ಬೆಂಗಳೂರು: ಮಹಿಳಾ ಮೀಸಲಾತಿ ವಿಚಾರದಲ್ಲಿ ಭಾರತೀಯ ಜನತಾ ಪಾರ್ಟಿಯ ನಿಲುವು ಅಂದಿನಿಂದ ಇಂದಿನವರೆಗೆ ಒಂದೇ ಆಗಿದೆ. ಸಂಸತ್ತಿನಲ್ಲಿ ಈ ಹಿಂದೆ ಮಂಡನೆಯಾದಾಗೆಲ್ಲ ಬಿಜೆಪಿ ವಿರೋಧ ಪಕ್ಷದಲ್ಲಿದ್ದರೂ ಬೆಂಬಲ ನೀಡಿದೆ. ಆದರೆ ನರೇಂದ್ರ ಮೋದಿ ಅವರಿಗೆ ಇದರ ಯಶಸ್ಸಿನ ಲಾಭ ಸಿಗುತ್ತದೆ ಎಂಬ ಭಯದಲ್ಲಿ ಕಾಂಗ್ರೆಸ್ ವಿರೋಧ ಮಾಡುತ್ತಿದೆ ಎಂದು ಸಂಸದ ತೇಜಸ್ವಿ ಸೂರ್ಯ ಅವರು ವಿಶ್ಲೇಷಿಸಿದ್ದಾರೆ. ಮಹಿಳಾ ಮೀಸಲು ಮಸೂದೆಗೆ ಲೋಕಸಭೆಯಲ್ಲಿ ವಿರೋಧ ಮಾಡಿದ ಕಾಂಗ್ರೆಸ್ ಧೋರಣೆ ಖಂಡಿಸಿ ಜಯನಗರದ ಆರ್.ವಿ ಡೆಂಟಲ್ ಕಾಲೇಜಿನ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಸಬಲ ನಾರಿ- ಸಮರ್ಥ ಭಾರತ ಸಂವಾದದಲ್ಲಿ ಅವರು ಮಾತನಾಡಿದರು.
ತಮಿಳುನಾಡಿನಲ್ಲಿ ಕಾಂಗ್ರೆಸ್ನ ಪ್ರಚಾರದಲ್ಲಿ ರಾಹುಲ್ ಗಾಂಧಿ ಹೇಳಿರುವ ಭಾಷಣದ ಅರ್ಥವನ್ನೇ ಟ್ರಾನ್ಸ್ಲೇಟರ್ ಉಲ್ಟಾ ಮಾಡಿ ಹೇಳಿ ಇದೀಗ ಟ್ರೋಲ್ಗೆ ಒಳಗಾಗಿದ್ದಾರೆ. ಮುಂದಿನ ವಾರ 23 ರಂದು ತಮಿಳುನಾಡು ವಿಧಾನಸಭಾ ಚುನಾವಣೆ ನಡೆಯಲಿದ್ದು, ಭಾರತದ ಪ್ರತಿಯೊಂದು ಪಕ್ಷಗಳು ಚುನಾವಣಾ ಪ್ರಚಾರದಲ್ಲಿ ಬ್ಯುಸಿಯಾಗಿದೆ. ಡಿಎಂಕೆ - ಕಾಂಗ್ರೆಸ್ ಮೈತ್ರಿಕೂಟದ ಬೆಂಬಲವಾಗಿ ನಿನ್ನೆ ರಾಣಿಪೇಟೆಯಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಭಾಗವಹಿಸಿ ಜನರನ್ನು ಉದ್ದೇಶಿಸಿ, ಬಿಜೆಪಿಯನ್ನು ಟೀಕಿಸಿ ಮಾತನಾಡಿದರು.
ಆರ್ಸಿಬಿ ವಿರುದ್ಧದ ಪಂದ್ಯಾಟದ ವೇಳೆ ಅಕ್ಷರ್ ಪಟೇಲ್ ವೇಳೆ ಗಾಯಗೊಂಡರು. ಈ ವೇಳೆ ಅವರು ಆಟವಾವನ್ನು ಅಂತ್ಯ ಮಾಡಕ್ಕಾಗದೆ ಗ್ರೌಂಡ್ನಿಂದ ಹೊರನಡೆದರು. ಈ ಸಂದರ್ಭದಲ್ಲಿ ಕೃನಾಲ್ ಪಾಂಡ್ಯ ಅವರು ಕ್ರೀಡಾಮನೋಭಾವಕ್ಕೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ. ಗ್ರೌಂಡ್ನಿಂದ ಹೊರನಡೆಯಲು ಕಷ್ಟಪಡುತ್ತಿದ್ದ ಅಕ್ಷರ್ ಪಟೇಲ್ಗೆ ಕೃನಾಲ್ ಅವರು ಹೆಗಲು ಕೊಟ್ಟು ನಡೆಯಲು ಸಹಾಯ ಮಾಡಿದರು. ಇದನ್ನು ನೋಡಿದ ಕ್ರೀಡಾಭಿಮಾನಿಗಳು ಭಾರೀ ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದಾರೆ.
ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆರ್ಸಿಬಿ ವಿರುದ್ಧ ನಿನ್ನೆ ನಡೆದ ಪಂದ್ಯಾಟ ಕೆಎಲ್ ರಾಹುಲ್ಗೆ ತುಂಬಾನೇ ವಿಶೇಷವಾಗಿತ್ತು. ಕೆಎಲ್ ರಾಹುಲ್ ಅವರು ನಿನ್ನೆ 34ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಂಡರು. ಇನ್ನೂ ಅದೇ ದಿನವೇ ಕೆಎಲ್ ರಾಹುಲ್ ಅವರು ತಾನು ಆಡಿ ಬೆಳೆದ ಸ್ಟೇಡಿಯಂ ಆದ ಎಂ ಚಿನ್ನಸ್ವಾಮಿಯಲ್ಲಿ ಆರ್ಸಿಬಿಯನ್ನು ಎದುರಿಸಿ, ಗೆದ್ದು ಬೀಗಿದರು. ಇನ್ನೂ ಕೆಎಲ್ ರಾಹುಲ್ ಅವರು ಬ್ಯಾಟಿಂಗ್ಗೆ ಇಳಿದಾಗ ಹುಟ್ಟುಹಬ್ಬದ ಹಿನ್ನೆಲೆ ರಾಜ್ಕುಮಾರ್ ಅವರು ಹಾಡಿರುವ ನಗುತಾ ನಗುತಾ ಬಾಳು ನೀನು ನೂರು ವರುಷ ಹಾಡನ್ನು ಹಾಡಿ ಶುಭಕೋರಿದರು.
ಬೆಂಗಳೂರು: ಕೇಂದ್ರದ ಬಿಜೆಪಿ ಸರ್ಕಾರವು ಮಹಿಳಾ ಸಬಲೀಕರಣದ ಮುಖವಾಡ ಧರಿಸಿ ದಕ್ಷಿಣ ಭಾರತದ ರಾಜಕೀಯ ಅಸ್ಮಿತೆಯನ್ನು ಅಳಿಸಲು ‘ಭೀಕರ ಸಂಚು’ ರೂಪಿಸಿದೆ ಎಂದು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ತೀವ್ರ ವಾಗ್ದಾಳಿ ನಡೆಸಿದ್ದಾರೆ.ಬಿಜೆಪಿ ಜಾರಿಗೆ ತರಲು ಹೊರಟಿರುವ ಮಹಿಳಾ ಮೀಸಲಾತಿ ಮಸೂದೆಯು ಕೇವಲ ಒಂದು ‘ಮಾಯಾಜಾಲ’ವಾಗಿದ್ದು, ಇದು ದಕ್ಷಿಣದ ರಾಜ್ಯಗಳ ಹಕ್ಕುಗಳನ್ನು ಕಸಿದುಕೊಳ್ಳಲು ನಡೆಸುತ್ತಿರುವ ‘ರಾಜಕೀಯ ಸರ್ಜಿಕಲ್ ಸ್ಟ್ರೈಕ್’ ಎಂದು ಪ್ರಕಟಣೆಯಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮೃಗಾಲಯಕ್ಕೆ ಬಂದ ಸಂದರ್ಶಕರ ಮೇಲೆ ಕಲ್ಲು ಎಸೆಯಲು ಯತ್ನಿಸಿದ ಮರಿ ಚಿಂಪಾಂಜಿಗೆ ತಾಯಿ ಚಿಂಪಾಂಜಿಯು ಕೋಲಿನಲ್ಲಿ ಹೊಡೆದಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ವಿಡಿಯೋ ನೋಡಿ ಮಕ್ಕಳು ತಪ್ಪು ಮಾಡಿದಾಗ ತಾಯಿ ಪೆಟ್ಟು ಕೊಟ್ಟು ಬುದ್ಧಿ ಹೇಳಿದ ಹಾಗೆಯೇ ತಾಯಿ ಚಿಂಪಾಂಜಿ ನಡೆಸಿಕೊಂಡಿದೆ ಎಂದು ನೆಟ್ಟಿಗರು ಹೇಳಿದ್ದಾರೆ. ವೈರಲ್ ವಿಡಿಯೋದಲ್ಲಿ ಏನಿದೆ: ಚಿಂಪಾಂಜಿಯ ಗುಂಪೊಂದು ಕಲ್ಲು ಬಂಡೆಯ ಮೇಲೆ ಕೂತಿತ್ತು. ಈ ಚಿಂಪಾಂಜಿಗಳನ್ನು ನೋಡಿ
ಕೋಲ್ಕತ್ತಾ: ಮುಂಬರುವ ಪಶ್ವಿಮ ಬಂಗಾಳದ ಚುನಾವಣೆ ಹೊಸ ಇತಿಹಾಸ ಸೃಷ್ಟಿಸಲಿದೆ. ಟಿಎಂಸಿ ನಾಯಕರು ಬಳಸುತ್ತಿರುವ ಭಾಷೆಗಳನ್ನ ನೋಡಿದ್ರೆ ಫಲಿತಾಂಶದ ಬಗ್ಗೆ ಅವರಿಗೆ ಇರುವ ಭಯವನ್ನು ತೋರಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಟಿಎಂಸಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.ಬಂಕುರಾದಲ್ಲಿ ನಡೆದ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, ತೃಣಮೂಲ ಕಾಂಗ್ರೆಸ್ ಪಕ್ಷ, ಕಾಂಗ್ರೆಸ್ ಜೊತೆಗೆ ಸೇರಿ ಪಿತೂರಿ ಮಾಡಿದೆ. ಈ ಮೂಲಕ ಬಂಗಾಳದ ಮಹಿಳೆಯರಿಗೆ ದ್ರೋಹ ಬಗೆದಿದೆ ಎಂದು ಕಿಡಿಕಾಡಿದರು. ನಾನು ಎಲ್ಲಾ ಟಿಎಂಸಿ ಗೂಂಡಾಗಳು, ಸಿಂಡಿಕೇಟ್ಗಳು ಮತ್ತು ಭ್ರಷ್ಟರಿಗೆ ಕೊನೇ ಅವಕಾಶ ನೀಡುತ್ತಿದ್ದೇನೆ. ಏಪ್ರಿಲ್ 29 ಕ್ಕೂ ಮೊದಲು ನಿಮ್ಮ ಹತ್ತಿರದ ಪೊಲೀಸ್ ಠಾಣೆಗಳಲ್ಲಿ ಶರಣಾಗಿ, ಮೇ 4 ರ ನಂತರ ಯಾರಿಗೂ ಉಳಿಗಾಲ ಇರೋದಿಲ್ಲ ಎಂದು ಮೋದಿ ಎಚ್ಚರಿಕೆ ನೀಡಿದರು.
