ಮುಂಬೈ: ಯುವ ಬ್ಯಾಟರ್ ಸರ್ಫರಾಜ್ ಖಾನ್ ಅವರು ಇಂದು ಮೈದಾದದಲ್ಲಿ ಅಬ್ಬರಿಸಿ ಬೊಬ್ಬಿರಿದಿದ್ದಾರೆ. ಅವರ ಈ ಆರ್ಭಟ ಬಿಸಿಸಿಐ ಆಯ್ಕೆ ಸಮಿತಿಗೆ ಹೊಸ ಸವಾಲನ್ನು ತಂದೊಡ್ಡಿದೆ.ಬುಧವಾರ ಗೋವಾ ವಿರುದ್ಧ ಮುಂಬೈನ ವಿಜಯ್ ಹಜಾರೆ ಟ್ರೋಫಿ ಪಂದ್ಯದಲ್ಲಿ ಕೇವಲ 75 ಎಸೆತಗಳಲ್ಲಿ 157 ರನ್ ಗಳಿಸಿದ್ದಾರೆ. 28 ವರ್ಷದ ಸರ್ಫರಾಜ್ ಅದ್ಭುತ ಫಾರ್ಮ್ನಲ್ಲಿದ್ದು, 14 ಸಿಕ್ಸರ್ಗಳು ಮತ್ತು 9 ಬೌಂಡರಿಗಳನ್ನು ಬಾರಿಸಿದ್ಧಾರೆ. ಈ ಮೂಲಕ ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಗೂ ಮುನ್ನ ಆಯ್ಕೆದಾರರಿಗೆ ಸರ್ಫರಾಜ್ ಖಾನ್ ಭರ್ಜರಿ ಸಂದೇಶವನ್ನು ಕಳುಹಿಸಿದ್ದಾರೆ. ದೇಶೀಯ ಕ್ರಿಕೆಟ್ನಲ್ಲಿ ಉತ್ತರ ಪ್ರದರ್ಶನ ನೀಡಿರುವ ಸರ್ಫರಾಜ್ ಖಾನ್ ಅವರ ಈ ಇನಿಂಗ್ಸ್ ಜನವರಿ 11 ರಂದು ಪ್ರಾರಂಭವಾಗುವ ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಗೂ ಮುನ್ನ ಆಯ್ಕೆದಾರರಿಗೆ ನೀಡಿರುವ ಸಂದೇಶ ಎಂದೇ ಭಾವಿಸಲಾಗುತ್ತಿದೆ.
ಲಕ್ನೋ: ಬಾಲಿವುಡ್ ನಟಿ, ನೀಲಿಚಿತ್ರಗಳ ಮಾಜಿ ತಾರೆ ಸನ್ನಿ ಲಿಯೋನ್ ಅವರ ಕಾರ್ಯಕ್ರಮಕ್ಕೆ ಕಾಯುತ್ತಿದ್ದ ಅಭಿಮಾನಿಗಳಿಗೆ ಭಾರೀ ನಿರಾಸೆಯಾಗಿದೆ. ಹೊಸ ವರ್ಷಕ್ಕೆ ನಿಗದಿಯಾಗಿದ್ದ ಕಾರ್ಯಕ್ರಮ ದಿಢೀರ್ ರದ್ದಾಗಿದೆ.ಉತ್ತರ ಪ್ರದೇಶದ ಮಥುರಾದಲ್ಲಿ ಹೊಸ ವರ್ಷಾಚರಣೆ ಪ್ರಯುಕ್ತ ಆಯೋಜಿಸಲಾಗಿದ್ದ ಬಾಲಿವುಡ್ ನಟಿ ಸನ್ನಿ ಲಿಯೋನ್ ಅವರ ಕಾರ್ಯಕ್ರಮ ರದ್ದುಗೊಳಿಸಲಾಗಿದೆ. ಈ ಕಾರ್ಯಕ್ರಮಕ್ಕೆ ವಿರೋಧ ವ್ಯಕ್ತವಾಗಿತ್ತು.ಸ್ಥಳೀಯ ಮಠಾಧೀಶರು, ಧಾರ್ಮಿಕ ಸಂಘಟನೆಗಳು ಹಾಗೂ ಸಂತರಿಂದ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆ ಕಾರ್ಯಕ್ರಮವನ್ನ ರದ್ದುಗೊಳಿಸಲಾಗಿದೆ ಎಂದು ಆಯೋಜಕರು ತಿಳಿಸಿದ್ದಾರೆ. ಇದು ಶ್ರೀಕೃಷ್ಣನ ಜನ್ಮಸ್ಥಳವಾಗಿದೆ. ಇಂತಹ ಸ್ಥಳದಲ್ಲಿ ಸನ್ನಿ ಲಿಯೋನ್ ಅವರನ್ನು ಕರೆಸಿ ಡಿಜೆ ಕಾರ್ಯಕ್ರಮ ಆಯೋಜಿಸಿರೋದು ಅಸಮಾಧಾನಕ್ಕೆ ಕಾರಣವಾಗಿತ್ತು.
ವಿಶ್ವದ ಎಲ್ಲಾ ರಾಷ್ಟ್ರಗಳಿಗಿಂತ ಮೊದಲು ಈ ಒಂದು ಪುಟ್ಟ ದ್ವೀಪ ರಾಷ್ಟ್ರ ಹೊಸ ವರ್ಷ 2026 ರನ್ನು ಸ್ವಾಗತಿಸಿದೆ. ಭಾರತದಲ್ಲಿ ಇನ್ನೂ ಹೊಸ ವರ್ಷಾಚರಣೆಗೆ ಕೆಲವು ಗಂಟೆಗಳು ಬಾಕಿಯಿದೆ. ಪೆಸಿಫಿಕ್ ನಲ್ಲಿರುವ ಪುಟ್ಟ ದ್ವೀಪ ಕಿರಿಬಾಟಿ ಈಗಾಗಲೇ ಹೊಸ ವರ್ಷ 2026 ಕ್ಕೆ ಕಾಲಿಟ್ಟಿದೆ. ಭಾರತೀಯ ಕಾಲಮಾನ ಪ್ರಕಾರ ಅಪರಾಹ್ನ 3.30 ಕ್ಕೆ ಅಲ್ಲಿ ಜನವರಿ 1 ಆರಂಭವಾಗಿದೆ. ವಿಶ್ವದಲ್ಲಿ ಮೊದಲು ಹೊಸ ವರ್ಷ ಸ್ವಾಗತಿಸುವ ದ್ವೀಪ ರಾಷ್ಟ್ರವಿದು. ಕಿರಿಬಾಟಿ ಗ್ರೀನ್ ವಿಚ್ ಸಮಯಕ್ಕಿಂತ 11 ಗಂಟೆ ಮುಂದಿದೆ. ಪ್ರಪಂಚದ ಅನೇಕ ರಾಷ್ಟ್ರಗಳಲ್ಲಿ ಇನ್ನೂ ಡಿಸೆಂಬರ್ 31 ಜಾರಿಯಲ್ಲಿದೆ.
ಇಂದೋರ್: ಮಧ್ಯಪ್ರದೇಶ ರಾಜ್ಯದಲ್ಲಿ ಇಂದೋರ್ನಲ್ಲಿ ಭೀಕರ ದುರ್ಘಟನೆ ಸಂಭವಿಸಿದೆ. ಕಲುಷಿತ ನೀರು ಸೇವನೆಯಿಂದ ಉಂಟಾದ ಅತಿಸಾರ ಮತ್ತು ವಾಂತಿಯಿಂದ ಈವರೆಗೆ ಎಂಟು ಮಂದಿ ಮೃತಪಟ್ಟಿದ್ದಾರೆ.ದೇಶದಲ್ಲಿಯೇ ಸತತ ಎಂಟು ಬಾರಿ ಅತ್ಯಂತ ಸ್ವಚ್ಛ ನಗರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದ ಇಂದೋರ್ನಲ್ಲಿ ಭಾರಿ ದುರಂತವೊಂದು ಸಂಭವಿಸಿದೆ. ನೂರಾರು ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ಮೂವರು ಅಧಿಕಾರಿಗಳನ್ನು ಅಮಾನತುಗೊಳಿಸಿದೆ.ಡಿಸೆಂಬರ್ 25 ರಂದು ಭಗೀರಥಪುರ ಪ್ರದೇಶಕ್ಕೆ ಸರಬರಾಜಾದ ಕುಡಿಯುವ ನೀರಿನಲ್ಲಿ ಅಸಾಮಾನ್ಯ ವಾಸನೆ ಮತ್ತು ರುಚಿ ಕಂಡುಬಂದಿತ್ತು. ಈ ನೀರನ್ನು ಸೇವಿಸಿದ ನಂತರ ಸ್ಥಳೀಯ ನಿವಾಸಿಗಳಲ್ಲಿ ವಾಂತಿ, ಭೇದಿ ಮತ್ತು ತೀವ್ರ ಹೊಟ್ಟೆ ನೋವು ಕಾಣಿಸಿಕೊಂಡಿದೆ.
ಬೆಂಗಳೂರು: ನಾನು ದಾಖಲಿಸಿದ ದೂರು ಸಂಪೂರ್ಣವಾಗಿ ನಿರ್ಲಕ್ಷಿಸಲ್ಪಟ್ಟಿದೆ, ಆದರೆ ಬೇರೊಬ್ಬ ಮಹಿಳೆಯ ದೂರಿನ ಮೇಲೆ ಒಂದೇ ದಿನದಲ್ಲಿ ಕ್ರಮ ಕೈಗೊಳ್ಳಲಾಗಿದೆ ಎಂದು ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರು ಪೊಲೀಸರಿಗೆ ಟಕ್ಕರ್ ನೀಡಿದ್ದರೆ. ಸಾಮಾಜಿಕ ಜಾಲತಾಣದಲ್ಲಿ ತಮ್ಮ ವಿರುದ್ಧ ಅವಹೇಳನಕಾರಿ ಕಮೆಂಟ್ ಮಾಡಿದ್ದವರ ವಿರುದ್ಧ ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಬೆಂಗಳೂರು ಸಿಟಿ ಸೈಬರ್ ಕ್ರೈಂ ಪೊಲೀಸರಿಗೆ ಕೆಲವು ದಿನಗಳ ಹಿಂದೆ ದೂರು ನೀಡಿದ್ದರು. ಆದರೆ ಆ ದೂರಿನ ಬಗ್ಗೆ ಪೊಲೀಸರು ಇದುವರೆಗೆ ಯಾವುದೇ ಕ್ರಮ ತೆಗೆದುಕೊಂಡಿಲ್ಲ ಎಂದು ವಿಜಯಲಕ್ಷ್ಮಿ ದರ್ಶನ್ ಸೋಷಿಯಲ್ ಮೀಡಿಯಾದಲ್ಲಿ ಅಸಮಾಧಾನ ಹೊರಹಾಕಿದ್ದಾರೆ.
ಬೆಂಗಳೂರು: ಸಿದ್ದರಾಮಯ್ಯರ ನೇತೃತ್ವದ ಕಾಂಗ್ರೆಸ್ ಸರಕಾರ ಟೋಪಿ ಸರಕಾರ; ಇವರು ಇಷ್ಟು ದಿನ ಕರ್ನಾಟಕದ ಕನ್ನಡಿಗರಿಗೆ ಟೋಪಿ ಹಾಕಿ, ಇವತ್ತು ಕರ್ನಾಟಕದಲ್ಲಿ ಮಿನಿ ಬಾಂಗ್ಲಾದೇಶವನ್ನು ನಿರ್ಮಿಸುತ್ತಿದ್ದಾರೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಆಕ್ಷೇಪಿಸಿದ್ದಾರೆ.ಒತ್ತುವರಿ ಹಿನ್ನೆಲೆಯಲ್ಲಿ ಅಕ್ರಮವಾಗಿ ವಾಸವಿದ್ದವರನ್ನು ತೆರವುಗೊಳಿಸಿದ ಯಲಹಂಕದ ಕೋಗಿಲು ಬಡಾವಣೆಗೆ ಇಂದು ಭೇಟಿ ನೀಡಿದ ವೇಳೆ ಅವರು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದರು. ಈ ಸರಕಾರ ಬಂದ ಬಳಿಕ ಕರ್ನಾಟಕವು ಮಿನಿ ಬಾಂಗ್ಲಾದೇಶೀಯರ ತಾಣ ಆಗುತ್ತಿದೆ ಎಂದು ಟೀಕಿಸಿದರು. ಇವರು ಯಾರು? ಎಲ್ಲಿಂದ ಬಂದರು ಎಂದು ಕೇಳಿದರು.
