ನವದೆಹಲಿ [ಭಾರತ]: ಕರ್ನಾಟಕ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಮಂಗಳವಾರ ನವದೆಹಲಿಗೆ ಆಗಮಿಸಿ ಕೇಂದ್ರ ಜಲಶಕ್ತಿ ಸಚಿವ ಸಿಆರ್ ಪಾಟೀಲ್ ಮತ್ತು ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವ ಭೂಪೇಂದ್ರ ಯಾದವ್ ಅವರನ್ನು ಭೇಟಿ ಮಾಡಿ ರಾಜ್ಯದಲ್ಲಿ ಅಪೂರ್ಣ ಕುಡಿಯುವ ನೀರಿನ ಯೋಜನೆಗಳ ಕುರಿತು ಚರ್ಚಿಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ನಮ್ಮಲ್ಲಿ ಎರಡು ಬಾಕಿ ಇರುವ ಯೋಜನೆಗಳು ಕಳಸಾ ಭಂಡೂರಿ ಮತ್ತು ಎತ್ತಿನಹೊಳೆ ಒಂದರಲ್ಲಿ ಶೇ.60ರಷ್ಟು ಕಾಮಗಾರಿ ಮುಗಿದಿದ್ದು, ಕೆಲ ತಾಂತ್ರಿಕ ಕಾರಣಗಳಿಂದ ಅರಣ್ಯ ಇಲಾಖೆ ತಡೆದು ಪರ್ಯಾಯ ಜಮೀನು ನೀಡಿದ್ದು, ಇನ್ನೊಂದು ಯೋಜನೆ ಕುರಿತು ಸಚಿವರ ಜತೆ ಚರ್ಚಿಸಿ ತೀರ್ಮಾನಕ್ಕೆ ಬಂದಿದ್ದೇವೆ ಎಂದರು.
ಕೊಪ್ಪಳ: ಇನ್ಸ್ಟಾಗ್ರಾಂ ಮೂಲಕ ಪರಿಚಯವಾಗಿ ಮದುವೆ ನೆಪದಲ್ಲಿ ಆಕೆಯ ಮನೆಯಲ್ಲಿಯೇ ಅತ್ಯಾಚಾರ ಎಸಗಿದ ರಮೇಶ ಎಂ ಎಂಬಾತನಿಗೆ ಇಲ್ಲಿನ ಹೆಚ್ಚುವರಿ ಜಿಲ್ಲಾ ಹಾಗೂ ಸಷೆನ್ಸ್ ನ್ಯಾಯಾಲಯವು 20 ವರ್ಷ ಜೈಲು ಹಾಗೂ ₹25ಸಾವಿರ ದಂಡ ವಿಧಿಸಿದೆ. ಬಾಲಕಿ ಮೇಲೆ ಅತ್ಯಾಚಾರ ಎಸಗಿದ ತುಮಕೂರು ಜಿಲ್ಲೆ ಬೀರನಕಲ್ ಗ್ರಾಮದ ರಮೇಶ ಎಂ. ಎಂಬಾತನಿಗೆ ನ್ಯಾಯಾಧೀಶರಾದ ಕುಮಾರ ಡಿ.ಕೆ. ಅವರು ಈ ಆದೇಶ ನೀಡಿದ್ದಾರೆ.ರಮೇಶ ಇನ್ಸ್ಟಾಗ್ರಾಮ್ ಮೂಲಕ ಬಾಲಕಿಯನ್ನು ಪರಿಚಯಿಸಿಕೊಂಡು ಮೇಲಿಂದ ಮೇಲೆ ಫೋನ್ನಲ್ಲಿ ಮಾತನಾಡಿ ಸಲುಗೆ
ಬೆಳಗಾವಿ: ಗ್ರಾಮ ಮಟ್ಟದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವ ದೃಷ್ಟಿಕೋನದಿಂದ ರಾಜ್ಯದಲ್ಲಿ ಮೊದಲ ಹಂತದಲ್ಲಿ 500 ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಆರಂಭಿಸಲಾಗುತ್ತಿದೆ. ಇದಕ್ಕೆ ₹2,500 ಕೋಟಿ ಅನುದಾನ ಅಗತ್ಯ. ಈ ಸಂಬಂಧ ಎಡಿಬಿ ಬ್ಯಾಂಕ್ ಜೊತೆಗೆ ಒಪ್ಪಂದ ಮಾಡಿಕೊಳ್ಳಲಾಗಿದೆ ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಹೇಳಿದರು.ನಗರದಲ್ಲಿ ಮಂಗಳವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎಲ್ಲ ಶಾಸಕರಿಗೂ ತಲಾ 2 ಅಥವಾ 3 ಶಾಲೆಗಳನ್ನು ನೀಡಲಾಗುವುದು’ ಎಂದರು.‘ಮೂರು ವರ್ಷಗಳಲ್ಲಿ 13,500 ಪ್ರಾಥಮಿಕ ಶಾಲೆ ಶಿಕ್ಷಕರ ನೇಮಕಾತಿ ಆಗಿದೆ. ಶೀಘ್ರದಲ್ಲೇ 20 ಸಾವಿರ ಶಿಕ್ಷಕರ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗುವುದು.
ಏರ್ಕ್ರಾಫ್ಟ್ ಆ್ಯಕ್ಸಿಡೆಂಟ್ ಇನ್ವೆಸ್ಟಿಗೇಶನ್ ಬ್ಯೂರೋ (AAIB) ಏರ್ ಇಂಡಿಯಾ ಫ್ಲೈಟ್ AI 171 ಅಪಘಾತದ ಬಗ್ಗೆ ತನ್ನ ಪ್ರಾಥಮಿಕ ವರದಿಯನ್ನು ನಾಗರಿಕ ವಿಮಾನಯಾನ ಸಚಿವಾಲಯ ಮತ್ತು ಇತರ ಸಂಬಂಧಿತ ಅಧಿಕಾರಿಗಳಿಗೆ ಸಲ್ಲಿಸಿದೆ. ದುರಂತ ಘಟನೆಯ ಕುರಿತು ನಡೆಯುತ್ತಿರುವ ತನಿಖೆಯ ಆರಂಭಿಕ ಸಂಶೋಧನೆಗಳನ್ನು ಆಧರಿಸಿ ವರದಿಯನ್ನು ಸಿದ್ಧಪಡಿಸಲಾಗಿದೆ.ಜೂನ್ 12 ರಂದು ಅಹಮದಾಬಾದ್ನಿಂದ ಲಂಡನ್ ಹೊರಟಿದ್ದ ಏರ್ಇಂಡಿಯಾ ವಿಮಾನ ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ
18 ವರ್ಷದ ಬಳಿಕ ಐಪಿಎಲ್ ಚಾಂಪಿಯನ್ ಪಟ್ಟವನ್ನು ಮುಡಿಗೇರಿಸಿಕೊಂಡ ಆರ್ಸಿಬಿ ಇದೀಗ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಹಿಂದೆಹಾಕಿ ಅತ್ಯಂತ ಮೌಲ್ಯಯುತ ಫ್ರಾಂಚೈಸಿ ಎಂಬ ಹೆಗ್ಗಳಿಕೆಗೂ ಪಾತ್ರವಾಗಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ರಾಯಲ್ ಚಾಲೆಂಜರ್ಸ್ ಬೆಂಗಳೂರು ಈ ಋತುವಿನ ಚೊಚ್ಚಲ ಪ್ರಶಸ್ತಿಯನ್ನು ಗೆದ್ದ ನಂತರ ಇಂಡಿಯನ್ ಪ್ರೀಮಿಯರ್ ಲೀಗ್ (IPL) ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಅನ್ನು ಹಿಂದಿಕ್ಕಿದೆ. IPLನ ವ್ಯಾಪಾರದ ಮೌಲ್ಯಮಾಪನವು $18.5 ಶತಕೋಟಿಗೆ ಏರಿತು, ಇದು ವಿಶ್ವದ ಅತ್ಯಂತ ಮೌಲ್ಯಯುತವಾದ ಕ್ರೀಡಾ
ಹುಬ್ಬಳ್ಳಿ: ಹುಬ್ಬಳ್ಳಿ–ಧಾರವಾಡ ಮಹಾನಗರದಲ್ಲಿ ಕರ್ತವ್ಯದಲ್ಲಿ ಬೊಜ್ಜು ಹೊಂದಿದ್ದ 65 ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ಬೊಜ್ಜು ಕರಗಿಸುವ ತರಬೇತಿ ನೀಡಲಾಗುತ್ತಿದೆ.ಈ ಸಂಬಂಧ ಪೊಲೀಸ್ ಕಮಿಷನರ್ ಎನ್ ಶಶಿಕುಮಾರ್ ಅವರು ಪ್ರತಿಕ್ರಿಯಿಸಿ, ಈಗಾಗಲೇ ತರಬೇತಿ ಪಡೆದ ಹಲವರು 4ರಿಂದ 11ಕೆಜಿಯವರೆಗೆ ತೂಕ ಇಳಿಸಿಕೊಂಡಿದ್ದಾರೆ. ನಗರದ ಗೋಕುಲ ರಸ್ತೆಯ ಹೊಸ ಸಿಎಆರ್ ಮೈದಾನದಲ್ಲಿ ಹಮ್ಮಿಕೊಂಡಿರುವ ಆರೋಗ್ಯ ಶಿಬಿರಕ್ಕೆ ಭೇಟಿ ನೀಡಿ ನಂತರ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.
ಗೋಣಿಕೊಪ್ಪಲು: ಇಲ್ಲಿಗೆ ಸಮೀಪದ ರುದ್ರಬೀಡು ಗ್ರಾಮದಲ್ಲಿ ಮಂಗಳವಾರ ಕಾಡಾನೆ ದಾಳಿಗೆ ಸಿಲುಕಿ ವ್ಯಕ್ತಿಯೊಬ್ಬರು ಮೃತಪಟ್ಟಿದ್ದು, ಅಜೇಶ್ (40) ಎಂಬುವವರು ಗಾಯಗೊಂಡಿದ್ದಾರೆ. ಮೃತ ವ್ಯಕ್ತಿಯ ಗುರುಮೃತಪಟ್ಟ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ.‘ಮೊದಲಿಗೆ ಸೈಕಲ್ನಲ್ಲಿ ತೆರಳುತ್ತಿದ್ದ ಅಜೇಶ್ ಮೇಲೆ ಆನೆ ಎರಗಿದೆ. ಗಾಯಗೊಂಡ ಅವರು ದೂರ ಓಡಿ ತಪ್ಪಿಸಿಕೊಂಡರು. ನಂತರ, ಸಮೀಪದಲ್ಲೇ ಗಡ್ಡಧಾರಿ ವ್ಯಕ್ತಿಯೊಬ್ಬರು ನಡೆಯುತ್ತ ಹೋಗುತ್ತಿದ್ದರು. ಇವರನ್ನು ನೆಲಕ್ಕೆ ಬೀಳಿಸಿದ ಕಾಡಾನೆ ದಾಳಿ ನಡೆಸಿತು. ಇದರಿಂದ ಅವರು ಸ್ಥಳದಲ್ಲೆ ಕೊನೆಯುಸಿರೆಳೆದಿದ್ದಾರೆ.
