ನ್ಯೂಯಾರ್ಕ್: ಭಾರತದ ಮೇಲೆ ಸುಂಕ ಹೇರಿ ಈಗ ಅಮೆರಿಕಾಗೆ ತನ್ನ ಬಾಲವನ್ನು ತಾನೇ ಸುಟ್ಟುಕೊಂಡ ಸ್ಥಿತಿಯಾಗಿದೆ. ಹೀಗಾಗಿ ಹೇಳಿದ್ದನ್ನೇ ಹೇಳಿಕೊಳ್ತಿದ್ದಾರೆ, ಇದನ್ನು ನೋಡಿದ್ರೆ ಇದು ಹೊಟ್ಟೆ ಉರಿ ಅಲ್ದೇ ಇನ್ನೇನು ಎನ್ನುವಂತಾಗಿದೆ.ಮೊನ್ನೆಯಷ್ಟೇ ಡೊನಾಲ್ಡ್ ಟ್ರಂಪ್ ಭಾರತ ನಮ್ಮ ಬಳಿ ಶೂನ್ಯ ಟಾರಿಫ್ ಡೀಲ್ ಮಾಡಲು ಬಂದಿತ್ತು. ಆದರೆ ಅಷ್ಟರಲ್ಲೇ ಎಲ್ಲಾ ತಡವಾಗಿತ್ತು ಎಂದಿದ್ದರು. ರಷ್ಯಾ, ಚೀನಾ ಅಧ್ಯಕ್ಷರ ಜೊತೆ ಶಾಂಘೈ ಶೃಂಗ ಸಭೆಯಲ್ಲಿ ಮೋದಿ ದೋಸ್ತಿ ಪ್ರದರ್ಶನ ಮಾಡಿದ್ದರ ಬೆನ್ನಲ್ಲೇ ಟ್ರಂಪ್ ರಿಂದ ಇಂತಹ ಹೇಳಿಕೆ ಬಂದಿತ್ತು.
ಬೆಂಗಳೂರು: ನಗರದ ಅರಮನೆ ಮೈದಾನದಲ್ಲಿ ನಾಳೆ ಮುಸ್ಲಿಮ್ ಧರ್ಮಗುರುಗಳು ಭಾಗಿಯಾಗುವ ಮಿಲಾದುನ್ನಬಿ ಸಮಾವೇಶ ಈಗ ವಿವಾದಕ್ಕೆ ಕಾರಣವಾಗಿದೆ. ಸಮಾವೇಶ ಹೆಸರಿನಲ್ಲಿ ಧರ್ಮ ಪ್ರಚಾರ ಇದರ ಉದ್ದೇಶ ಎಂದು ಬಿಜೆಪಿ ಆರೋಪಿಸಿದರೆ ಹಾಗೇನಿಲ್ಲ ಎಂದು ಸಿಎಂ ಸಿದ್ದರಾಮಯ್ಯ ನಿರಾಕರಿಸಿದ್ದಾರೆ.ಪ್ರವಾಸೀ ವೀಸಾದಡಿಯಲ್ಲಿ ಬರುವ ಧಾರ್ಮಿಕ ಮುಖಂಡರಿಂದ ಧಾರ್ಮಿಕ ಪ್ರಚಾರ ಭಾಷಣ ಮಾಡಿಸುವುದು ಸಮಾವೇಶದ ಉದ್ದೇಶ ಎಂದು ಬಿಜೆಪಿ ತೀವ್ರ ವಿರೋಧ ವ್ಯಕ್ತಪಡಿಸಿದೆ. ಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಕೂಡಾ ಭಾಗಿಯಾಗುತ್ತಿದ್ದಾರೆ. ಇದು ತುಷ್ಠೀಕರಣದ ಪರಮಾವಧಿ ಎಂದು ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ.
ನವದೆಹಲಿ: ಕೇಂದ್ರ ಸರ್ಕಾರ ದೇಶದ ಜನತೆಗೆ ಜಿಎಸ್ ಟಿ ಕಡಿತದ ಬಂಪರ್ ಗಿಫ್ಟ್ ನೀಡುತ್ತಿದ್ದಂತೇ ಇತ್ತ ಸೋಷಿಯಲ್ ಮೀಡಿಯಾದಲ್ಲಿ ಕಾಂಗ್ರೆಸ್ ಬೆಂಬಲಿಗರು ರಾಹುಲ್ ಗಾಂಧಿ ಅಂದೇ ಹೇಳಿದ್ರು ಅದನ್ನು ಮೋದಿ ಈಗ ಮಾಡಿದ್ರು ಎಂದು ಬೆನ್ನು ತಟ್ಟಿಕೊಂಡಿದ್ದಾರೆ.ರಾಹುಲ್ ಗಾಂಧಿಯ ಹಳೆಯ ಟ್ವೀಟ್ ನ್ನು ವೈರಲ್ ಮಾಡಿರುವ ಕಾಂಗ್ರೆಸ್ ಬೆಂಬಲಿಗರು, ನಾಯಕರು ರಾಹುಲ್ ಗಾಂಧಿಗೆ ಈ ಐಡಿಯಾ ಏಳು ವರ್ಷದ ಹಿಂದೆಯೇ ಬಂದಿತ್ತು. ಅದು ಮೋದಿಗೆ ಅರಿವಾಗಲು ಇಷ್ಟು ವರ್ಷ ಬೇಕಾಯಿತು ಎಂದಿದ್ದಾರೆ.ಶೇ.18 ಜಿಎಸ್ ಟಿ ಸ್ಲ್ಯಾಬ್ ಪರಿಷ್ಕರಣೆಯಾಗಬೇಕು ಎಂದು ರಾಹುಲ್ ಗಾಂಧಿ ಕೆಲವು ವರ್ಷದ ಹಿಂದೆಯೇ ಟ್ವೀಟ್ ಮಾಡಿದ್ದರು ಎಂದು ಕಾಂಗ್ರೆಸ್ ನಾಯಕರು ರಿಟ್ವೀಟ್ ಮಾಡುತ್ತಿದ್ದಾರೆ.
ನವದೆಹಲಿ: ದೇಶದ ಜನತೆಗೆ ಮೋದಿ ಸರ್ಕಾರ ಜಿಎಸ್ ಟಿ ಬಂಪರ್ ಕೊಡುಗೆ ನೀಡಿದೆ. ಜಿಎಸ್ ಟಿ ಪರಿಷ್ಕರಣೆಯಿಂದ ಕೃಷಿಕರಿಗೆ ಏನು ಲಾಭ, ಯಾವುದೆಲ್ಲಾ ಅಗ್ಗ ಇಲ್ಲಿದೆ ವಿವರ.ಜಿಎಸ್ ಟಿ ಪರಿಷ್ಕರಣೆಯಿಂದ ಕೃಷಿಕರಿಗೂ ಲಾಭವಾಗಲಿದೆ. ಕೃಷಿಗೆ ಅಗತ್ಯವಾದ ವಸ್ತುಗಳ ಬೆಲೆಯೂ ಕೊಂಚ ಕಡಿಮೆಯಾಗಲಿದೆ. ಕೃಷಿ ಕ್ಷೇತ್ರಕ್ಕೆ ಹೆಚ್ಚಿನ ಲಾಭ ನೀಡಲಾಗಿದೆ. ಕೃಷಿ ಸಲಕರಣೆಗಳು, ಕೀಟನಾಶಕಗಳ ಜಿಎಸ್ ಟಿಯಲ್ಲಿ ಕಡಿತವಾಗಿದೆ. ಉಳಿದ ವಿವರಗಳು ಇಲ್ಲಿದೆ ನೋಡಿ.ಟ್ರ್ಯಾಕ್ಟರ್ ಗಳು, ಟ್ರ್ಯಾಕ್ಟರ್ ನ ಟೈರ್ ಮತ್ತು ಇತರೆ ಬಿಡಿ ಭಾಗಗಳ ಜಿಎಸ್ ಟಿ ಈ ಮೊದಲು ಶೇ.18 ರಷ್ಟಿತ್ತು. ಈಗ ಇದು ಶೇ.5 ಕ್ಕೆ ಇಳಿಕೆಯಾಗಿದೆ.
ಮುಂಬೈ: ಯುಎಇನಲ್ಲಿ ಸೆಪ್ಟೆಂಬರ್ 9 ರಿಂದ ಆರಂಭವಾಗಲಿರುವ ಏಷ್ಯಾ ಕಪ್ ಕ್ರಿಕೆಟ್ ಟೂರ್ನಿಯಲ್ಲಿ ಪಾಲ್ಗೊಳ್ಳಲಿರುವ ಟೀಂ ಇಂಡಿಯಾ ಹೊಸದೊಂದು ದಾಖಲೆ ಮಾಡಲಿದೆ.ಸೂರ್ಯಕುಮಾರ್ ಯಾದವ್ ನೇತೃತ್ವದಲ್ಲಿ ಟೀಂ ಇಂಡಿಯಾ ಏಷ್ಯಾ ಕಪ್ ಕ್ರಿಕೆಟ್ ಟೂರ್ನಿ ನಡೆಯಲಿದೆ. ಭಾರತ ಮೊದಲ ಪಂದ್ಯವನ್ನು ಸೆಪ್ಟೆಂಬರ್ 10 ರಂದು ಯುಎಇ ವಿರುದ್ಧ ಆಡಲಿದೆ. ಈ ಬಾರಿ ಟಿ20 ಮಾದರಿಯಲ್ಲಿ ಏಷ್ಯಾ ಕಪ್ ನಡೆಯಲಿದೆ.ಈ ಏಷ್ಯಾ ಕಪ್ ನಲ್ಲಿ ಟೀಂ ಇಂಡಿಯಾ ಪ್ರಾಯೋಜಕರ ಲೋಗೋ ಇಲ್ಲದ ಜೆರ್ಸಿ ಹಾಕಿ ಆಡಲಿದೆ. ಮೊನ್ನೆಯಷ್ಟೇ ಡ್ರೀಮ್ 11 ಪ್ರಾಯೋಜಕತ್ವಕ್ಕೆ ಕೊಕ್ ನೀಡಿದ್ದ ಬಿಸಿಸಿಐ ಈಗ ಹೊಸ ಪ್ರಾಯೋಜಕರ ಹುಡುಕಾಟದಲ್ಲಿದೆ.
ನವದೆಹಲಿ: ದೇಶದ ಜನತೆಗೆ ಕೇಂದ್ರ ಸರ್ಕಾರ ಜಿಎಸ್ ಟಿ ಧಮಾಕಾ ಆಫರ್ ನೀಡಿದೆ. ದೀಪಾವಳಿ ವೇಳೆಗೆ ಜನತೆಗೆ ಉಡುಗೊರೆ ನೀಡಲಿದ್ದೇವೆ ಎಂದಿದ್ದ ಪ್ರಧಾನಿ ಮೋದಿ ಅದರಂತೆ ನಡೆದುಕೊಂಡಿದ್ದಾರೆ. ಅದರಂತೆ ಯಾವೆಲ್ಲಾ ವಸ್ತುಗಳಿಗೆ ಬೆಲೆ ಇಳಿಕೆಯಾಗಲಿದೆ ಇಲ್ಲಿದೆ ವಿವರ. ಎರಡು ದಿನಗಳ ಜಿಎಸ್ ಟಿ ಮಂಡಳಿ ಸಭೆಯಲ್ಲಿ ಮಹತ್ವದ ತೀರ್ಮಾನಗಳನ್ನು ಕೈಗೊಳ್ಳಲಾಗಿದೆ. ಜಿಎಸ್ ಟಿ ನಾಲ್ಕು ಸ್ಲ್ಯಾಬ್ ಗಳಿಂದ ಎರಡು ಸ್ಲ್ಯಾಬ್ ಗಳಿಗೆ ಇಳಿಕೆ ಮಾಡಲಾಗಿದೆ. ಇದರಿಂದ ಹಲವು ವಸ್ತುಗಳ ಮೇಲಿನ ಜಿಎಸ್ ಟಿ ರೂಪದಲ್ಲಿ ಬದಲಾವಣೆಯಾಗಿದ್ದು, ಬೆಲೆ ಇಳಿಕೆಯಾಗಲಿದೆ.