ಬೆಂಗಳೂರು: ಸಿಲಿಕಾನ್ ಸಿಟಿಯ ಮಂದಿ ಹೊಸ ವರ್ಷ ಸ್ವಾಗತಕ್ಕೆ ಸಜ್ಜಾಗಿದ್ದಾರೆ. ಇಂದು ಬೆಂಗಳೂರು ಬಹುತೇಕ ರಸ್ತೆಗಳು ಜನದಟ್ಟಣೆಯಿಂದ ಕೂಡಿರಲಿದೆ. ಹೀಗಾಗಿ, ಪ್ರಮುಖ ರಸ್ತೆಗಳಲ್ಲಿ ವಾಹನ ಸಂಚಾರ, ಪಾರ್ಕಿಂಗ್ ನಿಷೇಧಿಸಲಾಗಿದೆ.ನಗರದಲ್ಲಿ ಅಹಿತಕರ ಘಟನೆಗಳು ಸಂಭವಿಸದಂತೆ ತಡೆಯಲು ಹಲವು ಮುಂಜಾಗ್ರತಾ ಕ್ರಮಗಳನ್ನು ಪೊಲೀಸ್ ಇಲಾಖೆ ತೆಗೆದುಕೊಂಡಿದೆ. ಹೀಗಾಗಿ, ಹಲವು ರಸ್ತೆಗಳಲ್ಲಿ ಸಂಚಾರಕ್ಕೆ ನಿರ್ಬಂಧಿಸಲಾಗಿದೆ. ಪ್ರಮುಖ ರಸ್ತೆಗಳಲ್ಲಿ ಬಣ್ಣದ ವಿದ್ಯುತ್ ದೀಪಗಳ ಅಲಂಕಾರದಿಂದ ಕಂಗೊಳಿಸುತ್ತಿವೆ. ಪಬ್, ಕ್ಲಬ್, ರೆಸ್ಟೊರೆಂಟ್ಗಳು ಬುಧವಾರ ರಾತ್ರಿ ಪಾರ್ಟಿ ಆಯೋಜಿಸಲು ಸಿದ್ಧತೆಗೊಂಡಿವೆ.ಮಹಾತ್ಮ ಗಾಂಧಿ ರಸ್ತೆ, ಚರ್ಚ್ ಸ್ಟ್ರೀಟ್, ಬ್ರಿಗೇಡ್ ರಸ್ತೆ, ಕೋರಮಂಗಲ, ಒಪೆರಾ ಜಂಕ್ಷನ್, ರೆಸ್ಟ್ಹೌಸ್ ರಸ್ತೆ, ಸೇಂಟ್ ಮಾರ್ಕ್ ರಸ್ತೆ, ರಿಚ್ಮಂಡ್ ರಸ್ತೆ, ರೆಸಿಡೆನ್ಸಿ ರಸ್ತೆಗೆ ದೊಡ್ಡ ಸಂಖ್ಯೆಯಲ್ಲಿ ಯುವ ಸಮೂಹ ಬರುವ ನಿರೀಕ್ಷೆಯಿದೆ.
ಬೆಂಗಳೂರು: ಅಕ್ರಮ ಒತ್ತುವರಿ ತೆರವುಗೊಳಿಸಿದ ಯಲಹಂಕದ ಕೋಗಿಲು ಲೇಔಟ್ ಗೆ ಇಂದು ಆರ್ ಅಶೋಕ್ ನೇತೃತ್ವದಲ್ಲಿ ಬಿಜೆಪಿ ನಾಯಕರು ಭೇಟಿ ಕೊಟ್ಟಿದ್ದಾರೆ. ಈ ವೇಳೆ ಮಹಿಳೆಯೊಬ್ಬರಿಗೆ ಎಷ್ಟು ವರ್ಷದಿಂದ ಇದ್ದೀಯಮ್ಮಾ ಎಂದಾಗ ಆಕೆ ಕೊಟ್ಟ ಉತ್ತರಕ್ಕೆ ಬಿಜೆಪಿ ನಾಯಕರೇ ಶಾಕ್ ಆಗಿದ್ದಾರೆ. ಕೋಗಿಲು ಲೇಔಟ್ ನಲ್ಲಿ ಮನೆ ತೆರವುಗೊಳಿಸಿದ ಜಾಗಕ್ಕೆ ಇಂದು ಆರ್ ಅಶೋಕ್, ಛಲವಾದಿ ನಾರಾಯಣಸ್ವಾಮಿ ಸೇರಿದಂತೆ ಬಿಜೆಪಿ ನಾಯಕರ ನಿಯೋಗ ಭೇಟಿ ಕೊಟ್ಟಿದೆ. ಈ ವೇಳೆ ಅಲ್ಲಿದ್ದ ಮಹಿಳೆಯೊಬ್ಬಳ ಬಳಿ ಎಷ್ಟು ವರ್ಷದಿಂದ ಇದ್ದೀಯಮ್ಮಾ ಎಂದು ಕೇಳಿದ್ದಾರೆ. ಅದಕ್ಕೆ ಆಕೆ 30 ವರ್ಷದಿಂದ ಇದ್ದೀವಿ ಎಂದಿದ್ದಾಳೆ.
ಬೆಂಗಳೂರು: ಹೊಸ ವರ್ಷವನ್ನು ಅದ್ಧೂರಿಯಾಗಿ ಸ್ವಾಗತಿಸಲು ಪ್ಲಾನ್ ಮಾಡಿರುವ ಸಿಲಿಕಾನ್ ಸಿಟಿ ಮಂದಿಗೆ ಮೆಟ್ರೊ ಮತ್ತು ಬಿಎಂಟಿಸಿ ಗುಡ್ನ್ಯೂಸ್ ನೀಡಿದೆ. ಇಂದು ತಡರಾತ್ರಿವರೆಗೆ ಸಾರಿಗೆ ಸೇವೆಯನ್ನು ವಿಸ್ತರಿಸಿದೆ. ಮಧ್ಯರಾತ್ರಿವರೆಗೂ ಸಂಭ್ರಮಿಸುವ ಬೆಂಗಳೂರಿಗರ ಸುರಕ್ಷತೆ ಸಂಚಾರಕ್ಕಾಗಿ ಮೆಟ್ರೊ, ಬಿಎಂಟಿಸಿ ತನ್ನ ಸೇವೆ ಸಮಯ ಮತ್ತು ಮಾರ್ಗಗಳನ್ನ ವಿಸ್ತರಿಸಿದೆ. ತಡರಾತ್ರಿವರೆಗೂ ಜನರ ಅನೂಕೂಲಕ್ಕಾಗಿ ಸಂಚಾರ ನಾಡಿಗಳು ಸೇವೆ ನೀಡಲಿವೆ.ಇಂದು ರಾತ್ರಿ ಹಾಗೂ ಜನವರಿ 1ರಂದು ಮೆಟ್ರೋ ವಿಶೇಷ ವೇಳಾಪಟ್ಟಿ ಜಾರಿಯಲ್ಲಿರಲಿದೆ. ನೇರಳೆ, ಹಸಿರು ಮತ್ತು ಹಳದಿ ಮಾರ್ಗಗಳಲ್ಲಿ ಸೇವಾ ಸಮಯವನ್ನ ತಡರಾತ್ರಿವರೆಗೆ ವಿಸ್ತರಣೆ ಮಾಡಲಾಗಿದೆ. ಹೊಸ ವರ್ಷದ ಸಂಭ್ರಮದಲ್ಲಿ ಜನಸಂದಣಿ ಹೆಚ್ಚಾಗುವ ಹಿನ್ನೆಲೆ, ಪ್ರಯಾಣಿಕರ ಅನುಕೂಲಕ್ಕಾಗಿ ಮೆಟ್ರೋ ಕೊನೆಯ ರೈಲು ಸಮಯವನ್ನು ವಿಸ್ತರಿಸಲಾಗಿದೆ.
ಬೆಂಗಳೂರು: ಕೇರಳ ಸಿಎಂ ಪಿಣರಾಯಿ ವಿಜಯನ್ ಭೇಟಿ ಮಾಡಿದ ಕ್ಷಣವನ್ನು ಸಿಎಂ ಸಿದ್ದರಾಮಯ್ಯ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ಇದಕ್ಕೆ ಪ್ರತಿಕ್ರಿಯಿಸಿರುವ ನೆಟ್ಟಿಗರು ಇಬ್ಬರೂ ಕೇರಳ ಸಿಎಂ ಒಂದೇ ಫ್ರೇಮ್ ನಲ್ಲಿ ಎಂದು ಟಾಂಗ್ ಕೊಟ್ಟಿದ್ದಾರೆ. ಕೋಗಿಲು ಲೇಔಟ್ ನಲ್ಲಿ ಅಕ್ರಮ ವಸತಿಗಳನ್ನು ಕೆಡವಿದ್ದಕ್ಕೆ ಕರ್ನಾಟಕ ಸರ್ಕಾರದ ವಿರುದ್ಧ ಕೇರಳ ಸಿಎಂ ಟ್ವೀಟ್ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದರು. ಕೇರಳ ಸಿಎಂ ಮಾತಿಗೆ ಒಂದೂ ಎದುರಾಡದೇ ಕರ್ನಾಟಕ ಸರ್ಕಾರ ಅಕ್ರಮವಾಗಿ ಮನೆ ಮಾಡಿಕೊಂಡಿದ್ದವರಿಗೆ ಮನೆ ಕೊಡಲು ಮುಂದಾಗಿದೆ.
ಬೆಂಗಳೂರು: ಲೇಡಿ ಸೂಪರ್ ಸ್ಟಾರ್, ಬಹುಭಾಷಾ ತಾರೆ ನಯನಾತಾರಾ ಅಭಿಮಾನಿಗಳಿಗೆ ಟಾಕ್ಸಿಕ್ ಚಿತ್ರತಂಡ ಗುಡ್ನ್ಯೂಸ್ ನೀಡಿದೆ. ಚಿತ್ರದಲ್ಲಿನ ಫಸ್ಟ್ಲುಕ್ ಬಿಡುಗಡೆ ಮಾಡಿದ್ದು, ಖಡಕ್ ಲುಕ್ನಲ್ಲಿ ನಯನಾತಾರಾ ಕಾಣಿಸಿಕೊಂಡಿದ್ದಾರೆ. ಕೆಜಿಎಫ್ ಖ್ಯಾತಿಯ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಚಿತ್ರ ಟಾಕ್ಸಿಕ್: ಎ ಫೇರಿಟೇಲ್ ಫಾರ್ ಗ್ರೋನ್-ಅಪ್ಸ್ ಸಿನಿಮಾವು ಮಾರ್ಚ್ 19ರಂದು ತೆರೆಗೆ ಬರಲಿದೆ.ಬಿಗ್ಬಜೆಟ್ನ ಈ ಚಿತ್ರದ ಮೇಲಿನ ಕುತೂಹಲ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಈ ಚಿತ್ರದ ಒಂದೊಂದೇ ಪಾತ್ರಗಳನ್ನು ಪರಿಚಯಿಸುತ್ತಿರುವ ಚಿತ್ರತಂಡ, ಇದೀಗ ನಟಿ ನಯನತಾರಾ ಅವರ ಗಂಗಾ ಪಾತ್ರದ ಪೋಸ್ಟರ್ ಅನ್ನು ರಿಲೀಸ್ ಮಾಡಿದೆ. ಈ ಪೋಸ್ಟರ್ಗೆ ಅಭಿಮಾನಿಗಳು ಫುಲ್ ಫಿದಾ ಆಗಿದ್ದಾರೆ.