ಡೆವಿಲ್ ಸಿನಿಮಾದ ಶೂಟಿಂಗ್ಗಾಗಿ ನಟ ದರ್ಶನ್ ಅವರು ವಿದೇಶ ಪ್ರವಾಸಕ್ಕೆ ಅನುಮತಿ ಕೋರಿ ಅರ್ಜಿ ಸಲ್ಲಿಸದ್ದರು, ಇದೀಗ ಕೋರ್ಟ್ ದರ್ಶನ್ಗೆ ಅನುಮತಿ ನೀಡಿದೆ. ಇದರಿಂದ ಶೀಘ್ರದಲ್ಲೇ ಡೆವಿಲ್ ಶೂಟಿಂಗ್ಗಾಗಿ ದರ್ಶನ್ ವಿದೇಶ ಪ್ರವಾಸ ಮಾಡಲಿದ್ದಾರೆ. ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿ ಷರತ್ತು ಬದ್ಧ ಜಾಮೀನು ನೀಡಿತ್ತು. ಆ ಬಳಿಕ ದರ್ಶನ್ ಡೆವಿಲ್ ಶೂಟಿಂಗ್ಗೆ ಅನುಮತಿ ಕೋರಿದ್ದರು. ಇದೀಗ ಸಿನಿಮಾದ ಶೂಟಿಂಗ್ ಸಲುವಾಗಿ ದರ್ಶನ್ ಅವರು ವಿದೇಶಕ್ಕೆ ಅನುಮತಿ ಕೋರಿ ಅರ್ಜಿ ಸಲ್ಲಿಸಿದ್ದರು.
ಬೆಂಗಳೂರು: ಮಲೆ ಮಹದೇಶ್ವರ ಬೆಟ್ಟದ ವನ್ಯಜೀವಿಧಾಮದಲ್ಲಿ ಹುಲಿಗಳ ಸಂತತಿ ಹೆಚ್ಚುತ್ತಿರುವ ಹಿನ್ನೆಲೆ ಈ ಪ್ರದೇಶವನ್ನು ಹುಲಿ ಸಂರಕ್ಷಿತ ಪ್ರದೇಶವಾಗಿ ಘೋಷಿಸಲು ಸ್ಥಳೀಯರ ಅಭಿಪ್ರಾಯ ಸಂಗ್ರಹಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ ಸೂಚನೆ ನೀಡಿದ್ದಾರೆ.ವಿಕಾಸಸೌಧದ ತಮ್ಮ ಕಚೇರಿಯಲ್ಲಿಂದು ಅರಣ್ಯ ಪಡೆ ಮುಖ್ಯಸ್ಥರು, ಮುಖ್ಯ ವನ್ಯಜೀವಿ ಪರಿಪಾಲಕರು ಸೇರಿದಂತೆ ಇಲಾಖೆಯ ಉನ್ನತಾಧಿಕಾರಿಗಳೊಂದಿಗೆ ಅವರು ಸಭೆ ನಡೆಸಿದರು.
ಬೆಂಗಳೂರು: ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಕರ್ನಾಟಕದ ರೈತರ ಜೀವ ಹಿಂಡುತ್ತಿದೆ, ರೈತರ ಮಾರುಕಟ್ಟೆಯನ್ನು ಹಾಳುಗೆಡವುತ್ತಿದೆ. ತೊಗರಿ ಬೇಳೆಯ ಆಮದು ನೀತಿಯಿಂದಾಗಿ ರಾಜ್ಯದ ತೊಗರಿ ಬೆಳೆಗಾರರು ವಾರ್ಷಿಕವಾಗಿ 1,550 ಸಾವಿರ ಕೋಟಿ ಹಣವನ್ನು ಕಳೆದುಕೊಳ್ಳುತ್ತಿದ್ದಾರೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೇವಾಲ ವಾಗ್ದಾಳಿ ನಡೆಸಿದ್ದಾರೆ. ಇಂದು ಬೆಂಗಳೂರಿನಲ್ಲಿ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕರ್ನಾಟಕದ ಪ್ರಹ್ಲಾದ್ ಜೋಶಿ, ಸೋಮಣ್ಣ ಏನು ಮಾಡುತ್ತಿದ್ದಾರೆ? ಸ್ವಯಂ ಘೋಷಿತ ರೈತನ ಮಗನಾದ ಕುಮಾರಸ್ವಾಮಿ ಕರ್ನಾಟಕದ ರೈತರ ಕತ್ತು ಹಿಸುಕುತ್ತಿದ್ದರು ಏನೂ ಮಾತನಾಡದೇ ಏಕೆ ಸುಮ್ಮನಿದ್ದಾರೆ’ ಎಂದು ಪ್ರಶ್ನೆ ಮಾಡಿದ್ದಾರೆ.
ನವದೆಹಲಿ: ದೆಹಲಿ ವಿಮಾನ ನಿಲ್ದಾಣವು ವಿಶ್ವದ 9 ನೇ ಜನನಿಬಿಡ ವಿಮಾನ ನಿಲ್ದಾಣವಾಗಿದೆ, 2024 ರಲ್ಲಿ 7.7 ಕೋಟಿ ಪ್ರಯಾಣಿಕರನ್ನು ನಿಭಾಯಿಸುತ್ತದೆ ಎಂದು ಮಂಗಳವಾರ ಬಿಡುಗಡೆಯಾದ ವರದಿ ತಿಳಿಸಿದೆ.ಅಂತರರಾಷ್ಟ್ರೀಯ ವಿಮಾನ ನಿಲ್ದಾಣಗಳ ಮಂಡಳಿಯು ವಿಶ್ವದ 20 ಜನನಿಬಿಡ ವಿಮಾನ ನಿಲ್ದಾಣಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಅಮೆರಿಕದ ಅಟ್ಲಾಂಟಾ ವಿಮಾನ ನಿಲ್ದಾಣವು ಅಗ್ರಸ್ಥಾನದಲ್ಲಿದೆ. ಈ ವಿಮಾನ ನಿಲ್ದಾಣದಿಂದ 10.80 ಕೋಟಿಗೂ ಹೆಚ್ಚು ಪ್ರಯಾಣಿಕರು ಪ್ರಯಾಣಿಸಿದ್ದಾರೆ.ಎರಡನೇ ಸ್ಥಾನದಲ್ಲಿರುವ ದುಬೈ ವಿಮಾನ ನಿಲ್ದಾಣದಿಂದ 9.23 ಕೋಟಿಗೂ ಹೆಚ್ಚು ಪ್ರಯಾಣಿಕರು ಪ್ರಯಾಣಿಸಿದ್ದರೆ, ಇತ್ತ
ಬೆಂಗಳೂರು: ಕಾರ್ಮಿಕ ಕಾರ್ಡ್ ಇದ್ದವರಿಗೂ ಗೃಹಲಕ್ಷ್ಮಿ ಹಣ ಬಂದಿಲ್ಲ ಎಂದು ಮಾಧ್ಯಮಗಳು ಗಮನ ಸೆಳೆದಿದ್ದಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯಿಸಿದ್ದು ಹೀಗೆ. ನಗರದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಲಕ್ಷ್ಮೀ ಹೆಬ್ಬಾಳ್ಕರ್ ರಾಜ್ಯ ರಾಜಕೀಯದ ಬಗ್ಗೆ ಮಾತನಾಡಿದ್ದಾರೆ. ಸಿಎಂ, ಡಿಸಿಎಂ ದೆಹಲಿ ಭೇಟಿ ಸಾಮಾನ್ಯ. ಅದರಲ್ಲಿ ವಿಶೇಷವಾಗಿರುವುದು ಏನೂ ಇಲ್ಲ ಎಂದರು. ಬಳಿಕ ಮಾಧ್ಯಮಗಳು ಕಾರ್ಮಿಕ ಕಾರ್ಡ್ ಇದ್ದರೂ ಕೆಲವು ತಿಂಗಳಿನಿಂದ ಗೃಹಲಕ್ಷ್ಮಿ ಹಣ ಬರುತ್ತಿಲ್ಲ ಎಂದು ಸಚಿವರ ಗಮನ ಸೆಳೆದಿದ್ದಾರೆ. ಇದಕ್ಕೆ ಶಾಕ್ ಆದ ಅವರು ಹೌದಾ ಬರುತ್ತಿಲ್ವಾ?
ಕಾರವಾರ: ಕಳೆದ 70 ಗಂಟೆಗಳಲ್ಲಿ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಪಟ್ಟಣದಾದ್ಯಂತ ಬೀದಿ ನಾಯಿಗಳ ದಾಳಿಯಿಂದ 15ಕ್ಕೂ ಹೆಚ್ಚು ಜನರು ಗಾಯಗೊಂಡ ಘಟನೆ ನಡೆದಿದೆ. ಇದುವರೆಗೆ ಯಾವುದೇ ಸಾವುನೋವು ಸಂಭವಿಸಿಲ್ಲ ಎಂದು ಆರೋಗ್ಯ ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.ಸಂತ್ರಸ್ತರಲ್ಲಿ ಹೆಚ್ಚಿನವರು ಮಕ್ಕಳು ಮತ್ತು ವೃದ್ಧರಾಗಿದ್ದು, ವಸತಿ ಪ್ರದೇಶಗಳು ಅಥವಾ ಮಾರುಕಟ್ಟೆಗಳಲ್ಲಿ ನಡೆದು ಹೋಗುವಾಗ ನಾಯಿ ದಾಳಿ ನಡೆಸಿದೆ. ಜುಲೈ 6 ರಂದು ನಾಯಿ ದಾಳಿ ಪ್ರಾರಂಭವಾಗಿದ್ದು, ಅಂದಿನಿಂದ ದಾಳಿಗಳ ಸಂಖ್ಯೆ ನಿರಂತರವಾಗಿ ಹೆಚ್ಚುತ್ತಿದೆ. ಗಾಯಾಳುಗಳಿಗೆ
ಬೆಂಗಳೂರು: ಸಿಎಂ, ಡಿಸಿಎಂಗೆ ದೆಹಲಿಯಲ್ಲಿ ಏನೋ ಕೆಲಸ ಇರುತ್ತೆ, ಅದಕ್ಕೆ ಹೋಗಿದ್ದಾರೆ. ಅದರಲ್ಲಿ ವಿಶೇಷ ಬಣ್ಣ ಬೇಡ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಇಂದು ಡಿಸಿಎಂ ಡಿಕೆ ಶಿವಕುಮಾರ್, ನಾಳೆ ಸಿಎಂ ಸಿದ್ದರಾಮಯ್ಯ ದೆಹಲಿಗೆ ಭೇಟಿ ನೀಡಲಿದ್ದಾರೆ. ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರ ಚರ್ಚೆಯಲ್ಲಿರುವಾಗಲೇ ಸಿಎಂ, ಡಿಸಿಎಂ ದೆಹಲಿ ಭೇಟಿ ಚರ್ಚೆಗೆ ಕಾರಣವಾಗಿದೆ. ಇದರ ಬಗ್ಗೆ ಇಂದು ಮಾಧ್ಯಮಗಳಿಗೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ನೀಡಿದ್ದಾರೆ. ‘ರಾಜ್ಯದ ವಿಚಾರವಾಗಿ ಕೇಂದ್ರದ ಮಂತ್ರಿಗಳನ್ನು ಭೇಟಿ ಮಾಡುವುದಕ್ಕೆ, ಹೈಕಮಾಂಡ್ ಭೇಟಿ ಮಾಡಿ ಮಾತನಾಡುವುದಕ್ಕೆ ಏನೇನೋ ಕೆಲಸಗಳಿರುತ್ತವೆ.