ಬೆಂಗಳೂರು: ರಾಜ್ಯದಲ್ಲಿ ಕಳೆದ ಒಂದು ವಾರದಿಂದ ನಿರಂತರ ಮಳೆಯಾಗುತ್ತಿದೆ. ಇಂದೂ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ವರದಿಗಳು ಹೇಳಿವೆ.ಬೆಂಗಳೂರಿನಲ್ಲಿ ಕಳೆದ ಒಂದು ವಾರದಿಂದ ಅಪರಾಹ್ನದವರೆಗೂ ದಟ್ಟ ಮೋಡ ಮುಸುಕಿದ ವಾತಾವರಣವಿರುತ್ತಿದ್ದು ಸಂಜೆ ವೇಳೆಗೆ ಮಳೆಯಾಗುತ್ತಿದೆ. ಇಂದೂ ಅದೇ ರೀತಿಯ ವಾತಾವರಣವಿರಲಿದೆ ಎಂದು ಹವಾಮಾನ ವರದಿಗಳು ಹೇಳುತ್ತಿವೆ.ಉಳಿದಂತೆ ಇಂದು ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಭಾರೀ ಮಳೆಯ ಸೂಚನೆಯಿದೆ. ಇಂದಿನವರೆಗೆ ಇಲ್ಲಿ ಮಳೆಯ ಅಬ್ಬರವಿದೆ. ಆದರೆ ಒಳನಾಡಿನಲ್ಲಿ ಮಳೆಯ ಅಬ್ಬರ ತಕ್ಕಮಟ್ಟಿಗೆ ಕಡಿಮೆಯಾಗಲಿದೆ.
ಜೀವನದಲ್ಲಿ ಬರುವ ರೋಗ-ರುಜಿನಗಳು ನಿವಾರಣೆಯಾಗಲು, ಅಡೆತಡೆಗಳನ್ನು ನಿವಾರಣೆ ಮಾಡಿ ಜೀವನದಲ್ಲಿ ನೆಮ್ಮದಿ ಮೂಡಲು ಸುದರ್ಶನ ಮಂತ್ರ ಸಹಕಾರಿ. ಅದಕ್ಕಾಗಿ ಶ್ರೀ ಸುದರ್ಶನ ಮಹಾಮಂತ್ರವನ್ನು ಓದಿ.ಓಂ ಶ್ರೀಂ ಹ್ರೀo ಕ್ಲೀo ಕೃಷ್ಣಾಯ ಗೋವಿಂದಾಯಾ ಗೋಪಿಜನ ವಲ್ಲಭಾಯ ಪರಾಯ ಪರಮ ಪುರುಷಾಯ ಪರಮಾತ್ಮನೇ ಪರ ಕರ್ಮ ಮಂತ್ರ ಯಂತ್ರ ತಂತ್ರ ಔಷದ ವಿಷ ಆಭಿಚಾರ ಅಸ್ತ್ರ ಶಸ್ತ್ರಾನ್ ಸಂಹಾರ ಸಂಹಾರ ಮೃಥ್ಯೊರ್ ಮೊಚಯ ಮೊಚಯ ಓಂ ನಮೋ ಭಗವತೇ ಮಹಾ ಸುದರ್ಶನಾಯಓಂ ಪ್ರೊ೦ ರೀಂ ರ೦ ದೀಪ್ತ್ರೇ ಜ್ವಾಲಾ ಪರೀಥಾಯ ಸರ್ವ ಧಿಕ್ಷೋಬನಕರಾಯ ಹುಂ ಫಟ್ ಪರಃಬ್ರಾಹ್ಮನೇ ಪರಂ ಜ್ಯೋತಿಷೇ ಸ್ವಾಹಾ |
ಮಂಗಳೂರು: ರಾಜ್ಯದ ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಈ ಬಾರಿ ವಾಡಿಕೆಗಿಂತ ಅಧಿಕ ಮಳೆಯಾಗಿದ್ದರಿಂದ ಕೃಷಿಕರು ಕಂಗಾಲಾಗಿದ್ದಾರೆ. ಅಡಿಕೆ ಮರಗಳಲ್ಲಿ ಉಳಿದ ಬೆಳೆಯನ್ನು ಉಳಿಸಿಕೊಳ್ಳುವುದೇ ದೊಡ್ಡ ಸವಾಲಾಗಿದೆ. ಕರಾವಳಿ ಪ್ರದೇಶದಲ್ಲಿ ಕಳೆದ ಕೆಲ ದಿನಗಳಿಂದ ನಿರಂತರವಗಿ ಸುರಿಯುತ್ತಿರುವುದರಿಂದ ಮಳೆಯಿಂದಾಗಿ ರೋಗದಿಂದಾಗಿ ಕಾಯಿ ಅಡಿಕೆಗಳು ಬೀಳುತ್ತಿದ್ದು, ಇದರಿಂದ ರೈತರು ಕಂಗಲಾಗಿದ್ದಾರೆ. ಒಂದೆಡೆ ಅಡಿಕೆ ಧಾರಣೆ ಕುಸಿತದ ಬಿಸಿ ತಟ್ಟಿದರೆ, ಮತ್ತೊಂದೆಡೆ ಇಳುವರಿ ಮೇಲೆ ನೇರ ಪರಿಣಾಮ ಬೀರುತ್ತಿದೆ. ನಿರಂತರ ಮಳೆಯಿಂದಾಗಿ ಕೊಯ್ಲಿ ಮಾಡಿರುವ ಅಡಿಕೆಗಳನ್ನು ಒಣಗಿಸಲು ಸಾಧ್ಯವಾಗುತ್ತಿಲ್ಲ. ಇನ್ನೊಂದೆಡೆ ಕಾಯಿ ಅಡಿಕೆಗಳು ಉದುರುತ್ತಿದೆ. ಇದು ಮುಂದಿನ ಅಡಿಕೆ ಇಳುವರಿ ಮೇಲೆ ನೇರ ಪರಿಣಾಮ ಬೀರುತ್ತದೆ ಎಂದು ಬೆಳ್ತಂಗಡಿ ತಾಲ್ಲೂಕಿನ ಮರೋಡಿಯ ಅಡಿಕೆ ಬೆಳೆಗಾರ ಲಿಂಗಪ್ಪ ಪೂಜಾರಿ ಹೇಳಿದ್ಧರೆ.
ದಾವಣಗೆರೆ: ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯನ್ನು ನಾಯಿಗೆ ಹೋಲಿಸಿ ಅವಮಾನ ಮಾಡಿದ ಆರೋಪದಡಿಯಲ್ಲಿ ಹರಿಹರದ ಬಿಜೆಪಿ ಶಾಸಕ ಬಿ.ಪಿ. ಹರೀಶ್ ವಿರುದ್ಧ ಕೆಟಿಜೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಅವರು ದೂರು ನೀಡಿ, ಶಾಸಕರು ನನ್ನ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಉಲ್ಲೇಖಿಸಿದ್ದಾರೆ. ಈ ದೂರನ್ನು ಆಧರಿಸಿ ಭಾರತೀಯ ನ್ಯಾಯ ಸಂಹಿತೆಯ (ಬಿಎನ್ಎಸ್) ಕಾಲಂ 79 (ಮಹಿಳೆಯ ಮಾನಕ್ಕೆ ಕುಂದುಂಟು ಮಾಡುವುದು) ಹಾಗೂ 132 (ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ಬೆಂಗಳೂರು: ಧರ್ಮಸ್ಥಳ ಚಲೋ ಮೆರವಣಿಗೆಯಲ್ಲಿ ತೆರಳುತ್ತಿದ್ದ ನಮ್ಮ ನಾಯಕರು ಮತ್ತು ಚುನಾಯಿತ ಪ್ರತಿನಿಧಿಗಳ ವಿಡಿಯೋ ಸೆರೆಹಿಡಿದು ಹಾನಿಕಾರಕ ಕಂಟೆಂಟ್ ಹಾಕಿದ್ದಾರೆ. ಇದನ್ನು ತಡೆಯಲು ಸರಕಾರ, ಗೃಹ ಇಲಾಖೆ ಕ್ರಮ ವಹಿಸಿಲ್ಲ ಎಂದು ಮಾಜಿ ಉಪಮುಖ್ಯಮಂತ್ರಿ ಹಾಗೂ ಶಾಸಕ ಡಾ. ಸಿ.ಎನ್. ಅಶ್ವತ್ಥನಾರಾಯಣ್ ಅವರು ಆಕ್ಷೇಪಿಸಿದ್ದಾರೆ.ನಗರದಲ್ಲಿ ಮಾಧ್ಯಮಗಳ ಜೊತೆ ಇಂದು ಮಾತನಾಡಿದ ಅವರು, ಸೌಜನ್ಯ ವಿಚಾರದಲ್ಲಿ ಯಾವುದೇ ಒಪ್ಪಂದದ ನಡೆ ಇಲ್ಲ ಎಂದು ಸ್ಪಷ್ಟಪಡಿಸಿದರು. ಸೌಜನ್ಯರ ತಾಯಿ ಇಟ್ಟಿರುವ ಬೇಡಿಕೆಯ ಪರವಾಗಿ ಇರುವುದಾಗಿ ನಮ್ಮ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ತಿಳಿಸಿದ್ದಾರೆ. ಅವರ ಮನೆಗೂ ಭೇಟಿ ಕೊಟ್ಟಿದ್ದಾರೆ ಎಂದರು. ಧರ್ಮದ ವಿಚಾರದಲ್ಲಿ ಇಂಥ ಹುಡುಗಾಟ ಮಾಡಿದರೆ, ನಾವು ಸಹಿಸುವುದಿಲ್ಲ ಎಂದರು.
