ನವದೆಹಲಿ: ಕೊನೆಯ ಎಸೆತದವರೆಗೆ ಕುತೂಹಲ ಮೂಡಿಸಿದ್ದ ಐಪಿಎಲ್ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ತಂಡವು 1 ರನ್ಗಳ ರೋಚಕ ಜಯ ದಾಖಲಿಸಿತು. ಕನ್ನಡಿಗ ಕೆ.ಎಲ್ ರಾಹುಲ್ ಹಾಗೂ ಡೇವಿಡ್ ಮಿಲ್ಲರ್ ಬ್ಯಾಟಿಂಗ್ ಸಾಹಸದ ಹೊರತಾಗಿಯೂ ಡೆಲ್ಲಿ ಕ್ಯಾಪಿಟಲ್ಸ್ ತಂಡ ಸೋಲು ಅನುಭವಿಸಿತು.ರೋಚಕ ಗೆಲುವು ಸಾಧಿಸಿದ ಗುಜರಾತ್ ಟೈಟಾನ್ಸ್ ಹಾಲಿ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಗೆಲುವಿನ ಖಾತೆ ತೆರೆಯಿತು. ಹ್ಯಾಟ್ರಿಕ್ ಗೆಲುವಿನ ವಿಶ್ವಾಸದಲ್ಲಿದ್ದ ಡೆಲ್ಲಿ ಕ್ಯಾಪಿಟಲ್ಸ್ ಮೊದಲ ಸೋಲಿಗೆ ತುತ್ತಾಯಿತು.ಟಾಸ್ ಗೆದ್ದ ಡೆಲ್ಲಿ ಬೌಲಿಂಗ್ ಆಯ್ದುಕೊಂಡಿತು. ಮೊದಲು ಬ್ಯಾಟಿಂಗ್ ನಡೆಸಿದ ಗುಜರಾತ್ ಟೈಟಾನ್ಸ್, ಬಿರುಸಿನ ಬ್ಯಾಟಿಂಗ್ ನಡೆಸಿ ನಿಗದಿತ 20 ಓವರ್ಗಳಲ್ಲಿ 4 ವಿಕೆಟ್ಗೆ 210 ರನ್ ಬಾರಿಸಿತು. ಡೆಲ್ಲಿ ತಂಡ ಕೊನೆಯ ಎಸೆತದ ತನಕ ಹೋರಾಡಿ 8 ವಿಕೆಟ್ಗೆ 209 ರನ್ ಗಳಿಸಿ ವಿರೋಚಿತ ಸೋಲು ಕಂಡಿತು.
ಬೆಂಗಳೂರು: ರಣವೀರ್ ಸಿಂಗ್ ಅವರ ಧುರಂಧರ ಸಿನಿಮಾ ಬಗ್ಗೆ ಮೌನವಾಗಿದ್ದಕ್ಕೆ ಟ್ರೋಲ್ ಮಾಡಿದವರಿಗೆ ಕೊನೆಗೂ ದೀಪಿಕಾ ಪಡುಕೋಣೆ ಪ್ರತಿಕ್ರಿಯೆ ನೀಡಿದ್ದಾರೆ. ರಣವೀರ್ ಸಿಂಗ್ ನಟನೆಯ ʻಧುರಂಧರ್ 2ʼ ಸಿನಿಮಾವು ಬಾಕ್ಸ್ ಆಫೀಸ್ನಲ್ಲಿ ದೊಡ್ಡ ದಾಖಲೆಗಳನ್ನು ಮಾಡಿದೆ. ಅನೇಕ ಸೆಲೆಬ್ರಿಟಿಗಳು, ರಾಜಕೀಯ ನಾಯಕರು ಈ ಸಿನಿಮಾವನ್ನು ಹೊಗಳಿದ್ದಾರೆ. ನೆಟ್ಟಿಗರೊಬ್ಬರು ಇನ್ಸ್ಟಾಗ್ರಾಮ್ನಲ್ಲಿ ಒಂದು ಪೋಸ್ಟ್ ಹಾಕಿದ್ದರು. ದೀಪಿಕಾ ಪಡುಕೋಣೆ 500 ಕೋಟಿ ಬಜೆಟ್ನ ಚಿತ್ರಕ್ಕೆ ಸೈಲೆಂಟ್ ಟ್ರೀಟ್ಮೆಂಟ್ ನೀಡಿದ್ದಾರೆ. ಧುರಂಧರ್: ದಿ ರಿವೆಂಜ್ ಜಾಗತಿಕ ದಾಖಲೆಗಳನ್ನು ಮುರಿಯುತ್ತಿದ್ದರೆ, ಚಿತ್ರದ ಪ್ರೀಮಿಯರ್ ಹೋಗುವುದು ಬಿಟ್ಟು, ದೀಪಿಕಾ ತಮ್ಮ ಅತ್ತೆ-ಮಾವಂದಿರ ಜೊತೆ ಸಿತಾರ್ ಕಚೇರಿಗೆ ಹೋಗಿದ್ದರು. ಯಾವುದೇ ಪೋಸ್ಟ್ ಇಲ್ಲ, ಹೊಗಳಿಕೆಯೂ ಇಲ್ಲ, ಕೇವಲ ಮೌನ..
ಬೆಂಗಳೂರು: ರಾಜ್ಯದಾದ್ಯಂತ ಸಂಚಲನ ಮೂಡಿಸಿದ್ದ ಧಾರವಾಡ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಯೋಗೇಶ್ ಗೌಡಕೊಲೆ ಪ್ರಕರಣದ ತೀರ್ಪನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನಾಳೆ ಪ್ರಕಟಿಸಲಿದೆ.ರಾಜಕೀಯ ವೈಷಮ್ಯದಿಂದ ಧಾರವಾಡದಲ್ಲಿ 2016ರ ಜೂ.16ರಂದು ಯೋಗೇಶ್ ಗೌಡ ಅವರನ್ನು ಹತ್ಯೆ ಮಾಡಲಾಗಿತ್ತು. ಶಾಸಕ ವಿನಯ್ ಕುಲಕರ್ಣಿ ಮೇಲೆ ಅಪರಾಧಿಕ ಒಳಸಂಚು ಮಾಡಿದ ಆರೋಪವಿದೆ. 2019ರಲ್ಲಿ ರಾಜ್ಯ ಸರ್ಕಾರವು ಈ ಪ್ರಕರಣವನ್ನು ಸಿಬಿಐಗೆ ವರ್ಗಾವಣೆ ಮಾಡಿತ್ತು. ಈ ಬಗ್ಗೆ ತನಿಖೆ ಕೈಗೊಂಡ ಸಿಬಿಐ 2020ರಲ್ಲಿ ವಿನಯ್ ಕುಲಕರ್ಣಿ ಅವರನ್ನು ಬಂಧಿಸಿತ್ತು.2017ರಲ್ಲಿ ಶಾಸಕ ವಿನಯ್ ಕುಲಕರ್ಣಿ ಸುಪ್ರೀಂ ಕೋರ್ಟ್ನಿಂದ ಜಾಮೀನು ಪಡೆದಿದ್ದರು. ನಂತರ ಸಾಕ್ಷಿಗಳಿಗೆ ಬೆದರಿಕೆ ಹಾಕಿದ ಆರೋಪದ ಮೇಲೆ ಕಳೆದ ವರ್ಷ ಜೂನ್ನಲ್ಲಿ ಸುಪ್ರೀಂ ಕೋರ್ಟ್ ಅವರ ಜಾಮೀನು ರದ್ದು ಮಾಡಿತ್ತು.
ಟೆಹ್ರಾನ್: ಅಮೆರಿಕಾ ಮತ್ತು ಇರಾನ್ ನಡುವೆ ತಾತ್ಕಾಲಿಕ ಕದನವಿರಾಮ ಘೋಷಣೆಯಾಗಿದೆ. ಕದನ ವಿರಾಮದ ಹೊರತಾಗಿಯೂ ಇರಾನ್ನ ಲ ಸಂಸ್ಕರಣಾಗಾರದ ಮೇಲೆ ದಾಳಿ ನಡೆದಿದೆ. ಇರಾನ್ ಮತ್ತು ಅಮೆರಿಕ ನಡುವೆ ಎರಡು ವಾರಗಳ ಕದನ ವಿರಾಮ ಜಾರಿಗೆ ಬಂದಿದೆ. ಆದರೂ ಇರಾನ್ನ ಲಾವನ್ ದ್ವೀಪದಲ್ಲಿರುವ ತೈಲ ಸಂಸ್ಕರಣಾಗಾರದ ಮೇಲೆ ಶತ್ರು ದಾಳಿ ನಡೆಸಲಾಗಿದೆ ಎಂದು ಇರಾನ್ ತಿಳಿಸಿದೆ. ರಾಷ್ಟ್ರೀಯ ಇರಾನಿನ ತೈಲ ಸಂಸ್ಕರಣಾ ಮತ್ತು ವಿತರಣಾ ಕಂಪನಿ ಈ ದಾಳಿಯನ್ನು ವರದಿ ಮಾಡಿವೆ. ಇದಕ್ಕೆ ಪ್ರತಿಯಾಗಿ ಕುವೈತ್, ಯುಎಇ ಮೇಲೆ ಇರಾನ್ ದಾಳಿ ಮಾಡಿದೆ. ಸ್ಥಳೀಯ ಸಮಯ ಸುಮಾರು 10 ಗಂಟೆಗೆ ತೈಲ ಸಂಸ್ಕರಣಾಗಾರ ಹಾನಿಗೊಳಗಾಗಿದೆ ಎಂದು ಕಂಪನಿ ತಿಳಿಸಿದೆ. ಯಾವುದೇ ಸಾವುನೋವುಗಳು ವರದಿಯಾಗಿಲ್ಲ.
