ಪಾಟ್ನಾ: ನನ್ನ ಹೆಸರು ವೋಟರ್ ಲಿಸ್ಟ್ ನಿಂದ ಕಿತ್ತು ಹಾಕಲಾಗಿದೆ ಎಂದು ಆರೋಪ ಮಾಡಲು ಹೋಗಿ ಬಿಹಾರದ ಆರ್ ಜೆಡಿ ನಾಯಕ ತೇಜಸ್ವಿ ಯಾದವ್ ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಂಡಿಯಾ ಒಕ್ಕೂಟದ ಪಕ್ಷಗಳು ಈಗ ಚುನಾವಣಾ ಆಯೋಗದ ವಿರುದ್ಧವೇ ಅಕ್ರಮ ಆರೋಪ ಮಾಡುತ್ತಿವೆ. ಮತದಾರರ ಪಟ್ಟಿಯಿಂದ ಮತದಾರರ ಪಟ್ಟಿಯನ್ನು ತಮಗಿಷ್ಟ ಬಂದಂತೆ ಚುನಾವಣಾ ಆಯೋಗ ಕಿತ್ತು ಹಾಕಿ ಮತ್ತು ಸೇರಿಸಿ ಬಿಜೆಪಿಗೆ ಅನುಕೂಲ ಮಾಡಿಕೊಡುತ್ತಿದೆ ಎಂದು ಆರೋಪಿಸುತ್ತಿದೆ. ಇದೀಗ ಬಿಹಾರದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು, ಈ ವೇಳೆ ನನ್ನ ಹೆಸರನ್ನೂ ಚುನಾವಣಾ ಆಯೋಗ ಕಿತ್ತು ಹಾಕಿದೆ ನೋಡಿ ಎಂದು ತೇಜಸ್ವಿ ಯಾದವ್ ಮೊನ್ನೆಯಷ್ಟೇ ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದ್ದರು.
ರಾಂಚಿ: ಜಾರ್ಖಂಡ್ ನ ಮಾಜಿ ಸಿಎಂ, ಜೆಎಂಎಂ ಪಕ್ಷದ ಸಂಸ್ಥಾಪಕರಲ್ಲಿ ಒಬ್ಬರಾಗಿದ್ದ ಶಿಬು ಸೊರೇನ್ ನಿಧನರಾಗಿದ್ದಾರೆ. ಅವರಿಗೆ 81 ವರ್ಷ ವಯಸ್ಸಾಗಿತ್ತು. ಮೂತ್ರಪಿಂಡದ ಸಮಸ್ಯೆಯಿಂದ ಬಳಲುತ್ತಿದ್ದ ಶಿಬು ಸೊರೇನ್ ಅವರನ್ನು ದೆಹಲಿಯ ಗಂಗಾರಾಮ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ ಒಂದು ತಿಂಗಳಿನಿಂದ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಅವರ ಪುತ್ರ, ಜಾರ್ಖಂಡ್ ನ ಹಾಲಿ ಸಿಎಂ ಹೇಮಂತ್ ಸೊರೇನ್ ತಮ್ಮ ತಂದೆಯ ನಿಧನದ ಸುದ್ದಿಯನ್ನು ಎಕ್ಸ್ ನಲ್ಲಿ ಖಚಿತಪಡಿಸಿದ್ದಾರೆ. ಕಳೆದ ಕೆಲವು ದಿನಗಳಿಂದ ಅವರ ಸ್ಥಿತಿ ಗಂಭೀರವಾಗಿತ್ತು.
ಬೆಂಗಳೂರು: ಟಿಪ್ಪು ಸಂತತಿಯನ್ನು ವೈಭವೀಕರಿಸಿ ಮುಸ್ಲಿಂ ಮತಗಳಿಕೆಯನ್ನು ಗಟ್ಟಿಗೊಳಿಸಿಕೊಳ್ಳುವುದು ನಿಮ್ಮ ಕಾರ್ಯ ಸೂಚಿ ಎಂಬುದು ನಾಡಿನ ಜನತೆಗೆ ತಿಳಿದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ನಿನ್ನೆ ಸಚಿವ ಮಹದೇವಪ್ಪ ಕೆಆರ್ ಎಸ್ ಡ್ಯಾಮ್ ಗೆ ಅಡಿಗಲ್ಲು ಹಾಕಿದ್ದು ಟಿಪ್ಪು ಸುಲ್ತಾನ್ ಎಂದು ವಿವಾದಿತ ಹೇಳಿಕೆ ನೀಡಿದ ಬೆನ್ನಲ್ಲೇ ಟ್ವೀಟ್ ಮಾಡಿ ವಿಜಯೇಂದ್ರ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೊದಲಿನಿಂದಲೂ ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜಮನೆತನದ ಬಗ್ಗೆ ಅಸಡ್ಡೆಯಿಂದ ನಡೆದುಕೊಂಡಿದ್ದಾರೆ, ಮೊನ್ನೆಯಷ್ಟೇ ನಾಲ್ವಡಿ ಅವರಿಗಿಂತಲೂ ತಮ್ಮ ತಂದೆಯೇ ಮಿಗಿಲು ಎಂದು ವಿಧಾನ ಪರಿಷತ್ ಸದಸ್ಯ ಯತೀಂದ್ರ ಹೇಳಿಕೊಂಡಿದ್ದಾರೆ.
ಬೆಂಗಳೂರು: ಸೋನಿಯಾ ಗಾಂಧಿ ಪ್ರಧಾನಿ ಪದವಿ ಬಿಟ್ಟುಕೊಟ್ಟ ತ್ಯಾಗಮಯಿ ಎನ್ನುತ್ತಾ ಡಿಸಿಎಂ ಡಿಕೆ ಶಿವಕುಮಾರ್ ಸಿಎಂ ಕುರ್ಚಿ ಬಿಡಲ್ಲ ಎನ್ನುತ್ತಿರುವ ಸಿದ್ದರಾಮಯ್ಯಗೆ ಟಾಂಗ್ ಕೊಟ್ಟರಾ ಎಂಬ ಚರ್ಚೆ ಈಗ ರಾಜ್ಯ ರಾಜಕೀಯದಲ್ಲಿ ಶುರುವಾಗಿದೆ. ಕಾರ್ಯಕ್ರಮವೊಂದರಲ್ಲಿ ಮಾತನಾಡುವಾಗ ಡಿಕೆ ಶಿವಕುಮಾರ್ ಪ್ರಧಾನಿ ಹುದ್ದೆ ಬೇಡ ಎಂದಿದ್ದ ಸೋನಿಯಾ ಗಾಂಧಿಯವರನ್ನು ಉಲ್ಲೇಖಿಸಿ ಹಾಡಿಹೊಗಳಿದ್ದಾರೆ. ಈ ಮೂಲಕ ತಮಗೆ ಸಿಎಂ ಸ್ಥಾನ ಬಿಟ್ಟುಕೊಡಲು ಒಪ್ಪದ ಸಿದ್ದರಾಮಯ್ಯಗೆ ಟಾಂಗ್ ಕೊಟ್ಟರಾ ಎಂಬ ಅನುಮಾನ ಶುರುವಾಗಿದೆ.ಡಿಕೆ ಶಿವಕುಮಾರ್ ಹೈಕಮಾಂಡ್ ಮುಂದೆಯೇ ಈ ಹೇಳಿಕೆ ನೀಡಿದ್ದು ವಿಶೇಷವಾಗಿದೆ.
ಸುಧಾಮೂರ್ತಿ ಕೇವಲ ಉದ್ಯಮಿ ಮಾತ್ರವಲ್ಲ ಸಾಹಿತಿ, ಜೀವನ ಪಾಠ ಹೇಳುವ ವಾಕ್ಚತುರೆ ಕೂಡಾ. ಜೀವನದಲ್ಲಿ ಸಮಸ್ಯೆಗಳನ್ನು ಎದುರಿಸುವುದು ಹೇಗೆ ಮತ್ತು ಯಶಸ್ವಿಯಾಗುವುದು ಹೇಗೆ ಎಂಬ ಬಗ್ಗೆ ಅವರು ಮೂರು ಪಾಠಗಳನ್ನು ಹೇಳುತ್ತಾರೆ. ಕಾರ್ಯಕ್ರಮವೊಂದರಲ್ಲಿ ಅವರು ಹಿಂದೆ ನೀಡಿದ್ದ ಈ ಮೂರು ಮಂತ್ರಗಳು ನಮಗೆ ಜೀವನಪಾಠವಾಗುತ್ತದೆ. ನಿಜ ಜೀವನದಲ್ಲಿ ಸಾಕಷ್ಟು ಸಮಸ್ಯೆ ಬರುತ್ತದೆ. ನೀವು ಬುದ್ಧಿವರಂತರಾಗಿದ್ದರೆ ನಿಮಗೇ ಆ ಅನುಭವವಾಗಬೇಕೆಂದೇನಿಲ್ಲ. ಇನ್ನೊಬ್ಬರ ಕಷ್ಟಗಳನ್ನು ನೋಡಿ, ಅವರು ಹೇಗೆ ಅದರಿಂದ ಹೊರಬಂದರು ಎಂದು ಪಾಠ ಕಲಿಯಬಹುದು. ಅವರು ಹೇಗೆ ವಿಫಲರಾದರು ಎಂದು ಕಲಿಯಿರಿ. ಇದು ಉತ್ತಮ ಕಾರ್ಪೋರೇಟರ್ ನ ಲಕ್ಷಣ.
ಮುಂಬೈ: ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯೂ ಭಾರತದ ಕೈ ತಪ್ಪಿ ಹೋಗುವ ಹೊಸ್ತಿಲಲ್ಲಿದೆ. ಈ ನಡುವೆ ಅಭಿಮಾನಿಗಳು ಕೋಚ್ ಗೌತಮ್ ಗಂಭೀರ್ ಮೇಲೆ ಸಿಟ್ಟಾಗಿದ್ದಾರೆ. ಈ ವ್ಯಕ್ತಿಗೆ ಅಹಂ ಜಾಸ್ತಿಯಾಯಿತು, ಇಲ್ಲಾಂದ್ರೆ ಹೀಗೆ ಮಾಡ್ತಿರಲಿಲ್ಲ ಎಂದು ಕಿಡಿ ಕಾರಿದ್ದಾರೆ. ಗೌತಮ್ ಗಂಭೀರ್ ಕೋಚ್ ಆದ ಬಳಿಕ ಟೀಂ ಇಂಡಿಯಾ ಟೆಸ್ಟ್ ಸರಣಿ ಗೆದ್ದಿದ್ದೇ ಇಲ್ಲ. ಆಸ್ಟ್ರೇಲಿಯಾ ಬಳಿಕ ಈಗ ಇಂಗ್ಲೆಂಡ್ ವಿರುದ್ಧವೂ ಟೆಸ್ಟ್ ಸರಣಿ ಸೋಲುವ ಲಕ್ಷಣವಿದೆ. ಹೀಗಾಗಿ ಅಭಿಮಾನಿಗಳ ಸಿಟ್ಟು ಮೇರೆ ಮೀರಿದೆ.
