ಬೆಂಗಳೂರು: ಟಿಪ್ಪು ಸಂತತಿಯನ್ನು ವೈಭವೀಕರಿಸಿ ಮುಸ್ಲಿಂ ಮತಗಳಿಕೆಯನ್ನು ಗಟ್ಟಿಗೊಳಿಸಿಕೊಳ್ಳುವುದು ನಿಮ್ಮ ಕಾರ್ಯ ಸೂಚಿ ಎಂಬುದು ನಾಡಿನ ಜನತೆಗೆ ತಿಳಿದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ನಿನ್ನೆ ಸಚಿವ ಮಹದೇವಪ್ಪ ಕೆಆರ್ ಎಸ್ ಡ್ಯಾಮ್ ಗೆ ಅಡಿಗಲ್ಲು ಹಾಕಿದ್ದು ಟಿಪ್ಪು ಸುಲ್ತಾನ್ ಎಂದು ವಿವಾದಿತ ಹೇಳಿಕೆ ನೀಡಿದ ಬೆನ್ನಲ್ಲೇ ಟ್ವೀಟ್ ಮಾಡಿ ವಿಜಯೇಂದ್ರ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೊದಲಿನಿಂದಲೂ ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜಮನೆತನದ ಬಗ್ಗೆ ಅಸಡ್ಡೆಯಿಂದ ನಡೆದುಕೊಂಡಿದ್ದಾರೆ, ಮೊನ್ನೆಯಷ್ಟೇ ನಾಲ್ವಡಿ ಅವರಿಗಿಂತಲೂ ತಮ್ಮ ತಂದೆಯೇ ಮಿಗಿಲು ಎಂದು ವಿಧಾನ ಪರಿಷತ್ ಸದಸ್ಯ ಯತೀಂದ್ರ ಹೇಳಿಕೊಂಡಿದ್ದಾರೆ.

ಲಂಡನ್: ಇಲ್ಲಿನ ಓವಲ್‌ನಲ್ಲಿ ನಡೆಯುತ್ತಿರುವ ನಿರ್ಣಾಯಕ ಮತ್ತು ಕೊನೆಯ ಟೆಸ್ಟ್‌ ಪಂದ್ಯ ಕುತೂಹಲಕರ ಘಟ್ಟದತ್ತ ಸಾಗಿದೆ. ಇಂಗ್ಲೆಂಡ್‌ ವಿರುದ್ಧದ ಈ ಪಂದ್ಯವನ್ನು ಗೆದ್ದು ಸರಣಿಯನ್ನು ಸಮಬಲ ಮಾಡಲು ಭಾರತ ಪ್ರಯತ್ನಿಸುತ್ತಿದೆ. ಭಾರತ ನೀಡಿದ 374 ರನ್‌ಗಳ ಗೆಲುವಿನ ಗುರಿ ಬೆನ್ನಟ್ಟಿದ ಇಂಗ್ಲೆಂಡ್ ಮೂರನೇ ದಿನದಂತ್ಯಕ್ಕೆ ಒಂದು ವಿಕೆಟ್ ನಷ್ಟಕ್ಕೆ 50 ರನ್ ಗಳಿಸಿದೆ.ಈ ಪಂದ್ಯವನ್ನು ಗೆಲ್ಲಲು ಭಾರತಕ್ಕೆ ಇನ್ನೂ ಒಂಬತ್ತು ವಿಕೆಟ್‌ ಬೇಕಾಗಿದೆ. ಅತ್ತ ಇಂಗ್ಲೆಡ್‌ಗೆ ಗೆಲ್ಲಲು ಇನ್ನೆರಡು ದಿನ ಉಳಿದಿರುವಂತೆಯೇ 324 ರನ್ ಗಳಿಸಬೇಕಿದೆ.ಆತಿಥೇಯ ತಂಡಕ್ಕೆ ಓಪನರ್‌ಗಳಾದ ಜಾಕ್ ಕ್ರಾಲಿ ಹಾಗೂ ಬೆನ್ ಡಕೆಟ್ ಎರಡನೇ ಇನಿಂಗ್ಸ್‌ನಲ್ಲಝೂ ಉತ್ತಮ ಆರಂಭವೊದಗಿಸಿದರು. ಮೊದಲ ವಿಕೆಟ್‌ಗೆ ಅರ್ಧಶತಕದ ಜೊತೆಯಾಟವನ್ನು ಕಟ್ಟಿದರು.