ಬೆಂಗಳೂರು: ಧುರಂಧರ್ ದಿ ರಿವೇಂಜ್ ಚಿತ್ರದ ಸಕ್ಸಸ್ನಲ್ಲಿರುವ ಬಾಲಿವುಡ್ ನಟ ರಣವೀರ್ ಸಿಂಗ್ ಹಾಗೂ ದೀಪಿಕಾ ಪಡುಕೋಣೆ ದಂಪತಿ ಭಾನುವಾರ ಮತ್ತೊಂದು ಗುಡ್ ನ್ಯೂಸ್ ನೀಡಿದ್ದಾರೆ.ತಾರಾ ದಂಪತಿ ತಮ್ಮ ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ದೀಪಿಕಾ ಪಡುಕೋಣೆ ಮತ್ತು ರಣವೀರ್ ಸಿಂಗ್ ಇನ್ಸ್ಟಾಗ್ರಾಮ್ನಲ್ಲಿ ಜಂಟಿಯಾಗಿ ಪೋಸ್ಟ್ ಒಂದನ್ನು ಹಂಚಿಕೊಂಡಿದ್ದಾರೆ. ಚಿತ್ರದಲ್ಲಿ ಅವರ ಮಗಳು ದುವಾ ಗರ್ಭಧಾರಣೆಯ ಪಾಸಿಟಿವ್ ಪರೀಕ್ಷಾ ಕಿಟ್ ಅನ್ನು ಹಿಡಿದುಕೊಂಡಿದ್ದಾರೆ. ಈ ಚಿತ್ರಕ್ಕೆ ರಣವೀರ್ ಹಾಗೂ ದೀಪಿಕಾ ಪಡುಕೋಣೆ ಎರಡು ಕಣ್ಣಿನ ಎಮೋಜಿಯ ಶೀರ್ಷಿಕೆ ನೀಡಿದ್ದಾರೆ.ದೀಪಿಕಾ ಮತ್ತು ರಣವೀರ್ ಸಿಂಗ್ 2018ರ ನವೆಂಬರ್ 14ರಂದು ಇಟಲಿಯ ಲೇಕ್ ಕೊಮೊದಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ವಿವಾಹವಾಗಿದ್ದರು.
ಹೈದರಾಬಾದ್: ಅಭಿಷೇಕ್ ಶರ್ಮಾ ಮತ್ತು ಹೆನ್ರಿಚ್ ಕ್ಲಾಸೆನ್ ಅವರು ಮಿಂಚಿನ ಅರ್ಧಶತಕದ ಬಳಿಕ ಶ್ರೀಲಂಕಾದ ವೇಗಿ ಇಶಾನ್ ಮಾಲಿಂಗ ಮಿಂಚಿನ ದಾಳಿ ನಡೆಸಿದರು. ಇದರಿಂದಾಗಿ ಸನ್ರೈಸರ್ಸ್ ಹೈದರಾಬಾದ್ ತಂಡವು ಹಾಲಿ ಐಪಿಎಲ್ ಟೂರ್ನಿಯಲ್ಲಿ ಸತತ ಎರಡನೇ ಗೆಲುವು ದಾಖಲಿಸಿತು. ಸನ್ ರೈಸರ್ಸ್ ಹೈದರಾಬಾದ್ ತಂಡ ಗೆಲುವು ಸಾಧಿಸುತ್ತಿದ್ದಂತೆ ತಂಡದ ಒಡತಿ ಕಾವ್ಯ ಮಾರನ್ ಸಾಕಷ್ಟು ಸಂಭ್ರಮಿಸಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಹರ್ಷೋದ್ಘಾರದೊಂದಿಗೆ ಎದ್ದುನಿಂತು ಚಪ್ಪಾಳೆ ತಟ್ಟುವ ಮೂಲಕ ಆಟಗಾರರನ್ನು ಪ್ರೋತ್ಸಾಹಿಸಿದ್ದಾರೆ. ಸನ್ರೈಸರ್ಸ್ ಹೈದರಾಬಾದ್ ತಂಡದ ನಾಯಕ ಇಶಾನ್ ಕಿಶನ್ ಯುವ ವೇಗಿಗಳ ಬೆನ್ನುತಟ್ಟಿ ಅವರನ್ನು ಅಭಿನಂದಿಸಿದ್ದಾರೆ.ಹೈದರಾಬಾದ್ನಲ್ಲಿ ನಡೆದ ರೋಚಕ ಐಪಿಎಲ್ ಪಂದ್ಯದಲ್ಲಿ ಸನ್ರೈಸರ್ಸ್ ತಂಡ ಚೆನ್ನೈ ವಿರುದ್ಧ ರೋಚಕ ಗೆಲುವು ಸಾಧಿಸಿತು.
ಮೈಸೂರು: ತನ್ನ ಅಕ್ರಮ ಸಂಬಂಧಕ್ಕೆ ಪತಿ ಅಡ್ಡಿಯಾದನೆಂದು ಆತನನ್ನೇ ಪ್ರಿಯಕರನ ಜತೆ ಸೇರಿ ಕೊಲೆ ಮಾಡಿರುವ ಆಘಾತಕಾರಿ ಘಟನೆ ಮೈಸೂರು ಜಿಲ್ಲೆಯ ಸರಗೂರು ತಾಲೂಕಿನ ಕುರ್ಣೇಗಾಲ ಗ್ರಾಮದಲ್ಲಿ ನಡೆದಿದೆ.ಪತ್ನಿಯಿಂದಲೇ ಕೊಲೆಯಾದ ಪತಿಯನ್ನು ಕುರ್ಣೇಗಾಲದ ಜವರಪ್ಪ ಎಂದು ಗುರುತಿಸಲಾಗಿದೆ. ಮೈಸೂರು ತಾಲೂಕಿನ ಮಾವಿನಹಳ್ಳಿ ಗ್ರಾಮದ ಸಿದ್ದೇಶ್ (32), ಕುರ್ಣೆಗಾಲ ಗ್ರಾಮದ ಅಮೃತಾ (26) ಬಂಧಿತ ಆರೋಪಿಗಳು. ಅನುಮಾನಸ್ಪದ ರೀತಿಯಲ್ಲಿ ಜವರಪ್ಪ ಶವ ಪತ್ತೆಯಾಗಿತ್ತು. ಈ ಬಗ್ಗೆ ಪೊಲೀಸರು ತನಿಖೆ ನಡೆಸಿದಾಗ ಸತ್ಯ ಬಯಲಾಗಿದೆ.
ಮಂಗಳೂರು: ಕರಾವಳಿ ಭಾಗದಾದ್ಯಂತ ತಾಪಮಾನದಲ್ಲಿ ನಿರಂತರ ಏರಿಕೆಯಾಗುತ್ತಿದ್ದು, ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಸೇರಿದಂತೆ ಕರಾವಳಿ ಭಾಗದಲ್ಲಿ ದಿನದಿಂದ ದಿನಕ್ಕೆ ಬಿಸಿಲ ತಾಪ ಏರುತ್ತಿದ್ದು, ಮಧ್ಯಾಹ್ನದ ನಂತರ ಅಲ್ಲಲ್ಲಿ ಮಳೆಯಾಗುತ್ತಿದೆ. ಜಿಟಿಜಿಟಿ ಮಳೆ ಹಿನ್ನೆಲೆ ರಾತ್ರಿ ವೇಳೆ ಸೆಕೆಯ ಧಗೆಗೆ ಜನರು ನಿದ್ರೆ ಬಾರದೆ ಸಂಕಷ್ಟ ಅನುಭವಿಸುತ್ತಿದ್ದಾರೆ.ಮೋಡ ಮುಸುಕಿದ ಆಕಾಶದ ಹೊರತಾಗಿಯೂ, ಶಾಖವು ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ.
ಬೆಂಗಳೂರು: ಚಿರತೆಯಿಂದ ಅತ್ತೆಯನ್ನು ರಕ್ಷಿಸಿದ ಸೊಸೆಗೆ ರಾಣಿ ಚೆನ್ನಮ್ಮ ಪ್ರಶಸ್ತಿ ನೀಡುವುದಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಭರವಸೆ ನೀಡಿದರು. ಮೈಸೂರಿನ ಸಿದ್ಧಾರ್ಥನಗರದ ಮನೆಯೊಂದರಲ್ಲಿ ಚಿರತೆ ಮಂಚದಡಿ ಅಡಗಿದ್ದ ವೇಳೆ ಪ್ರಾಣದ ಹಂಗು ತೊರೆದು ವೃದ್ಧ ಅತ್ತೆಯನ್ನು ಸುರಕ್ಷಿತವಾಗಿ ಹೊರಗೆ ಕರೆತಂದ ಸೊಸೆ ಸುಜಾತಾ ಅವರ ಸಾಹಸಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮಿ ಹೆಬ್ಬಾಳಕರ್ ಪ್ರಶಂಸೆ ವ್ಯಕ್ತವಾಗಿದೆ.
ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಹಾಗೂ ನಟ ಪವನ್ ಕಲ್ಯಾಣ್ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಶನಿವಾರ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ.ಇನ್ನೂ ಪವನ್ ಕಲ್ಯಾಣ್ ಶೀಘ್ರ ಗುಣಮುಖರಾಗಲೆಂದು ಪ್ರಧಾನಿ ನರೇಂದ್ರ ಮೋದಿ ಹಾರೈಸಿದ್ದಾರೆ. ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಗಾರು ಅವರೊಂದಿಗೆ ಮಾತನಾಡಿ ಯೋಗಕ್ಷೇಮ ವಿಚಾರಿಸಿದ್ದೇನೆ. ಅವರು ಗಮನಾರ್ಹವಾಗಿ ಧೈರ್ಯಶಾಲಿಯಾಗಿದ್ದಾರೆ ಮತ್ತು ಅವರು ಶೀಘ್ರದಲ್ಲೇ ಚೇತರಿಸಿಕೊಳ್ಳುತ್ತಾರೆ ಎಂದು ನನಗೆ ಖಾತ್ರಿಯಿದೆ. ಅವರ ಉತ್ತಮ ಆರೋಗ್ಯಕ್ಕಾಗಿ ಪ್ರಾರ್ಥಿಸುತ್ತೇನೆ ಎಂದು ಶುಭಹಾರೈಸಿದ್ದಾರೆ.
