ಲಕ್ನೋ: ಸತತ ಎರಡು ಪಂದ್ಯಗಳಲ್ಲಿ ಸೋತಿದ್ದ ರಾಜಸ್ಥಾನ ರಾಯಲ್ಸ್ ತಂಡವು ಗೆಲುವಿನ ಲಯಕ್ಕೆ ಮರಳಿದೆ. ಬೌಲಿಂಗ್, ಅತ್ಯುತ್ತಮ ಫೀಲ್ಡಿಂಗ್ ನೆರವಿನಿಂದ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ರಾಜಸ್ಥಾನ ತಂಡವು 40 ರನ್ಗಳ ಜಯ ಸಾಧಿಸಿದೆ.ಈ ಗೆಲುವಿನೊಂದಿಗೆ ರಾಯಲ್ಸ್ ತಂಡವು ಅಂಕಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೆ ಜಿಗಿದಿದೆ. ಟಾಸ್ ಸೋತು ಮೊದಲು ಬ್ಯಾಟ್ ಬೀಸಿದ ರಾಜಸ್ಥಾನ 6 ವಿಕೆಟ್ ನಷ್ಟನಕ್ಕೆ 159 ರನ್ ಹೊಡೆಯಿತು. ಸುಲಭದ ಸವಾಲನ್ನು ಬೆನ್ನಟ್ಟಿದ ಲಕ್ನೋ 17.6 ಓವರ್ಗಳಲ್ಲಿ 119 ರನ್ಗಳಿಗೆ ಎಲ್ಲಾ ವಿಕೆಟ್ ಕಳೆದುಕೊಂಡು ಸೋಲನ್ನು ಒಪ್ಪಿಕೊಂಡಿತು.7 ಪಂದ್ಯಗಳಿಂದ 10 ಅಂಕ, 0.790 ನೆಟ್ ರನ್ ರೇಟ್ನೊಂದಿಗೆ ರಾಜಸ್ಥಾನ ಎರಡನೇ ಸ್ಥಾನಕ್ಕೆ ಜಿಗಿಯಿತು. 6 ಪಂದ್ಯಗಳಿಂದ 8 ಅಂಕ 1.171 ನೆಟ್ ರನ್ ರೇಟ್ ಹೊಂದಿರುವ ಬೆಂಗಳೂರು ಮೂರನೇ ಸ್ಥಾನಕ್ಕೆ ಜಾರಿದೆ.
ಬೆಂಗಳೂರು: ಎಸ್ಸೆಸ್ಸೆಲ್ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಏ.23 ಮಧ್ಯಾಹ್ನ 12 ಗಂಟೆಗೆ ಪ್ರಕಟವಾಗಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ತಿಳಿಸಿದೆ. ಹಿಂದಿ ಭಾಷೆಯ ಅಂಕಗಳ ವಿಚಾರದಲ್ಲಿ ಹೈಕೋರ್ಟ್ನಲ್ಲಿ ವಿಚಾರಣೆ ಬಾಕಿ ಇದ್ದ ಕಾರಣ ತಡೆಹಿಡಿಯಲಾಗಿದ್ದ SSLC ಪರೀಕ್ಷೆಯ ಫಲಿತಾಂಶವನ್ನು ನಾಳೆ ಪ್ರಕಟಿಸಲಾಗುವುದು. ಹೈಕೋರ್ಟ್ ತೀರ್ಪಿನ ನಂತರ, ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಗುರುವಾರ ಮಧ್ಯಾಹ್ನ 12 ಗಂಟೆಗೆ ಫಲಿತಾಂಶ ಪ್ರಕಟಿಸುವುದಾಗಿ ತಿಳಿಸಿದ್ದಾರೆ. ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿವಾಸದಲ್ಲಿ ನಡೆದ ಮಹತ್ವದ ಸಭೆಯ ಬಳಿಕ ಶಿಕ್ಷಣ ಸಚಿವ ಮಧು ಬಂಗಾರಪ್ಪ ಈ ವಿಷಯವನ್ನು ಖಚಿತಪಡಿಸಿದ್ದಾರೆ.ವಿದ್ಯಾರ್ಥಿಗಳು ಪರೀಕ್ಷಾ ಮಂಡಳಿಯ ವೆಬ್ಸೈಟ್ https://karresults.nic.in/ ಮತ್ತು ಕರ್ನಾಟಕ ಒನ್ ಆ್ಯಪ್ ಮೂಲಕ ಪಡೆಯಬಹುದಾಗಿದೆ.
ಸೊರಬ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ತೃತೀಯ ಭಾಷೆ ಹಿಂದಿಗೆ ಗ್ರೇಡ್ ಬದಲು ಅಂಕ ನೀಡುವಂತೆ ಕೋರ್ಟ್ ಆದೇಶ ನೀಡಿದ ಹಿನ್ನೆಲೆ ಅದರಂತೆ ಅಂಕ ನೀಡಲಾಗುವುದೆಂದು ಸಚಿವ ಮಧು ಬಂಗಾರಪ್ಪ ಹೇಳಿದರು. ಪಟ್ಟಣದಲ್ಲಿರುವ ಬಂಗಾರಧಾಮದಲ್ಲಿ ಬುಧವಾರ ತಮ್ಮ ತಾಯಿ ಶಕುಂತಲಾ ಬಂಗಾರಪ್ಪ ಅವರ ಪುಣ್ಯಸ್ಮರಣೆ ಅಂಗವಾಗಿ ಸಮಾಧಿಗೆ ವಿಶೇಷ ಪೂಜೆ ಸಲ್ಲಿಸಿದ ನಂತರ ಅವರು ಮಾಧ್ಯಮಕ್ಕೆ ಪ್ರತಿಕ್ರಿಯಿಸಿದರು. ಈ ಬಾರಿ ಹಿಂದಿ ವಿಷಯಕ್ಕೆ ಅಂಕಗಳನ್ನು ನೀಡಲಾಗುವುದು. ಮುಂದಿನ ವರ್ಷ ಗ್ರೇಡ್ ನೀಡುವ ಕುರಿತು ಸರ್ಕಾರ ನಿರ್ಧರಿಸಲಿದೆ ಎಂದರು.
ಹರ್ಯಾನ್ವಿ ನಟಿ ದಿವ್ಯಾಂಕಾ ಸಿರೋಹಿ ಹೃದಯಾಘಾತದಿಂದ 30 ನೇ ವಯಸ್ಸಿನಲ್ಲಿ ನಿಧನರಾದರು. ಹರ್ಯಾನ್ವಿ ಮನರಂಜನಾ ಉದ್ಯಮದಲ್ಲಿ 30 ನೇ ವಯಸ್ಸಿನಲ್ಲಿ ದಿವ್ಯಾಂಕಾ ಸಿರೋಹಿ ಅವರ ಹಠಾತ್ ನಿಧನವು ಭಾರೀ ದೊಡ್ಡ ಆಘಾತವನ್ನು ನೀಡಿದೆ. ವರದಿಗಳ ಪ್ರಕಾರ, ನಟಿ ಮಂಗಳವಾರ ತಡರಾತ್ರಿ ತಮ್ಮ ನಿವಾಸದಲ್ಲಿ ಹೃದಯಾಘಾತಕ್ಕೆ ಒಳಗಾಗಿದ್ದಾರೆ.ಕುಟುಂಬಸ್ಥರು ಆಕೆಯನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ದರು, ಆದರೆ ವೈದ್ಯರು ಬರುವಷ್ಟರಲ್ಲಿ ಅವರು ಸಾವನ್ನಪ್ಪಿದ್ದಾರೆ ಎಂದು ಘೋಷಿಸಿದರು.
ನವದೆಹಲಿ: ಆಗ್ನೇಯ ದೆಹಲಿಯ ಅಮರ್ ಕಾಲೋನಿಯಲ್ಲಿರುವ ತನ್ನ ನಿವಾಸದಲ್ಲಿ ಹಿರಿಯ ಐಆರ್ಎಸ್ ಅಧಿಕಾರಿಯೊಬ್ಬರ ಮಗಳು 21 ವರ್ಷದ ಮಹಿಳೆಯೊಬ್ಬರು ಕೊಲೆಯಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.ಮೂಲಗಳ ಪ್ರಕಾರ, ಬಲಿಪಶುವನ್ನು ಮೊಬೈಲ್ ಫೋನ್ ಚಾರ್ಜರ್ ಕೇಬಲ್ನಿಂದ ಕತ್ತು ಹಿಸುಕಿ, ಲೈಂಗಿಕ ದೌರ್ಜನ್ಯ ನೀಡಿ ಹತ್ಯೆ ಮಾಡಲಾಗಿದೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. ಘಟನೆ ನಡೆದಾಗ ಆಕೆ ಮನೆಯಲ್ಲಿ ಒಬ್ಬಳೇ ಇದ್ದಳು ಎನ್ನಲಾಗಿದೆ.ಒಂದು ತಿಂಗಳ ಹಿಂದೆ ಕೆಲಸದಿಂದ ವಜಾಗೊಳಿಸಲಾದ ಮಾಜಿ ಮನೆಕೆಲಸಗಾರನ ಪಾಲ್ಗೊಳ್ಳುವಿಕೆಯನ್ನು ಪೊಲೀಸರು
ಮಾಧ್ಯಮಗಳಲ್ಲಿ ಡಿವೋರ್ಸ್ ವದಂತಿ ನಡುವೆ ಅಭಿಷೇಕ್ ಬಚ್ಚನ್ ಅವರು ಐಶ್ವರ್ಯಾ ರೈ ನನ್ನ ಜೀವನದ ಸಂಗಾತಿ ಎಂದು ಕೊಂಡಾಡಿದ್ದಾರೆ. ಬಾಲಿವುಡ್ ನಟ ಅಭಿಷೇಕ್ ಬಚ್ಚನ್ ಹಾಗೂ ಮಾಜಿ ವಿಶ್ವಸುಂದರಿ ಐಶ್ವರ್ಯಾ ರೈ ಬಚ್ಚನ್ ಅವರು ಏಪ್ರಿಲ್ 20ರಂದು 19 ವರ್ಷಗಳ ದಾಂಪತ್ಯ ವಾರ್ಷಿಕೋತ್ಸವವನ್ನು ಆಚರಿಸಿಕೊಂಡರು. ಈ ಸಂದರ್ಭದಲ್ಲಿ ಮಗಳೊಂದಿಗಿನ ಫೋಟೋವನ್ನು ಹಂಚಿಕೊಂಡರು. ಈಚೆಗೆ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಅಭಿಷೇಕ್ ಅವರು ಐಶ್ವರ್ಯಾಳೊಂದಿಗೆ ಪ್ರೀತಿಗೆ ಬೀಳುವ ದಿನದಿಂದ ನೆನಪಿಸಿಕೊಂಡರು.
ನವದೆಹಲಿ: ಪ್ರಧಾನಿ ಮೋದಿಯನ್ನು ಭಯೋತ್ಪಾದಕ ಎಂದು ಕರೆದಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು ನೀಡಿದೆ. ಕೇಂದ್ರ ಸಚಿವ ಕಿರಣ್ ರಿಜಿಜು ನೇತೃತ್ವದ ಬಿಜೆಪಿಯ ಉನ್ನತ ನಿಯೋಗ ಇಂದು ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದೆ. ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಚುನಾವಣಾ ಆಯೋಗಕ್ಕೆ ಬಿಜೆಪಿ ಒತ್ತಾಯಿಸಿದೆ. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿರುವ ಕಿರಣ್ ರಿಜಿಜು, ಕಾಂಗ್ರೆಸ್ ತನ್ನ ಕೀಳು ಮಟ್ಟದ ಪರಮಾವಧಿಯನ್ನು ತಲುಪಿದೆ. ನಾವು ಹಲವು ಬಾರಿ ಚುನಾವಣೆ ವಿಚಾರವಾಗಿ ಚುನಾವಣಾ ಆಯೋಗದ ಕಚೇರಿಗೆ ಭೇಟಿ ನೀಡಿದ್ದೆವು.