ಚೆನ್ನೈ: ಇಂಡಿಯನ್‌ ಪ್ರೀಮಿಯರ್‌ ಲೀಗ್‌ನಲ್ಲಿ ಐದು ಬಾರಿ ಚಾಂಪಿಯನ್ ಆಗಿರುವ ಚೆನ್ನೈ ಸೂಪರ್‌ ಕಿಂಗ್ಸ್ ತಂಡವು ಕಳೆದೆರಡು ಆವೃತ್ತಿಯಲ್ಲಿ ಕಳಪೆ ಪ್ರದರ್ಶನ ನೀಡಿದೆ. ಎರಡೂ ಆವೃತ್ತಿಗಳಲ್ಲೂ ಪ್ಲೇಆಫ್‌ ಪ್ರವೇಶಿಸಲು ವಿಫಲವಾಗಿದೆ. ಇದಕ್ಕೆ ತಂಡದಲ್ಲಿರುವ ದಿಗ್ಗಜ ಆಟಗಾರ ಮಹೇಂದ್ರ ಸಿಂಗ್‌ ಧೋನಿ ಅವರು ಕಾರಣ ಬಿಚ್ಚಿಟ್ಟಿದ್ದಾರೆ.ಕಳೆದೆರಡು ಆವೃತ್ತಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಕಳಪೆ ಪ್ರದರ್ಶನ ನೀಡಿದೆ ಎಂದು ಒಪ್ಪಿಕೊಂಡಿರುವ ಧೋನಿ, ಮುಂದಿನ ಆವೃತ್ತಿಯಲ್ಲಿ ತಪ್ಪುಗಳನ್ನು ಸರಿಪಡಿಸಿಕೊಂಡು ಈ ಬಾರಿ ಕಣಕ್ಕಿಳಿಯಲಿದ್ದೇವೆ ಎಂದು ಅವರು ಭರವಸೆ ವ್ಯಕ್ತಪಡಿಸಿದ್ದಾರೆ.ತಂಡದಲ್ಲಿ ಕೆಲವೊಂದು ನ್ಯೂನತೆಗಳಿವೆ. ಅದನ್ನು ನಿಖರವಾಗಿ ಕಂಡುಹಿಡಿದು ಸರಿಪಡಿಸಬೇಕಿದೆ. ಮುಂದಿನ ಡಿಸೆಂಬರ್‌ನಲ್ಲಿ ನಡೆಯಲಿರುವ ಮಿನಿ ಹರಾಜಿನಲ್ಲಿ ನ್ಯೂನತೆಗಳನ್ನು ಸರಿಪಡಿಸಲು ಪ್ರಯತ್ನಿಸಲಿದ್ದೇವೆ ಎಂದು ತಂಡದ ಪರ ಬ್ಯಾಟಿಂಗ್‌ ನಡೆಸಿದರು.