ಟೆಹ್ರಾನ್: ಅಮೆರಿಕಾ ನಡುವೆ ವಾಸ್ತವದಲ್ಲಿ ಶಾಂತಿ ಒಪ್ಪಂದದ ದಾರಿ ಇನ್ನೂ ದೂರದಲ್ಲಿದ್ದು, ಅಂತಿಮ ಹಂತ ತಲುಪಿಲ್ಲ ಎಂದು ಇರಾನ್ ಸ್ಪಷ್ಟಪಡಿಸಿದೆ. ಇದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಉದ್ವಿಗ್ನತೆ ಮತ್ತಷ್ಟು ಹೆಚ್ಚಾಗಿದೆ. ಜಾಗತಿಕ ತೈಲ ಸಾಗಾಟದ ಪ್ರಮುಖ ಮಾರ್ಗವಾದ ಈ ಜಲಸಂಧಿಯಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವುದು ವಿಶ್ವ ಮಾರುಕಟ್ಟೆಯ ಮೇಲೂ ಪರಿಣಾಮ ಬೀರುತ್ತಿದೆ.ಅಮೆರಿಕದೊಂದಿಗೆ ನಡೆದ ಮಾತುಕತೆಗಳಲ್ಲಿ ಕೆಲವು ಪ್ರಗತಿ ಕಂಡುಬಂದಿದೆಯಾದರೂ, ಇನ್ನೂ ಹಲವು ಮೂಲಭೂತ ವಿಷಯಗಳಲ್ಲಿ ಭಿನ್ನಾಭಿಪ್ರಾಯಗಳು ಮುಂದುವರಿದಿವೆ. ನಾವು ಇನ್ನೂ ಅಂತಿಮ ಹಂತದಿಂದ ದೂರದಲ್ಲಿದ್ದೇವೆ ಎಂದು ಇರಾನ್ ಸಂಸತ್ತಿನ ಸ್ಪೀಕರ್ ಮೊಹಮ್ಮದ್ ಬಘರ್ ಘಾಲಿಬಾಫ್ ತಿಳಿಸಿದ್ದಾರೆ.ಹಾರ್ಮುಜ್ ಜಲಸಂಧಿಯನ್ನು ಮತ್ತೆ ಮುಚ್ಚಿರುವುದಾಗಿ ಇರಾನ್ ಘೋಷಿಸಿದ್ದು, ಅಮೆರಿಕ ತನ್ನ ನೌಕಾ ದಿಗ್ಬಂಧನವನ್ನು ತೆಗೆದುಹಾಕುವವರೆಗೂ ಸಂಚಾರವನ್ನು ಸಂಪೂರ್ಣವಾಗಿ ಪುನರಾರಂಭಿಸುವುದಿಲ್ಲ ಎಂದು ವಾರ್ನಿಂಗ್ ನೀಡಿದೆ.
ಬೆಂಗಳೂರು: ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಬಗ್ಗೆ ಪುತ್ರಿ ವೈಶಾಲಿ ಅವರು ಇನ್ಸ್ಟಾಗ್ರಾಂನಲ್ಲಿ ಭಾವುಕ ಫೋಸ್ಟ್ವೊಂದನ್ನು ಹಂಚಿಕೊಂಡಿದ್ದಾರೆ. ತಂದೆಯ ಜತೆಗಿನ ಬಾಲ್ಯದ ಫೋಟೋವನ್ನು ಹಂಚಿಕೊಂಡ ಅವರು ಅಪ್ಪನ ಕೆಲಸದ ಬಗ್ಗೆ ಭಾವುಕವಾಗಿ ಬರೆದುಕೊಂಡಿದ್ದಾರೆ. ರಾಜ್ಯ ವನ್ಯಜೀವಿ ಮಂಡಳಿ ಸದಸ್ಯೆಯೂ ಆಗಿರುವ ವೈಶಾಲಿ ಅವರ ಪೋಸ್ಟ್ನಲ್ಲಿ ಏನಿದೆ?ಉತ್ತರ ಕರ್ನಾಟಕದಾದ್ಯಂತ, ವಿದ್ಯಾರ್ಥಿ ನಾಯಕರಿಂದ ರಾಜ್ಯ ನಾಯಕರಾಗುವವರೆಗೆ ಅವರ ಪಯಣವನ್ನು ಜನರು ಸಾಕ್ಷಿಯಾಗಿ ನೋಡಿದ್ದಾರೆ. ರೈತ ಕುಟುಂಬದಲ್ಲಿ ಜನಿಸಿ, ಸಾವಿರಾರು ಪಶುಗಳೊಂದಿಗಿನ ದೊಡ್ಡ ಡೈರಿ ಕಾರ್ಯಾಚರಣೆಯನ್ನು ನಿರ್ಮಿಸಿ i
ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಪಂದ್ಯದಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 6 ವಿಕೆಟ್ಗಳ ಸೋಲು ಅನುಭವಿಸಿದೆ. ಇದರೊಂದಿಗೆ ತವರಿನಲ್ಲಿ ಮೊದಲ ಸೋಲು ಅನುಭವಿಸಿದೆ.ಪಂದ್ಯದ ಬಳಿಕ ಮಾತನಾಡಿದ ಆರ್ಸಿಬಿ ನಾಯಕ ರಜತ್ ಪಾಟಿದಾರ್, ಮಧ್ಯಮ ಕ್ರಮಾಂಕದಲ್ಲಿ ರನ್ ಗಳಿಸಲು ಸಾಧ್ಯವಾಗದೇ ಇರುವುದು ನಮ್ಮ ಸೋಲಿಗೆ ಪ್ರಮುಖ ಕಾರಣವಾಯಿತು. ನಮ್ಮ ತಪ್ಪುಗಳ ಬಗ್ಗೆ ಆತ್ಮಾವಲೋಕನ ಮಾಡಿಕೊಂಡು ಅವುಗಳನ್ನು ಸರಿಪಡಿಸಿಕೊಳ್ಳುತ್ತೇವೆ ಎಂದರು.ಗೆಲುವು ನಿಜಕ್ಕೂ ಹತ್ತಿರದಲ್ಲಿ ಇತ್ತು. ಆದರೆ ನಾವು 15 ರಿಂದ 20 ರನ್ ಕಡಿಮೆ ಮಾಡಿದೆವು ಎಂದು ನಾನು ಭಾವಿಸುತ್ತೇನೆ. ನಾವು ಬ್ಯಾಟಿಂಗ್ ಪ್ರಾರಂಭಿಸಿದ ರೀತಿ, ವಿಶೇಷವಾಗಿ ವಿರಾಟ್ ಕೊಹ್ಲಿ ಮತ್ತು ಸಾಲ್ಟ್ ಅವರು ಉತ್ತಮ ಆರಂಭ ನೀಡಿದರು. ಬಳಿಕ ನಾವು ನಿರಂತರವಾಗಿ ವಿಕೆಟ್ಗಳನ್ನು ಕಳೆದುಕೊಳ್ಳಲು ಪ್ರಾರಂಭಿಸಿದೆವು ಎಂದು ಹೇಳಿದರು.
ನವದೆಹಲಿ: ಭಯೋತ್ಪಾದನಾ ಚಟುವಟಿಕೆಗಳನ್ನು ಯೋಜಿಸಿದ, ಸೂಕ್ಷ್ಮ ಸ್ಥಳಗಳ ವಿಚಕ್ಷಣಾ ಮತ್ತು ಎನ್ಕ್ರಿಪ್ಟ್ ಮಾಡಿದ ಆನ್ಲೈನ್ ಪ್ಲಾಟ್ಫಾರ್ಮ್ಗಳ ಮೂಲಕ ಇತರರನ್ನು ನೇಮಿಸಿಕೊಳ್ಳಲು ಯತ್ನಿಸಿದ ಮಹಾರಾಷ್ಟ್ರ, ಒಡಿಶಾ ಮತ್ತು ಬಿಹಾರದ ನಾಲ್ವರು ಶಂಕಿತ ಉಗ್ರರನ್ನು ಅರೆಸ್ಟ್ ದೆಹಲಿ ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.ಕಾರ್ಯಾಚರಣೆ ವೇಳೆ ಸುಧಾರಿತ ಸ್ಫೋಟಕ ಸಾಧನ (ಐಇಡಿ) ಮತ್ತು ಅದಕ್ಕೆ ಸಂಬಂಧಿಸಿದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಇಬ್ಬರು ಆರೋಪಿಗಳು ಐಇಡಿ ಅಳವಡಿಸಲಾದ ರಿಮೋಟ್ ಕಂಟ್ರೋಲ್ ಆಟಿಕೆ ಕಾರನ್ನು ಜನಸಂದಣಿ ಇರುವ ಸ್ಥಳಗಳನ್ನು ಗುರಿಯಾಗಿಸಿಕೊಂಡು ಜೋಡಿಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ನವದೆಹಲಿ: ಮಹಿಳಾ ಮೀಸಲು ಮಸೂದೆ ವಿಫಲವಾದ ಬೆನ್ನಲ್ಲೇ ಇಂದು ದೇಶವನ್ನು ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಿದ್ದು ಕಾಂಗ್ರೆಸ್ ಮತ್ತು ಮಿತ್ರ ಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಅವರ ಭಾಷಣದ ಸಂಪೂರ್ಣ ವಿವರ ಇಲ್ಲಿದೆ ನೋಡಿ. ‘ಗೆಳೆಯರೇ, ಭಾರತದ ಮಹಿಳೆಯರ ಕನಸನ್ನು ಹೇಗೆ ಭಗ್ನಗೊಳಿಸಲಾಯಿತು ಎಂದು ಇಡೀ ದೇಶ ನೋಡಿದೆ. ನಮ್ಮ ಹಲವು ಪ್ರಯತ್ನಗಳ ಹೊರತಾಗಿಯೂ ಮಹಿಳಾ ಮಸೂದೆ ತರಲು ಸಫಲರಾಗಲಿಲ್ಲ. ಇದಕ್ಕಾಗಿ ನಾನು ದೇಶದ ಮಾತೆಯರು, ಸಹೋದರಿಯರ ಕ್ಷಮೆ ಕೇಳುತ್ತೇನೆ. ಗೆಳೆಯರೇ ನಮಗೆ ದೇಶ ಹಿತವೇ ಎಲ್ಲಕ್ಕಿಂತ ಮುಖ್ಯ. ಆದರೆ ಕೆಲವರಿಗೆ ಪಕ್ಷ ಹಿತವೇ ಎಲ್ಲಕ್ಕಿಂತ ಮುಖ್ಯವಾಗುತ್ತದೆ.
