ಹೂಗ್ಲಿ (ಪಶ್ಚಿಮ ಬಂಗಾಳ): ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಎರಡನೇ ಹಂತದ ಮುನ್ನ ರಾಜಕೀಯ ಉದ್ವಿಗ್ನತೆ ಹೆಚ್ಚುತ್ತಿದ್ದು, ಸಿಎಂ ಮಮತಾ ಬ್ಯಾನರ್ಜಿ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ "ಹಿಂಸಾತ್ಮಕ ಹೇಳಿಕೆಗಳ" ವಿರುದ್ಧ "ಕಾನೂನು" ಮೊಕದ್ದಮೆ ಹೂಡುವುದಾಗಿ ಶನಿವಾರ ಹೇಳಿಕೆ ನೀಡಿದ್ದಾರೆ. ಹೂಗ್ಲಿಯಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಬ್ಯಾನರ್ಜಿಅವರು, "ಅಮಿತ್ ಶಾ ಅವರ ಹಿಂಸಾತ್ಮಕ ಹೇಳಿಕೆಗಳಿಗಾಗಿ ನಾವು ಕಾನೂನು ಮೊಕದ್ದಮೆ ಹೂಡಲಿದ್ದೇವೆ. ಗೃಹ ಸಚಿವರಾಗಿ ಅವರು ಅಂತಹ ಕಾಮೆಂಟ್ಗಳನ್ನು ಮಾಡಲು ಸಾಧ್ಯವಿಲ್ಲ ಎಂದು ಆಕ್ರೋಶ ಹೊರಹಾಕಿದರು.
ದೆಹಲಿ ಕ್ಯಾಪಿಟಲ್ಸ್(ಡಿಸಿ)ಬ್ಯಾಟರ್ ಕೆಎಲ್ ರಾಹುಲ್ ಶನಿವಾರ ದೆಹಲಿಯಲ್ಲಿ ನಡೆದ ಐಪಿಎಲ್ 2026ರ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್(ಪಿಬಿಕೆಎಸ್) ವಿರುದ್ಧ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್)ನಲ್ಲಿ ಭಾರತೀಯರು ಗಳಿಸಿದ ಗರಿಷ್ಠ ಸ್ಕೋರ್ 152 ರನ್ ಗಳಿಸಿದರು.ಓಪನರ್ ರಾಹುಲ್ ಅವರ 67 ಎಸೆತಗಳ ಸಂವೇದನಾಶೀಲ ನಾಕ್ 16 ಬೌಂಡರಿಗಳು ಮತ್ತು ಒಂಬತ್ತು ಸಿಕ್ಸರ್ಗಳನ್ನು ಒಳಗೊಂಡಿತ್ತು ಮತ್ತು DC ಯನ್ನು 264/2 ಗೆ ದೈತ್ಯಗೊಳಿಸಿದರು. ಶಶಾಂಕ್ ಸಿಂಗ್ 18 ರನ್ ಗಳಿಸಿ ಔಟಾದ ಬಳಿಕ ರಾಹುಲ್ ಬ್ಯಾಟಿಂಗ್ಗೆ ಬಂದರು. ಅವರು ಮತ್ತು ನಿತೀಶ್ ರಾಣಾ (91 ಎಸೆತ, 44, 11 ಬೌಂಡರಿ, 4 ಸಿಕ್ಸರ್) ಎರಡನೇ ವಿಕೆಟ್ಗೆ ದಾಖಲೆಯ 220 ರನ್
ಬೆಂಗಳೂರು: ಮಧ್ಯಪ್ರಾಚ್ಯ ಸಂಘರ್ಷದಿಂದಾಗಿ ಇಂಧನ ಕೊರತೆ ಉಂಟಾಗಬಹುದು ಎಂಬ ಆತಂಕದ ನಡುವೆಯೇ ಕರ್ನಾಟಕದಲ್ಲಿ ಇಂಧನ ಪೂರೈಕೆ ಸಂಪೂರ್ಣ ಸ್ಥಿರವಾಗಿದೆ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಪ್ರೆಸ್ ಇನ್ಫಾರ್ಮೇಶನ್ ಬ್ಯೂರೋ ಬೆಂಗಳೂರು ಮತ್ತು ವಿವಿಧ ತೈಲ ಮಾರುಕಟ್ಟೆ ಕಂಪನಿಗಳು (OMCಗಳು) ಪ್ಯಾನಿಕ್ ಖರೀದಿಯ ವಿರುದ್ಧ ಸಾರ್ವಜನಿಕರಿಗೆ ಧೈರ್ಯ ತುಂಬಲು ಪತ್ರಿಕಾಗೋಷ್ಠಿಯನ್ನು ನಡೆಸಿತು.ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ನ ಕಾರ್ಯನಿರ್ವಾಹಕ ನಿರ್ದೇಶಕ ಮತ್ತು ಕರ್ನಾಟಕ OMCಗಳ ನೋಡಲ್ ಅಧಿಕಾರಿ ಸಿದ್ಧಾರ್ಥ್ ಅಗರ್ವಾಲ್, ರಾಜ್ಯವು 15 MMTPA (ವರ್ಷಕ್ಕೆ ಮಿಲಿಯನ್ ಮೆಟ್ರಿಕ್ ಟನ್) ಸಂಸ್ಕರಣಾ ಸಾಮರ್ಥ್ಯವನ್ನು
ಬೆಂಗಳೂರು: ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರುವ ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ್ಯ ಸಚಿವ ಡಿ ಸುಧಾಕರ್ ಅವರು ಆರೋಗ್ಯವನ್ನು ಸಿಎಂ ಸಿದ್ದರಾಮಯ್ಯ ವಿಚಾರಿಸಿದ್ದಾರೆ. ಭೇಟಿ ಬಳಿಕ ಸುಧಾಕರ್ ಕುಟುಂಬದ ಜತೆ ಸಿದ್ದರಾಮಯ್ಯ ಮಾತನಾಡಿದ್ದಾರೆ.ಬಳಿಕ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಸಿಎಂ, ಸಚಿವರಿಗೆ ಇನ್ನೂ ಪ್ರಜ್ಞೆ ಬಂದಿಲ್ಲ. ಶ್ವಾಸಕೋಶ ಟ್ರಾನ್ಸ್ ಪ್ಲಾಂಟ್ ಮಾಡಬೇಕಾದ್ರೆ ಮೆದಳು ಪ್ರಜ್ಞೆಯಲ್ಲಿರಬೇಕು. ಈ ಬಗ್ಗೆ ವೈದ್ಯರು ನಾಳೆ ತೀರ್ಮಾನ ಮಾಡಲಿದ್ದಾರೆ ಎಂದು ಮಾಹಿತಿ ನೀಡಿದರು. ಸಚಿವರು ಈಗ ಚೇತರಿಸಿಕೊಳ್ಳುತ್ತಿದ್ದಾರೆ. ಇನ್ನು ಸಚಿವರ ಬೇರೆಲ್ಲಾ ಆರ್ಗನ್ಸ್ ಸ್ಟೇಬಲ್ ಆಗಿದೆ. ನಾಳೆ ವೈದ್ಯರು ಸಿಟಿ ಸ್ಕ್ಯಾನ್
ನವದೆಹಲಿ: ಐಪಿಎಲ್ 2026 ರಲ್ಲಿ ಇಂದು ಪಂಜಾಬ್ ಕಿಂಗ್ಸ್ ವಿರುದ್ಧ ಕೆಎಲ್ ರಾಹುಲ್ ಭರ್ಜರಿ ಶತಕ ದಾಖಲಿಸಿದ್ದು ಡೆಲ್ಲಿ ಕ್ಯಾಪಿಟಲ್ಸ್ 20 ಓವರ್ ಗಳಲ್ಲಿ 2 ವಿಕೆಟ್ ನಷ್ಟಕ್ಕೆ 264 ರನ್ ಗಳ ಬೃಹತ್ ಮೊತ್ತ ಪೇರಿಸಿದೆ. ಟಾಸ್ ಗೆದ್ದ ಡೆಲ್ಲಿ ಇಂದು ಮೊದಲು ಬ್ಯಾಟಿಂಗ್ ಆಯ್ದುಕೊಂಡಿತು. ಅದಕ್ಕೆ ತಕ್ಕಂತೆ ಆಡಿದ ಕೆಎಲ್ ರಾಹುಲ್ ಅಬ್ಬರದ ಇನಿಂಗ್ಸ್ ಆಡಿದರು. ಕೇವಲ 67 ಎಸೆತ ಎದುರಿಸಿದ ಅವರು 152 ರನ್ ಚಚ್ಚಿದರು. ಅವರಿಗೆ ತಕ್ಕ ಜೊತೆ ನೀಡಿದ ನಿತೀಶ್ ರಾಣಾ 44 ಎಸೆತಗಳಿಂದ 91 ರನ್ ಗಳಿಸಿದರು. ಆದರೆ ಶತಕದ ಅಂಚಿನಲ್ಲಿ ಅವರು ಎಡವಿದರು.
ಬೆಂಗಳೂರು: ವಿವಾಹವಾಗುತ್ತೇನೆಂದು ನಂಬಿಸಿ ಅತ್ಯಾಚಾರ ಎಸಗಿ ಮಗು ಜನನದ ಬಳಿಕ ದೋಖಾ ಮಾಡಿದ ಪುತ್ತೂರಿನ ಬಿಜೆಪಿ ಮುಖಂಡ ಜಗನ್ನಿವಾಸ ರಾವ್ ಅವರ ಪುತ್ರ ಕೃಷ್ಣ ಜೆ ರಾವ್ ವಿರುದ್ಧದ ವಿಚಾರಣೆಗೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ.ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ, ಪ್ರಕರಣ ರದ್ದು ಕೋರಿ ಕೃಷ್ಣ ಜೆ ರಾವ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಶುಕ್ರವಾರದಂದು ಮಧ್ಯಂತರ ಆದೇಶ ನೀಡಿದೆ. ಡಿಎನ್ಎಯಲ್ಲಿ ಮಗು ಕೃಷ್ಣ ಜೆರಾವ್ ನದ್ದೆ ಎಂದು ಸಾಬೀತಾದ ಬಳಿಕ ಸಂತ್ರಸ್ತೆ ಮತ್ತು ಮಗುವಿನ ಅವಶ್ಯಕತೆಗಳನ್ನು ಪೂರೈಸಲು
ಉಡುಪಿ: ನಾಪತ್ತೆಯಾಗಿದ್ದ ಉಪನ್ಯಾಸಕರೊಬ್ಬರ ಶವ ಶನಿವಾರ ಬಾವಿಯಲ್ಲಿ ಪತ್ತೆಯಾಗಿದ್ದು, ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.ಮೃತರನ್ನು ಶಿರಸಿ ಮೂಲದ ಗಣಪತಿ ಭಟ್ (55) ಎಂದು ಗುರುತಿಸಲಾಗಿದ್ದು, ಇವರು ನಗರದ ಸಂಸ್ಕೃತ ಕಾಲೇಜಿನಲ್ಲಿ ಉಪನ್ಯಾಸಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ಅವಿವಾಹಿತರಾಗಿದ್ದ ಅವರು ಕುಂಜಿಬೆಟ್ಟುವಿನ ಬಾಡಿಗೆ ಮನೆಯಲ್ಲಿ ಒಂಟಿಯಾಗಿ ವಾಸವಾಗಿದ್ದರು.ಪೊಲೀಸ್ ಮೂಲಗಳ ಪ್ರಕಾರ, ಅವರು ನಾಪತ್ತೆಯಾದ ನಂತರ ನಗರ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿತ್ತು
ಕಾಂತಾರ ಚಿತ್ರದಲ್ಲಿ ದೈವವನ್ನು ಅನುಕರಣೆ ಮಾಡಿದ್ದ ಸಂಬಂಧ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ಕ್ಷಮೆಯಾಚಿಸುವ ನಟ ರಣವೀರ್ ಸಿಂಗ್ ನಿರ್ಧರವನ್ನು ಕರ್ನಾಟಕ ಹೈಕೋರ್ಟ್ ಶನಿವಾರ ಅಂಗೀಕರಿಸಿದೆ.ಸಿಂಗ್ ಅವರ ಕ್ಷಮಾಪಣೆ ಮತ್ತು ದೇವಾಲಯಕ್ಕೆ ಭೇಟಿ ನೀಡುವ ಭರವಸೆಯನ್ನು ದಾಖಲಿಸಿದ ನಂತರ ಸಿಂಗ್ ಅವರ ಮನವಿಯನ್ನು ಮುಕ್ತಾಯಗೊಳಿಸಲು ಆದೇಶವನ್ನು ನೀಡುವುದಾಗಿ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಇಂದು ಹೇಳಿದ್ದಾರೆ.ನಾಲ್ಕು ವಾರಗಳಲ್ಲಿ ದೇವಾಲಯಕ್ಕೆ ಭೇಟಿ ನೀಡುವಂತೆ ಸಿಂಗ್ಗೆ ನ್ಯಾಯಾಲಯ ಸೂಚನೆ ನೀಡಿದೆ.