ಭುವನೇಶ್ವರ: ಬೌಧ್ ಜಿಲ್ಲೆಯ ರೈಲ್ವೇ ಹಳಿಗಳ ಮೇಲೆ ಅಪ್ರಾಪ್ತ ಬಾಲಕನೊಬ್ಬ ಅಪಾಯಕಾರಿ ಸಾಹಸ ಪ್ರದರ್ಶಿಸಿದ ವೈರಲ್ ವೀಡಿಯೋ ಬಂದಿದೆ. ರೈಲ್ವೇ ರಕ್ಷಣಾ ಪಡೆ (ಆರ್ಪಿಎಫ್) ಇಬ್ಬರು ಬಾಲಕರ ವಿರುದ್ಧ ಪ್ರಕರಣ ದಾಖಲಿಸಿ, ಕೃತ್ಯವನ್ನು ಚಿತ್ರೀಕರಿಸಿದ್ದಾರೆ. 12 ವರ್ಷದ ಯುವಕನೊಬ್ಬ ಜೂನ್ ರೈಲು ನಿಲ್ದಾಣದ ಸಮೀಪ ರೈಲು ನಿಲ್ದಾಣದ ಸಮೀಪ ಹಳಿಗಳ ನಡುವೆ ಮಲಗಿರುವುದನ್ನು ತೋರಿಸಿದೆ. ಅವರ ಸ್ನೇಹಿತ 15 ವರ್ಷದ ವಯಸ್ಸಿನವರು ಈ ಘಟನೆಯನ್ನು ಚಿತ್ರೀಕರನ ಮಾಡಿದ್ದಾರೆ.ಮತ್ತೊಬ್ಬ ಅಪ್ರಾಪ್ತ ಬಾಲಕ ಹಳಿಗಳ ಬಳಿ ನಿಂತಿರುವುದು ವಿಡಿಯೋದಲ್ಲಿ ಕಂಡುಬಂದಿದೆ. ಘಟನೆಯಲ್ಲಿ ಯಾರಿಗೂ
ಬೆಂಗಳೂರು: ರೈತರ ಭೂಸ್ವಾದೀನ ವಿರುದ್ಧ ಹೋರಾಟಕ್ಕಿಳಿದಿರುವ ಬಹುಭಾಷಾ ನಟ ಪ್ರಕಾಶ್ ರೈ ವಿರುದ್ಧ ಸಚಿವ ಎಂಬಿ ಪಾಟೀಲ್ ಗುಡುಗಿದ್ದಾರೆ. ಬಹುಭಾಷಾ ನಟನಲ್ವಾ? ಹಾಗಿದ್ದರೆ ಬೇರೆ ರಾಜ್ಯದಲ್ಲಿ ನಡೆಯುತ್ತಿರುವ ಭೂ ಸ್ವಾದೀನ ಕಾಣಲ್ವಾ ಎಂದಿದ್ದಾರೆ. ದೇವಹಳ್ಳಿ ಕೃಷಿ ಭೂಮಿ ಸ್ವಾದೀನಕ್ಕೆ ನಟ ಪ್ರಕಾಶ್ ರೈ ವಿರೋಧ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ರೈತರ ಜೊತೆ ಹೋರಾಟ ಮಾಡುತ್ತಿದ್ದಾರೆ. ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲೂ ಸಾಕಷ್ಟು ಕಾಮೆಂಟ್ ಮಾಡಿ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ಪಕ್ಕದ ಆಂಧ್ರದಲ್ಲಿ 10 ಸಾವಿರ ಎಕರೆ ಭೂಸ್ವಾದೀನ ನಡೆದಿದೆ.
ಬೆಂಗಳೂರು: ಐಶ್ವರ್ಯಾ ಗೌಡ ಚಿನ್ನಾಭರಣ ವಂಚನೆ ಪ್ರಕರಣ ಸಂಬಂಧ ಕಾಂಗ್ರೆಸ್ನ ಮಾಜಿ ಸಂಸದ ಡಿಕೆ ಶಿವಕುಮಾರ್ ಅವರು ಇಂದು ಇಡಿ ಅಧಿಕಾರಿಗಳ ಮುಂದೆ ಹಾಜರಾದರು. ಜೂನ್ 17ರಂದು ಡಿ.ಕೆ.ಸುರೇಶ್ ಅವರ ಮನೆಗೆ ತೆರಳಿದ್ದ ಇ.ಡಿ ಅಧಿಕಾರಿಗಳು, ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಿದ್ದರು. ನಗರದ ಶಾಂತಿನಗರದಲ್ಲಿರುವ ಇ.ಡಿ ಕಚೇರಿಗೆ ಮಂಗಳವಾರ ತೆರಳಿದ್ದ ಸುರೇಶ್ ಅವರು ವಿಚಾರಣೆಗೆ ಹಾಜರಾಗಿದ್ದರು.
ಬೆಂಗಳೂರು: ರಾಜ್ಯದಲ್ಲಿ ದಾಖಲಾಗುತ್ತಿರುವ ಸಾಲು ಸಾಲು ಹೃದಯಾಘಾತ ಪ್ರಕರಣ ಸಂಬಂಧ ರಾಜ್ಯದ ಕಾಂಗ್ರೆಸ್ ಈಗಾಗಲೇ ಹಲವು ಕ್ರಮಗಳನ್ನು ಜಾರಿ ಮಾಡಿದೆ. ಇದೀಗ ಹೃದಯಾಘಾತಕ್ಕೆ ಬಲಿಯಾದವರ ಮರಣೋತ್ತರ ಪರೀಕ್ಷೆ ಕಡ್ಡಾಯಗೊಳಿಸಲಾಗಿದೆ. ಹೃದಯಾಘಾತವನ್ನು ಅಧಿಸೂಚಿತ ಕಾಯಿಲೆ ಎಂದು ಘೋಷಿಸಲಾಗಿದೆ.ಹೃದಯಾಘಾತದ ಹಠಾತ್ ಸಾವಿಗೆ ಲಸಿಕೆ ಕಾರಣವಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಮುಂದಿನ ದಿನಗಳಲ್ಲಿ ಶಾಲೆಗಳ ಪಠ್ಯದಲ್ಲೂ ಹೃದಯಾಘಾತ ಸಂಬಂಧ ಪಠ್ಯವನ್ನು ಅಳವಡಿಸಲಾಗುವುದು. ಮಕ್ಕಳಿಗೆ ಶಾಲೆಗಳಲ್ಲಿ ಹೃದಯ ಪರೀಕ್ಷೆ ನಡೆಸಲಾಗುವುದು. ಕೋವಿಡ್ ಬಳಿಕ ಬದಲಾದ ಜೀವನ ಶೈಲಿಯಿಂದ ಹೃದಯಾಘಾತ ಹೆಚ್ಚಳವಾಗಿದೆ ಎಂದು ತಿಳಿಸಿದ್ದಾರೆ.
ಬೆಂಗಳೂರು: ರಾಜ್ಯದಲ್ಲಿ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಜನೌಷಧ ಕೇಂದ್ರಗಳನ್ನು ಮುಚ್ಚಲು ತೀರ್ಮಾನಿಸಿದ್ದ ರಾಜ್ಯ ಸರ್ಕಾರದ ನಿರ್ಧಾರಕ್ಕೆ ತೀವ್ರ ಹಿನ್ನಡೆಯಾಗಿದೆ. ಜನೌಷಧ ಕೇಂದ್ರಗಳನ್ನು ಮುಚ್ಚದಂತೆ ಹೈಕೋರ್ಟ್ ಸರ್ಕಾರಕ್ಕೆ ಮಧ್ಯಂತರ ಆದೇಶ ನೀಡಿದೆ. ಜನೌಷಧ ಕೇಂದ್ರಗಳನ್ನು ಮುಚ್ಚುವುದಕ್ಕೆ ಜನರಿಂದ ತೀವ್ರ ವಿರೋಧ ವ್ಯಕ್ತವಾಗಿತ್ತು. ರಿಯಾಯಿತಿ ದರದಲ್ಲಿ ಕೇಂದ್ರ ಸರ್ಕಾರ ಜನರಿಗೆ ಔಷಧ ಸಿಗುವಂತೆ ಮಾಡಲು ಆರಂಭಿಸಿದ ಜನೌಷಧಿ ಕೇಂದ್ರಗಳನ್ನು ಮುಚ್ಚುವುದಕ್ಕೆ ಸೋಷಿಯಲ್ ಮೀಡಿಯಾದಲ್ಲಿ ಸಾಕಷ್ಟು ಟೀಕೆ ವ್ಯಕ್ತವಾಗಿತ್ತು. ಈ ಕೇಂದ್ರಗಳಲ್ಲಿ ಜನರಿಗೆ ಶೇ.50 ರಿಂದ ಶೇ.90 ರವರೆಗೆ ರಿಯಾಯಿತಿ ದರದಲ್ಲಿ ಔಷಧ ಸಿಗುತ್ತದೆ.
ಬೆಂಗಳೂರು: ಸಿಎಂ ಸಿದ್ದರಾಮಯ್ಯಗೆ ತಲೆಸುತ್ತು ಸಮಸ್ಯೆ ಕಾಣಿಸಿಕೊಂಡಿದ್ದು ಇಂದು ಸಂಪೂರ್ಣ ವಿಶ್ರಾಂತಿಯಲ್ಲಿದ್ದಾರೆ. ನಾಳೆ ಮತ್ತೆ ಪೂರ್ವ ನಿಗದಿತ ಕಾರ್ಯಕ್ರಮ ನಿಮಿತ್ತ ದೆಹಲಿಗೆ ತೆರಳಲಿದ್ದಾರೆ. ನಿನ್ನೆ ಸಿಎಂ ಸಿದ್ದರಾಮಯ್ಯ ತಮ್ಮ ಪುತ್ರ ಯತೀಂದ್ರ ಮತ್ತು ಸಚಿವ ಜಮೀರ್ ಅಹ್ಮದ್ ಜೊತೆಗೆ ನಗರದ ಅಪೋಲೋ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ತಪಾಸಣೆ ನಡೆಸಿದ್ದರು. ತಲೆಸುತ್ತು ಕಾಣಿಸಿಕೊಂಡಿದ್ದರಿಂದ ಆಸ್ಪತ್ರೆಗೆ ಭೇಟಿ ನೀಡಿದ್ದರು ಎನ್ನಲಾಗಿದೆ. ನಿನ್ನೆಯೇ ಅವರಿಗೆ ಎಂಆರ್ ಐ ಸ್ಕ್ಯಾನಿಂಗ್ ಮಾಡಲಾಗಿದ್ದು ಯಾವುದೇ ಸಮಸ್ಯೆ ಇಲ್ಲ ಎಂದು ವೈದ್ಯರು ತಿಳಿಸಿದ್ದಾರೆ. ಹಾಗಿದ್ದರೂ ಇಂದು ಯಾವುದೇ ಪೂರ್ವ ನಿಗದಿತ ಕಾರ್ಯಕ್ರಮವಿಲ್ಲದೇ ಇರುವುದರಿಂದ ಒಂದು ದಿನ ಸಂಪೂರ್ಣ ವಿಶ್ರಾಂತಿ ಪಡೆಯುತ್ತಿದ್ದಾರೆ.
