ವಡೋದರ: ಡಬ್ಲ್ಯುಪಿಎಲ್ 2025ರ ಗುಜರಾತ್ ಜೈಂಟ್ಸ್ ವಿರುದ್ಧದ ಆರಂಭಿಕ ಪಂದ್ಯಾಟದಲ್ಲಿ ಹೊಸ ದಾಖಲೆಯೊಂದಿಗೆ ಜಯದ ಓಟ ಆರಂಭಿಸಿದ ಆರ್‌ಸಿಬಿ ಇಂದು ಎರಡನೇ ಪಂದ್ಯಾಟವನ್ನು ಎದುರಿಸಲಿದೆ. ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (ಆರ್‌ಸಿಬಿ) ಹಾಗೂ ಡೆಲ್ಲಿ ಕ್ಯಾಪಿಟಲ್ಸ್‌ (ಡಿಸಿ), ವಡೋದರದ ಕೊತಂಬಿ ಕ್ರೀಡಾಂಗಣದಲ್ಲಿ ಮುಖಾಮುಖಿಯಾಗಿವೆ. ಟಾಸ್‌ ಗೆದ್ದಿರುವ ಆರ್‌ಸಿಬಿ ನಾಯಕಿ ಸ್ಮೃತಿ ಮಂದಾನ ಬೌಲಿಂಗ್‌ ಆಯ್ದುಕೊಂಡು, ಡಿಸಿಯನ್ನು ಬ್ಯಾಟಿಂಗ್‌ಗೆ ಸ್ವಾಗತಿಸಿದೆ.ಮೊದಲ ಪಂದ್ಯದಲ್ಲಿ ಗುಜರಾತ್‌ ಜೈಂಟ್ಸ್‌ ಎದುರು ದಾಖಲೆ ಮೊತ್ತ ಬೆನ್ನತ್ತಿ ಗೆದ್ದಿರುವ ಆರ್‌ಸಿಬಿ ಇದೀಗ ಮತ್ತೇ ಗೆಲುವಿನ ನಿರೀಕ್ಷೆಯಲ್ಲಿ ಗ್ರೌಂಡ್‌ಗಿಳಿದಿದ್ದಾರೆ. ಮೊದಲ ಪಂದ್ಯಾಟದಲ್ಲೂ ಗುಜರಾತ್ ವಿರುದ್ಧ ಟಾಸ್‌ ಗೆದ್ದ ಆರ್‌ಸಿಬಿ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತ್ತು. ಇಂದು ಕೂಡಾ ಟಾಸ್‌ ಗೆದ್ದು, ಹೊಸ ದಾಖಲೆಯನ್ನು ಮಾಡುತ್ತಾ ಕಾದು ನೋಡಬೇಕು.ಡೆಲ್ಲಿ ಪಡೆ ಎರಡು ಬದಲಾವಣೆಗಳೊಂದಿಗೆ ಕಣಕ್ಕಿಳಿಯುತ್ತಿದೆ. ಅನುಭವಿಗಳಾದ ಜೆಸ್‌ ಜಾನ್ಸನ್‌ ಮತ್ತು ಮರಿಜನ್ನೆ ಕೇಪ್‌ ತಂಡ್ಕೆ ವಾಪಸ್‌ ಆಗಿದ್ದಾರೆ

ನವದೆಹಲಿ: ಸೋಮವಾರ ಮುಂಜಾನೆ ರಾಷ್ಟ್ರ ರಾಜಧಾನಿಯಲ್ಲಿ 4.0 ತೀವ್ರತೆಯ ಭೂಕಂಪ ಸಂಭವಿಸಿದ್ದರಿಂದ ದೆಹಲಿಯ ನಿವಾಸಿಗಳು ಮತ್ತು ರಾಷ್ಟ್ರೀಯ ರಾಜಧಾನಿ ಪ್ರದೇಶ (ಎನ್‌ಸಿಆರ್)ನಲ್ಲಿರುವವರು ಬಲವಾದ ಕಂಪನದಿಂದ ಭಯಭೀತರಾಗಿದ್ದಾರೆ.