ಡಾ.ರಾಜ್ಕುಮಾರ್ ಅವರ ಹುಟ್ಟುಹಬ್ಬದ ದಿನದಂದೇ ನಟ ಶಿವರಾಜ್ಕುಮಾರ್ ಅವರು ತಮ್ಮ ಮುಂದಿನ ಸಿನಿಮಾದ ಬಗ್ಗೆ ಅಪ್ಡೇಟ್ ನೀಡಿದ್ದಾರೆ. ಹೌದು ದಿನಾಂಕ 24ರಂದು ಡಾ ರಾಜ್ಕುಮಾರ್ ಅವರ ಹುಟ್ಟುಹಬ್ಬ, ಅದೇ ದಿನದಂದೆ ಶಿವರಾಜ್ಕುಮಾರ್ ಅವರು ಅವರ ಮುಂದಿನ ಸಿನಿಮಾ ಘೋಷಿಸಿ, ಪೋಸ್ಟರ್ ಬಿಡುಗಡೆ ಮಾಡಿದ್ದಾರೆ. ಕನ್ನಡದಲ್ಲಿ ಅನೇಕ ಹಿಟ್ ಸಿನಿಮಾಗಳನ್ನು ನೀಡಿರುವ ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್ ‘ಭೈರತಿ ರಣಗಲ್’ ಬಳಿಕ ಯಾವುದೇ ಸಿನಿಮಾ ಬಿಡುಗಡೆಯಾಗಿಲ್ಲ. ಆ ಸಿನಿಮಾ 2024ರಲ್ಲಿ ತೆರೆಕಂಡು ಭಾರೀ ಯಶಸ್ಸು ಗಳಿಸಿತ್ತು. ಸದ್ಯ, ಅವರ ಹಲವು ಸಿನಿಮಾಗಳ ಚಿತ್ರೀಕರಣದ ಹಂತದಲ್ಲಿದ್ದು, ಅವುಗಳ ಜೊತೆಗೆ ಹೊಸ ಸಿನಿಮಾವನ್ನು ಕೂಡ ಘೋಷಣೆ ಮಾಡಿದ್ದಾರೆ.
ಬೆಂಗಳೂರು: ಈ ಸರಕಾರವು 50 ಸಾವಿರಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕಾತಿ ಆಗಬಾರದೆಂಬ ದುರುದ್ದೇಶದಿಂದ ಮೇಲಿಂದ ಮೇಲೆ ತಪ್ಪು ಮಾಡುತ್ತಿದೆ ಎಂದು ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ. ರಾಜೀವ್ ಅವರು ಆರೋಪಿಸಿದ್ದಾರೆ. ಮೀಸಲಾತಿ ವಿಚಾರದಲ್ಲಿ ಪರಿಶಿಷ್ಟ ಜಾತಿಯ 101 ಜಾತಿಗಳಿಗೂ ಈ ಸರಕಾರ ಅನ್ಯಾಯ ಮಾಡಿದೆ ಎಂದು ದೂರಿದರು.ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸರಕಾರ ನೇಮಕಾತಿ ಮಾಡಲು ಸಿದ್ಧವಿತ್ತು. ಆದರೆ, ಕೋರ್ಟಿನ ತಡೆಯಾಜ್ಞೆ ಇದ್ದುದರಿಂದ ನೇಮಕಾತಿ ಆಗಿಲ್ಲ ಎಂದು ಯುವಜನತೆಗೆ ತಿಳಿಸಲು ಸರಕಾರ ಯೋಜಿಸಿದಂತಿದೆ ಎಂದು ಟೀಕಿಸಿದರು.
ಬೆಂಗಳೂರು: ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಜನಪ್ರತಿನಿಧಿಗಳ ಕೋರ್ಟ್ ನಿಂದ ಜೀವಾವಧಿ ಶಿಕ್ಷೆಗೊಳಗಾಗಿರುವ ಶಾಸಕ ವಿನಯ್ ಕುಲಕರ್ಣಿ ತಮ್ಮ ಶಿಕ್ಷೆಗೆ ತಡೆ ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಬಿಜೆಪಿಯ ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ಯೋಗೇಶ್ ಗೌಡ ಸೇರಿದಂತೆ 16 ಆರೋಪಿಗಳಿಗೆ ಮೊನ್ನೆಯಷ್ಟೇ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಜೀವಾವಧಿ ಶಿಕ್ಷೆ ವಿಧಿಸಿತ್ತು. ಇದರ ಬೆನ್ನಲ್ಲೇ ವಿನಯ್ ಕುಲಕರ್ಣಿ ಪರಪ್ಪನ ಅಗ್ರಹಾರ ಜೈಲು ಸೇರಿದ್ದರು. ಜೀವಾವಧಿ ಶಿಕ್ಷೆಗೊಳಗಾಗಿರುವುದರಿಂದ ವಿನಯ್ ಕುಲಕರ್ಣಿ ಶಾಸಕ ಸ್ಥಾನ ರದ್ದಾಗಲಿದೆ. ಇದೀಗ ಜನಪ್ರತಿನಿಧಿಗಳ ಕೋರ್ಟ್ ಆದೇಶ ಪ್ರಶ್ನಿಸಿ ವಿನಯ್ ಕುಲಕರ್ಣಿ ಮತ್ತು ಇನ್ನೋರ್ವ ಅಪರಾಧಿ ಚಂದ್ರಶೇಖರ್ ಇಂಡಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ಬೆಂಗಳೂರು: ಸಿದ್ದರಾಮಯ್ಯನವರೇ, ನೀವೇ ನೇಮಿಸಿದ ನ್ಯಾ.ನಾಗಮೋಹನ್ದಾಸ್ ಅವರ ವರದಿ ಅವೈಜ್ಞಾನಿಕ ಎಂಬ ಕಾರಣಕ್ಕೆ ತಿರಸ್ಕರಿಸಿದ್ದೀರಾ ಎಂದು ಮಾಜಿ ಉಪ ಮುಖ್ಯಮಂತ್ರಿ ಮತ್ತು ಸಂಸದ ಗೋವಿಂದ ಕಾರಜೋಳ ಅವರು ಪ್ರಶ್ನಿಸಿದ್ದಾರೆ.ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನೀವೇ ರಚಿಸಿದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರ ವರದಿ ವೈಜ್ಞಾನಿಕ ಎಂದು ಒಪ್ಪಿಕೊಂಡಿದ್ದೀರಾ ಎಂದು ಸ್ಪಷ್ಟಪಡಿಸಲು ಒತ್ತಾಯಿಸಿದರು. ನಾಗಮೋಹನ್ದಾಸ್ ಅವರ ವರದಿಯಲ್ಲಿ ಶೇ 17 ಎಂದಿದ್ದರೂ ಶೇ 15ಕ್ಕೆ ಸೀಮಿತ ಮಾಡಿ ಕೊಡಬಹುದಾಗಿತ್ತು. ಯಾಕೆ ಕೊಟ್ಟಿಲ್ಲ ಎಂದು ಕೇಳಿದರು.
ಬೆಂಗಳೂರು: ಒಳ ಮೀಸಲಾತಿಗೆ ಸಂಬಂಧಿಸಿ ಎಲ್ಲರನ್ನೂ ಬೀದಿಯಲ್ಲಿ ನಿಲ್ಲಿಸಿ ಬೀಸುವ ದೊಣ್ಣೆಯಿಂದ ತಪ್ಪಿಸಿಕೊಂಡರೆ ಸಾಕೆಂಬ ರೀತಿಯಲ್ಲಿ ತೀರ್ಮಾನವನ್ನು ಕಾಂಗ್ರೆಸ್ಸಿನ ಸಿದ್ದರಾಮಯ್ಯನವರ ಸರಕಾರ ಮಾಡಿದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಆಕ್ಷೇಪಿಸಿದ್ದಾರೆ.ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಈ ತೀರ್ಮಾನ ಮಾಡುವಾಗ ಉಪ ಮುಖ್ಯಮಂತ್ರಿಗಳು ಊರಲ್ಲೇ ಇರಲಿಲ್ಲ; ಬಹುಶಃ ಅವರಿಗೂ ಇದು ತೃಪ್ತಿಕರ ಅಲ್ಲ ಎಂಬುದು ಗೊತ್ತಿತ್ತು ಎಂದು ವಿಶ್ಲೇಷಿಸಿದರು. ಈ ಒಂದು ತೀರ್ಮಾನಕ್ಕೆ ಬರಲು ಇವರಿಗೆ 3 ವರ್ಷ ಬೇಕಾಗಿದೆ. ಮೂರೇ ತಿಂಗಳಲ್ಲಿ ಮಾಡಬಹುದಿತ್ತಲ್ಲವೇ ಎಂದು ಕೇಳಿದರು.
