ಬೆಂಗಳೂರು: ಬಳ್ಳಾರಿ ಗುಂಡಿನ ದಾಳಿಯಲ್ಲಿ ಸಾವನ್ನಪ್ಪಿದ ಕೈ ಕಾರ್ಯಕರ್ತನ ಮರಣೋತ್ತರ ಪರೀಕ್ಷೆ ಬಗ್ಗೆ ಎಚ್ಡಿ ಕುಮಾರಸ್ವಾಮಿ ಅವರು ಪ್ರಶ್ನೆ ಮಾಡಿರುವ ಬಗ್ಗೆ ಗೃಹ ಸಚಿವ ಜಿ ಪರಮೇಶ್ವರ ಪ್ರತಿಕ್ರಿಯಿಸಿದ್ದಾರೆ. ಇತ್ತೀಚಿನ ಬಳ್ಳಾರಿ ಗುಂಡಿನ ದಾಳಿ ಘಟನೆಯನ್ನು ಮುಚ್ಚಿಹಾಕಲು ರಾಜ್ಯ ಸರ್ಕಾರ "ವ್ಯವಸ್ಥಿತ ಪಿತೂರಿ" ನಡೆಸಿದೆ ಎಂದು ಗಂಭೀರ ಆರೋಪ ಮಾಡಿದ ಬಗ್ಗೆ ಪ್ರತಿಕ್ರಿಯಿಸಿದ ಪರಮೇಶ್ವರ್ ಅವರು, ರಾಜಕೀಯ ನಾಯಕರು ಸರಿಯಾದ ಪರಿಶೀಲನೆ ಇಲ್ಲದೆ ಹೇಳಿಕೆಗಳನ್ನು ನೀಡಬಾರದು. ಯಾವುದೇ ವಿಚಾರವಾಗಲಿ ತಿಳಿದುಕೊಂಡು ಮಾತನಾಡಬೇಕೆಂದರು. ಇಲ್ಲವಾದರೆ ಬೇರೆ ರೀತಿಯ ಪರಿಣಾಮ ಆಗುತ್ತದೆ. ನನ್ನನ್ನು ಸೇರಿದಂತೆ ರಾಜಕೀಯ ನಾಯಕರುಗಳು ಮಾತನಾಡುವಾಗ
ದೃಶ್ಯಂ ಫ್ರಾಂಚೈಸಿಯಲ್ಲಿ ಮೂರನೇ ಕಂತಿನ ಮಲಯಾಳಂ ಆವೃತ್ತಿಯು ಏಪ್ರಿಲ್ ಮೊದಲ ವಾರದಲ್ಲಿ ತೆರೆಗೆ ಬರಲಿದೆ ಎಂದು ಬಹಿರಂಗಪಡಿಸಿದ ಜೀತು, ಶೀಘ್ರದಲ್ಲೇ ಅಧಿಕೃತ ಘೋಷಣೆ ಮಾಡಲಾಗುವುದು ಎಂದು ಹಂಚಿಕೊಂಡಿದ್ದಾರೆ. ಚಿತ್ರವು ಸೆಪ್ಟೆಂಬರ್ 22, 2025 ರಂದು ಮಹಡಿಗೆ ಹೋದಾಗ, ತಯಾರಕರು ಡಿಸೆಂಬರ್ 2, 2025 ರಂದು ಅದರ ಮುಕ್ತಾಯವನ್ನು ಘೋಷಿಸಿದರು. ದೃಶ್ಯಂ 3 ಪ್ರಸ್ತುತ ಅದರ ಪೋಸ್ಟ್-ಪ್ರೊಡಕ್ಷನ್ ಹಂತದಲ್ಲಿದೆ.ದೃಶ್ಯಂ ಫ್ರಾಂಚೈಸಿಯಲ್ಲಿ ಮೂರನೇ ಕಂತಿನ ಮಲಯಾಳಂ ಆವೃತ್ತಿಯು ಏಪ್ರಿಲ್ ಮೊದಲ ವಾರದಲ್ಲಿ ತೆರೆಗೆ ಬರಲಿದೆ ಎಂದು
ಬೆಂಗಳೂರು: ರಾಜ್ಯ ರಾಜದಾನಿಯಲ್ಲಿ ಶಾಲಾ ಕಾಲೇಜಿಗೆ ಕಂಪನಿಗಳಿಗೆ ಬಾಂಬ್ ಬೆದರಿಕೆ ಬೆನ್ನಲ್ಲೇ ಸದ್ಯ ಬೆಂಗಳೂರಿನ ಕೋರಮಂಗಲ ಪಾಸ್ಪೋರ್ಟ್ ಕಚೇರಿಗೆ ಬಾಂಬ್ ಬೆದರಿಕೆ ಮೇಲ್ ಬಂದಿದೆ.ಈ ಘಟನೆ ಬೆಂಗಳೂರಿನ ಕೋರಮಂಗಲದಲ್ಲಿರುವ ಪಾಸ್ಪೋರ್ಟ್ ಕಚೇರಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದೆ. ಕಚೇರಿಯನ್ನು ಸ್ಫೋಟಗೊಳಿಸುವುದಾಗಿ ಮೇಲ್ನಲ್ಲಿ ಉಲ್ಲೇಖಿಸಿದ್ದಾರೆ. ಕೂಡಲೇ ಅಲ್ಲಿನ ಅಧಿಕಾರಿಗಳು ಕೋರಮಂಗಲ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪಾಸ್ಪೋರ್ಟ್ ಕಚೇರಿಗೆ ಆಗಮಿಸಿದ ಕೋರಮಂಗಲ ಪೊಲೀಸರು ಡಾಗ್ ಸ್ಕ್ವಾಡ್, ಬಾಂಬ್ ಸ್ಕ್ವಾಡ್ ತಂಡಗಳನ್ನು ಕರೆಸಿ,
ಬೆಂಗಳೂರು: ದೀರ್ಘಕಾಲದ ಮುಖ್ಯಮಂತ್ರಿ ಎಂದು ಹೇಳಿಕೊಳ್ಳುವ ಸಿಎಂ ಸಿದ್ದರಾಮಯ್ಯನವರು ರಾಜ್ಯಕ್ಕೆ ಕೊಟ್ಟಿರುವ ಕೊಡುಗೆ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ಪ್ರಶ್ನೆ ಮಾಡಿದ್ದಾರೆ. ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯನವರು ರಾಜ್ಯಕ್ಕೆ ನೀಡಿದ ಕೊಡುಗೆಗಳು ಏನು? ಭ್ರಷ್ಟ್ರಾಚಾರ, ಹಗರಣಗಳ ಸರಮಾಲೆ, ಹಳಿ ತಪ್ಪಿದ ಮತ್ತು ಕಾನೂನು ಸುವ್ಯವಸ್ಥೆ ಹದಗೆಟ್ಟ ಆಡಳಿತ; ಇವೇ ಇವರು ಸೃಷ್ಟಿಸಿರುವ ದಾಖಲೆಗಳು ಎಂದು ಟೀಕೆ ಮಾಡಿದರು. ಸಿದ್ದರಾಮಯ್ಯನವರು ತಮ್ಮ ಆಡಳಿತವನ್ನು ಅರಸು ಅವರ ಜತೆ ಯಾವುದೇ ರೀತಿಯಲ್ಲೂ ಹೋಲಿಕೆ ಮಾಡಲು ಸಾಧ್ಯವಿಲ್ಲ.
ಬೆಂಗಳೂರು: ಜನಾರ್ದನ ರೆಡ್ಡಿ ನಿವಾಸದ ಎದುರು ನಡೆದ ಶೂಟೌಟ್ನಲ್ಲಿ ಹತ್ಯೆಯಾದ ಕೈ ಕಾರ್ಯಕರ್ತನಿಗೆ ₹25ಲಕ್ಷ ನಗದು ಪರಿಹಾರ ನೀಡಿದ್ದ ಸಚಿವ ಜಮೀರ್ ಅಹ್ಮದ್ ಖಾನ್ಗೆ ಇದೀಗ ಸಂಕಷ್ಟ ಎದುರಾಗಿದೆ. ಜಮೀರ್ ವಿರುದ್ಧ ಇದೀಗ ಆದಾಯ ತೆರಿಗೆ ಇಲಾಖೆಯಲ್ಲಿ ದೂರು ದಾಖಲಾಗಿದೆ. ಹಿಂದೂ ಸಂಘಟನೆಗಳ ಮುಖಂಡ ತೇಜಸ್ ಗೌಡ ಅವರು ಆದಾಯ ತೆರಿಗೆ ಇಲಾಖೆಗೆ ಜಮೀರ್ ವಿರುದ್ಧ ಲಿಖಿತ ದೂರು ನೀಡಿದ್ದಾರೆ. ಏನಿದು ಪ್ರಕರಣ: ಜನವರಿ 1 ರಂದು ಬಳ್ಳಾರಿಯಲ್ಲಿ ಶಾಸಕ ಜನಾರ್ಧನ ರೆಡ್ಡಿ ಮನೆ ಮುಂದೆ ಹತ್ಯೆಯಾದ ರಾಜಶೇಖರ್ ರೆಡ್ಡಿ ಕುಟುಂಬಕ್ಕೆ ವಸತಿ
ಉತ್ತರ ಪ್ರದೇಶ: ಅಪರಿಚಿತ ಕರೆಗಾರರಿಂದ ಬಾಂಬ್ ಬೆದರಿಕೆಯ ಹಿನ್ನೆಲೆಯಲ್ಲಿ ಗೋರಖ್ಪುರದಿಂದ ಮುಂಬೈಗೆ ಪ್ರಯಾಣಿಸುತ್ತಿದ್ದ ಕಾಶಿ ಎಕ್ಸ್ಪ್ರೆಸ್ನಲ್ಲಿ ಅಂತಹದ್ದೇನೂ ಕಂಡುಬಂದಿಲ್ಲ ಎಂದು ಮೌ ಪೊಲೀಸ್ ವರಿಷ್ಠಾಧಿಕಾರಿ ಎಲಮರನ್ ಮಂಗಳವಾರ ಮಾಹಿತಿ ನೀಡಿದ್ದಾರೆ, ಕರೆ ಕುರಿತು ತನಿಖೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಎಸ್ಪಿ, ಬೆಳಿಗ್ಗೆ ಕರೆ ಸ್ವೀಕರಿಸಿದ ನಂತರ ಮೌ ಪೊಲೀಸರು, ಜಿಆರ್ಪಿ ಮತ್ತು ಆರ್ಪಿಎಫ್ನೊಂದಿಗೆ ಮೌ ರೈಲ್ವೆ ನಿಲ್ದಾಣಕ್ಕೆ ತಕ್ಷಣ ತಲುಪಿದರು."ಬೆಳಿಗ್ಗೆ 09:30 ರ ಸುಮಾರಿಗೆ, ಗೋರಖ್ಪುರದಿಂದ ಮುಂಬೈಗೆ ಪ್ರಯಾಣಿಸುತ್ತಿದ್ದ ಕಾಶಿ ಎಕ್ಸ್ಪ್ರೆಸ್ನಲ್ಲಿ ಬಾಂಬ್ ಇದೆ ಎಂದು