ನವದೆಹಲಿ: ಅಮೆರಿಕ ಮತ್ತು ಇರಾನ್ ನಡುವೆ ಎರಡು ವಾರಗಳ ಕದನ ವಿರಾಮ ಘೋಷಣೆಯಾದ ಬೆನ್ನಲ್ಲೇ, ಇರಾನ್ನಲ್ಲಿ ನೆಲೆಸಿರುವ ಭಾರತೀಯ ಪ್ರಜೆಗಳಿಗೆ ಭಾರತೀಯ ರಾಯಭಾರ ಕಚೇರಿಯು ಬುಧವಾರ ಮಹತ್ವದ ಸೂಚನೆ ನೀಡಲಾಗಿದೆ.ಇರಾನ್ನಲ್ಲಿರುವ ಎಲ್ಲ ಭಾರತೀಯರು ಕೂಡಲೇ ದೇಶವನ್ನು ತೊರೆಯುವಂತೆ ಈ ಮೂಲಕ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ತುರ್ತು ಸಂದರ್ಭಗಳಲ್ಲಿ ಸಮನ್ವಯ ಸಾಧಿಸಲು ರಾಯಭಾರ ಕಚೇರಿಯು ಕೆಲವು ಸಹಾಯವಾಣಿ ಸಂಖ್ಯೆಗಳನ್ನು ಸಹ ಪ್ರಕಟಿಸಿದೆ.ಏಪ್ರಿಲ್ 7ರಂದು ನೀಡಿದ್ದ ಸೂಚನೆಯ ಮುಂದುವರಿದ ಭಾಗವಾಗಿ, ಇತ್ತೀಚಿನ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಇರಾನ್ನಲ್ಲಿರುವ ಭಾರತೀಯರು ರಾಯಭಾರ ಕಚೇರಿಯ ಮಾರ್ಗದರ್ಶನದೊಂದಿಗೆ ಶೀಘ್ರವಾಗಿ ದೇಶದಿಂದ ನಿರ್ಗಮಿಸಲು ಸೂಚಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಬೆಂಗಳೂರು: 2028ಕ್ಕೆ ಕಾಂಗ್ರೆಸ್ಗೆ ಸೋಲು ಕಟ್ಟಿಟ್ಟ ಬುತ್ತಿ. ಕಾಂಗ್ರೆಸ್ ಸೋಲು ತಪ್ಪಿಸೋಕೆ ಯಾರಿಂದಲೂ ಸಾಧ್ಯವಿಲ್ಲ ಎಂದು ವಿಧಾನ ಪರಿಷತ್ ಸದಸ್ಯ, ಬಿಜೆಪಿ ನಾಯಕ ಸಿಟಿ ರವಿ ಭವಿಷ್ಯ ನುಡಿದಿದ್ದಾರೆ.ಕೆಟ್ಟ ಆಡಳಿತದಿಂದಾಗಿ ಕಾಂಗ್ರೆಸ್ ಸೋಲಿಸಬೇಕು ಅಂತ ಜನ ತೀರ್ಮಾನ ಮಾಡಿದ್ದಾರೆ. ಉಪಚುನಾವಣೆಯಲ್ಲೇ ಪಲ್ಟಿ ಹೊಡೆಯುತ್ತಿದ್ದಾರೆ. ಉಪಚುನಾವಣೆಯಲ್ಲಿ ಕಾಂಗ್ರೆಸ್ನವರು ಶಿರ್ಷಾಸನ ಮಾಡ್ತಾ ಇದ್ದಾರೆ. ಉಪಚುನಾವಣೆಯಲ್ಲಿ ಹೀಗೆ ಮಾಡ್ತಾ ಇರೋರು ಜನರಲ್ ಎಲೆಕ್ಷನ್ನಲ್ಲಿ ಗೆಲ್ತಾರಾ? ಬೈ ಎಲೆಕ್ಷನ್ನಲ್ಲೂ ಸೋಲ್ತಾರೆ, ಜನರಲ್ ಎಲೆಕ್ಷನ್ನಲ್ಲಿಯೂ ಸೋಲ್ತಾರೆ ಎಂದು ಹೇಳಿದ್ದಾರೆ.2028ರವರೆಗೂ ಜನ ನಿಮಗೆ ಬಹುಮತ ಕೊಟ್ಟಿದ್ದಾರೆ. ಜನ ಪ್ರಜಾಪ್ರಭುತ್ವದಲ್ಲಿ ಅಧಿಕಾರ ಕೊಟ್ಟಿದ್ದಾರೆ. 2028ರ ನಂತರ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ. ಸೋಲುತ್ತೆ. ಇನ್ನೂ ಯಾವ ಪಾರ್ಟಿಯಲ್ಲಿ ಸಿದ್ದರಾಮಯ್ಯ ಸಿಎಂ ಆಗ್ತಾರೆ ಎಂದು ಪ್ರಶ್ನಿಸಿದ್ದಾರೆ.
ಬಂಟ್ವಾಳ: ಮಧ್ಯಪ್ರಾಚ್ಯ ದೇಶಗಳಲ್ಲಿ ಹೆಚ್ಚಿರುವ ಉದ್ವಿಗ್ನ ಪರಿಸ್ಥಿತಿಯೂ ಕರಾವಳಿ ಭಾಗದ ಮದುವೆ ಹಾಗೂ ಇತರ ಸಮಾರಂಭಗಳಿಗೆ ಪರಿಣಾಮ ಬೀರಿರುವ ಬಗ್ಗೆ ವರದಿಯಾಗಿದೆ. ಇದೀಗ ಕರಾವಳಿ ಭಾಗದಲ್ಲಿ ಶುಭ ಕಾರ್ಯಗಳನ್ನು ನಡೆಸುವ ಸಮಯವಾಗಿದೆ. ಮದುವೆ, ಗೃಹಪ್ರವೇಶ, ಕೋಲ, ಪೂಜೆ ಹೀಗೇ ಸಾಲು ಸಾಲು ಸಮಾರಂಭಗಳನ್ನು ಈ ಸಮಯದಲ್ಲಿ ನಿಗದಿ ಮಾಡುತ್ತಾರೆ. ಮಕ್ಕಳಿಗೂ ಬೇಸಿಗೆ ರಜೆಯಿರುವ ಕಾರಣ, ಮದುವೆಗಳು ಮಾರ್ಚ್, ಏಪ್ರಿಲ್ ಹಾಗೂ ಮೇ ಸಮಯದಲ್ಲಿ ಹೆಚ್ಚಾಗಿ ನಿಗದಿ ಮಾಡಲಾಗುತ್ತದೆ.
ಚಿಕ್ಕಮಗಳೂರು: ಕೊಡಗಿನಲ್ಲಿ ಕೇರಳದ ಟ್ರೆಕ್ಕಿಂಗ್ ವೇಳೆ ಮಿಸ್ ಆಗಿದ್ದ ಚಾರಣಿಗಾರ್ತಿಯೊಬ್ಬರನ್ನು ರಕ್ಷಿಸಿದ್ದ ಬೆನ್ನಲ್ಲೇ ಜಿಲ್ಲೆಯಲ್ಲಿ ಮತ್ತೊಂದು ನಾಪತ್ತೆ ಪ್ರಕರಣ ವರದಿಯಾಗಿದೆ. ಪ್ರಸಿದ್ಧ ಮುಳ್ಳಯ್ಯನಗಿರಿಗೆ ಪ್ರವಾಸಕ್ಕೆ ಬಂದಿದ್ದ ಕೇರಳದ 14 ವರ್ಷದ ಬಾಲಕಿ ಏಪ್ರಿಲ್ 7 ರಂದು ಸಂಜೆಯಿಂದ ನಾಪತ್ತೆಯಾಗಿರುವ ಬಗ್ಗೆ ಬೆಳಕಿಗೆ ಬಂದಿದೆ.ನಾಪತ್ತೆಯಾಗಿರುವ ಬಾಲಕಿಯನ್ನು ಕೇರಳದ ಪಾಲಕ್ಕಾಡ್ ನಿವಾಸಿ ನಂದನಾ ಎಂದು ಗುರುತಿಸಲಾಗಿದೆ. ತನ್ನ ಹೆತ್ತವರೊಂದಿಗೆ 40 ಸದಸ್ಯರ ಪ್ರವಾಸ ಗುಂಪಿನ ಭಾಗವಾಗಿ ಜಿಲ್ಲೆಗೆ ಆಗಮಿಸಿದ್ದಳು.ಚಂದ್ರದ್ರೋಣ ಬೆಟ್ಟದ ಮಾಣಿಖ್ಯಧಾರಾ ಪ್ರದೇಶದ ಬಳಿ ಸಂಜೆ 6 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಮಾಣಿಖ್ಯಧಾರಾ
ಮಂಗಳೂರು ಕರಾವಳಿ ಭಾಗದಲ್ಲಿ ಗಾಳಿಯ ತೀವ್ರತೆ ಹೆಚ್ಚಿದ್ದರೂ ಕಳೆದ ಕೆಲವು ದಿನಗಳಿಂದ ತಾಪಮಾನದಲ್ಲಿ ನಿರಂತರ ಏರಿಕೆ ಕಂಡು ಬರುತ್ತಿದೆ.ಸುಮಾರು ಒಂದು ವಾರದಿಂದ, ಬೆಳಿಗ್ಗೆ ಮತ್ತು ರಾತ್ರಿಯಲ್ಲಿ ಗಾಳಿ ಬೀಸುತ್ತಿದ್ದು, ಇದರಿಂದ ಮೋಡಗಳು ಚದುರಿಹೋಗಿ, ಮಳೆಯಾಗುತ್ತಿಲ್ಲ. ಪೂರ್ವ ಮಾನ್ಸೂನ್ ಋತುವಿನಲ್ಲಿ, ಗಾಳಿಯು ಸಾಮಾನ್ಯವಾಗಿ ಬಂಗಾಳ ಕೊಲ್ಲಿಯಿಂದ ಅರಬ್ಬಿ ಸಮುದ್ರದ ಕಡೆಗೆ ಬೀಸುತ್ತದೆ,
ವಾಷಿಂಗ್ಟನ್: ಇರಾನ್ ಗೆ ಯುದ್ಧ ಪರಿಕರಗಳನ್ನು ಒದಗಿಸುವ ರಾಷ್ಟ್ರಗಳಿಗೆ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೊಸ ಬೆದರಿಕೆ ಹಾಕಿದ್ದಾರೆ. ಕದನ ವಿರಾಮ ಘೋಷಣೆ ಬೆನ್ನಲ್ಲೇ ಅವರು ಈ ಹೇಳಿಕೆ ನೀಡಿದ್ದಾರೆ. ಇಸ್ರೇಲ್ ಜೊತೆಗೆ ಸೇರಿಕೊಂಡು ಇರಾನ್ ಮೇಲೆ ಯುದ್ಧ ಸಾರಿದ್ದ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನಿನ್ನೆ ಹೊರ್ಮುಜ್ ಜಲಸಂಧಿ ತೆರೆಯಲು ಇರಾನ್ ಒಪ್ಪಿದ ಬೆನ್ನಲ್ಲೇ ಕದನ ವಿರಾಮ ಘೋಷಿಸಿದ್ದರು. ಇದರ ಬೆನ್ನಲ್ಲೇ ಈಗ ಇರಾನ್ ಗೆ ಸಹಾಯ ಮಾಡುತ್ತಿರುವ ರಾಷ್ಟ್ರಗಳಿಗೆ ಎಚ್ಚರಿಕೆ ಸಂದೇಶ ಕಳುಹಿಸಿದ್ದಾರೆ.
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಕ್ರಾಂತಿ ಸಿನಿಮಾದಲ್ಲಿ ಶೇಕ್ ಇಟ್ ಪುಷ್ಪವತಿ ಹಾಡಿಗೆ ಹೆಜ್ಜೆ ಹಾಕಿದ್ದ ನಟಿ ನಿಮಿಕಾ ರತ್ನಾಕರ್ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ನಿಮಿಕಾ ರತ್ನಾಕರ್ಗೆ ಶೇಕ್ ಇಟ್ ಪುಷ್ಪವತಿ ಹಾಡು ಭಾರೀ ಮನ್ನಣೆಯನ್ನು ತಂದುಕೊಟ್ಟಿತ್ತು. ಇವರು ಅಬ್ಬರ, ಮಿಸ್ಟರ ಬ್ಯಾಚುಲರ್, ಕ್ರಾಂತಿ, ಫ್ಲರ್ಟ್ ಸೇರಿದಂತೆ ಇನ್ನೂ ಕೆಲವು ಚಿತ್ರಗಳಲ್ಲಿ ನಿಮಿಕಾ ರತ್ನಾಕರ್ ಅಭಿನಯಿಸಿದ್ದಾರೆ. ಮಂಗಳೂರು ಮೂಲದ ನಿಮಿಕಾ ರತ್ನಾಕರ್ ಅವರು ಆಶಿಶ್ ಎಂಬವರನ್ನು ಕೈ ಹಿಡಿದಿದ್ದಾರೆ. ಇನ್ನೂ ಕುಟುಂಬ ಹಾಗೂ ಆಪ್ತ
ಬೆಂಗಳೂರು: ನಾಳೆ ದ್ವಿತೀಯ ಪಿಯುಸಿ ಪರೀಕ್ಷೆ 1ರ ಫಲಿತಾಂಶ ಪ್ರಕಟವಾಗಲಿದ್ದು, ಮಧ್ಯಾಹ್ನ 3ಕ್ಕೆ ವೆಬ್ಸೈಟ್ನಲ್ಲಿ ಫಲಿತಾಂಶ ಪ್ರಕಟವಾಗಲಿದೆ. ಈ ಮೊದಲು ಸುದ್ದಿಗೋಷ್ಠಿಯಲ್ಲಿ ಫಲಿತಾಂಶ ಬಗ್ಗೆ ಮಾಹಿತಿ ನೀಡಿದ ಬಳಿಕ ವೆಬ್ಸೈಟ್ನಲ್ಲಿ ಪ್ರಕಟ ಮಾಡಲಾಗುತ್ತಿತ್ತು. ಆದರೆ ಈ ಬಾರಿ ಮೊದಲು ವೈಬ್ಸೈಟ್ನಲ್ಲಿ ಫಲಿತಾಂಶ ಪ್ರಕಟವಾಗಲಿದೆ. ಬಳಿಕ ಸುದ್ದಿಗೋಷ್ಠಿ ನಡೆಯಲಿದೆ. ಚುನಾವಣೆ ನೀತಿ ಸಂಹಿತೆ ಹಿನ್ನೆಲೆ ಸಚಿವ ಮಧು ಬಂಗಾರಪ್ಪ ಅವರು ಸಂಜೆ 6:15ಕ್ಕೆ ಫಲಿತಾಂಶದ ಬಗ್ಗೆ ಸುದ್ದಿಗೋಷ್ಠಿ ನಡೆಸಲಿದ್ದಾರೆ.
ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷವು ಭಾರತದ ವಾಯುಯಾನ ವಲಯವನ್ನು ತೀವ್ರವಾಗಿ ಅಡ್ಡಿಪಡಿಸಿದೆ. ಇದು ಫೆಬ್ರವರಿ ಅಂತ್ಯದಿಂದ 10,000 ಕ್ಕೂ ಹೆಚ್ಚು ವಿಮಾನಗಳನ್ನು ರದ್ದುಗೊಳಿಸಿದೆ ಎಂದು ಹಿರಿಯ ಸರ್ಕಾರಿ ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ. ಹೆಚ್ಚುತ್ತಿರುವ ಉದ್ವಿಗ್ನತೆಗಳು ಮತ್ತು ಪ್ರದೇಶದಾದ್ಯಂತ ವ್ಯಾಪಕವಾದ ವಾಯುಪ್ರದೇಶದ ನಿರ್ಬಂಧಗಳು ಅಂತರಾಷ್ಟ್ರೀಯ ವಿಮಾನ ಕಾರ್ಯಾಚರಣೆಗಳ ಮೇಲೆ ಗಮನಾರ್ಹವಾಗಿ ಪರಿಣಾಮ ಬೀರಿವೆ.ನಾಗರಿಕ ವಿಮಾನಯಾನ ಸಚಿವಾಲಯದ ಜಂಟಿ ಕಾರ್ಯದರ್ಶಿ ಅಸಾಂಗ್ಬಾ ಚುಬಾ ಆವೊ ಪ್ರಕಾರ, ಈ ಹಿಂದೆ ಮಧ್ಯಪ್ರಾಚ್ಯಕ್ಕೆ
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಬಿಸಿಲ ತಾಪ ಏರುತ್ತಲೇ ಇದ್ದು, ಮನೆಯಿಂದ ಹೊರಬರಲು ಜನರು ಹಿಂದೇಟು ಹಾಕುತ್ತಿದ್ದಾರೆ.ಇನ್ನೂ ಪ್ರಾಣಿಗಳು ಕೂಡಾ ಬಿಸಿಲ ತಾಪಕ್ಕೆ ಹೈರಾಣಾಗಿದ್ದಾರೆ. ಆದರೆ ಮೈಸೂರಿನ ಮೃಗಾಲಯದಲ್ಲಿ ಈ ಬಿಸಿಲ ತಾಪ ಪ್ರಾಣಿಗಳು ಪಾತ್ರ ಖುಷಿಯಾಗಿದ್ದಾರೆ. ಇದಕ್ಕೆ ಕಾರಣ ಮೃಗಾಲಯದಲ್ಲಿ ಪ್ರಾಣಿಗಳ ಬೇಸಿಗೆ ಆರೈಕೆಗೆ ತೆಗೆದುಕೊಂಡ ಕ್ರಮ. ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗಿದೆ. ಮೃಗಾಲಯದಲ್ಲಿ ಪ್ರಾಣಿಗಳಿಗೆ ಆರಾಮದಾಯಕ ಫೀಲ್ ಕೊಡಲು ಮಾಂಸಹಾರಿ ಪ್ರಾಣಿಗಳಿಂದ ಸಸ್ಯಹಾರಿ ಪ್ರಾಣಿಗಳವರೆಗೂ
ವಾರಣಾಸಿ: ಪ್ರಿಯಕರನ ಜೊತೆ ಕುಳಿತುಕೊಂಡು ಯಾವುದೋ ವಿಚಾರವಾಗಿ ವಾಗ್ವಾದ ಮಾಡುತ್ತಿದ್ದ ಯುವತಿ ಇದ್ದಕ್ಕಿದ್ದಂತೆ ಗಂಗಾ ನದಿಗೆ ಹಾರಿದ ವಿಡಿಯೋವೊಂದು ವೈರಲ್ ಆಗಿದೆ. ಈ ಘಟನೆ ನಡೆದಿರುವುದು ವಾರಣಾಸಿಯ ಗಂಗಾ ನದಿ ತಟದಲ್ಲಿ. ಗಂಗಾ ನದಿ ತಟದಲ್ಲಿ ಸಾಕಷ್ಟು ಬೋಟ್ ಗಳು, ಜನರೂ ಇದ್ದರು. ಓರ್ವ ಯುವಕ ಮತ್ತು ಯುವತಿ ಜೊತೆಗೆ ಇನ್ನೋರ್ವ ಯುವಕನೂ ಕೂತಿದ್ದರು. ಯಾವುದೋ ವಿಚಾರವಾಗಿ ಯುವಕ ಯುವತಿಯನ್ನು ಕೈಯಲ್ಲಿ ಬಳಸಿಟ್ಟುಕೊಂಡು ಮನವೊಲಿಸಲು ಪ್ರಯತ್ನ ಮಾಡುತ್ತಿದ್ದ. ಆರಂಭದಲ್ಲಿ ಎಲ್ಲವೂ ಕೂಲ್ ಆಗಿಯೇ ನಡೆಯುತ್ತಿತ್ತು. ಆದರೆ ವಾಗ್ವಾದ ಜೋರಾಗಿದ್ದು ಯುವಕ ಯುವತಿಗೆ ಕೈ ಮಾಡುತ್ತಾನೆ.
ಮಡಿಕೇರಿ: ಈಚೆಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟು, ಮೊನ್ನೆಯಷ್ಟೇ ಕೊಡಗಿನಲ್ಲಿ ಅದ್ಧೂರಿಯಾಗಿ ಆರತಕ್ಷತೆ ನಡೆಸಿಕೊಂಡ ವಿಜಯ್ ರಶ್ಮಿಕಾ ಜೋಡಿಗೆ ಅವರ ರಶ್ಮಿಕಾ ತಂದೆ ಮದನ್ ಮಂದಣ್ಣ ದೊಡ್ಡ ಉಡುಗೊರೆಯನ್ನು ನೀಡಿದ್ದಾರೆ ಎನ್ನಲಾಗಿದೆ. ವಿರಾಜಪೇಟೆ ಚೆಂಚೆಬೆಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಕ್ಲೂರು ಗ್ರಾಮದ ನಿವಾಸಿ, ಮಾಜಿ ವಿರಾಜಪೇಟೆ ಪಟ್ಟಣ ಪಂಚಾಯಿತಿ ಸದಸ್ಯರಾಗಿದ್ದ ಮದನ್ ಮಂದಣ್ಣ ಮತ್ತು ಪತ್ನಿ ಸುಮನ್ ಮಂದಣ್ಣ ಅವರ ಹೆಸರಿನಲ್ಲಿದ್ದ ಸರ್ವೆ ಸಂಖ್ಯೆ 142/1 ಮತ್ತು 142/2 ಐಷಾರಾಮಿ (ಸೆರಿನಿಟಿ) ಮನೆಯನ್ನು ವಿರಾಜಪೇಟೆ ಉಪನೋಂದಣಿ ಕಚೇರಿಯಲ್ಲಿ ಮಗಳು ರಶ್ಮಿಕಾ ಮಂದಣ್ಣ ಹೆಸರಿಗೆ ಖಾತೆ ಬದಲಾವಣೆ ಮಾಡಿಕೊಟ್ಟಿದ್ದಾರೆ.
ನವದೆಹಲಿ: ಗುಜರಾತ್ನ ಜನರನ್ನು ಗುರಿಯಾಗಿಸಿ ಇತ್ತೀಚೆಗೆ ಮಾಡಿದ ಹೇಳಿಕೆಗಳಿಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಬುಧವಾರ ಕ್ಷಮೆಯಾಚಿಸಿದ್ದಾರೆ. ತಮ್ಮ ಹೇಳಿಕೆಗಳನ್ನು ಉದ್ದೇಶಪೂರ್ವಕವಾಗಿ ತಪ್ಪಾಗಿ ಅರ್ಥೈಸಲಾಗಿದೆ ಮತ್ತು ಭಾವನೆಗಳನ್ನು ನೋಯಿಸುವ ಉದ್ದೇಶವನ್ನು ಅವರು ಎಂದಿಗೂ ಹೊಂದಿಲ್ಲ ಎಂದು ಹೇಳಿದ್ದಾರೆ. ನಾನು ಯಾವತ್ತೂ ಗುಜರಾತಿನ ಜನರ ಭಾವನೆಗಳಿಗೆ ಧಕ್ಕೆ ತರುವುದು ನನ್ನ ಉದ್ದೇಶವಾಗಿರಲಿಲ್ಲ ಮತ್ತು ನಾನು ಯಾವಾಗಲೂ ಗೌರವವನ್ನು ಹೊಂದಿದ್ದೇನೆ.ಕೇರಳದ ಇಡುಕ್ಕಿ ಜಿಲ್ಲೆಯಲ್ಲಿ ಚುನಾವಣಾ ರ್ಯಾಲಿಯಲ್ಲಿ ಅವರು ಮಾಡಿದ ಹೇಳಿಕೆಯಿಂದ ರಾಜಕೀಯ ಗದ್ದಲ ಉಂಟಾದ
ವೈಭವ್ ಸೂರ್ಯವಂಶಿ ಬ್ಯಾಟಿಂಗ್ ವೈಖರಿಗೆ ಮುಂಬೈ ಕ್ಯಾಪ್ಟನ್ ಹಾರ್ದಿಕ್ ಪಾಂಡ್ಯ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಮುಂಬೈ ವಿರುದ್ಧ ನಡೆದಿದ್ದ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ತಂಡ 27ರನ್ಗಳಿಂದ ಗೆಲುವು ಸಾಧಿಸಿದೆ. ಮಳೆಯಿಂದಾಗಿ 11 ಓವರ್ ಪಂದ್ಯಾಟದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ರಾಜಸ್ಥಾನ ರಾಯಲ್ಸ್ನ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ ಹಾಗೂ ವೈಭವ್ ಸೂರ್ಯವಂಶಿ ಅವರು ಅಬ್ಬರಿಸಿದರು. ವೈಭವ್ ಸೂರ್ಯವಂಶಿ 14ಎಸೆತಕ್ಕೆ 39ರನ್ ಗಳಿಸುವ ಮೂಲಕ ಅಬ್ಬರದ ಬ್ಯಾಟಿಂಗ್ ಪ್ರದರ್ಶನ ನೀಡಿದರು. ಯಶಸ್ವಿ
ಬೆಂಗಳೂರು: ಬಿಜೆಪಿ ಮತ್ತು ಆರ್ಎಸ್ಎಸ್ ವಿರುದ್ಧ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿರುವುದು ಹತಾಶವಾದ ಮಾನಸಿಕ ಅಸ್ವಸ್ಥತೆಯನ್ನು ಪ್ರತಿಬಿಂಬಿಸುವ ರೀತಿ ಇದೆ. ಖರ್ಗೆ ಅವರ ವಿರುದ್ಧ ಸ್ವಯಂಪ್ರೇರಿತ ದೂರು ದಾಖಲಿಸಿ ಯೋಗ್ಯ ಚಿಕಿತ್ಸೆ ಕೊಡಿಸಿ. ರಾಜಕೀಯ ನಿವೃತ್ತಿ ಕೊಡಿಸಿ ಎಂದು ಮಾಜಿ ಸಚಿವ ಸಿ ಟಿ ರವಿ ಅವರು ಆಗ್ರಹಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಅವರು ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಖರ್ಗೆ ಅವರು ಆರು ದಶಕಗಳ ಕಾಲ ರಾಜಕಾರಣದಲ್ಲಿ ಹಲವಾರು ಹುದ್ದೆಗಳನ್ನು ಅನುಭವಿಸಿ ಇಂತಹ ಹೇಳಿಕೆ ನೀಡುವುದು ಒಳ್ಳೆಯದಲ್ಲ.