ಚೆನ್ನೈ: ಕಾಲಿವುಡ್‌ನಲ್ಲಿ 600ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದ ಖ್ಯಾತ ಹಾಸ್ಯನಟ ಮದನ್ ಬಾಬ್ ಅವರು ನಿಧನರಾಗಿದ್ದಾರೆ. ಮದನ್ ಬಾಬ್ ( ಕೃಷ್ಣಮೂರ್ತಿ ) ಶನಿವಾರ ಸಂಜೆ ಚೆನ್ನೈನಲ್ಲಿ 71ನೇ ವಯಸ್ಸಿನಲ್ಲಿ ನಿಧನರಾದರು. ತಮಿಳು ಚಿತ್ರರಂಗದಲ್ಲಿ ಪ್ರಸಿದ್ಧಿಯಾದ ಇವರು ಕೆಲವು ವರ್ಷಗಳಿಂದ ಕ್ಯಾನ್ಸರ್‌ನಿಂದ ಬಳಲುತ್ತಿದ್ದರು. ಆದ್ಯಾರ್‌ನಲ್ಲಿರುವ ಅವರ ನಿವಾಸದಲ್ಲಿ ಕೊನೆಯುಸಿರೆಳೆದರು. ಅವರನ್ನು ಸ್ಮೈಲ್‌ನ ರಾಜ ಎಂದು ಪ್ರೀತಿಯಿಂದ ಕರೆಯಲಾಗುತ್ತಿತ್ತು. ವಿಶಿಷ್ಟ ಹಾಸ್ಯ ಶೈಲಿ, ಟ್ರೇಡ್‌ಮಾರ್ಕ್ ನಗು, ಎಲ್ಲರನ್ನೂ ನಗೆಗಡಲಿನಲ್ಲಿ ಮುಳುಗಿಸುವ ಗುಣಕ್ಕೆ ಹೆಸರಾಗಿದ್ದರು. 600ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅದರಲ್ಲಿಯೂ ಹೆಚ್ಚಾಗಿ ತಮಿಳು ಸಿನಿಮಾಗಳಲ್ಲಿ ಕಾಣಿಸಿಕೊಂಡಿದ್ದಾರೆ. 1992 ರಲ್ಲಿ ಕೆ. ಬಾಲಚಂದರ್ ನಿರ್ದೇಶನದ ವಾನಮೇ ಎಲ್ಲೈ ಸಿನಿಮಾ ಮೂಲಕ ಅವರು ಚಿತ್ರರಂಗ ಪ್ರವೇಶ ಮಾಡಿದರು.

ಹೈದರಾಬಾದ್‌: ಒಲಿಂಪಿಕ್ಸ್‌ ಕಂಚಿನ ಪದಕ ವಿಜೇತೆ ಸೈನಾ ನೆಹ್ವಾಲ್‌ ಮತ್ತು ಪರುಪಳ್ಳಿ ಕಶ್ಯಪ್ ದಂಪತಿ ಕೆಳದಿನಗಳ ಹಿಂದ ವಿಚ್ಛೇದನ ಘೋಷಿಸಿದ್ದರು. ಇದೀಗ ಅವರು ತಮ್ಮ ನಿರ್ಧಾರದಿಂದ ಹಿಂದೆ ಸರಿದಿದ್ದು, ಮತ್ತೆ ಒಂದಾಗಿ ಬಾಳಲು ನಿರ್ಧರಿಸಿದ್ದಾರೆ. 35 ವರ್ಷದ ಸೈನಾ ಅವರು ಇನ್‌ಸ್ಟಾಗ್ರಾಂನಲ್ಲಿ ಖಾತೆಯಲ್ಲಿ ಹೊಸ ಪೋಸ್ಟ್‌ವೊಂದನ್ನು ಹಂಚಿಕೊಳ್ಳುವ ಮೂಲಕ ಮತ್ತೆ ಒಂದಾಗುತ್ತೇವೆಂದು ಘೋಷಿಸಿದ್ದಾರೆ. ಇಬ್ಬರ ಫೋಟೋ ಹೊತೆಗೆ ಕೆಲವೊಮ್ಮೆ ದೂರವಾಗಿರುವುದು ಹತ್ತಿರವಾಗಿರುವ ಮೌಲ್ಯವನ್ನು ಕಲಿಸುತ್ತದೆ, ನಾವು ಮತ್ತೆ ಒಂದಾಗಲು ತೀರ್ಮಾನಿಸಿದ್ದೇವೆ ಎಂದು ಬರೆದುಕೊಂಡಿದ್ದಾರೆ. ಬ್ಯಾಡ್ಮಿಂಟನ್‌ ತಾರೆ ಸೈನಾ ನೆಹ್ವಾಲ್ ‌ಅವರು 2018ರಲ್ಲಿ ಬ್ಯಾಡ್ಮಿಂಟನ್‌ ಆಟಗಾರನಾಗಿದ್ದ ಕಶ್ಯಪ್ ಅವರನ್ನ ವಿವಾಹವಾಗಿದ್ದರು. ಕಳೆದ ಜುಲೈ 14ರಂದು ಈ ಜೋಡಿ 7 ವರ್ಷಗಳ ದಾಂಪತ್ಯಕ್ಕೆ ಪೂರ್ಣವಿರಾಮ ನೀಡಲು ನಿರ್ಧರಿಸಿತ್ತು.