ಮಜಾಭಾರತ, ಗಿಚ್ಚಿಗಿಲಿಗಿಲಿ ಹಾಗೂ ಬಿಗ್ಬಾಸ್ ಖ್ಯಾತಿಯ ಮಂಜು ಪಾವಗಡ ಅವರು ಗಂಡು ಮಗುವಿನ ತಂದೆಯಾಗಿರುವ ಬಗ್ಗೆ ಖುಷಿ ಹಂಚಿಕೊಂಡಿದ್ದಾರೆ. 2024ರಲ್ಲಿ ನಂದಿನಿ ಎಂಬುವವರನ್ನು ಮದುವೆಯಾದ ಮಂಜು ಅವರು 7 ತಿಂಗಳ ಹಿಂದೆಯೇ ಗಂಡು ಮಗುವನ್ನು ಸ್ವಾಗತಿಸಿರುವುದಾಗಿ ಹೇಳಿಕೊಂಡಿದ್ದಾರೆ. ಕಳೆದ ವರ್ಷ ಅಂದರೆ 2025ರ ಕೊನೆಯಲ್ಲಿ ಮಂಜು ಪಾವಗಡ ಅವರಿಗೆ ಮಗ ಹುಟ್ಟಿದ ಸಂತಸದ ವರ್ಷ. ಸದ್ಯ ಮಗನಿಗೆ 7
ಪಶ್ಚಿಮ ಬಂಗಾಳ: ಬಿಜೆಪಿಯು ಪಶ್ಚಿಮ ಬಂಗಾಳದ ಚುನಾವಣೆಯಲ್ಲಿ ವಿಶ್ವಾಸ ವ್ಯಕ್ತಪಡಿಸಿದ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಪಶ್ಚಿಮ ಬಂಗಾಳದ ಐತಿಹಾಸಿಕ ಪರಂಪರೆಯನ್ನು ಶ್ಲಾಘಿಸಿದರು. ತೃಣಮೂಲ ಕಾಂಗ್ರೆಸ್ (ಟಿಎಂಸಿ) ಕಾರ್ಯಕರ್ತರು ತಮ್ಮ ಸಾರ್ವಜನಿಕ ಸಭೆಯಲ್ಲಿ ಗೊಂದಲವನ್ನು ಸೃಷ್ಟಿಸಿದ್ದಾರೆ ಎಂದು ಅವರು ಆರೋಪಿಸಿದರು. ರ್ಯಾಲಿಯನ್ನು ಮಹತ್ವದ ತಿರುವು ಎಂದು ಕರೆದ ಆದಿತ್ಯನಾಥ್, ಇದು ಪಶ್ಚಿಮ ಬಂಗಾಳದ ರಾಜಕೀಯದಲ್ಲಿ "ಹೊಸ ಯುಗಕ್ಕೆ ನಾಂದಿ" ಎಂದು ಹೇಳಿದರು.
ಪಶ್ಚಿಮ ಬಂಗಾಳ: ಪ್ರಧಾನಿ ನರೇಂದ್ರ ಮೋದಿ ಅವರನ್ನು ಭಯೋತ್ಪಾದಕ ಎಂದು ಹೇಳಿದ ದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಕೇಂದ್ರ ಗೃಹ ಸಚಿವ ಮತ್ತು ಬಿಜೆಪಿ ನಾಯಕ ಅಮಿತ್ ಶಾ ಅವರು ಬುಧವಾರ ತೀವ್ರ ವಾಗ್ದಾಳಿ ನಡೆಸಿದರು. ಭಯೋತ್ಪಾದನೆ ನಿರ್ಮೂಲನೆ ಮಾಡಿದ ನರೇಂದ್ರ ಮೋದಿ ಜಿ ಅವರನ್ನು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭಯೋತ್ಪಾದಕ ಎಂದು ಕರೆಯುತ್ತಿದ್ದಾರೆ. ರಾಹುಲ್ ಬಾಬಾ ಅವರ ಸುತ್ತ ಇದ್ದು ಖರ್ಗೆ ಅವರ ಭಾಷೆಯನ್ನೂ ಕೆಡಿಸಲು ಆರಂಭಿಸಿದ್ದಾರೆ ಎಂದು ಹೇಳಿದ ಶಾ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದರು.
ಬೆಂಗಳೂರು: ಪ್ರಧಾನಿ ಮೋದಿ ಭಯೋತ್ಪಾದಕ ಎಂದು ಕರೆದಿದ್ದ ಮಲ್ಲಿಕಾರ್ಜುನ ಖರ್ಗೆ ಪರ ಪುತ್ರ, ಸಚಿವ ಪ್ರಿಯಾಂಕ್ ಖರ್ಗೆ ಬ್ಯಾಟಿಂಗ್ ಮಾಡಿದ್ದಾರೆ. ಚಂದ್ರಬಾಬು ನಾಯ್ಡು ಕೂಡಾ ಒಮ್ಮೆ ಮೋದಿ ಭಯೋತ್ಪಾದಕ ಎಂದರಲಿಲ್ವೇ ಎಂದು ಪ್ರಶ್ನೆ ಮಾಡಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಬಿಜೆಪಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ನಾಳೆ ಕರ್ನಾಟಕ ಬಿಜೆಪಿ ನಾಯಕರು ಪ್ರತಿಭಟನೆ ನಡೆಸಲು ತೀರ್ಮಾನಿಸಿದ್ದಾರೆ. ದೇಶದ ಪ್ರಧಾನ ಮಂತ್ರಿಯನ್ನು ಭಯೋತ್ಪಾದಕ ಎಂದು ಕರೆದ ಖರ್ಗೆ ದೇಶದ ಕ್ಷಮೆ ಯಾಚಿಸಬೇಕು ಎಂದು ಆಗ್ರಹಿಸುತ್ತಿದ್ದಾರೆ. ಇದರ ಬಗ್ಗೆ ಮಾಧ್ಯಮಗಳಿಗೆ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯಿಸಿದ್ದಾರೆ. ‘ಬಿಜೆಪಿಯವರು ಪ್ರತಿಭಟನೆ ಮಾಡುವುದಿದ್ದರೆ ಮಾಡಲಿ.
ಬೆಂಗಳೂರು: ಅಕ್ರಮವಾಗಿ ವಿದೇಶದಿಂದ ಚಿನ್ನವನ್ನು ಸಾಗಿಸುತ್ತಿದ್ದ ವೇಳೆ ಬೆಂಗಳೂರು ಏರ್ಪೋರ್ಟ್ನಲ್ಲಿ ರೆಡ್ಹ್ಯಾಂಡ್ ಆಗಿ ಸಿಕ್ಕಿಬಿದ್ದ ನಟಿ ರನ್ಯಾ ರಾವ್ಗೆ ಜಾಮೀನು ಸಿಕ್ಕಿದೆ. ಒಂದು ವರ್ಷದ ಹಿಂದೆ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ರನ್ಯಾ ರಾವ್ಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ನಟಿಗೆ ಆರ್ಥಿಕ ಅಪರಾಧಗಳ ತಡೆ ನ್ಯಾಯಾಲಯ ಜಾಮೀನು ನೀಡಿದೆ. 2025 ಮಾರ್ಚ್ 3ರಂದು ನಟಿ ರನ್ಯಾ ರಾವ್ 14.8 ಕೆಜಿ ಚಿನ್ನದ ಕಳ್ಳಸಾಗಣೆ ಮಾಡಿದ ಆರೋಪದ ಮೇಲೆ ಕೆಂಪೇಗೌಡ
ಉಡುಪಿ: ಮಲ್ಪೆಗೆ ಭೇಟಿ ನೀಡಿದ್ದ ಬೆಂಗಳೂರಿನ 37 ವರ್ಷದ ವ್ಯಕ್ತಿಯೊಬ್ಬರು ತಮ್ಮ ಹೋಟೆಲ್ ಕೊಠಡಿಯಲ್ಲಿ ನಿಗೂಢ ರೀತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.ಮೃತರನ್ನು ಬೆಂಗಳೂರಿನ ಆನೇಕಲ್ ನಿವಾಸಿ ಧನಂಜಯ್ ಕೆ ಎನ್ ಎಂದು ಗುರುತಿಸಲಾಗಿದೆ.ವರದಿಗಳ ಪ್ರಕಾರ, ಏಪ್ರಿಲ್ 19 ರಂದು ಸಂಜೆ ವಿಹಾರಕ್ಕೆ ಸ್ನೇಹಿತರ ಗುಂಪಿನೊಂದಿಗೆ ಧನಂಜಯ್ ಮಲ್ಪೆಗೆ ಆಗಮಿಸಿದ್ದರು. ಕಳೆದ ನಾಲ್ಕು ವರ್ಷಗಳಿಂದ ಅವರು ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು ಎಂದು ಹೇಳಲಾಗಿದೆ.
ರಾಜ್ಯದಲ್ಲಿ ಬಿಸಿಲ ಧಗೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಜನರು ಮನೆಯಿಂದ ಹೊರಹೋಗಲು ಸಂಕಷ್ಟ ಪಡುತ್ತಿದ್ದಾರೆ. ಸಾಮಾನ್ಯವಾಗಿ ಬೇಸಿಗೆಯಲ್ಲಿ ಚರ್ಮದ ಸಮಸ್ಯೆಯಾಗಿ ಸಣ್ಣ ಕೆಂಪು ಗುಳ್ಳೆಗಳು ಬೀಳುತ್ತದೆ. ಇದರು ವಿಪರೀತ ತುರಿಕೆ ಹಾಗೂ ಉರಿಯನ್ನು ಉಂಟು ಮಾಡುತ್ತದೆ. ಇನ್ನೂ ಈ ಗುಳ್ಳೆಗೆ ಸರಳವಾದ ಮತ್ತು ಪರಿಣಾಮಕಾರಿಯಾದ ಮನೆಮದ್ದುಗಳು ಇಲ್ಲಿದೆ. ಬೆವರು ಕಜ್ಜಿ ಇರುವ ಜಾಗಕ್ಕೆ ತಣ್ಣೀರು ಅಥವಾ ಐಸ್ ಕ್ಯೂಬ್ಗಳನ್ನು ಬಟ್ಟೆಯಲ್ಲಿ ಸುತ್ತಿ ಮೃದುವಾಗಿ ಒತ್ತಿಕೊಳ್ಳಿ. ಇದು ಉರಿ ಮತ್ತು ತುರಿಕೆಯನ್ನು ತಕ್ಷಣವೇ ಕಡಿಮೆ ಮಾಡುತ್ತದೆ.
ಬ್ಯಾರಕ್ಪುರ: ಪಶ್ಚಿಮ ಬಂಗಾಳದ ವಿಧಾಣಸಭಾ ಚುನಾವಣಾ ಪ್ರಚಾರದಲ್ಲಿ ಮೀನು ಮತ್ತು ಜಲ್ ಮುರಿ ನಡುವೆ ಸುತ್ತುವರೆದು ಟಿಎಂಸಿ ಮತ್ತು ಬಿಜೆಪಿ ನಡುವೆ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಮೀನು, ಮಾಂಸ ಮತ್ತು ಮೊಟ್ಟೆ ತಿನ್ನುವುದನ್ನು ನಿರ್ಬಂಧ ಹೇರಲಿದೆ ಎಂಬ ಟಿಎಂಸಿ ಆರೋಪ ಬೆನ್ನಲ್ಲೇ ಸಿಎಂ ಮಮತಾ ಬ್ಯಾನರ್ಜಿ ಅವರು ಪ್ರಧಾನಿ ಮೋದಿ ವಿರುದ್ಧ ಆಕ್ರೋಶ ಹೊರಹಾಕಿದರು.ಪ್ರಧಾನಿ ನರೇಂದ್ರ ಮೋದಿಗೆ ಮೀನು ತಿನ್ನಲು ಬಯಸಿದರೆ, ನಾನೇ ಅವರಿಗೆ ಅಡುಗೆ ಮಾಡಿ ಬಡಿಸುತ್ತೇನೆಂದು ಮಂಗಳವಾರ ಮಮತಾ ಬ್ಯಾನರ್ಜಿ ವಿರುದ್ಧ ಕಿಡಿಕಾರಿದರು.