ಚೆನ್ನೈ: ಸನಾತನ ಧರ್ಮವೆಂದರೆ ಡೆಂಘಿ, ಕೊರೋನಾ ಇದ್ದಂತೆ. ಇದನ್ನು ನಿವಾರಣೆ ಮಾಡಬೇಕು ಎಂದು ಭಾಷಣ ಬಿಗಿದಿದ್ದ ಡಿಎಂಕೆ ನಾಯಕ, ತಮಿಳುನಾಡು ಉಪಮುಖ್ಯಮಂತ್ರಿ ಉದಯನಿಧಿ ಸ್ಟಾಲಿನ್ ಈಗ ಟೆಂಪಲ್ ರನ್ ಮಾಡುತ್ತಿದ್ದಾರೆ. ತಮಿಳುನಾಡಿನಲ್ಲಿ ವಿಧಾನಸಭೆಗೆ ಏಪ್ರಿಲ್ 23 ರಂದು ಚುನಾವಣೆ ನಡೆಯಲಿದೆ. ಈ ಚುನಾವಣೆಗೆ ಡಿಎಂಕೆ ಸೇರಿದಂತೆ ಎಲ್ಲಾ ಪಕ್ಷಗಳೂ ಈಗ ಪ್ರಚಾರದಲ್ಲಿ ತೊಡಗಿಸಿಕೊಂಡಿವೆ. ಈ ನಡುವೆ ಉದಯನಿಧಿ ಸ್ಟಾಲಿನ್ ಪ್ರಚಾರದ ನಡುವೆ ದೇವಾಲಯವೊಂದಕ್ಕೆ ತೆರಳಿ ತಿಲಕವಿರಿಸಿಕೊಂಡ ವಿಡಿಯೋವೊಂದು ವೈರಲ್ ಆಗಿದೆ.
ಬೆಂಗಳೂರು: ಅಡಿಕೆ ಬೆಲೆ ಕಳೆದ ವಾರ ಏರಿಕೆ-ಇಳಿಕೆಯಾಗಿತ್ತು. ಕಳೆದ ವಾರದಂತೆ ಈ ವಾರವೂ ಅದೇ ಟ್ರೆಂಡ್ ಮುಂದುವರಿದಿದೆ. ಇಂದು ಅಡಿಕೆ ಮತ್ತು ಕಾಳು ಮೆಣಸು, ಕೊಬ್ಬರಿ ದರ ಹೇಗಿದೆ ಇಲ್ಲಿದೆ ವಿವರ. ಕಳೆದ ವಾರ ಅಡಿಕೆ ಬೆಲೆಯಲ್ಲಿ ಕೊಂಚ ಏರಿಳಿಕೆಯಾಗುತ್ತಲೇ ಇತ್ತು. ಕಳೆದ ವಾರ ಎರಡು ದಿನ ಸತತವಾಗಿ ಬೆಲೆ ಏರಿಕೆ ಕಂಡುಬರುತ್ತಿತ್ತು. ಅಡಿಕೆ ಬೆಲೆಯಲ್ಲಿ ನಿನ್ನೆ ಕೊಂಚ ಏರಿಕೆಯಾಗಿತ್ತು. ಆದರೆ ಇಂದು ಯಥಾಸ್ಥಿತಿಯಲ್ಲಿದೆ ಹೊಸ ಅಡಿಕೆ ಬೆಲೆ 500 ರೂ.ಗಳಷ್ಟಿದೆ. ಹಳೆ ಅಡಿಕೆ ಬೆಲೆ 555 ರೂ. ಗಳಾಗಿದೆ. ಡಬಲ್ ಚೋಲ್ ಬೆಲೆಯೂ 555 ರೂ.ಗಳಷ್ಟಾಗಿದೆ.
ಬೆಂಗಳೂರು: ಕಳೆದ ಕೆಲವು ದಿನಗಳಿಂದ ಚಿನ್ನದ ದರ ಏರಿಕೆ, ಇಳಿಕೆಯಾಗುತ್ತಲೇ ಇದೆ. ಇಂದು ಪರಿಶುದ್ಧ ಚಿನ್ನದ ದರ ಇಳಿಕೆಯಾಗಿದೆ ಮತ್ತುಇತರೆ ಚಿನ್ನದ ದರ ಏರಿಕೆಯಾಗಿದೆ. ಇಂದು ಪರಿಶುದ್ಧ ಚಿನ್ನದ ದರ ಮತ್ತು ಇತರೆ ಚಿನ್ನದ ದರ ವಿವರ ಇಲ್ಲಿದೆ ನೋಡಿ. ಚಿನ್ನದ ದರ ಏರಿಕೆಕಳೆದ ವಾರ ಪರಿಶುದ್ಧ ಚಿನ್ನದ ದರ ಸತತವಾಗಿ ಬೆಲೆ ಏರಿಳಿಕೆಯಾಗುತ್ತಲೇ ಇತ್ತು. ಆದರೆ ವಾರಂತ್ಯಕ್ಕೆ ಪರಿಶುದ್ಧ ಚಿನ್ನದ ದರದಲ್ಲಿ ಕೊಂಚ ಇಳಿಕೆಯಾಗಿತ್ತು. ಪರಿಶುದ್ಧ ಚಿನ್ನದ ದರ ವಾರಂತ್ಯಕ್ಕೆ 1,53,955.00 ರೂ.ಗಳಿತ್ತು. ಆದರೆ ಇಂದು ಇಳಿಕೆಯಾಗಿದ್ದು 1,53,075.00 ರೂ.ಗಳಷ್ಟಿದೆ.
ನವದೆಹಲಿ: ಇರಾನ್ ಮತ್ತು ಅಮೆರಿಕಾ ನಡುವೆ ಕದನ ವಿರಾಮ ವಿಚಾರದಲ್ಲಿ ಪಾಕಿಸ್ತಾನ ಮಧ್ಯಸ್ಥಿಕೆ ವಹಿಸಿರುವ ಕುರಿತಂತೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ವಕ್ತಾರ ಜೈ ರಾಂ ರಮೇಶ್ ವಿಶ್ವ ಗುರು ಎಂದು ಕರೆಯಿಸಿಕೊಳ್ಳುವ ಮೋದಿ ಫೇಲ್ ಆಗಿರುವುದಕ್ಕೆ ಇದು ಉದಾಹರಣೆ ಎಂದಿದ್ದಾರೆ. ಇರಾನ್ ಮೇಲೆ ಭೀಕರ ದಾಳಿ ನಡೆಸಲು ಹೊರಟಿದ್ದ ಅಮೆರಿಕಾ ನಿನ್ನೆ ದಿಡೀರ್ 15 ದಿನಗಳ ಕದನ ವಿರಾಮ ಘೋಷಿಸಿದೆ. ಕದನ ವಿರಾಮ ಘೋಷಿಸಲು ಪಾಕಿಸ್ತಾನ ಪ್ರಧಾನಿ ಶಹಬಾಜ್ ಷರೀಫ್ ಮತ್ತು ಸೇನಾ ನಾಯಕ ಆಸಿಫ್ ಮುನೀರ್ ನಡೆಸಿದ ಸಂಧಾನ ಪ್ರಮುಖ ಪಾತ್ರ ವಹಿಸಿದೆ ಎಂದು ಸ್ವತಃ ಟ್ರಂಪ್ ಹೇಳಿಕೆ ನೀಡಿದ್ದರು.
ಬೆಂಗಳೂರು: ಹೆಚ್ಚಿನವರಿಗೆ ಜಾತಕದಲ್ಲಿ ಕುಜ ರಾಹು ಸಂಧಿಯ ದೋಷಗಳಿರುತ್ತವೆ. ಇದರಿಂದ ಆರೋಗ್ಯ, ಮಾನಸಿಕ ನೆಮ್ಮದಿಗೆ ಭಂಗವಾಗಬಹುದು. ಕುಜ ರಾಹು ದೋಷವಿದ್ದಾಗ ಯಾವ ವಸ್ತುಗಳನ್ನು ದಾನ ಮಾಡಿದರೆ ದೋಷದ ಪರಿಣಾಮ ಕಡಿಮೆಯಾಗಬಹುದು ನೋಡಿ. ಕುಜ ರಾಹು ಪೈಕಿ ಕುಜನನ್ನು ಆಳುವವನು ಸುಬ್ರಹ್ಮಣ್ಯ ದೇವರು, ರಾಹುವಿಗೆ ದುರ್ಗಾ ದೇವಿ ಅಧಿದೇವತೆ. ಹೀಗಾಗಿ ಈ ದೋಷವಿದ್ದಾಗ ಸುಬ್ರಹ್ಮಣ್ಯನ ದೇವಸ್ಥಾನಕ್ಕೆ ಹೋಗುವುದು, ದುರ್ಗಾ ಸಪ್ತಶತಿ ಪಾರಾಯಣ ಮಾಡಿದಲ್ಲಿ ನೆಮ್ಮದಿ ಸಿಗುವುದು. ಈ ದೋಷವಿದ್ದಾಗ ಹೆಸರು ಬೇಳೆ, ತಾಮ್ರದ ವಸ್ತು, ಬೆಲ್ಲ, ಗೋಧಿ, ಕಪ್ಪು ಉದ್ದು, ಕಪ್ಪು ಹೊದಿಕೆ, ಸಾಸಿವೆ ಎಣ್ಣೆ ದಾನ ಮಾಡಬಹುದು.
