ಬೆಂಗಳೂರು: ರಾಜ್ಯದಲ್ಲಿ ಸಾಮಾಜಿಕ, ಶೈಕ್ಷಣಿಕ ಮತ್ತು ಜಾತಿ ಸಮೀಕ್ಷೆ ವಿರೋಧಿಸುತ್ತಿರುವ ರಾಜ್ಯ ಬಿಜೆಪಿ ನಾಯಕರು ಕೇಂದ್ರ ಸರ್ಕಾರ ಜಾತಿ ಗಣತಿ ಮಾಡುವಾಗಲೂ ಇದೇ ರೀತಿ ವಿರೋಧ ಮಾಡ್ತಾರಾ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ. ರಾಜ್ಯದಲ್ಲಿ ನಡೆಯುತ್ತಿರುವ ಜಾತಿ ಸಮೀಕ್ಷೆಗೆ ಬಿಜೆಪಿ ನಾಯಕರು ಬಹಿಷ್ಕಾರದ ಕರೆ ಕೊಟ್ಟಿರುವ ಬಗ್ಗೆ ಸಿಎಂ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. ಬಿಜೆಪಿ ನಾಯಕರಿಗೆ ಇದೇ ರೀತಿ ಕೇಂದ್ರ ನಾಯಕರ ಮುಂದೆ ಪ್ರಶ್ನೆ ಮಾಡುವ ಧಮ್ ಇದೆಯಾ ಎಂದಿದ್ದಾರೆ. ‘ಬಿಹಾರದಲ್ಲಿ ಬಿಜೆಪಿಯವರ ಮೈತ್ರಿ ಸರ್ಕಾರವೇ ಜಾತಿ ಆಧಾರಿತ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ನಡೆಸಿದೆ. ಇದೇ ರೀತಿ ತೆಲಂಗಾಣದಲ್ಲಿಯೂ ನಡೆದಿದೆ.
ಬೆಂಗಳೂರು: ಪಾಕಿಸ್ತಾನ ವಿರುದ್ಧ ಕ್ರಿಕೆಟ್ ನಲ್ಲಿ ಗೆದ್ದರೆ ಯುದ್ಧ ಗೆದ್ದಂತಾ ಎಂದು ಕಾಂಗ್ರೆಸ್ ಎಂಎಲ್ ಸಿ ಬಿಕೆ ಹರಿಪ್ರಸಾದ್ ವ್ಯಂಗ್ಯ ಮಾಡಿದ್ದಾರೆ. ಏಷ್ಯಾ ಕಪ್ ನಲ್ಲಿ ನಿನ್ನೆ ಪಾಕಿಸ್ತಾನದ ವಿರುದ್ಧ 5 ವಿಕೆಟ್ ಗಳಿಂದ ಗೆದ್ದ ಟೀಂ ಇಂಡಿಯಾ ಚಾಂಪಿಯನ್ ಆಗಿ ಹೊರಹೊಮ್ಮಿತ್ತು. ಈ ಗೆಲುವಿಗೆ ದೇಶದ ಪ್ರಧಾನಿಯೇ ಹೀಗೆ ಹೇಳುವಾಗ.. ಮೋದಿ ಹೇಳಿಕೆ ಸೂರ್ಯಕುಮಾರ್ ಯಾದವ್ ಪ್ರತಿಕ್ರಿಯಿಸಿದ್ದ ಪ್ರಧಾನಿ ಮೋದಿ ಮೈದಾನದಲ್ಲೂ ಆಪರೇಷನ್ ಸಿಂಧೂರ್ ಆಗಿದೆ. ಗೆಲುವು ಇಲ್ಲೂ ನಮ್ಮದೇ ಎಂದು ಟ್ವೀಟ್ ಮಾಡಿ ಅಭಿನಂದಿಸಿದ್ದರು.
ದುಬೈ: ಏಷ್ಯಾ ಕಪ್ ಗೆದ್ದ ಬಳಿಕ ಪ್ರಧಾನಿ ಮೋದಿ ಮಾಡಿದ ಟ್ವೀಟ್ ಗೆ ಟೀಂ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್ ಪ್ರತಿಕ್ರಿಯಿಸಿದ್ದು ದೇಶದ ಪ್ರಧಾನಿಯೇ ಈ ಹೇಳಿಕೆ ನೀಡುವಾಗ ಖುಷಿಯಾಗುತ್ತಿದೆ ಎಂದಿದ್ದಾರೆ. ನಿನ್ನೆ ನಡೆದ ಏಷ್ಯಾ ಕಪ್ ಫೈನಲ್ ಪಂದ್ಯದಲ್ಲಿ ಪಾಕಿಸ್ತಾನವನ್ನು 5 ವಿಕೆಟ್ ಗಳಿಂದ ಸೋಲಿಸಿದ ಟೀಂ ಇಂಡಿಯಾ 9 ನೇ ಬಾರಿಗೆ ಏಷ್ಯಾ ಕಪ್ ಚಾಂಪಿಯನ್ ಆಗಿದೆ. ಈ ಗೆಲುವಿನ ಬಳಿಕ ಪ್ರಧಾನಿ ಮೋದಿ ಟ್ವೀಟ್ ಮಾಡಿ ಟೀಂ ಇಂಡಿಯಾಕ್ಕೆ ಅಭಿನಂದಿಸಿದ್ದಾರೆ. ಮೈದಾನದಲ್ಲೂ ಆಪರೇಷನ್ ಸಿಂಧೂರ್ ಆಗಿದೆ. ಗೆಲುವು ಇಲ್ಲೂ ನಮ್ಮದೇ ಎಂದು ಟ್ವೀಟ್ ಮಾಡಿ ಅಭಿನಂದಿಸಿದ್ದರು. ಪ್ರಧಾನಿ ಮೋದಿ ಟ್ವೀಟ್ ಪಾಕಿಸ್ತಾನಿಯರ ಹೊಟ್ಟೆ ಉರಿಗೆ ಕಾರಣವಾಗಿದೆ.
ಬೆಂಗಳೂರು: ಕರ್ನಾಟಕದಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಸುತ್ತಿರುವುದಕ್ಕೆ ವಿರೋಧ ವ್ಯಕ್ತಪಡಿಸುತ್ತಿರುವ ಬಿಜೆಪಿ ವಿರುದ್ಧ ಸಿಎಂ ಸಿದ್ದರಾಮಯ್ಯ ಫುಲ್ ಗರಂ ಆಗಿದ್ದಾರೆ. ಈ ಬಗ್ಗೆ ಸೋಷಿಯಲ್ ಮೀಡಿಯಾ ಎಕ್ಸ್ ಮೂಲಕ ಅವರು ವಾಗ್ದಾಳಿ ನಡೆಸಿದ್ದಾರೆ. ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಎನ್ನುವ ಬಿಜೆಪಿಯವರು ಎಲ್ಲರ ಸಾಮಾಜಿಕ ಮತ್ತು ಆರ್ಥಿಕ ಸ್ಥಿತಿ ಗತಿ ತಿಳಿಯಲು ಹೋದರೆ ವಿರೋಧ ಮಾಡುತ್ತಿದ್ದಾರೆ ಎಂದಿದ್ದಾರೆ. ‘ನಮ್ಮ ಸರ್ಕಾರ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಪ್ರಾರಂಭಿಸುತ್ತಿದ್ದಂತೆಯೇ ‘‘ಸಬ್ ಕಾ ಸಾಥ್ ಸಬ್ ಕಾ ವಿಕಾಸ್" ಎಂದು ಕೂಗು ಹಾಕುತ್ತಿರುವವರ ಆಂತರ್ಯದಲ್ಲಿರುವ ನಿಜ ಬಣ್ಣ ಬಯಲಾಗುತ್ತಿದೆ.
ದುಬೈ: ಭಾರತ ಗೆದ್ದ ಏಷ್ಯಾ ಕಪ್ ಟ್ರೋಫಿಯನ್ನು ಕದ್ದೊಯ್ದ ಪಾಕಿಸ್ತಾನದ ಮೊಹ್ಸಿನ್ ನಖ್ವಿ ಇದರ ಬೆನ್ನಲ್ಲೇ ಪ್ರಧಾನಿ ಮೋದಿ ಟ್ವೀಟ್ ಗೆ ಪ್ರತಿಯಾಗಿ ಭಾರತವನ್ನು ಅವಹೇಳನ ಮಾಡುವ ಟ್ವೀಟ್ ಮಾಡಿದ್ದರು. ಇದಾದ ಕೆಲವೇ ಕ್ಷಣಗಳಲ್ಲಿ ಈಗ ಮೊಹ್ಸಿನ್ ನಖ್ವಿ ಎಕ್ಸ್ ಖಾತೆಯೇ ಬ್ಯಾನ್ ಮಾಡಲಾಗಿದೆ. ಏಷ್ಯಾ ಕಪ್ ಗೆದ್ದ ಟೀಂ ಇಂಡಿಯಾಗೆ ಅಭಿನಂದನೆ ಸಲ್ಲಿಸಿದ ಪ್ರಧಾನಿ ಮೋದಿ ಆಟದಲ್ಲೂ ಆಪರೇಷನ್ ಸಿಂಧೂರ್ ನಡೆದಿದೆ. ಎಲ್ಲೇ ಇದ್ದರೂ ಗೆಲುವು ಭಾರತದ್ದೇ ಎಂದು ಮೋದಿ ಅಗ್ರೆಸಿವ್ ಆಗಿ ಟ್ವೀಟ್ ಮಾಡಿದ್ದರು. ಅವರ ಈ ಟ್ವೀಟ್ ಗೆ ಪ್ರತಿಯಾಗಿ ಮೊಹ್ಸಿನ್ ನಖ್ವಿ ಯುದ್ಧವನ್ನು ಕ್ರೀಡೆಗೆ ಎಳೆದು ತರೋದು ಹತಾಶೆಯನ್ನು ತೋರಿಸುತ್ತದೆ.
ಮುಂಬೈ: ಮಾನ ಮರ್ಯಾದೆ ಇದ್ರೆ ಮೊಹ್ಸಿನ್ ನಖ್ವಿ ಟೀಂ ಇಂಡಿಯಾ ಗೆದ್ದ ಟ್ರೋಫಿಯನ್ನು ಹಿಂದಿರುಗಿಸುತ್ತಾರೆ. ಇಲ್ಲ ಅಂದ್ರೆ ನಾವು ಬೇರೆಯೇ ದಾರಿ ಕಂಡುಕೊಳ್ಳಬೇಕಾಗುತ್ತದೆ ಎಂದು ಬಿಸಿಸಿಐ ಕಾರ್ಯದರ್ಶಿ ದೇವಜಿತ್ ಸಾಯ್ಕಾ ಎಚ್ಚರಿಕೆ ನೀಡಿದ್ದಾರೆ. ಏಷ್ಯಾ ಕಪ್ ಫೈನಲ್ ನಲ್ಲಿ ಭಾರತ ಗೆದ್ದ ಬಳಿಕ ಎಸಿಸಿ ಅಧ್ಯಕ್ಷರಾಗಿರುವ ಪಾಕಿಸ್ತಾನದ ಮೊಹ್ಸಿನ್ ನಖ್ವಿಯಿಂದ ಟ್ರೋಫಿ ಸ್ವೀಕರಿಸಲು ನಿರಾಕರಿಸಿದೆ. ಈ ಕಾರಣಕ್ಕೆ ನಖ್ವಿ ನನ್ನ ಟ್ರೋಫಿ, ನನ್ನ ಇಷ್ಟ ಎಂದು ಭಾರತ ಗೆದ್ದ ಟ್ರೋಫಿ, ಮೆಡಲ್ ಗಳ ಸಮೇತ ಹೋಟೆಲ್ ರೂಂಗೆ ತೆರಳಿದ್ದರು.