ದಕ್ಷಿಣ ದೆಹಲಿಯ ಧೌಲಾ ಕುವಾನ್‌ನಲ್ಲಿರುವ ದುರ್ಗಾಬಾಯಿ ದೇಶಮುಖ್ ಕಾಲೇಜ್ ಆಫ್ ಸ್ಪೆಷಲ್ ಎಜುಕೇಶನ್ ಬಳಿ ಭೂಕಂಪನದ ಕೇಂದ್ರಬಿಂದುವಾಗಿದೆ ಎಂದು ಅಧಿಕಾರಿಯೊಬ್ಬರು ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.ಬೆಳಗ್ಗೆ 5.36ಕ್ಕೆ ಐದು ಕಿಲೋಮೀಟರ್ ಆಳದಲ್ಲಿ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ಟ್ವೀಟ್ ಮಾಡಿದೆ. ದೆಹಲಿ-ಎನ್‌ಸಿಆರ್‌ನಲ್ಲಿ ಭೂಕಂಪ ಸಂಭವಿಸಿದಾಗ ದೊಡ್ಡ ಶಬ್ದ ಕೇಳಿಸಿತು ಮತ್ತು ಕಂಪನವು 35 ಸೆಕೆಂಡುಗಳ ಕಾಲ ನಡೆಯಿತು ಎಂದು ಅಧಿಕಾರಿ ಹೇಳಿದರು.

ನವದೆಹಲಿ: ದೆಹಲಿ ವಿಧಾನಸಭೆ ಚುನಾವಣೆಯ ಪ್ರಚಾರಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ನೀಡಿದ ಭರವಸೆಯಂತೆ ಮಲಿನಗೊಂಡಿರುವ ಯಮುನಾ ನದಿಯ ಸ್ವಚ್ಛತಾ ಕಾರ್ಯ ಆರಂಭವಾಗಿದೆ.ರಾಷ್ಟ್ರ ರಾಜಧಾನಿ ದೆಹಲಿಯ ವಿಧಾನಸಭೆ ಚುನಾವಣೆಯಲ್ಲಿ ಅರವಿಂದ ಕೇಜ್ರಿವಾಲ್‌ ನಾಯಕತ್ವದ ಆಪ್‌ ಆದ್ಮಿ ಪಕ್ಷಕ್ಕೆ ಸೋಲಾಗಿದೆ. 27 ವರ್ಷಗಳ ಬಳಿಕ ಬಿಜೆಪಿ ಬಹುಮತ ಪಡೆದಿದೆ. ಬಿಜೆಪಿಯು ಅಧಿಕಾರದ ಗದ್ದುಗೆಗೆ ಏರುವ ಮುನ್ನವೇ ಚುನಾವಣೆಯ ವೇಳೆ ನೀಡಿದ ಭರವಸೆಯಂತೆ ಯಮುನಾ ನದಿಗೆ ಕಾಯಕಲ್ಪ ನೀಡುವ ಕೆಲಸವನ್ನು ಶುರು ಮಾಡಿದೆ.ಯಮುನಾ ನದಿಯನ್ನು ಮಾಲಿನ್ಯದಿಂದ ಮುಕ್ತಗೊಳಿಸುವ ನಾಲ್ಕು ಹಂತದ ಕಾರ್ಯತಂತ್ರವನ್ನು ಆಧರಿಸಿ ಭಾನುವಾರವೇ ಶುದ್ಧೀಕರಣ ಕಾರ್ಯ ಆರಂಭವಾಗಿದೆ. ನೀರಿನಿಂದ ಕಸ ತೆಗೆಯುವ ಯಂತ್ರಗಳು, ಕಳೆ ಕೊಯ್ಲು ಯಂತ್ರಗಳು, ಹೂಳೆತ್ತುವ ಸಾಧನಗಳು ಮತ್ತು ಡ್ರೆಡ್ಜರ್‌ನೊಂದಿಗೆ ಕೆಲಸಕ್ಕೆ ಚಾಲನೆ ನೀಡಲಾಗಿದೆ.

