ಬೆಂಗಳೂರು: ಗ್ಯಾರಂಟಿ ಯೋಜನೆಯಲ್ಲಿ ಭ್ರಷ್ಟಾಚಾರವಾಗಿರುವ ಅನುಮಾನವಾಗಿದ್ದು ಉತ್ತರ ಕೊಡುವಂತೆ ಸಿಎಂ ಸಿದ್ದರಾಮಯ್ಯಗೆ ವಿಪಕ್ಷ ನಾಯಕ ಆರ್ ಅಶೋಕ್ ಪತ್ರ ಬರೆದಿದ್ದಾರೆ. ಬೆಳಗಾವಿಯ ವಿಧಾನಮಂಡಲ ಅಧಿವೇಶನದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಫೆಬ್ರವರಿ ಮತ್ತು ಮಾರ್ಚ್ ತಿಂಗಳ ಗೃಹಲಕ್ಷ್ಮಿ ಹಣ ಪಾವತಿ ಬಗ್ಗೆ ಸುಳ್ಳು ಮಾಹಿತಿ ನೀಡಿದಾಗಿನಿಂದಲೂ ಗ್ಯಾರೆಂಟಿ ಯೋಜನೆಯ ಹಣದಲ್ಲಿ ಭಾರಿ ಪ್ರಮಾಣದ ಭ್ರಷ್ಟಾಚಾರ, ಅವ್ಯವಹಾರ, ಅಕ್ರಮ ನಡೆಯುತ್ತಿರುವ ಅನುಮಾನವಿದ್ದು, ಈ ನಿಟ್ಟಿನಲ್ಲಿ ಗೃಹಲಕ್ಷ್ಮಿ ಯೋಜನೆಯ ಬಜೆಟ್ ಅನುದಾನ ಹಂಚಿಕೆ ಸೇರಿದಂತೆ ಸಂಬಂಧಪಟ್ಟ ಅಂಕಿ-ಅಂಶಗಳ ಬಗ್ಗೆ ಅಧಿಕೃತ ಮಾಹಿತಿ ನೀಡುವಂತೆ ಕೋರಿ ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದೇನೆ.

ದ್ವಾದಶ ರಾಶಿಯವರ ಗ್ರಹಗತಿಗೆ ಅನುಗುಣವಾಗಿ ಆಯಾ ದೇವರ ಪೂಜೆ ಮಾಡುವುದು ಸೂಕ್ತ. ಅದೇ ರೀತಿ 2026 ರಲ್ಲಿ ಯಾವ ರಾಶಿಯವರು ಯಾವ ದೇವರ ಪೂಜೆ ಮಾಡಬೇಕು ಇಲ್ಲಿದೆ ವಿವರ.ಮೇಷ ರಾಶಿ: ಹನುಮಂತ, ಶನಿ ದೇವರ ಪೂಜೆ, ಮಂತ್ರಗಳನ್ನು ಪಠಿಸಿ. ಯಾಕೆಂದರೆ ಈ ರಾಶಿಯವರಿಗೆ ಸಾಡೇ ಸಾತಿ ಶನಿ ದೆಸೆ ಚಾಲ್ತಿಯಲ್ಲಿದೆ.ವೃಷಭ: ಲಕ್ಷ್ಮೀ ದೇವಿಯ ಪೂಜೆ ಸೂಕ್ತ. ಹಣಕಾಸಿನ ಸಮಸ್ಯೆಗಳನ್ನು ನಿವಾರಿಸಲು ಲಕ್ಷ್ಮೀ ಪೂಜೆ ಮಾಡಿದರೆ ಉತ್ತಮ.ಮಿಥುನ: ಶ್ರೀಕೃಷ್ಣನ ಮಂತ್ರ ಪಠಿಸುವುದು, ನವಿಲುಗರಿ ಇಟ್ಟು ಪೂಜೆ ಮಾಡುವುದರಿಂದ ಒಳಿತಾಗುವುದು.ಕರ್ಕಟಕ: ಈ ರಾಶಿಯವರಿಗೆ ಗುರು ಗ್ರಹನ ಪ್ರವೇಶವಾಗುವುದರಿಂದ ಶಿವನ ಪೂಜೆ ಮಾಡುವುದು, ಸ್ತೋತ್ರ ಪಠಿಸುವುದು ಉತ್ತಮ.ಸಿಂಹ: ಮಹಾವಿಷ್ಣುವಿನ ಪೂಜೆ ಮಾಡಬೇಕು. ಇದರಿಂದ ವೃತ್ತಿ ಜೀವನದಲ್ಲಿ ಯಶಸ್ಸು ಗಳಿಸುವಿರಿ.