ಬೆಂಗಳೂರು: ರಾಜ್ಯಾದ್ಯಂತ ಈಗ ಜಾತಿಗಣತಿಗೆ ಸರ್ಕಾರ ಆದೇಶ ನೀಡಿದೆ. ಆದರೆ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಇನ್ನೂ ಜಾತಿಗಣತಿಯಾಗಿಲ್ಲ. ಬೆಂಗಳೂರಿನಲ್ಲಿ ಯಾವಾಗ ಜಾತಿಗಣತಿ ಆರಂಭವಾಗಲಿದೆ ಇಲ್ಲಿದೆ ಉತ್ತರ. ಈ ಬಗ್ಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮುಖ್ಯ ಅಯುಕ್ತ ಮಹೇಶ್ವರ ರಾವ್ ಮಾಹಿತಿ ನೀಡಿದ್ದಾರೆ. ಬೆಂಗಳೂರಿನಲ್ಲಿ ಅಕ್ಟೋಬರ್ 3 ರಿಂದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಆರಂಭವಾಗಲಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. ಈಗಾಗಲೇ ಸಿಎಂ ಸಿದ್ದರಾಮಯ್ಯ ಅಕ್ಟೋಬರ್ 7 ರೊಳಗಾಗಿ ಎಲ್ಲಾ ಜಿಲ್ಲೆಗಳಲ್ಲಿ ಸಮೀಕ್ಷೆ ಮುಗಿಯಬೇಕು ಎಂದು ಆದೇಶ ಹೊರಡಿಸಿದ್ದಾರೆ. ಆದರೆ ಹಲವು ತಾಂತ್ರಿಕ ಸಮಸ್ಯೆಗಳನ್ನು ಎದುರಿಸುತ್ತಿರುವ ಕಾರಣಕ್ಕೆ ಆಮೆಗತಿಯಲ್ಲಿ ಗಣತಿ ನಡೆಯುತ್ತಿದೆಯಷ್ಟೇ.
ಬೆಂಗಳೂರು: ಹಿರಿಯ ರಂಗಭೂಮಿ ಕಲಾವಿದ, ಸ್ಯಾಂಡಲ್ ವುಡ್ ನಟ ಯಶವಂತ ಸರದೇಶಪಾಂಡೆ ಹೃದಯಾಘಾದಿಂದ ನಿಧನರಾಗಿದ್ದಾರೆ. ಇಂದು ಬೆಳಿಗ್ಗೆ ಸುಮಾರು 10 ಗಂಟೆಗೆ ಅವರು ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ. ಅವರಿಗೆ 60 ವರ್ಷ ವಯಸ್ಸಾಗಿತ್ತು. ಇಂದು ಬೆಳಿಗ್ಗೆ ಸುಮಾರು 10 ಗಂಟೆಗೆ ಅವರಿಗೆ ತೀವ್ರ ಹೃದಯಾಘಾವತಾಗಿದೆ. ತಕ್ಷಣವೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಜೀವ ಉಳಿಸಲಾಗಲಿಲ್ಲ. ಅವರ ಸಾವಿಗೆ ಕನ್ನಡ ಚಿತ್ರರಂಗದ ಕಲಾವಿದರು, ಅಭಿಮಾನಿಗಳು ಸಂತಾಪ ವ್ಯಕ್ತಪಡಿಸಿದ್ದಾರೆ. ಹಾಸ್ಯ ನಟನಾಗಿ, ಪೋಷಕ ನಟನಾಗಿ ಕನ್ನಡ ಚಿತ್ರರಂಗದಲ್ಲಿಯೂ ಗುರುತಿಸಿಕೊಂಡಿದ್ದರು.
ದುಬೈ: ಏಷ್ಯಾ ಕಪ್ ಕ್ರಿಕೆಟ್ ಟೂರ್ನಿಯಲ್ಲಿ ಭಾರತದ ವಿರುದ್ಧ ಸೋತ ಬಳಿಕ ಪಾಕಿಸ್ತಾನ ನಾಯಕ ಸಲ್ಮಾನ್ ಅಘಾ, ಟೀಂ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್ ಕ್ಯಾಮರಾ ಎದುರು ಮಾತ್ರ ನಾಟಕವಾಡ್ತಾರೆ ಎಂದು ಆರೋಪಿಸಿದ್ದಾರೆ. ಟೀಂ ಇಂಡಿಯಾ ವಿರುದ್ಧ ಫೈನಲ್ ನಲ್ಲಿ ಸೋತ ಬಳಿಕ ಪಾಕಿಸ್ತಾನ ನಾಯಕ ಸಲ್ಮಾನ್ ಅಘಾ ಹಲವು ಆರೋಪಗಳನ್ನು ಮಾಡಿದ್ದಾರೆ. ಭಾರತದ ವಿರುದ್ಧದ ಸೋಲಿನ ಹತಾಶೆಯನ್ನು ಕಕ್ಕಿದ್ದಾರೆ. ಸೂರ್ಯಕುಮಾರ್ ಯಾದವ್ ಟೂರ್ನಮೆಂಟ್ ಆರಂಭಕ್ಕೆ ಮೊದಲು ಪ್ರೆಸ್ ಕಾನ್ಫರೆನ್ಸ್ ನಲ್ಲಿ ನಮ್ಮ ಕೈಕಲುಕಿದ್ದರು. ಆದರೆ ನಂತರ ಮೈದಾನದಲ್ಲಿ ಕೈಕುಲುಕಲು ನಿರಾಕರಿಸಿದರು. ಅವರು ನಾಟಕವಡುತ್ತಿದ್ದಾರೆ ಎಂದು ಸಲ್ಮಾನ್ ಅಘಾ ನಿರಾಕರಿಸಿದ್ದಾರೆ.
ಬೆಂಗಳೂರು: ವಾರದ ಆರಂಭಿಕ ದಿನವೇ ಚಿನ್ನದ ಬೆಲೆ ಭಾರೀ ಏರಿಕೆಯಾಗಿದೆ. ಕಳೆದ ವಾರಂತ್ಯಕ್ಕೆ ಹೋಲಿಸಿದರೆ ಇಂದು ಚಿನ್ನದ ದರ ಭಾರೀ ಏರಿಕೆಯಾಗಿದೆ. ಇಂದು ಪರಿಶುದ್ಧ ಚಿನ್ನದ ದರ ಮತ್ತು ಇತರೆ ಚಿನ್ನದ ದರ ವಿವರ ಇಲ್ಲಿದೆ ನೋಡಿ. ಚಿನ್ನದ ದರ ಏರಿಕೆಚಿನ್ನದ ದರ ದಿನೇ ದಿನೇ ಏರಿಕೆಯಾಗುತ್ತಿದ್ದು ದಾಖಲೆಯ ಮಟ್ಟಕ್ಕೆ ತಲುಪಿದೆ. ಈಗಂತೂ ಮಧ್ಯಮ ವರ್ಗದವರಿಗೆ ಚಿನ್ನ ಕೊಳ್ಳುವುದು ಕನಸೇ ಎಂಬಂತಾಗಿದೆ. ಈ ವಾರದ ಆರಂಭದಿಂದಲೂ ಚಿನ್ನದ ಬೆಲೆ ಏರಿಕೆಯಾಗುತ್ತಲೇ ಇದೆ. ಆದರೆ ವಾರದ ಅಂತ್ಯಕ್ಕೆ ಪರಿಶುದ್ಧ ಚಿನ್ನದ ದರ ಕೊಂಚ ಇಳಿಕೆಯಾಗಿತ್ತು. ಆದರೆ ಇಂದು ಮತ್ತೆ ಏರಿಕೆಯಾಗಿದೆ. ಪರಿಶುದ್ಧ ಚಿನ್ನದ ದರ ಮೊನ್ನೆ1,16.910.00 ರೂ.ಗಳಷ್ಟಿತ್ತು.
ದುಬೈ: ಈ ಬಾರಿ ಏಷ್ಯಾ ಕಪ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಟೀಂ ಇಂಡಿಯಾ ಪರ ಒಂದೇ ಒಂದು ಪಂದ್ಯವಾಡದೇ ಅಕ್ಷರಶಃ ಟೂರ್ ಮಾಡಿದ ಕ್ರಿಕೆಟಿಗ ಒಬ್ಬರು ಮಾತ್ರ. 2025 ರ ಏಷ್ಯಾ ಕಪ್ ಪಂದ್ಯಾವಳಿಗೆ ಟೀಂ ಇಂಡಿಯಾ 15 ಸದಸ್ಯರ ಬಳಗವನ್ನು ಘೋಷಿಸಲಾಗಿತ್ತು. ಈ ಪೈಕಿ 13 ಆಟಗಾರರು ಬೇರೆ ಬೇರೆ ಪಂದ್ಯಗಳನ್ನು ಆಡಿದ್ದರು. ಆದರೆ ಇಬ್ಬರು ಆಟಗಾರರಿಗೆ ಮಾತ್ರ ಒಂದೇ ಒಂದು ಪಂದ್ಯವಾಡುವ ಅವಕಾಶ ಸಿಕ್ಕಿರಲಿಲ್ಲ. ಅವರೆಂದರೆ ಜಿತೇಶ್ ಶರ್ಮಾ. ಬಹುಶಃ ರಿಂಕು ಸಿಂಗ್ ಕೂಡಾ ಇದೇ ಸಾಲಿಗೆ ಸೇರುತ್ತಿದ್ದರು. ಆದರೆ ಹಾರ್ದಿಕ್ ಪಾಂಡ್ಯ ಗಾಯಗೊಂಡಿದ್ದರಿಂದ ಫೈನಲ್ ಪಂದ್ಯದಲ್ಲಿ ಆಡುವ ಅವಕಾಶ ಪಡೆದಿದ್ದರು.
ದುಬೈ: ಏಷ್ಯಾ ಕಪ್ ಕ್ರಿಕೆಟ್ ಫೈನಲ್ ನಲ್ಲಿ ಪಾಕಿಸ್ತಾನವನ್ನು ಸೋಲಿಸಿದ ಬಳಿಕ ಟೀಂ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್ ಮಹತ್ವದ ತೀರ್ಮಾನವೊಂದನ್ನು ಪ್ರಕಟಿಸಿದ್ದಾರೆ. ಇದಕ್ಕೆ ನೆಟ್ಟಿಗರಿಂದ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ. ಏಷ್ಯಾ ಕಪ್ ಕ್ರಿಕೆಟ್ ಎನ್ನುವುದಕ್ಕಿಂತ ಇದು ಭಾರತ-ಪಾಕಿಸ್ತಾನ ನಡುವಿನ ಜಿದ್ದಾಜಿದ್ದಿಗೆ ವೇದಿಕೆಯಾಗಿತ್ತು. ಪಹಲ್ಗಾಮ್ ದಾಳಿ ಬಳಿಕ ಭಾರತ-ಪಾಕಿಸ್ತಾನ ನಡುವಿನ ಮೊದಲ ಪಂದ್ಯಗಳು ಇದಾಗಿತ್ತು. ಹೀಗಾಗಿ ಸಹಜವಾಗಿಯೇ ಈ ಎರಡೂ ತಂಡಗಳ ನಡುವೆ ಜಿದ್ದಾಜಿದ್ದಿ ತಾರಕಕ್ಕೇರಿತ್ತು. ಏಷ್ಯಾ ಕಪ್ ನ ಲೀಗ್ ಪಂದ್ಯದಲ್ಲಿ ಪಾಕಿಸ್ತಾನವನ್ನು ಸೋಲಿಸಿದ ಬಳಿಕ ಮಾತನಾಡಿದ್ದ ಸೂರ್ಯಕುಮಾರ್ ಯಾದವ್ ಗೆಲುವನ್ನು ಪಹಲ್ಗಾಮ್ ಸಂತ್ರಸ್ತರಿಗೆ ಮತ್ತು ಭಾರತೀಯ ಸೇನೆಗೆ ಅರ್ಪಿಸಿದ್ದರು.
ದುಬೈ: ಏಷ್ಯಾ ಕಪ್ ಕ್ರಿಕೆಟ್ ಫೈನಲ್ 2 ಓವರ್ ಗಳಲ್ಲಿ ಭಾರತಕ್ಕೆ ಗೆಲ್ಲಲು 17 ರನ್ ಬೇಕಾಗಿದ್ದಾಗ ಪಾಕಿಸ್ತಾನ ಗೆಲುವು ತಡೆಯಲು ದೊಡ್ಡ ಸಂಚು ಮಾಡಿತ್ತು. ಆದರೆ ಇದನ್ನು ಭಾರತೀಯ ಆಟಗಾರರು ಒಂದೇ ಹೊಡೆತದಲ್ಲಿ ವಿಫಲಗೊಳಿಸಿದ್ದಾರೆ. 18 ನೇ ಓವರ್ ಮಾಡಲು ಬಂದ ಹ್ಯಾರಿಸ್ ರೌಫ್ ಬೌಲಿಂಗ್ ನಲ್ಲಿ ಕೊನೆಯ ಎಸೆತದಲ್ಲಿ ಶಿವಂ ದುಬೆ ಸಿಕ್ಸರ್ ಸಿಡಿಸಿದರು. ಈ ಸಿಕ್ಸರ್ ಒತ್ತಡದಲ್ಲಿದ್ದ ಭಾರತವನ್ನು ನಿರಾಳವಾಗಿಸಿತು. ಕೊನೆಯ ಎರಡು ಓವರ್ ಗಳಲ್ಲಿ ಭಾರತಕ್ಕೆ 17 ರನ್ ಗಳಿಸಿದರೆ ಸಾಕಿತ್ತು.