ವಾಷಿಂಗ್ಟನ್: ಯುದ್ಧ ಮಾಡಿದ್ದು ಯಾಕೆ, ದಿಡೀರ್ ಆಗಿ ಕದನ ವಿರಾಮ ಘೋಷಿಸಿದ್ದು ಯಾಕೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಿರುದ್ಧ ಈಗ ಅಲ್ಲಿನ ಸಂಸದರೇ ತಿರುಗಿಬಿದ್ದಿದ್ದಾರೆ. ಇಸ್ರೇಲ್ ಆರಂಭಿಸಿದ್ದ ಯುದ್ಧಕ್ಕೆ ಅಮೆರಿಕಾ ಮೂಗು ತೂರಿಸಿತ್ತು. ಬಳಿಕ ಇದು ಇರಾನ್ ಮತ್ತು ಅಮೆರಿಕಾ ನಡುವಿನ ಯುದ್ಧವಾಗಿ ಮಾರ್ಪಟ್ಟಿತು. ಪರಿಣಾಮ ಅಮೆರಿಕಾ ಬೆಂಬಲಿಸುವ ರಾಷ್ಟ್ರಗಳ ಮೇಲೆಲ್ಲಾ ಇರಾನ್ ದಾಳಿ ಮಾಡಿತು. ಇರಾನ್-ಇಸ್ರೇಲ್ ನಡುವಿನ ಯುದ್ಧದಲ್ಲಿ ಮೂಗು ತೂರಿಸಿದ್ದಕ್ಕೆ ಅಮೆರಿಕಾದಲ್ಲೇ ಅಸಮಾಧಾನದ ಅಲೆ ಎದ್ದಿತ್ತು. ಯಾರದ್ದೋ ಯುದ್ಧದಲ್ಲಿ ನಮ್ಮ ಸೈನಿಕರನ್ನು ಯಾಕೆ ಬಲಿಕೊಡುತ್ತೀರಿ ಎಂದು ಅಲ್ಲಿನ ಡೆಮಾಕ್ರಾಟಿಕ್ ಪಕ್ಷ ಆಕ್ರೋಶ ವ್ಯಕ್ತಪಡಿಸಿತ್ತು.
ಓರ್ವ ಬಾಲಕ ನೆಲದ ಮೇಲೆ ಕುಳಿತುಕೊಂಡು ದಮ್ ಮಾರೋ ದಮ್ ಎಂದು ಮೇಲಿಂದ ಮೇಲೆ ಸಿಗರೇಟು ಸೇದುತ್ತಿದ್ದರೆ ಜನ ಸಿಗರೇಟು ಬಾಬ ಎಂದು ದುಡ್ಡಿನ ಮಳೆಯನ್ನೇ ಸುರಿಸುತ್ತಾರೆ. ಇಂತಹದ್ದೊಂದು ವಿಡಿಯೋ ಇಲ್ಲಿದೆ ನೋಡಿ. ನಮ್ಮ ದೇಶದಲ್ಲಿ ಕೆಲವರು ನಂಬಿಕೆಗಿಂತ ಮೂಡನಂಬಿಕೆಗಳಿಗೆ ಮರುಳಾಗುವುದೇ ಹೆಚ್ಚು. ಎಷ್ಟೇ ಮೋಸ, ವಂಚನೆ ನಡೆದರೂ ಇಂತಹ ನಕಲಿ ಬಾಬಗಳಿಗೆ ಮಾರು ಹೋಗುವುದು ಮಾತ್ರ ತಪ್ಪಲ್ಲ. ಅಂತಹದ್ದೇ ಸಿಗರೇಟು ಬಾಬನ ವಿಡಿಯೋ ಇದು. ಇಲ್ಲೊಬ್ಬ ಬಾಲಕ ನೆಲದ ಮೇಲೆ ಮಂಡಿಯೂರಿ ಕುಳಿತು ವಿಚಿತ್ರವಾಗಿ ಮೈ ಎಲ್ಲಾ ಅಲುಗಾಡಿಸುತ್ತಿದ್ದಾನೆ. ಆತನಿಗೆ ಒಬ್ಬರಾದ ಮೇಲೆ ಒಬ್ಬರು ಸಿಗರೇಟು ಬಾಯಿಗಿಡುತ್ತಾರೆ.
ಟೆಹ್ರಾನ್: ಅಮೆರಿಕಾ ಮತ್ತು ಇರಾನ್ ನಡುವೆ ಯುದ್ಧಕ್ಕೆ 15 ದಿನಗಳ ವಿರಾಮ ಸಿಕ್ಕಿದೆ. 15 ದಿನಗಳ ಕದನ ವಿರಾಮ ಘೋಷಣೆಯಾಗುತ್ತಿದ್ದಂತೇ ಇರಾನ್ ನಲ್ಲಿ ಸಂಭ್ರಮಾಚರಣೆ ನಡೆಸಲಾಗಿದೆ. ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನಿನ್ನೆ ರಾತ್ರಿ ಇರಾನ್ ಸರ್ವನಾಶ ಮಾಡುವುದಾಗಿ ಬೆದರಿಕೆ ಹಾಕಿದ್ದರು. ಈ ಹಿನ್ನಲೆಯಲ್ಲಿ ಇರಾನ್ ನಾಗರಿಕರು ತಮ್ಮ ದೇಶದ ಪ್ರಮುಖ ಸ್ಥಳಗಳಲ್ಲಿ ಮಾನವ ಸರಪಳಿ ನಿರ್ಮಿಸಿ ದೇಶ ರಕ್ಷಣೆಗೆ ಮುಂದಾಗಿದ್ದರು. ಆದರೆ ಭೀಕರ ದಾಳಿ ನಡೆಯುವ ಕೆಲವೇ ಕ್ಷಣಗಳ ಮುನ್ನ ಅಮೆರಿಕಾ-ಇರಾನ್ ನಡುವೆ ಕದನ ವಿರಾಮವೇರ್ಪಟ್ಟಿದೆ. ಹೊರ್ಮುಜ್ ಜಲಸಂಧಿ ಮುಕ್ತವಾಗಿಸಲು ಇರಾನ್ ಒಪ್ಪಿಕೊಂಡಿದೆ.
ಇಸ್ಲಾಮಾಬಾದ್: ಭಾರತದಲ್ಲೂ ಪೆಟ್ರೋಲ್ ಸಿಗ್ತಿಲ್ಲ ಎಂದು ತನ್ನ ದೇಶದ ಜನರ ಮುಂದೆ ಪಾಕಿಸ್ತಾನದ ಪ್ರಧಾನಿ ಸಹಾಯಕ ಹುದ್ದೆಯಲ್ಲಿರುವ ಅಧಿಕಾರಿ ಪುಂಗಿ ಬಿಟ್ಟಿದ್ದಾನೆ. ಈ ವಿಡಿಯೋ ಇಲ್ಲಿದೆ ನೋಡಿ. ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಯುದ್ಧದ ವಾತಾವರಣದಿಂದ ಬಹುತೇಕ ರಾಷ್ಟ್ರಗಳು ಇಂಧನ ಬಿಕ್ಕಟ್ಟು ಎದುರಿಸುತ್ತಿವೆ. ಅದರಲ್ಲೂ ಪಾಕಿಸ್ತಾನದಲ್ಲಂತೂ ಪೆಟ್ರೋಲ್ ಅಭಾವ ಬಿಗಡಾಯಿಸಿದ್ದು ಲೀಟರ್ ಪೆಟ್ರೋಲ್ ಬೆಲೆ 450 ರೂ. ದಾಟಿದೆ. ಇದರಿಂದಾಗಿ ಜನ ಅಲ್ಲಿನ ಸರ್ಕಾರಕ್ಕೆ ಹಿಡಿಶಾಪ ಹಾಕುತ್ತಿದ್ದಾರೆ. ಹೀಗಾಗಿ ಜನರನ್ನು ಸಮಾಧಾನಪಡಿಸಲು ಪ್ರಧಾನಿಯ ವಿಶೇಷ ಸಹಾಯಕ ಹುದ್ದೆಯಲ್ಲಿರುವ ವ್ಯಕ್ತಿ ನೋಡಿ ಬಹುತೇಕ ರಾಷ್ಟ್ರಗಳಲ್ಲಿ ಪೆಟ್ರೋಲ್ ಸಿಗುತ್ತಿಲ್ಲ.
ಗುವಾಹಟಿ: ಮುಂಬೈ ಇಂಡಿಯನ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಆರಂಭಿಕ ವೈಭವ್ ಸೂರ್ಯವಂಶಿ ಸ್ಪೋಟಕ ಬ್ಯಾಟಿಂಗ್ ನಡೆಸಿದ್ದಾರೆ. ಅದರಲ್ಲೂ ವಿಶ್ವ ನಂಬರ್ 1 ಬೌಲರ್ ಜಸ್ಪ್ರೀತ್ ಬುಮ್ರಾ ಬೌಲಿಂಗ್ ನಲ್ಲಿ ಹೊಡೆದ ಎರಡು ಸಿಕ್ಸರ್ ವಿಡಿಯೋ ವೈರಲ್ ಆಗಿದೆ. ಮುಂಬೈ ಇಂಡಿಯನ್ಸ್ ವಿರುದ್ಧ ನಿನ್ನೆ ನಡೆದ ಪಂದ್ಯ ಮಳೆಯಿಂದಾಗಿ 11 ಓವರ್ ಗೆ ಸೀಮಿತವಾಗಿತ್ತು. ರಾಜಸ್ಥಾನ್ ಪರ ಯಶಸ್ವಿ ಜೈಸ್ವಾಲ್, ವೈಭವ್ ಅಬ್ಬರದ ಆರಂಭ ನೀಡಿದ್ದರು. ಮೂರು ಓವರ್ ಗಳಾಗುವಷ್ಟರಲ್ಲಿ ರಾಜಸ್ಥಾನ್ 50 ರನ್ ದಾಟಿತ್ತು.
ಗುವಾಹಟಿ: ಐಪಿಎಲ್ 2026 ರಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಭರ್ಜರಿ ಆರಂಭ ಪಡೆದೂ ಔಟಾದಾಗ ಬೇಸರಗೊಂಡ ಹಾಲುಗಲ್ಲದ ಹೀರೋ ವೈಭವ್ ಸೂರ್ಯವಂಶಿ ಕಣ್ಣೀರು ಹಾಕುತ್ತಲೇ ಪೆವಿಲಿಯನ್ ಗೆ ಹೋಗಿದ್ದಾರೆ. ಮುಂಬೈ ಇಂಡಿಯನ್ಸ್ ವಿರುದ್ಧ ನಿನ್ನೆ ನಡೆದ ಪಂದ್ಯ ಮಳೆಯಿಂದಾಗಿ 11 ಓವರ್ ಗೆ ಸೀಮಿತವಾಗಿತ್ತು. ರಾಜಸ್ಥಾನ್ ಪರ ಯಶಸ್ವಿ ಜೈಸ್ವಾಲ್, ವೈಭವ್ ಅಬ್ಬರದ ಆರಂಭ ನೀಡಿದ್ದರು. ಮೂರು ಓವರ್ ಗಳಾಗುವಷ್ಟರಲ್ಲಿ ರಾಜಸ್ಥಾನ್ 50 ರನ್ ದಾಟಿತ್ತು.ಆದರೆ 14 ಎಸೆತಗಳಲ್ಲಿ 39 ರನ್ ಗಳಿಸಿ ಚಚ್ಚಿದ್ದರು.