ಬೆಂಗಳೂರು: ಇನ್ನೇನು ಬಿಗ್ ಬಾಸ್ ಕನ್ನಡ ಸೀಸನ್ ಸದ್ಯದಲ್ಲೇ ಆರಂಭವಾಗಲಿದೆ. ಈ ಬಾರಿ ದೊಡ್ಮನೆಯೊಳಗೆ ಹೋಗಲಿರುವ ಸ್ಪರ್ಧಿಗಳು ಯಾರಿರಬಹುದು ಎಂಬ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಚರ್ಚೆ ಶುರುವಾಗಿದೆ. ಪ್ರತೀ ಬಾರಿಯೂ ಬಿಗ್ ಬಾಸ್ ಆರಂಭಕ್ಕೂ ಮುನ್ನವೇ ಸಾಕಷ್ಟು ಹೆಸರುಗಳು ಚರ್ಚೆಗೆ ಬರುತ್ತವೆ. ಈ ಬಾರಿಯೂ ಸಾಕಷ್ಟು ಹೆಸರುಗಳು ಕೇಳಿಬರುತ್ತಿವೆ. ಮೊನ್ನೆಯಷ್ಟೇ ಕಲರ್ಸ್ ವಾಹಿನಿ ಕಿಚ್ಚ ಸುದೀಪ್ ಜೊತೆಗೆ ಸುದ್ದಿಗೋಷ್ಠಿ ನಡೆಸಿತ್ತು. ಸದ್ಯದಲ್ಲೇ ಸೀಸನ್ 12 ಆರಂಭವಾಗಲಿರುವುದಾಗಿ ಹೇಳಿತ್ತು.ಕಿಚ್ಚ ಸುದೀಪ್ ಅವರೇ ಈ ಬಾರಿಯೂ ಶೋ ನಡೆಸಿಕೊಡುವುದು ಈ ಮೂಲಕ ಕನ್ ಫರ್ಮ್ ಆಗಿತ್ತು.
ಕದ್ದಲೂರು: ತಮಿಳುನಾಡಿನ ಕಡಲೂರಿನಿಂದ ದಕ್ಷಿಣಕ್ಕೆ 10 ಕಿಲೋಮೀಟರ್ ದೂರದಲ್ಲಿರುವ ಸೆಮ್ಮಂಕುಪ್ಪಂನಲ್ಲಿ ಮಾನವಸಹಿತ ಲೆವೆಲ್ ಕ್ರಾಸಿಂಗ್ ದಾಟಲು ಯತ್ನಿಸುತ್ತಿದ್ದ ಶಾಲಾ ವ್ಯಾನ್ಗೆ ಪ್ಯಾಸೆಂಜರ್ ರೈಲು ಡಿಕ್ಕಿ ಹೊಡೆದಿದೆ.ಈ ದುರ್ಘಟನೆಯಲ್ಲಿ ಇಬ್ಬರು ಮಕ್ಕಳು ಮತ್ತು ಒಬ್ಬರು ದಾರಿಹೋಕರು ಮೃತಪಟ್ಟಿದ್ದಾರೆ. ಮಂಗಳವಾರ ಬೆಳಗ್ಗೆ 7:45 ರ ಸುಮಾರಿಗೆ ಈ ಘಟನೆ ನಡೆದಿದೆ. ಮೃತ ಇಬ್ಬರು ಮಕ್ಕಳನ್ನು ತೊಂಡಮನಾಥಂನ ನಿವಾಸ್ (12ವ) ಮತ್ತು ಸುಬ್ರಮಣಿಯಪುರಂನ ಡಿ. ಚಾರುಮತಿ (16ವ) ಎಂದು ಗುರುತಿಸಲಾಗಿದೆ.ಸುಮಾರು 10 ಮಂದಿ ಗಂಭೀರ ಗಾಯಗೊಂಡಿದ್ದು, ಅವರನ್ನು ಕಡಲೂರು ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದಲ್ಲಿ ಶಾಲಾ ವ್ಯಾನ್ ತೀವ್ರವಾಗಿ ನಜ್ಜುಗುಜ್ಜಾಗಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ
ಬೆಂಗಳೂರು: ಚಿನ್ನಸ್ವಾಮಿ ಮೈದಾನದ ಬಳಿ ಆರ್ ಸಿಬಿ ಸಂಭ್ರಮಾಚರಣೆ ವೇಳೆ ನಡೆದ ಕಾಲ್ತುಳಿತಕ್ಕೆ ನಿಜ ಕಾರಣವೇನು ಬಯಲಾಗಿದೆ. ಎಲ್ಲದಕ್ಕೂ ಮೂಲ ಕಾರಣ ಕೊಹ್ಲಿಯ ಈ ಒಂದು ನಿರ್ಧಾರ ಎನ್ನಲಾಗಿದೆ. ಆರ್ ಸಿಬಿ ಜೂನ್ 3 ರಂದು ಕಪ್ ಗೆದ್ದಿತ್ತು. ಅದರ ಮರುದಿನವೇ ತರಾತುರಿಯಲ್ಲಿ ಚಿನ್ನಸ್ವಾಮಿ ಮೈದಾನದಲ್ಲಿ ಸಂಭ್ರಾಮಚರಣೆಗೆ ಆರ್ ಸಿಬಿ ತೀರ್ಮಾನಿಸಿತ್ತು. ಇಷ್ಟೊಂದು ತರಾತುರಿಯಲ್ಲಿ ಸಂಭ್ರಮಾಚರಣೆ ಮಾಡಿದ್ದೇಕೆ ಎಂದು ಹಲವರ ಪ್ರಶ್ನೆಯಾಗಿತ್ತು. ಇದಕ್ಕೆ ವಿರಾಟ್ ಕೊಹ್ಲಿಯ ಲಂಡನ್ ಯಾತ್ರೆಯೇ ಕಾರಣ ಎನ್ನಲಾಗಿದೆ. ಚಿನ್ನಸ್ವಾಮಿ ಮೈದಾನದ ಬಳಿ ಸಂಭವಿಸಿದ ಕಾಲ್ತುಳಿತದಲ್ಲಿ 11 ಮಂದಿ ಸಾವನ್ನಪ್ಪಿದ್ದರು.
ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವೇಗದ ಬೌಲರ್ ಯಶ್ ದಯಾಳ್ ವಿರುದ್ಧ ಗಂಭೀರ ಆರೋಪ ಕೇಳಿಬಂದಿದೆ. ಈ ಆರೋಪವು ಅವರ ವೃತ್ತಿಭವಿಷ್ಯಕ್ಕೆ ಅಪಾಯ ತಂದೊಡ್ಡುವ ಸಾಧ್ಯತೆಯಿದೆ. ಎಡಗೈ ವೇಗಿ ಯಶ್ ದಯಾಳ್ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪ ಕೇಳಿಬಂದಿದೆ. ಈ ಸಂಬಂಧ ಉತ್ತರ ಪ್ರದೇಶದ ಗಾಝಿಯಾಬಾದ್ ಠಾಣೆಯಲ್ಲಿ ದಯಾಳ್ ವಿರುದ್ಧ ಪ್ರಕರಣ ದಾಖಲಾಗಿದೆ. ಇತ್ತ ಎಫ್ಐಆರ್ ದಾಖಲಾಗಿರುವ ಕಾರಣ ಯಶ್ ದಯಾಳ್ ಅವರನ್ನು ಬಂಧಿಸುವ ಸಾಧ್ಯತೆಯಿದೆ.ಮದುವೆಯ ಆಮಿಷವೊಡ್ಡಿ ಯಶ್ ದಯಾಳ್ ಅವರು ನನ್ನನ್ನು ಲೈಂಗಿಕವಾಗಿ ಬಳಸಿಕೊಂಡಿದ್ದಾರೆ. ಅಲ್ಲದೆ ಮಾನಸಿಕ ಮತ್ತು ದೈಹಿಕ ಕಿರುಕುಳ ನೀಡಿದ್ದಾರೆ ಎಂದು ಇತ್ತೀಚೆಗಷ್ಟೇ ಯುವತಿಯೊಬ್ಬಳು ಸೋಷಿಯಲ್ ಮೀಡಿಯಾದಲ್ಲಿ ಆರೋಪಿಸಿದ್ದರು
ಡಾಲಸ್: ಅಮೆರಿಕಾದ ಡಾಲಸ್ ನಲ್ಲಿ ಸಂಭವಿಸಿದ ಕಾರು ಅಪಘಾತದಲ್ಲಿ ಹೈದರಾಬಾದ್ ಮೂಲದ ತಂದೆ-ತಾಯಿ ಮಕ್ಕಳು ಸೇರಿದಂತೆ ನಾಲ್ವರು ಬಲಿಯಾಗಿದ್ದಾರೆ. ಅಟ್ಲಾಂಟಾದಿಂದ ಡಾಲಸ್ ಕಡೆಗೆ ಕಾರಿನಲ್ಲಿ ಬರುತ್ತಿದ್ದಾಗ ಗ್ರೀನ್ ಕೌಂಟಿ ಬಳಿಕ ಮಿನಿ ಟ್ರಕ್ ಒಂದು ಇವರ ಕಾರಿಗೆ ಢಿಕ್ಕಿ ಹೊಡೆದಿದೆ. ಪರಿಣಾಮ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಈ ವೇಳೆ ಗಂಡ-ಹೆಂಡತಿ ಮತ್ತು ಅವರ ಓರ್ವ ಪುತ್ರ, ಪುತ್ರಿ ಸಾವನ್ನಪ್ಪಿದ್ದಾರೆ. ಮೃತರು ಹೈದರಾಬಾದ್ ಮೂಲದವರಾಗಿದ್ದು ಅಮೆರಿಕಾದಲ್ಲಿ ನೆಲೆಸಿದ್ದಾರೆ. ಅಟ್ಲಾಂಟಾದಲ್ಲಿರುವ ತಮ್ಮ ಸಂಬಂಧಿಕರ ಮನೆಗೆ ತೆರಳಿದ್ದ ಕುಟುಂಬ ಡಾಲಸ್ ನಲ್ಲಿರುವ ತಮ್ಮ ಮನೆಗೆ ಮರಳುತ್ತಿದ್ದಾಗ ದುರ್ಘಟನೆ ಸಂಭವಿಸಿದೆ.
ಬೆಂಗಳೂರು: ತಾನು ಅನ್ನರಾಮಯ್ಯ ಎಂದು ಕೊಚ್ಚಿಕೊಳ್ಳುವ ಸಿಎಂ ಸಿದ್ದರಾಮಯ್ಯ ಅನ್ನ ಭಾಗ್ಯ ಯೋಜನೆಗೆ ಅಕ್ಕಿ ತಲುಪಿಸುವ ಲಾರಿ ಮಾಲಿಕರಿಗೆ ಬಾಕಿ ಹಣ ಕೊಟ್ಟಿಲ್ಲ ಯಾಕೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಪ್ರಶ್ನೆ ಮಾಡಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿ ಟೀಕಿಸಿರುವ ಅವರು, ‘ಸರ್ಕಾರದ ಖಜಾನೆ ಬರಿದಾಗಿಲ್ಲ ಎಂಬ ಸ್ಪಷ್ಟನೆಯ ನಿಮ್ಮ ಹೇಳಿಕೆಗಳು ಸುಳ್ಳು ಹಾಗೂ ಭಂಡತನದ ಪರಮಾವಧಿ ಎನ್ನುವುದನ್ನು ಅನ್ನಭಾಗ್ಯ ಯೋಜನೆಯ ಸಾರಥಿಗಳಾಗಿ ಕೆಲಸ ಮಾಡುತ್ತಿದ್ದ ಲಾರಿ ಮಾಲೀಕರಿಗೆ ತಿಂಗಳುಗಟ್ಟಲೆ ಬಾಡಿಗೆ ಪಾವತಿಸದೇ (4500 ಲಾರಿಗಳು)ಅವರ ಬದುಕಿನ ಭಾಗ್ಯಕ್ಕೆ ಬರೆ ಎಳೆದಿದ್ದೀರಿ.