ಬೆಂಗಳೂರು: ನಾನು ದೂರು ಕೊಟ್ರೆ ಕ್ರಮ ಕೈಗೊಳ್ಳಲ್ಲ. ಆದರೆ ಆ ಲೇಡಿ ಕೊಟ್ಟ ದೂರಿಗೆ ಒಂದೇ ದಿನದಲ್ಲಿ ಕ್ರಮ ಕೈಗೊಳ್ಳುತ್ತಾರೆ. ಹೀಗಂತ ದರ್ಶನ್ ಪತ್ನಿ ವಿಜಯಲಕ್ಷ್ಮಿ ಸೋಷಿಯಲ್ ಮೀಡಿಯಾದಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ದರ್ಶನ್ ಪತ್ನಿ ವಿಜಯಲಕ್ಷ್ಮಿ ಮೊನ್ನೆಯಷ್ಟೇ ಸೋಷಿಯಲ್ ಮೀಡಿಯಾದಲ್ಲಿ ತಮಗೆ ಕಿಚ್ಚ ಸುದೀಪ್ ಅಭಿಮಾನಿಗಳ ಹೆಸರಿನಲ್ಲಿ ಅಶ್ಲೀಲ ಕಾಮೆಂಟ್ ಮಾಡಿದವರ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದರು. ತಮಗೆ ಕಾಮೆಂಟ್ ಮಾಡಿದವರ ಸ್ಕ್ರೀನ್ ಶಾಟ್ ಗಳನ್ನೂ ಅವರು ಲಗತ್ತಿಸಿದ್ದರು. ಆದರೆ ಇದುವರೆಗೆ ಸೂಕ್ತ ಕ್ರಮ ಕೈಗೊಂಡಿಲ್ಲ ಎಂಬುದು ವಿಜಯಲಕ್ಷ್ಮಿ ಅಸಮಾಧಾನಕ್ಕೆ ಕಾರಣವಾಗಿದೆ.
ನವದೆಹಲಿ: ಭಾರತ ಮತ್ತು ಪಾಕಿಸ್ತಾನ ನಡುವಿನ ಕದನ ವಿರಾಮದಲ್ಲಿ ಕ್ರೆಡಿಟ್ ಪಡೆಯಲು ಬಂದ ಅಮೆರಿಕ ಮತ್ತು ಚೀನಾಕ್ಕೆ ಭಾರತ ತಕ್ಕ ಪ್ರತ್ಯುತ್ತರ ನೀಡಿದೆ.ಅಮೆರಿಕ ಬೆನ್ನಲ್ಲೇ ಚೀನಾವು ಕದನ ವಿರಾಮದಲ್ಲಿ ಮಧ್ಯಸ್ಥಿಕೆ ವಹಿಸಿದ್ದೇವೆ ಎಂದು ಹೇಳಿಕೊಂಡಿತ್ತು. ಇದಕ್ಕೆ ತೀಷ್ಣವಾಗಿ ಪ್ರತಿಕ್ರಿಯಿಸಿದ ಭಾರತ ಕದನ ವಿರಾಮದಲ್ಲಿ ಮೂರನೇ ವ್ಯಕ್ತಿಗಳ ಪಾತ್ರವಿಲ್ಲ ಎಂದು ಸ್ಪಷ್ಟವಾಗಿ ಹೇಳಿದೆ.ಭಾರತ ಮತ್ತು ಪಾಕಿಸ್ತಾನ ಸಂಘರ್ಷದ ನಡುವೆ ಮಧ್ಯಸ್ಥಿಕೆ ವಹಿಸಿದೆ ಎಂಬ ಚೀನಾದ ಹೇಳಿಕೆಯನ್ನು ಭಾರತ ದೃಢವಾಗಿ ತಿರಸ್ಕರಿಸಿದೆ. ಕದನ ವಿರಾಮ ನಿರ್ಧಾರದಲ್ಲಿ ಯಾವುದೇ ಮೂರನೇ ವ್ಯಕ್ತಿ ಭಾಗಿಯಾಗಿಲ್ಲ ಎಂದು ಪುನರುಚ್ಚರಿಸಿದೆ.
ರಕ್ತ ಕೂಡಾ ಹೆಪ್ಪುಗಟ್ಟುವಷ್ಟು ಚಳಿ ಎಂದು ನಾವು ಹೇಳುತ್ತೇವೆ. ಹಾಗಿದ್ದರೆ ಚಳಿಗಾಲದಲ್ಲಿ ನಿಜವಾಗಿಯೂ ರಕ್ತಹೆಪ್ಪುಗಟ್ಟುತ್ತಾ? ಏನು ಅಪಾಯಗಳಿವೆ ನೋಡಿ. ಚಳಿಗಾಲದಲ್ಲಿ ಇತರೆ ಹವಾಮಾನಗಳಿಗೆ ಹೋಲಿಸಿದರೆ ರಕ್ತ ಹೆಚ್ಚು ಮಂದವಾಗುತ್ತದೆ. ವಿಪರೀತ ಚಳಿಯಿಂದ ನಮ್ಮ ದೇಹದಲ್ಲಿ ರಕ್ತಪರಿಚಲನೆ ಸುಗಮವಾಗಿ ನಡೆಯುವುದಿಲ್ಲ. ಸ್ವಲ್ಪ ನಿಧಾನವಾಗುತ್ತದೆ. ಇದಕ್ಕೆ ರಕ್ತ ಮಂದವಾಗುವುದು ಕಾರಣ. ಇದರಿಂದ ಗಂಭೀರ ಸಮಸ್ಯೆಗಳೂ ಎದುರಾಗಬಹುದು. ವಿಪರೀತ ಚಳಿಯಿಂದ ಹೃದಯಾಘಾತ, ಪಕ್ಷಪಾತದಂತಹ ಗಂಭೀರ ಆರೋಗ್ಯ ಸಮಸ್ಯೆ ಎದುರಾಗಬಹುದು. ರಕ್ತನಾಳಗಳಲ್ಲಿ ಅಲ್ಲಲ್ಲಿ ರಕ್ತ ಹೆಪ್ಪುಗಟ್ಟುವುದರಿಂದ ಹೃದಯಕ್ಕೆ ಸಾಕಷ್ಟು ಪ್ರಮಾಣದಲ್ಲಿ ರಕ್ತ ಪೂರೈಕೆಯಾಗದೇ ಸಮಸ್ಯೆಯಾಗಬಹುದು.
ವರ್ಕಳ: ಕೋಗಿಲು ಲೇಔಟ್ ನಲ್ಲಿ ಅಕ್ರಮ ವಸತಿಗಳನ್ನು ತೆರವುಗೊಳಿಸಿದ ಪ್ರಕರಣದಲ್ಲಿ ಕರ್ನಾಟಕ ಸರ್ಕಾರದ ವಿರುದ್ಧ ಸಿಎಂ ಪಿಣರಾಯಿ ವಿಜಯನ್ ಕಿಡಿ ಕಾರಿದ್ದರು. ಇದರ ಬೆನ್ನಲ್ಲೇ ಈಗ ಕೇರಳಕ್ಕೆ ಭೇಟಿ ಕೊಟ್ಟಿರುವ ಸಿಎಂ ಸಿದ್ದರಾಮಯ್ಯ ಕೇರಳ ಸಿಎಂ ಜೊತೆ ನಗುತ್ತಲೇ ಪೋಸ್ ಕೊಟ್ಟಿದ್ದಾರೆ. ಕೇರಳದ ವರ್ಕಳದಲ್ಲಿ ಶಿವಗಿರಿ ಮಠ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗಿಯಾದ ಸಿಎಂ ಸಿದ್ದರಾಮಯ್ಯ ಅಲ್ಲಿನ ಸಿಎಂ ಪಿಣರಾಯಿ ವಿಜಯನ್ ಅವರನ್ನು ಭೇಟಿ ಮಾಡಿದ್ದಾರೆ. ಈ ವೇಳೆ ಸಿದ್ದರಾಮಯ್ಯ ಮತ್ತು ಪಿಣರಾಯಿ ನಗು ನಗುತ್ತಲೇ ಪರಸ್ಪರ ಕುಶಲೋಪರಿ ವಿಚಾರಿಸಿ ಫೋಟೋಗೆ ಪೋಸ್ ಕೊಟ್ಟಿದ್ದಾರೆ.
ಬೆಂಗಳೂರು: ಕುಡಿದು ಟೈಟ್ ಆದವರನ್ನು ಮನೆಗೆ ಬಿಡ್ತೀವಿ ಎಂದಿದ್ದಕ್ಕೆ ಟ್ರೋಲ್ ಆದ ಬಳಿಕ ಗೃಹಸಚಿವ ಡಾ ಜಿ ಪರಮೇಶ್ವರ್ ಮಾಧ್ಯಮಗಳಿಗೆ ತಮ್ಮ ಹೇಳಿಕೆ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಕುಡಿದು ಮತ್ತಿನಲ್ಲಿರುವ ಎಲ್ಲರನ್ನೂ ಮನೆಗೆ ಬಿಡ್ತೀವಿ ಎಂದು ಅರ್ಥವಲ್ಲ. ಕೆಲವರು ಕುಡಿದು ಪ್ರಜ್ಞೆಯೇ ಇಲ್ಲದ ಸ್ಥಿತಿಯಲ್ಲಿರುತ್ತಾರೆ. ವಿಶೇಷವಾಗಿ ಮಹಿಳೆಯರು ಈ ಸ್ಥಿತಿಯಲ್ಲಿದ್ದಾಗ ಅವರ ಜೊತೆ ದುರ್ವರ್ತನೆ ತೋರುವ ಸಾಧ್ಯತೆಯಿರುತ್ತದೆ. ಹೀಗಾಗಿ ಅವರ ಸುರಕ್ಷತೆ ದೃಷ್ಟಿಯಿಂದ ಈ ರೀತಿ ವ್ಯವಸ್ಥೆ ಮಾಡಿದ್ದೇವೆ. ತೀರಾ ಆಗದವರನ್ನು ಕೆಲವು ಕಡೆ ಪೊಲೀಸರೇ ಕೇಂದ್ರಗಳನ್ನು ಮಾಡಿದ್ದಾರೆ. ಅಲ್ಲಿಗೆ ಕರೆದುಕೊಂಡು ಹೋಗಿ ಸ್ವಲ್ಪ ಸುಧಾರಿಸಿದ ಮೇಲೆ ಮನೆಗೆ ಬಿಡಲಾಗುತ್ತದೆ.
ಬೆಂಗಳೂರು: ಚಿನ್ನದ ಬೆಲೆ ಪ್ರತಿನಿತ್ಯ ಏರಿಳಿಕೆಯಾಗುತ್ತಲೇ ಇದೆ. ಇಂದು ಪರಿಶುದ್ಧ ಚಿನ್ನದ ದರ ಮತ್ತು ಇತರೆ ಚಿನ್ನದ ದರ ಸತತ ಮೂರನೇ ದಿನ ಇಳಿಕೆ ಕಂಡಿದೆ. ಇಂದು ಪರಿಶುದ್ಧ ಚಿನ್ನದ ದರ ಮತ್ತು ಇತರೆ ಚಿನ್ನದ ದರ ವಿವರ ಇಲ್ಲಿದೆ ನೋಡಿ. ಚಿನ್ನದ ದರ ಏರಿಕೆಕಳೆದ ವಾರ ಪರಿಶುದ್ಧ ಚಿನ್ನದ ದರ ಸತತ ಇಳಿಕೆ ಕಂಡಿತ್ತು. ಆದರೆ ವಾರಂತ್ಯಕ್ಕೆ ಚಿನ್ನದ ದರ ಏರಿಕೆ-ಇಳಿಕೆಯಾಗುತ್ತಲೇ ಇತ್ತು. ಈ ವಾರ ಆರಂಭದಿಂದಲೇ ಇಳಿಕೆಯತ್ತ ಸಾಗಿದೆ. ಇಂದು ಪರಿಶುದ್ಧ ಚಿನ್ನದ ದರ ಮತ್ತಷ್ಟು ಇಳಿಕೆಯಾಗಿದೆ. ಪರಿಶುದ್ಧ ಚಿನ್ನದ ದರ ಮೊನ್ನೆ 1,40,975.00 ರೂ.ಗಳಿತ್ತು. ಇಂದು 1,39,095.00 ರೂ.ಗಳಷ್ಟಾಗಿದೆ.