ಬೆಂಗಳೂರು: ಬಹುನಿರೀಕ್ಷಿತ ಕಾಂತಾರ ಚಾಪ್ಟರ್ 1 ಸಿನಿಮಾ ಅಕ್ಟೋಬರ್ 2 ರಂದು ಬಿಡುಗಡೆಯಾಗಲಿದ್ದು, ಚಿತ್ರದ ಟಿಕೆಟ್ ದರ ಕೇಳಿದ್ರೆ ಶಾಕ್ ಆಗ್ತೀರಿ. ಮೊದಲ ಮೂರು ದಿನದ ಶೋಗಳು ಈಗಾಗಲೇ ಬಹುತೇಕ ಚಿತ್ರಮಂದಿರಗಳಲ್ಲಿ ಹೌಸ್ ಫುಲ್ ಆಗಿವೆ. ವಿಶೇಷವಾಗಿ ಮಲ್ಟಿಪ್ಲೆಕ್ಸ್ ಚಿತ್ರಮಂದಿರಗಳಲ್ಲಿ ಚಿತ್ರ ನೋಡಬೇಕೆಂದರೆ ಸದ್ಯಕ್ಕಂತೂ ಟಿಕೆಟ್ ಸಿಗಲ್ಲ. ಸಿಕ್ಕರೂ ನಿಮಗೆ ಬೇಕಾದ ಸಮಯಕ್ಕೆ ಸಿಗಲ್ಲ. ಇನ್ನು ಸಿಂಗಲ್ ಸ್ಕ್ರೀನ ಗಳಲ್ಲೂ ಇದೇ ಕತೆ. ಸಿಂಗಲ್ ಸ್ಕ್ರೀನ್ ಚಿತ್ರಮಂದಿರಗಳಲ್ಲಿ ಟಿಕೆಟ್ ದರ 120 ರೂ.ಗಳಿಂದ ಆರಂಭವಾಗುತ್ತಿತ್ತು. ಆದರೆ ಈಗ 200 ರೂ.ಗಿಂತ ಕಡಿಮೆಯಿಲ್ಲ.
ಚೆನ್ನೈ: ಕರೂರು ಟಿವಿಕೆ ಪಕ್ಷದ ರಾಲಿಯಲ್ಲಿ ಕಾಲ್ತುಳಿತ ಸಂಭವಿಸಿ 30 ಕ್ಕೂ ಹೆಚ್ಚು ಜನ ಪ್ರಾಣ ಕಳೆದುಕೊಂಡು ದುರಂತ ಸಂಭವಿಸಿತ್ತು. ಇದೀಗ ಆ ದುರಂತಕ್ಕೆ ವಿಜಯ್ ಫ್ಯಾನ್ಸ್ ದೂರುತ್ತಿರುವುದು ಯಾರನ್ನು ಗೊತ್ತಾ? ಮೊನ್ನೆ ಸಂಜೆ ಕರೂರಿನಲ್ಲಿ ಟಿವಿಕೆ ಪಕ್ಷದ ಸ್ಥಾಪಕ, ದಳಪತಿ ವಿಜಯ್ ಬರುತ್ತಾರೆಂದು 30000 ಕ್ಕೂ ಅಧಿಕ ಮಂದಿ ಒಂದೇ ಕಡೆ ಸೇರಿದ್ದರಿಂದ ನೂಕು ನುಗ್ಗಲು ಉಂಟಾಗಿ ಕಾಲ್ತುಳಿತ ಸಂಭವಿಸಿತ್ತು. ಘಟನೆಗೆ ಸಂಬಂಧಿಸಿದಂತೆ ವಿಜಯ್ ವಿರುದ್ಧ ದೂರು ದಾಖಲಾಗಿದೆ. ಜೊತೆಗೆ ಅವರನ್ನು ಬಂಧಿಸಬೇಕು ಎಂದು ಕೆಲವರು ಸೋಷಿಯಲ್ ಮೀಡಿಯಾದಲ್ಲಿ ಆಗ್ರಹಿಸಿದ್ದರು.
ನವದೆಹಲಿ: ಏಷ್ಯಾ ಕಪ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಪಾಕಿಸ್ತಾನವನ್ನು ಸೋಲಿಸಿದ ಟೀಂ ಇಂಡಿಯಾಕ್ಕೆ ಅಭಿನಂದನೆ ಸಲ್ಲಿಸಿದ ಪ್ರಧಾನಿ ಮೋದಿಗೆ ಯೋಧರ ಸಾಹಸವನ್ನು ಕ್ರಿಕೆಟ್ ಪಂದ್ಯಕ್ಕೆ ಹೋಲಿಸಬೇಡಿ ಎಂದು ನೆಟ್ಟಿಗರು ಕಿಡಿ ಕಾರಿದ್ದಾರೆ. ಏಷ್ಯಾ ಕಪ್ ನಲ್ಲಿ ಭಾರತ ಗೆಲ್ಲುತ್ತಿದ್ದಂತೇ ಟ್ವೀಟ್ ಮಾಡಿದ ಪ್ರಧಾನಿ ಮೋದಿ, ಮೈದಾನದಲ್ಲೂ ಆಪರೇಷನ್ ಸಿಂಧೂರ್. ಫಲಿತಾಂಶ ಒಂದೇ, ಭಾರತವೇ ಗೆದ್ದಿದೆ. ಟೀಂ ಇಂಡಿಯಾ ಕ್ರಿಕೆಟಿಗರಿಗೆ ಅಭಿನಂದನೆಗಳು ಎಂದು ಟ್ವೀಟ್ ಮಾಡಿದ್ದಾರೆ. ಆದರೆ ಅವರ ಟ್ವೀಟ್ ಗೆ ಕೆಲವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಯೋಧರು ಪ್ರಾಣ ಪಣವಾಗಿಟ್ಟುಕೊಂಡು ಹೋರಾಡಿದ ಆಪರೇಷನ್ ಸಿಂಧೂರ್ ಗೆ ಕ್ರಿಕೆಟಿಗರು ಆಡುವ ಪಂದ್ಯವನ್ನು ಹೋಲಿಸಬೇಡಿ ಎಂದು ಪ್ರತಿಕ್ರಿಯಿಸಿದ್ದಾರೆ.
ದುಬೈ: ಏಷ್ಯಾ ಕಪ್ ಕ್ರಿಕೆಟ್ ಫೈನಲ್ ಪಂದ್ಯದಲ್ಲಿ ಪಾಕಿಸ್ತಾನಿ ಸ್ಪಿನ್ನರ್ ಸೆಂಡ್ ಆಫ್ ವೀರ ಅಬ್ರಾರ್ ಅಹ್ಮದ್ ಗೆ ಟೀಂ ಇಂಡಿಯಾ ಹುಡುಗರು ಶೇಪ್ ಔಟ್ ಆಗುವಂತೆ ಟ್ರೋಲ್ ಮಾಡಿದ್ದಾರೆ. ಆ ವಿಡಿಯೋ ಇಲ್ಲಿದೆ ನೋಡಿ. ಫೈನಲ್ ಪಂದ್ಯದಲ್ಲಿ ಟೀಂ ಇಂಡಿಯಾ ಸಂಕಷ್ಟದಲ್ಲಿದ್ದಾಗ ಉತ್ತಮವಾಗಿ ಬ್ಯಾಟಿಂಗ್ ಮಾಡುತ್ತಿದ್ದ ಸಂಜು ಸ್ಯಾಮ್ಸನ್ ರನ್ನು ಅಬ್ರಾರ್ ಔಟ್ ಮಾಡಿದ್ದರು. ಸಂಜು ವಿಕೆಟ್ ಕೀಳುತ್ತಿದ್ದಂತೇ ಅಬ್ರಾರ್ ಎಂದಿನಂತೇ ತಮ್ಮದೇ ಶೈಲಿಯಲ್ಲಿ ಪೆವಿಲಿಯನ್ ಗೆ ಹೋಗು ಎಂದು ತಲೆಯಾಡಿಸಿ ಸನ್ನೆ ಮಾಡಿದ್ದಾರೆ.
ಬೆಂಗಳೂರು: ಕಳೆದ ವಾರ ಕೆಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿತ್ತು. ಈ ವಾರ ದಸರಾ ಹಬ್ಬದ ಸಂದರ್ಭವಾಗಿದ್ದು, ವಾರವಿಡೀ ಮಳೆಯಿರುತ್ತಾ, ಹೇಗಿರಲಿದೆ ಹವಾಮಾನ ಇಲ್ಲಿದೆ ವಿವರ. ಕಳೆದ ವಾರ ಕರಾವಳಿ, ಒಳನಾಡು ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಿತ್ತು. ಬೆಂಗಳೂರಿನಲ್ಲಿ ವಾರದ ನಡುವೆ ಕೆಲವೊಂದು ದಿನ ಮಳೆ ಕಂಡುಬಂದಿತ್ತು. ಆದರೆ ಕಳೆದ ವಾರಕ್ಕೆ ಹೋಲಿಸಿದರೆ ಈ ವಾರ ಮಳೆಯ ಅಬ್ಬರ ಕಡಿಮೆಯಾಗಲಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು, ಬೆಳಗಾವಿ, ಯಾದಗಿರಿ, ಬೀದರ್, ಕಲಬುರಗಿ, ಗದಗ, ಕೊಪ್ಪಳ, ಹಾವೇರಿ, ರಾಯಚೂರು, ದಾವಣಗೆರೆ, ಬಾಗಲಕೋಟೆ, ಹುಬ್ಬಳ್ಳಿ, ಧಾರವಾಡ, ಶಿವಮೊಗ್ಗ ಜಿಲ್ಲೆಗಳಲ್ಲಿ ವಾರವಿಡೀ ಮಳೆ, ಮೋಡ ಕವಿದ ವಾತಾವರಣ ಕಂಡುಬರುವುದು.
ದುಬೈ: ಏಷ್ಯಾ ಕಪ್ ಕ್ರಿಕೆಟ್ ಟೂರ್ನಿಯನ್ನು ಭಾರತ ಗೆದ್ದರೂ ಟ್ರೋಫಿ ಮಾತ್ರ ಭಾರತಕ್ಕೆ ಸಿಕ್ಕಿಲ್ಲ. ಏಷ್ಯನ್ ಕ್ರಿಕೆಟ್ ಸಮಿತಿ ಮುಖ್ಯಸ್ಥರೂ ಆಗಿರುವ ಪಾಕಿಸ್ತಾನದ ಮೊಹ್ಸಿನ್ ನಖ್ವಿಯಿಂದ ಟ್ರೋಫಿ ಸ್ವೀಕರಿಸಲ್ಲ ಎಂದು ಭಾರತ ನಿರಾಕರಿಸಿತ್ತು. ಈ ಕಾರಣಕ್ಕೆ ನಖ್ವಿ ಟ್ರೋಫಿ ಸಮೇತ ಮೈದಾನದಿಂದ ಪರಾರಿಯಾಗಿದ್ದಾರೆ. ಇದಕ್ಕೆ ಸೂರ್ಯಕುಮಾರ್ ಯಾದವ್ ಪ್ರತಿಕ್ರಿಯಿಸಿದ್ದಾರೆ. ಏಷ್ಯಾ ಕಪ್ ನಲ್ಲಿ ನಿನ್ನೆ ಪಾಕಿಸ್ತಾನವನ್ನು 5 ವಿಕೆಟ್ ಗಳಿಂದ ಸೋಲಿಸಿದ ಟೀಂ ಇಂಡಿಯಾ ದಾಖಲೆಯ 9 ನೇ ಬಾರಿಗೆ ಏಷ್ಯಾ ಕಪ್ ಚಾಂಪಿಯನ್ ಆಯಿತು. ಆದರೆ ಪ್ರಶಸ್ತಿ ಸಮಾರಂಭದಲ್ಲಿ ಟೀಂ ಇಂಡಿಯಾ ಮೊಹ್ಸಿನ್ ನಖ್ವಿಯಿಂದ ಟ್ರೋಫಿ ಸ್ವೀಕರಿಸಲು ನಿರಾಕರಿಸಿತು. ಹೀಗಾಗಿ ಪ್ರಶಸ್ತಿ ಸಮಾರಂಭ ತಡವಾಗಿ ಆರಂಭವಾಯಿತು.