ಬೆಂಗಳೂರು: ಬಿಜೆಪಿ ಹೈಕಮಾಂಡ್ ಈಗಾಗಲೇ ಕೆಲವು ರಾಜ್ಯಗಳಿಗೆ ರಾಜ್ಯಾಧ್ಯಕ್ಷರನ್ನು ನೇಮಕ ಮಾಡಿದೆ. ಆದರೆ ಕರ್ನಾಟಕದ ರಾಜ್ಯಾಧ್ಯಕ್ಷ ಬಗ್ಗೆ ಇನ್ನೂ ತೀರ್ಮಾನ ಮಾಡಿಲ್ಲ. ಕರ್ನಾಟಕಕ್ಕೆ ಹೊಸ ರಾಜ್ಯಾಧ್ಯಕ್ಷರ ನೇಮಕ ಯಾವಾಗ ಎಂಬ ಪ್ರಶ್ನೆಗಳಿಗೆ ಬಿಜೆಪಿ ಹಾಲಿ ಅಧ್ಯಕ್ಷ ಬಿವೈ ವಿಜಯೇಂದ್ರ ಉತ್ತರಿಸಿದ್ದಾರೆ. ರಾಜ್ಯದಲ್ಲೂ ಬಿಜೆಪಿ ಅಧ್ಯಕ್ಷರ ಬದಲಾವಣೆಯಾಗಲಿದೆ ಎಂಬ ಸುದ್ದಿಗಳಿತ್ತು. ಆದರೆ ಈ ನಡುವೆ ವಿಜಯೇಂದ್ರ ನಮ್ಮಲ್ಲಿ ಅಧ್ಯಕ್ಷರ ಕುರ್ಚಿ ಖಾಲಿಯಿಲ್ಲ ಎಂದು ತಮ್ಮ ವಿರೋಧಿ ಬಣಕ್ಕೆ ಸ್ಪಷ್ಟ ಸಂದೇಶ ರವಾನಿಸಿದ್ದರು. ಹಾಗಿದ್ದರೂ ವಿಜಯೇಂದ್ರ ಅವಧಿ ಮುಕ್ತಾಯವಾಗಿದ್ದು ಹೈಕಮಾಂಡ್ ಮುಂದಿನ ತೀರ್ಮಾನದ ಬಗ್ಗೆ ಎಲ್ಲರ ದೃಷ್ಟಿಯಿದೆ.
ಲಾರ್ಡ್ಸ್: ಭಾರತ ಮತ್ತು ಇಂಗ್ಲೆಂಡ್ ನಡುವೆ ನಡೆಯುತ್ತಿರುವ ಮೊದಲ ಎರಡು ಟೆಸ್ಟ್ ಪಂದ್ಯಗಳಲ್ಲಿ ಬೇಜ್ ಬಾಲ್ ಶೈಲಿಯ (ಆಕ್ರಮಣಕಾರೀ ಬ್ಯಾಟಿಂಗ್) ಆಟವಾಡಿ ಕೈ ಸುಟ್ಟುಕೊಂಡಿರುವ ಇಂಗ್ಲೆಂಡ್ ಈಗ ಹಳೆಯ ಶೈಲಿಗೆ ಮರಳಲು ಚಿಂತನೆ ನಡೆಸಿದೆ. ಇಂಗ್ಲೆಂಡ್ ಹಲವು ಸಮಯದಿಂದ ಬೇಜ್ ಬಾಲ್ ಶೈಲಿಯ ಆಟವಾಡಿ ಸಕ್ಸಸ್ ಕಂಡಿತ್ತು. ಆದರೆ ಭಾರತದ ವಿರುದ್ಧ ಇಂಗ್ಲೆಂಡ್ ಗೆ ಬೇಜ್ ಬಾಲ್ ಶೈಲಿಯಲ್ಲಿ ಹೇಳಿಕೊಳ್ಳುವಂತಹ ಯಶಸ್ಸು ಸಿಕ್ಕಿಲ್ಲ. ಈ ಹಿಂದೆ ಭಾರತದಲ್ಲೂ ಈ ಶೈಲಿಯ ಆಟದಿಂದ ಸೋಲು ಕಾಣುವಂತಾಗಿತ್ತು. ಹೀಗಾಗಿ ಈಗ ಬೇಜ್ ಬಾಲ್ ಶೈಲಿಯ ಆಟ ಕೈ ಬಿಟ್ಟು ಹಳೆಯ ಶೈಲಿಗೆ ಮರಳಲು ಚಿಂತನೆ ನಡೆಸಿದೆ.
ಬೆಂಗಳೂರು: ಕಳೆದ ಕೆಲವು ದಿನಗಳಿಂದ ಅಡಿಕೆ ಬೆಲೆ ಹೆಚ್ಚಳವಾಗಲಿದೆ ಎಂಬ ನಿರೀಕ್ಷೆಯಲ್ಲಿದ್ದ ಬೆಳೆಗಾರರಿಗೆ ನಿರಾಸೆಯಾಗಿದೆ. ಕಾಳು ಮೆಣಸು, ಕೊಬ್ಬರಿ ಬೆಲೆ ಕೂಡಾ ಯಥಾಸ್ಥಿತಿಯಲ್ಲಿದೆ. ಇಂದು ಅಡಿಕೆ ಮತ್ತು ಕಾಳು ಮೆಣಸು, ಕೊಬ್ಬರಿ ದರ ಹೇಗಿದೆ ಇಲ್ಲಿದೆ ವಿವರ. ವಾರದ ಆರಂಭದಲ್ಲೇ ಇಳಿಕೆಯಾಗಿ ರೈತರಿಗೆ ನಿರಾಸೆಯಾಗಿದೆ. ಆದರೆ ಈಗ ಕೆಲವು ದಿನಗಳಿಂದ ಅಡಿಕೆ ಬೆಲೆಯಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ. ಹೊಸ ಅಡಿಕೆ ಬೆಲೆ ಮೊನ್ನೆಯಿಂದ 475 ರೂ.ಗಳಷ್ಟಿದೆ. ಇಂದೂ ಅದೇ ಬೆಲೆ ಮುಂದುವರಿದಿದೆ. ಹಳೆ ಅಡಿಕೆ ಬೆಲೆ ಹಲವು ದಿನಗಳಿಂಧ ಯಥಾ ಸ್ಥಿತಿಯಲ್ಲಿದೆ.
ಬೆಂಗಳೂರು: ಚಿನ್ನ ಖರೀದಿದಾರರಿಗೆ ಇಂದು ಸ್ವಲ್ಪ ಸಿಹಿ ಮತ್ತು ಸ್ವಲ್ಪ ಕಹಿ ಸುದ್ದಿ. ಪರಿಶುದ್ಧ ಚಿನ್ನದ ದರ ಇಳಿಕೆಯಾಗಿದ್ದರೆ ಇತರೆ ಚಿನ್ನದ ಬೆಲೆ ಏರಿಕೆಯಾಗಿದೆ. ಇಂದು ಪರಿಶುದ್ಧ ಚಿನ್ನದ ದರ ಮತ್ತು ಇತರೆ ಚಿನ್ನದ ದರ ವಿವರ ಇಲ್ಲಿದೆ ನೋಡಿ. ಚಿನ್ನದ ದರ ಏರಿಕೆಕಳೆದ ವಾರ ಚಿನ್ನದ ದರ ಭಾರೀ ಏರಿಕೆ ಕಂಡಿತ್ತು. ಬಳಿಕ ಇಳಿಕೆಯೂ ಆಗುತ್ತಿತ್ತು. ಆದರೆ ಈ ವಾರ ಒಮ್ಮೆ ಏರಿಕೆಯಾದರೆ ಮತ್ತೆ ಇಳಿಕೆಯಾಗುತ್ತಿದೆ. ಏರಿಕೆ-ಇಳಿಕೆ ನಡುವಿನ ಕಣ್ಣಾಮುಚ್ಚಾಲೆ ಇಂದೂ ಮುಂದುವರಿದಿದೆ. ಇಂದು ಮತ್ತೆ ಪರಿಶುದ್ಧ ಚಿನ್ನದ ದರ ಇಳಿಕೆಯಾಗಿದೆ. ಪರಿಶುದ್ಧ ಚಿನ್ನದ ದರ ಮೊನ್ನೆ 1,00, 095.00 ರೂ.ಗಳಷ್ಟಿತ್ತು.
ಲಂಡನ್: ಭಾರತೀಯ ಸಿಬ್ಬಂದಿಗಳಿಗೆ ಇಂಗ್ಲಿಷ್ ಬರಲ್ಲ ಎಂದು ಸೋಷಿಯಲ್ ಮೀಡಿಯಾದಲ್ಲಿ ಹೀಯಾಳಿಸಿದ ಬ್ರಿಟಿಷ್ ಮಹಿಳೆಯನ್ನು ನೆಟ್ಟಿಗರು ಜಾಡಿಸಿದ್ದಾರೆ. ಲಕ್ಕಿ ವೈಟ್ ಎಂಬ ಮಹಿಳೆ ತನ್ನ ಸೋಷಿಯಲ್ ಮೀಡಿಯಾ ಎಕ್ಸ್ ಪುಟದಲ್ಲಿ ಪೋಸ್ಟ್ ಒಂದನ್ನು ಹಾಕಿದ್ದಾರೆ. ಇದರಲ್ಲಿ ಹೀಥ್ರೋ ವಿಮಾನ ನಿಲ್ದಾಣದಲ್ಲಿರುವ ಸಿಬ್ಬಂದಿಗಳ ಬಗ್ಗೆ ಟೀಕೆ ಮಾಡಿದ್ದಾರೆ. ಇಲ್ಲಿ ಇರೋರೆಲ್ಲಾ ಇಂಗ್ಲಿಷ್ ಬಾರದ ಏಷ್ಯಾ/ಭಾರತೀಯರು ಎಂದು ಟೀಕಿಸಿದ್ದಾರೆ. ಇಲ್ಲಿ ಎಲ್ಲಿ ನೋಡಿದರೂ ಭಾರತೀಯ ಅಥವಾ ಏಷ್ಯನ್ ಮೂಲದ ಸಿಬ್ಬಂದಿಗಳೇ ಇದ್ದರು. ನಾನು ಅವರಲ್ಲಿ ಇಂಗ್ಲಿಷ್ ನಲ್ಲಿ ಮಾತನಾಡಿ ಎಂದೆ.