ಬೆಂಗಳೂರು: ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯಾಟದಲ್ಲಿ ಆರ್ಸಿಬಿ 6 ವಿಕೆಟ್ಗಳಿಂದ ಸೋಲು ಅನುಭವಿಸಿತು. ಈ ಮೂಲಕ ತವರಿನಲ್ಲಿ ಮೊದಲನೇ ಸೋಲಿನ ಕಹಿ ಉಂಡಿತು. ಮೊದಲು ಬ್ಯಾಟಿಂಗ್ ಮಾಡಿದ ಆರ್ಸಿಬಿ 20 ಓವರ್ಗಳಲ್ಲಿ 8 ವಿಕೆಟ್ ಕಳೆದುಕೊಂಡು 175 ರನ್ ಗಳಿಸಿತು. ಈ ಗುರಿ ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ 19.5
ಬೀಜಿಂಗ್: ಗಂಡನ ಜತೆ ನಡೆದ ಜಗಳದಿಂದ ಸಿಟ್ಟಾದ ಪತ್ನಿಯೊಬ್ಬಳು ಅಪಾರ್ಟ್ಮೆಂಟ್ನಿಂದ ₹1.5 ಕೋಟಿ ಎಸೆದಿರುವ ಘಟನೆ ಗುವಾಂಗ್ಡಾಂಗ್ ಪ್ರಾಂತ್ಯದ ಶಾಂಟೌ ನಗರದಲ್ಲಿ ನಡೆದಿದೆ.ವರದಿಗಳ ಪ್ರಕಾರ, ಪತಿ ಮತ್ತು ಪತ್ನಿಯ ನಡುವೆ ತೀವ್ರ ಜಗಳ ನಡೆದಿದೆ. ಜಗಳದ ಆ ಕೋಪದಲ್ಲಿ ಆಕೆ ತನ್ನ ಕೈಯಲ್ಲಿದ್ದ ನೋಟುಗಳ ಕಂತೆಗಳನ್ನು ಬಾಲ್ಕನಿಯಿಂದ ಕೆಳಕ್ಕೆ ಎಸೆದು ತನ್ನ ಅಸಮಾಧಾನವನ್ನು ಹೊರಹಾಕಿದ್ದಾಳೆ.ಹಾಂಕಾಂಗ್ ಕರೆನ್ಸಿಯ 1,000 ಮುಖಬೆಲೆಯ ನೋಟುಗಳನ್ನು ಆಕೆ ಎಸೆದಿದ್ದು ಅದರ ಒಟ್ಟು ಮೌಲ್ಯ ಸುಮಾರು 1.5 ಕೋಟಿ ಎಂದು ಹೇಳಲಾಗಿದೆ.
ಬೆಂಗಳೂರು: ಆಸ್ಟ್ರೇಲಿಯದ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ಬ್ಯಾಟರ್ ಟಿಮ್ ಡೇವಿಡ್ ಶನಿವಾರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ನಲ್ಲಿ 1,000 ವೇಗವಾಗಿ ಸ್ಕೋರ್ ಮಾಡಿದ ಎರಡನೇ ಆಟಗಾರರಾದರು.ಶನಿವಾರ ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ (ಡಿಸಿ) ವಿರುದ್ಧದ ಐಪಿಎಲ್ ಪಂದ್ಯದಲ್ಲಿ ಟಿಮ್ ಈ ಮೈಲಿಗಲ್ಲು ಸಾಧಿಸಿದರು. ಪಂದ್ಯದ ಸಮಯದಲ್ಲಿ, ಡೇವಿಡ್ 17 ಎಸೆತಗಳಲ್ಲಿ ಮೂರು ಬೌಂಡರಿ ಮತ್ತು ಒಂದು ಸಿಕ್ಸರ್ನೊಂದಿಗೆ 26 ರನ್ ಗಳಿಸಿದರು, 152.94 ಸ್ಟ್ರೈಕ್ ರೇಟ್ನೊಂದಿಗೆ.ಮುಂಬೈ ಇಂಡಿಯನ್ಸ್ (MI) ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಗಾಗಿ 56 ಪಂದ್ಯಗಳು ಮತ್ತು 50
ಬೆಂಗಳೂರು: ಮಹಿಳಾ ಮೀಸಲು ಮಸೂದೆ ಸುಮಾರು ಏಳು ದಶಕಗಳ ಹೋರಾಟದ ನಂತರ ಜಾರಿಯಾಗುವುದರಲ್ಲಿತ್ತು. ಆದರೆ ಅದಕ್ಕೆ ಬೆಂಬಲ ನೀಡದೆ ಕಾಂಗ್ರೆಸ್ ಮತ್ತು ಅದರ ಮೈತ್ರಿ ಪಕ್ಷಗಳಿಂದ ಪ್ರಜಾಪ್ರಭುತ್ವಕ್ಕೆ ಅವಮಾನವಾಗಿದೆ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷೆ ಶ್ರೀಮತಿ ಮಾಳವಿಕಾ ಅವಿನಾಶ್ ಅವರು ಹೇಳಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಕಾಂಗ್ರೆಸ್ ಮಾಡಿದ ಅವಮಾನವನ್ನು ಭಾರತದ ಮಹಿಳೆಯರು ಎಂದೂ ಕ್ಷಮಿಸುವುದಿಲ್ಲ. ಮೀಸಲನ್ನು ಸಾಂವಿಧಾನಿಕ ಹಕ್ಕಾಗಿ ಪಡೆಯಲು ನಾವೆಲ್ಲ ಸಿದ್ಧರಾಗಿದ್ದೆವು. ಮಸೂದೆಗೆ ದೇಶದ ಮಹಿಳೆಯರ ವಿರೋಧ ಹೇಗೆ ಇರುತ್ತದೆ ಎಂಬುದನ್ನು ಮಂದಿನ ದಿನದಲ್ಲಿ ಕಾಂಗ್ರೆಸ್ ನೋಡಲಿ ಎಂದರು.
ಬೆಂಗಳೂರು: ಕಾಂಗ್ರೆಸ್ ಮಹಿಳಾ ಮೀಸಲಾತಿ ವಿರೋಧಿಯಲ್ಲವಾಗಿದೆ. ಬಿಜೆಪಿ ತನ್ನ ರಾಜಕೀಯಕ್ಕಾಗಿ ಮಹಿಳಾ ಮೀಸಲಾತಿ ಮತ್ತು ಡಿಲಿಮಿಟೇಷನ್ ಒಟ್ಟಾಗಿ ಸಂವಿಧಾನದ ತಿದ್ದುಪಡಿ ಮಾಡಲು ಮುಂದಾಗಿದ್ದಕ್ಕೆ ಬಿಲ್ ಫೇಲ್ ಆಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಮಹಿಳಾ ಮೀಸಲಾತಿಗೆ ಕಾಂಗ್ರೆಸ್ ವಿರೋಧ ಎಂಬ ಬಿಜೆಪಿ ಆರೋಪ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ಮಹಿಳಾ ಮೀಸಲಾತಿ ಪರ ಇದೆ. ನಾವು ಮಹಿಳಾ ಮೀಸಲಾತಿಗೆ ವಿರೋಧ ಇಲ್ಲ. 2023 ರಲ್ಲಿ ಸಂಸತ್ನಲ್ಲಿ ಬಿಲ್ ಪಾಸ್ ಆಗಿದೆ. ಅದನ್ನ ಅವರು ಜಾರಿ ಮಾಡಬೇಕು. ಇನ್ನೂ ಮುಂದಿನ ಚುನಾವಣೆಗೆ ಮೀಸಲಾತಿ ಜಾರಿ ಮಾಡಲಿ ಎಂದು ಹೇಳಿದರು. ಇನ್ನೂ ನಿನ್ನೆ ಸಂವಿಧಾನಕ್ಕೆ ತಿದ್ದುಪಡಿ ತರುವುದಕ್ಕೆ ಹೋಗಿ ನಿನ್ನೆ ಫೇಲ್ ಆಯಿತು. ಮಹಿಳಾ ಮೀಸಲಾತಿಗೆ ಮಾತ್ರ ಸಂವಿಧಾನದ
ದೆಹಲಿಯ ಅಬ್ಬರದ ಬೌಲಿಂಗ್ಗೆ ಆರ್ಸಿಬಿ 20 ಓವರ್ಗಳಲ್ಲಿ 8 ವಿಕೆಟ್ ಕಳೆದುಕೊಂಡು ಡೆಲ್ಲಿಗೆ 176ರನ್ಗಳ ಗೆಲುವಿನ ಟಾರ್ಗೆಟ್ ನೀಡಿದೆ.ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶನಿವಾರ ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ನಾಯಕ ಅಕ್ಷರ್ ಪಟೇಲ್ ಟಾಸ್ ಗೆದ್ದು ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡರು.ಈ ಮೂಲಕ ಆರ್ಸಿಬಿಯನ್ನು ಮೊದಲು ಬ್ಯಾಟಿಂಗ್ಗೆ ಆಹ್ವಾನಿಸಿತು.ಪಿಲ್ ಸಾಲ್ಟ್ 38 ಎಸೆತಕ್ಕೆ 63 ರನ್, ವಿರಾಟ್ ಕೊಹ್ಲಿ 13 ಎಸೆತಕ್ಕೆ 19ರನ್, ದೇವದತ್ತ್ ಪಡಿಕ್ಕಲ್ 13 ಎಸೆತಕ್ಕೆ 18ರನ್,
ನಾಸಿಕ್: ಮಹಾರಾಷ್ಟ್ರದ ನಾಸಿಕ್ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು ಪ್ರಕರಣಗಳ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್ಐಟಿ), ತಲೆಮರೆಸಿಕೊಂಡಿರುವ ಆರೋಪಿ ನಿದಾ ಖಾನ್ ಅವರ ಪತಿಯನ್ನು ವಶಕ್ಕೆ ಪಡೆದಿದೆ.ನಾಸಿಕ್ ಪೊಲೀಸ್ ಕಮಿಷನರ್ ರಚಿಸಿರುವ ಎಸ್ಐಟಿ, ಮುಂಬ್ರಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮೊಯಿನ್ ನಾವಿದ್ ಇಕ್ಬಾಲ್ ಖಾನ್ (27) ನನ್ನು ಬಂಧಿಸಿದೆ. ಮೊಯಿನ್ ಖಾನ್ ಬಹುರಾಷ್ಟ್ರೀಯ ಕಂಪನಿಯಲ್ಲಿ ಕೆಲಸ ಮಾಡುತ್ತಾರೆ ಮತ್ತು ನಿದಾ ಖಾನ್ ಅವರ ಪತಿ, ಅವರ ಮೊದಲ ಹೆಸರು ನಿದಾ ಎಜಾಜ್ ಖಾನ್.
ಇವತ್ತು ನನ್ನ ಪತಿಯ ಹುಟ್ಟುಹಬ್ಬ, ಸ್ವಲ್ಪ ಬೇಗ ಪ್ರಶ್ನೆ ಕೇಳಿ ಎಂದು ಹೇಳುವ ಮೂಲಕ ಕಾಮಗ್ರೆಸ್ ಸಂಸದೆ ಪ್ರಿಯಾಂಕ ವಾದ್ರಾ ಇದೀಗ ಟೀಕೆಗೆ ಗುರಿಯಾಗಿದ್ದಾರೆ.ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಶನಿವಾರ ಮಹಿಳಾ ಮೀಸಲಾತಿ ಮಸೂದೆಯ ಬಗ್ಗೆ ಪ್ರತಿಪಕ್ಷದ ನಿಲುವಿನ ಬಗ್ಗೆ ಹೇಳಿದರು. ಈ ಸಮಯದಲ್ಲೇ ಮಾಧ್ಯಮದವರ ಬಳಿ ಇಂದು ನನ್ನ ಪತಿಯ ಹುಟ್ಟುಹಬ್ಬ ಸ್ವಲ್ಪ ಬೇಗ ಪ್ರಶ್ನೆಗಳು ಕೇಳಿ ಎನ್ನುವ ಮೂಲಕ ಟ್ರೋಲ್ಗೆ ಒಳಗಾಗಿದ್ದಾರೆ.
