ಸಂಕ್ರಾಂತಿ ಹಬ್ಬವನ್ನು ದೇಶದಾದ್ಯಂತ ಅತ್ಯಂತ ಸಂಭ್ರಮ ಹಾಗೂ ಸಡಗರದಿಂದ ಆಚರಿಸಲಾಗುತ್ತದೆ. ಈ ವಿಶೇಷ ದಿನದಂದು ಪರಸ್ಪರ ಎಳ್ಳು ಬೆಲ್ಲವನ್ನು ಹಂಚುವ ಸಂಪ್ರದಾಯ ಕರ್ನಾಟಕ ಸೇರಿದಂತೆ ಹಲವೆಡೆ ಇದೆಸಂ. ಈ ಸಂಪ್ರದಾಯದ ಹಿಂದ ವೈಜ್ಞಾನಿಕ, ಸಾಮಾಜಿಕ ಮತ್ತು ಆಧ್ಯಾತ್ಮಿಕವಾದ ಅರ್ಥಪೂರ್ಣ ಉದ್ದೇಶಗಳಿವೆ. ಅವುಗಳ ಮಾಹಿತಿ ಇಲ್ಲಿದೆ.ವೈಜ್ಞಾನಿಕ ಮತ್ತು ಆರೋಗ್ಯದ ದೃಷ್ಟಿಕೋನ
ಬೆಂಗಳೂರು: ಹಾಲಿ ಚಾಂಪಿಯನ್ ಕರ್ನಾಟಕ ತಂಡವು ವಿಜಯ್ ಹಜಾರೆ ಟ್ರೋಫಿಯನ್ನು ಉಳಿಸಿಕೊಳ್ಳುವತ್ತ ಹೆಜ್ಜೆಯಿಟ್ಟಿದೆ. ಬೆಂಗಳೂರಿನಲ್ಲಿರುವ ಬಿಸಿಸಿಐ ಸೆಂಟರ್ ಆಫ್ ಎಕ್ಸಲೆನ್ಸ್ ಮೈದಾನದಲ್ಲಿ ನಡೆದ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಕರ್ನಾಟಕ ಗೆಲುವು ಸಾಧಿಸಿ ಸೆಮಿಫೈನಲ್ಗೆ ಲಗ್ಗೆಯಿಟ್ಟಿದೆ.ಕ್ವಾರ್ಟರ್ ಫೈನಲ್ ಪಂದ್ಯದ ವೇಳೆ ಮಳೆ ಬಂದಿದ್ದರಿಂದ ವಿಜೆಡಿ ನಿಯಮದ ಅನ್ವಯ ಕರ್ನಾಟಕ ತಂಡವು ಮುಂಬೈ ವಿರುದ್ಧ 55 ರನ್ಗಳ ಗೆಲುವು ದಾಖಲಿಸಿದೆ. ಟಾಸ್ ಗೆದ್ದ ಕರ್ನಾಟಕ ತಂಡವು ಮೊದಲು ಫೀಲ್ಡಿಂಗ್ ಆಯ್ದುಕೊಂಡಿತ್ತು.ಕರ್ನಾಟಕದ ಬೌಲರ್ಗಳ ಬಿಗಿ ದಾಳಿಗೆ ಮುಂಬೈ ತಂಡ ಆರಂಭದಲ್ಲಿ ಕುಸಿತ ಕಂಡಿತು. 6ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ಗೆ ಬಂದ ಶಮ್ಸ್ ಮುಲಾನಿ (86 ರನ್; 91 ಎಸೆತ) ಸಮಯೋಚಿತ ಆಟವಾಡಿದರು. ಮುಂಬೈ ತಂಡವು 50 ಓವರ್ಗಳ ಅಂತ್ಯಕ್ಕೆ 8 ವಿಕೆಟ್ ನಷ್ಟಕ್ಕೆ 254 ರನ್ ಗಳಿಸಿತು. ಕರ್ನಾಟಕದ ಪರ ವಿದ್ಯಾದರ ಪಾಟೀಲ್ 3 ವಿಕೆಟ್ ಹಾಗೂ ವಿದ್ವತ್ ಕಾವೇರಿಯಪ್ಪ, ಅಭಿಲಾಶ್ ಶೆಟ್ಟಿ ತಲಾ 2 ವಿಕೆಟ್ ಪಡೆದು ಮಿಂಚಿದರು.
ನವಿ ಮುಂಬೈ: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಸೋಮವಾರ ಮಹಿಳಾ ಪ್ರೀಮಿಯರ್ ಲೀಗ್ ಟಿ20 ಕ್ರಿಕೆಟ್ ಟೂರ್ನಿಯ ತನ್ನ ಎರಡನೇ ಪಂದ್ಯದಲ್ಲಿ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿದೆ. ಟೂರ್ನಿಯ ಐದನೇ ಪಂದ್ಯ ಇದಾಗಿದೆ.ಡಿ.ವೈ. ಪಾಟೀಲ ಕ್ರೀಡಾಂಗಣದಲ್ಲಿ ನಡೆಯುವ ಪಂದ್ಯದಲ್ಲಿ ಸ್ಮೃತಿ ಮಂದಾನ ನಾಯಕತ್ವದ ಆರ್ಸಿಬಿಯು ಯುಪಿ ವಾರಿಯರ್ಸ್ ಎದುರು ಕಣಕ್ಕಿಳಿಯಲಿದೆ. ಮೊದಲ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡಕ್ಕೆ ಆಘಾತ ನೀಡಿರುವ ತಂಡವು, ಗೆಲುವಿನ ಓಟ ಮುಂದುವರಿಸುವ ಹುಮ್ಮಸ್ಸಿನಲ್ಲಿದೆ. 2023ರಲ್ಲಿ ಚಾಂಪಿಯನ್ ಆಗಿದ್ದ ಆರ್ಸಿಬಿ ತಂಡವು ಈ ಸಲ ಶುಭಾರಂಭ ಮಾಡಿದೆ. ಹರ್ಮನ್ಪ್ರೀತ್ ಕೌರ್ ಅವರ ನಾಯಕತ್ವದ ಮುಂಬೈ ಇಂಡಿಯನ್ಸ್ ವಿರುದ್ಧ ಮೊದಲ ಪಂದ್ಯದಲ್ಲಿ ಸ್ಕೃತಿ ಮಂದಾನ ಬಳಗ ರೋಚಕ ಜಯ ಸಾಧಿಸಿತ್ತು.
ನವದೆಹಲಿ: ಉತ್ತರ ಭಾರತದ ಹಲವಾರು ರಾಜ್ಯಗಳಲ್ಲಿ ಶೀತಗಾಳಿ ಏರಿಕೆಯಾಗಿದೆ. ಅದರಲ್ಲೂ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ತೀವ್ರ ಶೀತಗಾಳಿಯಿಂದ ತತ್ತರಿಸಿದೆ. ದೆಹಲಿಯಲ್ಲಿ ಇಂದಿನಿಂದ ಎರಡು ದಿನ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.ದೆಹಲಿಯಲ್ಲಿ ಕನಿಷ್ಠ ತಾಪಮಾನ 2.9 ಡಿಗ್ರಿಗಿಳಿದಿದೆ. ಮುಂದಿನ ಕೆಲ ದಿನಗಳಲ್ಲಿ ಕನಿಷ್ಠ ತಾಪಮಾನದಲ್ಲಿ 2-4 ಡಿಗ್ರಿ ಸೆಲ್ಸಿಯಸ್ವರೆಗೆ ಕಡಿಮೆ ಆಗಲಿದ್ದು, ಶೀತಗಾಳಿ ಪ್ರಮಾಣ ಹೆಚ್ಚಾಗುವ ಸಾಧ್ಯತೆಯಿದೆ. ಉತ್ತರದಿಂದ ಬರುವ ಶೀತಗಾಳಿ ಗುಜರಾತ್, ಪಂಜಾಬ್ ಮತ್ತು ಪಶ್ಚಿಮದಲ್ಲಿ ರಾಜಸ್ಥಾನದ ಮೇಲೆ ಪರಿಣಾಮ ಬೀರಲಿದೆ. ಉತ್ತರ ಪ್ರದೇಶ ಮತ್ತು ಬಿಹಾರದಲ್ಲಿ ದಟ್ಟ ಮಂಜು ಕವಿದ ವಾತಾವರಣ ಇರಲಿದ್ದು, ವಾಹನ ಸಂಚಾರಕ್ಕೆ ಅಡಚಣೆ ಉಂಟುಮಾಡುವ ಸಾಧ್ಯತೆ ಹೆಚ್ಚಿರುತ್ತದೆ ಎಂದು ಎಚ್ಚರಿಕೆ ಸಂದೇಶವನ್ನು ರವಾನೆ ಮಾಡಿದೆ.
ಹಲವರಲ್ಲಿ ದೇಹದ ಕುತ್ತಿಗೆಯ ಭಾಗದಲ್ಲಿ ಸುತ್ತ ಕಪ್ಪು ಬಣ್ಣ ಕಾಣಿಸಿಕೊಳ್ಳುವುದನ್ನು ಕಾಣಬಹುದು. ಇದು ಸೌಂದರ್ಯದ ವಿಚಾರಕ್ಕೆ ಅಲ್ಲದೆ, ಕೆಲವೊಮ್ಮೆ ದೇಹದ ಒಳಗಿನ ಆರೋಗ್ಯದ ಸಂಕೇತವೂ ಆಗಿರಬಹುದು.ಇದಕ್ಕೆ ಮುಖ್ಯ ಕಾರಣಗಳು ಮತ್ತು ಸರಳ ಪರಿಹಾರಗಳು ಹೀಗಿದೆ: ರಕ್ತದಲ್ಲಿ ಸಕ್ಕರೆ ಅಂಶ ಹೆಚ್ಚಾದಾಗ ಅಥವಾ ಮಧುಮೇಹದ ಪೂರ್ವ ಲಕ್ಷಣವಾಗಿ ಕುತ್ತಿಗೆ ಕಪ್ಪಾಗಬಹುದು.
ಬೆಂಗಳೂರು: ದಕ್ಷಿಣ ಸುಡಾನ್ನಲ್ಲಿ ವಿಶ್ವಸಂಸ್ಥೆಯ ಮಿಷನ್ನಲ್ಲಿ (UNMISS) ಸೇವೆ ಸಲ್ಲಿಸುತ್ತಿರುವ ಬೆಂಗಳೂರಿನ 31 ವರ್ಷದ ಸೇನಾ ಅಧಿಕಾರಿ ಮೇಜರ್ ಸ್ವಾತಿ ಶಾಂತ ಕುಮಾರ್ ಅವರಿಗೆ 'ಸಮಾನ ಪಾಲುದಾರರು, ಶಾಶ್ವತ ಶಾಂತಿ' ಎಂಬ ಶೀರ್ಷಿಕೆಯ ಯೋಜನೆಗಾಗಿ 2025 ರ ಪ್ರತಿಷ್ಠಿತ ವಿಶ್ವಸಂಸ್ಥೆಯ ಮಹಾಕಾರ್ಯದರ್ಶಿ ಪ್ರಶಸ್ತಿಯನ್ನು ನೀಡಲಾಗಿದೆ.ವಿಶ್ವಸಂಸ್ಥೆಯ ಮಹಾಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್ ಭಾನುವಾರ ಘೋಷಿಸಿದ ಈ ಪ್ರಶಸ್ತಿಯು, ದಕ್ಷಿಣ ಸುಡಾನ್ನ ಸಂಘರ್ಷ ಪೀಡಿತ ಪ್ರದೇಶಗಳಲ್ಲಿ ಸುಮಾರು 5,000 ಮಹಿಳೆಯರಿಗೆ ಸುರಕ್ಷಿತ ವಾತಾವರಣವನ್ನು ಸೃಷ್ಟಿಸಿದ ಮೇಜರ್ ಸ್ವಾತಿ ಅವರ ಕಾರ್ಯತಂತ್ರದ ಕಾರ್ಯಾಚರಣೆಗಳನ್ನು ಗುರುತಿಸುತ್ತದೆ ಮತ್ತು ಅವರು ಮುಕ್ತವಾಗಿ ಚಲಿಸಲು ಮತ್ತು ಸ್ಥಳೀಯ ಶಾಂತಿ ಸಂವಾದಗಳಲ್ಲಿ ಸಕ್ರಿಯವಾಗಿ ಭಾಗವಹಿಸಲು ಅನುವು ಮಾಡಿಕೊಡುತ್ತದೆ.
ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಬಾಲಿವುಡ್ ನಟಿ ಹೇಮಾ ಮಾಲಿನಿ ನಡೆಗೆ ಭಾರೀ ವಿರೋಧ ವ್ಯಕ್ತವಾಗುತ್ತಿದೆ. ಹೇಮಾ ಮಾಲಿನಿ ಅವರು ಈಚೆಗೆ ಕ್ರೀಡಾ ಕಾರ್ಯಕ್ರಮದಲ್ಲಿ ಭಾಗವಹಿಸಿ, ವಿಜೇತರಿಗೆ ವೇದಿಕೆ ಮೇಲೆ ಬಹುಮಾನವನ್ನು ವಿತರಿಸಿದರು. ಈ ವೇಳೆ ನಟಿ, ಕ್ರೀಡಾಪಟುಗಳೊಂದಿಗೆ ನಡೆದುಕೊಂಡ ರೀತಿಗೆ ಟೀಕೆ ವ್ಯಕ್ತವಾಗುತ್ತಿದೆ. ವೀಡಿಯೊದಲ್ಲಿ, ಹೇಮಾ ಮಾಲಿನಿ ಖುಷಿಯ ಭಾವನೆಯಿಲ್ಲದೆ, ಅಸಮಾಧಾನದಿಂದಲೇ ಪದಕವನ್ನು ನೀಡುತ್ತಿರುವುದನ್ನು ಕಾಣಬಹುದು.ಪದಕ ಹಾಕಿದ ಮೇಲೆ ಕೈಯನ್ನು ತನ್ನ ಬಟ್ಟೆಯಲ್ಲಿ ಒರಿಸಿಕೊಳ್ಳುವುದನ್ನು ಕಾಣಬಹುದು. ಹೇಮಾ ಮಾಲಿನಿ ಅವರ ಅಸಭ್ಯ ವರ್ತನೆ ಮತ್ತು ಕೆಟ್ಟ ಮುಖಭಾವಗಳಿಗಾಗಿ ಸಾಮಾಜಿಕ ಮಾಧ್ಯಮದಲ್ಲಿ ತೀವ್ರವಾಗಿ ಟ್ರೋಲ್ ಮಾಡಲಾಗುತ್ತಿದೆ
ನಟ ಯಶ್ ಅಭಿನಯದ 'ಟಾಕ್ಸಿಕ್' ಚಿತ್ರದ ಟೀಸರ್ನಲ್ಲಿ ಹಸಿಬಿಸಿ ದೃಶ್ಯ ಸಂಬಂಧ ಆಮ್ ಆದ್ಮಿ ಪಕ್ಷದ ಮಹಿಳಾ ಘಟಕ ಮಹಿಳಾ ಆಯೋಗಕ್ಕೆ ದೂರು ನೀಡಿದೆ. ಸಾಮಾಜಿಕ ಜಾಲತಾಣದಲ್ಲಿ ಟಾಕ್ಸಿಕ್ ಸಿನಿಮಾದ ಟೀಸರ್ನಲ್ಲಿ ಕಾಣಿಸಿಕೊಂಡ ಹಸಿಬಿಸಿ ದೃಶ್ಯಕ್ಕೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಈ ಸಂಬಂಧ ಟ್ರೋಲ್ ಕೂಡಾ ಮಾಡಲಾಗಿತ್ತು. ಇದೀಗ ಆ್ಯಪ್ ಮಹಿಳಾ ಘಟಕ ದೂರನ್ನು ನೀಡಿದೆ. ದೂರಿನಲ್ಲಿ ಟೀಸರ್ ಅನ್ನು ಮಹಿಳೆಯರು ಮತ್ತು ಮಕ್ಕಳ ಮೇಲೆ ದುಷ್ಪರಿಣಾಮ ಬೀರುತ್ತವೆ.
ಪುಣೆ: ಭಾರೀ ಸುದ್ದಿಗೆ ಕಾರಣವಾದ ವಜಾಗೊಂಡ ಪ್ರೊಬೇಷನರಿ IAS ಅಧಿಕಾರಿ ಪೂಜಾ ಖೇಡ್ಕರ್ ಅವರ ಪೋಷಕರು ಸೇರಿದಂತೆ ಐವರು ಪುಣೆ ನಗರದ ಔಂಧ್ ಪ್ರದೇಶದಲ್ಲಿರುವ ನ್ಯಾಷನಲ್ ಹೌಸಿಂಗ್ ಸೊಸೈಟಿಯ ಬಂಗಲೆಯಲ್ಲಿ ರವಿವಾರ ಮುಂಜಾನೆ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಇದೀಗ ಪೂಜಾ ಖೇಡ್ಕರ್ ಅವರ ಬಂಗಲೆಯಲ್ಲಿ ಕಳ್ಳತನ ನಡೆದಿರುವ ಶಂಕೆ ವ್ಯಕ್ತವಾಗಿದ್ದು, ಪೊಲೀಸರು ತನಿಖೆಯನ್ನು ಶುರುಮಾಡಿದ್ದಾರೆ.ರವಿವಾರ ಬೆಳಗಿನ ಜಾವ ಸುಮಾರು 1.30ರ ಸುಮಾರಿಗೆ ಕಳ್ಳತನ ನಡೆದಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ಲಭಿಸಿದೆ. ಮಾಹಿತಿ ಪಡೆದ ತಕ್ಷಣ ಚತುರ್ಶೃಂಗಿ ಪೊಲೀಸ್ ಠಾಣೆಯ ತಂಡ ಸ್ಥಳಕ್ಕೆ ಧಾವಿಸಿತು. ಪೊಲೀಸರು ಸ್ಥಳಕ್ಕೆ ತಲುಪಿದಾಗ ಪೂಜಾ
ಕಲಬುರಗಿ: ಕಲಬುರಗಿಯ ಯಡ್ರಾಮಿಯಲ್ಲಿ ನಡೆದ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ಕಾರ್ಯಕ್ರಮದಲ್ಲಿ ಮಾತನಾಡುವಾಗ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ವೇದಿಕೆ ಮೇಲೆ ಡಿಸಿಎಂ ಡಿಕೆ ಶಿವಕುಮಾರ್ ಗೆ ಮಾತಿನಲ್ಲೇ ತಿವಿದಿದ್ದಾರೆ. ಡಿಕೆ ಶಿವಕುಮಾರ್ ಮಾತನಾಡುವಾಗ ಕಲ್ಯಾಣ ಕರ್ನಾಟಕದ ಅಭಿವೃದ್ಧಿ ನೋಡಿ ನಾನು ಇಲ್ಲೇ ಹುಟ್ಟುಬೇಕಿತ್ತು ಎನಿಸುತ್ತಿದೆ ಎಂದಿದ್ದರು. ಅವರ ಮಾತಿಗೆ ಟಾಂಗ್ ಕೊಟ್ಟ ಮಲ್ಲಿಕಾರ್ಜುನ ಖರ್ಗೆ ನೀವು ಇಲ್ಲಿ ಹುಟ್ಟೋದೂ ಬೇಡ ನಾವು ಅಲ್ಲಿ ಹುಟ್ಟೋದೂ ಬೇಡ ಎಂದಿದ್ದಾರೆ. ‘ಶಿವಕುಮಾರ್ ಅವರೇ, ನೀವು ಇಲ್ಲಿ ಹುಟ್ಟೋದೂ ಬೇಡ, ನಾವು ಅಲ್ಲಿ ಹುಟ್ಟೋದೂ ಬೇಡ. ಲಂಡನ್ ಕನಸುಬೇಡ. ಸಿದ್ದರಾಮಯ್ಯನವರ ಮೈಸೂರು ಹೇಗಿದೆ?
ಗುಜರಾತ್: ಭಾರತ ಪ್ರವಾಸ ಕೈಗೊಂಡಿರುವ ಜರ್ಮನ್ ಚಾನ್ಸೆಲರ್ ಫ್ರೆಡ್ರಿಕ್ ಮೆರ್ಜ್ ಅವರ ಜತೆ ಪ್ರಧಾನಿ ನರೇಂದ್ರ ಮೋದಿ ಅವರು ಕಾರಿನಲ್ಲಿ ಆತ್ಮೀಯ ಕ್ಷಣವನ್ನು ಕಳೆದು ಕಾರಿನಲ್ಲಿ ಪ್ರಯಾಣ ಬೆಳೆಸಿದರು. ಈ ಭೇಟಿ ಇಬ್ಬರು ನಾಯಕರ ನಡುವಿನ ಆತ್ಮೀಯ ಮತ್ತು ಸ್ನೇಹಪರ ಸಂಬಂಧಗಳು ಮತ್ತು ಎರಡೂ ದೇಶಗಳ ನಡುವೆ ಬೆಳೆಯುತ್ತಿರುವ ಪಾಲುದಾರಿಕೆಯನ್ನು ಪ್ರತಿಬಿಂಬಿಸುತ್ತದೆ. ದ್ವಿಪಕ್ಷೀಯ ಸಂಬಂಧಗಳ ಬಲವನ್ನು ಒತ್ತಿಹೇಳಲು ಪ್ರಧಾನಿ ಮೋದಿ ತಮ್ಮ ಸಭೆಗಳ ನಂತರ ಕಾರಿನೊಳಗೆ ತಾವು ಮತ್ತು ಮೆರ್ಜ್ ಅವರ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ.