ಬೆಂಗಳೂರು: ಅಕ್ರಮವಾಗಿ ಚಿನ್ನ ಸಾಗಣಿಕೆ ಮಾಡಿದ ಆರೋಪದಲ್ಲಿ ಬಂಧಿತರಾಗಿದ್ದ ನಟಿ ರನ್ಯಾ ರಾವ್ ಗೆ ಕೊನೆಗೂ ಬಿಡುಗಡೆ ಭಾಗ್ಯ ಸಿಕ್ಕಿದೆ. ಇದರೊಂದಿಗೆ ಒಂದು ವರ್ಷದ ಜೈಲು ವಾಸ ಕೊನೆಗೊಂಡಿದೆ. ತಮ್ಮ ತಂದೆ ಡಿಜಿಪಿ ರಾಮಚಂದ್ರ ರಾವ್ ಅವರ ಹೆಸರು ಬಳಸಿ ಏರ್ ಪೋರ್ಟ್ ನಲ್ಲಿ ತಪಾಸಣೆಯಿಂದ ವಿನಾಯ್ತಿ ಪಡೆಯುತ್ತಿದ್ದ ರನ್ಯಾ ರಾವ್ ದುಬೈಯಿಂದ ಚಿನ್ನ ಕಳ್ಳ ಸಾಗಣಿಕೆ ಮಾಡುತ್ತಿದ್ದರು ಎನ್ನಲಾಗಿದೆ. ಈ ಸಂಬಂಧ ಕಳೆದ ವರ್ಷ ಮಾರ್ಚ್ ನಲ್ಲಿ ಅವರು ಬಂಧಿತರಾಗಿದ್ದರು. ಇದಾದ ಬಳಿಕ ಅವರು ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದರು. ಇದರ ನಡುವೆ ಅವರ ಜಾಮೀನು ಅರ್ಜಿ ವಜಾಗೊಂಡಿತ್ತು.
ನವದೆಹಲಿ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ನೀಡಿರುವ ಹೇಳಿಕೆಯನ್ನು ಬಿಜೆಪಿ ಚುನಾವಣಾ ಅಸ್ತ್ರವಾಗಿಸಿಕೊಂಡಿದೆ. ಖರ್ಗೆ ಹೇಳಿಕೆ ಖಂಡಿಸಿ ಬಿಜೆಪಿ ಚುನಾವಣಾ ಆಯೋಗದ ಮೆಟ್ಟಿಲೇರಿದೆ.ಪ್ರಧಾನಿ ನರೇಂದ್ರ ಮೋದಿ ಅವರನ್ನು ಭಯೋತ್ಪಾದಕ ಎಂದು ಕರೆದಿದ್ದಖರ್ಗೆ ವಿರುದ್ಧ ಬಿಜೆಪಿ ನಾಯಕರು ಕಿಡಿಕಾರುತ್ತಿದ್ದಾರೆ. ಖರ್ಗೆ ಹೇಳಿಕೆಗೆ ಅಧಿಕೃತವಾಗಿ ಆಕ್ಷೇಪಣೆ ವ್ಯಕ್ತಪಡಿಸಲು ಕೇಂದ್ರ ಸಚಿವ ಕಿರಣ್ ರಿಜಿಜು ನೇತೃತ್ವದ ಬಿಜೆಪಿ ನಿಯೋಗವು ಬುಧವಾರ ಕೇಂದ್ರ ಚುನಾವಣಾ ಆಯೋಗವನ್ನು ಭೇಟಿ ಮಾಡಿ ದೂರು ನೀಡಿದೆ.ಬಿಜೆಪಿ ಈಗಾಗಲೇ ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದು, ಮಲ್ಲಿಕಾರ್ಜುನ ಖರ್ಗೆ ಹೇಳಿಕೆಯು ಮಾದರಿ ನೀತಿ ಸಂಹಿತೆಯ ಸ್ಪಷ್ಟ ಉಲ್ಲಂಘನೆಯಾಗಿದ್ದು, ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 175 ರ ಅಡಿಯಲ್ಲಿ ಅಪರಾಧವಾಗಿದೆ,
ಚಿಕ್ಕಮಗಳೂರು: ಮಲ್ಲಿಕಾರ್ಜುನ ಖರ್ಗೆ ಅವರು ಮಾನಸಿಕ ಅಸ್ವಸ್ಥರ ಹಾಗೇ ಹೇಳಿಕೆಯನ್ನು ಕೊಡ್ತಾ ಇದ್ದಾರೆ. ಇನ್ನೂ ಅವರ ಪಕ್ಷದವರೇ ಭಯೋತ್ಪಾದಕರನ್ನು ಬ್ರದರ್ಸ್ ಅಂತಾ ಕರಿತಾರೇ ಎಣದಯ ಬಿಜೆಪಿ ಎಂಎಲ್ಸಿ ಸಿಟಿ ರವಿ ಆಕ್ರೋಶ ಹೊರಹಾಕಿದರು. ಮೋದಿ ಭಯೋಫತ್ಪಾದಕ ಎಂಬ ಮಲ್ಲಿಕಾರ್ಜುನ್ ಖರ್ಗೆ ಚಿಕ್ಕಮಗಳೂರಿನಲ್ಲಿ ಸಿಟಿ ರವಿ ತಿರುಗೇಟು ನೀಡಿದರು. ಖರ್ಗೇ ಅವರೇ ನೀವು ಮಾನಸಿಕ ಅಸ್ವಸ್ಥರ ರೀತಿ ಹೇಳಿಕೆಯನ್ನು ನೀಡುತ್ತಿದ್ದೀರಿ. ನಿಮ್ಮ ಹೇಳಿಕೆ 6 ದಶಕಗಳ ರಾಜಕೀಯ ಅನುಭವಕ್ಕೆ ತಕ್ಕದ್ದಾಗಿಲ್ಲ. ನಿಜವಾದ ಭಯೋತ್ಪಾದಕರನ್ನು ನಿಮ್ಮ ಪಕ್ಷದ ಮುಖಂಡರು ಬ್ರದರ್ಸ್ ಎಂದು ಕರೆಯುತ್ತಾರೆಂದು ತಿರುಗೇಟು ನೀಡಿದರು.
ಬೆಂಗಳೂರು: ಸಿಎಂ ಸಿದ್ದರಾಮಯ್ಯನವರಿಗೆ ಅವರ ಪಕ್ಷದವರೇ ಮಾಟ ಮಂತ್ರ ಮಾಡಿಸಿರಬೇಕು ಎಂದು ವಿಪಕ್ಷ ನಾಯಕ ಆರ್ ಅಶೋಕ್ ವ್ಯಂಗ್ಯ ಮಾಡಿದ್ದಾರೆ. ಇತ್ತೀಚೆಗೆ ಹಿರಿಯ ಕಾಂಗ್ರೆಸ್ ಶಾಸಕ ಎನ್ ರಾಜಣ್ಣ ಸಿದ್ದರಾಮಯ್ಯನವರು ಯಾಕೋ ಸೈಲೆಂಟ್ ಆಗಿದ್ದಾರೆ. ಅವರು ಮೌನವಾಗಿದ್ದಾರೆ. ಅವರಿಗೆ ಮಾಟ ಮಂತ್ರ ಮಾಡಿಸಿರಬೇಕು ಎಂದು ಹೇಳಿಕೆ ನೀಡಿದ್ದರು. ಅವರ ಹೇಳಿಕೆಗೆ ಆರ್ ಅಶೋಕ್ ಇಂದು ಪ್ರತಿಕ್ರಿಯಿಸಿದ್ದಾರೆ. ‘ರಾಜಣ್ಣ ಹೇಳಿದ್ಮೇಲೆ ಅದು ಸತ್ಯ ಅಂತಾನೇ ಲೆಕ್ಕ. ಅನುಮಾನವೇ ಬೇಡ. ಸಿದ್ದರಾಮಯ್ಯನವರು ಮಾಟ ಮಂತ್ರ ನಂಬಲ್ಲ ಅಂತಾರೆ. ರಾಜಣ್ಣ ಹೇಳಿರೋದು ಕಾಂಗ್ರೆಸ್ ನವರೇ ಮಾಡಿಸಿದ್ದಾರೆ ಅಂತ.
ನವದೆಹಲಿ: ನಿನ್ನೆಯಷ್ಟೇ ಬಹುತೇಕ ಮಹಿಳಾ ಸಂಸದರು ಪುರುಷ ನಾಯಕರೊಂದಿಗೆ ಹಾಸಿಗೆ ಹಂಚಿಕೊಂಡ ಬಳಿಕವಷ್ಟೇ ರಾಜಕೀಯಕ್ಕೆ ಎಂಟ್ರಿ ಕೊಡುತ್ತಾರೆ ಎಂದು ವಿವಾದ ಸೃಷ್ಟಿಸಿದ್ದ ಸಂಸದ ಪಪ್ಪು ಯಾದವ್ ಈಗ ಪುರುಷ ಸಂಸದರು ಪೋರ್ನ್ ವಿಡಿಯೋ ನೋಡ್ತಾರೆ ಎಂದು ಮತ್ತೆ ವಿವಾದಿತ ಹೇಳಿಕೆ ನೀಡಿದ್ದಾರೆ. ನಿನ್ನೆ ಪಪ್ಪು ಯಾದವ್ ನೀಡಿದ ಹೇಳಿಕೆ ವಿರುದ್ಧ ಮಹಿಳಾ ಆಯೋಗ ಕಿಡಿ ಕಾರಿತ್ತು. ಅಲ್ಲದೆ ಅವರ ವಿರುದ್ಧ ಕ್ರಮಕ್ಕೆ ನೋಟಿಸ್ ನೀಡಿತ್ತು. ಮಹಿಳಾ ಸಂಸದರ ಬಗ್ಗೆ ಹಗುರವಾಗಿ ಹೇಳಿಕೆ ನೀಡಿದ ಪಪ್ಪು ಯಾದವ್ ಬಗ್ಗೆ ಭಾರೀ ಆಕ್ರೋಶ ವ್ಯಕ್ತವಾಗಿತ್ತು.
ಬೆಂಗಳೂರು: ಅಡಿಕೆ ಬೆಲೆ ಕಳೆದ ವಾರ ಏರಿಕೆ-ಇಳಿಕೆಯಾಗಿತ್ತು. ಕಳೆದ ವಾರದಂತೆ ಈ ವಾರವೂ ಅದೇ ಟ್ರೆಂಡ್ ಮುಂದುವರಿದಿದೆ. ಇಂದು ಅಡಿಕೆ ಮತ್ತು ಕಾಳು ಮೆಣಸು, ಕೊಬ್ಬರಿ ದರ ಹೇಗಿದೆ ಇಲ್ಲಿದೆ ವಿವರ. ಕಳೆದ ವಾರ ಅಡಿಕೆ ಬೆಲೆಯಲ್ಲಿ ಕೊಂಚ ಏರಿಳಿಕೆಯಾಗುತ್ತಲೇ ಇತ್ತು. ಕಳೆದ ವಾರ ಎರಡು ದಿನ ಸತತವಾಗಿ ಬೆಲೆ ಏರಿಕೆ ಕಂಡುಬರುತ್ತಿತ್ತು. ಅಡಿಕೆ ಬೆಲೆಯಲ್ಲಿ ಇಂದು ಕೊಂಚ ಇಳಿಕೆಯಾಗಿದೆ. ಹೊಸ ಅಡಿಕೆ ಬೆಲೆ 5 ರೂ ಇಳಿಕೆಯಾಗಿದ್ದು 475 ರೂ.ಗಳಷ್ಟಿದೆ. ಹಳೆ ಅಡಿಕೆ ಬೆಲೆ ಯಥಾಸ್ಥಿತಿಯಲ್ಲಿದ್ದು 550 ರೂ. ಗಳಾಗಿದೆ. ಡಬಲ್ ಚೋಲ್ ಬೆಲೆಯೂ 550 ರೂ.ಗಳಷ್ಟಾಗಿದೆ.