ಬೆಂಗಳೂರು: ಬೆಂಗಳೂರು ಮತ್ತು ಮಂಗಳೂರು ನಡುವೆ ಕೆಲ ರೈಲುಗಳು ಸಂಚರಿಸುತ್ತಿದ್ದು, ಆದರೂ ಬಸ್‌ಗಳಲ್ಲಿ ವಾರಾಂತ್ಯದಲ್ಲಿ ಪ್ರಯಾಣಿಕರ ದಟ್ಟಣೆ ಹೆಚ್ಚಿರುತ್ತದೆ. ಈ ಎರಡು ನಗರಗಳ ಮಧ್ಯೆ ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲು ಸೇವೆ ಆರಂಭಿಸುವ ಜನರ ಬೇಡಿಕೆಗೆ ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ.ಕುಮಾರಸ್ವಾಮಿ ದನಿಗೂಡಿಸಿದ್ದಾರೆ. ರಾಜಧಾನಿ ಬೆಂಗಳೂರು ಹಾಗೂ ರಾಜ್ಯದ ಕರಾವಳಿ ಪ್ರದೇಶಗಳ ನಡುವೆ ಪ್ರಯಾಣವನ್ನು ಮತ್ತಷ್ಟು ಸುಲಭಗೊಳಿಸುವ ನಿಟ್ಟಿನಲ್ಲಿ ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲು ಸೇವೆ ಆರಂಭಿಸುವಂತೆ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ ಅವರಿಗೆ ಕುಮಾರಸ್ವಾಮಿ ಮನವಿ ಮಾಡಿದ್ದಾರೆ. ಬೆಂಗಳೂರು ನಗರದಿಂದ ಹಾಸನ- ಮಂಗಳೂರು ಜಂಕ್ಷನ್‌- ಉಡುಪಿ ಮತ್ತು ಕಾರವಾರ ಮಾರ್ಗವಾಗಿ ಗೋವಾದ ಮಡಗಾಂವ್‌ವರೆಗೆ ಅತಿವೇಗದ ವಂದೇ ಭಾರತ್‌ ರೈಲು ಸೇವೆ ಆರಂಭಿಸುವಂತೆ ಎಚ್‌.ಡಿ. ಕುಮಾರಸ್ವಾಮಿ ಅವರು ರೈಲ್ವೆ ಸಚಿವರಿಗೆ ಪತ್ರ ಬರೆದಿರುವ ಪತ್ರದಲ್ಲಿ ಕೋರಿದ್ದಾರೆ.