ಬೆಂಗಳೂರು: ಲಕ್ಕುಂಡಿಯಲ್ಲಿ ಸಿಕ್ಕ ನಿಧಿ ಪ್ರಕರಣದಲ್ಲಿ ಇದೀಗ ಮನೆಯವರು ಸಿಕ್ಕಿರುವ ಚಿನ್ನವನ್ನು ವಾಪಾಸ್ ನೀಡುವಂತೆ ಕೇಳುತ್ತಿದ್ದು, ಇದರ ಬೆನ್ನಲ್ಲೇ ಗದಗ ಉಸ್ತುವಾರಿ ಹಾಗೂ ಕಾನೂನು ಸಚಿವ ಎಚ್ಕೆ ಪಾಟೀಲ್ ಅವರು ಸ್ಫೋಟಕ ಹೇಳಿಕೆಯನ್ನು ನೀಡಿದ್ದಾರೆ. ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಅವರು, ಭೂಮಿಯ ಒಳಗೆ ಯಾವುದೇ ಬೆಲೆ ಬಾಳುವ ವಸ್ತುಗಳು ಸಿಕ್ಕಿದರೆ ಅದು ಸರ್ಕಾರದ ಆಸ್ತಿ ಎಂದು ಮಾಧ್ಯಮವೊಂದಕ್ಕೆ ಸ್ಫೋಟಕ ಹೇಳಿಕೆ ನೀಡಿದ್ದಾರೆ.ಇನ್ನೂ ಸಿಕ್ಕ ನಿಧಿಯನ್ನು ಕುಟುಂಬವು ಪ್ರಾಮಾಣಿಕತೆಯನ್ನು ನಾನು ಗೌರವಿಸುತ್ತೇನೆ , ಅದು ನಿಧಿ ಅಲ್ಲ ಕುಟುಂಬದ ಬಂಗಾರ
ರಾಮನಗರ: ಇನ್ನೇನು ವಾರದೊಳಗೆ ಬಿಗ್ಬಾಸ್ ಸೀಸನ್ 12 ಮುಕ್ತಾಯವಾಗಲಿದ್ದು, ಇದೀಗ ವಾರದ ಹಿಂದೆ ಕಿಚ್ಚ ಸುದೀಪ್ ಅವರು ವೀಕೆಂಡ್ ಎಪಿಸೋಡ್ನಲ್ಲಿ ಆಡಿದ ಮಾತು ದೂರು ನೀಡುವ ಮಟ್ಟಿಗೆ ಹೋಗಿದೆ. ಹೌದು ರಣಹದ್ದು ವಿಚಾರವಾಗಿ ತಪ್ಪಾದ ಹೇಳಿಕೆ ನೀಡಿರುವ ಆರೋಪದಡಿ ಬಿಗ್ಬಾಸ್ ಹಾಗೂ ಕಿಚ್ಚ ಸುದೀಪ್ ವಿರುದ್ಧ ಪರಿಸರ ಪ್ರಿಯರು ದೂರನ್ನು ನೀಡಿದ್ದಾರೆ. ರಾಮನಗರದ ಅರಣ್ಯಾಧಿಕಾರಿಗಳಿಗೆ ಕರ್ನಾಟಕ ರಣಹದ್ದು ಸಂರಕ್ಷಣಾ ಟ್ರಸ್ಟ್ ವತಿಯಿಂದ ದೂರು ನೀಡಲಾಗಿದ್ದು, ವಾರದ ಕಥೆ ಕಿಚ್ಚನ ಜೊತೆ ಕಾರ್ಯಕ್ರಮದಲ್ಲಿ ರಣಹದ್ದು ಬಗ್ಗೆ ಕಿಚ್ಚ ಸುದೀಪ್ ತಪ್ಪಾದ ಮಾಹಿತಿ ಹರಡಿದ್ದಾರೆ ಎಂದು ಆರೋಪ ಮಾಡಿದ್ದಾರೆ. ವೀಕೆಂಡ್ ಎಪಿಸೋಡ್ನಲ್ಲಿ ಸ್ಪರ್ಧಿಯೊಬ್ಬರ ಕುತ್ತಿಗೆಗೆ ರಣಹದ್ದು ಫೋಟೋವೊಂದನ್ನ ಹಾಕಿಸಿ ʻಹೊಂಚುಹಾಕಿ ಸಂಚು ಮಾಡಿ
ಬೆಂಗಳೂರು: ಕೋಗಿಲು ಬಡಾವಣೆಯ ಅಕ್ರಮ ಒತ್ತುವರಿ ತೆರವು ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿವೈ ವಿಜಯೇಂದ್ರಗೆ ಸತ್ಯಶೋಧನಾ ತಂಡಕ್ಕೆ ವರದಿ ಸಲ್ಲಿಸಲಿದೆ.ಈ ವಿಚಾರ ಸಂಬಂಧ ಎಕ್ಸ್ನಲ್ಲಿ ಬಿವೈ ವಿಜಯೇಂದ್ರ ಬರೆದುಕೊಂಡಿದ್ದಾರೆ. ಬೆಂಗಳೂರಿನ ಯಲಹಂಕದ ಕೋಗಿಲು ಬಡಾವಣೆಯಲ್ಲಿ ಅಕ್ರಮ ವಲಸಿಗರ ಮನೆಗಳ ತೆರವು ವಿಚಾರದಲ್ಲಿ ರಚಿಸಲಾಗಿದ್ದ ಪಕ್ಷದ ಸತ್ಯ ಶೋಧನಾ ಸಮಿತಿಯಿಂದ ಇಂದು ವರದಿಯನ್ನು ಸ್ವೀಕರಿಸಲಾಯಿತು.
ಬೆಂಗಳೂರು: ಕೋಗಿಲು ಬಡಾವಣೆ ಅಕ್ರಮವಾಸಿಗಳ ತೆರವು ಸಂಬಂಧ ಘಟನಾವಳಿಯ ತನಿಖೆಯನ್ನು ಎನ್ಐಎಗೆ ವಹಿಸುವಂತೆ ಯಲಹಂಕ ಶಾಸಕ ಎಸ್.ಆರ್. ವಿಶ್ವನಾಥ್ ಅವರು ಆಗ್ರಹಿಸಿದ್ದಾರೆ.ಯಲಹಂಕದ ಕೋಗಿಲು ಬಡಾವಣೆ ವಿಷಯಕ್ಕೆ ಸಂಬಂಧಿಸಿದಂತೆ ಅವರ ನೇತೃತ್ವದ ಸತ್ಯಶೋಧನ ತಂಡವು ಇಂದು ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರಿಗೆ ವರದಿಯನ್ನು ಸಲ್ಲಿಸಿತು. ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕೇರಳದ ಸಿಎಂ, ಕೆ.ಸಿ.ವೇಣುಗೋಪಾಲ್ ಸಾಕಷ್ಟು ಕೂಗಾಡಿದರಲ್ಲವೇ? ತೆರವಾದವರ ಈ ಪಟ್ಟಿಯಲ್ಲಿ ಒಬ್ಬರೇ ಒಬ್ಬರು ಕೇರಳದವರಿಲ್ಲ. ಕೇರಳದ ಮತಕ್ಕಾಗಿ ಇಷ್ಟೆಲ್ಲ ರಾದ್ಧಾಂತ ಮಾಡಿದ್ದಾರೆ ಎಂದು ಆಕ್ಷೇಪಿಸಿದರು.
ವಿಜಯಪುರ: ಮುಖ್ಯಮಂತ್ರಿ ಸಿದ್ದರಾಮಯ್ಯ ಎದುರೇ ಜನತೆ ನನ್ನ ಹೆಸರನ್ನು ಕೂಗಿದ್ದು, ಕಾಂಗ್ರೆಸ್, ಬಿಜೆಪಿಗೆ ಎಚ್ಚರಿಕೆ ಗಂಟೆಯಾಗಿದೆಯೆಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದರು. ಇಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಜಿಲ್ಲಾ ನಾಯಕರಿಗೆ ಡಿಕೆಶಿ ಕ್ಲಾಸ್ ವಿಚಾರವಾಗಿ ಪ್ರತಿಕ್ರಿಯಿಸಿ, ಡಿಕೆ ಶಿವಕುಮಾರ್ ಅವರ ಎದುರೇ ಜನರು ನನ್ನ ಪರ ಕೂಗಿದರು. ಈ ರೀತಿ ಆದರೆ ಜಿಲ್ಲೆಯ ನಾಯಕರು ಏನ್ ಮಾಡಬೇಕು. ಸಿಎಂ ಎದುರು ಜನ ನನ್ನ ಪರ ಕೂಗಿದ್ದು ಕಾಂಗ್ರೆಸ್, ಬಿಜೆಪಿಗೆ ಎಚ್ಚರಿಕೆ ಗಂಟೆಯಾಗಿದೆ ಎಂದು ಹೇಳಿದರು.
ಗದಗ: ಲಕ್ಕುಂಡಿಯಲ್ಲಿ ಮನೆಗೆ ಪಾಯ ತೆಗೆಯುವಾಗ ಸಿಕ್ಕ ನಿಧಿ ಬಗ್ಗೆ ಕೊನೆಗೂ ಪುರಾತತ್ವ ಇಲಾಖೆ ಅಧಿಕಾರಿಗಳು ಮಹತ್ವದ ಹೇಳಿಕೆ ನೀಡಿದ್ದಾರೆ. ಮನೆಗೆ ಪಾಯ ತೆಗೆಯುವಾಗ ಸಿಕ್ಕ ಚಿನ್ನಾಭರಣಗಳನ್ನು ಕುಟುಂಬಸ್ಥರು ಪ್ರಾಮಾಣಿಕವಾಗಿ ಸರ್ಕಾರಕ್ಕೆ ಒಪ್ಪಿಸಿದ್ದರು. ಆದರೆ ಇದಾದ ಬಳಿಕ ಕುಟುಂಬಸ್ಥರಿಗೆ ನಿವೇಶನವೂ ಇಲ್ಲ, ಮನೆಯೂ ಇಲ್ಲ ಎಂಬ ಸ್ಥಿತಿಯಾಗಿದೆ. ಇದರ ಬೆನ್ನಲ್ಲೇ ಇದು ನಿಧಿಯಲ್ಲ, ಪೂರ್ವಜರು ಹೂತಿಟ್ಟಿದ್ದ ಚಿನ್ನ ಎಂದು ಕೆಲವು ಅಧಿಕಾರಿಗಳೇ ಹೇಳಿಕೆ ನೀಡಿದ್ದರು. ಇದರ ಬೆನ್ನಲ್ಲೇ ಕುಟುಂಬಸ್ಥರು ನಮ್ಮ ಚಿನ್ನ ನಮಗೆ ಕೊಡಿ, ನಾವು ಬೀದಿಗೆ ಬಂದಿದ್ದೇವೆ, ನಮಗೆ ಸಹಾಯ ಮಾಡಿ ಎಂದು ಅಂಗಲಾಚಿತ್ತು. ಇದರ ನಡುವೆಯೇ ಈಗ ಪುರಾತತ್ವ ಇಲಾಖೆ ಅಧಿಕಾರಿಗಳು ಮಹತ್ವದ ಹೇಳಿಕೆ ನೀಡಿದ್ದಾರೆ.
ಬೆಂಗಳೂರು: ಕೊನೆಗೂ ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ ಚುನಾವಣೆ ಮುಹೂರ್ತ ಫಿಕ್ಸ್ ಆಗಿದೆ. ಇಂತಿಷ್ಟು ದಿನದೊಳಗೆ ಚುನಾವಣೆ ನಡೆಸುವಂತೆ ಸುಪ್ರೀಂಕೋರ್ಟ್ ಗಡುವು ನೀಡಿದೆ. ಜೂನ್ 30 ರೊಳಗೆ ಜಿಬಿಎ ವ್ಯಾಪ್ತಿಯಲ್ಲಿರುವ 5 ಪಾಲಿಕೆಗಳಿಗೆ ಚುನಾವಣೆ ನಡೆಸುವಂತೆ ಸುಪ್ರೀಂಕೋರ್ಟ್ ನಿರ್ದೇಶನ ನೀಡಿದೆ. ಈ ಸಂಬಂಧ ಇಂದು ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ವಿಚಾರಣೆ ನಡೆಯಿತು. ಸರ್ಕಾರದ ಪರ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ, ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ವಾದ ಮಂಡಿಸಿದರು.ಅಂತಿಮವಾಗಿ ಚುನಾವಣಾ ಪ್ರಕ್ರಿಯೆ ಮುಗಿಸಲು ಎಷ್ಟು ಸಮಯ ಬೇಕು ಎಂದು ಕೋರ್ಟ್ ಪ್ರಶ್ನಿಸಿತು. ಇದಕ್ಕೆ ಜೂನ್ವರೆಗೂ ಸಮಯ ಬೇಕಾಗಬಹುದು ಎಂದು ಆಯೋಗ ಉತ್ತರಿಸಿತು. ಅಂತಿಮವಾಗಿ ಸುಪ್ರೀಂಕೋರ್ಟ್ ಜೂನ್ 30 ರೊಳಗೆ ಜಿಬಿಎ ಚುನಾವಣೆ ನಡೆಸಲು ನಿರ್ದೇಶನ ನೀಡಿತು.