ಪಾಟ್ನಾ: ಬಿಹಾರದ ನೂತನ ಸಿಎಂ ಆಗಿ ಅಧಿಕಾರ ಸ್ವೀಕರಿಸಿರುವ ಸಮರ್ಥ್ ಚೌಧರಿಗೆ ಮುಸ್ಲಿಂ ಮೌಲ್ವಿಯೊಬ್ಬರು ಟೋಪಿ ಧರಿಸಿ ಗೌರವಿಸಲು ಬಂದಾಗ ಅವರು ಏನು ಮಾಡಿದ್ರು ಈ ವಿಡಿಯೋ ನೋಡಿ. ನಿತೀಶ್ ಕುಮಾರ್ ರಾಜೀನಾಮೆ ನೀಡಿ ರಾಜ್ಯ ಸಭೆಗೆ ಹೋದ ಬಳಿಕ ಈಗ ಬಿಹಾರದ ನೂತನ ಸಿಎಂ ಆಗಿ ಜೆಡಿಯು ಮಿತ್ರ ಪಕ್ಷ ಬಿಜೆಪಿಯ ಸಮರ್ಥ್ ಚೌಧರಿ ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಹೊಸ ಮುಖ್ಯಮಂತ್ರಿ ಎಂದ ತಕ್ಷಣ ಸಾಕಷ್ಟು ಜನ ಬಂದು ವಿಶ್ ಮಾಡೋದು ಸಹಜ. ಈ ಬಾರಿ ಬಿಹಾರದಲ್ಲಿ ಬಿಜೆಪಿ ಗೆಲುವಿಗೆ ಮುಸ್ಲಿಂ ಮತಗಳೂ ಪ್ರಮುಖ ಪಾತ್ರ ವಹಿಸಿದ್ದವು.
ಪ್ರಮುಖ ಐವೇರ್ ಸ್ಟಾರ್ಟ್ಅಪ್ ಸಂಸ್ಥೆಯಾದ ಲೆನ್ಸ್ಕಾರ್ಟ್ ತನ್ನ ಕಚೇರಿ ಡ್ರೆಸ್ಕೋಡ್ ಮಾರ್ಗಸೂಚಿಯಲ್ಲಿ ಹಿಂದೂ ಸಂಪ್ರದಾಯದ ಕುರುಹುಗಳಾದ ಬಿಂದಿ, ತಿಲಕ ಮತ್ತು ಕೈಗೆ ಕಟ್ಟುವ ದಾರಗಳನ್ನು ನಿಷೇಧಿಸಿ, ಹಿಜಾಬ್ಗೆ ಅನುಮತಿ ನೀಡಿದೆ ಎಂಬ ಆರೋಪ ಭಾರೀ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿತ್ತು. ಮಹಿಳಾ ಉದ್ಯೋಗಿಗಳು ಹಿಜಾಬ್ ಧರಿಸಬಹುದು ಆದರೆ ಹಣೆಗೆ ಬಿಂದಿ ಹಾಕಿಕೊಳ್ಳುವಂತಿಲ್ಲ ಎಂಬ ಲೆನ್ಸ್ಕಾರ್ಟ್ ನಿಯಮಾವಳಿ ಸಾಮಾಜಿಕ ಜಾಲತಾಣದಲ್ಲಿ ಭುಗಿಲೆದ್ದ ಬೆನ್ನಲ್ಲೇ ಶಾಪ್ಗೆ ಬಜರಂಗದಳದವರು ಎಂಟ್ರಿ ಕೊಟ್ಟಿದೆ.
ನವದೆಹಲಿ: ಅಪಾರ ಅಭಿಮಾನಿ ಬಳಗವನ್ನು ಹೊಂದಿರುವ ಕ್ರಿಕೆಟರ್ ವಿರಾಟ್ ಕೊಹ್ಲಿ ಅವರು ಈಚೆಗೆ ಜರ್ಮನ್ ಮಾಡೆಲ್ ಲಿಜ್ಲಾಜ್ ಅವರ ಫೋಟೋಗೆ ಲೈಕ್ ಕೊಟ್ಟು ಸುದ್ದಿಯಾಗಿದ್ದರು. ಲೈಕ್ ಕೊಟ್ಟಿರುವ ಸ್ಕ್ರೀನ್ ಶಾಟ್ ಕೂಡಾ ಸಾಮಾಜಿಕ ಜಾಲತಾಣ ವೈರಲ್ ಆಗಿತ್ತು. ಆದರೆ ಇದಾದ ಕೆಲವೇ ನಿಮಿಷಗಳಲ್ಲಿ ವಿರಾಟ್ ಕೊಹ್ಲಿ ಅನ್ಲೈಕ್ ಮಾಡಿದ್ದಾರೆ. ಪ್ರಸ್ತುತ ಐಪಿಎಲ್ 2026 ರಲ್ಲಿ ಕಾಣಿಸಿಕೊಂಡಿರುವ ಕೊಹ್ಲಿ, ಜರ್ಮನ್ ಮಾಡೆಲ್-ಪ್ರಭಾವಶಾಲಿ ಲಿಜ್ಲಾಜ್ ಅವರ ಫೋಟೋವನ್ನು 'ಲೈಕ್' ಮಾಡಿ ಅನ್ಲೈಕ್ ಮಾಡಿರುವ ಸಂಬಂಧ ಸುದ್ದಿಯಾಗಿದ್ದಾರೆ.
ಶುಕ್ರವಾರ ಕೊಯಮತ್ತೂರು ಜಿಲ್ಲೆಯ ವಾಲ್ಪಾರೈ ಎಂಬಲ್ಲಿನ ಘಾಟ್ ರಸ್ತೆಯಲ್ಲಿ ಹೇರ್ಪಿನ್ ತಿರುವಿನಲ್ಲಿ ಅವರ ವ್ಯಾನ್ ಉರುಳಿ ಬಿದ್ದ ಪರಿಣಾಮ ಕೇರಳದ ಮಲಪ್ಪುರಂ ಜಿಲ್ಲೆಯ 12 ಸದಸ್ಯರ ಪ್ರವಾಸಿ ಗುಂಪಿನ ಒಂಬತ್ತು ಸದಸ್ಯರು ಸಾವನ್ನಪ್ಪಿದರು.ತೀವ್ರವಾಗಿ ಗಾಯಗೊಂಡ ಮೂವರನ್ನು ಪೊಲ್ಲಾಚಿಯಿಂದ ಕೊಯಮತ್ತೂರಿನ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ರವಾನಿಸಲಾಗಿದೆ. ವ್ಯಾನ್ 5.15 ರ ನಡುವೆ ಹೇರ್ಪಿನ್ ಬೆಂಡ್ 13 ರಿಂದ ಹೇರ್ಪಿನ್ ಬೆಂಡ್ 9 ಗೆ ಬಿದ್ದಿದೆ ಎಂದು ವರದಿಯಾಗಿದೆ.
ಇದೀಗ ಮದುವೆ ಸೀಸನ್. ಮೆಹೆಂದಿಯನ್ನು ಹೆಚ್ಚಿನವರು ಹಾಕುತ್ತಾರೆ. ಇನ್ನೂ ಮೆಹೆಂದಿ (ಗೋರಂಟಿ) ಬಣ್ಣ ಗಾಢವಾಗಿ ಮತ್ತು ಕಪ್ಪಾಗಿ ಬರಲು ಇಲ್ಲಿವೆ ಕೆಲವು ಸುಲಭ ಹಾಗೂ ಪರಿಣಾಮಕಾರಿ ಸಲಹೆಗಳು:1. ಹಚ್ಚುವ ಮೊದಲು ಮತ್ತು ಹಚ್ಚುವಾಗ ಕೈಗಳನ್ನು ಸ್ವಚ್ಛಗೊಳಿಸಿ: ಮೆಹೆಂದಿ ಹಚ್ಚುವ ಮೊದಲು ಕೈಗಳನ್ನು ಸೋಪಿನಿಂದ ತೊಳೆದು ಚೆನ್ನಾಗಿ ಒಣಗಿಸಿಕೊಳ್ಳಿ. ಕೈಗೆ ಯಾವುದೇ ಲೋಷನ್ ಅಥವಾ ಎಣ್ಣೆ ಹಾಕಬಾರದು.ಐಐ ನೀಲಗಿರಿ ಎಣ್ಣೆ: ಮೆಹೆಂದಿ ಹಚ್ಚುವ ಮೊದಲು ಕೈಗಳಿಗೆ ಸ್ವಲ್ಪ ನೀಲಗಿರಿ ಎಣ್ಣೆಯನ್ನು ಸವರಿಕೊಂಡರೆ ಬಣ್ಣ ಚೆನ್ನಾಗಿ
ಛತ್ತೀಸ್ ಘಡ: ನಿಮ್ಮ ಫೈಲ್ ಎಲ್ಲಿಟ್ಟಿದ್ದೀನಿ ಎಂದು ನೆನಪಾಗುತ್ತಿಲ್ಲ ಎಂದು ಆಟವಾಅಡಿಸುತ್ತಿದ್ದ ಸರ್ಕಾರೀ ಅಧಿಕಾರಿ ಟೇಬಲ್ ಮುಂದೆ ವ್ಯಕ್ತಿಯೊಬ್ಬ ಬಾದಾಮಿ ತಂದು ಸುರಿದ ವಿಡಿಯೋವೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ಘಟನೆ ನಡೆದಿರುವುದು ಛತ್ತೀಸ್ ಘಡದ ಬಿಲಾಸ್ ಪುರದಲ್ಲಿ. ನಮ್ಮ ದೇಶದಲ್ಲಿ ಸರ್ಕಾರೀ ಅಧಿಕಾರಿಗಳು ಎಷ್ಟು ಸೋಮಾರಿಗಳಾಗಿದ್ದಾರೆಂದರೆ ಜನರ ಕೆಲಸ ಮಾಡುವುದು ಬಿಟ್ಟು ನೆಪ ಹೇಳಿ ಸಾಗ ಹಾಕುವುದೇ ಉದ್ಯೋಗ ಮಾಡಿಕೊಂಡಿದ್ದಾರೆ. ಲಂಚ ಕೇಳುವುದು, ನಾಳೆ ಬನ್ನಿ ಎಂದು ಸಾರ್ವಜನಿಕರನ್ನು ಓಡಾಡಿಸುವುದು ಸಾಮಾನ್ಯವಾಗಿದೆ. ಇಂತಹದ್ದೇ ವರ್ತನೆ ತೋರಿದ ಅಧಿಕಾರಿಗೆ ಈ ವ್ಯಕ್ತಿ ಸರಿಯಾಗಿ ಪಾಠ ಕಲಿಸಿದ್ದಾನೆ.