ಬೆಂಗಳೂರು: ಭಾರತ ಹಿಂದೂ ರಾಷ್ಟ್ರ ಎನ್ನಲು ಯಾವುದೇ ಸಂವಿಧಾನದಲ್ಲಿ ಉಲ್ಲೇಖವಾಗುವ ಅಗತ್ಯವಿಲ್ಲ ಎಂಬ ಆರ್ ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿಕೆಗೆ ಪ್ರಿಯಾಂಕ್ ಖರ್ಗೆ ತಿರುಗೇಟು ನೀಡಿದ್ದಾರೆ. ಇಂದು ಕರ್ನಾಟಕ ಭವನದಲ್ಲಿ ಗ್ರಾಮೀಣ ಉದ್ಯೋಗ ಖಾತ್ರ ಯೋಜನೆ ಬಗ್ಗೆ ಸಮಾಲೋಚನಾ ಸಭೆಯಲ್ಲಿ ಭಾಗಿಯಾದ ಬಳಿಕ ಮಾಧ್ಯಮಗಳ ಮುಂದೆ ಮಾತನಾಡಿದ ಪ್ರಿಯಾಂಕ್ ಖರ್ಗೆ, ಹಿಂದೂ ಧರ್ಮದ ರಕ್ಷಕನಾಗಲು ಆರ್ ಎಸ್ಎಸ್ ಗೆ ಅಧಿಕಾರ ಕೊಟ್ಟಿದ್ದು ಯಾರು ಎಂದು ಪ್ರಶ್ನೆ ಮಾಡಿದ್ದಾರೆ. ‘ನಮ್ಮ ದೇಶ ಸಂವಿಧಾನದ ಮೇಲೆ ಕಾರ್ಯನಿರ್ವಹಿಸುತ್ತಿದೆ ಹೊರತು ಯಾವುದೇ ಧರ್ಮಗ್ರಂಥದ ಆಧಾರದಲ್ಲಿ ಅಲ್ಲ. ಬಿಜೆಪಿ, ಕಾಂಗ್ರೆಸ್, ಆರ್ ಎಸ್ಎಸ್ ಗೂ ಅನ್ವಯಿಸುತ್ತದೆ. ಆರ್ ಎಸ್ಎಸ್ ಸಂವಿಧಾನೇತರ ಸಂಸ್ಥೆಯಲ್ಲ’ ಎಂದಿದ್ದಾರೆ.

ಬೆಂಗಳೂರು: ಬಹುಭಾಷಾ ತಾರೆ ಪ್ರಕಾಶ್‌ರಾಜ್‌ ಅವರನ್ನು ಬೆಂಗಳೂರಿನಲ್ಲಿ ನಡೆಯುವ 17ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ರಾಯಭಾರಿಯಾಗಿ ರಾಜ್ಯ ಸರ್ಕಾರ ಆಯ್ಕೆ ಮಾಡಲಾಗಿದೆ.ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಜ.29 ರಿಂದ ಫೆ.6ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು, ವಿಧಾನಸೌಧದ ಗ್ರ‍್ಯಾಂಡ್ ಸ್ಟೆಪ್ಸ್ ಮೇಲೆ ಉದ್ಘಾಟನೆಯಾಗಲಿದೆ. ಕಾರ್ಯಕ್ರಮಕ್ಕೆ ತಾನೇ ಚಾಲನೆ ನೀಡುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.ಸಮಿತಿ ನಿರ್ಧರಿಸಿದಂತೆ ಪ್ರಕಾಶ್ ರಾಜ್ ಅವರನ್ನು ಚಲನಚಿತ್ರೋತ್ಸವಕ್ಕೆ ರಾಯಭಾರಿಯಾಗಿ ಆಯ್ಕೆ ಮಾಡಲಾಗಿದೆ. ಚಲನಚಿತ್ರೋತ್ಸವದಲ್ಲಿ 60 ದೇಶಗಳ 200 ಚಲನಚಿತ್ರಗಳು ಪ್ರದರ್ಶನ ಆಗಲಿದೆ. 400 ಪ್ರದರ್ಶನಗಳು ಇರಲಿವೆ. ಈ ವರ್ಷ ಆಸ್ಕರ್ ಪ್ರಶಸ್ತಿಗಳಿಗೆ ಶಾರ್ಟ್ ಲಿಸ್ಟ್ ಆಗಿರೋ ಚಿತ್ರಗಳು ಪ್ರದರ್ಶನ ಆಗಲಿವೆ ಎಂದು ಮಾಹಿತಿ ನೀಡಿದರು.