ಮೈಸೂರು: ದೀರ್ಘಾವಧಿ ಸಿಎಂ ಆಗುವ ಮೂಲಕ ದಿವಂಗತ ದೇವರಾಜ ಅರಸು ಅವರ ದಾಖಲೆ ಸರಿಗಟ್ಟಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಇದೀಗ ಹೊಸ ಆಸೆಯೊಂದನ್ನು ಹೇಳಿಕೊಂಡಿದ್ದಾರೆ. ಇಂದು ಮೈಸೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುವ ವೇಳೆ, ನನಗೆ ಹೈ ಕಮಾಂಡ್ ಮೇಲೆ ಪೂರ್ಣ ವಿಶ್ವಾಸವಿದ್ದು, ಪೂರ್ಣಾವಧಿ ಸಿಎಂ ಆಗುವ ವಿಶ್ವಾಸವು ಇದೆ. ಏನೇ ಆದರೂ ಹೈ ಕಮಾಂಡ್ ಎಲ್ಲವನ್ನೂ ತೀರ್ಮಾನ ಮಾಡುತ್ತದೆ. ಹೈಕಮಾಂಡ್ ನಿರ್ಧಾರವೇ ಅಂತಿಮ ಎಂದು ಸಿಎಂ ಕುರ್ಚಿ ಬಗೆಗಿನ ಅಭಿಪ್ರಾಯವನ್ನು ಹೊರಹಾಕಿದರು.ನನಗೆ ದೇವರಾಜ ಅರಸು ದಾಖಲೆಯ ಬಗ್ಗೆ ಅರಿವು ಇರಲಿಲ್ಲ. ಯಾವ ದಾಖಲೆ ಮುರಿಯಬೇಕು ಎಂಬುದು ನನ್ನ ಗಮನದಲ್ಲಿ ಇರಲಿಲ್ಲ. ಜನರ ಆಶೀರ್ವಾದದಿಂದ ಎಲ್ಲವೂ ನಡೆದು ಹೋಗಿದೆ. ಇವತ್ತು ದೇವರಾಜ ಅರಸು ದಾಖಲೆ ಸರಿಗಟ್ಟಿದ್ದೇನೆ. ಆದರೆ
ಮುಂಬೈ: ವೆನಿಜುವೆಲಾದ ಅಧ್ಯಕ್ಷ ಮಡುರೊನನ್ನು ಅರೆಸ್ಟ್ ಮಾಡಿ ಹೊತ್ತೊಯ್ದಂತೆ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನಮ್ಮ ಪ್ರಧಾನಿ ಮೋದಿಯನ್ನೂ ಕಿಡ್ನ್ಯಾಪ್ ಮಾಡಬಹುದಾ? ಹೀಗಂತ ಮಹಾರಾಷ್ಟ್ರದ ಕಾಂಗ್ರೆಸ್ ನಾಯಕ ಪೃಥ್ವಿರಾಜ್ ಚೌಹಾಣ್ ವಿವಾದಿತ ಹೇಳಿಕೆ ನೀಡಿದ್ದಾರೆ. ಮೊನ್ನೆಯಷ್ಟೇ ಭಾರತದ ಆಪರೇಷನ್ ಸಿಂಧೂರ್ ವಿಫಲವಾಗಿತ್ತು. ಪಾಕಿಸ್ತಾನ ನಮ್ಮನ್ನು ಸೋಲಿಸಿತ್ತು ಎಂದೆಲ್ಲಾ ಹೇಳಿಕೆ ನೀಡಿದ್ದ ಪೃಥ್ವಿರಾಜ್ ಚೌಹಾಣ್ ಇದೀಗ ಪ್ರಧಾನಿ ಬಗ್ಗೆಯೇ ಕ್ಷುಲ್ಲುಕ ಹೇಳಿಕೆ ನೀಡಿ ವಿವಾದಕ್ಕೆ ಗುರಿಯಾಗಿದ್ದಾರೆ. ‘ಭಾರತದ ಮೇಲೆ ಅಮೆರಿಕಾ 50% ಸುಂಕ ವಿಧಿಸಿದೆ. ಇದರಿಂದ ಎರಡೂ ದೇಶಗಳ ನಡುವೆ ವ್ಯಾಪಾರ ವಹಿವಾಟು ಅಸಾಧ್ಯವಾಗಿದೆ. ನೇರವಾಗಿ ವ್ಯಾಪಾರ ನಿರ್ಬಂಧ ವಿಧಿಸಲು ಸಾಧ್ಯವಿಲ್ಲ.
ಬೆಂಗಳೂರು: ಇದೇ 8ರಂದು ರಾಕಿಂಗ್ ಸ್ಟಾರ್ ಯಶ್ ಅವರು 40ನೇ ವರ್ಷದ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಅಭಿಮಾನಿಗಳು ತಮ್ಮ ನೆಚ್ಚಿನ ನಟನಿಗೆ ಶುಭಕೋರಲು ಸಾಮಾಜಿಕ ಜಾಲತಾಣವನ್ನು ಬಳಸಿಕೊಳ್ಳುತ್ತಿದ್ದಾರೆ. ಇನ್ನೂ ಇದೇ ಮೊದಲ ಬಾರಿಗೆ ಮೆಟ್ರೋ ಮೇಲೆ ಜಾಹೀರಾತು ನೀಡಿ, ಯಶ್ಗೆ ಹುಟ್ಟುಹಬ್ಬ ಶುಭಾಶಯಗಳನ್ನು ತಿಳಿಸಿರುವುದು ಅಚ್ಚರಿ ತಂದಿದೆ.ಯಶ್ ಅವರ ಸ್ನೇಹಿತರು ನಮ್ಮ ಮೆಟ್ರೋ ಮೇಲೆ ರಾಕಿ ಭಾಯ್ಗೆ ಹುಟ್ಟುಹಬ್ಬ ಶುಭಾಶಯಗಳನ್ನು ಕೋರುತ್ತಿರುವ ಪೋಸ್ಟರ್ಗಳನ್ನು ಅಂಟಿಸಿ, ಜಾಹೀರಾತು ನೀಡಿದ್ದಾರೆ.
ಮೈಸೂರು: ಸಿಎಂ ಕುರ್ಚಿ ಗುದ್ದಾಟದ ನಡುವೆ ಸಿದ್ದರಾಮಯ್ಯ ಇಲ್ಲದಿರುವ ಕಾಂಗ್ರೆಸ್ ಹಾಗು ಸರ್ಕಾರವನ್ನು ಊಹಿಸುವುದೂ ಕಷ್ಟ ಎಂದು ಸಮಾಜಕಲ್ಯಾಣ ಸಚಿವ ಡಾ.ಎಚ್ಸಿ ಮಹದೇವಪ್ಪ ಹೇಳಿದರು. ಇಲ್ಲಿನ ಸೆನೆಟ್ ಭವನದಲ್ಲಿ ಮಂಗಳವಾರ ವಿಧಾನ ಪರಿಷತ್ ಸದಸ್ಯ ಕೆ. ಶಿವಕುಮಾರ್ ಅವರ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿದರು. 2028ರ ವರೆಗೂ ಅವರೇ ಸಿಎಂ ಆಗಿರುತ್ತಾರೆ. ಯಾವಾಗಲು ಯೋಗ್ಯರ ಕೈಯಲ್ಲಿ ಅಧಿಕಾರ ಇರಬೇಕು. ಜೈಕಾರ ಕೂಗುವವರು
ಬೆಂಗಳೂರು: ಕರ್ನಾಟಕ ಸಚಿವ ಪ್ರಿಯಾಂಕ್ ಖರ್ಗೆ ಅವರು ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್ಎಸ್ಎಸ್) ಕುರಿತು ನೀಡಿರುವ ಹೇಳಿಕೆಗೆ ಸಂಬಂಧಿಸಿದಂತೆ ಬೆಂಗಳೂರಿನ ವಿಶೇಷ ನ್ಯಾಯಾಲಯವು ಮಂಗಳವಾರ ಅವರಿಗೆ ನೋಟಿಸ್ ಜಾರಿ ಮಾಡಿದೆ ಎಂಬ ವರದಿಯನ್ನು ತಳ್ಳಿಹಾಕಿದ್ದಾರೆ, ಇದು ಸಂಘಟನೆಯ ಬಗ್ಗೆ ಮಾನ್ಯ ಪ್ರಶ್ನೆಗಳನ್ನು ಎತ್ತುವವರ ವಿರುದ್ಧ “ಬೆದರಿಸುವ ತಂತ್ರ” ಬಳಸುವ ಪ್ರಯತ್ನ ಎಂದು ಬಣ್ಣಿಸಿದ್ದಾರೆ.ನಾವು ಆರ್ಎಸ್ಎಸ್ ಮತ್ತು ಅವರ ಧನಸಹಾಯ ಮತ್ತು ಅವುಗಳ ಅಸ್ತಿತ್ವದ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತಿದ್ದೇವೆ. ನೀವು ವ್ಯಕ್ತಿಗಳ ದೇಹವಾಗಿರುವುದರಿಂದ, ನೀವು ನೋಂದಾಯಿಸಿಕೊಳ್ಳಬಾರದು ಎಂದು ಹೇಳುವ ಒಂದು ನಿಯಮವನ್ನು ನನಗೆ ತೋರಿಸಿ, ದೇಶದ ಎಲ್ಲಾ ಸಂಸ್ಥೆಗಳಿಗೆ ಉತ್ತರದಾಯಿತ್ವ ಅನ್ವಯಿಸುತ್ತದೆ ಎಂದು ಒತ್ತಿ ಹೇಳಿದರು.
ಜೈಪುರ: ಕಳ್ಳತನ ಮಾಡಲೆಂದು ಮನೆಯೊಂದಕ್ಕೆ ಬಂದಿದ್ದ ಕಳ್ಳ ಎಕ್ಸಾಸ್ಟ್ ಫ್ಯಾನ್ ಕಿಂಡಿಯೊಳಗೆ ಸಿಲುಕಿಕೊಂಡ ಘಟನೆ ರಾಜಸ್ಥಾನದಲ್ಲಿ ನಡೆದಿದೆ. ಈ ವಿಡಿಯೋ ಈಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ರಾಜಸ್ಥಾನದ ಕೋಟಾದಲ್ಲಿ ಘಟನೆ ನಡೆದಿದೆ. ಆರೋಪಿಯನ್ನು ಪವನ್ ಎಂದು ಗುರುತಿಸಲಾಗಿದೆ. ವಿಪರ್ಯಾಸವೆಂದರೆ ಈತ ಪೊಲೀಸ್ ಅಧಿಕಾರಿಯೊಬ್ಬರ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದಾನಂತೆ. ಈತನೇ ಕದಿಯಲು ಹೋಗಿ ಸಿಕ್ಕಿ ಹಾಕಿಕೊಂಡಿದ್ದಾನೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಎಕ್ಸಾಸ್ಟ್ ಫ್ಯಾನ್ ತೂತಿನ ಮೂಲಕ ಮನೆಯೊಳಗೆ ನುಗ್ಗಲು ಪ್ರಯತ್ನಿಸಿದ್ದಾನೆ. ಈ ವೇಳೆ ಆತನ ಸೊಂಟದ ಭಾಗದಿಂದ ಅರ್ಧ ಭಾಗ ಹೊರಕ್ಕೆ ಅರ್ಧ ಭಾಗ ಒಳಕ್ಕೆ ಎಂಬ ಸ್ಥಿತಿಯಲ್ಲಿ ಸಿಕ್ಕಿ ಹಾಕಿಕೊಂಡು ಉಸಿರಾಡಲಾಗದೇ ಒದ್ದಾಡಿದ್ದಾನೆ.
ಬೆಳಗಾವಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರ ಮೃಣಾಲ್ ಹೆಬ್ಬಾಳ್ಕರ್ ಅವರ ಕಾರು ಚಾಲಕನಿಗೆ ಚಾಕು ಇರಿದ ಘಟನೆ ವರದಿಯಾಗಿದೆ. ಬೆಳಗಾವಿ ತಾಲೂಕಿನ ಬೆಳಗುಂದಿ ಗ್ರಾಮದ ಬಸವಂತ ಕಡೋಲ್ಕರ್(32) ಮೇಲೆ ಚಾಕು ದಾಳಿ ನಡೆದಿದೆ. ಬೆಳಗಾವಿ ನಗರದ ಕ್ಲಬ್ ರಸ್ತೆಯಲ್ಲಿ ಮಧ್ಯಾಹ್ನ ಕಾರು ನಿಲ್ಲಿಸಿ ಕೆಳಗೆ ನಿಂತಿದ್ದಾಗ ಅಲ್ಲಿಗೆ ಬಂದ ಇಬ್ಬರು ಚಾಕುವಿನಿಂದ ಏಕಾಏಕಿ ದಾಳಿ ನಡೆಸಿದ್ದಾರೆ.ಬೈಕ್ ಮೇಲೆ ಬಂದು ಇಬ್ಬರು ಕಿಡಿಗೇಡಿಗಳು ಎದೆ, ಭುಜ, ತೊಡೆ ಸೇರಿ ನಾಲ್ಕು ಕಡೆ ಚಾಕುವಿನಿಂದ ಇರಿದಿದ್ದಾರೆ.
2025ರ ಸೆಪ್ಟೆಂಬರ್ನಲ್ಲಿ ಕರೂರಿನಲ್ಲಿ ನಡೆದ ರ್ಯಾಲಿಯಲ್ಲಿ ಸಂಭವಿಸಿದ ಮಾರಣಾಂತಿಕ ಕಾಲ್ತುಳಿತಕ್ಕೆ ಸಂಬಂಧಿಸಿದಂತೆ ತಮ್ಮ ಸಿನಿಮಾ ಜನ ನಾಯಕನ ಬಿಡುಗಡೆಗೆ ಸಜ್ಜಾಗುತ್ತಿರುವ ಟಿವಿಕೆ ನಾಯಕ ವಿಜಯ್ಗೆ ಸಿಬಿಐ ಸಮನ್ಸ್ ನೀಡಿದೆ.ಜನವರಿ 12 ರಂದು ಅವರ ದೆಹಲಿ ಕಚೇರಿಯಲ್ಲಿ ಕೇಂದ್ರ ಏಜೆನ್ಸಿಯ ಮುಂದೆ ಹಾಜರಾಗಲು ಅವರನ್ನು ಕೇಳಲಾಗಿದೆ.ಸೆಪ್ಟೆಂಬರ್ 2025 ರಲ್ಲಿ ಕರೂರಿನಲ್ಲಿ ಅವರ ಚಲನಚಿತ್ರ ಜನನಾಯಕನ ಪ್ರಚಾರದ ಸಂದರ್ಭದಲ್ಲಿ ಸಂಭವಿಸಿದ ರ್ಯಾಲಿಯಲ್ಲಿ ಕಾಲ್ತುಳಿತದ ಬಗ್ಗೆ ಜನವರಿ 12 ರಂದು ದೆಹಲಿ ಕಚೇರಿಗೆ ಹಾಜರಾಗಲು ಟಿವಿಕೆ ನಾಯಕ ವಿಜಯ್ ಅವರಿಗೆ ಸಿಬಿಐ ಸಮನ್ಸ್ ನೀಡಿದೆ.
ಬೆಂಗಳೂರು: ಬಳ್ಳಾರಿಯಲ್ಲಿ ಕಗ್ಗೊಲೆಯಾದ ನಿಮ್ಮದೇ ಪಕ್ಷದ ನತದೃಷ್ಟ ಕಾರ್ಯಕರ್ತನ ಡಬಲ್ ಪೋಸ್ಟ್ ಮಾರ್ಟಂ ಕಥಾನಕದ ಬಗ್ಗೆ ನಾನು ಹೇಳಿದ್ದು ಸತ್ಯ. ಸತ್ತ ಶರೀರವನ್ನೂ ರಾಜಕೀಯ ಸ್ವಾರ್ಥಕ್ಕೆ ಬಳಸಿಕೊಳ್ಳುವ ನಿಮ್ಮ ಕೀಳು ನಡವಳಿಕೆ ಕುರಿತು ನಾನು ಹೇಳಿದ್ದು ಅಕ್ಷರಶಃ ನಿಜ ಎಂದು ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಎಂದು ಹೇಳಿದ್ದಾರೆ. ಈ ಸಂಬಂಧ ಗೃಹ ಸಚಿವ ಪರಮೇಶ್ವರ್ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಎಚ್ಡಿಕೆ ಪ್ರಶ್ನೆ ಮಾಡಿದ್ದಾರೆ. ಕುಮಾರಸ್ವಾಮಿ ಎಕ್ಸ್ ಪೋಸ್ಟ್ನಲ್ಲಿ ಹೀಗಿದೆ:
ಬೆಂಗಳೂರು: ಅತೀ ಹೆಚ್ಚು ಅವಧಿಗೆ ಸಿಎಂ ಸಿದ್ದರಾಮಯ್ಯನವರು ಸಿಎಂ ಆಗುವ ಮೂಲಕ ಇತಿಹಾಸ ನಿರ್ಮಾಣ ಮಾಡಿದ ವಿಚಾರ ಸಂಬಂದ ಸಿದ್ದರಾಮಯ್ಯನವರನ್ನು ಜೆಡಿಎಸ್ ಲೇವಡಿ ಮಾಡಿದೆ. ಈ ಸಂಬಂಧ ಜೆಡಿಎಸ್ ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡು ಸಿದ್ದರಾಮಯ್ಯ ಅವರನ್ನು ಜೆಡಿಎಸ್ ವ್ಯಂಗ್ಯಮಾಡಿದೆ.ಕರ್ನಾಟಕದ ಸುದೀರ್ಘ ಅವಧಿಯ ಸಿಎಂ ಎಂದು ದಾಖಲೆ ಮಾಡಿರುವ @siddaramaiah ಅವರ ಕಾಲದ ದುರಾಡಳಿತದ ಪಟ್ಟಿ..👉 ರಾಜ್ಯದಲ್ಲಿ ಅತೀ ಹೆಚ್ಚು ಕೋಮುಗಲಭೆ ಮತ್ತು ಹಿಂಸಾಚಾರ
ನಿವೇನಾದರೂ ತೂಕ ಇಳಿಸಿಕೊಳ್ಳಲು ಯೋಜನೆ ಹಾಕಿಕೊಂಡಿದ್ದರೆ, ಬೆಳಗ್ಗಿನ ಜಾವ ಕೆಲ ಅಭ್ಯಾಸಗಳನ್ನು ಮಾಡುವುದರಿಂದ ಪರಿಣಾಮಕಾರಿಯಾದ ಫಲಿತಾಂಶವನ್ನು ಪಡೆಯಬಹುದು. ಈ ಸಮಯದಲ್ಲಿ ನೀವು ಪಾಲಿಸುವ ಕೆಲವು ಸಣ್ಣ ಅಭ್ಯಾಸಗಳು ನಿಮ್ಮ ಮೆಟಬಾಲಿಸಂ (ಚಯಾಪಚಯ ಕ್ರಿಯೆ) ಹೆಚ್ಚಿಸಿ, ದಿನವಿಡೀ ಹೆಚ್ಚಿನ ಕ್ಯಾಲೊರಿ ಕರಗಿಸಲು ಸಹಾಯ ಮಾಡುತ್ತದೆ.ಕೆಲವು ಅಭ್ಯಾಸಗಳು ಇಲ್ಲಿದೆ. ಎದ್ದ ತಕ್ಷಣ ಉಗುರುಬೆಚ್ಚಗಿನ ನೀರು ಸೇವನೆ
ಬೆಂಗಳೂರು: ಸಿಎಂ ಆಗಿ ಸಿದ್ದರಾಮಯ್ಯ ದಾಖಲೆ ಮಾಡಿದ ದಿನವೇ ಡಿಕೆ ಶಿವಕುಮಾರ್ ನಾಯಕತ್ವ ಬದಲಾವಣೆ ವಿಚಾರವಾಗಿ ಶಾಕಿಂಗ್ ಹೇಳಿಕೆ ನೀಡಿದ್ದಾರೆ. ಸಿಎಂ ಆಗಿ ಸಿದ್ದರಾಮಯ್ಯ ಇಂದು 2794 ದಿನಗಳನ್ನು ಪೂರ್ತಿ ಮಾಡಿ ದೇವರಾಜ ಅರಸು ಅವರ ದಾಖಲೆ ಮುರಿದಿದ್ದಾರೆ. ಈ ಮೂಲಕ ಕರ್ನಾಟಕದ ಅತೀ ದೀರ್ಘ ಕಾಲದ ಮುಖ್ಯಮಂತ್ರಿ ಎನಿಸಿಕೊಂಡಿದ್ದಾರೆ. ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸುವಾಗ ಸಿದ್ದರಾಮಯ್ಯ ಸಿಎಂ ಆಗಿ ಪೂರ್ಣಾವಧಿ ಪೂರೈಸುವ ವಿಶ್ವಾಸವಿದೆ ಎಂದಿದ್ದರು. ಇದರ ಬಗ್ಗೆ ಇಂದು ಡಿಸಿಎಂ ಡಿಕೆ ಶಿವಕುಮಾರ್ ಗೆ ಮಾಧ್ಯಮಗಳು ಪ್ರಶ್ನೆ ಮಾಡಿವೆ.
ನವದೆಹಲಿ: ಕಾಂಗ್ರೆಸ್ ಸಂಸದೆ ಸೋನಿಯಾ ಗಾಂಧಿ ಅವರು ಸೋಮವಾರ ಉಸಿರಾಟದ ತೊಂದರೆ ಅನುಭವಿಸಿದ ನಂತರ ರಾಷ್ಟ್ರ ರಾಜಧಾನಿಯ ಸರ್ ಗಂಗಾ ರಾಮ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆಸ್ಪತ್ರೆಯ ಬಿಡುಗಡೆಯ ಪ್ರಕಾರ, ಸೋನಿಯಾ ಅವರ ಆರೋಗ್ಯ ಸ್ಥಿತಿ ಪ್ರಸ್ತುತ ಸ್ಥಿರವಾಗಿದ್ದು, ಚಿಕಿತ್ಸೆಗೆ ಉತ್ತಮವಾಗಿ ಪ್ರತಿಕ್ರಿಯಿಸಿದ್ದಾರೆ. ಸರ್ ಗಂಗಾ ರಾಮ್ ಆಸ್ಪತ್ರೆಯ ಅಧ್ಯಕ್ಷ ಅಜಯ್ ಸ್ವರೂಪ್ ಅವರು ಈ ಸಂಬಂಧ ಪ್ರತಿಕ್ರಿಯಿಸಿ, ಶೀತ ಹವಾಮಾನ ಮತ್ತು
ಮೈಸೂರು: ಕರ್ನಾಟಕದ ಸುದೀರ್ಘ ಕಾಲದ ಸಿಎಂ ಎಂದು ಇಂದು ದೇವರಾಜು ಅರಸು ದಾಖಲೆ ಮುರಿದ ಬಗ್ಗೆ ಅವರು ಮಾಧ್ಯಮಗಳ ಮುಂದೆ ಮಾತನಾಡಿದ್ದಾರೆ. ಈ ವೇಳೆ ಸಿಎಂ ಬದಲಾವಣೆ ಬಗ್ಗೆ ಮಹತ್ವದ ಹೇಳಿಕೆ ನೀಡಿದ್ದಾರೆ. ಸಿಎಂ ಆಗಿ 2794 ದಿನ ಪೂರೈಸಿ ದಾಖಲೆ ಮಾಡಿದ ಬೆನ್ನಲ್ಲೇ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ ಸಿಎಂ ಬದಲಾವಣೆ ಬಗ್ಗೆ ಹೇಳಿಕೆ ನೀಡಿದ್ದಾರೆ. ‘ಮಾಜಿ ಮುಖ್ಯಮಂತ್ರಿ ದೇವರಾಜ್ ಅರಸು ಅವರ ದಾಖಲೆಯನ್ನು ಮುರಿಯಲೆಂದು ನಾನು ರಾಜಕೀಯ ಮಾಡಿಲ್ಲ. ಈ ದಾಖಲೆ ಕಾಕತಾಳೀಯವಾಗಿ ಆಗಿದೆ. ಜನರ ಆಶೀರ್ವಾದದಿಂದ ದೇವರಾಜ ಅರಸು ಅವರ ದಾಖಲೆಯನ್ನು ಮುರಿಯಲು ಸಾಧ್ಯವಾಗಿದೆ. ಮುಖ್ಯಮಂತ್ರಿಯಾಗಿ ಈ ಅವಧಿಯನ್ನು ಪೂರ್ಣಗೊಳಿಸುವ ವಿಶ್ವಾಸವಿದೆ.