ಬೆಂಗಳೂರು: ಆಲೂಗಡ್ಡೆ ತಿಂದರೆ ಹೊಟ್ಟೆ ದಪ್ಪ ಆಗುತ್ತದೆ ಎಂದು ಕೆಲವರು ನಂಬುತ್ತಾರೆ. ಆದರೆ ಆಲೂಗಡ್ಡೆ ತಿಂದರೆ ನಿಜಕ್ಕೂ ಹೊಟ್ಟೆ ದಪ್ಪ ಆಗುತ್ತಾ? ಇಲ್ಲಿದೆ ನಿಜಾಂಶ. ಆಲೂಗಡ್ಡೆ ಕೆಲವರಿಗೆ ಗ್ಯಾಸ್ಟ್ರಿಕ್ ಉಂಟು ಮಾಡುತ್ತದೆ. ಆಯುರ್ವೇದದ ಪ್ರಕಾರ ಇದು ವಾಯು ಅಂಶವಿರುವ ತರಕಾರಿ. ಇದನ್ನು ಸೇವನೆ ಮಾಡುವುದರಿಂದ ಗ್ಯಾಸ್ಟ್ರಿಕ್ ಆಗುವುದು ಸಹಜ. ಹೀಗಾಗಿ ಇದನ್ನು ಸೇವನೆ ಮಾಡುವುದರಿಂದ ಹೊಟ್ಟೆಯೂ ದಪ್ಪ ಆಗುತ್ತದೆ ಎನ್ನುವ ತಪ್ಪು ಕಲ್ಪನೆ ಅನೇಕರಿಗಿದೆ. ಆದರೆ ಆಲೂಗಡ್ಡೆ ಸೇವಿಸುವುದರಿಂದ ಹೊಟ್ಟೆ ದಪ್ಪ ಆಗಲ್ಲ. ಇದನ್ನು ಸರಿಯಾದ ರೀತಿಯಲ್ಲಿ ಬಳಸಿದರೆ ಬೊಜ್ಜು ಕರಗಿಸಲು ಉತ್ತಮ ಆಹಾರವಾಗಿದೆ.
ಬೆಂಗಳೂರು: ಪ್ರತಿನಿತ್ಯ ಮನೆ ಊಟ ಸಿಗಬಹುದು ಎಂದು ಕಾದಿದ್ದ ರೇಣುಕಾಸ್ವಾಮಿ ಕೊಲೆ ಆರೋಪಿ ಪವಿತ್ರಾ ಗೌಡಗೆ ನ್ಯಾಯಾಲಯ ಶಾಕ್ ಕೊಟ್ಟಿದೆ. ರೇಣುಕಾಸ್ವಾಮಿ ಮರ್ಡರ್ ಕೇಸ್ ನ ನಾಲ್ವರು ಆರೋಪಿಗಳಿಗೆ ಮನೆ ಊಟ ನೀಡಲು ಈ ಹಿಂದೆ ಕೋರ್ಟ್ ಅನುಮತಿ ನೀಡಿತ್ತು. ಅದರಂತೆ ದಿನಕ್ಕೆ ಒಮ್ಮೆ ಮನೆ ಊಟಕ್ಕೆ ಅವಕಾಶ ನೀಡಲು ಆದೇಶ ನೀಡಿತ್ತು. ಈ ಆರೋಪಿಗಳ ಪೈಕಿ ಪವಿತ್ರಾ ಗೌಡ ಕೂಡಾ ಒಬ್ಬರು. ಆದರೆ ನ್ಯಾಯಾಲಯ ನೀಡಿದ ಆದೇಶವನ್ನು ಪುನರ್ ಪರಿಶೀಲನೆ ಮಾಡಲು ಜೈಲು ಅಧಿಕಾರಿಗಳು ಮನವಿ ಮಾಡಿದ್ದರು. ಒಬ್ಬರಿಗೆ ಈ ರೀತಿ ಮನೆ ಊಟಕ್ಕೆ ಅವಕಾಶ ನೀಡಿದರೆ ಎಲ್ಲಾ ಕೈದಿಗಳೂ ಕೇಳುತ್ತಾರೆ ಎಂಬುದು ಜೈಲಾಧಿಕಾರಿಗಳ ವಾದವಾಗಿತ್ತು.
ಬೆಂಗಳೂರು: ನೀವು ನನ್ನ ಹಿರಿಯರು ಎಂದು ಕಿಚ್ಚ ಸುದೀಪ್ ಗೆ ನಟ ರಾಕಿಂಗ್ ಸ್ಟಾರ್ ಯಶ್ ಮಾಡಿರುವ ಸಂದೇಶವೊಂದು ಅಭಿಮಾನಿಗಳಿಗೆ ಭಾರೀ ಇಷ್ಟವಾಗಿದೆ. ಮೊನ್ನೆಯಷ್ಟೇ ಯಶ್ ಹುಟ್ಟುಹಬ್ಬದ ದಿನ ಟಾಕ್ಸಿಕ್ ಸಿನಿಮಾದ ಟೀಸರ್ ರಿಲೀಸ್ ಆಗಿತ್ತು. ಈ ಟೀಸರ್ ನ ಹಸಿಬಿಸಿ ದೃಶ್ಯಗಳನ್ನು ನೋಡಿ ಹಲವರು ಟೀಕೆ ಮಾಡಿದ್ದರು. ಆದರೆ ಇದರ ನಡುವೆ ಕಿಚ್ಚ ಸುದೀಪ್ ಕೆಲವೊಮ್ಮೆ ಗುರಿ ಮುಟ್ಟಬೇಕಾದರೆ ಪ್ರವಾಹದ ವಿರುದ್ಧ ಈಜಬೇಕಾಗುತ್ತದೆ ಎಂದು ಯಶ್ ಬೆನ್ನುತಟ್ಟಿದ್ದರು. ಚಿತ್ರರಂಗದಲ್ಲಿ ಇತ್ತೀಚೆಗೆ ಸ್ಟಾರ್ ವಾರ್ ಗಳೇ ಹೆಚ್ಚಾಗಿರುವಾಗ ಯಶ್ ಗೆ ಕಿಚ್ಚ ಸುದೀಪ್ ಈ ರೀತಿ ಬಹಿರಂಗವಾಗಿ ಬೆನ್ನಿಗೆ ನಿಂತಿದ್ದು ಕನ್ನಡ ಸಿನಿ ರಸಿಕರ ಮೆಚ್ಚುಗೆಗೆ ಪಾತ್ರವಾಗಿತ್ತು.
ನ್ಯೂಯಾರ್ಕ್: ವೆನಿಜುವಾಲಗೆ ನಾನೇ ಹಂಗಾಮಿ ಅಧ್ಯಕ್ಷ ಎಂದು ಹೇಳಿಕೊಂಡಿರುವ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮುಂದಿನ ಗುರಿ ಇದೇ ರಾಷ್ಟ್ರ. ವೆನಿಜುವಾಲ ಮೇಲೆ ದಾಳಿ ನಡೆಸಿ ಅಲ್ಲಿನ ಅಧ್ಯಕ್ಷರನ್ನು ಬಂಧಿಸಿ ಕರೆದು ತಂದ ಬಳಿಕ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇನ್ನು ವೆನಿಜುವಾಲಗೆ ನಮ್ಮ ಆಡಳಿತ ಎಂದಿದ್ದರು. ಇದೀಗ ವೆನಿಜುವಾಲಗೆ ನಾನೇ ಹಂಗಾಮಿ ಅಧ್ಯಕ್ಷ ಎಂದು ಘೋಷಿಸಿಕೊಂಡಿದ್ದಾರೆ. ವೆನಿಜುವಾಲ ಅಧ್ಯಕ್ಷ ನಿಕೋಲಸ್ ಮಡುರೋರನ್ನು ಬಂಧಿಸಿದ ಬಳಿಕ ಉಪಾಧ್ಯಕ್ಷೆ ಡೆಲ್ಸಿ ರೊಡ್ರಿಗಸ್ ರನ್ನೇ ಅಧ್ಯಕ್ಷರಾಮಿ ನೇಮಿಸಲಾಗಿತ್ತು.
ಬೆಂಗಳೂರು: ಅಡಿಕೆ ಬೆಲೆ ಕಳೆದ ಕೆಲವು ದಿನಗಳಿಂದ ಏರಿಕೆಯಾಗುತ್ತಿತ್ತು. ಆದರೆ ಇಂದು ಮತ್ತೆ ಬೆಲೆ ಯಥಾಸ್ಥಿತಿಯಲ್ಲಿದೆ. ಇಂದು ಅಡಿಕೆ ಮತ್ತು ಕಾಳು ಮೆಣಸು, ಕೊಬ್ಬರಿ ದರ ಹೇಗಿದೆ ಇಲ್ಲಿದೆ ವಿವರ. ಕಳೆದ ವಾರ ಅಡಿಕೆ ಬೆಲೆಯಲ್ಲಿ ಏರಿಕೆ ಆರಂಭವಾಗಿತ್ತು. ಸತತವಾಗಿ ನಾಲ್ಕು ದಿನಗಳ ಕಾಲ ಏರಿಕೆಯಾಗಿದ್ದು ರೈತರ ಸಂತಸಕ್ಕೆ ಕಾರಣವಾಗಿತ್ತು. ಆದರೆ ಇಂದು ಯಾವುದೇ ವ್ಯತ್ಯಾಸ ಕಂಡುಬರುತ್ತಿಲ್ಲ. ಇಂದು ಹೊಸ ಅಡಿಕೆ ಬೆಲೆ 460 ರೂ.ಗಳಷ್ಟಿದೆ. ಹಳೆ ಅಡಿಕೆ ಬೆಲೆ ನಿನ್ನೆ ಯಥಾಸ್ಥಿತಿಯಲ್ಲಿದ್ದು 545 ರೂ. ಗಳಾಗಿತ್ತು. ಡಬಲ್ ಚೋಲ್ ಬೆಲೆಯೂ ಯಥಾಸ್ಥಿತಿಯಲ್ಲಿದ್ದು 545 ರೂ.ಗಳಷ್ಟಾಗಿದೆ.
ಬೆಂಗಳೂರು: ಚಿನ್ನದ ಬೆಲೆ ಮತ್ತೆ ಏರಿಕೆ ಮತ್ತು ಇಳಿಕೆಯಾಗುತ್ತಲೇ ಇದೆ. ಆದರೆ ಇಂದು ವಾರದ ಆರಂಭದಲ್ಲೇ ಪರಿಶುದ್ಧ ಚಿನ್ನದ ದರ ಮತ್ತು ಇತರೆ ಚಿನ್ನದ ದರ ಏರಿಕೆ ಕಂಡಿದೆ. ಇಂದು ಪರಿಶುದ್ಧ ಚಿನ್ನದ ದರ ಮತ್ತು ಇತರೆ ಚಿನ್ನದ ದರ ವಿವರ ಇಲ್ಲಿದೆ ನೋಡಿ. ಚಿನ್ನದ ದರ ಏರಿಕೆಕಳೆದ ವಾರ ಪರಿಶುದ್ಧ ಚಿನ್ನದ ದರ ಸತತ ಏರಿಕೆ ಮತ್ತು ಇಳಿಕೆ ಕಂಡಿತ್ತು. ಆದರೆ ಈ ವಾರದ ಆರಂಭದಲ್ಲೇ ಚಿನ್ನದ ದರ ಏರಿಕೆಯಾಗಿದೆ. ಇಂದು ಮತ್ತೆ ಪರಿಶುದ್ಧ ಚಿನ್ನದ ದರ ಕೊಂಚ ಏರಿಕೆಯಾಗಿದೆ. ಪರಿಶುದ್ಧ ಚಿನ್ನದ ದರ ಮೊನ್ನೆ 1,41,415.00 ರೂ.ಗಳಿತ್ತು. ಇಂದು 1,42,715.00 ರೂ.ಗಳಷ್ಟಾಗಿದೆ.