ಬೆಂಗಳೂರು: ಅಡಿಕೆ ಬೆಲೆ ಒಂದು ವಾರದಿಂದ ಯಥಾಸ್ಥಿತಿಯಲ್ಲಿತ್ತು. ಇಂದು ಕೊಂಚ ದರ ಏರಿಕೆಯಾಗಿರುವುದು ಸಮಾಧಾನ ತಂದಿದೆ. ಇಂದು ಅಡಿಕೆ ಮತ್ತು ಕಾಳು ಮೆಣಸು, ಕೊಬ್ಬರಿ ದರ ಹೇಗಿದೆ ಇಲ್ಲಿದೆ ವಿವರ. ಅಡಿಕೆ ಬೆಲೆ ಏರಿಕೆಯೂ ಅಲ್ಲ ಇಳಿಕೆಯೂ ಇಲ್ಲ ಎನ್ನುವ ಸ್ಥಿತಿಯಲ್ಲಿತ್ತು. ಒಂದೆಡೆ ಬೆಳೆ ಕಡಿಮೆ, ಇನ್ನೊಂದೆಡೆ ಬೆಲೆ ಏರಿಕೆಯಾಗದೇ ಇರುವುದು ರೈತರ ಚಿಂತೆಗೆ ಕಾರಣವಾಗಿದೆ. ಅಡಿಕೆ ಬೆಲೆ ಇಳಿಕೆಯಾಗುತ್ತಿದೆಯೇ ಹೊರತು ಏರಿಕೆಯಾಗುತ್ತಿಲ್ಲ ಎಂಬ ಚಿಂತೆ ಬೆಳೆಗಾರರದ್ದು. ಆದರೆ ಇಂದು ಹೊಸ ಅಡಿಕೆ ಬೆಲೆ 10 ರೂ.ಗಳಷ್ಟು ಏರಿಕೆಯಾಗಿದ್ದು 425 ರೂ.ಗಳಷ್ಟಿದೆ.
ಮುಂಬೈ: ಟೀಂ ಇಂಡಿಯಾ ವೇಗಿ ಮೊಹಮ್ಮದ್ ಶಮಿ ವಿಚಾರದಲ್ಲಿ ಬಿಸಿಸಿಐ ಮಹತ್ವದ ತೀರ್ಮಾನ ತೆಗೆದುಕೊಳ್ಳಲು ಮುಂದಾಗಿದೆ ಎಂಬ ಸುದ್ದಿ ಹರಿದಾಡುತ್ತಿದೆ. 2023 ರ ಏಕದಿನ ವಿಶ್ವಕಪ್ ಹೀರೋ ಆಗಿದ್ದ ಮೊಹಮ್ಮದ್ ಶಮಿ ಬಳಿಕ ಟೀಂ ಇಂಡಿಯಾ ಪರ ಒಂದು ಸರಣಿ ಬಿಟ್ಟರೆ ಮತ್ತೆಲ್ಲೂ ಆಯ್ಕೆಯೇ ಆಗಿಲ್ಲ. ಸ್ವತಃ ಶಮಿಯೇ ತಮ್ಮನ್ನು ಕಡೆಗಣಿಸುತ್ತಿರುವುದಕ್ಕೆ ಅಸಮಾಧಾನ ಹೊರಹಾಕಿದ್ದರು. ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ಪದೇ ಪದೇ ಶಮಿ ಫಿಟ್ನೆಸ್ ಬಗ್ಗೆ ಬೆರಳು ತೋರಿಸುತ್ತಿದ್ದಾರೆ.
ಬೆಂಗಳೂರು: ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರ ಇನ್ನೂ ತಣ್ಣಗಾಗಿಲ್ಲ. ಈ ವಿಚಾರವಾಗಿ ಡಿಕೆ ಶಿವಕುಮಾರ್ ಹೊಸ ವರ್ಷದ ಹೊಸ್ತಿಲಲ್ಲೇ ಮಹತ್ವದ ಹೇಳಿಕೆ ನೀಡಿದ್ದಾರೆ. ಅಧಿಕಾರ ಹಂಚಿಕೆ ವಿಚಾರವಾಗಿ ಈ ವರ್ಷವಂತೂ ಯಾವುದೇ ತೀರ್ಮಾನವಾಗಿಲ್ಲ. ಎಲ್ಲಾ ಹೈಕಮಾಂಡ್ ನಿರ್ಧರಿಸುತ್ತದೆ ಎಂದು ರಾಜ್ಯ ನಾಯಕರು ಹೇಳುತ್ತಿದ್ದಾರೆ. ಆದರೆ ರಾಜ್ಯ ನಾಯಕರಿಗೆ ಹೈಕಮಾಂಡ್ ಇನ್ನೂ ಯಾವುದೇ ಸ್ಪಷ್ಟತೆ ನೀಡಿಲ್ಲ. ಮೊನ್ನೆಯಷ್ಟೇ ಡಿಕೆಶಿ ಆಪ್ತ ಶಾಸಕ ಇಕ್ಬಾಲ್ ಹುಸೇನ್ ಜನವರಿ 6 ಕ್ಕೆ ಅಥವಾ 9 ಕ್ಕೆ ಡಿಕೆ ಶಿವಕುಮಾರ್ ಸಿಎಂ ಆಗೋದು ಪಕ್ಕಾ ಎಂದಿದ್ದರು. ಅವರು ಇದು ಎರಡನೇ ಬಾರಿ ಈ ಹೇಳಿಕೆ ನೀಡುತ್ತಿದ್ದಾರೆ. ಇದರ ಬಗ್ಗೆ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.
ಹೊಸ ವರ್ಷ 2026 ರನ್ನು ಸ್ವಾಗತಿಸಲು ಇನ್ನೇನು ಕೆಲವೇ ಕ್ಷಣಗಳು ಬಾಕಿಯಿವೆ. ಪ್ರತೀ ಬಾರಿ ಹೊಸ ವರ್ಷಾಚರಣೆ ಸಂದರ್ಭದಲ್ಲಿ ವಿಶೇಷವಾಗಿ ಮಹಿಳೆಯರ ಸುರಕ್ಷತೆ ಬಗ್ಗೆ ಪ್ರಶ್ನೆ ಮೂಡುತ್ತದೆ. ಹೀಗಾಗಿ ಹೊಸ ವರ್ಷದ ಪಾರ್ಟಿಗೆ ಹೋಗುವ ಯುವತಿಯರು ಹುಷಾರಾಗಿರಿ. ಬೆಂಗಳೂರಿನಲ್ಲಂತೂ ಹೊಸ ವರ್ಷಾಚರಣೆ ಇತ್ತೀಚೆಗಿನ ವರ್ಷಗಳಲ್ಲಿ ಕುಡಿತದ ದಿನದಂತೆ ಬದಲಾಗಿದೆ. ಯುವಕ-ಯುವತಿಯರು ರಸ್ತೆಯಲ್ಲಿ ಕುಡಿದು ತೂರಾಡುತ್ತಿರುವ ದೃಶ್ಯಗಳು ಸಾಮಾನ್ಯವಾಗುತ್ತಿದೆ. ಈ ಬಾರಿಯೂ ಇಂತಹ ದೃಶ್ಯಗಳು ಕಂಡುಬರುವುದು ಸಹಜ. ಇಂತಹ ಸಂದರ್ಭಗಳಲ್ಲೇ ಕುಡಿದ ಮತ್ತಿನಲ್ಲಿ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಅತೀ ಹೆಚ್ಚು ದಾಖಲಾಗುತ್ತವೆ.
ಬೆಂಗಳೂರು: ಕೋಗಿಲು ಲೇಔಟ್ ನಲ್ಲಿ ಅಕ್ರಮ ನಿರ್ಮಾಣ ತೆರವುಗೊಳಿಸಿದ ಪರಿಣಾಮ ಮನೆ ಕಳೆದುಕೊಂಡ ವಲಸಿಗ ಮುಸ್ಲಿಮರಿಗೆ ಮನೆ ನೀಡಲು ಮುಂದಾಗಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ ಸಾರಥಿ ಎನ್ನುವ ಖಾತೆದಾರ ನೆಟ್ಟಿಗರೊಬ್ಬರು ಎಲ್ಲಾ ಹಕ್ಕುಗಳೂ ಮುಸ್ಲಿಮರಿಗೆ, ಕರ್ತವ್ಯಗಳೆಲ್ಲಾ ಹಿಂದೂಗಳಿಗಾ ಎಂದು ಪ್ರಶ್ನೆ ಮಾಡಿದ್ದಾರೆ. ಸಿಎಂ ಸಿದ್ದರಾಮಯ್ಯ ಕೇಂದ್ರ ಸರ್ಕಾರದ ವಿರುದ್ಧ ನರೇಗಾ ಯೋಜನೆ ಹೆಸರು ಬದಲಾಯಿಸಿದ್ದಕ್ಕೆ ಕೇಂದ್ರಕ್ಕೆ ಬರೆದ ಪತ್ರದ ಕನ್ನಡ ಅನುವಾದವನ್ನು ಸಿಎಂ ಸೋಷಿಯಲ್ ಮೀಡಿಯಾದಲ್ಲಿ ಪ್ರಕಟಿಸಿದ್ದರು. ಇದಕ್ಕೆ ನೆಟ್ಟಿಗರೊಬ್ಬರು ಈ ರೀತಿ ಕಾಮೆಂಟ್ ಮಾಡಿದ್ದಾರೆ.
ಬಾಬಾ ವಂಗಾ ಭವಿಷ್ಯ ವಾಣಿಯ ಪ್ರಕಾರ 2026 ರಲ್ಲಿ ಕೆಲವು ಭಯಾನಕ ವಿಚಾರಗಳು ನಡೆಯಲಿವೆ. ಬಾಬಾ ವಂಗಾ ಭವಿಷ್ಯ ವಾಣಿ ಪ್ರಪಂಚದಾದ್ಯಂತ ಹೆಸರುವಾಸಿಯಾಗಿದೆ. ಮುಂದೆ ನಡೆಯಲಿರುವ ವಿಚಾರಗಳನ್ನು ಬಾಬಾ ವಂಗಾ ಭವಿಷ್ಯವಾಣಿ ಕರಾರುವಾಕ್ ಆಗಿ ಹೇಳುತ್ತದೆ. ಅದರಂತೆ 2026 ರಲ್ಲಿ ಪ್ರಪಂಚದಲ್ಲಿ ಹಲವು ಪ್ರಮುಖ ವಿಚಾರಗಳು ನಡೆಯಲಿವೆ. ಬಾಬಾ ವಂಗಾ ಭವಿಷ್ಯ ವಾಣಿ ಪ್ರಕಾರ 2026 ರಲ್ಲಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅಧಃಪತನವಾಗಲಿದೆ. ಮೂರನೇ ಮಹಾಯುದ್ಧ ನಡೆಯುವ ಸಂಭವವೂ ಇಲ್ಲದಿಲ್ಲ. 2026 ರಲ್ಲಿ ಪ್ರಪಂಚದಲ್ಲಿ ಹಲವು ಅಸ್ಥಿರತೆ, ಬದಲಾವಣೆ, ಯುದ್ಧಗಳು ನಡೆಯುವ ಸಂಭವವಿದೆ.