ಇಂದು ಸೋಮವಾರವಾಗಿದ್ದು ಅದರಲ್ಲೂ ನವರಾತ್ರಿಯ ವಿಶೇಷ ದಿನವಾಗಿದೆ. ಈ ದಿನ ಶಿವನ ಜೊತೆಗೆ ಪಾರ್ವತಿಯ ಕೃಪೆಗೆ ಪಾತ್ರರಾಗಲು ಅರ್ಧನಾರೀಶ್ವರ ಅಷ್ಟಕಂ ಮಂತ್ರವನ್ನು ತಪ್ಪದೇ ಓದಿ.ಅಂಭೋಧರಶ್ಯಾಮಲಕುಂತಲಾಯೈತಟಿತ್ಪ್ರಭಾತಾಮ್ರಜಟಾಧರಾಯ |ನಿರೀಶ್ವರಾಯೈ ನಿಖಿಲೇಶ್ವರಾಯನಮಃ ಶಿವಾಯೈ ಚ ನಮಃ ಶಿವಾಯ || ೧ ||ಪ್ರದೀಪ್ತರತ್ನೋಜ್ಜ್ವಲಕುಂಡಲಾಯೈಸ್ಫುರನ್ಮಹಾಪನ್ನಗಭೂಷಣಾಯ |ಶಿವಪ್ರಿಯಾಯೈ ಚ ಶಿವಪ್ರಿಯಾಯನಮಃ ಶಿವಾಯೈ ಚ ನಮಃ ಶಿವಾಯ || ೨ ||ಮಂದಾರಮಾಲಾಕಲಿತಾಲಕಾಯೈಕಪಾಲಮಾಲಾಂಕಿತಕಂಧರಾಯ |ದಿವ್ಯಾಂಬರಾಯೈ ಚ ದಿಗಂಬರಾಯನಮಃ ಶಿವಾಯೈ ಚ ನಮಃ ಶಿವಾಯ || ೩ ||ಕಸ್ತೂರಿಕಾಕುಂಕುಮಲೇಪನಾಯೈಶ್ಮಶಾನಭಸ್ಮಾಂಗವಿಲೇಪನಾಯ |ಕೃತಸ್ಮರಾಯೈ ವಿಕೃತಸ್ಮರಾಯನಮಃ ಶಿವಾಯೈ ಚ ನಮಃ ಶಿವಾಯ || ೪ ||ಪಾದಾರವಿಂದಾರ್ಪಿತಹಂಸಕಾಯೈಪಾದಾಬ್ಜರಾಜತ್ಫಣಿನೂಪುರಾಯ |ಕಲಾಮಯಾಯೈ ವಿಕಲಾಮಯಾಯನಮಃ ಶಿವಾಯೈ ಚ ನಮಃ ಶಿವಾಯ || ೫ ||
ದುಬೈ: ಇಲ್ಲಿ ಪಾಕಿಸ್ತಾನ ವಿರುದ್ಧ ನಡೆದ ಏಷ್ಯಾ ಕಪ್ 2025ರಲ್ಲಿ ಭಾರತ ಚಾಂಪಿಯನ್ ಆಗಿ ರೋಚಕ ಜಯವನ್ನು ಸಾಧಿಸಿದೆ. ಟಾಸ್ ಗೆದ್ದ ಭಾರತ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿ, 20 ಓವರ್ಗಳಲ್ಲಿ 148 ರನ್ಗೆ ಪಾಕ್ ಅನ್ನು ಕಟ್ಟಿಹಾಕಿತು. ಸಾಧರಣ ಸಾವಲಿನ ಗುರಿ ಹೊಂದಿದ್ದ ಭಾರತಕ್ಕೆ ಆರಂಭದಲ್ಲೇ ಅಭಿಷೇಕ್ ಶರ್ಮಾ, ಶುಭ್ಮನ್ ಗಿಲ್, ಸೂರ್ಯಕುಮಾರ್ ಯಾದವ್ ಬೇಗನೇ ಪೆವಲಿನ್ ಕಡೆ ಮುಖ ಮಾಡಿದ್ದರಿಂದ ಭಾರತಕ್ಕೆ ಆಘಾತವಾಯಿತು. ನಂತರ ಬಂದ ತಿಲಕ್, ಸಂಜು ಸಮ್ಸನ್ ಅವರ ಜೊತೆಯಾಟ ಚೆನ್ನಾಗಿರುವಾಗಲೇ ಸಂಜು ಔಟ್ ಆದರು. ನಂತರ ಶಿವ ದುಭೆ
ದುಬೈ: ಏಷ್ಯಾಕಪ್ ಟಿ20 ಕ್ರಿಕೆಟ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಪಾಕಿಸ್ತಾನ ತಂಡದ ಬ್ಯಾಟರ್ಗಳು ಭಾರತದ ಸ್ಪಿನ್ ಸುಳಿಗೆ ತತ್ತರಿಸಿದರು.ಆರಂಭಿಕ ಬ್ಯಾಟರ್ಗಳು ಉತ್ತಮ ಪ್ರದರ್ಶನ ನೀಡಿದರೂ ಭಾರತದ ಎದುರು ಬೃಹತ್ ಮೊತ್ತ ಕಲೆಹಾಕುವ ಪಾಕ್ ಪ್ರಯತ್ನ ಕೈಗೂಡಲಿಲ್ಲ. 19.1 ಓವರ್ಗಳಲ್ಲಿ 146 ರನ್ಗಳಿಗೆ ಸರ್ವಪತನ ಕಂಡಿದೆ.ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ಪಂದ್ಯದಲ್ಲಿ, ಮಧ್ಯಮ ಹಾಗೂ ಕೆಳ ಕ್ರಮಾಂಕದ ಬ್ಯಾಟರ್ಗಳು ಸ್ಪಿನ್ ಸುಳಿಯಲ್ಲಿ ಸಿಲುಕಿದ ಪರಿಣಾಮ ದಿಢೀರ್ ಕುಸಿಯಿತು.ಟಾಸ್ ಗೆದ್ದ ಟೀಂ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್ ಬೌಲಿಂಗ್ ಆಯ್ದುಕೊಂಡರು. ಪಾಕ್ ಪಡೆಯ ಆರಂಭಿಕ ಬ್ಯಾಟರ್ಗಳಾದ ಸಾಹಿಬ್ಝಾದಾ ಫರ್ಹಾನ್ ಮತ್ತು ಫಖರ್ ಜಮಾನ್ ಭಾರತದ ನಾಯಕನ ನಿರ್ಧಾರವನ್ನು ತಲೆಕೆಳಗಾಗಿಸುವಂತಹ ಆಟವಾಡಿದರು.
OM ಸಿಸ್ಟಮ್, ಒಲಿಂಪಸ್ನ ಪರಂಪರೆಯ ಮೇಲೆ ದಿಟ್ಟ ಹೊರಾಂಗಣ ದೃಷ್ಟಿಯೊಂದಿಗೆ ನಿರ್ಮಿಸುತ್ತಿದೆ; ಭಾರತದಲ್ಲಿ ಎರಡು ಹೊಸ ಇಮೇಜಿಂಗ್ ಉತ್ಪನ್ನಗಳನ್ನು ಬಿಡುಗಡೆ ಮಾಡಿದೆಇಮೇಜಿಂಗ್ ತಂತ್ರಜ್ಞಾನದಲ್ಲಿ ಜಾಗತಿಕ ನಾಯಕ, ಒಲಿಂಪಸ್ನ 85 ವರ್ಷಗಳ ಪರಂಪರೆಯ ಮೇಲೆ ನಿರ್ಮಿಸಲಾದ OM ಸಿಸ್ಟಮ್, ಇಂದು ಭಾರತದಲ್ಲಿ ಅತ್ಯಂತ ನಿರೀಕ್ಷಿತ ಎರಡು ಉತ್ಪನ್ನಗಳನ್ನು ಬಿಡುಗಡೆ ಮಾಡುವುದಾಗಿ ಘೋಷಿಸಿತು – OM-5 ಮಾರ್ಕ್ II ಇಂಟರ್ಚೇಂಜಬಲ್ ಲೆನ್ಸ್ ಕ್ಯಾಮೆರಾ ಮತ್ತು M.ZUIKO DIGITAL ED 50-200mm F2.8 IS PRO ಲೆನ್ಸ್, ಇವೆರಡೂ ವನ್ಯಜೀವಿ, ಮ್ಯಾಕ್ರೋ, ಪಕ್ಷಿವೀಕ್ಷಣೆ, ಭೂದೃಶ್ಯ, ಪ್ರವಾಸ ಮತ್ತು ಬೀದಿ ಮತ್ತು ನಗರ ಛಾಯಾಗ್ರಹಣಕ್ಕಾಗಿ ವಿನ್ಯಾಸಗೊಳಿಸಲಾಗಿದೆ.
ದುಬೈ: ಏಷ್ಯಾ ಕಪ್ ಕ್ರಿಕೆಟ್ ಟೂರ್ನಿಯ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಭಾರತ ಮತ್ತು ಪಾಕಿಸ್ತಾನ ಫೈನಲ್ನಲ್ಲಿ ಮುಖಾಮುಖಿಯಾಗುತ್ತಿವೆ. ದುಬೈ ಅಂತರಾಷ್ಟ್ರೀಯ ಕ್ರೀಡಾಂಗಣವು ಹೈವೋಲ್ಟೇಜ್ ಪಂದ್ಯಕ್ಕೆ ಸಜ್ಜಾಗಿದೆ. ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.ಇಂದಿನ ಪಂದ್ಯಕ್ಕೆ ಭಾರತ ತಂಡಕ್ಕೆ ಆಘಾತ ಎದುರಾಗಿದೆ. ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಫೈನಲ್ ಕದನಕ್ಕೆ ಅಲಭ್ಯರಾಗಿದ್ದಾರೆ. ಇವರ ಜಾಗಕ್ಕೆ ರಿಂಕು ಸಿಂಗ್ ಆಯ್ಕೆ ಆಗಿದ್ದಾರೆ. ಹಾಗೆಯೆ ಕಳೆದ ಸೂಪರ್ 4 ನಲ್ಲಿ ಶ್ರೀಲಂಕಾ ವಿರುದ್ಧ ವಿಶ್ರಾಂತಿ ಪಡೆದುಕೊಂಡಿದ್ದ ಜಸ್ಪ್ರಿತ್ ಬೂಮ್ರಾ ಕಮ್ಬ್ಯಾಕ್ ಮಾಡಿದ್ದಾರೆ. ಶಿವಂ ದುವೆ ಕೂಡ ತಂಡಕ್ಕೆ ಮರಳಿದ್ದಾರೆ. ಅರ್ಷದೀಪ್ ಹೊರಗುಳಿದಿದ್ದಾರೆ.
ಬೆಂಗಳೂರು: ಭಾರೀ ದಿನಗಳಿಂದ ಕಾತುರದಿಂದ ಕಾಯುತ್ತಿದ್ದ ಕಿರುತೆರೆ ಲೋಕದ ಅತ್ಯಂತ ದೊಡ್ಡ ರಿಯಾಲಿಟಿ ಶೋ ಬಿಗ್ ಬಾಸ್ ಇದೀಗ ಆರಂಭಗೊಂಡಿದೆ.ಅದ್ದೂರಿಯಾಗಿ ವೇದಿಕೆಗೆ ಎಂಟ್ರಿ ಕೊಟ್ಟ ಕಿಚ್ಚ ಸುದೀಪ್, ಬಿಗ್ ಬಾಸ್ ಮನೆಯ ರಚನೆಯನ್ನು ನೋಡಿ ಶಾಕ್ ಆಗಿದ್ದಾರೆ. ದೊಡ್ಮನೆಯೊಳಗೆ ಎಂಟ್ರಿ ಕೊಟ್ಟ ಸುದೀಪ್ ಅವರು ದೇವರ ದೀಪ ಹಚ್ಚಿ ಶುಭರಾಂಭ ಮಾಡಿದ್ದಾರೆ. ಇನ್ನೂ ಮನೆಯ ರಚನೆ ನೋಡಿ ಕಿಚ್ಚ ಸ್ವಲ್ಪ ಗೊಂದಲಕ್ಕೀಡಾದರು. 11 ಸೀಸನ್ನಲ್ಲೂ ಒಂದೇ ಬೆಡ್ ರೂಂ, ಒಂದೇ ಡೈನಿಂಗ್ ರೂಂ ಇದ್ದ ಬಿಗ್ ಬಾಸ್ ನಲ್ಲಿ ಈ ಬಾರಿ ಎರಡೆರಡು ಕಾಣಿಸುತ್ತದೆ.