ನವದೆಹಲಿ: ಮೋದಿ, ಅಮಿತ್ ಶಾನ ಇಲ್ಲೇ ಹೂತು ಹಾಕ್ತೀವಿ ಎಂದು ಜೆಎನ್ ಯುವಿನಲ್ಲಿ ವಿದ್ಯಾರ್ಥಿಗಳು ಘೋಷಣೆ ಕೂಗಿದ ವಿಡಿಯೋ ಈಗ ವೈರಲ್ ಆಗಿದೆ. ನಿನ್ನೆಯಷ್ಟೇ ದೆಹಲಿ ಗಲಭೆಯ ಪ್ರಮುಖ ಆರೋಪಿಗಳಾದ ಉಮರ್ ಖಾಲಿದ್ ಮತ್ತು ಶಾರ್ಜಿಲ್ ಇಮಾಮ್ ಗೆ ಸುಪ್ರೀಂಕೋರ್ಟ್ ಜಾಮೀನು ನಿರಾಕರಿಸಿತ್ತು. ಇದರ ಬೆನ್ನಲ್ಲೇ ಜೆಎನ್ ಯುವಿನಲ್ಲಿ ಮೋದಿ, ಶಾ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. ಎಡಪಂಥೀಯ ವಿದ್ಯಾರ್ಥಿಗಳು ಪ್ರತಿಭಟನೆ ವೇಳೆ ಮೋದಿ ಮತ್ತು ಅಮಿತ್ ಶಾಗೆ ಇಲ್ಲೇ ಸಮಾಧಿ ಅಗೆಯುತ್ತೇವೆ ಎಂದು ಘೋಷಣೆ ಕೂಗುವ ವಿಡಿಯೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಜೆಎನ್ ಯು ನೆಲದಲ್ಲೇ ಮೋದಿ, ಶಾ ಸಮಾಧಿ ಅಗೆಯುತ್ತೇವೆ ಎಂದಿದ್ದಾರೆ.
ಚೆನ್ನೈ: ತಿರುಪ್ಪರನ್ ಕುಂದ್ರ ಬೆಟ್ಟದ ದೀಪ ಸ್ತಂಬದಲ್ಲಿ ದೀಪ ಬೆಳಗಲು ಅಡ್ಡಗಾಲು ಹಾಕಿದ್ದ ಡಿಎಂಕೆ ನೇತೃತ್ವದ ತಮಿಳುನಾಡು ಸರ್ಕಾರಕ್ಕೆ ಮುಖಭಂಗವಾಗಿದೆ. ಬೆಟ್ಟದ ಮೇಲೆ ದೀಪ ಬೆಳಗಲು ಮದ್ರಾಸ್ ಹೈಕೋರ್ಟ್ ಅನುಮತಿ ನೀಡಿದೆ. ಇದು ಎಡಪಂಥೀಯ ಮತ್ತು ತಮಿಳುನಾಡು ಸರ್ಕಾರಕ್ಕೆ ತೀವ್ರ ಮುಖಭಂಗವಾದಂತಾಗಿದೆ. ಬೆಟ್ಟದ ಮೇಲಿರುವ ದೀಪಸ್ತಂಬದ ಮೇಲೆ ದೀಪ ಬೆಳಗುವುದನ್ನು ಹಿಂದೂಗಳು ಅನಾದಿ ಕಾಲದಿಂದಲೂ ಆಚರಿಸುತ್ತಾ ಬಂದಿದ್ದಾರೆ. ಆದರೆ ಇತ್ತೀಚೆಗೆ ಇದು ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗುತ್ತದೆ ಎಂದು ಆರೋಪಿಸಿ ತಮಿಳುನಾಡು ಸರ್ಕಾರ ದೀಪ ಬೆಳಗುವುದಕ್ಕೆ ನಿಷೇಧ ಹೇರಿತ್ತು. ಇನ್ನೊಂದೆಡೆ ದೀಪಸ್ತಂಬದ ಪಕ್ಕದಲ್ಲೇ ಇರುವ ಮಸೀದಿ ಕೂಡಾ ಇದು ವಕ್ಫ್ ಆಸ್ತಿ ಎಂದು ನ್ಯಾಯಾಲಯಕ್ಕೆ ಆಕ್ಷೇಪ ಸಲ್ಲಿಸಿತ್ತು.
ನವದೆಹಲಿ: ಟೀಂ ಇಂಡಿಯಾ ಕ್ರಿಕೆಟಿಗ ಶಿಖರ್ ಧವನ್ ಎರಡನೇ ಮದುವೆಗೆ ಸಿದ್ಧರಾಗಿದ್ದಾರೆ. ಮತ್ತೆ ವಿದೇಶೀ ಬೆಡಗಿಯ ಕೈ ಹಿಡಿಯಲು ಮುಂದಾಗಿದ್ದಾರೆ. ಶಿಖರ್ ಧವನ್ ಐರಿಷ್ ಬೆಡಗಿ ಸೋಫಿ ಶೈನ್ ಜೊತೆ ಮದುವೆಯಾಗಲಿದ್ದಾರೆ. 40 ವರ್ಷದ ಕ್ರಿಕೆಟಿಗ ಶಿಖರ್ ಧವನ್ ಗೆ ಇದು ಎರಡನೇ ಮದುವೆ. ಇದಕ್ಕಿಂತ ಮೊದಲು ಅವರು ಆಸ್ಟ್ರೇಲಿಯಾ ಮೂಲದ ಆಯೆಷಾ ಮುಖರ್ಜಿಯನ್ನು ಮದುವೆಯಾಗಿದ್ದರು. ಆದರೆ ಇಬ್ಬರ ನಡುವೆ ಭಿನ್ನಾಭಿಪ್ರಾಯಗಳಿಂದ 2023 ರಲ್ಲಿ ವಿಚ್ಛೇದನ ಪಡೆದಿದ್ದರು. ಇಬ್ಬರಿಗೂ ಒಬ್ಬ ಗುಂಡು ಮಗನಿದ್ದು ಆತ ತಾಯಿ ಜೊತೆಗಿದ್ದಾನೆ.
ಬೆಂಗಳೂರು: ಚಿನ್ನದ ಬೆಲೆ ಮತ್ತೆ ಏರಿಕೆ ಮತ್ತು ಇಳಿಕೆಯಾಗುತ್ತಲೇ ಇದೆ. ಆದರೆ ಇಂದು ಪರಿಶುದ್ಧ ಚಿನ್ನದ ದರ ಮತ್ತು ಇತರೆ ಚಿನ್ನದ ದರ ಏರಿಕೆ ಕಂಡಿದೆ. ಇಂದು ಪರಿಶುದ್ಧ ಚಿನ್ನದ ದರ ಮತ್ತು ಇತರೆ ಚಿನ್ನದ ದರ ವಿವರ ಇಲ್ಲಿದೆ ನೋಡಿ. ಚಿನ್ನದ ದರ ಏರಿಕೆಕಳೆದ ವಾರ ಪರಿಶುದ್ಧ ಚಿನ್ನದ ದರ ಸತತ ಇಳಿಕೆ ಕಂಡಿತ್ತು. ಆದರೆ ವಾರಂತ್ಯಕ್ಕೆ ಚಿನ್ನದ ದರ ಏರಿಕೆ-ಇಳಿಕೆಯಾಗುತ್ತಲೇ ಇತ್ತು. ಈ ವಾರ ಆರಂಭದಿಂದಲೇ ಇಳಿಕೆಯತ್ತ ಸಾಗಿತ್ತು. ಆದರೆ ಇಂದು ಪರಿಶುದ್ಧ ಚಿನ್ನದ ದರ ಕೊಂಚ ಏರಿಕೆಯಾಗಿದೆ. ಪರಿಶುದ್ಧ ಚಿನ್ನದ ದರ ಮೊನ್ನೆ 1,38,135.00 ರೂ.ಗಳಿತ್ತು.
ಬೆಂಗಳೂರು: ಅಡಿಕೆ ಬೆಲೆ ಒಂದು ವಾರದಿಂದ ಯಥಾಸ್ಥಿತಿಯಲ್ಲಿತ್ತು. ಆದರೆ ಇಂದು ಮತ್ತೆ ಬೆಲೆ ಏರಿಕೆಯಾಗಿರುವುದು ಸಮಾಧಾನ ತಂದಿದೆ. ಇಂದು ಅಡಿಕೆ ಮತ್ತು ಕಾಳು ಮೆಣಸು, ಕೊಬ್ಬರಿ ದರ ಹೇಗಿದೆ ಇಲ್ಲಿದೆ ವಿವರ. ಅಡಿಕೆ ಬೆಲೆ ಏರಿಕೆಯೂ ಅಲ್ಲ ಇಳಿಕೆಯೂ ಇಲ್ಲ ಎನ್ನುವ ಸ್ಥಿತಿಯಲ್ಲಿತ್ತು. ಒಂದೆಡೆ ಬೆಳೆ ಕಡಿಮೆ, ಇನ್ನೊಂದೆಡೆ ಬೆಲೆ ಏರಿಕೆಯಾಗದೇ ಇರುವುದು ರೈತರ ಚಿಂತೆಗೆ ಕಾರಣವಾಗಿತ್ತು. ಅಡಿಕೆ ಬೆಲೆ ಇಂದು ಸತತ ಎರಡನೇ ದಿನ ಏರಿಕೆಯಾಗಿರುವುದು ರೈತರ ಸಂತಸಕ್ಕೆ ಕಾರಣವಾಗಿದೆ.. ಆದರೆ ಇಂದು ಹೊಸ ಅಡಿಕೆ ಬೆಲೆ 5 ರೂ.ಗಳಷ್ಟು ಏರಿಕೆಯಾಗಿ 445 ರೂ.ಗಳಷ್ಟಿದೆ. ಹಳೆ ಅಡಿಕೆ ಬೆಲೆ 5 ರೂ. ಏರಿಕೆಯಾಗಿದ್ದು 540 ರೂ. ಗಳಷ್ಟಿದೆ.