ಬೆಂಗಳೂರು: ಕರ್ನಾಟಕದ ಪರಿಶಿಷ್ಠ ಜಾತಿಗಳಿಗೆ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಬೆನ್ನಿಗೆ ಚೂರಿ ಹಾಕುವ ಕೆಲಸ ಮಾಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ. ‘ಕರ್ನಾಟಕ ರಾಜ್ಯದ ಪರಿಶಿಷ್ಟ ಜಾತಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಐತಿಹಾಸಿಕ ಮೋಸ ಮತ್ತು ಬೆನ್ನಿಗೆ ಚೂರಿ ಹಾಕುವ ಕೆಲಸ ಮಾಡಿದೆ. ಸುಪ್ರಿಂಕೋರ್ಟ್ ಆದೇಶದ ಅನುಸಾರ ಪರಿಶಿಷ್ಟ ಜಾತಿಗಳಿಗೆ ಮೀಸಲಾತಿ ಹಂಚಿಕೆ ಮಾಡಲು ಸರಿಸುಮಾರು ಎರಡೂವರೆ ವರ್ಷಗಳವರೆಗೆ ಕಾಲಹರಣ ಮಾಡಿ ಅಂತಿಮವಾಗಿ ಸಚಿವ ಸಂಪುಟ ಸಭೆಯಲ್ಲಿ ಎ, ಬಿ, ಮತ್ತು ಸಿ ವರ್ಗಗಳಾಗಿ ವಿಂಗಡಿಸಿದೆ.
ಮೂಡಬಿದಿರೆ: ಪುಚ್ಚೆಮೊಗರು ಬಾವದಬೈಲಿನಲ್ಲಿ ದೈವದ ಭಂಡಾರ ಕೊಂಡೊಯ್ಯುವಾಗ ಸೇತುವೆ ಮುರಿದುಬಿದ್ದು 8 ಮಂದಿ ಗಾಯಗೊಂಡ ಘಟನೆ ನಡೆದಿದೆ. ಈ ಸಂದರ್ಭದ ವಿಡಿಯೋ ಇಲ್ಲಿದೆ. ಭಾವದಗುತ್ತುವಿನಿಂದ ಧರ್ಮ ನೇಮಕ್ಕೆ ಭಂಡಾರವನ್ನು ಪಲ್ಲಕ್ಕಿಯಲ್ಲಿ ಹೊತ್ತು ಮೆರವಣಿಗೆಯಲ್ಲಿ ಸಾಗಲಾಗುತ್ತಿತ್ತು. ಹಳ್ಳಿ ಪ್ರದೇಶದಲ್ಲಿ ತೋಟದ ಮಾರ್ಗದಲ್ಲಿ ಕಲ್ಲಿನಿಂದ ಸಂಕ ನಿರ್ಮಿಸಲಾಗಿತ್ತು. ಸಂಕದ ಮೂಲಕ ಸಾಗುತ್ತಿದ್ದಾಗ ಇದ್ದಕ್ಕಿದ್ದಂತೆ ಕುಸಿದುಬಿದ್ದಿದೆ. ಒಂದೇ ಸಮಯಕ್ಕೆ ಸಾಕಷ್ಟು ಜನ ಸಂಕದ ಮೇಲೆ ನಿಂತ ಕಾರಣಕ್ಕೆ ಭಾರ ತಡೆಯಲಾಗದೇ ಕುಸಿದು ಬಿದ್ದಿರಬಹುದು ಎನ್ನಲಾಗಿದೆ.
ಬೆಂಗಳೂರು: ಕ್ಯಾಬಿನೆಟ್ ಸಭೆಗೆ ಚಕ್ಕರ್ ಹಾಕಿ ಹೈಕಮಾಂಡ್ ಮನೆ ಗೇಟ್ ಕಾದರೂ ಪ್ರಯೋಜನವಾಗಿಲ್ಲ ಎಂದು ಕರ್ನಾಟಕ ಬಿಜೆಪಿ ಘಟಕ ಟ್ವೀಟ್ ಮೂಲಕ ಡಿಸಿಎಂ ಡಿಕೆ ಶಿವಕುಮಾರ್ ಗೆ ಟಾಂಗ್ ಕೊಟ್ಟಿದೆ. ಡಿಕೆ ಶಿವಕುಮಾರ್ ನಿನ್ನೆ ದೆಹಲಿ ಪ್ರವಾಸ ಮಾಡಿದ್ದರು. ಕೇಂದ್ರ ಸಚಿವ ರಾಜನಾಥ್ ಸಿಂಗ್ ಭೇಟಿ ಬಳಿಕ ಹೈಕಮಾಂಡ್ ನಾಯಕ ಮಲ್ಲಿಕಾರ್ಜುನ ಖರ್ಗೆ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿದ್ದರು. ಇದರ ಬಗ್ಗೆ ಬಿಜೆಪಿ ವ್ಯಂಗ್ಯ ಮಾಡಿದೆ. ಡಿಕೆ ಶಿವಕುಮಾರ್ ಸಿಎಂ ಪದವಿಗಾಗಿ ಹೈಕಮಾಂಡ್ ನಾಯಕರನ್ನು ಪದೇ ಪದೇ ಭೇಟಿ ನೀಡಿದರೂ ಪ್ರಯೋಜನವಾಗುತ್ತಿಲ್ಲ ಎಂದು ತಿವಿದಿದೆ. ರಾಜ್ಯದಲ್ಲಿ ಕ್ಯಾಬಿನೆಟ್ ಸಭೆಯಿತ್ತು.
ಬೆಂಗಳೂರು: ಕಳೆದ ಕೆಲವು ದಿನಗಳಿಂದ ಚಿನ್ನದ ದರ ಏರಿಕೆ, ಇಳಿಕೆಯಾಗುತ್ತಲೇ ಇದೆ. ಇಂದು ಪರಿಶುದ್ಧ ಚಿನ್ನದ ದರ ಏರಿಕೆಯಾಗಿದ್ದು ಮತ್ತುಇತರೆ ಚಿನ್ನದ ದರ ಯಥಾಸ್ಥಿತಿಯಲ್ಲಿದೆ. ಇಂದು ಪರಿಶುದ್ಧ ಚಿನ್ನದ ದರ ಮತ್ತು ಇತರೆ ಚಿನ್ನದ ದರ ವಿವರ ಇಲ್ಲಿದೆ ನೋಡಿ. ಚಿನ್ನದ ದರ ಏರಿಕೆಕಳೆದ ವಾರ ಪರಿಶುದ್ಧ ಚಿನ್ನದ ದರ ಸತತವಾಗಿ ಬೆಲೆ ಏರಿಳಿಕೆಯಾಗುತ್ತಲೇ ಇತ್ತು. ಆದರೆ ವಾರಂತ್ಯಕ್ಕೆ ಪರಿಶುದ್ಧ ಚಿನ್ನದ ದರದಲ್ಲಿ ಕೊಂಚ ಇಳಿಕೆಯಾಗಿತ್ತು. ಪರಿಶುದ್ಧ ಚಿನ್ನದ ದರ ವಾರಂತ್ಯಕ್ಕೆ 1,55,135.00 ರೂ.ಗಳಿತ್ತು. ಆದರೆ ಇಂದು ಏರಿಕೆಯಾಗಿದ್ದು 1,56,260.00 ರೂ.ಗಳಷ್ಟಿದೆ.
ಬೆಂಗಳೂರು: ಅಡಿಕೆ ಬೆಲೆ ಕಳೆದ ವಾರ ಏರಿಕೆ-ಇಳಿಕೆಯಾಗಿತ್ತು. ಕಳೆದ ವಾರದಂತೆ ಈ ವಾರವೂ ಅದೇ ಟ್ರೆಂಡ್ ಮುಂದುವರಿದಿದೆ. ಇಂದು ಅಡಿಕೆ ಮತ್ತು ಕಾಳು ಮೆಣಸು, ಕೊಬ್ಬರಿ ದರ ಹೇಗಿದೆ ಇಲ್ಲಿದೆ ವಿವರ. ಕಳೆದ ವಾರ ಅಡಿಕೆ ಬೆಲೆಯಲ್ಲಿ ಕೊಂಚ ಏರಿಳಿಕೆಯಾಗುತ್ತಲೇ ಇತ್ತು. ಕಳೆದ ವಾರ ಎರಡು ದಿನ ಸತತವಾಗಿ ಬೆಲೆ ಏರಿಕೆ ಕಂಡುಬರುತ್ತಿತ್ತು. ಅಡಿಕೆ ಬೆಲೆಯಲ್ಲಿ ಇಂದು ಯಥಾಸ್ಥಿತಿಯಲ್ಲಿದೆ. ಹೊಸ ಅಡಿಕೆ ಬೆಲೆ ಯಥಾಸ್ಥಿತಿಯಲ್ಲಿದ್ದು 475 ರೂ.ಗಳಷ್ಟಿದೆ. ಹಳೆ ಅಡಿಕೆ ಬೆಲೆ ಯಥಾಸ್ಥಿತಿಯಲ್ಲಿದ್ದು 550 ರೂ. ಗಳಾಗಿದೆ. ಡಬಲ್ ಚೋಲ್ ಬೆಲೆಯೂ 550 ರೂ.ಗಳಷ್ಟಾಗಿದೆ.
ನವದೆಹಲಿ: ಅಭ್ಯಾಸದ ವೇಳೆ ಡೆಲ್ಲಿ ಕ್ಯಾಪಿಟಲ್ಸ್ ಯುವ ಕ್ರಿಕೆಟಿಗನ ಮುಖಕ್ಕೆ ಚೆಂಡು ಬಡಿದಿದ್ದು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಬಳಿಕ ಮೈದಾನಕ್ಕೇ ಆಂಬ್ಯುಲೆನ್ಸ್ ಕರೆಸಿ ಕರೆದೊಯ್ಯಲಾಗಿದೆ. ಐಪಿಎಲ್ 2026 ರಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಪರ ಆಡುವ ಯುವ ಕ್ರಿಕೆಟಿಗ ಸಾಹಿಲ್ ಪರಾಖ್ ಅಭ್ಯಾಸ ನಡೆಸುವಾಗ ಮುಖಕ್ಕೆ ಬಲವಾಗಿ ಚೆಂಡು ಹೊಡೆದಿದೆ. ಇದರಿಂದ ಗಂಭೀರವಾಗಿ ಗಾಯಗೊಂಡು ಕುಸಿದು ಬಿದ್ದಿದ್ದಾನೆ. ತಕ್ಷಣವೇ ಮೈದಾನದಲ್ಲಿ ಸ್ಟ್ರೆಚರ್ ತಂದು ಪ್ರಾಥಮಿಕ ಚಿಕಿತ್ಸೆ ನೀಡಲಾಯಿತು. ಬಳಿಕ ಮೈದಾನಕ್ಕೇ ಆಂಬ್ಯುಲೆನ್ಸ್ ಕರೆಸಿ ಸಾಹಿಲ್ ನನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
ಬೆಂಗಳೂರು: ಗುಜರಾತ್ ಟೈಟನ್ಸ್ ಮತ್ತು ಆರ್ ಸಿಬಿ ನಡುವಿನ ಪಂದ್ಯದ ವೇಳೆ ತನ್ನ ಪಾಡಿಗೆ ತಾನು ನಿಂತಿದ್ದ ವಿರಾಟ್ ಕೊಹ್ಲಿಯನ್ನು ಮೊಹಮ್ಮದ್ ಸಿರಾಜ್ ಹಿಂದಿನಿಂದ ಬಂದು ತಬ್ಬಿಕೊಂಡ ವಿಡಿಯೋವೊಂದು ವೈರಲ್ ಆಗಿದ್ದು ಇಬ್ಬರ ಬಾಂಡಿಂಗ್ ಬಗ್ಗೆ ನೆಟ್ಟಿಗರು ಖುಷಿ ವ್ಯಕ್ತಪಡಿಸಿದ್ದಾರೆ. ಐಪಿಎಲ್ 2026 ರಲ್ಲಿ ನಿನ್ನೆ ಚಿನ್ನಸ್ವಾಮಿ ಮೈದಾನದಲ್ಲಿ ನಡೆದ ಪಂದ್ಯವನ್ನು ಗುಜರಾತ್ ಟೈಟನ್ಸ್ ವಿರುದ್ಧ ಆರ್ ಸಿಬಿ 5 ವಿಕೆಟ್ ಗಳಿಂದ ಗೆದ್ದುಕೊಂಡಿದೆ. ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ 81 ರನ್ ಗಳಿಸಿ ಪಂದ್ಯ ಶ್ರೇಷ್ಠರಾದರು.