ಶಿವಮೊಗ್ಗ: ಪಾರ್ಟಿ ವೇಳೆ ಗಂಟಲಿನಲ್ಲಿ ಚಿಕನ್ ಮೂಳೆ ಸಿಲುಕಿ ಯುವಕನೊಬ್ಬ ಸಾವನ್ನಪ್ಪಿದ ಘಟನೆ ಕುಂಸಿ ಸಮೀಪದ ಚೆನ್ನಹಳ್ಳಿ ಗ್ರಾಮದಲ್ಲಿ ನಡೆದಿದೆ. ಮೃತ ಯುವಕನ್ನು ಸಚಿನ್ (21) ಎಂದು ಗುತುತಿಸಲಾಗುದೆ. ಗ್ರಾಮಸ್ಥರೊಬ್ಬರ ಹುಟ್ಟುಹಬ್ಬದ ಸಂದರ್ಭದಲ್ಲಿ ಈ ಅವಘಡ ಸಂಭವಿಸಿದೆ. ಸಚಿನ್, ಊಟ ಮುಗಿಸಿಕೊಂಡು ಪಕ್ಕದಲ್ಲೇ ಕಾಮಗಾರಿ ನಡೆಯುತ್ತಿದ್ದ ನಿರ್ಮಾಣ ಹಂತದ ಮನೆಯೊಳಗೆ ತೆರಳಿದ್ದನು. ಊಟದ ಬಳಿಕ ಉಳಿದವರೆಲ್ಲರೂ ತಮ್ಮ ತಮ್ಮ ಮನೆಗಳಿಗೆ ವಾಪಸ್ಸಾಗಿದ್ದರು. ಇನ್ನೂ ಶುಕ್ರವಾರ ಮುಂಜಾನೆ ಕಾಮಕಾರಿ ಕೆಲಸಕ್ಕೆ ಕೆಲಸಗಾರರು ಬಂದಾಗ ಸಚಿನ್ ಅಲ್ಲಿ ಶವವಾಗಿ ಬಿದ್ದಿರುವುದು ಬೆಳಕಿಗೆ ಬಂದಿದೆ.
ಬೆಂಗಳೂರು: ವಿಮಾನದ ಮೂಲಕದ ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ದಕ್ಷಿಣ ಆಫ್ರಿಕಾದ ನಾಲ್ಕು ಚೀತಾಗಳನ್ನು ಬರಮಾಡಿಕೊಳ್ಳಲಾಗಿದೆ. ಎರಡು ಹೆಣ್ಣು ಸೇರಿದಂತೆ ಒಟ್ಟು ನಾಲ್ಕು ಚೀತಾಗಳನ್ನು ಆಫ್ರಿಕಾದ ಪ್ಯಾರಟ್ ಪಾರ್ಕ್ನಿಂದ ತರಲಾಗಿದೆ. ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಚಿವ ಈಶ್ವರ್ ಖಂಡ್ರೆ ಹಾಗೂ ಅಧಿಕಾರಿಗಳು ಇಲ್ಲಿಗೆ ಬಂದ ವಿಶೇಷ ಅತಿಥಿಗಳನ್ನು ಸ್ವಾಗತಿಸಿದರು. ನಂತರ ಅವುಗಳನ್ನು ಬನ್ನೇರುಘಟ್ಟ ಮೃಗಾಲಯಕ್ಕೆ ಸ್ಥಳಾಂತರಿಸಲಾಯಿತು. ಇನ್ನೂ ತನಗೆ ಹೊಂದಿರುಕೊಂಡಿರುವ ವಾತಾವರಣದಿಂದ ಹೊರಬಂದಿರುವ ಚೀತಾಗಳಿಗೆ ಬನ್ನೇರುಘಟ್ಟ ವಾತಾವರಣ
ಬೆಂಗಳೂರು: ಮಹಿಳಾ ಮೀಸಲಾತಿ ವಿರೋಧಿಸುವುದು ಸಮಾನತೆಯ ತತ್ವವನ್ನು ವಿರೋಧಿಸಿದಂತೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತಿಳಿಸಿದ್ದಾರೆ.ಅವರು ಇಂದು ಮಾಧ್ಯಮಗಳ ಜೊತೆ ಮಾತನಾಡಿದರು. ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸುವುದು ನಿಶ್ಚಿತ ಎಂದು ಅವರು ತಿಳಿಸಿದರು. ಬಳಿಕ ಪ್ರಶ್ನೆಗೆ ಉತ್ತರಿಸಿದ ಅವರು, ವಿಪಕ್ಷಗಳ ಮಹಿಳಾ ವಿರೋಧಿ ನೀತಿಯನ್ನು ಖಂಡಿಸುವುದಾಗಿ ಹೇಳಿದರು. ಬಸವಣ್ಣನವರ ಅನುಭವ ಮಂಟಪದಲ್ಲಿ ಸಮಾನ ಅವಕಾಶ ಇತ್ತು ಎಂದು ವಿವರಿಸಿದರು. ಮಹಿಳೆಯರಿಗೆ ರಾಜಕೀಯದಲ್ಲಿ ಪ್ರವೇಶ ಸಿಗುವುದೆಂದರೆ ಅದು ಅವರ ಹಕ್ಕು. ಅದನ್ನು ವಿರೋಧಿಸುವುದು ಸಮಾನತೆಯ ವಿರುದ್ಧ ಎಂದು ನುಡಿದರು.
ಬೆಂಗಳೂರು: ಮಹಿಳಾ ಮೀಸಲಿಗೆ ತಡೆವೊಡ್ಡಿದ ಕಾಂಗ್ರೆಸ್ ಕೋಟ್ಯಂತರ ಮಹಿಳೆಯರಿಗೆ ದ್ರೋಹ ಬಗೆದಿದೆ. ಮಹಿಳೆಯರ ಶಕ್ತಿ ನಿರ್ಲಕ್ಷಿಸಿದ ಕಾಂಗ್ರೆಸ್ ಅನ್ನು ದೇಶದ ಜನ ಕ್ಷಮಿಸುವುದಿಲ್ಲ. ಮುಂಬರುವ ರಾಜ್ಯಗಳ ಚುನಾವಣೆಯಲ್ಲಿ ಜನರು ಬುದ್ಧಿ ಕಲಿಸಲಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಅವರು ಹೇಳಿದ್ದಾರೆ.ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಮಹಿಳಾ ಮೀಸಲು ಮಸೂದೆಗೆ ಸೋಲಾಗಿದ್ದು ಸಾಮಾನ್ಯ ವಿಚಾರ ಅಲ್ಲ. ಇದು ರಾಜಕೀಯ ಪಕ್ಷಗಳ ಪಿತೂರಿ, ನಿರ್ಲಕ್ಷ್ಯ, ಮಹಿಳಾ ವಿರೋಧಿ ಭಾವನೆಯ ಸ್ಪಷ್ಟ ಸಂಕೇತ ಎಂದರು. ದೇಶದ ಇತಿಹಾಸದಲ್ಲೇ ಮಹಿಳೆಯರಿಗೆ ಅವರ ಹಕ್ಕನ್ನು ಸಂವಿಧಾನದತ್ತವಾಗಿ ಕೊಡುವ ತೀರ್ಮಾನವನ್ನು ನರೇಂದ್ರ ಮೋದಿ ಅವರು ಮಾಡಿದ್ದರು.
ಬೆಂಗಳೂರು: ಯೋಗೇಶ್ ಗೌಡ ಮರ್ಡರ್ ಕೇಸ್ ನಲ್ಲಿ ಜೀವಾವಧಿ ಶಿಕ್ಷೆಗೊಳಗಾಗಿರುವ ಶಾಸಕ ವಿನಯ್ ಕುಲಕರ್ಣಿ ಮತ್ತು ಗೆಳೆಯ, ನಟ ದರ್ಶನ್ ತೂಗುದೀಪ ಈಗ ಅಕ್ಕಪಕ್ಕದ ಸೆಲ್ ನಲ್ಲೇ ಇದ್ದಾರೆ ಎನ್ನಲಾಗಿದೆ. ನಿನ್ನೆ ಯೋಗೇಶ್ ಗೌಡ ಪ್ರಕರಣದಲ್ಲಿ ವಿನಯ್ ಕುಲಕರ್ಣಿ ಸೇರಿದಂತೆ 17 ಆರೋಪಿಗಳಿಗೆ ಶಿಕ್ಷೆ ಪ್ರಮಾಣ ಪ್ರಕಟಿಸಲಾಗಿತ್ತು. ಅದರಂತೆ ವಿನಯ್ ಕುಲಕರ್ಣಿ ಸೇರಿದಂತೆ 16 ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಇದರ ಬೆನ್ನಲ್ಲೇ ಎಲ್ಲಾ ಅಪರಾಧಿಗಳೂ ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ.
ಬೆಂಗಳೂರು: ಅಡಿಕೆ ಬೆಲೆ ಕಳೆದ ವಾರ ಏರಿಕೆ-ಇಳಿಕೆಯಾಗಿತ್ತು. ಕಳೆದ ವಾರದಂತೆ ಈ ವಾರವೂ ಅದೇ ಟ್ರೆಂಡ್ ಮುಂದುವರಿದಿದೆ. ಇಂದು ಅಡಿಕೆ ಮತ್ತು ಕಾಳು ಮೆಣಸು, ಕೊಬ್ಬರಿ ದರ ಹೇಗಿದೆ ಇಲ್ಲಿದೆ ವಿವರ. ಕಳೆದ ವಾರ ಅಡಿಕೆ ಬೆಲೆಯಲ್ಲಿ ಕೊಂಚ ಏರಿಳಿಕೆಯಾಗುತ್ತಲೇ ಇತ್ತು. ಕಳೆದ ವಾರ ಎರಡು ದಿನ ಸತತವಾಗಿ ಬೆಲೆ ಏರಿಕೆ ಕಂಡುಬರುತ್ತಿತ್ತು. ಅಡಿಕೆ ಬೆಲೆಯಲ್ಲಿ ಇಂದು ಕೊಂಚ ವ್ಯತ್ಯಾಸವಾಗಿಲ್ಲ. ಹೊಸ ಅಡಿಕೆ ಬೆಲೆ ಯಥಾಸ್ಥಿತಿಯಲ್ಲಿದ್ದು 480 ರೂ.ಗಳಷ್ಟಿದೆ. ಹಳೆ ಅಡಿಕೆ ಬೆಲೆ ಯಥಾಸ್ಥಿತಿಯಲ್ಲಿದ್ದು 550 ರೂ. ಗಳಾಗಿದೆ. ಡಬಲ್ ಚೋಲ್ ಬೆಲೆಯೂ 550 ರೂ.ಗಳಷ್ಟಾಗಿದೆ.