ನವದೆಹಲಿ: ಕಾಂಗ್ರೆಸ್ ವಕ್ತಾರ ಪವನ್ ಖೇರಾ ಅವರ ಪತ್ನಿ, ಲೇಖಕಿ ಮತ್ತು ರಾಜಕಾರಣಿ ಕೋಟಾ ನೀಲಿಮಾ ಅವರು ಎರಡು ಮತದಾರರ ಗುರುತಿನ ಚೀಟಿಗಳನ್ನು ಹೊಂದಿದ್ದಾರೆ ಎಂದು ಭಾರತೀಯ ಜನತಾ ಪಕ್ಷ (ಬಿಜೆಪಿ) ಬುಧವಾರ ಗಂಭೀರ ಆರೋಪ ಮಾಡಿದೆ. ಭಾರತೀಯ ಚುನಾವಣಾ ಆಯೋಗವು (ಇಸಿಐ) ಆಪಾದಿತ ಉಲ್ಲಂಘನೆಯ ಬಗ್ಗೆ ತಕ್ಷಣ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದೆ.ಬಿಜೆಪಿ ವಕ್ತಾರ ಶಾಜಿಯಾ ಇಲ್ಮಿ ಅವರು ಕಾಂಗ್ರೆಸ್ ಪಕ್ಷದ "ಪ್ರಜಾಪ್ರಭುತ್ವದ ಮಾನದಂಡಗಳ ಕಡೆಗಣನೆ" ಎಂದು ವಿವರಿಸಿರುವ
ತಿರುವನಂತಪುರಂ: ಕೇರಳದ ಮಲಪ್ಪುರಂ ಜಿಲ್ಲೆಯ ಶಾಲೆಯೊಂದರಲ್ಲಿ ಸ್ವಾತಂತ್ರ್ಯ ದಿನಾಚರಣೆ ವೇಳೆ ಆರ್ಎಸ್ಎಸ್ ಗೀತೆಯನ್ನು ಹಾಡಿ ಇದೀಗ ವಿವಾದ ಸೃಷ್ಟಿಸಿದೆ. ಈ ಸಂಬಂಧ ಕೇರಳದ ಶಿಕ್ಷಣ ಸಚಿವ ವಿ ಶಿವನ್ಕುಟ್ಟಿ ಶಾಲೆಯಿಂದ ವಿವರಣೆ ಕೇಳಿದ್ದಾರೆ.ತಿರುೂರಿನ ಅಲತ್ತಿಯೂರಿನಲ್ಲಿರುವ ಕುಂಜಿಮೋನ್ ಹಾಜಿ ಮೆಮೋರಿಯಲ್ ಹೈಯರ್ ಸೆಕೆಂಡರಿ ಶಾಲೆ ಈ ಸಂಬಂಧ ವಿವಾದಕ್ಕೆ ಕಾರಣವಾಗಿದೆ. ಶಾಲಾ ಅಧಿಕಾರಿಗಳು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ ಸ್ವಾತಂತ್ರ್ಯ ದಿನಾಚರಣೆಯ ವೀಡಿಯೊವನ್ನು ಕೆಲವು
ಹಾಸನ: ರಾಜ್ಯದ ವಿರೋಧ ಪಕ್ಷದ ತೀವ್ರ ವಿರೋಧದ ನಡುವೆಯೂ ಸಾಹಿತಿ ಬಾನು ಮುಷ್ತಾಕ್ಗೆ ದಸರಾ ಉದ್ಘಾಟನೆಗೆ ಜಿಲ್ಲಾಡಳಿತ ಅಧಿಕೃತ ಆಹ್ವಾನವನ್ನು ನೀಡಿದೆ. ಸಿಎಂ ಸಿದ್ದರಾಮಯ್ಯ ಅವರು ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನಾ ಕಾರ್ಯಕ್ರಮಕ್ಕೆ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಿರುವುದಕ್ಕೆ ತೀವ್ರ ವಿರೋಧ ವ್ಯಕ್ತವಾಗಿತ್ತು. ಆದರೆ ಸಿಎಂ ಸಿದ್ದರಾಮಯ್ಯ ಅವರು ಬಾನು ಮುಷ್ತಾಕ್ ಅವರನ್ನು ಆಯ್ಕೆ
ಮೂಡುಬಿದಿರೆ: ಪೊಲೀಸ್ ಠಾಣೆಗೆ ದೂರು ನೀಡಲು ಬಂದ ಮಹಿಳೆಯ ನಂಬರನ್ನು ಪಡೆದು ಆಕೆಗೆ ಆಶ್ಲೀಲ ಸಂದೇಶ ಕಳುಹಿಸಿ, ಪದೇ ಪದೇ ಕರೆ ಮಾಡಿದ ಆರೋಪದಡಿ ಮೂಡುಬಿದಿರೆ ಪೊಲೀಸ್ ಠಾಣೆ ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ. ಮೂಡುಬಿದಿರೆಯ ತೋಡಾರು ಮೂಲದ ವಿವಾಹಿತ ಮಹಿಳೆಯೊಬ್ಬರು ಆಗಸ್ಟ್ 23ರಂದು ಕೌಟುಂಬಿಕ ಕಲಹದಡಿಯಲ್ಲಿ ದೂರನ್ನು ನೀಡಲು ಠಾಣೆ ಮೆಟ್ಟಿಲೇರಿದ್ದರು. ಪ್ರಕರಣ ದಾಖಲಾದ ಬಳಿಕ ಇನ್ಸ್ಪೆಕ್ಟರ್ ಸಂದೇಶ ಅವರು ಪತಿ ಹಾಗೂ ಪತ್ನಿ ಇಬ್ಬರನ್ನು ಕರೆದು ಅವರ ನಡುವೆ ರಾಜಿ ಪಂಚಾತಿ
ಕೊಡಿಗೇನಹಳ್ಳಿ: ಈಚೆಗೆ ಸಚಿವ ಸ್ಥಾನಕ್ಕೆ ರಾಜೀನಾಮೆ ನಿಡಿ, ಪಕ್ಷದಿಂದ ವಜಾಗೊಂಡಿರುವ ಶಾಸಕ ಕೆಎನ್ ರಾಜಣ್ಣ ಅವರು ತಮ್ಮ ರಾಜಕೀಯದ ಮುಂದಿನ ನಡೆ ಬಗ್ಗೆ ಅಚ್ಚರಿ ಹೇಳಿಕೆ ನೀಡಿದ್ದಾರೆ. ಈಚೆಗೆ ರಾಜಣ್ಣ ಅವರು ಬಿಜೆಪಿ ಪಕ್ಷಕ್ಕೆ ಸೇರಲಿದ್ದಾರೆಂಬ ಎಂಬ ಸುದ್ದಿ ರಾಜಕೀಯ ವಲಯದಲ್ಲಿ ಜೋರಾಗಿ ಹರಿದಾಡಿತ್ತು. ಈ ಸಂಬಂಧ ಕೊಡಿಗೇನಹಳ್ಳಿಯಲ್ಲಿ ನಡೆದ ಜನಸ್ಪಂದನ ಸಭೆಯಲ್ಲಿ ಮಾತನಾಡಿದ ಅವರು, ಯಾವ ಪಕ್ಷದಿಂದ ಚುನಾವಣೆಗೆ ಸ್ಪರ್ಧಿಸಿದರೂ ಗೆಲುವು ಸಾಧಿಸುತ್ತೇನೆ. ಪಕ್ಷೇತರನಾಗಿ ನಿಂತರೂ ಗೆಲ್ಲುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಲಕ್ನೋ: ಉತ್ತರ ಪ್ರದೇಶದ ಬಿಜ್ನೋರ್ನಲ್ಲಿ ನಯೀಬ್ ತಹಶೀಲ್ದಾರ್ ಅವರು ಬುಧವಾರ ಗುಂಡು ಹಾರಿಸಿಕೊಂಡು ತಮ್ಮ ಸರ್ಕಾರಿ ನಿವಾಸದಲ್ಲಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ವರದಿಯಾಗಿದೆ. ಸದರ್ ತಹಶೀಲ್ನಲ್ಲಿ ನಿಯೋಜಿತರಾಗಿದ್ದ ರಾಜ್ಕುಮಾರ್ ಅವರು ತಮ್ಮ ಅಧಿಕೃತ ನಿವಾಸದ ಕೋಣೆಯೊಳಗೆ ಬೀಗ ಹಾಕಿಕೊಂಡು ಗುಂಡು ಃಆರಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮನೆಯವರು ಬಾಗಿಲು ಒಡೆದು ಗಂಭೀರ ಸ್ಥಿತಿಯಲ್ಲಿದ್ದ ರಾಜ್ಕುಮಾರ್ ಅವರನ್ನು ಆಸ್ಪತ್ರೆಗೆ ದಾಖಲು ಮಾಡಿದರು. ಪರಿಸ್ಥಿತಿ
ಕೋಲ್ಕತ್ತ: ಅತ್ಯಾಚಾರ ಪ್ರಕರಣದಲ್ಲಿ ವ್ಯಕ್ತಿಯೊಬ್ಬ 51 ದಿನ ಜೈಲಿನಲ್ಲಿ ಕಳೆದ ಬಳಿಕ ದೂರುದಾರ ಮಹಿಳೆ ಇದೀಗ ಉಲ್ಟಾ ಹೊಡೆದಿರುವ ಘಟನೆ ಕೋಲ್ಕತ್ತದಲ್ಲಿ ವರದಿಯಾಗಿದೆ. ಮನಸ್ತಾಪದಿಂದಾಗಿ ದೂರು ದಾಖಲಿಸಿರುವುದಾಗಿ ಹೇಳಿಕೊಂಡ ಬೆನ್ನಲ್ಲೇ ನ್ಯಾಯಾಲಯವು ಆಪಾದಿತ ವ್ಯಕ್ತಿಯನ್ನು ಖುಲಾಸೆಗೊಳಿಸಿದೆ. ಘಟನೆ ಹಿನ್ನೆಲೆ: 2020ರ ನವೆಂಬರ್ 24ರಂದು ದಾಖಲಾಗಿದ್ದ ಪ್ರಕರಣದಲ್ಲಿ ವ್ಯಕ್ತಿಯನ್ನು ಬಂಧಿಸಲಾಗಿತ್ತು. ನ್ಯಾಯಾಲಯವು ಆತನಿಗೆ ಜಾಮೀನು ನೀಡುವವರೆಗೆ 51 ದಿನಗಳನ್ನು ಜೈಲಿನಲ್ಲಿ ಕಳೆದಿದ್ದರು.
ಅಂಜನಾದ್ರಿ ಕ್ಷೇತ್ರದ ಅಭಿವೃದ್ಧಿಗೆ ಸಂಬಂಧಿಸಿದಂತೆ ಇಂದು ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಕಾವೇರಿ ನಿವಾಸದಲ್ಲಿ ನಡೆದ ಸಭೆ ನಡೆಯಿತು. ಈ ವೇಳೆ ಅಂಜನಾದ್ರಿ ಕ್ಷೇತ್ರದ ಅಭಿವೃದ್ಧಿಗೆ ಕೈಗೊಳ್ಳಬೇಕಾದ ಕೆಲಸಗಳ ಬಗ್ಗೆ ಮಹತ್ವದ ತೀರ್ಮಾನಗಳನ್ನು ತೆಗೆದುಕೊಳ್ಳಲಾಯಿತು. ಅದರ ಮುಖ್ಯಾಂಶಗಳು ಇಲ್ಲಿದೆ ನೋಡಿ. * ಹನುಮ ಜಯಂತಿ ಸಂದರ್ಭದಲ್ಲಿ ಲಕ್ಷಾಂತರ ಜನರು ಬೆಟ್ಟಕ್ಕೆ ಭೇಟಿ ನೀಡುತ್ತಾರೆ. ಉತ್ತರ ಭಾರತದ ಪ್ರವಾಸಿಗರು ಸಹ ಹೆಚ್ಚಿನ ಸಂಖ್ಯೆಯಲ್ಲಿ ಕ್ಷೇತ್ರಕ್ಕೆ ಭೇಟಿ ನೀಡುತ್ತಾರೆ. ಯಾತ್ರಿಕರು ಉಳಿದುಕೊಳ್ಳಲು ಡಾರ್ಮೆಟರಿ ವ್ಯವಸ್ಥೆ, ಹಿರಿಯ ಭಕ್ತಾಧಿಗಳು ಬೆಟ್ಟವೇರಲು ಅನುಕೂಲವಾಗುವಂತೆ ಮೆಟ್ಟಿಲುಗಳ ವ್ಯವಸ್ಥೆ, ಸಮುದಾಯ ಭವನ ನಿರ್ಮಾಣ ಹಾಗೂ ಇತರ ಪ್ರವಾಸಿ ಸೌಲಭ್ಯಗಳು ಸೇರಿ ಕ್ಷೇತ್ರದ ಸುತ್ತ ಮುತ್ತ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿ ಪಡಿಸಬೇಕಿದೆ.
ಚೆನ್ನೈ ಮೂಲದ ಆಟೋಮೊಬೈಲ್ ಕಂಪನಿಯೊಂದು ಬುಧವಾರ ತಿರುಮಲ ತಿರುಪತಿ ದೇವಸ್ಥಾನಕ್ಕೆ ಬರೋಬ್ಬರಿ ₹1.3 ಕೋಟಿಯ ಎಲೆಕ್ಟ್ರಿಕ್ ಬಸ್ ಅನ್ನು ಕೊಡುಗೆಯಾಗಿ ನೀಡಿದೆ. ತಿರುಪತಿಯ ಶ್ರೀವಾರಿ ದೇವಸ್ಥಾನದಲ್ಲಿ ದೇಣಿಗೆಯನ್ನು ಹೆಚ್ಚುವರಿ ಕಾರ್ಯನಿರ್ವಾಹಕ ಅಧಿಕಾರಿ ವೆಂಕಯ್ಯ ಚೌಧರಿ ಅವರಿಗೆ ಹಸ್ತಾಂತರಿಸಲಾಯಿತು.