ಬೆಂಗಳೂರು: ಕಳೆದ ಕೆಲವು ದಿನಗಳಿಂದ ಚಿನ್ನದ ದರ ಏರಿಕೆ, ಇಳಿಕೆಯಾಗುತ್ತಲೇ ಇದೆ. ಇಂದು ಪರಿಶುದ್ಧ ಚಿನ್ನದ ದರ ಮತ್ತುಇತರೆ ಚಿನ್ನದ ದರ ಇಳಿಕೆಯಾಗಿದೆ. ಇಂದು ಪರಿಶುದ್ಧ ಚಿನ್ನದ ದರ ಮತ್ತು ಇತರೆ ಚಿನ್ನದ ದರ ವಿವರ ಇಲ್ಲಿದೆ ನೋಡಿ. ಚಿನ್ನದ ದರ ಏರಿಕೆಕಳೆದ ವಾರ ಪರಿಶುದ್ಧ ಚಿನ್ನದ ದರ ಸತತವಾಗಿ ಬೆಲೆ ಏರಿಳಿಕೆಯಾಗುತ್ತಲೇ ಇತ್ತು. ಆದರೆ ವಾರಂತ್ಯಕ್ಕೆ ಪರಿಶುದ್ಧ ಚಿನ್ನದ ದರದಲ್ಲಿ ಕೊಂಚ ಇಳಿಕೆಯಾಗಿತ್ತು. ಪರಿಶುದ್ಧ ಚಿನ್ನದ ದರ ವಾರಂತ್ಯಕ್ಕೆ 1,57,210.00 ರೂ.ಗಳಿತ್ತು. ಆದರೆ ಇಂದು ಇಳಿಕೆಯಾಗಿದ್ದು 1,57,110.00 ರೂ.ಗಳಷ್ಟಿದೆ.
ಅಹ್ಮದಾಬಾದ್: ಐಪಿಎಲ್ 2026 ರಲ್ಲಿ ಗುಜರಾತ್ ಟೈಟನ್ಸ್ ಪರ ಆಡುತ್ತಿರುವ ಕಗಿಸೊ ರಬಾಡ ಮೈದಾನದಲ್ಲೇ ಸಿಗರೇಟು ಸೇದಿದ್ದು ತಕ್ಷಣವೇ ಸಹಾಯಕ ಸಿಬ್ಬಂದಿಗಳು ಪ್ರಶ್ನೆ ಮಾಡಿದ್ದಾರೆ. ಪ್ರದರ್ಶನ ಮಾತ್ರವಲ್ಲ, ಮೈದಾನದಲ್ಲಿ ಆಟಗಾರರ ವರ್ತನೆ ಹೇಗಿರುತ್ತದೆ ಎನ್ನುವುದು ಮುಖ್ಯವಾಗುತ್ತದೆ. ಕಗಿಸೊ ರಬಾಡ ಗುಜರಾತ್ ಟೈಟನ್ಸ್ ನ ಅದ್ಭುತ ಬೌಲರ್. ಆದರೆ ಅವರು ಮೈದಾನದಲ್ಲಿ ಸಿಗರೇಟು ಸೇದಿ ಶಿಸ್ತು ಉಲ್ಲಂಘಿಸಿರುವುದು ವಿವಾದಕ್ಕೆ ಕಾರಣವಾಗಿದೆ. ಮುಂಬೈ ಇಂಡಿಯನ್ಸ್ ವಿರುದ್ಧ ಮೊನ್ನೆ ಗುಜರಾತ್ ಟೈಟನ್ಸ್ ಸೋಲು ಅನುಭವಿಸಿತ್ತು. ಈ ಸೋಲಿನ ಬಳಿಕ ಪೆವಿಲಿಯನ್ ಗೆ ಹೋಗುವ ಹಾದಿಯಲ್ಲಿ ಕುಳಿತುಕೊಂಡಿದ್ದ ಕಗಿಸೊ ರಬಾಡ ಪುಂಖಾನುಪುಂಖವಾಗಿ ಸಿಗರೇಟು ಸೇದುತ್ತಿದ್ದರು.
ಬೆಂಗಳೂರು: ಸರ್ಪೈಸ್ ಎಂದು ಪ್ರಿಯಕರನನ್ನು ಉಪಾಯವಾಗಿ ಕೈ ಕಟ್ಟಿಹಾಕಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಂದ ಪ್ರೇಯಸಿ ಇವಳೇ ನೋಡಿ. ಬೆಂಗಳೂರಿನ ಬ್ಯಾಡರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂತಹದ್ದೊಂದು ಧಾರುಣ ಘಟನೆ ನಡೆದಿದೆ. ಪ್ರಿಯಕರ ಕಿರಣ್ ತನ್ನಿಂದ ದೂರವಾಗುತ್ತಿದ್ದಾನೆ ಎಂದು ಅನುಮಾನಗೊಂಡ ಪ್ರೇಯಸಿ ಪ್ರೇಮಾ ವಿದೇಶೀ ಮಾದರಿಯಲ್ಲಿ ಪ್ರಪೋಸ್ ಮಾಡುವುದಾಗಿ ಹೇಳಿ ನಂಬಿಸಿ ಮನೆಗೆ ಕರೆಸಿಕೊಳ್ಳುತ್ತಾಳೆ. ಬಳಿಕ ಕೈ, ಕಾಲುಗಳನ್ನು ಹಗ್ಗದಿಂದ ಕಟ್ಟಿ, ಕಣ್ಣಿಗೆ ಬಟ್ಟೆ ಬಿಗಿದು ಪೆಟ್ರೋಲ್ ಸುರಿದು ಬೆಂಕಿ ಹಚ್ಚುತ್ತಾಳೆ. ಪರಿಣಾಮ ಕಿರಣ್ ಸ್ಥಳದಲ್ಲೇ ಜೀವಂತವಾಗಿ ಸುಟ್ಟು ಭಸ್ಮವಾಗುತ್ತಾನೆ. ಮಂಗಳ ವಾರ ಸಂಜೆ ಈ ದುರ್ಘಟನೆ ನಡೆದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಸುಶಿಕ್ಷಿತರಂತೆ ತೋರುವ ಮಹಿಳೆಯೊಬ್ಬರು ಕಾರಿನಲ್ಲೇ ಮೂತ್ರ ಮಾಡಿದ್ದು ಸಿಟ್ಟಿಗೆದ್ದ ಕ್ಯಾಬ್ ಚಾಲಕ ಹಿಗ್ಗಾಮುಗ್ಗಾ ಬೈದ ವಿಡಿಯೋವೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಕ್ಯಾಬ್ ಚಾಲಕರು ಹಲವು ಅನೂಹ್ಯ ಘಟನೆಗಳನ್ನು ಎದುರಿಸುತ್ತಾರೆ. ಕೆಲವೊಮ್ಮೆ ಗ್ರಾಹಕರು ಕಿತ್ತಾಡುವುದು, ಭಾಷೆಗಾಗಿ ಜಗಳವಾಡುವುದು, ಬುಕ್ ಮಾಡಿ ಕೊನೆ ಕ್ಷಣದಲ್ಲಿ ಕ್ಯಾನ್ಸಲ್ ಮಾಡುವುದು ಇತ್ಯಾದಿ ಸಾಮಾನ್ಯ. ಆದರೆ ಇಲ್ಲಿ ನಡೆದ ಘಟನೆ ಮಾತ್ರ ವಿಚಿತ್ರವಾಗಿದೆ. ನೀಟ್ ಆಗಿ ಡ್ರೆಸ್ ಮಾಡಿಕೊಂಡು ಸುಶಿಕ್ಷಿತಳಂತೆ ಕಾಣುವ ಮಹಿಳೆಯೊಬ್ಬರು ಕ್ಯಾಬ್ ಬುಕ್ ಮಾಡಿರುತ್ತಾರೆ. ಆದರೆ ಕ್ಯಾಬ್ ನಲ್ಲಿ ಕುಳಿತ ಮಹಿಳೆ ಪ್ರಯಾಣದ ವೇಳೆ ಕಾರಿನೊಳಗೇ ಮೂತ್ರ ವಿಸರ್ಜನೆ ಮಾಡಿದ್ದಾಳೆ.
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಖರ್ಗೆ ಅವರದು ಕೀಳು ಮಟ್ಟದ ಹೇಳಿಕೆ. ಇದನ್ನು ತೀವ್ರವಾಗಿ ಖಂಡಿಸುವುದಾಗಿ ಮಾಜಿ ಉಪ ಮುಖ್ಯಮಂತ್ರಿ ಹಾಗೂ ಶಾಸಕ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ಹೇಳಿದರು. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಮಾಧ್ಯಮಗಳೊಂದಿಗೆ ಇಂದು ಮಾತನಾಡಿದ ಅವರು, ಎಐಸಿಸಿ ಅಧ್ಯಕ್ಷರಾಗಿ ಜವಾಬ್ದಾರಿ ಇರುವವರು, ಹಿರಿತನ ಹೊಂದಿರುವವರು ಬಳಸುವ ಭಾಷೆನೋಡಿದರೆ ಅಸಹ್ಯವಾಗುತ್ತದೆ. ಭಾರತೀಯರಿಗೆ ಇದು ಅವಮಾನ ಎಂದರು. ಖರ್ಗೆ ಅವರು ಇಷ್ಟು ಕೀಳುಮಟ್ಟದ ಹೇಳಿಕೆ ನೀಡಬಾರದು. ಈ ಹಿಂದೆಯೂ ಖರ್ಗೆ ಅವರು ಮೋದಿ ಅವರ ವಿರುದ್ಧ ನಾಲಿಗೆ ಹರಿಬಿಟ್ಟಿದ್ದಾರೆ. ಅವಹೇಳನಕಾರಿಯಾಗಿ ಮಾತನಾಡುವುದು ನಂತರ ವಿಷಾಧ ವ್ಯಕ್ತಪಡಿಸುವುದು.
ಬೆಂಗಳೂರು: ದೇಶದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭಯೋತ್ಪಾದಕನಿಗೆ ಹೋಲಿಸಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ದೇಶದ ಜನರ ಕ್ಷಮೆಯಾಚಿಸಬೇಕು ಎಂದು ವಿಧಾನ ಪರಿಷತ್ತಿನ ಮುಖ್ಯ ಸಚೇತಕ ಎನ್.ರವಿಕುಮಾರ್ ಅವರು ಆಗ್ರಹಿಸಿದರು. ಬಿಜೆಪಿ ರಾಜ್ಯ ಕಾರ್ಯಾಲಯ ʼಜಗನ್ನಾಥ ಭವನʼದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಎಐಸಿಸಿ ಅಧ್ಯಕ್ಷರ ಹೇಳಿಕೆಯನ್ನು ಭಾರತೀಯ ಜನತಾ ಪಾರ್ಟಿ ಉಗ್ರವಾಗಿ ಖಂಡಿಸುತ್ತದೆ. ಮೋದಿ ಅವರ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡುವ ಮೂಲಕ ಇಡೀ ಪಕ್ಷಕ್ಕೆ ಹಾಗೂ ದೇಶದ 140 ಕೋಟಿ ಜನಕ್ಕೆ ಅಪಮಾನ ಮಾಡಿದ್ದಾರೆ ಎಂದರು.