ಮುಂಬೈ: ಡಬ್ಲ್ಯುಪಿಎಲ್ 2026 ರ ಇಂದಿನ ಪಂದ್ಯದಲ್ಲಿ ಮೊದಲ ಪಂದ್ಯವನ್ನು ರೋಚಕವಾಗಿ ಗೆದ್ದ ಆರ್ ಸಿಬಿಗೆ ಮೊದಲ ಪಂದ್ಯ ಸೋತ ಯುಪಿ ವಾರಿಯರ್ಸ್ ಸವಾಲೊಡ್ಡಲಿದೆ. ಡಬ್ಲ್ಯುಪಿಎಲ್ 2026 ಆರಂಭಿಕ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಆರ್ ಸಿಬಿ ರೋಚಕ 3 ವಿಕೆಟ್ ಗಳ ಗೆಲುವು ಸಾಧಿಸಿತು. ಈ ಥ್ರಿಲ್ಲಿಂಗ್ ಗೆಲುವಿನ ಆತ್ಮವಿಶ್ವಾಸದಲ್ಲೇ ಇಂದು ಯುಪಿ ವಾರಿಯರ್ಸ್ ವಿರುದ್ಧ ಸ್ಮೃತಿ ಮಂಧಾನ ಪಡೆ ಕಣಕ್ಕಿಳಿಯಲಿದೆ. ಆರ್ ಸಿಬಿ ಕಳೆದ ಪಂದ್ಯ ಗೆದ್ದರೂ ಸಾಕಷ್ಟು ಹುಳುಕುಗಳು ಬಯಲಾಗಿತ್ತು. ಕಳೆದ ಪಂದ್ಯದಲ್ಲಿ ಟಾಪ್ ಆರ್ಡರ್ ಬ್ಯಾಟಿಗರು ಕೈ ಕೊಟ್ಟಿದ್ದರು.
ಗದಗ: ಲಕ್ಕುಂಡಿಯಲ್ಲಿ ಮನೆಗೆ ಪಾಯ ತೆಗೆಯುವಾಗ ಸಿಕ್ಕಿದ ಚಿನ್ನ ನಿಧಿಯಲ್ಲ, ನಮ್ಮ ಮುತ್ತಜ್ಜರು ಇಟ್ಟಿದ್ದು ಅದನ್ನು ನಮಗೆ ವಾಪಸ್ ಕೊಡಿ ಎಂದು ಈಗ ಕುಟುಂಬಸ್ಥರು ಬೇಡಿಕೊಳ್ಳುತ್ತಿದ್ದಾರೆ. ಆದರೆ ಇದಕ್ಕೆ ನೆಟ್ಟಿಗರು ಅನೇಕರು ಕಾಮೆಂಟ್ ಮಾಡಿದ್ದು ಚಿನ್ನ ಯಾಕೆ ಕೊಟ್ರಿ ಎಂದು ಕೇಳುತ್ತಿದ್ದಾರೆ. ಕಾನೂನು ರೀತ್ಯಾ ಜಮೀನಿನಲ್ಲಿ ನಿಧಿ ಸಿಕ್ಕರೆ ಅದನ್ನು ಸರ್ಕಾರಕ್ಕೆ ಒಪ್ಪಿಸಬೇಕಾಗುತ್ತದೆ. ತಮ್ಮ ಮನೆಗೆ ಪಾಯ ತೆಗೆಯುವಾಗ ಸಿಕ್ಕ ಚಿನ್ನವನ್ನು ಬಾಲಕ ಅಧಿಕಾರಿಗಳಿಗೆ ಒಪ್ಪಿಸಿದ್ದ. ಆತನ ಪ್ರಾಮಾಣಿಕತೆಗೆ ಎಲ್ಲರೂ ಮೆಚ್ಚುಗೆ ಸೂಚಿಸಿದ್ದರು.ಆದರೆ ನಿಧಿ ಕೊಟ್ಟ ಮೇಲೆ ಕುಟುಂಬಸ್ಥರಿಗೆ ಈಗ ಮನೆ ಕಟ್ಟಲೂ ಆಗದೇ ಮನೆಯೂ ಇಲ್ಲದೇ ಬೀದಿಗೆ ಬೀಳುವಂತಾಗಿದೆ.
ಬೆಂಗಳೂರು: ಒಕ್ಕಲಿಗ ಪ್ರಬಲ ನಾಯಕ ಡಿಕೆ ಶಿವಕುಮಾರ್ ಗೆ ಅದೊಂದು ನೋವು ಕಾಡುತ್ತಿದೆಯಂತೆ. ಜೊತೆಗೆ ಹೈಕಮಾಂಡ್ ಗೂ ಸೂಕ್ಷ್ಮವಾಗಿ ಸಂದೇಶ ರವಾನಿಸಿದ್ದಾರೆ. ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರ ಬೂದಿ ಮುಚ್ಚಿದ ಕೆಂಡದಂತಿದೆ. ಇದುವರೆಗೂ ಹೈಕಮಾಂಡ್ ಯಾವುದೇ ನಿರ್ಧಾರಕ್ಕೆ ಬಂದಿಲ್ಲ. ಹೀಗಾಗಿ ಡಿಕೆ ಶಿವಕುಮಾರ್ ಬಣ ಕಾಯುತ್ತಲೇ ಇದೆ. ಇದರ ನಡುವೆ ಒಕ್ಕಲಿಗರ ಸಮಾವೇಶವೊಂದರಲ್ಲಿ ಮಾತನಾಡಿರುವ ಡಿಕೆ ಶಿವಕುಮಾರ್ ಮಾರ್ಮಿಕವಾಗಿ ಕೆಲವು ಮಾತನಾಡಿದ್ದಾರೆ. ಸ್ವಜಾತಿಗರೇ ನನಗೆ ಹಿಂದೆ, ಮುಂದೆ ಚೂರಿಯಿಂದ ಇರಿಯುತ್ತಿದ್ದಾರೆ.
ಮುಂಬೈ: ಡಬ್ಲ್ಯುಪಿಎಲ್ 2026 ರಲ್ಲಿ ನಿನ್ನೆ ಗುಜರಾತ್ ಟೈಟನ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ಬೌಲರ್ ನಂದಿನಿ ಶರ್ಮಾ ಹ್ಯಾಟ್ರಿಕ್ ವಿಕೆಟ್ ಕಬಳಿಸಿ ದಾಖಲೆ ಮಾಡಿದ್ದಾರೆ. ಅವರು ಹ್ಯಾಟ್ರಿಕ್ ವಿಕೆಟ್ ಪಡೆಯುತ್ತಿದ್ದಂತೇ ಗ್ಯಾಲರಿಯಲ್ಲಿ ಕೂತಿದ್ದ ಆಕೆಯ ತಾಯಿಯ ರಿಯಾಕ್ಷನ್ ವೈರಲ್ ಆಗಿದೆ. ವೇಗದ ಬೌಲಿಂಗ್ ಮಾಡುವ ನಂದಿನಿ ಶರ್ಮಾ ಚಂಢೀಘಡ ಮೂಲದವರು. ನಿನ್ನೆಯ ಪಂದ್ಯದಲ್ಲಿ ಸತತ ಮೂರು ಎಸೆತಗಳಲ್ಲಿ ಮೂರು ವಿಕೆಟ್ ಪಡೆಯುವ ಮೂಲಕ ನಂದಿನಿ ಶರ್ಮಾ ಡೆಲ್ಲಿ ಕ್ಯಾಪಿಟಲ್ಸ್ ಪರ ಹ್ಯಾಟ್ರಿಕ್ ಪಡೆದ ಮೊದಲ ಬೌಲರ್ ಎನ್ನುವ ದಾಖಲೆ ಮಾಡಿದ್ದಾರೆ.
ವಡೋದರಾ: ನ್ಯೂಜಿಲೆಂಡ್ ವಿರುದ್ಧ ನಿನ್ನೆ ನಡೆದ ಮೊದಲ ಏಕದಿನ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಶತಕ ಬಾರಿಸದಿದ್ದರೆ ಒಂದು ವಾರ ಊಟ ಮಾಡಲ್ಲ ಎಂದು ಪೋಸ್ಟರ್ ಹಿಡಿದು ನಿಂತಿದ್ದ ಬಾಲಕನ ಫೋಟೋ ವೈರಲ್ ಆಗಿದೆ. ವಿರಾಟ್ ಕೊಹ್ಲಿ ಎಂದರೆ ದೊಡ್ಡವರಿಂದ ಹಿಡಿದು ಚಿಕ್ಕಮಕ್ಕಳವರೆಗೂ ಹೃದಯದಲ್ಲಿ ಇಟ್ಟುಕೊಂಡು ಪೂಜೆ ಮಾಡುವ ಅಭಿಮಾನಿಗಳಿದ್ದಾರೆ. ಇದೇ ರೀತಿ ನಿನ್ನೆ ಕೊಹ್ಲಿ ಭರ್ಜರಿ ಬ್ಯಾಟಿಂಗ್ ಮಾಡುತ್ತಿದ್ದರೆ ಸ್ಟೇಡಿಯಂನಲ್ಲಿ ಓರ್ವ ಬಾಲಕ ವಿರಾಟ್ ಕೊಹ್ಲಿ ಈವತ್ತು ಸೆಂಚುರಿ ಬಾರಿಸದೇ ಇದ್ದರೆ ನಾನು ಒಂದು ವಾರ ಊಟ ಮಾಡಲ್ಲ ಎಂದು ಪೋಸ್ಟರ್ ಹಿಡಿದು ನಿಂತಿದ್ದ.
ವಡೋದರಾ: ಟೀಂ ಇಂಡಿಯಾ ಕ್ರಿಕೆಟಿಗ ವಿರಾಟ್ ಕೊಹ್ಲಿ ತಮ್ಮ ವೃತ್ತಿ ಜೀವನದಲ್ಲಿ ಸಾಕಷ್ಟು ಟ್ರೋಫಿಗಳನ್ನು ಗೆದ್ದಿದ್ದಾರೆ. ಗೆದ್ದ ಟ್ರೋಫಿಗಳನ್ನೆಲ್ಲಾ ಅವರು ಏನು ಮಾಡ್ತಾರೆ? ಇದಕ್ಕೆ ನಿನ್ನೆ ಪಂದ್ಯದ ಬಳಿಕ ಅವರೇ ಉತ್ತರ ಕೊಟ್ಟಿದ್ದಾರೆ. ನಿನ್ನೆಯ ಪಂದ್ಯದಲ್ಲಿ ಕೊಹ್ಲಿ 93 ರನ್ ಗಳಿಸಿ ಔಟಾಗಿದ್ದರು. ಅವರು ಶತಕ ಗಳಿಸದೇ ಇರುವುದು ಎಷ್ಟೋ ಅಭಿಮಾನಿಗಳಿಗೆ ಬೇಸರವಾಗಿತ್ತು. ಆದರೆ ಅವರ ಅದ್ಭುತ ಇನಿಂಗ್ಸ್ ಗೆ ಪಂದ್ಯ ಶ್ರೇಷ್ಠ ಪ್ರಶಸ್ತಿ ಲಭಿಸಿದೆ. ಈ ವೇಳೆ ಸಂದರ್ಶಕ ಹರ್ಷ ಭೋಗ್ಲೆ ಒಂದು ಪ್ರಶ್ನೆ ಕೇಳಿದ್ದಾರೆ. ನಿಮಗೆ ಇಷ್ಟು ವರ್ಷಗಳಲ್ಲಿ ಇಷ್ಟೊಂದು ಟ್ರೋಫಿ ಸಿಕ್ಕಿದೆಯಲ್ಲಾ ಅದನ್ನೆಲ್ಲಾ ಏನು ಮಾಡ್ತೀರಿ ಎಂದು ಹರ್ಷ ಭೋಗ್ಲೆ ತಮಾಷೆಯಾಗಿ ಕೇಳಿದ್ದಾರೆ.