ನವದೆಹಲಿ: ಆಮ್ ಆದ್ಮಿ ಪಕ್ಷದ 'ಪೋಸ್ಟರ್ ಬಾಯ್' ಎಂದೇ ಕರೆಯಲ್ಪಡುತ್ತಿದ್ದ ರಾಜ್ಯಸಭಾ ಸಂಸದ ರಾಘವ್ ಛಡ್ಡಾ ಅವರು ಏಪ್ರಿಲ್ 24, 2026 ರಂದು ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಯಾಗುವ ಮೂಲಕ ದೇಶದ ರಾಜಕೀಯದಲ್ಲಿ ಸಂಚಲನ ಮೂಡಿಸಿದ್ದಾರೆ. ಕೇವಲ ಒಬ್ಬರೇ ಅಲ್ಲದೆ, ಎಎಪಿಯ ಒಟ್ಟು 10 ರಾಜ್ಯಸಭಾ ಸಂಸದರಲ್ಲಿ 7 ಮಂದಿ (2/3 ಭಾಗ) ಒಟ್ಟಾಗಿ ಬಿಜೆಪಿಯೊಂದಿಗೆ ವಿಲೀನಗೊಳ್ಳಲು ನಿರ್ಧರಿಸಿದ್ದಾರೆ. ಪಕ್ಷದ ನಾಯಕತ್ವದೊಂದಿಗೆ ಭಿನ್ನಾಭಿಪ್ರಾಯ:ಕಳೆದ ಕೆಲವು ವಾರಗಳಿಂದ ರಾಘವ್ ಛಡ್ಡಾ ಮತ್ತು ಎಎಪಿ ನಾಯಕತ್ವದ ನಡುವೆ ಬಿರುಕು ಕಾಣಿಸಿಕೊಂಡಿತ್ತು.
ಬೆಂಗಳೂರು: ಐಪಿಎಲ್ 2026 ರಲ್ಲಿ ನಿನ್ನೆ ಗುಜರಾತ್ ಟೈಟನ್ಸ್ ವಿರುದ್ಧ ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮಾಡಿದ ದಾಖಲೆಗಳ ಪಟ್ಟಿ ಇಲ್ಲಿದೆ. ಮೊದಲು ಬ್ಯಾಟಿಂಗ್ ಮಾಡಿದ್ದ ಗುಜರಾತ್ 20 ಓವರ್ ಗಳಲ್ಲಿ 3 ವಿಕೆಟ್ ನಷ್ಟಕ್ಕೆ 205 ರನ್ ಗಳಿಸಿತು. ಇದಕ್ಕೆ ಉತ್ತರವಾಗಿ ಆರ್ ಸಿಬಿ 18.5 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 206 ರನ್ ಗಳಿಸಿ 5 ವಿಕೆಟ್ ಗಳ ಭರ್ಜರಿ ಗೆಲುವು ಸಾಧಿಸಿತು. ಈ ಗೆಲುವಿನೊಂದಿಗೆ ಆರ್ ಸಿಬಿ ಇದೀಗ ಅಂಕಪಟ್ಟಿಯಲ್ಲಿ 10 ಅಂಕಗಳೊಂದಿಗೆ 2 ನೇ ಸ್ಥಾನಕ್ಕೇರಿದೆ.
ಬೆಂಗಳೂರು: ಹುಬ್ಬಳ್ಳಿಗೆ ಹೋಗುವ ರೈಲು ಏರಲು ಬೆಂಗಳೂರು ರೈಲ್ವೇ ನಿಲ್ದಾಣಕ್ಕೆ ಸಾಮಾನ್ಯರಂತೆ ಬಂದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಯವರನ್ನು ನೋಡಿ ಸಾರ್ವಜನಿಕರು ಅಚ್ಚರಿಗೊಂಡಿದ್ದಾರೆ. ಕೇಂದ್ರ ಸಚಿವರು ಬಿಡಿ ನಮ್ಮ ದೇಶದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರೂ ಸುತ್ತಮುತ್ತ ನಾಲ್ಕು ಜನರನ್ನು ಇಟ್ಟುಕೊಂಡೇ ಕಾರಿನಲ್ಲಿ ತಿರುಗಾಡುತ್ತಾರೆ. ಕೆಲವೇ ಕೆಲವು ನಾಯಕರು ದೊಡ್ಡ ಹುದ್ದೆಯಲ್ಲಿದ್ದರೂ ಸಾಮಾನ್ಯ ಜನರಂತಿರುತ್ತಾರೆ. ಪ್ರಲ್ಹಾದ್ ಜೋಶಿ ಕೂಡಾ ಅದೇ ರೀತಿ ನಡೆದುಕೊಂಡಿದ್ದಾರೆ. ಕೇಂದ್ರ ಸಚಿವರಾಗಿರುವ ಪ್ರಲ್ಹಾದ್ ಜೋಶಿಗೆ ವಿಮಾನದಲ್ಲಿ ವಿಐಪಿಯಂತೆ ಸಂಚರಿಸುವ ಎಲ್ಲಾ ಅನುಕೂಲವಿದೆ.
ಮಲಯಾಳಂ ಸೂಪರ್ ಸ್ಟಾರ್ ಮೋಹನ್ ಲಾಲ್ ಇತ್ತೀಚೆಗೆ ಅಮೆರಿಕಾದಲ್ಲಿ ಅಣ್ಣಾವ್ರ ಹಾಡು ಹಾಡಿದ ವಿಡಿಯೋ ವೈರಲ್ ಆಗಿತ್ತು. ಆದರೆ ಅದಕ್ಕಾಗಿ ಅವರು ಎಷ್ಟು ಶ್ರಮಪಟ್ಟಿದ್ದರು ಎಂಬುದು ಈ ವಿಡಿಯೋದಲ್ಲಿ ನಿಮಗೆ ತಿಳಿಯುತ್ತದೆ. ತಮ್ಮ ಸಿನಿಮಾದ ಪಾತ್ರಗಳಲ್ಲೂ ಮೋಹನ್ ಲಾಲ್ ಸಹಜ ಅಭಿನಯದ ಮೂಲಕ ಜನರಿಗೆ ಹತ್ತಿರವಾಗುತ್ತಾರೆ. ಇದೀಗ ಕನ್ನಡದ ಹಾಡೊಂದನ್ನು ಹಾಡಲು ಅವರು ಭಾಷೆಯಲ್ಲಿ ಯಾವುದೇ ಅಭಾಸವಾಗದಂತೆ ಎಚ್ಚರಿಕೆ ವಹಿಸಿದ್ದಾರೆ. ಸಾಮಾನ್ಯವಾಗಿ ಮಲಯಾಳಂ ಭಾಷಿಕರಿಗೆ ಕನ್ನಡ ಹಾಡು ಹಾಡುವಾಗ ಭಾಷೆ ಸಮಸ್ಯೆಯಾಗುತ್ತದೆ.
ಬೆಂಗಳೂರು: ರಾಜ್ಯದಲ್ಲಿ ವಿಪರೀತ ತಾಪಮಾನ ಏರಿಕೆಯ ನಡುವೆಯೂ ಈಗ ಕೆಲವು ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ವಾರಂತ್ಯಕ್ಕೆ ಹವಾಮಾನ ಹೇಗಿರಲಿದೆ ಇಲ್ಲಿದೆ ವರದಿ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಸೂರ್ಯ ಕೆಂಡದ ಮಳೆ ಸುರಿಸುತ್ತಿದ್ದಾನೆ. ಕೆಲವು ಜಿಲ್ಲೆಗಳಲ್ಲಿ ತಾಪಮಾನ ಗರಿಷ್ಠ ಮಟ್ಟಕ್ಕೆ ತಲುಪಿದೆ. ಇದರ ನಡುವೆಯೂ ಕೆಲವು ಜಿಲ್ಲೆಗಳಲ್ಲಿ ಸಣ್ಣ ಮಟ್ಟಿಗೆ ಮಳೆಯ ಸೂಚನೆಯಿದೆ. ವಾರಂತ್ಯಕ್ಕೆ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಕೊಡಗು, ಬೆಳಗಾವಿ, ಹಾವೇರಿ ಜಿಲ್ಲೆಗಳಲ್ಲಿ ಇಂದು ಅಥವಾ ನಾಳೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ವರದಿಗಳು ಸೂಚಿಸುತ್ತಿವೆ.
ವಿವಾಹಾದಿ ತೊಂದರೆಗಳಿದ್ದರೆ, ಮಾನಸಿಕವಾಗಿ ನೆಮ್ಮದಿ ಇಲ್ಲವೆಂದು ಅನಿಸಿದರೆ ಸುಬ್ರಹ್ಮಣ್ಯ ದೇವರ ಪ್ರಾರ್ಥನೆ ಮಾಡಬೇಕಾಗುತ್ತದೆ. ಇದಕ್ಕಾಗಿ ಈ ಪುಟ್ಟ ಸ್ತೋತ್ರವನ್ನು ಪ್ರತಿನಿತ್ಯ ಓದಿ.ನೀಲಕಂಠ ವಾಹನಂ ದ್ವಿಷಡ್ಬುಜಂ ಕಿರೀಟಿನಂಲೋಲ ರತ್ನ ಕುಂಡಲ ಪ್ರಬಾಭಿರಾಮ ಷಣ್ಮುಖಂಶೂಲ ಶಕ್ತಿ ದಂಡ ಕುಕ್ಕು ತಾಕ್ಷಮಾಲಿಕಾ ಧರಂಬಾಲಮೀಶ್ವರಂ ಕುಮಾರಶೈಲ ವಾಸಿನಂ ಭಜೇ ॥ ವಲ್ಲಿ ದೇವಯಾನಿಕಾ ಸಮುಲ್ಲಸಂತ ಮೀಶ್ವರಂಮಲ್ಲಿಕಾದಿ ದಿವ್ಯಪುಷ್ಪ ಮಾಲಿಕಾ ವಿರಾಜಿತಂಜಲ್ಲಲಿ ನಿನಾದ ಶಂಖ ವಾದನಪ್ರಿಯಂ ಸದಾಪಲ್ಲವಾರುಣಂ ಕುಮಾರಶೈಲ ವಾಸಿನಂ ಭಜೇ ॥ ಷಡಾನನಂ ಕುಂಕುಮ ರಕ್ತವರ್ಣಂಮಹಾಮತಿಂ ದಿವ್ಯ ಮಯೂರ ವಾಹನಂರುದ್ರಸ್ಯ ಸೂನುಂ ಸುರ ಸೈನ್ಯ ನಾಥಂಗುಹಂ ಸದಾ ಶರಣಮಹಂ ಭಜೇ ॥
ಕೋಲ್ಕತ್ತಾ: ಆರ್ ಜಿ ಕರ್ ರೇಪ್ ಆಂಡ್ ಮರ್ಡರ್ ಕೇಸ್ ನಲ್ಲಿ ಸಂತ್ರಸ್ತ ಯುವತಿಯ ತಾಯಿ ವೇದಿಕೆಯಲ್ಲಿ ಕಾಲಿಗೆ ಬೀಳಲು ಬಂದಾಗ ಪ್ರಧಾನಿ ಮೋದಿ ಮಾಡಿದ್ದೇನು ಈ ವಿಡಿಯೋ ನೋಡಿ. ಕೋಲ್ಕತ್ತಾದ ಆರ್ ಜಿ ಕರ್ ಆಸ್ಪತ್ರೆಯಲ್ಲಿ ಎರಡು ವರ್ಷಗಳ ಹಿಂದೆ ಟ್ರೈನಿ ವೈದ್ಯೆಯ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಲಾಗಿತ್ತು. ಟ್ರೈನಿ ವೈದ್ಯೆಯ ತಾಯಿ ರತ್ನ ದೇಬಾಂತ್ ಈ ಬಾರಿ ವಿಧಾನಸಭೆ ಚುನಾವಣೆಗೆ ಬಿಜೆಪಿಯಿಂದ ಸ್ಪರ್ಧಿಸುತ್ತಿದ್ದಾರೆ. ಇಂದು ಪ್ರಧಾನಿ ಮೋದಿ ಪಶ್ಚಿಮ ಬಂಗಾಲದಲ್ಲಿ ಚುನಾವಣಾ ಪ್ರಚಾರ ನಡೆಸಿದ್ದು ಈ ವೇಳೆ ರತ್ನ ಕೂಡಾ ವೇದಿಕೆಯಲ್ಲಿದ್ದರು.