ಇದು ಸತತ ಮೂರನೇ ಬಾರಿಗೆ ಮೋದಿಜೀ ರವರನ್ನು ಭಾರತದ ಪ್ರಧಾನಮಂತ್ರಿಗಳ ಸ್ಥಾನದಲ್ಲಿ ಕೂರಿಸಿರುವ ದೇಶದ ಜನತೆಯ ತೀರ್ಪಿಗೆ ನೀವು ನೀಡುತ್ತಿರುವ ಗೌರವವೇ? ವಿಶ್ವದ 32ಕ್ಕೂ ಹೆಚ್ಚು ದೇಶಗಳ ಅತ್ಯುನ್ನತ ಗೌರವಗಳಿಗೆ ಪಾತ್ರರಾಗಿ, ಭಾರತದ ಕೀರ್ತಿಯನ್ನು ಜಗತ್ತಿನ ಶಿಖರಕ್ಕೇರಿಸಿದ ಕೋಟ್ಯಂತರ ಭಾರತೀಯರ ಹೆಮ್ಮೆಯ ನಾಯಕನ ಬಗ್ಗೆ ಇಂತಹ ನಂಜಿನ, ವಿಷಕಾರಿ ಮಾತುಗಳು, ನಿಮ್ಮ ವಿಕೃತ ಮನಸ್ಥಿತಿಯನ್ನು, ನಿಮ್ಮ ರಾಜಕೀಯ ದ್ವೇಷವನ್ನು, ನಿಮ್ಮ ಹತಾಶೆಯನ್ನು ಬಿಂಬಿಸುತ್ತವೆಯೇ ಹೊರತು ಮೋದಿಜೀ ರವರ ವ್ಯಕ್ತಿತ್ವಕ್ಕೆ ಭಂಗವುಂಟು ಮಾಡುವುದು ಸಾಧ್ಯವಿಲ್ಲ ಎಂದು ಅವರು ಸಾಮಾಜಿಕ ಜಾಲತಾಣದಲ್ಲಿ ಹಾಕಿದ ಪೋಸ್ಟ್ನಲ್ಲಿ ತಿಳಿಸಿದ್ದಾರೆ.
ಮುಂಬೈ: ರಸ್ತೆ ಬ್ಲಾಕ್ ಮಾಡಿ ಮಹಾರಾಷ್ಟ್ರದ ಸಚಿವ ಗಿರೀಶ್ ಮಹಾಜನ್ ಮಾಧ್ಯಮಗಳೊಂದಿಗೆ ಮಾತನಾಡುತ್ತಿದ್ದಾಗ ಗೆಟ್ ಔಟ್ ಎಂದು ಮಹಿಳೆಯೊಬ್ಬರು ತರಾಟೆಗೆ ತೆಗೆದುಕೊಂಡ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಮುಂಬೈನ ವರ್ಲಿಯಲ್ಲಿ ಮಹಿಳಾ ಮೀಸಲಾತಿ ವಿರೋಧಿಸಿದ್ದ ಕಾಂಗ್ರೆಸ್ ವಿರುದ್ಧ ಬಿಜೆಪಿ ಪ್ರತಿಭಟನೆ ನಡೆಸುತ್ತಿತ್ತು. ಈ ವೇಳೆ ರಸ್ತೆ ತಡೆ ಮಾಡಲಾಗಿತ್ತು. ಸಚಿವ ಗಿರೀಶ್ ಮಹಾಜನ್ ಮಹಿಳಾ ಮೀಸಲಾತಿ ಕುರಿತಾಗಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡುತ್ತಿದ್ದರು. ಪ್ರತಿಭಟನೆಯಿಂದಾಗಿ ಟ್ರಾಫಿಕ್ ಜಾಮ್ ಉಂಟಾಗಿತ್ತು. ಇದರಿಂದ ರೊಚ್ಚಿಗೆದ್ದ ಮಹಿಳೆಯೊಬ್ಬರು ಮಾಧ್ಯಮಗಳೊಂದಿಗೆ ಮಾತನಾಡುತ್ತಿದ್ದ ಸಚಿವರಿಗೆ ನೇರವಾಗಿ ರಸ್ತೆ ಬ್ಲಾಕ್ ಮಾಡಿರುವುದನ್ನು ಪ್ರಶ್ನೆ ಮಾಡಿದ್ದಾಳೆ. ತಕ್ಷಣವೇ ರಸ್ತೆ ಕ್ಲಿಯರ್ ಮಾಡಿ ಎಂದು ಆವಾಜ್ ಹಾಕಿದ್ದಾಳೆ.
ಹೈದರಾಬಾದ್: ಐಪಿಎಲ್ 2026 ರಲ್ಲಿ ನಿನ್ನೆ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಅಭಿಷೇಕ್ ಶರ್ಮಾ ಭರ್ಜರಿ ಶತಕ ಹೊಡೆದಾಗ ಅವರ ತಂದೆಯ ಸೆಲೆಬ್ರೇಷನ್ ವಿಡಿಯೋ ಈಗ ವೈರಲ್ ಆಗಿದೆ. ನಿನ್ನೆಯ ಪಂದ್ಯದಲ್ಲಿ ಡೆಲ್ಲಿ ವಿರುದ್ಧ ಮೊದಲು ಬ್ಯಾಟಿಂಗ್ ಮಾಡಿದ ಹೈದರಾಬಾದ್ 20 ಓವರ್ ಗಳಲ್ಲಿ 2 ವಿಕೆಟ್ ನಷ್ಟಕ್ಕೆ 242 ರನ್ ಗಳಿಸಿದರು. ಇದಕ್ಕೆ ಉತ್ತರವಾಗಿ ಡೆಲ್ಲಿ 195 ರನ್ ಗಳಿಸಿತು. ಈ ಪಂದ್ಯವನ್ನು ಹೈದರಾಬಾದ್ 47 ರನ್ ಗಳಿಂದ ಗೆದ್ದುಕೊಂಡಿತು. ಈ ಪಂದ್ಯದ ಹೈಲೈಟ್ ಎಂದರೆ ಅಭಿಷೇಕ್ ಶರ್ಮಾ ಶತಕ. ಸತತ ರನ್ ಬರಗಾಲ ಎದುರಿಸುತ್ತಿದ್ದ ಅಭಿಷೇಕ್ ಶರ್ಮಾ ಈ ಪಂದ್ಯದಲ್ಲಿ ತಮ್ಮ ಎಂದಿನ ಚಾರ್ಮ್ ಪ್ರದರ್ಶಿಸಿದರು.
ನವದೆಹಲಿ: ಪ್ರಧಾನಿ ಮೋದಿಯನ್ನು ಭಯೋತ್ಪಾದಕ ಎಂದಿದ್ದಕ್ಕೆ ವಿವಾದವಾಗುತ್ತಿದ್ದಂತೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಮ್ಮ ಹೇಳಿಕೆಗೆ ಸಮಜಾಯಿಷಿ ಕೊಟ್ಟಿದ್ದಾರೆ. ತಮಿಳುನಾಡು ಚುನಾವಣಾ ಪ್ರಚಾರದ ವೇಳೆ ಎಐಡಿಎಂಕೆ ಜೊತೆಗೆ ಬಿಜೆಪಿ ಮೈತ್ರಿಯನ್ನು ಟೀಕಿಸುವ ಭರದಲ್ಲಿ ಮಲ್ಲಿಕಾರ್ಜುನ ಖರ್ಗೆ ನಾಲಿಗೆ ಹರಿಬಿಟ್ಟಿದ್ದರು. ಮೋದಿ ಒಬ್ಬ ಭಯೋತ್ಪಾದಕ. ಅವರ ಜೊತೆ ಎಐಡಿಎಂಕೆ ಯಾಕೆ ಸೇರಿಕೊಂಡಿದೆ ಎಂದು ಪ್ರಶ್ನೆ ಮಾಡಿದ್ದರು. ಅವರ ಹೇಳಿಕೆಗೆ ರಾಷ್ಟ್ರ ಮಟ್ಟದಲ್ಲಿ ಭಾರೀ ಆಕ್ರೋಶ ಎದುರಾಯಿತು. ಪ್ರಧಾನಿ ಹುದ್ದೆಯಲ್ಲಿರುವ ವ್ಯಕ್ತಿಯನ್ನು ಭಯೋತ್ಪಾದಕ ಎಂದು ಹಿರಿಯ ರಾಜಕಾರಣಿಯೊಬ್ಬರು ಕರೆದಿದ್ದು ಕಾಂಗ್ರೆಸ್ ಮನಸ್ಥಿತಿ ಸೂಚಿಸುತ್ತದೆ.
ನ್ಯೂಯಾರ್ಕ್: ಇರಾನ್ ಜೊತೆ ಈ ಹಿಂದೆ ಒಪ್ಪಂದವಾಗಿದ್ದ 15 ದಿನಗಳ ಕದನ ವಿರಾಮ ಕೊನೆಗೊಳ್ಳಲು ಕೆಲವೇ ಕ್ಷಣಗಳಿರುವಾಗ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಹತ್ವದ ತೀರ್ಮಾನ ತೆಗೆದುಕೊಂಡಿದ್ದಾರೆ. ಇರಾನ್ ಮತ್ತು ಅಮೆರಿಕಾ ನಡುವೆ 15 ದಿನಗಳ ಕದನ ವಿರಾಮವಾಗಿತ್ತು. ಇದರ ನಡುವೆಯೂ ಎರಡೂ ದೇಶಗಳ ನಡುವೆ ಘರ್ಷಣೆಗಳು ಮುಂದುವರಿದೇ ಇತ್ತು. ಆದರೂ ಮಾತುಕತೆ ಪ್ರಯತ್ನವೂ ನಡೆದಿತ್ತು. ಆದರೆ ಇದು ಯಾವುದೂ ಫಲ ನೀಡಿಲ್ಲ. ಹೀಗಾಗಿ ಇಂದಿನಿಂದ ಮತ್ತೆ ಯುದ್ಧ ಶುರುವಾಗುತ್ತದೇನೋ ಎಂದು ಆತಂಕ ಎಲ್ಲರಲ್ಲಿತ್ತು.
ನವದೆಹಲಿ: ಪೆಹಲ್ಗಾಮ್ ನಲ್ಲಿ ಉಗ್ರರು ಪೈಶಾಚಿಕ ಕೃತ್ಯ ನಡೆಸಿ ಇಂದಿಗೆ ಒಂದು ವರ್ಷವಾಗಿದೆ. ಈ ಹಿನ್ನಲೆಯಲ್ಲಿ ಪೆಹಲ್ಗಾಮ್ ದಾಳಿ ಸಂತ್ರಸ್ತರಿಗೆ ನಮನ ಸಲ್ಲಿಸಿರುವ ಪ್ರಧಾನಿ ಮೋದಿ ಈ ಕೃತ್ಯವನ್ನು ಯಾವತ್ತೂ ನಾವು ಮರೆಯಲ್ಲ ಎಂದು ಖಡಕ್ ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ. ಏಪ್ರಿಲ್ 22, 2025 ರಂದು ಇದೇ ದಿನ ಬೈಸರಣ್ ವ್ಯಾಲಿಯಲ್ಲಿ ತಮ್ಮ ಕುಟುಂಬದವರ ಜೊತೆ ಸಂತೋಷದಿಂದ ಕಾಲ ಕಳೆಯುತ್ತಿದ್ದ ಭಾರತೀಯ ನಾಗರಿಕರ ಮೇಲೆ ಪಾಕ್ ಪ್ರೇರಿತ ಉಗ್ರರು ನೀನು ಹಿಂದೂನಾ, ಮುಸ್ಲಿಮಾ ಎಂದು ಧರ್ಮ ಕೇಳಿ ಕುಟುಂಬದವರ ಮುಂದೆಯೇ ಪುರುಷರನ್ನು ಗುಂಡಿಕ್ಕಿ ಕೊಂದಿದ್ದರು. ಘಟನೆಯಲ್ಲಿ 26 ಮಂದಿ ಸಾವನ್ನಪ್ಪಿದ್ದರು.