ಮೈಸೂರು: ಇಂದು ಸುದೀರ್ಘ ಕಾಲ ಕರ್ನಾಟಕದ ಮುಖ್ಯಮಂತ್ರಿಯಾದ ದಾಖಲೆ ಮಾಡಿರುವ ಸಿದ್ದರಾಮಯ್ಯ ಮಾಧ್ಯಮಗಳ ಮುಂದೆ ಮಾತನಾಡಿದ್ದಾರೆ. ತಮ್ಮ ಮನೆ ಮುಂದೆ ಪಲಾವ್ ಹಂಚಿದವರ ಬಗ್ಗೆ ಮಾತನಾಡಿರುವ ಅವರು ಯಾರು ಹಂಚಿದ್ದಾರೆ ಎಂದೇ ಗೊತ್ತಿಲ್ಲ ಎಂದಿದ್ದಾರೆ. ಸಿಎಂ ಸಿದ್ದರಾಮಯ್ಯ ಇಂದು ಮುಖ್ಯಮಂತ್ರಿಯಾಗಿ 2794 ದಿನ ಕಳೆದಿದ್ದು ಈ ಮೂಲಕ ದೇವರಾಜು ಅರಸು ಅವರ ದಾಖಲೆಯನ್ನು ಮುರಿದಿದ್ದಾರೆ. ಈ ಮೂಲಕ ಕರ್ನಾಟಕದಲ್ಲಿ ಅತೀ ಹೆಚ್ಚು ಕಾಲ ಮುಖ್ಯಮಂತ್ರಿಯಾದ ದಾಖಲೆ ಮಾಡಿದ್ದಾರೆ. ಈ ಕಾರಣಕ್ಕೆ ಸಿಎಂ ಸಿದ್ದು ಅಭಿಮಾನಿಗಳು ಅವರ ಮೈಸೂರಿನ ಮನೆ ಮುಂದೆ ಲಾಡು, ಪಲಾವ್, ನಾಟಿ ಕೋಳಿ ಸಾರು ವಿತರಿಸಿದ್ದಾರೆ.
ಬೆಂಗಳೂರು: ಕಾಂತಾರದಲ್ಲಿ ಸೌಂದರ್ಯದ ಗಣಿ, ಟಾಕ್ಸಿಕ್ ನಲ್ಲಿ ತೊಡೆ ದರ್ಶನ.. ನಟಿ ರುಕ್ಮಿಣಿ ವಸಂತ್ ಟಾಕ್ಸಿಕ್ ಸಿನಿಮಾದ ಫಸ್ಟ್ ಲುಕ್ ರಿವೀಲ್ ಆಗಿದ್ದು ಇದನ್ನು ನೋಡಿ ಫ್ಯಾನ್ಸ್ ಈಗ ಹೀಗಂತಿದ್ದಾರೆ. ರಾಕಿಂಗ್ ಸ್ಟಾರ್ ಯಶ್ ಅವರ ಟಾಕ್ಸಿಕ್ ಸಿನಿಮಾದ ನಾಯಕಿಯಲ್ಲಿ ರುಕ್ಮಿಣಿ ವಸಂತ್ ಕೂಡಾ ಒಬ್ಬರು. ಕಾಂತಾರ ಸಿನಿಮಾ ಬಳಿಕ ಬಹುಭಾಷೆಗಳಲ್ಲಿ ಬ್ಯುಸಿಯಾಗಿರುವ ರುಕ್ಮಿಣಿ ವಸಂತ್ ಟಾಕ್ಸಿಕ್ ಸಿನಿಮಾದಲ್ಲಿ ಮಾಡರ್ನ್ ಲುಕ್ ನಲ್ಲಿ ಕಾಣಿಸಿಕೊಂಡಿದ್ದಾರೆ. ಕಾಂತಾರ ಸಿನಿಮಾದಲ್ಲಿ ಸೀರೆಯುಟ್ಟು ಸ್ನಿಗ್ಧ ಸೌಂದರ್ಯ ತೋರಿಸಿದ್ದ ರುಕ್ಮಿಣಿ ವಸಂತ್ ಇಲ್ಲಿ ಪಕ್ಕಾ ತದ್ವಿರುದ್ಧ ಪಾತ್ರ ಮಾಡಿದ್ದಾರೆ. ತೀರಾ ಮಾಡರ್ನ್ ಲುಕ್ ನಲ್ಲಿ ಕಾಣಿಸಿಕೊಂಡಿದ್ದಾರೆ.
ಮುಂಬೈ: ಡಬ್ಲ್ಯುಪಿಎಲ್ 2026 ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಆರ್ ಸಿಬಿ ಪಂದ್ಯಗಳ ವೇಳಾಪಟ್ಟಿ ಇಲ್ಲಿದೆ. ಜನವರಿ 9 ರಿಂದ ಟೂರ್ನಮೆಂಟ್ ಆರಂಭವಾಗುತ್ತಿದೆ. ಡಬ್ಲ್ಯುಪಿಎಲ್ ನ ಆರಂಭಿಕ ಪಂದ್ಯಗಳು ನವಿ ಮುಂಬೈ ಮೈದಾನದಲ್ಲಿ ನಡೆಯಲಿದೆ. ಜನವರಿ 9 ರಿಂದ ಟೂರ್ನಮೆಂಟ್ ಆರಂಭವಾಗಲಿದ್ದು, ಫೆಬ್ರವರಿ 5 ಕ್ಕೆ ಫೈನಲ್ ಪಂದ್ಯ ನಡೆಯುವುದು. ಮೊದಲ ಪಂದ್ಯದಲ್ಲೇ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡವನ್ನು ಆರ್ ಸಿಬಿ ಎದುರಿಸುತ್ತಿದೆ. ಎಲ್ಲಾ ಪಂದ್ಯಗಳೂ ರಾತ್ರಿ 7.30 ಕ್ಕೆ ಆರಂಭವಾಗಲಿದೆ. ಆರ್ ಸಿಬಿ ಪಂದ್ಯಗಳು ಹೀಗಿವೆ:
ಬೆಂಗಳೂರು: ರೇಣುಕಾಸ್ವಾಮಿ ಮರ್ಡರ್ ಕೇಸ್ ನಲ್ಲಿ ಜೈಲು ಪಾಲಾಗಿರುವ ಪವಿತ್ರಾ ಗೌಡಗೆ ಈಗ ದೇವರು ಕೊಟ್ರೂ ಪೂಜಾರಿ ಕೊಡಲಿಲ್ಲ ಎನ್ನುವ ಪರಿಸ್ಥಿತಿಯಾಗಿದೆ. ರೇಣುಕಾಸ್ವಾಮಿ ಮರ್ಡರ್ ಕೇಸ್ ನ ನಂ.1 ಆರೋಪಿ ಪವಿತ್ರಾ ಗೌಡ ಇತ್ತೀಚೆಗೆ ನನಗೆ ಜೈಲೂಟ ತಿನ್ನುವುದರಿಂದ ಅನಾರೋಗ್ಯವಾಗುತ್ತಿದೆ. ಮನೆ ಊಟಕ್ಕೆ ಅವಕಾಶ ಕೊಡಿ ಎಂದು ನ್ಯಾಯಾಲಯಕ್ಕೊ ಮೊರೆಯಿಟ್ಟಿದ್ದರು. ಅದರಂತೆ ನ್ಯಾಯಾಲಯ ಅವರ ಅರ್ಜಿ ವಿಚಾರಣೆ ನಡೆಸಿ ಒಂದು ಹೊತ್ತು ಮನೆ ಊಟಕ್ಕೆ ಅವಕಾಶ ನೀಡುವಂತೆ ಆದೇಶ ನೀಡಿತ್ತು. ನ್ಯಾಯಾಲಯ ಆದೇಶ ಬಂತಲ್ಲಾ, ಇನ್ನು ಆರಾಮವಾಗಿ ದಿನಕ್ಕೆ ಒಂದು ಹೊತ್ತಾದರೂ ಮನೆ ಊಟ ತಿನ್ನಬಹುದು ಎಂದು ಖುಷಿಯಲ್ಲಿದ್ದ ಪವಿತ್ರಾ ಗೌಡಗೆ ಜೈಲು ಅಧಿಕಾರಿಗಳು ಶಾಕ್ ಕೊಟ್ಟಿದ್ದಾರೆ.
ನವದೆಹಲಿ: ಪ್ಯಾಲೆಸ್ತೀನಿಯರ ಮೇಲೆ ಇಸ್ರೇಲ್ ದಾಳಿ ನಡೆಸಿದಾಗ ಆಲ್ ಐಸ್ ಆನ್ ರಾಫಾ ಎಂದು ಭಾರತದ ಸೆಲೆಬ್ರಿಟಿಗಳೂ ಸೇರಿದಂತೆ ಅನೇಕರು ಸೋಷಿಯಲ್ ಮೀಡಿಯಾದಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದರು. ಆದರೆ ಬಾಂಗ್ಲಾದೇಶ ಹಿಂದೂಗಳ ಬಗ್ಗೆ ಯಾಕೆ ಮೌನ ಎಂದು ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ದೌರ್ಜನ್ಯ, ಕೊಲೆ ನಡೆಯುತ್ತಲೇ ಇದೆ. ಕಳೆದ ಮೂರು ವಾರಗಳಲ್ಲಿ ಐವರು ಹಿಂದೂಗಳನ್ನು ಹತ್ಯೆ ಮಾಡಲಾಗಿದೆ. ಇದರ ಜೊತೆಗೆ ಹಿಂದೂ ಮಹಿಳೆಯರ ಮೇಲೆ ಅತ್ಯಾಚಾರವಾಗುತ್ತಿದೆ. ಮನೆಗಳಿಗೆ ಬೆಂಕಿ ಹಚ್ಚಲಾಗುತ್ತಿದೆ. ಇಷ್ಟೆಲ್ಲಾ ದೌರ್ಜನ್ಯವಾಗುತ್ತಿದ್ದರೂ ಭಾರತ ಸರ್ಕಾರ ಮೌನವಾಗಿದೆ ಎಂದು ಸೋಷಿಯಲ್ ಮೀಡಿಯಾದಲ್ಲಿ ಆಕ್ರೋಶ ಕೇಳಿಬರುತ್ತಿದೆ.
ಢಾಕಾ: ನೆರೆಯ ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ಹಿಂಸಾಚಾರ ನಿಂತಿಲ್ಲ. ಇದೀಗ ಹಿಂದೂ ಮಹಿಳೆಯೊಬ್ಬಳನ್ನು ರೇಪ್ ಮಾಡಿ ಮರಕ್ಕೆ ಕಟ್ಟಿ ಹಾಕಿ ಕೂದಲು ಕತ್ತರಿಸಿ ವಿಕೃತಿ ಮೆರೆದ ಘಟನೆ ನಡೆದಿದೆ. ಇನ್ನೊಂದು ಕಡೆ ಹಿಂದೂ ಪತ್ರಕರ್ತನನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಮತ್ತೊಂದು ಘಟನೆಯಲ್ಲ ಬಿಡಿ ಖೊಬೊರ್ ಪತ್ರಿಕೆಯ ಹಂಗಾಮಿ ಸಂಪಾದಕ ಪ್ರತಾಪ್ ತಲೆಗೆ ಗುಂಡು ಹಾರಿಸಿ ದುಷ್ಕರ್ಮಿಗಳು ಕೊಂದು ಹಾಕಿದ್ದಾರೆ. ಕಳೆದ 3 ವಾರಗಳಲ್ಲಿ ನಡೆದ 5 ನೇ ಹತ್ಯೆಯಿದು. ಹಿಂದೂಗಳ ಮೇಲೆ ನಿರಂತರವಾಗಿ ಬಾಂಗ್ಲಾದೇಶದಲ್ಲಿ ಕ್ರೌರ್ಯ ಮುಂದುವರಿದಿದೆ.ಹಣ ನೀಡಲು ನಿರಾಕರಿಸಿದ್ದಕ್ಕೆ ಹಿಂದೂ ವಿಧವೆಯ ಮೇಲೆ ಇಬ್ಬರು ಗ್ಯಾಂಗ್ ರೇಪ್ ಮಾಡಿದ್ದಾರೆ.
