Shorts

ಪಶ್ಚಿಮ ಬಂಗಾಳ: ಅಧ್ಯಕ್ಷೆ ದ್ರೌಪದಿ ಮುರ್ಮು ಅವರ ಇತ್ತೀಚಿನ ಹೇಳಿಕೆಗಳ ನಂತರ ಅವರು ಮತ್ತು ಅವರ ಪಕ್ಷವು ಹೊಡೆತವನ್ನು ಎದುರಿಸುತ್ತಿರುವ ಸಮಯದಲ್ಲಿ, ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಶುಕ್ರವಾರ ರಾಜ್ಯ ಸರ್ಕಾರವು ವಿವಿಧ ಆದಿವಾಸಿಗಳು, ಹಿಂದುಳಿದ ವರ್ಗಗಳು ಮತ್ತು ದಲಿತ ಸಮುದಾಯಗಳಿಗಾಗಿ ಐದು ಹೊಸ ಸಾಂಸ್ಕೃತಿಕ ಮತ್ತು ಅಭಿವೃದ್ಧಿ ಮಂಡಳಿಗಳನ್ನು ಸ್ಥಾಪಿಸಲು ಉದ್ದೇಶಿಸಿದೆ ಎಂದು ಘೋಷಿಸಿದರು.ಮುಂಡಾ (ಪರಿಶಿಷ್ಟ ಪಂಗಡ), ಕೋರಾ (ಎಸ್‌ಟಿ), ಡೊಮ್ (ಪರಿಶಿಷ್ಟ ಜಾತಿ), ಕುಂಭಕರ್ (ಇತರ ಹಿಂದುಳಿದ ವರ್ಗ), ಮತ್ತು ಸದ್ಗೋಪೆ (ಒಬಿಸಿ) ಸಮುದಾಯಗಳ ಜನರಿಗೆ ಮಂಡಳಿಗಳನ್ನು ಸ್ಥಾಪಿಸಲಾಗುವುದು. ಇವುಗಳು ರಾಜ್ಯದ ವಿವಿಧ ಸಮುದಾಯಗಳಿಗಾಗಿ ಸ್ಥಾಪಿಸಲಾದ 20 ಕ್ಕೂ ಹೆಚ್ಚು ಮಂಡಳಿಗಳನ್ನು ಸೇರುತ್ತವೆ.

ಬೆಂಗಳೂರು: ಅಡುಗೆ ಹಾಗೂ ವಾಣಿಜ್ಯ ಸಿಲಿಂಡರ್‌ಗೆ ದೇಶದಲ್ಲಿ ಯಾವುದೇ ಕೊರತೆ ಇಲ್ಲ. ಆದರೆ ಸಿಲಿಂಡರ್ ಪೂರೈಕೆ ವಿಷಯದಲ್ಲಿ ಕಾಂಗ್ರೆಸ್, ಜನರನ್ನು ತಪ್ಪು ದಾರಿಗೆ ಎಳೆಯುವ ಪ್ರಯತ್ನ ಮಾಡುತ್ತಾ ಇದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಆರೋಪಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಗ್ಯಾಸ್ ಸಿಲಿಂಡರ್ ಸಂಬಂಧ ಜನರನ್ನು ಗೊಂದಲಕ್ಕೀಡು ಮಾಡುವ ಪ್ರಯತ್ನವನ್ನು ಕಾಂಗ್ರೆಸ್ ಮಾಡುತ್ತಾ ಇದೆ. ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಕೊರತೆ ಸಹ ಆಗುತ್ತದೆ ಎಂದು ರಾಹುಲ್ ಗಾಂಧಿ ಅವರು ನಿನ್ನೆ ಹೇಳಿದ್ದಾರೆ. ಇದು ಸುಳ್ಳು. ಇಡೀ ದೇಶದಲ್ಲಿ ಈಗಲೂ ಮತ್ತು ಮುಂದೆಯೂ ಪೆಟ್ರೋಲಿಯಂ ಉತ್ಪನ್ನಗಳ ಕೊರತೆ ಆಗುವುದಿಲ್ಲ. ಕೊರತೆ ಆಗದಂತೆ ಪ್ರಧಾನಿ