ಬೆಂಗಳೂರು: ಇತ್ತೀಚೆಗೆ ಬಿಡುಗಡೆಯಾದ ಟಾಕ್ಸಿಕ್ ಸಿನಿಮಾದ ಟೀಸರ್ ಭಾರೀ ಸದ್ದು ಮಾಡುತ್ತಿದೆ. ಈ ಟೀಸರ್ ನಲ್ಲಿ ಹಸಿ ಬಿಸಿ ದೃಶ್ಯಗಳಲ್ಲಿ ನಟಿಸಿದ ಆ ನಟಿ ಯಾರು ಎಂಬ ಪ್ರಶ್ನೆಗೆ ಈಗ ಉತ್ತರ ಸಿಕ್ಕಿದೆ. ನಾಯಕನ ಜೊತೆ ಕಾರಿನೊಳಗೆ ಹಸಿಬಿಸಿ ದೃಶ್ಯವೊಂದರಲ್ಲಿ ವಿದೇಶೀ ಚೆಲುವೆಯೊಬ್ಬಳು ಕಾಣಿಸಿಕೊಂಡಿದ್ದಾಳೆ. ರಾಕಿಂಗ್ ಸ್ಟಾರ್ ಯಶ್ ಜೊತೆ ನಟಿಸಿದ ಈ ವಿದೇಶೀ ಚೆಲುವೆ ಯಾರು ಎಂಬ ಬಗ್ಗೆ ಹಲವರಲ್ಲಿ ಕುತೂಹಲವಿದೆ. ಇದಕ್ಕೀಗ ಚಿತ್ರತಂಡದಿಂದಲೇ ಉತ್ತರ ಸಿಕ್ಕಿದೆ. ಈ ನಟಿ ಬಿಯಾತ್ರೀಜ್ ಟಾಫೆಬಾಕ್ ಎಂದು ನಿರ್ದೇಶಕಿ ಗೀತು ಮೋಹನ್ ದಾಸ್ ಸ್ಪಷ್ಟಪಡಿಸಿದ್ದಾರೆ.
ನವದೆಹಲಿ: ಆಪರೇಷನ್ ಸಿಂಧೂರ್ ಬಳಿಕವೂ ಪಾಕಿಸ್ತಾನಕ್ಕೆ ಬುದ್ಧಿ ಬಂದಂತೆ ತೋರುತ್ತಿಲ್ಲ. ಗಡಿಯಲ್ಲಿ ಪಾಕ್ ಶಂಕಿತ ಡ್ರೋಣ್ ಗಳು ಪತ್ತೆಯಾಗಿದೆ. ಭಾರತದಲ್ಲಿ ಗಣರಾಜ್ಯೋತ್ಸವಕ್ಕೆ ಕೆಲವೇ ದಿನ ಬಾಕಿಯಿರುವಾಗ ಇತ್ತ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಡ್ರೋಣ್ ಹಾರಾಟ ಜೋರಾಗಿದೆ. ಭದ್ರತಾ ಸಂಸ್ಥೆಗಳ ಪ್ರಕಾರ ಗಡಿ ರೇಖೆ ಬಳಿ ಐದು ಡ್ರೋಣ್ ಗಳು ಪತ್ತೆಯಾಗಿವೆ. ಪೂಂಚ್, ನೌಶೇರಾ, ಧರ್ಮಶಾಲಾ, ರಾಮಘಡ, ಪರಾಖ್ ಪ್ರದೇಶಗಳಲ್ಲಿ ಡ್ರೋಣ್ ಗಳು ಕಾಣಿಸಿಕೊಂಡಿವೆ. ನೌಶೇರಾ ಸೆಕ್ಟರ್ ಬಳಿ ಪಾಕಿಸ್ತಾನ ಡ್ರೋಣ್ ಕಾನಿಸಿಕೊಂಡ ತಕ್ಷಣ ಭದ್ರತಾ ಪಡೆಗಳು ಗುಂಡು ಹಾರಿಸಿವೆ.
ಬೆಂಗಳೂರು: ರಾಜ್ಯದಲ್ಲಿ ಈಗ ವಿಪರೀತ ಚಳಿಯ ಜೊತೆ ಕೆಲವೆಡೆ ತುಂತುರು ಮಳೆಯ ಸಿಂಚನವಾಗುತ್ತಿದೆ. ಇಂದೂ ರಾಜ್ಯದ ಈ ಕೆಲವೆಡೆ ಮಳೆಯಾಗಲಿದೆ ಎಂದು ಹವಾಮಾನ ವರದಿಗಳು ಹೇಳುತ್ತಿವೆ. ಕಳೆದ ವಾರ ರಾಜ್ಯದಲ್ಲಿ ವಿಪರೀತ ಚಳಿ ಕಂಡುಬಂದಿತ್ತು. ವಾರಂತ್ಯಕ್ಕೆ ಹಲವೆಡೆ ಮೋಡ ಕವಿದ ವಾತಾವರಣ ಮತ್ತು ತುಂತುರು ಮಳೆಯಾಗಿತ್ತು. ಈ ಹವಾಮಾನ ವೈಪರೀತ್ಯದಿಂದಾಗಿ ಜನ ಆರೋಗ್ಯ ಸಮಸ್ಯೆಗಳಿಗೆ ತುತ್ತಾಗುತ್ತಿದ್ದಾರೆ. ಇಂದು ಚಿಕ್ಕಮಗಳೂರು, ಕೊಡಗು, ಹಾಸನ, ಮೈಸೂರು, ಮಂಡ್ಯ, ಬೆಂಗಳೂರು, ರಾಮನಗರ, ಚಾಮರಾಜನಗರ, ಕೋಲಾರ, ತುಮಕೂರು, ಚಿಕ್ಕಬಳ್ಳಾಪುರ, ದೊಡ್ಡ ಬಳ್ಳಾಪುರ ಜಿಲ್ಲೆಗಳಲ್ಲಿ ಮಳೆಯಾಗುವ ಸೂಚನೆಯಿದೆ.
ಇಂದು ಸೋಮವಾರವಾಗಿದ್ದು ಶಿವನಿಗೆ ವಿಶೇಷವಾದ ದಿನವಾಗಿದೆ. ಕಾಶೀ ವಿಶ್ವನಾಥನ ಪರಮ ಭಕ್ತರಾಗಿದ್ದರೆ ಈ ಕಾಶೀ ವಿಶ್ವನಾಥಾಷ್ಟಕಂ ಸ್ತೋತ್ರವನ್ನು ಓದಿ.ಗಂಗಾ ತರಂಗ ರಮಣೀಯ ಜಟಾ ಕಲಾಪಂಗೌರೀ ನಿರಂತರ ವಿಭೂಷಿತ ವಾಮ ಭಾಗಂನಾರಾಯಣ ಪ್ರಿಯಮನಂಗ ಮದಾಪಹಾರಂವಾರಾಣಶೀ ಪುರಪತಿಂ ಭಜ ವಿಶ್ವನಾಥಮ್ ॥ 1 ॥ ವಾಚಾಮಗೋಚರಮನೇಕ ಗುಣ ಸ್ವರೂಪಂವಾಗೀಶ ವಿಷ್ಣು ಸುರ ಸೇವಿತ ಪಾದ ಪದ್ಮಂವಾಮೇಣ ವಿಗ್ರಹ ವರೇನ ಕಲತ್ರವಂತಂವಾರಾಣಶೀ ಪುರಪತಿಂ ಭಜ ವಿಶ್ವನಾಥಮ್ ॥ 2 ॥ ಭೂತಾದಿಪಂ ಭುಜಗ ಭೂಷಣ ಭೂಷಿತಾಂಗಂವ್ಯಾಘ್ರಾಂಜಿನಾಂ ಬರಧರಂ, ಜಟಿಲಂ, ತ್ರಿನೇತ್ರಂಪಾಶಾಂಕುಶಾಭಯ ವರಪ್ರದ ಶೂಲಪಾಣಿಂವಾರಾಣಶೀ ಪುರಪತಿಂ ಭಜ ವಿಶ್ವನಾಥಮ್ ॥ 3 ॥
ವಡೋದರಾ: ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೊದಲ ಏಕದಿನ ಪಂದ್ಯವನ್ನು ಟೀಂ ಇಂಡಿಯಾ ಕೊನೆಗೂ ರೋಚಕವಾಗಿ 4 ವಿಕೆಟ್ ಗಳಿಂದ ಗೆದ್ದುಕೊಂಡಿದೆ. ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್ 300 ರನ್ ಗಳಿಸಿತ್ತು. 301 ರನ್ ಗಳ ಗುರಿ ಬೆನ್ನತ್ತಿದ ಭಾರತಕ್ಕೆ ವಿರಾಟ್ ಕೊಹ್ಲಿ ಭರ್ಜರಿ 93 ರನ್ ಗಳಿಸಿ ಉತ್ತಮ ಅಡಿಪಾಯ ಹಾಕಿಕೊಟ್ಟಿದ್ದರು. ಆದರೆ ಕೊಹ್ಲಿ ಔಟಾದ ಬಳಿಕ ಭಾರತ ಕೊಂಚ ಕುಸಿತಕ್ಕೊಳಗಾಯಿತು. ಕೊನೆಯ ಐದು ಓವರ್ ಗಳಲ್ಲಿ ರನ್ – ಬಾಲ್ ಸಮ ಎನ್ನುವ ಸ್ಥಿತಿಯಿತ್ತು. ಕ್ರೀಸ್ ನಲ್ಲಿದ್ದ ಕೆಎಲ್ ರಾಹುಲ್ ಇದ್ದಿದ್ದು ಭಾರತಕ್ಕೆ ದೊಡ್ಡ ಪ್ಲಸ್ ಪಾಯಿಂಟ್ ಆಗಿತ್ತು.
ವಡೋದರಾ: ಟೀಂ ಇಂಡಿಯಾ ರನ್ ಮೆಷಿನ್ ವಿರಾಟ್ ಕೊಹ್ಲಿ ಇಂದು ಹೊಸ ವಿಶ್ವ ದಾಖಲೆ ಮಾಡಿದ್ದಾರೆ. ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ ಗರಿಷ್ಠ ರನ್ ಗಳಿಸಿದ ಆಟಗಾರರ ಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೇರಿದ್ದಾರೆ. ನ್ಯೂಜಿಲೆಂಡ್ ವಿರುದ್ಧ ವಡೋದರಾದಲ್ಲಿ ನಡೆಯುತ್ತಿರುವ ಮೊದಲ ಏಕದಿನ ಪಂದ್ಯದಲ್ಲಿ ಕೊಹ್ಲಿ ಈ ದಾಖಲೆ ಮಾಡಿದ್ದಾರೆ. ಇಂದು ಅರ್ಧಶತಕ ಗಳಿಸಿ ಆಡುತ್ತಿರುವ ಕೊಹ್ಲಿ 28,017 ರನ್ ಗಳಿಸುವ ಮೂಲಕ ಶ್ರೀಲಂಕಾದ ಕುಮಾರ್ ಸಂಗಕ್ಕಾರ ಅವರನ್ನು ಹಿಂದಿಕ್ಕಿ ವಿಶ್ವ ನಂ.2 ಆಟಗಾರೆನಿಸಿದರು. ವಿಶೇಷವೆಂದರೆ ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ ಗರಿಷ್ಠ ರನ್ ಗಳಿಸಿದ ದಾಖಲೆ ಭಾರತೀಯರೇ ಆದ ಕ್ರಿಕೆಟ್ ದೇವರು ಸಚಿನ್ ತೆಂಡುಲ್ಕರ್ ಹೆಸರಿನಲ್ಲಿದೆ.
ಬೆಂಗಳೂರು: ಮನರೇಗಾ ವಿಚಾರದಲ್ಲಿ ಬಹಿರಂಗ ಚರ್ಚೆಗೆ ಸವಾಲೆಸಿದರುವ ಎಚ್ಡಿ ಕುಮಾರಸ್ವಾಮಿಗೆ ಇದೀಗ ಪಂಥಾಹ್ವಾನ ಮಾಡಿರುವುದಾಗಿ ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕುಮಾರಸ್ವಾಮಿ ಪಂಥಾಹ್ವಾನ ಸ್ವೀಕರಿಸಿದ್ದೇನೆ. ನಾನು ಯಾವಾಗ ಬೇಕಾದ್ರೂ ರೆಡಿ ಇದ್ದಿದ್ದು, ಅವರ ಜತೆ ಸಾರ್ವಜನಿಕ ಚರ್ಚೆಗೂ ಸಿದ್ದ, ಇಲ್ಲದಿದ್ದರೆ ಟಿವಿಯಲ್ಲಿ ಚರ್ಚೆಗೂ ಸಿದ್ದ ಸಿದ್ದ. ವಿಧಾನಸಭೆಯಲ್ಲಾದ್ರೂ ಚರ್ಚೆಗೆ ಬರಲಿ. ಅವರು ಯಾವಾಗ ಹೇಳ್ತಾರೆ ಹೇಳಿ, ನಾನು ಡಿಬೆಟ್ಗೆ ರೆಡಿ. ಅವರ ಪಂಥಾಹ್ವಾನ ಸ್ವೀಕಾರ ಮಾಡಿದ್ದೇನೆ ಎಂದು ತಿಳಿಸಿದರು.