ಇಸ್ಲಾಮಾಬಾದ್: ಸಾಮಾನ್ಯವಾಗಿ ಸಹೋದರನನ್ನೇ ಯಾರೂ ಮದುವೆಯಾಗಲ್ಲ. ಆದರೆ ಪಾಕಿಸ್ತಾನದಲ್ಲಿ ಇದೂ ನಡೆಯುತ್ತಿದೆ. ಇದಕ್ಕೆ ಪಾಕಿಸ್ತಾನ ಸೇನಾ ಮುಖ್ಯಸ್ಥ ಜನರಲ್ ಮುನೀರ್ ತಮ್ಮ ಮಗಳನ್ನು ಸಹೋದರನಿಗೇ ಕೊಟ್ಟು ಮದುವೆ ಮಾಡಿಸಿರುವುದು ಉದಾಹರಣೆ. ವಿಚಿತ್ರವೆಂದರೂ ಇದು ಸತ್ಯ. ಪಾಕಿಸ್ತಾನ ಸೇನಾ ಜನರಲ್ ಮುನೀರ್ ತಮ್ಮ ಮಗಳನ್ನು ಸಹೋದರನ ಪುತ್ರನಿಗೇ ಮದುವೆ ಮಾಡಿಸಿದ್ದಾರೆ. ಅಂದರೆ ಸಂಬಂಧದಲ್ಲಿ ಚಿಕ್ಕಪ್ಪ ಅಥವಾ ದೊಡ್ಡಪ್ಪನ ಮಕ್ಕಳು ತಮಗೂ ಸಹೋದರನಾಗುತ್ತಾರೆ. ಆದರೆ ಮುನೀರ್ ತಮ್ಮ ಸಹೋದರ ಅಬ್ದುಲ್ ರೆಹಮಾನ್ ಪುತ್ರನೊಂದಿಗೇ ಮಗಳ ಮದುವೆ ಮಾಡಿಸಿದ್ದಾರೆ. ಈ ಮದುವೆಯನ್ನು ಗೌಪ್ಯವಾಗಿಟ್ಟಿದ್ದಾರೆ.
ಬೆಂಗಳೂರು: ಕೋಗಿಲು ಲೇಔಟ್ ನಲ್ಲಿ ತೆರವುಗೊಳಿಸಲಾಗಿರುವ ಎಲ್ಲರಿಗೂ ಮನೆ ಕೊಡಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಶಾಕಿಂಗ್ ಹೇಳಿಕೆ ನೀಡಿದ್ದಾರೆ. ಕೋಗಿಲು ಲೇಔಟ್ ನಲ್ಲಿ ಮುಸ್ಲಿಮರೇ ಇರುವ ಕಾರಣ ವೋಟ್ ಬ್ಯಾಂಕ್ ಕಾರಣಕ್ಕೆ ಕಾಂಗ್ರೆಸ್ ಸರ್ಕಾರ ಅಕ್ರಮವಾಗಿ ನೆಲೆಸಿರುವವರಿಗೂ ತಾವೇ ಸೂರು ಕಲ್ಪಿಸಿಕೊಡುತ್ತಿದೆ ಎಂದು ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ. ಸಾರ್ವಜನಿಕರೂ ಸರ್ಕಾರದ ಕ್ರಮಕ್ಕೆ ಭಾರೀ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಇದರ ನಡುವೆ ಡಿಕೆ ಶಿವಕುಮಾರ್ ಎಲ್ಲರಿಗೂ ಮನೆ ಕೊಡುತ್ತಿಲ್ಲ ಎಂದಿದ್ದಾರೆ. ಓಲೈಕೆ ರಾಜಕಾರಣ ಮಾಡುವ ಪ್ರಶ್ನೆಯೇ ಇಲ್ಲ.
ಬೆಂಗಳೂರು: ರಾಜ್ಯದಲ್ಲಿ ಇಂದೂ ಒಣಹವೆ ಮುಂದುವರಿಯಲಿದೆ. ಕಳೆದ ಕೆಲವು ದಿನಗಳಿದ್ದಂತೆ ಇಂದೂ ಗಡ ಗಡ ಚಳಿ ಕಂಡುಬರಲಿದೆ ಎಂದು ಹವಾಮಾನ ವರದಿಗಳು ಹೇಳುತ್ತಿವೆ. ಉತ್ತರ ಮತ್ತು ದಕ್ಷಿಣ ಒಳನಾಡಿನಲ್ಲಿ ಕಳೆದ ಎರಡು ದಿನಗಳಿಂದ ಚಳಿ ತೀವ್ರವಾಗಿದೆ. ಇಂದೂ ಕೂಡಾ ವಿಪರೀತ ಚಳಿಯಿರಲಿದೆ ಎಂದು ಹವಾಮಾನ ವರದಿಗಳು ಹೇಳುತ್ತಿವೆ. ಸಂಜೆ ಮತ್ತು ಬೆಳಗ್ಗಿನ ಹೊತ್ತು ಮನೆಯಿಂದ ಹೊರಗೆ ಹೋಗದೇ ಇರುವುದೇ ಉತ್ತಮ. ಬೆಂಗಳೂರು, ಮಂಡ್ಯ, ರಾಮನಗರ, ಚಿಕ್ಕಬಳ್ಳಾಪುರ, ದಾವಣಗೆರೆ, ಮೈಸೂರು, ತುಮಕೂರು, ಚಾಮರಾಜನಗರ, ಕೊಡಗು, ಹಾಸನ, ವಿಜಯನಗರ, ಶಿವಮೊಗ್ಗ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ಜಿಲ್ಲೆಗಳಲ್ಲಿ ಒಣ ಹವೆ ಕಂಡುಬರುವುದು.
ಬುಧವಾರಗಳಂದು ಗಣೇಶ ದೇವರ ದಿನವಾಗಿದೆ. ಈ ದಿನ ಗಣೇಶನ ಅನುಗ್ರಹಕ್ಕಾಗಿ ತಪ್ಪದೇ ಶ್ರೀ ಗಣಪತಿ ಸ್ತವಂ ಸ್ತೋತ್ರವನ್ನು ಓದಿ. ಕನ್ನಡದಲ್ಲಿ ಇಲ್ಲಿದೆ.ಬ್ರಹ್ಮವಿಷ್ಣುಮಹೇಶಾ ಊಚುಃ ।ಅಜಂ ನಿರ್ವಿಕಲ್ಪಂ ನಿರಾಕಾರಮೇಕಂನಿರಾನಂದಮದ್ವೈತಮಾನಂದಪೂರ್ಣಮ್ ।ಪರಂ ನಿರ್ಗುಣಂ ನಿರ್ವಿಶೇಷಂ ನಿರೀಹಂಪರಬ್ರಹ್ಮರೂಪಂ ಗಣೇಶಂ ಭಜೇಮ ॥ 1 ॥ ಗುಣಾತೀತಮಾದ್ಯಂ ಚಿದಾನಂದರೂಪಂಚಿದಾಭಾಸಕಂ ಸರ್ವಗಂ ಜ್ಞಾನಗಮ್ಯಮ್ ।ಮುನಿಧ್ಯೇಯಮಾಕಾಶರೂಪಂ ಪರೇಶಂಪರಬ್ರಹ್ಮರೂಪಂ ಗಣೇಶಂ ಭಜೇಮ ॥ 2 ॥ ಜಗತ್ಕಾರಣಂ ಕಾರಣಜ್ಞಾನರೂಪಂಸುರಾದಿಂ ಸುಖಾದಿಂ ಯುಗಾದಿಂ ಗಣೇಶಮ್ ।ಜಗದ್ವ್ಯಾಪಿನಂ ವಿಶ್ವವಂದ್ಯಂ ಸುರೇಶಂಪರಬ್ರಹ್ಮರೂಪಂ ಗಣೇಶಂ ಭಜೇಮ ॥ 3 ॥
ತಿರುವನಂತಪುರಂ: ಭಾರತ ಮತ್ತು ಶ್ರೀಲಂಕಾ ವನಿತೆಯರ ಕೊನೆಯ ಟಿ20 ಪಂದ್ಯದಲ್ಲಿ ಭಾರತದ ಬೌಲರ್ ದೀಪ್ತಿ ಶರ್ಮಾ ಟಿ20 ಕ್ರಿಕೆಟ್ ನಲ್ಲಿ ಗರಿಷ್ಠ ವಿಕೆಟ್ ಪಡೆದ ಸಾಧನೆ ಮಾಡಿದ್ದಾರೆ. ಈ ಪಂದ್ಯವನ್ನು ಭಾರತ 15 ರನ್ ಗಳೊಂದಿಗೆ ಗೆದ್ದುಕೊಂಡು ಸರಣಿ ಕ್ಲೀನ್ ಸ್ವೀಪ್ ಮಾಡಿದೆ. ಈಗಾಗಲೇ ಸರಣಿ ಗೆದ್ದಿರುವುದರಿಂದ ಭಾರತ ಈ ಪಂದ್ಯಕ್ಕೆ ತನ್ನ ಬೆಂಚ್ ಸ್ಟ್ರೆಂಗ್ತ್ ಪರೀಕ್ಷಿಸಿತ್ತು. ಇಂದು ಸ್ಮೃತಿ ಮಂಧಾನ, ರೇಣುಕಾ ಸಿಂಗ್ ಠಾಕೂರ್ ರಂತಹ ಪ್ರಮುಖ ಆಟಗಾರರಿಗೆ ವಿಶ್ರಾಂತಿ ನೀಡಲಾಗಿತ್ತು. ಅವರ ಬದಲು ಜಿ ಕಮಲಿನಿ ಚೊಚ್ಚಲ ಪಂದ್ಯವಾಡುವ ಅವಕಾಶ ಪಡೆದರು.
ಬೆಳಗಾವಿ: ಬೆಂಗಳೂರಿನ ಕೋಗಿಲು ಬಡಾವಣೆಯಲ್ಲಿ ಅಕ್ರಮ ಮನೆಗಳ ತೆರವು ವಿಚಾರದಲ್ಲಿ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಗಳು ಇದೀಗ ಯೂಟರ್ನ್ ಹೊಡೆದಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಟೀಕಿಸಿದ್ದಾರೆ.ಮಾಧ್ಯಮ ಗೋಷ್ಠಿಯಲ್ಲಿ ಇಂದು ಮಾತನಾಡಿದ ಅವರು, ಕಾಂಗ್ರೆಸ್ ಸರಕಾರದ ನೀತಿಯಿಂದ ರಾಜ್ಯದ ಜನರು ದಂಗೆ ಏಳುವಂಥ ಸ್ಥಿತಿ ಇದೆ. ಜನವರಿ 5ರಂದು ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆ ಇದೆ. ಡ್ರಗ್ ಮಾಫಿಯ, ಕನ್ನಡಿಗರಿಗೆ ಅಪಮಾನ, ಗೃಹಲಕ್ಷ್ಮಿ ಯೋಜನೆಯ ಅಕ್ರಮದ ಕುರಿತು ಸಮಗ್ರವಾಗಿ ಚರ್ಚಿಸಿ ಬಿಜೆಪಿ ರಾಜ್ಯಾದ್ಯಂತ ಬೀದಿಗಿಳಿದು ಹೋರಾಟ ಮಾಡುವ ಬಗ್ಗೆ ರೂಪುರೇಷೆಗಳನ್ನು ನಿರ್ಧರಿಸಲಿದ್ದೇವೆ ಎಂದು ಪ್ರಕಟಿಸಿದರು.