ಚಾಮರಾಜನಗರ: ಜಿಲ್ಲೆಯ ಯಳಂದೂರು ತಾಲೂಕಿನ ಗಂಗವಾಡಿ ಗ್ರಾಮದ ಹೊರವಲಯದಲ್ಲಿ ಚಿರತೆ ಸೆರೆಗೆ ಅರಣ್ಯ ಇಲಾಖೆ ಅಳವಡಿಸಿದ್ದ ಬೋನಿನಲ್ಲಿ ವ್ಯಕ್ತಿಯೊಬ್ಬರು ಸಿಲುಕಿಕೊಂಡ ಘಟನೆ‌ ನಡೆದಿದೆ.ಈ ಭಾಗದಲ್ಲಿ ಚಿರತೆ ಕಾಟ ಹೆಚ್ಚಿದೆ. ಹೀಗಾಗಿ, ಚಿರತೆಯ ಸೆರೆಗಾಗಿ ಅರಣ್ಯ ಇಲಾಖೆ ಸಿಬ್ಬಂದಿ ಬೋನು ಇಟ್ಟಿದ್ದರು. ಕಿಟ್ಟಿ ಎಂಬ ವ್ಯಕ್ತಿ ಕುತೂಹಲದಿಂದ ಚಿರತೆ ಹಿಡಿಯಲು ಇಟ್ಟಿದ್ದ ಬೋನಿನ ಒಳಗೆ ತೆರಳಿದ್ದಾಗ, ಆಕಸ್ಮಿಕವಾಗಿ ಬೋನಿನ ಗೇಟ್ ಲಾಕ್ ಆಗಿ ಅವರು ಒಳಗೇ ಸಿಲುಕಿಕೊಂಡಿದ್ದಾರೆ.ಬೋನಿನೊಳಗೆ ಕಾಲಿಟ್ಟ ಕೂಡಲೇ ಗೇಟ್ ಮುಚ್ಚಿಕೊಂಡ ಪರಿಣಾಮ, ಕಿಟ್ಟಿ ಸುಮಾರು ಮೂರು ಗಂಟೆಗಳ ಕಾಲ ಒಳಗೇ ಒದ್ದಾಡಿದ್ದಾರೆ. ಮೊಬೈಲ್ ಸಹ ತೆಗೆದುಕೊಂಡು ಹೋಗದ ಕಾರಣ ಕಾಲ್ ಮಾಡಿ ಯಾರಿಗೂ ತಿಳಿಸುವ ಸ್ಥಿತಿಯಲ್ಲಿ ಅವರಿರಲಿಲ್ಲ. ಸಾಕಷ್ಟು ಬೊಬ್ಬೆ ಹಾಕಿದ್ದಾರೆ.

ಬೆಂಗಳೂರು: ಕರ್ನಾಟಕ ಸರ್ಕಾರವು ಅನುಷ್ಠಾನಕ್ಕೆ ತರುತ್ತಿರುವ ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ಪ್ರತಿಬಂಧಕ ವಿಧೇಯಕ 2025 ಅನ್ನು ಯಾವುದೇ ಕಾರಣಕ್ಕೆ ಅಂಗೀಕರಿಸದಂತೆ ಬಿಜೆಪಿ ವತಿಯಿಂದ ನಾಡಿದ್ದು ಮಾನ್ಯ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಗುವುದು ಎಂದು ಬೆಂಗಳೂರು ದಕ್ಷಿಣ ಜಿಲ್ಲಾಧ್ಯಕ್ಷ ಮತ್ತು ಶಾಸಕ ಸಿ.ಕೆ. ರಾಮಮೂರ್ತಿ ಅವರು ತಿಳಿಸಿದ್ದಾರೆ.ನಗರದಲ್ಲಿ ಇಂದು ಕೆ.ಜಿ. ರಸ್ತೆ ಬಳಿ ಇರುವ ಬೆಂಗಳೂರು ಜಿಲ್ಲಾಧಿಕಾರಿ ಕಚೇರಿಗೆ ಭೇಟಿ ನೀಡಿ ಮನವಿ ಸಲ್ಲಿಸಿದ ಸಂದರ್ಭದಲ್ಲಿ ಮಾಧ್ಯಮಗಳ ಜೊತೆ ಅವರು ಮಾತನಾಡಿದರು. ನಾಡಿದ್ದು ಮಾನ್ಯ ರಾಜ್ಯಪಾಲರಿಗೆ ಮನವಿ ಕೊಡಲಿದ್ದು, ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ವಿಪಕ್ಷ ನಾಯಕರಾದ ಆರ್.ಅಶೋಕ್, ಛಲವಾದಿ ನಾರಾಯಣಸ್ವಾಮಿ ಅವರು ನೇತೃತ್ವ ವಹಿಸುವರು.