ಇಸ್ಲಾಮಾಬಾದ್: ಇರಾನ್, ಅಮೆರಿಕಾ ಯುದ್ಧ ನಿಲ್ಲಿಸಿದ್ದು ನಾವೇ, ನಮ್ಮ ಪ್ರಧಾನಿ ತುಂಬಾ ಸ್ಟ್ರಾಂಗ್ ಎಂದು ಪಾಕಿಸ್ತಾನಿಯರು ಈಗ ಸೋಷಿಯಲ್ ಮೀಡಿಯಾದಲ್ಲಿ ಕೊಚ್ಚಿಕೊಳ್ಳುತ್ತಿದ್ದಾರೆ. ಇರಾನ್ ಮತ್ತು ಅಮೆರಿಕಾ-ಇಸ್ರೇಲ್ ನಡುವೆ 15 ದಿನಗಳ ಕದನ ವಿರಾಮವಾಗಿದೆ. ಇದಕ್ಕೆ ಪಾಕಿಸ್ತಾನ ಪ್ರಧಾನಿ ಶಹಬಾಜ್ ಷರೀಫ್ ಮತ್ತು ಆಸಿಫ್ ಮುನೀರ್ ಮಧ್ಯಸ್ಥಿಕೆ ವಹಿಸಿದ್ದಾರೆ ಎಂದು ಸ್ವತಃ ಡೊನಾಲ್ಡ್ ಟ್ರಂಪ್ ಹೇಳಿಕೆಯಲ್ಲಿ ಉಲ್ಲೇಖಿಸಿದ್ದಾರೆ. ಇದು ಪಾಕಿಸ್ತಾನಿಯರನ್ನು ಹೊನ್ನ ಶೂಲಕ್ಕೇರಿಸಿದೆ. ಭಾರತದ ವಿರುದ್ಧ ಯುದ್ಧ ಗೆದ್ದಿದ್ದೇವೆ, ಬಿಎಲ್ಎ, ಟಿಟಿಪಿ ಉಗ್ರರಿಗೆ ಸಿಂಹ ಸ್ವಪ್ನರಾಗಿದ್ದೇವೆ.
ಬೆಂಗಳೂರು: ರಾಜ್ಯದಲ್ಲಿ ಈಗ ಬೇಸಿಗೆ ರುದ್ರತಾಂಡವವಾಡುತ್ತಿದೆ. ಇಂದಂತೂ ಈ ಕೆಲವು ಜಿಲ್ಲೆಗಳಲ್ಲಿ ತಾಪಮಾನ ವಿಪರೀತ ಏರಿಕೆಯಾಗಲಿದ್ದು, ಬಿಸಿಲಿನಿಂದ ಹೈರಾಣಾಗಲಿದ್ದೀರಿ. ಈ ವಾರಂತ್ಯಕ್ಕೆ ಕೆಲವು ಜಿಲ್ಲೆಗಳಲ್ಲಿ ಮಳೆಯ ಸೂಚನೆಯಿದೆ. ಆದರೆ ಇಂದು ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ವಿಪರೀತ ಬಿಸಿಲಿನ ವಾತಾವರಣ ಕಂಡುಬರಲಿದೆ. ಇಂದು ಯಾವುದೇ ಜಿಲ್ಲೆಗಳಲ್ಲಿ ಮಳೆಯ ಸೂಚನೆಯಿಲ್ಲ ಎಂದು ಹವಾಮಾನ ವರದಿಗಳು ಹೇಳುತ್ತಿವೆ. ಆದರೆ ವಿಜಯಪುರ, ಬಳ್ಳಾರಿ, ರಾಯಚೂರು ಜಿಲ್ಲೆಗಳಲ್ಲಂತೂ ಇಂದು ಗರಿಷ್ಠ ತಾಪಮಾನ 38 ಡಿಗ್ರಿಯಷ್ಟು ತಲುಪಲಿದ್ದು ವಿಪರೀತ ಬಿಸಿಲಿನ ವಾತಾವರಣವಿರಲಿದೆ.
ವಾಷಿಂಗ್ಟನ್: ಇರಾನ್ ಮೇಲೆ ಭೀಕರ ದಾಳಿ ನಡೆಸುವುದಾಗಿ ಬೆದರಿಕೆ ಹಾಕಿದ್ದ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕೊನೆಯ ಗಳಿಗೆಯಲ್ಲಿ ತಮ್ಮ ನಿರ್ಧಾರದಿಂದ ಹಿಂದೆ ಸರಿದಿದ್ದು 15 ದಿನಗಳ ಕದನ ವಿರಾಮಕ್ಕೆ ಒಪ್ಪಿದ್ದಾರೆ. ಪಾಕಿಸ್ತಾನದ ಮಧ್ಯಸ್ಥಿಕೆಯಲ್ಲಿ ಇರಾನ್ ಮತ್ತು ಅಮೆರಿಕಾ ನಡುವೆ ಸಂಧಾನ ಮಾತುಕತೆ ಯಶಸ್ವಿಯಾಗಿದ್ದು 15 ದಿನಗಳ ಕದನ ವಿರಾಮ ನೀಡಲು ಎರಡೂ ದೇಶಗಳು ಒಪ್ಪಿಗೆ ಎಂದು ತಿಳಿದುಬಂದಿದೆ. ಇದು ಜಗತ್ತಿಗೇ ಶುಭ ಸುದ್ದಿಯಾಗಿದೆ. ಆದರೆ ಇದನ್ನು ಎರಡೂ ದೇಶಗಳು ಎಷ್ಟರ ಮಟ್ಟಿಗೆ ಪಾಲಿಸುತ್ತವೆ ಎಂದು ನೋಡಬೇಕಿದೆ.
ಇಂದು ಬುಧವಾರವಾಗಿದ್ದು ಗಣೇಶನಿಗೆ ವಿಶೇಷವಾದ ದಿನವಾಗಿದೆ. ಸಕಲ ವಿಘ್ನ ನಿವಾರಣೆಗೆ, ಗಣಪತಿ ದೇವರ ಅನುಗ್ರಹಕ್ಕಾಗಿ ಇಂದು ಗಣೇಶನ ಮೂಲಮಂತ್ರವನ್ನು ಓದಿ. ಕನ್ನಡದಲ್ಲಿ ಇಲ್ಲಿದೆ.॥ ಮೂಲಮಂತ್ರಮ್ ॥॥ ಓಂ ಹ್ರೀಂ ಶ್ರೀಂ ಕ್ಲೀಂ ಗ್ಲೌಂ ಗಂ ಗಣಪತಯೇ ವರವರದಸರ್ವಜನಂ ಮೇ ವಶಮಾನಯ ಸ್ವಾಹಾ ॥ ॥ ಅಥ ಸ್ತೋತ್ರಂ॥ಓಂ ಇತ್ಯೇತದಜಸ್ಯ ಕಂಠವಿವರಂ ಭಿತ್ವಾ ಬಹಿರ್ನಿರ್ಗತಂಹ್ಯೋಮಿತ್ಯೇವ ಸಮಸ್ತಕರ್ಮ ಋಷಿಭಿಃ ಪ್ರಾರಭ್ಯತೇ ಮಾನುಷೈಃ ।ಓಮಿತ್ಯೇವ ಸದಾ ಜಪಂತಿ ಯತಯಃ ಸ್ವಾತಮೈಕನಿಷ್ಠಾಃ ಪರಂಹ್ಯೋಂಕಾರಾಕೃತಿವಕ್ತ್ರಮಿಂದುನಿಟಿಲಂ ವಿಘ್ನೇಶ್ವರಂ ಭವಾಯೇ ॥ 1॥ ಶ್ರೀಂಬೀಜಂ ಶ್ರಮದುಃಖಜನ್ಮಮರಣವ್ಯಾಧ್ಯಾಧಿಭೀನಾಶಕಂಮೃತ್ಯುಕ್ರೋಧನಶಾಂತಿಬಿಂದುವಿಲಸದ್ವರ್ಣಾಕೃತಿಶ್ರೀಪ್ರದಮ್ ।ಸ್ವಾಂತಃಸ್ವಾತ್ಮಶರಸ್ಯ ಲಕ್ಷ್ಯಮಜರಸ್ವಾತ್ಮಾವಬೋಧಪ್ರದಂಶ್ರೀಶ್ರೀನಾಯಕಸೇವಿತೇ ಭವದನಪ್ರೇಮಾಸ್ಪದಂ ಭಾವಯೇ ॥ 2॥
ಗುವಾಹಟಿ: ಅಸ್ಸಾಂ, ಕೇರಳಂ ಮತ್ತು ಪುದುಚೇರಿಯಲ್ಲಿ ನಡೆಯಲಿರುವ ಚುನಾವಣೆಗೆ ಇಂದು ಅಧಿಕೃತವಾಗಿ ಪಕ್ಷಗಳ ನಾಯಕರ ಪ್ರಚಾರ ಕೊನೆಗೊಂಡಿದೆ. ಅಸ್ಸಾಂನ 126, ಕೇರಳದ 140 ಮತ್ತು ಪುದುಚೇರಿಯ 30 ಸ್ಥಾನಗಳಿಗೆ ಗುರುವಾರ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಆರೋಗ್ಯ ಸಚಿವ ಜೆಪಿ ನಡ್ಡಾ, ಬಿಜೆಪಿ ಮುಖ್ಯಸ್ಥ ನಿತಿನ್ ನಬಿನ್ ಮತ್ತು ಕಾಂಗ್ರೆಸ್ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಅವರು ತಮ್ಮ ಅಭ್ಯರ್ಥಿಗಳ ಭವಿಷ್ಯವನ್ನು ಹೆಚ್ಚಿಸಲು ರ್ಯಾಲಿಗಳನ್ನು ನಡೆಸಿದರು.
ಟೆಹ್ರಾನ್: ಇಂದು ರಾತ್ರಿ ಇಡೀ ದೇಶವೇ ನಾಶವಾಗುತ್ತದೆ ಎಂದು ಇರಾನ್ ಗೆ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬೆದರಿಕೆ ಹಾಕಿದ್ದಾರೆ. ಇದಕ್ಕೆ ಇರಾನ್ ನಾಗರಿಕರು ಮಾಡಿದ್ದೇನು ಗೊತ್ತಾ? ಇಲ್ಲಿದೆ ವಿಡಿಯೋ. ಒಪ್ಪಂದಕ್ಕೆ ಬಗ್ಗದ ಇರಾನ್ ಮೇಲೆ ಸಿಟ್ಟಿಗೆದ್ದಿರುವ ಡೊನಾಲ್ಡ್ ಟ್ರಂಪ್ ಈಗ ಅಂತಿಮ ಅಸ್ತ್ರ ಬಳಸಲು ಮುಂದಾಗಿದ್ದಾರೆ. ಇಂದು ರಾತ್ರಿಯೇ ಇರಾನ್ ಗೆ ಕೊನೆಯ ಅವಕಾಶ ಎಂದು ಘೋಷಿಸಿದ್ದು ಇದನ್ನು ಮೀರಿದರೆ ಇಡೀ ದೇಶವನ್ನೇ ನಾಶ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ.
ಬೆಂಗಳೂರು: ಅಸ್ಸಾಂ ಚುನಾವಣಾ ಪ್ರಚಾರದಲ್ಲಿ ಬಿಜೆಪಿ ಮತ್ತು ಆರ್ಎಸ್ಎಸ್ ಕುರಿತು ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಚೋದನಾಕಾರಿ ಭಾಷಣ ಮಾಡಿದ್ದು, ಅವರನ್ನು ಕೂಡಲೇ ಬಂಧಿಸಬೇಕೆಂದು ಒತ್ತಾಯಿಸಿ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಅವರಿಗೆ ಇಂದು ಬಿಜೆಪಿ ನಿಯೋಗದಿಂದ ಮನವಿ ಸಲ್ಲಿಸಲಾಗಿದೆ.ನಿಯೋಗದಲ್ಲಿ ಶಾಸಕರಾದ ಎಸ್. ಮುನಿರಾಜು, ಸಿ. ಕೆ. ರಾಮಮೂರ್ತಿ, ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷರಾದ ಎಸ್. ಹರೀಶ್, ರಾಜ್ಯ ವಕ್ತಾರರಾದ ಪ್ರಕಾಶ್ ಎಸ್. ಮತ್ತು ಪ್ರಮುಖರು ಇದ್ದರು.ಈ ವೇಳೆ ಮಾತನಾಡಿದ ಶಾಸಕ ಎಸ್.ಮುನಿರಾಜು ಅವರು, ಬಿಜೆಪಿ ಮತ್ತು ಆರೆಸ್ಸೆಸ್ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರ ವಿರುದ್ಧ ಮೊಕದ್ದಮೆ ದಾಖಲಿಸಿ ಅವರನ್ನು ಬಂಧಿಸಲು ಒತ್ತಾಯಿಸಲಾಗಿದೆ.