ನವದೆಹಲಿ: ಯುಪಿಎ ಸರ್ಕಾರದಲ್ಲಿ ಕೇಂದ್ರ ಸಚಿವರಾಗಿದ್ದ, ಕಾಂಗ್ರೆಸ್ ನಾಯಕ ಸುರೇಶ್ ಕಲ್ಮಾಡಿ ನಿಧನರಾಗಿದ್ದಾರೆ. ಅವರಿಗೆ 81 ವರ್ಷ ವಯಸ್ಸಾಗಿತ್ತು. ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ರೈಲ್ವೇ ಸಚಿವರಾಗಿ ಮತ್ತು ಇಂಡಿಯನ್ ಒಲಿಂಪಿಕ್ಸ್ ಅಸೋಸಿಯೇಷನ್ ಮುಖ್ಯಸ್ಥರಾಗಿ ಕಾರ್ಯನಿರ್ವಹಿಸಿದ್ದರು. ಇದೀಗ ಬಹುಕಾಲದ ಅನಾರೋಗ್ಯದಿಂದಾಗಿ ಇಹಲೋಕ ತ್ಯಜಿಸಿದ್ದಾರೆ ಎಂದು ತಿಳಿದುಬಂದಿದೆ. ಅನಾರೋಗ್ಯದ ಕಾರಣದಿಂದ ಅವರನ್ನು ಪುಣೆಯ ದೀನನಾಥ ಮಂಗೇಶ್ಕರ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಈಗ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಇಂದು ಮಧ್ಯಾಹ್ನ 2 ಗಂಟೆಯವರೆಗೆ ಅವರ ಮೃತದೇಹದ ಸಾರ್ವಜನಿಕ ದರ್ಶನಕ್ಕೆ ಕಲ್ಮಾಡಿ ಮನೆಯಲ್ಲಿ ವ್ಯವಸ್ಥೆ ಮಾಡಲಾಗಿದೆ.
ಬೆಂಗಳೂರು: ಕೇಂದ್ರ ಸಚಿವ ವಿ ಸೋಮಣ್ಣ ಮತ್ತು ರಾಜ್ಯದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ನಡುವೆ ನಡೆದ ಜಟಾಪಟಿ ನಡುವೆ ಕಾಂಗ್ರೆಸ್ ಕಾರ್ಯಕರ್ತರು ಕುರ್ಚಿ ಎಸೆದು ಗೂಂಡಾಗಿರಿ ಮಾಡಿದ್ದಾರೆ. ಇದರ ವಿರುದ್ಧ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ. ಕೊಪ್ಪಳದ ಹಿಟ್ನಾಳ ಬಳಿಯ ರೈಲ್ವೇ ಮೇಲ್ಸೇತುವೆ ಶಂಕು ಸ್ಥಾಪನೆ ವೇಳೆ ವೇದಿಕೆಯ ಸ್ಕ್ರೀನ್ ನಲ್ಲಿ ರಾಜ್ಯ ಸರ್ಕಾರದ ಜನಪ್ರತಿನಿಧಿಗಳ ಹೆಸರು ಇಲ್ಲದೇ ಇರುವುದಕ್ಕೆ ರೈಲ್ವೇ ಖಾತೆ ರಾಜ್ಯ ಸಚಿವ ವಿ ಸೋಮಣ್ಣ ಜೊತೆ ಶಿವರಾಜ್ ತಂಗಡಗಿ ಜಡಾಪಟಿ ನಡೆಸಿದ್ದಾರೆ. ಅವರಿಗೆ ಕಾಂಗ್ರೆಸ್ ಕಾರ್ಯಕರ್ತರೂ ಸಾಥ್ ನೀಡಿದ್ದಾರೆ.
ಬೆಂಗಳೂರು: ರಾಜ್ಯದ ಮುಖ್ಯಮಂತ್ರಿಯಾಗಿ ಇಂದು ಸಿದ್ದರಾಮಯ್ಯ ವಿಶಿಷ್ಠ ದಾಖಲೆಯೊಂದನ್ನು ಮಾಡಿದ್ದಾರೆ. ಅತೀ ದೀರ್ಘಾವಧಿಗೆ ಸಿಎಂ ಆದ ದಾಖಲೆ ಮಾಡಿದ್ದಾರೆ. ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರ ಚರ್ಚೆಯಲ್ಲಿರುವಾಗಲೇ ಸಿದ್ದರಾಮಯ್ಯ ಹೊಸ ದಾಖಲೆ ಮಾಡಿದ್ದಾರೆ. ಇಂದಿಗೆ ಸಿದ್ದರಾಮಯ್ಯ 7 ವರ್ಷ 239 ದಿನಗಳ ಕಾಲ ಮುಖ್ಯಮಂತ್ರಿಯಾಗಿದ್ದ ದೇವರಾಜ ಅರಸು ದಾಖಲೆಯನ್ನು ಮುರಿದಿದ್ದಾರೆ. ಮೊದಲ ಬಾರಿಗೆ ಸಿಎಂ ಆದಾಗ 2013-2018 ರವರೆಗೆ ಸಿದ್ದರಾಮಯ್ಯ ಒಟ್ಟು 1,829 ದಿನಗಳ ಕಾಲ ಮುಖ್ಯಮಂತ್ರಿಯಾಗಿದ್ದರು. ಎರಡನೇ ಬಾರಿಗೆ ಸಿಎಂ ಆಗಿರುವ ಅವರು ಈಗ 7 ವರ್ಷ 240 ದಿನಗಳನ್ನು ಪೂರೈಸಿ ಮಾಜಿ ಸಿಎಂ ದಿವಂಗತ ದೇವರಾಜ ಅರಸು ದಾಖಲೆಯನ್ನು ಹಿಂದಿಕ್ಕಿದ್ದಾರೆ.
ಬೆಂಗಳೂರು: ರಾಜ್ಯದಲ್ಲಿ ಈಗ ಹಲವೆಡೆ ವಿಪರೀತ ಚಳಿಯಾಗಿದ್ದರೆ ಮತ್ತೆ ಕೆಲವು ಕಡೆ ತುಂತುರು ಮಳೆಯೂ ಕಂಡುಬರುತ್ತಿದೆ. ಇಂದೂ ಕೂಡಾ ಚಳಿಯ ಜೊತೆಗೆ ಮೋಡ ಕವಿದ ವಾತಾವರಣ ನಿರೀಕ್ಷಿಸಲಾಗಿದೆ. ವಾರಂತ್ಯದಲ್ಲಿ ವಿಪರೀತ ಚಳಿ, ಮೋಡ ಕವಿದ ವಾತಾವರಣವಿತ್ತು. ಇಂದೂ ಬೆಳಿಗ್ಗೆ ಮಂಜು ಮುಸುಕಿದ ವಾತಾವರಣವಿತ್ತು. ಇಂದು ರಾಜ್ಯದ ಸರಾಸರಿ ಕನಿಷ್ಠ ತಾಪಮಾನ 17 ಡಿಗ್ರಿಯಷ್ಟಿರಲಿದೆ. ಗರಿಷ್ಠ ತಾಪಮಾನ 26 ಡಿಗ್ರಿಯಷ್ಟಿರಲಿದೆ. ಚಿಕ್ಕಮಗಳೂರು, ಕೊಡಗು, ಹಾಸನ ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನ 14 ಡಿಗ್ರಿಯಷ್ಟಿರಲಿದ್ದು ವಿಪರೀತ ಚಳಿ ಕಂಡುಬರುವುದು. ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಕೆಲವೆಡೆ ಭಾಗಶಃ ಮೋಡ ಕವಿದ ವಾತಾವರಣವಿರುವ ಸಾಧ್ಯತೆಯಿದೆ.