ಹುಬ್ಬಳ್ಳಿ: ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಹುಬ್ಬಳ್ಳಿಯ ನೇಹಾ ಹಂತಕ ಫಯಾಜ್ ಕತೆ ಈಗ ಏನಾಗಿದೆ ನೋಡಿ. ಈ ಪ್ರಕರಣದಲ್ಲಿ ಧಾರವಾಡ ಹೈಕೋರ್ಟ್ ಪೀಠ ಮಹತ್ವದ ತೀರ್ಪು ನೀಡಿದೆ. ಇಂಜಿನಿಯರಿಂಗ್ ವಿದ್ಯಾರ್ಥಿನಿಯಾಗಿದ್ದ ನೇಹಾಳನ್ನು ಆಕೆಯ ಸಹಪಾಠಿಯಾಗಿದ್ದ ಫಯಾಜ್ ಎಂಬಾತ ಕಾಲೇಜು ಆವರಣದಲ್ಲೇ ಬರ್ಬರವಾಗಿ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದ. ಆ ಕ್ಷಣವೇ ಆತನನ್ನು ಸಾರ್ವಜನಿಕರು ಹಿಡಿದು ಪೊಲೀಸರಿಗೊಪ್ಪಿಸಿದ್ದರು. ಪ್ರೀತಿ ನಿರಾಕರಿಸಿದ್ದಕ್ಕೆ ನೇಹಾಳನ್ನು ಆತ ಹತ್ಯೆ ಮಾಡಿದ್ದ. ಈ ಸಂಬಂಧ ಆತ ಹುಬ್ಬಳ್ಳಿಯ 1 ನೇ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯದಲ್ಲಿ ಜಾಮೀನಿಗೆ ಅರ್ಜಿ ಸಲ್ಲಿಸಿದ್ದ.
ಮುಂಬೈ: ನಟಿ ಶಿಲ್ಪಾ ಶೆಟ್ಟಿ ಮತ್ತು ಉದ್ಯಮಿ ರಾಜ್ ಕುಂದ್ರಾ ವಿರುದ್ಧ ₹69ಕೋಟಿ ವಂಚನೆ ಪ್ರಕರಣ ದಾಖಲಾದ ಬೆನ್ನಲ್ಲೇ ಅವರ ಸಹ ಮಾಲೀಕತ್ವದ ಮುಂಬೈನ ಜನಪ್ರಿಯ ಬಾ್ಟಿಯನ್ ಬಾಂದ್ರಾ ರೆಸ್ಟೋರೆಂಟ್ ಅನ್ನು ಬಂದ್ ಮಾಡಲಾಗಿದೆ. ರೆಸ್ಟೋರೆಂಟ್ ಮುಚ್ಚುವಿಕೆ ಬಗ್ಗೆ ಅಧಿಕೃತವಾಗಿ ಘೋಷಣೆ ಮಾಡಲಾಗಿದೆ. ಲಿಂಕಿಂಗ್ ರೋಡ್ನಲ್ಲಿ 2016 ರಲ್ಲಿ ಮೊದಲ ಬಾರಿಗೆ ಪ್ರಾರಂಭವಾದ ದುಬಾರಿ ಉಪಹಾರ ಗೃಹವು ತ್ವರಿತವಾಗಿ ಆಹಾರ ಪ್ರಿಯರು ಮತ್ತು ಸೆಲೆಬ್ರಿಟಿಗಳಿಗೆ ಹಾಟ್ಸ್ಪಾಟ್ ಆಯಿತು.
ಬೆಂಗಳೂರು: ಟಾಲಿವುಡ್ ಪವರ್ ಸ್ಟಾರ್, ಡಿಸಿಎಂ ಪವನ್ ಕಲ್ಯಾಣ್ ಅವರು ನಿನ್ನೆ 54ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಂಡರು. ಇನ್ನೂ ತನ್ನ ಹುಟ್ಟುಹಬ್ಬವನ್ನು ಹ್ಯಾಟ್ರಿಕ್ ಹೀರೋ ಶಿವರಾಜ್ಕುಮಾರ್ ಆಚರಿಸಿಕೊಂಡ ರೀತಿಗೆ ಪವನ್ ಕಲ್ಯಾಣ್ ಮನಸೋತು, ಪೋಸ್ಟ್ ಹಾಕಿ ಧನ್ಯವಾದನ್ನು ಸಲ್ಲಿಸಿದ್ದಾರೆ. ನಟ ಶಿವರಾಜ್ ಕುಮಾರ್ ಟಾಲಿವುಡ್ ಸ್ಟಾರ್ ಪವನ್ ಕಲ್ಯಾಣ್ ಅವರ ಜನ್ಮದಿನವನ್ನು ವಿಶೇಷವಾಗಿ ಆಚರಿಸಿದ್ದರು. ನಟ ಪವನ್ ಕಲ್ಯಾಣ್ ಅವರ ಅಭಿಮಾನಿಗಳ ಜೊತೆ ಕೇಕ್ ಕೇಕ್ ಕತ್ತರಿಸುವ ಮೂಲಕ ನಟ ಶಿವರಾಜ್ ಕುಮಾರ್ ಪವನ್ ಕಲ್ಯಾಣ್ ಅವರ
ಬೆಂಗಳೂರು: ಜೆಡಿಎಸ್ ಪಕ್ಷದ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ನೆರೆಹಾನಿ ಪ್ರದೇಶಗಳ ರೈತರು, ಸಂತ್ರಸ್ತರ ಸಮಸ್ಯೆಗಳಿಗೆ ಸ್ಪಂದಿಸುವ ಸಲುವಾಗಿ ರಾಜ್ಯ ಪ್ರವಾಸ ಕೈಗೊಳ್ಳುವುದಾಗಿ ಹೇಳಿದ್ದಾರೆ.ಈ ವಿಚಾರವಾಗಿ ಮಾಧ್ಯಮದವರ ಜತೆ ಮಾತನಾಡಿದ ಅವರು, ಕಳೆದ ಕೆಲ ದಿನಗಳಿಂದ ರಾಜ್ಯದ ಹಲವೆಡೆ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಪ್ರವಾಹ ಉಂಟಾಗಿರುವುದರಿಂದ ರಾಜ್ಯ ಸರ್ಕಾರ ರೈತರ ಸಾಲ ಮನ್ನಾ ಮಾಡಬೇಕೆಂದು ಒತ್ತಾಯಿಸಿದ್ದಾರೆ.ರಾಜ್ಯದಲ್ಲಿ ಮುಂಗಾರು ಮಳೆಯ ಅತಿವೃಷ್ಟಿಯಿಂದ ಲಕ್ಷಾಂತರ ಹೆಕ್ಟರ್ ಪ್ರದೇಶದಲ್ಲಿ ರೈತರ ಬೆಳೆ ನಷ್ಟವಾಗಿದ್ದು,
ಮಂಗಳೂರು: ಧರ್ಮಸ್ಥಳ ಸುತ್ತಾಮುತ್ತಾ ಹಲವು ಮೃತದೇಹಗಳನ್ನು ಹೂತು ಹಾಕಲಾಗಿದೆ ಎಂಬ ಆರೋಪ ಸಂಬಂಧ ಇದೀಗ ಎಸ್ಐಟಿ ತನಿಖೆ ಿದೀಗ ತೀವ್ರ ಗತಿಯಲ್ಲಿ ಸಾಗಿದೆ. ಇದೀಗ ಎಸ್ಐಟಿ ಕಚೇರಿಗೆ ಧರ್ಮಸ್ಥಳದ ಉದಯ್ ಜೈನ್ ಅವರು ಬುಧವಾರ ಹಾಜರಾಗಿದ್ದು, ಭಾರೀ ಕುತೂಹಲ ಮೂಡಿದೆ. ಸೌಜನ್ಯ ಹತ್ಯೆ ಪ್ರಕರಣದಲ್ಲಿ ಉದಯ್ ಜೈನ್ ಮೇಲೆ ಗಂಭೀರ ಆರೋಪ ಕೇಳಿಬಂದಿತ್ತು. ಇದೀಗ ಎಸ್ಐಟಿ ಕಚೇರಿಗೆ ಧರ್ಮಸ್ಥಳದ ಉದಯ್ ಜೈನ್ ಹಾಜರಾದರು. ಈ ಸಂದರ್ಭದಲ್ಲಿ ಮಾಧ್ಯಮದವರ ಜತೆ ಮಾತನಾಡಿದ ಅವರು, ಬುಧವಾರ 11 ಗಂಟೆಗೆ ಕಚೇರಿಗೆ ಹಾಜರಾಗುವಂತೆ ಎಸ್ಐಟಿ
ಶಿಮ್ಲಾ: ಕಳೆದ ಹಲವು ದಿನಗಳಿಂದ ಸುರಿಯುತ್ತಿರುವ ಮಹಾಮಳೆಗೆ ಹಿಮಾಚಲ ಪ್ರದೇಶದಲ್ಲಿ ಜನಜೀವನ ಅಸ್ತವ್ಯಸ್ಥವಾಗಿದೆ. ಮಂಡಿ ಜಿಲ್ಲೆಯ ಸುಂದರನಗರ ಉಪವಿಭಾಗದಲ್ಲಿರುವ ಜಂಗಂಬಾಗ್ನಲ್ಲಿ ಎರಡು ಮನೆಗಳ ಮೇಲೆ ಭೂಕುಸಿತವಾಗಿದ್ದು, ಒಂದೇ ಕುಟುಂಬದ ನಾಲ್ವರು ಸದಸ್ಯರು ಸೇರಿದಂತೆ ಒಟ್ಟು ಆರು ಮಂದಿ ಬಲಿಯಾಗಿದ್ದಾರೆ.35 ವರ್ಷದ ಗುರುಪ್ರೀತ್ ಸಿಂಗ್, ಅವರ ಪತ್ನಿ ಭಾರತಿ (30), ಅವರ ಮೂರು ವರ್ಷದ ಮಗಳು ಕಿರಾತ್, ಶಾಂತಿ ದೇವಿ (70), ಮತ್ತು ಸುರೇಂದರ್ ಕೌರ್ (56) ಎಂದು ಮೃತರು ಗುರುತಿಸಲಾಗಿದೆ. ಮತ್ತೊಬ್ಬ ವ್ಯಕ್ತಿ ರಾಹಿಲ್ ಕೂಡ ತನ್ನ ವಾಹನದಲ್ಲಿ ತೆರಳುತ್ತಿದ್ದಾಗ ಭೂಕುಸಿತದಲ್ಲಿ ಸಿಲುಕಿಕೊಂಡಿದ್ದು, ಇನ್ನೂ ನಾಪತ್ತೆಯಾಗಿದ್ದಾನೆ. ಆತನ ಪತ್ತೆಗಾಗಿ ಶೋಧ ಕಾರ್ಯಾಚರಣೆ ಮುಂದುವರೆದಿದೆ.
ಬೆಂಗಳೂರು: ಕಾಂಗ್ರೆಸ್ ಶಾಸಕ ಆರ್.ವಿ. ದೇಶಪಾಂಡೆ ಅವರ ಕೀಳು ಅಭಿರುಚಿಯ ಹೇಳಿಕೆಯನ್ನು ಖಂಡಿಸಿ ಬಿಜೆಪಿ ರಾಜ್ಯ ಮಹಿಳಾ ಮೋರ್ಚಾ ವತಿಯಿಂದ ನಾಳೆ ಸೆ.4 ರಂದು ಉತ್ತರ ಕನ್ನಡ ಜಿಲ್ಲೆಯಲ್ಲಿ ಪ್ರತಿಭಟನೆ ಮಾಡಲಿದ್ದೇವೆ ಎಂದು ಬಿಜೆಪಿ ರಾಜ್ಯ ಮಹಿಳಾ ಮೋರ್ಚಾ ಅಧ್ಯಕ್ಷೆ ಕು. ಸಿ. ಮಂಜುಳಾ ಅವರು ತಿಳಿಸಿದ್ದಾರೆ. ದೇಶಪಾಂಡೆ ಅವರು, ಮಹಿಳಾ ಪತ್ರಕರ್ತೆ ರಾಧಾ ಹಿರೇಗೌಡರ್ ಅವರು ಹೇಳಿದ ಪ್ರಶ್ನೆಗೆ ಅವಮಾನಿಸಿರುವುದು ಖಂಡನೀಯ, ಕೂಡಲೇ ಅವರು ಕ್ಷಮೆ ಯಾಚಿಸಬೇಕು ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ಆಗ್ರಹಿಸಿದ್ದಾರೆ.
ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸಂಭ್ರಮಾಚರಣೆಯ ವೇಳೆ ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಉಂಟಾದ ಕಾಲ್ತುಳಿತ ದುರಂತದ ಬಗ್ಗೆ ಆರ್ಸಿಬಿ ತಂಡದ ತಾರೆ ವಿರಾಟ್ ಕೊಹ್ಲಿ ಮೂರು ತಿಂಗಳ ಬಳಿಕ ಮೌನ ಮುರಿದಿದ್ದಾರೆ.ಐಪಿಎಲ್ ಟೂರ್ನಿಯಲ್ಲಿ ಚೊಚ್ಚಲ ಟ್ರೋಫಿ ಗೆದ್ದ ಆರ್ಸಿಬಿ ತಂಡದ ಸಂಭ್ರಮಾಚರಣೆಯ ವೇಳೆ ಉಂಟಾದ ಕಾಲ್ತುಳಿತ ದುರಂತದಲ್ಲಿ 11 ಮಂದಿ ಮೃತಪಟ್ಟರೆ, ಹಲವು ಮಂದಿ ಗಾಯಗೊಂಡಿದ್ದರು. ಈ ಬಗ್ಗೆ ಕೊಹ್ಲಿ ಭಾವುಕ ಸಂದೇಶವನ್ನು ಹಂಚಿದ್ದಾರೆ.ಕಾಲ್ತುಳಿತದ ದುರಂತ ಬಳಿಕ ಕೊಹ್ಲಿ ಅವರಿಂದ ದಾಖಲಾದ ಮೊದಲ ವಿಸ್ತೃತ ಹೇಳಿಕೆ ಇದಾಗಿದೆ. ಕೊಹ್ಲಿ ಪ್ರತಿಕ್ರಿಯೆ ನೀಡದಿರುವ ಬಗ್ಗೆ ವ್ಯಾಪಕ ಟೀಕೆಗಳು ಬಂದಿದ್ದವು. ಮೂರು ತಿಂಗಳ ಬಳಿಕ ಹೇಳಿಕೆ ಹಂಚಿಕೊಂಡಿದ್ದಾರೆ.
ಲಂಡನ್: ಟೀಂ ಇಂಡಿಯಾಗೆ ಕಮ್ ಬ್ಯಾಕ್ ಮಾಡಬೇಕಾದರೆ ವಿರಾಟ್ ಕೊಹ್ಲಿ ಫಿಟ್ನೆಸ್ ಟೆಸ್ಟ್ ಪರೀಕ್ಷೆಗೊಳಪಡಬೇಕು. ಆದರೆ ಸದ್ಯಕ್ಕೆ ಲಂಡನ್ ವಾಸಿಯಾಗಿರುವ ಕೊಹ್ಲಿಗೆ ಬಿಸಿಸಿಐ ಸ್ಪೆಷಲ್ ಸೌಲಭ್ಯ ನೀಡಲು ಮುಂದಾಗಿದೆ. ಟೆಸ್ಟ್ ಮತ್ತು ಟಿ20 ಮಾದರಿಯಿಂದ ನಿವೃತ್ತಿಯಾಗಿರುವ ವಿರಾಟ್ ಕೊಹ್ಲಿ ಈಗ ಏಕದಿನ ಪಂದ್ಯದಲ್ಲಿ ಮಾತ್ರ ಆಡುತ್ತಿದ್ದಾರೆ. ಚಾಂಪಿಯನ್ಸ್ ಟ್ರೋಫಿ ಫೈನಲ್ ನಲ್ಲಿ ಆಡಿದ್ದೇ ಕೊನೆ. ಇದಾದ ಬಳಿಕ ಈಗ ಆಸ್ಟ್ರೇಲಿಯಾ ವಿರುದ್ಧ ನಡೆಯಲಿರುವ ಏಕದಿನ ಸರಣಿಗೆ ಅವರು ಕಮ್ ಬ್ಯಾಕ್ ಮಾಡಬೇಕಿದೆ. ಆದರೆ ಕಮ್ ಬ್ಯಾಕ್ ಮಾಡಲು ಅವರು ಅನಿವಾರ್ಯವಾಗಿ ಫಿಟ್ನೆಸ್ ಟೆಸ್ಟ್ ಪಾಸ್ ಮಾಡಿಕೊಳ್ಳಬೇಕು.
ಬೆಂಗಳೂರು: ಇಂದು ಹಿರಿಯ ನಟಿ ಭಾರತಿ ವಿಷ್ಣುವರ್ಧನ್ ಅವರು ಸಿಎಂ ಸಿದ್ದರಾಮಯ್ಯ ಅವರನ್ನು ಕಾವೇರಿ ನಿವಾಸದಲ್ಲಿ ಭೇಟಿ ಮಾಡಿ ಮನವಿಯೊಂದನ್ನು ಸಲ್ಲಿಸಿದ್ದಾರೆ. ಅಷ್ಟಕ್ಕೂ ಅವರು ಸಿಎಂ ಬಳಿ ಏನೆಲ್ಲಾ ಮನವಿ ಮಾಡಿದ್ದಾರೆ? ಇಲ್ಲಿದೆ ನೋಡಿ ವಿವರ. ಸಾಹಸಸಿಂಹ ಡಾ ವಿಷ್ಣುವರ್ಧನ್ ಸಮಾಧಿಯಿದ್ದ ಸ್ಥಳವನ್ನು ಇತ್ತೀಚೆಗೆ ಅಭಿಮಾನ್ ಸ್ಟುಡಿಯೋ ಮಾಲಿಕರಾದ ಬಾಲಣ್ಣ ಕುಟುಂಬಸ್ಥರು ನೆಲಸಮ ಮಾಡಿದ್ದರು. ಇದರ ಬೆನ್ನಲ್ಲೇ ನಿಯಮ ಉಲ್ಲಂಘನೆ ಹಿನ್ನಲೆಯಲ್ಲಿ ಸರ್ಕಾರ ಈ ಭೂ ಪ್ರದೇಶವನ್ನು ಅರಣ್ಯ ಇಲಾಖೆಗೆ ಒಪ್ಪಿಸಲು ಜಿಲ್ಲಾಧಿಕಾರಿಗಳಿಗೆ ನೋಟಿಸ್ ನೀಡಿತ್ತು.
ನವದೆಹಲಿ: ಶಾಂಘೈ ಶೃಂಗ ಸಭೆಯಲ್ಲಿ ಭಾರತ ಪ್ರಧಾನಿ ಮೋದಿ ಮತ್ತು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ನಡುವಿನ ಸ್ನೇಹ ಸಂಬಂಧ ನೋಡಿ ಹೊಟ್ಟೆ ಉರಿದುಕೊಂಡಿರುವ ಪಾಕಿಸ್ತಾನ ಪ್ರಧಾನಿ ಶಹಬಾಜ್ ಷರೀಫ್ ನಮ್ಮ ಜೊತೆಗೂ ಉತ್ತಮ ಸಂಬಂಧವಿಟ್ಟುಕೊಳ್ಳಿ ಎಂದು ರಷ್ಯಾಗೆ ದುಂಬಾಲು ಬಿದ್ದಿದ್ದಾರೆ. ಶಾಂಘೈ ಶೃಂಗ ಸಭೆಯಲ್ಲಿ ಪಾಕಿಸ್ತಾನ ಪ್ರಧಾನಿ ಎದುರಿಗೇ ಇದ್ದರೂ ಕ್ಯಾರೇ ಎನ್ನದೇ ಮೋದಿ-ಪುಟಿನ್ ಮಾತುಕತೆಯಲ್ಲಿ ತೊಡಗಿಸಿಕೊಂಡಿದ್ದರು. ಅವರನ್ನು ಶಹಬಾಜ್ ಷರೀಫ್ ದಿಟ್ಟಿಸಿ ನೋಡಿದ ವಿಡಿಯೋ ಸೋಷಿಯಲ್ ಮೀಡಿಯಾದಲ್ಲೂ ವೈರಲ್ ಆಗಿತ್ತು. ಇದರ ಬೆನ್ನಲ್ಲೇ ಈಗ ಷರೀಫ್ ಕೂಡಾ ರಷ್ಯಾ ಅಧ್ಯಕ್ಷ ಪುಟಿನ್ ರನ್ನು ಭೇಟಿ ಮಾಡಿದ್ದರು.
ನವದೆಹಲಿ: ಸ್ವಾತಂತ್ರ್ಯೋತ್ಸವದ ಭಾಷಣದಲ್ಲಿ ಪ್ರಧಾನಿ ಮೋದಿ ದೀಪಾವಳಿ ವೇಳೆಗೆ ಜನರಗೆ ಜಿಎಸ್ ಟಿ ಕಡಿತದ ಉಡುಗೊರೆ ನೀಡುವುದಾಗಿ ಘೋಷಿಸಿದ್ದರು. ಅದರಂತೆ ಇಂದು ಜಿಎಸ್ ಟಿ ಮಂಡಳಿ ಸಭೆ ನಡೆಸಲಿದೆ. ಆದರೆ ಜಿಎಸ್ ಟಿ ಕಡಿತಕ್ಕೆ ಇಂಡಿಯಾ ಒಕ್ಕೂಟದ ರಾಜ್ಯಗಳು ವಿರೋಧಿಸುತ್ತಿರುವುದು ಯಾಕೆ? ಅದರಂತೆ ಇಂದು ದೇಶದ ತೆರಿಗೆ ವ್ಯವಸ್ಥೆಗೆ ಅತೀ ದೊಡ್ಡ ಬದಲಾವಣೆ ತರಲು ಇಂದು ಜಿಎಸ್ ಟಿ ಮಂಡಳಿ ಸಭೆ ನಡೆಸಲಿದೆ. ಇಂದಿನಿಂದ ಎರಡು ದಿನಗಳ ಕಾಲ ಸಭೆ ನಡೆಯಲಿದ್ದು ಈ ಸಭೆಯಲ್ಲಿ ತೆರಿಗೆ ಕಡಿತ, ಜಿಎಸ್ ಟಿ ಕಡಿತದ ಬಗ್ಗೆ ಪ್ರಮುಖವಾಗಿ ತೀರ್ಮಾನವಾಗಲಿದೆ.
ಬೆಂಗಳೂರು: ಉತ್ತರ ಕರ್ನಾಟಕದ ಭಾಗದ ಜನರಿಗೆ ಅನುಕೂಲ ಆಗುವ ದೃಷ್ಟಿಯಿಂದ ಒಂದು ಹೆರಿಗೆ ಆಸ್ಪತ್ರೆ ಕಟ್ಟಿಕೊಡಿ ಎಂದರೆ ಮಹಿಳಾ ಪತ್ರಕರ್ತರು ಪ್ರಶ್ನೆ ಮಾಡಿದರೆ ನಿಮ್ಮ ಹೆರಿಗೆ ಆಗ್ಲಿ ಎಂದು ಸಚಿವ ಆರ್ ವಿ ದೇಶಪಾಂಡೆ ಉಡಾಫೆಯ ಉತ್ತರ ಕೊಟ್ಟಿರುವುದು ವಿವಾದಕ್ಕೆ ಕಾರಣವಾಗಿದೆ. ಉತ್ತರ ಕರ್ನಾಟಕ ಭಾಗದಲ್ಲಿ ಸುಸಜ್ಜಿತ ಆಸ್ಪತ್ರೆಗಳಿಲ್ಲ ಎಂದು ಜನ ಬಹಳ ದಿನಗಳಿಂದಲೂ ಬೇಡಿಕೆಯಿಡುತ್ತಲೇ ಇದ್ದಾರೆ. ಆದರೆ ಇದುವರೆಗೆ ಇಲ್ಲಿ ಸುಸಜ್ಜಿತ ಹೆರಿಗೆ ಆಸ್ಪತ್ರೆ ಕೂಡಾ ಇಲ್ಲ. ಇದರಿಂದ ಸಾಕಷ್ಟು ಜನ ಸೂಕ್ತ ಚಿಕಿತ್ಸೆ ಸಿಗದೇ ಪರದಾಡುತ್ತಿದ್ದಾರೆ.