ಮಂಗಳೂರು: ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಇದನ್ನು ವಾಪಸ್ಸು ಕಳಿಸಿಲ್ಲ, ತಿರಸ್ಕರಿಸಿಯೂ ಇಲ್ಲ ಅಥವಾ ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಮಸೂದೆಯ ಬಗ್ಗೆ ವಿವರಣೆ ನೀಡಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ವಿಪಕ್ಷಗಳಿಂದ ಭಾರೀ ವಿರೋಧಕ್ಕೆ ಕಾರಣವಾದ ದ್ವೇಷ ಭಾಷಣ ಪ್ರತಿಬಂಧಕ ಮಸೂದೆ ಬಗ್ಗೆ ನಿನ್ನೆ ರಾಜ್ಯಪಾಲರ ತಿರಸ್ಕರಿಸಿದರು ಎಂಬ ಸುದ್ದಿ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ಇಂದು ಮಂಗಳೂರಿನಲ್ಲಿ ಪ್ರತಿಕ್ರಿಯಿಸಿದ್ದಾರೆ.ಇನ್ನೂ ಬಳ್ಳಾರಿ ಬ್ಯಾನರ್ ತೆರವು ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಬಳ್ಳಾರಿಯಲ್ಲಿ ಮಹರ್ಷಿ ವಾಲ್ಮೀಕಿ ಪ್ರತಿಮೆ ಉದ್ಘಾಟನೆ ಬಗ್ಗೆ
ಶರಿಯತ್ಪುರ [ಬಾಂಗ್ಲಾದೇಶ: ಶರಿಯತ್ಪುರದ ಜಜಿರಾ ಉಪಜಿಲಾದಲ್ಲಿ ನಡೆದ ಬಾಂಬ್ ಸ್ಫೋಟದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಎರಡಕ್ಕೆ ಏರಿದೆ ಎಂದು ವರದಿಯಾಗಿದೆ. ಢಾಕಾ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ (DMCH) ಚಿಕಿತ್ಸೆ ಪಡೆಯುತ್ತಿದ್ದಾಗ ಎಂಡಿ ನಬಿನ್ ಹೊಸೈನ್ (22) ಸಾವನ್ನಪ್ಪಿದ ನಂತರ, ಸ್ಫೋಟದಲ್ಲಿ ಗಾಯಗೊಂಡ ಮತ್ತೊಬ್ಬ ವ್ಯಕ್ತಿ ಅರ್ಮಾನ್ ನಯನ್ ಮೊಲ್ಲಾ (25) ಇನ್ನೂ ಗಂಭೀರ ಸ್ಥಿತಿಯಲ್ಲಿದ್ದಾರೆ. ಬಿಲಾಶ್ಪುರ ಒಕ್ಕೂಟದ ಬೆಪರಿಕಂಡಿ ಗ್ರಾಮದ ತಗಡಿನ ಶೆಡ್ ಮನೆಯೊಳಗೆ ಗುರುವಾರ ಮುಂಜಾನೆ ಸ್ಫೋಟ ಸಂಭವಿಸಿದೆ
ವಡೋದರಾ: ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೊದಲ ಏಕದಿನ ಪಂದ್ಯಕ್ಕೆ ಹೊಟ್ಟೆಗೆ ಮಾಡಿಕೊಂಡಿದ್ದ ಗಾಯದಿಂದ ಚೇತರಿಸಿಕೊಂಡು ಈಗಷ್ಟೇ ತಂಡಕ್ಕೆ ಬಂದಿರುವ ಶ್ರೇಯಸ್ ಅಯ್ಯರ್ ಮತ್ತೆ ಅದ್ಭುತ ರನೌಟ್ ಮೂಲಕ ಗಮನ ಸೆಳೆದಿದ್ದಾರೆ. ಆಸ್ಟ್ರೇಲಿಯಾ ಸರಣಿ ವೇಳೆ ಶ್ರೇಯಸ್ ಅಯ್ಯರ್ ಕ್ಯಾಚ್ ಹಿಡಿಯುವ ಯತ್ನದಲ್ಲಿ ನೆಲಕ್ಕೆ ಬಿದ್ದು ಹೊಟ್ಟೆಗೆ ಗಾಯ ಮಾಡಿಕೊಂಡಿದ್ದರು. ಅವರ ಗಾಯ ಎಷ್ಟು ಗಂಭೀರವಾಗಿತ್ತೆಂದರೆ ಐಸಿಯುವಿನಲ್ಲಿ ಚಿಕಿತ್ಸೆ ನೀಡಲಾಗಿತ್ತು. ಶಸ್ತ್ರಚಿಕಿತ್ಸೆಗೂ ಒಳಗಾಗಿದ್ದರು. ಇದರಿಂದ ಚೇತರಿಸಿಕೊಂಡು ಎರಡೇ ತಿಂಗಳಲ್ಲಿ ಅವರು ಮತ್ತೆ ಕಣಕ್ಕಿಳಿದಿದ್ದಾರೆ.
ತುಮಕೂರು: ಮುಟ್ಟಿನ ಸಂದರ್ಭದಲ್ಲಿ ಕಾಣಿಸಿಕೊಂಡ ಹೊಟ್ಟೆ ನೋವು ತಾಳಲಾರದೆ ಯುವತಿಯೊಬ್ಬಳು ನೇಣಿಗೆ ಶರಣಾದ ಘಟನೆ ತುಮಕೂರು ತಾಲೂಕಿನ ಬ್ಯಾತ ಗ್ರಾಮದಲ್ಲಿ ನಡೆದಿದೆ.ಆತ್ಮಹತ್ಯೆಗೆ ಶರಣಾದ ಯುವತಿಯನ್ನು ಗುಲ್ಬರ್ಗ ಮೂಲದ ಕೀರ್ತನಾ (19) ಎಂದು ಗುರುತಿಸಲಾಗಿದೆ. ಗುಲ್ಬರ್ಗದ ಕಲಗಿ ತಾಲೂಕಿನ ಸಾಲಹಳ್ಳಿಯ ಕೀರ್ತನಾ ಕೆಲಸ ಅರಸಿ ತುಮಕೂರಿನಲ್ಲಿದ್ದ ಚಿಕ್ಕಪ್ಪನ ಮನೆಯಲ್ಲಿ ಬಂದಿದ್ದಳು. ಕೆಲಸ ಸಿಗದ ಕಾರಣ ಮನೆಯಲ್ಲೆ ವಾಸವಾಗಿದ್ದಳು.
ಲಕ್ಕುಂಡಿ: ತಮ್ಮ ಜಮೀನಿನಲ್ಲಿ ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ಕೊಟ್ಟ ಬಳಿಕ ಈಗ ಬಡ ಕುಟುಂಬ ಬೀದಿಗೆ ಬೀಳುವ ಪರಿಸ್ಥಿತಿ ಎದುರಾಗಿದೆ. ಇದು ಯಾಕೆ ಹೀಗಾಯ್ತು ಇಲ್ಲಿದೆ ನೋಡಿ ವಿವರ. ಲಕ್ಕುಂಡಿಯಲ್ಲಿ ಮನೆ ಕಟ್ಟಲು ಪಾಯ ತೆಗೆಯುವಾಗ ತಮ್ಮ ಜಮೀನಿನಲ್ಲಿ ನಿಧಿ ಸಿಕ್ಕಿತ್ತು ಎಂದು ಆ ಬಡ ಕುಟುಂಬ ಪ್ರಾಮಾಣಿಕವಾಗಿ ಇದನ್ನು ಸರ್ಕಾರಕ್ಕೆ ಒಪ್ಪಿಸಿತ್ತು. ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ನಿಧಿಯನ್ನು ತಮ್ಮ ವಶಕ್ಕೆ ತೆಗೆದುಕೊಂಡಿದ್ದಾರೆ. ಆದರೆ ಈಗ ನಿಜವಾಗಿ ಆ ಬಡ ಕುಟುಂಬಕ್ಕೆ ಸಂಕಷ್ಟ ಶುರುವಾಗಿದೆ. ನಿಧಿ ಸಿಕ್ಕ ಬಳಿಕ ಆ ಜಮೀನನ್ನು ಸರ್ಕಾರ ವಶಕ್ಕೆ ಪಡೆದುಕೊಂಡಿದೆ.
ಬೀದರ್: ರಾಜ್ಯ ರಾಜಕರಾಣದಲ್ಲಿ ಸಿಎಂ ಕುರ್ಚಿಗಾಗಿ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ನಡುವೆ ಗುದ್ದಾಟ ಬೆನ್ನಲ್ಲೇ ಬೀದರ್ನಲ್ಲಿ ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಸ್ಫೋಟಕ ಭವಿಷ್ಯವನ್ನು ನುಡಿದಿದ್ದಾರೆ. ರಾಜ್ಯ ರಾಜಕಾರಣದಲ್ಲಿ ಸಿಎಂ ಬದಲಾವಣೆಯಿಲ್ಲ. ಯುಗಾದಿವರೆಗೂ ಸರ್ಕಾರ ಏನೂ ಬದಲಾವಣೆ ಆಗೋದಿಲ್ಲ ಎಂದರು. ಇದೀಗ ಉದ್ಭವಿಸಿರುವ ಸಿಎಂ ಬದಲಾವಣೆ ವಿಚಾರದಲ್ಲಿ ಸಿದ್ದರಾಮಯ್ಯನವರೇ ಬಿಟ್ಟುಕೊಟ್ಟರೆ ಬೇರೆಯವರು ಆಗಬಹುದು. ಆದರೆ, ಸಿಎಂ ಸಿದ್ದರಾಮಯ್ಯ ಬದಲಾವಣೆ ಯಾರ ಕೈಯಲ್ಲೂ ಮಾಡೋಕೆ ಆಗಲ್ಲ ಎಂದರು.
ಕೋಲ್ಕತ್ತಾ: ನಟ-ಗಾಯಕ ಮತ್ತು 2007 ರಲ್ಲಿ ಇಂಡಿಯನ್ ಐಡಲ್ ಸೀಸನ್ 3 ವಿಜೇತ ಪ್ರಶಾಂತ್ ತಮಂಗ್ ಭಾನುವಾರ ತಮ್ಮ 43 ನೇ ವಯಸ್ಸಿನಲ್ಲಿ ನಿಧನರಾದರು. ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದಾರೆ, "'ಇಂಡಿಯನ್ ಐಡಲ್' ಖ್ಯಾತಿಯ ಜನಪ್ರಿಯ ಗಾಯಕ ಮತ್ತು ರಾಷ್ಟ್ರೀಯ ಖ್ಯಾತಿಯ ಕಲಾವಿದ ಪ್ರಶಾಂತ್ ತಮಂಗ್ ಅವರ ಇಂದು ಹಠಾತ್ ಮತ್ತು ಅಕಾಲಿಕ ನಿಧನದಿಂದ ದುಃಖಿತನಾಗಿದ್ದೇನೆ. ನಮ್ಮ ಡಾರ್ಜಿಲಿಂಗ್ ಬೆಟ್ಟಗಳಲ್ಲಿ ಅವರ ಬೇರುಗಳು ಮತ್ತು ಒಂದು ಕಾಲದಲ್ಲಿ ಕೋಲ್ಕತ್ತಾ ಪೊಲೀಸರೊಂದಿಗಿನ ಸಂಬಂಧವು ಅವರನ್ನು ಬಂಗಾಳದಲ್ಲಿ ನಮಗೆ ವಿಶೇಷವಾಗಿ ಪ್ರಿಯರನ್ನಾಗಿ ಮಾಡಿತು. ಅವರ ಕುಟುಂಬ, ಸ್ನೇಹಿತರು ಮತ್ತು ಅಸಂಖ್ಯಾತ ಅನುಯಾಯಿಗಳಿಗೆ ನನ್ನ ಸಂತಾಪಗಳನ್ನು ವ್ಯಕ್ತಪಡಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.