ಬೆಂಗಳೂರು: ಪ್ರಕಾಶ್ ತುಮಿನಾಡು ನಿರ್ದೇಶಿಸಿ ನಟಿಸಿರುವ ಸು ಫ್ರಮ್ ಸೋ ಸಿನಿಮಾ ಸ್ಯಾಂಡಲ್ ವುಡ್ ನಲ್ಲಿ ಹೊಸ ದಾಖಲೆಯನ್ನೇ ಮಾಡುತ್ತಿದೆ. ಬಿಡುಗಡೆಯಾಗಿ ಎರಡನೇ ವಾರದಲ್ಲೂ ಸಿನಿಮಾ ಗಳಿಕೆಯಲ್ಲಿ ದಾಖಲೆ ಮಾಡಿದೆ. ನಿನ್ನೆ ಭಾನುವಾರವಾಗಿದ್ದರಿಂದ ಬಹುತೇಕ ಚಿತ್ರಮಂದಿರಗಳಲ್ಲಿ ಹೌಸ್ ಫುಲ್ ಪ್ರದರ್ಶನ ಕಂಡಿದೆ. ಯಾವುದೇ ಸ್ಟಾರ್ ಗಳಿಲ್ಲದ ಸಿನಿಮಾ ಬಿಡುಗಡೆಯಾಗಿ ಎರಡನೇ ವಾರದಲ್ಲೂ ಹೌಸ್ ಫುಲ್ ಪ್ರದರ್ಶನ ಕಾಣುತ್ತಿದೆ ಎಂದರೆ ಅದು ಸ್ಯಾಂಡಲ್ ವುಡ್ ಮಟ್ಟಿಗೆ ದಾಖಲೆಯೇ ಸರಿ. ನಿನ್ನೆ ಭಾನುವಾರವಾಗಿದ್ದರಿಂದ ಸಾಕಷ್ಟು ಜನ ಥಿಯೇಟರ್ ಗೆ ಬಂದು ಸಿನಿಮಾ ನೋಡಿದ್ದಾರೆ.
ಮೈಸೂರು: ಕರ್ನಾಟಕದ ಹೆಮ್ಮೆಯ ಕೆಆರ್ ಎಸ್ ಡ್ಯಾಮ್ ಗೆ ಅಡಿಗಲ್ಲು ಹಾಕಿದ್ದು ಟಿಪ್ಪು ಸುಲ್ತಾನ್ ಎಂದು ಸಚಿವ ಮಹದೇವಪ್ಪ ನೀಡಿರುವ ಹೇಳಿಕೆ ಭಾರೀ ಟೀಕೆಗೆ ಗುರಿಯಾಗಿದೆ. ಇದೀಗ ಅಂಕಿ ಅಂಶ ಏನು ಹೇಳುತ್ತದೆ ನೋಡೋಣ. ಕೆಆರ್ ಎಸ್ ಡ್ಯಾಮ್ ನಿರ್ಮಾಣ ಮಾಡಿದ್ದು ಮೈಸೂರು ರಾಜವಂಶಸ್ಥರು. ಅದರಿಂದಾಗಿ ಇಂದಿಗೂ ಮೈಸೂರು, ಮಂಡ್ಯ, ಬೆಂಗಳೂರಿನ ಜನರ ಕುಡಿಯುವ ನೀರಿನ ಸಮಸ್ಯೆ, ಕೃಷಿಕರ ಸಮಸ್ಯೆ ನಿವಾರಣೆಯಾಗಿದೆ. ಇಂದಿಗೂ ಜನ ಈ ವಿಚಾರದಲ್ಲಿ ಮೈಸೂರು ರಾಜವಂಶಸ್ಥರನ್ನು ಸ್ಮರಿಸಿಕೊಳ್ಳುತ್ತಾರೆ. ಆದರೆ ಸಚಿವ ಮಹದೇವಪ್ಪ ಕೆಆರ್ ಎಸ್ ಡ್ಯಾಮ್ ಗೆ ಅಡಿಗಲ್ಲು ಹಾಕಿದ್ದು ಟಿಪ್ಪು ಸುಲ್ತಾನ್. ಈಗಲೂ ಅದರ ಕುರುಹುಗಳಿವೆ ಎಂದು ಹೇಳಿಕೊಂಡಿದ್ದರು.
ಮಂಗಳೂರು: ಧರ್ಮಸ್ಥಳದಲ್ಲಿ ಹೂತಿಟ್ಟ ಶವಗಳ ಅವಶೇಷಗಳಿಗಾಗಿ ಹುಡುಕಾಟ ನಡೆಸುತ್ತಿರುವ ಎಸ್ಐಟಿ ತಂಡ ಇಂದು ಭಾನುವಾರದ ವಿರಾಮದ ಬಳಿಕ ಮತ್ತೆ ಫೀಲ್ಡಿಗಿಳಿಯಲಿದೆ. ಇಂದಿನ ಕಾರ್ಯಾಚರಣೆ ಹೇಗಿರಲಿದೆ ಇಲ್ಲಿದೆ ವಿವರ. ಅನಾಮಿಕ ದೂರುದಾರ ಗುರುತು ಮಾಡಿರುವ 9 ಪಾಯಿಂಟ್ ಗಳಲ್ಲಿ ಈಗಾಗಲೇ ಹುಡುಕಾಟ ನಡೆಸಲಾಗಿದೆ. ಈ ಪೈಕಿ 6 ನೇ ಪಾಯಿಂಟ್ ನಲ್ಲಿ ಮಾತ್ರ ಅಸ್ಥಿಪಂಜರ ಸಿಕ್ಕಿದೆ. 9 ನೇ ಪಾಯಿಂಟ್ ನಲ್ಲಿ ಆರರಿಂದ ಏಳು ಶವ ಹೂತಿದ್ದಾಗಿ ಅನಾಮಿಕ ದೂರುದಾರ ಹೇಳಿದ್ದ. ಆದರೆ ಶನಿವಾರ ಅಗೆತ ಕಾರ್ಯ ನಡೆಸಿದಾಗ ಒಂದೇ ಒಂದು ಮೂಳೆ ಸಿಕ್ಕಿರಲಿಲ್ಲ.
ಬೆಂಗಳೂರು: ಹುಟ್ಟಿನಿಂದ ಐಷಾರಾಮಿ ಜೀವನದಲ್ಲೇ ಕಳೆದ ಪ್ರಜ್ವಲ್ ರೇವಣ್ಣ ಈಗ ನಿಜವಾದ ಸೆರೆ ವಾಸದ ಅನುಭವ ಪಡೆಯುತ್ತಿದ್ದಾರೆ. ಜೈಲಿನಲ್ಲಿ ಹೇಗಿದ್ದಾರೆ ಪ್ರಜ್ವಲ್ ರೇವಣ್ಣ, ಅವರ ದಿನಚರಿ ಏನಾಗಲಿದೆ ಇಲ್ಲಿದೆ ವಿವರ. ಮನೆಗೆಲಸದಾಕೆ ಮೇಲೆ ಅತ್ಯಾಚಾರವೆಸಗಿದ ಆರೋಪದಲ್ಲಿ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಪ್ರಜ್ವಲ್ ರೇವಣ್ಣ ಅಪರಾಧಿ ಎಂದು ತೀರ್ಪು ನೀಡಿತ್ತು. ಇದೀಗ ಅವರಿಗೆ ಜೀವತಾವಧಿವರೆಗೂ ಶಿಕ್ಷೆ ಘೋಷಿಸಲಾಗಿದೆ. ಇದರ ವಿರುದ್ಧ ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲು ರೇವಣ್ಣ ಕುಟುಂಬ ಸಿದ್ಧತೆಯೂ ನಡೆಸಿದೆ. ಆದರೆ ಸದ್ಯಕ್ಕಂತೂ ಪ್ರಜ್ವಲ್ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇತರೆ ಖೈದಿಗಳಂತೆ ಸಮವಸ್ತ್ರ ಧರಿಸಬೇಕು.
ಬೆಂಗಳೂರು: ರಾಜ್ಯಾದ್ಯಂತ ಕಳೆದ ವಾರ ಮಳೆಯ ಅಬ್ಬರ ತಕ್ಕಮಟ್ಟಿಗೆ ಕಡಿಮೆಯಾಗಿತ್ತು. ಆದರೆ ಈ ವಾರ ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಯಾವೆಲ್ಲಾ ಜಿಲ್ಲೆಗಳಿಗೆ ಭಾರೀ ಮಳೆ ಸೂಚನೆಯಿದೆ ಗಮನಿಸಿ. ಈ ಬಾರಿ ಕರಾವಳಿ ಜಿಲ್ಲೆಗಳಿಗೆ ಭಾರೀ ಮಳೆಯಾಗುತ್ತಿದೆ. ಕಳೆದ ವಾರ ದಕ್ಷಿಣ ಕನ್ನಡ, ಉಡುಪಿಯಲ್ಲೂ ಮಳೆಯ ಅಬ್ಬರ ಕೊಂಚ ಕಡಿಮೆಯಾಗಿತ್ತು. ಆದರೆ ಈ ವಾರ ಮತ್ತೆ ಕೆಲವು ಜಿಲ್ಲೆಗಳಲ್ಲಿ ಮಳೆ ಬಿರುಸಾಗಲಿದೆ. ವಿಶೇಷವಾಗಿ ದಕ್ಷಿಣ ಕನ್ನಡದಲ್ಲಿ ವಾರಂತ್ಯಕ್ಕೆ ಮಳೆಯ ಅಬ್ಬರ ಹೆಚ್ಚಾಗಲಿದೆ. ವಾರದ ಆರಂಭದಲ್ಲಿ ಕರಾವಳಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಆದರೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಈ ವಾರ ಎರಡರಿಂದ ಮೂರು ದಿನ ಭಾರೀ ಮಳೆಯಾಗುವ ಸೂಚನೆಯಿದೆ.
