಭೇಟಿಯಾಗಲು ಡಿಕೆ ಶಿವಕುಮಾರ್ ಇನ್ನಿಲ್ಲದ ಪ್ರಯತ್ನ ನಡೆಸುತ್ತಿದ್ದಾರೆ. ಮೊನ್ನೆ ಕೊನೆಗೂ ಮೈಸೂರಿನಲ್ಲಿ ಏರ್ ಪೋರ್ಟ್ ನಲ್ಲಿ ಮುಖಾಮುಖಿಯಾಗಿದ್ದರು. ಆದರೆ ಈ ವೇಳೆ ನಾಯಕತ್ವ ಗೊಂದಲದ ಬಗ್ಗೆ ಕೇಳಿದಾಗ ರಾಹುಲ್ ಗಾಂಧಿಯವರು ದೆಹಲಿಗೆ ಬನ್ನಿ, ಅಲ್ಲಿ ಚರ್ಚೆ ಮಾಡೋಣ ಎಂದಿದ್ದಾರೆ ಎಂಬ ಸುದ್ದಿ ಕೇಳಿಬಂದಿತ್ತು.
ಬೆಂಗಳೂರು: ರಾಜ್ಯದಲ್ಲಿ ಈ ವಾರ ಚಳಿ ಮತ್ತು ಮಳೆ ಎರಡೂ ಕಂಡುಬಂದಿದೆ. ವಾರದ ಅಂತ್ಯಕ್ಕೆ ರಾಜ್ಯದ ಹವಾಮಾನ ಹೇಗಿರಲಿದೆ, ಮಳೆಯಿರುತ್ತಾ ಇಲ್ಲಿದೆ ಸಂಪೂರ್ಣ ವಿವರ. ಈ ವಾರದ ಆರಂಭದಲ್ಲಿ ವಾಯುಭಾರ ಕುಸಿತದಿಂದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿಯಲ್ಲಿ ಧಾರಾಕಾರ ಮಳೆಯಾಗಿತ್ತು. ಉಳಿದಂತೆ ಬೆಂಗಳೂರು ಸುತ್ತಮುತ್ತಲ ಜಿಲ್ಲೆಗಳಲ್ಲಿ ತುಂತುರು ಮಳೆಯಾಗಿತ್ತು. ಆದರೆ ಈಗ ವಾಯುಭಾರ ಕುಸಿತದ ಪರಿಣಾಮ ತಗ್ಗಿದೆ. ಆದರೆ ವಾರದ ಅಂತ್ಯಕ್ಕೆ ಚಳಿಯೂ ತಕ್ಕಮಟ್ಟಿಗೆ ಕಡಿಮೆಯಾಗಿದೆ. ಈ ವಾರದ ಅಂತ್ಯಕ್ಕೆ ಎಲ್ಲೂ ಮಳೆಯ ಸೂಚನೆಯಿಲ್ಲ. ಜೊತೆಗೆ ಕನಿಷ್ಠ ತಾಪಮಾನದಲ್ಲೂ ಕೊಂಚ ಸುಧಾರಣೆಯಾಗಲಿದೆ.
ಇಂದು ಶನಿವಾರವಾಗಿದ್ದು ಶನಿ ದೇವನಿಗೆ ವಿಶೇಷವಾದ ಪೂಜೆ. ಶನಿ ದೋಷ ಇರುವವರು ದೋಷ ನಿವಾರಣೆಗಾಗಿ ಇಂದು ಶನಿ ಅಷ್ಟೋತ್ತರ ಶತನಾಮಾವಳಿ ಸ್ತೋತ್ರವನ್ನು ಓದಿ.ಓಂ ಶನೈಶ್ಚರಾಯ ನಮಃ ।ಓಂ ಶಾಂತಾಯ ನಮಃ ।ಓಂ ಸರ್ವಾಭೀಷ್ಟಪ್ರದಾಯಿನೇ ನಮಃ ।ಓಂ ಶರಣ್ಯಾಯ ನಮಃ ।ಓಂ ವರೇಣ್ಯಾಯ ನಮಃ ।ಓಂ ಸರ್ವೇಶಾಯ ನಮಃ ।ಓಂ ಸೌಮ್ಯಾಯ ನಮಃ ।ಓಂ ಸುರವಂದ್ಯಾಯ ನಮಃ ।ಓಂ ಸುರಲೋಕವಿಹಾರಿಣೇ ನಮಃ ।ಓಂ ಸುಖಾಸನೋಪವಿಷ್ಟಾಯ ನಮಃ ॥ 10 ॥ ಓಂ ಸುಂದರಾಯ ನಮಃ ।ಓಂ ಘನಾಯ ನಮಃ ।ಓಂ ಘನರೂಪಾಯ ನಮಃ ।ಓಂ ಘನಾಭರಣಧಾರಿಣೇ ನಮಃ ।ಓಂ ಘನಸಾರವಿಲೇಪಾಯ ನಮಃ ।