ಬೆಂಗಳೂರು: ಕಿಚ್ಚ ಸುದೀಪ್ ಸಾರಥ್ಯದಲ್ಲಿ ಕನ್ನಡದ 12ನೇ ಆವೃತ್ತಿಯ ಬಿಗ್ಬಾಸ್ ಇಂದು ಆರಂಭಗೊಂಡಿದೆ. ಈ ಬಾರಿ ಯಾರೆಲ್ಲಾ ಸ್ಪರ್ಧಿಗಳು ದೊಡ್ಮನೆಗೆ ಪ್ರವೇಶಿಸುತ್ತಾರೆ ಎಂಬುದು ಕುತೂಹಲ ಕೆರಳಿಸಿದೆ.ಯುಟ್ಯೂಬ್ನಲ್ಲಿ ಸೆನ್ಸೆಷನ್ ಸೃಷ್ಟಿಸಿದ ತುಳುನಾಡಿನ ರಕ್ಷಿತಾ ಶೆಟ್ಟಿ ಬಿಗ್ಬಾಸ್ ಮನೆಗೆ ಎಂಟ್ರಿಕೊಟ್ಟಿದ್ದಾರೆ. ಬಿಗ್ಬಾಸ್ ಮನೆಯಲ್ಲಿ ರಕ್ಷಿತಾ ಮಾತು ಕೇಳಿ ನಿರೂಪಕ ಕಿಚ್ಚ ಸುದೀಪ್ ಒಂದು ಕ್ಷಣ ಶಾಕ್ ಆಗಿದ್ದಾರೆ. ರಕ್ಷಿತಾ ಯೂಟ್ಯೂಬ್ನಲ್ಲಿ ಅಡುಗೆ ಮಾಡುತ್ತಾ, ಕನ್ನಡ ಮಾತಾಡಾಲು ಪಡುವ ಕಷ್ಟ ಎಲ್ಲರಿಗೂ ಗೊತ್ತೇ ಇದೆ. ಆದರೆ ಬಿಗ್ಬಾಸ್ನಲ್ಲಿ ಅವರ ಆಟದ ವೈಖರಿ ಹಾಗೂ ಅಡುಗೆ ಮಾಡುವ ಶೈಲಿ, ಕನ್ನಡ ಮಾತುಗಳನ್ನ ಕೇಳಲು ಪ್ರೇಕ್ಷಕರು ಕುತೂಹಲ ಕೆರಳಿಸಿದ್ದಾರೆ.
ಮುಂಬೈ: ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ನೂತನ ಅಧ್ಯಕ್ಷರನ್ನಾಗಿ ದೆಹಲಿಯ ಮಾಜಿ ಕ್ರಿಕೆಟಿಗ ಮಿಥುನ್ ಮನ್ಹಾಸ್ ಅವರನ್ನು ನೇಮಿಸಲಾಗಿದೆ. ಭಾನುವಾರ ಮುಂಬೈನಲ್ಲಿ ನಡೆದ ವಾರ್ಷಿಕ ಸಾಮಾನ್ಯ ಸಭೆ ಮುಕ್ತಾಯದ ನಂತರ ಮನ್ಹಾಸ್ ಅವರನ್ನು ಹೊಸ ಅಧ್ಯಕ್ಷರನ್ನಾಗಿ ಘೋಷಿಸಲಾಗಿದೆ.ರೋಜರ್ ಬಿನ್ನಿ ಅವರ ಉತ್ತರಾಧಿಕಾರಿಯಾಗಿ ಮನ್ಹಾಸ್ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಮಾಜಿ ಕ್ರಿಕೆಟಿಗ ರಾಜೀವ್ ಶುಕ್ಲಾ ಅವರನ್ನು ಉಪಾಧ್ಯಕ್ಷರನ್ನಾಗಿ, ದೇವಜಿತ್ ಸೈಕಿಯಾ ಅವರನ್ನು ಕಾರ್ಯದರ್ಶಿಯಾಗಿ ಆಯ್ಕೆ ಮಾಡಲಾಗಿದೆ. ಇದಲ್ಲದೆ, ಪ್ರಭತೇಜ್ ಸಿಂಗ್ ಭಾಟಿಯಾ ಜಂಟಿ ಕಾರ್ಯದರ್ಶಿಯಾಗಿ, ಕರ್ನಾಟಕದ ಎ. ರಘುರಾಮ್ ಭಟ್ ಮಂಡಳಿಯ ಖಜಾಂಚಿಯಾಗಿ ಕಾರ್ಯನಿರ್ವಹಿಸಲಿದ್ದಾರೆ.
ಆನೇಕಲ್: ಇಲ್ಲಿನ ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ಸಫಾರಿಗೆ ತೆರಳಿದ್ದ ಪ್ರವಾಸಿಗ ಹೃದಯಾಘಾತಕ್ಕೆ ಬಲಿಯಾದ ಘಟನೆ ನಡೆದಿದೆ. ಮೃತರನ್ನು ಬೆಂಗಳೂರಿನ ನಾಗರಬಾವಿಯ ನಿವಾಸಿ ನಂಜಪ್ಪ (45) ಎಂದು ಗುರುತಿಸಲಾಗಿದೆ. ಪತ್ನಿ ಇಬ್ಬರು ಮಕ್ಕಳೊಂದಿಗೆ ಸಫಾರಿ ವೀಕ್ಷಣೆ ಬಂದಿದ್ದ ವೇಳೆ ನಂಜಪ್ಪ ಸಫಾರಿ ಬಸ್ಸಿನಲ್ಲಿಯೇ ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ.
ನವದೆಹಲಿ: ಈಚೆಗೆ ಇಹಲೋಕ ತ್ಯಜಿಸಿದ ಲೇಖಕ ಎಸ್ ಎಲ್ ಭೈರಪ್ಪನವರನ್ನು ಪ್ರಧಾನಿ ನರೇಂದ್ರ ಮೋದಿ ಅವರು ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ನೆನಪಿಸಿಕೊಂಡಿದ್ದಾರೆ. ತಮ್ಮ 126ನೇ ಮನದ ಮಾತು ಕಾರ್ಯಕ್ರಮದಲ್ಲಿ ಭೈರಪ್ಪನವರನ್ನು ನೆನೆದು ಶ್ರದ್ಧಾಂಜಲಿ ಅರ್ಪಿಸಿದ್ದಾರೆ.ದೇಶದ ಮಹಾನ್ ವಿಚಾರವಾದಿ, ಮಹಾನ್ ಚಿಂತಕರೊಬ್ಬರನ್ನು ಕಳೆದುಕೊಂಡಿದ್ದೇವೆ. ನಾನು ಅವರ ಜೊತೆ ವ್ಯಕ್ತಿಗತ ಸಂಪರ್ಕ ಇಟ್ಟುಕೊಂಡಿದ್ದೆ. ಹಲವು ಸಂದರ್ಭಗಳಲ್ಲಿ ಹಲವು ವಿಚಾರಗಳ ಮಂಥನ ನಡೆಸಿದ್ದೇವೆ. ಅವರ ಕೃತಿಗಳು ಯುವ ಪೀಳಿಗೆಗೆ ದಾರಿದೀಪ. ಅವರ ಅನೇಕ ಕೃತಿಗಳು ಹಲವು ಭಾಷೆಗಳಿಗೆ ಅನುವಾದವಾಗಿವೆ. ನಮ್ಮ ಮೂಲ ಸಂಸ್ಕೃತಿ ಬಗ್ಗೆ ಹೆಮ್ಮೆ ಪಡಬೇಕು,
ಧರ್ಮಸ್ಥಳ: ಕಳೆದ ಕೆಲ ವರ್ಷಗಳಿಂದ ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಶ್ರೀ ಕ್ಷೇತ್ರದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರ ವಿರುದ್ಧದ ಷಡ್ಯಂತ್ರ್ಯದಲ್ಲಿ ಸತ್ಯಾಂಶ ಹೊರಬೀಳುತ್ತಿದ್ದ ಹಾಗೇ ದೇವಸ್ಥಾನದ ಆವರಣದಲ್ಲಿ ಚಂಡಿಕಾಯಾಗ ಸತ್ಯದರ್ಶನ ಸಮಾವೇಶ ನಡೆದಿದೆ. ಇದರಲ್ಲಿ ಸಹಸ್ರಾರು ಭಕ್ತರು ಪಾಲ್ಗೊಂಡರು. ಕಳೆದ ಕೆಲವಾರು ವರ್ಷಗಳಿಂದ ಧರ್ಮಸ್ಥಳ ಹಾಗೂ ಡಾ.ಡಿ.ವೀರೇಂದ್ರ ಹೆಗ್ಗಡೆ ವಿರುದ್ಧ ಷಡ್ಯಂತ್ರದಲ್ಲಿ ಇದೀಗ ಸತ್ಯಾಂಶ ಹೊರಬಿದ್ದಿದೆ. ಇದಕ್ಕಾಗಿ ದೈವ-ದೇವರುಗಳಿಗೆ ತಮ್ಮ ಕೃತಜ್ಞತೆಯನ್ನು ಅರ್ಪಿಸುವ ಮತ್ತು ಸತ್ಯ, ನ್ಯಾಯದ ಜೊತೆಗೆ ನಾವು ಎಂದಿಗೂ
ಬೆಂಗಳೂರು: ದೇಶವನ್ನೇ ಬೆಚ್ಚಿಬೀಳಿಸಿದ ಕರೂರ್ ಕಾಲ್ತುಳಿತ ಪ್ರಕರಣ ಸಂಬಂಧ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಅವರು ಪ್ರತಿಕ್ರಿಯಿಸಿದ್ದಾರೆ. ನಗರದಲ್ಲಿ ಆರ್ಸಿಬಿ ವಿಜಯೋತ್ಸವದ ವೇಳೆ ಸಂಭವಿಸಿದ್ದ ದುರಂತದಲ್ಲಿ 11 ಜನ ಸಾವನ್ನಪ್ಪಿದ್ದರು. ಅದೇ ದೊಡ್ಡ ಆಘಾತವಾಗಿತ್ತು. ಈಗ ಕರೂರಿನಲ್ಲಿ ಅದಕ್ಕಿಂತಲೂ ದೊಡ್ಡ ದುರಂತವಾಗಿದೆ ಎಂದು ಮರುಕ ವ್ಯಕ್ತಪಡಿಸಿದರು. ಈ ವಿಚಾರವಾಗಿ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ರೀತಿಯ ದುರಂತ ದೇಶದಲ್ಲಿ ಹಿಂದೆಂದೂ ನಡೆದಿಲ್ಲ. ದುರ್ಘಟನೆಯಲ್ಲಿ ಚಿಕ್ಕ ಮಕ್ಕಳೂ ಸಾವನ್ನಪ್ಪಿದ್ದಾರೆ. ಈ ದುರಂತಕ್ಕೆ ಇಡೀ ದೇಶ ಬೆಚ್ಚಿಬಿದ್ದಿದೆ ಎಂದರು.
ನವದೆಹಲಿ: ನಿನ್ನೆ ಸಂಜೆ ತಮಿಳುನಾಡಿನ ಕರೂರ್ನಲ್ಲಿ ನಡೆದ ರ್ಯಾಲಿಯಲ್ಲಿ ಕಾಲ್ತುಳಿತದಲ್ಲಿ ಸಾವನ್ನಪ್ಪಿದ 39 ಜನರ ಕುಟುಂಬಗಳಿಗೆ ತಲಾ 20 ಲಕ್ಷ ರೂಪಾಯಿ ಪರಿಹಾರವನ್ನು ನಟ-ರಾಜಕಾರಣಿ ವಿಜಯ್ ಘೋಷಿಸಿದ್ದಾರೆ. ದುರಂತದಲ್ಲಿ ಗಾಯಗೊಂಡ ಸುಮಾರು 100 ಮಂದಿಗೆ ತಮ್ಮ ಪಕ್ಷವು ತಲಾ 2 ಲಕ್ಷ ರೂಪಾಯಿಗಳನ್ನು ನೀಡಲಿದೆ ಎಂದು ಟಿವಿಕೆ ಮುಖ್ಯಸ್ಥರು ತಿಳಿಸಿದ್ದಾರೆ.X ನಲ್ಲಿ ತನ್ನ ಪಕ್ಷದ ಅಧಿಕೃತ ಹ್ಯಾಂಡಲ್ ಮೂಲಕ ಸಾಮಾಜಿಕ ಮಾಧ್ಯಮ ಪೋಸ್ಟ್ನಲ್ಲಿ ನಟ ವಿಜಯ್ ಅವರು ಪ್ರತಿಕ್ರಿಯಿಸಿ, ತಾನು ದುಃಖದಿಂದ ಮುಳುಗಿದ್ದೇನೆ ಎಂದು ಹೇಳಿದರು.