ಜಮ್ಮು ಕಾಶ್ಮೀರ: ಕಳೆದ ವರ್ಷ ಇದೇ ದಿನ ಪೆಹಲ್ಗಾಮ್ ನಲ್ಲಿ ಪಾಕ್ ಪ್ರೇರಿತ ಭಯೋತ್ಪಾದಕರು ಭೀಕರ ದಾಳಿ ನಡೆಸಿ 26 ಹಿಂದೂ ನಾಗರಿಕರನ್ನು ಕೊಂದು ಹಾಕಿದ್ದರು. ಈ ಹೇಯ ಕೃತ್ಯಕ್ಕೆ ಇಂದು ವರ್ಷವಾಗಿದ್ದು, ಇದೀಗ ಪ್ರವಾಸಿಗರು ಅಲ್ಲಿಗೆ ಬರುತ್ತಿದ್ದಾರಾ, ಸೆಕ್ಯುರಿಟಿ ಹೇಗಿದೆ ಇಲ್ಲಿದೆ ವಿವರ. ಪೆಹಲ್ಗಾಮ್ ನ ಬೈಸರಣ್ ಹುಲ್ಲುಗಾವಲಿನ ಮೇಲೆ ತಮ್ಮ ಕುಟುಂಬದವರ ಜೊತೆ ಸಂತೋಷವಾಗಿ ಕಾಲ ಕಳೆಯುತ್ತಿದ್ದ ಭಾರತೀಯ ಮುಗ್ಧ ನಾಗರಿಕರ ಮೇಲೆ ಅಡವಿ ಕಡೆಯಿಂದ ಬಂದ ಉಗ್ರರು ಮನಬಂದಂತೆ ಗುಂಡಿನ ದಾಳಿ ನಡೆಸಿ ಹತ್ಯಾಕಾಂಡ ನಡೆಸಿದ್ದರು.
ಜಮ್ಮು ಕಾಶ್ಮೀರ: ನೀನು ಹಿಂದೂನಾ ಎಂದು ಮಹಿಳೆಯರ ಸಿಂಧೂರ ಅಳಿಸಿ ಹಾಕಿದ ಪೆಹಲ್ಗಾಮ್ ಉಗ್ರದಾಳಿಗೆ ಇಂದು ವರ್ಷ ತುಂಬಿದೆ. ಆ ದಿನವನ್ನು ಭಾರತ ಎಂದಿಗೂ ಮರೆಯದು. ಕಳೆದ ವರ್ಷ ಇದೇ ದಿನ ಕಾಶ್ಮೀರ ಕಣಿವೆಯ ಪೆಹಲ್ಗಾಮ್ ನಲ್ಲಿ ತಮ್ಮ ಕುಟುಂಬಸ್ಥರೊಂದಿಗೆ ಸಂತೋಷದಿಂದ ಕಾಲ ಕಳೆಯುತ್ತಿದ್ದ ಭಾರತೀಯ ಪ್ರವಾಸಿಗರ ಮೇಲೆ ಪಾಕಿಸ್ತಾನ ಪ್ರೇರಿತ ಉಗ್ರರು ಗುಂಡಿನ ಮಳೆಗೆರೆದಿದ್ದರು. ಪೆಹಲ್ಗಾಮ್ ಕಾಡು ಪ್ರದೇಶದಿಂದ ವ್ಯೂ ಪಾಯಿಂಟ್ ಕಡೆಗೆ ಬಂದ ಉಗ್ರರು ಅಲ್ಲಿ ಸಿಕ್ಕ ಸಿಕ್ಕವರನ್ನು ನೀನು ಹಿಂದೂನಾ, ಮುಸ್ಲಿಮಾ ಎಂದು ಕೇಳಿ ಗಂಡು ಮಕ್ಕಳನ್ನೇ ಟಾರ್ಗೆಟ್ ಮಾಡಿ ಗುಂಡಿಕ್ಕಿ ಹತ್ಯೆ ಮಾಡಿದ್ದರು.
ಬೆಂಗಳೂರು: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಉರಿಬಿಸಿಲು ಹೆಚ್ಚಾಗುತ್ತಿದ್ದರೆ ಕೆಲವು ಜಿಲ್ಲೆಗಳಲ್ಲಿ ಆಲಿಕಲ್ಲು ಮಳೆಯಾಗುತ್ತಿದೆ. ಇಂದು ಯಾವ ಜಿಲ್ಲೆಗಳಿಗೆ ಬಿಸಿಲು, ಯಾವ ಜಿಲ್ಲೆಗಳಿಗೆ ಮಳೆಯಾಗಲಿದೆ ಇಲ್ಲಿದೆ ಹವಾಮಾನ ವರದಿ. ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಕಳೆದ ಎರಡು ಮೂರು ದಿನಗಳಿಂದ ಸಣ್ಣ ಮಟ್ಟಿಗೆ ಮಳೆಯಾಗಿತ್ತು. ದಕ್ಷಿಣ ಕನ್ನಡ, ಚಿಕ್ಕಮಗಳೂರಿನ ಕೆಲವು ಕಡೆ ಆಲಿಕಲ್ಲು ಮಳೆಯಾದ ಘಟನೆಗಳೂ ಕಂಡುಬಂದಿದ್ದವು. ಇಂದೂ ಕೆಲವು ಜಿಲ್ಲೆಗಳಿಗೆ ಮಳೆಯ ಸೂಚನೆಯಿದೆ. ಇಂದು ದಕ್ಷಿಣ ಕನ್ನಡ, ಉತ್ತರ ಕನ್ನಡ, ಬೆಳಗಾವಿ ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಸೂಚನೆಯಿದೆ.
ವಿದ್ಯಾಭ್ಯಾಸದಲ್ಲಿ ಎದುರಾಗುವ ತೊಡಕುಗಳನ್ನು ನಿವಾರಿಸಬೇಕು ಎಂದರೆ ಸರಸ್ವತಿ ದೇವಿಯ ಅನುಗ್ರಹ ಪಡೆಯಬೇಕು. ಅದಕ್ಕಾಗಿ ಇಂದು ಸರಸ್ವತೀ ದ್ವಾದಶ ನಾಮ ಸ್ತೋತ್ರವನ್ನು ಓದಿ. ಕನ್ನಡದಲ್ಲಿ ಇಲ್ಲಿದೆ.ಸರಸ್ವತೀ ತ್ವಯಂ ದೃಷ್ಟ್ಯಾ ವೀಣಾಪುಸ್ತಕಧಾರಿಣೀ ।ಹಂಸವಾಹ ಸಮಾಯುಕ್ತಾ ವಿದ್ಯಾದಾನಕರೀ ಮಮ ॥ 1 ॥ ಪ್ರಥಮಂ ಭಾರತೀ ನಾಮಾ ದ್ವಿತೀಯಂ ಚ ಸರಸ್ವತೀ ।ತೃತೀಯಂ ಶಾರದಾದೇವೀ ಚತುರ್ಥಂ ಹಂಸವಾಹನಾ ॥ 2 ॥ ಪಂಚಮಂ ಜಗತೀಖ್ಯಾತಂ ಷಷ್ಠಂ ವಾಗೀಶ್ವರೀ ತಥಾ ।ಕೌಮಾರೀ ಸಪ್ತಮಂ ಪ್ರೋಕ್ತಮಷ್ಟಮಂ ಬ್ರಹ್ಮಚಾರಿಣೀ ॥ 3 ॥ ನವಮಂ ಬುದ್ಧಿಧಾತ್ರೀ ಚ ದಶಮಂ ವರದಾಯಿನೀ ।ಏಕಾದಶಂ ಕ್ಷುದ್ರಘಂಟಾ ದ್ವಾದಶಂ ಭುವನೇಶ್ವರೀ ॥ 4 ॥
ಹೈದರಾಬಾದ್: ಅಭಿಷೇಕ್ ಶರ್ಮಾ ಅವರ ಸ್ಟೋಟಕ ಶತಕದ ನೆರವಿನಿಂದ ಸನ್ರೈಸರ್ಸ್ ಹೈದರಾಬಾದ್ ತಂಡವು ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ 31ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 47 ರನ್ಗಳ ಭರ್ಜರಿ ಗೆಲುವು ಸಾಧಿಸಿತು.ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಎಸ್ಆರ್ಎಚ್ ಪರ ಆರಂಭಿಕ ಬ್ಯಾಟರ್ ಅಭಿಷೇಕ್ ಶರ್ಮಾ ಅವರು ಕೇವಲ 68 ಎಸೆತಗಳಲ್ಲಿ 10 ಬೌಂಡರಿ ಹಾಗೂ 10 ಸಿಕ್ಸರ್ ಸಹಿತ ಅಜೇಯ 135 ರನ್ ಗಳಿಸಿದರು. ಟ್ರಾವಿಸ್ ಹೆಡ್ (37 ರನ್), ನಾಯಕ ಇಶಾನ್ ಕಿಶನ್ (25 ರನ್) ಹಾಗೂ ಕ್ಲಾಸೆನ್ (37ರನ್) ಕೂಡ ಜವಾಬ್ದಾರಿಯುತ ಇನ್ನಿಂಗ್ಸ್ ಆಡಿದರು. 20 ಓವರ್ಗಳ ಅಂತ್ಯಕ್ಕೆ 2 ವಿಕೆಟ್ ನಷ್ಟಕ್ಕೆ 242 ರನ್ ಗಳಿಸಿತು.
ಹೈದರಾಬಾದ್: ಇಂಡಿಯನ್ ಪ್ರೀಮಿಯರ್ ಲೀಗ್ನ 31ನೇ ಪಂದ್ಯದಲ್ಲಿ ಸನ್ರೈಸರ್ಸ್ ಹೈದರಾಬಾದ್ ತಂಡದ ಬ್ಯಾಟರ್ ಅಭಿಷೇಕ್ ಅಬ್ಬರಿಸಿ ಬೊಬ್ಬಿರಿದಿದ್ದಾರೆ. 68 ಎಸೆತಗಳಲ್ಲಿ ಔಟಾಗದೇ 135 ರನ್ ಬಾರಿಸಿದ್ದಾರೆ. ಹೈದರಾಬಾದ್ ಪರ ಅಭಿಷೇಕ್ ಶರ್ಮಾ ಕೇವಲ 47 ಎಸೆತಗಳಲ್ಲಿ ಸ್ಪೋಟಕ ಶತಕ ಸಿಡಿಸಿ ಮಿಂಚಿದ್ದಾರೆ. ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಬೌಲಿಂಗ್ ಸ್ನೇಹಿ ಪಿಚ್ನಲ್ಲಿ, ನಿಧಾನಗತಿಯ ಆರಂಭದ ನಂತರ ಗೇರ್ ಬದಲಾಯಿಸಿ, ಈ ಆವೃತ್ತಿಯ ಮೊದಲ ಶತಕವನ್ನು ದಾಖಲಿಸಿದರು. ಇದು ಅವರ 9ನೇ ಟಿ20 ಶತಕವಾಗಿದೆ. ಅವರ ಶತಕದಲ್ಲಿ 10 ಬೌಂಡರಿ ಮತ್ತು 10 ಸಿಕ್ಸರ್ಗಳಿದ್ದವು. ಅವರ ಆಟದ ನೆರವಿನಿಂದ ಸನ್ರೈಸರ್ಸ್ ತಂಡವು 20 ಓವರ್ಗಳಲ್ಲಿ 2 ವಿಕೆಟ್ಗೆ 242 ರನ್ ಕಲೆ ಹಾಕಿದೆ.