ಕಾಠ್ಮಂಡು: ನೇಪಾಳ ಚುನಾವಣೆಯಲ್ಲಿ ಬಾಲೇಂದ್ರ ಶಾ ಅವರು ಝಾಪಾ-5 ಕ್ಷೇತ್ರದಿಂದ ಅಭೂತಪೂರ್ವ ಗೆಲುವು ಸಾಧಿಸಿದ್ದಾರೆ. ಈಗ ಅವರು ಪ್ರಧಾನಿ ಹುದ್ದೆಯ ರೇಸ್‌ನಲ್ಲಿದ್ದಾರೆ.ನೇಪಾಳದಲ್ಲಿ ವಿದ್ಯಾರ್ಥಿಗಳ ದಂಗೆಯ ಬಳಿಕ ಪ್ರಧಾನಿಯಾಗಿದ್ದ ಕೆ.ಪಿ. ಓಲಿ ಅವರು ರಾಜೀನಾಮೆ ಸಲ್ಲಿಸಿ ಕೆಳಗಿಳಿದರು. ಬಳಿಕ ನಡೆದ ಚುನಾವಣೆಯಲ್ಲಿ ಬಾಲೇಂದ್ರ ಶಾ ಪ್ರತಿನಿಧಿಸುತ್ತಿರುವ ಪಕ್ಷವು ಬಹುಮತ ಪಡೆದಿದೆ. ಈಗ ಬಾಲೇಂದ್ರ ಅವರೇ ಪ್ರಧಾನಿಯಾಗುತ್ತಾರೆ ಎನ್ನಲಾಗುತ್ತಿದೆ. ವಿಶೇಷವೆಂದರೆ ಬಾಲೇಂದ್ರ ಅವರು ಪುನೀತ್‌ರಾಜ್‌ ಕುಮಾರ್‌ ಅವರ ಅಪ್ಪಟ ಅಭಿಮಾನಿ. 35 ವರ್ಷದ ಅವರು 2016 ರಿಂದ 2018ರ ಅವಧಿಯಲ್ಲಿ ಬೆಂಗಳೂರಿನಲ್ಲಿ ವಾಸಿಸುತ್ತಿದ್ದರು. ನಿಟ್ಟೆ ಮೀನಾಕ್ಷಿ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಸ್ಟ್ರಕ್ಚರಲ್ ಎಂಜಿನಿಯರಿಂಗ್‌ನಲ್ಲಿ ಸ್ನಾತಕೋತ್ತರ ಪದವಿ ಪಡೆದುಕೊಂಡಿದ್ದಾರೆ.