ದೆಹಲಿ ಮತ್ತು ಅದರ ನೆರೆಹೊರೆಯ ನಗರಗಳಲ್ಲಿ ಕಳೆದ ಕೆಲವು ತಿಂಗಳುಗಳಲ್ಲಿ H3N2 ಪ್ರಕರಣಗಳಲ್ಲಿ ಭಾರೀ ಹೆಚ್ಚಳವಾಗಿದೆ. - ಇನ್ಫ್ಲುಯೆನ್ಸ ಎ ಸಬ್ಟೈಪ್ ವೈರಸ್ - ಕಳೆದ ಕೆಲವು ತಿಂಗಳುಗಳಲ್ಲಿ, ಹಿಂದಿನ ವರ್ಷಗಳಿಗಿಂತ ಈ ಬಾರಿ ರೋಗಲಕ್ಷಣಗಳು ಹೆಚ್ಚು ತೀವ್ರವಾಗಿರುತ್ತವೆ ಎಂದು ವೈದ್ಯರು ಎಚ್ಚರಿಸಿದ್ದಾರೆ."ಪ್ರತಿ ವರ್ಷ ಫ್ಲೂ ಪ್ರಕರಣಗಳಲ್ಲಿ ಎರಡು ಸ್ಪೈಕ್ಗಳು ಕಂಡುಬರುತ್ತವೆ - ಒಂದು ಮಳೆಗಾಲದಲ್ಲಿ ಮತ್ತು ಇನ್ನೊಂದು ಚಳಿಗಾಲದಲ್ಲಿ. ರೋಗಲಕ್ಷಣಗಳು ದೇಹದ ನೋವು, ಕೆಮ್ಮು ಮತ್ತು ಜ್ವರವನ್ನು ಹೆಚ್ಚಿಸುತ್ತವೆ," ಎಂದು ದೆಹಲಿಯ ಹೋಲಿ ಫ್ಯಾಮಿಲಿ ಆಸ್ಪತ್ರೆಯ ಕ್ರಿಟಿಕಲ್ ಕೇರ್ ಮೆಡಿಸಿನ್ ಮುಖ್ಯಸ್ಥ ಮತ್ತು ವೈದ್ಯಕೀಯ ನಿರ್ದೇಶಕ ಡಾ ಸುಮಿತ್ ರೇ ಹೇಳಿದ್ದಾರೆ.
ಪ್ರತಿಯೊಬ್ಬರಿಗೂ ಒಂದಲ್ಲ ಒಂದು ವಿಧದಲ್ಲಿ ಗ್ಯಾಸ್ಟ್ರಿಕ್ ಸಮಸ್ಯೆ ಇದ್ದೇ ಇರುತ್ತದೆ. ಕೆಲವರು ಈ ಸಮಸ್ಯೆಯನ್ನು ಸರಿದೂಗಿಸಲು ಹಲವು ವಿಧದ ಮನೆ ಮದ್ದುನ್ನು ಮಾಡುವುದು ಉಂಟು. ಆದರೆ ನಮ್ಮ ಆಹಾರದಲ್ಲಿ ಏನಾದರೂ ಹೆಚ್ಚು ಕಮ್ಮಿಯಾದಲ್ಲಿ ಅದು ನೇರವಾಗಿ ಗ್ಯಾಸ್ಟ್ರಿಕ್ ಸಮಸ್ಯೆಯಾಗಿ ಉಲ್ಭವಿಸುವುದುಂಟು. ಈ ವಿಚಾರವಾಗು ಆಯುಷ್ಯ ಫೌಂಡೇಶನ್ನ ಅನುಷ್ಕಾ ಅವರು ಈ ಬಗ್ಗೆ ಪರಿಹಾರವನ್ನು ನೀಡಿದ್ದಾರೆ. ಅವರು ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ಇದರ ಬಗ್ಗೆ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಇವರ ಪ್ರಕಾರ ಮೆಡಿಸಿನ್ಗಳನ್ನು ಸೇವನೆ ಮಾಡುವುದರಿಂದ ತಾತ್ಕಾಲಿಕ ರಿಲೀಪ್ನ್ನು ಪಡೆಯುತ್ತೇವೆ ಹೊರತು ಅದಕ್ಕೆ ಪೂರ್ಣ
ಬೆಂಗಳೂರು: ಹವಾಮಾನ ಇಲಾಖೆ ಪ್ರಕಾರ ಇಂದು ಬೆಂಗಳೂರಿನಲ್ಲಿ ಬಹುತೇಕ ಮೋಡ ಕವಿದ ವಾತಾವರಣವಿದೆ. ಆದರೆ ಮಳೆಯಾಗುವ ಮುನ್ಸೂಚನೆಯಿಲ್ಲ. ಗರಿಷ್ಠ ತಾಪಮಾನ 27°C ಮತ್ತು ಕನಿಷ್ಠ 21°C. ಬೆಂಗಳೂರಿನಲ್ಲಿ ಸೂರ್ಯೋದಯವು 06:08 ಆಗಿದ್ದು, ಸೂರ್ಯಾಸ್ತವು 06:12 PM ಕ್ಕೆ ಆಗಲಿದೆ. ಇನ್ನೂ ಶನಿವಾರ ಬೆಂಗಳೂರಿನ ಹಲವು ಭಾಗದಲ್ಲಿ ಮಧ್ಯಾಹ್ನದ ವೇಳೆ ಭಾರೀ ಮಳೆಯಾಗಿತ್ತು. ನಾಳೆ ಮಾತ್ರ ಬೆಂಗಳೂರಿನಲ್ಲಿ ಅಲ್ಲಲ್ಲಿ ಮಳೆಯಾಗುವ ಮುನ್ಸೂಚನೆಯಿದೆ.
ದುಬೈ: ಏಷ್ಯಾ ಕಪ್ ಕ್ರಿಕೆಟ್ ಫೈನ್ಲ್ಗೆ ದುಬೈ ಅಂತರರಾಷ್ಟ್ರೀಯ ಕ್ರೀಡಾಂಗಣ ಸಜ್ಜಾಗಿದೆ. 41 ವರ್ಷಗಳ ಇತಿಹಾಸದಲ್ಲಿ ಭಾರತ-ಪಾಕಿಸ್ತಾನ ತಂಡಗಳು ಮೊದಲ ಬಾರಿ ಏಷ್ಯಾ ಕಪ್ ಫೈನಲ್ನಲ್ಲಿ ಮುಖಾಮುಖಿಯಾಗುತ್ತಿವೆ.ರಾತ್ರಿ 8 ಗಂಟೆಗೆ ಪಂದ್ಯ ಶುರುವಾಗಲಿದೆ. ಟೂರ್ನಿಯಲ್ಲಿ ಹಿಂದಿನ ಎರಡು ಪಂದ್ಯಗಳಲ್ಲಿ ಹೀನಾಯ ಸೋಲು ಕಂಡಿದ್ದ ಪಾಕ್ ಭಾರತದ ವಿರುದ್ಧ ಸೇಡು ತೀರಿಸಿಕೊಳ್ಳಲು ಕಾಯುತ್ತಿದೆ. ಇತ್ತ ಭಾರತ ಕೂಡ ಮೂರನೇ ಪಂದ್ಯದಲ್ಲೂ ಪಾರಮ್ಯ ಸಾಧಿಸುವ ಛಲದಲ್ಲಿದೆ.ಹಸ್ತಲಾಗವ ಮಾಡದೆ ಮೈದಾನದಲ್ಲಿ ಕಿರಿಕಿರಿಗಳಿಂದ ಕೂಡಿದ್ದ ಹಿಂದಿನ ಎರಡೂ ಪಂದ್ಯಗಳು ಅನೇಕ ವಿವಾದಗಳಿಗೆ ಎಡೆ ಮಾಡಿಕೊಟ್ಟಿದ್ದವು. ಈ ನಡುವೆ ಐಸಿಸಿ ಕೆಲವು ಆಟಗಾರರಿಗೆ ದಂಡವನ್ನೂ ವಿಧಿಸಿ ಎಚ್ಚರಿಸಿತು. ಹೀಗಾಗಿ ಹೀಗಾಗಿ ಮೂರನೇ ಪಂದ್ಯದ ತೀವ್ರತೆ ಜೋರಾಗಿಯೇ ಇದೆ.
ಚೆನ್ನೈ: ನಟ ಹಾಗೂ ರಾಜಕಾರಣಿ ದಳಪತಿ ವಿಜಯ್ ಅವರು ತಮಿಳುನಾಡು ಕರೂರಿನಲ್ಲಿ ಆಯೋಜಿಸಿದ್ದ ಚುನಾವಣಾ ಪ್ರಚಾರದ ರ್ಯಾಲಿ ವೇಳೆ ಕಾಲ್ತುಳಿತ ಘಟನೆಯಲ್ಲಿ ಮೃತಪಟ್ಟ 39 ಜನರ ಪೈಕಿ 35 ಮಂದಿ ಮೃತದೇಹಗಳ ಗುರುತು ಪತ್ತೆಯಾಗಿದೆ.ಗುರುತು ಪತ್ತೆಯಾದವರಲ್ಲಿ ಕರೂರು ಜಿಲ್ಲೆಯವರು 28 ಜನ, ಈರೋಡ್, ತಿರುಪುರ, ಧಾರಾಪುರಂ ಜಿಲ್ಲೆಗಳ ತಲಾ ಇಬ್ಬರು, ಸೇಲಂ ಜಿಲ್ಲೆಯ ಒಬ್ಬರ ಗುರುತು ಪತ್ತೆಯಾಗಿದೆ. ಉಳಿದ 4 ಶವಗಳನ್ನು ಗುರುತಿಸುವ ಕಾರ್ಯವನ್ನು ಸ್ಥಳೀಯ ಪೊಲೀಸರು ಮಾಡುತ್ತಿದ್ದಾರೆ. ಕರೂರು ಸರ್ಕಾರಿ ವೈದ್ಯಕೀಯ ಮಹಾವಿದ್ಯಾಲಯ ಆಸ್ಪತ್ರೆಗೆ ಕಾಲ್ತುಳಿತದಲ್ಲಿ ಗಾಯಗೊಂಡ 50 ಜನರನ್ನ ಆಸ್ಪತ್ರೆಗೆ ದಾಖಲಿಸಲಾಗಿದೆ. ಕರೂರಿನ ಖಾಸಗಿ ಆಸ್ಪತ್ರೆಗಳಲ್ಲಿ 61 ಜನರೂ ಸೇರಿ ಒಟ್ಟು 111 ಜನರು ನಿರಂತರ ಚಿಕಿತ್ಸೆ ಪಡೆಯುತ್ತಿದ್ದಾರೆ.