ಗುವಾಹಟಿ: ಇಂಡಿಯನ್ ಪ್ರೀಮಿಯರ್ ಲೀಗ್ನ 13ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು ಮುಖಾಮುಖಿಯಾಗಲಿದೆ. ಗುವಾಹಟಿಯ ಬರ್ಸಪರಾ ಕ್ರಿಕೆಟ್ ಸ್ಟೇಡಿಯಂನಲ್ಲಿ ಮಳೆಯಾಗುತ್ತಿರುವುದರಿಂದ ಟಾಸ್ ವಿಳಂಬವಾಗಿದೆ. ಮಳೆ ಸ್ಥಗಿತವಾಗದಿದ್ದಲ್ಲಿ ಪಂದ್ಯ ರದ್ದಾಗುವ ಸಾಧ್ಯತೆ ಇದೆ.ಸೋಮವಾರ ಪಂಜಾಬ್ ಕಿಂಗ್ಸ್ ಮತ್ತು ಕೋಲ್ಕತ್ತ ನೈಟ್ ರೈಡರ್ಸ್ ನಡುವಿನ ಪಂದ್ಯವೂ ಮಳೆಗೆ ಆಹುತಿಯಾಗಿತ್ತು. ಈಡನ್ ಗಾರ್ಡನ್ ನಲ್ಲಿ ನಡೆಯಬೇಕಿದ್ದ ಪಂದ್ಯ ರದ್ದಾಗಿ ಉಭಯ ತಂಡಗಳಿಗೆ ತಲಾ ಒಂದು ಅಂಕ ಹಂಚಲಾಗಿತ್ತು. ರಾಜಸ್ಥಾನ್ ರಾಯಲ್ಸ್ ತಂಡವು ಕಳೆದ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ರೋಚಕ ಜಯ ಸಾಧಿಸಿದ್ದು, ಈ ಗೆಲುವಿನ ಮೂಲಕ ಅಂಕ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ.
ಬೆಂಗಳೂರು: ಸ್ಯಾಂಡಲ್ವುಡ್ನಲ್ಲಿ ರಾಮಧಾನ್ಯ, ಅಬ್ಬರ, ಮಿ. ಬ್ಯಾಚುಲರ್, ಫ್ಲರ್ಟ್ ಇನ್ನಿತರ ಸಿನಿಮಾಗಳಲ್ಲಿ ನಟಿಸಿರುವ ನಿಮಿಕಾ ರತ್ನಾಕರ್ ಅವರು ಸದ್ದಿಲ್ಲದೆ ಹಸೆಮಣೆಯೇರಿದ್ದಾರೆ.2018ರಲ್ಲಿ ನಟಿಯಾಗಿ ಸ್ಯಾಂಡಲ್ವುಡ್ಗೆ ಎಂಟ್ರಿ ಕೊಟ್ಟ ನಿಮಿಕಾ ರತ್ನಾಕರ್. ರಾಮಧಾನ್ಯ ಚಿತ್ರದಲ್ಲಿ ಬಣ್ಣ ಹಚ್ಚಿದ್ದರು. ಆನಂತರ ಹೆಚ್ಚು ಜನಪ್ರಿಯತೆ ಗಳಿಸಿದ್ದು ಕ್ರಾಂತಿ ಚಿತ್ರದ ʻಶೇಕ್ ಇಟ್ ಪುಷ್ಪವತಿʼ ಹಾಡಿನಿಂದ. ಸದ್ಯ ನಿಮಿಕಾ ರತ್ನಾಕರ್ ಬಗ್ಗೆ ಮಾತನಾಡಲು ಕಾರಣ, ಅವರೀಗ ಸಪ್ತಪದಿ ತುಳಿದಿದ್ದಾರೆ. ನಿಮಿಕಾ ರತ್ನಾಕರ್ ಅವರು ನಾಯಕಿಯಾಗಿ ಚಿತ್ರರಂಗಕ್ಕೆ ಕಾಲಿಟ್ಟರೂ, ಅವರಿಗೆ ಹೆಚ್ಚು ಜನಪ್ರಿಯತೆ ತಂದುಕೊಟ್ಟಿದ್ದು ದರ್ಶನ್ ತೂಗುದೀಪ ಅವರ ಕ್ರಾಂತಿ ಸಿನಿಮಾದ ಶೇಕ್ ಇಟ್ ಪುಷ್ಪವತಿ ಹಾಡು. ಈ ಒಂದು ಹಾಡಿನಲ್ಲಿ ಹೆಜ್ಜೆ ಹಾಕಿದ್ದರಿಂದ ಅವರನ್ನು ಸ್ಯಾಂಡಲ್ವುಡ್ ಪುಷ್ಪವತಿ ಎಂದೇ ಅಭಿಮಾನಿಗಳು ಕರೆಯುತ್ತಾರೆ.
ಮುಂಬೈ,: ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯಲ್ಲಿ ಕಾರು ಬಾವಿಗೆ ಬಿದ್ದು ಆರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಒಂಬತ್ತು ಸದಸ್ಯರು ಮೃತಪಟ್ಟಿದ್ದಾರೆ. ಮೃತರಲ್ಲಿ ಆರು ಮಂದಿ ಮಕ್ಕಳು ಸೇರಿದ್ದಾರೆ.ಒಂದೇ ಕುಟುಂಬದ ಮೂವರು ವಯಸ್ಕರು ಮತ್ತು ಆರು ಮಕ್ಕಳು ದಿಂಡೋರಿಯಲ್ಲಿರುವ ತರಬೇತಿ ಕೇಂದ್ರವು ಆಯೋಜಿಸಿದ್ದ ಕಾರ್ಯಕ್ರಮಕ್ಕೆ ತೆರಳಿ ಮರಳುತ್ತಿದ್ದ ವೇಳೆ ದುರಂತ ಸಂಭವಿಸಿದೆ. ಮೃತರಲ್ಲಿ ಸುನಿಲ್ ದರ್ಗುಡೆ (32), ಅವರ ಪತ್ನಿ ರೇಷ್ಮಾ (27), ಮಗಳು ಗುಣವಂತಿ (11), ಸುನಿಲ್ ಅವರ ಅತ್ತಿಗೆ ಆಶಾ (32), ಮಕ್ಕಳಾದ ಶ್ರೇಯಶ್ (11), ಶ್ರಾವಣಿ (11), ಶ್ರದ್ಧಾ (13) ಮತ್ತು ಸೃಷ್ಟಿ (14), ಮತ್ತು ಸಂಬಂಧಿಕರ ಮಗು ಸಮೃದ್ಧಿ (7) ಸೇರಿದ್ದಾರೆ.
ಸಿಡ್ನಿ: ಆಸ್ಟ್ರೇಲಿಯಾದ ಮಾಜಿ ಕ್ರಿಕೆಟಿಗ ಡೇವಿಡ್ ವಾರ್ನರ್ ಅವರು ಭಾನುವಾರ ಸಿಡ್ನಿಯಲ್ಲಿ ಮದ್ಯಪಾನ ಮಾಡಿ ವಾಹನ ಚಲಾಯಿಸಿದ ಆರೋಪದಲ್ಲಿ ಬಂಧಿಸಲ್ಪಟ್ಟಿದ್ದಾರೆ. ಪಾಕಿಸ್ತಾನ ಸೂಪರ್ ಲೀಗ್ 11ನೇ ಆವೃತ್ತಿಯಲ್ಲಿ ಡೇವಿಡ್ ವಾರ್ನರ್ ಕರಾಚಿ ಕಿಂಗ್ಸ್ ತಂಡದ ನಾಯಕತ್ವವನ್ನು ವಹಿಸಿಕೊಂಡಿದ್ದಾರೆ.ಟೂರ್ನಿಯ ವಿರಾಮದಲ್ಲಿದ್ದ ವೇಳೆ ಈ ಘಟನೆ ನಡೆದಿದೆ..ಕರಾಚಿ ಕಿಂಗ್ಸ್ ತಂಡವನ್ನು ಮುನ್ನಡೆಸುತ್ತಿರುವ ವಾರ್ನರ್ ಟೂರ್ನಿಯ ವೇಳಾಪಟ್ಟಿಯ ನಡುವಿನ ವಿರಾಮದ ಸಂದರ್ಭದಲ್ಲಿ ನಾಲ್ಕು ದಿನಗಳ ವಿಶ್ರಾಂತಿಗಾಗಿ ತಮ್ಮ ಸ್ವಂತ ನಗರ ಸಿಡ್ನಿಗೆ ಮರಳಿದ್ದರು. ಆದರೆ, ಅವರು ಇಲ್ಲಿ ಮದ್ಯಪಾನ ಮಾಡಿ ವಾಹನ ಚಲಾಯಿಸಿದ ಕಾರಣ ಎಡಗೈ ಬ್ಯಾಟ್ಸ್ಮನ್ ಅನ್ನು ಅರೆಸ್ಟ್ ಮಾಡಲಾಗಿದೆ ಎಂದು ವರದಿಯಾಗಿದೆ.
ಈಚೆಗೆ ಅದ್ದೂರಿಯಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ನ್ಯಾಶನಲ್ ಕ್ರಶ್ ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ಅವರು ಇದೀಗ ಕೊಡಗಿನಲ್ಲಿ ಆರತಕ್ಷತೆ ಮಾಡಿದ್ದಾರೆ. ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಅವರು ಕೊಡಗಿನಲ್ಲಿ ತಮ್ಮ ಭವ್ಯವಾದ ಆರತಕ್ಷತೆಯಲ್ಲಿ ಪಾಲ್ಗೊಂಡರು,.ರಶ್ಮಿಕಾ ಅವರ ಹುಟ್ಟೂರಾದ ಕೊಡಗಿನಲ್ಲಿ (ಕೂರ್ಗ್) ನಡೆದ ಈ ಸಂಭ್ರಮಾಚರಣೆಯು ವಿರಾಜಪೇಟೆಯ ಸೆರಿನಿಟಿ ಹಾಲ್ನಲ್ಲಿ ನಡೆಯಿತು ಮತ್ತು ಆಪ್ತರು ಮತ್ತು ಕುಟುಂಬಸ್ಥರು ಭಾಗವಹಿಸಿದ್ದರು ಎಂದು ವರದಿಯಾಗಿದೆ.