ನವದೆಹಲಿ: ಲೋಕಸಭೆಯಲ್ಲಿ ಮಹಿಳಾ ಮೀಸಲು ಮಸೂದೆಗೆ ಸೋಲಾದ ಬೆನ್ನಲ್ಲೇ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿರುವ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಕಾಂಗ್ರೆಸ್ ನ ಮಹಿಳಾ ವಿರೋಧಿ ಧೋರಣೆ ಯಾವತ್ತೂ ಬದಲಾಗಲ್ಲ ಎಂದಿದ್ದಾರೆ. ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು ಕಾಂಗ್ರೆಸ್ ವಿರುದ್ಧ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದ್ದಾರೆ. ‘1996 ಮತ್ತು 2026; ಕರಾಳ ಇತಿಹಾಸ ಮರುಕಳಿಸಿದೆ! ಮೂರು ದಶಕಗಳ ನಂತರವೂ ಕಾಂಗ್ರೆಸ್ ಪಕ್ಷದ ಮಹಿಳಾ ವಿರೋಧಿ ಮನಸ್ಥಿತಿ ಕೊಂಚವೂ ಬದಲಾಗಿಲ್ಲ ಎನ್ನುವುದಕ್ಕೆ ಲೋಕಸಭೆ ಮತ್ತೊಮ್ಮೆ ಸಾಕ್ಷಿಯಾಯಿತು.
ಬೆಂಗಳೂರು: ಕಳೆದ ಕೆಲವು ದಿನಗಳಿಂದ ಚಿನ್ನದ ದರ ಏರಿಕೆ, ಇಳಿಕೆಯಾಗುತ್ತಲೇ ಇದೆ. ಇಂದು ಪರಿಶುದ್ಧ ಚಿನ್ನದ ದರ ಇಳಿಕೆಯಾಗಿದ್ದರೆ ಮತ್ತುಇತರೆ ಚಿನ್ನದ ದರ ಏರಿಕೆಯಾಗಿದೆ. ಇಂದು ಪರಿಶುದ್ಧ ಚಿನ್ನದ ದರ ಮತ್ತು ಇತರೆ ಚಿನ್ನದ ದರ ವಿವರ ಇಲ್ಲಿದೆ ನೋಡಿ. ಚಿನ್ನದ ದರ ಏರಿಕೆಕಳೆದ ವಾರ ಪರಿಶುದ್ಧ ಚಿನ್ನದ ದರ ಸತತವಾಗಿ ಬೆಲೆ ಏರಿಳಿಕೆಯಾಗುತ್ತಲೇ ಇತ್ತು. ಆದರೆ ವಾರಂತ್ಯಕ್ಕೆ ಪರಿಶುದ್ಧ ಚಿನ್ನದ ದರದಲ್ಲಿ ಕೊಂಚ ಇಳಿಕೆಯಾಗಿತ್ತು. ಪರಿಶುದ್ಧ ಚಿನ್ನದ ದರ ನಿನ್ನೆ 1,57,885.00 ರೂ.ಗಳಿತ್ತು. ಆದರೆ ಇಂದು ಇಳಿಕೆಯಾಗಿದ್ದು 1,57,210.00 ರೂ.ಗಳಷ್ಟಿದೆ.
ಜಾತಕದಲ್ಲಿ ಅಪರೂಪಕ್ಕೆ ಶನಿ ಮತ್ತು ಮಂಗಳ ಗ್ರಹಗಳು ಒಂದೇ ಮನೆಯಲ್ಲಿದ್ದಾಗ ಅಥವಾ ಎದುರು ಬದುರು ಇದ್ದಾಗ ದೋಷವುಂಟಾಗುತ್ತದೆ. ಇಂತಹ ಸಂದರ್ಭದಲ್ಲಿ ಏನೆಲ್ಲಾ ಬದಲಾವಣೆ, ಪರಿಣಾಮಗಳು ಜೀವನದಲ್ಲಿ ಎದುರಾಗುತ್ತವೆ ನೋಡಿ. ಮಂಗಳ ಗ್ರಹ ವೇಗ, ಉತ್ಸಾಹ, ಆಕ್ರಮಣಕಾರೀ ಸ್ವಭಾವ ಹೊಂದಿರುತ್ತವೆ. ಶನಿ ಗ್ರಹ ವಿಳಂಬ, ಅಡೆತಡೆಗಳ ಲಕ್ಷಣಗಳನ್ನು ಹೊಂದಿರುತ್ತವೆ. ಈ ಎರಡೂ ತದ್ವಿರುದ್ಧ ಸ್ವಭಾವದ ಗ್ರಹ ದೋಷವಾದಾಗ ಜೀವನದಲ್ಲಿ ಏನೆಲ್ಲಾ ತೊಂದರೆಯಾಗುತ್ತದೆ ಗೊತ್ತಾ? ನೀವು ಜೀವನದಲ್ಲಿ ಎಷ್ಟೇ ಕಠಿಣ ಪ್ರಯತ್ನ ಮಾಡಿದರೂ ಅದಕ್ಕೆ ತಕ್ಕ ಫಲ ಸಿಗದೇ ಹತಾಶೆ ಅನುಭವಿಸಬೇಕಾದೀತು.
ಬೆಂಗಳೂರು: ಕನ್ನಡಿಗ ಕ್ರಿಕೆಟಿಗ ಕೆಎಲ್ ರಾಹುಲ್ ಇಂದು ವಿಶೇಷ ದಿನ ತವರು ಚಿನ್ನಸ್ವಾಮಿ ಮೈದಾನದಲ್ಲಿ ಆರ್ ಸಿಬಿ ವಿರುದ್ಧ ಪಂದ್ಯವಾಡುತ್ತಿದ್ದಾರೆ. ಇಂದು ಕೆಎಲ್ ರಾಹುಲ್ ಜನ್ಮದಿನ. 1992 ರ ಏಪ್ರಿಲ್ 18 ರಂದು ಜನಿಸಿದ ಕಣ್ಣೂರು ಲೋಕೇಶ್ ರಾಹುಲ್ ಅಂತಾರಾಷ್ಟ್ರೀಯ ಕ್ರಿಕೆಟಿಗನಿಗಾಗಿ ಇಂದು ಖ್ಯಾತಿ ಪಡೆದಿದ್ದಾರೆ. ರಾಹುಲ್ ಇಂದು 33 ನೇ ಜನ್ಮದಿನಕ್ಕೆ ಕಾಲಿಟ್ಟಿದ್ದಾರೆ. ವಿಶೇಷವೆಂದರೆ ತಮ್ಮ ಜನ್ಮದಿನದಂದೇ ರಾಹುಲ್ ತಾವು ಕ್ರಿಕೆಟ್ ಆಡಿ ಬೆಳೆದ ಚಿನ್ನಸ್ವಾಮಿ ಮೈದಾನದಲ್ಲಿ ಐಪಿಎಲ್ ಪಂದ್ಯವಾಡುತ್ತಿದ್ದಾರೆ.
ಬೆಂಗಳೂರು: ಶಾಸಕ ವಿನಯ್ ಕುಲಕರ್ಣಿಗೆ ಯೋಗೇಶ್ ಗೌಡ ಮರ್ಡರ್ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ವಿಧಿಸಿದ ಜಡ್ಜ್ ಸಂತೋಷ್ ಗಜಾನನ ಭಟ್ ಸಾಮಾನ್ಯರಲ್ಲ. ಅವರು ನೀಡಿರುವ ಇತರೆ ಪ್ರಮುಖ ತೀರ್ಪುಗಳ ವಿವರ ಇಲ್ಲಿದೆ. ಪ್ರಸ್ತುತ ಬೆಂಗಳೂರಿನ ಪ್ರಧಾನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಧೀಶರಾಗಿರುವ ಸಂತೋಷ್ ಗಜಾನನ ಭಟ್ ಜನಪ್ರತಿನಿಧಿಗಳಿಗೆ ಸಂಬಂಧಿಸಿದ ಹೈ ಪ್ರೊಫೈಲ್ ಕೇಸ್ ಗಳ ವಿಚಾರಣೆ ನಡೆಸಿ ತೀರ್ಪು ನೀಡಿದ ಖ್ಯಾತಿ ಹೊಂದಿದ್ದಾರೆ. ಹಣ ಬಲ, ಅಧಿಕಾರ ಬಲ ಯಾವುದಕ್ಕೂ ಬಗ್ಗದ ದಕ್ಷ ನ್ಯಾಯಾಧೀಶ ಎಂದು ಹೆಸರು ಪಡೆದಿದ್ದಾರೆ.
ಗೆಳೆಯನ ಕೆಲಸ ಹೋಯ್ತು ಎಂದು ಆತನಿಗೆ ಬೇಕರಿ ನಡೆಸಲು ತನ್ನ ಐಷಾರಾಮಿ ಕಾರನ್ನೇ ಯುವಕನೊಬ್ಬ ಬಿಟ್ಟುಕೊಟ್ಟಿದ್ದು ಈ ವಿಡಿಯೋ ಈಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಗೆಳೆಯರು ಎಂದರೆ ಹೇಗಿರಬೇಕು ಎಂಬುದಕ್ಕೆ ಈ ಘಟನೆ ಉತ್ತಮ ನಿದರ್ಶನವಾಗಿದೆ. ಕೇವಲ ಸುಖದಲ್ಲಿ ಜೊತೆಗಿರುವುದಲ್ಲ. ಕಷ್ಟ ಎಂದು ಬಂದಾಗ ಹೆಗಲು ಕೊಡುವವನೇ ನಿಜವಾದ ಗೆಳೆಯ ಎಂಬ ಮಾತಿದೆ. ಅದನ್ನು ಈ ವ್ಯಕ್ತಿ ಮಾಡಿ ತೋರಿಸಿದ್ದಾನೆ. ಜರ್ಮನಿಯಲ್ಲಿ ಮೆಡಿಕಲ್ ರಿಸರ್ಚ್ ಅನಲಿಸ್ಟ್ ಆಗಿ ಮಾಡುತ್ತಿದ್ದ ಒಬ್ಬ ವ್ಯಕ್ತಿ ಈ ಹೃದಯವಂತಿಕೆ ಮೆರೆದಿದ್ದಾನೆ. ಭಾರತದಲ್ಲಿರುವ ತನ್ನ ಗೆಳೆಯ ನೌಕರಿ ಕಳೆದುಕೊಂಡಿದ್ದ.
ಮಂಗಳೂರು: ನಗರದಿಂದ ಮಂತ್ರಾಲಯಕ್ಕೆ ಹೊಸದಾಗಿ ಆರಂಭವಾಗಿರುವ ಸ್ಲೀಪರ್ ಬಸ್ ನ್ನು ಶಾಸಕ ವೇದವ್ಯಾಸ ಕಾಮತ್ ಚಲಾಯಿಸಿದ ವಿಡಿಯೋ ಈಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಕರಾವಳಿ ಭಾಗದಿಂದ ಸಾಕಷ್ಟು ಜನ ಮಂತ್ರಾಲಯಕ್ಕೆ ತೆರಳುವವರಿರುತ್ತಾರೆ. ಅವರ ಅನುಕೂಲಕ್ಕಾಗಿ ಈಗ ಬಹುದಿನಗಳ ಬೇಡಿಕೆಯಂತೆ ಕೆಎಸ್ ಆರ್ ಟಿಸಿ ಸ್ಲೀಪರ್ ಬಸ್ ಆರಂಭಿಸಿದೆ. ಮಂತ್ರಾಲಯಕ್ಕೆ ಸ್ಲೀಪರ್ ಬಸ್ ಆರಂಭವಾದ ಖುಷಿ ಜನರಲ್ಲಿದೆ. ಇದೇ ಖುಷಿಯಲ್ಲಿ ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ವೇದವ್ಯಾಸ ಕಾಮತ್ ಬಸ್ ಚಲಾಯಿಸಿ ಸಂಭ್ರಮಿಸಿದ್ದಾರೆ.