ತಮಿಳುನಾಡಿನ ಕರೂರಿನಲ್ಲಿ ರ್ಯಾಲಿಯಲ್ಲಿ ಸಂಭವಿಸಿದ ಭೀಕರ ಕಾಲ್ತುಳಿತ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ನಟ ವಿಜಯ್ ಅವರನ್ನು ಅರೆಸ್ಟ್ ಮಾಡಿ ಎಂಬ ಕೂಗು ಕೇಳಿಬರುತ್ತಿದೆ. ಸಾಮಾಜಿಕ ಜಾಲತಾಣದಲ್ಲಿ ವಿಜಯ್ ಬಂಧನಕ್ಕೆ ಜನರು ಒತ್ತಾಯಿಸುತ್ತಿದ್ದಾರೆ. "12 ಗಂಟೆಗೆ ಬರುವುದಾಗಿ ಹೇಳಿದ್ದರೂ ವಿಜಯ್ ತಡಮಾಡಿದ್ದರಿಂದ ಕ್ರೂರ ಘಟನೆ ಸಂಭವಿಸಿದೆ. ಓ ಪೊಲೀಸರೇ ಕೂಡಲೇ ವಿಜಯ್ ಅವರನ್ನು ಅರೆಸ್ಟ್ ಮಾಡಿ ಎಂದು ಆಕ್ರೋಶ ಹೊರಹಾಕುತ್ತಿದ್ದಾರೆ. ಈ ದುರ್ಘಟನೆಯಲ್ಲಿ 31 ಮಂದಿ ಸಾವನ್ನಪ್ಪಿದ್ದಾರೆ ಮತ್ತು ಅನೇಕರು ಗಾಯಗೊಂಡಿದ್ದಾರೆ. ಇನ್ನೂ ಯಾರ್ಲಿಯಲ್ಲಿ ಪಾಲ್ಗೊಂಡ
ಚೆನ್ನೈ: ತಮಿಳು ನಟ, ಟಿವಿಕೆ ಪಕ್ಷದ ಸಂಸ್ಥಾಪಕ ದಳಪತಿ ವಿಜಯ್ ರಾಲಿಯಲ್ಲಿ ಭೀಕರ ಕಾಲ್ತುಳಿತ ಸಂಭವಿಸಿದ್ದು 33 ಮಂದಿ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ತಮಿಳುನಾಡಿನಲ್ಲಿ ಕರೂರಿನಲ್ಲಿ ರಾಲಿಯಲ್ಲಿ ವಿಜಯ್ ಭಾಗಿಯಾಗಿದ್ದರು. ಅವರನ್ನು ನೋಡಲು ನೂಕುನುಗ್ಗಲು ಉಂಟಾಗಿದ್ದು ಸಾಕಷ್ಟು ಸಂಖ್ಯೆಯಲ್ಲಿ ಜನ ಸೇರಿದ್ದರು. ಈ ವೇಳೆ ಕಾಲ್ತುಳಿತದಲ್ಲಿ ಮಕ್ಕಳು ಸೇರಿದಂತೆ 33 ಮಂದಿ ಸಾವನ್ನಪ್ಪಿರುವುದಾಗಿ ವರದಿಯಾಗಿದೆ. ಮೃತರು ಬಹುತೇಕ ಟಿವಿಕೆ ಪಕ್ಷದ ಬೆಂಬಲಿಗರು ಎನ್ನಲಾಗಿದೆ. ಸುಮಾರು 6 ಗಂಟೆಗಳ ಕಾಲ ಜನ ಕಾದು ನಿಂತಿದ್ದರು. ಆದರೆ ರಾಲಿ ತಡವಾಗಿ ಬಂದಿದ್ದರಿಂದ ಜನ ಸಂದಣಿ ಹೆಚ್ಚಾಗಿದೆ. ಈ ವೇಳೆ ಕಾಲ್ತುಳಿತ ಸಂಭವಿಸಿದೆ.
ಬೆಂಗಳೂರು: ನಾಳೆಯಿಂದ ಬಿಗ್ ಬಾಸ್ ಕನ್ನಡ ಸೀಸನ್ 12 ಆರಂಭವಾಗಲಿದ್ದು, ದೊಡ್ಮನೆ ಪ್ರವೇಶಿಸಲಿರುವ 14 ಸ್ಪರ್ಧಿಗಳು ಯಾರು ಎಂಬುದು ಈಗ ಬಹುತೇಕ ಖಚಿತವಾಗಿದೆ. ಕರುನಾಡಿನ ಪರಿಕಲ್ಪನೆಯ ಕಲರ್ ಫುಲ್ ಬಿಗ್ ಬಾಸ್ ಮನೆಯನ್ನು ಕಿಚ್ಚ ಸುದೀಪ್ ಪರಿಚಯಿಸಿದ್ದಾರೆ. ಇದರ ವಿಡಿಯೋಗಳು ಈಗಾಗಲೇ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ನಾಳೆ ಅಧಿಕೃತವಾಗಿ ಬಿಗ್ ಬಾಸ್ ಆರಂಭವಾಗಲಿದೆ. ಆದರೆ ಸ್ಪರ್ಧಿಗಳ ಲಿಸ್ಟ್ ಈಗಾಗಲೇ ಹೊರಬಿದ್ದಿದೆ. ಈ ಲಿಸ್ಟ್ ನೋಡುತ್ತಿದ್ದರೆ ಈ ಬಾರಿ ಪಕ್ಕಾ ಎಂಟರ್ ಟೈನ್ ಮೆಂಟ್ ಗ್ಯಾರಂಟಿ ಎನ್ನುವಂತಿದೆ.
ಬೆಂಗಳೂರು: ಗಣತಿದಾರ ಶಿಕ್ಷಕರಿಗೆ ಧಮ್ಕಿ ಹಾಕಿದ ಮುಖ್ಯಮಂತ್ರಿಗಳು ಈ ಶಿಕ್ಷಕರ ಸಮಸ್ಯೆಯನ್ನು ಅರ್ಥ ಮಾಡಿಕೊಂಡಿರುವರೇ ಎಂದು ಬಿಜೆಪಿ ರಾಷ್ಟ್ರೀಯ ಮಾಜಿ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಅವರು ಪ್ರಶ್ನಿಸಿದ್ದಾರೆ.ಮಾಧ್ಯಮಗಳ ಜೊತೆ ಇಂದು ಮಾತನಾಡಿದ ಅವರು, ಜನಗಣತಿ, ಜಾತಿ ಗಣತಿ, ಆರ್ಥಿಕ ಸಮೀಕ್ಷೆಯನ್ನು ಮಾಡದೇ ಇದ್ದರೆ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿಯವರು ಧಮ್ಕಿ ಹಾಕಿದ್ದಾರೆ. ಗಣತಿದಾರರ ಸಮಸ್ಯೆ ಬಗೆಹರಿಸುವ ಪ್ರಯತ್ನವಾದರೂ ಏನು ಮಾಡಿದ್ದೀರಿ? ನೆಟ್ವರ್ಕ್ ಸಮಸ್ಯೆ ವ್ಯಾಪಕವಾಗಿದೆ. ಇವರು ಕೊಟ್ಟ ಆ್ಯಪ್ ಸಮಸ್ಯಾತ್ಮಕವಾಗಿದೆ. ಮಾಹಿತಿ ಅಪ್ಲೋಡ್ ಮಾಡಲಾಗುತ್ತಿಲ್ಲ ಎಂದು ಆಕ್ಷೇಪಿಸಿದರು.
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ರಸ್ತೆ ಗುಂಡಿಗಳ ಬಗ್ಗೆ ಭಾರೀ ಆಕ್ರೋಶ ವ್ಯಕ್ತವಾಗಿದ್ದು, ಇದೀಗ ಅವ್ಯವಸ್ಥೆ ವೀಕ್ಷಿಸಲು ಖುದ್ದಾಗಿ ಸಿಎಂ ಸಿದ್ದರಾಮಯ್ಯ ರಂಗಕ್ಕಿಳಿದಿದ್ದಾರೆ. ಇಂದು ಅಧಿಕಾರಿಗಳ ಜೊತೆ ಸಿಟಿ ರೌಂಡ್ಸ್ ಮಾಡಿದ ಸಿಎಂ ಸಿದ್ದರಾಮಯ್ಯ ರಸ್ತೆ ಗುಂಡಿ, ಮೆಟ್ರೋ ಕಾಮಗಾರಿಯಿಂದಾಗಿ ರಸ್ತೆ ಅವ್ಯವಸ್ಥೆಯಾಗಿರುವುದರ ಬಗ್ಗೆ ಪರಿಶೀಲನೆ ನಡೆಸಿದರು. ಬಳಿಕ ಅಧಿಕಾರಿಗಳ ಅವ್ಯವಸ್ಥೆ ಸರಿಪಡಿಸಲು ಸೂಚನೆ ನೀಡಿದ್ದಾರೆ. ‘ವೈಟ್ ಟಾಪಿಂಗ್ ಅಡಿ ಅಭಿವೃದ್ಧಿಪಡಿಸಲಾದ ರಸ್ತೆಗಳಲ್ಲಿ ಗುಂಡಿಗಳು ಬಿದ್ದರೆ ಅದರ ಹೊಣೆಯನ್ನು ಗುತ್ತಿಗೆದಾರರೇ ಹೊರಬೇಕಿದೆ. ಓಮ್ಮೆ ವೈಟ್ ಟಾಪಿಂಗ್ ಗೆ ರಸ್ತೆಯನ್ನು ಒಪ್ಪಿಸಿದ ಮೇಲೆ ಆ ರಸ್ತೆಗಳ ನಿರ್ವಹಣೆಗೆ ಬಿಬಿಎಂಪಿ ಹಣ ಕೊಡಲು ಬರುವುದಿಲ್ಲ.
ಬೆಂಗಳೂರು: ಕರ್ನಾಟಕ ಸರ್ಕಾರ ನಡೆಸುತ್ತಿರುವ ಜಾತಿಗಣತಿ ಸಮೀಕ್ಷೆಯಲ್ಲಿ ನಿಮ್ಮ ಮಾಹಿತಿ ಸುರಕ್ಷಿತವಾಗಿರಲ್ಲ. ಹೀಗಾಗಿ ಸಮೀಕ್ಷೆ ಬಹಿಷ್ಕರಿಸಿ ಎಂದು ಸಂಸದ ತೇಜಸ್ವಿ ಸೂರ್ಯ ಶಾಕಿಂಗ್ ಹೇಳಿಕೆ ನೀಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು ನಾನು ಈ ಸಮೀಕ್ಷೆಯಲ್ಲಿ ಪಾಲ್ಗೊಳ್ಳುವುದಿಲ್ಲ. ನನಗೆ ನಮ್ಮ ಮಾಹಿತಿ ಸುರಕ್ಷಿತವಾಗಿರುತ್ತದೆ ಎಂದು ನಂಬಿಕೆಯಿಲ್ಲ. ಸರ್ಕಾರದ ಮೇಲೆ ನಂಬಿಕೆ ಇಲ್ಲ. ಹೀಗಾಗಿ ಸಮೀಕ್ಷೆಯಲ್ಲಿ ಪಾಲ್ಗೊಳ್ಳುವುದಿಲ್ಲ ಎಂದಿದ್ದಾರೆ. ಜಾತಿಗಳ ನಡುವೆ ಬಿರುಕು ಮೂಡಿಸಲು ಈ ಸಮೀಕ್ಷೆ ಮಾಡುತ್ತಿದ್ದಾರೆ. ಇದರಲ್ಲಿ ನಿಮ್ಮ ಮಾಹಿತಿಯೂ ಸುರಕ್ಷಿತವಾಗಿರಲ್ಲ. ಈ ಸಮೀಕ್ಷೆಯಲ್ಲಿ ಯಾರೂ ಪಾಲ್ಗೊಳ್ಳಬೇಡಿ ಎಂದು ಅವರು ಬಹಿಷ್ಕರಿಸಲು ಕರೆ ನೀಡಿದ್ದಾರೆ.
ನ್ಯೂಯಾರ್ಕ್: ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಭಾಗಿಯಾಗಲು ಬಂದ ಪಾಕಿಸ್ತಾನ ಪ್ರಧಾನಿ ಶಹಬಾಜ್ ಷರೀಫ್ ರನ್ನು ಎಲ್ಲರೆದುರೇ ಭಾರತೀಯ ಪತ್ರಕರ್ತೆ ಪ್ರಶ್ನೆ ಮಾಡಿ ಮಾನ ಕಳೆದಿದ್ದಾರೆ. ಈ ವಿಡಿಯೋ ಈಗ ಭಾರೀ ವೈರಲ್ ಆಗಿದೆ. ವಿಶ್ವಸಂಸ್ಥೆಯ ಸಭೆಯಲ್ಲಿ ಭಾಗಿಯಾಗಲು ಅಧಿಕಾರಿಗಳೊಂದಿಗೆ ತೆರಳುತ್ತಿದ್ದ ಪಾಕಿಸ್ತಾನ ಪ್ರಧಾನಿ ಬಾಗಿಲು ದಾಟಿ ಬರುತ್ತಿದ್ದಂತೇ ಭಾರತದ ಪತ್ರಕರ್ತೆ ಆಯುಷಿ ಮೈಕ್ ಹಿಡಿದು ಸ್ವಲ್ಪ ದೂರದಿಂದಲೇ ‘ಗಡಿಯಾಚೆಗಿನ ಭಯೋತ್ಪಾದನೆಗೆ ಪ್ರಾಯೋಜಕತ್ವ ವಹಿಸುವುದನ್ನು ಯಾವಾಗ ನಿಲ್ಲಿಸ್ತೀರಿ ಮಿಸ್ಟರ್ ಪ್ರೈಮ್ ಮಿನಿಸ್ಟರ್’ ಎಂದು ಧೈರ್ಯವಾಗಿ ಪ್ರಶ್ನೆ ಮಾಡಿದ್ದಾರೆ.