ನವದೆಹಲಿ: ವಾಹನ ಚಲಾಯಿಸುವಾಗ ಮೈ ಎಲ್ಲಾ ಕಣ್ಣಾಗಿದ್ದರೂ ಸಾಲದು. ಸೋಷಿಯಲ್ ಮೀಡಿಯಾದಲ್ಲಿ ಸದ್ಯಕ್ಕೆ ಈಗ ಎದೆ ಝಲ್ಲೆನಿಸುವ ಆಕ್ಸಿಡೆಂಟ್ ವಿಡಿಯೋ ಒಂದು ವೈರಲ್ ಆಗ್ತಿದೆ. ಉತ್ತರ ಪ್ರದೇಶದ ರಾಂಪುರದಲ್ಲಿ ನಡೆದ ಘಟನೆಯಿದು. ತೊಗಟು ಹೊತ್ತಿದ್ದ ಬೃಹತ್ ಟ್ರಕ್ ಒಂದು ಬೊಲೆರೋ ವಾಹನವೊಂದರ ಮೇಲೆ ಬೀಳುವ ಭಯಾನಕ ವಿಡಿಯೋ ಈಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಬೊಲೆರೋ ವಾಹನ ಎಲೆಕ್ಟ್ರಿಸಿಟಿ ವಿಭಾಗದ ಅಧಿಕಾರಿಗಳ ಸರ್ಕಾರೀ ವಾಹನವಾಗಿತ್ತು ಎನ್ನಲಾಗಿದೆ. ರಾಂಪುರದಲ್ಲಿ ಹೆದ್ದಾರಿಯಲ್ಲಿ ಬೊಲೆರೋ ವಾಹನ ಸಿಗ್ನಲ್ ನೀಡದೇ ರಸ್ತೆ ಕ್ರಾಸ್ ಮಾಡಲು ಹೊರಟಿದೆ.
ಬೆಂಗಳೂರು: ಕೇರಳದ ಚುನಾವಣೆಯ ಕಾವು ಕರ್ನಾಟಕದಲ್ಲಿ ಏನು ಕೆಲಸ ಮಾಡುತ್ತಿದೆ ಎಂದು ಕೇಂದ್ರ ಸಚಿವೆ ಕು. ಶೋಭಾ ಕರಂದ್ಲಾಜೆ ಅವರು ಪ್ರಶ್ನಿಸಿದ್ದಾರೆ.ಬಿಜೆಪಿ ರಾಜ್ಯ ಕಾರ್ಯಾಲಯ "ಜಗನ್ನಾಥ ಭವನ"ದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕಕ್ಕೆ ಹೊರದೇಶಗಳಿಂದ ಅಕ್ರಮ ವಲಸೆ ಬರುತ್ತಿರುವವರ ಕುರಿತು ಉನ್ನತ ಮಟ್ಟದ ತನಿಖೆ ಆಗಬೇಕು ಎಂದು ಆಗ್ರಹಿಸಿದರು. ಡ್ರಗ್ ಮಾಫಿಯ ನಿರತ ಅಕ್ರಮ ವಲಸಿಗರ ವಿರುದ್ಧ ಎಲ್ಲ ಇಲಾಖೆಗಳು ಸೇರಿ ಕ್ರಮ ಕೈಗೊಳ್ಳಲಿ ಎಂದು ವಿನಂತಿಸಿದರು. ರಾಜ್ಯ ಸರಕಾರವೂ ರೋಹಿಂಗ್ಯಾಗಳನ್ನು ಪತ್ತೆ ಹಚ್ಚಿ ಹೊರಹಾಕಲು ಸಹಕರಿಸಬೇಕಿದೆ ಎಂದು ಮನವಿ ಮಾಡಿದರು.
ನವದೆಹಲಿ: ನೆಹರೂ ವಂಶದಲ್ಲಿ ಮದುವೆ ಸಂಭ್ರಮ ಶುರುವಾಗಿದೆ. ರಾಹುಲ್ ಗಾಂಧಿಗಿಂತ ಮೊದಲು ನೆಹರೂ ಕುಟುಂಬದಲ್ಲಿ ಮತ್ತೊಬ್ಬರ ಮದುವೆಯಾಗುತ್ತಿದೆ. ಯಾರದ್ದು ಇಲ್ಲಿದೆ ನೋಡಿ ವಿವರ. ರಾಹುಲ್ ಗಾಂಧಿ ಸಹೋದರಿ ಪ್ರಿಯಾಂಕ ಗಾಂಧಿ ವಾದ್ರಾ ಪುತ್ರ ರೆಹಾನ್ ವಾದ್ರಾ ಸದ್ಯದಲ್ಲೇ ಮದುವೆಯಾಗಲಿದ್ದು ಮುಂದಿನ ತಿಂಗಳೇ ಎಂಗೇಜ್ ಮೆಂಟ್ ಮಾಡಿಕೊಳ್ಳಲಿದ್ದಾರೆ ಎಂಬ ಸುದ್ದಿ ಕೇಳಿಬಂದಿದೆ. ನೆಹರೂ ಕುಟುಂಬದಲ್ಲಿ ರಾಹುಲ್ ಗಾಂಧಿ ಇನ್ನೂ ಮದುವೆಯಾಗಿಲ್ಲ. ಮಾವ ರಾಹುಲ್ ಗಿಂತ ಮೊದಲು ಈಗ ಅಳಿಯ ರೆಹಾನ್ ವೈವಾಹಿಕ ಜೀವನಕ್ಕೆ ಕಾಲಿಡುತ್ತಿದ್ದಾರೆ.
ಬೆಂಗಳೂರು: ಅಕ್ರಮ ವಾಸಿಗಳಿಗೆ ಕನ್ನಡಿಗರ ತೆರಿಗೆ ಹಣದಲ್ಲಿ ಶಾಶ್ವತ ಮನೆ ಎಂದರೆ ಏನು ಅರ್ಥ ಎಂದು ಕೋಗಿಲು ಲೇಔಟ್ ನಿವಾಸಿಗಳಿಗೆ ಮನೆ ಕಟ್ಟಿಸಿಕೊಡುವ ರಾಜ್ಯ ಸರ್ಕಾರದ ನಿರ್ಧಾರದ ವಿರುದ್ಧ ಸಿಟಿ ರವಿ ವಾಗ್ದಾಳಿ ನಡೆಸಿದ್ದಾರೆ. ಕೋಗಿಲು ಲೇಔಟ್ ನಲ್ಲಿ ಅಕ್ರಮವಾಗಿ ನಿರ್ಮಿಸಿದ್ದ ಮನೆಗಳನ್ನು ಕೆಡವಲಾಗಿತ್ತು. ಈ ವಿಚಾರ ರಾಜಕೀಯ ತಿರುವು ಪಡೆಯುತ್ತಿದ್ದಂತೇ ಸರ್ಕಾರ ಈ ಅಕ್ರಮ ನಿವಾಸಿಗಳಿಗೆ ಮನೆ ಕೊಡಲು ಮುಂದಾಗಿದೆ. ಇದರ ಬಗ್ಗೆ ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಬೆಂಗಳೂರು: ಚಿನ್ನದ ಬೆಲೆ ಪ್ರತಿನಿತ್ಯ ಏರಿಳಿಕೆಯಾಗುತ್ತಲೇ ಇದೆ. ಇಂದು ಪರಿಶುದ್ಧ ಚಿನ್ನದ ದರ ಮತ್ತು ಇತರೆ ಚಿನ್ನದ ದರ ಕೊಂಚ ಇಳಿಕೆಯಾಗಿದೆ. ಇಂದು ಪರಿಶುದ್ಧ ಚಿನ್ನದ ದರ ಮತ್ತು ಇತರೆ ಚಿನ್ನದ ದರ ವಿವರ ಇಲ್ಲಿದೆ ನೋಡಿ. ಚಿನ್ನದ ದರ ಏರಿಕೆಕಳೆದ ವಾರ ಪರಿಶುದ್ಧ ಚಿನ್ನದ ದರ ಸತತ ಇಳಿಕೆ ಕಂಡಿತ್ತು. ಆದರೆ ವಾರಂತ್ಯಕ್ಕೆ ಚಿನ್ನದ ದರ ಏರಿಕೆ-ಇಳಿಕೆಯಾಗುತ್ತಲೇ ಇತ್ತು. ಈ ವಾರವೂ ಇದೇ ಟ್ರೆಂಡ್ ಮುಂದುವರಿಯುವ ಲಕ್ಷಣವಿದೆ. ಇಂದು ಪರಿಶುದ್ಧ ಚಿನ್ನದ ದರ ಕೊಂಚ ಇಳಿಕೆಯಾಗಿದೆ. ಪರಿಶುದ್ಧ ಚಿನ್ನದ ದರ ಮೊನ್ನೆ 1,43,165.00 ರೂ.ಗಳಿತ್ತು. ಇಂದು 1,40,975.00 ರೂ.ಗಳಷ್ಟಾಗಿದೆ.
ಬೆಂಗಳೂರು: ಅಡಿಕೆ ಬೆಲೆ ಒಂದು ವಾರದಿಂದ ಯಥಾಸ್ಥಿತಿಯಲ್ಲಿತ್ತು. ಇಂದು ಮತ್ತೆ ಯಥಾಸ್ಥಿತಿಯಲ್ಲಿದೆ. ಇಂದು ಅಡಿಕೆ ಮತ್ತು ಕಾಳು ಮೆಣಸು, ಕೊಬ್ಬರಿ ದರ ಹೇಗಿದೆ ಇಲ್ಲಿದೆ ವಿವರ. ಅಡಿಕೆ ಬೆಲೆ ಏರಿಕೆಯೂ ಅಲ್ಲ ಇಳಿಕೆಯೂ ಇಲ್ಲ ಎನ್ನುವ ಸ್ಥಿತಿಯಲ್ಲಿತ್ತು. ಒಂದೆಡೆ ಬೆಳೆ ಕಡಿಮೆ, ಇನ್ನೊಂದೆಡೆ ಬೆಲೆ ಏರಿಕೆಯಾಗದೇ ಇರುವುದು ರೈತರ ಚಿಂತೆಗೆ ಕಾರಣವಾಗಿದೆ. ಅಡಿಕೆ ಬೆಲೆ ಇಳಿಕೆಯಾಗುತ್ತಿದೆಯೇ ಹೊರತು ಏರಿಕೆಯಾಗುತ್ತಿಲ್ಲ ಎಂಬ ಚಿಂತೆ ಬೆಳೆಗಾರರದ್ದು. ಇಂದು ಹೊಸ ಅಡಿಕೆ ಬೆಲೆ 415 ರೂ.ಗಳಷ್ಟಿದೆ. ಹಳೆ ಅಡಿಕೆ ಬೆಲೆ ಯಥಾಸ್ಥಿತಿಯಲ್ಲಿದ್ದು 525 ರೂ. ಗಳಷ್ಟಿದೆ. ಆದರೆ ಡಬಲ್ ಚೋಲ್ ಬೆಲೆ ಯಥಾಸ್ಥಿತಿಯಲ್ಲಿದ್ದು 530 ರೂ.ಗಳಷ್ಟಾಗಿದೆ.