ಬೆಂಗಳೂರು: ಬಹುನಿರೀಕ್ಷಿತ ನಮ್ಮ ಮೆಟ್ರೊ ಹಳದಿ ಮಾರ್ಗಯಲ್ಲಿ ಮೆಟ್ರೊ ರೈಲು ಸಂಚಾರಕ್ಕೆ ದಿನಗಣನೆ ಆರಂಭವಾಗಿದೆ. ಇದೇ 10ರಂದು ಪ್ರಧಾನಿ ನರೇಂದ್ರ ಮೋದಿ ಅವರು ಗ್ರೀನ್‌ಸಿಗ್ನಲ್‌ ನೀಡಲಿದ್ದಾರೆ. ಆರ್‌.ವಿ. ರಸ್ತೆಯಿಂದ ಬೊಮ್ಮಸಂದ್ರ ನಡುವಿನ ನಮ್ಮ ಮೆಟ್ರೊ ಹಳದಿ ಮಾರ್ಗದಲ್ಲಿ ರೈಲು ಸಂಚಾರ ಮಾಡಲಿದೆ. ನಮ್ಮ ಮೆಟ್ರೊ ಹಳದಿ ಮಾರ್ಗದಲ್ಲಿ ರೈಲು ಸಂಚಾರದಿಂದ ಸುಮಾರು 8 ಲಕ್ಷ ಪ್ರಯಾಣಿಕರಿಗೆ ಅನುಕೂಲವಾಗಲಿವೆ. ಇದು ಸಿಲ್ಕ್ ಬೋರ್ಡ್ ಸಂಚಾರ ದಟ್ಟಣೆ ಸಮಸ್ಯೆಯನ್ನು ಬಹುಮಟ್ಟಿಗೆ ಪರಿಹರಿಸಲಿದೆ. ಸಾರ್ವಜನಿಕ ಸಾರಿಗೆ ಬಳಕೆ ಮಾತ್ರವೇ ಸಂಚಾರ ದಟ್ಟಣೆ ಇಳಿಕೆಗೆ ಉತ್ತಮ ಪರಿಹಾರವಾಗಿದೆ.ಆರ್‌.ವಿ. ರಸ್ತೆಯಿಂದ ಬೊಮ್ಮಸಂದ್ರ ಸಂಪರ್ಕಿಸುವ ಈ ಮಾರ್ಗದಲ್ಲಿ ಸಂಚಾರ ಆರಂಭಿಸಲು ರೈಲ್ವೆಯ ಮೆಟ್ರೊ ರೈಲು ಸುರಕ್ಷತಾ ಆಯೋ ಅನುಮತಿ ನೀಡಿದೆ.