ಬೆಂಗಳೂರು: ಮೊನ್ನೆ ಏಕಾಏಕಿ ಏರಿಕೆ ಕಂಡಿದ್ದ ಅಡಿಕೆ ಬೆಲೆ ಇಂದು ಮತ್ತೆ ಯಥಾಸ್ಥಿತಿಯಲ್ಲಿದೆ. ಆದರೆ ಕಾಳುಮೆಣಸು ಬೆಳೆಗಾರರಿಗೆ ಇಂದು ಬಂಪರ್. ಕೊಬ್ಬರಿ ಬೆಲೆ ಮಾತ್ರ ಯಥಾಸ್ಥಿತಿಯಲ್ಲಿದೆ. ಇಂದು ಅಡಿಕೆ ಮತ್ತು ಕಾಳು ಮೆಣಸು, ಕೊಬ್ಬರಿ ದರ ಹೇಗಿದೆ ಇಲ್ಲಿದೆ ವಿವರ. ವಾರದ ಆರಂಭದಲ್ಲಿ ಅಡಿಕೆ ಬೆಲೆ ಕೊಂಚ ಏರಿಕೆ ಕಂಡು ಬೆಳೆಗಾರರಿಗೆ ನೆಮ್ಮದಿ ತಂದಿತ್ತು. ಆದರೆ ಈಗ ಎರಡು ದಿನಗಳಿಂದ ಮತ್ತೆ ಯಥಾ ಸ್ಥಿತಿಯಲ್ಲಿದೆ. ಹೊಸ ಅಡಿಕೆ ಬೆಲೆ 490 ರೂ.ಗಳಷ್ಟಾಗಿತ್ತು. ಇಂದೂ ಅದೇ ಬೆಲೆಯಿದೆ. ಹಳೆ ಅಡಿಕೆ ಬೆಲೆ 530 ರೂ.ಗಳಷ್ಟಾಗಿತ್ತು. ಇಂದೂ ಅದೇ ಬೆಲೆಯಿದೆ. ಇನ್ನು ಡಬಲ್ ಚೋಲ್ ಬೆಲೆಯೂ 530 ರೂ.ಗಳಷ್ಟೇ ಇದೆ.
ಬೆಂಗಳೂರು: ಅಮೆರಿಕಾದ ಸುಂಕ ನೀತಿಯಿಂದಾಗಿ ಭಾರತದಲ್ಲೂ ಚಿನ್ನದ ಬೆಲೆ ಮೆಲೆ ಪರಿಣಾಮ ಬೀರುತ್ತಿದೆ. ಚಿನ್ನದ ಬೆಲೆ ಅಂಕೆಯಿಲ್ಲದೇ ಪ್ರತಿನಿತ್ಯ ಭಾರೀ ಏರಿಕೆಯಾಗುತ್ತಲೇ ಇದೆ. ಇಂದು ಪರಿಶುದ್ಧ ಚಿನ್ನದ ದರ ಮತ್ತು ಇತರೆ ಚಿನ್ನದ ದರ ವಿವರ ಇಲ್ಲಿದೆ ನೋಡಿ. ಚಿನ್ನದ ದರ ಏರಿಕೆಚಿನ್ನದ ದರ ಕೇಳಿದರೆ ಈಗ ಶಾಕ್ ಹೊಡೆಯುವಂತಹ ಪರಿಸ್ಥಿತಿ. ಮಧ್ಯಮ ವರ್ಗದವರಿಗಂತೂ ಚಿನ್ನ ಈಗ ಗಗನ ಕುಸುಮ. ಈಗ ಪರಿಶುದ್ಧಚಿನ್ನದ ದರ ಮತ್ತು ಇತರೆ ಚಿನ್ನದ ದರ ಇಂದೂ ಭಾರೀ ಪ್ರಮಾಣದಲ್ಲಿ ಏರಿಕೆಯಾಗಿದೆ. ಪರಿಶುದ್ಧ ಚಿನ್ನದ ದರ ಮೊನ್ನೆ 1,07.550.00 ರೂ.ಗಳಷ್ಟಿತ್ತು. ಆದರೆ ಇಂದು ಕೊಂಚ ಏರಿಕೆ ಕಂಡಿದ್ದು, 1,07.695.00 ರೂ.ಗಳಾಗಿದೆ.
ಬೆಂಗಳೂರು: ಕಿಚ್ಚ ಸುದೀಪ್ ನೋಡಿದ್ರೆ ಕನ್ನಡ್ ಅಲ್ಲ ಕನ್ನಡ ಎಂದು ತಿದ್ದು ಕನ್ನಡಾಭಿಮಾನ ಮೆರೆಯುತ್ತಾರೆ. ಆದರೆ ಅವರ ಮಗಳು ಸಾನ್ವಿ ಸುದೀಪ್ ಗೆ ಮಾತ್ರ ತಪ್ಪಿಯೂ ಬಾಯಲ್ಲಿ ಒಂದೇ ಒಂದು ಕನ್ನಡ ಶಬ್ಧ ಬರಲ್ಲ. ಹೀಗಂತ ಸುದೀಪ್ ಪುತ್ರಿ ಸಾನ್ವಿ ಸಂದರ್ಶನವೊಂದು ಈಗ ಭಾರೀ ಟ್ರೋಲ್ ಗೊಳಗಾಗಿದೆ. ಸ್ಯಾಂಡಲ್ ವುಡ್ ನ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಮಗಳು ಸಾನ್ವಿ ಸುದೀಪ್ ಯೂ ಟ್ಯೂಬರ್ ರಾಪಿಡ್ ರಶ್ಮಿ ಅವರ ಚಾನೆಲ್ ಗೆ ಸಂದರ್ಶನ ನೀಡಿದ್ದು, ಈ ಸಂದರ್ಶನದ ವಿಡಿಯೋ ನಿನ್ನೆ ಸುದೀಪ್ ಹುಟ್ಟುಹಬ್ಬದಂದು ಪ್ರಕಟವಾಗಿದೆ.
ಬೆಂಗಳೂರು: ರೇಣುಕಾಸ್ವಾಮಿ ಮರ್ಡರ್ ಕೇಸ್ ನಲ್ಲಿ ಜೈಲು ಸೇರಿರುವ ನಟ ದರ್ಶನ್ ತೂಗುದೀಪ ಪರ ವಕೀಲರು ಕೋರ್ಟ್ ನಲ್ಲಿ ನಾನಾ ದೂರು ನೀಡಿದ್ದಾರೆ. ಜೈಲು ಸಿಬ್ಬಂದಿ ಊಟ ಎಸೆಯುತ್ತಾರೆ, ಶೂ ಕಾಲಿನಲ್ಲೇ ರೂಂ ಒಳಗೆ ಬರ್ತಾರೆ ಇತ್ಯಾದಿ. ದರ್ಶನ್ ಗೆ ಬೆನ್ನು ನೋವಿದೆ, ಈ ಕಾರಣಕ್ಕೆ ಅವರಿಗೆ ಹಾಸಿಗೆ, ದಿಂಬು ನೀಡಬೇಕು ಎಂದು ಅವರ ಪರ ವಕೀಲರು ಕೋರ್ಟ್ ನಲ್ಲಿ ವಾದ ಮಂಡಿಸಿದ್ದಾರೆ. ಈ ವೇಳೆ ಜೈಲಿನಲ್ಲಿ ದರ್ಶನ್ ಅವಸ್ಥೆಯ ಬಗ್ಗೆಯೂ ಕೋರ್ಟ್ ಗಮನಕ್ಕೆ ತಂದಿದ್ದಾರೆ. ಊಟವನ್ನು ದೂರದಿಂದಲೇ ಎಸೆಯುತ್ತಾರೆ. ಶೂ ಕಾಲಿನಲ್ಲೇ ರೂಂ ಒಳಗೆ ಬರ್ತಾರೆ. ಸುಪ್ರೀಂಕೋರ್ಟ್ ನಲ್ಲಿ ಬೇಲ್ ರದ್ದಾಗಿದ್ದಕ್ಕೆ ಅಮಾನವೀಯವಾಗಿ ನಡೆದುಕೊಳ್ತಿದ್ದಾರೆ.
ಇಸ್ಲಾಮಾಬಾದ್: ಪ್ರವಾಹದ ನೀರನ್ನು ವೇಸ್ಟ್ ಮಾಡಬೇಡಿ. ಇದನ್ನು ಬಕೆಟ್ ನಲ್ಲಿ ತುಂಬಿಸಿಡಿ.. ಹೀಗಂತ ಪಾಕಿಸ್ತಾನದ ಸಚಿವ ಖ್ವಾಜಾ ಆಸಿಫ್ ಭಯಂಕರ ಐಡಿಯಾವೊಂದನ್ನು ಜನರಿಗೆ ನೀಡಿದ್ದಾರೆ. ಅವರ ಐಡಿಯಾಕ್ಕೆ ನೊಬೈಲ್ ಫ್ರೈಸೇ ಕೊಡ್ಬೇಕು. ಪಾಕಿಸ್ತಾನದಲ್ಲಿ ಈಗ ಪ್ರವಾಹ ಮಿತಿ ಮೀರಿದ್ದು, ಸಾಕಷ್ಟು ಆಸ್ತಿ ಪಾಸ್ತಿ ನಷ್ಟವಾಗಿದೆ. ಮನೆಗಳು ಮುಳುಗಿ ಹೋಗಿವೆ. ಪಂಜಾಬ್ ಪ್ರಾಂತ್ಯದಲ್ಲಿ 100 ಕ್ಕೂ ಹೆಚ್ಚು ಮನೆಗಳು ಮುಳುಗಡೆಯಾಗಿವೆ. 20 ಲಕ್ಷಕ್ಕೂ ಹೆಚ್ಚು ಜನ ಸಂಕಷ್ಟದಲ್ಲಿದ್ದಾರೆ.ಇಂತಹ ಸಂದರ್ಭದಲ್ಲಿ ಪಾಕಿಸ್ತಾನದ ರಕ್ಷಣಾ ಸಚಿವ ಖ್ವಾಜಾ ಆಸಿಫ್ ಬೇಜವಬ್ಧಾರಿಯುತ ಹೇಳಿಕೆ ನೀಡಿದ್ದಾರೆ.
ನವದೆಹಲಿ: ಅಮೆರಿಕಾದ ಸುಂಕ ಹೇರಿಕೆ ವಿರುದ್ಧ ಸಿಡಿದೆದ್ದಿರುವ ಭಾರತ, ರಷ್ಯಾ ಈಗ ಮತ್ತಷ್ಟು ಕ್ಲೋಸ್ ಆಗಿವೆ. ಇದರ ಬೆನ್ನಲ್ಲೇ ಈಗ ಭಾರತಕ್ಕೆ ತೈಲ ಖರೀದಿಯಲ್ಲಿ ಬಿಗ್ ಆಫರ್ ನೀಡಿದ್ದು, ಬೆಲೆಯಲ್ಲೂ ರಿಯಾಯಿತಿ ನೀಡಿದೆ. ಶಾಂಘೈ ಶೃಂಗ ಸಭೆಗೆಂದು ಚೀನಾಗೆ ಹೋಗಿದ್ದಾಗ ಭಾರತ ಪ್ರಧಾನಿ ಮೋದಿ ಮತ್ತು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಕಾರಿನಲ್ಲೇ 50 ನಿಮಿಷ ಗುಪ್ತ ಮಾತುಕತೆ ನಡೆಸಿದ್ದರು. ಶೃಂಗ ಸಭೆಯಲ್ಲಿ ಗಳಸ್ಯ-ಕಂಠಸ್ಯ ಎನ್ನುವಷ್ಟು ಹತ್ತಿರವಿದ್ದ ಪುಟಿನ್-ಮೋದಿ ಅಮೆರಿಕಾ ಹೊಟ್ಟೆ ಉರಿಸಿದ್ದರು.