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಬಿಜೆಪಿ ಮುಖಂಡನ ಪುತ್ರ ಕೃಷ್ಣ ಜೆ ರಾವ್ ಪ್ರಕರಣಕ್ಕೆ ಹೈಕೋರ್ಟ್ ಬಿಗ್ ಟ್ವಿಸ್ಟ್ ನೀಡಿದೆ. ಮದುವೆಯಾಗುವುದಾಗಿ ನಂಬಿಸಿ ಕೃಷ್ಣ ಜೆ ರಾವ್ ಯುವತಿಯ ಜೊತೆ ಲೈಂಗಿಕ ಸಂಪರ್ಕ ಬೆಳೆಸಿ ಪರಿಣಾಮ ಆಕೆ ಮಗುವಿಗೆ ಜನ್ಮ ನೀಡಿದ್ದಾಳೆ. ಯುವತಿ ಗರ್ಭಿಣಿ ಎಂದು ತಿಳಿದ ಮೇಲೆ ಕೃಷ್ಣ ಜೆ ರಾವ್ ನಂತರ ತನಗೂ ಆಕೆಗೂ ಸಂಬಂಧವಿಲ್ಲ ಎಂದು ಕೈ ಎತ್ತಿದ್ದ. ಪ್ರಕರಣ ಸಂಬಂಧ ಯುವತಿಗೆ ವಿಶ್ವಕರ್ಮ ಸಮಾಜ ಬೆಂಬಲಕ್ಕೆ ನಿಂತಿತ್ತು. ಸಾಕಷ್ಟು ಬಾರಿ ಕೃಷ್ಣ ಜೆ ರಾವ್ ಮನವೊಲಿಸಲು ಪ್ರಯತ್ನ ನಡೆಸಲಾಯಿತು. ಆದರೂ ಪ್ರಯೋಜನವಾಗಿರಲಿಲ್ಲ. ಕೊನೆಗೆ ಯುವತಿ ಕುಟುಂಬಸ್ಥರು ಕೋರ್ಟ್ ಮೊರೆ ಹೋಗಿದ್ದಾರೆ.
ಬೆಂಗಳೂರು: ಐಪಿಎಲ್ 2026 ರಲ್ಲಿ ಇಂದು ಗುಜರಾತ್ ಟೈಟನ್ಸ್ ವಿರುದ್ಧ ಟಾಸ್ ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮೊದಲು ಫೀಲ್ಡಿಂಗ್ ಆಯ್ದುಕೊಂಡಿದೆ. ಕಳೆದ ಪಂದ್ಯದಲ್ಲಿ ತವರಿನಲ್ಲಿ ಸೋತಿದ್ದ ಆರ್ ಸಿಬಿ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೆ ಜಾರಿತ್ತು. ಇದೀಗ ಮತ್ತೆ ಗೆಲುವಿನ ಹಳಿಗೆ ಮರಳಲು ಆರ್ ಸಿಬಿಗೆ ಅವಕಾಶ ಎದುರಾಗಿದೆ. ಇಂದು ಗೆದ್ದರೆ ಮತ್ತೆ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೆ ಏರಬಹುದಾಗಿದೆ. ಇಂದಿನ ಪಂದ್ಯಕ್ಕೆ ಆರ್ ಸಿಬಿ ಒಂದು ಬದಲಾವಣೆಯೊಂದಿಗೆ ಕಣಕ್ಕಿಳಿದಿದೆ. ಫಿಲ್ ಸಾಲ್ಟ್ ಗಾಯಗೊಂಡಿದ್ದು ಅವರ ಸ್ಥಾನಕ್ಕೆ ಬೆತೆಲ್ ಕಣಕ್ಕಳಿಯುತ್ತಿದ್ದಾರೆ.
ಕೋಲ್ಕತ್ತಾ: ಪಶ್ಚಿಮ ಬಂಗಾಲ ಚುನಾವಣೆ ಪ್ರಚಾರದ ವೇಳೆ ಪ್ರಧಾನಿ ಮೋದಿ ಪವಿತ್ರ ಹೂಗ್ಲಿ ನದಿಯಲ್ಲಿ ದೋಣಿ ವಿಹಾರ ನಡೆಸಿದ್ದಾರೆ. ಪಶ್ಚಿಮ ಬಂಗಾಲದ ವಿವಿಧ ಭಾಗಗಳಲ್ಲಿ ನಿನ್ನೆಯಿಂದ ಪ್ರಧಾನಿ ಮೋದಿ ಬಿರುಸಿನ ಪ್ರಚಾರ ನಡೆಸುತ್ತಿದ್ದಾರೆ. ರೋಡ್ ಶೋ, ಸಾರ್ವಜನಿಕ ಸಮಾವೇಶಗಳ ಮೂಲಕ ಮತದಾರರನ್ನು ಸೆಳೆಯುವ ಪ್ರಯತ್ನ ನಡೆಸುತ್ತಿದ್ದಾರೆ. ಇಂದು ಬೆಳಿಗ್ಗೆ ಹೂಗ್ಲಿ ನದಿಯಲ್ಲಿ ಮೋದಿ ದೋಣಿ ವಿಹಾರ ನಡೆಸಿದ್ದಾರೆ. ಈ ವೇಳೆ ಕ್ಯಾಮರಾ ಹಿಡಿದು ಸುಂದರ ಚಿತ್ರಗಳನ್ನು ಸೆರೆ ಹಿಡಿದಿದ್ದಾರೆ. ಪಶ್ಚಿಮ ಬಂಗಾಲ ಜನತೆಗೆ ಹೂಗ್ಲಿ ನದಿಯೊಂದಿಗೆ ವಿಶೇಷ ಅನುಬಂಧವಿದೆ. ಇದು ವಿಶೇಷ ಗಳಿಗೆಯಾಗಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
ನಡು ರಸ್ತೆಯಲ್ಲೇ ಪಬ್ಲಿಕ್ ಆಗಿ ಯುವ ಜೋಡಿಯೊಂದು ರೊಮ್ಯಾನ್ಸ್ ಮಾಡುತ್ತಿರುವ ವಿಡಿಯೋವೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು ಭಾರೀ ಟೀಕೆ ವ್ಯಕ್ತವಾಗಿದೆ. ಕರ್ನಾಟಕದ ಮಣಿಪಾಲದಲ್ಲಿ ಈ ಘಟನೆ ನಡೆದಿದೆ. ಇತ್ತೀಚೆಗೆ ಯುವ ಜನತೆ ವಿದೇಶೀ ಸಂಸ್ಕೃತಿಗೆ ಮಾರು ಹೋಗಿ ಅದನ್ನೇ ಅನುಕರಿಸುತ್ತಿದ್ದಾರೆ. ಇದೇ ರೀತಿ ಯುವ ಜೋಡಿಯೊಂದು ಮಣಿಪಾಲದ ನಡು ರಸ್ತೆಯಲ್ಲಿ ಮಾಡಿದ ಕೆಲಸಕ್ಕೆ ಜನ ಛೀಮಾರಿ ಹಾಕಿದ್ದಾರೆ. ಮಣಿಪಾಲದಲ್ಲಿ ಯುವ ಜೋಡಿಯೊಂದು ರಾತ್ರಿ ವೇಳೆ ಜನನಿಬಿಡ ರಸ್ತೆಯಲ್ಲಿ ನಿಂತು ಪರಸ್ಪರ ಆಲಂಗಿಸಿಕೊಂಡು ಅಸಭ್ಯವಾಗಿ ವರ್ತನೆ ಮಾಡುತ್ತಿದ್ದರು.
ನವದೆಹಲಿ: ನಿರೀಕ್ಷೆಯಂತೇ ಎಎಪಿ ತೊರೆದು ರಾಜ್ಯ ಸಭಾ ಸಂಸದ ರಾಘವ್ ಚಡ್ಡಾ ಬಿಜೆಪಿ ಸೇರಿಕೊಂಡಿದ್ದಾರೆ. ಈ ಮೊದಲು ಎಎಪಿ ಅವರನ್ನು ಸಂಸತ್ ನಲ್ಲಿ ಪಕ್ಷದ ಉಪ ನಾಯಕ ಸ್ಥಾನದಿಂದ ಕಿತ್ತು ಹಾಕಿತ್ತು. ರಾಘವ್ ಚಡ್ಡಾ ಸಂಸತ್ ನಲ್ಲಿ ಸದಾ ಜನಪರ ಪ್ರಶ್ನೆಗಳನ್ನು ಕೇಳುವುದರ ಮೂಲಕ ಜನಪ್ರಿಯರಾಗಿದ್ದರು. ಆದರೆ ಇತ್ತೀಚೆಗೆ ಅವರನ್ನು ಆಮ್ ಆದ್ಮಿ ಪಕ್ಷ ಪಕ್ಷದ ಉಪನಾಯಕನ ಸ್ಥಾನದಿಂದ ಕಿತ್ತು ಹಾಕಿತ್ತು. ಕೇಂದ್ರ ಸರ್ಕಾರದ ವಿರುದ್ಧ ಧ್ವನಿಯೆತ್ತಲ್ಲ ಎಂದು ಎಎಪಿ ಆಪಾದಿಸಿತ್ತು. ಇದರ ಬೆನ್ನಲ್ಲೇ ಅವರು ಬಿಜೆಪಿ ಸೇರಿಕೊಳ್ಳಬಹುದು ಎಂದು ಊಹಾಪೋಹಗಳಿತ್ತು. ಅದೀಗ ನಿಜವಾಗಿದೆ.