ಇಂದು ಸೋಮವಾರವಾಗಿದ್ದು ಶಿವ ದೇವರಿಗೆ ವಿಶೇಷವಾದ ದಿನವಾಗಿದೆ. ಇಂದು ತಪ್ಪದೇ ಮಹದೇವಷ್ಟಕಂ ಸ್ತೋತ್ರವನ್ನು ಓದುವುದರಿಂದ ಶಿವನ ಅನುಗ್ರಹಕ್ಕೆ ಪಾತ್ರರಾಗುವಿರಿ.ಶಿವಂ ಶಾನ್ತಂ ಶುದ್ಧಂ ಪ್ರಕಟಮಕಳಙ್ಕಂ ಶ್ರುತಿನುತಂಮಹೇಶಾನಂ ಶಂಭುಂ ಸಕಲಸುರಸಂಸೇವ್ಯಚರಣಮ್ |ಗಿರೀಶಂ ಗೌರೀಶಂ ಭವಭಯಹರಂ ನಿಷ್ಕಳಮಜಂಮಹಾದೇವಂ ವನ್ದೇ ಪ್ರಣತಜನತಾಪೋಪಶಮನಮ್ || ೧ ||ಸದಾ ಸೇವ್ಯಂ ಭಕ್ತೈರ್ಹೃದಿ ವಸನ್ತಂ ಗಿರಿಶಯ-ಮುಮಾಕಾನ್ತಂ ಕ್ಷಾನ್ತಂ ಕರಘೃತಪಿನಾಕಂ ಭ್ರಮಹರಮ್ |ತ್ರಿನೇತ್ರಂ ಪಞ್ಚಾಸ್ಯಂ ದಶಭುಜಮನನ್ತಂ ಶಶಿಧರಂಮಹಾದೇವಂ ವನ್ದೇ ಪ್ರಣತಜನತಾಪೋಪಶಮನಮ್ || ೨ || ಚಿತಾಭಸ್ಮಾಲಿಪ್ತಂ ಭುಜಗಮುಕುಟಂ ವಿಶ್ವಸುಖದಂಧನಾಧ್ಯಕ್ಷಸ್ಯಾಙ್ಗಂ ತ್ರಿಪುರವಧಕರ್ತಾರಮನಘಮ್ |
ತಿರುವನಂತಪುರಂ: ಮನ್ನಾರ್ ಕೊಲ್ಲಿ ಮತ್ತು ದಕ್ಷಿಣ ತಮಿಳುನಾಡಿನಲ್ಲಿ ಚಂಡಮಾರುತದ ಪ್ರಭಾವದಿಂದ ಈ ವಾರ ಕೇರಳದಾದ್ಯಂತ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಆಗಸ್ಟ್ 7 ರವರೆಗೆ ಕೇರಳದ ಹಲವು ಜಿಲ್ಲೆಗಳಿಗೆ ಆರೆಂಜ್ ಮತ್ತು ಹಳದಿ ಅಲರ್ಟ್ಗಳನ್ನು ಘೋಷಿಸಲಾಗಿದೆ. ಹವಾಮಾನ ಕಚೇರಿ ಪ್ರಕಾರ, ರಾಜ್ಯದ ದಕ್ಷಿಣ ಜಿಲ್ಲೆಗಳು ಅತಿ ಹೆಚ್ಚು ಮಳೆಯಾಗುವ ನಿರೀಕ್ಷೆಯಿರುವುದರಿಂದ ಹೆಚ್ಚಿನ ಎಚ್ಚರಿಕೆ ನೀಡಲಾಗಿದೆ.ಭಾನುವಾರ ತಿರುವನಂತಪುರಂ, ಕೊಲ್ಲಂ, ಪತ್ತನಂತಿಟ್ಟ, ಅಲಪ್ಪುಳ, ಕೊಟ್ಟಾಯಂ, ಎರ್ನಾಕುಲಂ, ಇಡುಕ್ಕಿ ಜಿಲ್ಲೆಗಳಿಗೆ ಐಎಂಡಿ ಆರೆಂಜ್ ಅಲರ್ಟ್ ಘೋಷಿಸಿದ್ದು, ತ್ರಿಶೂರ್, ಪಾಲಕ್ಕಾಡ್, ಮಲಪ್ಪುರಂ, ಕೋಝಿಕ್ಕೋಡ್, ವಯನಾಡ್, ಕಣ್ಣೂರು ಮತ್ತು
ನವದೆಹಲಿ: ಹೆಚ್ಚುವರಿ ತೂಕವಿದ್ದ ಬ್ಯಾಗ್ಅನ್ನು ವಿಮಾನದಲ್ಲಿ ಹೊತ್ತೊಯ್ಯಲು ನಿರಾಕರಿಸಿದ್ದಕ್ಕೆ ಹಿರಿಯ ಸೇನಾಧಿಕಾರಿಯೊಬ್ಬರು ಸ್ಪೈಸ್ ಜೆಟ್ ಸಂಸ್ಥೆಯ ಎಸ್ಜಿ 386 ವಿಮಾನದ ನಾಲ್ವರು ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ಘಟನೆ ವರದಿಯಾಗಿದೆ. ಇದಕ್ಕೆ ಸಂಬಂಧಿಸಿದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಶ್ರೀನಗರ ವಿಮಾನ ನಿಲ್ದಾಣದಲ್ಲಿ ನಡೆದ ದಾಳಿಯಲ್ಲಿ ಬೆನ್ನುಮೂಳೆಯ ಮುರಿತ ಸೇರಿದಂತೆ ನಾಲ್ವರು ಸ್ಪೈಸ್ಜೆಟ್ ಉದ್ಯೋಗಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದುಏರ್ಲೈನ್ ಹೇಳಿಕೆಯಲ್ಲಿ ತಿಳಿಸಿದೆ.
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿದರು. ಭೇಟಿ ಹಿಂದಿನ ಉದ್ದೇಶ ಇನ್ನೂ ಲಭ್ಯವಾಗಿಲ್ಲ. ಪ್ರಧಾನಿ ನರೇಂದ್ರ ಮೋದಿ ಅವರು ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿಡಿರುವುದಾಗು ಫೋಟೋವನ್ನು ಎಕ್ಸ್ನಲ್ಲಿ ಹಂಚಿಕೊಂಡಿದ್ದಾರೆ. ರಾಷ್ಟ್ರಪತಿ ಅವರ ಭೇಟಿ ಹಿಂದೆ ಈಚೆಗೆ ನಡೆದ ಕೆಲ ಬೆಳವಣಿಗೆಗಳು ಚರ್ಚೆಯಲ್ಲಿದೆ.
ಗೊಂಡಾ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಗೊಂಡಾ ಜಿಲ್ಲೆಯಲ್ಲಿ ಭಾನುವಾರ ಯಾತ್ರಾರ್ಥಿಗಳನ್ನು ಸಾಗಿಸುತ್ತಿದ್ದ ವಾಹನವು ಕಾಲುವೆಗೆ ಬಿದ್ದ ಪರಿಣಾಮ ಕನಿಷ್ಠ ಹನ್ನೊಂದು ಜನರು ಸಾವನ್ನಪ್ಪಿದ್ದಾರೆ. ಇತಿಯಾ ಥೋಕ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಧಿಕೃತ ಮಾಹಿತಿ ಪ್ರಕಾರ, ಗೊಂಡಾದ ಇಟಿಯಾ ಥೋಕ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವಾಹನ ಕಾಲುವೆಗೆ ಬಿದ್ದಿದೆ. ವಾಹನದಲ್ಲಿ ಒಟ್ಟು 15ಮಂದಿ ಇದ್ದು, ಅದರಲ್ಲಿ 11ಮಂದಿ ಸಾವನ್ನಪ್ಪಿದ್ದಾರೆ. ಅವರೆಲ್ಲರೂ ಪ್ರಾರ್ಥನೆ ಸಲ್ಲಿಸಲು ಪೃಥ್ವಿನಾಥ ದೇವಸ್ಥಾನಕ್ಕೆ ಹೋಗುತ್ತಿದ್ದರು.
ಶನಿವಾರ ಕೆನ್ನಿಂಗ್ಟನ್ ಓವಲ್ನಲ್ಲಿ ಭಾರತ ಮತ್ತು ಇಂಗ್ಲೆಂಡ್ ನಡುವಿನ ಐದನೇ ಟೆಸ್ಟ್ನ 3 ನೇ ದಿನದ ಅಂತಿಮ ಸೆಷನ್ನಲ್ಲಿ ಬ್ಯಾಟಿಂಗ್ ಮಾಡುತ್ತಿದ್ಧ ರವೀಂದ್ರ ಜಡೇಜಾ ಅವರು ಸ್ಟೇಡಿಯಂನಲ್ಲಿ ಕೂತಿದ್ದ ವ್ಯಕ್ತಿಯ ಕೆಂಪು ಬಣ್ಣದ ಟೀ ಶರ್ಟ್ ಏಕಾಗ್ರತೆಗೆ ಅಡ್ಡಿಪಡಿಸುತ್ತಿದೆ ಎಂದು ಹೇಳಿಕೊಂಡ ಬೆನ್ನಲ್ಲೇ ಅವರಿಗೆ ಬೇರೆ ಟೀ ಶರ್ಟ್ ನೀಡಿದ ಘಟನೆ ನಡೆಯಿತು. ಈ ಸಂಬಂಧ ಕೆಲ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಯಿತು. ಜಡೇಜಾ ಕೋರಿಕೆ ಬೆನ್ನಲ್ಲೇ ಕೆಂಪು ಬಣ್ಣದ ಟೀ ಶರ್ಟ್ ಧರಿಸಿದ್ದ ವೀಕ್ಷಕನಿಗೆ ಬೂದು ಬಣ್ಣದ ಟೀ ಶರ್ಟ್ ಅನ್ನು ನೀಡಲಾಯಿತು.
ಮೀರತ್: ಉತ್ತರ ಪ್ರದೇಶದ ಮೀರತ್ನಲ್ಲಿ ಪತಿಯೇ ಗರ್ಭಿಣಿ ಮಹಿಳೆಯನ್ನು ಚಾಕುವಿನಿಂದ ಇರಿದು ಕೊಂದಿರುವ ಭಯಾನಕ ಘಟನೆ ವರದಿಯಾಗಿದೆ. ಪತಿ ರವಿಶಂಕರ್ ತನ್ನ ಏಳು ತಿಂಗಳ ಗರ್ಭಿಣಿ ಪತ್ನಿ ಸಪ್ನಾಳನ್ನು ಪೊಲೀಸರಿಗೆ ಕರೆ ಮಾಡುವ ಮೊದಲು ಬೀಗ ಹಾಕಿದ ಕೋಣೆಯೊಳಗೆ ಕೊಂದಿದ್ದಾನೆ. ಇಂದು ಬೆಳಗ್ಗೆ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸಪ್ನಾ ಕಳೆದ ಐದು ತಿಂಗಳಿನಿಂದ ಅಮ್ಹೇರಾದಲ್ಲಿರುವ ತನ್ನ
ಕೇರಳದಲ್ಲಿ ₹2 ರೂಪಾಯಿ ವೈದ್ಯೆ ಎಂದೇ ಕರೆಯಲ್ಪಡುತ್ತಿದ್ದ ಡಾ. ಎಕೆ ರೈರು ಗೋಪಾಲ್ ಅವರು ಭಾನುವಾರ ನಿಧನರಾದರು. ಉತ್ತರ ಕೇರಳದ ಕಣ್ಣೂರಿನ ಪಾಲಿನ ಜನತೆ ಪಾಲಿನ ಆಶಾಕಿರಣವಾಗಿದ್ದ ವೈದ್ಯ ಇಂದು ಕೊನೆಯುಸಿರೆಳೆದರು. 50 ವರ್ಷಗಳಿಂದ ವೈದ್ಯಕೀಯ ಲೋಕದಲ್ಲಿ ಅತ್ಯಲ್ಪ ಶುಲ್ಕವನ್ನು ವಿಧಿಸಿ, ರೋಗಿಗಳ ಆರೈಕೆ ಮಾಡುತ್ತಿದ್ದರು. ವೈದ್ಯರ ಸಮಾಲೋಚನೆಗೆ ಕೇವಲ ₹2ಯಿಂದ ಆರಂಬಭಿಸಿದ್ದ ಗೋಪಾಲ್ ಅವರು ಈಚೆಗೆ ₹40 ರಿಂದ ₹50 ರವರೆಗೆ ಶುಲ್ಕ ವಿಧಿಸಿದರು. ಕೆಲವೆಡೆ ವೈದ್ಯರ ಸಮಾಲೋಚನೆಗೆ ₹500 ರೂಪಾಯಿ ವಿಧಿಸುವಲ್ಲಿ ಗೋಪಾಲ್ ಅವರು ಬಡವರ ಪಾಲಿನ ಜೀವರಕ್ಷಕರಾಗಿದ್ದರು.
ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾದ ಒಂದು ದಿನದ ನಂತರ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಇಂದು ಬೆಳಿಗ್ಗೆ ಖೈದಿ ನಂಬರ್ ನೀಡಲಾಯಿತು ಎಂದು ಜೈಲು ಅಧಿಕಾರಿಗಳು ತಿಳಿಸಿದ್ದಾರೆ. ಖೈದಿ ಸಂಖ್ಯೆ 15528 ಅನ್ನು ಭಾನುವಾರ ಬೆಳಿಗ್ಗೆ ಅವರಿಗೆ ಅಧಿಕೃತವಾಗಿ ನೀಡಲಾಯಿತು ಎಂದು ಅವರು ಹೇಳಿದರು.ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಪ್ರಜ್ವಲ್ಗೆ ಜೀವಾವಧಿ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದ ಬಳಿಕ ಅವರಿಗೆಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಖೈದಿ ಸಂಖ್ಯೆ ನೀಡಲಾಗಿದೆ. ನ್ಯಾಯಾಲಯದ ತೀರ್ಪಿನ ಬಳಿಕ ಜೈಲಿನಲ್ಲಿ ಮೊದಲ ರಾತ್ರಿ ಕಳೆದ ಪ್ರಜ್ವಲ್ ರೇವಣ್ಣ ಅವರ ಆರೋಗ್ಯವನ್ನು ತಪಾಸಣೆ
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಇಂದು 77ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿರುವ ಹಿನ್ನೆಲೆ ಅವರಿಗೆ ರಾಜಕೀಯ ಮುಖಂಡರು ಸೇರಿದಂತೆ ಅನೇಕರು ಸಾಮಾಜಿಕ ಜಾಲತಾಣದಲ್ಲಿ ಶುಭಹಾರೈಸುತ್ತಿದ್ದಾರೆ. ಇದೀಗ ಸಿದ್ದರಾಮಯ್ಯ ಅವರಿಗೆ ಡಿಸಿಎಂ ಡಿಕೆ ಶಿವಕುಮಾರ್ ಅವರು ಹಾರೈಸಿದ ರೀತಿ ಗಮನ ಸೆಳೆಯುತ್ತಿದೆ. ಕಳೆದ ಕೆಲ ದಿನಗಳಿಂದ ರಾಜ್ಯದ ಸಿಎಂ ಕುರ್ಚಿಗಾಗಿ ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಬಣದ ನಡುವೆ ಪೈಪೋಟಿ ಜೋರಾಗಿತ್ತು. ಕರ್ನಾಟಕ ಸಿಎಂ ಕುರ್ಚಿ ಬದಲಾವಣೆ ಸಂಬಂಧ ಡಿಕೆ ಶಿವಕುಮಾರ್, ಸಿದ್ದರಾಮಯ್ಯ ಸೇರಿದಂತೆ ಹಲವು ನಾಯಕರು ಈ ವಿಚಾರವಾಗಿ ಹೈಕಮಾಂಡ್ ಅನ್ನು ಭೇಟಿಯಾಗಿ ಸುದೀರ್ಘ ಮಾತುಕತೆಯಲ್ಲಿ ಭಾಗಿಯಾಗಿದ್ದರು. ಆದರೆ ಈಚೆಗೆ ಕಾಂಗ್ರೆಸ್
ಬೆಂಗಳೂರು: ಎಂ ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗಡೆ ನಡೆದ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟ 13 ವರ್ಷದ ದಿವ್ಯಾಂಶಿ ಮೈಮೇಲಿದ್ದ ಚಿನ್ನಾಭರಣ ಕಳವು ಸಂಬಂದ ಅವರ ತಾಯಿ ಕಮರ್ಷಿಯಲ್ ಸ್ಟ್ರೀಟ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಇದೀಗ ಚಿನ್ನಾಭರಣ ಕಳವು ಸಂಬಂಧ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಸ್ಟಾಲಿನ್(32) ಎಂದು ಗುರುತಿಸಲಾಗಿದೆ. ವಿವೇಕನಗರ ಮಯಾಬಜಾರ್ನ ನಿವಾಸಿಯಾಗಿದ್ದಾನೆ. ಈತ ಬೌರಿಂಗ್ ಆಸ್ಪತ್ರೆಯ ಶವವಾಗಾರದಲ್ಲಿ ಅರೆಕಾಲಿಕ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದ ಎಂದು ಪೊಲೀಸರು ಹೇಳಿದ್ದಾರೆ.
ಲಂಡನ್: ಇಲ್ಲಿನ ಓವಲ್ನಲ್ಲಿ ನಡೆಯುತ್ತಿರುವ ನಿರ್ಣಾಯಕ ಮತ್ತು ಕೊನೆಯ ಟೆಸ್ಟ್ ಪಂದ್ಯ ಕುತೂಹಲಕರ ಘಟ್ಟದತ್ತ ಸಾಗಿದೆ. ಇಂಗ್ಲೆಂಡ್ ವಿರುದ್ಧದ ಈ ಪಂದ್ಯವನ್ನು ಗೆದ್ದು ಸರಣಿಯನ್ನು ಸಮಬಲ ಮಾಡಲು ಭಾರತ ಪ್ರಯತ್ನಿಸುತ್ತಿದೆ. ಭಾರತ ನೀಡಿದ 374 ರನ್ಗಳ ಗೆಲುವಿನ ಗುರಿ ಬೆನ್ನಟ್ಟಿದ ಇಂಗ್ಲೆಂಡ್ ಮೂರನೇ ದಿನದಂತ್ಯಕ್ಕೆ ಒಂದು ವಿಕೆಟ್ ನಷ್ಟಕ್ಕೆ 50 ರನ್ ಗಳಿಸಿದೆ.ಈ ಪಂದ್ಯವನ್ನು ಗೆಲ್ಲಲು ಭಾರತಕ್ಕೆ ಇನ್ನೂ ಒಂಬತ್ತು ವಿಕೆಟ್ ಬೇಕಾಗಿದೆ. ಅತ್ತ ಇಂಗ್ಲೆಡ್ಗೆ ಗೆಲ್ಲಲು ಇನ್ನೆರಡು ದಿನ ಉಳಿದಿರುವಂತೆಯೇ 324 ರನ್ ಗಳಿಸಬೇಕಿದೆ.ಆತಿಥೇಯ ತಂಡಕ್ಕೆ ಓಪನರ್ಗಳಾದ ಜಾಕ್ ಕ್ರಾಲಿ ಹಾಗೂ ಬೆನ್ ಡಕೆಟ್ ಎರಡನೇ ಇನಿಂಗ್ಸ್ನಲ್ಲಝೂ ಉತ್ತಮ ಆರಂಭವೊದಗಿಸಿದರು. ಮೊದಲ ವಿಕೆಟ್ಗೆ ಅರ್ಧಶತಕದ ಜೊತೆಯಾಟವನ್ನು ಕಟ್ಟಿದರು.
ಚೆನ್ನೈ: ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ಐದು ಬಾರಿ ಚಾಂಪಿಯನ್ ಆಗಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಕಳೆದೆರಡು ಆವೃತ್ತಿಯಲ್ಲಿ ಕಳಪೆ ಪ್ರದರ್ಶನ ನೀಡಿದೆ. ಎರಡೂ ಆವೃತ್ತಿಗಳಲ್ಲೂ ಪ್ಲೇಆಫ್ ಪ್ರವೇಶಿಸಲು ವಿಫಲವಾಗಿದೆ. ಇದಕ್ಕೆ ತಂಡದಲ್ಲಿರುವ ದಿಗ್ಗಜ ಆಟಗಾರ ಮಹೇಂದ್ರ ಸಿಂಗ್ ಧೋನಿ ಅವರು ಕಾರಣ ಬಿಚ್ಚಿಟ್ಟಿದ್ದಾರೆ.ಕಳೆದೆರಡು ಆವೃತ್ತಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಕಳಪೆ ಪ್ರದರ್ಶನ ನೀಡಿದೆ ಎಂದು ಒಪ್ಪಿಕೊಂಡಿರುವ ಧೋನಿ, ಮುಂದಿನ ಆವೃತ್ತಿಯಲ್ಲಿ ತಪ್ಪುಗಳನ್ನು ಸರಿಪಡಿಸಿಕೊಂಡು ಈ ಬಾರಿ ಕಣಕ್ಕಿಳಿಯಲಿದ್ದೇವೆ ಎಂದು ಅವರು ಭರವಸೆ ವ್ಯಕ್ತಪಡಿಸಿದ್ದಾರೆ.ತಂಡದಲ್ಲಿ ಕೆಲವೊಂದು ನ್ಯೂನತೆಗಳಿವೆ. ಅದನ್ನು ನಿಖರವಾಗಿ ಕಂಡುಹಿಡಿದು ಸರಿಪಡಿಸಬೇಕಿದೆ. ಮುಂದಿನ ಡಿಸೆಂಬರ್ನಲ್ಲಿ ನಡೆಯಲಿರುವ ಮಿನಿ ಹರಾಜಿನಲ್ಲಿ ನ್ಯೂನತೆಗಳನ್ನು ಸರಿಪಡಿಸಲು ಪ್ರಯತ್ನಿಸಲಿದ್ದೇವೆ ಎಂದು ತಂಡದ ಪರ ಬ್ಯಾಟಿಂಗ್ ನಡೆಸಿದರು.
ಚೆನ್ನೈ: ಕಾಲಿವುಡ್ನಲ್ಲಿ 600ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದ ಖ್ಯಾತ ಹಾಸ್ಯನಟ ಮದನ್ ಬಾಬ್ ಅವರು ನಿಧನರಾಗಿದ್ದಾರೆ. ಮದನ್ ಬಾಬ್ ( ಕೃಷ್ಣಮೂರ್ತಿ ) ಶನಿವಾರ ಸಂಜೆ ಚೆನ್ನೈನಲ್ಲಿ 71ನೇ ವಯಸ್ಸಿನಲ್ಲಿ ನಿಧನರಾದರು. ತಮಿಳು ಚಿತ್ರರಂಗದಲ್ಲಿ ಪ್ರಸಿದ್ಧಿಯಾದ ಇವರು ಕೆಲವು ವರ್ಷಗಳಿಂದ ಕ್ಯಾನ್ಸರ್ನಿಂದ ಬಳಲುತ್ತಿದ್ದರು. ಆದ್ಯಾರ್ನಲ್ಲಿರುವ ಅವರ ನಿವಾಸದಲ್ಲಿ ಕೊನೆಯುಸಿರೆಳೆದರು. ಅವರನ್ನು ಸ್ಮೈಲ್ನ ರಾಜ ಎಂದು ಪ್ರೀತಿಯಿಂದ ಕರೆಯಲಾಗುತ್ತಿತ್ತು. ವಿಶಿಷ್ಟ ಹಾಸ್ಯ ಶೈಲಿ, ಟ್ರೇಡ್ಮಾರ್ಕ್ ನಗು, ಎಲ್ಲರನ್ನೂ ನಗೆಗಡಲಿನಲ್ಲಿ ಮುಳುಗಿಸುವ ಗುಣಕ್ಕೆ ಹೆಸರಾಗಿದ್ದರು. 600ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅದರಲ್ಲಿಯೂ ಹೆಚ್ಚಾಗಿ ತಮಿಳು ಸಿನಿಮಾಗಳಲ್ಲಿ ಕಾಣಿಸಿಕೊಂಡಿದ್ದಾರೆ. 1992 ರಲ್ಲಿ ಕೆ. ಬಾಲಚಂದರ್ ನಿರ್ದೇಶನದ ವಾನಮೇ ಎಲ್ಲೈ ಸಿನಿಮಾ ಮೂಲಕ ಅವರು ಚಿತ್ರರಂಗ ಪ್ರವೇಶ ಮಾಡಿದರು.