ಬೆಂಗಳೂರು: ನಗರದ ಕೋಗಿಲು ಲೇಔಟ್ ನಲ್ಲಿ ಅಕ್ರಮವಾಗಿ ನಿರ್ಮಿಸಿದ್ದ ಮುಸ್ಲಿಮರ ಮನೆ ತೆರವು ಪ್ರಕರಣಕ್ಕೆ ಶತ್ರುರಾಷ್ಟ್ರ ಪಾಕಿಸ್ತಾನವೂ ಎಂಟ್ರಿ ಕೊಟ್ಟಿದೆ. ಇದಕ್ಕೀಗ ಭಾರತ ತಿರುಗೇಟು ನೀಡಿದೆ. ಕೋಗಿಲು ಲೇಔಟ್ ನಲ್ಲಿ ಅಕ್ರಮವಾಗಿ ಸರ್ಕಾರೀ ಜಾಗದಲ್ಲಿ ನಿರ್ಮಿಸಿದ್ದ ಮನೆಗಳನ್ನು ರಾಜ್ಯ ಸರ್ಕಾರ ತೆರವುಗೊಳಿಸಿತ್ತು. ಈ ಸಂಬಂಧ ಮೊದಲು ಕೇರಳ ಸಿಎಂ ಪಿಣರಾಯಿ ವಿಜಯನ್ ಕಿಡಿ ಕಾರಿದ್ದರು. ಇದರ ಬೆನ್ನಲ್ಲೇ ಕಾಂಗ್ರೆಸ್ ಹೈಕಮಾಂಡ್ ಅವರಿಗೆ ಪುನರ್ವಸತಿ ಕಲ್ಪಿಸಲು ಸೂಚಿಸಿತ್ತು. ಅದರಂತೆ ಈಗ ರಾಜ್ಯ ಸರ್ಕಾರ ವಲಸಿಗರಿಗೆ ಮನೆ ನೀಡಲು ಮುಂದಾಗಿದೆ. ಈ ಬಗ್ಗೆ ಜನರಲ್ಲಿ ಅಸಮಾಧಾನ ಇರುವಾಗಲೇ ಈಗ ಪಾಕಿಸ್ತಾನವೂ ಈ ವಿಚಾರದಲ್ಲಿ ಮೂಗು ತೂರಿಸಿದೆ.
ಇತ್ತೀಚೆಗೆ ಚಿತ್ರದುರ್ಗದಲ್ಲಿ ಸ್ಲೀಪರ್ ಬಸ್ ಗೆ ಬೆಂಕಿ ಬಿದ್ದು 7 ಜನ ಸಜೀವ ದಹನವಾಗಿದ್ದರು. ಇದಾದ ಬಳಿಕ ಸ್ಲೀಪರ್ ಬಸ್ ಅಪಾಯಕಾರಿ ಎನ್ನುವ ಮಾತುಗಳು ಕೇಳಿಬರುತ್ತಿವೆ. ಸ್ಲೀಪರ್ ಬಸ್ ನಲ್ಲಿದ್ದಾಗ ಬೆಂಕಿ ಕಾಣಿಸಿಕೊಂಡರೆ ಎಸ್ಕೇಪ್ ಆಗಲು ಏನು ಮಾಡಬೇಕು ಇಲ್ಲಿದೆ ಟಿಪ್ಸ್. ಸ್ಲೀಪರ್ ಬಸ್ ಗಳು ಇತರೆ ಬಸ್ ಗಳಿಗೆ ಹೋಲಿಸಿದರೆ ಕಾಲು ಚಾಚಿ ಪ್ರಯಾಣ ಮಾಡಲು ಆರಾಮದಾಯಕ. ಆದರೆ ಏನಾದರೂ ಒಂದು ಅನಾಹುತವಾಗಿ ಬೆಂಕಿಯೇನಾದರೂ ಕಾಣಿಸಿಕೊಂಡಿತೋ ಈ ಬಸ್ ನಷ್ಟು ಅಪಾಯಕಾರಿ ಮತ್ತೊಂದು ಇಲ್ಲ. ಯಾಕೆಂದರೆ ಸ್ಲೀಪರ್ ಬಸ್ ಗಳ ರಚನೆಯೇ ಹಾಗಿದೆ.
ಬೆಂಗಳೂರು: ಕೋಗಿಲು ಲೇಔಟ್ ನಲ್ಲಿ ಅಕ್ರಮವಾಗಿ ನಿರ್ಮಿಸಲಾಗಿದ್ದು ವಲಸಿಗರ ಮನೆ ತೆರವು ಮಾಡಿದ ವಿಚಾರಕ್ಕೆ ಕರ್ನಾಟಕ ಸರ್ಕಾರದ ವಿರುದ್ಧ ಕೇರಳ ಸಿಎಂ ಪಿಣರಾಯಿ ವಿಜಯನ್ ಸಿಟ್ಟಾಗಿದ್ದರು. ಇದರ ಬೆನ್ನಲ್ಲೇ ಈಗ ಸಿಎಂ ಸಿದ್ದರಾಮಯ್ಯ ಕೇರಳ ಟೂರ್ ಮಾಡಲಿದ್ದಾರೆ. ಕೇರಳದಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲು ಸಿದ್ದರಾಮಯ್ಯ ತೆರಳುತ್ತಿದ್ದಾರೆ. ಇಂದು ಕೇರಳಕ್ಕೆ ಪ್ರವಾಸ ಮಾಡಲಿರುವ ಸಿದ್ದರಾಮಯ್ಯ ನಾರಾಯಣ ಧರ್ಮ ಸಂಘದಿಂದ ಆಯೋಜಿಸಲಾಗಿರುವ 93 ನೇ ಶಿವಗಿರಿ ತೀರ್ಥೋದ್ಭವ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ಬಳಿಕ ಕೆಸಿ ವೇಣುಗೋಪಾಲ್ ಅವರ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ.
ದಕ್ಷಿಣ ಕನ್ನಡ: ಪುತ್ತೂರು ಯುವತಿ ಕೈಗೆ ಮಗು ಕೊಟ್ಟು ಮದುವೆಯಾಗಲ್ಲ ಎಂದು ವಂಚಿಸುತ್ತಿರುವ ಬಿಜೆಪಿ ಮುಖಂಡನ ಪತ್ರ ಕೃಷ್ಣ ಜೆ ರಾವ್ ಪ್ರಕರಣಕ್ಕೆ ಈಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಇದುವರೆಗೆ ಕೆಪಿ ನಂಜುಂಡಿ ನೇತೃತ್ವದಲ್ಲಿ ಯುವತಿ ಮನೆಯವರು ಸಂಧಾನದ ಮೂಲಕ ಪ್ರಕರಣ ಸುಖಾಂತ್ಯಗೊಳಿಸಲು ಪ್ರಯತ್ನ ನಡೆಸಿದ್ದಾರೆ. ಯುವತಿಗೆ ವಂಚಿಸಿದ ಪ್ರಕರಣದಲ್ಲಿ ಕೃಷ್ಣ ಜೆ ರಾವ್ ನ್ಯಾಯಾಂಗ ಬಂಧನದಲ್ಲಿದ್ದು ಈಗ ಜಾಮೀನಿನ ಮೇಲೆ ಬಿಡುಗಡೆಯಾಗಿದೆ. ಇದರ ನಡುವೆ ಮಗು ಕೂಡಾ ಆತನದ್ದೇ ಎಂದು ಡಿಎನ್ ಎ ಪರೀಕ್ಷೆ ಮೂಲಕ ಖಚಿತವಾಗಿತ್ತು. ಹಾಗಿದ್ದರೂ ಕೃಷ್ಣ ಮದುವೆಯಾಗಲು ಒಪ್ಪುತ್ತಿಲ್ಲ. ಮಗುವಿಗೆ ಆರು ತಿಂಗಳು ತುಂಬಿದೆ.
ಬೆಂಗಳೂರು: ಬಿಜೆಪಿ ಜೊತೆ ಸ್ಥಳೀಯ ಸಂಸ್ಥೆ ಚುನಾವಣೆಗೆ ಮೈತ್ರಿ ಇಲ್ಲ ಎಂದಿದ್ದ ಜೆಡಿಎಸ್ ವರಿಷ್ಠ ದೇವೇಗೌಡ ಟ್ವಿಸ್ಟ್ ಕೊಟ್ಟು ಒಂದೇ ದಿನಕ್ಕೆ ಉಲ್ಟಾ ಹೊಡೆದಿದ್ದಾರೆ. ಸ್ಥಳೀಯ ಸಂಸ್ಥೆ ಚುನಾವಣೆಗೆ ಬಿಜೆಪಿ ಜೊತೆ ಮೈತ್ರಿ ಮಾಡಲ್ಲ. ಜೆಡಿಎಸ್ ಏಕಾಂಗಿಯಾಗಿ ಸ್ಪರ್ಧಿಸುತ್ತದೆ ಎಂದು ದೇವೇಗೌಡರು ಹೇಳಿಕೆ ನೀಡಿದ್ದರು. ಅವರ ಹೇಳಿಕೆ ಬಿಜೆಪಿ-ಜೆಡಿಎಸ್ ಮೈತ್ರಿ ಬಗ್ಗೆ ಅನುಮಾನ ಮೂಡುವಂತೆ ಮಾಡಿತ್ತು. ಆದರೆ ಈಗ ಒಂದೇ ದಿನಕ್ಕೆ ಉಲ್ಟಾ ಹೊಡೆದಿದ್ದು ಬಿಜೆಪಿ ಜೊತೆ ಮೈತ್ರಿ ಬಗ್ಗೆ ಚರ್ಚಿಸುತ್ತೇವೆ ಎಂದು ಕೊಂಚ ಮೃದು ಧೋರಣೆ ತಿಳಿಸಿದ್ದಾರೆ.
ಬೆಂಗಳೂರು: ಕೋಗಿಲು ಲೇಔಟ್ ನಲ್ಲಿ ಅಕ್ರಮ ನಿರ್ಮಾಣ ತೆರವು ಮಾಡಿದ ಬಳಿಕ ಮನೆ ಕಳೆದುಕೊಂಡವರಿಗೆ ಮನೆ ನೀಡಲು ಮುಂದಾಗಿರುವ ರಾಜ್ಯ ಸರ್ಕಾರದ ಕ್ರಮಕ್ಕೆ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದು ನಮಗೂ ಮನೆ ಕಟ್ಟಿಕೊಡಿ ಎಂದು ಡಿಕೆಶಿಗೆ ಸೋಷಿಯಲ್ ಮೀಡಿಯಾದಲ್ಲಿ ಆಗ್ರಹಿಸಿದ್ದಾರೆ. ಯಲಹಂಕದ ಕೋಗಿಲು ಬಡಾವಣೆಯ ಅಕ್ರಮ ನಿರ್ಮಾಣ ತೆರವು ಸಂಬಂಧ ಇಂದು ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ವಸತಿ ಸಚಿವರಾದ ಜಮೀರ್ ಅಹ್ಮದ್ ಖಾನ್, ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಸಿಎಂ ಅಧಿಕೃತ ನಿವಾಸ ಕಾವೇರಿಯಲ್ಲಿ ನಡೆದ ಸಭೆಯಲ್ಲಿ ಭಾಗವಹಿಸಿದ ಬಗ್ಗೆ ಡಿಕೆ ಶಿವಕುಮಾರ್ ಸೋಷಿಯಲ್ ಮೀಡಿಯಾದಲ್ಲಿ ಮಾಹಿತಿ ಹಂಚಿಕೊಂಡಿದ್ದರು.
ಬೆಂಗಳೂರು: ಕೋಗಿಲು ಲೇಔಟ್ ನಿವಾಸಿಗಳಿಗೆ ಅಕ್ರಮವಾಗಿ ನೆಲೆಸಿದ್ದರೂ ಒಂದೇ ದಿನದಲ್ಲಿ ಮನೆ ಸಿಗುತ್ತಿದೆ. ಆದರೆ ಕೊಡಗು ಪ್ರವಾಸ ಸಂತ್ರಸ್ತರಿಗೆ ವರ್ಷ ಕಳೆದರೂ ಮನೆ ಸಿಕ್ಕಿಲ್ಲ. ಕೋಗಿಲು ಲೇಔಟ್ ನಲ್ಲಿ ಸರ್ಕಾರೀ ಜಮೀನಿನಲ್ಲಿ ಅಕ್ರವಮಾಗಿ ಮನೆ ಕಟ್ಟಿಕೊಂಡಿದ್ದ ವಲಸಿಗರ ಮನೆಯನ್ನು ಸರ್ಕಾರ ಕೆಡವಿತ್ತು. ಇದರ ಬಗ್ಗೆ ಕೇರಳ ಸರ್ಕಾರ ಕಿಡಿ ಕಾರುತ್ತಿದ್ದಂತೇ ಕಾಂಗ್ರೆಸ್ ಹೈಕಮಾಂಡ್ ವಲಸಿಗರಿಗೆ ಸೂರು ಒದಗಿಸುವಂತೆ ತಾಕೀತು ಮಾಡಿತ್ತು. ಇದರ ಬೆನ್ನಲ್ಲೇ ಡಿಕೆ ಶಿವಕುಮಾರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದರು.