ಬೆಂಗಳೂರು: ಕರ್ನಾಟಕದಲ್ಲಿ ಮತ್ತೆ ಸಿಇಟಿ ಪರೀಕ್ಷೆ ವೇಳೆ ಜನಿವಾರ ವಿವಾದವಾಗಿದೆ. ಪರೀಕ್ಷಾ ಪ್ರಾಧಿಕಾರದ ಸ್ಪಷ್ಟ ಸೂಚನೆಯಿದ್ದರೂ ವಿದ್ಯಾರ್ಥಿಯ ಜನಿವಾರ ತೆಗೆಸಿದ್ದು ವಿವಾದಕ್ಕೆ ಕಾರಣವಾಗಿದ್ದು ಮೂವರು ಸಿಬ್ಬಂದಿಗಳನ್ನು ಅಮಾನತು ಮಾಡಲಾಗಿದೆ. ಬೆಂಗಳೂರಿನ ಮಡಿವಾಳದಲ್ಲಿರುವ ಕೃಪಾನಿಧಿ ಕಾಲೇಜಿನಲ್ಲಿ ಘಟನೆ ನಡೆದಿದೆ. ಈ ಸಂಬಂಧ ಓರ್ವ ಪುರುಷ ಮತ್ತು ಇಬ್ಬರು ಮಹಿಳಾ ಸಿಬ್ಬಂದಿಗಳನ್ನು ಅಮಾನತು ಮಾಡಲಾಗಿದೆ. ಈ ಸಿಬ್ಬಂದಿಗಳು ಬಲವಂತವಾಗಿ ವಿದ್ಯಾರ್ಥಿಯ ಜನಿವಾರ ತೆಗೆಸಿದ್ದಾರೆ ಎನ್ನಲಾಗಿದೆ. ಸಿಇಟಿ ಪರೀಕ್ಷೆ ವೇಳೆ ವಸ್ತ್ರಸಂಹಿತೆ ಬಗ್ಗೆ ಕೆಇಎ ಸ್ಪಷ್ಟ ನಿರ್ದೇಶನ ನೀಡಿದೆ. ಇದರಲ್ಲಿ ಜನಿವಾರ ತೆಗೆಸಬಾರದು ಎಂಬ ಸ್ಪಷ್ಟ ಸಂದೇಶವಿದೆ.
ಬೆಂಗಳೂರು: ಕಳೆದ ಕೆಲವು ದಿನಗಳಿಂದ ಚಿನ್ನದ ದರ ಏರಿಕೆ, ಇಳಿಕೆಯಾಗುತ್ತಲೇ ಇದೆ. ಇಂದು ಪರಿಶುದ್ಧ ಚಿನ್ನದ ದರ ಮತ್ತುಇತರೆ ಚಿನ್ನದ ದರ ಇಳಿಕೆಯಾಗಿದೆ. ಇಂದು ಪರಿಶುದ್ಧ ಚಿನ್ನದ ದರ ಮತ್ತು ಇತರೆ ಚಿನ್ನದ ದರ ವಿವರ ಇಲ್ಲಿದೆ ನೋಡಿ. ಚಿನ್ನದ ದರ ಏರಿಕೆಕಳೆದ ವಾರ ಪರಿಶುದ್ಧ ಚಿನ್ನದ ದರ ಸತತವಾಗಿ ಬೆಲೆ ಏರಿಳಿಕೆಯಾಗುತ್ತಲೇ ಇತ್ತು. ಆದರೆ ವಾರಂತ್ಯಕ್ಕೆ ಪರಿಶುದ್ಧ ಚಿನ್ನದ ದರದಲ್ಲಿ ಕೊಂಚ ಇಳಿಕೆಯಾಗಿತ್ತು. ಪರಿಶುದ್ಧ ಚಿನ್ನದ ದರ ವಾರಂತ್ಯಕ್ಕೆ 1,56,605.00 ರೂ.ಗಳಿತ್ತು. ಆದರೆ ಇಂದು ಇಳಿಕೆಯಾಗಿದ್ದು 1,55,135.00 ರೂ.ಗಳಷ್ಟಿದೆ.
ಬೇಸಿಗೆಯ ಬೇಗೆಗೆ ಶೆಖೆಯಾಗುತ್ತದೆಂದು ಟೆರೇಸ್ ಮೇಲೆ ಮಲಗುವುದು ಎಷ್ಟು ಅಪಾಯಕಾರಿ ಎಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿರುವ ಈ ವಿಡಿಯೋನೇ ಸಾಕ್ಷಿ. ಬೇಸಿಗೆ ಬಂದಾಗ ಮನೆಯೊಳಗೆ ಮಲಗಲು ಶೆಖೆಯಾಗುತ್ತದೆಂದು ಕೆಲವರು ಹೊರಗೆ ಅಥವಾ ಟೆರೇಸ್ ಮೇಲೆ ಮಲಗುತ್ತಾರೆ. ಕೆಲವರು ಬಾಗಿಲು ತೆರೆದು ಮಲಗಿ ಕಳ್ಳತನವಾದ ಘಟನೆಗಳೂ ಸಾಕಷ್ಟು ನಡೆದಿವೆ. ಇಂತಹದ್ದೇ ಒಂದು ಅಪಾಯಕಾರೀ ವಿಡಿಯೋ ಇದಾಗಿದೆ. ಓರ್ವ ವ್ಯಕ್ತಿ ಬೇಸಿಗೆಯ ಬೇಗೆ ಎಂದು ಟೆರೇಸ್ ಮಲಗಿ ಹಾಯಾಗಿ ನಿದ್ರೆ ಮಾಡುತ್ತಿರುತ್ತಾರೆ. ಆದರೆ ಈ ವೇಳೆ ಬೃಹತ್ ಗಾತ್ರದ ಹಾವೊಂದು ಮೈಮೇಲೆ ಬರುತ್ತದೆ.
ಬೆಂಗಳೂರು: ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ದಲಿತರಿಗೆ ಒಳಮೀಸಲಾತಿ ನೀಡುವ ಬದಲು ಗೊಂದಲ ಸೃಷ್ಟಿಸಿ ವಿಷಬೀಜ ಬಿತ್ತಿ ಬೀದಿಯಲ್ಲಿ ನಿಂತು ಬಡಿದಾಡುವಂತೆ ಮಾಡಿದೆ. ನಾಡಿನ ಜನ ಇವರನ್ನು ಕ್ಷಮಿಸುವುದಿಲ್ಲ ಎಂದು ಮಾಜಿ ಉಪ ಮುಖ್ಯಮಂತ್ರಿ ಹಾಗೂ ಸಂಸದ ಗೋವಿಂದ ಕಾರಜೋಳ ಅವರು ಆರೋಪಿಸಿದ್ದಾರೆ.ರಾಜ್ಯ ಬಿಜೆಪಿ ಕಾರ್ಯಾಲಯದಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಅಹಿಂದ ನಾಯಕ ಎನಿಸಿಕೊಳ್ಳಲು ಯೋಗ್ಯತೆ ಇಲ್ಲ. ದಲಿತ ಸಮುದಾಯಗಳಿಗೆ ಅವರು ದೊಡ್ಡ ಮೋಸ ಮಾಡಿದ್ದಾರೆ. 30 ವರ್ಷಗಳಿಂದ ರಾಜ್ಯದಲ್ಲಿ ಒಳಮೀಸಲಾತಿಗೆ ಹೋರಾಟ ನಡೆಯುತ್ತಿದೆ. ಜನಸಂಖ್ಯೆಗೆ ಅನುಗುಣವಾಗಿ ಎಸ್ಸಿ ಮತ್ತು ಎಸ್ಟಿ ಮೀಸಲಾತಿ ಹೆಚ್ಚಳ ಆಗಬೇಕು ಎಂಬ ಬೇಡಿಕೆ ಇದೆ.
ಅಮೆರಿಕಾದಲ್ಲಿ ಅಣ್ಣಾವ್ರು ಹಾಡಿದ ಸುಪ್ರಸಿದ್ಧ ಕನ್ನಡ ಹಾಡನ್ನು ಹಾಡಿ ಮಲಯಾಳಂ ನಟ ಮೋಹನ್ ಲಾಲ್ ಕನ್ನಡದ ಮೇಲಿನ ಅಭಿಮಾನ ಮೆರೆದಿದ್ದಾರೆ. ಮಲಯಾಳಂನ ಕಂಪ್ಲೀಟ್ ಆಕ್ಟರ್ ಎಂದೇ ಖ್ಯಾತರಾಗಿರುವ, ದಾದಾ ಸಾಹೇಬ್ ಫಾಲ್ಕೆ ಪುರಸ್ಕೃತ ನಟ ಮೋಹನ್ ಲಾಲ್ ಇತ್ತೀಚೆಗೆ ಅಮೆರಿಕಾದಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ದರು. ಈ ವೇಳೆ ಅವರು ಡಾ ರಾಜ್ ಕುಮಾರ್ ಹಾಡಿದ್ದ ಎಂದೆಂದೂ ನಿನ್ನನು ಮರೆತು ಹಾಡನ್ನು ಹಾಡಿದ್ದಾರೆ. ಸಹ ಗಾಯಕಿಯೊಂದಿಗೆ ಸುಶ್ರಾವ್ಯವಾಗಿ, ಅಕ್ಷರ ಕೊಂಚವೂ ತಪ್ಪಿಲ್ಲದೇ ಮೋಹನ್ ಲಾಲ್ ಹಾಡಿದಾಗ ಪ್ರೇಕ್ಷಕರು ಭಾರೀ ಚಪ್ಪಾಳೆ ತಟ್ಟಿದ್ದಾರೆ. wh
ಪ್ರತೀ ಬಾರಿ ಎಸ್ಎಸ್ಎಲ್ ಸಿ, ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಬಂದಾಗ ಕಲಬುರಗಿ ಜಿಲ್ಲೆ ಕೊನೆಯ ಸ್ಥಾನಗಳಲ್ಲೇ ಇರುತ್ತದೆ. ಕಲಬುರಗಿ ಜಿಲ್ಲೆಗೆ ಕೊನೆಯ ಸ್ಥಾನ ಬರಲು ಯಾವುದೆಲ್ಲಾ ಕಾರಣಗಳಿರಬಹುದು ಇಲ್ಲಿದೆ ಒಂದು ವಿಶ್ಲೇಷಣೆ. . ಶಿಕ್ಷಕರ ಕೊರತೆ ಮತ್ತು ಶೈಕ್ಷಣಿಕ ಗುಣಮಟ್ಟಕಲಬುರಗಿ ಸೇರಿದಂತೆ ಕಲ್ಯಾಣ ಕರ್ನಾಟಕ ಭಾಗದ ಶೈಕ್ಷಣಿಕ ವ್ಯವಸ್ಥೆಯು ಎದುರಿಸುತ್ತಿರುವ ಅತಿದೊಡ್ಡ ಸಮಸ್ಯೆ ಶಿಕ್ಷಕರ ಅಭಾವ. ಖಾಲಿ ಹುದ್ದೆಗಳು: ಸರ್ಕಾರಿ ಶಾಲೆ ಮತ್ತು ಕಾಲೇಜುಗಳಲ್ಲಿ ಗಣಿತ, ವಿಜ್ಞಾನ ಮತ್ತು ಇಂಗ್ಲಿಷ್ನಂತಹ ಪ್ರಮುಖ ವಿಷಯಗಳ ಶಿಕ್ಷಕರ ನೂರಾರು ಹುದ್ದೆಗಳು ಹಲವು ವರ್ಷಗಳಿಂದ ಖಾಲಿ ಇವೆ.