ಚೆನ್ನೈ: ತಮಿಳುನಾಡು ವಿಧಾನಸಭೆ ಚುನಾವಣೆ-2026ರ ಬಹಿರಂಗ ಪ್ರಚಾರಕ್ಕೆ ತೆರೆಬಿದ್ದಿದೆ. ಬುಧವಾರದಿಂದ ಮನೆ-ಮನೆ ಪ್ರಚಾರ ನಡೆಯಲಿದೆ. ಗುರುವಾರ ಒಂದೇ ಹಂತದಲ್ಲಿ 234 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. ಚುನಾವಣೆಯು ಡಿಎಂಕೆ ಮತ್ತು ಕಾಂಗ್ರೆಸ್ ನೇತೃತ್ವದ ಇಂಡಿಯಾ ಒಕ್ಕೂಟ ಮತ್ತು ಎಐಎಡಿಎಂಕೆ ಮತ್ತು ಬಿಜೆಪಿ ನೇತೃತ್ವದ ಎನ್ಡಿಎ ಒಕ್ಕೂಟದ ನಡುವೆ ನೇರ ಸ್ಪರ್ಧೆ ನಡೆಯಲಿದೆ. ಇದೇ ಮೊದಲ ಬಾರಿಗೆ ತಮಿಳು ಸೂಪರ್ ಸ್ಟಾರ್ ಟಿವಿಕೆ ಪಕ್ಷ ಕಟ್ಟಿ ಸ್ವತಂತ್ರವಾಗಿ ಸ್ಪರ್ಧಿಸಿ ಚುನಾವಣಾ ಕಣಕ್ಕೆ ಧುಮುಕಿದ್ದಾರೆ. ತಮಿಳುನಾಡಿನಲ್ಲಿ ಈ ಬಾರಿಯೂ ಆಡಳಿತಾರೂಢ ಡಿಎಂಕೆ, ಕಾಂಗ್ರೆಸ್, ಪ್ರತಿಸ್ಪರ್ಧಿ ಎನ್ ಡಿಎ ಮೈತ್ರಿಕೂಟದ ಎಐಎಡಿಎಂಕೆ ಹಾಗೂ ನಟ ವಿಜಯ್ ನೇತೃತ್ವದ ಟಿವಿಕೆ ಸೇರಿದಂತೆ ವಿವಿಧ ಪಕ್ಷಗಳು ಭರ್ಜರಿ ರೋಡ್ ಶೋ ನಡೆಸಿ ಚುನಾವಣ ಪ್ರಚಾರ ನಡೆಸಿದ್ದವು.
ತ್ರಿಶೂರ್: ಕೇರಳದ ಸುಪ್ರಸಿದ್ಧ ತ್ರಿಶೂರ್ ಪೂರಂ ಹಬ್ಬಕ್ಕಾಗಿ ಪಟಾಕಿಗಳನ್ನು ತಯಾರಿಸುತ್ತಿದ್ದ ಘಟಕದಲ್ಲಿ ಭೀಕರ ಸ್ಫೋಟ ಸಂಭವಿಸಿದೆ. ಮಂಗಳವಾರ ಮಧ್ಯಾಹ್ನ ಭೀಕರ ಸ್ಫೋಟ ಸಂಭವಿಸಿ ಸುಮಾರು 13 ಜನರು ಮೃತಪಟ್ಟು, 40ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ ಎನ್ನಲಾಗಿದೆ.ಸ್ಫೋಟದ ತೀವ್ರತೆಗೆ ಪಟಾಕಿ ಸಂಗ್ರಹಣಾ ಕೇಂದ್ರ ಸಂಪೂರ್ಣವಾಗಿ ಧ್ವಂಸಗೊಂಡಿದೆ. ಸುದ್ದಿ ತಿಳಿಯುತ್ತಿದ್ದಂತೆಯೇ ಅಗ್ನಿಶಾಮಕ ದಳ ಮತ್ತು ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದಾರೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗಳಿಗೆ ದಾಖಲಿಸಲಾಗಿದ್ದು, ತುರ್ತು ಚಿಕಿತ್ಸೆ ನೀಡಲಾಗುತ್ತಿದೆ.ಘಟನೆಯಲ್ಲಿ 13 ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಐವರ ಸ್ಥಿತಿ ಗಂಭೀರವಾಗಿದ್ದು, ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆಗಳಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪಾಟ್ನಾ: ಸಂಸದ ಪಪ್ಪು ಯಾದವ್ ಅಲಿಯಾಸ್ ರಾಜೇಶ್ ರಂಜನ್ ನಾಲಗೆ ಹರಿಬಿಟ್ಟಿದ್ದಾರೆ. ಬಿಹಾರದ ಪೂರ್ಣಿಯದ ಸ್ವತಂತ್ರ ಸಂಸದ ಪಪ್ಪು ಯಾದವ್ ಮಹಿಳಾ ರಾಜಕಾರಣದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.ಭಾರತೀಯ ಸಮಾಜದಲ್ಲಿ ಮಹಿಳೆಯರನ್ನು ದೇವತೆಗಳೆಂದು ಪರಿಗಣಿಸಲಾಗಿದ್ದರೂ, ವಾಸ್ತವವು ಇದಕ್ಕೆ ವಿರುದ್ಧವಾಗಿದೆ. ರಾಜಕೀಯದಲ್ಲಿ ಹೆಚ್ಚಿನ ಮಹಿಳೆಯರು ಪ್ರಭಾವಿ ಜನರ ವೈಯಕ್ತಿಕ ಕ್ಷೇತ್ರದಲ್ಲಿ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸುತ್ತಾರೆ ಎನ್ನುತ್ತಾ ವಿವಾದ ಮೈಮೇಲೆ ಎಳೆದುಕೊಂಡಿದ್ದಾರೆ.ಮಹಿಳೆಯರ ಶೋಷಣೆ ಅಧಿಕಾರದ ಕಾರಿಡಾರ್ನಲ್ಲಿ ಆಳವಾಗಿ ಬೇರೂರಿದೆ ಎಂದು ಆರೋಪಿಸಿದರು. ಕಟು ಸತ್ಯವೆಂದರೆ ಶೇಕಡ 90ರಷ್ಟು ಮಹಿಳಾ ರಾಜಕೀಯ ವೃತ್ತಿಜೀವನವು ರಾಜಕಾರಣಿಗಳ ಹಾಸಿಗೆಯಲ್ಲಿ ಪ್ರಾರಂಭವಾಗುತ್ತದೆ ಎಂದು ಪಪ್ಪು ಯಾದವ್ ಹೇಳಿದ್ದಾರೆ.
ಚೆನ್ನೈ: ಹಾಲಿ ಐಪಿಎಲ್ ಟೂರ್ನಿಯಲ್ಲಿ ಸತತ ಸೋಲುಗಳಿಂದ ಕಂಗೆಟ್ಟಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಮತ್ತೊಂದು ಬಿಗ್ ಶಾಕ್ ಎದುರಾಗಿದೆ. ಸತತ ಸೋಲುಗಳ ಬಳಿಕ ಎರಡು ಗೆಲುವುಗಳ ಮೂಲಕ ಹಳಿಗೆ ಮರಳಿದ್ದ ತಂಡಕ್ಕೆ ಇದೀಗ ಟೂರ್ನಿಯ ಮಧ್ಯದಲ್ಲೇ ಮತ್ತೆ ಸಂಕಷ್ಟ ಎದುರಾಗಿದೆ. ಸಿಎಸ್ಕೆ ಪರ ಅಧಿಕ ರನ್ ಕಲೆಹಾಕಿದ್ದ ಯುವ ಬ್ಯಾಟಿಂಗ್ ಸೆನ್ಸೇಷನ್ ಆಯುಷ್ ಮ್ಹಾತ್ರೆ ಇದೀಗ ಟೂರ್ನಿಯಿಂದಲೇ ಹೊರಬಿದ್ದಿದ್ದಾರೆ. ಏಪ್ರಿಲ್ 18 ರಂದು ಸನ್ರೈಸರ್ಸ್ ಹೈದರಾಬಾದ್ ವಿರುದ್ಧದ ಸಿಎಸ್ಕೆ ಪಂದ್ಯದಲ್ಲಿ ಬ್ಯಾಟಿಂಗ್ ಮಾಡುವಾಗ 18 ವರ್ಷದ ಆರಂಭಿಕ ಆಟಗಾರ ಗಾಯಗೊಂಡರು. ಸೋಮವಾರ ಬಿಡುಗಡೆಯಾದ ಅಧಿಕೃತ ಹೇಳಿಕೆಯಲ್ಲಿ, ಫ್ರಾಂಚೈಸಿಯು ಮ್ಹಾತ್ರೆ ಅವರ ಗಾಯವು 6 ರಿಂದ 12 ವಾರಗಳ ಪುನರ್ವಸತಿ ಅವಧಿಯ ಅಗತ್ಯವಿರುವಷ್ಟು ತೀವ್ರವಾಗಿದೆ ಎಂದು ದೃಢಪಡಿಸಿದೆ.
ಇಸ್ಲಾಮಾಬಾದ್: ಇರಾನ್ ಮತ್ತು ಅಮೆರಿಕಾ ನಡುವಿನ ಮೊದಲ ಸುತ್ತಿನ ಮಾತುಕತೆ ಮುರಿದುಬಿದ್ದಿದೆ. ಇದೀಗ ಎರಡನೇ ಸುತ್ತಿನ ಮಾತುಕತೆಗೆ ಸಿದ್ಧತೆ ನಡೆಸಯುತ್ತಿದೆ. ಈ ಮಾತುಕತೆಗೆ ಖುದ್ದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಾಜರಾಗಲು ಸಿದ್ಧತೆ ನಡೆಸಿದ್ದಾರೆ ಎನ್ನಲಾಗಿದೆ.ಅಮೆರಿಕ ಉಪಾಧ್ಯಕ್ಷ ಜೆ.ಡಿ. ವ್ಯಾನ್ಸ್ ಅವರು ಮಂಗಳವಾರ (ಏಪ್ರಿಲ್ 21ರಂದು) ಪಾಕಿಸ್ತಾನಕ್ಕೆ ಪ್ರಯಾಣ ಬೆಳೆಸಲಿದ್ದಾರೆ ಎಂದು ಅಮೆರಿಕದ ಮೂಲಗಳು ತಿಳಿಸಿವೆ. ಈ ಬಗ್ಗೆ ಖಚಿತವಾಗಿಲ್ಲ.ಯುರೇನಿಯಂ ವಿಚಾರ, ಅಮೆರಿಕದಿಂದ ಕದನ ವಿರಾಮ ಉಲ್ಲಂಘನೆ ಸೇರಿದಂತೆ ಹಲವು ಕಾರಣಗಳಿಂದಾಗಿ ಮಾತುಕತೆಯಲ್ಲಿ ಪಾಲ್ಗೊಳ್ಳಲು ಇರಾನ್ ನಿರಾಕರಿಸಿರುವ ಹೊತ್ತಲ್ಲಿ ಈ ರೀತಿಯ ವರದಿಗಳು ಪ್ರಕಟವಾಗಿವೆ. ಮಾತುಕತೆಯು ಬುಧವಾರ ಪುನರಾರಂಭಗೊಳ್ಳುವ ಸಾಧ್ಯತೆ ಇದೆ. ಹಾಗೇನಾದರೂ ಆದರೆ, ಟ್ರಂಪ್ ಅವರೇ ಭಾಗವಹಿಸಲಿದ್ದಾರೆ.