ಢಾಕಾ: ಬಾಂಗ್ಲಾದೇಶದ ಮೊದಲ ಮಹಿಳಾ ಪ್ರಧಾನಿಯಾಗಿದ್ದ ಖಲೀದಾ ಜಿಯಾ ನಿಧನರಾಗಿದ್ದಾರೆ. ಅವರಿಗೆ 80 ವರ್ಷ ವಯಸ್ಸಾಗಿತ್ತು. ಬಿಎನ್ ಪಿ ಪಕ್ಷದ ಪ್ರಮುಖ ನಾಯಕಿಯಾಗಿದ್ದ ಖಲೀದಾ ಹೃದಯ ಮತ್ತು ಶ್ವಾಸಕೋಶ ಸೋಂಕಿಗೆ ಸಂಬಂಧಿಸಿದ ಅನಾರೋಗ್ಯದಿಂದ ಬಳಲುತ್ತಿದ್ದರು. ಇದೀಗ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಬಾಂಗ್ಲಾ ರಾಜಕೀಯದಲ್ಲಿ ಖಲೀದಾ ಪ್ರಮುಖ ವ್ಯಕ್ತಿಯಾಗಿದ್ದರು. ನವಂಬರ್ 23 ರಿಂದ ಅವರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ವಯೋಸಹಜವಾಗಿ ಅವರಿಗೆ ಹಲವು ಖಾಯಿಲೆಗಳೂ ಇತ್ತು ಎನ್ನಲಾಗಿದೆ. ಕೆಲವು ಸಮಯ ಅವರು ಲಂಡನ್ ನಲ್ಲಿ ಚಿಕಿತ್ಸೆ ಪಡೆದು ಮರಳಿದ್ದರು.
ಬೆಂಗಳೂರು: ಹೊಸ ವರ್ಷದ ಪಾರ್ಟಿ ಮಾಡಲು ಡಿಸೆಂಬರ್ 31 ರಂದು ತಡರಾತ್ರಿಯವರೆಗೆ ಹೊರಗೆ ಓಡಾಡಿಕೊಂಡುವವರಿಗೆ ನಮ್ಮ ಮೆಟ್ರೋ ಗುಡ್ ನ್ಯೂಸ್ ನೀಡಿದೆ. ಹೊಸ ವರ್ಷದ ಪಾರ್ಟಿ, ಸಂಭ್ರಮಾಚರಣೆ ಬೆಂಗಳೂರಿನಲ್ಲಿ ಮೇರೆ ಮೀರಿರುತ್ತದೆ. ತಡರಾತ್ರಿಯವರೆಗೂ ಪಾರ್ಟಿಗಳು ನಡೆಯುತ್ತವೆ. ಇದಾದ ಬಳಿಕ ಮನೆಗೆ ಹೋಗಲು ಅನುಕೂಲವಾಗಲು ನಮ್ಮ ಮೆಟ್ರೋ ಡಿಸೆಂಬರ್ 31 ರಂದು ಹೆಚ್ಚುವರಿ ಸೇವೆ ನೀಡಲಿದೆ. 31 ರಂದು ರಾತ್ರಿ 11.30 ರಿಂದ ಬೆಳಗ್ಗಿನ ಜಾವ 3.10 ರವರೆಗೂ ವಿಸ್ತೃತ ಸೇವೆ ಒದಗಿಸಲು ಮೆಟ್ರೋ ಮುಂದಾಗಿದೆ. ಸಾರ್ವಜನಿಕರು ಸುರಕ್ಷಿತವಾಗಿ ಮನೆಗೆ ಮರಳಲು ಅನುಕೂಲವಾಗುವ ದೃಷ್ಟಿಯಿಂದ ಈ ವ್ಯವಸ್ಥೆ ಮಾಡಲಾಗಿದೆ.
ಬೆಂಗಳೂರು: ಇಂದು ವೈಕುಂಠ ಏಕಾದಶಿಯಾಗಿದ್ದು ಮಹಾವಿಷ್ಣುವಿನ ಆರಾಧನೆ ಮಾಡುವುದರಿಂದ ಮೋಕ್ಷ ಸಿಗುತ್ತದೆ ಎಂಬ ನಂಬಿಕೆಯಿದೆ. ಇಂದು ಮಹಾವಿಷ್ಣುವಿನ ಈ ಮಂತ್ರವನ್ನು ತಪ್ಪದೇ ಪಠಿಸಿ. ವೈಕುಂಠ ಏಕಾದಶಿಯಂದು ವಿಷ್ಣುವಿನ ಆರಾಧನೆ, ಮಂತ್ರ ಪಠನೆ, ಪೂಜೆ ಮಾಡುವುದರಿಂದ ಪುಣ್ಯ ಪ್ರಾಪ್ತಿಯಾಗುವುದು. ಅಲ್ಲದೆ ಮೋಕ್ಷ ಪ್ರಾಪ್ತಿಯಾಗುವುದು ಎಂಬ ನಂಬಿಕೆಯಿದೆ. ಸ್ವರ್ಗದ ಬಾಗಿಲುಗಳು ತೆರೆದಿರುತ್ತದೆ ಎನ್ನಲಾಗಿದೆ. ವಿಶೇಷವಾಗಿ ವೈಕುಂಠ ಏಕಾದಶಿ ದಿನ ಮಹಾವಿಷ್ಣುವಿನ ಮೂಲ ಮಂತ್ರ ‘ಓಂ ನಮೋ ಭಗವತೇ ವಾಸುದೇವಾಯ’ ಮಂತ್ರವನ್ನು ಪಠಿಸಿ. ಇದರ ಜೊತೆಗೆ ಈ ಒಂದು ಮಂತ್ರವನ್ನು ತಪ್ಪದೇ ಓದಿ.
ಮಂಗಳವಾರ ಸುಬ್ರಹ್ಮಣ್ಯ ದೇವರಿಗೆ ವಿಶೇಷವಾಗಿದ್ದು ಇಂದು ವಿವಾಹ, ಸಂತಾನಕ್ಕೆ ಅಡ್ಡಿಯಾಗುತ್ತಿದ್ದರೆ ಕಾರ್ತಿಕೇಯ ಕರಾವಲಂಬ ಸ್ತೋತ್ರವನ್ನು ತಪ್ಪದೇ ಓದಿ.ಸಿಂಗಾರ ವೇಲ ಸಕಲೇಶ್ವರ ದೀನಬಂಧೋ ।ಸಂತಾಪನಾಶನ ಸನಾತನ ಶಕ್ತಿಹಸ್ತಶ್ರೀಕಾರ್ತಿಕೇಯ ಮಮ ದೇಹಿ ಕರಾವಲಂಬಮ್ ॥ 1 ಪಂಚಾದ್ರಿವಾಸ ಸಹಜಾ ಸುರಸೈನ್ಯನಾಥಪಂಚಾಮೃತಪ್ರಿಯ ಗುಹ ಸಕಲಾಧಿವಾಸ ।ಗಂಗೇಂದು ಮೌಳಿ ತನಯ ಮಯಿಲ್ವಾಹನಸ್ಥಶ್ರೀಕಾರ್ತಿಕೇಯ ಮಮ ದೇಹಿ ಕರಾವಲಂಬಮ್ ॥ 2 ಆಪದ್ವಿನಾಶಕ ಕುಮಾರಕ ಚಾರುಮೂರ್ತೇತಾಪತ್ರಯಾಂತಕ ದಾಯಾಪರ ತಾರಕಾರೇ ।ಆರ್ತಾಽಭಯಪ್ರದ ಗುಣತ್ರಯ ಭವ್ಯರಾಶೇಶ್ರೀಕಾರ್ತಿಕೇಯ ಮಮ ದೇಹಿ ಕರಾವಲಂಬಮ್ ॥ 3
ಬೆಂಗಳೂರು: 2026ರ ಹೊಸ ವರ್ಷಾಚರಣೆ ಆರಂಭ ಹಿನ್ನೆಲೆ ಬೆಂಗಳೂರು ಮೆಟ್ರೊ ರೈಲುಗಳ ಸೇವೆಗಳನ್ನು ವಿಸ್ತರಣೆಗೊಳಿಸಲಾಗಿದೆ. ಈ ವಿಚಾರವಾಗಿ ಬಿಎಂಆರ್ಸಿಎಲ್ ಈ ವಿಚಾರವನ್ನು ಹಂಚಿಕೊಂಡಿದೆ. ಹೊಸ ವರ್ಷದ ಸಂಭ್ರಮ-2026ರ ಅಂಗವಾಗಿ ಸಾರ್ವಜನಿಕರಿಗೆ ಸುರಕ್ಷಿತ ಹಾಗೂ ಸುಗಮ ಪ್ರಯಾಣವನ್ನು ಒದಗಿಸುವ ಉದ್ದೇಶದಿಂದ ಮೆಟ್ರೊ ರೈಲು ಸೇವೆಯನ್ನು ವಿಸ್ತರಿಸಲಾಗಿದೆ. ನೇರಳೆ, ಹಸಿರು ಹಾಗೂ ಹಳದಿ ಮಾರ್ಗಗಳಲ್ಲಿ ಮೆಟ್ರೊ ರೈಲು ಸೇವೆಗಳನ್ನು ವಿಸ್ತರಿಸಲಾಗುತ್ತಿದೆ ಎಂದು ಪ್ರಕಟಣೆಯಲ್ಲಿ ಹೇಳಿದೆ.
ಜಕಾರ್ತ: ಇಂಡೋನೇಷ್ಯಾದ ಉತ್ತರ ಸುಲವೇಸಿ ಪ್ರಾಂತ್ಯದ ವೃದ್ಧಾಶ್ರಮವೊಂದರಲ್ಲಿ ಸಂಭವಿಸಿದ ಭೀಕರ ಬೆಂಕಿಯಲ್ಲಿ 16 ಮಂದಿ ವೃದ್ಧರು ಸಾವನ್ನಪ್ಪಿದ್ದಾರೆ. ಮನಾಡೋ ಪ್ರದೇಶದಲ್ಲಿ ಭಾನುವಾರ ಸಂಜೆ ಈ ದುರಂತ ಘಟನೆ ನಡೆದಿದೆ. ಒಂದೇ ಅಂತಸ್ತಿನ ಕಟ್ಟಡದಲ್ಲಿ ಎಲ್ಲಾ ವಯಸ್ಸಾದ ನಿವಾಸಿಗಳು ಮಲಗಿದ್ದರು ಎಂದು ವರದಿಯಾಗಿದೆ, ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡು ಆವರಣದಾದ್ಯಂತ ಹರಡಿತು.15 ಮಂದಿ ಸುಟ್ಟಗಾಯಗಳಿಂದ, ಒಬ್ಬರು ಉಸಿರುಗಟ್ಟಿ ಸಾವನ್ನಪ್ಪಿದ್ದಾರೆಘಟನೆಯಲ್ಲಿ ಒಟ್ಟು 16 ಮಂದಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಹದಿನೈದು ಹಿರಿಯ ನಿವಾಸಿಗಳು ಸುಟ್ಟಗಾಯಗಳಿಂದ ಸಾವನ್ನಪ್ಪಿದರೆ, ಒಬ್ಬ ವ್ಯಕ್ತಿ ಉಸಿರುಗಟ್ಟುವಿಕೆಯಿಂದ ಸಾವನ್ನಪ್ಪಿದರು. ಬೆಂಕಿ ಎಷ್ಟು ವೇಗವಾಗಿ ಹರಡಿತು