ಬೆಂಗಳೂರು: ಬಸವಜಯ ಮೃತ್ಯುಂಜಯ ಸ್ವಾಮೀಜಿ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂದಿದೆ. ಬಸವಜಯ ಮೃತ್ಯುಂಜಯ ಸ್ವಾಮೀಜಿ ಅವರು ನನಗೆ ದೈಹಿಕವಾಗಿ, ಮಾನಸಿಕವಾಗಿ ಹಾಗೂ ಲೈಂಗಿಕವಾಗಿ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಬೆಂಗಳೂರಿನ ಮಹಿಳೆಯೊಬ್ಬರು ರಾಜ್ಯ ಮಹಿಳಾ ಆಯೋಗಕ್ಕೆ ಮಂಗಳವಾರ ದೂರನ್ನು ನೀಡಿದ್ದಾರೆ. ಈ ಬಗ್ಗೆ ಆಯೋಗವು ಬೆಂಗಳೂರು ದಕ್ಷಿಣ ವಿಭಾಗ ಉಪ ಪೊಲೀಸ್ ಆಯುಕ್ತರು ಹಾಗೂ ಬಾಗಲಕೋಟೆ ಪೊಲೀಸ್ ವರಿಷ್ಠಾಧಿಕಾರಿ
ರಾಜ್ಯದಲ್ಲಿ ಬಿಸಿಲ ಝಳ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು ಇದು ನಮ್ಮ ಆರೋಗ್ಯದ ಮೇಲೆ ಸಾಕಷ್ಟು ಪರಿಣಾಮಗಳನ್ನು ಬೀರುತ್ತಿರುತ್ತದೆ. ಈ ಬದಲಾವಣೆಗಳನ್ನು ಎದುರಿಸಲು ಮತ್ತು ಆರೋಗ್ಯವನ್ನು ಕಾಪಾಡಿಕೊಳ್ಳಲು ಕೆಲವೊಂದು ಕ್ರಮಗಳನ್ನು ಅನುಸರಿಸಬೇಕು. ಬಿಸಿಲಿಗೆ ಮೈಯಿಂದ ಬೆವರು ಹೆಚ್ಚು ಹೋಗುವುದರಿಂದ ದೇಹದಲ್ಲಿ ನೀರಿನಂಶ ಕಡಿಮೆಯಾಗುತ್ತದೆ. ಆದ್ದರಿಂದ ಹೆಚ್ಚು ನೀರು ಕುಡಿಯಿರಿ. ಇನ್ನೂ ಬಾಯಾರಿಕೆ ಆಗದಿದ್ದರೂ ದಿನಕ್ಕೆ ಕನಿಷ್ಠ ೩-೪ ಲೀಟರ್ ನೀರು ಕುಡಿಯಿರಿ.
ಬೆಂಗಳೂರು: ಅಸ್ಸಾಂ ಚುನಾವಣೆ ಪ್ರಚಾರದ ವೇಳೆ ಬಿಜೆಪಿ ಮತ್ತು ಆರ್ ಎಸ್ಎಸ್ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಬಿಜೆಪಿ ದೂರು ದಾಖಲಿಸಿದೆ. ಅಸ್ಸಾಂ ಚುನಾವಣೆ ಪ್ರಚಾರ ರಾಲಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ‘ನಮಾಜ್ ಮಾಡುವಾಗ ವಿಷ ಸರ್ಪ ಬಂದರೆ ನಮಾಜ್ ಅರ್ಧಕ್ಕೇ ಬಿಟ್ಟು ಅದನ್ನು ಕೊಲ್ಲಬಹುದು ಎಂದು ಕುರಾನ್ ಹೇಳುತ್ತದೆ. ಅದೇ ರೀತಿ ಬಿಜೆಪಿ ಮತ್ತು ಆರ್ ಎಸ್ಎಸ್ ವಿಷ ಸರ್ಪವಿದ್ದಂತೆ. ಇದನ್ನು ನೀವು ನಿರ್ನಾಮ ಮಾಡಬೇಕು’ ಎಂದು ಹೇಳಿಕೆ ನೀಡಿದ್ದರು.
ನವದೆಹಲಿ: ಪಂಚ ರಾಜ್ಯಗಳಲ್ಲಿ ಚುನಾವಣಾ ಕಾವು ಜೋರಾಗಿದೆ. ಈಗಾಗಲೇ ಸೋಲು ಗೆಲುವಿನ ಲೆಕ್ಕಾಚಾರ ನಡೆಯುತ್ತಿದೆ. ಈ ಮಧ್ಯೆ ಚುನಾವಣಾ ಆಯೋಗ ಮತಗಟ್ಟೆ ಸಮೀಕ್ಷೆಗೆ ಬ್ರೇಕ್ ಹಾಕಿದೆ.ಏ.9ರಿಂದ ಬೆಳಿಗ್ಗೆ 7ರಿಂದ ಏ.29ರ ಸಂಜೆ 6.30ರವರೆಗೆ ಮತಗಟ್ಟೆ ಸಮೀಕ್ಷೆ ನಡೆಸುವಂತಿಲ್ಲ. ಅದನ್ನು ಪ್ರಸಾರ ಮಾಡುವಂತಿಲ್ಲ ಎಂದು ಕೇಂದ್ರ ಚುನಾವಣಾ ಆಯೋಗ ಖಡಕ್ ಸೂಚನೆ ನೀಡಿದೆ.ಈ ಅವಧಿಯಲ್ಲಿ ಮತಗಟ್ಟೆ ಸಮೀಕ್ಷೆಗಳನ್ನು ನಡೆಸಿ, ಪ್ರಸಾರ ಮಾಡುವುದು 1951ರ ಜನಪ್ರತಿನಿಧಿ ಕಾಯ್ದೆಯ ಸೆಕ್ಷನ್ 126ಎ ಉಲ್ಲಂಘನೆ ಎಂದು ಎಚ್ಚರಿಸಿರುವ ಅದು, ದಂಡ ಹಾಗೂ ಎರಡು ವರ್ಷಗಳ ಜೈಲು ಶಿಕ್ಷೆ ಎದುರಿಸಬೇಕಾದ ಪ್ರಕರಣ ಎಂದಿದೆ.
ಇಂಪಾಲ: ಮಣಿಪುರದ ಬಿಷ್ಣುಪುರ ಜಿಲ್ಲೆಯಲ್ಲಿ ಮಂಗಳವಾರ ನಡೆದ ಬಾಂಬ್ ದಾಳಿಯಲ್ಲಿ ಇಬ್ಬರು ಮಕ್ಕಳು ಸ್ಥಳದಲ್ಲೇ ಮೃತಪಟ್ಟಿದ್ದು, ತಾಯಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.ಬಿಷ್ಣುಪುರ ಜಿಲ್ಲೆಯ ಮೊಯಿರಾಂಗ್ ಟ್ರೋಂಗ್ಲಾಬಿ ಗ್ರಾಮದಲ್ಲಿ ಘಟನೆ ನಡೆದಿದೆ. ಘಟನೆಯಲ್ಲಿ ತಾಯಿ ಗಾಯಗೊಂಡಿದ್ದಾರೆ. ಕುಕಿ ಉಗ್ರಗಾಮಿಗಳಿಂದ ದಾಳಿ ನಡೆದಿದೆ ಎಂದು ಶಂಕಿಸಲಾಗಿದೆ. ಮೋಯಿರಾಂಗ್ ಟ್ರೊಂಗ್ಲಾವೊಬಿ ಪ್ರದೇಶದ ಮನೆಯೊಂದರ ಮೇಲೆ ಶಂಕಿತ ಉಗ್ರರು ಮಧ್ಯರಾತ್ರಿ 1 ಗಂಟೆಗೆ ಬಾಂಬ್ ಎಸೆದಿದ್ದಾರೆ. ಘಟನೆಯಲ್ಲಿ 5 ವರ್ಷದ ಬಾಲಕ, ಆರು ತಿಂಗಳ ಹೆಣ್ಣು ಮಗು ಮೃತಪಟ್ಟಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಟೆಹ್ರಾನ್: ಕದನ ವಿರಾಮಕ್ಕೆ ಒಪ್ಪದ ಇರಾನ್ ವಿರುದ್ಧ ದೊಡ್ಡ ಮಟ್ಟದ ದಾಳಿಗೆ ಅಮೆರಿಕಾ ಸಿದ್ಧತೆ ನಡೆಸಿದೆ. ನಾಳೆ ಬೆಳಿಗ್ಗೆಯೊಳಗೆ ಭೀಕರ ದಾಳಿಯಾಗುವ ಭೀತಿ ಎದುರಾಗಿದೆ. ಹೊರ್ಮುಜ್ ಜಲಸಂಧಿ ತೆರೆಯಬೇಕು, ಕದನ ವಿರಾಮಕ್ಕೆ ವಿಧಿಸಿರುವ ಷರತ್ತು ಒಪ್ಪಿಕೊಂಡು ಸುಮ್ಮನಿರಬೇಕು ಎಂದು ಡೊನಾಲ್ಡ್ ಟ್ರಂಪ್ ನಾನಾ ರೀತಿಯಲ್ಲಿ ಬೆದರಿಕೆ ಹಾಕಿದರೂ ಇರಾನ್ ಸೊಪ್ಪೇ ಹಾಕಿಲ್ಲ. ಇದು ಟ್ರಂಪ್ ಕೆರಳಿಸಿದೆ. ಈ ಕಾರಣಕ್ಕೆ ಇರಾನ್ ಗೆ ನರಕ ತೋರಿಸುತ್ತೇವೆ ಎಂದು ಎಚ್ಚರಿಕೆ ನೀಡಿದ್ದರು. ಹಿಂದೆಂದೂ ಕಾಣದ ದಾಳಿ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಲ್ಲದೆ ನಾಳೆ ಬೆಳಿಗ್ಗೆ 5.30 ರ ಡೆಡ್ ಲೈನ್ ನೀಡಿದ್ದರು.
ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ-1 ಫಲಿತಾಂಶ ಏಪ್ರಿಲ್ 9 ರಂದು (ಗುರುವಾರ) ಬೆಳಗ್ಗೆ ಫಲಿತಾಂಶ ಪ್ರಕಟವಾಗಲಿದೆ. ಫೆಬ್ರವರಿ 28 ರಿಂದ ಮಾರ್ಚ್ 17ರ ವರೆಗೂ PUC ಪರೀಕ್ಷೆ ನಡೆದಿತ್ತು. ಒಟ್ಟು ಒಟ್ಟು 7,10,363 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದರು. 1,217 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆದಿತ್ತು.ಇಂದು ಫಲಿತಾಂಶ ಪ್ರಕಟವಾಗಬೇಕಿತ್ತು ಕಾರಣವೇ ಇಲ್ಲದೇ ಬೋರ್ಡ್ ಫಲಿತಾಂಶ ಪ್ರಕಟ ಮುಂದೂಡಿಕೆ ಮಾಡಿತ್ತು. ಈ ಬೆನ್ನಲ್ಲೇ ಫಲಿತಾಂಶ ಪ್ರಕಟಿಸಲು ಅಂತಿಮ ದಿನಾಂಕವನ್ನೂ ಬಿಡುಗಡೆ ಮಾಡಿದೆ.
ಬಾಗಲಕೋಟೆ: ವೀರಶೈವ ಪಂಚಮಸಾಲಿ ಸಮಾಜವನ್ನು 2ಎ ಗೆ ಸೇರಿಸುತ್ತೇವೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಹೇಳಿದ್ದರು. ಆದರೆ ಈವರೆಗೆ ಮಾಡಲಿಲ್ಲ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಮೂರು ವರ್ಷ ಆದರೂ 2ಎ ಕಡೆ ಗಮನ ಕೊಟ್ಟಿಲ್ಲ. ಇಷ್ಟು ಅವಧಿ ಕಣ್ಣು ಮುಚ್ಚಿಕೊಂಡು ಇದ್ದವರು ಈಗ ಚುನಾವಣೆ ಬಂದಾಗ ಸೋಲಿನ ಭೀತಿಯಿಂದ 2ಎಗೆ ಸೇರಿಸುತ್ತೇವೆ ಅಂತಿದ್ದಾರೆ ಎಂದು ಮಾಜಿ ಸಚಿವ ಮುರುಗೇಶ್ ನಿರಾಣಿ ಅವರು ದೂರಿದರು. ಇಂದು ಇಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ವೀರಶೈವ ಪಂಚಮಸಾಲಿ ಸಮಾಜವನ್ನು 2ಎ ಗೆ ಸೇರಿಸಲು ಬಿಜೆಪಿ ಸರ್ಕಾರದ ಅವಧಿಯಲ್ಲಿ ಸಾಕಷ್ಟು ಪ್ರಯತ್ನಗಳು ಆಗಿದ್ದವು. ಆದರೆ ಆಗಿರಲಿಲ್ಲ.