ಹೈದರಾಬಾದ್: ಒಲಿಂಪಿಕ್ಸ್ ಕಂಚಿನ ಪದಕ ವಿಜೇತೆ ಸೈನಾ ನೆಹ್ವಾಲ್ ಮತ್ತು ಪರುಪಳ್ಳಿ ಕಶ್ಯಪ್ ದಂಪತಿ ಕೆಳದಿನಗಳ ಹಿಂದ ವಿಚ್ಛೇದನ ಘೋಷಿಸಿದ್ದರು. ಇದೀಗ ಅವರು ತಮ್ಮ ನಿರ್ಧಾರದಿಂದ ಹಿಂದೆ ಸರಿದಿದ್ದು, ಮತ್ತೆ ಒಂದಾಗಿ ಬಾಳಲು ನಿರ್ಧರಿಸಿದ್ದಾರೆ. 35 ವರ್ಷದ ಸೈನಾ ಅವರು ಇನ್ಸ್ಟಾಗ್ರಾಂನಲ್ಲಿ ಖಾತೆಯಲ್ಲಿ ಹೊಸ ಪೋಸ್ಟ್ವೊಂದನ್ನು ಹಂಚಿಕೊಳ್ಳುವ ಮೂಲಕ ಮತ್ತೆ ಒಂದಾಗುತ್ತೇವೆಂದು ಘೋಷಿಸಿದ್ದಾರೆ. ಇಬ್ಬರ ಫೋಟೋ ಹೊತೆಗೆ ಕೆಲವೊಮ್ಮೆ ದೂರವಾಗಿರುವುದು ಹತ್ತಿರವಾಗಿರುವ ಮೌಲ್ಯವನ್ನು ಕಲಿಸುತ್ತದೆ, ನಾವು ಮತ್ತೆ ಒಂದಾಗಲು ತೀರ್ಮಾನಿಸಿದ್ದೇವೆ ಎಂದು ಬರೆದುಕೊಂಡಿದ್ದಾರೆ. ಬ್ಯಾಡ್ಮಿಂಟನ್ ತಾರೆ ಸೈನಾ ನೆಹ್ವಾಲ್ ಅವರು 2018ರಲ್ಲಿ ಬ್ಯಾಡ್ಮಿಂಟನ್ ಆಟಗಾರನಾಗಿದ್ದ ಕಶ್ಯಪ್ ಅವರನ್ನ ವಿವಾಹವಾಗಿದ್ದರು. ಕಳೆದ ಜುಲೈ 14ರಂದು ಈ ಜೋಡಿ 7 ವರ್ಷಗಳ ದಾಂಪತ್ಯಕ್ಕೆ ಪೂರ್ಣವಿರಾಮ ನೀಡಲು ನಿರ್ಧರಿಸಿತ್ತು.
ಬೆಂಗಳೂರು: ಬಹುನಿರೀಕ್ಷಿತ ನಮ್ಮ ಮೆಟ್ರೊ ಹಳದಿ ಮಾರ್ಗಯಲ್ಲಿ ಮೆಟ್ರೊ ರೈಲು ಸಂಚಾರಕ್ಕೆ ದಿನಗಣನೆ ಆರಂಭವಾಗಿದೆ. ಇದೇ 10ರಂದು ಪ್ರಧಾನಿ ನರೇಂದ್ರ ಮೋದಿ ಅವರು ಗ್ರೀನ್ಸಿಗ್ನಲ್ ನೀಡಲಿದ್ದಾರೆ. ಆರ್.ವಿ. ರಸ್ತೆಯಿಂದ ಬೊಮ್ಮಸಂದ್ರ ನಡುವಿನ ನಮ್ಮ ಮೆಟ್ರೊ ಹಳದಿ ಮಾರ್ಗದಲ್ಲಿ ರೈಲು ಸಂಚಾರ ಮಾಡಲಿದೆ. ನಮ್ಮ ಮೆಟ್ರೊ ಹಳದಿ ಮಾರ್ಗದಲ್ಲಿ ರೈಲು ಸಂಚಾರದಿಂದ ಸುಮಾರು 8 ಲಕ್ಷ ಪ್ರಯಾಣಿಕರಿಗೆ ಅನುಕೂಲವಾಗಲಿವೆ. ಇದು ಸಿಲ್ಕ್ ಬೋರ್ಡ್ ಸಂಚಾರ ದಟ್ಟಣೆ ಸಮಸ್ಯೆಯನ್ನು ಬಹುಮಟ್ಟಿಗೆ ಪರಿಹರಿಸಲಿದೆ. ಸಾರ್ವಜನಿಕ ಸಾರಿಗೆ ಬಳಕೆ ಮಾತ್ರವೇ ಸಂಚಾರ ದಟ್ಟಣೆ ಇಳಿಕೆಗೆ ಉತ್ತಮ ಪರಿಹಾರವಾಗಿದೆ.ಆರ್.ವಿ. ರಸ್ತೆಯಿಂದ ಬೊಮ್ಮಸಂದ್ರ ಸಂಪರ್ಕಿಸುವ ಈ ಮಾರ್ಗದಲ್ಲಿ ಸಂಚಾರ ಆರಂಭಿಸಲು ರೈಲ್ವೆಯ ಮೆಟ್ರೊ ರೈಲು ಸುರಕ್ಷತಾ ಆಯೋ ಅನುಮತಿ ನೀಡಿದೆ.
ನವದೆಹಲಿ: ಕೇರಳದ ನರ್ಸ್ ನಿಮಿಷಾ ಪ್ರಿಯಾ ಅವರ ಪ್ರಕರಣಕ್ಕೆ ಮಹತ್ವದ ತಿರುವು ದೊರಕಿದೆ. ಈ ಕುರಿತು ಕೇಂದ್ರ ವಿದೇಶಾಂಗ ಸಚಿವಾಲಯ (ಎಂಇಎ) ಮಹತ್ವದ ಹೇಳಿಕೆಯನ್ನು ಬಿಡುಗಡೆ ಮಾಡಿದೆ. ಇದು ಅತ್ಯಂತ ಸೂಕ್ಷ್ಮ ಪ್ರಕರಣವಾಗಿದೆ. ಕೇಂದ್ರ ಸರ್ಕಾರವು ಕುಟುಂಬದ ಜೊತೆ ನಿರಂತರ ಸಂಪರ್ಕದಲ್ಲಿದೆ. ನಿಮಿಷಾ ಅವರಿಗೆ ವಿಧಿಸಿದ್ದ ಯಮೆನ್ ಗಲ್ಲು ಶಿಕ್ಷೆಯನ್ನು ಮುಂದೂಡಿದೆ, ಆದರೆ ರದ್ದುಪಡಿಸಿಲ್ಲ ಎಂದು ವಿದೇಶಾಂಗ ಸಚಿವಾಲಯ ಹೇಳಿದೆ. ನಿಮಿಷಾ ಪ್ರಿಯಾ ಅವರ ಬಿಡುಗಡೆಗೆ ಮಾತುಕತೆ ನಡೆಸಲು ಐದು ಸದಸ್ಯರ ನಿಯೋಗವನ್ನು ಯೆಮೆನ್ಗೆ ಕಳುಹಿಸುವಂತೆ ಸೇವ್ ನಿಮಿಷಾ ಪ್ರಿಯಾ ಅಂತರರಾಷ್ಟ್ರೀಯ ಕ್ರಿಯಾ ಮಂಡಳಿಯ ವಿನಂತಿಯನ್ನು ವಿದೇಶಾಂಗ ಸಚಿವಾಲಯ ನಿರಾಕರಿಸಿದೆ.
ನವದೆಹಲಿ: 2019 ರಲ್ಲಿಯೇ ನಿಧನರಾಗಿದ್ದ ಬಿಜೆಪಿ ನಾಯಕ, ಮಾಜಿ ಕೇಂದ್ರ ಸಚಿವ ಅರುಣ್ ಜೇಟ್ಲಿ 2020 ರಲ್ಲಿ ರಾಹುಲ್ ಗಾಂಧಿಗೆ ಬೆದರಿಕೆ ಹಾಕಿದ್ರಂತೆ. ಇಂತಹದ್ದೊಂದು ಸುಳ್ಳು ಆರೋಪ ಮಾಡಿ ರಾಹುಲ್ ಗಾಂಧಿ ಮುಜುಗರಕ್ಕೀಡಾಗಿದ್ದಾರೆ. ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಈಗ ಚುನಾವಣಾ ಆಯೋಗದ ವಿರುದ್ಧವೇ ಸಿಡಿದೆದ್ದಿದ್ದಾರೆ. ಚುನಾವಣಾ ಆಯೋಗ ಕಳ್ಳಾಟವಾಡುತ್ತಿದೆ. ಮತಗಳ್ಳತನ ಮಾಡಲು ಕೇಂದ್ರದ ಜೊತೆ ಕೈ ಜೋಡಿಸಿದೆ ಎಂದು ಗಂಭೀರ ಆರೋಪವನ್ನೇ ಮಾಡಿದ್ದಾರೆ. ಇದರ ವಿರುದ್ಧ ಪ್ರತಿಭಟನೆಯನ್ನೂ ಹಮ್ಮಿಕೊಂಡಿದ್ದಾರೆ.
ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜನಪ್ರತಿನಿಧಿ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸುತ್ತಿದ್ದ ಹಾಗೇ ಅವರ ಕುಟುಂಬಕ್ಕೆ ದೊಡ್ಡ ಆಘಾತವಾಗಿದೆ. ಪ್ರಜ್ವಕ್ ರೇವಣ್ಣಗೆ ಶಿಕ್ಷೆಯ ಪ್ರಮಾಣ ಘೋಷಣೆ ಮಾಡುತ್ತಿದ್ದ ಹಾಗೇ ಅವರ ಅಜ್ಜ, ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಕಣ್ಣೀರು ಹಾಕಿದ್ದಾರೆ ಎಂದು ತಿಳಿದುಬಂದಿದೆ.ಗುರುವಾರ ಕೋರ್ಟ್ ಪ್ರಜ್ವಲ್ ರೇವಣ್ಣ ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ದೋಷಿ ಎಂದು ಘೋಷಣೆ ಮಾಡಿ, ತೀರ್ಪನ್ನು
ಬೆಂಗಳೂರು: ಕರ್ನಾಟಕದಲ್ಲಿ ಲೋಕಸಭೆ ಚುನಾವಣೆ ವೇಳೆ ಮತಗಳ್ಳತನವಾಗಿದೆ ಎಂಬ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿಯವರ ಆರೋಪ ಸಂಬಂಧ ಭಾರತೀಯ ಜನತಾ ಪಕ್ಷವು ಆಗಸ್ಟ್ 5 ರಂದು ವಿಧಾನಸೌಧದ ಬಳಿಯ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದ್ದಾರೆ. ಬಿಜೆಪಿ ರಾಜ್ಯ ಪ್ರಧಾನ ಕಚೇರಿ ಜಗನ್ನಾಥ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರತಿಭಟನೆಯ ನಂತರ ಬಿಜೆಪಿ ನಾಯಕರು ರಾಜ್ಯಪಾಲರನ್ನು ಭೇಟಿಯಾಗಿ ಔಪಚಾರಿಕ ಮನವಿ ಸಲ್ಲಿಸಲಿದ್ದಾರೆ ಎಂದು ವಿಜಯೇಂದ್ರ ತಿಳಿಸಿದರು.
ಕೊಚ್ಚಿ: ಮಲಯಾಳಂ ಚಲನಚಿತ್ರ ನಟ ಮತ್ತು ಮಿಮಿಕ್ರಿ ಕಲಾವಿದ ಕಲಾಭವನ್ ನವಾಸ್ ಅವರು ಶುಕ್ರವಾರ ಸಂಜೆ ಚೊಟ್ಟಣಿಕ್ಕರಾದ ಹೋಟೆಲ್ನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.ಶೂಟಿಂಗ್ಗಾಗಿ ತಂಗಿದ್ದ ಹೋಟೆಲ್ನಲ್ಲಿ ಶವವಾಗಿ ನವಾಸ್ (51) ಅವರು ಪತ್ತೆಯಾಗಿದ್ದಾರೆ. ಹೊಟೇಲ್ ಸಿಬ್ಬಂದಿ ಅವರನ್ನು ಎಚ್ಚರಿಸಲು ಹೋದಾಗ ಈ ಘಟನೆ ಬೆಳಕಿಗೆ ಬಂದಿದೆ. ಕೂಡಲೇ ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ವೈದ್ಯರು ಮೃತಪಟ್ಟಿರುವುದಾಗಿ ಘೋಷಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಬೆಂಗಳೂರು: ಚುನಾವಣಾ ಅಕ್ರಮದ ಕುರಿತು ಮೊಸಳೆಕಣ್ಣೀರು ಹಾಕಲು ಆ.5ರಂದು ರಾಜ್ಯಕ್ಕೆ ಬರುತ್ತಿರುವ ರಾಹುಲ್ ಗಾಂಧಿಯವರು ಕಳೆದ 24 ತಿಂಗಳುಗಳಲ್ಲಿ ಕರ್ನಾಟಕದಲ್ಲಿ 2 ಸಾವಿರಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಾಗ ಯಾಕೆ ಇಲ್ಲಿಗೆ ಬಂದಿಲ್ಲ ಎಂದು ಸಂಸದ ಪಿ.ಸಿ. ಮೋಹನ್ ಅವರು ಪ್ರಶ್ನಿಸಿದ್ದಾರೆ.ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, ಸರಕಾರಿ ಆಸ್ಪತ್ರೆಗಳಲ್ಲಿ ಕಳಪೆ ಔಷಧಿ ಕೊಟ್ಟು, ಗರ್ಭಿಣಿಯರು, ಬಾಣಂತಿಯರು, ನವಜಾತ ಶಿಶುಗಳು ಮೃತಪಟ್ಟಾಗ ತಾವು ಯಾಕೆ ಕರ್ನಾಟಕಕ್ಕೆ ಬಂದಿಲ್ಲ ಎಂದು ಪ್ರಶ್ನೆಯನ್ನು ಮುಂದಿಟ್ಟರು.
ಓವಲ್ನಲ್ಲಿ ನಡೆಯುತ್ತಿರುವ ಭಾರತೀಯ ವಿರುದ್ಧದ ಟೆಸ್ಟ್ ಕ್ರಿಕೆಟ್ನ ಮೂರನೇ ದಿನದಂದು ಬೌಲರ್ ಆಕಾಶದೀಪ್ ಅವರು ಮೊದಲ ಅರ್ಧ ಶತಕ ಸಿಡಿಸಿದ್ದಾರೆ. ಇದು 3146 ದಿನಗಳ ಬಳಿಕ ಆಕಾಶ ದೀಪ್ ಅವರ ಅರ್ಧಶತಕವಾಗಿದ್ದು, ಭಾರತೀಯ ಪ್ರೇಕ್ಷಕರಿಂದ ಭಾರೀ ಪ್ರತಿಕ್ರಿಯೆಯನ್ನು ಪಡೆಯಿತು. ನಟ ಆಕಾಶದೀಪ್ ಅವರ ಸಾಧನೆಗೆ ಪೆವಿಲಿಯನ್ನಲ್ಲಿದ್ದ ಭಾರತದ ಕ್ರಿಕೆಟ್ ಆಟಗಾರರೂ ಎದ್ದು ನಿಂತೂ ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದಾರೆ. 66ರನ್ ಗಳಿಸಿ ಕ್ಯಾಚ್ ನೀಡಿ, ಔಟ್ ಆಗುವ ಮೂಲಕ ಪೆವಿಲಿಯನ್ ಕಡೆ ತೆರಳಿದರು. ಈ ವೇಳೆ ಅವರಿಗೆ ಸಹ ಕ್ರಿಕೆಟಗರಿಂದ
ಬೆಂಗಳೂರು: ಕಾನೂನು ಎಲ್ಲರಿಗೂ ಒಂದೇ. ಮಹಿಳೆಯರ ವಿರುದ್ಧದ ಅಪರಾಧಗಳಿಗೆ ಕಠಿಣ ಶಿಕ್ಷೆಯಾಗುತ್ತದೆ ಎಂದು ಪ್ರಜ್ವಲ್ ವಿರುದ್ಧ ಮಹತ್ವದ ಆದೇಶ ಹೊರಬೀಳುತ್ತಿದ್ದ ಹಾಗೇ ನಟಿ ರಮ್ಯಾ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ. ಅತ್ಯಾಚಾರ ಪ್ರಕರಣ ಸಂಬಂಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಇಂದು ಪ್ರಜ್ವಲ್ ರೇವಣ್ಣಗೆ ಜೀವವಾಧಿ ಶಿಕ್ಷೆ ವಿಧಿಸಿ, ಆದೇಶ ಪ್ರಕಟಿಸಿದ ಬೆನ್ನಲ್ಳೇ ನಟಿ ರಮ್ಯಾ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿ ಪ್ರತಿಕ್ರಿಯಿಸಿದ್ದಾರೆ. ಮಹಿಳೆಯರ ವಿರುದ್ಧ ಅಪರಾಧ ಎಸಗುವವರಿಗೆ ಕಠಿಣ ಶಿಕ್ಷೆಯಾಗುತ್ತದೆ. ಕಾನೂನು ಎಲ್ಲರಿಗೂ ಒಂದೇ ಎಂದು ಕೋರ್ಟ್ ತೀರ್ಪಿನ ಬಗ್ಗೆ ಖುಷಿ ವ್ಯಕ್ತಪಡಿಸಿದ್ದಾರೆ.ರೇಣುಕಾಸ್ವಾಮಿ ಹತ್ಯೆ ಪ್ರಕರಣ ಸಂಬಂಧದ ಸುಪ್ರೀಂ ಕೋರ್ಟ್ ವಿಚಾರಣೆಯನ್ನು ಮೆಚ್ಚಿ ನಟಿ ರಮ್ಯಾ ಪೋಸ್ಟ್
ಇಂಡಿಗೋ ವಿಮಾನದಲ್ಲಿ ಸಹ ಪ್ರಯಾಣಿಕರಿಗೆ ಕಪಾಳಮೋಕ್ಷ ಮಾಡಿದ ವ್ಯಕ್ತಿ ವಿಮಾನಯಾನ ಸಂಸ್ಥೆ ನೊ-ಫ್ಲೈ ಪಟ್ಟಿಗೆ ಸೇರಿಸಿದೆ.ಇಂಡಿಗೋ ವಿಮಾನದಲ್ಲಿ ಅಸ್ಸಾಂನ ಕ್ಯಾಚಾರ್ನ ವ್ಯಕ್ತಿಯೊಬ್ಬರಿಗೆ ಸಹ ಪ್ರಯಾಣಿಕರು ಕಪಾಳಮೋಕ್ಷ ಮಾಡಿದ್ದಾರೆ. ಭವಿಷ್ಯದಲ್ಲಿ ಆ ಆರೋಪಿಯನ್ನು ವಿಮಾನಯಾನ ಸಂಸ್ಥೆಗಳು ಬಳಸದಂತೆ ಏರ್ಲೈನ್ಸ್ ಅಮಾನತುಗೊಳಿಸಿದೆ.ಶುಕ್ರವಾರ ಮುಂಬೈ-ಕೋಲ್ಕತ್ತಾ ಇಂಡಿಗೋ ವಿಮಾನದಲ್ಲಿ ಸಹ ಪ್ರಯಾಣಿಕನಿಗೆ ಕಪಾಳಮೋಕ್ಷ ಮಾಡಿದ ವ್ಯಕ್ತಿಯನ್ನು ವಿಮಾನಯಾನ ಸಂಸ್ಥೆಗಳು ಹಾರಾಟದಿಂದ ಅಮಾನತುಗೊಳಿಸಿವೆ.