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ2 ಆರೋಪಿಯಾಗಿರುವ ನಟ ದರ್ಶನ್‌ ಹಲವು ತಿಂಗಳ ಜೈಲುವಾಸ ಅನುಭವಿಸಿ, ಹೈಕೋರ್ಟ್‌ನಿಂದ ಜಾಮೀನು ಪಡೆದು ಹೊರಬಂದಿದ್ದಾರೆ.ನಟ ದರ್ಶನ್‌ ಸೇರಿದಂತೆ ಆರೋಪಿಗಳಿಗೆ ಹೈಕೋರ್ಟ್‌ ಜಾಮೀನು ನೀಡಿರುವುದನ್ನು ಪ್ರಶ್ನಿಸಿ ಬೆಂಗಳೂರು ಪೊಲೀಸರು ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಿದ್ದಾರೆ. ಸುಪ್ರೀಂ ಕೋರ್ಟ್‌ನಲ್ಲಿ ಈ ಪ್ರಕರಣದ ವಿಚಾರಣೆ ಶೀಘ್ರದಲ್ಲೇ ಬರಲಿದೆ. ಕರ್ನಾಟಕ ಹೈಕೋರ್ಟ್‌ನಲ್ಲಿ ದರ್ಶನ್‌ ಪರ ಹಿರಿಯ ವಕೀಲ ಸಿ.ವಿ. ನಾಗೇಶ್‌ ವಾದ ಮಂಡಿಸಿದ್ದರು. ಆದರೆ, ಸುಪ್ರೀಂ ಕೋರ್ಟ್‌ನಲ್ಲಿ ದರ್ಶನ್‌ ಪರ ಯಾರು ವಾದ ಮಂಡಿಸಲಿದ್ದಾರೆ ಎಂಬ ಕುತೂಹಲ ಜನರಲ್ಲಿದೆ. ಮೂಲಗಳ ಪ್ರಕರಣ ಸುಪ್ರೀಂ ಕೋರ್ಟ್‌ನ ಹಿರಿಯ ವಕೀಲ ಕಪಿಲ್‌ ಸಿಬಲ್‌ ಅವರು ದರ್ಶನ್‌ ಪರ ವಾದ ಮಂಡಿಸಲಿದ್ದಾರೆ.

ಬೆಂಗಳೂರು: "ಯಾವುದೇ ಕ್ಷಣದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಯಬಹುದು. ಹೀಗಾಗಿ ಪಕ್ಷದ ನಾಯಕರು ಹಾಗೂ ಕಾರ್ಯಕರ್ತರು ಸಜ್ಜಾಗಬೇಕು" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಕರೆ ನೀಡಿದರು.ಕೆಪಿಸಿಸಿ ಕಚೇರಿಯಲ್ಲಿ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾಧ್ಯಮಗೋಷ್ಠಿ ಉದ್ದೇಶಿಸಿ ಶಿವಕುಮಾರ್ ಅವರು ಭಾನುವಾರ ಮಾತನಾಡಿದರು."ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸುವ ವಿಚಾರವಾಗಿ ನ್ಯಾಯಾಲಯದಿಂದ ಸಧ್ಯದಲ್ಲೇ ಸೂಚನೆ ಬರುವ ಸಾಧ್ಯತೆ ಇದೆ. ಇನ್ನು ಬೆಂಗಳೂರು ನಗರ ಪಾಲಿಕೆ ಚುನಾವಣೆಯನ್ನು ನಡೆಸಬೇಕಾಗಿದ್ದು ಗ್ರೇಟರ್ ಬೆಂಗಳೂರು ವಿಚಾರವಾಗಿ ಅಭಿಪ್ರಾಯ ಸಂಗ್ರಹಕ್ಕೆ ಮುಂದಾಗಿದ್ದೇವೆ. ಯಾವುದೇ ಕ್ಷಣದಲ್ಲಿ ಈ ಚುನಾವಣೆಗಳು ಘೋಷಣೆಯಾಗಬಹುದು. ಇದಕ್ಕೆ ನಾವೆಲ್ಲರೂ ಸಿದ್ಧತೆ ಮಾಡಿಕೊಳ್ಳಬೇಕು" ಎಂದರು.