'ಮಿಲ್ಕಿ ಬ್ಯೂಟಿ' ಮೈಮಾಟ ಕುರಿತು ಹೇಳಿಕೆ ನೀಡಿ ವಿವಾದಕ್ಕೆ ಕಾರಣವಾಗಿದ್ದ ಬಾಲಿವುಡ್ ಹಿರಿಯ ನಟ ಅನ್ನು ಕಪೂರ್ ಇದೀಗ ನೆಟ್ಟಿಗರ ಆಕ್ರೋಶಕ್ಕೆ ಮಣಿದು ಕೊನೆಗೂ ನಟಿ ಬಳಿ ಕ್ಷಮೆಯಾಚನೆ ಮಾಡಿದ್ದಾರೆ. ಕಳೆದ ವರ್ಷ ತಮನ್ನಾ ಭಾಟಿಯಾ ಬಗ್ಗೆ ನಟ ನೀಡಿದ ಹೇಳಿಕೆಗೆ ಇದೀಗ ಕ್ಷಮೆಯನ್ನು ಕೋರಿದ್ದಾರೆ. ಶುಭಂಕರ್ ಮಿಶ್ರಾ ಅವರೊಂದಿಗಿನ ಹಿಂದಿನ ಸಂವಾದದ ಸಮಯದಲ್ಲಿ ವಿವಾದವು ಪ್ರಾರಂಭವಾಯಿತು, ಅಲ್ಲಿ ಆಜ್ ಕಿ ರಾತ್ನಲ್ಲಿ ತಮನ್ನಾ ಅವರ ಅಭಿನಯಕ್ಕೆ ಅಣ್ಣು ಪ್ರತಿಕ್ರಿಯಿಸಿದರು, "ಮಾಶಲ್ಲಾ ಕ್ಯಾ ದುಧಿಯಾ ಬದನ್ ಹೈ (ಓ ಮೈ ಗಾಡ್, ಅವಳು ಎಂತಹ ಹಾಲಿನ ದೇಹವನ್ನು ಹೊಂದಿದ್ದಾಳೆ)" ಎಂದು ಹೇಳುವ ಮೂಲಕ ಆನ್ಲೈನ್ನಲ್ಲಿ ವಿವಾದ ಸೃಷ್ಟಿಸಿದ್ದರು.
ಬೆಂಗಳೂರು: ಐಪಿಎಲ್ 2026 ರಲ್ಲಿ ಇಂದು ರಾಯಲ್ಸ್ ಚಾಲೆಂಜರ್ಸ್ ಬೆಂಗಳೂರು ತಂಡ ಗುಜರಾತ್ ಟೈಟನ್ಸ್ ವಿರುದ್ಧ ಆಡಲಿದ್ದು, ಅಂಕಪಟ್ಟಿಯಲ್ಲಿ ರಾಜಸ್ಥಾನ್ ಹಿಂದಿಕ್ಕಲು ಉತ್ತಮ ಅವಕಾಶ ಎದುರಾಗಿದೆ. ಕಳೆದ ಪಂದ್ಯವನ್ನು ಸೋತಿರುವ ಆರ್ ಸಿಬಿ ಇದೀಗ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ. ಕಳೆದ ಪಂದ್ಯದಲ್ಲಿ ಗೆಲುವು ಕಂಡಿದ್ದ ರಾಜಸ್ಥಾನ್ ಎರಡನೇ ಸ್ಥಾನದಲ್ಲಿದೆ. ಇಂದು ಏಳನೇ ಪಂದ್ಯವಾಡಲಿರುವ ಆರ್ ಸಿಬಿ ಗೆದ್ದರೆ ಎರಡನೇ ಸ್ಥಾನಕ್ಕೇರುವ ಅವಕಾಶವಿದೆ. ಎಲ್ಲಾ ಪಂದ್ಯಗಳಲ್ಲೂ ಟಾಸ್ ಪ್ರಮುಖ ಪಾತ್ರ ವಹಿಸುತ್ತಿದೆ. ಇಂದು ಕೂಡಾ ಆರ್ ಸಿಬಿ ಟಾಸ್ ಗೆಲ್ಲುವುದು ತುಂಬಾ ಮುಖ್ಯವಾಗಲಿದೆ.
ಈಚೆಗೆ ಸಾಮಾಜಿ ಜಾಲತಾಣದಲ್ಲಿ ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಭೋಸ್ಲೆ ಮತ್ತು ನಟ ಫರ್ಮಾನ್ ಖಾನ್ ಅವರು ವಿವಾಹವು ಭಾರೀ ಚರ್ಚೆಗೆ ಕಾರಣವಾಗಿತ್ತು. ಈ ಪ್ರಕರಣ ಪೊಲೀಸ್ ಠಾಣಾ ಮೆಟ್ಟಿಲೇರಿತ್ತು. ಮೊನಾಲಿಸಾ "ಲವ್ ಜಿಹಾದ್" ಗೆ ಬಲಿಯಾಗಬಹುದು ಎಂದು ಸಾಮಾಜಿಕ ಮಾಧ್ಯಮದಲ್ಲಿ ಹಲವಾರು ಜನರು ಆರೋಪಿಸಿದ್ದಾರೆ. ಆಕೆ ಅಪ್ರಾಪ್ತ ವಯಸ್ಸಿನವಳು ಮತ್ತು ಫರ್ಮಾನ್ ತನ್ನನ್ನು ಮದುವೆಯಾಗುವಂತೆ ಆಮಿಷ ಒಡ್ಡಿದ ಎಂದು ಆಕೆಯ ಕುಟುಂಬ ವರದಿ ಮಾಡಿದೆ. ಈ ಹಕ್ಕುಗಳ ನಂತರ, ಮದುವೆಯ ಸಮಯದಲ್ಲಿ ಮೊನಾಲಿಸಾ ಅಪ್ರಾಪ್ತ ವಯಸ್ಕಳಾಗಿದ್ದಳು ಎಂದು ಪರಿಶಿಷ್ಟ ಪಂಗಡಗಳ ರಾಷ್ಟ್ರೀಯ ಆಯೋಗ ತೀರ್ಮಾನಿಸಿದ ನಂತರ ಫರ್ಮಾನ್ ಖಾನ್ ವಿರುದ್ಧ POCSO ಪ್ರಕರಣವನ್ನು ದಾಖಲಿಸಲಾಯಿತು.
ಹುಬ್ಬಳ್ಳಿ: ಆನ್ಲೈನ್ ಗೇಮ್ಗೆ ದಾಸನಾಗಿದ್ದ ಪುತ್ರನಿಂದ ತಾಯಿ ಮೊಬೈಲ್ ಕಿತ್ತುಕೊಂಡಲೆಂದು ಮನನೊಂದು ಬಾಲಕ ನೇಣಿಗೆ ಶರಣಾಗಿರುವ ಆಘಾತಕಾರಿ ಘಟನೆ ಹುಬ್ಬಳ್ಳಿಯ ಉದಯನಗರದಲ್ಲಿ ವರದಿಯಾಗಿದೆ. 14 ವರ್ಷದ ಸಮರ್ಥ್ ಆತ್ಮಹತ್ಯೆ ಮಾಡಿಕೊಂಡ ಬಾಲಕ. ಉದಯನಗರದ ನಿವಾಸಿಯಾದ ಸಮರ್ಥ್ ಕಳೆದ ಕೆಲವು ದಿನಗಳಿಂದ ‘ಫ್ರೀಫೈರ್’ ನಂತಹ ಆನ್ಲೈನ್ ಗೇಮ್ಗಳಿಗೆ ವಿಪರೀತ ಅಡಿಕ್ಟ್ ಆಗಿದ್ದ. ಗುರುವಾರ ರಾತ್ರಿ ಮೊಬೈಲ್ ಗೇಮ್ನಲ್ಲಿ ನಿರತವಾಗಿರುವುದನ್ನು ನೋಡಿದ ತಾಯಿ ಬುದ್ದಿ ಮಾತು ಹೇಳಿ, ಮೊಬೈಲ್ ಅನ್ನು ಕಿತ್ತುಕೊಂಡಿದ್ದಾಳೆ.
ಪಶ್ಚಿಮ ಬಂಗಾಳ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಬಿಜೆಪಿಯಲ್ಲಿ ಹೊರಗಿನವರು ಎಂದು ಗೇಳಿ ಮಾಡಿದ ಬಗ್ಗೆ ಕೌಂಟರ್ ಕೊಟ್ಟ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು, ರಾಜ್ಯದ ಮುಂದಿನ ಮುಖ್ಯಮಂತ್ರಿ ಬಂಗಾಳದಲ್ಲಿ ಹುಟ್ಟಿ ಬೆಳೆದ ಬಿಜೆಪಿ ಕಾರ್ಯಕರ್ತ ಎಂದು ಪ್ರತಿಪಾದಿಸಿದರು. ಸಿಎಂ ಮಮತಾ ಅವರ ಸೋದರಳಿಯ ಹಾಗೂ ಟಿಎಂಸಿ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಅವರು ಫಲಿತಾಂಶ ಪ್ರಕಟವಾದ ಬಳಿಕ ಅಧಿಕಾರದಲ್ಲಿ ಇರುವುದಿಲ್ಲ ಎಂದು ಅಮಿತ್ ಶಾ ವಾಗ್ದಾಳಿ ನಡೆಸಿದರು.ಕೋಲ್ಕತ್ತಾದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಶಾ, ಬಂಗಾಳದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ
ಪಶ್ಚಿಮ ಬಂಗಾಳ: ಪಶ್ಚಿಮ ಬಂಗಾಳದಲ್ಲಿ ಜಲ್ಮುರಿ ರಾಜಕೀಯ ಇನ್ನೂ ಕೊನೆಗೊಂಡಿಲ್ಲ. ಸಿಎಂ ಮಮತಾ ಬ್ಯಾನರ್ಜಿ ಅವರು ಇದೇ ವಿಚಾರವಾಗಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿಯನ್ನ ಟೀಕೆ ಮಡಿದರು. ಚುನಾವಣಾ ರ್ಯಾಲಿಯಲ್ಲಿ ಜಾರ್ಗ್ರಾಮ್ನಲ್ಲಿ "ಝಲ್ ಮುರಿ" ತಿಂದ ಬಗ್ಗೆ ಟೀಕೆ ಮಾಡಿದ ಮಮತಾ ಅಂಗಡಿಯಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಸಲಾಗಿದೆ. ಭದ್ರತೆಯೊಂದಿಗೆ ಮೊದಲು ಟಿವಿ ಕ್ಯಾಮೆರಾಗಳು ಮತ್ತು ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಿದ್ದರು. ಅವರು ಭದ್ರತೆಗಾಗಿ ಮನೆಯಿಂದಲೇ ಜಲ್ ಮುರಿ ತಯಾರಿಸಿ ಅಂಗಡಿಯವರಿಗೆ ₹ 10 ನೀಡಿದ್ದರು. ವಾಸ್ತವವಾಗಿ ನಾನು ಯಾವುದೇ ನೋಟುಗಳನ್ನು ತೆಗೆದುಕೊಂಡು ಹೋಗುವುದಿಲ್ಲ ಎಂದು ಅವರು ಹೇಳಿದರು.