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಬಿಜೆಪಿ ಮುಖಂಡನ ಪುತ್ರ ಕೃಷ್ಣನಿಂದ ಗರ್ಭಿಣಿಯಾಗಿ ಮಗು ಜನಿಸಿದ್ದ ಯುವತಿ ಕೇಸ್ ಗೆ ಈಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಮದುವೆಯಾಗುವುದಾಗಿ ನಂಬಿಸಿ ಯುವತಿಯನ್ನು ಲೈಂಗಿಕವಾಗಿ ಬಳಸಿಕೊಂಡಿದ್ದ ಕೃಷ್ಣ ಜೆ ರಾವ್ ಕೊನೆಗೆ ಆಕೆ ಗರ್ಭಿಣಿ ಎನ್ನುವುದು ತಿಳಿಯುತ್ತಿದ್ದಂತೇ ಕೈ ಕೊಟ್ಟಿದ್ದ. ಇದೀಗ ಯುವತಿ ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ. ಆದರೆ ಮಗುವನ್ನು ತನ್ನದು ಎಂದು ಒಪ್ಪಿಕೊಳ್ಳಲು ಕೃಷ್ಣ ಸಿದ್ಧನಿರಲಿಲ್ಲ. ಮದುವೆಯಾಗಲೂ ನಿರಾಕರಿಸಿದ್ದ. ಪ್ರಕರಣ ಪೊಲೀಸ್ ಠಾಣೆ ಮೆಟ್ಟಿಲೇರಿತ್ತು. ಈ ಸಂಬಂಧ ಬಂಧಿತನಾಗಿದ್ದ ಆತ ಇತ್ತೀಚೆಗಷ್ಟೇ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ.
ಬೆಂಗಳೂರು: ಬಹುನಿರೀಕ್ಷಿತ ಕಾಂತಾರ ಚಾಪ್ಟರ್ 1 ಸಿನಿಮಾ ಬಿಡುಗಡೆಗೆ ಕ್ಷಣಗಣನೆ ಶುರುವಾಗಿದೆ. ಆದರೆ ಮೊದಲ ನಾಲ್ಕು ದಿನ ಟಿಕೆಟ್ ಸಿಗೋದೇ ಡೌಟು ಎಂಬಂತಾಗಿದೆ ಸ್ಥಿತಿ. ಕಾಂತಾರ ಚಾಪ್ಟರ್ 1 ಸಿನಿಮಾದ ಟಿಕೆಟ್ ಅಡ್ವಾನ್ಸ್ ಬುಕಿಂಗ್ ನಿನ್ನೆಯಿಂದ ಆರಂಭವಾಗಿದೆ. ಟಿಕೆಟ್ ಮಾರಾಟ ಆರಂಭವಾದ ಕೆಲವೇ ಕ್ಷಣಗಳಲ್ಲಿ ಮಲ್ಟಿಪ್ಲೆಕ್ಸ್ ಗಳಲ್ಲಿ ಟಿಕೆಟ್ ಬಿಸಿ ದೋಸೆಯಂತೆ ಬಿಕರಿಯಾಗಿದೆ. ಬಹುತೇಕ ಚಿತ್ರಮಂದಿರಗಳು ಮೊದಲ 2-3 ದಿನ ಹೆಚ್ಚು ಕಡಿಮೆ ಟಿಕೆಟ್ ಗಳು ಬಹುತೇಕ ಬಿಕರಿಯಾಗಿದೆ. ಮುಂದಿನ ವಾರಂತ್ಯಕ್ಕೆ ದಸರಾ ಹಬ್ಬದ ನಿಮಿತ್ತ ಸಾಲು ಸಾಲು ರಜೆಯಿರುವುದರಿಂದ ಬಹುತೇಕರು ಕುಟುಂಬ ಸಮೇತ ಚಿತ್ರಮಂದಿರಕ್ಕೆ ಲಗ್ಗೆಯಿಡುತ್ತಾರೆ.
ದುಬೈ: ಏಷ್ಯಾ ಕಪ್ ನಲ್ಲಿ ಟೀಂ ಇಂಡಿಯಾ ವಿರುದ್ಧ ಗೆಲ್ಲಬೇಕೆಂದರೆ ಅಭಿಷೇಕ್ ಬಚ್ಚನ್ ಔಟ್ ಮಾಡಿದ್ರೆ ಸಾಕು ಎಂದು ಪಾಕಿಸ್ತಾನ ಮಾಜಿ ವೇಗಿ ಶೊಯೇಬ್ ಅಖ್ತರ್ ಎಡವಟ್ಟಿನ ಹೇಳಿಕೆ ನೀಡಿದ್ದಾರೆ. ಇದಕ್ಕೆ ಅಭಿಷೇಕ್ ಬಚ್ಚನ್ ರಿಪ್ಲೈ ಮಾತ್ರ ಸಖತ್ ಆಗಿದೆ. ಏಷ್ಯಾ ಕಪ್ ಫೈನಲ್ ನಲ್ಲಿ ಭಾರತ ಮತ್ತು ಪಾಕಿಸ್ತಾನ ಮುಖಾಮುಖಿಯಾಗುತ್ತಿದೆ. ಈ ಕೂಟದಲ್ಲಿ ಈ ಹಿಂದೆ ಎರಡು ಬಾರಿ ಪಾಕಿಸ್ತಾನವನ್ನು ಭಾರತ ಸೋಲಿಸಿದೆ. ಇದೀಗ ಮೂರನೆಯ ಬಾರಿಗೆ ಮುಖಾಮುಖಿಯಾಗುತ್ತಿದೆ. ಹೀಗಾಗಿ ಪಾಕಿಸ್ತಾನ ಕೂಡಾ ಸೇಡು ತೀರಿಸಿಕೊಳ್ಳಲು ಕಾಯುತ್ತಿದೆ. ಆದರೆ ಈ ಟೂರ್ನಿಯಲ್ಲಿ ಎಲ್ಲಾ ತಂಡಗಳಿಗೆ ಸಿಂಹ ಸ್ವಪ್ನರಾಗಿರುವುದು ಟೀಂ ಇಂಡಿಯಾ ಓಪನರ್ ಅಭಿಷೇಕ್ ಶರ್ಮಾ.
ಇತ್ತೀಚೆಗಿನ ದಿನಗಳಲ್ಲಿ ಬಹುತೇಕ ಖಾಯಿಲೆಗಳ ಮೂಲ ಮಾನಸಿಕ ಒತ್ತಡ. ಹೃದಯದ ಸಮಸ್ಯೆ, ಮಧುಮೇಹ, ದೇಹ ತೂಕ ಸೇರಿದಂತೆ ಬಹುತೇಕ ಖಾಯಿಲೆಗಳು ಮಾನಸಿಕ ಒತ್ತಡದಿಂದಾಗಿಯೇ ಬರುತ್ತವೆ. ಇದನ್ನು ಕಡಿಮೆ ಮಾಡಲು ಈ ವಿಧಾನಗಳನ್ನು ತಪ್ಪದೇ ಅನುಸರಿಸಿ. ದೈಹಿಕ ಚಟುವಟಿಕೆ ಇರಲಿ: ಕುಳಿತಲ್ಲೇ ಕೂರುವ ಬದಲು ನಿಮ್ಮ ದೇಹಕ್ಕೆ ಚಟುವಟಿಕೆ ಕೊಡುವ ಕೆಲಸ ಮಾಡಿ. ದೇಹಕ್ಕೆ ಶ್ರಮ ಕೊಟ್ಟರೆ ಮಾನಸಿಕ ಒತ್ತಡ ಎನ್ನುವುದು ನೆನಪೇ ಆಗಲ್ಲ. ದೈಹಿಕ ಚಟುವಟಿಕೆ ಮಾಡುತ್ತಿದ್ದರೆ ನಿಮ್ಮ ಖುಷಿಯ ಹಾರ್ಮೋನ್ ಗಳು ಆಕ್ಟಿವೇಟ್ ಆಗುತ್ತವೆ.
ದುಬೈ: ಏಷ್ಯಾ ಕಪ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ನಾಳೆ ಪಾಕಿಸ್ತಾನ್ ವಿರುದ್ಧದ ಪ್ರಮುಖ ಫೈನಲ್ ಪಂದ್ಯಕ್ಕೆ ಮುನ್ನ ಟೀಂ ಇಂಡಿಯಾಕ್ಕೆ ಬಿಗ್ ಶಾಕ್ ಎದುರಾಗಿದೆ. ಪ್ರಮುಖ ಆಟಗಾರರೇ ಗಾಯಗೊಂಡಿದ್ದಾರೆ. ಟೀಂ ಇಂಡಿಯಾ ಈ ಏಷ್ಯಾ ಕಪ್ ನಲ್ಲಿ ಅಜೇಯವಾಗಿ ಫೈನಲ್ ಪ್ರವೇಶಿಸಿದೆ. ಆಡಿದ ಎಲ್ಲಾ ಪಂದ್ಯಗಳನ್ನು ಎಲ್ಲಾ ತಂಡಗಳ ವಿರುದ್ಧ ಗೆದ್ದು ಫೈನಲ್ ಗೆ ಅರ್ಹತೆ ಪಡೆದಿದೆ. ಆದರೆ ಫೈನಲ್ ನಲ್ಲಿ ಪಾಕಿಸ್ತಾನ್ ವಿರುದ್ಧ ಗೆಲ್ಲುವುದು ಭಾರತಕ್ಕೆ ಪ್ರತಿಷ್ಠೆಯ ವಿಚಾರವಾಗಿದೆ.ಇದರ ನಡುವೆಯೇ ತಂಡದ ಪ್ರಮುಖ ಆಟಗಾರರಾದ ಅಭಿಷೇಕ್ ಶರ್ಮಾ ಮತ್ತು ಹಾರ್ದಿಕ್ ಪಾಂಡ್ಯ ಗಾಯಗೊಂಡ ವರದಿಯಾಗಿದೆ.
ಬೆಂಗಳೂರು: ವಾರದ ಆರಂಭದಲ್ಲಿ ಭಾರೀ ಏರಿಕೆ ಕಂಡಿದ್ದ ಚಿನ್ನದ ದರ ಇಂದು ವಾರದ ಅಂತ್ಯಕ್ಕೆ ಮತ್ತೆ ಏರುಗತಿಯಲ್ಲಿದೆ. ಇಂದು ಪರಿಶುದ್ಧ ಚಿನ್ನದ ದರ ಮತ್ತು ಇತರೆ ಚಿನ್ನದ ದರ ವಿವರ ಇಲ್ಲಿದೆ ನೋಡಿ. ಚಿನ್ನದ ದರ ಏರಿಕೆಚಿನ್ನದ ದರ ದಿನೇ ದಿನೇ ಏರಿಕೆಯಾಗುತ್ತಿದ್ದು ದಾಖಲೆಯ ಮಟ್ಟಕ್ಕೆ ತಲುಪಿದೆ. ಈಗಂತೂ ಮಧ್ಯಮ ವರ್ಗದವರಿಗೆ ಚಿನ್ನ ಕೊಳ್ಳುವುದು ಕನಸೇ ಎಂಬಂತಾಗಿದೆ. ಈ ವಾರದ ಆರಂಭದಿಂದಲೂ ಚಿನ್ನದ ಬೆಲೆ ಏರಿಕೆಯಾಗುತ್ತಲೇ ಇದೆ. ಆದರೆ ಈ ನಡುವೆ ಪರಿಶುದ್ಧ ಚಿನ್ನದ ದರ ಕೊಂಚ ಇಳಿಕೆಯಾಗಿತ್ತು. ಆದರೆ ಇಂದು ಮತ್ತೆ ಏರಿಕೆಯಾಗಿದೆ. ಪರಿಶುದ್ಧ ಚಿನ್ನದ ದರ ನಿನ್ನೆ1,16.520.00 ರೂ.ಗಳಷ್ಟಿತ್ತು.