ಬೀದರ್: ಕರ್ನಾಟಕದ ಮಾಜಿ ಸಚಿವ, ಬೀದರ್ನ ಧೀಮಂತ ರಾಜಕಾರಣಿ ಶತಾಯುಷಿ ಭೀಮಣ್ಣ ಖಂಡ್ರೆ (102) ಅವರು ಶುಕ್ರವಾರ ನಿಧನರಾದರು.ಭೀಮಣ್ಣ ಖಂಡ್ರೆ ಅವರಿಗೆ ಪರಿಸರ, ಅರಣ್ಯ ಮತ್ತು ಜೀವಿಶಾಸ್ತ್ರ ಸಚಿವ ಈಶ್ವರ ಬಿ. ಖಂಡ್ರೆ ಸೇರಿದಂತೆ ಇಬ್ಬರು ಪುತ್ರರು, ಐದು ಜನ ಪುತ್ರಿಯರು ಇದ್ದಾರೆ. ಪತ್ನಿ ಲಕ್ಷ್ಮೀಬಾಯಿ ಖಂಡ್ರೆ, ಗಂಡು ಮಕ್ಕಳ ಪೈಕಿ ಹಿರಿಯ ಮಗ, ಮಾಜಿ ಶಾಸಕ ವಿಜಯಕುಮಾರ್ ಖಂಡ್ರೆ ಆವರು ಅನಾರೋಗ್ಯದಿಂದ ಈ ಹಿಂದೆಯೇ ಮೃತಪಟ್ಟಿದ್ದಾರೆ.ಸಮಾಜವಾದಿ ಪಕ್ಷದ ಕಾರ್ಯಕರ್ತರಾಗಿ ರಾಜಕೀಯ ಜೀವನ ಆರಂಭಿಸಿದ ಅವರು, 1953ರಲ್ಲಿ ಭಾಲ್ಕಿ ಪುರಸಭೆ ಅಧ್ಯಕ್ಷರಾಗಿದ್ದರು. ಬಳಿಕ ನಾಲ್ಕು ಸಲ ಶಾಸಕರಾಗಿ, ಎರಡು ಸಲ ವಿಧಾನ ಪರಿಷತ್ ಸದಸ್ಯರಾಗಿದ್ದ ಭೀಮಣ್ಣ ಖಂಡ್ರೆ ಅವರು ಎಂ. ವೀರಪ್ಪ ಮೊಯ್ಲಿ ಅವರ ಸಂಪುಟದಲ್ಲಿ ಸಾರಿಗೆ ಸಚಿವರಾಗಿ ಕೆಲಸ ನಿರ್ವಹಿಸಿದ್ದರು.
ನವಿ ಮುಂಬೈ: ರಾಧಾ ಯಾದವ್ ಭರ್ಜರಿ ಅರ್ಧಶತಕ ಹಾಗೂ ಕನ್ನಡತಿ ಶ್ರೇಯಾಂಕ ಪಾಟೀಲ್ ಅವರ ಕೈಚಳಕದ ನೆರವಿನಿಂದ ಶುಕ್ರವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಮಹಿಳಾ ಪ್ರೀಮಿಯರ್ ಲೀಗ್ನಲ್ಲಿ ಹ್ಯಾಟ್ರಿಕ್ ಗೆಲುವು ಸಾಧಿಸಿತು.ಡಿ.ವೈ,. ಪಾಟೀಲ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಆರ್ಸಿಬಿ ತಂಡವು ತನ್ನ ಮೂರನೇ ಪಂದ್ಯದಲ್ಲಿ 32 ರನ್ಗಳಿಂದ ಗುಜರಾತ್ ಜೈಂಟ್ಸ್ ತಂಡವನ್ನು ಮಣಿಸಿತು. ಈ ಮೂಲಕ ಸ್ಮೃತಿ ಪಡೆ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನ ಭದ್ರಪಡಿಸಿಕೊಂಡಿತು.183 ರನ್ಗಳ ಗುರಿಯನ್ನು ಬೆನ್ನಟ್ಟಿದ ಗುಜರಾತ್ ಜೈಂಟ್ಸ್ ತಂಡಕ್ಕೆ ಶ್ರೇಯಾಂಕ ಬಲವಾದ ಪೆಟ್ಟಿ ನೀಡಿದರು. ಐದು ವಿಕೆಟ್ ಪಡೆದ ಅವರು ಎದುರಾಳಿ ಬ್ಯಾಟರ್ಗಳಿಗೆ ಕಡಿವಾಣ ಹಾಕಿದರು. ಅಂತಿಮವಾಗಿ ಗುಜರಾತ್ ಜೈಂಟ್ಸ್ ತಂಡ 150 ರನ್ಗಳಿಗೆ ಆಲೌಟ್ ಆಯಿತು. ಶ್ರೇಯಾಂಕ 3.5 ಓವರ್ ಬೌಲಿಂಗ್ ನಡೆಸಿ 23 ರನ್ ನೀಡಿ 5 ವಿಕೆಟ್ ಪಡೆದರು.