ನವದೆಹಲಿ: ಪ್ರಯಾಣಿಕರ ದಟ್ಟಣೆಯ ನಿರೀಕ್ಷಿತ ಉಲ್ಬಣವನ್ನು ನಿರ್ವಹಿಸಲು ಮತ್ತು ಹೆಚ್ಚಿನ ಬೇಡಿಕೆಯ ಮಾರ್ಗಗಳಲ್ಲಿ ಸುಗಮ ಸಂಪರ್ಕವನ್ನು ಖಚಿತಪಡಿಸಿಕೊಳ್ಳಲು ಭಾರತೀಯ ರೈಲ್ವೇಯು ಬೇಸಿಗೆಯ ಗರಿಷ್ಠ ಪ್ರಯಾಣದ ಅವಧಿಯಲ್ಲಿ 18,262 ವಿಶೇಷ ರೈಲು ಟ್ರಿಪ್ಗಳನ್ನು ನಿರ್ವಹಿಸಲು ಸಿದ್ಧವಾಗಿದೆ ಎಂದು ರೈಲ್ವೆ ಸಚಿವಾಲಯ ಶುಕ್ರವಾರ ತಿಳಿಸಿದೆ.ಎಂಆರ್ ಅಶ್ವಿನಿ ವೈಷ್ಣವ್ ಅವರು ನವದೆಹಲಿಯಲ್ಲಿ ಬೇಸಿಗೆ ವಿಶೇಷ ರೈಲುಗಳ ಕಾರ್ಯಾಚರಣೆಯನ್ನು ಪರಿಶೀಲಿಸಿದ್ದಾರೆ, ಏಕೆಂದರೆ ಭಾರತೀಯ ರೈಲ್ವೇಯು ಗರಿಷ್ಠ ಬೇಸಿಗೆ ಪ್ರಯಾಣದ ಅವಧಿಯಲ್ಲಿ ಪ್ರಯಾಣಿಕರ ಚಲನೆಯನ್ನು ಸರಾಗಗೊಳಿಸುವ ಮತ್ತು ಹೆಚ್ಚಿನ ಬೇಡಿಕೆಯ ಮಾರ್ಗಗಳಲ್ಲಿ ಸಂಪರ್ಕವನ್ನು ಬಲಪಡಿಸಲು 18,262 ವಿಶೇಷ ರೈಲು ಪ್ರಯಾಣಗಳನ್ನು ಯೋಜಿಸಿದೆ ಎಂದು ರೈಲ್ವೇ ಸಚಿವಾಲಯವು ಎಕ್ಸ್ನಲ್ಲಿ ಬರೆದಿದೆ.
ಬೀದರ್: ಸಿಡಿಲು ಬಡಿದು ಇಬ್ಬರು ಯುವ ರೈತರು ದಾರುಣವಾಗಿ ಸಾವನ್ನಪ್ಪಿದ ಘಟನೆ ಬೀದರ್ ಜಿಲ್ಲೆಯ ಭಾಲ್ಕಿ ತಾಲ್ಲೂಕಿನ ನಾವದಗಿ ಗ್ರಾಮದಲ್ಲಿ ವರದಿಯಾಗಿದೆ. ಮೃತ ಯುವಕರನ್ನು ನಾವದಗಿ ಗ್ರಾಮದ ರೇವಣಸಿದ್ದ (28) ಮತ್ತು ಜೇವರ್ಗಿಯ ಯಲ್ಲಾಲಿಂಗ (28)ಎಂದು ಗುರುತಿಸಲಾಗಿದೆ. ಗುರುವಾರ ಸಂಜೆ (ಏ.23) ಜಮೀನಿನಲ್ಲಿ ಕೃಷಿ ಕೆಲಸ ಮಾಡುತ್ತಿದ್ದಾಗ ಮಳೆ ಶುರುವಾಗಿದೆ. ಹೀಗಾಗಿ ಇಬ್ಬರು ರೈತರು ಜಮೀನಿನಲ್ಲಿದ್ದ ಮಾವಿನ ಮರದ ಕಳಗಡೆ ನಿಂತಿದ್ದರು. ಈ ವೇಳೆ ಮಾವಿನ ಮರಕ್ಕೆ ಸಿಡಿಲು ಅಪ್ಪಳಿಸಿದ್ದು, ಇಬ್ಬರು ಸ್ಥಳದಲ್ಲೇ
ಟೆಹರಾನ್: ಅಮೆರಿಕ-ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಿಂದ ಇರಾನ್ನ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ ಗಾಯಗೊಂಡಿರುವ ಅವರು ಪ್ಲಾಸ್ಟಿಕ್ ಸರ್ಜರಿ ಅಗತ್ಯವಿದೆ ಎಂದು ವರದಿಯಲ್ಲಿ ತಿಳಿದುಬಂದಿದೆ.ಗಾಯಗೊಂಡಿರುವ ಮೊಜ್ತಾಬಾ ಅವರ ಮುಖ ಮತ್ತು ತುಟಿಗಳು ತೀವ್ರವಾಗಿ ಸುಟ್ಟುಹೋಗಿವೆ. ಈ ಗಾಯಗಳಿಂದ ಅವರು ಮಾತನಾಡಲು ಕಷ್ಟವಾಗುತ್ತಿದ್ದು, ಮುಖದ ಪುನರ್ರಚನೆಗಾಗಿ ಶೀಘ್ರದಲ್ಲೇ ಪ್ಲಾಸ್ಟಿಕ್ ಸರ್ಜರಿ ಮಾಡಲು ಇರಾನ್ ಆಡಳಿತ ಮುಂದಾಗಿದೆ ಎಂದು ತಿಳಿದುಬಂದಿದೆ.
ಮಲಯಾಳಂ ಚಿತ್ರರಂಗದ ಖ್ಯಾತ ನಟ ಮೋಹನ್ಲಾಲ್ ಅವರು ಯುಎಸ್ನಲ್ಲಿ ಕನ್ನಡ ಹಾಡನ್ನು ಹಾಡುವ ಮೂಲಕ ಎಲ್ಲರ ಮನಗೆದ್ದಿದ್ದಾರೆ. ಕನ್ನಡ ಹಾಡಿನ ಬಗ್ಗೆ ವಿಶೇಷ ಒಲವಿರುವ ಮೋಹನ್ ಲಾಲ್ ಅವರು ಈ ಹಿಂದೆ ಎಂದೆಂದೂ ನಿನ್ನನು ಮರೆತು ಬದುಕಿರಲಾರೆ ಹಾಡನ್ನು ನೋಡುತ್ತಾ ಆನಂದಿಸಿದ ವಿಡಿಯೋ ವೈರಲ್ ಆಗಿತ್ತು. ಇದೀಗ ಅದೇ ಹಾಡಿಗೆ ಯುಎಸ್ನ ವೇದಿಕೆಯಲ್ಲಿ ಗಾಯಕಿಯೊಂದಿಗೆ ಧ್ವನಿಯಾಗಿದ್ದಾರೆ. ಬಗ್ಗೆ ಒಲವು ಇದೆ. ಅದರಲ್ಲೂ ಡಾ. ರಾಜ್ಕುಮಾರ್ ಸಿನಿಮಾಗಳ ಬಗ್ಗೆ ವಿಶೇಷ ಪ್ರೀತಿ ಇದೆ. ಇತ್ತೀಚೆಗೆ ಅಮೆರಿಕದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮೋಹನ್ಲಾಲ್ ಅವರು ಭಾಗಿ ಆಗಿದ್ದಾರೆ. ವೇದಿಕೆಯಲ್ಲಿ ಅವರು ಲೈವ್
ಸಿಎಂ ಸಿದ್ದರಾಮಯ್ಯನವರು ಗುರುವಾರ ರಾತ್ರಿ ಆಪ್ತರ ಜತೆ ಔತಣಕೂಟದಲ್ಲಿ ಭಾಗಿಯಾಗಿ, ಹಲವು ವಿಷಯಗಳ ಬಗ್ಗೆ ಚರ್ಚೆ ನಡೆಸಿದ್ದಾರೆಂಬ ಚರ್ಚೆ ರಾಜಕೀಯ ವಲಯದಲ್ಲಿದೆ. ಕನ್ನಿಂಗ್ ಹ್ಯಾಮ್ ರಸ್ತೆಯಲ್ಲಿರುವ ಪ್ರಭಾವಿ ಸಚಿವರೊಬ್ಬರಿಗೆ ಸೇರಿದ ವಸತಿಸಂಕೀರ್ಣದಲ್ಲಿ ಸಭೆ ನಡೆಸಿರುವ ಸಿದ್ದರಾಮಯ್ಯ ಅವರು ಮುಂದಿನ ಕಾರ್ಯತಂತ್ರಗಳ ಕುರಿತು ಬಗ್ಗೆ ಚರ್ಚೆ ನಡೆಸಿದ್ದಾರೆ.ಇನ್ನೂ ಈ ಔತಣಕೂಟದಲ್ಲಿ ಸಚಿವರಾದ ಜಿ. ಪರಮೇಶ್ವರ, ಎಚ್.ಸಿ. ಮಹದೇವಪ್ಪ, ಸತೀಶ ಜಾರಕಿಹೊಳಿ, ಬಿ.ಝೆಡ್. ಜಮೀರ್
ರಾಜಕಾರಣಿ ನಟ ಕಮಲ್ ಹಾಸನ್ ಮತ್ತು ಶ್ರುತಿ ಹಾಸನ್ ಅವರು ತಮಿಳುನಾಡು ಚುನಾವಣೆಯಲ್ಲಿ ಮತದಾನ ಮಾಡುವ ಮೂಲಕ ಚೆನ್ನೈನ ಮತದಾನ ಕೇಂದ್ರದಲ್ಲಿ ಕಾಣಿಸಿಕೊಂಡರು. ಈ ವೇಳೆಯ ನಟನ ನಡೆ ಇದೀಗ ಭಾರೀ ಟೀಕೆಗೆ ಕಾರಣವಾಗಿದೆ. ಸರತಿ ಸಾಲನ್ನು ಬಿಟ್ಟು ಕಮಲ್ ಹಾಸನ್ ಅವರು ಮುಂದೆ ಹೋಗಿ ಮತ ಚಲಾಯಿಸಿರುವ ನಟನ ವಿರುದ್ಧ ಜನಸಾಮಾನ್ಯರು ಗರಂ ಆಗಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಅದರಲ್ಲಿ ನಟನಿಗೆ ಉಪದೇಶ ನೀಡಲು ಮಾತ್ರ ಗೊತ್ತಿರುವುದು, ಅದನ್ನು ಅನುಸರಿಸಲು ತಿಳಿದಿಲ್ಲ ಎಂದು ಆಕ್ರೋಶ ಹೊರಹಾಕಿದ್ದಾರೆ.