ಲಾರ್ಡ್ಸ್: ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೂರನೇ ಟೆಸ್ಟ್ ಪಂದ್ಯ ಲಾರ್ಡ್ಸ್ ಮೈದಾನದಲ್ಲಿ ನಡೆಯಲಿದ್ದು, ಈ ಮೈದಾನದಲ್ಲಿ ಟೀಂ ಇಂಡಿಯಾದ ಇತಿಹಾಸ ಸ್ವಲ್ಪವೂ ಚೆನ್ನಾಗಿಲ್ಲ. ಜುಲೈ 10 ರಿಂದ ಮೂರನೇ ಟೆಸ್ಟ್ ಪಂದ್ಯ ಕ್ರಿಕೆಟ್ ಕಾಶಿ ಎಂದೇ ಕರೆಯಲ್ಪಡುವ ಲಾರ್ಡ್ಸ್ ಮೈದಾನದಲ್ಲಿ ನಡೆಯಲಿದೆ. ಇಲ್ಲಿ ಟೀಂ ಇಂಡಿಯಾ ಒಟ್ಟು 19 ಟೆಸ್ಟ್ ಪಂದ್ಯಗಳನ್ನಾಡಿದೆ. ಈ ಪೈಕಿ ಗೆದ್ದಿದ್ದು ಕೇವಲ ಮೂರೇ ಪಂದ್ಯಗಳಲ್ಲಿ. 12 ಬಾರಿ ಟೀಂ ಇಂಡಿಯಾ ಇಲ್ಲಿ ಸೋತಿದೆ. 4 ಬಾರಿ ಡ್ರಾ ಮಾಡಿಕೊಳ್ಳಲು ಯಶಸ್ವಿಯಾಗಿದೆ.
ನ್ಯೂಯಾರ್ಕ್: ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗೆ ನೊಬೆಲ್ ಶಾಂತಿ ಪ್ರಶಸ್ತಿ ನೀಡಲು ಇಸ್ರೇಲ್ ನಾಮ ನಿರ್ದೇಶನ ಮಾಡಿದೆ. ಶ್ವೇತಭವನದಲ್ಲಿ ನಡೆದ ಭೋಜನಕೂಟದಲ್ಲಿ ಭಾಗಿಯಾದ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ನಾಮನಿರ್ದೇಶನದ ಪ್ರತಿಯನ್ನು ಟ್ರಂಪ್ ಗೆ ಹಸ್ತಾಂತರಿಸಿದ್ದಾರೆ. ಟ್ರಂಪ್ ಜಾಗತಿಕ ಶಾಂತಿಗಾಗಿ ಸಾಕಷ್ಟು ಶ್ರಮಿಸುತ್ತಿದ್ದಾರೆ. ಮಧ್ಯಪ್ರಾಚ್ಯದಲ್ಲಿ ಶಾಂತಿ ಸ್ಥಾಪಿಸಲು ಶ್ರಮವಹಿಸಿದ್ದಾರೆ. ಟ್ರಂಪ್ ಕೆಲಸಕ್ಕೆ ಯಹೂದಿಗಳು ಮಾತ್ರವಲ್ಲ, ಪ್ರಪಂಚದಾದ್ಯಂತ ಜನರು ಮೆಚ್ಚುಗೆ ಹೊಂದಿದ್ದಾರೆ ಎಂದು ನೆತನ್ಯಾಹು ಹೇಳಿದ್ದಾರೆ. ಇದಕ್ಕೆ ಮೊದಲು ಪಾಕಿಸ್ತಾನ ಕೂಡಾ ಭಾರತದ ಜೊತೆಗಿನ ಯದ್ಧ ನಿಲ್ಲಿಸಿದ್ದಾಗಿ ಟ್ರಂಪ್ ಗೆ ನೊಬೆಲ್ ಪ್ರಶಸ್ತಿ ನೀಡುವಂತೆ ನಾಮನಿರ್ದೇಶನ ಮಾಡಿತ್ತು.
ರಾಜ್ಯದಲ್ಲಿ ಈಗ ಹೃದಯಾಘಾತದ ಪ್ರಮಾಣ ಹೆಚ್ಚಾಗಿರುವ ಹಿನ್ನಲೆಯಲ್ಲಿ ಖ್ಯಾತ ಹೃದ್ರೋಗ ತಜ್ಞ, ಸಂಸದ ಡಾ ಸಿಎನ್ ಮಂಜುನಾಥ್ ಹೃದಯದ ಖಾಯಿಲೆ ಹೆಚ್ಚಳಕ್ಕೆ ಕಾರಣ ಬಿಪಿ, ಶುಗರ್ ಗಿಂತ ದೊಡ್ಡದು ಯಾವುದು ಎಂದು ಹೇಳಿದ್ದಾರೆ. ಖಾಸಗಿ ಸಂದರ್ಶನವೊಂದರಲ್ಲಿ ಮಾತನಾಡಿರುವ ಅವರು ಹೃದಯದ ಖಾಯಿಲೆ ಹೆಚ್ಚಳಕ್ಕೆ ಕಾರಣವೇನೆಂದು ವಿವರಿಸಿದ್ದಾರೆ. ಕೊರೋನಾ ಬರುವುದಕ್ಕೆ ಮೊದಲೂ ಹೃದಯದ ಖಾಯಿಲೆ ಹೆಚ್ಚಾಗಲು ಆರಂಭವಾಗಿತ್ತು. 2013 ರಿಂದಲೂ ಹೃದಯಾಘಾತದ ಪ್ರಮಾಣ ಹೆಚ್ಚಾಗಿದೆ ಎಂದಿದ್ದಾರೆ. ಸಾಮಾನ್ಯವಾಗಿ ಹೃದಯದ ಖಾಯಿಲೆ ಬರಲು ಬಿಪಿ, ಶುಗರ್, ಧೂಮಪಾನ, ಮದ್ಯಪಾನ ಕಾರಣ ಎಂದು ನಾವೆಲ್ಲರೂ ಅಂದುಕೊಳ್ಳುತ್ತೇವೆ.
ಬೆಂಗಳೂರು: ರಾಜ್ಯದಲ್ಲಿ ಇಂದೂ ಕೆಲವೆಡೆ ಧಾರಾಕಾರ ಮಳೆ ಮುಂದುವರಿಯಲಿದೆ. ವಿಶೇಷವಾಗಿ ಕರಾವಳಿ ಜಿಲ್ಲೆಯವರು ಇಂದು ಎಚ್ಚರಿಕೆಯಿಂದಿರಬೇಕು ಎಂದು ಹವಾಮಾನ ವರದಿಗಳು ಹೇಳುತ್ತಿವೆ. ಈ ಬಾರಿ ಮುಂಗಾರು ಮಳೆ ಉತ್ತಮವಾಗಿ ಆಗುತ್ತಿದೆ. ಅದರಲ್ಲೂ ವಿಶೇಷವಾಗಿ ಕರಾವಳಿ, ಮಲೆನಾಡಿನಲ್ಲಿ ಭಾರೀ ಮಳೆಯಾಗುತ್ತಿದೆ. ಇಂದೂ ಕರಾವಳಿ ಜಿಲ್ಲೆಗಳಿಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ವರದಿಗಳು ಎಚ್ಚರಿಕೆ ನೀಡಿವೆ. ವಿಶೇಷವಾಗಿ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಇಂದು ಭಾರೀ ಗಾಳಿ ಸಹಿತ ಧಾರಾಕಾರ ಮಳೆಯಾಗಲಿದೆ ಎಂದು ತಿಳಿದುಬಂದಿದೆ.
ಮಂಗಳವಾರದಂದು ದುರ್ಗಾ ದೇವಿಯ ಆರಾಧನೆಗೆ ಹೇಳಿ ಮಾಡಿದ ದಿನ. ಇಂದು ದುರ್ಗಾದೇವಿಯ ಚಂಡಿಕಾ ಸ್ತೋತ್ರವನ್ನು ಓದುವುದರಿಂದ ಶತ್ರುಭಯ ನಾಶವಾಗಿ ಆತ್ಮಸ್ಥೈರ್ಯ ಮೂಡುವುದು.ಯಾ ದೇವೀ ಖಡ್ಗಹಸ್ತಾ ಸಕಲಜನಪದವ್ಯಾಪಿನೀ ವಿಶ್ವದುರ್ಗಾಶ್ಯಾಮಾಂಗೀ ಶುಕ್ಲಪಾಶಾ ದ್ವಿಜಗಣಗಣಿತಾ ಬ್ರಹ್ಮದೇಹಾರ್ಧವಾಸಾ |ಜ್ಞಾನಾನಾಂ ಸಾಧಯಿತ್ರೀ ಯತಿಗಿರಿಗಮನಜ್ಞಾನ ದಿವ್ಯ ಪ್ರಬೋಧಾಸಾ ದೇವೀ ದಿವ್ಯಮೂರ್ತಿಃ ಪ್ರದಹತು ದುರಿತಂ ಚಂಡಮುಂಡಾ ಪ್ರಚಂಡಾ || ೧ ||ಹ್ರಾಂ ಹ್ರೀಂ ಹ್ರೂಂ ಚರ್ಮಮುಂಡೇ ಶವಗಮನಹತೇ ಭೀಷಣೇ ಭೀಮವಕ್ತ್ರೇಕ್ರಾಂ ಕ್ರೀಂ ಕ್ರೂಂ ಕ್ರೋಧಮೂರ್ತಿರ್ವಿಕೃತಕುಚಮುಖೇ ರೌದ್ರದಂಷ್ಟ್ರಾಕರಾಲೇ |ಕಂ ಕಂ ಕಂ ಕಾಲಧಾರಿ ಭ್ರಮಸಿ ಜಗದಿದಂ ಭಕ್ಷಯಂತೀ ಗ್ರಸಂತೀಹುಂಕಾರಂ ಚೋಚ್ಚರಂತೀ ಪ್ರದಹತು ದುರಿತಂ ಚಂಡಮುಂಡಾ ಪ್ರಚಂಡಾ || ೨ ||
ಅಸ್ಸಾಂ ಮೂಲದ ಸೋಶಿಯಲ್ ಮೀಡಿಯಾ ಇನ್ಪುಯೆನ್ಸರ್ ಬೇಬಿಡಾಲ್ ಆರ್ಚಿ ಎಂದೇ ಖ್ಯಾತರಾಗಿರುವ ಅರ್ಚಿತಾ ಫುಕನ್ ಸದ್ಯ ಸುದ್ದಿಯಲ್ಲಿದ್ದಾರೆ. ಇದೀಗ ಅರ್ಚಿತಾ ಅಮೆರಿಕದಲ್ಲಿ ನೀಲಿಚಿತ್ರಗಳ ಉದ್ಯಮಕ್ಕೆ ಇಳಿದಿದ್ದಾರೆ ಎಂದು ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಸಿಕ್ಕಿರುವ ಮಾಹಿತಿ ಪ್ರಕಾರ ಇಂಟರ್ನೆಟ್ನಲ್ಲಿ ಬೇಬಿ ಡಾಲ್ ಅರ್ಚಿ ಹಾಗೂ ಅರ್ಚಿತಾ ಫುಕಾನ್ ಎಂಬ ಹೆಸರು ಹೆಚ್ಚು ಸರ್ಚ್ ಎಂಜಿನ್ಗಳಲ್ಲೂ ಹುಡುಕಾಟವಾಗುತ್ತಿದೆ ಎನ್ನಲಾಗಿದೆ. ಇದಕ್ಕೆ ಕಾರಣ ಆಕೆ ಇನ್ಸ್ಟಾಗ್ರಾಂನಲ್ಲಿ ಖ್ಯಾತ ನೀಲಿಚಿತ್ರಗಳ ತಾರೆ ಕೆಂಡ್ರಾ ಲಸ್ಟ್ ಅವರ ಜತೆ ಫೋಟೋವನ್ನು ಹಂಚಿಕೊಂಡಿರುವುದು ಭಾರೀ ಕುತೂಹಲವನ್ನು ಮೂಡಿಸಿದೆ.