ಮಂಗಳವಾರ ಸುಬ್ರಹ್ಮಣ್ಯನಿಗೆ ವಿಶೇಷವಾದ ದಿನವಾಗಿದೆ. ಸರ್ಪದೋಷ, ಸಂತಾನ ಸಮಸ್ಯೆ,ವಿವಾಹಕ್ಕೆ ಅಡ್ಡಿ, ಮನಸ್ಸಿಗೆ ನೆಮ್ಮದಿ ಇಲ್ಲವೆಂದರೆ ಸುಬ್ರಹ್ಮಣ್ಯನ ಕುರಿತಾದ ಈ ಷಣ್ಮುಖ ಪಂಚರತ್ನ ಸ್ತುತಿ ಓದಿ.ಸ್ಫುರದ್ವಿದ್ಯುದ್ವಲ್ಲೀವಲಯಿತಮಗೋತ್ಸಂಗವಸತಿಂಭವಾಪ್ಪಿತ್ತಪ್ಲುಷ್ಟಾನಮಿತಕರುಣಾಜೀವನವಶಾತ್ ।ಅವಂತಂ ಭಕ್ತಾನಾಮುದಯಕರಮಂಭೋಧರ ಇತಿಪ್ರಮೋದಾದಾವಾಸಂ ವ್ಯತನುತ ಮಯೂರೋಽಸ್ಯ ಸವಿಧೇ ॥ 1 ॥ ಸುಬ್ರಹ್ಮಣ್ಯೋ ಯೋ ಭವೇಜ್ಜ್ಞಾನಶಕ್ತ್ಯಾಸಿದ್ಧಂ ತಸ್ಮಿಂದೇವಸೇನಾಪತಿತ್ವಮ್ ।ಇತ್ಥಂ ಶಕ್ತಿಂ ದೇವಸೇನಾಪತಿತ್ವಂಸುಬ್ರಹ್ಮಣ್ಯೋ ಬಿಭ್ರದೇಷ ವ್ಯನಕ್ತಿ ॥ 2 ॥ಪಕ್ಷೋಽನಿರ್ವಚನೀಯೋ ದಕ್ಷಿಣ ಇತಿ ಧಿಯಮಶೇಷಜನತಾಯಾಃ ।ಜನಯತಿ ಬರ್ಹೀ ದಕ್ಷಿಣನಿರ್ವಚನಾಯೋಗ್ಯಪಕ್ಷಯುಕ್ತೋಽಯಮ್ ॥ 3 ॥ ಯಃ ಪಕ್ಷಮನಿರ್ವಚನಂ ಯಾತಿ ಸಮವಲಂಬ್ಯ ದೃಶ್ಯತೇ ತೇನ ।ಬ್ರಹ್ಮ ಪರಾತ್ಪರಮಮಲಂ ಸುಬ್ರಹ್ಮಣ್ಯಾಭಿಧಂ ಪರಂ ಜ್ಯೋತಿಃ ॥ 4 ॥ ಷಣ್ಮುಖಂ ಹಸನ್ಮುಖಂ ಸುಖಾಂಬುರಾಶಿಖೇಲನಂಸನ್ಮುನೀಂದ್ರಸೇವ್ಯಮಾನಪಾದಪಂಕಜಂ ಸದಾ ।
ನಟಿ ದೀಪಿಕಾ ಪಡುಕೋಣೆ ಭಾನುವಾರ ತನ್ನ 40 ನೇ ಹುಟ್ಟುಹಬ್ಬವನ್ನು ಆಚರಿಸಿದ್ದು, ನಿರ್ದೇಶಕ ಅಟ್ಲೀ ಅವರ ಮುಂಬರುವ ಬಿಗ್-ಬಜೆಟ್ ಚಿತ್ರದಿಂದ ತಾತ್ಕಾಲಿಕವಾಗಿ AA22xA6 ಎಂಬ ಶೀರ್ಷಿಕೆಯ ಮೊದಲ ನೋಟವನ್ನು ಬಿಡುಗಡೆ ಮಾಡಿತು. ಸನ್ ಮ್ಯೂಸಿಕ್ ಮತ್ತು ಸನ್ ಪಿಕ್ಚರ್ಸ್ ಹಂಚಿಕೊಂಡ ಈ ಬಹಿರಂಗವು, ಅಭಿಮಾನಿಗಳಿಗೆ ಶಕ್ತಿಯುತ, ಆಕ್ಷನ್-ಆಧಾರಿತ ಅವತಾರದಲ್ಲಿ ದೀಪಿಕಾ ಅವರ ಆರಂಭಿಕ ನೋಟವನ್ನು ನೀಡಿತು, ಇದು ಚಿತ್ರದ ಪ್ರಮಾಣ ಮತ್ತು ಮಹತ್ವಾಕಾಂಕ್ಷೆಯನ್ನು ಒತ್ತಿಹೇಳುತ್ತದೆ.ಫಸ್ಟ್ ಲುಕ್ ಚಿತ್ರವು ಖಾಕಿ ಹಸಿರು ಉಡುಪಿನಲ್ಲಿ ದೀಪಿಕಾ ಎರಡು ಕೈಗಳಲ್ಲಿ ಕತ್ತಿಗಳನ್ನು ಹಿಡಿದುಕೊಂಡು ಯೋಧ ಭಂಗಿಯನ್ನು
ಬೆಂಗಳೂರು: ಇಲ್ಲಿನ ಮಡಿವಾಳದ ಸಂಧ್ಯಾ ಥಿಯೇಟರ್ನ ಮಹಿಳಾ ಟಾಯ್ಲೆಟ್ನಲ್ಲಿ ರಹಸ್ಯವಾಗಿ ಕ್ಯಾಮೆರ್ ಇಟ್ಟಿದ ಸಂಬಂಧ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಮಹಿಳಾ ಟಾಯ್ಲೆಟ್ ನಲ್ಲಿ ರಹಸ್ಯ ಕ್ಯಾಮೆರಾ ಇಟ್ಟು ಚಿತ್ರೀಕರಣ ನಡೆಸುತ್ತಿದ್ದ ಗಂಭೀರ ಆರೋಪ ಕೇಳಿಬಂದಿದೆ.ಬೆಂಗಳೂರಿನ ಮಡಿವಾಳದಲ್ಲಿರುವ ಸಂಧ್ಯಾ ಥಿಯೇಟರ್ನಲ್ಲಿ ಈ ಘಟನೆ ನಡೆದಿದ್ದು, ಸಂಧ್ಯಾ ಥಿಯೇಟರ್ ಬಾತ್ ರೂಮ್ನಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳಾ ಟೆಕ್ಕಿ ದೂರಿನ ಮೇರೆಗೆ ಇದೀಗ ಮಡಿವಾಳ ಪೊಲೀಸ್ ಠಾಣೆಯಲ್ಲಿ ಥಿಯೇಟರ್ ಮತ್ತು ಸಿಬ್ಬಂದಿ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಬೆಂಗಳೂರು: ದಿನಕ್ಕೊಂದು ಸೇಬು ತಿಂದರೆ ವೈದ್ಯರಿಂದ ದೂರವಿರಬಹುದು ಎಂಬ ಗಾದೆ ಮಾತಿನಂತೆ, ಇದರಲ್ಲಿರುವ ಪೋಷಕಾಂಶಗಳು ನಮ್ಮ ದೇಹವನ್ನು ಆರೋಗ್ಯಯುತವಾಗಿ ಇರಿಸುತ್ತದೆ. ಸೇಬಿನ ಪ್ರಮುಖ ಆರೋಗ್ಯ ಪ್ರಯೋಜನಗಳು ಇಲ್ಲಿವೆ:1. ಹೃದಯದ ಆರೋಗ್ಯಕ್ಕೆ ಉತ್ತಮ: ರಕ್ತದಲ್ಲಿನ ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಇದರಲ್ಲಿರುವ ಪಾಲಿಫೆನಾಲ್ ಎಂಬ ಉತ್ಕರ್ಷಣ ನಿರೋಧಕಗಳು ರಕ್ತದೊತ್ತಡವನ್ನು ನಿಯಂತ್ರಣದಲ್ಲಿಡುತ್ತವೆ.2. ತೂಕ ಇಳಿಸಲು ಸಹಕಾರಿಸೇಬಿನಲ್ಲಿ ನಾರಿನಂಶ ಮತ್ತು ನೀರಿನಂಶ ಹೆಚ್ಚಾಗಿದ್ದು, ಇದನ್ನು ಸೇವಿಸಿದರೆ ಹೊಟ್ಟೆ ತುಂಬಿದ ಅನುಭವ ಆಗಿರುವುದರಿಂದ ಪದೇ
ಮೈಸೂರು: ಜನರ ಆಶೀರ್ವಾದದಿಂದ ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಅವರ ದಾಖಲೆಯನ್ನು ಮುರಿಯಲಾಗುವುದು ಎಂದು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಹೇಳಿದ್ದಾರೆ.ಕಾಲ ಬದಲಾದಂತೆ ರಾಜಕೀಯ ದಾಖಲೆಗಳನ್ನು ಮೀರಿಸುವ ಉದ್ದೇಶವಿದೆ ಎಂದು ಪ್ರತಿಪಾದಿಸಿದರು. ಜನರ ಆಶೀರ್ವಾದದಿಂದ ಅವರ ದಾಖಲೆ ಮುರಿಯಲಿದೆ. ನನ್ನ ಮತ್ತು ನನ್ನ ನಡುವೆ ಯಾವುದೇ ಹೋಲಿಕೆ ಇಲ್ಲ. ಆಗಿನ ಪರಿಸ್ಥಿತಿಯೇ ಬೇರೆ, ಈಗಿನ ಪರಿಸ್ಥಿತಿಯೇ ಬೇರೆ. ಸನ್ನಿವೇಶಗಳು ನನ್ನನ್ನು ಇಲ್ಲಿಯವರೆಗೆ ಕರೆತಂದಿವೆ.1983ರ ವಿಧಾನಸಭೆ ಚುನಾವಣೆಯನ್ನು ಸ್ಮರಿಸಿದ ಸಿಎಂ, 1983ರ ವಿಧಾನಸಭೆ ಚುನಾವಣೆ ವೇಳೆ ದೇವರಾಜ ಅರಸು
ನವದೆಹಲಿ: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಸೋಮವಾರ ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು. X ನಲ್ಲಿನ ಪೋಸ್ಟ್ನಲ್ಲಿ, ಭಾರತದ ಪ್ರಧಾನ ಮಂತ್ರಿ ಕಚೇರಿಯ (PMO) ಅಧಿಕೃತ ಹ್ಯಾಂಡಲ್ ಚಿತ್ರಗಳನ್ನು ಹಂಚಿಕೊಂಡಿದೆ ಮತ್ತು "ಉತ್ತರ ಪ್ರದೇಶದ ಮುಖ್ಯಮಂತ್ರಿ ಶ್ರೀ @myogiadityanath ಅವರು ಪ್ರಧಾನಿ @narendramodi ಅವರನ್ನು ಭೇಟಿ ಮಾಡಿದರು. @CMOfficeUP" ಎಂದು ಬರೆದಿದ್ದಾರೆ.ಇಂದು ಮುಂಜಾನೆ, ಮುಖ್ಯಮಂತ್ರಿ ಆದಿತ್ಯನಾಥ್ ಅವರು ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮತ್ತು ರಾಜಸ್ಥಾನದ ಮಾಜಿ
ಇದೀಗ 40 ದಿನಗಳ ಪೆರೋಲ್ನಲ್ಲಿ ಹೊರಬರುತ್ತಿರುವ ಗುರ್ಮೀತ್ ರಾಮ್ ರಹೀಮ್ ಸಿಂಗ್ ಅವರ ಮೇಲೆ ಹಲವು ಆಪಾದನೆಗಳಿದೆ. ಹರಿಯಾಣದ ಸಿರ್ಸಾದಲ್ಲಿರುವ 'ಡೆರಾ ಸಚ್ಚಾ ಸೌದಾ' ಎಂಬ ಧಾರ್ಮಿಕ ಸಂಸ್ಥೆಯ ಮುಖ್ಯಸ್ಥರಾಗಿದ್ದ ಗುರ್ಮೀತ್ ರಾಮ್ ಅವರು ಭಾರತದಲ್ಲಿ ಅತ್ಯಂತ ಪ್ರಭಾವಶಾಲಿ ಮತ್ತು ವಿವಾದಾತ್ಮಕ ವ್ಯಕ್ತಿಗಳಲ್ಲಿ ಒಬ್ಬರು.ಇವರ ಬಗ್ಗೆ ಪ್ರಮುಖ ಮಾಹಿತಿಗಳು ಇಲ್ಲಿವೆ:ರಾಮ್ ರಹೀಮ್ ಅವರು 1990ರಲ್ಲಿ ಡೆರಾ ಸಚ್ಚಾ ಸೌದಾದ ಮುಖ್ಯಸ್ಥರಾಗಿ ಅಧಿಕಾರ ವಹಿಸಿಕೊಂಡರು. ಇವರು ಲಕ್ಷಾಂತರ
ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್, ತನ್ನ ಇಬ್ಬರು ಶಿಷ್ಯರ ಮೇಲೆ ಅತ್ಯಾಚಾರ ಎಸಗಿದ ಆರೋಪದಲ್ಲಿ 20 ವರ್ಷಗಳ ಜೈಲು ಶಿಕ್ಷೆ ಅನುಭವಿಸುತ್ತಿದ್ದು, 40 ದಿನಗಳ ಪೆರೋಲ್ ಮಂಜೂರು ಮಾಡಿದ ನಂತರ ಸೋಮವಾರ ರೋಹ್ಟಕ್ನ ಸುನಾರಿಯಾ ಜೈಲಿನಿಂದ ಹೊರನಡೆದರು. ಇದು 15 ನೇ ಬಾರಿಗೆ ಸ್ವಯಂ-ಘೋಷಿತ ದೇವಮಾನವ 2017 ರಲ್ಲಿ ತನ್ನ ಅಪರಾಧವನ್ನು ಪೆರೋಲ್ನಲ್ಲಿ ಹೊರಗಿದೆ.ಸಿಂಗ್ ಅವರು 40 ದಿನಗಳ ಅವಧಿಯಲ್ಲಿ ತಮ್ಮ ಸಿರ್ಸಾದ ಪ್ರಧಾನ ಕಛೇರಿಯ ಡೇರಾದಲ್ಲಿ ಉಳಿಯಲಿದ್ದಾರೆ ಎಂದು ಡೇರಾ ವಕ್ತಾರ ಮತ್ತು ವಕೀಲ ಜಿತೇಂದರ್ ಖುರಾನಾ ಹೇಳಿದ್ದಾರೆ.