ಬೆಂಗಳೂರು: ಕಾನೂನು ಎಲ್ಲರಿಗೂ ಒಂದೇ. ಮಹಿಳೆಯರ ವಿರುದ್ಧದ ಅಪರಾಧಗಳಿಗೆ ಕಠಿಣ ಶಿಕ್ಷೆಯಾಗುತ್ತದೆ ಎಂದು ಪ್ರಜ್ವಲ್ ವಿರುದ್ಧ ಮಹತ್ವದ ಆದೇಶ ಹೊರಬೀಳುತ್ತಿದ್ದ ಹಾಗೇ ನಟಿ ರಮ್ಯಾ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ. ಅತ್ಯಾಚಾರ ಪ್ರಕರಣ ಸಂಬಂಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಇಂದು ಪ್ರಜ್ವಲ್‌ ರೇವಣ್ಣಗೆ ಜೀವವಾಧಿ ಶಿಕ್ಷೆ ವಿಧಿಸಿ, ಆದೇಶ ಪ್ರಕಟಿಸಿದ ಬೆನ್ನಲ್ಳೇ ನಟಿ ರಮ್ಯಾ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿ ಪ್ರತಿಕ್ರಿಯಿಸಿದ್ದಾರೆ. ಮಹಿಳೆಯರ ವಿರುದ್ಧ ಅಪರಾಧ ಎಸಗುವವರಿಗೆ ಕಠಿಣ ಶಿಕ್ಷೆಯಾಗುತ್ತದೆ. ಕಾನೂನು ಎಲ್ಲರಿಗೂ ಒಂದೇ ಎಂದು ಕೋರ್ಟ್ ತೀರ್ಪಿನ ಬಗ್ಗೆ ಖುಷಿ ವ್ಯಕ್ತಪಡಿಸಿದ್ದಾರೆ.ರೇಣುಕಾಸ್ವಾಮಿ ಹತ್ಯೆ ಪ್ರಕರಣ ಸಂಬಂಧದ ಸುಪ್ರೀಂ ಕೋರ್ಟ್‌ ವಿಚಾರಣೆಯನ್ನು ಮೆಚ್ಚಿ ನಟಿ ರಮ್ಯಾ ಪೋಸ್ಟ್

ಬೆಂಗಳೂರು: ಒಂದೆಡೆ ಮಗ ಪ್ರಜ್ವಲ್ ರೇವಣ್ಣಗೆ ಕೋರ್ಟ್ ನಲ್ಲಿ ಶಿಕ್ಷೆ ಪ್ರಮಾಣ ಪಕ್ರಟವಾಗುತ್ತಿದ್ದರೆ ಇತ್ತ ತಂದೆ ಎಚ್ ಡಿ ರೇವಣ್ಣ ಮತ್ತು ತಾಯಿ ಭವಾನಿ ರೇವಣ್ಣ ಎಲ್ಲಿದ್ದಾರೆ? ನಿನ್ನೆ ಪ್ರಜ್ವಲ್ ರೇವಣ್ಣರನ್ನು ಮನೆಗೆಲಸದಾಕೆ ಮೇಲೆ ಅತ್ಯಾಚಾರವೆಸಗಿದ ಪ್ರಕರಣದಲ್ಲಿ ದೋಷಿ ಎಂದು ಜನಪ್ರತಿನಿಧಿಗಳ ಕೋರ್ಟ್ ತೀರ್ಪು ನೀಡಿತ್ತು. ಇಂದು ಶಿಕ್ಷೆ ಪ್ರಮಾಣ ಪ್ರಕಟಿಸುವುದಾಗಿ ತಿಳಿಸಿತ್ತು. ಅದರಂತೆ ಇಂದು ಜನಪ್ರತಿನಿಧಿಗಳ ಕೋರ್ಟ್ ಪ್ರಜ್ವಲ್ ಗೆ ಕೆಲವೇ ಕ್ಷಣಗಳಲ್ಲಿ ಶಿಕ್ಷೆ ಪ್ರಮಾಣ ಪ್ರಕಟವಾಗಲಿದೆ. ಮಗ ಪ್ರಜ್ವಲ್ ಗೆ ಕೋರ್ಟ್ ನಲ್ಲಿ ಶಿಕ್ಷೆ ಪ್ರಮಾಣ ಪ್ರಕಟವಾಗುತ್ತಿದ್ದರೆ ತಂದೆ ಎಚ್ ಡಿ ರೇವಣ್ಣ ಹೊಳೆನರಸೀಪುರದಲ್ಲಿರುವ ಮನೆ ದೇವರಿಗೆ ಪೂಜೆ ಸಲ್ಲಿಸಿ ಬೆಂಗಳೂರಿಗೆ ವಾಪಸ್ ಆಗುತ್ತಿದ್ದಾರೆ.