ಬಿಜೆಪಿ ನಾಯಕಿ, ಕೇಂದ್ರದ ಮಾಜಿ ಸಚಿವೆ ಸ್ಮೃತಿ ಇರಾನಿ ಅವರು ಇದೀಗ ಮತ್ತೇ ಬಣ್ಣದ ಲೋಕಕ್ಕೆ ವಾಪಾಸ್ ಆಗಿದ್ದಾರೆ. ಜನಪ್ರಿಯತೆ ತಂದುಕೊಟ್ಟಿದ್ದ `ಕ್ಯೂಂಕಿ ಸಾಸ್ ಭೀ ಕಭಿ ಬಹು ಥೀ’ ಸೀಸನ್ 2ರ ಧಾರಾವಾಹಿ ಶೂಟಿಂಗ್ನಲ್ಲಿ ಭಾಗಿಯಾಗಿದ್ದಾರೆ.ಧಾರಾವಾಹಿ ಶುರುವಾಗಿ ಈಗಾಗಲೇ 25 ವರ್ಷ ತುಂಬಿದ್ದು, ಈಗ 2ನೇ ಸೀಸನ್ಗೆ ಸಿದ್ಧತೆ ನಡೆಯುತ್ತಿದೆ. ಮಾಜಿ ಸಚಿವೆ ಸ್ಮೃತಿ ಇರಾನಿ ಅವರ, ಸೀರಿಯಲ್ನಲ್ಲಿನ ಪಾತ್ರ `ತುಳಸಿ’ ಫಸ್ಟ್ ಲುಕ್ ರಿಲೀಸ್ ಆಗಿದೆ.ಫಸ್ಟ್ ಲುಕ್ನಲ್ಲಿ ಸ್ಮೃತಿ ಮೆರೂನ್ ಸೀರೆಯಲ್ಲಿ ಕಾಣಿಸಿಕೊಂಡಿದ್ದು, ದೊಡ್ಡದಾದ ಕೆಂಪು ಬಿಂದಿ, ಮಂಗಳಸೂತ್ರ ಹಾಗೂ ಆಭರಣಗಳಿಂದ ಅಲಂಕಾರಗೊಂಡಿದ್ದಾರೆ.
ನೆಲಮಂಗಲ: ಕಾರು ಓವರ್ಟೇಕ್ ವಿಚಾರವಾಗಿ ದಾಖಲಾದ ಪ್ರಕರಣ ಸಂಬಂಧ ಮಾಜಿ ಸಂಸದ ಅನಂತ್ ಕುಮಾರ್ ಹೆಗಡೆ ಇಂದು ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಗೆ ಹಾಜರಾಗಿ ಮಾಹಿತಿಯನ್ನು ನೀಡಿದ್ದಾರೆ.ಇತ್ತೀಚೆಗೆ ಹುಬ್ಬಳ್ಳಿಯಿಂದ ಬೆಂಗಳೂರಿಗೆ ಬರುವ ವೇಳೆ ನೆಲಮಂಗಲ ತಾಲೂಕಿನ ಡಾಬಸ್ಪೇಟೆಯ ಹಳೇ ನಿಜಗಲ್ ಬಳಿ ಕಾರು ಓವರ್ಟೇಕ್ ವಿಚಾರದಲ್ಲಿ ಅನಂತ್ ಕುಮಾರ್ ಹೆಗಡೆ ಕಾರು ಚಾಲಕ ಹಾಗೂ ಮತ್ತೊಂದು ಕಾರಿನವರ ಜೊತೆಗೆ ಗಲಾಟೆ ನಡೆದು ಈ ವಿಚಾರದಲ್ಲಿ ಡಾಬಸ್ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ರೋಡ್ ರೇಜ್ ಪ್ರಕರಣದಲ್ಲಿ ಅನಂತ್ ಕುಮಾರ್ ಹೆಗಡೆ ಕಾರು ಚಾಲಕ ಹಾಗೂ ಗನ್ಮ್ಯಾನ್ಗೆ ನೆಲಮಂಗಲ ನ್ಯಾಯಾಲಯ
ಬೆಂಗಳೂರು: ಸಹನಟಿಗೆ ಲೈಂಗಿಕ ದೌರ್ಜನ್ಯ ನೀಡಿದ ದೂರಿನ ಪ್ರಕರಣದಲ್ಲಿ ಜೈಲು ಸೇರಿದ್ದ ಕಾಮಿಡಿ ಕಿಲಾಡಿಗಳು ಖ್ಯಾತಿಯ ನಟ ಮಡೆನೂರು ಮನು ಜೈಲಿನಿಂದ ಹೊರಬಂದಿದ್ದಾರೆ. ಇದರ ಬೆನ್ನಲ್ಲೇ ಮಡೆನೂರು ಮನು ಕನ್ನಡದ ಕೆಲ ನಟರ ಬಗ್ಗೆ ಮಾತನಾಡಿದ್ದ ಆಡಿಯೋ ವೈರಲ್ ಆಗಿತ್ತು. ಈ ಆಡಿಯೋ ಸಂಬಂಧ ಮಡೆನೂರು ಮನು, ನಟರಾದ ಶಿವಣ್ಣ ಹಾಗೂ ಧ್ರುವ ಸರ್ಜಾ, ದರ್ಶನ್ ಬಳಿ ಕ್ಷಮೆ ಕೋರಿದ್ದರು. ಇದೀಗ ನಟ ದರ್ಶನ್ ತೂಗುದೀಪ್ ಅವರಿಗೆ ಕ್ಷಮೆ ಕೇಳಿ ವಿಡಿಯೋ ರಿಲೀಸ್ ಮಾಡಿದ್ದಾರೆ. ಆ ವಿಡಿಯೋದಲ್ಲಿ "ಇತ್ತೀಚಿಗೆ ಒಂದು ಆಡಿಯೋ ವೈರಲ್ ಆದಾಗ, ಬಹಿರಂಗವಾಗಿ ಒಂದು ಕ್ಷಮೆ ಯಾಚಿಸಿದ್ದೆ. ಡಿ ಬಾಸ್ ಫ್ಯಾನ್ಸ್
ಮುಂಬೈ: ಮಹಾರಾಷ್ಟ್ರ ನವನಿರ್ಮಾಣ ಸೇನೆಯ (ಎಂಎನ್ಎಸ್) ಮುಖಂಡ ಜಾವೇದ್ ಶೇಖ್ ಅವರ ಪುತ್ರ ಎಂದು ಗುರುತಿಸಲಾದ ಯುವಕನನ್ನು ಮುಂಬೈ ಪೊಲೀಸರು ಸೋಮವಾರ ಬಂಧಿಸಿದ್ದಾರೆ.ಅಂಧೇರಿ ಪಶ್ಚಿಮದಲ್ಲಿ ನಡೆದ ಸಣ್ಣ ರಸ್ತೆ ಅಪಘಾತದ ನಂತರ ಮಹಿಳೆಯೊಬ್ಬರನ್ನು ನಿಂದಿಸುತ್ತಿರುವುದನ್ನು ತೋರಿಸುವ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಪೊಲೀಸರ ಪ್ರಕಾರ, ಎಂಎನ್ಎಸ್ ರಾಜ್ಯ ಉಪಾಧ್ಯಕ್ಷ ಜಾವೇದ್ ಶೇಖ್ ಅವರ ಪುತ್ರ ರಾಹಿಲ್ ಶೇಖ್ ಎಂದು ಗುರುತಿಸಲಾದ
ಬೆಂಗಳೂರು: ಟ್ರಾಫಿಕ್ ದಟ್ಟಣೆಯನ್ನು ಕಡಿಮೆ ಮಾಡುವ ಉದ್ದೇಶದಿಂದ ಬೆಳ್ಳಂದೂರು ಟೆಕ್ ಪಾರ್ಕ್ ಅನ್ನು ಔಟರ್ ರಿಂಗ್ ರೋಡ್ಗೆ ಸಂಪರ್ಕಿಸುವ 1.5 ಕಿಮೀ ಫ್ಲೈಓವರ್ ನಿರ್ಮಿಸಲು ಪ್ರೆಸ್ಟೀಜ್ ಗ್ರೂಪ್ ಬಿಬಿಎಂಪಿ ಅನುಮೋದನೆ ಪಡೆದುಕೊಂಡಿದೆ. ಪ್ರತಿಷ್ಠೆಯು ವೆಚ್ಚವನ್ನು ಭರಿಸುತ್ತದೆ ಮತ್ತು ಸಾರ್ವಜನಿಕ ಪ್ರವೇಶವನ್ನು ಖಚಿತಪಡಿಸುತ್ತದೆ, ಕರಿಯಮ್ಮನ ಅಗ್ರಹಾರ ರಸ್ತೆ ವಿಸ್ತರಣೆಗೆ ಸಹ ಧನಸಹಾಯ ನೀಡುತ್ತದೆ. ಹೆಚ್ಚುವರಿಯಾಗಿ, ಕನೆಕ್ಟರ್ ರಸ್ತೆಯು ಸಕ್ರಾ ಆಸ್ಪತ್ರೆ ರಸ್ತೆಗೆ 2.5 ಕಿಮೀ ಪ್ರಯಾಣವನ್ನು ಕಡಿಮೆ ಮಾಡುತ್ತದೆ.ಬೆಂಗಳೂರು ಸನ್ಸೆಟ್ ಗ್ರಿಡ್ಲಾಕ್ ಟಿಐಎಲ್ ಕ್ರಿಯೇಟಿವ್ಸ್ ಪ್ರೆಸ್ಟೀಜ್ ಗ್ರೂಪ್ ಬೆಂಗಳೂರು ಫ್ಲೈಓವರ್ ಬೆಳ್ಳಂದೂರಿನಲ್ಲಿ ತನ್ನ
ಮಂಗಳೂರು: ಹೆಚ್ಚುತ್ತಿರುವ ಡೆಂಗ್ಯೂ ಆತಂಕದ ನಡುವೆ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈಗ ಮಲೇರಿಯಾ ಪ್ರಕರಣಗಳು ಹೆಚ್ಚಾಗುತ್ತಿವೆ. ಕಳೆದ ಆರು ತಿಂಗಳಲ್ಲಿ ದಾಖಲಾದ 75 ಮಲೇರಿಯಾ ಪ್ರಕರಣಗಳಲ್ಲಿ 46 ಕರ್ನಾಟಕದ ಹೊರಗಿನ ವಲಸೆ ಕಾರ್ಮಿಕರಲ್ಲಿ ಕಂಡುಬಂದಿವೆ ಎಂದು ಆರೋಗ್ಯ ಅಧಿಕಾರಿಗಳು ವರದಿ ಮಾಡಿದ್ದಾರೆ. ಕೇವಲ 29 ಪ್ರಕರಣಗಳು ಸ್ಥಳೀಯ ನಿವಾಸಿಗಳನ್ನು ಒಳಗೊಂಡಿವೆ.ಉತ್ತರ ಪ್ರದೇಶ, ಒಡಿಶಾ, ಜಾರ್ಖಂಡ್, ಬಿಹಾರ ಮತ್ತು ಪಶ್ಚಿಮ ಬಂಗಾಳದಂತಹ ರಾಜ್ಯಗಳಿಂದ ಆಗಮಿಸುವ ಕಾರ್ಮಿಕರಲ್ಲಿ
ಅಂತರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ತಮ್ಮ ಹೊಸ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಸಂಜೋಗ್ ಗುಪ್ತಾ ಅವರನ್ನು ನೇಮಕ ಮಾಡಿರುವುದಾಗಿ ಪ್ರಕಟಿಸಿದೆ. ಗುಪ್ತಾ ಅವರು ಜುಲೈ 7, 2025 ರಂದು ಅಧಿಕಾರ ವಹಿಸಿಕೊಳ್ಳಲಿದ್ದು, ಜಾಗತಿಕ ಆಡಳಿತ ಮಂಡಳಿಯ ಇತಿಹಾಸದಲ್ಲಿ ಏಳನೇ CEO ಆಗಿ ಇನ್ಮುಂದೆ ಅಧಿಕಾರ ಚಲಾಯಿಸಲಿದ್ದಾರೆ.ಗುಪ್ತಾ ಪ್ರಸ್ತುತ ಜಿಯೋಸ್ಟಾರ್ನಲ್ಲಿ ಸಿಇಒ, ಸ್ಪೋರ್ಟ್ಸ್ ಮತ್ತು ಲೈವ್ ಎಕ್ಸ್ಪೀರಿಯನ್ಸ್ಗಳಾಗಿ ಸೇವೆ ಸಲ್ಲಿಸುತ್ತಿದ್ದಾರೆ ಮತ್ತು
ಏಪ್ರಿಲ್ನಲ್ಲಿ ನಡೆದ ಮಾರಣಾಂತಿಕ ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಭಾಗಿಯಾಗಿರುವ ಪಾಕಿಸ್ತಾನಿ ಭಯೋತ್ಪಾದಕರಿಗೆ ಆಶ್ರಯ ನೀಡಿದ ಆರೋಪದಲ್ಲಿ ಬಂಧಿಸಲಾದ ಇಬ್ಬರು ಆರೋಪಿಗಳಿಗೆ ಜಮ್ಮುವಿನ ವಿಶೇಷ ನ್ಯಾಯಾಲಯವು ಸೋಮವಾರ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) 10 ದಿನಗಳ ಕಸ್ಟಡಿಗೆ ಅನುಮತಿ ನೀಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಹಿಂದಿನ 10 ದಿನಗಳ ಬಂಧನದ ಅವಧಿ ಮುಗಿದ ನಂತರ, ಪರ್ವೈಜ್ ಅಹ್ಮದ್ ಜೋಥರ್ ಮತ್ತು ಬಶೀರ್ ಅಹ್ಮದ್ ಜೋಥರ್ ಅವರನ್ನು ವಿಶೇಷ ಎನ್ಐಎ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಇದು ಪ್ರಕರಣದಲ್ಲಿ ಎನ್ಐಎ ತನ್ನ ತನಿಖೆಯನ್ನು ಕೈಗೊಳ್ಳಲು ಅನುವು ಮಾಡಿಕೊಡಲು ಅವರ ಬಂಧನವನ್ನು ವಿಸ್ತರಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬೆಂಗಳೂರು: ಸಿಎಂ ಸಿದ್ದರಾಮಯ್ಯ ರಾಷ್ಟ್ರ ರಾಜಕಾರಣಕ್ಕೆ ಹೋಗುವ ಬಗ್ಗೆ ಚರ್ಚೆಯಾಗುತ್ತಿರುವ ಬೆನ್ನಲ್ಲೇ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಮಾಸ್ ಲೀಡರ್ ಇಲ್ಲೇ ಇರಬೇಕಾದವರಲ್ಲ ಎಂದಿದ್ದಾರೆ. ಸಿಎಂ ಸಿದ್ದರಾಮಯ್ಯನವರನ್ನು ಎಐಸಿಸಿ ಒಬಿಸಿ ಮಂಡಳಿಗೆ ಆಯ್ಕೆ ಮಾಡಿರುವುದು ಈಗ ಭಾರೀ ಚರ್ಚೆಯಾಗುತ್ತಿದೆ. ಮುಂದಿನ ದಿನಗಳಲ್ಲಿ ಸಿದ್ದರಾಮಯ್ಯನವರನ್ನು ರಾಷ್ಟ್ರ ರಾಜಕಾರಣಕ್ಕೆ ಕರೆಸುವ ನಿಟ್ಟಿನಲ್ಲೇ ಕಾಂಗ್ರೆಸ್ ಹೈಕಮಾಂಡ್ ಈ ಪ್ಲ್ಯಾನ್ ಮಾಡಿದೆ ಎಂದು ವಿಶ್ಲೇಷಿಸಲಾಗುತ್ತಿದೆ. ಇನ್ನು ವಿಪಕ್ಷ ಬಿಜೆಪಿ, ಇದು ರಾಜ್ಯದಲ್ಲಿ ಸಿಎಂ ಬದಲಾವಣೆ ಸೂಚನೆ ಎಂದಿದೆ.
ಮಧ್ಯಪ್ರದೇಶದ ಉಜ್ಜಯಿನಿಯಲ್ಲಿ ಶನಿವಾರ ರಾತ್ರಿ ನಡೆದ ಮುಹರಂ ಮೆರವಣಿಗೆಯಲ್ಲಿ ಭಾಗವಹಿಸುವವರು ಪ್ರಮುಖ ಪ್ರದೇಶದಲ್ಲಿ ಅಳವಡಿಸಲಾದ ಪೊಲೀಸ್ ಬ್ಯಾರಿಕೇಡ್ಗಳನ್ನು ಉರುಳಿಸಿದ ನಂತರ ಭಾರಿ ಗದ್ದಲ ಉಂಟಾಯಿತು. ಈ ಪ್ರಕ್ರಿಯೆಯಲ್ಲಿ ಇಬ್ಬರು ಪೊಲೀಸ್ ಸಿಬ್ಬಂದಿ ಗಾಯಗೊಂಡರು. ಗುಂಪು ಚದುರಿಸಲು ಪೊಲೀಸರು ಲಾಠಿ ಚಾರ್ಜ್ ನಡೆಸಿದರು.ಜಿಲ್ಲಾಡಳಿತದೊಂದಿಗೆ ನಡೆದ ಸಭೆಯಲ್ಲಿ ಮುಹರಂ ರ್ಯಾಲಿಗಳನ್ನು ಆಯೋಜಿಸುವ ವಿವಿಧ ಸಂಸ್ಥೆಗಳೊಂದಿಗೆ ಚರ್ಚಿಸಿದ ಮೆರವಣಿಗೆಯು ನಿಗದಿತ ಮಾರ್ಗದಿಂದ ಹೊರಗುಳಿದ ನಂತರ ಈ ಘಟನೆ ಸಂಭವಿಸಿದೆ.
ಮುಂಬೈ: ಇಂಗ್ಲೆಂಡ್ ವಿರುದ್ಧ ಎಡ್ಜ್ಬಾಸ್ಟನ್ನಲ್ಲಿ ನಡೆದ ಟೆಸ್ಟ್ನಲ್ಲಿ ಭಾರತದ ಐತಿಹಾಸಿಕ ಗೆಲುವನ್ನು ಉಲ್ಲೇಖಿಸಿ, ಭಾರತ ತಂಡವನ್ನು ಅಭಿನಂದಿಸಿ ಅಂತರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಅಧ್ಯಕ್ಷ ಜಯ್ ಶಾ ಸಾಮಾಜಿಕ ಜಾಲತಾಣದಲ್ಲಿ ಬರೆದಿರುವ ಪೋಸ್ಟ್ ಇದೀಗ ವಿವಾದಕ್ಕೆ ಸಿಲುಕಿದೆ.ಇದಕ್ಕೆ ಕಾರಣ ಭಾರತದ ವೇಗಿ ಮೊಹಮ್ಮದ್ ಸಿರಾಜ್ ಹೆಸರನ್ನು ಕೈಬಿಟ್ಟಿರುವುದು ವಿವಾದಕ್ಕೆ ಕಾರಣವಾಗಿದೆ. ಭಾರತದ ನಾಯಕ ಶುಭಮನ್ ಗಿಲ್, ವೇಗಿ ಆಕಾಶ್ ದೀಪ್, ಆಲ್ ರೌಂಡರ್ ರವೀಂದ್ರ ಜಡೇಜಾ ಮತ್ತು ವಿಕೆಟ್ ಕೀಪರ್-ಬ್ಯಾಟ್ಸ್ಮನ್ ರಿಷಬ್ ಪಂತ್ ಅವರ ಹೆಸರನ್ನು ಪೋಸ್ಟ್ನಲ್ಲಿ ನಿರ್ದಿಷ್ಟವಾಗಿ ಉಲ್ಲೇಖಿಸಲಾಗಿದೆ. ಆದರೆ, ಎರಡನೇ ಟೆಸ್ಟ್ನಲ್ಲಿ ಮೊದಲ ಇನ್ನಿಂಗ್ಸ್ನಲ್ಲಿ ಆರು ವಿಕೆಟ್ ಸೇರಿದಂತೆ ಏಳು ವಿಕೆಟ್ ಪಡೆದ ಸಿರಾಜ್ ಹೆಸರನ್ನು ಜಯ್ ಶಾ ಅವರು ಉಲ್ಲೇಖಿಸಿಲ್ಲ.
ಶಿವಮೊಗ್ಗ: ಮುಖ್ಯಮಂತ್ರಿಗಳ ಬಗ್ಗೆ ಆಡಳಿತ ಪಕ್ಷವಾದ ಕಾಂಗ್ರೆಸ್ಸಿನ ಶಾಸಕರಿಗೇ ವಿಶ್ವಾಸ ಇಲ್ಲವಾಗಿದೆ; ರಾಜ್ಯದ ಜನರಿಗೂ ವಿಶ್ವಾಸ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ತಿಳಿಸಿದ್ದಾರೆ.ಇಂದು ಇಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಮುಂದಿನ ದಿನಗಳಲ್ಲಿ ರಾಜಕೀಯ ವಿದ್ಯಮಾನಗಳು ಯಾವ ರೀತಿ ಆಗಲಿದೆ. ಸ್ಥಾನಪಲ್ಲಟ ಯಾವ ರೀತಿ ಆಗಲಿದೆ ಎಂಬುದನ್ನು ನಾವು ಕಾದು ನೋಡುತ್ತೇವೆ ಎಂದು ಪ್ರಶ್ನೆಗೆ ಉತ್ತರ ಕೊಟ್ಟರು. ಸ್ಥಾನಪಲ್ಲಟ ಆದರೆ ನಮಗೇನೂ ವ್ಯತ್ಯಾಸ ಆಗುವುದಿಲ್ಲ; ರಾಜ್ಯದ ಜನರಿಗೂ ವ್ಯತ್ಯಾಸ ಆಗುವುದಿಲ್ಲ; 15 ಬಜೆಟ್ ಮಂಡಿಸಿದ ಅನುಭವಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಆಡಳಿತದಲ್ಲಿ ಹಣಕಾಸು ವ್ಯವಸ್ಥೆ ಸಂಪೂರ್ಣ ಹಾಳಾಗಿದೆ.