ಲಖನೌ: ಭಾರತ ತಂಡದ ಅನುಭವಿ ಸ್ಪಿನ್ನರ್‌ ಕುಲದೀಪ್ ಯಾದವ್ ಇದೇ ಶನಿವಾರ ಹೊಸ ಇನಿಂಗ್ಸ್‌ ಆರಂಭಿಸಲಿದ್ದಾರೆ. ಮಾರ್ಚ್ 14 ರಂದು ಮಸ್ಸೂರಿಯ ರೆಸಾರ್ಟ್‌ನಲ್ಲಿ ತಮ್ಮ ಬಾಲ್ಯದ ಗೆಳತಿ ವಂಶಿಕಾ ಅವರೊಂದಿಗೆ ವಿವಾಹವಾಗಲಿದ್ದಾರೆ. ಟಿ20 ವಿಶ್ವಕಪ್‌ ಗೆದ್ದ ತಂಡದಲ್ಲಿದ್ದ ಕುಲದೀಪ್‌ ಅವರ ಮದುವೆಗೆ ಭರ್ಜರಿ ಸಿದ್ಧತೆಗಳು ನಡೆಯುತ್ತಿದೆ. ಈ ವಿವಾಹ ಕಾರ್ಯಕ್ರಮಕ್ಕೆ ಗಣ್ಯರನ್ನು ಆಹ್ವಾನಿಸಲಾಗಿದೆ. ಭಾರತದ ಸ್ಟಾರ್‌ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಭಾಗವಹಿಸುವ ಸಾಧ್ಯತೆಯಿದೆ. ಕೊಹ್ಲಿ, ರೋಹಿತ್ ಮತ್ತು ವೇಗಿ ಜಸ್‌ಪ್ರೀತ್‌ ಬುಮ್ರಾ ಸೇರಿದಂತೆ ಹಲವಾರು ಕ್ರಿಕೆಟಿಗರು ದಂಪತಿ ಸಮೇತವಾಗಿ ನಿರೀಕ್ಷೆಯಿದೆ. ಕುಲದೀಪ್ ಮದುವೆಗಾಗಿ ಇಡೀ ಹೋಟೆಲ್ ಅನ್ನು ಬುಕ್ ಮಾಡಲಾಗಿದೆ. ದಿ ಸವೊಯ್‌ನಲ್ಲಿ ಸುಮಾರು 80 ಕೊಠಡಿಗಳನ್ನು ಕಾಯ್ದಿರಿಸಲಾಗಿದೆ ಎಂದು ಹೋಟೆಲ್ ಆಡಳಿತ ಮಂಡಳಿ ದೃಢಪಡಿಸಿದೆ.

ಶುಕ್ರವಾರ ಮಹಾಲಕ್ಷ್ಮೀ ದೇವಿಗೆ ವಿಶೇಷವಾದ ದಿನವಾಗಿದೆ. ಜೀವನದಲ್ಲಿ ಸುಖ, ಸೌಖ್ಯ, ಐಶ್ವರ್ಯ, ಸಮೃದ್ಧಿಯಾಗಬೇಕೆಂದರೆ ಲಕ್ಷ್ಮೀ ದೇವಿಯ ಪೂಜೆ ಮಾಡಿ. ಇಂದು ಲಕ್ಷ್ಮೀ ದೇವಿಯ ಕಲ್ಯಾಣವೃಷ್ಟಿ ಸ್ತವಃ ಸ್ತೋತ್ರವನ್ನು ಓದಿ.ಕಲ್ಯಾಣವೃಷ್ಟಿಭಿರಿವಾಮೃತಪೂರಿತಾಭಿ--ರ್ಲಕ್ಷ್ಮೀಸ್ವಯಂವರಣಮಂಗಲದೀಪಿಕಾಭಿಃ ।ಸೇವಾಭಿರಂಬ ತವ ಪಾದಸರೋಜಮೂಲೇನಾಕಾರಿ ಕಿಂ ಮನಸಿ ಭಾಗ್ಯವತಾಂ ಜನಾನಾಮ್ ॥ 1 ॥ ಏತಾವದೇವ ಜನನಿ ಸ್ಪೃಹಣೀಯಮಾಸ್ತೇತ್ವದ್ವಂದನೇಷು ಸಲಿಲಸ್ಥಗಿತೇ ಚ ನೇತ್ರೇ ।ಸಾಂನಿಧ್ಯಮುದ್ಯದರುಣಾಯುತಸೋದರಸ್ಯತ್ವದ್ವಿಗ್ರಹಸ್ಯ ಪರಯಾ ಸುಧಯಾಪ್ಲುತಸ್ಯ ॥ 2 ॥ ಈಶತ್ವನಾಮಕಲುಷಾಃ ಕತಿ ವಾ ನ ಸಂತಿಬ್ರಹ್ಮಾದಯಃ ಪ್ರತಿಭವಂ ಪ್ರಲಯಾಭಿಭೂತಾಃ ।ಏಕಃ ಸ ಏವ ಜನನಿ ಸ್ಥಿರಸಿದ್ಧಿರಾಸ್ತೇಯಃ ಪಾದಯೋಸ್ತವ ಸಕೃತ್ಪ್ರಣತಿಂ ಕರೋತಿ ॥ 3 ॥