ಬೆಂಗಳೂರು: ಕರ್ನಾಟಕ ಚಿತ್ರರಂಗದ ಅಭಿನಯ ಭಾರ್ಗವ ಸಾಹಸಸಿಂಹ ಡಾ ವಿಷ್ಣುವರ್ಧನ್ ಅವರಿಗೆ ಕರ್ನಾಟಕ ರತ್ನ ನೀಡಬೇಕು ಎಂದು ಒತ್ತಾಯಗಳು ಹೆಚ್ಚಾಗಿದೆ. ಇಂದು ಸಿಎಂ ಸಿದ್ದರಾಮಯ್ಯನವನರನ್ನು ಭಾರತಿ ವಿಷ್ಣುವರ್ಧನ್ ಭೇಟಿ ಮಾಡಲಿದ್ದಾರೆ. ನಿನ್ನೆಯಷ್ಟೇ ಹಿರಿಯ ನಟಿಯರಾದ ಜಯಮಾಲ, ಮಾಳವಿಕಾ ಅವಿನಾಶ್, ಶ್ರುತಿ ಕೃಷ್ಣ ಸಿಎಂ ಅವರನ್ನು ಭೇಟಿ ಮಾಡಿ ವಿಷ್ಣುವರ್ಧನ್ ಅವರಿಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ನೀಡಿ ಗೌರವಿಸುವಂತೆ ಲಿಖಿತ ರೂಪದಲ್ಲಿ ಮನವಿ ಸಲ್ಲಿಸಿದ್ದಾರೆ. ಇದಕ್ಕೆ ಮೊದಲು ಸ್ವತಃ ವಿಷ್ಣುವರ್ಧನ್ ಕುಟುಂಬದವರಾದ ಅಳಿಯ, ನಟ ಅನಿರುದ್ಧ ಜತ್ಕರ್ ಎರಡು ಬಾರಿ ಸಿಎಂ ಭೇಟಿ ಮಾಡಿ ಕರ್ನಾಟಕ ರತ್ನ ನೀಡುವಂತೆ ಮನವಿ ಸಲ್ಲಿಸಿದ್ದರು.
ಮುಂಬೈ: ವಿಶ್ವದ ಶ್ರೀಮಂತ ಕ್ರಿಕೆಟ್ ಸಂಸ್ಥೆಯಾದ ಬಿಸಿಸಿಐ ಟೀಂ ಇಂಡಿಯಾ ಆಟಗಾರರ ಜೆರ್ಸಿ ಪ್ರಾಯೋಜಕತ್ವ ವಹಿಸಲು ಆಹ್ವಾನ ನೀಡಿದೆ. ಆದರೆ ಪ್ರಾಯೋಕರಿಗೆ ಕೆಲವೊಂದು ಷರತ್ತುಗಳಿವೆ. ಅದೇನು ನೋಡಿ. ಟೀಂ ಇಂಡಿಯಾಗೆ ಪ್ರಾಯೋಜಕತ್ವ ವಹಿಸುವುದು ಎಂದರೆ ಯಾವುದೇ ಸಂಸ್ಥೆಗೆ ಪ್ರತಿಷ್ಠೆಯ ವಿಚಾರ. ಈ ಹಿಂದೆ ಡ್ರೀಮ್ 11 ಭಾರತ ತಂಡದ ಪ್ರಾಯೋಜಕತ್ವ ಹೊಂದಿತ್ತು. ಆದರೆ ಕೇಂದ್ರ ಸರ್ಕಾರ ಆನ್ ಲೈನ್ ಗೇಮ್ ಗಳನ್ನು ನಿಷೇಧಿಸಿದ ಬೆನ್ನಲ್ಲೇ ಡ್ರೀಮ್ 11 ಪ್ರಾಯೋಜಕತ್ವಕ್ಕೆ ಬಿಸಿಸಿಐ ಕೊಕ್ ನೀಡಿತ್ತು. ಹೀಗಾಗಿ ಈಗ ಹೊಸ ಪ್ರಾಯೋಜಕರಿಗೆ ಹುಡುಕಾಟ ನಡೆಸಿದೆ.
ಬೆಂಗಳೂರು: ಪ್ರತಿ ಮನೆಯನ್ನೂ ಪೋಷಿಸುವುದು, ಪ್ರೀತಿಯಿಂದ ರುಚಿ-ಶುಚಿಯಾಗಿ ಆಹಾರ ತಯಾರಿಸಿ, ಅದನ್ನು ಬಡಿಸುವ ಕೈಗಳು. ಈ ಕೈಗಳೇ ಭಾರತೀಯ ಕುಟುಂಬ ವ್ಯವಸ್ಥೆಯ ಆಧಾರ. ಇಂತಹ ಅಡುಗೆ ಮನೆಯ ಸಾಧಕರಿಗೆಂದೇ ನಮ್ಮ ಬೆಂಗಳೂರಿನಲ್ಲೊಂದು ವಿಶಿಷ್ಟ ಚಾಂಪಿಯನ್ ಶಿಪ್ ಆಯೋಜಿಸಲಾಗಿದೆ. ಸಮಗ್ರ ಸಂವಹನ ಮತ್ತು ಬ್ರ್ಯಾಂಡಿಂಗ್ ಸಂಸ್ಥೆಯಾದ ಐಕ್ಯೂ ಕಾಮ್ಸ್, ಪಾಕಶಾಲೆಯ ವೈವಿಧ್ಯತೆಯನ್ನು ಆಚರಿಸಲು ಕರ್ನಾಟಕದ ಅತಿದೊಡ್ಡ ಅಡುಗೆ ಸ್ಪರ್ಧೆಗಳಲ್ಲಿ ಒಂದಾದ 'ಅಡುಗೆ ಮನೆ ಸೂಪರ್ಸ್ಟಾರ್' ಅನ್ನು ಪ್ರಸ್ತುತಪಡಿಸುತ್ತದೆ. ಈ ಚಾಂಪಿಯನ್ ಶಿಪ್ ನ ಉದ್ಘಾಟನೆ 'ಸೆಪ್ಟೆಂಬರ್ 20, 2025' ರಂದು ನಗರದ ವೈಟ್ಫೀಲ್ಡ್ನ ಹೃದಯಭಾಗದಲ್ಲಿರುವ 'ದಿ ವೈಟ್ಫೀಲ್ಡ್ ಕ್ಲಬ್' ನಲ್ಲಿ ನಡೆಯಲಿದೆ.
ಮುಂಬೈ: ಏಷ್ಯಾ ಕಪ್ ಗೆ ಆಯ್ಕೆಯಾದ ಟೀಂ ಇಂಡಿಯಾದಲ್ಲಿ ಸೂರ್ಯಕುಮಾರ್ ಯಾದವ್ ನಾಯಕತ್ವದಲ್ಲಿ ಆಡದ ಏಕೈಕ ಆಟಗಾರರಿದ್ದಾರೆ. ಅವರು ಯಾರು ಎಂದು ತಿಳಿಯಿರಿ. ಟಿ20 ವಿಶ್ವಕಪ್ ಬಳಿಕ ಟೀಂ ಇಂಡಿಯಾ ಟಿ20 ತಂಡದ ನಾಯಕತ್ವದ ಸೂರ್ಯಕುಮಾರ್ ಯಾದವ್ ಹೆಗಲಿಗೇರಿತ್ತು. ಇದಾದ ಬಳಿಕ ಯುವ ಕ್ರಿಕೆಟಿಗರೇ ಟಿ20 ಪಂದ್ಯಾವಳಿಗಳಲ್ಲಿ ಆಡುತ್ತಿದ್ದರು. ಆದರೆ ಈಗ ಏಷ್ಯಾ ಕಪ್ ಗೆ ಹಿರಿಯ ಆಟಗಾರ ಜಸ್ಪ್ರೀತ್ ಬುಮ್ರಾ ಕೂಡಾ ಆಯ್ಕೆಯಾಗಿದ್ದಾರೆ. ಏಷ್ಯಾ ಕಪ್ ಗೆ ಆಯ್ಕೆಯಾಗಿರುವ ಜಸ್ಪ್ರೀತ್ ಬುಮ್ರಾ ಇದೇ ಮೊದಲ ಬಾರಿಗೆ ಸೂರ್ಯಕುಮಾರ್ ಯಾದವ್ ನೇತೃತ್ವದಲ್ಲಿ ಆಡುತ್ತಿದ್ದಾರೆ.
ಬೆಂಗಳೂರು: ರಾಜ್ಯದಲ್ಲಿ ಕಳೆದ ಒಂದು ವಾರದಿಂದ ಮತ್ತೆ ಮಳೆ ಅಬ್ಬರಿಸುತ್ತಿದೆ. ಹವಾಮಾನ ವರದಿಗಳ ಪ್ರಕಾರ ಇಂದು ಮತ್ತು ನಾಳೆ ಈ ಕೆಲವು ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಹೆಚ್ಚಾಗಲಿದೆ. ಕಳೆದ ಒಂದು ವಾರದಿಂದ ರಾಜ್ಯದ ಕರಾವಳಿ, ಒಳನಾಡು, ಮಲೆನಾಡಿನಲ್ಲಿ ನಿರಂತರ ಮಳೆಯಾಗುತ್ತಿದ್ದು ಈ ವಾರಂತ್ಯದವರೆಗೆ ಭಾರೀ ಮಳೆಯ ವಾತಾವರಣ ಮುಂದುವರಿಯಲಿದೆ ಎಂದು ಹವಾಮಾನ ವರದಿಗಳು ಎಚ್ಚರಿಕೆ ನೀಡಿವೆ. ವಿಶೇಷವಾಗಿ ಇಂದು ಮತ್ತು ನಾಳೆ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಮಳೆಯ ಅಬ್ಬರ ಮತ್ತಷ್ಟು ಹೆಚ್ಚಾಗುವ ನಿರೀಕ್ಷೆಯಿದೆ. ಈ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಇದೆ. ಒಳನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದೆ.