ನವದೆಹಲಿ: ಬಿಸಿಸಿಐ ಸೂಚನೆಯ ಮೇರೆಗೆ ವೇಗಿ ಮುಸ್ತಾಫಿಜುರ್ ರೆಹಮಾನ್ ಅವರನ್ನು ವಿಶ್ವದ ಅತಿದೊಡ್ಡ ಟಿ 20 ಲೀಗ್ನಿಂದ ಹೊರಹಾಕಿದ ಹಿನ್ನೆಲೆಯಲ್ಲಿ ಬಾಂಗ್ಲಾದೇಶ ಸೋಮವಾರ ಐಪಿಎಲ್ನ ಮುಂಬರುವ ಋತುವಿನ ಪ್ರಸಾರವನ್ನು ನಿಷೇಧಿಸಿದೆ.ಬಾಂಗ್ಲಾದೇಶದ ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಹೇಳಿಕೆಯು ಐಪಿಎಲ್ ಫ್ರಾಂಚೈಸಿ ಕೋಲ್ಕತ್ತಾ ನೈಟ್ ರೈಡರ್ಸ್ಗೆ ತನ್ನ 2026 ರ ಪಟ್ಟಿಯಿಂದ ರೆಹಮಾನ್ ಅವರನ್ನು ಬಿಡುಗಡೆ ಮಾಡಲು ಸೂಚಿಸುವಾಗ ಬಿಸಿಸಿಐ ಯಾವುದೇ "ತಾರ್ಕಿಕ ಕಾರಣ" ನೀಡಿಲ್ಲ ಎಂದು ಹೇಳಿದೆ.ಬಾಂಗ್ಲಾದೇಶದಲ್ಲಿ ಐಪಿಎಲ್ ಪಂದ್ಯಗಳ ಪ್ರಸಾರದ ನಿಷೇಧದಿಂದಾಗಿ ಬಿಸಿಸಿಐ ಮತ್ತು ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ (ಬಿಸಿಬಿ)
ಬೆಂಗಳೂರು: ರಾಜ್ಯ ನಾಯಕತ್ವ ವಿಚಾರವಾಗಿ ಸಚಿವ ಕೃಷ್ಣಬೈರೇಗೌಡ ಅವರು ನೀಡಿರುವ ಸ್ಫೋಟಕ ಹೇಳಿಕೆ ಇದೀಗ ರಾಜ್ಯ ರಾಜಕಾರಣದಲ್ಲಿ ಕುತೂಹಲ ಮೂಡಿಸಿದೆ. ನನಗಿರುವ ಮಾಹಿತಿ ಪ್ರಕಾರ ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಾಯಕತ್ವ ಬದಲಾವಣೆ ಕಷ್ಟಸಾಧ್ಯ . ಸದ್ಯ ಸಿಎಂ ಕುರ್ಚಿ ವಿಚಾರವಾಗಿ ಬಿಸಿಬಿಸಿ ಚರ್ಚೆ ನಡೆಯುತ್ತಿರುವ ಸಂದರ್ಭದಲ್ಲೇ ಕೃಷ್ಣಬೈರೇಗೌಡ ಅವರ ಈ ಹೇಳಿಕೆ ರಾಜಕೀಯವಾಗಿ ಹೆಚ್ಚು ಮಹತ್ವ ಪಡೆದುಕೊಂಡಿದೆ.ಸಿದ್ದರಾಮಯ್ಯನವರ ಪರ್ಯಾಯ ವ್ಯವಸ್ಥೆ ಕಷ್ಟಸಾಧ್ಯ. ಹಾಗೆಂದು ಬೇರೆಯವರಿಗೆ ಈ ಸಾಮರ್ಥ್ಯ ಇಲ್ಲ ಎಂದರ್ಥವಲ್ಲ. ಅವರ
ಬೆಂಗಳೂರು: ವಿಜಯ್ ಹಜಾರೆ ಟ್ರೋಫಿ ಟೂರ್ನಿಯ ಮತ್ತೊಂದು ಸುತ್ತಿನ ಪಂದ್ಯ ನಾಳೆ ನಡೆಯಲಿದೆ. ಈ ಪಂದ್ಯದಲ್ಲಿ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ತಮ್ಮ ರಾಜ್ಯ ತಂಡದ ಪರ ಆಡಲಿದ್ದಾರಾ ಎಂಬ ಪ್ರಶ್ನೆಗೆ ಇಲ್ಲಿದೆ ಉತ್ತರ. ವಿಜಯ್ ಹಜಾರೆ ಟ್ರೋಫಿಯಲ್ಲಿ ವಿರಾಟ್ ಕೊಹ್ಲಿ ತವರು ದೆಹಲಿ ತಂಡದ ಪರ ಆಡಿದರೆ ರೋಹಿತ್ ಶರ್ಮಾ ಮುಂಬೈ ಪರ ಆಡಿದ್ದರು. ಈ ದಿಗ್ಗಜ ಆಟಗಾರರು ಅದೆಷ್ಟೋ ಸಮಯದ ನಂತರ ಬಿಳಿ ಚೆಂಡಿನಲ್ಲಿ ದೇಶೀಯ ಕ್ರಿಕೆಟ್ ನಲ್ಲಿ ಆಡಿದ್ದರು. ಇಬ್ಬರೂ ಈಗಾಗಲೇ ಎರಡು ಪಂದ್ಯಗಳಲ್ಲಿ ಆಡಿದ್ದಾರೆ. ನಾಳೆ ದೆಹಲಿ ಮತ್ತು ರೈಲ್ವೇಸ್ ನಡುವೆ ಪಂದ್ಯ ನಡೆಯಲಿದೆ.
ಬಾಗ್ಪತ್ (ಯುಪಿ): ಬೀದಿ ನಾಯಿಗೆ ಮದ್ಯ ಕುಡಿಸಿ ವಿಕೃತಿ ಮೆರೆದ ವ್ಯಕ್ತಿಯೊಬ್ಬನನ್ನು ಬಂಧಿಸಿದ ಘಟನೆ ಬಾಗ್ಪತ್ನಲ್ಲಿ ನಡೆದಿದೆ.ಘಟನೆಯ ವಿಡಿಯೋ ಆನ್ಲೈನ್ನಲ್ಲಿ ವೈರಲ್ ಆದ ಬೆನ್ನಲ್ಲೇ ನಾಯಿಯನ್ನು ಕ್ರೌರ್ಯಕ್ಕೆ ಒಳಪಡಿಸಿದ ಮತ್ತು ಮದ್ಯ ಕುಡಿಸಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಇಲ್ಲಿ ಬಂಧಿಸಲಾಗಿದೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.ಪೊಲೀಸರ ಪ್ರಕಾರ, ಯುವಕರು ನಾಯಿಗೆ ಚಿತ್ರಹಿಂಸೆ ನೀಡುವುದು ಮತ್ತು ಬಲವಂತವಾಗಿ ಮದ್ಯದ ಬಾಟಲಿಯಿಂದ ಅಮಲೇರಿದ
ಬೆಂಗಳೂರು: ಓಂ ಶಕ್ತಿ ಮಾಲಾಧಾರಿಗಳ ಮೆರವಣಿಗೆಯ ಮೇಲೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ ಸಂಬಂಧ ಗೃಹ ಸಚಿವ ಜಿ ಪರಮೇಶ್ವರ್ ಅವರು, ಬಂಧತರು ಅಪ್ರಾಪ್ತ ವಯಸ್ಸಿನವರಾಗಿದ್ದಾರೆ ಎಂದರು. ಇನ್ನೂ ಈ ಸಂಬಂಧ ಪೊಲೀಸರು ಪ್ರತಿಕ್ರಿಯಿಸಿ, ನಂತರ ನಗರದ ಜಗಜೀವನರಾಮ್ ನಗರದಲ್ಲಿ ಪರಿಸ್ಥಿತಿ ಉದ್ವಿಗ್ನವಾಗಿದ್ದರೂ ನಿಯಂತ್ರಣದಲ್ಲಿದೆ ಎಂದು ಮಾಹಿತಿ ನೀಡಿದರು.ಭಾನುವಾರ ರಾತ್ರಿ ಮೆರವಣಿಗೆಯ ಮೇಲೆ ನಡೆದ ದಾಳಿಯಲ್ಲಿ ಇಬ್ಬರು ಮಹಿಳೆಯರು ಗಾಯಗೊಂಡಿದ್ದಾರೆ. ಘಟನೆಯ ನಂತರ,
ಬೀದರ್: ಇಲ್ಲಿ ನಡೆದ ಜಿಲ್ಲಾಮಟ್ಟದ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಹುಮನಾಬಾದ್ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಡಾ. ಸಿದ್ದಲಿಂಗಪ್ಪ ಪಾಟೀಲ್ ಹಾಗೂ ಕಾಂಗ್ರೆಸ್ ವಿಧಾನ ಪರಿಷತ್ ಸದಸ್ಯ ಭೀಮರಾವ್ ಪಾಟೀಲ್ ಅವರು ಪರಸ್ಪರ ಕೈ ಕೈ ಮಿಲಾಯಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿಕೊಂಡ ಘಟನೆ ವರದಿಯಾಗಿದೆ. ಈ ಘಟನೆಯಿಂದ ಕೆಲಕಾಲ ಗೊದ್ದಲದ ವಾತಾವರಣ ನಿರ್ಮಾಣವಾಯಿತು, ಬಳಿಕ ಸಭೆಯನ್ನೇ ಮುಂದೂಡಲಾಯಿತು. ಹುಮನಾಬಾದ್ ಮತ ಕ್ಷೇತ್ರದ ಅರಣ್ಯ ಜಮೀನಿನ ಕುರಿತು ಸಭೆಯ ಚರ್ಚೆಯಲ್ಲಿ ಭಾಗವಹಿಸಿದ ಡಾ. ಸಿದ್ದಲಿಂಗಪ್ಪ ಪಾಟೀಲ
ಮೈಸೂರು: ಕಳೆದ ವಾರ ಮೈಸೂರು ಅರಮನೆ ಬಳಿ ಸಂಭವಿಸಿದ ಹೀಲಿಯಂ ಗ್ಯಾಸ್ ಸಿಲಿಂಡರ್ ಸ್ಫೋಟದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕೊನೆಗೂ ಪರಿಹಾರ ಘೋಷಿಸಿದ್ದಾರೆ.ವಿಶ್ವವಿಖ್ಯಾತ ರಮನೆಯ ಮುಂಭಾಗ ಡಿ.25ರಂದು ಹೀಲಿಯಂ ಗ್ಯಾಸ್ ಸ್ಫೋಟಗೊಂಡ ಪರಿಣಾಮ ಒಬ್ಬರು ಅಂದೇ ಮೃತಪಟ್ಟಿದ್ದರು. ಘಟನೆಯಲ್ಲಿ ಮೂವರು ಗಂಭೀರ ಗಾಯಗೊಂಡು ಆಸ್ಪತ್ರೆ ದಾಖಲಾಗಿದ್ದರು.ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಇಬ್ಬರು ಸಾವನ್ನಪ್ಪಿದ್ದರು. ಈ ಸ್ಫೋಟ ಪ್ರಕರಣವನ್ನು ಎನ್ಐಎ ತನಿಖೆ ನಡೆಸುತ್ತಿದೆ. ಈ ಹಿನ್ನೆಲೆ