ಬೆಂಗಳೂರು: ಕರ್ನಾಟಕ ವಿದ್ಯುತ್ ಚ್ಛಕ್ತಿ ನಿಯಂತ್ರಣ ಅಯೋಗವು ಗೃಹ ಬಳಕೆಯ ವಿದ್ಯುತ್ ದರ ಪರಿಷ್ಕರಿಸಿದ್ದು ಬೆಸ್ಕಾಂ ವ್ಯಾಪ್ತಿಯಲ್ಲಿ ವಿದ್ಯುತ್ ದರ ಏರಿಕೆಯಾಗಲಿದೆ. ಇದಕ್ಕೆ ವಿಪಕ್ಷ ನಾಯಕ ಆರ್ ಅಶೋಕ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಬೆಸ್ಕಾಂ ವ್ಯಾಪ್ತಿಯಲ್ಲಿ ವಿದ್ಯುತ್ ದರ ಯೂನಿಟ್ ಗೆ 56 ಪೈಸೆಯಷ್ಟು ಹೆಚ್ಚಳವಾಗಲಿದೆ. ವಿದ್ಯುತ್ ದರ ಏರಿಕೆ ಮಾಡಿದ ಬೆನ್ನಲ್ಲೇ ಸಿದ್ದರಾಮಯ್ಯ ಬೆಲೆ ಏರಿಕೆಯ ಬಾದ್ ಷಹಾ ಎಂದು ಟೀಕಾ ಪ್ರಹಾರ ನಡೆಸಿದ್ದಾರೆ. ‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಕನ್ನಡಿಗರನ್ನು ಮತ್ತೊಮ್ಮೆ ಸುಲಿಗೆ ಮಾಡಲು ಹೊರಟಿದೆ.
ನವದೆಹಲಿ: ದೇಶದ ಮಹಿಳೆಯರು ಯಾವತ್ತೂ ನಿಮ್ಮನ್ನು ಕ್ಷಮಿಸಲಾರರು ಎಂದು ಮಹಿಳಾ ಮೀಸಲು ಮಸೂದೆಗೆ ಸೋಲಾದ ಬೆನ್ನಲ್ಲೇ ಗೃಹ ಸಚಿವ ಅಮಿತ್ ಶಾ ಕಾಂಗ್ರೆಸ್ ವಿರುದ್ಧ ಕಿಡಿ ಕಾರಿದ್ದಾರೆ. ಲೋಕಸಭೆಯಲ್ಲಿ ಸತತ 2 ದಿನಗಳ ಕಾಲ ಚರ್ಚೆಯಾದ ಬಳಿಕ ಮಹಿಳಾ ಮೀಸಲು ಮಸೂದೆ ಮತಕ್ಕೆ ಹಾಕಲಾಯಿತು. ಮಸೂದೆ ಪಾಸ್ ಆಗಬೇಕಿದ್ದರೆ 2/3 ರಷ್ಟು ಮತ ಸಿಗಬೇಕಿತ್ತು. ಆದರೆ ವಿಪಕ್ಷಗಳು ಈ ಮಸೂದೆಯನ್ನು ಬೆಂಬಲಿಸಲಿಲ್ಲ. ಈ ಕಾರಣಕ್ಕೆ ಮಹಿಳಾ ಮೀಸಲು ಜಾರಿಗೆ ತರುವ ಕೇಂದ್ರದ ಯತ್ನ ವಿಫಲವಾಯಿತು. ಇದರಿಂದ ಕೆರಳಿದ ಗೃಹಸಚಿವ ಅಮಿತ್ ಶಾ, ದೇಶದ ಮಹಿಳೆಯರು ಇದನ್ನು ಮರೆಯಲ್ಲ, ಮಹಿಳೆಯರು ಯಾವತ್ತೂ ನಿಮ್ಮನ್ನು ಕ್ಷಮಿಸಲ್ಲ ಎಂದು ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ.
ಬೆಂಗಳೂರು: ಐಪಿಎಲ್ 2026 ರ ಇಂದಿನ ಪಂದ್ಯದಲ್ಲಿ ಆರ್ ಸಿಬಿ ವಿರುದ್ಧ ತವರಿನ ಹುಡುಗ ಕೆಎಲ್ ರಾಹುಲ್ ಡೆಲ್ಲಿ ಕ್ಯಾಪಿಟಲ್ಸ್ ಪರವಾಗಿ ಆಡಲಿದ್ದಾರೆ. ಕಳೆದ ಬಾರಿ ಡೆಲ್ಲಿ ಮತ್ತು ಆರ್ ಸಿಬಿ ನಡುವಿನ ಪಂದ್ಯದಲ್ಲಿ ಚಿನ್ನಸ್ವಾಮಿ ಮೈದಾನದಲ್ಲಿ ಅದ್ಭುತ ಇನಿಂಗ್ಸ್ ಆಡಿದ ಬಳಿಕ ಕೆಎಲ್ ರಾಹುಲ್ ಇದು ನನ್ನ ಮೈದಾನ ಎಂದು ಸೆಲೆಬ್ರೇಷನ್ ಮಾಡಿದ್ದನ್ನು ಅಭಿಮಾನಿಗಳು ಮರೆಯುವಂತಿಲ್ಲ. ಇಂದು ಮತ್ತೊಮ್ಮೆ ಆರ್ ಸಿಬಿ-ಡೆಲ್ಲಿ ಮುಖಾಮುಖಿಯಾಗುತ್ತಿದೆ. ಕೆಎಲ್ ರಾಹುಲ್ ಡೆಲ್ಲಿ ತಂಡದಲ್ಲಿದ್ದರೂ ಬೆಂಗಳೂರಿನ ಅಭಿಮಾನಿಗಳು ತವರಿನ ತಂಡವನ್ನು ಬಿಟ್ಟುಕೊಡುವುದಿಲ್ಲ.
ಬೆಂಗಳೂರು: ಕರ್ನಾಟಕದಲ್ಲಿ ತಾಪಮಾನ ದಿನೇ ದಿನೇ ಏರಿಕೆಯಾಗುತ್ತಿದೆ. ಇಂದು ಕೆಲವು ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ ವಿಪರೀತ ಏರಿಕೆಯಾದರೂ ಇದರ ನಡುವೆಯೂ ಸಣ್ಣ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ವಾರವಿಡೀ ವಿಪರೀತ ಬಿಸಿಲು, ತಾಪಮಾನ ಗರಿಷ್ಠ ಮಟ್ಟಕ್ಕೆ ತಲುಪಿತ್ತು. ಈ ವಾರ ಅಷ್ಟೊಂದು ಮಳೆಯಾಗಿರಲಿಲ್ಲ. ವಾರಂತ್ಯಕ್ಕೂ ತಾಪಮಾನ ವಿಪರೀತ ಏರಿಕೆಯಾಗಲಿದೆ. ಆದರೆ ಇದರ ನಡುವೆಯೂ ತುಂತುರು ಮಳೆಯ ಸಾಧ್ಯತೆಯಿದೆ. ರಾಯಚೂರು, ಕಲಬುರಗಿ, ಬಳ್ಳಾರಿ, ಕಲಬುರಗಿ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ 40 ಡಿಗ್ರಿ ದಾಟಲಿದೆ. ಹಾಗಿದ್ದರೂ ಈ ಜಿಲ್ಲೆಗಳಲ್ಲಿ ವಾರಂತ್ಯಕ್ಕೆ ತುಂತುರು ಮಳೆ ಅಥವಾ ಮೋಡ ಕವಿದ ವಾತಾವರಣ ಸಾಧ್ಯತೆಯೂ ಇದೆ ಎನ್ನುತ್ತಿದೆ ಹವಾಮಾನ ವರದಿಗಳು.
ವಿವಾಹ, ಮಕ್ಕಳ ಸಮಸ್ಯೆಯಾಗಿದ್ದರೆ ಸುಬ್ರಹ್ಮಣ್ಯನ ಕುರಿತಾದ ಪ್ರಾರ್ಥನೆ ಮಾಡಬೇಕು. ಇಂದು ತಪ್ಪದೇ ಸುಬ್ರಹ್ಮಣ್ಯ ದೇವರ ಕುರಿತಾದ ಷಣ್ಮುಖ ಪಂಚರತ್ನ ಸ್ತುತಿ ತಪ್ಪದೇ ಓದಿ.ಸ್ಫುರದ್ವಿದ್ಯುದ್ವಲ್ಲೀವಲಯಿತಮಗೋತ್ಸಂಗವಸತಿಂಭವಾಪ್ಪಿತ್ತಪ್ಲುಷ್ಟಾನಮಿತಕರುಣಾಜೀವನವಶಾತ್ ।ಅವಂತಂ ಭಕ್ತಾನಾಮುದಯಕರಮಂಭೋಧರ ಇತಿಪ್ರಮೋದಾದಾವಾಸಂ ವ್ಯತನುತ ಮಯೂರೋಽಸ್ಯ ಸವಿಧೇ ॥ 1 ॥ ಸುಬ್ರಹ್ಮಣ್ಯೋ ಯೋ ಭವೇಜ್ಜ್ಞಾನಶಕ್ತ್ಯಾಸಿದ್ಧಂ ತಸ್ಮಿಂದೇವಸೇನಾಪತಿತ್ವಮ್ ।ಇತ್ಥಂ ಶಕ್ತಿಂ ದೇವಸೇನಾಪತಿತ್ವಂಸುಬ್ರಹ್ಮಣ್ಯೋ ಬಿಭ್ರದೇಷ ವ್ಯನಕ್ತಿ ॥ 2 ॥ ಪಕ್ಷೋಽನಿರ್ವಚನೀಯೋ ದಕ್ಷಿಣ ಇತಿ ಧಿಯಮಶೇಷಜನತಾಯಾಃ ।ಜನಯತಿ ಬರ್ಹೀ ದಕ್ಷಿಣನಿರ್ವಚನಾಯೋಗ್ಯಪಕ್ಷಯುಕ್ತೋಽಯಮ್ ॥ 3 ॥ ಯಃ ಪಕ್ಷಮನಿರ್ವಚನಂ ಯಾತಿ ಸಮವಲಂಬ್ಯ ದೃಶ್ಯತೇ ತೇನ ।ಬ್ರಹ್ಮ ಪರಾತ್ಪರಮಮಲಂ ಸುಬ್ರಹ್ಮಣ್ಯಾಭಿಧಂ ಪರಂ ಜ್ಯೋತಿಃ ॥ 4 ॥