ಮುಂಬೈ: ಡಬ್ಲ್ಯುಪಿಎಲ್ 2026 ರ ಇಂದಿನ ಪಂದ್ಯದಲ್ಲಿ ಗುಜರಾತ್ ಜೈಂಟ್ಸ್ ವಿರುದ್ಧ ಆರ್ ಸಿಬಿ ರಾಧಾಯಾದವ್ ಮತ್ತು ರಿಚಾ ಘೋಷ್ ಭರ್ಜರಿ ಬ್ಯಾಟಿಂಗ್ ನೆರವಿನಿಂದ ಮೊದಲು ಬ್ಯಾಟಿಂಗ್ ಮಾಡಿ 182 ರನ್ ಗಳಿಸಿದೆ. ಇಂದು ಆರ್ ಸಿಬಿಗೆ ಸ್ಮೃತಿ ಮಂಧಾನ, ಗ್ರೇಸ್ ಹ್ಯಾರಿಸ್ ಸೇರಿದಂತೆ ಟಾಪ್ ಆರ್ಡರ್ ಬ್ಯಾಟಿಗರು ಕೈ ಕೊಟ್ಟರು. ಒಂದು ಹಂತದಲ್ಲಿ 43 ರನ್ ಗೆ 4 ವಿಕೆಟ್ ಕಳೆದುಕೊಂಡು ಆರ್ ಸಿಬಿ ಸಂಕಷ್ಟದಲ್ಲಿತ್ತು. ಆದರೆ ರಾಧಾ ಯಾದವ್-ರಿಚಾ ಘೋಷ್ ಜೋಡಿ ಒತ್ತಡ ನಿಭಾಯಸಿದ್ದರ ಜೊತೆಗೆ ರನ್ ರೇಟ್ ಕೂಡಾ ಸುಧಾರಿಸುವಂತೆ ಮಾಡಿದರು.
ಮುಂಬೈ: ಗುಜರಾತ್ ಜೈಂಟ್ಸ್ ವಿರುದ್ಧ ಇಲ್ಲಿನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ಸತತ ಮೂರನೇ ಗೆಲುವಿನ ನಿರೀಕ್ಷೆಯಲ್ಲಿರುವ ಆರ್ಸಿಬಿಗೆ ಇದೀಗ ಟಾಸ್ನಲ್ಲಿ ನಿರಾಸೆಯಾಗಿದೆ. ಟಾಸ್ ಗೆದ್ದ ಗುಜರಾತ್ ಮೊದಲು ಫೀಲ್ಡಿಂಗ್ ಆಯ್ದುಕೊಂಡು ಆರ್ಸಿಬಿಯನ್ನು ಬ್ಯಾಟಿಂಗ್ಗೆ ಆಹ್ವಾನಿಸಿತು. ಯುಪಿ ವಾರಿಯರ್ಸ್ ವಿರುದ್ಧದ ಭರ್ಜರಿ ಗೆಲುವಿನ ಬೆನ್ನಲ್ಲೇ, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಗುಜರಾತ್ ಜೈಂಟ್ಸ್ ವಿರುದ್ಧ ಗ್ರೌಂಡ್ ಇಳಿದಿದೆ. ಮಹಿಳಾ ಪ್ರೀಮಿಯರ್ ಲೀಗ್ ಪಂದ್ಯದಲ್ಲಿ ಎರಡು ತಂಡಗಳು ಮುಖಾಮುಖಿಯಾಗಲಿದ್ದು, ಈ ಪಂದ್ಯದಲ್ಲಿ ಗೆಲ್ಲುವ ನೆಚ್ಚಿನ ತಂಡವಾಗಿ ಆರಂಭವಾಗಲಿದೆ.