ಹೈದರಾಬಾದ್: ಇಂಡಿಯನ್ ಸೂಪರ್ ಲೀಗ್ನ ಇಂದಿನ ಪಂದ್ಯದಲ್ಲಿ ಸನ್ರೈಸರ್ಸ್ ಹೈದರಾಬಾದ್ ತಂಡವು ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಎದುರಿಸಲಿದೆ. ಸನ್ರೈಸರ್ಸ್ ತಂಡವು ಹ್ಯಾಟ್ರಿಕ್ ಗೆಲುವಿನ ನಿರೀಕ್ಷೆಯಲ್ಲಿದೆ.ಸನ್ರೈಸರ್ಸ್ ಮತ್ತು ಕ್ಯಾಪಿಟಲ್ಸ್ ತಂಡಗಳು ತಂಡಗಳು ತಲಾ ಆರು ಪಾಯಿಂಟ್ಸ್ ಪಡೆದಿವೆ. ಒಂದು ಪಂದ್ಯ ಹೆಚ್ಚು ಆಡಿರುವ ಡೆಲ್ಲಿ ತಂಡವು ಉತ್ತಮ ನೆಟ್ ರನ್ ರೇಟ್ ಆಧಾರದಲ್ಲಿ ಚೂರು ಮುಂದಿದೆ.ಸನ್ರೈಸರ್ಸ್ ತಂಡದ ನಾಯಕ ಪ್ಯಾಟ್ ಕಮಿನ್ಸ್ ಅನುಪಸ್ಥಿತಿಯಲ್ಲಿ ತಂಡದ ಬೌಲಿಂಗ್ ಆರಂಭದಲ್ಲಿ ಪರಿಣಾಮಕಾರಿ ಎನಿಸಿರಲಿಲ್ಲ. ಆಸ್ಟ್ರೇಲಿಯಾದ ವೇಗಿ ತಂಡವನ್ನು ಸೇರಿಕೊಂಡಿದ್ದರೂ ಮಂಗಳವಾರದ ಪಂದ್ಯಕ್ಕೂ ಲಭ್ಯರಿಲ್ಲ. ಆದರೆ, ಪ್ರಫುಲ್ ಹಿಂಗೆ, ಸಾಕಿಬ್ ಹುಸೇನ್, ಶಿವಾಂಗ್ ಕುಮಾರ್ ಅವರು ಹುರುಪಿನಿಂದ ಬೌಲಿಂಗ್ ಮಾಡಿದ್ದಾರೆ.
ಚೆನ್ನೈ: ಹಲವು ಸೂಪರ್ ಹಿಟ್ ಸಿನಿಮಾ ನೀಡಿರುವ ಭಾರತೀಯ ಚಿತ್ರರಂಗದ ಖ್ಯಾತ ನಿರ್ದೇಶಕ ಅಟ್ಲಿ ಹಾಗೂ ಅವರ ಪತ್ನಿ ಪ್ರಿಯಾ ಅವರ ಮನೆಯಲ್ಲಿ ಸಂಭ್ರಮದ ವಾತಾವರಣ ನಿರ್ಮಾಣ ಆಗಿದೆ. ನಿರ್ದೇಶಕ, ನಿರ್ಮಾಪಕ ಅಟ್ಲೀ ಅವರ ಪತ್ನಿ ಪ್ರಿಯಾ ಅವರು ಸೋಮವಾರ ಎರಡನೇ ಮಗುವಿಗೆ ಜನ್ಮ ನೀಡಿದ್ದು, ದಂಪತಿ ಹೆಣ್ಣು ಮಗುವನ್ನು ಬರಮಾಡಿಕೊಂಡಿದ್ದಾರೆ.ಈ ಕುರಿತು ಅಟ್ಲೀ ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಈಗಾಗಲೇ ದಂಪತಿಗೆ 3 ವರ್ಷದ ಮೀರ್ ಎಂಬ ಮಗನಿದ್ದು, ವಿಭಿನ್ನವಾಗಿ ಕಾರ್ಟೂನ್ ಮೂಲಕ ಸಿಹಿ ಸುದ್ದಿಯನ್ನು ತಿಳಿಸಿದ್ದಾರೆ. ಅಟ್ಲಿ ನಿರ್ದೇಶನದ ರಾಕಾ ಚಿತ್ರದ ನಾಯಕಿ ದೀಪಿಕಾ ಪಡುಕೋಣೆ ಅವರು ತಮ್ಮ ಎರಡನೇ ಪ್ರೆಗ್ನೆನ್ಸಿ ಸುದ್ದಿಯನ್ನು ಹಂಚಿಕೊಂಡ ಮರುದಿನವೇ ಸಿಹಿ ಸುದ್ದಿಯನ್ನು ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ.
ಲಖನೌ: ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ಆಡುವ ಲಕ್ನೋ ಸೂಪರ್ ಜೈಂಟ್ಸ್ ತಂಡದ ಆಟಗಾರ ಜೋಶ್ ಇಂಗ್ಲಿಸ್ ತಮ್ಮ ದೀರ್ಘಕಾಲದ ಗೆಳತಿ ಮೇಗನ್ ಕಿನ್ಕಾರ್ಟ್ ಅವರನ್ನು ವರಿಸುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಆಸ್ಟ್ರೇಲಿಯಾದ ಈ ಸ್ಪೋಟಕ ಬ್ಯಾಟರ್ ಇದೇ 18ರಂದು ಪಶ್ಚಿಮ ಆಸ್ಟ್ರೇಲಿಯಾದ ಮಾರ್ಗರೆಟ್ ರಿವರ್ನಲ್ಲಿರುವ ಐಷಾರಾಮಿ ರೆಸಾರ್ಟ್ನಲ್ಲಿ ಕುಟುಂಬಸ್ಥರು ಮತ್ತು ಆಪ್ತರ ಸಮ್ಮುಖದಲ್ಲಿ ವಿವಾಹವಾಗಿದ್ದಾರೆ.ಸದ್ಯ 2026ರ ಐಪಿಎಲ್ ಟೂರ್ನಿಯಲ್ಲಿ ಜೋಶ್ ಇಂಗ್ಲಿಸ್ ಲಖನೌ ಸೂಪರ್ ಜೈಂಟ್ಸ್ ತಂಡವನ್ನು ಪ್ರತಿನಿಧಿಸುತ್ತಿದ್ದಾರೆ. ಮದುವೆಯ ಕಾರಣಕ್ಕಾಗಿ ಆರಂಭಿಕ ಪಂದ್ಯಗಳಲ್ಲಿ ಇಂಗ್ಲಿಸ್ ಅಲಭ್ಯರಾಗಿದ್ದರು. ಈ ಆವೃತಿಗೂ ಮುನ್ನ ಲಖನೌ ತಂಡವು ₹8.60 ಕೋಟಿಗೆ ಜೋಶ್ ಇಂಗ್ಲಿಸ್ ಅವರನ್ನು ಖರೀದಿಸಿತ್ತು.
ಬೆಂಗಳೂರು: ಬಿಜೆಪಿಯು ರಾಜಕೀಯ ಲಾಭ ಪಡೆಯುವ ಉದ್ದೇಶದಿಂದ ಸಂಸತ್ತಿನಲ್ಲಿ ಡಿಲಿಮಿಟೇಷನ್ ಮಸೂದೆಯ ಜೊತೆಗೆ ಮಹಿಳಾ ಮೀಸಲಾತಿ ಮಸೂದೆಯನ್ನು ಒಟ್ಟುಗೂಡಿಸಿ ಮಂಡಿಸಲು ಮುಂದಾಗಿದ್ದರಿಂದ ಕಾಂಗ್ರೆಸ್ ಪಕ್ಷ ವಿರೋಧ ವ್ಯಕ್ತಪಡಿಸಿತು. ಮಹಿಳಾ ಮೀಸಲಾತಿ ಮಸೂದೆಗೆ ಕಾಂಗ್ರೆಸ್ ಎಂದೂ ವಿರೋಧ ಮಾಡಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಚಾಮರಾನಗರದಲ್ಲಿ ಮಾತನಾಡಿದ ಅವರು, ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಮೀಸಲಾತಿ ನೀಡಲು ಸಂವಿಧಾನದ 73, 74 ನೇ ಕಲಂಗೆ ತಿದ್ದುಪಡಿ ತಂದು ರಾಜ್ಯಸಭೆಯಲ್ಲಿ ಜಾರಿಗೊಳಿಸಲು ಮುಂದಾದಾಗ ಎನ್ಡಿಎ ಮೈತ್ರಿಕೂಟ ಅಡ್ಡಿಪಡಿಸಿತ್ತು. ಬಿಜೆಪಿ ನಿಜವಾದ ಮಹಿಳಾ ಮೀಸಲಾತಿಯ ವಿರೋಧಿ ಎಂದು ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.ಕಾಂಗ್ರೆಸ್ ನಾಯಕರನ್ನು ಗುರಿಯಾಗಿಸಿಕೊಂಡು ಕೇಂದ್ರ ಸರ್ಕಾರ ಇ.ಡಿ ದಾಳಿ ನಡೆಸುತ್ತಿದೆ. ಬಿಜೆಪಿ ನಾಯಕರ ನಾಯಕರ ಮೇಲೆ ಇಡಿ ದಾಳಿ ನಡೆಸುವುದಿಲ್ಲ ಏಕೆ ಎಂದು ಪ್ರಶ್ನಿಸಿದರು.
ಬೆಂಗಳೂರು: ಬಿಟ್ ಕಾಯಿನ್ ಹಗರಣದ ಪ್ರಮುಖ ಆರೋಪಿ ಶ್ರೀಕಿ ಜೊತೆ ವ್ಯವಹಾರ ಹೊಂದಿದ್ದರು ಎಂಬ ಆರೋಪದಲ್ಲಿ ಕಾಂಗ್ರೆಸ್ ಶಾಸಕ ಎನ್ ಎ ಹ್ಯಾರಿಸ್ ಮತ್ತು ಅವರ ಪುತ್ರ ಮೊಹಮ್ಮದ್ ನಲಪಾಡ್ ಮನೆ ಮೇಲೆ ಇಡಿ ದಾಳಿ ಮಾಡಿರುವುದರ ವಿರುದ್ಧ ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ. ಮೊಹಮ್ಮದ್ ನಲಪಾಡ್ ಮತ್ತು ಎನ್ ಎ ಹ್ಯಾರಿಸ್ ನಿವಾಸಗಳ ಮೇಲೆ ದಾಳಿ ನಡೆಸಿದ್ದ ಇಡಿ ಅಧಿಕಾರಿಗಳು ಹಲವು ಗಂಟೆಗಳ ಕಾಲ ತಪಾಸಣೆ ನಡೆಸಿ ದಾಖಲೆಗಳನ್ನು ಹೊತ್ತೊಯ್ದಿದ್ದಾರೆ. ಇನ್ನು, ಹಿರಿಯ ಕಾಂಗ್ರೆಸ್ ನಾಯಕ ರೆಹಮಾನ್ ಖಾನ್ ಮೊಮ್ಮಗನ ನಿವಾಸದ ಮೇಲೂ ದಾಳಿ ನಡೆಸಲಾಗಿತ್ತು.
ಚೆನ್ನೈ: ತಮಿಳುನಾಡು ಚುನಾವಣೆ ಪ್ರಚಾರ ಸಂದರ್ಭದಲ್ಲಿ ಪ್ರಧಾನಿ ಮೋದಿಯನ್ನು ಭಯೋತ್ಪಾದಕ ಎಂದು ಕರೆಯುವ ಮೂಲಕ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿವಾದಕ್ಕೀಡಾಗಿದ್ದಾರೆ. ಇತ್ತೀಚೆಗಷ್ಟೇ ಬಿಜೆಪಿಯನ್ನು ವಿಷ ಸರ್ಪಕ್ಕೆ ಹೋಲಿಸಿದ್ದ ಮಲ್ಲಿಕಾರ್ಜುನ ಖರ್ಗೆ ಇದೀಗ ಪ್ರಧಾನಿ ಮೋದಿಯನ್ನು ಭಯೋತ್ಪಾದಕ ಎಂದು ಕರೆದಿದ್ದಾರೆ. ಅವರ ಹೇಳಿಕೆಗೆ ಬಿಜೆಪಿ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಎಐಡಿಎಂಕೆ ಜೊತೆಗಿನ ಬಿಜೆಪಿ ಮೈತ್ರಿ ಬಗ್ಗೆ ಟೀಕಿಸುವ ಭರದಲ್ಲಿ ಖರ್ಗೆ ಈ ರೀತಿ ನಾಲಿಗೆ ಹರಿಬಿಟ್ಟಿದ್ದಾರೆ. ‘ಈ ಎಐಡಿಎಂಕೆಯ ಅಣ್ಣಾದುರೈ ಫೋಟೋ ಹಾಕಿಕೊಳ್ಳುವ ಜನ ಮೋದಿ ಜೊತೆ ಸಖ್ಯ ಹೇಗೆ ಬೆಳೆಸುತ್ತಾರೆ? ಮೋದಿ ಒಬ್ಬ ಭಯೋತ್ಪಾದಕ.