ಸಾಲು ಸಾಲು ಪ್ಲಾಪ್ ಸಿನಿಮಾದಿಂದ ಕಂಗೆಟ್ಟಿದ ನಟ ವಿಜಯ್ ದೇವರಕೊಂಡಗೆ ಕಿಂಗ್ಡಮ್ ಸಿನಿಮಾ ಇದೀಗ ಮರುಜೀವ ನೀಡಿದೆ. ಕಿಂಗ್ಡಮ್ ಸಿನಿಮಾದ ಯಶಸ್ಸು ದೀರ್ಘಕಾಲದ ಸೋಲಿನ ಸರಣಿಯನ್ನು ಕೊನೆಗೊಳಿಸಿತು. 130ಕೋಟಿ ಬಜೆಟ್ನಲ್ಲಿ ಮೂಡಿಬಂದ ಕಿಂಗ್ಡಮ್ ಸಿನಿಮಾಗೆ ಇದೀಗ ಪ್ರೇಕ್ಷಕರು ಫಿದಾ ಆಗಿದ್ದಾರೆ. ಬಿಡುಗಡೆಯಾದ ಎರಡನೇ ದಿನದಲ್ಲೇ ₹53 ಕೋಟಿ ಬಾಚಿಕೊಂಡು, ಬಾಕ್ಸ್ ಆಫೀಸ್ನಲ್ಲಿ ಸದ್ದು ಮಾಡುತ್ತಿದೆ. ಸಿನಿಮಾ ಯಶಸ್ವಿನ ಬೆನ್ನಲ್ಲೇ ವಿಜಯ್ದೇವರಕೊಂಡ ಅವರ ಗರ್ಲ್ಫ್ರೆಂಡ್ ಎಂದೇ ಸುದ್ದಿಯಲ್ಲಿರುವ ನಟಿ ರಶ್ಮಿಕಾ ಅವರು
ಲಂಡನ್: ಭಾರತ ಮತ್ತುಇಂಗ್ಲೆಂಡ್ ನಡುವೆ ನಡೆಯುತ್ತಿರುವ ಐದನೇ ಟೆಸ್ಟ್ ಪಂದ್ಯದಲ್ಲಿ ಬೌಲರ್ ಆಕಾಶ್ ದೀಪ್ ಅರ್ಧಶತಕ ಸಿಡಿಸಿದ್ದಾರೆ. ಆಕಾಶ್ ಫಿಫ್ಟಿ ಹೊಡೆಯುತ್ತಿದ್ದಂತೇ ಪೆವಿಲಿಯನ್ ನಲ್ಲಿದ್ದ ನಾಯಕ ಶುಭಮನ್ ಗಿಲ್ ಹೆಲ್ಮೆಟ್ ತೆಗಿ ಎಂದು ಸಿಗ್ನಲ್ ಕೊಟ್ಟಿದ್ದಾರೆ. ನಿನ್ನೆ ಭಾರತ ದ್ವಿತೀಯ ಇನಿಂಗ್ಸ್ ನಲ್ಲಿ 70 ರನ್ ಗೆ ಸಾಯಿ ಸುದರ್ಶನ್ ವಿಕೆಟ್ ಕಳೆದುಕೊಂಡಾಗ ಆಕಾಶ್ ದೀಪ್ ರನ್ನು ನೈಟ್ ವಾಚ್ ಮನ್ ಆಗಿ ಬ್ಯಾಟಿಂಗ್ ಗೆ ಕಳುಹಿಸಲಾಯಿತು. ಆದರೆ ಆಕಾಶ್ ತಮಗೆ ಸಿಕ್ಕ ಅವಕಾಶವನ್ನು ಸರಿಯಾಗಿಯೇ ಬಳಸಿಕೊಂಡಿದ್ದು ನಿನ್ನೆ ಅಜೇಯರಾಗುಳಿದು ಇಂದು ಅರ್ಧಶತಕ ಸಿಡಿಸಿದ್ದಾರೆ. ಇದು ಅವರಿಗೆ ಚೊಚ್ಚಲ ಅರ್ಧಶತಕವಾಗಿದೆ.
ಬೆಂಗಳೂರು: ಅತ್ಯಚಾರ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಕ್ ರೇವಣ್ಣಗೆ ಜೀವಾವಧಿ ಶಿಕ್ಷೆ ವಿಧಿಸಿ ಮಹತ್ವದ ಆದೇಶವನ್ನು ಜನಪ್ರತಿನಿಧಿಯ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ. ಇನ್ನೂ ಕೋರ್ಟ್ ಮುಂದೆ ಅಪರಾಧಿ ಪ್ರಜ್ವಲ್ ರೇವಣ್ಣ ಕಡಿಮೆ ಶಿಕ್ಷೆ ವಿಧಿಸುವಂತೆ ಬೇಡಿಕೊಂಡು, ಕಣ್ಣೀರು ಹಾಕಿದ ಘಟನೆ ಸಂಭವಿಸಿತು. ಅತ್ಯಾಚಾರ ಪ್ರಕರಣದಲ್ಲಿ ದೋಷಿ ಎಂದು ಬೆಂಗಳೂರಿನ ವಿಶೇಷ ನ್ಯಾಯಾಲಯ ತೀರ್ಪು ನೀಡಿರುವ ಹಿನ್ನೆಲೆಯಲ್ಲಿ ಮಾಜಿ
ಬೆಂಗಳೂರು: ರಾಹುಲ್ ಗಾಂಧಿಯವರು ಚುನಾವಣಾ ಅಕ್ರಮದ ಹೇಳಿಕೆಯ ಮೂಲಕ ದೇಶ ಮತ್ತು ರಾಜ್ಯದ ಮತದಾರರಿಗೆ ಅವಮಾನ ಮಾಡಿದ್ದಾರೆ. ಅವರ ಹೇಳಿಕೆ ಮತ್ತು ಸಂವಿಧಾನ ವಿರೋಧಿ ನಡೆಯನ್ನು ಖಂಡಿಸಿ ಬಿಜೆಪಿ ವತಿಯಿಂದ ಆ. 5ರಂದು ಬೆಳಿಗ್ಗೆ 10 ಗಂಟೆಗೆ ವಿಧಾನಸೌಧದ ಗಾಂಧೀಜಿ ಅವರ ಪ್ರತಿಮೆ ಬಳಿ ಪ್ರತಿಭಟನೆ ನಡೆಸಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಪ್ರಕಟಿಸಿದ್ದಾರೆ.ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರತಿಭಟನೆಯ ಬಳಿಕ ಮಾನ್ಯ ರಾಜ್ಯಪಾಲರನ್ನು ಭೇಟಿ ಮಾಡಿ ಮನವಿ ನೀಡಲಿದ್ದೇವೆ ಎಂದು ತಿಳಿಸಿದರು.
ಬೆಂಗಳೂರು: ಚುನಾವಣಾ ಅಕ್ರಮದ ವಿಷಯದಲ್ಲಿ ರಾಜ್ಯದಲ್ಲಿ ಅಧಿಕಾರದಲ್ಲಿದ್ದ ಕಾಂಗ್ರೆಸ್ ಪಕ್ಷವೇ ಅಧಿಕಾರ ದುರುಪಯೋಗ ಮಾಡಿರಬೇಕು ಎಂದು ಬಿಜೆಪಿ ನಿಕಟಪೂರ್ವ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಅವರು ಆರೋಪಿಸಿದ್ದಾರೆ.ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, 2014ಕ್ಕೆ ಮೊದಲು ಕೇಂದ್ರದಲ್ಲಿ ಅಧಿಕಾರದಲ್ಲಿದ್ದುದು ಕಾಂಗ್ರೆಸ್ ಪಕ್ಷ. ರಾಜ್ಯದಲ್ಲಿ 2013ರಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿತ್ತು. ನಮ್ಮ ರಾಜ್ಯದಲ್ಲಿ 2013ರಿಂದ 2025ರ ವರೆಗೆ ಮಧ್ಯದ 4 ವರ್ಷಗಳನ್ನು ಹೊರತುಪಡಿಸಿ ಉಳಿದೆಲ್ಲ ಸಂದರ್ಭದಲ್ಲೂ ಕಾಂಗ್ರೆಸ್ ಪಕ್ಷವೇ ಅಧಿಕಾರದಲ್ಲಿತ್ತು.
ನವದೆಹಲಿ: ಮೆದುಳಿನ ಪಾರ್ಶ್ವವಾಯುವಿಗೆ ಒಳಗಾಗಿರುವ ಜಾರ್ಖಂಡ್ನ ಮಾಜಿ ಮುಖ್ಯಮಂತ್ರಿ ಮತ್ತು ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ನಾಯಕ ಶಿಬು ಸೊರೆನ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಸದ್ಯ ಅವರು ವೆಂಟಿಲೇಟರ್ ಬೆಂಬಲದಲ್ಲಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.ಅವರನ್ನು ಒಂದು ತಿಂಗಳಿನಿಂದ ದೆಹಲಿಯ ಶ್ರೀ ಗಂಗಾರಾಮ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಿಡ್ನಿ ಸಂಬಂಧಿತ ಸಮಸ್ಯೆಯಿಂದ ಜೂನ್ ಕೊನೆಯ ವಾರದಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. 81 ವರ್ಷದ ಶಿಬು ಸೊರೆನ್ ಅವರು ದೀರ್ಘಕಾಲದಿಂದ ಆಸ್ಪತ್ರೆಯಲ್ಲಿ ನಿಯಮಿತವಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜೂನ್ 24
ಬೆಂಗಳೂರು: ಮನೆಗೆಲಸದಾಕೆ ಮೇಲೆ ಅತ್ಯಾಚಾರವೆಸಗಿದ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಶಿಕ್ಷೆ ಘೋಷಣೆಯಾಗಿದೆ. ಈ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ತೋರಿದ ಈ ಒಂದು ದರ್ಪದ ವರ್ತನೆಯೇ ಸಿಕ್ಕಿಹಾಕುವಂತೆ ಮಾಡಿತು. ಪ್ರಜ್ವಲ್ ರೇವಣ್ಣ ತಮ್ಮ ಮನೆಗೆಲಸಕ್ಕೆ ಬರುತ್ತಿದ್ದ 55 ವರ್ಷದ ಮಹಿಳೆ ಮೇಲೆ ನಿರಂತರ ಅತ್ಯಾಚಾರ ನಡೆಸಿದ್ದರು. ಒಮ್ಮೆ ತೋಟದ ಮನೆಯಲ್ಲಿ ನಂತರ ಬಸವನಗುಡಿಯ ಮನೆಯಲ್ಲಿ ಅತ್ಯಾಚಾರ ನಡೆಸಿದ್ದರು. ಅಷ್ಟೇ ಅಲ್ಲದೆ ಆ ವಿಡಿಯೋಗಳನ್ನೂ ಚಿತ್ರೀಕರಿಸಿಕೊಂಡಿದ್ದರು. ಇದುವೇ ಪ್ರಕರಣದಲ್ಲಿ ದೊಡ್ಡ ಸಾಕ್ಷಿಯಾಯಿತು.
ಶಿಲ್ಲಾಂಗ್: ಮೇಘಾಲಯ ಹನಿಮೂನ್ನಲ್ಲಿ ಪತಿಯನ್ನು ಪ್ರಿಯಕರ ಸಹಾಯದಿಂದ ಹತ್ಯೆ ಮಾಡಿದ ಪ್ರಕರಣ ಸಂಬಂಧ ಆರೋಪಿಗಳಿಗೆ ಇನ್ನೂ 14 ದಿನಗಳ ನ್ಯಾಯಾಂಗ ಬಂಧವನ್ನು ವಿಧಿಸಲಾಗಿದೆ. ದೇಶವನ್ನೇ ಬೆಚ್ಚಿಬೀಳಿಸಿದ ಇಂಧೋರ್ನ ಉದ್ಯಮಿ ರಾಜಾ ರಘುವಂಶಿ ಹತ್ಯೆ ಸಂಬಂಧ ಆರೋಪಿಗಳಾದ ಆತನ ಪತ್ನಿ ಸೋನಂ ರಘುವಂಶಿ, ಆಕೆಯ ಪ್ರಿಯಕರ ರಾಜ್ ಕುಶ್ವಾಹಾ ಮತ್ತು ವಿಶಾಲ್ ಚೌಹಾಣ್ ಅವರಿಗೆ ನ್ಯಾಯಾಂಗ ಮ್ಯಾಜಿಸ್ಟ್ರೇಟ್ (ಪ್ರಥಮ ದರ್ಜೆ) ಡಿಕೆಕೆ ಮಿಹ್ಸಿಲ್ ನ್ಯಾಯಾಲಯವು ಆಗಸ್ಟ್ 1 ರಿಂದ ಇನ್ನೂ 14 ದಿನಗಳ ನ್ಯಾಯಾಂಗ ಬಂಧನವನ್ನು ನೀಡಿದೆ.