ಜೀವನವೆಂದರೆ ಕಷ್ಟ-ನಷ್ಟಗಳು ಸಾಮಾನ್ಯ. ಆದರೆ ಕಡು ಕಷ್ಟಗಳು ಬಂದಾಗ ಮುಂದೇನು ದಾರಿ ಎಂದು ತಿಳಿಯದೇ ಹೋದಾಗ ಗುರು ದತ್ತಾತ್ರೇಯರ ಕಡು ಕಷ್ಟೋದ್ಧಾರಣ ಮಂತ್ರವನ್ನು ಪಠಿಸಿ. ಕನ್ನಡದಲ್ಲಿ ಇಲ್ಲಿದೆ.ಶ್ರೀಪಾದ ಶ್ರೀವಲ್ಲಭ ತ್ವಂ ಸದೈವಶ್ರೀದತ್ತಾಸ್ಮಾನ್ಪಾಹಿ ದೇವಾಧಿದೇವ |ಭಾವಗ್ರಾಹ್ಯ ಕ್ಲೇಶಹಾರಿನ್ಸುಕೀರ್ತೇಘೋರಾತ್ಕಷ್ಟಾದುದ್ಧರಾಸ್ಮಾನ್ನಮಸ್ತೇ || ೧ ||ತ್ವಂ ನೋ ಮಾತಾ ತ್ವಂ ಪಿತಾಽಪ್ತೋಽಧಿಪಸ್ತ್ವಂತ್ರಾತಾ ಯೋಗಕ್ಷೇಮಕೃತ್ಸದ್ಗುರುಸ್ತ್ವಮ್ |ತ್ವಂ ಸರ್ವಸ್ವಂ ನೋ ಪ್ರಭೋ ವಿಶ್ವಮೂರ್ತೇಘೋರಾತ್ಕಷ್ಟಾದುದ್ಧರಾಸ್ಮಾನ್ನಮಸ್ತೇ || ೨ ||ಪಾಪಂ ತಾಪಂ ವ್ಯಾಧಿಮಾಧಿಂ ಚ ದೈನ್ಯಂಭೀತಿಂ ಕ್ಲೇಶಂ ತ್ವಂ ಹರಾಶು ತ್ವದನ್ಯಮ್ |ತ್ರಾತಾರಂ ನೋ ವೀಕ್ಷ್ಯ ಈಶಾಸ್ತಜೂರ್ತೇಘೋರಾತ್ಕಷ್ಟಾದುದ್ಧರಾಸ್ಮಾನ್ನಮಸ್ತೇ || ೩ ||ನಾನ್ಯಸ್ತ್ರಾತಾ ನಾಽಪಿ ದಾತಾ ನ ಭರ್ತಾತ್ವತ್ತೋ ದೇವ ತ್ವಂ ಶರಣ್ಯೋಽಕಹರ್ತಾ |ಕುರ್ವಾತ್ರೇಯಾನುಗ್ರಹಂ ಪೂರ್ಣರಾತೇಘೋರಾತ್ಕಷ್ಟಾದುದ್ಧರಾಸ್ಮಾನ್ನಮಸ್ತೇ || ೪ ||
ಸುಡಾನ್: ಸುಡಾನ್ ನ ಪೂರ್ವ ಡಾರ್ಫುರ್ ಪ್ರಾಂತ್ಯದಲ್ಲಿ ಸಂಭವಿಸಿದ ಭಯಾನಕ ಭೂಕುಸಿತದಲ್ಲಿ 1,000ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. ಭಾರೀ ಮಳೆಯ ನಂತರ ಭಾನುವಾರ ಸಂಭವಿಸಿದ ಈ ದುರಂತದಲ್ಲಿ ಮರ್ರಾ ಪರ್ವತ ಪ್ರದೇಶದಲ್ಲಿರುವ ತಾರಾಸಿನ್ ಗುಡ್ಡಗಾಡು ಗ್ರಾಮ ನಾಶವಾಗಿದೆ ಎಂದು ಸುಡಾನ್ ವಿಮೋಚನಾ ಸೇನೆ ಹೇಳಿಕೆಯಲ್ಲಿ ತಿಳಿಸಿದೆ.ಪ್ರಾಥಮಿಕ ವರದಿಗಳ ಪ್ರಕಾರ, ಎಲ್ಲ ಗ್ರಾಮಸ್ಥರೂ ಮೃತಪಟ್ಟಿದ್ದಾರೆ ಎಂಬ ಸಂಶಯ ವ್ಯಕ್ತವಾಗಿದ್ದು, 1,000ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ ಎಂದು ಅಂದಾಜಿಸಲಾಗಿದೆ. ಈ ಘಟನೆಯಲ್ಲಿ ಕೇವಲ ಓರ್ವ ವ್ಯಕ್ತಿ ಮಾತ್ರ ಬದುಕುಳಿದಿದ್ದಾರೆ ಎಂದು ಬಂಡುಕೋರರ ಗುಂಪು ಹೇಳಿದೆ.ಸಿಟ್ರಸ್ ಉತ್ಪಾದನೆಗೆ ಹೆಸರುವಾಸಿಯಾದ ಪ್ರದೇಶ ವಿನಾಶಕಾರಿ ಭೂ ಕುಸಿತದಿಂದ ನಾಶವಾಗಿದೆ ಸೇನೆ ಹೇಳಿದೆ. ಅವಶೇಷಗಳಡಿ ಸಿಲುಕಿರುವವರ ರಕ್ಷಣೆಗಾಗಿ ವಿಶ್ವಸಂಸ್ಥೆ ಮತ್ತಿತರ ಸಂಸ್ಥೆಗಳಿಗೆ ಮನವಿ ಮಾಡಿದೆ.
ಬೆಂಗಳೂರು: ಕನ್ನಡ ಚಿತ್ರೋದ್ಯಮಕ್ಕೆ ಅಪಾರ ಕೊಡುಗೆ ನೀಡಿರುವ ದಿವಂಗತ ನಟ ವಿಷ್ಣುವರ್ಧನ್ಗೆ ಮರಣೋತ್ತರವಾಗಿ ಕರ್ನಾಟಕರತ್ನ ಪ್ರಶಸ್ತಿ ನೀಡುವಂತೆ ಹಿರಿಯ ನಟಿಯರು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಒತ್ತಾಯಿಸಿದರು.ಚಲನಚಿತ್ರ ರಂಗದ ಹಿರಿಯ ನಟಿಯರಾದ ಜಯಮಾಲ, ಶ್ರತಿ ಮತ್ತು ಮಾಳವಿಕ ಅವಿನಾಶ್ ಮಂಗಳವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು.ಈ ಕುರಿತು ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿರುವ ಸಿದ್ದರಾಮಯ್ಯ, ನಟಿಯರಾದ ಜಯಮಾಲ, ಶ್ರತಿ ಮತ್ತು ಮಾಳವಿಕ ಅವಿನಾಶ್ ಅವರು ಇಂದು ನನ್ನ ಭೇಟಿಯಾಗಿ ವಿಷ್ಣುವರ್ಧನ್ ಅವರಿಗೆ ಕರ್ನಾಟಕರತ್ನ ಪ್ರಶಸ್ತಿ ನೀಡುವಂತೆ ಮನವಿ ಸಲ್ಲಿಸಿದ್ದಾರೆ ಎಂದಿದ್ದಾರೆ.
ನವದೆಹಲಿ: ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಯೊಂದಿಗೆ ಡ್ರೀಮ್ 11 ಮಾಡಿಕೊಂಡ ಒಪ್ಪಂದ ಮುರಿದ ಬೆನ್ನಲ್ಲೇ ಭಾರತ ಕ್ರಿಕೆಟ್ ತಂಡದ ಟೈಟಲ್ ಪ್ರಾಯೋಜಕರಿಗಾಗಿ ಬಿಸಿಸಿಐ ಬಿಡ್ ಆಹ್ವಾನಿಸಿದೆ. ಆದರೆ, ಈ ಬಾರಿ ಕೆಲವೊಂದು ಷರತ್ತುಗಳನ್ನು ವಿಧಿಸಿದೆ.ಈ ಬಾರಿಯ ಬಿಡ್ನಲ್ಲಿ ಹಣದ ಜೂಜಾಟಗಳು ಮತ್ತು ಕ್ರಿಪ್ಟೋ ಕರೆನ್ಸಿ ವ್ಯವಹರಿಸುವ ಕಂಪೆನಿಗಳನ್ನು ಬಿಡ್ನಲ್ಲಿ ಭಾಗವಹಿಸದಂತೆ ನಿರ್ಬಂಧಿಸಲಾಗಿದೆ. ಆಸಕ್ತಿ ಅಭಿವೃಕ್ತಿ ಅರ್ಜಿ ನಮೂನೆ ಖರೀದಿಸಲು ಸೆ.12 ಕೊನೆಯ ದಿನವಾಗಿದೆ. ಬಿಡ್ ದಾಖಲೆಗಳನ್ನು ಸೆ. 16ರೊಳಗೆ ಸಲ್ಲಿಸಬೇಕು. ಈ ಹಿಂದೆ ಡ್ರೀಮ್ 11 ಮತ್ತು ಮೈ ಇಲೆವನ್ ಸರ್ಕಲ್ ಗೇಮಿಂಗ್ ಆ್ಯಪ್ಗಳ ಪ್ರಾಯೋಜಕತ್ವದಿಂದ ಬಿಸಿಸಿಐಗೆ ಸುಮಾರು ಒಂದು ಕೋಟಿ ರೂಪಾಯಿ ಆದಾಯವಿತ್ತು.
ಬೆಂಗಳೂರು: ಸಚಿವ ಸ್ಥಾನದಿಂದ ವಜಾಗೊಂಡಿರುವ ಕೆ.ಎನ್. ರಾಜಣ್ಣ ಅವರು ಬಿಜೆಪಿಗೆ ಅರ್ಜಿ ಹಾಕಿದ್ದು, ನೂರಕ್ಕೆ ನೂರರಷ್ಟು ಅವರು ಬಿಜೆಪಿ ಸೇರುತ್ತಾರೆ ಎಂದು ದು ಮಾಗಡಿ ಶಾಸಕ ಎಚ್.ಸಿ. ಬಾಲಕೃಷ್ಣ ಹೊಸ ಬಾಂಬ್ ಸಿಡಿಸಿದ್ದಾರೆ.ರಾಜಣ್ಣ ಅವರು ಸಚಿವ ಸ್ಥಾನ ಕಳೆದುಕೊಂಡಿದ್ದರ ಹಿಂದೆ ಯಾರ ಷಡ್ಯಂತ್ರವೂ ಇಲ್ಲ. ಹೈಕಮಾಂಡ್ ವಿರುದ್ಧ ಮಾತನಾಡಿದ್ದಕ್ಕೆ ರಾಜಣ್ಣ ವಜಾಗೊಂಡಿದ್ದಾರೆ. ತಮ್ಮ ಮಾತಿನಿಂದಲೇ ಕೆಟ್ಟಿದ್ದಾರೆ. ಬೇರೆ ಪಕ್ಷಕ್ಕೆ ಹೋಗುವ ಮುನ್ನ ನಮ್ಮ ಮೇಲೆ ಗೂಬೆ ಕೂರಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಟೀಕಿಟಿದರು.ಸಚಿವರಾಗಿದ್ದಾಗ ರಾಜಣ್ಣ ಹೇಗೆ ನಡೆದುಕೊಂಡರು ಎಂಬುದು ಎಲ್ಲರಿಗೂ ಗೊತ್ತಿದೆ. ಅವರ ಮಾತುಗಳು, ಮಾತು ಮನೆ ಕೆಡಿಸಿತು, ತೂತು ಒಲೆ ಕೆಡಿಸಿತು ಎಂಬಂತಿದ್ದವು ಎಂದು ಲೇವಡಿ ಮಾಡಿದರು.
ಬೆಂಗಳೂರು: ಧರ್ಮಸ್ಥಳ ವಿಚಾರದಲ್ಲಿ ಬಿಜೆಪಿಯವರ ಹೋರಾಟ ಆರ್ಎಸ್ಎಸ್ ವರ್ಸಸ್ ಆರ್ಎಸ್ಎಸ್ ಮಧ್ಯೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಎಂದು ಟಾಂಗ್ ನೀಡಿದರು. ಗಿರೀಶ್ ಮಟ್ಟಣ್ಣವರ್ ಮತ್ತು ಮಹೇಶ್ ಶೆಟ್ಟಿ ತಿಮರೋಡಿ ಎಂಬ ಇಬ್ಬರು ಹೋರಾಟಗಾರರು ಆರ್ಎಸ್ಎಸ್ ಮತ್ತು ಬಿಜೆಪಿಯೊಂದಿಗೆ ನೇರ ಸಂಬಂಧ ಹೊಂದಿದ್ದಾರೆ ಎಂದು ಮಂಗಳವಾರ ಆರೋಪಿಸಿದರು. ಹೀಗಾಗಿ, ಧರ್ಮಸ್ಥಳ ವಿಚಾರದಲ್ಲಿ ಬಿಜೆಪಿಯವರು ಯಾರಾ ವಿರುದ್ಧ ಹೋರಾಟ ನಡೆಸುತ್ತಿದ್ದಾರೆ ಎಂದು ಪ್ರಶ್ನೆ ಮಾಡಿದರು. ಧರ್ಮಸ್ಥಳ ವಿರುದ್ಧ ಮಾತನಾಡುವರಲ್ಲಿ ಒಬ್ಬರಾಗಿರುವ ಗಿರೀಶ್ ಮಟ್ಟಣ್ಣನವರ್ ಬಿಜೆಪಿಯ ಸಕ್ರಿಯ ಕಾರ್ಯಕರ್ತನಾಗಿದ್ದು, ಯುವ ಮೋರ್ಚಾದ ಅಧ್ಯಕ್ಷರಾಗಿದ್ದ. 2013ರಲ್ಲಿ ಗುರುಮಠಕಲ್ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿದ್ದವರು. ಇನ್ನು ಮಹೇಶ್ ಶೆಟ್ಟಿ ತಿಮರೋಡಿ, ಸಂಘಪರಿವಾರದ ನಾಯಕರು.