ತಿರುವನಂತಪುರಂ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಭಾನುವಾರ ಶಬರಿಮಲೆ ಚಿನ್ನ ನಷ್ಟ ಪ್ರಕರಣವನ್ನು ಕೇರಳದ ಆಡಳಿತಾರೂಢ ಎಡಪಕ್ಷಗಳನ್ನು ಗುರಿಯಾಗಿಸಿಕೊಂಡು, ನಿಜವಾದ ಅಪರಾಧಿಗಳನ್ನು "ರಕ್ಷಿಸುತ್ತಿದ್ದಾರೆ" ಎಂದು ಆರೋಪಿಸಿದರು ಮತ್ತು ಈ ಸಂವೇದನಾಶೀಲ ಪ್ರಕರಣದ ಬಗ್ಗೆ ತಟಸ್ಥ ತನಿಖಾ ಸಂಸ್ಥೆಯಿಂದ ತನಿಖೆ ನಡೆಸಬೇಕೆಂದು ಒತ್ತಾಯಿಸಿದರು.ಇತ್ತೀಚಿನ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಪ್ರತಿಷ್ಠಿತ ತಿರುವನಂತಪುರಂ ನಗರ ನಿಗಮದಲ್ಲಿ ಬಿಜೆಪಿ ನೇತೃತ್ವದ ಎನ್ಡಿಎ ಅಧಿಕಾರವನ್ನು ವಶಪಡಿಸಿಕೊಂಡ ನಂತರ ಮೊದಲ ಬಾರಿಗೆ ಕೇರಳ ರಾಜಧಾನಿಗೆ ಅಮಿತ್ ಶಾ ಭೇಟಿ ನೀಡಿದರು. ಕೇರಳ ಮತ್ತು ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆಗಳು ಒಟ್ಟಿಗೆ ನಡೆಯಲಿವೆ ಎಂದು ಹೇಳಿದ ಅವರು, ಪೂರ್ವ ಮತ್ತು
ಬೆಂಗಳೂರು: ನಟ ಡಾಲಿ ಧನಂಜಯ್ ಅವರು 2025ರ ಫೆಬ್ರವರಿ 16ರಂದು ವೈದ್ಯೆ ಡಾ.ಧನ್ಯತಾ ಅವರನ್ನು ಮದುವೆಯಾದರು. ಇದೀಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ರೀಲ್ಸ್ನಲ್ಲಿ ಧನ್ಯತಾ ಹೊಟ್ಟೆಯನ್ನು ನೋಡಿ, ಶೀಘ್ರದಲ್ಲೇ ಈ ದಂಪತಿ ಮಗುವನ್ನು ಸ್ವಾಗತಿಸಲಿದ್ದಾರೆ ಎಂಬ ಅನುಮಾನವನ್ನು ವ್ಯಕ್ತಪಡಿಸಿದ್ದಾರೆ. ಧನ್ಯತಾ ಅವರು ಈಚೆಗೆ ತಮ್ಮ ಕುಟುಂಬ ಸಮೇತ ಟ್ರಿಪ್ಗೆ ಹೋಗಿದ್ದಾರೆ. ಅಲ್ಲಿ ತೆಗೆದ ಫೋಟೋಗಳು ಇದೀಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಫೋಟೋದಲ್ಲಿ ಧನ್ಯತಾ ಹೊಟ್ಟೆ ನೋಡಿ, ಇವರು ಗರ್ಭಿಣಿ ಎಂದು ಹೇಳುತ್ತಿದ್ದಾರೆ. ಆದರೆ ದಂಪತಿ ಎಲ್ಲೂ ಈ ವಿಚಾರದ ಬಗ್ಗೆ ಹೇಳಿಕೊಂಡಿಲ್ಲ.
ಬೆಂಗಳೂರು: 2026ರ ರಾಜ್ಯ ಬಜೆಟ್ ಮಂಡನೆಗೆ ರಾಜ್ಯ ಸರ್ಕಾರ ತೀರ್ಮಾನ ನಡೆಸಿದೆ. ಮಾರ್ಚ್ 6ರಂದು ಬಜೆಟ್ ಮಂಡಿಸುವ ಬಗ್ಗೆ ಸಿಎಂ ಸಿದ್ದರಾಮಯ್ಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದಾರೆ ಎಂದು ಆಪ್ತ ವಲಯಗಳಿಂದ ತಿಳಿದುಬಂದಿದೆ.ಇನ್ನೂ ಎಲ್ಲವೂ ಅಂದುಕೊಂಡಂತೆ ನಡೆದರೆ ಮಾರ್ಚ್ 5 ರಿಂದ ಬಜೆಟ್ ಅಧಿವೇಶನ ಶುರುವಾಗಲಿದೆ. ಅಂದು ವಿಧಾನ ಮಂಡಲ ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲರು ಭಾಷಣ ಮಾಡಲಿದ್ದು, ಮಾರ್ಚ್ 6 ರಂದು ಸಿದ್ದರಾಮಯ್ಯ ಬಜೆಟ್ ಮಂಡನೆ ಮಾಡಲಿದ್ದಾರೆ ಎಂದು ತಿಳಿದುಬಂದಿದೆ.ಕುರ್ಚಿ ಗುದ್ದಾಟದ ನಡುವೆ ಸಿಎಂ ಸಿದ್ದರಾಮಯ್ಯ ಅವರು ದಾಖಲೆ ಬಜೆಟ್ ಮಂಡಿಸಲು ಸಿದ್ಧತೆ ನಡೆಸಿದ್ದಾರೆ. 16 ಬಜೆಟ್ಗಳನ್ನ
ಮೆಹೆಂದಿ ಹಚ್ಚಿದ್ದು ಚೆನ್ನಾಗಿ ಕೆಂಪಾಗಲು ಅಥವಾ ಕಪ್ಪಾಗಲು ನೀವು ಈ ಕೆಳಗಿನ ಸುಲಭ ಮತ್ತು ಪರಿಣಾಮಕಾರಿ ಮನೆಮದ್ದುಗಳನ್ನು ಅನುಸರಿಸಬಹುದು. ಇದರಿಂದ ಮತ್ತಷ್ಟು ನಿಮ್ಮ ಮೆಹೆಂದಿ ಬಣ್ಣ ಚೆನ್ನಾಗಿರುತ್ತದೆ. ಕೈಗಳನ್ನು ಸ್ವಚ್ಛಗೊಳಿಸಿ: ಮೆಹೆಂದಿ ಹಚ್ಚುವ ಮೊದಲು ಕೈಗಳನ್ನು ಸೋಪಿನಿಂದ ತೊಳೆದು ಚೆನ್ನಾಗಿ ಒಣಗಿಸಿಕೊಳ್ಳಿ. ನೀಲಗಿರಿ ಎಣ್ಣೆ: ಮೆಹೆಂದಿ ಹಚ್ಚುವ ಮೊದಲು ಕೈಗಳಿಗೆ ಸ್ವಲ್ಪ ನೀಲಗಿರಿ ಎಣ್ಣೆಯನ್ನು ಹಚ್ಚಿಕೊಳ್ಳಿ. ಇದು ಬಣ್ಣ ಗಾಢವಾಗಲು ಸಹಾಯ ಮಾಡುತ್ತದೆ. ಹೆಚ್ಚು ಸಮಯ ಬಿಡಿ: ಮೆಹೆಂದಿಯನ್ನು ಹಾಕಿದ ಬಳಿಕ ಕನಿಷ್ಠ 5 ರಿಂದ 8 ಗಂಟೆಗಳ ಕಾಲ ಕೈಯಲ್ಲೇ ಬಿಡಿ. ಸಾಧ್ಯವಾದರೆ
ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ. ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದಾಗ ಮುಂಬೈನಲ್ಲಿ ವಿವಾದವೊಂದು ಸೃಷ್ಟಿಯಾಯಿತು. ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ) ಮತ್ತು ಇತರ ರಾಜಕೀಯ ಪಕ್ಷಗಳು ಮತ್ತು ಸಂಘಟನೆಗಳು ತೀಕ್ಷ್ಣ ಪ್ರತಿಕ್ರಿಯೆಗಳನ್ನು ನೀಡಿವೆ.ಬೃಹನ್ ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಗೆ ಮುಂಚಿತವಾಗಿ, ಅಣ್ಣಾಮಲೈ ಮುಂಬೈನಲ್ಲಿ ತಮಿಳು ಮಾತನಾಡುವ ಜನಸಂಖ್ಯೆ ಗಣನೀಯವಾಗಿ ಇರುವ ಧಾರಾವಿ ಮತ್ತು ಸಿಯಾನ್-ಕೋಲಿವಾಡ ಪ್ರದೇಶಗಳಲ್ಲಿ ಪ್ರಚಾರ ಮಾಡುತ್ತಿದ್ದರು.ಮುಂಬೈ (ಮುಂಬೈ) ಮಹಾರಾಷ್ಟ್ರ ನಗರವಲ್ಲ ಆದರೆ ಅಂತರರಾಷ್ಟ್ರೀಯ ನಗರ. ಇದು ₹75,000 ಕೋಟಿ ಬಜೆಟ್ ಹೊಂದಿದೆ.
ನ್ಯೂಜಿಲೆಂಡ್ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಗೆ ರಿಷಭ್ ಪಂತ್ ಬದಲಿಗೆ ಧ್ರುವ್ ಜುರೆಲ್ ಅವರನ್ನು ಆಯ್ಕೆ ಮಾಡಲಾಗಿದೆ. ವಡೋದರಾದಲ್ಲಿ ನಡೆದ ನೆಟ್ ಸೆಷನ್ನಲ್ಲಿ ಎಸೆತವೊಂದು ಪಕ್ಕೆಲುಬಿನ ಮೇಲೆ ಬಡಿದು ಪಕ್ಕೆಲುಬಿನ ನೋವು ಕಾಣಿಸಿಕೊಂಡ ಕಾರಣ ಪಂತ್ ಅವರನ್ನು ಏಕದಿನ ಸರಣಿಯಿಂದ ಹೊರಗಿಡಲಾಯಿತು. ಭಾನುವಾರ ನಡೆದ ಮೊದಲ ಏಕದಿನ ಪಂದ್ಯಕ್ಕೂ ಮುನ್ನ ಪಂತ್ ತೀವ್ರ ನೋವಿನಿಂದ ಬಳಲುತ್ತಿದ್ದರು ಮತ್ತು ಅವರು ಏಕದಿನ ಸರಣಿಯಲ್ಲಿ ಭಾಗವಹಿಸಲು ಸಾಧ್ಯವಾಗುವುದಿಲ್ಲ. ನಡೆಯುತ್ತಿರುವ ವಿಜಯ್ ಹಜಾರೆ ಟ್ರೋಫಿಯಲ್ಲಿ ಉತ್ತರ ಪ್ರದೇಶ ಪರ ಜುರೆಲ್ ಅದ್ಭುತ ಫಾರ್ಮ್ನಲ್ಲಿದ್ದಾರೆ ಮತ್ತು ಬಿಸಿಸಿಐ ಅಧಿಕೃತ ಪತ್ರಿಕಾ ಪ್ರಕಟಣೆಯಲ್ಲಿ ಅವರು ಈಗಾಗಲೇ ತಂಡದೊಂದಿಗೆ ಸಂಪರ್ಕ ಹೊಂದಿದ್ದಾರೆ ಎಂದು ತಿಳಿಸಲಾಗಿದೆ.