ಬೆಂಗಳೂರು: ಮನೆಗೆಲಸದಾಕೆ ಮೇಲೆ ಅತ್ಯಾಚಾರವೆಸಗಿದ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ ಜೊತೆಗೆ 10 ಲಕ್ಷ ರೂ. ದಂಡ ಶಿಕ್ಷೆ ಪ್ರಕಟಿಸಲಾಗಿದೆ. ಇಂದು ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಪ್ರಜ್ವಲ್ ಶಿಕ್ಷೆ ಪ್ರಮಾಣವನ್ನು ಪ್ರಕಟಿಸಿತು. ನಿನ್ನೆಯೇ ಪ್ರಜ್ವಲ್ ಈ ಪ್ರಕರಣದಲ್ಲಿ ದೋಷಿ ಎಂದು ನ್ಯಾ. ಸಂತೋಷ್ ಗಜಾನನ ಭಟ್ ತೀರ್ಪು ನೀಡಿದ್ದರು. ಇಂದು ಶಿಕ್ಷೆ ಪ್ರಮಾಣ ಪ್ರಕಟಿಸುವುದಾಗಿ ಹೇಳಿದ್ದರು. ಅದರಂತೆ ಈಗ ಶಿಕ್ಷೆ ಪ್ರಮಾಣ ಪ್ರಕಟಿಸಲಾಗಿದೆ. ಜೀವಾವಧಿ ಶಿಕ್ಷೆ ಜೊತೆಗೆ ಒಟ್ಟು 10 ಲಕ್ಷ ರೂ. ದಂಡ ವಿಧಿಸಲಾಗಿದೆ. ಇದರಲ್ಲಿ ಸಂತ್ರಸ್ತೆಗೆ 7 ಲಕ್ಷ ರೂ. ಸಂತ್ರಸ್ತೆಗೆ ನೀಡಬೇಕಾಗಿದೆ.
ಬೆಂಗಳೂರು: ಒಂದೆಡೆ ಮಗ ಪ್ರಜ್ವಲ್ ರೇವಣ್ಣಗೆ ಕೋರ್ಟ್ ನಲ್ಲಿ ಶಿಕ್ಷೆ ಪ್ರಮಾಣ ಪಕ್ರಟವಾಗುತ್ತಿದ್ದರೆ ಇತ್ತ ತಂದೆ ಎಚ್ ಡಿ ರೇವಣ್ಣ ಮತ್ತು ತಾಯಿ ಭವಾನಿ ರೇವಣ್ಣ ಎಲ್ಲಿದ್ದಾರೆ? ನಿನ್ನೆ ಪ್ರಜ್ವಲ್ ರೇವಣ್ಣರನ್ನು ಮನೆಗೆಲಸದಾಕೆ ಮೇಲೆ ಅತ್ಯಾಚಾರವೆಸಗಿದ ಪ್ರಕರಣದಲ್ಲಿ ದೋಷಿ ಎಂದು ಜನಪ್ರತಿನಿಧಿಗಳ ಕೋರ್ಟ್ ತೀರ್ಪು ನೀಡಿತ್ತು. ಇಂದು ಶಿಕ್ಷೆ ಪ್ರಮಾಣ ಪ್ರಕಟಿಸುವುದಾಗಿ ತಿಳಿಸಿತ್ತು. ಅದರಂತೆ ಇಂದು ಜನಪ್ರತಿನಿಧಿಗಳ ಕೋರ್ಟ್ ಪ್ರಜ್ವಲ್ ಗೆ ಕೆಲವೇ ಕ್ಷಣಗಳಲ್ಲಿ ಶಿಕ್ಷೆ ಪ್ರಮಾಣ ಪ್ರಕಟವಾಗಲಿದೆ. ಮಗ ಪ್ರಜ್ವಲ್ ಗೆ ಕೋರ್ಟ್ ನಲ್ಲಿ ಶಿಕ್ಷೆ ಪ್ರಮಾಣ ಪ್ರಕಟವಾಗುತ್ತಿದ್ದರೆ ತಂದೆ ಎಚ್ ಡಿ ರೇವಣ್ಣ ಹೊಳೆನರಸೀಪುರದಲ್ಲಿರುವ ಮನೆ ದೇವರಿಗೆ ಪೂಜೆ ಸಲ್ಲಿಸಿ ಬೆಂಗಳೂರಿಗೆ ವಾಪಸ್ ಆಗುತ್ತಿದ್ದಾರೆ.
ಬೆಳ್ತಂಗಡಿ: ಧರ್ಮಸ್ಥಳದ ಸುತ್ತಾಮುತ್ತಾ ಹಲವು ಶವಗಳನ್ನು ಹೂತಿಟ್ಟ ಪ್ರಕರಣ ಸಂಬಂಧ ದೂರುದಾರ ಗುರುತಿಸಿದ 9ನೇ ಪಾಯಿಂಟ್ನಲ್ಲಿ ಯಾವುದೇ ಅವಶೇಷಗಳು ಪತ್ತೆಯಾಗಿಲ್ಲ. ದೂರುದಾರ ನೀಡಿದ ದೂರಿನಲ್ಲಿ 9ನೇ ಪಾಯಿಂಟ್ ತುಂಬಾನೇ ಮಹತ್ವದ್ದು ಆಗಿತ್ತು. 9ನೇ ಪಾಯಿಂಟ್ನಲ್ಲಿ ಶಾಲೆಗೆ ಹೋಗುತ್ತಿದ್ದ ಬಾಲಕಿಯನ್ನು ಹೂತಿದ್ದೆ. ಹೂಳುವಾಗ ಬಾಲಕಿಯ ಒಳಉಡುಪು ಇರಲಿಲ್ಲ. ಅದಲ್ಲದೆ ಬ್ಯಾಗ್ ಸಮೇತ ಹೂಳಲಾಗಿತ್ತು ಎಂದು ದೂರುದಾರ ಹೇಳಿದ್ದೆ.
ಮಂಗಳೂರು: ರಾಜ್ಯವನ್ನೇ ಬೆಚ್ಚಿಬೀಳಿಸಿದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ಸಂಬಂದ ಮಂಗಳೂರಿನ ಬಜಪೆ ಹಾಗೂ ಸುರತ್ಕಲ್ನ 14 ಕಡೆ ಎನ್ಐಎ ದಾಳಿ ನಡೆಸಿದೆ.ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯ 10 ಕಡೆ, ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ 4 ಕಡೆ ಎನ್ಐಎ ದಾಳಿ ಮಾಡಿದೆ. ಕೊಲೆ ಆರೋಪಿಗಳು ಹಾಗೂ ಎಸ್ಡಿಪಿಐ ಮುಖಂಡರ ಮನೆಗೆ ಎನ್ಐಎ ಅಧಿಕಾರಿಗಳು ದಾಳಿ ನಡೆಸಿದ್ದು, ತನಿಖೆ ಸಲುವಾಗಿ ಹಲವು ದಾಖಲೆಗಳನ್ನು ಪರಿಶೀಲಿಸಿದ್ದಾರೆ. ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದಲ್ಲಿ ನಿಷೇಧಿತ ಸಂಘಟನೆ ಪಿಎಫ್ಐ ಕಾರ್ಯಕರ್ತರು ಶಾಮೀಲಾಗಿರುವ ಆರೋಪ ಕೇಳಿಬಂದಿದೆ.
ನಾಗ್ಪುರ: ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ಶನಿವಾರ ಫಿಡೆ ಚೆಸ್ ಮಹಿಳಾ ವಿಶ್ವಕಪ್ ಕಿರೀಟ ಧರಿಸಿದ ಭಾರತದ ಯುವ ತಾರೆ ದಿವ್ಯಾ ದೇಶಮುಖ್ ಅವರನ್ನು ಸನ್ಮಾನಿಸಿದರು. ಅವರಿಗೆ ₹3ಕೋಟಿ ನಗದು ಬಹುಮಾನವನ್ನು ನೀಡಿದರು. ಜುಲೈ 28 ರಂದು ಜಾರ್ಜಿಯಾದ ಬಟುಮಿಯಲ್ಲಿ ನಡೆದ ಮಹಿಳಾ ವಿಶ್ವಕಪ್ನಲ್ಲಿ 19 ವರ್ಷದ ದಿವ್ಯಾ ದೇಶಮುಖ್ ಅವರು ಫೈನಲ್ನ ಟೈ-ಬ್ರೇಕರ್ನಲ್ಲಿ ಕೊನೇರು ಹಂಪಿಯನ್ನು ಸೋಲಿಸಿದ ನಂತರ ಪ್ರಶಸ್ತಿ ಗೆದ್ದ ಅತ್ಯಂತ ಕಿರಿಯ ಆಟಗಾರರಾದರು. ದಿವ್ಯಾ ದೇಶಮುಖ್ ನಾಗ್ಪುರದ ಮೂಲದವರು, ಅದೇ ಸ್ಥಳದಿಂದ ಸಿಎಂ ಫಡ್ನವಿಸ್ ಕೂಡ ಇದ್ದಾರೆ.
ಬಲ್ಲಿಯಾ (ಯುಪಿ): 16 ವರ್ಷದ ಬಾಲಕನೊಬ್ಬ ಇಯರ್ ಫೋನ್ಗಳನ್ನು ಹಾಕಿಕೊಂಡು ರೈಲು ಹಳಿಗಳನ್ನು ದಾಟುತ್ತಿದ್ದಾಗ ರೈಲು ಡಿಕ್ಕಿ ಹೊಡೆದು ಸಾವನ್ನಪ್ಪಿದ ಘಟನೆ ಶನಿವಾರ ವರದಿಯಾಗಿದೆ. ಶುಕ್ರವಾರ ಸಂಜೆ ಉದೈನಾ ಗ್ರಾಮದ ಬಲ್ಲಿಯಾ ಮೌ ರೈಲ್ವೆ ವಿಭಾಗದಲ್ಲಿ ಈ ಘಟನೆ ನಡೆದಿದೆ.ಮೃತರನ್ನು ಅರವಿಂದ್ ರಾಜ್ಭರ್ ಎಂದು ಗುರುತಿಸಲಾಗಿದೆ. ಇಯರ್ಫೋನ್ ಬಳಸಿ ಹಾಡನ್ನು ಕೇಳುತ್ತಾ ಹಳಿಗಳನ್ನು ದಾಟುತ್ತಿದ್ದರು. ಅವರು ಬಲ್ಲಿಯಾ ಕಡೆಗೆ ಹೋಗುತ್ತಿದ್ದ ತಪತಿ ಗಂಗಾ ಎಕ್ಸ್ಪ್ರೆಸ್ನಿಂದ ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.